ಕನ್ನಡದ ನಟಿ ಶ್ರೀಲೀಲಾ (Sreeleela) ಅವರು ಅಲ್ಲು ಅರ್ಜುನ್ (Allu Arjun) ಜೊತೆ ಹೆಜ್ಜೆ ಹಾಕಿರುವ ‘ಕಿಸ್ಸಿಕ್’ ಸಾಂಗ್ ನ.24ರಂದು ರಿಲೀಸ್ ಆಗಲಿದೆ. ‘ಪುಷ್ಪ 2’ (Pushpa 2) ಸಾಂಗ್ ರಿಲೀಸ್ಗೂ ಮುನ್ನ ಅಮ್ಮನ ಜೊತೆ ಶ್ರೀಲೀಲಾ ವಾರಣಾಸಿಗೆ (Varanasi) ಭೇಟಿ ನೀಡಿದ್ದಾರೆ. ಇದನ್ನೂ ಓದಿ:ದರ್ಶನ್ & ಗ್ಯಾಂಗ್ ವಿರುದ್ಧ 1200 ಪುಟಗಳ ಹೆಚ್ಚುವರಿ ಚಾರ್ಜ್ ಶೀಟ್ ಸಲ್ಲಿಕೆ
ಇನ್ನೂ ಶ್ರೀಲೀಲಾ ಎಂತಹ ಡ್ಯಾನ್ಸರ್ ಎಂಬುದನ್ನು ಈಗಾಗಲೇ ಪ್ರೂವ್ ಮಾಡಿದ್ದಾರೆ. ಹಾಗಾಗಿ ‘ಪುಷ್ಪ 2’ ಚಿತ್ರದಲ್ಲಿ ಅಲ್ಲು ಅರ್ಜುನ್ ಜೊತೆ ಶ್ರೀಲೀಲಾ ಐಟಂ ಸಾಂಗ್ ಮೇಲೆ ಫ್ಯಾನ್ಸ್ಗೆ ಭಾರೀ ನಿರೀಕ್ಷೆಯಿದೆ.
ಅಂದಹಾಗೆ, ‘ಪುಷ್ಪ 2’ ಸಿನಿಮಾ ಇದೇ ಡಿ.5ಕ್ಕೆ ರಿಲೀಸ್ ಆಗಲಿದೆ. ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ (Rashmika Mandanna), ಡಾಲಿ ಧನಂಜಯ, ಫಹಾದ್ ಫಾಸಿಲ್, ಅನಸೂಯ ಸೇರಿದಂತೆ ಅನೇಕರು ನಟಿಸಿದ್ದಾರೆ. ಈ ಚಿತ್ರವನ್ನು ಸುಕುಮಾರ್ ನಿರ್ದೇಶನ ಮಾಡಿದ್ದಾರೆ.
ಉತ್ತರ ಪ್ರದೇಶ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಂದು ತಮ್ಮ ಸಂಸದೀಯ ಕ್ಷೇತ್ರವಾದ ವಾರಣಾಸಿಯಲ್ಲಿ (Varanasi) 6,700 ಕೋಟಿ ರೂ. ಮೌಲ್ಯದ 23 ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದ್ದಾರೆ.
ಭಾನುವಾರ ಪ್ರಧಾನಿಯವರು ನಗರದಲ್ಲಿ ಕಂಚಿ ಮಠದ ವತಿಯಿಂದ ನಡೆಯುತ್ತಿರುವ ಆರ್.ಜೆ ಶಂಕರ ನೇತ್ರಾಲಯವನ್ನು ಉದ್ಘಾಟಿಸಿ ಮಾತನಾಡಿ, ಇಂದು ಕಾಶಿಗೆ ಮಹತ್ವದ ದಿನ. ಮುಂಜಾನೆ ನಾನು ಕಣ್ಣಿನ ಆಸ್ಪತ್ರೆಯನ್ನು ಉದ್ಘಾಟಿಸಿದೆ. ಆರ್.ಜೆ ಶಂಕರ ನೇತ್ರಾಲಯವು ವೃದ್ಧರು ಮತ್ತು ಮಕ್ಕಳಿಗೆ ಸಾಕಷ್ಟು ಸಹಾಯವನ್ನು ಮಾಡುತ್ತದೆ ಎಂದರು. ಇದನ್ನೂ ಓದಿ: ಚನ್ನಪಟ್ಟಣ ಟಿಕೆಟ್ ಕಗ್ಗಂಟು – ದೆಹಲಿಗೆ ಹೊರಟ ವಿಜಯೇಂದ್ರ
ಲಕ್ನೋ: ದಸರಾದಲ್ಲಿ (Mysuru Dasara) ಗಂಗಾರತಿಯಂತೆ (Gangarathi) ಕಾವೇರಿ ಆರತಿ ಮಾಡಬೇಕು ಎನ್ನುವುದು ಆಸೆ ಇದೆ. ಸಾಂಕೇತಿಕವಾಗಿ ಮಾಡುವ ಬಗ್ಗೆ ಚಿಂತಿಸಲಾಗುವುದು. ನಮ್ಮಲ್ಲಿ ಸರ್ಕಾರದಿಂದ ಮಾಡಬೇಕು ಅಂದುಕೊಂಡಿದ್ದೇವೆ. ಕಾವೇರಿ ಆರತಿ ಮಾಡುವ ಬಗ್ಗೆ ಚರ್ಚಿಸಿದಾಗ ಇಲ್ಲಿ ಗಂಗಾರತಿ ಆಯೋಜಕರು ಖುಷಿ ವ್ಯಕ್ತಪಡಿಸಿದ್ದಾರೆ. ಇನ್ನೆರಡು ದಿನಗಳಲ್ಲಿ ಅಧ್ಯಯನ ವರದಿ ನೀಡಲಾಗುವುದು ಎಂದು ವಾರಣಾಸಿಯಲ್ಲಿ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ (N Chaluvarayaswamy) ಹೇಳಿಕೆ ನೀಡಿದ್ದಾರೆ.
