Tag: ವಾಯು ಮಾಲಿನ್ಯ

  • ದೀಪಾವಳಿಗೆ ಈ ಬಾರಿಯೂ ಆಗುತ್ತಾ ಪಟಾಕಿ ಬ್ಯಾನ್?

    ದೀಪಾವಳಿಗೆ ಈ ಬಾರಿಯೂ ಆಗುತ್ತಾ ಪಟಾಕಿ ಬ್ಯಾನ್?

    -ಹಸಿರು ಪಟಾಕಿಗಷ್ಟೇ ಸಿಗುತ್ತಾ ಅನುಮತಿ

    ಬೆಂಗಳೂರು: ಇನ್ನೇನು ಬೆಳಕಿನ ಹಬ್ಬ ದೀಪಾವಳಿ ಸಮೀಪಿಸುತ್ತಿದೆ. ಮನೆ ಮಂದಿಯೆಲ್ಲ ಹಬ್ಬವನ್ನು ಬರಮಾಡಿಕೊಳ್ಳಲು ಸಿದ್ಧತೆಯಲ್ಲಿ ತೊಡಗಿದ್ದಾರೆ. ಹಬ್ಬದ ಊಟ ಹೊಸ ಬಟ್ಟೆಗಳ ಸಂಭ್ರಮದ ಜೊತೆಗೆ ಮಕ್ಕಳು, ಯುವಜನರಿಗೆಲ್ಲ ದೀಪಾವಳಿ ಅಂದರೆ ಪಟಾಕಿ ಕ್ರೇಜ್ ಇದ್ದೆ ಇರುತ್ತದೆ. ಆದರೆ ಕಳೆದ ಬಾರಿ ಕೋವಿಡ್ ಹಿನ್ನಲೆ ಪಟಾಕಿ ಸಿಡಿಸುವುದನ್ನು ಬ್ಯಾನ್ ಮಾಡಿದ್ದ ಸರ್ಕಾರ ಹಸಿರು ಪಟಾಕಿಗಳಿಗೆ ಮಾತ್ರ ಒಪ್ಪಿಗೆ ಸೂಚಿಸಿತ್ತು. ಈ ಬಾರಿಯೂ ಇದೇ ಸಿದ್ಧತೆಯಲ್ಲಿದೆಯಾ ಎಂಬ ಬಗ್ಗೆ ಜನರು ಎದುರು ನೋಡುತ್ತಿದ್ದಾರೆ.

    ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಬಿಬಿಎಂಪಿ ಮುಖ್ಯಾಯುಕ್ತರಾದ ಗೌರವ್ ಗುಪ್ತ, ದೀಪಾವಳಿ ಸಂಭ್ರಮದ ಹಬ್ಬ. ಕೋವಿಡ್ ಹಿನ್ನಲೆ ಶಿಸ್ತುಬದ್ಧವಾಗಿ ಮಾಡಬೇಕಾಗುತ್ತದೆ. ಇದನ್ನು ಹೊರತು ಪಡಿಸಿ ಬೇರೆ ಮಾರ್ಗಸೂಚಿಗಳ ಬಗ್ಗೆ ತಯಾರು ಮಾಡಲು ಪಾಲಿಕೆ ಮಟ್ಟದಲ್ಲಿ ಸಿದ್ಧ ಇದ್ದೇವೆ. ಆದರೆ ಪ್ರತ್ಯೇಕ ನಿಯಮಗಳ ಬಗ್ಗೆ ಈಗಲೇ ಚಿಂತನೆ ನಡೆಸಿಲ್ಲ ಎಂದಿದ್ದಾರೆ.  ಇದನ್ನೂ ಓದಿ: ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಿಎಂ

    ಜೋರು ಶಬ್ದ ಮಾಡುವ, ವಾಯು ಮಾಲಿನ್ಯ ಮಾಡುವ ಪಟಾಕಿಗಳಿಗೆ ಎನ್‍ಜಿಟಿ ಈಗಾಗಲೇ ಬ್ರೇಕ್ ಹಾಕಿದೆ. ಪಟಾಕಿ ಕುರಿತಂತೆ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ ಮಾಡುವ ನಿಯಮಗಳನ್ನು ಸರ್ಕಾರ, ಬಿಬಿಎಂಪಿಯೂ ಪಾಲಿಸಬೇಕಾಗುತ್ತದೆ. ಹೀಗಾಗಿ ಬೇರೆ ಪಟಾಕಿಗಳ ಮಾರಟ ಖರೀದಿಗೆ ಬ್ರೇಕ್ ಬೀಳುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಇದನ್ನೂ ಓದಿ: ಅಗರ ಕೆರೆ ರಾಜಕಾಲುವೆಗಳು, ಸುತ್ತಲಿನ ಲೇಔಟ್ ಚರಂಡಿ ದುರಸ್ತಿಗೆ ಶೀಘ್ರ ಕ್ರಮ: ಬೊಮ್ಮಾಯಿ

  • ಗಾಳಿಯ ಗುಣಮಟ್ಟ ಹೆಚ್ಚಿಸಲು 6 ವಾಹನ ಖರೀದಿಗೆ ಮುಂದಾದ ಬಿಬಿಎಂಪಿ

    ಗಾಳಿಯ ಗುಣಮಟ್ಟ ಹೆಚ್ಚಿಸಲು 6 ವಾಹನ ಖರೀದಿಗೆ ಮುಂದಾದ ಬಿಬಿಎಂಪಿ

    ಬೆಂಗಳೂರು: ನಗರದ ವಾಯುಮಾಲಿನ್ಯ ಕಡಿಮೆ ಮಾಡಿ, ಗಾಳಿಯ ಗುಣಮಟ್ಟ ಹೆಚ್ಚಿಸಲು ವಾಹನ ಖರೀದಿಗೆ ಬಿಬಿಎಂಪಿ ಮುಂದಾಗಿದೆ.

    ರಸ್ತೆ ಕಾಮಗಾರಿಗಳು, ಕಟ್ಟಡ ಕಾಮಗಾರಿಗಳು, ಹೆಚ್ಚು ವಾಹನಗಳು ಓಡಾಡುವ ಪ್ರಮುಖ ವಾಣಿಜ್ಯ ಪ್ರದೇಶಗಳಲ್ಲಿ ಪ್ರತ್ಯೇಕ ವಾಹನದ ಮೂಲಕ ನೀರನ್ನು ಸ್ಪ್ರೇ ಮಾಡಲು ಆರು ವಾಹನಗಳ ಖರೀದಿಗೆ ಬಿಬಿಎಂಪಿ ಮುಂದಾಗಿದ್ದು, ಇನ್ನೆರಡು ವಾರದಲ್ಲಿ ಈ ವಾಹನಗಳು ರಸ್ತೆಗಿಳಿಯಲಿವೆ.

    ಈಗಾಗಲೇ ಕೋವಿಡ್ ಮೊದಲನೇ ಅಲೆಯಲ್ಲಿ ಆರೋಗ್ಯ ವಿಭಾಗ ಖರೀದಿಸಿದ್ದ ಎರಡು ಸ್ಯಾನಿಟೈಸೇಷನ್ ವಾಹನಗಳನ್ನು ಘನತ್ಯಾಜ್ಯ ಹಾಗೂ ರಸ್ತೆ ಮೂಲಭೂತ ಸೌಕರ್ಯ ವಿಭಾಗಕ್ಕೆ ಹಸ್ತಾಂತರಿಸಿದ್ದು, ಈಗಾಗಲೇ ನಗರದ ರಸ್ತೆಗಳಲ್ಲಿ ನೀರು ಚಿಮ್ಮಿಸುವ ಉದ್ದೇಶಕ್ಕೆ ಬಳಸಿಕೊಳ್ಳಲಾಗುತ್ತಿದೆ.

    ಪಂಪ್ ಮೂಲಕ ಹೆಚ್ಚಿನ ಒತ್ತಡದಲ್ಲಿ ನೀರನ್ನು ಚಿಮ್ಮಿಸಿ, ಆ ಮೂಲಕ ಗಾಳಿಯಲ್ಲಿರುವ ಧೂಳನ್ನು ಕಡಿಮೆ ಮಾಡಲು ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ.  ಇದನ್ನೂ ಓದಿ: ಸಮುದ್ರದ ಅಬ್ಬರಕ್ಕೆ ಕೊಚ್ಚಿ ಹೋದ ಮರಗಳು – ರಾಯಚೂರಿನಲ್ಲಿ ಹಳ್ಳಕೊಳ್ಳಗಳು ಭರ್ತಿ

    ನೀರು ಚಿಮ್ಮಿಸುವ ವಾಹನಗಾಳಿಯಲ್ಲಿರುವ ಬಿಡಿ ಧೂಳಿನ ಕಣ (ಸಸ್ಪೆಂಡೆಡ್ ಪಾರ್ಟಿಕ್ಯುಲೇಟ್ ಮ್ಯಾಟರ್) ಕಡಿಮೆ ಮಾಡಲು ಕೇಂದ್ರ ಸರ್ಕಾರ ಈ ಯೋಜನೆಯನ್ನು ಕೈಗೆತ್ತಿಕೊಂಡಿದೆ. ಅಲ್ಲದೇ 6 ವಾಹನಗಳ ಖರೀದಿಗೆ 1 ಕೋಟಿ 80 ಲಕ್ಷ ರೂ. ಅನುದಾನವನ್ನು ಪಾಲಿಕೆಗೆ ಬಿಡುಗಡೆ ಮಾಡಿದೆ.

    ವಾಹನವೊಂದಕ್ಕೆ 24 ಲಕ್ಷ ರೂ. ಖರೀದಿ ವೆಚ್ಚ ಹಾಗೂ 6 ಲಕ್ಷ ರೂ. ವರ್ಷದ ನಿರ್ವಹಣೆಗೆ ವೆಚ್ಚ ಮಾಡಲಾಗುತ್ತದೆ. ಈಗಿರುವ ಎರಡು ವಾಹನಗಳಿಂತಲೂ ಹೆಚ್ಚು ಅಭಿವೃದ್ಧಿ ಹೊಂದಿರುವ ವಾಹನಗಳಾಗಿವೆ. ಸದ್ಯ ಇರುವ ಎರಡು ವಾಹನಗಳನ್ನು ಕೋವಿಡ್ ಸಮಯದಲ್ಲಿ ಸ್ಯಾನಿಟೈಸೇಷನ್ ಮಾಡಲು 1.2 ಕೋಟಿ ರೂ. ವೆಚ್ಚದಲ್ಲಿ ಖರೀದಿಸಲಾಗಿತ್ತು. ಸದ್ಯ ಸ್ಯಾನಿಟೈಸೇಷನ್ ಉಪಯುಕ್ತವಲ್ಲದ ಕಾರಣ ಧೂಳು ಕಡಿಮೆ ಮಾಡುವ ಉದ್ದೇಶಕ್ಕೆ ಬಳಸಲಾಗ್ತಿದೆ.

    ವಾಹನಗಳ ಮೂಲಕ ರಸ್ತೆಗಳಲ್ಲಿ ನೀರನ್ನು ಸ್ಪ್ರೇ ಮಾಡಲು, ಜಲಮಂಡಳಿ ಸಂಸ್ಕರಿಸಿದ ತ್ಯಾಜ್ಯ ನೀರನ್ನೇ ಮರುಬಳಕೆ ಮಾಡಲಾಗ್ತಿದೆ. ಕಬ್ಬನ್ ಪಾರ್ಕ್ ನಲ್ಲಿ ಅಳವಡಿಸಿರುವ ಎಸ್‍ಟಿಪಿ ನೀರನ್ನು ಸದ್ಯ ಬಳಸಿಕೊಳ್ಳಲಾಗ್ತಿದೆ ಎಂದು ರಸ್ತೆ ಮೂಲಭೂತ ಸೌಕರ್ಯದ ಕಾರ್ಯಪಾಲಕ ಎಂಜಿನಿಯರ್ ಮಾಹಿತಿ ನೀಡಿದರು. ವಾಹನಗಳ ಮೂಲಕ ನೀರು ಚಿಮ್ಮಿಸಿ ಧೂಳು ಕಡಿಮೆ ಮಾಡುವುದರ ಜೊತೆಗೆ ನಗರದ 40 ಜಂಕ್ಷನ್ ಗಳಲ್ಲಿ ನೀರಿನ ಕಾರಂಜಿ ನಿರ್ಮಾಣ ಮಾಡುವ ಯೋಜನೆಗೂ ವಿಸ್ತೃತ ಯೋಜನಾ ವರದಿ ಸಿದ್ಧವಾಗುತ್ತಿದ್ದು, ನಂತರ ಟೆಂಡರ್ ಕರೆಯಲಾಗುತ್ತದೆ.

    ಮಾಲಿನ್ಯ ತಗ್ಗಿಸಲು ಈ ಯೋಜನೆ ಎಷ್ಟು ಉಪಕಾರಿ? ಪರಿಸರ ತಜ್ಞರ ಪ್ರಕಾರ ಸರ್ಕಾರಗಳ ಈ ಯೋಜನೆಗಳು ಮಾಲಿನ್ಯ ತಗ್ಗಿಸುವಲ್ಲಿ ಹೆಚ್ಚು ಪ್ರಯೋಜನವಾಗಲಾರದು. ಇದು ಕೇವಲ ಹಣ ಖರ್ಚು ಮಾಡುವ ಯೋಜನೆಯಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

    ನಗರದಲ್ಲಿ ಈಗಾಗಲೇ ಕಟ್ಟಡ ಕಾಮಗಾರಿ ನಡೆಯುವ ಜಾಗದಲ್ಲಿ, ಕ್ವಾರಿಗಳು, ಗಣಿಗಾರಿಕೆ ಜಾಗಗಳಲ್ಲಿ ಸಣ್ಣ ಧೂಳಿನ ಕಣಗಳನ್ನು ಕಡಿಮೆ ಮಾಡಲು, ಧೂಳು ಹರಡದೇ ಇರಲು ಈ ಕ್ರಮ ಕೈಗೊಳ್ಳಲಾಗುತ್ತಿದೆ. ಆದರೆ ಸಾಕಷ್ಟು ಟ್ರಾಫಿಕ್ ಜಾಂ ಇರುವ ನಗರದಲ್ಲಿ ವಾಹನಗಳ ಮೂಲಕ ರಸ್ತೆಯಲ್ಲಿ ಈ ರೀತಿ ನೀರು ಚಿಮ್ಮಿಸುವುದು ಎಷ್ಟು ಪ್ರಮಾಣದಲ್ಲಿ ಪರಿಣಾಮಕಾರಿಯಾಗಬಹುದು.

    ಗಾಳಿಯಲ್ಲಿನ ಧೂಳಿಗೆ ನೀರು ಚಿಮ್ಮಿಸಿದಾಗ ನೆಲಮಟ್ಟಕ್ಕೆ ಬಂದರೂ, ಮತ್ತೆ ವಾಹನಗಳು ಓಡಾಡುವುದರಿಂದ ಧೂಳು ಏಳುವ ಸಾಧ್ಯತೆ ಇರುತ್ತದೆ. ನೀರಿನ ಕಾರಂಜಿಗಳಿಂದಲೂ ಇದು ಅಸಾಧ್ಯ. ಪರಿಸರ ರಕ್ಷಣೆಯನ್ನು ಅದಕ್ಕೆ ಪೂರಕವಾದ ವಿಧಾನಗಳಿಂದಲೇ ಅಂದರೆ ಕೆರೆ ಸಂರಕ್ಷಣೆ, ಗಿಡ ನೆಡುವುದರಿಂದ ಮಾತ್ರ ಉಳಿಸಲು ಸಾಧ್ಯ ಎಂದು ಹೆಸರು ಹೇಳಲು ಇಷ್ಟ ಪಡದ ಹಿರಿಯ ಪರಿಸರ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಕೆರೆಗಳು, ಮರಗಳು ವಾತಾವರಣವನ್ನು ತಂಪು ಇಡುವಲ್ಲಿ ಸಹಕಾರಿ. ಆದರೆ ನಗರದಲ್ಲಿ ಮರಗಳ ನಾಶದಿಂದ ನಗರದ ಉಷ್ಣಾಂಶ ಏರಿಕೆಯಾಗುತ್ತಲೇ ಇದೆ. ಇದರಿಂದಾಗಿ (ಹೀಟ್ ಲ್ಯಾಂಡ್ ಪರಿಣಾಮದಿಂದ) ಬಿಸಿ ಗಾಳಿ ಹಗುರವಾಗಿದ್ದು, ಇದರೊಂದಿಗೆ ಧೂಳು ಸೇರಿ ವಾತಾವರಣದಲ್ಲಿ ಹೆಚ್ಚು ವಾಯುಮಾಲಿನ್ಯವಾಗಲು ಕಾರಣವಾಗುತ್ತದೆ. ಪ್ರಕೃತಿದತ್ತವಾಗಿ ವಾತಾವರಣ ತಂಪಾಗಿದ್ದರೆ ಈ ವಾತಾವರಣದ ಗಾಳಿ ಭಾರವಾಗಿ ಇರುವುದರಿಂದ ಧೂಳಿನ ಪ್ರಮಾಣವೂ ಕಡಿಮೆ ಇರುತ್ತದೆ ಎಂದು ಅವರು ವಿವರಿಸಿದರು. ಒಟ್ಟಿನಲ್ಲಿ ಪರಿಸರ ರಕ್ಷಣೆ ಹೆಸರಲ್ಲಿ ಸರ್ಕಾರ, ಸ್ಥಳೀಯ ಆಡಳಿತಗಳು ದುಂದು ವೆಚ್ಚಕ್ಕೆ ಮುಂದಾಗುತ್ತಿವೆಯಾ ಎಂಬ ವಾದಗಳೂ ಕೇಳಿಬಂದಿವೆ.

  • 4 ದಿನ ನೇಪಾಳದಲ್ಲಿ ಶಾಲಾ, ಕಾಲೇಜುಗಳು ಬಂದ್‌

    4 ದಿನ ನೇಪಾಳದಲ್ಲಿ ಶಾಲಾ, ಕಾಲೇಜುಗಳು ಬಂದ್‌

    ಕಠ್ಮಂಡು: ಮುಂದಿನ 4 ದಿನಗಳ ಕಾಲ ರಾಷ್ಟ್ರದಲ್ಲಿರುವ ಎಲ್ಲ ಶಾಲೆ ಮತ್ತು ಕಾಲೇಜುಗಳನ್ನು ಬಂದ್‌ ಮಾಡುವ ನಿರ್ಧಾರವನ್ನು ನೇಪಾಳ ಸರ್ಕಾರ ಕೈಗೊಂಡಿದೆ.

    ಕೊರೊನಾ ಕಾರಣಕ್ಕೆ ಶಾಲೆಗಳು ಬಂದ್‌ ಆಗುತ್ತಿಲ್ಲ. ವಿಪರೀತ ವಾಯುಮಾಲಿನ್ಯ ಕಾರಣದಿಂದ ಇದೇ ಮೊದಲ ಬಾರಿಗೆ ಏಪ್ರಿಲ್‌ 2ರವರೆಗೆ ಶಾಲೆ, ಕಾಲೇಜುಗಳನ್ನು ಬಂದ್‌ ಮಾಡಲಾಗುತ್ತಿದೆ.

    ದಿನೇ ದಿನೇ ವಾಯುಮಾಲಿನ್ಯದ ಪ್ರಮಾಣ ಹೆಚ್ಚಾಗುತ್ತಿದ್ದು, ಮಕ್ಕಳ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿರುವ ಕಾರಣ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಶಿಕ್ಷಣ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯ ಹೇಳಿದೆ.

    ಉಸಿರಾಟ ಸಮಸ್ಯೆ ಮತ್ತು ಇತರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಜನರು ಮನೆಯಿಂದ ಹೊರಬಂದರೆ ಅಪಾಯಕ್ಕೆ ತುತ್ತಾಗುವ ಸಾಧ್ಯತೆ ಹೆಚ್ಚು ಎಂದು ಸರ್ಕಾರ ತಿಳಿಸಿದೆ.

    ನವೆಂಬರ್‌ ಮತ್ತು ಡಿಸೆಂಬರ್‌ನಲ್ಲಿ ಕಾಡ್ಗಿಚ್ಚು ಆರಂಭವಾಗಿದ್ದು, ಮಾನ್ಸೂನ್ ಪ್ರಾರಂಭವಾಗುವವರೆಗೂ ಮುಂದುವರಿಯುತ್ತದೆ. ಏಪ್ರಿಲ್ ಕೊನೆಯ ವಾರದಲ್ಲಿ ಗರಿಷ್ಠ ಪ್ರಮಾಣದಲ್ಲಿ ಕಾಡ್ಗಿಚ್ಚು ಸಂಭವಿಸುತ್ತದೆ.

    ಅರಣ್ಯ ಮತ್ತು ಪರಿಸರ ಸಚಿವಾಲಯದ ಪ್ರಕಾರ, ನೇಪಾಳದಾದ್ಯಂತ ಇಲ್ಲಿಯವರೆಗೆ 480 ಕಾಡ್ಗಿಚ್ಚು ಪ್ರಕರಣಗಳು ವರದಿಯಾಗಿದೆ. ಪ್ರಮುಖ ನಗರಗಳ ವಾಯು ಗುಣಮಟ್ಟವು ದಿನದಿಂದ ದಿನಕ್ಕೆ ಹದಗೆಡುತ್ತಿದೆ. ಶುಕ್ರವಾರ ಕಠ್ಮಂಡು ವಿಶ್ವದ ಅತ್ಯಂತ ಕಲುಷಿತ ನಗರಗಳ ಪಟ್ಟಿಯಲ್ಲಿ ಮೊದಲ ಸ್ಥಾನ  ಪಡೆದಿತ್ತು.

    ವಾಯು ಮಾಲಿನ್ಯದ ಪ್ರಮಾಣದ ಎಷ್ಟಿದೆ ಎಂದರೆ ಹತ್ತಿರದಲ್ಲಿ ಕಾಣುತ್ತಿದ್ದ ಬೆಟ್ಟ ಗುಡ್ಡಗಳು ಸಹ ಕಾಣುತ್ತಿಲ್ಲ. ಕಳೆದ ಬುಧವಾರದಿಂದ ದೇಶೀಯ ಮತ್ತು ಅಂತಾರಾಷ್ಟ್ರೀಯ ವಿಮಾನಯಾನ ಕಂಪನಿಗಳು ತನ್ನ ಸೇವೆಯನ್ನು ಸ್ಥಗಿತಗೊಳಿಸಿದೆ.

  • ದೆಹಲಿಯಲ್ಲಿ ವಾಯು ಮಾಲಿನ್ಯ- ಚೆನ್ನೈ, ಗೋವಾಗೆ ಸೋನಿಯಾ ಶಿಫ್ಟ್?

    ದೆಹಲಿಯಲ್ಲಿ ವಾಯು ಮಾಲಿನ್ಯ- ಚೆನ್ನೈ, ಗೋವಾಗೆ ಸೋನಿಯಾ ಶಿಫ್ಟ್?

    – ಎದೆ ನೋವು ಹಿನ್ನೆಲೆ ವೈದ್ಯರ ಸಲಹೆ

    ನವದೆಹಲಿ: ದೀರ್ಘ ಕಾಲದ ಎದೆ ನೋವಿನಿಂದ ಬಳಲುತ್ತಿರುವ ಸೋನಿಯಾ ಗಾಂಧಿ ಅವರಿಗೆ ರಾಷ್ಟ್ರ ರಾಜಧಾನಿ ದೆಹಲಿಯ ಹವಾಮಾನ ಯೋಗ್ಯವಲ್ಲ. ವಾಯು ಮಾಲಿನ್ಯದಿಂದ ಹೆಚ್ಚು ತೊಂದರೆಯಾಗಲಿದೆ. ಹೀಗಾಗಿ ಅವರನ್ನು ಇತರೆ ನಗರಗಳಿಗೆ ಶಿಫ್ಟ್ ಮಾಡಿ ಎಂದು ವೈದ್ಯರು ಸಲಹೆ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

    ಇತ್ತೀಚೆಗೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ ಹೆಚ್ಚುತ್ತಿದ್ದು, ಚಳಿಗಾಲದ ಹಿನ್ನೆಲೆ ಇದು ಇನ್ನೂ ವಿಪರೀತವಾಗಲಿದೆ. ಹೀಗಾಗಿ ಅವರನ್ನು ಕೆಲ ದಿನಗಳ ಕಾಲ ಇತರೆ ನಗರಗಳಿಗೆ ಸ್ಥಳಾಂತರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಈ ಹಿನ್ನೆಲೆ ಸೋನಿಯಾ ಗಾಂಧಿ ಅವರನ್ನು ಗೋವಾ ಇಲ್ಲವೆ ಚೆನ್ನೈಗೆ ಸ್ಥಳಾಂತರಿಸಲಾಗುತ್ತಿದೆ ಎಂದು ಪಕ್ಷದ ಮೂಲವನ್ನು ಆಧರಿಸಿ ಮಾಧ್ಯಮ ವರದಿ ಮಾಡಿದೆ.

    ಶುಕ್ರವಾರ ಸಂಜೆ ಹೊತ್ತಿಗೆ ಅವರನ್ನು ಶಿಫ್ಟ್ ಮಾಡಬಹುದು. ಅವರೊಂದಿಗೆ ರಾಹುಲ್ ಗಾಂಧಿ ಅಥವಾ ಪ್ರಿಯಾಂಕಾ ಗಾಂಧಿ ವಾದ್ರಾ ಸೇರುವ ಸಾಧ್ಯತೆಯಿದೆ. ಆಗಸ್ಟ್ ನಲ್ಲಿ ಸೋನಿಯಾ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ಹೆಚ್ಚು ಔಷಧಿ ತೆಗೆದುಕೊಳ್ಳುತ್ತಿದ್ದಾರೆ. ಅವರ ದೀರ್ಘ ಕಾಲದ ಎದೆ ನೋವಿನ ಬಗ್ಗೆ ವೈದ್ಯರು ಕಳವಳ ವ್ಯಕ್ತಪಡಿಸಿದ್ದಾರೆ. ದೆಹಲಿಯ ವಾಯು ಮಾಲಿನ್ಯದಿಂದಾಗಿ ಎದೆ ನೋವು ಕಡಿಮೆಯಾಗಿಲ್ಲ ಎಂದು ಮೂಲಗಳು ಮಾಹಿತಿ ನೀಡಿವೆ.

    ನವದೆಹಲಿ ವಾಯು ಮಾಲಿನ್ಯದಿಂದಾಗಿ ಅವರಿಗೆ ಅಸ್ತಮಾ ಹಾಗೂ ಎದೆ ನೋವು ಹೆಚ್ಚಾಗಿದೆ. ಹೀಗಾಗಿ ನಗರವನ್ನು ಬಿಟ್ಟು ಬೇರೆಡೆಗೆ ಅವರನ್ನು ಸ್ಥಳಾಂತರಿಸಿ ಎಂದು ವೈದ್ಯರು ಸಲಹೆ ನೀಡಿದ್ದಾರೆ.

    ಬಿಹಾರ ಚುನಾವಣೆಯ ಸೋಲಿನ ಬಗ್ಗೆ ಆತ್ಮಾವಲೋಕನ ಸಭೆ ನಡೆಸಬೇಕು ಎಂದು ಪಕ್ಷದ ಮುಖಂಡರು ಒತ್ತಾಯಿಸುತ್ತಿರುವ ಸಂದರ್ಭದಲ್ಲೇ ಅವರು ನಗರವನ್ನು ಬಿಟ್ಟು ಹೋಗುತ್ತಿದ್ದಾರೆ. ಇನ್ನೂ ಹಲವರು ಸಭೆ ಕರೆಯುವಂತೆ ಸೋನಿಯಾ ಗಾಂಧಿ ಅವರಿಗೆ ಪತ್ರವನ್ನು ಸಹ ಬರೆದಿದ್ದಾರೆ.

    ಜುಲೈ 30ರಂದು ಸಂಜೆ ಸೋನಿಯಾ ಗಾಂಧಿ ಅವರು ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಸೆಪ್ಟೆಂಬರ್ 12ರಂದು ರೂಟೀನ್ ಚೆಕಪ್‍ಗೆ ಕೆಲ ದಿನಗಳ ಕಾಲ ವಿದೇಶಕ್ಕೆ ತೆರಳಿದ್ದರು. ಈ ವೇಳೆ ರಾಹುಲ್ ಗಾಂಧಿ ಸಹ ಅವರೊಂದಿಗೆ ತೆರಳಿದ್ದರು. ಹೀಗಾಗಿ ಇಬ್ಬರೂ ಸಹ ಅಧಿವೇಶನದಲ್ಲಿ ಭಾಗವಹಿಸಲು ಸಾಧ್ಯವಾಗಲಿಲ್ಲ.

    ಕಳೆದ ವರ್ಷ ಜನವರಿಯಲ್ಲಿ ಸಹ ಸೋನಿಯಾ ಗಾಂಧಿ ಅವರು ಕೆಲ ದಿನಗಳ ಕಾಲ ಗೋವಾದಲ್ಲಿ ವಾಸ್ತವ್ಯ ಹೂಡಿದ್ದರು. ಈ ವೇಳೆ ಅವರು ಸೈಕಲ್ ಓಡಿಸಿದ್ದ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.

  • ವೀಕೆಂಡ್‍ನಲ್ಲಿ ಚರ್ಚ್ ಸ್ಟ್ರೀಟ್‍ಗೆ ವಾಹನಗಳು ನೋ ಎಂಟ್ರಿ

    ವೀಕೆಂಡ್‍ನಲ್ಲಿ ಚರ್ಚ್ ಸ್ಟ್ರೀಟ್‍ಗೆ ವಾಹನಗಳು ನೋ ಎಂಟ್ರಿ

    – ಮಾಲಿನ್ಯ ತಡೆಯಲು ಕ್ರಮ

    ಬೆಂಗಳೂರು: ವೀಕೆಂಡ್ ನಲ್ಲಿ ಸಿಲಿಕಾನ್ ಸಿಟಿಯ ಹೈಫೈ ಏರಿಯಾಗೆ ಹೋಗುವ ಮುನ್ನ ಯೋಚಿಸಿ, ಚರ್ಚ್ ಸ್ಟ್ರೀಟ್ ನಲ್ಲಿ ಇನ್ನು ವೀಕೆಂಡ್ ವೆಹಿಕಲ್ಸ್ ನಿಷೇಧ ಮಾಡಲಾಗಿದೆ. ಹೀಗಾಗಿ ಇನ್ಮುಂದೆ ವಿಕೇಂಡ್ ಬಂತೆಂದು ಚರ್ಚ್ ಸ್ಟ್ರೀಟ್ ಕಡೆಗೆ ಗಾಡಿ ತಗೋಂಡು ಜಾಲಿ ರೌಂಡ್ ಹೋಗಲು ಆಗಲ್ಲ.

    ಇಂದಿನಿಂದ ಫೆಬ್ರವರಿ 28ರ ವರೆಗೆ ಚರ್ಚ್ ಸ್ಟ್ರೀಟ್ ಕ್ಲೀನ್ ಏರ್ ಸ್ಟ್ರೀಟ್ ಎಂದು ಘೊಷಿಸಲಾಗಿದ್ದು, ಭಾರತದ ಮೊದಲ ಸ್ವಚ್ಛ ವಾಯು ಸ್ಟ್ರೀಟ್ ಚರ್ಚ್ ಸ್ಟ್ರೀಟ್ ಫಸ್ಟ್- ಟೆಸ್ಟ್ ಬೆಡ್ ಗೆ ಬೆಳಗ್ಗೆ 11ಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಚಾಲನೆ ನೀಡಿದ್ದಾರೆ. ಕಾಲ್ನಡಿಗೆಯಲ್ಲಿ ತೆರಳುವವರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ವಾಯು ಮಾಲಿನ್ಯ ಕಡಿಮೆ ಮಾಡಲು ಹೊಸ ಪ್ರಯೋಗ ಮಾಡಲಾಗುತ್ತಿದ್ದು, ಭೂ ಸಾರಿಗೆ ನಿರ್ದೇಶನಾಲಯ, ಡಲ್ಟ್(ಡೈರೆಕ್ಟರೇಟ್ ಆಫ್ ಅರ್ಬನ್ ಲ್ಯಾಂಡ್ ಟ್ರಾನ್ಸ್‍ಪೋರ್ಟ್) ಮತ್ತು ಮಾಲಿನ್ಯ ನಿಯಂತ್ರಣ ಮಂಡಳಿ, ಪೊಲೀಸ್ ಇಲಾಖೆಗಳ ಸಹಯೋಗದಲ್ಲಿ ಈ ಯೋಜನೆ ರೂಪಿಸಲಾಗಿದೆ. ಅಲ್ಲದೆ ಚರ್ಚ್ ಸ್ಟ್ರೀಟ್ ನಲ್ಲಿ ಯುರೋಪ್ ಮಾದರಿಯನ್ನು ಅಳವಡಿಕೆ ಮಾಡಲಾಗುತ್ತದೆಯಂತೆ.

    ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಗಮಿಸಿ ಚಾಲನೆ ನೀಡಿದ್ದಾರೆ. ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಸಾತ್ ನೀಡಿದ್ದಾರೆ. ಚರ್ಚ್ ಸ್ಟ್ರೀಟ್ ನ ರಸ್ತೆಗಳನ್ನು ಮುಖ್ಯಮಂತ್ರಿಗಳು ಪರಿಶೀಲಿಸಿದ್ದು, ಭಾರತದ ಮೊದಲ ಸ್ವಚ್ಛ ವಾಯು ಬೀದಿ(ಕ್ಲೀನ್ ಏರ್ ಸ್ಟ್ರೀಟ್) ಎಂದಿದ್ದಾರೆ. ಚರ್ಚ್ ಸ್ಟ್ರೀಟ್ ನಲ್ಲಿ ವೀಕೆಂಡ್ ನಲ್ಲಿ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ವಾರದಲ್ಲಿ ಎರಡು ದಿನ ಪಾದಚಾರಿಗಳ ಸಂಚಾರಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ಸ್ವಚ್ಛ ಗಾಳಿ, ನೀರು ಪ್ರತಿಯೊಬ್ಬರ ಹಕ್ಕು. ಸೈಕಲ್ ಹೆಚ್ಚು ಉಪಯೋಗಿಸಿ, ನಡಿಯಿರಿ ಎಂದು ಸಿಎಂ ಸಲಹೆ ನೀಡಿದ್ದಾರೆ.

    ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಮಾತನಾಡಿ, ಶನಿವಾರ ಹಾಗೂ ಭಾನುವಾರ ಎರಡು ದಿನ ಚರ್ಚ್ ಸ್ಟ್ರೀಟ್ ನಲ್ಲಿ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ. ಎರಡು ದಿನ ಈ ರಸ್ತೆಯಲ್ಲಿ ವಾಯುಮಾಲಿನ್ಯದ ಪ್ರಮಾಣ ಅಳೆಯಲಾಗುತ್ತೆದೆ. ನಂತರದ ದಿನಗಳಲ್ಲಿ ಹೆಚ್ಚಿನ ದಿನಗಳನ್ನು ವಿಸ್ತರಿಸುವ ಕುರಿತು ಚಿಂತಿಸಲಾಗುತ್ತದೆ. ಇದು ಮೊದಲ ಹಂತ, ನಂತರ ಬೇರೆ ಪ್ರದೇಶಗಳಲ್ಲಿ ವಿಸ್ತರಿಸಲು ಆಲೋಚನೆ ನಡೆಸಲಾಗುತ್ತಿದೆ ಎಂದರು.

  • ಜನರೇ ಗಮನಿಸಿ, ಕೊರೊನಾ ಸೋಂಕಿತರ ಸಾವಿಗೆ ವಾಯುಮಾಲಿನ್ಯವೂ ಕಾರಣ

    ಜನರೇ ಗಮನಿಸಿ, ಕೊರೊನಾ ಸೋಂಕಿತರ ಸಾವಿಗೆ ವಾಯುಮಾಲಿನ್ಯವೂ ಕಾರಣ

    ನವದೆಹಲಿ: ಜನರೇ ವಾತಾವರಣವನ್ನು ಸ್ವಚ್ಛವಾಗಿರಿಸಿ. ಯಾಕೆಂದರೆ ಕೊರೋನಾ ಸಾವಿಗೆ ವಾಯುಮಾಲಿನ್ಯವೂ ಈಗ ಕಾರಣವಾಗಿರುವುದು ಅಧ್ಯಯನದಿಂದ ದೃಢಪಟ್ಟಿದೆ.

    ಮಾಲಿನ್ಯದ ಜೊತೆ ಸೇರಿ ಕೊರೋನಾ ಪ್ರಾಣಕ್ಕೆ ಕುತ್ತು ತರಬಹುದು ಹುಷಾರ್ ಅಂತ ಕೇಂದ್ರ ಆರೋಗ್ಯ ಇಲಾಖೆ ಹಾಗೂ ಐಸಿಎಂಆರ್ ಆತಂಕ ವ್ಯಕ್ತಪಡಿಸಿದೆ. ವಿದೇಶಗಳಲ್ಲಿ ನಡೆಸಿದ ಅಧ್ಯಯನದ ಮೇಲೆ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್‌) ಮಾಹಿತಿಯನ್ನು ಹಂಚಿಕೊಂಡಿದೆ.

    ಏನಿದು ಅಧ್ಯಯನ?
    ಯುರೋಪ್, ಅಮೆರಿಕದ ಅಧ್ಯಯನದ ಪ್ರಕಾರ ಕಲುಷಿತ ಗಾಳಿಯೂ ಕೊರೊನಾ ರೋಗಿಗಳ ಸಾವಿಗೆ ಕಾರಣವಾಗುತ್ತಿದೆ. ತಂಬಾಕು ಸೇವನೆ, ಅಧಿಕ ರಕ್ತದೊತ್ತಡ ಬಳಿಕ ಮಾಲಿನ್ಯದಿಂದ ಹೆಚ್ಚು ಜನ ಸಾವನ್ನಪ್ಪುತ್ತಿದ್ದಾರೆ. ಹಲವು ಕಲುಷಿತ ಪ್ರದೇಶಗಳಲ್ಲಿ ಅಧ್ಯಯನ ನಡೆಸಿರುವ ಅಧ್ಯಯನ ತಂಡಗಳು ಕೆಟ್ಟ ಗಾಳಿಯಿಂದ ಉಸಿರಾಟದ ಸಮಸ್ಯೆಯಾಗಿ ಸಾವು ಸಂಭವಿಸಬಹುದು. ವಾಯುಮಾಲಿನ್ಯ, ಕೊರೋನಾದಿಂದ ಪಾರಾಗಲು ಮಾಸ್ಕ್ ಒಂದೇ ಮಾರ್ಗ ಎಂದು ಐಸಿಎಂಆರ್ ಡಿಜಿ ಡಾ. ಬಲರಾಮ್ ಭಾರ್ಗವ ತಿಳಿಸಿದ್ದಾರೆ.

    ಮತ್ತೆ ಆತಂಕ:
    ದೆಹಲಿ, ಪಂಜಾಬ್‍ನಲ್ಲಿ ಈಗ ಚಳಿ ಹೆಚ್ಚಾಗುತ್ತಿದ್ದು ಕೃಷಿ ತಾಜ್ಯವನ್ನು ಹೆಚ್ಚು ಸುಡಲಾಗುತ್ತಿದೆ. ಇದರಿಂದ ಪ್ರತಿ ವರ್ಷದಂತೆ ಈಗ ರಾಜ್ಯಗಳಲ್ಲಿ ವಾಯು ಮಾಲಿನ್ಯ ಪ್ರಮಾಣದ ಹೆಚ್ಚಾಗುತ್ತಿದೆ. ಇದರ ಜೊತೆ ಮುಂದಿನ ತಿಂಗಳು ದೀಪಾವಳಿ ಬರಲಿದೆ.

    ದೀಪಾವಳಿ ಸಮಯದಲ್ಲಿ ಪಟಾಕಿ ಸುಡುವುದು ಸಾಮಾನ್ಯ. ದೀಪಾವಳಿ ಸಮಯದಲ್ಲಿ ಯಾವಾಗಲೂ ನಗರ ಪ್ರದೇಶಗಳಲ್ಲಿ ವಾಯುಮಾಲಿನ್ಯ ಹೆಚ್ಚಿರುತ್ತದೆ. ಆದರೆ ಈ ಬಾರಿ ಕೊರೊನಾ ಸೋಂಕು ಇದ್ದು, ಅದರಲ್ಲೂ ನಗರ ಪ್ರದೇಶಗಳಲ್ಲಿ ಹೆಚ್ಚು ಸೋಂಕಿತರಿದ್ದಾರೆ. ಕೊರೊನಾ ಸೋಂಕು ಶ್ವಾಸಕೋಶಕ್ಕೆ ಅಪಾಯ ತರುವ ಕಾರಣ ಈಗ ಮತ್ತೆ ಆತಂಕ ಎದುರಾಗಿದೆ.

  • ಏಪ್ರಿಲ್ 1 ರಿಂದ ಭಾರತದಲ್ಲಿ ಸಿಗಲಿದೆ ಶುದ್ಧ ಪೆಟ್ರೋಲ್ – ಏನಿದು ಬಿಎಸ್6? ಬೆಲೆ ಎಷ್ಟು ಇರಲಿದೆ? ಈಗಲೇ ಜಾರಿ ಯಾಕೆ?

    ಏಪ್ರಿಲ್ 1 ರಿಂದ ಭಾರತದಲ್ಲಿ ಸಿಗಲಿದೆ ಶುದ್ಧ ಪೆಟ್ರೋಲ್ – ಏನಿದು ಬಿಎಸ್6? ಬೆಲೆ ಎಷ್ಟು ಇರಲಿದೆ? ಈಗಲೇ ಜಾರಿ ಯಾಕೆ?

    ಪ್ರಿಲ್ 1 ರಿಂದ ಭಾರತದಲ್ಲಿ ಶುದ್ಧ ಪೆಟ್ರೋಲ್ ಮತ್ತು ಡೀಸೆಲ್ ಎಲ್ಲ ಬಂಕ್‍ಗಳಲ್ಲಿ ಲಭ್ಯವಾಗಲಿದೆ. ತೈಲ ಕಂಪನಿಗಳು ಬಿಎಸ್6 ದರ್ಜೆಯ ಪೆಟ್ರೋಲ್ ಮತ್ತು ಡೀಸೆಲನ್ನು ಪೂರೈಸಲಿವೆ. ಹೀಗಾಗಿ ಏನಿದು ಬಿಎಸ್6 ಇಂಧನ ? ಬಿಎಸ್5 ಅನುಷ್ಠಾನಕ್ಕೆ ತರದೇ ಬಿಎಸ್6 ಜಾರಿಗೆ ತಂದಿದ್ದು ಯಾಕೆ? ಇಂಧನದ ಬೆಲೆ ಎಷ್ಟು ಹೆಚ್ಚಾಗಲಿದೆ ಈ ಎಲ್ಲ ಮಾಹಿತಿಗಳನ್ನು ಇಲ್ಲಿ ನೀಡಲಾಗುತ್ತದೆ?

    ಏನಿದು ಬಿಎಸ್?
    ಭಾರತ್ ಸ್ಟೇಜ್ (ಬಿಎಸ್) ಅಂದ್ರೆ ವಾಹನಗಳ ಅನಿಲ ಹೊರಸೂಸುವಿಕೆ/ ಮಾಲಿನ್ಯ ಪ್ರಮಾಣದ ನಿಯಂತ್ರಣಾ ಮಾನದಂಡ. ಪೆಟ್ರೋಲ್ ಮತ್ತು ಡೀಸೆಲ್‍ಗಳಲ್ಲಿ ಇರುವ ಗಂಧಕ(ಸಲ್ಫರ್) ಪ್ರಮಾಣವನ್ನು ಆಧರಿಸಿ ಅವುಗಳ `ಬಿಎಸ್’ ವರ್ಗೀಕರಣ ಮಾಡಲಾಗುತ್ತದೆ. ಇಂಧನವೊಂದರ 10 ಲಕ್ಷ ಕಣಗಳಲ್ಲಿ, ಗಂಧಕದ ಕಣಗಳು (ಪಾರ್ಟ್ಸ್ ಪರ್ ಮಿಲಿಯನ್ ಅಥವಾ ಪಿಪಿಎಂ) ಎಷ್ಟಿವೆ ಎಂಬುದರ ಆಧಾರದ ಮೇಲೆ ಇದನ್ನು ವರ್ಗೀಕರಿಸಲಾಗುತ್ತದೆ. ಕೇಂದ್ರ ಮಾಲಿನ್ಯ ನಿಯಂತ್ರಣಾ ಮಂಡಳಿ ಪರಿಸರ ಇಲಾಖೆ, ಅರಣ್ಯ ಹಾಗೂ ಹವಾಮಾನ ಇಲಾಖೆಯ ಅಡಿಯಲ್ಲಿ ಬಿಎಸ್ ಮಾನದಂಡವನ್ನ ನಿಗದಿಪಡಿಸಲಾಗುತ್ತದೆ. ಕಾಲಕಾಲಕ್ಕೆ ಇದನ್ನು ಮಾರ್ಪಾಡು ಮಾಡಲಾಗುತ್ತದೆ. ಯುರೋಪಿಯನ್ ಒಕ್ಕೂಟಗಳ ದೇಶಗಳು ಈ ಮಾನದಂಡಕ್ಕೆ ‘ಯುರೋ’ ಎಂದು ಹೆಸರನ್ನಿಟ್ಟಿದ್ದಾರೆ.

    ಯಾವಾಗ ಜಾರಿಗೊಳಿಸಲಾಯ್ತು?
    ಯುರೋಪಿಯನ್ ಮಾನದಂಡಗಳಿಗೆ ಅನುಗುಣವಾಗಿ ಭಾರತದಲ್ಲಿ ಮೊದಲ ಬಾರಿಗೆ 2000 ಇಸವಿಯಲ್ಲಿ ಬಿಎಸ್ ಮಾನದಂಡ ಜಾರಿಗೊಳಿಸಲಾಯ್ತು. 2005ರಲ್ಲಿ ಬಿಎಸ್2 ಮಾನದಂಡ ಜಾರಿಗೆ ಬಂತು. 2010ರಲ್ಲಿ ಬಿಎಸ್3 ಮಾನದಂಡವನ್ನು ಜಾರಿಗೊಳಿಸಲಾಯ್ತು. 2016ರ ಏಪ್ರಿಲ್‍ನಲ್ಲಿ ಬಿಎಸ್4 ಮಾನದಂಡವನ್ನ ಬೆಂಗಳೂರು ಸೇರಿದಂತೆ 13 ಪ್ರಮುಖ ನಗರಗಳಲ್ಲಿ ಅಸ್ತಿತ್ವಕ್ಕೆ ತರಲಾಯ್ತು. 2017ರ ಏಪ್ರಿಲ್ 1 ರಿಂದ ದೇಶದಲ್ಲಿ ಎಲ್ಲಾ ವಾಹನಗಳು ಬಿಎಸ್4 ಮಾನದಂಡ ಹೊಂದಿರುವುದು ಕಡ್ಡಾಯ ಎಂದು ಕೇಂದ್ರ ಸರ್ಕಾರ ಆದೇಶಿಸಿತ್ತು.

    ಬಿಎಸ್5 ಜಾರಿಗೆ ತರದೇ ಬಿಎಸ್6 ಯಾಕೆ?
    ಯಾವಾಗಲೂ ಹಂತ ಹಂತವಾಗಿ ಬದಲಾವಣೆ ಆಗುತ್ತಿರುತ್ತದೆ. ಆದರೆ ಭಾರತ ಬಿಎಸ್ ಮಾನದಂಡ ಅಳವಡಿಸುವುದರಲ್ಲಿ ಹಿಂದಿತ್ತು. ಯುರೋಪಿಯನ್ ದೇಶಗಳು 2006ರಲ್ಲಿ ಯುರೋ4 (ಬಿಎಸ್4) ಜಾರಿಗೆ ತಂದಿದ್ದರೆ ಯುರೋ 5ಎ ಮಾನದಂಡವನ್ನು 2011ರಲ್ಲಿ ಜಾರಿಗೆ ತಂದಿತ್ತು. ಆದರೆ ಭಾರತದಲ್ಲಿ ರಾಷ್ಟ್ರವ್ಯಾಪಿ ಬಿಎಸ್4 ಜಾರಿಗೆ ಬಂದಿದ್ದು 2017ರಲ್ಲಿ. ಆದರೆ ಈಗ ಕೇವಲ 3 ವರ್ಷದಲ್ಲಿ ಭಾರತ ಬಿಎಸ್5 ಅಳವಡಿಸಿಕೊಳ್ಳದೇ ಬಿಎಸ್6 ಅಳವಡಿಸಲು ಮುಂದಾಗುತ್ತಿದೆ.

    ಬಿಎಸ್5  ಜಾರಿಗೆ ತಂದರೆ ತೈಲ ಕಂಪನಿಗಳು ಮತ್ತು ವಾಹನ ಉತ್ಪಾದನಾ ಕಂಪನಿಗಳು ಬಿಎಸ್5 ಮಾನದಂಡಕ್ಕೆ ಅನುಗುಣವಾಗಿ ತೈಲ ಮತ್ತು ಎಂಜಿನ್ ಉತ್ಪಾದನೆ ಮಾಡಬೇಕಿತ್ತು. ಇದಕ್ಕೆ ಭಾರೀ ಹೂಡಿಕೆ ಬೇಕಿತ್ತು. ಹೂಡಿಕೆ ಮಾಡಿದ ನಂತರ ಮಾನದಂಡವನ್ನು ಬದಲಾಯಿಸಿದರೆ ಕಂಪನಿಗಳು ಭಾರೀ ನಷ್ಟಕ್ಕೆ ತುತ್ತಾಗುವ ಸಾಧ್ಯತೆಯಿತ್ತು. ಒಂದು ಮಾನದಂಡದಿಂದ ಇನ್ನೊಂದು ಮಾನದಂಡಕ್ಕೆ ಬದಲಾಗಲು ಕನಿಷ್ಠ 4, 5 ವರ್ಷ ತೆಗೆದುಕೊಳ್ಳುವ ಸಾಧ್ಯತೆಯಿತ್ತು. ಆದರೆ ಬಿಎಸ್5 ಬಂದ ನಂತರ ಬಿಎಸ್6 ಬರಲೇಬೇಕಿತ್ತು. ಹೀಗಾಗಿ ಭಾರತ ನೇರವಾಗಿ ಬಿಎಸ್6 ಮಾನದಂಡವನ್ನು ಜಾರಿಗೆ ತರಲು ಮುಂದಾಗುತ್ತಿದೆ. ವಿಶ್ವದ ಅತಿ ದೊಡ್ಡ ಆರ್ಥಿಕತೆ ಹೊಂದಿರುವ ದೇಶಗಳು ಸಹ ಇಷ್ಟು ವೇಗದಲ್ಲಿ ಬದಲಾವಣೆ ಮಾಡಿಲ್ಲ. ಈ ಕಾರಣದ ಜೊತೆಗೆ 2017ರ ಪ್ಯಾರಿಸ್ ಶೃಂಗಸಭೆಯಲ್ಲಿ ಜಾಗತಿಕ ತಾಪಮಾನ ನಿಯಂತ್ರಣ ಸಂಬಂಧದ ಘೋಷಣೆಗೆ ಭಾರತವು ಸಹಿ ಹಾಕಿದೆ. ಹೀಗಾಗಿ ವೇಗವಾಗಿ ಬಿಎಸ್6 ಅಳವಡಿಸಿಕೊಳ್ಳಲು ಸರ್ಕಾರವು ಆದೇಶ ಪ್ರಕಟಿಸಿತ್ತು.

    ಬಿಎಸ್6 ಇಂಧನದಿಂದ ಮಾಲಿನ್ಯ ಎಷ್ಟು ಕಡಿಮೆ ಆಗುತ್ತದೆ?
    ಬಿಎಸ್4 ಪೆಟ್ರೋಲ್ ಡೀಸೆಲ್ ನಲ್ಲಿ 50 ಪಿಎಪಿಎಂ(ಪಾರ್ಟ್ಸ್ ಪರ್ ಮಿಲಿಯನ್) ಸಲ್ಫರ್ ಇದ್ದರೆ ಬಿಎಸ್6 ನಲ್ಲಿ 10 ಪಿಪಿಎಂ ಗಂಧಕ ಇರಲಿದೆ. ಬಿಎಸ್4 ಪೆಟ್ರೋಲ್ ವಾಹನಕ್ಕೆ ಬಿಎಸ್6 ಪೆಟ್ರೋಲ್ ಹಾಕಿದ್ರೆ ನೈಟ್ರೋಜನ್ ಆಕ್ಸೈಡ್ ಉಗುಳುವಿಕೆಯ ಪ್ರಮಾಣ ಶೇ.25 ರಷ್ಟು ಕಡಿಮೆಯಾದರೆ ಬಿಎಸ್4 ಡೀಸೆಲ್ ವಾಹನಕ್ಕೆ ಬಿಎಸ್6 ಡೀಸೆಲ್ ಹಾಕಿದರೆ ನೈಟ್ರೋಜನ್ ಆಕ್ಸೈಡ್ ಉಗುಳುವಿಕೆಯ ಪ್ರಮಾಣ ಶೇ.70ರಷ್ಟು ಕಡಿಮೆಯಾಗಲಿದೆ.

    ಬೆಲೆ ಎಷ್ಟು ಏರಿಕೆ ಆಗಲಿದೆ?
    ಬಿಎಸ್ ಮಾನದಂಡ ಆರಂಭಗೊಂಡು ಬಿಎಸ್ 4 ವರೆಗೆ ತೈಲ ಸಂಸ್ಕರಣ ಘಟಕಗಳನ್ನು ಮೇಲ್ದರ್ಜೆಗೆ ಏರಿಸಲು ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಸುಮಾರು 60 ಸಾವಿರ ಕೋಟಿ ರೂ. ಹಣವನ್ನು ಖರ್ಚು ಮಾಡಿದೆ. ಈ ಸಂಸ್ಕರಣ ಘಟಕಗಳನ್ನು ಬಿಎಸ್4 ನಿಂದ ಬಿಎಸ್6 ಮೇಲ್ದರ್ಜೆಗೆ ಏರಿಸಲು ತೈಲ ಕಂಪನಿಗಳು ಅಂದಾಜು 35 ಸಾವಿರ ಕೋಟಿ ರೂ. ಖರ್ಚು ಮಾಡಿದೆ. ಈ ವೆಚ್ಚವನ್ನು ಸರಿದೂಗಿಸಲು ತೈಲ ಕಂಪನಿಗಳು ಬೆಲೆ ಏರಿಸಲಿವೆ. ಆದರೆ ಎಷ್ಟು ಏರಿಕೆ ಆಗಲಿದೆ ಎನ್ನುವುದು ತಿಳಿದು ಬಂದಿಲ್ಲ.

    ದೆಹಲಿಯಲ್ಲಿ ಬಿಎಸ್6 ಇಂಧನ ಲಭ್ಯವಿದೆ:
    ವಿಪರೀತ ವಾಯು ಮಾಲಿನ್ಯದಿಂದ ಸುದ್ದಿಯಾಗುತ್ತಿರುವ ದೆಹಲಿಯಲ್ಲಿ ಈಗಾಗಲೇ ಬಿಎಸ್6 ಮಾನಂದಂಡದ ಪೆಟ್ರೋಲ್, ಡೀಸೆಲ್ ಲಭ್ಯವಿದೆ. 2019ರ ಅಕ್ಟೋಬರ್ 1 ರಿಂದ ದೆಹಲಿಯ ಎಲ್ಲ ಜಿಲ್ಲೆಯಲ್ಲಿ ಬಿಎಸ್6 ಮಾನದಂಡದ ಪೆಟ್ರೋಲ್ ಮಾರಾಟ ಮಾಡಲಾಗುತ್ತಿದೆ.

    ಬಿಎಸ್4 ವಾಹನಗಳಿಗೆ ಬಿಎಸ್6 ಇಂಧನ ಹಾಕಿದ್ರೆ ಏನಾಗುತ್ತೆ?
    ಬಿಎಸ್4 ನಿಂದ ಬಿಎಸ್6ಗೆ ಏರುವ ಪೆಟ್ರೋಲ್‍ನ ರಾಸಾಯನಿಕ ಅಂಶಗಳಲ್ಲಿ ಅಷ್ಟೇನೂ ವ್ಯತ್ಯಾಸವಿರುವುದಿಲ್ಲ. ಆದ್ರೆ ಡೀಸೆಲ್‍ನಲ್ಲಿ ನಿಜವಾದ ವ್ಯತ್ಯಾಸವಿರುತ್ತದೆ. ಈಗಿರುವ ಡೀಸೆಲ್‍ಗೆ ಹೋಲಿಸಿದ್ರೆ ಹೊಸ ಡೀಸೆಲ್‍ನಲ್ಲಿ ಸಲ್ಫರ್ ಪ್ರಮಾಣ ಕಡಿಮೆ ಇರುತ್ತದೆ. ಈ ಹಿಂದೆ ಲಭ್ಯವಿದ್ದ ಡೀಸೆಲ್‍ನಲ್ಲಿ 500 ಪಿಪಿಎಂ(ಪಾರ್ಟ್ಸ್ ಪರ್ ಮಿಲಿಯನ್) ಸಲ್ಫರ್ ಇರುತ್ತಿತ್ತು. ಆದ್ರೆ ಈಗಿರುವ ಬಿಎಸ್ 4 ಡೀಸೆಲ್‍ನಲ್ಲಿ 50 ಪಿಪಿಎಂ ಸಲ್ಫರ್ ಇದ್ದು ಲೋ ಸಲ್ಫರ್ ಡೀಸೆಲ್ ಎಂದೇ ಕರೆಯಲಾಗುತ್ತದೆ. ಇನ್ನು ಬಿಎಸ್6 ಇಂಧನದಲ್ಲಿ ಕೇವಲ 10 ಪಿಪಿಎಂ ಸಲ್ಫರ್ ಮಾತ್ರ ಇರುತ್ತದೆ. ಇದು ಪರಿಸರಕ್ಕಾಗಿ ಮತ್ತಷ್ಟು ಸ್ವಚ್ಛ ಹಾಗೂ ಉತ್ತಮವಾಗಿರುತ್ತದೆ. ಎಂಜಿನ್ ಕೂಡ ಸ್ವಚ್ಛವಾಗಿ ಕಾರ್ಯ ನಿರ್ವಹಿಸುತ್ತದೆ.

    ಇಂಧನದಲ್ಲಿನ ಸಲ್ಫರ್ ಡೀಸೆಲ್ ಎಂಜಿನ್‍ಗಳಲ್ಲಿನ ಇಂಜೆಕ್ಟರ್ ಗಳ  ರಾಸಾಯನಿಕ ತೈಲಲೇಪನಕ್ಕೆ ಸಹಾಯ ಮಾಡುತ್ತದೆ. ಡೀಸೆಲ್ ಎಂಜಿನ್‍ಗಳು ದ್ರವವನ್ನು ತುಂತುರು ಹನಿಗಳಾಗಿ ಪರಿವರ್ತಿಸಲು ಇಂಜೆಕ್ಟರ್ ಗಳನ್ನು ಅವಲಂಬಿಸುತ್ತವೆ. ಒಂದು ವೇಳೆ ಡೀಸೆಲ್‍ನಲ್ಲಿ ಸಲ್ಫರ್ ಪ್ರಮಾಣ ಕಡಿಮೆಯಿದ್ದರೆ ಇಂಜೆಕ್ಟರ್ ನಲ್ಲಿ ತೊಂದರೆ ಕಾಣಿಸಿಕೊಳ್ಳುತ್ತದೆ. ಅಲ್ಲದೆ ಹೊಗೆ ಹೊರಸೂಸುವಿಕೆಯೂ ಹೆಚ್ಚಾಗುತ್ತದೆ.

    ಬಿಎಸ್4 ಇಂಧನವನ್ನ ಬಿಎಸ್6 ವಾಹನಗಳಿಗೆ ಹಾಕಿದ್ರೆ ಏನಾಗುತ್ತದೆ?
    ಬಿಎಸ್6 ಕಾರುಗಳಲ್ಲಿ ಬಿಎಸ್6 ಇಂಧನದಿಂದ ಕಾರ್ಯನಿರ್ವಹಿಸಬಲ್ಲ ಅಪ್‍ಡೇಟೆಡ್ ಹಾರ್ಡ್‍ವೇರ್(ಇಂಜೆಕ್ಟರ್) ಹಾಗೂ ಎಕ್ಸ್ಹಾಸ್ಟ್ ಸ್ಟ್ರೀಮ್‍ನಲ್ಲಿ ಹೆಚ್ಚುವರಿ ಘಟಕಗಳು ಇರುತ್ತವೆ. ಉದಾಹರಣೆಗೆ ಎಕ್ಸಾಸ್ಟ್ ಸಿಸ್ಟಂ ನಲ್ಲಿ ಡೀಸಲ್ ಪಾರ್ಟಿಕುಲೇಟ್ ಫಿಲ್ಟರ್ ಹಾಗೂ ಕೆಲವದರಲ್ಲಿ ಯೂರಿಯಾ ಇಂಜೆಕ್ಷನ್ ಕೂಡ ಇರುತ್ತದೆ. ಹೆಚ್ಚಿನ ಪ್ರಮಾಣದ ಸಲ್ಫರ್ಯುಕ್ತ ಹಳೆಯ ಇಂಧನವನ್ನ ಹೊಸ ಎಂಜಿನ್‍ನಲ್ಲಿ ಬಳಸಿದ್ರೆ ಡೀಸೆಲ್ ಪಾರ್ಟಿಕುಲೇಟ್ ಫಿಲ್ಟರ್ಗಳು ಬ್ಲಾಕ್ ಆಗಿ ಬೇಗನೆ ಬದಲಾವಣೆ ಮಾಡಬೇಕಾಗುತ್ತದೆ. ಜೊತೆಗೆ ಎಂಜಿನ್ ತನ್ನ ಸಾಮರ್ಥ್ಯಕ್ಕಿಂತ  ಕಡಿಮೆ ಕಾರ್ಯ ನಿರ್ವಹಣೆ ಮಾಡುತ್ತದೆ. ವಾಹನದ ಮೈಲೇಜ್ ಮತ್ತು ಒಟ್ಟಾರೆ ಹೊಗೆ ಹೊರಸೂಸುವಿಕೆಯ ಮೇಲೂ ಪರಿಣಾಮ ಬೀರುತ್ತದೆ. ಬಿಎಸ್6 ಕಾರಿನಲ್ಲಿ ಬಿಎಸ್4 ಇಂಧನ ಬಳಸಿದಾಗ ಆಗುವ ತೊಂದರೆ ಬೇಗನೆ ಗೊತ್ತಾಗುತ್ತದೆ.

    ಬಿಎಸ್-2 ಗಿಂತಲೂ ಮೊದಲು ಯಾವ ನಿಯಮ ಇತ್ತು?
    ಭಾರತದಲ್ಲಿ ಮೊದಲ ಬಾರಿಗೆ 1991ರಲ್ಲಿ ಪೆಟ್ರೋಲ್ ವಾಹನಗಳಿಗೆ ಮಾಲಿನ್ಯ ನಿಯಂತ್ರಣ ಮಾನದಂಡವನ್ನು ಜಾರಿಗೊಳಿಸಲಾಯ್ತು. ನಂತರ 1992ರಲ್ಲಿ ಡೀಸೆಲ್ ವಾಹನಗಳಗೆ ಮಾನದಂಡ ಜಾರಿಗೆ ಬಂತು. ಇದರ ಬೆನ್ನಲ್ಲೇ ಪೆಟ್ರೋಲ್ ವಾಹನಗಳಲ್ಲಿ ಕ್ಯಾಟಲಿಸ್ಟಿಕ್ ಕನ್ವರ್ಟರ್ ಕಡ್ಡಾಯಗೊಳಿಲಾಯ್ತು ಹಾಗೂ ಲೆಡ್ ರಹಿತ ಪೆಟ್ರೋಲ್ ಮಾರುಕಟ್ಟೆಗೆ ಪರಿಚಯಿಸಲಾಯ್ತು. 1999ರ ಏಪ್ರಿಲ್‍ನಲ್ಲಿ ಭಾರತದಲ್ಲಿ ಎಲ್ಲಾ ವಾಹನಗಳು ಯುರೋ 1 ಅಥವಾ ಭಾರತ 2000 ಮಾನದಂಡವನ್ನು ಹೊಂದಿರಬೇಕು ಎಂದು ಸುಪ್ರೀಂ ಕೋರ್ಟ್ ಆದೇಶಿಸಿತು. ಆದ್ರೆ ಈ ಬದಲಾವಣೆ ಮಾಡಿಕೊಳ್ಳಲು ಕಾರು ತಯಾರಕರು ಸಿದ್ಧರಿರಲಿಲ್ಲ. ಹೀಗಾಗಿ ಮುಂದಿನ ತೀರ್ಪಿನಲ್ಲಿ ಯೂರೋ 2 ಅನುಷ್ಠಾನ ದಿನಾಂಕ ಜಾರಿಯಾಗಲಿಲ್ಲ.

    2002ರಲ್ಲಿ ಭಾರತ ಸರ್ಕಾರ ಮಾಶೆಲ್ಕರ್ ಸಮಿತಿಯ ವರದಿಯನ್ನು ಸ್ವೀಕರಿಸಿತು. ಈ ವರದಿಯಲ್ಲಿ ಯುರೋ ಆಧರಿತ ಮಾಲಿನ್ಯ ನಿಯಂತ್ರಣ ಮಾನದಂಡವನ್ನು ಭಾರತದಲ್ಲೂ ಜಾರಿಗೊಳಿಸುವಂತೆ ಶಿಫಾರಸು ಮಾಡಿತ್ತು. ಈ ಮಾನದಂಡವನ್ನು ಮೊದಲಿಗೆ ಪ್ರಮುಖ ನಗರಗಳಲ್ಲಿ ಜಾರಿಗೆ ತಂದು ನಂತರ ಕೆಲವು ವರ್ಷಗಳ ಬಳಿಕ ದೇಶದ ಇತರೆ ಭಾಗಗಳಿಗೆ ವಿಸ್ತರಿಸುವ ಮೂಲಕ ಹಂತಹಂತವಾಗಿ ಜಾರಿಗೊಳಿಸಬೇಕೆಂದು ವರದಿಯಲ್ಲಿ ಹೇಳಲಾಗಿತ್ತು. ಈ ವರದಿಯ ಆಧಾರದ ಮೇಲೆ ರಾಷ್ಟ್ರೀಯ ವಾಹನ ಇಂಧನ ನೀತಿಯನ್ನು 2003ರಲ್ಲಿ ಅಧಿಕೃತವಾಗಿ ಘೋಷಿಸಲಾಯ್ತು. ನಂತರ 2010ರ ಅಕ್ಟೋಬರ್ ದೇಶದಾದ್ಯಂತ ಭಾರತ್ ಸ್ಟೇಜ್ -3 ಅನುಷ್ಠಾನಗೊಳಿಸಲಾಯ್ತು.

    ಯಾವುದೇ ಸಮಸ್ಯೆಯಾಗಲ್ಲ:
    ಮುಂದಿನ ಕೆಲ ವಾರಗಳಲ್ಲಿ ಇಂಧನ ಡಿಪೋಗಳಿಂದ ಶುದ್ಧ ಪೆಟ್ರೋಲ್ ಮತ್ತು ಡೀಸೆಲ್ ಪೂರೈಕೆ ಆಗಲಿದೆ. ನಿರೀಕ್ಷೆಯಂತೆ ಏ.1ರಿಂದ ಯುರೋ-6 ದರ್ಜೆಯ ತೈಲ ದೇಶದೆಲ್ಲೆಡೆಯ ಪೆಟ್ರೋಲ್ ಪಂಪ್ ಗಳಿಗೆ ತಲುಪಲಿದೆ. ಗ್ರಾಹಕರಿಗೆ ಯಾವುದೇ ಸಮಸ್ಯೆಯಾಗದಂತೆ ಎಚ್ಚರವಹಿಸಲಾಗಿದೆ. ತೈಲ ಸಂಸ್ಕರಣ ಘಟಕಗಳನ್ನು ಉನ್ನತೀಕರಿಸಲು ಸುಮಾರು 35 ಸಾವಿರ ಕೋಟಿ ರೂ. ಹಣವನ್ನು ವೆಚ್ಚ ಮಾಡಲಾಗಿದೆ ಎಂದು ಇಂಡಿಯನ್ ಆಯಿಲ್ ಕಾರ್ಪೋರೇಷನ್ ಅಧ್ಯಕ್ಷ ಸಂಜೀವ್ ಸಿಂಗ್ ಹೇಳಿದ್ದಾರೆ.

  • ದೇವರನ್ನೂ ಬಿಡದ ಮಾಲಿನ್ಯ – ವಾರಾಣಾಸಿಯಲ್ಲಿ ಮಾಸ್ಕ್ ತೊಟ್ಟ ಭಗವಂತ

    ದೇವರನ್ನೂ ಬಿಡದ ಮಾಲಿನ್ಯ – ವಾರಾಣಾಸಿಯಲ್ಲಿ ಮಾಸ್ಕ್ ತೊಟ್ಟ ಭಗವಂತ

    ವಾರಾಣಾಸಿ: ದೆಹಲಿ, ಪಂಜಾಬ್, ನೋಯ್ಡಾ, ಉತ್ತರ ಪ್ರದೇಶದಲ್ಲಿ ಹೆಚ್ಚುತ್ತಿರುವ ವಾಯುಮಾಲಿನ್ಯದಿಂದ ಜನರು ಉಸಿರಾಡಲು ಕಷ್ಟಪಡುತ್ತಿದ್ದಾರೆ. ಕೇವಲ ಮನುಷ್ಯ ಮಾತ್ರವಲ್ಲ ದೇವರಿಗೂ ಈ ಮಾಲಿನ್ಯ ಉಸಿರುಗಟ್ಟಿಸಿದ್ದು, ಭಗವಂತನ ರಕ್ಷಣೆಗಾಗಿ ಪೂಜಾರಿಗಳು ದೇವರ ಮೂರ್ತಿಗಳಿಗೆ ಮಾಸ್ಕ್ ಹಾಕಿ ಪೂಜಿಸುತ್ತಿದ್ದಾರೆ.

    ಹೌದು. ವಿಚಿತ್ರ ಎನಿಸಿದರು ಇದು ಸತ್ಯ. ಭಾರತ ಪ್ರಸಿದ್ಧ ಪುಣ್ಯಕ್ಷೇತ್ರಗಳಲ್ಲಿ ಒಂದಾದ ವಾರಾಣಾಸಿಯಲ್ಲಿ ವಾಯುಮಾಲಿನ್ಯ ಮಿತಿಮೀರಿದ್ದು, ಇಲ್ಲಿ ಜನರು ಮಾತ್ರವಲ್ಲ ದೇವರು ಕೂಡ ಮಾಸ್ಕ್ ಧರಿಸುತ್ತಿದ್ದಾನೆ. ಮಾಲಿನ್ಯದಿಂದ ರಕ್ಷಿಸಲು ಇಲ್ಲಿನ ದೇಗುಲಗಳಲ್ಲಿ ಪೂಜಾರಿಗಳು ದೇವರ ಮೂರ್ತಿಗೆ ಮಾಸ್ಕ್ ಹಾಕಿದ್ದಾರೆ. ಮೂಗು, ಬಾಯಿ ಮುಚ್ಚಿಕೊಂಡು ಮಾಸ್ಕ್ ತೊಟ್ಟ ದೇವರ ದರ್ಶನವನ್ನೇ ಭಕ್ತರು ಪಡೆಯಬೇಕಾದ ಪರಿಸ್ಥಿತಿ ಇಲ್ಲಿ ನಿರ್ಮಾಣವಾಗಿದೆ.

    ವಾರಾಣಾಸಿಯಲ್ಲಿಯ ಶಿವ-ಪಾರ್ವತಿ, ಆಂಜನೇಯ, ರಾಮ ಲಕ್ಷಣ ದೇವಾಲಯಗಳಲ್ಲಿ ಈ ರೀತಿ ಮಾಸ್ಕ್ ತೊಟ್ಟ ದೇವರನ್ನು ಕಾಣಬಹುದಾಗಿದೆ. ಈ ಬಗ್ಗೆ ಪೂಜಾರಿಗಳನ್ನ ಕೇಳಿದರೆ, ದೇವರಿಗೆ ವಿಶೇಷ ದಿನಗಳಲ್ಲಿ, ಹಬ್ಬದ ಸಮಯದಲ್ಲಿ ಹೊಸ ಬಟ್ಟೆ ಹಾಕಿ ಅಲಂಕರಿಸುತ್ತೇವೆ. ಅದೇ ರೀತಿ ನಗರದಲ್ಲಿ ಮಾಲಿನ್ಯ ಹೆಚ್ಚಾಗಿರುವುದಕ್ಕೆ ಅದರಿಂದ ರಕ್ಷಿಸಲು ಈ ರೀತಿ ಮೂರ್ತಿ ಮುಖಕ್ಕೆ ಬಟ್ಟೆ, ಮಾಸ್ಕ್ ಕಟ್ಟಿದ್ದೇವೆ ಎಂದಿದ್ದಾರೆ.

    ಪ್ರಸಿದ್ಧ ಪುಣ್ಯಕ್ಷೇತ್ರವಾದ ವಾರಾಣಾಸಿಯಲ್ಲಿನ ದೇಗಾಲಯಗಳಲ್ಲಿ ದೇವರ ಮೂರ್ತಿಗಳನ್ನು ಜೀವಂತ ವಿಗ್ರಹದಂತೆ ಪರಿಗಣಿಸಿ, ಪೂಜಿಸಲಾಗುತ್ತದೆ. ಇಲ್ಲಿನ ದೇವರ ಮೂರ್ತಿಗಳನ್ನು ಚೆನ್ನಾಗಿ ನೋಡಿಕೊಳ್ಳಲಾಗುತ್ತೆ. ಹೀಗಾಗಿ ಬೇಸಿಗೆಯಲ್ಲಿ ಇಲ್ಲಿನ ದೇವರ ವಿಗ್ರಹಗಳು ತಂಪಾಗಿಡಲು ಶ್ರೀಗಂಧವನ್ನು ಹಚ್ಚಲಾಗುತ್ತದೆ. ಚಳಿಗಾಲದಲ್ಲಿ ಉಣ್ಣೆ ಬಟ್ಟೆಗಳಿಂದ ದೇವರನ್ನು ಅಲಂಕರಿಸಿ ಚಳಿಯಿಂದ ರಕ್ಷಿಸಲಾಗುತ್ತದೆ. ಅದೇ ರೀತಿ ಮಾಲಿನ್ಯದಿಂದ ರಕ್ಷಿಸಲು ಈ ಕ್ರಮಕ್ಕೆ ಮುಂದಾಗಿದ್ದೇವೆ ಎಂದು ಅರ್ಚಕರೊಬ್ಬರು ತಿಳಿಸಿದ್ದಾರೆ.

    ದೀಪಾವಳಿ ಬಳಿಕ ವಾರಾಣಾಸಿಯಲ್ಲಿ ಮಾಲಿನ್ಯ ಪ್ರಮಾಣ 2.5 ಪಿಎಂ ಮಟ್ಟಕ್ಕೆ ತಲುಪಿದೆ. ಇತ್ತ ಉತ್ತರ ಪ್ರದೇಶದಲ್ಲಿ ವಾಯುಮಾಲಿನ್ಯ ಮಟ್ಟ ಹೆಚ್ಚಿರುವ ಹಿನ್ನೆಲೆ ಸಿಎಂ ಯೋಗಿ ಆದಿತ್ಯನಾಥ್ ಮಾಲಿನ್ಯ ನಿಯಂತ್ರಣಕ್ಕೆ ದೆಹಲಿ ಸರ್ಕಾರ ಜಾರಿಗೆ ತಂದಿರುವಂತೆ ಸಮ-ಬೆಸ ಸಂಖ್ಯೆಗಳ ವಾಹನಸಂಚಾರವನ್ನು ಲಕ್ನೋದಲ್ಲಿ ಅಳವಡಿಸಿಕೊಳ್ಳುವ ಕುರಿತು ಅಧಿಕಾರಿಗಳ ಸೂಚಿಸಿದ್ದಾರೆ.

    https://twitter.com/Real_Anuj/status/1192027224821469189

    ಹಾಗೆಯೇ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಿತಿಮೀರಿದ ವಾಯುಮಾಲಿನ್ಯ ಸಂಬಂಧ ಹರ್ಯಾಣ, ಪಂಜಾಬ್, ಉತ್ತರ ಪ್ರದೇಶದ ಮುಖ್ಯ ಕಾರ್ಯದರ್ಶಿಗಳಿಗೆ ಸುಪ್ರೀಂಕೋರ್ಟ್ ಛೀಮಾರಿ ಹಾಕಿದೆ. ಯಾವುದೇ ದೇಶದಲ್ಲಿ ಕೃಷಿ ತ್ಯಾಜ್ಯ ಸುಡಲು ಸರ್ಕಾರಗಳು ಅನುಮತಿ ಕೊಟ್ಟಿಲ್ಲ. ವಾಯುಮಾಲಿನ್ಯ ತಡೆ ಕ್ರಮಗಳನ್ನು ಕಟ್ಟು ನಿಟ್ಟಾಗಿ ಪಾಲಿಸದ ಅಧಿಕಾರಿಗಳು, ರೈತರ ಮೇಲೆ ಗೂಬೆ ಕೂರಿಸ್ತಿದ್ದೀರಾ? ನಿಮಗೆ ನಾಚಿಕೆ ಆಗುದಿಲ್ಲವೇ ಎಂದು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಬುಧವಾರ ತರಾಟೆಗೆ ತೆಗೆದುಕೊಂಡಿತ್ತು.

  • ದುರ್ಬಲರಂತೆ ಬಂದರೂ ಕೋಚ್ ಉತ್ತಮ ತರಬೇತಿ ನೀಡಿದ್ರು- ಮುಷ್ಫಿಕರ್ ರಹೀಮ್

    ದುರ್ಬಲರಂತೆ ಬಂದರೂ ಕೋಚ್ ಉತ್ತಮ ತರಬೇತಿ ನೀಡಿದ್ರು- ಮುಷ್ಫಿಕರ್ ರಹೀಮ್

    ನವದೆಹಲಿ: ಟಿ-20 ಸರಣಿಯ ಮೊದಲ ಪಂದ್ಯದಲ್ಲಿ ಬಾಂಗ್ಲಾದೇಶವು ಭಾರತವನ್ನು 7 ವಿಕೆಟ್‌ಗಳಿಂದ ಸೋಲಿಸಿ, ಐತಿಹಾಸಿಕ ಗೆಲುವಿಗೆ ಸಾಕ್ಷಿಯಾಯಿತು. ದೆಹಲಿಯ ವಾಯುಮಾಲಿನ್ಯವು ಗಂಭೀರ ಮಟ್ಟದಲ್ಲಿರುವುದರಿಂದ ಆರೋಗ್ಯ ತುರ್ತು ಪರಿಸ್ಥಿತಿ ಎದುರಾಗಿದೆ. ಬಾಂಗ್ಲಾ ತಂಡದ ಗೆಲುವಿಗೆ ಪ್ರಮುಖ ಪಾತ್ರವಹಿಸಿದ್ದ ಮುಷ್ಫಿಕರ್ ರಹೀಮ್, ಇದು ನನಗೆ ವಿಶೇಷ ವಿಷಯವಲ್ಲ. ಮಾಲಿನ್ಯಕ್ಕಿಂತ ಭಾರತೀಯ ಬೌಲರ್‌ಗಳನ್ನು ಎದುರಿಸುವ ಬಗ್ಗೆ ನನಗೆ ಹೆಚ್ಚು ಚಿಂತೆ ಇತ್ತು ಎಂದು ಹೇಳಿಕೊಂಡಿದ್ದಾರೆ.

    ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆಯುವಾಗ ಮಾತನಾಡಿದ ಮುಷ್ಫಿಕರ್ ರಹೀಮ್, ನಾವು ಪರಿಸ್ಥಿತಿಯ ಬಗ್ಗೆ ಚಿಂತಿಸದೆ ಪಂದ್ಯವನ್ನು ಆಡಿದ್ದೇವೆ. ಭಾರತಕ್ಕೆ ಭೇಟಿ ನೀಡಿದಾಗಿನಿಂದಲೂ ಇದೇ ರೀತಿಯ ಹವಾಮಾನವನ್ನು ಎದುರಿಸಿದ್ದೇವೆ. ಅದಕ್ಕಾಗಿಯೇ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿದ್ದೇವೆ. ಭಾರತದ ನೆಲದಲ್ಲಿಯೇ ಟೀಂ ಇಂಡಿಯಾವನ್ನು ಸೋಲಿಸಿದ್ದೇವೆ. ಇದಕ್ಕಿಂತ ಉತ್ತಮ ಸಾಧನೆ ಮತ್ತೊಂದಿಲ್ಲ. ಈ ಪಂದ್ಯದಲ್ಲಿ ನನಗೆ ಸೌಮ್ಯ ಸರ್ಕಾರ್ ಸಾಥ್ ಸಾಥ್ ನೀಡಿ ತಂಡದ ಗೆಲುವಿಗೆ ಅವಕಾಶ ಮಾಡಿಕೊಟ್ಟರು ಎಂದು ತಿಳಿಸಿದರು. ಇದನ್ನೂ ಓದಿ: ಕ್ಯಾಚ್ ಡ್ರಾಪ್, ಕೊನೆಯಲ್ಲಿ ಸತತ 4‌ ಬೌಂಡರಿ – ಗೆದ್ದು ಇತಿಹಾಸ ನಿರ್ಮಿಸಿದ ಬಾಂಗ್ಲಾ

    ನಾವು ಇಲ್ಲಿಗೆ ಬಂದಿರುವುದು ದುರ್ಬಲರಂತೆ. ಕಳೆದ ಮೂರು ವಾರಗಳಲ್ಲಿ ತಂಡದ ಕೋಚ್ ನಮಗೆ ಉತ್ತಮ ತರಬೇತಿ ನೀಡಿದ್ದಾರೆ. ಇದಕ್ಕಾಗಿ ನಾನು ಅವರಿಗೆ ಧನ್ಯವಾದ ಹೇಳಲು ಬಯಸುತ್ತೇನೆ ಎಂದರು.

    ಟಿ-20 ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡವು ಬಾಂಗ್ಲಾದೇಶಕ್ಕೆ 149 ರನ್‌ಗಳ ಗುರಿ ನೀಡಿತ್ತು. ಇದನ್ನು ಬಾಂಗ್ಲಾದೇಶದ ತಂಡವು 19.3 ಓವರ್‌ಗಳಲ್ಲಿ 3 ವಿಕೆಟ್‌ಗಳ ನಷ್ಟಕ್ಕೆ 154 ರನ್ ಹೊಡೆದು ಜಯಗಳಿಸಿತು. ಬಾಂಗ್ಲಾ ಪರ ಮುಷ್ಫಿಕರ್ ರಹೀಮ್ ಅತ್ಯಧಿಕ (60 ರನ್) ಮತ್ತು ಸೌಮ್ಯ ಸರ್ಕಾರ್ 39 ರನ್ ಗಳಿಸಿದ್ದರು. ಮೂರನೇ ವಿಕೆಟಿಗೆ ಇವರಿಬ್ಬರೂ 60 ರನ್ ಜೊತೆಯಾಟವಾಡಿ ಬಾಂಗ್ಲಾ ತಂಡವನ್ನು ಗೆಲುವಿನ ಸಮೀಪ ತಂದರು.

    ವಾಯುಮಾಲಿನ್ಯದ ವಿಪರೀತ ಪರಿಸ್ಥಿತಿಯ ಮಧ್ಯೆ ಅದ್ಭುತವಾಗಿ ಆಡಿದ ಮತ್ತು ಪ್ರದರ್ಶನ ನೀಡಿದ ಉಭಯ ತಂಡಗಳಿಗೆ ಬಿಸಿಸಿಐ ನೂತನ ಅಧ್ಯಕ್ಷ ಸೌರವ್ ಗಂಗೂಲಿ ಧನ್ಯವಾದ ತಿಳಿಸಿದ್ದಾರೆ.

    ಸ್ಟೇಡಿಯಂ ಭರ್ತಿ:
    ದೆಹಲಿಯಲ್ಲಿ ಪಂದ್ಯಕ್ಕೂ ಮುನ್ನ ಮಾಲಿನ್ಯದ ಬಗ್ಗೆ ಸಾಕಷ್ಟು ಚರ್ಚೆ ನಡೆದಿತ್ತು. ಇದರ ಹೊರತಾಗಿಯೂ ಅರುಣ್ ಜೇಟ್ಲಿ ಕ್ರೀಡಾಂಗಣವು ಭಾನುವಾರ ಸಂಪೂರ್ಣ ಭರ್ತಿಯಾಗಿತ್ತು. ಈ ಮಾಲಿನ್ಯವು ಆಟಗಾರರಿಗೆ ಮತ್ತು ಪ್ರೇಕ್ಷಕರಿಗೆ ಅಪಾಯಕಾರಿ ಎಂದು ಹೇಳಲಾಗಿತ್ತು. ಆದರೆ ಇದು ಕ್ರಿಕೆಟ್ ಅಭಿಮಾನಿಗಳ ಮೇಲೆ ಯಾವುದೇ ಪರಿಣಾಮ ಬೀರಲಿಲ್ಲ. ಜೊತೆಗೆ ಪಂದ್ಯ ಪ್ರಾರಂಭವಾಗುವ ಮುನ್ನ ಸುಮಾರು 46 ಸಾವಿರ ಪ್ರೇಕ್ಷಕರ ಸಾಮರ್ಥ್ಯ ಹೊಂದಿರುವ ಕ್ರೀಡಾಂಗಣ ಸಂಪೂರ್ಣವಾಗಿ ತುಂಬಿತ್ತು.

  • ದೆಹಲಿಯಲ್ಲಿ ಮಾಲಿನ್ಯ ಹೆಚ್ಚಳ – ವಿದ್ಯಾರ್ಥಿಗಳಿಗೆ ಮಾಸ್ಕ್ ವಿತರಿಸಿದ ಕೇಜ್ರಿವಾಲ್

    ದೆಹಲಿಯಲ್ಲಿ ಮಾಲಿನ್ಯ ಹೆಚ್ಚಳ – ವಿದ್ಯಾರ್ಥಿಗಳಿಗೆ ಮಾಸ್ಕ್ ವಿತರಿಸಿದ ಕೇಜ್ರಿವಾಲ್

    ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ವಾಯು ಮಾಲಿನ್ಯ ಮಟ್ಟ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಇಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ನಗರದ ಶಾಲಾ ವಿದ್ಯಾರ್ಥಿಗಳಿಗೆ ಮಾಸ್ಕ್‌ಗಳನ್ನು ವಿತರಿಸಿದ್ದಾರೆ.

    ದೆಹಲಿಯ ನೆರೆ ರಾಜ್ಯಗಳಲ್ಲಿ ಕೃಷಿ ತ್ಯಾಜ್ಯ ಸುಡುವುದರಿಂದ ಉಂಟಾಗಿರುವ ಹೊಗೆ ನಗರದಲ್ಲಿ ವಾಯು ಮಾಲಿನ್ಯ ಮಟ್ಟ ಏರಿಕೆಯಾಗಿ ಪರಿಸ್ಥಿತಿ ಹದಗೆಟ್ಟಿದೆ. ಅದರಲ್ಲೂ ಈ ವರ್ಷ ವಾಯು ಮಾಲಿನ್ಯ ಸಮಸ್ಯೆ ದ್ವಿಗುಣಗೊಂಡಿದ್ದು ದೆಹಲಿ ಸರ್ಕಾರಕ್ಕೆ ತಲೆನೋವು ತಂದಿಟ್ಟಿದೆ. ಮೇಜರ್ ಧ್ಯಾನ್ ಚಂದ್ ರಾಷ್ಟ್ರೀಯ ಕ್ರೀಡಾಂಗಣ ಮತ್ತು ಇಂಡಿಯಾ ಗೇಟ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಾಯು ಮಾಲಿನ್ಯದ ಮಟ್ಟ ಹೆಚ್ಚಿದೆ ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ವರದಿ ಮಾಡಿದೆ.

    ದೆಹಲಿಯಲ್ಲಿ ವಾಯು ಮಾಲಿನ್ಯ ಮಟ್ಟ ಹೆಚ್ಚಾಗುತ್ತಿದ್ದು ಜನರು ಉಸಿರಾಡಲು ತೊಂದರೆ ಪಡುತ್ತಿದ್ದಾರೆ. ಮಾಲಿನ್ಯದಿಂದ ಮಕ್ಕಳು ಕೂಡ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರ ಆರೋಗ್ಯ ಮೇಲೆ ನಿಗಾ ವಹಿಸಲು ಖಾಸಗಿ ಮತ್ತು ಸರ್ಕಾರಿ ಶಾಲೆಯ ಪ್ರತಿ ವಿದ್ಯಾರ್ಥಿಗೂ ಎರಡು ಮಾಸ್ಕ್‌ಗಳನ್ನು ವಿತರಿಸುತ್ತಿದ್ದೇವೆ ಎಂದು ಕೇಜ್ರಿವಾಲ್ ತಿಳಿಸಿದರು.

    ನೆರೆಯ ರಾಜ್ಯಗಳಲ್ಲಿ ಕೃಷಿ ತ್ಯಾಜ್ಯ ಸುಡುವಿಕೆಯ ಹೊಗೆಯಿಂದಾಗಿ ದೆಹಲಿ ಗ್ಯಾಸ್ ಚೇಂಬರ್ ಆಗಿ ಮಾರ್ಪಟ್ಟಿದೆ. ಈ ವಿಷಕಾರಿ ಗಾಳಿಯಿಂದ ನಾವು ನಮ್ಮನ್ನು ರಕ್ಷಿಸಿಕೊಳ್ಳುವುದು ಬಹಳ ಮುಖ್ಯವಾಗಿದ್ದು, ಖಾಸಗಿ ಮತ್ತು ಸರ್ಕಾರಿ ಶಾಲೆಗಳ ಮೂಲಕ ನಾವು ಇಂದು 50 ಲಕ್ಷ ಮಾಸ್ಕ್ ವಿತರಿಸಲು ಪ್ರಾರಂಭಿಸಿದ್ದೇವೆ. ಅಗತ್ಯವಿದ್ದಾಗಲೆಲ್ಲಾ ಅವುಗಳನ್ನು ಬಳಸಬೇಕೆಂದು ನಾನು ದೆಹಲಿಯ ಎಲ್ಲಾ ಜನರನ್ನು ಕೋರಿಕೊಳ್ಳುತ್ತಿದ್ದೇನೆ ಎಂದು ಬರೆದು, ಉಸಿರಾಡಲು ಸಮಸ್ಯೆ ಎದುರಿಸುತ್ತಿರುವ ದೆಹಲಿ ನಿವಾಸಿಗಳಿಗೆ 50 ಲಕ್ಷಕ್ಕೂ ಹೆಚ್ಚು ಎನ್ 95 ಮಾಸ್ಕ್ ವಿತರಿಸುವ ಬಗ್ಗೆ ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.

    ವಾಯು ಮಾಲಿನ್ಯದಿಂದಾಗಿ ದೆಹಲಿಯ ಶಾಲಾ-ಕಾಲೇಜುಗಳಲ್ಲಿ ಹೊರಾಂಗಣ ಕ್ರೀಡಾಕೂಟಗಳನ್ನು ನಡೆಸದಂತೆ ಸರ್ಕಾರ ಸೂಚಿಸಿದೆ. ಹಾಗೆಯೇ ಓ95 ಮಾಸ್ಕ್‌ಗಳನ್ನೇ ಪ್ರತಿದಿನ ದೆಹಲಿ ನಿವಾಸಿಗಳು ಬಳಸಿ. ಇದು ಮೂಗು ಮತ್ತು ಬಾಯಿಯನ್ನು ಮುಚ್ಚುವುದರ ಜೊತೆಗೆ 95% ಮಾಲಿನ್ಯಕಾರಕಗಳನ್ನು ಫಿಲ್ಟರ್ ಮಾಡುತ್ತದೆ. ಆಗ ಉಸಿರಾಡಲು ಕೊಂಚ ಸುಲಭವಾಗುತ್ತದೆ. ಹೀಗಾಗಿ ಈ ಮಾಸ್ಕ್‌ಗಳನ್ನೇ ಜನರಿಗೆ ಬಳಸುವಂತೆ ಸರ್ಕಾರ ಶಿಫಾರಸು ಮಾಡಿದೆ.