Tag: ವಾಯುಪಡೆ

  • ಪಾಕ್‌ ನ್ಯೂಕ್‌ ವೆಪನ್‌ ಫೆಸಿಲಿಟಿ ಮೇಲೆ ದಾಳಿಯಾಗಿದೆ, ಭಾರತಕ್ಕೆ ಜಯ ಸಿಕ್ಕಿದೆ: ಟಾಮ್‌ ಕೂಪರ್‌

    ಪಾಕ್‌ ನ್ಯೂಕ್‌ ವೆಪನ್‌ ಫೆಸಿಲಿಟಿ ಮೇಲೆ ದಾಳಿಯಾಗಿದೆ, ಭಾರತಕ್ಕೆ ಜಯ ಸಿಕ್ಕಿದೆ: ಟಾಮ್‌ ಕೂಪರ್‌

    ನವದೆಹಲಿ: ಮೇ 10 ರಂದು ಭಾರತೀಯ ವಾಯುಸೇನೆ (IAF) ಪಾಕ್‌ ವಾಯುನೆಲೆ (Pakistan Air Bases) ಮಾತ್ರವಲ್ಲ ಪರಮಾಣು ಶಸ್ತ್ರಾಸ್ತ್ರ ಸಂಗ್ರಹಣಾ ಘಟಕ(Nuclear Weapons Facility) ಮೇಲೆ ಕ್ಷಿಪಣಿ ದಾಳಿ ನಡೆಸಿ ಎರಡೂ ಪ್ರವೇಶದ್ವಾರಗಳನ್ನು ಹೊಡೆದು ಹಾಕಿತ್ತು ಎಂದು ಮಧ್ಯಪ್ರಾಚ್ಯ ಮತ್ತು ದಕ್ಷಿಣ ಏಷ್ಯಾ ವಾಯು ಯುದ್ಧಗಳ ವಿಶ್ವ ಪ್ರಸಿದ್ಧ ಇತಿಹಾಸಕಾರ ಟಾಮ್ ಕೂಪರ್ (Tom Cooper) ಹೇಳಿದ್ದಾರೆ.

    ಖಾಸಗಿ ಸುದ್ದಿವಾಹಿನಿಯ ಜೊತೆ ಮಾತನಾಡಿದ ಅವರು, ಒಂದು ಕಡೆ ಪರಮಾಣು ಶಸ್ತ್ರಾಸ್ತ್ರಗಳ ಸಂಗ್ರಹಣಾ ಸೌಲಭ್ಯಗಳ ಮೇಲೆ ಬಾಂಬ್ ದಾಳಿ ನಡೆಸುತ್ತಿರುವಾಗ ಮತ್ತೊಂದು ಕಡೆ ಪಾಕಿಸ್ತಾನಕ್ಕೆ ದಾಳಿ ಮಾಡುವ ಸಾಮರ್ಥ್ಯ ಇಲ್ಲದೇ ಇದ್ದಾಗ ನನ್ನ ಅಭಿಪ್ರಾಯದಲ್ಲಿ ಭಾರತದ ಸ್ಪಷ್ಟವಾಗಿ ಜಯ ದಾಖಲಿಸಿದೆ ಎಂದು ಅವರು ವಿಶ್ಲೇಷಿಸಿದರು. ಇದನ್ನೂ ಓದಿ: ಅಣ್ವಸ್ತ್ರಗಳಿರೋ ಬೆಟ್ಟದ ಮೇಲೆ ದಾಳಿ – ಬೆದರಿದ ಪಾಕ್‌, ಅಮೆರಿಕಕ್ಕೂ ಶಾಕ್‌!

    ಭಾರತೀಯ ವಾಯುಪಡೆಯು ಪಾಕಿಸ್ತಾನದಲ್ಲಿರುವ ವಾಯು ನೆಲೆಗಳ ಮೇಲೆ ಸ್ವತಂತ್ರವಾಗಿ ದಾಳಿ ಮಾಡಿತ್ತು. ಆದರೆ ಪಾಕಿಸ್ತಾನಕ್ಕೆ ಅದೇ ರೀತಿಯ ದಾಳಿ ಮಾಡಲು ಸಾಧ್ಯವಾಗಲಿಲ್ಲ. ಅಂದರೆ ಪಾಕಿಸ್ತಾನದ ಪ್ರತಿಬಂಧಕ ವಿಫಲವಾಗಿದೆ ಮತ್ತು ಅದರ ವಾಯು ರಕ್ಷಣಾ ವ್ಯವಸ್ಥೆಗಳು ಕುಸಿದಿದೆ ಎಂದರ್ಥ ಎಂದು ಅವರು ವಿವರಿಸಿದರು. ಇದನ್ನೂ ಓದಿ: ಅಣ್ವಸ್ತ್ರ ಸಂಗ್ರಹ ಇರೋ ಬೆಟ್ಟದ ಮೇಲೆ ದಾಳಿ ಚರ್ಚೆ – ಪತ್ರಕರ್ತನಿಗೆ ಥ್ಯಾಂಕ್ಸ್‌ ಹೇಳಿದ ವಾಯುಸೇನೆ

    ಮೇ 10 ರಂದು, ಐಎಎಫ್ ಪಾಕ್ ವಾಯುಪಡೆಯ ನೆಲೆಗಳನ್ನು ಮಾತ್ರವಲ್ಲದೆ ಸರ್ಗೋಧಾ ಸಂಕೀರ್ಣದ ಭಾಗವಾಗಿರುವ ಮುಷಾಫ್ ವಾಯುನೆಲೆಯಲ್ಲಿರುವ ಪಾಕಿಸ್ತಾನದ ಪರಮಾಣು ಶಸ್ತ್ರಾಸ್ತ್ರ ಸಂಗ್ರಹಣಾ ಸ್ಥಳದ ಎರಡೂ ಪ್ರವೇಶದ್ವಾರಗಳನ್ನೂ ಸಹ ಹೊಡೆದು ಹಾಕಿತ್ತು ಎಂದು ಹೇಳಿದರು. ಇದನ್ನೂ ಓದಿ: ಪಾಕ್‌ನಲ್ಲಿ ಪರಮಾಣು ವಿಕಿರಣ ಸೋರಿಕೆ ಆಗ್ತಿದ್ಯಾ?

    ಪಾಕಿಸ್ತಾನಿಗಳು ಸುಲಭವಾಗಿ ತಲೆಬಾಗುವ ಅಥವಾ ಸೋಲನ್ನು ಬಹಿರಂಗವಾಗಿ ಒಪ್ಪಿಕೊಳ್ಳುವ ಸ್ಥಿತಿಯಲ್ಲಿ ಇರಲಿಲ್ಲ. ಯಾವಾಗ ವಾಯುನೆಲೆಯ ಜೊತೆಗೆ ಶಸ್ತ್ರಾಸ್ತ್ರ ಸಂಗ್ರಹಣಾ ಘಟಕದ ಮೇಲೆ ಭಾರತೀಯ ಕ್ಷಿಪಣಿಗಳು ದಾಳಿ ಮಾಡಿದಾಗ ಬೇರೆ ಯಾವುದೇ ಆಯ್ಕೆ ಇರಲಿಲ್ಲ.  ಪಾಕಿಸ್ತಾನ ಕರೆ ಮಾಡಿ ದಾಳಿ ನಿಲ್ಲಿಸಲು ಮನವಿ ಮಾಡಿತು ಎಂದು ತಿಳಿಸಿದರು.