ವಾರಣಾಸಿಯಲ್ಲಿ (Varanasi) ಕಾವೇರಿ ಆರತಿ ಅಧ್ಯಯನ ತಂಡದೊಂದಿಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹರಿದ್ವಾರ ಮತ್ತು ವಾರಣಾಸಿಯಲ್ಲಿ ಭಿನ್ನ ಅನುಭವವಾಗಿದೆ. ಗಂಗಾ ಮಹಾ ಸಭಾ ಸೊಸೈಟಿ ಅಡಿಯಲ್ಲಿ ಆರತಿ ಕಾರ್ಯಕ್ರಮ ನಡೆಯುತ್ತಿದೆ. ಹರಿದ್ವಾರದಲ್ಲಿ ನೂರಕ್ಕೂ ಅಧಿಕ ವರ್ಷದ ಅನುಭವ ಇದೆ. ವಾರಣಾಸಿಯಲ್ಲಿ 35 ವರ್ಷಕ್ಕೂ ಹೆಚ್ಚಿನ ಇತಿಹಾಸ ಇದೆ. ಗಂಗಾನದಿಯಂತೆ ಕಾವೇರಿ ಕೂಡಾ ಅತಿ ಮುಖ್ಯವಾದ ನದಿ. ಪ್ರವಾಹ ಬಂದು ಜನರು ಸಾವನ್ನಪ್ಪುತ್ತಿದ್ದ ಸಂದರ್ಭದಲ್ಲಿ ಅದು ನಿಯಂತ್ರಣಕ್ಕೆ ಬರಲಿ ಎಂದು ಆರತಿ ಶುರು ಮಾಡಿದ ಪ್ರತಿತಿ ಇದೆ. ರಾಜ್ಯದಲ್ಲಿ ಒಳ್ಳೆ ಮಳೆಯಾಗಲಿ, ನದಿ ಸಮಸ್ಯೆ ಇತ್ಯರ್ಥವಾಗಲಿ ಎಂದು ನಾವು ಮಾಡಲಿದ್ದೇವೆ ಎಂದರು. ಇದನ್ನೂ ಓದಿ: ದೇಹವನ್ನ ಪೀಸ್ ಪೀಸ್ ಮಾಡಿ ತರಕಾರಿ ಜೋಡಿಸಿದಂತೆ ಫ್ರಿಡ್ಜ್ನಲ್ಲಿ ತುಂಬಿಟ್ಟಿದ್ದ ಹಂತಕ; ಕ್ರೂರತೆಗೆ ಕೊನೆ ಇಲ್ವಾ?
ರಾಜ್ಯದಲ್ಲಿ ಒಳ್ಳೆ ಮಳೆಯಾದಲಿ, ನದಿ ಸಮಸ್ಯೆ ಇತ್ಯರ್ಥ ವಾಗಲಿ ಅಂತಾ ನಾವು ಮಾಡಲಿದ್ದೇವೆ. ಆರತಿ ಎಲ್ಲಿ ಮಾಡಬೇಕು, ಹೇಗೆ ಮಾಡಬೇಕು ಸಿಎಂ, ಡಿಸಿಎಂ ಜೊತೆಗೆ ಚರ್ಚಿಸಿ ನಿರ್ಧಾರ ಮಾಡ್ತೇವೆ. ಅಧಿಕಾರಿಗಳನ್ನು ಕಳುಹಿಸಿ ಇನ್ನು ಹೆಚ್ಚಿನ ಮಾಹಿತಿ ಪಡೆಯಲಿದ್ದೇವೆ. ಒಮ್ಮೆ ಶುರು ಮಾಡಿದ ಮೇಲೆ ನಿಲ್ಲಿಸಬಾರದು. ಯಾರೇ ಬಂದರು ಇದನ್ನ ಮುಂದುವರಿಸಿಕೊಂಡು ಹೋಗಬೇಕು. ಅದಕ್ಕಾಗಿ ಇನ್ನಷ್ಟು ಪರಿಶೀಲನೆ ಮಾಡಲಾಗುವುದು. ಬಳಿಕ ಸೂಕ್ತ ತಿರ್ಮಾನ ಬೆಂಗಳೂರಿನಲ್ಲಿ (Bengaluru) ತಿರ್ಮಾನ ಮಾಡುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ಕೆಲಸದ ಒತ್ತಡದಿಂದ 26ರ ಉದ್ಯೋಗಿ ಸಾವು ಪ್ರಕರಣ; ಕಾರ್ಮಿಕ ಸಚಿವಾಲದಿಂದ ವರದಿ ಕೇಳಿದ ಮಾನವ ಹಕ್ಕುಗಳ ಆಯೋಗ
ಗಂಗಾರತಿ ಮಾದರಿಯಲ್ಲಿ ಕಾವೇರಿ ಆರತಿ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಚಲುವರಾಯಸ್ವಾಮಿ ನೇತೃತ್ವದ ಸುಮಾರು 25ಕ್ಕೂ ಹೆಚ್ಚು ಶಾಸಕರಿರುವ ನಿಯೋಗ ವಾರಣಾಸಿಗೆ ಭೇಟಿ ನೀಡಿದೆ. ಹರಿದ್ವಾರದಲ್ಲಿ ಗಂಗಾರತಿ ಬಗ್ಗೆ ಅಧ್ಯಯನ ಮಾಡಿದ ತಂಡ ವಾರಣಾಸಿಗೆ ತೆರಳಿ ವ್ಯವಸ್ಥೆಯನ್ನು ಅಧ್ಯಯನ ನಡೆಸಿದೆ. ಇದನ್ನೂ ಓದಿ: ತಿರುಪತಿ ಲಡ್ಡು ವಿವಾದ; ಸರ್ಕಾರದ ಸ್ವಾಧೀನದಿಂದ ದೇಗುಲ ಮುಕ್ತಗೊಳಿಸಿ – ಪೇಜಾವರ ಶ್ರೀ
ಮಾಗಡಿ ಶಾಸಕ ಬಾಲಕೃಷ್ಣ ಮಾತನಾಡಿ, ನಾವು ಇದನ್ನು ರಾಜಕೀಯ ಕಾರಣಕ್ಕೆ ಮಾಡುತ್ತಿಲ್ಲ, ಕಾವೇರಿ ನದಿಗೆ ತನ್ನದೇಯಾದ ಇತಿಹಾಸವಿದೆ ಹೀಗಾಗೀ ಆರತಿ ಮಾಡುವ ಚಿಂತನೆ ಮಾಡಿದೆ. ಕಾಂಗ್ರೇಸ್ (Congress) ಸರ್ವ ಧರ್ಮಗಳನ್ನು ಒಂದೇ ರೀತಿಯಲ್ಲಿ ನೋಡುತ್ತದೆ. ಯಾವುದೇ ಸರ್ಕಾರ ಬಂದರು ಇದನ್ನು ಮುಂದುವರಿಸಬೇಕು ಎಂದರು. ಇದನ್ನೂ ಓದಿ: ಕಾಶ್ಮೀರದಿಂದ ಕರ್ನಾಟಕಕ್ಕೆ ಬರುತ್ತಿದ್ದ ಸೇನೆಯ ವಿಶೇಷ ರೈಲನ್ನು ಸ್ಫೋಟಿಸಲು ಯತ್ನ
ವಿಧಾನಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಮಾತನಾಡಿ, ಗಂಗಾನದಿಗೆ ತನ್ನದೇ ಆದ ಇತಿಹಾಸವಿದೆ. ಅದೇ ರೀತಿ ಕಾವೇರಿಗೂ ತನ್ನದೇ ಇತಿಹಾಸ ಇದೆ. ಕಾವೇರಿ ಲಕ್ಷಾಂತರ ರೈತರಿಗೆ ಕೃಷಿಗೆ ಅನುಕೂಲವಾಗಿದೆ. ಕೊಟ್ಯಾಂತರ ಜನರಿಗೆ ಜೀವ ಜಲವಾಗಿದೆ. ಇದಕ್ಕೆ ಕೃತ್ಯಜ್ಞತೆ ಸಲ್ಲಿವುದು ಎನ್ನುವುದು ನನ್ನ ಉದ್ದೇಶ ಹೀಗಾಗೀ ನಾನು ಡಿಸಿಎಂ ಡಿ.ಕೆ ಶಿವಕಿಮಾರ್ (DK Shivakumar) ಜೊತೆಗೆ ಚರ್ಚಿಸಿದೆ ಅವರು ಸಕಾರಾತ್ಮವಾಗಿ ಸ್ಪಂಧಿಸಿದರು. ತಂಡ ಬಂದು ಅಧ್ಯಯನ ಮಾಡಿದ್ದು ಶೀಘ್ರದಲ್ಲಿ ವರದಿ ಸಲ್ಲಿಸಲಾಗುವುದು ಎಂದರು. ಇದನ್ನೂ ಓದಿ: ರಾಜ್ಯದಲ್ಲಿ ರಾಜ್ಯಪಾಲರೇ ವಿರೋಧ ಪಕ್ಷದ ನಾಯಕನಂತೆ ನಡೆದುಕೊಳ್ಳುತ್ತಿದ್ದಾರೆ: ದಿನೇಶ್ ಗುಂಡೂರಾವ್
ಬೆಂಗಳೂರು: ಉತ್ತರ ಭಾರತದಲ್ಲಿ (North India) ನಡೆಯುವ ಗಂಗಾರತಿ (Gangarathi) ಮಾದರಿಯಲ್ಲಿಯೇ ರಾಜ್ಯದಲ್ಲಿ ಕಾವೇರಿ ಆರತಿ ನಡೆಸಲು ತಯಾರಿ ಆರಂಭವಾಗಿದೆ. ಸಂಬಂಧ ಅಧ್ಯಯನ ನಡೆಸಲು ಸಚಿವ ಚಲುವರಾಯಸ್ವಾಮಿ (Cheluvarayaswamy) ನೇತೃತ್ವದ ನಿಯೋಗ ಹರಿದ್ವಾರ ಮತ್ತು ವಾರಾಣಾಸಿಗೆ ತೆರೆಳಿದೆ. ನಿನ್ನೆ ಹರಿದ್ವಾರಕ್ಕೆ ತೆರಳಿರುವ ನಿಯೋಗ ವಿಶೇಷ ಗಂಗಾರತಿಯಲ್ಲಿ ಭಾಗಿಯಾಗಿ ಪೂಜೆ ನಡೆಸಿತು ಮತ್ತು ಆರತಿ ಮೇಲುಸ್ತುವಾರಿ ನೋಡಿಕೊಳ್ಳುವ ಹಿಂದೂ ಸಭಾ ಜೊತೆ ಸಭೆ ನಡೆಸಿದ್ದು, ಹಲವು ಅನುಮಾನಗಳಿಗೆ ಸ್ಪಷ್ಟನೆ ಪಡೆದುಕೊಂಡಿದೆ.
ಗಂಗೆಯಷ್ಟೇ ಪವಿತ್ರ ನದಿ ಕಾವೇರಿ (Kaveri) ಎಂಬ ನಿಟ್ಟಿನಲ್ಲಿ ಕಾವೇರಿ ಆರತಿ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಹಾಗಾಗಿ ಸಚಿವ ಚಲುವರಾಯಸ್ವಾಮಿ ನೇತೃತ್ವದ ನಿಯೋಗ ಕಾವೇರಿ ಆರತಿಯ ರೂಪುರೇಷೆ ತಯಾರಿಸಲಿದೆ. ಇದಕ್ಕಾಗಿ ನಿಯೋಗ ಹರಿದ್ವಾರ ಹಾಗೂ ವಾರಣಾಸಿಯಲ್ಲಿ ಅಧ್ಯಯನ ನಡೆಸಿ ವರದಿ ತಯಾರಿಸಲಿದ್ದು, ಇದರ ಭಾಗವಾಗಿ ಮೊದಲು ಹರಿದ್ವಾರಕ್ಕೆ ಭೇಟಿ ನೀಡಿತು. ಹರ್ ಕೀ ಪೌಡಿ ಘಾಟ್ನಲ್ಲಿ ನಡೆಯುವ ಆರತಿ ಕಾರ್ಯಕ್ರಮದಲ್ಲಿ ನಿಯೋಗ ಭಾಗಿಯಾಯಿತು. ಸಚಿವ ಚಲುವರಾಯಸ್ವಾಮಿ ಆದಿಯಾಗಿ ಎಲ್ಲ ಸದಸ್ಯರು ವಿಶೇಷ ಆರತಿ ಮಾಡಿ, ಧಾರ್ಮಿಕ ವಿಧಿ ವಿಧಾನಗಳನ್ನು ಪೂರೈಸಿದರು. ಬಳಿಕ ಆರತಿ ನಡೆಯುವ ರೀತಿ ರಿವಾಜುಗಳನ್ನು ಪರಿಶೀಲಿಸಿದರು.ಇದನ್ನೂ ಓದಿ: ‘ದಳಪತಿ 69’ ಅಸಲಿ ಸ್ಟೋರಿ ರಿವೀಲ್- ಕಮಲ್ ಹಾಸನ್ಗೆ ಹೇಳಿದ್ದ ಕಥೆಯಲ್ಲಿ ವಿಜಯ್?
ಬಳಿಕ ಆರತಿ ಮೇಲುಸ್ತುವಾರಿ ನೋಡಿಕೊಳ್ಳುವ ಹಿಂದೂ ಸಭಾ ಆಡಳಿತ ಸಮಿತಿ ಜೊತೆಗೆ ಮಾತುಕತೆ ನಡೆಸಿದ ನಿಯೋಗ ಕರ್ನಾಟಕ ಸರ್ಕಾರದ ಪ್ರಸ್ತಾವನೆ ಬಗ್ಗೆ ತಿಳಿಸಿದರು. ಇದಕ್ಕೆ ಖುಷಿ ವ್ಯಕ್ತಪಡಿಸಿದ ಆಡಳಿತ ಸಮಿತಿ ಕಾರ್ಯದರ್ಶಿ ತನ್ಮಯ ವಶಿಷ್ಠ, ಗಂಗಾರತಿ ರೀತಿಯಲ್ಲಿ ಕಾವೇರಿ ಆರತಿ ಮಾಡುವುದು ಖುಷಿಯ ಸಂಗತಿ ಎಂದರು.
ಗಂಗಾರತಿ ಬಳಿಕ ಮಾತನಾಡಿದ ಸಚಿವ ಚಲುವರಾಯಸ್ವಾಮಿ, ಗಂಗಾನದಿಯಂತೆ ಕಾವೇರಿ ನದಿ ಕೂಡಾ ಜೀವ ನದಿಯಾಗಿದೆ. ಅದಕ್ಕಾಗಿ ಇಲ್ಲಿಯೂ ಆರತಿ ಮಾಡಲು ನಿರ್ಧರಿಸಿದ್ದು, ಡಿಸಿಎಂ ಶಿ.ಕೆ ಶಿವಕುಮಾರ್ ನಿರ್ದೇಶನದ ಮೇರೆಗೆ ಈ ಬಗ್ಗೆ ನಮ್ಮ ಅಧಿಕಾರಿಗಳು ಜನಪ್ರತಿನಿಧಿಗಳೊಂದಿಗೆ ಅಧ್ಯಯನಕ್ಕೆ ಬಂದಿದ್ದೇವೆ. ಸಾಧ್ಯವಾದಷ್ಟು ಬೇಗ ಆರತಿ ಶುರು ಮಾಡಬೇಕು ಅಂದುಕೊಂಡಿದ್ದು, ದಸರಾದೊಳಗೆ ನಾವು ಶುರು ಮಾಡುವ ಪ್ರಯತ್ನ ಮಾಡಲಾಗುತ್ತಿದೆ. ಒಮ್ಮೆ ಆರತಿಯನ್ನು ಶುರು ಮಾಡಿದರೆ ನಿಲ್ಲಿಸುವ ಮಾತಿಲ್ಲ ಎಂದಿದ್ದಾರೆ.
ಇನ್ನು ಸಮಿತಿಯೂ ಶನಿವಾರ ವಾರಣಾಸಿಗೆ ತೆರಳಲಿದ್ದು, ಅಲ್ಲೂ ಗಂಗಾರತಿಯನ್ನು ನೋಡಿಕೊಂಡು ಬೆಂಗಳೂರಿಗೆ (Bengaluru) ವಾಪಸ್ ಬರಲಿದ್ದಾರೆ. ಬಳಿಕ ಈ ಬಗ್ಗೆ ವಿಸ್ತೃತ ವರದಿಯನ್ನು ಸರ್ಕಾರಕ್ಕೆ ನೀಡಲಿದೆ.ಇದನ್ನೂ ಓದಿ: ಬೆಳ್ತಂಗಡಿ: ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (PM Narendra Modi) ವಾರಣಾಸಿ ಕ್ಷೇತ್ರದಿಂದ (Varanasi Lok Sabha Constituency) ಹ್ಯಾಟ್ರಿಕ್ ಜಯ ಸಾಧಿಸಿದ್ದಾರೆ. ಆದರೆ ಈ ಬಾರಿ ಗೆಲುವಿನ ಅಂತರ ಭಾರೀ ಕಡಿಮೆಯಾಗಿದೆ.
ಮೋದಿ ಅವರು 1,52,513 ಮತಗಳ ಅಂತರದಿಂದ ಕಾಂಗ್ರೆಸ್ ಅಜಯ್ ರೈ ಅವರನ್ನು ಸೋಲಿಸಿದ್ದಾರೆ. ಮೋದಿ ಅವರು 6,12,970 ಮತಗಳನ್ನು ಪಡೆದರೆ ಅಜಯ್ ರೈ ಅವರು 4,60,457 ಮತಗಳನ್ನು ಪಡೆದರು.
2014 ರಂದು ಮೊದಲ ಬಾರಿಗೆ ವಾರಣಾಸಿಯಿಂದ (Ajay Rai) ಸ್ಪರ್ಧೆ ಮಾಡಿದಾಗ ಮೋದಿ 5,81,022 ಮತಗಳನ್ನು ಪಡೆದು 3,71,784 ಮತಗಳ ಅಂತರದಿಂದ ಜಯಗಳಿಸಿದ್ದರು.
ವಿಜಯಗಳಿಸಿದ ಬೆನ್ನಲ್ಲೇ ಮೋದಿ ಸಾಮಾಜಿಕ ಜಾಲತಾಣದಲ್ಲಿ, ದೇಶದ ಜನತೆ ಸತತ ಮೂರನೇ ಬಾರಿಗೆ ಎನ್ಡಿಎ ಮೇಲೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಭಾರತದ ಇತಿಹಾಸದಲ್ಲಿ ಇದೊಂದು ಅಭೂತಪೂರ್ವ ಕ್ಷಣ. ಈ ಪ್ರೀತಿ ಮತ್ತು ಆಶೀರ್ವಾದಕ್ಕಾಗಿ ನಾನು ತಲೆಬಾಗುತ್ತೇನೆ ಎಂದು ಬರೆದುಕೊಂಡಿದ್ದಾರೆ.
People have placed their faith in NDA, for a third consecutive time! This is a historical feat in India’s history.
I bow to the Janata Janardan for this affection and assure them that we will continue the good work done in the last decade to keep fulfilling the aspirations of…
ನಾವು ಹೊಸ ಶಕ್ತಿ, ಹೊಸ ಉತ್ಸಾಹ ಮತ್ತು ಅವರ ಆಕಾಂಕ್ಷೆಗಳನ್ನು ಪೂರೈಸಲು ಹೊಸ ಸಂಕಲ್ಪಗಳೊಂದಿಗೆ ಮುನ್ನಡೆಯುತ್ತೇವೆ ಎಂದು ನಾನು ದೇಶವಾಸಿಗಳಿಗೆ ಭರವಸೆ ನೀಡುತ್ತೇನೆ.. ನಾನು ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ. ಎಲ್ಲಾ ಕಾರ್ಯಕರ್ತರನ್ನು ನಾನು ಅಭಿನಂದಿಸುತ್ತೇನೆ ಎಂದು ಮೋದಿ ಹೇಳಿದ್ದಾರೆ.
ನವದೆಹಲಿ: ವಾರಣಾಸಿಗೆ (Varanasi) ತೆರಳುತ್ತಿದ್ದ ಇಂಡಿಗೋ ವಿಮಾನಕ್ಕೆ (IndiGo Flight) ದೆಹಲಿ ವಿಮಾನ ನಿಲ್ದಾಣದಲ್ಲಿ (Delhi Airport) ಬಾಂಬ್ ಬೆದರಿಕೆ ಬಂದಿದ್ದು, ಅಧಿಕಾರಿಗಳು ವಿಮಾನವನ್ನು ತಪಾಸಣೆಗೆ ಒಳಪಡಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಎಲ್ಲ ಪ್ರಯಾಣಿಕರನ್ನು ತುರ್ತು ದ್ವಾರದ ಮೂಲಕ ಇಳಿಸಲಾಗಿದ್ದು, ಸುರಕ್ಷಿತವಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ, ವಿಮಾನದಲ್ಲಿದ್ದ ಪ್ರಯಾಣಿಕರ ಸಂಖ್ಯೆಯ ಬಗ್ಗೆ ಸ್ಪಷ್ಟತೆ ಇಲ್ಲ.
ಪ್ರಯಾಣಿಕರೊಬ್ಬರಿಗೆ ಉತ್ತರಿಸಿದ ಏರ್ಲೈನ್, ಈ ಅನುಭವಕ್ಕಾಗಿ ನಾವು ಕ್ಷಮೆಯಾಚಿಸುತ್ತೇವೆ. ನಮ್ಮ ಪ್ರಯಾಣಿಕರ ಪ್ರಯಾಣದ ಯೋಜನೆಗಳಿಗೆ ಅಡ್ಡಿಪಡಿಸುವ ಉದ್ದೇಶ ಎಂದಿಗೂ ನಮ್ಮದಲ್ಲ ಎಂದು ನಿಮಗೆ ಭರವಸೆ ನೀಡುತ್ತೇವೆ ಎಂದು ತಿಳಿಸಿದೆ.
ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ನರೇಂದ್ರ ಮೋದಿಯವರು ಮೇ 14 ರಂದು ನಾಮಪತ್ರ ಸಲ್ಲಿಸಿದ್ದಾರೆ. ಬನಾರಸಿ ಸೀರೆ, ಪಾನ್, ಅಸ್ಸಿ ಘಾಟ್, ಮೋಕ್ಷದಾಯಿನಿ ಗಂಗಾ ಮತ್ತು ಬಾಬಾ ವಿಶ್ವನಾಥ್ ಜೊತೆಗೆ ರಾಜಕೀಯವೂ ಕುತೂಹಲಕಾರಿಯಾಗಿದೆ.
ಹೌದು. ಭಗವಾನ್ ಶಿವನ ನಗರವಾದ ಕಾಶಿಯನ್ನು ವಿಶ್ವದ ಅತ್ಯಂತ ಹಳೆಯ ನಗರಗಳಲ್ಲಿ ಒಂದು ಎಂದು ಪರಿಗಣಿಸಲಾಗಿದೆ. ನಾವು ಕಾಶಿ, ಬನಾರಸ್ ಅಥವಾ ವಾರಣಾಸಿ ಎಂದು ಏನೇ ಕರೆದರೂ, ಈ ನಗರವು ಇತಿಹಾಸಕ್ಕಿಂತ ಪುರಾತನವಾದುದು ಎಂದು ಹೇಳಲಾಗುತ್ತದೆ. ಸಂಪ್ರದಾಯಗಳು ಮತ್ತು ಆಧ್ಯಾತ್ಮಿಕ ಸನ್ನಿವೇಶದ ಬಗ್ಗೆ ಮಾತನಾಡುತ್ತಾ ಹೋದರೆ, ಈ ನಗರವು ಯಾವಾಗಲೂ ಶಿವ-ಶಕ್ತಿಯ ದಮ್-ಡಮ್ ಮತ್ತು ಬಾಬಾ ಭೋಲೆಯ ಬಾಮ್-ಬಾಮ್ ಶಬ್ದಗಳೊಂದಿಗೆ ಅನುರಣಿಸುತ್ತದೆ. ಇಲ್ಲಿ ಪವಿತ್ರ ಗಂಗಾ ನದಿ ಇದ್ದು, ಬಾಬಾ ವಿಶ್ವನಾಥ್ ಭೋಲೆ ಶಂಕರನ ರೂಪದಲ್ಲಿಯೂ ಇದ್ದಾರೆ. ಮೋಕ್ಷದಾಯಿನಿ ಗಂಗೆಯ ದಡದಲ್ಲಿ ನಿರ್ಮಿಸಿರುವ ಮಣಿಕರ್ಣಿಕಾ ಘಾಟ್, ದಶಾಶ್ವಮೇಧ ಘಾಟ್ ಸೇರಿದಂತೆ 80 ಘಾಟ್ಗಳಿಗೆ ಕಾಶಿ ವಿಶ್ವವಿಖ್ಯಾತವಾಗಿದೆ. ಒಂದೆಡೆ ಗಂಗಾ ಮತ್ತು ಅದರ ಪವಿತ್ರ ಘಾಟ್ಗಳಿಂದಾಗಿ ಈ ನಗರವು ಹಿಂದೂಗಳಿಗೆ ಯಾತ್ರಾಸ್ಥಳವಾಗಿದ್ದರೆ, ಮತ್ತೊಂದೆಡೆ ಈ ನಗರವು ಮುಸ್ಲಿಂ ಕುಶಲಕರ್ಮಿಗಳ ಕೌಶಲ್ಯಕ್ಕಾಗಿ ವಿಶ್ವಪ್ರಸಿದ್ಧವಾಗಿದೆ. ಗಂಗಾ-ಜಮುನಿ ಸಂಸ್ಕøತಿಯನ್ನು ಪ್ರತಿಬಿಂಬಿಸುವ ಕಾಶಿಯನ್ನು ದೀಪಗಳ ನಗರ ಮತ್ತು ಜ್ಞಾನದ ನಗರ ಎಂದೂ ಕರೆಯುತ್ತಾರೆ.
ಈ ನಗರವು ಶ್ರೀಮಂತ ಇತಿಹಾಸವನ್ನು ಹೊಂದಿದೆ. ಅದಕ್ಕೆ ಸಂಬಂಧಿಸಿದ ಕೆಲವು ಆಸಕ್ತಿದಾಯಕ ವಿಷಯಗಳನ್ನು ಹೊಂದಿದೆ. ಆದರೆ ಗಂಗಾನದಿಯ ವಿವಿಧ ಘಾಟ್ಗಳು ತಮ್ಮದೇ ಆದ ಕಥೆಗಳನ್ನು ಹೊಂದಿವೆ. ಕಾಶಿ ಅಥವಾ ವಾರಣಾಸಿ ಸುಮಾರು 3000 ವರ್ಷಗಳಷ್ಟು ಹಳೆಯದಾದ ನಗರ ಎಂದು ನಂಬಲಾಗಿದೆ. ಆದಾಗ್ಯೂ ಕೆಲವು ಇತಿಹಾಸಕಾರರು ಈ ನಗರವು 4000-5000 ವರ್ಷಗಳಿಗಿಂತ ಹೆಚ್ಚು ಹಳೆಯದು ಎಂದು ನಂಬುತ್ತಾರೆ. ಕಾಶಿ ಅನೇಕ ಶತಮಾನಗಳಿಂದ ಪ್ರಪಂಚದಾದ್ಯಂತ ಸಾಂಸ್ಕೃತಿಕ ಮತ್ತು ಧಾರ್ಮಿಕ ಕೇಂದ್ರವಾಗಿದೆ. ಜೊತೆಗೆ ನಗರವು ಶಿಕ್ಷಣ ಮತ್ತು ಆಹಾರಕ್ಕೂ ಹೆಸರುವಾಸಿಯಾಗಿದೆ.
ವಾರಣಾಸಿ ಎಂಬ ಹೆಸರು ಹೇಗೆ ಬಂತು?: ಈ ನಗರಕ್ಕೆ ವಾರಣಾಸಿ ಎಂಬ ಹೆಸರೂ ಇದೆ. ಇದು ಇಲ್ಲಿ ಇರುವ ಎರಡು ಸ್ಥಳೀಯ ನದಿಗಳಾದ ವರುಣಾ ನದಿ ಮತ್ತು ಅಸಿ ನದಿಯಿಂದ ರೂಪುಗೊಂಡಿದೆ. ಈ ಎರಡು ನದಿಗಳು ಕ್ರಮವಾಗಿ ಉತ್ತರ ಮತ್ತು ದಕ್ಷಿಣದಿಂದ ಬಂದು ಗಂಗಾ ನದಿಯನ್ನು ಸೇರುತ್ತವೆ. ಆದ್ದರಿಂದ ಇದಕ್ಕೆ ವಾರಣಾಸಿ ಎಂಬ ಹೆಸರು ಬಂದಿದೆ. ಕಾಶಿಯ ಮೂಲದ ಬಗ್ಗೆ ಹೇಳುವುದಾದರೆ ಧಾರ್ಮಿಕ ನಂಬಿಕೆಗಳು ಮತ್ತು ಪುರಾಣಗಳ ಪ್ರಕಾರ, ಶಿವನು ಸ್ವತಃ ಕಾಶಿ ನಗರವನ್ನು ಸ್ಥಾಪಿಸಿದನು. ಕಾಶಿಯು ಶಿವನ ತ್ರಿಶೂಲದ ಮೇಲೆ ನಿಂತಿದೆ ಎಂದು ಹೇಳಲಾಗುತ್ತದೆ. ಇಲ್ಲಿ ಭೋಲೆನಾಥನು ಕಾಶಿ ವಿಶ್ವನಾಥನ ರೂಪದಲ್ಲಿ ಕುಳಿತಿದ್ದಾನೆ. ಇದು 12 ಜ್ಯೋತಿಲಿರ್ಂಗಗಳಲ್ಲಿ ಒಂದಾಗಿದೆ.
ರಾಜಕೀಯ ಪ್ರಾಮುಖ್ಯತೆ: ಈ ನಗರವು ಕಳೆದ 10 ವರ್ಷಗಳಿಂದ ಭಾರತದ ರಾಜಕೀಯದ ಕೇಂದ್ರಬಿಂದುವಾಗಿ ಉಳಿದಿದೆ. ಯಾಕೆಂದರೆ ಇದು ದೇಶದ ಪ್ರಧಾನಿ ನರೇಂದ್ರ ಮೋದಿ ಅವರ ಸಂಸದೀಯ ಕ್ಷೇತ್ರವಾಗಿದೆ. ವಾರಣಾಸಿ ಲೋಕಸಭಾ ಕ್ಷೇತ್ರದಿಂದ 2 ಬಾರಿ ಅನಿರೀಕ್ಷಿತ ಗೆಲುವು ಸಾಧಿಸಿದ ಬಳಿಕ ಇದೀಗ ಮೂರನೇ ಬಾರಿಗೆ ಪ್ರಧಾನಿ ಮೋದಿ ಅವರು ಮೇ 14 ರಂದು ಮಂಗಳವಾರ ಅದೇ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದಾರೆ. ಈ ಮೂಲಕ ಇದು ಈ ಕ್ಷೇತ್ರದಿಂದ ಅವರ ಮೂರನೇ ಇನ್ನಿಂಗ್ಸ್ ಆಗಿದೆ. 2014 ರಲ್ಲಿ ಮೊದಲ ಬಾರಿಗೆ ಜಯಗಳಿಸಿದ ಬಳಿಕ ಕಾಶಿ ತಲುಪಿದ ಪ್ರಧಾನಿ ಮೋದಿ, ಗಂಗಾನದಿಯ ಮೆಟ್ಟಿಲುಗಳ ಮೇಲೆ ತಲೆಬಾಗಿದ್ದರು. ನರೇಂದ್ರ ಮೋದಿಯವರು ಕಾಶಿಯೊಂದಿಗೆ ಅವಿನಾಭಾವ ಸಂಬಂಧ ಹೊಂದಿದ್ದಾರೆ. ಅವರು ಈ ನಗರವನ್ನು ತಮ್ಮ ತಾಯಿಯಂತೆ ಪರಿಗಣಿಸುತ್ತಾರೆ. ಅಲ್ಲದೆ ಪದೇ ಪದೇ ಗಂಗಾಮಾತೆಯೇ ನನ್ನನ್ನು ಇಲ್ಲಿಗೆ ಕರೆದಿದ್ದಾಳೆ ಎಂದು ಹೇಳುತ್ತಾರೆ.
ಭರ್ಜರಿ ಜಯಗಳಿಸಿದ್ದ ಮೋದಿ: 2014ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕಾಶಿಯಿಂದ ಮೊದಲ ಬಾರಿಗೆ ಚುನಾವಣೆಗೆ ಸ್ಪರ್ಧಿಸಿದಾಗ ಆಮ್ ಆದ್ಮಿ ಪಕ್ಷದ ಅರವಿಂದ್ ಕೇಜ್ರಿವಾಲ್ ಅವರನ್ನು 371,784 ಮತಗಳ ಅಂತರದಿಂದ ಸೋಲಿಸಿದ್ದರು. ಆಗ ನರೇಂದ್ರ ಮೋದಿ 581,022 ಮತಗಳನ್ನು ಪಡೆದರೆ, ಅರವಿಂದ್ ಕೇಜ್ರಿವಾಲ್ 209,238 ಮತಗಳನ್ನು ಗಳಿಸಿದ್ದರು. ಈ ಚುನಾವಣೆಯಲ್ಲಿ ಮೂರನೇ ಸ್ಥಾನದಲ್ಲಿದ್ದ ಕಾಂಗ್ರೆಸ್ ಅಭ್ಯರ್ಥಿ ಅಜಯ್ ರೈ ಕೇವಲ 75,614 ಮತಗಳನ್ನು ತನ್ನದಾಗಿಸಿಕೊಂಡಿದ್ದರು. ಅಜಯ್ ರೈ ಮತ್ತೆ ಕಾಂಗ್ರೆಸ್ ನಿಂದ ಕಾಶಿ ಅಭ್ಯರ್ಥಿಯಾಗಿದ್ದಾರೆ.
2019ರಲ್ಲಿ ಎರಡನೇ ಬಾರಿಗೆ ನರೇಂದ್ರ ಮೋದಿ ಕಾಶಿಯಿಂದ ಗೆದ್ದು ಮತ್ತೆ ಈ ಕ್ಷೇತ್ರದಿಂದ ಸಂಸದರಾದರು. ಈ ಬಾರಿ ನರೇಂದ್ರ ಮೋದಿ ಅವರು 2014 ಕ್ಕಿಂತ ದೊಡ್ಡ ಮಟ್ಟದಲ್ಲಿ ಗೆಲುವು ಸಾಧಿಸಿದ್ದರು. ಸಮಾಜವಾದಿ ಪಕ್ಷದ ಅಭ್ಯರ್ಥಿ ಶಾಲಿನಿ ಯಾದವ್ ಅವರನ್ನು 479,505 ಮತಗಳಿಂದ ಸೋಲಿಸಿದ್ದರು. ನರೇಂದ್ರ ಮೋದಿ 674,664 ಮತಗಳನ್ನು ಪಡೆದರೆ, ಎಸ್ಪಿ ಅಭ್ಯರ್ಥಿ ಶಾಲಿನಿ ಯಾದವ್ 195,159 ಮತಗಳನ್ನು ಗಳಿಸಿದ್ದರು. ಮೂರನೇ ಸ್ಥಾನದಲ್ಲಿದ್ದ ಕಾಂಗ್ರೆಸ್ ಅಭ್ಯರ್ಥಿ ಅಜಯ್ ರೈ 152,548 ಮತಗಳನ್ನು ಪಡೆಸಿದ್ದರು.
ರಾಜಕೀಯ ಇತಿಹಾಸ: ಠಾಕೂರ್ ರಘುನಾಥ್ ಸಿಂಗ್ ಕಾಶಿ ಕ್ಷೇತ್ರದಿಂದ ಮೊದಲ ಸಂಸದರಾಗಿದ್ದರು. ರಘುನಾಥ್ ಸಿಂಗ್ ಅವರು 1952 ರಲ್ಲಿ ನಡೆದ ಮೊದಲ ಚುನಾವಣೆಯಲ್ಲಿ ಇಲ್ಲಿಂದ ಗೆದ್ದಿದ್ದರು ಮತ್ತು ನಂತರ ಅವರು 1957 ಮತ್ತು 1962 ರಲ್ಲಿ ಇಲ್ಲಿಂದ ಲೋಕಸಭೆಗೆ ಆಯ್ಕೆಯಾದರು. ಅವರು ಸತತ ಮೂರು ಅವಧಿಗೆ ಇಲ್ಲಿಂದ ಸಂಸದರಾಗಿದ್ದರು. ನಂತರ 1967 ರಲ್ಲಿ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾದ ಸತ್ಯನಾರಾಯಣ ಸಿಂಗ್ ಈ ಸ್ಥಾನವನ್ನು ಗೆದ್ದರು. 1971ರ ಚುನಾವಣೆಯಲ್ಲಿ ಕಾಂಗ್ರೆಸ್ನ ರಾಜಾರಾಮ್ ಶಾಸ್ತ್ರಿ, 1977ರಲ್ಲಿ ಜನತಾ ಪಕ್ಷದ ಚಂದ್ರಶೇಖರ್, 1980 ಮತ್ತು 1984ರಲ್ಲಿ ಕಾಂಗ್ರೆಸ್ ಪಕ್ಷದ ಕಮಲಾಪತಿ ತ್ರಿಪಾಠಿ ಮತ್ತು 1989ರಲ್ಲಿ ಜನತಾದಳದ ಅನಿಲ್ ಶಾಸ್ತ್ರಿ ಈ ಕ್ಷೇತ್ರದಿಂದ ಗೆದ್ದು ಸಂಸದರಾಗಿದ್ದರು.
ಬಿಜೆಪಿಯು 1991, 1996, 1998 ಮತ್ತು 1999 ರಲ್ಲಿ ಸತತ 4 ಬಾರಿ ಗೆದ್ದಿದೆ. 2004ರಲ್ಲಿ ಕಾಂಗ್ರೆಸ್ ಈ ಕ್ಷೇತ್ರವನ್ನು ಗೆದ್ದು, ಬಳಿಕ 2009ರಿಂದ 2019ರವರೆಗೆ ಇಲ್ಲಿ ಬಿಜೆಪಿ ನಿರಂತರವಾಗಿ ಗೆಲುವು ಸಾಧಿಸುತ್ತಿದೆ. 2009ರಲ್ಲಿ ಬಿಜೆಪಿಯ ಹಿರಿಯ ನಾಯಕ ಮುರಳಿ ಮನೋಹರ ಜೋಶಿ ಅವರು ಸಂಸದರಾದರು. ಇದಾದ ನಂತರ 2014 ಮತ್ತು 2019ರಲ್ಲಿ ನರೇಂದ್ರ ಮೋದಿ ಐತಿಹಾಸಿಕ ಗೆಲುವು ದಾಖಲಿಸಿ ಸಂಸದರಾದರು.
ಗಂಗೆಯ 88 ಘಾಟ್ಗಳ ನಗರ ಕಾಶಿ: ಕಾಶಿ ನಗರದ ಗಂಗೆಯ ದಡದಲ್ಲಿ ಒಟ್ಟು 88 ಘಾಟ್ಗಳಿವೆ. ಅವುಗಳಲ್ಲಿ ಸ್ನಾನ ಮತ್ತು ಪೂಜೆ ಸಮಾರಂಭಗಳು ಹೆಚ್ಚಿನ ಘಾಟ್ಗಳಲ್ಲಿ ನಡೆಯುತ್ತವೆ. ಆದರೆ ಎರಡು ಘಾಟ್ಗಳನ್ನು ಪ್ರತ್ಯೇಕವಾಗಿ ದಹನ ಸ್ಥಳಗಳಾಗಿ ಬಳಸಲಾಗುತ್ತದೆ. ಒಟ್ಟು 12 ಪ್ರಸಿದ್ಧ ಘಾಟ್ಗಳಿವೆ. ಈ ನಗರವು ಕಬೀರ್, ರವಿದಾಸ್, ಮುನ್ಷಿ ಪ್ರೇಮಚಂದ್, ಆಚಾರ್ಯ ರಾಮಚಂದ್ರ ಶುಕ್ಲಾ, ಜೈಶಂಕರ್ ಪ್ರಸಾದ್, ಪಂಡಿತ್ ರವಿಶಂಕರ್, ಗಿರಿಜಾ ದೇವಿ, ಪಂಡಿತ್ ಹರಿ ಪ್ರಸಾದ್ ಚೌರಾಸಿಯಾ ಮತ್ತು ಉಸ್ತಾದ್ ಬಿಸ್ಮಿಲ್ಲಾ ಖಾನ್ ಅವರಂತಹ ಕಲಾವಿದರ ನಗರವಾಗಿದೆ. ಅಷ್ಟೇ ಅಲ್ಲ ಈ ನಗರವು ಗಂಗೆಯ ಭವ್ಯವಾದ ಆರತಿ ಮತ್ತು ಭಾರತ ಮತ್ತು ವಿದೇಶಗಳ ಪ್ರವಾಸಿಗರಿಂದ ಪ್ರಕಾಶಿಸಲ್ಪಟ್ಟಿದೆ.
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (PM Narendra Modi) ಮೂರನೇ ಬಾರಿ ವಾರಣಾಸಿ (Varanasi) ಲೋಕಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಕೆ ಮಾಡಿದ್ದು ಒಟ್ಟು 3.02 ಕೋಟಿ ಮೌಲ್ಯದ ಚರಾಸ್ತಿಯನ್ನು ಘೋಷಣೆ ಮಾಡಿದ್ದಾರೆ.
ಮೋದಿ ಅವರು 52,920 ರೂಪಾಯಿ ನಗದು ಹೊಂದಿದ್ದಾರೆ. ಜಮೀನು, ಮನೆ, ಕಾರು ಹೊಂದಿಲ್ಲ. ಮೋದಿ ಯಾವುದೇ ಕಂಪನಿಯಲ್ಲಿ ಷೇರು ಖರೀದಿಸಿಲ್ಲ, ಮ್ಯೂಚುವಲ್ ಫಂಡ್ನಲ್ಲಿ ಹೂಡಿಕೆ ಮಾಡಿಲ್ಲ.
ಪ್ರಧಾನಿ ಮೋದಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಎರಡು ಖಾತೆಗಳನ್ನು ಹೊಂದಿದ್ದಾರೆ. ಗಾಂಧಿನಗರ ಎಸ್ಬಿಐನ ಶಾಖೆಯಲ್ಲಿ 73,304 ರೂ.ಗಳನ್ನು ಠೇವಣಿ ಇರಿಸಿದ್ದರೆ, ವಾರಣಾಸಿ ಎಸ್ಬಿಐನ ಶಾಖೆಯಲ್ಲಿ ಕೇವಲ 7,000 ರೂ ಠೇವಣಿ ಇರಿಸಿದ್ದಾರೆ.
ಎಸ್ಬಿಐನಲ್ಲಿ 2,85,60,338 ರೂಪಾಯಿ ಮೌಲ್ಯದ ಫಿಕ್ಸೆಡ್ ಡೆಪಾಸಿಟ್ ಇಟ್ಟಿದ್ದಾರೆ. ಪ್ರಧಾನಿಯವರ ಬಳಿ 2,67,750 ರೂ. ಮೌಲ್ಯದ ನಾಲ್ಕು ಚಿನ್ನದ ಉಂಗುರಗಳಿವೆ. ನ್ಯಾಷನಲ್ ಸೇವಿಂಗ್ಸ್ ಸರ್ಟಿಫಿಕೇಟ್ನಲ್ಲಿ 9,12,398 ರೂ. ಇದೆ ಎಂದು ಘೋಷಿಸಿದ್ದಾರೆ. ಇದನ್ನೂ ಓದಿ: ಜೈಲಿನಿಂದ ಹೊರಬರುತ್ತಿದ್ದಂತೆ ರೇವಣ್ಣ ದೇಗುಲ ಯಾತ್ರೆ!
ಪ್ರಧಾನಿ ನರೇಂದ್ರ ಮೋದಿ ಮಧ್ಯಾಹ್ನ ವಾರಣಾಸಿ ಜಿಲ್ಲಾ ಕೇಂದ್ರಕ್ಕೆ ಆಗಮಿಸಿ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಯ ಸಂದರ್ಭದಲ್ಲಿ ಎನ್ಡಿಎ ಮಿತ್ರ ಪಕ್ಷದ ನಾಯಕರು, ಬಿಜೆಪಿ ಮುಖ್ಯಮಂತ್ರಿಗಳು ಮೋದಿಗೆ ಸಾಥ್ ನೀಡಿದರು.
ನಾಮಪತ್ರ ಸಲ್ಲಿಕೆ ಮಾಡುವುದಕ್ಕೆ ಮೊದಲು ದಶಾಶ್ವಮೇಧ ಘಾಟ್ನಲ್ಲಿ (Dashashwamedh Ghat) ಗಂಗಾ ನದಿಗೆ (Ganga River) ಗಂಗಾ ಆರತಿ ಮಾಡಿದರು.ನಂತರ ವಾರಣಾಸಿ ಕಾಲಭೈರವ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ ವಾರಣಾಸಿ ಜಿಲ್ಲಾ ಕೇಂದ್ರಕ್ಕೆ ಆಗಮಿಸಿ ಮೂರನೇ ಬಾರಿ ನಾಮಪತ್ರ ಸಲ್ಲಿಕೆ ಮಾಡಿದರು.
ಇಂದೇ ನಾಮಪತ್ರ ಸಲ್ಲಿಸಿದ್ದು ಯಾಕೆ?
ಇಂದು ಗಂಗಾ ಸಪ್ತಮಿ. ಹಿಂದೂಗಳ ಪಾಲಿಗೆ ಪವಿತ್ರವಾದ ದಿನವಾಗಿದೆ. ಗಂಗೆ ಜನಿಸಿದಳು ಎಂಬ ನಂಬಿಕೆಯಿದೆ. ಗಂಗಾ ಸಪ್ತಮಿಯಂದು ಶುಭ ