Tag: ವಾಯುಸೇನೆ

  • ಏರ್ ಸ್ಟ್ರೈಕ್ ಬಳಿಕ ಪಾಕ್ ಗಡಿಯಲ್ಲಿ ಭಾರತದ ಯುದ್ಧ ವಿಮಾನಗಳ ಸಮರಾಭ್ಯಾಸ

    ಏರ್ ಸ್ಟ್ರೈಕ್ ಬಳಿಕ ಪಾಕ್ ಗಡಿಯಲ್ಲಿ ಭಾರತದ ಯುದ್ಧ ವಿಮಾನಗಳ ಸಮರಾಭ್ಯಾಸ

    ನವದೆಹಲಿ: ಜಮ್ಮು ಕಾಶ್ಮೀರದ ಹಾಗು ಪಂಜಾಬ್ ಗಡಿ ಪ್ರದೇಶದಲ್ಲಿ ಭಾರತ ವಾಯು ಪಡೆಯ ಯುದ್ಧ ವಿಮಾನಗಳು ಗುರುವಾರ ರಾತ್ರಿ ಸಮರಾಭ್ಯಾಸ ನಡೆಸಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.

    ರಾತ್ರಿಯ ವೇಳೆಯಲ್ಲಿ ಅಭ್ಯಾಸ ನಡೆದಿದ್ದು, ತುರ್ತು ಪರಿಸ್ಥಿತಿ ವೇಳೆ ತಕ್ಷಣ ದಾಳಿ ನಡೆಸುವ ಸಿದ್ಧತೆಯ ಉದ್ದೇಶದಿಂದ ಅಭ್ಯಾಸ ನಡೆಸಲಾಗಿದೆ ಎಂಬ ಮಾಹಿತಿ ಲಭಿಸಿದೆ. ಐಎಎಫ್ ಕೆಲ ಯುದ್ಧ ವಿಮಾನಗಳು ಅಭ್ಯಾಸದಲ್ಲಿ ತೊಡಗಿತ್ತು. ಈ ವೇಳೆ ಸೇನೆ ಕಾಂಬಾಂಟ್ ಡ್ರಿಲ್ ನಡೆಸಿತ್ತು ಎಂಬ ಮಾಹಿತಿ ಲಭಿಸಿದೆ.

    ಅಭ್ಯಾಸ ನಡೆಸಿದ ಪರಿಣಾಮ ಗಡಿ ಪ್ರದೇಶದ ಜನರು ಭಾರೀ ಶಬ್ದ ಕೇಳಿ ಬಂದಿದ್ದರಿಂದ ಜನರು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿದ್ದರು. ಆದರೆ ಈ ಬಗ್ಗೆ ಸ್ಪಷ್ಟನೆ ನೀಡಿದ ಅಮೃತಸರ ಪೊಲೀಸರು, ಯಾವುದೇ ರೀತಿಯ ಅನಾಹುತ ನಡೆದಿಲ್ಲ. ಜನರು ಭಯಪಡುವ ಅಗತ್ಯವಿಲ್ಲ. ಗಾಳಿಸುದ್ದಿಗಳನ್ನು ನಂಬಬೇಡಿ ಎಂದು ತಿಳಿಸಿದ್ದರು.

    ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಲು 1971ರ ಬಳಿಕ ಮೊದಲ ಬಾರಿಗೆ ವಾಯುಪಡೆಯನ್ನು ಬಳಕೆ ಮಾಡಲಾಗಿತ್ತು. ಈ ದಾಳಿಯ ಬಳಿಕ ಸೇನೆ ಅಭ್ಯಾಸದಲ್ಲಿ ತೊಡಗಿದೆ. ಆ ಬಳಿಕ ಐಎಎಫ್ ಯಾವುದೇ ಸಂದರ್ಭವನ್ನು ಎದುರಿಸಲು ಕೂಡ ಹೈ ಅಲರ್ಟ್ ಆಗಿದೆ.

    ಪಾಕಿಸ್ತಾನದ ವಾಯು ಸೇನೆ ಉಗ್ರರ ನೆಲೆಗಳ ಮೇಲೆ ಭಾರತ ದಾಳಿ ನಡೆಸಿದ ಪರಿಣಾಮ ಪ್ರತಿದಾಳಿಗೆ ಮುಂದಾಗಿತ್ತು. ಆದರೆ ಪಾಕ್ ಸೇನೆಯ ಪ್ರಯತ್ನವನ್ನು ಭಾರತ ವಾಯುಸೇನೆ ಹಿಮ್ಮೆಟ್ಟಿತ್ತು. ಭಾರತ ಮಿಗ್ 29 ಜೆಟ್ ಪಾಕ್‍ನ ಎಫ್-16 ಅತ್ಯಾಧುನಿಕ ಯುದ್ಧ ವಿಮಾನವನ್ನು ಹೊಡೆದುರುಳಿಸಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ದಾಳಿಯಲ್ಲಿ ಹತ್ಯೆಯಾದ ಉಗ್ರರ ಸಂಖ್ಯೆ ಬಹಿರಂಗಪಡಿಸಲ್ಲ, ಸೇನೆ ಮೆಲೆ ನಂಬಿಕೆಯಿಡಿ- ನಿರ್ಮಲಾ ಸೀತಾರಾಮನ್

    ದಾಳಿಯಲ್ಲಿ ಹತ್ಯೆಯಾದ ಉಗ್ರರ ಸಂಖ್ಯೆ ಬಹಿರಂಗಪಡಿಸಲ್ಲ, ಸೇನೆ ಮೆಲೆ ನಂಬಿಕೆಯಿಡಿ- ನಿರ್ಮಲಾ ಸೀತಾರಾಮನ್

    ನವದೆಹಲಿ: ಬಾಲಕೋಟ್ ದಾಳಿಯಲ್ಲಿ ಎಷ್ಟು ಜನ ಸತ್ತಿದ್ದಾರೆ ಎನ್ನುವ ವಿಚಾರವನ್ನು ಸರ್ಕಾರ ಬಹಿರಂಗ ಪಡಿಸುವುದಿಲ್ಲ ಎಂದು ರಕ್ಷಣಾ ಸಚಿವ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

    ಖಾಸಗಿ ವಾಹಿನಿಯೊಂದರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಎಷ್ಟು ಉಗ್ರರು ಮೃತಪಟ್ಟಿದ್ದಾರೆ ಎನ್ನುವ ಮಾಹಿತಿಯನ್ನು ಸರ್ಕಾರ ಬಹಿರಂಗ ಪಡಿಸುವುದಿಲ್ಲ. ಸರ್ಕಾರದ ಮೇಲೆ ನಂಬಿಕೆಯಿಡಿ. ನಮ್ಮ ಸೇನೆಯ ಮೇಲೆ ನಂಬಿಯಿಡಿ ಎಂದು ಖಡಕ್ ಆಗಿ ತಿಳಿಸಿದ್ದಾರೆ.