  • ಹೊಸ ಸಮವಸ್ತ್ರ ಪರಿಚಯಿಸಿದ ಭಾರತೀಯ ವಾಯುಪಡೆ

    ಹೊಸ ಸಮವಸ್ತ್ರ ಪರಿಚಯಿಸಿದ ಭಾರತೀಯ ವಾಯುಪಡೆ

    ನವದೆಹಲಿ: ತನ್ನ ಸಿಬ್ಬಂದಿಗಾಗಿ ನೂತನ ಯುದ್ಧ ಸಮವಸ್ತ್ರವನ್ನು ಭಾರತೀಯ ವಾಯುಪಡೆ (Indian Air Force) ಇಂದು ಅನಾವರಣಗೊಳಿಸಿದೆ.

    ಚಂಡೀಗಢದಲ್ಲಿ ನಡೆದ ವಾಯುಪಡೆಯ 90ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಐಎಎಫ್‍ನ ಸಿಬ್ಬಂದಿಗೆ ಹೊಸ ಸಮವಸ್ತ್ರವನ್ನು ಅನಾವರಣಗೊಳಿಸಲಾಯಿತು. ಇದೇ ಮೊದಲ ಬಾರಿಗೆ ವಾಯುಪಡೆಯ ವಾರ್ಷಿಕೋತ್ಸವವನ್ನು ದೆಹಲಿಯ ಹೊರಗೆ ನಡೆಸಲಾಯಿತು. ಹೊಸ ಸಮವಸ್ತ್ರವನ್ನು ಏರ್ ಚೀಫ್ ಮಾರ್ಷಲ್ ವಿವೇಕ್ ರಾಮ್ ಚೌಧರಿ ಅನಾವರಣಗೊಳಿಸಿದರು.

    ಈ ವರ್ಷದ ಆರಂಭದಲ್ಲಿ ಭಾರತೀಯ ಸೇನೆಯು (Army) ತನ್ನ ಸಿಬ್ಬಂದಿಗೆ ಡಿಜಿಟಲ್ ಕ್ಯಾಮೌಪ್ಲಾಗೆ ಸಮವಸ್ತ್ರವನ್ನು (Digital Camouflage Uniform) ಪರಿಚಯಿಸಿತ್ತು. ಇದು ಭೂಪ್ರದೇಶ ಸ್ನೇಹಿಯಾಗಿದ್ದು, ಮರುಭೂಮಿ, ಕಾಡುಪ್ರದೇಶ, ಪರ್ವತಮಯ ಪ್ರದೇಶಗಳಿಗೆ ಹೊಂದಿಕೊಳ್ಳುವ ಸಮವಸ್ತ್ರವಾಗಿದೆ. ಇದನ್ನೂ ಓದಿ: ಪುಟಿನ್ ಕನಸಿನ ಯುರೋಪಿನ ಉದ್ದದ ಸೇತುವೆ ಉಡೀಸ್ -ಕ್ರಿಮಿಯಾ ಸಂಪರ್ಕ ಕಡಿತ

    ನೂತನ ಸಮವಸ್ತ್ರವು ಹಿಂದಿನ ಆವೃತ್ತಿಗಳಿಗಿಂತ ಭಿನ್ನವಾಗಿದ್ದು, ಹಳೆಯ ಮಾದರಿಗಳ ಅನೇಕ ವಿನ್ಯಾಸಗಳೊಂದಿಗೆ ಬದಲಾಯಿಸಲಾಗಿದೆ. ಪ್ರಪಂಚದಾದ್ಯಂತದ ಹೆಚ್ಚಿನ ಯುದ್ಧ ಪಡೆಗಳು ಹಾಗೂ ಮಿಲಿಟರಿಗಳು ಈ ಡಿಜಿಟಲ್ ಕ್ಯಾಮೌಪ್ಲಾ ಸಮವಸ್ತ್ರಗಳನ್ನು ಅಳವಡಿಸಿಕೊಂಡಿವೆ.

    1932ರಲ್ಲಿ ಯುಕೆಯ ರಾಯಲ್ ಏರ್ ಫೋರ್ಸ್‍ನ ಬೆಂಬಲ ಪಡೆಯಾಗಿ ಐಎಎಫ್ ಅಧಿಕೃತವಾಗಿ ಸೇರ್ಪಡೆಗೊಂಡಿತು. ಈ ದಿನದ ನೆನಪಿಗಾಗಿ ಪ್ರತಿವರ್ಷ ಐಎಎಫ್ ಮುಖ್ಯಸ್ಥರು ಮತ್ತು ಇತರ ಹಿರಿಯ ಅಧಿಕಾರಿಗಳ ಉಪಸ್ಥಿತಿಯಲ್ಲಿ ಆಚರಿಸಲಾಗುತ್ತದೆ. ಇದನ್ನೂ ಓದಿ: ಚಿಕ್ಕಬಳ್ಳಾಪುರದಲ್ಲಿ ನಾಗಮಂಟಪ ಉದ್ಘಾಟನೆ – ಜನವರಿಯಲ್ಲಿ ಆದಿಯೋಗಿ ಪ್ರತಿಮೆ ಲೋಕಾರ್ಪಣೆ

    Live Tv
    [brid partner=56869869 player=32851 video=960834 autoplay=true]

  • ವಾಯುಪಡೆಗೆ ಶಸ್ತ್ರಾಸ್ತ್ರ ವ್ಯವಸ್ಥೆ ಶಾಖೆ – ಮುಂದಿನ ವರ್ಷದಿಂದ ಮಹಿಳಾ ಅಗ್ನಿವೀರರು ಸೇರ್ಪಡೆ

    ವಾಯುಪಡೆಗೆ ಶಸ್ತ್ರಾಸ್ತ್ರ ವ್ಯವಸ್ಥೆ ಶಾಖೆ – ಮುಂದಿನ ವರ್ಷದಿಂದ ಮಹಿಳಾ ಅಗ್ನಿವೀರರು ಸೇರ್ಪಡೆ

    ಚಂಡೀಗಢ: ವಾಯುಪಡೆಗೆ ಶಸ್ತ್ರಾಸ್ತ್ರ ವ್ಯವಸ್ಥೆ ಶಾಖೆಯನ್ನು (IAF weapon system branch) ರಚಿಸಲು ಸರ್ಕಾರ ಅನುಮೋದನೆ ನೀಡಿದೆ. ಅಲ್ಲದೇ ಮುಂದಿನ ವರ್ಷದಿಂದ ವಾಯುಪಡೆಗೆ ಮಹಿಳಾ ಅಗ್ನಿವೀರರನ್ನು (Female Agniveer) ನೇಮಿಸಲಾಗುತ್ತದೆ ಎಂದು ಐಎಎಫ್ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ವಿವೇಕ್ ರಾಮ್ ಚೌಧರಿ (IAF chief Air Chief Marshal Vivek Ram Chaudhari ) ಹೇಳಿದ್ದಾರೆ.

    ಭಾರತೀಯ ವಾಯುಪಡೆಯ 90ನೇ ವಾರ್ಷಿಕ ದಿನಾಚರಣೆ ವೇಳೆ ಚಂಡೀಗಢದಲ್ಲಿ ಮಾತನಾಡಿದ ಅವರು, ಐಎಎಫ್ ಅಧಿಕಾರಿಗಳಿಗೆ ಶಸ್ತ್ರಾಸ್ತ್ರ ವ್ಯವಸ್ಥೆ ಶಾಖೆಯನ್ನು ರಚಿಸಲು ಸರ್ಕಾರ ಅನುಮೋದನೆ ನೀಡಿದೆ. ಇದು ಸ್ವಾತಂತ್ರದ ನಂತರ ಮೊದಲ ಬಾರಿಗೆ ರಚಿಸಲಾಗುತ್ತಿರುವ ಹೊಸ ಕಾರ್ಯಾಚರಣೆಯ ಶಾಖೆಯಾಗಿದೆ. ಇದು ಮೂಲಭೂತವಾಗಿ ಎಲ್ಲಾ ರೀತಿಯ ಇತ್ತೀಚಿನ ಶಸ್ತ್ರಾಸ್ತ್ರ ವ್ಯವಸ್ಥೆಗಳನ್ನು ಹೊಂದಿರುತ್ತದೆ. ಇದರಿಂದ ಸರ್ಕಾರಕ್ಕೆ 3,400 ಕೋಟಿ ರೂ. ಉಳಿತಾಯವಾಗುತ್ತದೆ. ಜೊತೆಗೆ ಮುಂದಿನ ವರ್ಷದಿಂದ ವಾಯುಪಡೆಗೆ ಮಹಿಳಾ ಅಗ್ನಿವೀರರನ್ನು ಸೇರ್ಪಡೆಗೊಳಿಸಲು ಐಎಎಫ್ ಯೋಜಿಸುತ್ತಿದೆ ಎಂದು ತಿಳಿಸಿದ್ದಾರೆ.

