Tag: ವಾಣಿಜ್ಯ ಕಟ್ಟಡ

  • ಬೆಂಗಳೂರಿನಲ್ಲಿ ಇನ್ಮುಂದೆ ಕಸಕ್ಕೂ ಶುಲ್ಕ – ತಿಂಗಳಿಗೆ ವಸತಿ, ವಾಣಿಜ್ಯ ಕಟ್ಟಡಗಳಿಗೆ ಎಷ್ಟು?

    ಬೆಂಗಳೂರಿನಲ್ಲಿ ಇನ್ಮುಂದೆ ಕಸಕ್ಕೂ ಶುಲ್ಕ – ತಿಂಗಳಿಗೆ ವಸತಿ, ವಾಣಿಜ್ಯ ಕಟ್ಟಡಗಳಿಗೆ ಎಷ್ಟು?

    ಬೆಂಗಳೂರು: ದರ ಏರಿಕೆಯಿಂದ ತತ್ತರಿಸಿರುವ ಬೆಂಗಳೂರು ಮಂದಿಗೆ ಸರ್ಕಾರ ಮತ್ತೊಂದು ಶಾಕ್ ನೀಡಿದೆ. ಮನೆಮನೆಯಿಂದ ಸಂಗ್ರಹಿಸುವ ತ್ಯಾಜ್ಯಕ್ಕೆ (Garbage) ಏಪ್ರಿಲ್ 1ರಿಂದ ಸೇವಾ ಶುಲ್ಕ (Service Charge) ವಿಧಿಸಲು ಸರ್ಕಾರ ಮುಂದಾಗಿದೆ.

    ಕಳೆದ ಐದಾರು ವರ್ಷದಿಂದ ಬೆಂಗಳೂರಲ್ಲಿ ಘನತ್ಯಾಜ್ಯ ಸೇವಾ ಶುಲ್ಕ ವಿಧಿಸುವ ಸಂಬಂಧ ಚರ್ಚೆ ನಡೆಯುತ್ತಿತ್ತು. ಈಗ ಕಾರ್ಯರೂಪಕ್ಕೆ ತರಲು ಬಿಬಿಎಂಪಿ (BBMP) ಮುಂದಾಗಿದೆ.

    ಆರು ತಿಂಗಳಿಗೊಮ್ಮೆ ಆಸ್ತಿ ತೆರಿಗೆ ಜೊತೆ ಈ ಸೇವಾ ಶುಲ್ಕ ಸಂಗ್ರಹಿಸಲಾಗುತ್ತದೆ. ವಾರ್ಷಿಕ 800 ಕೋಟಿ ಸಂಗ್ರಹದ ಗುರಿಯನ್ನು ಸರ್ಕಾರ ಹೊಂದಿದೆ.

    ಈ ವಿಚಾರದ ಬಗ್ಗೆ ಮಾಧ್ಯಮಗಳಿಗೆ ಬಿಬಿಎಂಪಿ ಆಯುಕ್ತ ತುಷಾರ್‌ ಗಿರಿನಾಥ್‌ ಪ್ರತಿಕ್ರಿಯಿಸಿ, ಇದು ತೆರಿಗೆ (Tax) ಅಲ್ಲ. ಇದು ಸರ್ವಿಸ್ ಚಾರ್ಜ್ ಆಗಿದ್ದು, ಪ್ರಾಪಾರ್ಟಿ ಟ್ಯಾಕ್ಸ್ ಜೊತೆಗೆ ವರ್ಷಕ್ಕೆ ಎರಡು ಬಾರಿ ಹಣ ಕಟ್ಟಬಹುದು ಎಂದು ತಿಳಿಸಿದರು.