    ದಾಳಿಯಲ್ಲಿ ಯಾವುದೇ ಹಾನಿಯಾಗಿಲ್ಲ ಮರಗಳು ಉರುಳಿವೆ ಎಂದು ಪಾಕಿಸ್ತಾನ ಹೇಳಿಕೊಂಡಿದೆ. ಒಂದು ವೇಳೆ ದಾಳಿ ನಡೆಯದೇ ಇದ್ದರೆ ಪಾಕಿಸ್ತಾನ ಸರ್ಕಾರ ದೇಶದ ಒಳಗಿನ ಮಾಧ್ಯಮಗಳಿಗೆ ಮತ್ತು ಅಂತರಾಷ್ಟ್ರೀಯ ಮಾಧ್ಯಮಗಳು ಬಾಲಕೋಟ್ ಪ್ರವೇಶಕ್ಕೆ ನಿರ್ಬಂಧ ಹೇರಿದ್ದು ಯಾಕೆ? ಜವಾಬ್ದಾರಿ ಸರ್ಕಾರ ಈ ರೀತಿ ಮಾಡಿರುವುದು ಸರಿಯೇ ಎಂದು ಪ್ರಶ್ನೆ ಮಾಡಿದರು. ಇದನ್ನೂ ಓದಿ: ಬಾಲಕೋಟ್ ದಾಳಿಯಲ್ಲಿ 200ಕ್ಕೂ ಹೆಚ್ಚು ಉಗ್ರರ ಹತ್ಯೆ: ಪಾಕ್ ಸೇನಾಧಿಕಾರಿ

    ಆತ್ಮಾಹುತಿ ಉಗ್ರರ ಹೊಸ ಬ್ಯಾಚ್ ಗೆ ಬಾಲಕೋಟ್ ನೆಲೆಯಲ್ಲಿ ತರಬೇತಿ ನಡೆಯುತ್ತಿದೆ ಎನ್ನುವ ಖಚಿತ ಮಾಹಿತಿ ನಮಗೆ ಸಿಕ್ಕಿತ್ತು. ಈ ಕಾರಣಕ್ಕಾಗಿಯೇ ನಾವು ಬಾಲಕೋಟ್ ಗುರಿಯಾಗಿಸಿ ದಾಳಿ ಮಾಡಿದ್ದೇವೆ ಎಂದು ಸಮರ್ಥನೆ ನೀಡಿದರು. ಇದನ್ನೂ ಓದಿ: ಪೆಟ್ರೋಲ್ ಸುರಿದು ಮೃತದೇಹ ಸುಟ್ಟರು – ಏರ್ ಸರ್ಜಿಕಲ್ ಸ್ಟ್ರೈಕ್‍ಗೆ ಸಿಕ್ತು ಆಡಿಯೋ ಸಾಕ್ಷ್ಯ!

    ಈ ವೇಳೆ ಎಲ್ಲೆಲ್ಲಿ ಉಗ್ರರು ಕಾಣಸಿಗುತ್ತಾರೋ ಅವರ ಮೇಲೆ ಯಾವುದೇ ರೀತಿ ಕ್ರಮ ಕೈಗೊಳ್ಳಲು ನಮ್ಮ ಸರ್ಕಾರ ಸೈನಿಕರಿಗೆ ಸಂಪೂರ್ಣ ಸ್ವಾತಂತ್ರ್ಯವನ್ನು ನೀಡಿದೆ ಎಂದು ತಿಳಿಸಿದರು.

    ಈ ಹಿಂದೆ ಏರ್ ಚೀಫ್ ಮಾರ್ಷಲ್ ಅವರಲ್ಲಿ ಎಷ್ಟು ಮಂದಿ ಉಗ್ರರು ಸಾವನ್ನಪ್ಪಿದ್ದಾರೆ ಎಂದು ಕೇಳಿದ್ದಕ್ಕೆ, ಸತ್ತ ಉಗ್ರರ ತಲೆಯನ್ನು ಲೆಕ್ಕ ಹಾಕುವುದು ನಮ್ಮ ಕೆಲಸವಲ್ಲ. ಅದರ ಲೆಕ್ಕವನ್ನು ಸರ್ಕಾರ ನೀಡುತ್ತದೆ. ನಮಗೆ ಏನು ಗುರಿಯನ್ನು ನೀಡಲಾಗಿತ್ತೋ ಆ ಗುರಿಯನ್ನು ನಾವು ಯಶಸ್ವಿಯಾಗಿ ಮುಗಿಸಿದ್ದೇವೆ. ಎಲ್ಲಿ ಬಾಂಬ್ ಹಾಕಬೇಕಿತ್ತೋ ಆ ಸ್ಥಳಕ್ಕೆ ನಮ್ಮ ಸೈನಿಕರು ಬಾಂಬ್ ಹಾಕಿ ಯಶಸ್ವಿಯಾಗಿ ಮರಳಿ ಬಂದಿದ್ದಾರೆ ಎಂದು ಉತ್ತರಿಸಿದ್ದರು.

    ಬಾಲಕೋಟ್ ಉಗ್ರರ ನೆಲೆಯ ಮೇಲೆ ದಾಳಿ ನಡೆಸುವುದಕ್ಕೂ ಮೊದಲು 300 ಮೊಬೈಲ್ ಗಳು ಅಲ್ಲಿ ಸಕ್ರಿಯವಾಗಿತ್ತು ಎಂದು ರಾಷ್ಟ್ರೀಯ ತಾಂತ್ರಿಕ ಸಂಶೋಧನಾ ಸಂಸ್ಥೆ(ಎನ್‍ಟಿಆರ್‍ಒ) ದೃಢಪಡಿಸಿತ್ತು. ಭಾರತದ ದಾಳಿ ಬಳಿಕ ಪೆಟ್ರೋಲ್ ಹಾಕಿ ಪಾಕ್ ಸೇನೆ ಉಗ್ರರ ಮೃತ ದೇಹಗಳನ್ನು ಸುಟ್ಟು ಹಾಕಿದೆ ಎಂದು ಮಾಧ್ಯಮವೊಂದು ವರದಿ ಮಾಡಿತ್ತು. ಇದನ್ನೂ ಓದಿ: 9 ದಿನಗಳಲ್ಲಿ 3ನೇ ಬಾರಿ ಪತ್ರಕರ್ತರಿಗೆ ನೋ ಎಂಟ್ರಿ: ಬಾಲಕೋಟ್ ಪ್ರದೇಶಕ್ಕೆ ಮಾಧ್ಯಮಗಳಿಗೆ ನಿಷೇಧ

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಏರ್ ಸ್ಟ್ರೈಕ್ ಸಾಕ್ಷಿ ತರಲು ಪಾಕಿಸ್ತಾನಕ್ಕೆ ಹೋಗ್ತೀರಾ: ಸಿಬಲ್‍ಗೆ ರಾಜ್ಯವರ್ಧನ್ ಸವಾಲ್

    ಏರ್ ಸ್ಟ್ರೈಕ್ ಸಾಕ್ಷಿ ತರಲು ಪಾಕಿಸ್ತಾನಕ್ಕೆ ಹೋಗ್ತೀರಾ: ಸಿಬಲ್‍ಗೆ ರಾಜ್ಯವರ್ಧನ್ ಸವಾಲ್

    ನವದೆಹಲಿ: ಭಾರತದ ವಾಯುಪಡೆ ನಡೆಸಿರುವ ಏರ್ ಸ್ಟ್ರೈಕ್ ದಾಳಿಗೆ ಸಾಕ್ಷಿ ತರಲು ಪಾಕಿಸ್ತಾನಕ್ಕೆ ಹೋಗುತ್ತಿರಾ ಎಂದು ಕೇಂದ್ರ ಸಚಿವ ರಾಜ್ಯವರ್ಧನ್ ಸಿಂಗ್ ರಾಥೋಡ್ ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ಅವರಿಗೆ ಸವಾಲ್ ಎಸೆದಿದ್ದಾರೆ.

    ಫಬ್ರವರಿ 26ರಂದು ಭಾರತದ ವಾಯುಪಡೆ ನಡೆಸಿರುವ ಏರ್ ಸ್ಟ್ರೈಕ್‍ಗೆ ವಿಪಕ್ಷಗಳು ಸಾಕ್ಷಿ ಕೇಳುತ್ತಿವೆ. ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ಸಹ ವಾಯುದಾಳಿಗೆ ಸರ್ಕಾರ ಸಾಕ್ಷಿ ನೀಡಬೇಕು. ಮೋದಿ ಸರ್ಕಾರ ವಾಯುಸೇನೆಯನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿದ್ದರು. ಕಪಿಲ್ ಸಿಬಲ್ ಹೇಳಿಕೆಗೆ ಕೇಂದ್ರ ಸಚಿವರು ತಿರುಗೇಟು ನೀಡಿದ್ದಾರೆ.

    ಕಪಿಲ್ ಸಿಬಲ್ ಜಿ, ನೀವು ನಮ್ಮ ಗುಪ್ತಚರದಳ ಮತ್ತು ವಾಯುಸೇನೆಯ ಶಕ್ತಿಯ ಬಗ್ಗೆ ನಿಮಗೆ ನಂಬಿಕೆಯಿಲ್ಲ. ಬದಲಾಗಿ ಅಂತರಾಷ್ಟ್ರೀಯ ಮಾಧ್ಯಮಗಳು ಬಿತ್ತರಿಸುವ ಸುದ್ದಿಗಳ ಮೇಲೆ ನೀವು ಹೆಚ್ಚು ನಂಬಿಕೆಯನ್ನು ಹೊಂದಿದ್ದೀರಿ. ವಾಯುದಾಳಿಯಲ್ಲಿ ಯಾವುದೇ ಪ್ರಾಣಪಾಯ ಆಗಿಲ್ಲ ಅಂದ್ರೆ ನಿಮ್ಮ ಮುಖದ ಮೇಲೆ ನಗು ಕಾಣುತ್ತದೆ. ಇವಿಎಂ ವಿರುದ್ಧ ಸಾಕ್ಷ್ಯಾಧಾರಕ್ಕಾಗಿ ಲಂಡನ್ ವರೆಗೂ ಹೋಗಿ ಬಂದಿದ್ದೀರಿ. ಇದೀಗ ಏರ್ ಸ್ಟ್ರೈಕ್ ಸಾಕ್ಷಿಗಾಗಿ ಬಾಲಕೋಟ್‍ಗೆ ಹೋಗಲು ಸಿದ್ಧರಿದ್ದೀರಾ ಎಂದು ರಾಜ್ಯವರ್ಧನ್ ಸಿಂಗ್ ಪ್ರಶ್ನೆ ಮಾಡಿದ್ದಾರೆ.

    ಸಿಬಲ್ ಟ್ವೀಟ್: ಮೋದಿ ಜೀ, ಅಂತರಾಷ್ಟ್ರೀಯ ಮಾಧ್ಯಮಗಳು ಬಾಲಕೋಟ್ ನಲ್ಲಿ ಯಾವುದೇ ಉಗ್ರರು ಹತರಾಗಿರುವ ವರದಿ ಆಗಿಲ್ಲ ಎಂದು ಹೇಳುತ್ತಿವೆ. ಹಾಗಾದ್ರೆ ಅವರೆಲ್ಲರೂ ಪಾಕಿಸ್ತಾನದ ಬೆಂಬಲಿಗರಾ? ನೀವು ಭಯೋತ್ಪದನೆ ಹೆಸರಿನಲ್ಲಿ ರಾಜಕೀಯ ಮಾಡಲು ಹೊರಟಿದ್ದೀರಾ ಎಂದು ಕಪಿಲ್ ಸಿಬಲ್ ತಮ್ಮ ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಏರ್ ಸ್ಟ್ರೈಕ್ ನಡೆದ ಸ್ಥಳದಲ್ಲಿ 300 ಮೊಬೈಲ್!

    ಏರ್ ಸ್ಟ್ರೈಕ್ ನಡೆದ ಸ್ಥಳದಲ್ಲಿ 300 ಮೊಬೈಲ್!

    ನವದೆಹಲಿ: ಭಾರತೀಯ ವಾಯುಪಡೆ ಬಾಲಕೋಟ್ ಮೇಲೆ ದಾಳಿ ನಡೆಸುವ ಸ್ಥಳದಲ್ಲಿ 300 ಮೊಬೈಲ್ ಗಳು ಆ್ಯಕ್ಟಿವ್ ಆಗಿದ್ದವು ಎಂದು ರಾಷ್ಟ್ರೀಯ ತಾಂತ್ರಿಕ ಸಂಶೋಧನಾ ಸಂಸ್ಥೆ ಖಚಿತಪಡಿಸಿದೆ.

    ಫೆಬ್ರವರಿ 26ರಂದು ದಾಳಿ ನಡೆದ ಸ್ಥಳದಲ್ಲಿ 300 ಮೊಬೈಲ್ ಫೋನ್ ಗಳು ಕಾರ್ಯನಿರತವಾಗಿದ್ದವು. ದಾಳಿಗೂ ಮುನ್ನ ರಾಷ್ಟ್ರೀಯ ತಾಂತ್ರಿಕ ಸಂಶೋಧನಾ ಸಂಸ್ಥೆ ಭಾರತದ ವಾಯುಪಡೆಗೆ 300 ಜನರು ಮೊಬೈಲ್ ಬಳಸುತ್ತಿರುವ ಖಚಿತ ಮಾಹಿತಿಯನ್ನು ನೀಡಿತ್ತು. ಪಾಕಿಸ್ತಾನದ ಪಖ್ತುನಖ್ವಾ ಪ್ರಾಂತ್ಯದ ಖೈಬರ್ ಉಗ್ರರ ನೆಲೆಯಲ್ಲಿ 300 ಮೊಬೈಲ್ ಫೋನ್‍ಗಳು ಆ್ಯಕ್ಟೀವ್ ಇರೋದನ್ನ ಎನ್‍ಟಿಆರ್‍ಓ ದೃಢಪಡಿಸಿತ್ತು. ಖಚಿತ ಮಾಹಿತಿಯ ಮೇರೆಗೆ ಭಾರತದ ವಾಯಸೇನೆ ಏರ್ ಸರ್ಜಿಕಲ್ ಸ್ಟ್ರೈಕ್ ನಡೆಸಿತ್ತು. ಇದನ್ನೂ ಓದಿ: ದಾಳಿ ಮಾಡಿದ್ದು ನಿಜ, ಹೆಣಗಳನ್ನು ಲೆಕ್ಕ ಹಾಕುವುದು ನಮ್ಮ ಕೆಲ್ಸವಲ್ಲ: ಏರ್ ಚೀಫ್ ಮಾರ್ಷಲ್

    ವಾಯುದಾಳಿಗೂ ಮುನ್ನ ಕೆಲದಿನಗಳಿಂದ ಬಾಲಕೋಟ್ ಉಗ್ರರ ಶಿಬಿರದಲ್ಲಿ 300 ಉಗ್ರರು ಮೊಬೈಲ್ ಬಳಕೆ ಮಾಡುತ್ತಿದ್ದನ್ನು ಎನ್‍ಟಿಆರ್‍ಓ ಖಚಿತ ಮಾಡಿಕೊಂಡಿತ್ತು. ಎನ್‍ಟಿಆರ್‍ಓ ನೀಡಿದ ಸೂಚನೆಯ ಮೇರೆಗೆ ಫಬ್ರವರಿ 26ರ ಬೆಳಗಿನ ಜಾವ ಸುಮಾರು 3 ಗಂಟೆಗೆ ಭಾರತದ ವಾಯುಪಡೆ ದಾಳಿ ನಡೆಸುವ ಮೂಲಕ ಬಾಲಕೋಟ್, ಮುಜಾಫರ್‍ಬಾದ್ ಮತ್ತಿ ಚಿಕೋಟಿ ಉಗ್ರ ಶಿಬಿರಗಳನ್ನು ಧ್ವಂಸಗೊಳಿತ್ತು. ಇದನ್ನೂ ಓದಿ: ಪಾಕ್ ಡ್ರೋನ್ ಹೊಡೆದುರುಳಿಸಿದ ಏರ್ ಫೋರ್ಸ್