    ಅಗ್ನಿಪಥ್ ಯೋಜನೆಯಿಂದಾಗಿ ( Agnipath scheme) ಭಾರತೀಯ ವಾಯುಪಡೆಗೆ ಅಗ್ನಿವೀರರನ್ನು ಸೇರಿಸಿಕೊಳ್ಳುವುದು ಒಂದು ದೊಡ್ಡ ಸವಾಲಾಗಿದೆ. ಆದರೆ ಅದಕ್ಕೂ ಮುಖ್ಯವಾಗಿ, ಇದು ಭಾರತದ ಸಾಮರ್ಥ್ಯವನ್ನು ಬಳಸಿಕೊಳ್ಳಲು ದೊರೆತಿರುವ ಒಂದು ಅವಕಾಶವಾಗಿದೆ ಎಂದಿದ್ದಾರೆ.  ಇದನ್ನೂ ಓದಿ: ತಮಿಳುನಾಡಿನಲ್ಲಿ ಆನ್‌ಲೈನ್‌ ಗೇಮ್ಸ್ ಬ್ಯಾನ್? – ಶೀಘ್ರದಲ್ಲಿ ಸರ್ಕಾರದಿಂದ ಆದೇಶ ಸಾಧ್ಯತೆ

    ಐಎಎಫ್ ಮೂಲಕ ವೃತ್ತಿಜೀವನ ಪ್ರಾರಂಭಿಸಲು ಪ್ರತಿಯೊಬ್ಬ ಅಗ್ನಿವೀರ್ ಉತ್ತಮ ಕೌಶಲ್ಯ ಮತ್ತು ಜ್ಞಾನವನ್ನು ಹೊಂದಿದ್ದಾನೆಯೇ ಎಂದು ಖಚಿತಪಡಿಸಿಕೊಳ್ಳಲು ನಾವು ನಮ್ಮ ಕಾರ್ಯಾಚರಣೆಯ ತರಬೇತಿ ವಿಧಾನವನ್ನು ಬದಲಾಯಿಸಿದ್ದೇವೆ. ಈ ವರ್ಷದ ಡಿಸೆಂಬರ್‍ನಲ್ಲಿ ಆರಂಭಿಕ ತರಬೇತಿಗಾಗಿ 3,000 ಅಗ್ನಿವೀರರನ್ನು ವಾಯುಪಡೆಗೆ ಸೇರಿಸಿಕೊಳ್ಳುತ್ತೇವೆ. ಮುಂಬರುವ ವರ್ಷಗಳಲ್ಲಿ ಮತ್ತಷ್ಟು ಸಿಬ್ಬಂದಿಯನ್ನು ಹೆಚ್ಚಾಗಿ ಸೇರಿಸಿಕೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಮಕ್ಕಳ ಕಳ್ಳನೆಂದು ಭಾವಿಸಿ ಭಿಕ್ಷುಕನಿಗೆ ಥಳಿಸಿದ ಸಾರ್ವಜನಿಕರು

    ಇದೇ ಮೊದಲ ಬಾರಿಗೆ ದೆಹಲಿಯ ಹೊರಗಿರುವ ಚಂಡೀಗಢದಲ್ಲಿ ಭಾರತೀಯ ವಾಯಪಡೆ ದಿನಾಚರಣೆ ಸಮಾರಂಭ ನಡೆಯಿತು. ಇಲ್ಲಿನ ಸುಕ್ನ ಕೆರೆಯ ಮೇಲೆ ಸುಮಾರು 80 ವಿಮಾನಗಳು ಗಂಟೆಗಳ ಕಾಲ ತಮ್ಮ ಸಾಮಥ್ರ್ಯ, ಚಮತ್ಕಾರಗಳನ್ನು ಬಾನಂಗಳದಲ್ಲಿ ಪ್ರದರ್ಶಿಸಿದವು. ಹೊಸ ಯುದ್ಧ ಸಮವಸ್ತ್ರವನ್ನು ಕೂಡ ಇಂದು ಅನಾವರಣಗೊಳಿಸಲಾಯಿತು.

    Live Tv
    [brid partner=56869869 player=32851 video=960834 autoplay=true]

  • ಒಟ್ಟಿಗೆ ಫೈಟರ್ ಜೆಟ್ ಹಾರಿಸಿ ಇತಿಹಾಸ ಸೃಷ್ಟಿದ ತಂದೆ- ಮಗಳು

    ಒಟ್ಟಿಗೆ ಫೈಟರ್ ಜೆಟ್ ಹಾರಿಸಿ ಇತಿಹಾಸ ಸೃಷ್ಟಿದ ತಂದೆ- ಮಗಳು

    ಬೀದರ್: ಜಿಲ್ಲೆಯ ವಾಯುಪಡೆ ಸ್ಟೇಷನ್‍ನಲ್ಲಿ ಒಟ್ಟಿಗೆ ಫೈಟರ್ ಜೆಟ್ ಹಾರಿಸುವ ಮೂಲಕ ಭಾರತೀಯ ವಾಯುಪಡೆಯಲ್ಲೇ ತಂದೆ- ಮಗಳು ಹೊಸ ಇತಿಹಾಸ ಸೃಷ್ಟಿಸಿದ್ದಾರೆ.

    ಬೀದರ್‌ನ ಐಎಎಫ್ ಸ್ಟೇಷನ್‍ನಲ್ಲಿ ತಂದೆ- ಮಗಳ ಜೋಡಿ ಹಾಕ್- 132 ವಿಮಾನ ಒಟ್ಟಿಗೆ ಹಾರಿಸಿದೆ. ಈ ಮೂಲಕ ಭಾರತೀಯ ವಾಯುಪಡೆಯಲ್ಲಿ ಹೊಸದೊಂದು ಇತಿಹಾಸ ಸೃಷ್ಟಿಸಿದ್ದಾರೆ. ಇದನ್ನೂ ಓದಿ: ಸರಳವಾಸ್ತು ಗುರೂಜಿ ಹೆಸರು ಹೇಳಿ ಆಸ್ತಿ ಮಾಡಲು ಮುಂದಾಗಿದ್ದ ಹಂತಕರು

    ಫ್ಲೈಯಿಂಗ್ ಆಫೀಸರ್ ಮಗಳು ಅನನ್ಯಾ ಶರ್ಮಾ ಹಾಗೂ ಏರ್ ಕಮಾಂಡರ್ ತಂದೆ ಸಂಜಯ್ ಶರ್ಮಾರಿಂದ ಮೊದಲ ಬಾರಿಗೆ ಈ ಇತಿಹಾಸ ಸೃಷ್ಟಿಸಲಾಗಿದೆ. ಭಾರತೀಯ ವಾಯು ಪಡೆಯಲ್ಲಿ ಈ ಸಾಧನೆ ಮಾಡಿದ ಮೊದಲ ತಂದೆ- ಮಗಳ ಜೋಡಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದು, ಮಗಳು ಅನನ್ಯಾ ಉನ್ನದ ಯುದ್ಧ ವಿಮಾನದಲ್ಲಿ ಪದವಿ ಪಡೆದು ತರಬೇತಿ ಪಡೆಯುತ್ತಿರುವ ಮೊದಲ ತರಬೇತುದಾರರಾಗಿದ್ದಾರೆ. ಇದನ್ನೂ ಓದಿ: ಬ್ರಿಟನ್ ಹಣಕಾಸು ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಇನ್ಫೋಸಿಸ್ ನಾರಾಯಣಮೂರ್ತಿ ಅಳಿಯ ರಿಷಿ ಸುನಾಕ್