    ವಸತಿ ಕಟ್ಟಡಗಳಿಗೆ (ಮಾಸಿಕ)
    * 600 ಚದರಡಿವರೆಗೆ – 10 ರೂ.
    * 601-1000 ಚದರಡಿ – 50 ರೂ.
    * 1001-2000 ಚದರಡಿ – 100 ರೂ.
    * 2001-3000 ಚದರಡಿ – 150 ರೂ.
    * 3001-4000 ಚದರಡಿ – 200 ರೂ.
    * 4000 ಚದರಡಿ ಮೇಲ್ಪಟ್ಟು – 400 ರೂ.
    * ನಿವೇಶನ ಪ್ರತಿ ಚದರಡಿಗೆ – 20 ಪೈಸೆ

    ವಾಣಿಜ್ಯ ಕಟ್ಟಡಗಳಿಗೆ (ಮಾಸಿಕ)
    * ನಿತ್ಯ 5 ಕೆಜಿವರೆಗೆ – 500 ರೂ.
    * ನಿತ್ಯ 10 ಕೆಜಿವರೆಗೆ – 1400 ರೂ.
    * ನಿತ್ಯ 25 ಕೆಜಿವರೆಗೆ – 3500 ರೂ.
    * ನಿತ್ಯ 50 ಕೆಜಿವರೆಗೆ – 7000 ರೂ.
    * ನಿತ್ಯ 100 ಕೆಜಿವರೆಗೆ – 14000 ರೂ.

     

  • ಕ್ಯಾಲಿಫೋರ್ನಿಯಾದಲ್ಲಿ ಕಟ್ಟಡಕ್ಕೆ ಡಿಕ್ಕಿಯಾಗಿ ವಿಮಾನ ಪತನ; 2 ಸಾವು

    ಕ್ಯಾಲಿಫೋರ್ನಿಯಾದಲ್ಲಿ ಕಟ್ಟಡಕ್ಕೆ ಡಿಕ್ಕಿಯಾಗಿ ವಿಮಾನ ಪತನ; 2 ಸಾವು

    ಸ್ಯಾಕ್ರಮೆಂಟೊ: ವಿಮಾನವೊಂದು ವಾಣಿಜ್ಯ ಕಟ್ಟಡಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, 18 ಮಂದಿ ಗಾಯಗೊಂಡಿರುವ ಘಟನೆ ದಕ್ಷಿಣ ಕ್ಯಾಲಿಫೋರ್ನಿಯಾದಲ್ಲಿ (Southern California) ನಡೆದಿದೆ.

    ಗುರುವಾರ ಮಧ್ಯಾಹ್ನ ಲಾಸ್ ಏಂಜಲೀಸ್‌ನ (Los Angeles) ಆಗ್ನೇಯಕ್ಕೆ ಸುಮಾರು 25 ಮೈಲಿ ದೂರದ ಫುಲ್ಲರ್‌ಟನ್ ಮುನ್ಸಿಪಲ್ ಏರ್‌ಪೋರ್ಟ್ ಬಳಿ ಈ ಅಪಘಾತ ಸಂಭವಿಸಿದೆ. ಆರ್‌ವಿ-10 ಎಂದು ಗುರುತಿಸಲಾದ ವಿಮಾನವು ಫರ್ನಿಚರ್ ತಯಾರಿಕಾ ಕಂಪನಿಯ ಮೇಲ್ಛಾವಣಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಟ್ಟಡ ಗೋಡೆಯಲ್ಲಿ ರಂಧ್ರ ನಿರ್ಮಾಣವಾಗಿ, ಅವ್ಯವಸ್ಥೆ ಉಂಟಾಯಿತು.ಇದನ್ನೂ ಓದಿ: BBK 11: 2ನೇ ಮಗುವಿನ ಬಗ್ಗೆ ಮಾತನಾಡಿದ ಧನರಾಜ್‌- ನಾಚಿ ನೀರಾದ ಪತ್ನಿ

    ಈ ಕುರಿತು ಅಧಿಕಾರಿಗಳು ಮಾತನಾಡಿ, ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದು, 18 ಮಂದಿ ಗಾಯಗೊಂಡಿದ್ದಾರೆ. ಇನ್ನೂ ಕಟ್ಟಡದೊಳಗಿದ್ದ ಜನರನ್ನು ತಕ್ಷಣವೇ ಬೇರೆ ಸ್ಥಳಕ್ಕೆ ಸ್ಥಳಾಂತರಿಸಲಾಗಿದ್ದು, ಗಾಯಗೊಂಡವರನ್ನು ಆಸ್ಪತ್ರೆಗೆ ರವಾನಿಸಲಾಯಿತು ಎಂದು ತಿಳಿಸಿದ್ದಾರೆ.

    ಫುಲ್ಲರ್ಟನ್ ಪೊಲೀಸ್ ಇಲಾಖೆಯ ವಕ್ತಾರರಾದ ಕ್ರಿಸ್ಟಿ ವೆಲ್ಸ್ ಮಾತನಾಡಿ, 10 ಜನರನ್ನು ಕೂಡಲೇ ಸ್ಥಳೀಯ ಆಸ್ಪತ್ರಗೆ ಕರೆದೊಯ್ಯಲಾಯಿತು. ಸಣ್ಣಪುಟ್ಟ ಗಾಯಗೊಂಡವರಿಗೆ ಘಟನಾ ಸ್ಥಳದಲ್ಲಿ ಚಿಕಿತ್ಸೆ ನೀಡಲಾಯಿತು ಹಾಗೂ ಘಟನೆಯಲ್ಲಿ ಸಾವನ್ನಪ್ಪಿದ್ದವರು ವಿಮಾದಲ್ಲಿದ್ದವರಾ? ಅಥವಾ ಕಟ್ಟಡದ ಸುತ್ತಮುತ್ತಲಿನವರಾ? ಎಂದು ತನಿಖೆಯ ಮೂಲಕ ತಿಳಿಯಬೇಕಿದೆ ಎಂದರು.

    ಅಪಘಾತದ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ವಿಮಾನ ಕಟ್ಟಡಕ್ಕೆ ಡಿಕ್ಕಿ ಹೊಡೆಯುತ್ತಿದ್ದಂತೆ ದಟ್ಟವಾದ ಹೊಗೆ ಆವರಿಸುವುದು ಕಂಡು ಬಂದಿದೆ. ಸದ್ಯ ಫೆಡರಲ್ ಏವಿಯೇಷನ್ ಅಡ್ಮಿನಿಸ್ಟ್ರೇಷನ್ ಮತ್ತು ರಾಷ್ಟ್ರೀಯ ಸಾರಿಗೆ ಸುರಕ್ಷತಾ ಮಂಡಳಿ ಅಪಘಾತದ ನಿಖರ ಕಾರಣಕ್ಕಾಗಿ ತನಿಖೆಯನ್ನು ಪ್ರಾರಂಭಿಸಿದೆ.ಇದನ್ನೂ ಓದಿ: ಬೇರೆ ರೂಟ್‌ಗೆ ಕರೆದೊಯ್ದ ಚಾಲಕ – ಭಯಗೊಂಡು ಚಲಿಸುತ್ತಿದ್ದ ಆಟೋದಿಂದ ಜಿಗಿದ ಮಹಿಳೆ

     

  • 2 ತಿಂಗಳ ಅಡ್ವಾನ್ಸ್ ಅಷ್ಟೇ ಪಾವತಿಸಿ – ಮಾದರಿ ಬಾಡಿಗೆ ಕಾಯ್ದೆಯಲ್ಲಿ ಏನಿದೆ?

    2 ತಿಂಗಳ ಅಡ್ವಾನ್ಸ್ ಅಷ್ಟೇ ಪಾವತಿಸಿ – ಮಾದರಿ ಬಾಡಿಗೆ ಕಾಯ್ದೆಯಲ್ಲಿ ಏನಿದೆ?

    ನವದೆಹಲಿ: ಮನೆ ಮಾಲೀಕರು ಮತ್ತು ಬಾಡಿಗೆದಾರರಿಗೆ ಸಹಾಯವಾಗುವ ಹೊಸ ಕಾಯ್ದೆಗೆ ಕೇಂದ್ರ ಕ್ಯಾಬಿನೆಟ್ ಒಪ್ಪಿಗೆ ನೀಡಿದೆ. ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ‘ಮಾದರಿ ಬಾಡಿಗೆ ಕಾಯ್ದೆ’ಗೆ ಅನುಮೋದನೆ ನೀಡಿದೆ.

    ಪ್ರಸ್ತುತ ಈಗ ಬಾಡಿಗೆದಾರರಿಂದ 10 ತಿಂಗಳ ಮುಂಗಡ ಬಾಡಿಗೆಯನ್ನು ಪಡೆಯಲಾಗುತ್ತದೆ. ಆದರೆ ಹೊಸ ಕಾಯ್ದೆಯಲ್ಲಿ ಕೇವಲ 2 ತಿಂಗಳ ಬಾಡಿಗೆಯನ್ನು ಮುಂಗಡವಾಗಿ ಪಡೆಯಲು ಮಾತ್ರ ಷರತ್ತನ್ನು ವಿಧಿಸಲಾಗಿದೆ. ಇದನ್ನೂ ಓದಿ: ಬಾಡಿಗೆ ಕಟ್ಟುವ ದರದಲ್ಲಿ ಇಎಂಐ ಕಟ್ಟಿ, ಸ್ವಂತ ಮನೆ ನಿಮ್ಮದಾಗಿಸಿಕೊಳ್ಳಿ

    ಹೊಸ ಕಾಯ್ದೆಯನ್ನು ನೇರವಾಗಿ ಕೇಂದ್ರ ಸರ್ಕಾರ ಜಾರಿ ಮಾಡುವುದಿಲ್ಲ. ಶೀಘ್ರವೇ ಈ ಕಾಯ್ದೆಯನ್ನು ರಾಜ್ಯ ಸರ್ಕಾರ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕಳುಹಿಸಿ ಕೊಡಲಿದೆ. ರಾಜ್ಯಗಳಲ್ಲಿ ಪ್ರತ್ಯೇಕ ಕಾಯ್ದೆಗಳು ಇರುವ ಕಾರಣ ಹಾಲಿ ಬಾಡಿಗೆ ಕಾಯ್ದೆಗಳಿಗೆ ತಿದ್ದುಪಡಿ ತಂದು ಹೊಸ ನಿಯಮಗಳನ್ನು ಅಳವಡಿಸಿಕೊಳ್ಳಬಹುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ.

    ಮನೆಗಳನ್ನು ಬಾಡಿಗೆ ನೀಡುವ ವ್ಯವಸ್ಥೆಗೆ ಉದ್ಯಮ ಸ್ವರೂಪ ನೀಡಿ, ಈ ಉದ್ಯಮದಲ್ಲಿ ಪಾಲ್ಗೊಳ್ಳುವಂತೆ ಖಾಸಗಿ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶವನ್ನು ಈ ಕಾಯ್ದೆ ಹೊಂದಿದೆ. ಇದರಿಂದ ವಸತಿ ಕ್ಷೇತ್ರ ಎದುರಿಸುತ್ತಿರುವ ಕೊರತೆಯನ್ನು ನೀಗಿಸಲು ಸಾಧ್ಯವಾಗಲಿದೆ ಎಂಬ ನಿರೀಕ್ಷೆ ಇದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

    ಭೂ ಮಾಲೀಕರು ಮತ್ತು ಬಾಡಿಗೆದಾರರ ನಡುವಿನ ವಿವಾದಗಳು ಜಾಸ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ ಈ ಕಾಯ್ದೆಯ ಕರಡನ್ನು ಸರ್ಕಾರ  2019 ರಲ್ಲಿ ಬಿಡುಗಡೆ ಮಾಡಿತ್ತು.

    ಕಾಯ್ದೆಯಲ್ಲಿ ಏನಿದೆ?
    ಮಾಲೀಕರು ಮತ್ತು ಬಾಡಿಗೆದಾರರಿಗೆ ತ್ವರಿತವಾಗಿ ನ್ಯಾಯ ಒದಗಿಸಲು ಬಾಡಿಗೆ ಪ್ರಾಧಿಕಾರ ರಚನೆ ಮಾಡಬೇಕು. ಮಾಲೀಕರು ಭದ್ರತಾ ಠೇವಣಿಯಾಗಿ ಬಾಡಿಗೆದಾರರಿಂದ ಕೇವಲ 2 ತಿಂಗಳ ಬಾಡಿಗೆಯನ್ನು ಮಾತ್ರ ಪಡೆಯಬೇಕು.

     

    ವಾಣಿಜ್ಯ ಕಟ್ಟಡಗಳಿಗೆ ಭದ್ರತಾ ಠೇವಣಿಯಾಗಿ 6 ತಿಂಗಳ ಹಣವನ್ನು ಮಾತ್ರ ಪಡೆಯಬೇಕು. ಬಾಡಿಗೆ ವಿಚಾರದಲ್ಲಿ ಸಮಸ್ಯೆಯಾದಲ್ಲಿ ಜಿಲ್ಲಾ ಬಾಡಿಗೆ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಬಹುದು.

    ಒಪ್ಪಂದ ಮುಗಿದ ಬಳಿಕವೂ ಮನೆಯನ್ನು ಖಾಲಿ ಮಾಡದೇ ಇದ್ದಲ್ಲಿ ಮಾಲೀಕ ಮುಂದಿನ 2 ತಿಂಗಳ ಅವಧಿಗೆ ಬಾಡಿಗೆಯನ್ನು ದ್ವಿಗುಣ ಮಾಡಬಹುದು. 2 ತಿಂಗಳ ಬಳಿಕವೂ ಮನೆ ಖಾಲಿ ಮಾಡದೇ ಇದ್ದರೆ ಬಾಡಿಗೆಯನ್ನು 4 ಪಟ್ಟು ಹೆಚ್ಚಿಸಬಹುದು.

    ಮಾಲೀಕ ಪೂರ್ವ ಸೂಚನೆ ನೀಡದೇ ಬಾಡಿಗೆದಾರನ ಮನೆಯನ್ನು ಪ್ರವೇಶಿಸುವಂತಿಲ್ಲ. 24 ಗಂಟೆಗಳ ಮೊದಲು ನೋಟಿಸ್ ನೀಡಿದರೆ ಮಾತ್ರ ಮಾಲೀಕ ಮನೆಯನ್ನು ಪ್ರವೇಶಿಸುವ ಹಕ್ಕನ್ನು ಹೊಂದಿರುತ್ತಾನೆ. ಕಟ್ಟಡಕ್ಕೆ ಹಾನಿಯಾಗಿದ್ದರೆ ರಿಪೇರಿಗೆ ಬಾಡಿಗೆದಾರನೇ ಹಣವನ್ನು ನೀಡಬೇಕು.

    ವಿವಾದದ ಸಂದರ್ಭದಲ್ಲಿ ಮಾಲೀಕರು ವಿದ್ಯುತ್ ಮತ್ತು ನೀರು ಸರಬರಾಜನ್ನು ಕಡಿತಗೊಳಿಸುವಂತಿಲ್ಲ. ಒಪ್ಪಂದದ ಅವಧಿ ಇರುವವರೆಗೆ ಬಾಡಿಗೆ ದರವನ್ನು ಇದ್ದಕ್ಕಿದ್ದಂತೆ ಹೆಚ್ಚಿಸಲು ಸಾಧ್ಯವಿಲ್ಲ. ಬಾಡಿಗೆ ಪರಿಷ್ಕರಿಸುವ 3 ತಿಂಗಳ ಮೊದಲು ಮಾಲೀಕ ನೋಟಿಸ್ ನೀಡಬೇಕಾಗುತ್ತದೆ.

    ಹೊಸ ಕಾಯ್ದೆಯ ಬಗ್ಗೆ ನಿಮ್ಮ ಅಭಿಪ್ರಾಯ ಏನು? ಕಮೆಂಟ್ ಮಾಡಿ ತಿಳಿಸಿ.