Tag: ವಾಯು ರಕ್ಷಣಾ ವ್ಯವಸ್ಥೆ

  • ಆಪರೇಷನ್ ಸಿಂಧೂರ ವೇಳೆ S-400 ಯಶಸ್ವಿ ಕಾರ್ಯಾಚರಣೆ; S-500 ರಕ್ಷಣಾ ವ್ಯವಸ್ಥೆ ಖರೀದಿಗೂ ಆಸಕ್ತಿ ತೋರಿದ ಭಾರತ

    ಆಪರೇಷನ್ ಸಿಂಧೂರ ವೇಳೆ S-400 ಯಶಸ್ವಿ ಕಾರ್ಯಾಚರಣೆ; S-500 ರಕ್ಷಣಾ ವ್ಯವಸ್ಥೆ ಖರೀದಿಗೂ ಆಸಕ್ತಿ ತೋರಿದ ಭಾರತ

    ನವದೆಹಲಿ: ಆಪರೇಷನ್ ಸಿಂಧೂರ ಸಮಯದಲ್ಲಿ ಎಸ್-400 ವಾಯು ರಕ್ಷಣಾ ವ್ಯವಸ್ಥೆಗಳ (S-400 Air Defence Systems) ಯಶಸ್ವಿ ಕಾರ್ಯಕ್ಷಮತೆಯ ನಂತರ ಭಾರತವು ರಷ್ಯಾದಿಂದ (India – Russia) ದೀರ್ಘ-ಶ್ರೇಣಿಯ ಮೇಲ್ಮೈಯಿಂದ ಆಕಾಶಕ್ಕೆ ಚಿಮ್ಮುವ ಕ್ಷಿಪಣಿ ವ್ಯವಸ್ಥೆಯ ಎರಡು ಸ್ಕ್ವಾಡ್ರನ್‌ಗಳನ್ನು ಹೆಚ್ಚುವರಿಯಾಗಿ ಖರೀದಿಸಲು ಆಸಕ್ತಿ ತೋರಿದೆ ಎಂದು ವರದಿಗಳು ತಿಳಿಸಿವೆ.

    ಆಪರೇಷನ್ ಸಿಂಧೂರ (Operation Sindoor) ಕಾರ್ಯಾಚರಣೆ ವೇಳೆ ಪಾಕಿಸ್ತಾನ ವಾಯುಪಡೆಯ ಬಹು ಯುದ್ಧ ವಿಮಾನಗಳು ಹಾಗೂ ಡ್ರೋನ್‌ಗಳನ್ನು ಹೊಡೆದುರುಳಿಸುವ ಮೂಲಕ ದಾಳಿಯನ್ನು ವಿಫಲಗೊಳಿಸುವಲ್ಲಿ S-400 (ಸುದರ್ಶನ ಚಕ್ರ) ವ್ಯವಸ್ಥೆಗಳು ಪ್ರಮುಖ ಪಾತ್ರ ವಹಿಸಿದ್ದವು. ಹೀಗಾಗಿ ಇನ್ನಷ್ಟು S-400 ವಾಯುರಕ್ಷಣಾ ವ್ಯವಸ್ಥೆ ಖರೀದಿಸಲು ಮುಂದಾಗಿದೆ. ಇದರೊಂದಿಗೆ ಮುಂದುವರಿದ S-500 ವ್ಯವಸ್ಥೆಯನ್ನೂ ಖರೀದಿಸಲು ಆಸಕ್ತಿ ತೋರಿಸಿದೆ. ಇದು S-400 ಗಿಂತ ಹೆಚ್ಚಿನ ವ್ಯಾಪ್ತಿ ಮತ್ತು ಸಾಮರ್ಥ್ಯ ಹೊಂದಿದೆ. ಇದಕ್ಕೆ ಇನ್ನೂ ರಷ್ಯಾದಿಂದ ಅನುಮೋದನೆ ದೊರೆತಿಲ್ಲ ಎನ್ನಲಾಗಿದೆ. ಇದನ್ನೂ ಓದಿ: ಆಪರೇಷನ್ ಸಿಂಧೂರ ವೇಳೆ ನೌಕಾದಳದಿಂದ ಮಿಸೈಲ್ ದಾಳಿಗೆ ಟಾರ್ಗೆಟ್ ಫಿಕ್ಸ್ ಆಗಿತ್ತು – ಆದ್ರೆ ಅಂತಿಮ ಆದೇಶ ಬರಲಿಲ್ಲ

    ಭಾರತವು 2018 ರಲ್ಲಿ ರಷ್ಯಾ ಜೊತೆ ಐದು S-400 ರೆಜಿಮೆಂಟ್‌ಗಳ ಖರೀದಿಗಾಗಿ 5.43 ಶತಕೋಟಿ ಡಾಲರ್‌ ಒಪ್ಪಂದಕ್ಕೆ ಸಹಿ ಹಾಕಿತ್ತು. ಇಲ್ಲಿಯವರೆಗೆ, ಮೂರು ರೆಜಿಮೆಂಟ್‌ಗಳನ್ನು ತಲುಪಿಸಲಾಗಿದೆ ಮತ್ತು ನಿರ್ಣಾಯಕ ಕಾರ್ಯತಂತ್ರದ ರಂಗಗಳಲ್ಲಿ ನಿಯೋಜಿಸಲಾಗಿದೆ. ಇದನ್ನೂ ಓದಿ: ಚೀನಾದೊಂದಿಗೆ ರಾಜತಾಂತ್ರಿಕ ಸಂಬಂಧ ಸುಧಾರಿಸಲು 4 ಹಂತದ ಯೋಜನೆ ಪ್ರಸ್ತಾಪಿಸಿದ ರಾಜನಾಥ್ ಸಿಂಗ್

    ಭಾರತೀಯ ರಕ್ಷಣಾ ಪಡೆಗಳಿಂದ ʻಸುದರ್ಶನ ಚಕ್ರʼ ಎಂದು ಮರುನಾಮಕರಣಗೊಂಡ S-400 ವ್ಯವಸ್ಥೆಯು 380 ಕಿಲೋಮೀಟರ್‌ಗಳ ವ್ಯಾಪ್ತಿಯಲ್ಲಿ ಕಾರ್ಯತಂತ್ರದ ಬಾಂಬರ್‌ಗಳು, ಫೈಟರ್ ಜೆಟ್‌ಗಳು, ಕಣ್ಗಾವಲು ವಿಮಾನಗಳು, ಕ್ಷಿಪಣಿಗಳು ಮತ್ತು ಡ್ರೋನ್‌ಗಳಂತಹ ಪ್ರತಿಕೂಲ ಗುರಿಗಳನ್ನು ಪತ್ತೆಹಚ್ಚುವ ಮತ್ತು ತಟಸ್ಥಗೊಳಿಸುವ ಸಾಮರ್ಥ್ಯ ಹೊಂದಿದೆ. ಇದನ್ನೂ ಓದಿ: ವಿಮಾನ ದುರಂತವಾಗಿ ದಿನಗಳೂ ಕಳೆದಿರಲಿಲ್ಲ – ಪಾರ್ಟಿ ಮೂಡ್‌ನಲ್ಲಿದ್ದ ಉದ್ಯೋಗಿಗಳ ವಜಾಗೊಳಿಸಿದ Air India ವೆಂಚರ್‌

  • ಚೀನಿ ಏರ್‌ ಡಿಫೆನ್ಸ್‌ ಜಾಮ್‌ ಮಾಡಿ 23 ನಿಮಿಷದಲ್ಲಿ ಮುಗಿಯಿತು ಕಾರ್ಯಾಚರಣೆ – ಭಾರತದ ದಾಳಿಯ ರೋಚಕ ಕಥೆ ಓದಿ

    ಚೀನಿ ಏರ್‌ ಡಿಫೆನ್ಸ್‌ ಜಾಮ್‌ ಮಾಡಿ 23 ನಿಮಿಷದಲ್ಲಿ ಮುಗಿಯಿತು ಕಾರ್ಯಾಚರಣೆ – ಭಾರತದ ದಾಳಿಯ ರೋಚಕ ಕಥೆ ಓದಿ

    ನವದೆಹಲಿ: ಭಾರತೀಯ ವಾಯು ಸೇನೆ (IAF) ಕೇವಲ 23 ನಿಮಿಷದಲ್ಲಿ ಚೀನಾದ ವಾಯು ರಕ್ಷಣಾ ವ್ಯವಸ್ಥೆಯನ್ನು (Pakistan’s Chinese-Supplied Air Defence Systems) ಬೈಪಾಸ್‌, ಜಾಮ್‌ ಮಾಡಿ ಆಪರೇಷನ್‌ ಸಿಂಧೂರ ಕಾರ್ಯಾಚರಣೆ ನಡೆಸಿದ್ದ ವಿಚಾರ ಈಗ ಬಳಕಿಗೆ ಬಂದಿದೆ.

    ಹೌದು. ಭಾರತ  ಮೇ 7ರ ಬುಧವಾರ ನಸುಕಿನ ಜಾವ ಆಪರೇಷನ್‌ ಸಿಂಧೂರ (Operation Sindoor) ಹೆಸರಿನಲ್ಲಿ ಕಾರ್ಯಾಚರಣೆ ನಡೆಸಿ 9 ಸ್ಥಳಗಳಲ್ಲಿದ್ದ ಉಗ್ರರ ನೆಲೆಗಳ ಮೇಲೆ ಕ್ಷಿಪಣಿ, ಡ್ರೋನ್‌ ದಾಳಿ ನಡೆಸಿತ್ತು. ಈ ದಾಳಿಯನ್ನು ಹೇಗೆ ವ್ಯವಸ್ಥಿತವಾಗಿ ನಡೆಸಲಾಯಿತು ಎಂಬುದರ ಬಗ್ಗೆ ಭಾರತ ಸರ್ಕಾರವೇ ಅಧಿಕೃತವಾಗಿ ಮಾಧ್ಯಮಗಳಿಗೆ ತಿಳಿಸಿದೆ.

     

    ದಾಳಿ ನಡೆಸಿದ್ದು ಹೇಗೆ?
    ಭಾರತೀಯ ವಾಯು ಸೇನೆ ಈ ಬಾರಿ ಪಾಕ್‌ ಆಕ್ರಮಿತ ಕಾಶ್ಮೀರದ (POK) ಒಳಗೆ ನುಗ್ಗಿರಲಿಲ್ಲ. ಭಾರತದ ಒಳಗಡೆಯಿಂದಲೇ ದಾಳಿ ನಡೆಸಿತ್ತು. ಈ ದಾಳಿ ಯಶಸ್ವಿಯಾಗಬೇಕಾದರೆ ಹಲವಾರು ಸವಾಲುಗಳಿತ್ತು. ಇದನ್ನೂ ಓದಿ: ಡ್ರೋನ್‌ಗಳನ್ನು ಧ್ವಂಸ ಮಾಡೋ ಭಾರ್ಗವಾಸ್ತ್ರ ಪ್ರಯೋಗ ಯಶಸ್ವಿ!

    ತನ್ನ ಆಪ್ತ ದೇಶವಾದ ಪಾಕಿಸ್ತಾನಕ್ಕೆ ಚೀನಾ HQ-9 ವಾಯು ರಕ್ಷಣಾ ವ್ಯವಸ್ಥೆಯನ್ನು ನೀಡಿತ್ತು. ಈ ವಾಯು ರಕ್ಷಣಾ ವ್ಯವಸ್ಥೆಯ ಬೇಧಿಸಿ ಭಾರತದ ಕ್ಷಿಪಣಿಗಳು ನಿಗದಿತ ಗುರಿಯನ್ನು ತಲುಪಬೇಕಿತ್ತು. ಸುಮಾರು 300 ಕಿ.ಮೀ ದೂರದಿಂದಲೇ ಬರುತ್ತಿರುವ ಕ್ಷಿಪಣಿ, ಡ್ರೋನ್‌, ಯುದ್ಧ ವಿಮಾನಗಳನ್ನು ಪತ್ತೆ ಹಚ್ಚುವ ಸಾಮರ್ಥ್ಯ HQ-9 ಹೊಂದಿತ್ತು.

    ಪಾಕಿಸ್ತಾನ ಲಾಹೋರ್ ಮತ್ತು ಇತರ ಸ್ಥಳಗಳಲ್ಲಿ ವಾಯು ರಕ್ಷಣಾ ವ್ಯವಸ್ಥೆಗಳನ್ನು ನಿಯೋಜಿಸಿತ್ತು. ಹೀಗಾಗಿ ದಾಳಿ ನಡೆಸುವ ಮೊದಲು ವಾಯು ಸೇನೆ ಮಾಡಿದ ಕೆಲಸ ಏನೆಂದರೆ ಬಹುಕೋಟಿ ವೆಚ್ಚದ ವಾಯು ರಕ್ಷಣಾ ವ್ಯವಸ್ಥೆಯನ್ನು ಬೈಪಾಸ್ ಮಾಡಿ ಜಾಮ್‌ ಮಾಡಿತ್ತು.

    ವಾಯು ರಕ್ಷಣಾ ವ್ಯವಸ್ಥೆಯನ್ನು ಜಾಮ್‌ ಮಾಡಿದ ನಂತರ ಭಾರತ ಪಾಕಿಸ್ತಾನದ ಒಳಗಡೆ ಪ್ರವೇಶ ಮಾಡದೇ ಭಾರತದ ಒಳಗಡೆದಿಂದಲೇ ದಾಳಿ ನಡೆಸಿತು. ರಫೇಲ್‌ ಯುದ್ಧ ವಿಮಾನದ ಮೂಲಕ ಪಾಕ್‌ನಲ್ಲಿರುವ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿದರೆ, ಪಾಕ್‌ ಆಕ್ರಮಿತ ಕಾಶ್ಮೀರದ ಒಳಗಡೆ ಇರುವ ಉಗ್ರರ ನೆಲೆಗಳ ಮೇಲೆ ಡ್ರೋನ್‌ ದಾಳಿ ನಡೆಸಿ ಧ್ವಂಸ ಮಾಡಿತು.

    ಈ ದಾಳಿಯ ಸಮಯದಲ್ಲಿ ಭಾರತ ತನ್ನ ಯಾವುದೇ ಸ್ವತ್ತುಗಳನ್ನು ನಷ್ಟವಾಗಿಲ್ಲ. ನಿಖರವಾಗಿ ಕಾರ್ಯಾಚರಣೆ ಮಾಡಿ ಉಗ್ರರ ನೆಲೆಗಳನ್ನು ಧ್ವಂಸ ಮಾಡಿದೆ ಎಂದು ಸರ್ಕಾರ ತಿಳಿಸಿದೆ.

    ಪಾಕ್‌ನಿಂದ ಬರುತ್ತಿದ್ದ ಡ್ರೋನ್‌ ಮತ್ತು ಕ್ಷಿಪಣಿಗಳನ್ನು ತೊಡೆದು ಹಾಕಲು ಬರಾಕ್ -8 ಕ್ಷಿಪಣಿ ವ್ಯವಸ್ಥೆ, ಎಸ್ -400 ಟ್ರಯಂಫ್ ವಾಯು ರಕ್ಷಣಾ ವ್ಯವಸ್ಥೆಗಳು, ಆಕಾಶ್‌ ಕ್ಷಿಪಣಿ ವ್ಯವಸ್ಥೆ ಮತ್ತು ಸ್ಥಳೀಯವಾಗಿ ಅಭಿವೃದ್ಧಿಪಡಿಸಿದ ಡ್ರೋನ್ ವಿರೋಧಿ ಉಪಕರಣಗಳನ್ನು ನಿಯೋಜಿಸಲಾಗಿತ್ತು. ಇದರಿಂದಾಗಿ ಮೇ 7 ರ ರಾತ್ರಿ 15 ಭಾರತೀಯ ನಗರಗಳ ಮೇಲೆ ದಾಳಿಗೆ ಮುಂದಾಗಿದ್ದ ಪಾಕ್‌ ಪ್ರಯತ್ನಗಳನ್ನು ಯಶಸ್ವಿಯಾಗಿ ವಿಫಲಗೊಳಿಸಲಾಯಿತು ಎಂದು ಹೇಳಿದೆ. ಇದನ್ನೂ ಓದಿ: Boycott Turkey – ಸೇಬು, ಚೆರ‍್ರಿ, ಮಾರ್ಬಲ್‌ಗಳ ಆಮದು ಬ್ಯಾನ್‌ಗೆ ನಿರ್ಧಾರ

    ಅವಂತಿಪೋರಾ, ಶ್ರೀನಗರ, ಜಮ್ಮು, ಪಠಾಣ್‌ಕೋಟ್, ಅಮೃತಸರ, ಕಪುರ್ತಲಾ, ಜಲಂಧರ್, ಲುಧಿಯಾನ, ಆದಂಪುರ, ಭಟಿಂಡಾ, ಚಂಡೀಗಢ, ನಲಿಯಾ, ಫಲೋಡಿ, ಉತ್ತರಲೈ ಮತ್ತು ಭುಜ್ ಸೇರಿದಂತೆ ಉತ್ತರ ಮತ್ತು ಪಶ್ಚಿಮ ಭಾರತದ ಹಲವಾರು ಮಿಲಿಟರಿ ಗುರಿಗಳ ಮೇಲೆ ಡ್ರೋನ್‌ಗಳು ಮತ್ತು ಕ್ಷಿಪಣಿಗಳನ್ನು ಬಳಸಿ ಪಾಕ್‌ ದಾಳಿ ಮಾಡಲು ಪ್ರಯತ್ನಿಸಿತು. ಇವುಗಳನ್ನು ಇಂಟಿಗ್ರೇಟೆಡ್ ಕೌಂಟರ್ ಯುಎಎಸ್ ಗ್ರಿಡ್ ಮತ್ತು ವಾಯು ರಕ್ಷಣಾ ವ್ಯವಸ್ಥೆಗಳಿಂದ ತಟಸ್ಥಗೊಳಿಸಲಾಯಿತು.

    ಮೇ 8 ರ ಬೆಳಗ್ಗೆ ಭಾರತೀಯ ಸಶಸ್ತ್ರ ಪಡೆಗಳು ಪಾಕಿಸ್ತಾನದ ಹಲವಾರು ಸ್ಥಳಗಳಲ್ಲಿದ್ದ ವಾಯು ರಕ್ಷಣಾ ರೇಡಾರ್‌ಗಳು ಮತ್ತು ವ್ಯವಸ್ಥೆಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿತು. ಈ ದಾಳಿಯ ಪರಿಣಾಮ ಲಾಹೋರ್‌ನಲ್ಲಿದ್ದ ವಾಯು ರಕ್ಷಣಾ ವ್ಯವಸ್ಥೆಯನ್ನೇ ನಿಷ್ಕ್ರಿಯಗೊಳಿಸಿತ್ತು.

    ಆಪರೇಷನ್‌ ಸಿಂಧೂರದಲ್ಲಿ ಸ್ವದೇಶಿ ನಿರ್ಮಿತ ವ್ಯವಸ್ಥೆಗಳನ್ನು ಬಳಕೆ ಮಾಡಲಾಗಿದೆ. ಈ ಕಾರ್ಯಾಚರಣೆಯು ಮಿಲಿಟರಿ ಕಾರ್ಯಾಚರಣೆಗಳಲ್ಲಿ ತಾಂತ್ರಿಕ ಸ್ವಾವಲಂಬನೆಯತ್ತ ಸಾಗುತ್ತಿರುವ ಭಾರತದ ಪ್ರಯಾಣದಲ್ಲಿ ಒಂದು ದೊಡ್ಡ ಮೈಲಿಗಲ್ಲು ಎಂದು ಭಾರತ ಸರ್ಕಾರ ಬಣ್ಣಿಸಿದೆ.