    Live Tv
    [brid partner=56869869 player=32851 video=960834 autoplay=true]

  • ಸೇನಾ ಸಮವಸ್ತ್ರದಲ್ಲಿರೋವಾಗ ತಿಲಕವಿಡಲು ಭಾರತೀಯ ಅಧಿಕಾರಿಗೆ ಅಮೆರಿಕ ಅನುಮತಿ

    ಸೇನಾ ಸಮವಸ್ತ್ರದಲ್ಲಿರೋವಾಗ ತಿಲಕವಿಡಲು ಭಾರತೀಯ ಅಧಿಕಾರಿಗೆ ಅಮೆರಿಕ ಅನುಮತಿ

    ವಾಷಿಂಗ್ಟನ್: ಸೇನಾ ಸಮವಸ್ತ್ರದಲ್ಲಿ ಇರುವಾಗ ಹಣೆಗೆ ತಿಲಕ ಇಟ್ಟುಕೊಳ್ಳಲು ಭಾರತೀಯ ಮೂಲದ ವಾಯುಪಡೆ ಅಧಿಕಾರಿ ದರ್ಶನ್ ಶಾಗೆ ಅಮೆರಿಕ ಅನುಮತಿ ನೀಡಿದೆ.

    ಭಾರತೀಯ ಮೂಲದ ದರ್ಶನ್ ಶಾ ಅವರು ಇಎಫ್ ವಾರೆನ್ ಏರ್ ಫೋರ್ಸ್ ಬೇಸ್ ವ್ಯೋಮಿಂಗ್‍ನಲ್ಲಿ ಏರ್‍ಮ್ಯಾನ್ ಆಗಿ ನೇಮಕಗೊಂಡಿದ್ದಾರೆ. ಇದೀಗ ಅವರಿಗೆ ಸಮವಸ್ತ್ರದಲ್ಲಿರುವಾಗ ತಿಲಕವನ್ನು ಇಟ್ಟುಕೊಳ್ಳಲು ಅಮೆರಿಕ ಸರ್ಕಾರ ಧಾರ್ಮಿಕ ಸ್ವಾತಂತ್ರ್ಯ ನೀಡಿದೆ. ಹೀಗಾಗಿ ದರ್ಶನ್ ಶಾ ಅವರು ಸಂತಸ ವ್ಯಕ್ತಪಡಿಸಿದ್ದಾರೆ.

     

    ಈ ಬಗ್ಗೆ ಪ್ರತಿಕ್ರಿಯೆ ನಿಡಿರುವ ಅವರು, ತಿಲಕ ಧರಿಸಿ ಕೆಲಸ ಮಾಡುವುದು ಅದ್ಭುತ ಅನುಭವ. ನನಗೆ ಅವಕಾಶ ನೀಡಿದ ಅಮೆರಿಕ ವಾಯುಪಡೆಗೆ ಧನ್ಯವಾದ ಎಂದು ಹೇಳಿದ್ದಾರೆ. ಇದನ್ನೂ ಓದಿ: ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕೆ ಪಾಕ್‌ ಪ್ರಧಾನಿಗೆ 50,000 ರೂ. ದಂಡ

    ವಾಯುಪಡೆಯಲ್ಲಿ ಧಾರ್ಮಿಕ ಸಂಕೇತವಾಗಿರುವ ತಿಲಕ ಧರಿಸಲು ಅವಕಾಶ ನೀಡಿರುವುದಕ್ಕೆ ನನ್ನ ಹೆತ್ತವರು ತುಂಬಾನೇ ಸಂತಸಗೊಂಡಿದ್ದಾರೆ. ಅಲ್ಲದೆ ಟೆಕ್ಸಾಸ್, ಕ್ಯಾಲಿಪೋರ್ನಿಯಾ, ನ್ಯೂಜೆರ್ಸಿ ಮತ್ತು ನ್ಯೂಯಾರ್ಕ್‍ನಲ್ಲಿರುವ ನನ್ನ ಸ್ನೇಹಿತರು ಕೂಡ ಶುಭ ಕೋರಿರುವುದಾಗಿ ದರ್ಶನ್ ಹೆಮ್ಮೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಹುಡುಗಿ ಎಂದು ಅಪ್ಪನ ಜೊತೆಗೆ ಚಾಟ್ ಮಾಡಿ ಸಿಕ್ಕಿಬಿದ್ದ ಖ್ಯಾತ ನಿರ್ಮಾಪಕ!

    ಏರ್ ಫೋರ್ಸ್‍ನಲ್ಲಿ ಈ ರೀತಿಯ ಘಟನೆ ನಡೆದಿರುವುದು ಅವರಿಗೆ ತುಂಬಾ ಸಂತೋಷವಾಗಿದೆ ಎಂದು ಶಾ ಹೇಳಿದರು. ಇದನ್ನೂ ಓದಿ: ವ್ಲಾಡಿಮಿರ್‌ ಪುಟಿನ್‌ ಎಷ್ಟು ಶ್ರೀಮಂತ? ರಷ್ಯಾ ನಾಯಕನ ಜೀವನ ಶೈಲಿ ಹೇಗಿದೆ ಗೊತ್ತಾ?

  • ಭಾರತದ ರಫೇಲ್ ಯುದ್ಧ ವಿಮಾನ ಎದುರಿಸಲು ಚೀನಾದ ಜೆ-10ಸಿ ಫೈಟರ್ ಜೆಟ್ ಖರೀದಿಸಿದ ಪಾಕಿಸ್ತಾನ

    ಭಾರತದ ರಫೇಲ್ ಯುದ್ಧ ವಿಮಾನ ಎದುರಿಸಲು ಚೀನಾದ ಜೆ-10ಸಿ ಫೈಟರ್ ಜೆಟ್ ಖರೀದಿಸಿದ ಪಾಕಿಸ್ತಾನ

    ಇಸ್ಲಾಮಾಬಾದ್: ಪಾಕಿಸ್ತಾನ ತನ್ನ ಸೇನಾ ಬಲವನ್ನು ಹೆಚ್ಚಿಸಿಕೊಳ್ಳಲು ಮಿತ್ರ ರಾಷ್ಟ್ರ ಚೀನಾದಿಂದ ಜೆ-10ಸಿ ಫೈಟರ್ ಜೆಟ್‌ಗಳನ್ನು ತರಿಸಿಕೊಂಡಿದೆ. ಪಾಕಿಸ್ತಾನ ಭಾರತದ ರಫೇಲ್ ಯುದ್ಧ ವಿಮಾನಕ್ಕೆ ಟಕ್ಕರ್ ನೀಡಲು ಈ ಫೈಟರ್ ಜೆಟ್‌ಗಳನ್ನು ಖರೀದಿಸಿದೆ.

    ಶುಕ್ರವಾರ ಚೀನಾದಿಂದ ತರಿಸಿಕೊಂಡಿರುವ ಫೈಟರ್ ಜೆಟ್‌ಗಳನ್ನು ಪಾಕಿಸ್ತಾನದ ವಾಯುಪಡೆಗೆ ಸೇರ್ಪಡೆಗೊಳಿಸುವ ಸಲುವಾಗಿ ಪಂಜಾಬ್ ಅಟಾಕ್ ಜಿಲ್ಲೆಯಲ್ಲಿ ಸಮಾರಂಭವನ್ನು ಏರ್ಪಡಿಸಲಾಗಿತ್ತು. ಈ ಸಂದರ್ಭದಲ್ಲಿ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಚೀನಾದ ಸಹಕಾರಕ್ಕೆ ಧನ್ಯವಾದ ತಿಳಿಸಿದ್ದಾರೆ. ಇದನ್ನೂ ಓದಿ: ನೆದರ್‌ಲ್ಯಾಂಡ್‌ನ ಅಮೆರಿಕ ರಾಯಭಾರಿಯಾಗಿ ಭಾರತ ಮೂಲದ ಮಹಿಳೆ ನಾಮನಿರ್ದೇಶನ

    ದುರದೃಷ್ಟವಶಾತ್ ಪಾಕಿಸ್ತಾನದಲ್ಲಿ ಅಸಮತೋಲನ ಉಂಟು ಮಾಡುವ ಪ್ರಯತ್ನಗಳು ನಡೆದಿವೆ. ಇದನ್ನು ಸರಿದೂಗಿಸಲು ನಮ್ಮ ರಕ್ಷಣಾ ಪಡೆಗೆ ಹೊಸದಾಗಿ ದೊಡ್ಡಮಟ್ಟದ ಸೇರ್ಪಡೆಗಳನ್ನು ಮಾಡುತ್ತಿದ್ದೇವೆ ಎಂದು ಇಮ್ರಾನ್ ಖಾನ್ ತಿಳಿಸಿದ್ದಾರೆ. ಈ ಮೂಲಕ ಭಾರತ, ಫ್ರಾನ್ಸ್‌ನಿಂದ ತರಿಸಿದ್ದ ರಫೇಲ್ ಯುದ್ಧ ವಿಮಾನಕ್ಕೆ ಪರೋಕ್ಷವಾಗಿ ಟಕ್ಕರ್ ನೀಡುತ್ತಿದ್ದಾರೆ ಎಂಬುದು ಸ್ಪಷ್ಟವಾಗಿದೆ.

    ಅಮೆರಿಕದಿಂದ ಎಫ್-40 ವಿಮಾನಗಳನ್ನು ತರಿಸಿಕೊಳ್ಳಲು ಬರೋಬ್ಬರಿ 40 ವರ್ಷಗಳೇ ಕಾಯಬೇಕಾಯಿತು. ಆದರೆ ಚೀನಾಗೆ ನಾವು ಬೇಡಿಕೆಯಿಟ್ಟ ಕೇವಲ 8 ತಿಂಗಳ ಅವಧಿಯಲ್ಲಿ ವಿಮಾನವನ್ನು ಒದಗಿಸಿದೆ ಎಂದು ಇಮ್ರಾನ್ ಖಾನ್, ಚೀನಾಗೆ ಧನ್ಯವಾದ ತಿಳಿಸಿದ್ದಾರೆ. ಇದನ್ನೂ ಓದಿ: ಮಾರ್ಚ್ 16ಕ್ಕೆ ಭಗವಂತ್ ಮಾನ್ ಪ್ರಮಾಣ ವಚನ ಸ್ವೀಕಾರ

    ಭಾರತಕ್ಕೆ ಪರೋಕ್ಷವಾಗಿ ಟಾಂಗ್ ನೀಡಿದ ಇಮ್ರಾನ್, ಯಾವುದೇ ದೇಶ ಪಾಕಿಸ್ತಾನವನ್ನು ಎದುರು ಹಾಕಿಕೊಳ್ಳುವುದಕ್ಕೂ ಮೊದಲು ಎರಡು ಬಾರಿ ಯೋಚಿಸಬೇಕು. ನಮ್ಮ ಪಡೆಗಳು ಇದೀಗ ಯಾವುದೇ ಬೆದರಿಕೆಯನ್ನೂ ಎದುರಿಸಲು ಸುಸಜ್ಜಿತ ತರಬೇತಿ ಪಡೆದಿದೆ ಎಂದು ಎಚ್ಚರಿಕೆ ನೀಡಿದ್ದಾರೆ. ಇದೀಗ ಪಾಕಿಸ್ತಾನ, ಚೀನಾದಿಂದ 25 ಜೆ-10ಸಿ ವಿಮಾನಗಳನ್ನು ತರಿಸಿಕೊಂಡಿದೆ.

  • ಭಾರತೀಯರ ಸ್ಥಳಾಂತರಕ್ಕೆ ತೆರಳಿದ ವಾಯುಪಡೆ

    ಭಾರತೀಯರ ಸ್ಥಳಾಂತರಕ್ಕೆ ತೆರಳಿದ ವಾಯುಪಡೆ

    ನವದೆಹಲಿ: ಉಕ್ರೇನ್‍ನಲ್ಲಿ ಸಿಲುಕಿರುವ ಭಾರತೀಯರನ್ನು ಸ್ಥಳಾಂತರಿಸುವಂತೆ ವಾಯುಪಡೆಗೆ ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ ಎಂದು ಅಧಿಕೃತ ಮೂಲ ಹೇಳಿದೆ.

    ವಾಯುಪಡೆಯ ಸಾಮಥ್ರ್ಯವನ್ನು ಸಹಾಯ ಪಡೆದುಕೊಂಡು ಕಡಿಮೆ ಸಮಯದಲ್ಲಿ ಹೆಚ್ಚಿನ ಜನರನ್ನು ಸ್ಥಳಾಂತರಿಸಬಹುದು. ಇದು ಇದರಿಂದ ಹೆಚ್ಚು ಜನರನ್ನು ಕರೆಸಿಕೊಳ್ಳಲು ಸಹಾಯವಾಗುತ್ತದೆ ಎಂದು ತಿಳಿಸಿದೆ.

    ಭಾರತದ ವಾಯುಪಡೆಯು ಸಿ-17 ಗ್ಲೋಬ್‍ಮಾಸ್ಟರ್ ವಿಮಾನವನ್ನು ಆಪರೇಷನ್ ಗಂಗಾದ ಭಾಗವಾಗಿ ಅಳವಡಿಸುವ ನಿರೀಕ್ಷೆಯಿದೆ. ಇಂದು ಬೆಳಗ್ಗೆ 182 ಭಾರತೀಯರನ್ನು ಹೊತ್ತ ವಿಮಾನವೊಂದು ಮುಂಬೈಗೆ ಬಂದಿಳಿದಿದೆ. ಉಕ್ರೇನ್ ತನ್ನ ವಾಯುಪ್ರದೇಶವನ್ನು ಮುಚ್ಚಿದ್ದರಿಂದ ಭಾರತೀಯ ವಿಮಾನವು ರೊಮೇನಿಯನ್ ರಾಜಧಾನಿ ಬುಕಾರೆಸ್ಟ್ ತಲುಪಿದೆ.

    ಭಾರತೀಯ ಪ್ರಜೆಗಳನ್ನು ಸ್ಥಳಾಂತರಿಸಲು ಉಕ್ರೇನ್‍ನ ನೆರೆಯ ರಾಷ್ಟ್ರಗಳಾದ ರೊಮೇನಿಯಾ ಮತ್ತು ಸ್ಲೋವಾಕ್ ರಿಪಬ್ಲಿಕ್‍ನಲ್ಲಿರುವವರೊಂದಿಗೆ ಮಾತನಾಡಿ ಉಕ್ರೇನ್‍ನಲ್ಲಿ ಸಿಲುಕಿರುವವರನ್ನು ದೇಶಕ್ಕೆ ವಾಪಸ್ ಕರೆಸಿಕೊಳ್ಳುವ ಪ್ರಯತ್ನ ಮಾಡುತ್ತಿದೆ ಎಂದು ತಿಳಿಸಿದೆ. ಇದನ್ನೂ ಓದಿ: ಟ್ರ್ಯಾಕ್ಟರ್ ಬಳಸಿ ರಷ್ಯಾದ ಮಿಲಿಟರಿ ಟ್ಯಾಂಕ್ ಹೊತ್ತೊಯ್ದ ರೈತ

    ಉಕ್ರೇನ್‍ನಲ್ಲಿದ್ದ ಅಂದಾಜು 20,000 ಭಾರತೀಯರಲ್ಲಿ ಸುಮಾರು 8,000 ಜನರು ಫೆಬ್ರವರಿ ತಿಂಗಳಲ್ಲಿ ದೇಶವನ್ನು ತೊರೆದಿದ್ದಾರೆ ಎಂದು ಸರ್ಕಾರ ಹೇಳಿದೆ. ಇದನ್ನೂ ಓದಿ: ಪುಟಿನ್ ಆದೇಶ ನಿರಾಕರಿಸಿ ಉಕ್ರೇನ್‍ನಿಂದ ಹಿಂದಿರುಗಿದ್ರೆ ಪ್ರತೀ ಸೈನಿಕರೊಂದಿಗೆ ಸೆಕ್ಸ್‌ಗೆ ಸಿದ್ಧಳಿದ್ದೇನೆ: ಮಾಡೆಲ್

  • ವಾಯುಪಡೆಯ ಗ್ರೂಪ್​ ಕ್ಯಾಪ್ಟನ್ ಆಗಿ ಬಡ್ತಿ  ಪಡೆದ ಅಭಿನಂದನ್

    ವಾಯುಪಡೆಯ ಗ್ರೂಪ್​ ಕ್ಯಾಪ್ಟನ್ ಆಗಿ ಬಡ್ತಿ ಪಡೆದ ಅಭಿನಂದನ್

    ನವದೆಹಲಿ: ವಾಯುಪಡೆಯ ಗ್ರೂಪ್ ಕ್ಯಾಪ್ಟನ್ ಆಗಿ ಅಭಿನಂದನ್ ವರ್ಧಮಾನ್ ಬಡ್ತಿ ಪಡೆದಿದ್ದಾರೆ.

    ವಿಂಗ್ ಕಮಾಂಡರ್ ಅಭಿನಂದನ್ ಎಂದಾಕ್ಷಣ ಅಂದು ಪಾಕ್‍ಗೆ ದಿಟ್ಟ್ ಉತ್ತರ ಕೊಟ್ಟು ಜೀವಂತ ಮರಳಿದ ಆರೋಚಕ ಕ್ಷಣಗಳು ನೆನಪಾಗುತ್ತದೆ. ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಅಭಿನಂದನ್ ಪಾಕಿಸ್ತಾನದ ಎಫ್-16 ಯುದ್ಧ ವಿಮಾನ ಹೊಡೆದುರುಳಿಸಿದ್ದರು. ಅವರಿದ್ದ ಮಿಗ್-21 ಹಾನಿಗೀಡಾದ ಕಾರಣ ಪ್ಯಾರಾಚೂಟ್ ಸಹಾಯದಿಂದ ಕೆಳಗೆ ಜಿಗಿದು, ಸಿಕ್ಕಿಬಿದ್ದಿದ್ದರು. ನಂತರ ಪಾಕ್ ಯೋಧರು ಅವರನ್ನು ಬೇರೆಡೆಗೆ ಕರೆದೊಯ್ದಿದ್ದರು.

    ಬಂಧನದ ಅವಧಿಯಲ್ಲಿಯೂ ಆತ್ಮಗೌರವ ಕಾಪಾಡಿಕೊಂಡ ರೀತಿ ಜನರ ಮೆಚ್ಚುಗೆಗೆ ಪಾತ್ರವಾಗಿತ್ತು. ತಲೆ ಎತ್ತಿಯೇ ಗರ್ವದಿಂದ ಎಲ್ಲೆಡೆ ನಡೆಯುತ್ತಿದ್ದ ವೈಖರಿಯನ್ನೂ ಜನರು ಮೆಚ್ಚಿಕೊಂಡಿದ್ದರು. ಅಭಿನಂದನ್ ಅವರಿದ್ದ ವಾಯುಪಡೆಯ 51ನೇ ಸ್ಕ್ವಾರ್ಡನ್‍ಗೂ ಭಾರತ ಸರ್ಕಾರದಿಂದ ವಿಶೇಷ ಮಾನ್ಯತೆ ಸಿಕ್ಕಿತ್ತು. ಪಾಕಿಸ್ತಾನ ವಾಯುಪಡೆಯು ಫೆಬ್ರುವರಿ 27, 2019ರಂದು ಭಾರತದ ಮೇಲೆ ದಾಳಿ ನಡೆಸಲು ಮಾಡಿದ ಪ್ರಯತ್ನವನ್ನು ಹಿಮ್ಮೆಟ್ಟಿಸುವಲ್ಲಿ ಈ ತುಕಡಿಯ ಕಾರ್ಯಕ್ಷಮತೆ ಪರಿಣಾಮಕಾರಿಯಾಗಿತ್ತು. ಕೇಂದ್ರೀಯ ಮೀಸಲು ಪೊಲೀಸ್ ಸಿಬ್ಬಂದಿ ಇದ್ದ ಬಸ್ ಒಂದರ ಮೇಲೆ ಉಗ್ರರು ನಡೆಸಿದ ಬಾಂಬ್ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳಲು ಭಾರತವು ಬಾಲಾಕೋಟ್‍ನಲ್ಲಿದ್ದ ಉಗ್ರಗಾಮಿ ಶಿಬಿರಗಳ ಮೇಲೆ ದಾಳಿ ನಡೆಸಿತ್ತು. ಇದನ್ನೂ ಓದಿ: ಚಪ್ಪಲಿ ತೆಗೆದು ಅಭಿಮಾನಿಗಳಿಂದ ಅಪ್ಪುಗೆ ಅಂತಿಮ ನಮನ- ಬಿಬಿಎಂಪಿಯಿಂದ ರಾಶಿ ರಾಶಿ ಸ್ಲಿಪ್ಪರ್ಸ್ ತೆರವು

    ಅಭಿನಂದನ್ ವರ್ಧಮಾನ್ ಅವರಿಗೆ ಶೌರ್ಯ ಪ್ರಶಸ್ತಿಯನ್ನೂ ನೀಡಲಾಗಿತ್ತು. ಇದೀಗ ಭಾರತೀಯ ವಾಯುಸೇನೆ ಗ್ರೂಪ್ ಕ್ಯಾಪ್ಟನ್ ಆಗಿ ಪದೋನ್ನತಿ ನೀಡಿದೆ. ಇದನ್ನೂ ಓದಿ: ಅಪ್ಪು ಸಮಾಧಿ ಬಳಿ ನೃತ್ಯ ನಮನ ಸಲ್ಲಿಸಿದ ಪುಟಾಣಿಗಳು

  • ಬೆಂಕಿಯ ಕೆನ್ನಾಲಿಗೆಗೆ ಹೊತ್ತಿ ಉರಿದ ಕಾರ್ಖಾನೆ -ವಾಯುಪಡೆಗೆ ಕರೆ

    ಬೆಂಕಿಯ ಕೆನ್ನಾಲಿಗೆಗೆ ಹೊತ್ತಿ ಉರಿದ ಕಾರ್ಖಾನೆ -ವಾಯುಪಡೆಗೆ ಕರೆ

    ಶ್ರೀನಗರ: ರಾಸಾಯನಿಕ ಕಾರ್ಖಾನೆಯಲ್ಲಿ ಉಂಟಾದ ಅಗ್ನಿ ಅವಘಡಕ್ಕೆ ಇಡೀ ಕಾರ್ಖಾನೆ ಬೆಂಕಿಯ ಕೆನ್ನಾಲಿಗೆ ಹೊತ್ತಿ ಉರಿದಿರುವ ಘಟನೆ ಉಧಂಪುರ್ ಜಿಲ್ಲೆಯ ಬಟಾಲ್ ಬಲಿಯನ್ ಕೈಗಾರಿಕಾ ಪ್ರದೇಶದಲ್ಲಿ ವರದಿಯಾಗಿದೆ.

    ಧನುಕಾ ಅಗ್ರಿಟೆಕ್ ಲಿಮಿಟೆಡ್ ಕಾರ್ಖಾನೆಯಲ್ಲಿ ಮುಂಜಾನೆ 12.30 ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಬೆಂಕಿ ನಂದಿಸಲು ಅಗ್ನಿಶಾಮಕ ದಳ ಆಗಮಿಸಿದರು ಕೂಡ ರಾಸಾಯನಿಕ ಉತ್ಪಾದನೆಯ ಕಾರ್ಖಾನೆ ಆಗಿರುವುದರಿಂದ ಬೆಂಕಿ ಕಾರ್ಖಾನೆ ತುಂಬ ಹರಡಿಕೊಂಡಿಕೊಂಡಿದೆ. ಸ್ಥಳದಲ್ಲಿ 8 ಅಗ್ನಿಶಾಮಕ ದಳದ ವಾಹನಗಳು ಕಾರ್ಯಾಚರಣೆ ಮಾಡುತ್ತಿದೆ. ಆದರೂ ಬೆಂಕಿ ನಂದಿಸಲು ಕಷ್ಟವಾಗುತ್ತಿರುವ ಪರಿಣಾಮ ವಾಯುಪಡೆಗೆ ಬೆಂಕಿ ನಂದಿಸಲು ಕರೆ ಮಾಡಲಾಗಿದೆ.

    ಈ ಕುರಿತು ಸ್ಥಳೀಯ ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿರುವ ಅಗ್ನಿಶಾಮಕ ದಳದ ಅಧಿಕಾರಿ, ಕೈಗಾರಿಕಾ ಪ್ರದೇಶದಲ್ಲಿ ಕಾಣಿಸಿಕೊಂಡ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿಕೊಂಡಿದ್ದೇವೆ. ನಾವು ಬೆಂಕಿ ನಂದಿಸಲು ಪ್ರಯತ್ನ ಪಡುತ್ತಿದ್ದರು ಕೂಡ ಸಾಧ್ಯವಾಗುತ್ತಿಲ್ಲ ಎಂದಿದ್ದಾರೆ.

    ಬೆಂಕಿ ಅವಘಡದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆದರೆ ಕಾರ್ಖಾನೆ ಮತ್ತು ಸ್ಥಳದಲ್ಲಿದ್ದ ವಾಹನಗಳು ಪೂರ್ತಿ ಸುಟ್ಟು ಕರಕಲಾಗಿದೆ. ಹತ್ತಿರದ ಕಟ್ಟಡಕ್ಕೆ ಬೆಂಕಿ ಹೊತ್ತಿಕೊಳ್ಳದಂತೆ ಕಾರ್ಯಾಚರಣೆ ಮುಂದುವರಿದಿದೆ.

  • 114 ಯುದ್ಧ ವಿಮಾನಗಳ ಖರೀದಿಗೆ ಸಿದ್ಧತೆ-ವಿಶ್ವದಲ್ಲೇ ಬೃಹತ್ ಡೀಲ್‍ಗೆ ಮುಂದಾದ ಭಾರತ

    114 ಯುದ್ಧ ವಿಮಾನಗಳ ಖರೀದಿಗೆ ಸಿದ್ಧತೆ-ವಿಶ್ವದಲ್ಲೇ ಬೃಹತ್ ಡೀಲ್‍ಗೆ ಮುಂದಾದ ಭಾರತ

    ನವದೆಹಲಿ: ಯುದ್ಧ ವಿಮಾನ ಖರೀದಿಸುವ ನಿಟ್ಟಿನಲ್ಲಿ ಭಾರತ ಮಹತ್ವದ ಹೆಜ್ಜೆಯನ್ನಿಟ್ಟಿದ್ದು, 114 ಯುದ್ಧ ವಿಮಾನಗಳ ಖರೀದಿಗೆ ಮುಂದಾಗಿದೆ. ಈ ಮೂಲಕ ವಿಶ್ವದಲ್ಲೇ ಅತಿ ದೊಡ್ಡ ಡೀಲ್‍ಗೆ ಭಾರತ ಮುಂದಾಗಿದೆ.

    114 ವಿಮಾನಗಳನ್ನು ಖರೀದಿಸುವ ಕುರಿತು ಈಗಾಗಲೇ ಬಿಡ್ಡಿಂಗ್ ಆಹ್ವಾನಿಸಲು ಸಿದ್ಧತೆ ಮಾಡಿಕೊಂಡಿದ್ದು, ಇದು ವಿಶ್ವದಲ್ಲೇ ಬೃಹತ್ ಡೀಲ್ ಆಗಿದೆ ಎಂದು ಹೇಳಲಾಗುತ್ತಿದೆ. ಈ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಹಳೆಯ ಯುದ್ಧ ವಿಮಾನಗಳನ್ನು ಬದಲಿಸುವುದು ಹಾಗೂ ಹೊಸದಾಗಿ ಹೆಚ್ಚು ವಿಮಾನಗಳನ್ನು ಖರೀದಿಸುವ ಮೂಲಕ ದೇಶದ ಸಶಸ್ತ್ರ ಪಡೆಗಳ ಸಾಮಥ್ರ್ಯವನ್ನು ಹೆಚ್ಚಿಸಲು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.

    ಈ ಬೃಹತ್ ಡೀಲ್‍ನ ಬೆಲೆ ಸುಮಾರು 15 ಬಿಲಿಯನ್ ಯುಎಸ್ ಡಾಲರ್‍ಗಿಂತ ಹೆಚ್ಚಾಗಿದೆ. ಇದಕ್ಕಾಗಿ ಅಧಿಕಾರಿಗಳು ವಿವಿಧ ತಯಾರಿಸಿ ನಡೆಸಿದ್ದಾರೆ. ಬೋಯಿಂಗ್ ಕಂ., ಲಾಕ್‍ಹೀಡ್ ಮಾರ್ಟೀನ್ ಕಾರ್ಪೋರೇಷನ್ ಹಾಗೂ ಸ್ವೀಡನ್‍ನ ಸಾಬ್ ಎಬಿ ಸೇರಿದಂತೆ ವಿವಿಧ ಪ್ರಮುಖ ಯುದ್ಧ ನೌಕೆಗಳ ಉತ್ಪಾದಕರನ್ನು ರಕ್ಷಣಾ ಅಧಿಕಾರಿಗಳು ಸೆಳೆಯುತ್ತಿದ್ದಾರೆ. ಇವುಗಳಲ್ಲಿ ಶೇ.85ರಷ್ಟು ಉತ್ಪಾದನೆ ಭಾರತದಲ್ಲೇ ಆಗಬೇಕು ಎಂದು ಕಳೆದ ವರ್ಷವೇ ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ.

    ದೇಶದ ರಕ್ಷಣಾ ಪಡೆಗಳನ್ನು ಅಧುನಿಕರಣಗೊಳಿಸುವುದು ಪ್ರಧಾನಿ ಮೋದಿ ಅವರಿಗೆ ಸವಾಲಾಗಿ ಪರಿಣಮಿಸಿದ್ದು, ನೆರೆಯ ಚೀನಾ ಹಾಗೂ ಪಾಕಿಸ್ತಾನಗಳಿಂದ ಬೆದರಿಕೆ ಎದುರಾದರೂ ಮೊದಲ ಅವಧಿಯಲ್ಲಿ ಯಾವುದೇ ಹೊಸ ಪ್ರಮುಖ ಶಸ್ತ್ರಾಸ್ತ್ರ ಒಪ್ಪಂದಗಳಿಗೆ ಸಹಿ ಹಾಕಲಿಲ್ಲ. ಇತ್ತೀಚೆಗೆ ಸೋವಿಯತ್ ನಿರ್ಮಿತ ಭಾರತ ಹಳೆಯ ಮಿಗ್-21 ಯುದ್ಧ ವಿಮಾನ ಪಾಕಿಸ್ತಾನದ ಅಧುನಿಕ ಎಫ್-16 ಯುದ್ಧ ವಿಮಾನವನ್ನೇ ಹೊಡೆದುರುಳಿಸಿತ್ತು.

    ಖರೀಸುವ ಪ್ರಕ್ರಿಯೆ ಪ್ರಾರಂಭ
    ವಿವಿಧ ಯುದ್ಧ ವಿಮಾನಗಳ ಉತ್ಪಾದಕರಿಂದ ಬಿಡ್ಡಿಂಗ್ ಆಹ್ವಾನಿಸಲು ಈಗಾಗಲೇ ಭಾರತೀಯ ವಾಯು ಸೇನೆಯ ಅಧಿಕಾರಿಗಳು ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಈ ಕುರಿತು ಕಿರಿಯ ರಕ್ಷಣಾ ಸಚಿವ ಶ್ರೀಪಾದ್ ನಾಯಕ್ ಅವರು ಸಂಸತ್‍ನಲ್ಲಿ ಪ್ರಸ್ತಾಪಿಸಿದ್ದು, ಟ್ಯಾಂಕ್‍ಗಳು, ಶಸ್ತ್ರಸಜ್ಜಿತ ವಾಹನಗಳನ್ನು ಖರೀದಿಸಲು ದಾಖಲೆಗಳನ್ನು ಸಿದ್ಧಪಡಿಸುತ್ತಿದ್ದು, ವಿದೇಶಿ ಹಡಗು ನಿರ್ಮಾಣ ಮಾಡುವವರಿಂದ ಭಾರತದಲ್ಲಿ ಜಲಾಂತರ್ಗಾಮಿ ನೌಕೆಗಳನ್ನು ತಯಾರಿಸಲು ಕೇಳಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

    ಹಿಂದೂ ಮಹಾಸಾಗರ ಪ್ರದೇಶದಲ್ಲಿ ಕಡಲ ಗಡಿಯ ಭದ್ರತೆ ಹೆಚ್ಚಿಸಿಕೊಳ್ಳುವ ದೃಷ್ಟಿಯಿಂದ ಭಾರತ ನೌಕಾಪಡೆ ಹಾಗೂ ಕರಾವಳಿ ಕಾವಲುಗಾರರಿಗೆ ಯುದ್ಧ ನೌಕೆಗಳು ಹಾಗೂ ಹಡಗುಗಳನ್ನು ಖರೀದಿಸಲು ಬಿಡ್ ಕರೆಯಲಾಗಿದೆ. 150(2.2ಬಿಲಿಯನ್ ಡಾಲರ್) ಬಿಲಿಯನ್ ಮೌಲ್ಯದ 6 ಕ್ಷಿಪಣಿ ಯುದ್ಧ ನೌಕೆಗಳು ಹಾಗೂ ಇತರ ಸಣ್ಣ ಹಡಗುಗಳ ನಿರ್ಮಾಣಕ್ಕೆ ಮುಂದಾಗಿದೆ. ಈ ಕುರಿತು ಪ್ರಸ್ತಾವನೆ ಸಲ್ಲಿಸುವಂತೆ ಪ್ರಧಾನಿ ಮೋದಿ ಆಡಳಿತ ಸೋಮವಾರ 7 ಶಿಪ್‍ಯಾರ್ಡ್ ಗಳಿಗೆ ತಿಳಿಸಿದೆ ಎಂದು ನಾಯಕ್ ತಿಳಿದ್ದಾರೆ.

    ಭಾರತೀಯ ವಾಯು ಸೇನೆ ಹಾಗೂ ನೌಕಾಪಡೆಗೆ ಒಟ್ಟು 400 ಸಿಂಗಲ್ ಹಾಗೂ ಡಬಲ್ ಎಂಜಿನ್ ಯುದ್ಧ ವಿಮಾನಗಳ ಅಗತ್ಯವಿದೆ ಎಂದು ಸರ್ಕಾರ ತಿಳಿಸಿದೆ.

    ಬೋಯಿಂಗ್‍ಗಳ ನಿರ್ಮಾಣಕ್ಕೆ ರಾಜ್ಯ ಸರ್ಕಾರ ನಡೆಸುವ ಹಿಂದುಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್(ಎಚ್‍ಎಎಲ್) ಹಾಗೂ ಮಹೀಂದ್ರಾ ಡಿಫೆನ್ಸ್ ಸಿಸ್ಟಮ್ಸ್ ಲಿ., ಫೈಟರ್ ಜೆಟ್‍ಗಳ ಖರೀದಿಗೆ ಎಫ್/ಎ-18, ಲಾಕ್‍ಹೀಡ್ ತನ್ನ ಎಫ್-21 ಜೆಟ್‍ಗಳಿಗಾಗಿ ಟಾಟಾ ಗ್ರೂಪ್‍ನೊಂದಿಗೆ ಜಂಟಿಯಾಗಿ ಬಿಡ್ ಮಾಡಲಿದೆ. ಸಾಬ್ ತನ್ನ ಗ್ರಪೆನ್ ಜೆಟ್‍ಗಳನ್ನು ತಯಾರಿಸಲು ಗೌತಮ್ ಅದಾನಿಯೊಂದಿಗೆ ಕೈ ಜೋಡಿಸಲಿದೆ.

    2015ರಲ್ಲಿ 11 ಬಿಲಿಯನ್ ಯುಎಸ್ ಡಾಲರ್ ಮೌಲ್ಯದ 126 ರಫೇಲ್ ಯುದ್ಧ ವಿಮಾನಗಳನ್ನು ಡಸಾಲ್ಟ್ ಏವಿಯೇಷನ್‍ನೊಂದಿಗಿನ ಆದೇಶವನ್ನು ರದ್ದುಗೊಳಿಸಿದ ನಂತರ ಮತ್ತೆ ರಫೇಲ್ ಖರೀದಿಸಲು ಒಂದು ದಶಕವೇ ಬೇಕಾಯಿತು. ಕಳೆದ ಬಾರಿಯ ಮೋದಿ ಸರ್ಕಾರದ ಆಡಳಿತಾವಧಿಯಲ್ಲಿ 36 ಜೆಟ್‍ಗಳನ್ನು ಪ್ರತ್ಯೇಕವಾಗಿ ಖರೀದಿಸಲಾಯಿತು. ಆದರೆ, ಈ ಬಾರಿಯ ಟೆಂಡರ್‍ನಲ್ಲಿ ಆಯ್ಕೆಯಾದವರು ಒಪ್ಪಂದ ಮಾಡಿಕೊಂಡ ಮೂರು ವರ್ಷಗಳಲ್ಲಿ ಮೊದಲ ಜೆಟ್‍ನಲ್ಲಿ ಹಸ್ತಾಂತರಿಸಬೇಕು ಎಂಬ ನಿಯಮವನ್ನು ಜಾರಿಗೆ ತರಲಾಗಿದೆ.