    ವಾಯುದಾಳಿ ಬಳಿಕ ಎಷ್ಟು ಜನರು ಉಗ್ರರನ್ನು ಸಾವನ್ನಪ್ಪಿದ್ದಾರೆ ಎಂಬುದರ ಬಗ್ಗೆ ಇದೂವರೆಗೂ ನಿಖರ ಅಂಕಿ ಅಂಶಗಳು ಲಭ್ಯವಾಗಿರಲಿಲ್ಲ. ಇಂದು ಸುದ್ದಿಗೋಷ್ಠಿ ನಡೆಸಿದ್ದ ವಾಯುಪಡೆಯ ಮುಖ್ಯಸ್ಥ ಬಿ.ಎಸ್ ಧನೋವಾ, ನೀಡಿದ್ದ ಗುರಿಗಳನ್ನು ವಾಯುಸೇನೆ ಹೊಡೆದು ಹಾಕಿದ್ದು ನಿಜ. ಆದರೆ ಹೆಣಗಳನ್ನು ಲೆಕ್ಕ ಹಾಕುವುದು ನಮ್ಮ ಕೆಲಸವಲ್ಲ. ಕಾಡಿನಲ್ಲಿ ಬಾಂಬ್ ಹಾಕುವ ಅಗತ್ಯ ನಮಗೆ ಏನಿತ್ತು. ನಮಗೆ ಏನು ಗುರಿ ನೀಡಲಾಗಿತ್ತೋ ಆ ಗುರಿಯನ್ನು ಹೊಡೆದಿದ್ದೇವೆ. ಅರಣ್ಯದಲ್ಲಿ ಬಾಂಬ್ ಹಾಕಿದ್ದರೆ ಪಾಕಿಸ್ತಾನ ಯಾಕೆ ನಮ್ಮ ಮೇಲೆ ದಾಳಿ ನಡೆಸಬೇಕಿತ್ತು. ಪಾಕ್ ಪ್ರಧಾನಿ ಏಕೆ ಪ್ರತಿಕ್ರಿಯೆ ನೀಡುತ್ತಿದ್ದರು ಎಂದು ಪ್ರಶ್ನಿಸಿದ್ದರು. ಇದನ್ನೂ ಓದಿ: ಏರ್ ಸ್ಟ್ರೈಕ್ ಮಾಡಿದ್ದು ಉಗ್ರರ ಮೇಲೋ? ಮರಗಳ ಮೇಲೋ?: ಸಿಧು ಟಾಂಗ್

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ದಾಳಿ ಮಾಡಿದ್ದು ನಿಜ, ಹೆಣಗಳನ್ನು ಲೆಕ್ಕ ಹಾಕುವುದು ನಮ್ಮ ಕೆಲ್ಸವಲ್ಲ: ಏರ್ ಚೀಫ್ ಮಾರ್ಷಲ್

    ದಾಳಿ ಮಾಡಿದ್ದು ನಿಜ, ಹೆಣಗಳನ್ನು ಲೆಕ್ಕ ಹಾಕುವುದು ನಮ್ಮ ಕೆಲ್ಸವಲ್ಲ: ಏರ್ ಚೀಫ್ ಮಾರ್ಷಲ್

    ಕೊಯಮತ್ತೂರು: ಬಾಲಕೋಟ್ ಮೇಲಿನ ಏರ್ ಸ್ಟ್ರೈಕ್ ನಡೆಸಿದ ಬಗ್ಗೆ ಎದ್ದ ಪ್ರಶ್ನೆಗಳಿಗೆ ವಾಯುಸೇವೆ ಮುಖ್ಯಸ್ಥ ಬಿ.ಎಸ್ ಧನೋವಾ ಕೊಯಮತ್ತೂರಲ್ಲಿ ಸುದ್ದಿಗೋಷ್ಠಿ ನಡೆಸಿ ಉತ್ತರ ನೀಡಿದ್ದಾರೆ.

    ಏರ್ ಸ್ಟ್ರೈಕ್ ನಡೆದ ಬಳಿಕ ಎಷ್ಟು ಉಗ್ರರು ಹತ್ಯೆಯಾಗಿದ್ದಾರೆ ಸಾಕ್ಷ್ಯ ನೀಡಿ ಎಂದಿದ್ದ ಪ್ರತಿಪಕ್ಷಗಳಿಗೆ ಉತ್ತರ ಎನ್ನುವಂತೆ ಬಿ. ಎಸ್ ಧನೋವಾ ಅವರು, ನೀಡಿದ್ದ ಗುರಿಗಳನ್ನು ವಾಯುಸೇನೆ ಹೊಡೆದು ಹಾಕಿದ್ದು ನಿಜ. ಆದರೆ ಹೆಣಗಳನ್ನು ಲೆಕ್ಕ ಹಾಕುವುದು ನಮ್ಮ ಕೆಲಸವಲ್ಲ. ಕಾಡಿನಲ್ಲಿ ಬಾಂಬ್ ಹಾಕುವ ಅಗತ್ಯ ನಮಗೆ ಏನಿತ್ತು ಎಂದು ಪ್ರಶ್ನಿಸಿದ್ದಾರೆ.

    ನಮಗೆ ಏನು ಗುರಿ ನೀಡಲಾಗಿತ್ತೋ ಆ ಗುರಿಯನ್ನು ಹೊಡೆದಿದ್ದೇವೆ. ಅರಣ್ಯದಲ್ಲಿ ಬಾಂಬ್ ಹಾಕಿದ್ದರೆ ಪಾಕಿಸ್ತಾನ ಯಾಕೆ ನಮ್ಮ ಮೇಲೆ ದಾಳಿ ನಡೆಸಬೇಕಿತ್ತು. ಅವರ ಪ್ರಧಾನಿ ಏಕೆ ಪ್ರತಿಕ್ರಿಯೆ ನೀಡುತ್ತಿದ್ದರು ಎಂದು ಪ್ರಶ್ನಿಸಿದರು.

    ನೀಡಿದ್ದ ಗುರಿ ಸರಿಯಾಗಿ ದಾಳಿ ಮಾಡಿದ್ದೇವಾ ಇಲ್ಲವೋ ಎನ್ನುವುದು ಮಾತ್ರ ನಮ್ಮ ಕೆಲಸ. ಅದನ್ನು ಹೊರತು ಪಡಿಸಿ ಹೆಣಗಳನ್ನು ಲೆಕ್ಕ ಹಾಕುವುದು ನಮ್ಮ ಕೆಲಸವಲ್ಲ. ಆ ಕೆಲಸ ಏನಿದ್ದರೂ ಸರ್ಕಾರ ಮಾಡುತ್ತದೆ ಎಂದರು.

    ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಬಗ್ಗೆ ಮಾತನಾಡಿ, ಅಭಿನಂದನ್ ಅವರ ಆರೋಗ್ಯ ಸ್ಥಿತಿ ನೋಡಿ ಅವರು ಮತ್ತೆ ಕೆಲಸಕ್ಕೆ ಹಾಜರಾಗಬಹುದಾ ಇಲ್ಲವಾ ಎಂಬುದು ತಿಳಿಯಲಿದೆ. ಅವರು ಸಂಪೂರ್ಣವಾಗಿ ಫಿಟ್ ಆಗಿದ್ದರೆ ಅವರು ಪೈಲಟ್ ಆಗಿ ಮುಂದುವರಿಯಬಹುದು ಎಂದು ಹೇಳಿದರು.

    ನಾವು ದಾಳಿಗೆ ಸಿದ್ಧರಾದಾಗ ಯಾವ ವಿಮಾನ ಬೇಕು ಯಾವುದು ಬೇಡ ಎನ್ನುವುದನ್ನು ಪ್ಲಾನ್ ಮಾಡುತ್ತೇವೆ. ಶತ್ರುಗಳು ನಮ್ಮ ಮೇಲೆ ಬಂದಾಗ ಯಾವ ವಿಮಾನವನ್ನು ಕಳುಹಿಸಬೇಕು ಎನ್ನುವುದನ್ನು ನಾವು ಪ್ಲಾನ್ ಮಾಡಲು ಸಾಧ್ಯವಿಲ್ಲ. ನಮ್ಮ ಬಳಿ ಇರುವ ಎಲ್ಲ ವಿಮಾನಗಳು ಶತ್ರುಗಳನ್ನು ನಾಶ ಮಾಡುವ ಸಾಮಥ್ರ್ಯವನ್ನು ಹೊಂದಿದೆ ಎಂದರು.

    ನಮ್ಮ ಮಿಗ್-21 ಜೆಟ್ ಯುದ್ಧ ವಿಮಾನ ಸಮರ್ಥವಾಗಿದೆ. ಮಿಗ್-21 ಅದ್ಭುತವಾದ ಏರ್‍ಕ್ರಾಫ್ಟ್. ಈ ಯುದ್ಧ ವಿಮಾನವನ್ನು ಅಪ್‍ಗ್ರೇಡ್ ಮಾಡಲಾಗಿದೆ. ಈ ವಿಮಾನದಲ್ಲಿ ಅದ್ಭುತವಾದ ರಡಾರ್ ಇದೆ ಹಾಗೂ ಏರ್ ಟು ಏರ್ ಮಿಸೈಲ್ ವೆಪನ್ ಸಿಸ್ಟಮ್ ಇದೆ ಎಂದು ತಿಳಿಸಿದ್ದಾರೆ.

    ಪ್ರಸ್ತುತ ಗಡಿಯಲ್ಲಿ ನಡೆಯುತ್ತಿರುವ ಪರಿಸ್ಥಿತಿಯ ಬಗ್ಗೆ ಪ್ರಶ್ನೆ ಕೇಳಿದ್ದಕ್ಕೆ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಉತ್ತರಿಸಿದರು.

    ನಮ್ಮ ವಿರುದ್ಧ ಮಾಡಿದ ದಾಳಿ ವೇಳೆ ಅವರು ಎಫ್ 16 ವಿಮಾನವನ್ನು ಬಳಸಿದ್ದಾರೆ. ಯಾಕೆಂದರೆ ಎಫ್ 16 ನಲ್ಲಿ ಬಳಸುವ ಎಎಂಆರ್‍ಎಎಎಂ ಕ್ಷಿಪಣಿ ನಮ್ಮ ಭೂ ಪ್ರದೇಶದಲ್ಲಿ ಬಿದ್ದಿದೆ. ಅವರ ಎಫ್ 16 ವಿಮಾನವನ್ನು ನಾವು ಹೊಡೆದು ಹಾಕಿದ್ದೇವೆ ಎಂದು ತಿಳಿಸಿದರು.

    ಅಮೆರಿಕ ಮತ್ತು ಪಾಕಿಸ್ತಾನ ಮಧ್ಯೆ ಯಾವ ರೀತಿಯ ಒಪ್ಪಂದ ನಡೆದಿದೆ ಎನ್ನುವುದು ಗೊತ್ತಿಲ್ಲ. ಬೇರೆ ದೇಶದ ವಿರುದ್ಧದ ಎಫ್ 16 ಬಳಕೆ ಮಾಡಬಾರದು ಎನ್ನುವ ಒಪ್ಪಂದ ಇದ್ದರೆ ಪಾಕಿಸ್ತಾನ ಉಲ್ಲಂಘನೆ ಮಾಡಿದೆ ಎಂದು ಹೇಳಬಹುದು ಎಂದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಪಾಕ್ ಕುಟಿಲೋಪಾಯವನ್ನು ಇಂಚಿಂಚು ಬಿಚ್ಚಿಟ್ಟ ಏರ್ ಫೋರ್ಸ್

    ಪಾಕ್ ಕುಟಿಲೋಪಾಯವನ್ನು ಇಂಚಿಂಚು ಬಿಚ್ಚಿಟ್ಟ ಏರ್ ಫೋರ್ಸ್

    -ಜಾಗತಿಕ ಮಟ್ಟದಲ್ಲಿ ಪಾಕ್ ಮಾನ ಹರಾಜು

    ನವದೆಹಲಿ: ಫೆಬ್ರವರಿ 27ರಂದು ನಮ್ಮ ಮಿಗ್ 21 ಬೈಸನ್ ಪಾಕಿಸ್ತಾನದ ಎಫ್-16 ಜೆಟ್ ಹೊಡೆದುರುಳಿಸಿತ್ತು. ಆದರೆ ಪಾಕಿಸ್ತಾನ ಮಾತ್ರ ಇದನ್ನು ಒಪ್ಪಿಕೊಳ್ಳದೆ ನಮ್ಮ ವಿಮಾನವಲ್ಲ ಎಂದು ವಾದ ಮಾಡುತ್ತಿತ್ತು. ಆದರೆ ಈಗ ಈ ಘಟನೆಯ ಮಾಹಿತಿಯನ್ನು ಸಾರ್ವಜನಿಕವಾಗಿ ನಮ್ಮ ಸೇನೆ ಹಂಚಿಕೊಂಡಿದೆ. ಈ ಮೂಲಕ ಜಾಗತಿಕ ಮಟ್ಟದಲ್ಲಿ ಪಾಕ್ ಮಾನ ಹರಾಜಾಗುವುದು ಖಚಿತವಾಗಿದೆ.

    ಹೌದು. ಪಾಕಿಸ್ತಾನ ನೌಟಂಕಿ, ಕಪಟಿಯ ಕುಟಿಲೋಪಾಯವನ್ನು ಏರ್ ಫೋರ್ಸ್ ಇಂಚಿಂಚು ಬಿಚ್ಚಿಟ್ಟಿದೆ. ಎಫ್-16 ಫೈಟರ್ ಜೆಟ್‍ನ ಫೋಟೋ ಸಮೇತ ಪಾಕಿಸ್ತಾನದ ಮಾನವನ್ನು ಇಂಡಿಯನ್ ಏರ್ ಫೋರ್ಸ್ ಹರಾಜಾಕಿದೆ. ಇದನ್ನೂ ಓದಿ: ಈಗ ಅಧಿಕೃತ, ಭಾರತದ ಹೊಡೆತಕ್ಕೆ ಬಿತ್ತು ಎಫ್ 16 ವಿಮಾನ

    ಅಂದು ಏನಾಯ್ತು?
    ಫೆಬ್ರವರಿ 27ರ ಮುಂಜಾನೆ ಭಾರತದ ಗಡಿಯತ್ತ ಪಾಕ್ ಜೆಟ್ ನುಗ್ಗುತ್ತಿತ್ತು. ಆಗ ಪಾಕ್ ಜೆಟ್ ಎಫ್-16 ಅನ್ನು ರೇಡಾರ್ ಪತ್ತೆ ಹಚ್ಚಿದೆ. ಆ ಪಾಕ್ ಜೆಟ್ ರಜೌರಿಯ ಸುಂದರಬನಿ ಪ್ರದೇಶದಲ್ಲಿ ಗಡಿ ಉಲ್ಲಂಘಿಸಿದೆ. ಎಫ್-16 ಹಿಮ್ಮೆಟ್ಟಲು ಮಿಗ್-21 ಬೈಸನ್, ಸುಖೋಯ್-30 ಎಂಕೆಐ ಹಾಗೂ ಮಿರಾಜ್-2000 ಫೈಟರ್ ಜೆಟ್‍ಗಳನ್ನು ನೇಮಕ ಮಾಡಲಾಗಿತ್ತು.

    ಪಾಕ್ ಜೆಟ್ ಭಾರತದ ಸೇನಾ ಶಿಬಿರಗಳನ್ನು ಟಾರ್ಗೆಟ್ ಮಾಡಿತ್ತು. ಈ ವೇಳೆ ನಮ್ಮ ಏರ್ ಫೋರ್ಸ್ ತಂಡ ಪಾಕ್ ಜೆಟ್ ಎಫ್-16 ಅನ್ನು ಬೆನ್ನಟ್ಟಿದೆ. ಈ ವೇಳೆ ಭೀತಿಯಿಂದ ಪಾಕ್ ಜೆಟ್ ಗಡಿಯಲ್ಲಿ ಬಾಂಬ್ ಡ್ರಾಪ್ ಮಾಡಿ ಹೋಗಲು ಯತ್ನಿಸಿದೆ. ಆದ್ರೆ ವೈಮಾನಿಕ ದಾಳಿಯಲ್ಲಿ ಪಾಕಿಸ್ತಾನದ ಜೆಟ್ ಎಫ್-16 ಅನ್ನು ಮಿಗ್-21 ಬೈಸನ್ ಹೊಡೆದುರುಳಿಸಿದೆ.

    ಪಿಒಕೆ(ಪಾಕ್ ಆಕ್ರಮಿತ ಕಾಶ್ಮೀರ) ದಲ್ಲಿ ಪಾಕಿಸ್ತಾನದ ಜೆಟ್ ಎಫ್-16 ಅವಶೇಷಗಳು ಬಿದ್ದಿದೆ. ಈ ವೈಮಾನಿಕ ಕಾದಾಟದಲ್ಲಿ ಮಿಗ್-21 ವಿಮಾನವನ್ನು ಕಳೆದುಕೊಳ್ಳಬೇಕಾಯಿತು. ಮಿಗ್-21 ಬೈಸನ್ ಜೆಟ್‍ನಲ್ಲಿದ್ದ ಅಭಿನಂದನ್ ಇಜೆಕ್ಟ್ ಆದರು. ಆದರೆ ಪ್ಯಾರಾಚೂಟ್‍ನಲ್ಲಿ ಹೋದ ಪೈಲಟ್ ಅಭಿನಂದನ್ ಪಾಕ್ ಗಡಿಯಲ್ಲಿ ಇಳಿದರು. ಅವರನ್ನು ಸುಳ್ಳು ಹೇಳಿ ಪಾಕಿಸ್ತಾನ ಸೇನೆ ಸೆರೆಹಿಡಿದುಕೊಂಡಿತು ಇದು ನಡೆದ ಘಟನೆಯಾಗಿದೆ. ಇದನ್ನು ನಮ್ಮ ವಾಯುಸೇನೆ ಸಾಕ್ಷಿ ಸಮೇತ ಸಾಬೀತು ಮಾಡಿದೆ.

    ವೈಮಾನಿಕ ದಾಳಿ ಬಳಿಕ ಪಾಕ್ ಗೊಂದಲಕಾರಿ ಹೇಳಿಕೆ ಕೊಟ್ಟಿತ್ತು. ನಮ್ಮ ಬಳಿ ಭಾರತದ ಒಬ್ಬರೇ ಪೈಲಟ್ ಇರುವುದಾಗಿ ಹೇಳಿತ್ತು. ಅಲ್ಲದೆ ಉದ್ದೇಶ ಪೂರ್ವಕವಾಗಿಯೇ ಖಾಲಿ ಪ್ರದೇಶದಲ್ಲಿ ಬಾಂಬ್ ಹಾಕಿದ್ದಾಗಿ ಒಪ್ಪಿಕೊಂಡಿತ್ತು. ಜೊತೆಗೆ ಎಫ್-16 ಯುದ್ದ ವಿಮಾನವನ್ನು ಬಳಸಿರಲಿಲ್ಲ ಅಂತ ಹೇಳಿತ್ತು. ಆದರೆ ಎಫ್-16ನಲ್ಲಿ ಬಳಸಲಾದ ಆಮರಾಮ್‍ನ ಅವಶೇಷಗಳು ಪೂರ್ವ ರಜೌರಿಯಲ್ಲಿ ಪತ್ತೆಯಾಗಿವೆ.

    ಪಾಕ್‍ನ ಎಫ್-16 ಅನ್ನು ನಮ್ಮ ಮಿಗ್ 21 ಬೈಸನ್ ಹೊಡೆದುರುಳಿಸಿತ್ತು. ಈಗ ನಮ್ಮ ವಿಂಗ್ ಕಮಾಂಡರ್ ಅಭಿನಂದನ್ ಅವರನ್ನು ಶುಕ್ರವಾರ ಸುರಕ್ಷಿತವಾಗಿ ಹಿಂಪಡೆದಿದ್ದೇವೆ.

    https://www.youtube.com/watch?v=ArvRnqPs81s

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಪಾಕ್ ವಿಮಾನವನ್ನು ಹೊಡೆದು ಉರುಳಿಸಿದ್ದೇವೆ – ಭಾರತದ ಅಧಿಕೃತ ಹೇಳಿಕೆ

    ಪಾಕ್ ವಿಮಾನವನ್ನು ಹೊಡೆದು ಉರುಳಿಸಿದ್ದೇವೆ – ಭಾರತದ ಅಧಿಕೃತ ಹೇಳಿಕೆ

    ನವದೆಹಲಿ: ಪಾಕಿಸ್ತಾನದ ಒಂದು ವಿಮಾನವನ್ನು ನಾವು ಹೊಡೆದು ಉರುಳಿಸಿದ್ದೇವೆ ಎಂದು ಭಾರತ ಅಧಿಕೃತವಾಗಿ ಹೇಳಿಕೆ ನೀಡಿದೆ.

    ಬುಧವಾರ ಮಧ್ಯಾಹ್ನ ವಿದೇಶಾಂಗ ವ್ಯವಹಾರಗಳ ಖಾತೆಯ ಕಾರ್ಯದರ್ಶಿ ರವೀಶ್ ಕುಮಾರ್ ಸುದ್ದಿಗೋಷ್ಠಿ ನಡೆಸಿ ವಿವರ ನೀಡಿದರು.

    ಜೈಷ್ ಉಗ್ರರ ಮೇಲೆ ದಾಳಿ ನಡೆಸಿದ ಬಳಿಕ ಭಾರತದ ಸೈನಿಕರನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ ವಾಯುಸೇನೆ ಇಂದು ಬೆಳಗ್ಗೆ ದಾಳಿ ಮಾಡಿದೆ. ಈ ದಾಳಿಯ ವಿಚಾರ ತಿಳಿಯುತ್ತಿದ್ದಂತೆ ಭಾರತ ಪ್ರತಿದಾಳಿ ನಡೆಸುವ ವೇಳೆ ಪಾಕಿಸ್ತಾನದ ಒಂದು ವಿಮಾನ ಪತನವಾಗಿದೆ ಎಂದು ತಿಳಿಸಿದರು.

    ಪಾಕ್ ವಾಯುಸೇನೆಯನ್ನು ಹಿಮ್ಮೆಟ್ಟಿಸುವ ಸಮಯದಲ್ಲಿ ನಮ್ಮ ಮಿಗ್ ವಿಮಾನ ಪತನಗೊಂಡಿದ್ದು ಪೈಲಟ್ ನಾಪತ್ತೆಯಾಗಿದ್ದಾರೆ. ಪಾಕಿಸ್ತಾನ ಪೈಲಟ್ ನಮ್ಮ ಬಳಿ ಇದ್ದಾರೆ ಎಂದು ಹೇಳುತ್ತಿದೆ. ಈ ಮಾಹಿತಿಯನ್ನು ನಾವು ಪರಿಶೀಲಿಸುತ್ತಿದ್ದೇವೆ ಎಂದು ಮಾಹಿತಿ ನೀಡಿದರು.

    ವಿಮಾನ ಪತನಗೊಂಡಿರುವ ವಿಚಾರವನ್ನು ಭಾರತ ಖಚಿತ ಪಡಿಸಿದ್ದು ಯಾವ ವಿಮಾನ ಎನ್ನುವುದು ತಿಳಿದು ಬಂದಿಲ್ಲ. ಪಾಕಿಸ್ತಾನ ಎಫ್ 16 ವಿಮಾನವನ್ನು ವಾಯುಸೇನೆ ಹೊಡೆದಿದೆ ಎಂದು ಸೇನೆಯ ಮೂಲಗಳನ್ನು ಆಧಾರಿಸಿ ಮಾಧ್ಯಮಗಳು ವರದಿ ಮಾಡಿವೆ.

    ಪಾಕಿಸ್ತಾನ ಸೇನೆ ಇಬ್ಬರು ಭಾರತೀಯ ಪೈಲಟ್ ಗಳು ನಮ್ಮ ಬಳಿ ಇದ್ದಾರೆ ಎಂದು ಹೇಳಿಕೊಂಡಿದೆ. ಆದರೆ ಪಾಕಿಸ್ತಾನದ ಈ ಆರೋಪಕ್ಕೆ ಭಾರತ ನಮ್ಮ ಒಬ್ಬರು ಪೈಲಟ್ ನಾಪತ್ತೆಯಾಗಿದ್ದಾರೆ ಎಂದು ಪ್ರತಿಕ್ರಿಯಿಸಿದೆ.

    ಮಂಗಳವಾರ ಸುದ್ದಿಗೋಷ್ಠಿ ನಡೆಸಿದ್ದ ಭಾರತ ನಾವು ಉಗ್ರರ ನೆಲೆಯ ಮೇಲೆ ದಾಳಿ ನಡೆಸಿದ್ದೇವೆಯೇ ಹೊರತು ಪಾಕಿಸ್ತಾನದ ಮಿಲಿಟರಿ ಮತ್ತು ನಾಗರಿಕರ ನೆಲೆ ಮೇಲೆ ದಾಳಿ ನಡೆಸಿಲ್ಲ ಎಂದು ಹೇಳಿತ್ತು. ಆದರೆ ಪಾಕಿಸ್ತಾನ ಇಂದು ವಾಯುಸೇನೆಯ ಮೂಲಕ ಭಾರತದ ಸೇನೆಯ ಮೇಲೆ ದಾಳಿ ನಡೆಸಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಜಮ್ಮು ಕಾಶ್ಮೀರದಲ್ಲಿ ಮಿಗ್ ವಿಮಾನ ಪತನ – ಇತ್ತ ಪಾಕಿಸ್ತಾನದ ಯುದ್ಧ ವಿಮಾನ ಭಾರತಕ್ಕೆ ಪ್ರವೇಶ?

    ಜಮ್ಮು ಕಾಶ್ಮೀರದಲ್ಲಿ ಮಿಗ್ ವಿಮಾನ ಪತನ – ಇತ್ತ ಪಾಕಿಸ್ತಾನದ ಯುದ್ಧ ವಿಮಾನ ಭಾರತಕ್ಕೆ ಪ್ರವೇಶ?

    ಶ್ರೀನಗರ: ಭಾರತೀಯ ವಾಯುಪಡೆಗೆ ಸೇರಿದ ಮಿಗ್-21 ಯುದ್ಧ ವಿಮಾನ ಪತನಗೊಂಡಿದ್ದು, ಇಬ್ಬರು ಪೈಲಟ್ ಗಳು ಹುತಾತ್ಮರಾಗಿದ್ದಾರೆ. ಬುದ್ಗಾಮ್‍ನ ನಸಲಾಪುರದಲ್ಲಿ ಗಸ್ತು ತಿರುಗುವ ವೇಳೆ ಮಿಗ್ ವಿಮಾನ ಪತನಗೊಂಡಿದೆ.

    ಜಮ್ಮು- ಕಾಶ್ಮೀರದ ನೌಶೇರಾ ವಲಯದಲ್ಲಿ ಪಾಕಿಸ್ತಾನದ ಮೂರು ಯುದ್ಧ ವಿಮಾನ ಗಡಿ ಉಲ್ಲಂಘನೆ ಮಾಡಿದೆ ಎಂದು ವರದಿಯಾಗಿದೆ. ಪಾಕಿಸ್ತಾನದ ಯುದ್ಧ ವಿಮಾನಗಳು ದಾಳಿ ನಡೆಸುವ ಉದ್ಧೇಶದಿಂದ ಭಾರತಕ್ಕೆ ಪ್ರವೇಶಿಸಿದೆ. ಪಾಕಿಸ್ತಾನದ ಯುದ್ಧ ವಿಮಾನಗಳು ಪೂಂಚ್ ಹಾಗೂ ರಜೌರಿಯಲ್ಲಿ ಬಾಂಬ್ ದಾಳಿ ನಡೆಸಿದೆ ಎಂದು ವರದಿಯಾಗಿದೆ.

    ಪಾಕಿಸ್ತಾನ ಯುದ್ಧ ವಿಮಾನ ಪೂಂಚ್ ಹಾಗೂ ರಜೌರಿಯಲ್ಲಿ ಬಾಂಬ್ ದಾಳಿ ಮಾಡಿದ್ದು, ಯಾವ ಪ್ರದೇಶ ಹಾನಿಯಾಗಿದೆ ಎಂಬುದು ಅಧಿಕೃತವಾಗಿ ತಿಳಿದು ಬರಲಿದೆ. ಪಾಕಿಸ್ತಾನ ಬಾಂಬ್ ದಾಳಿ ಮಾಡಿದ ಬಳಿಕ ಭಾರತ ಪ್ರತಿ ದಾಳಿ ನಡೆಸಿದೆ. ಭಾರತ ಪ್ರತಿ ದಾಳಿ ನಡೆಸುತ್ತಿದ್ದಂತೆ ಪಾಕಿಸ್ತಾನದ ಯುದ್ಧ ವಿಮಾನ ಅಲ್ಲಿಂದ ಕಾಲ್ತಿತಿದೆ ಎಂದು ವರದಿಯಾಗಿದೆ.

    2018ರ ಅಕ್ಟೋಬರ್ ನಲ್ಲಿ ಮಿಗ್ ಫೈಟರ್ ವಿಮಾನವೊಂದು ರಾಜಸ್ಥಾನದ ಜೋಧಪುರದ ಬಾಂದ್ ಸಮೀಪದ ದೆವ್ಲಿಯಾ ಗ್ರಾಮದ ಬಳಿ ಪತನಗೊಂಡಿತ್ತು. ಪೈಲಟ್ ವಿಮಾನದಿಂದ ಜಿಗಿದು ಪ್ರಾಣಾಪಾಯದಿಂದ ಪಾರಾಗಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಇಂಡಿಯನ್ಸ್ ಮೈಯಾಗ್ ಎಷ್ಟ್ ಪೊಗರ್ ಐತೆ ಅಂತ ಚೆಕ್ ಮಾಡಾಕ್  ಬರ್ಬೇಡಾ: ಧ್ರುವ ಸರ್ಜಾ

    ಇಂಡಿಯನ್ಸ್ ಮೈಯಾಗ್ ಎಷ್ಟ್ ಪೊಗರ್ ಐತೆ ಅಂತ ಚೆಕ್ ಮಾಡಾಕ್ ಬರ್ಬೇಡಾ: ಧ್ರುವ ಸರ್ಜಾ

    ಬೆಂಗಳೂರು: ಭಾರತೀಯ ಯೋಧರನ್ನು ಬಲಿಪಡೆದಿದ್ದ ಪಾಕಿಸ್ತಾನದ ವಿರುದ್ಧ ಭಾರತ ಏರ್ ಸರ್ಜಿಕಲ್ ಸ್ಟ್ರೈಕ್ ಮಾಡುವ ಮೂಲಕ ಪ್ರತೀಕಾರ ತೀರಿಸಿಕೊಂಡಿದೆ. ಸಿನಿಮಾ ಸ್ಟಾರ್ಸ್ ಸೇರಿದಂತೆ ದೇಶಾದ್ಯಂತ ಭಾರತೀಯ ವಾಯುಸೇನೆಯ ಶಕ್ತಿಯ ಬಗ್ಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

    ಹೌದು..ಸ್ಯಾಂಡಲ್‍ವುಡ್ ನಟರು ಮಾತ್ರವಲ್ಲದೇ ಬಾಲಿವುಡ್ ನಟರು ಕೂಡ ಸೇನೆಗೆ ಅಭಿನಂದನೆ ಸಲ್ಲಿಸುತ್ತಿದ್ದಾರೆ. ನಟ ಧ್ರವಾ ಸರ್ಜಾ ಅವರು, “ಭಾರತೀಯರ ಮೈಯಾಗ ಎಷ್ಟ್ ಪೊಗರು ಐತೆ ಅಂತ ಚೆಕ್ ಮಾಡಾಕ್ ಬರಬೇಡಾ..ಮಕ್ಳಾ ಬ್ಲಾಸ್ಟ್ ಆಗೋಯ್ತಿರಾ. ಭೋಲೋ ಭಾರತ್ ಮಾತಾ ಕಿ ಜೈ.. ಜೈ ಆಂಜನೇಯ” ಎಂದು ಟ್ವೀಟ್ ಮಾಡಿ ಪಾಕಿಸ್ತಾನದವರಿಗೆ ಭಾರತೀಯರ ಪೊಗರಿನ ಬಗ್ಗೆ ತಿಳಿಸಿಕೊಟ್ಟಿದ್ದಾರೆ.

    ನಟ ಗಣೇಶ್ ಅವರು, “ಏರ್ ಸರ್ಜಿಕಲ್ ಸ್ಟ್ರೈಕ್ ಮಾಡಿ ಭಯೋತ್ಪಾದಕರ ಕ್ಯಾಂಪಸ್‍ಗಳನ್ನು ನಾಶ ಮಾಡಿದೆ. ನಮ್ಮ ಭಾರತೀಯ ವಾಯುಸೇನೆಯ ಬಗ್ಗೆ ಹೆಮ್ಮೆ ಇದೆ. ಜೈ ಹಿಂದ್” ಎಂದು ಟ್ವೀಟ್ ಮಾಡಿದ್ದಾರೆ.

    ಇನ್ನೂ ನಟಿ ಕಾಜಲ್, “ಪಾಕಿಸ್ತಾನಕ್ಕೆ ಭಾರತ ಹಿಂತಿರುಗಿಸಿ ಉತ್ತರ ಕೊಟ್ಟಿದೆ. ನಮ್ಮ ಧೈರ್ಯವಂತ ಹೀರೋಗಳಾದ ಭಾರತೀಯ ವಾಯುಪಡೆಗೆ ದೊಡ್ಡ ಸೆಲ್ಯೂಟ್” ಎಂದು ಹೇಳಿದ್ದಾರೆ. “ನಮ್ಮ ದೇಶ ಪಾಕಿಸ್ತಾನಕ್ಕೆ ಸರಿಯಾದ ಉತ್ತರ ಕೊಟ್ಟಿದೆ. ಭಾರತೀಯ ವಾಯುಪಡೆಗೆ ಸೆಲ್ಯೂಟ್” ಎಂದು ಜೂ.ಎನ್.ಟಿ.ಆರ್ ಹೇಳಿದ್ದಾರೆ.

    ಭಾರತೀಯ ವಾಯುಪಡೆಯ ಕಾರ್ಯಕ್ಕೆ ಮೆಚ್ಚಿ ನಟ ಅಕ್ಷಯ್ ಕುಮಾರ್, ನಟಿ ಕಾಜಲ್ ಅಗರ್ವಾಲ್, ಮಹೇಶ್ ಬಾಬು, ಸೇರಿದಂತೆ ಅನೇಕರು ಅಭಿನಂದಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ದಾಳಿ ಬಗ್ಗೆ ಮಾಹಿತಿ ಇಲ್ಲ: ಸಿದ್ದರಾಮಯ್ಯ ಉಡಾಫೆ ಮಾತು

    ದಾಳಿ ಬಗ್ಗೆ ಮಾಹಿತಿ ಇಲ್ಲ: ಸಿದ್ದರಾಮಯ್ಯ ಉಡಾಫೆ ಮಾತು

    ಚಿಕ್ಕಮಗಳೂರು: ಉಗ್ರರ ನೆಲೆಯನ್ನು ಭಾರತೀಯ ವಾಯು ಸೇನೆ ಧ್ವಂಸಗೊಳಿಸಿದ್ದು, ದೇಶದೆಲ್ಲೆಡೆ ಸಂಭ್ರಮ ಮನೆ ಮಾಡಿದೆ. ಆದರೆ ಮಾಜಿ ಸಿಎಂ ಸಿದ್ದರಾಮಯ್ಯ ನನಗೆ ಈ ಬಗ್ಗೆ ಮಾಹಿತಿ ಇಲ್ಲ ಎಂದು ಉಡಾಫೆಯ ಉತ್ತರ ನೀಡಿದ್ದಾರೆ.

    ಜಿಲ್ಲೆಯ ತರೀಕೆರೆಯಲ್ಲಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, “ದಾಳಿ ಮಾಡಿದವರು ಯಾರು? ದಾಳಿ ನಾವ್ ಮಾಡಿರೋದಾ ಅಥವಾ ಅವರು ಮಾಡಿದ್ದಾರಾ ಎಂದು ಮಾಧ್ಯಮದವರನ್ನೇ ಪ್ರಶ್ನಿಸಿದ್ದಾರೆ. ಅಲ್ಲದೇ ದಾಳಿ ಬಗ್ಗೆ ಮಾಹಿತಿ ಇಲ್ಲ. ನಾನು ಹೆಲಿಕಾಪ್ಟರ್ ನಲ್ಲಿ ಬಂದಿದ್ದೇನೆ. ಹಾಗಾಗಿ ನನಗೆ ಈ ಬಗ್ಗೆ ಮಾಹಿತಿ ಇಲ್ಲ. ಮಾಹಿತಿ ತಿಳಿದು ಉತ್ತರ ನೀಡುತ್ತೇನೆ” ಎಂದ ಹೇಳಿದ್ದಾರೆ.

    “ಉಗ್ರರ ಕ್ಯಾಂಪ್ ಮೇಲೆ ಸರ್ಜಿಕಲ್ ಸ್ಟ್ರೈಕ್-2 ಮಾಡಿದ ವಾಯು ಸೇನೆಗೆ ನಾನು ಸೆಲ್ಯೂಟ್ ಮಾಡುತ್ತೇನೆ. ಈ ದಾಳಿ ಪಾಕಿಸ್ತಾನಕ್ಕೆ ಒಂದು ಒಳ್ಳೆಯ ಪಾಠ” ಎಂದು ಇಂದು ಬೆಳಗ್ಗೆ 10.08ಕ್ಕೆ ಟ್ವೀಟ್ ಮಾಡಿ ಸೇನೆಗೆ ಅಭಿನಂದನೆ ಸಲ್ಲಿಸಿದ್ದರು. ಆದರೆ ಈ ವಿಚಾರದ ಬಗ್ಗೆ ನೇರವಾಗಿ ಪ್ರತಿಕ್ರಿಯೆ ನೀಡುವಾಗ ಉಡಾಫೆಯಾಗಿ ಮಾತನಾಡಿದ್ದಾರೆ.

    ಇಂದು ನಸುಕಿನ ಜಾವ 3.30ರ ಸುಮಾರಿಗೆ ಉಗ್ರರ ನೆಲೆ ಮೇಲೆ ಭಾರತೀಯ ವಾಯು ಸೇನೆ ದಾಳಿ ಮಾಡಿದ್ದು, ಸುಮಾರು 250ಕ್ಕೂ ಹೆಚ್ಚು ಉಗ್ರರು ಸಾವನ್ನಪ್ಪಿದ್ದಾರೆ. ವಾಯು ಸೇನೆಯ ಏರ್ ಸ್ಟ್ರೈಕ್‍ಗೆ ಇಡೀ ದೇಶ ಮೆಚ್ಚುಗೆ ವ್ಯಕ್ತಪಡಿಸಿ, ಸಂಭ್ರಮ ಪಡುತ್ತಿದ್ದಾರೆ.

    https://www.youtube.com/watch?v=H0Eg3K5n5AQ

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv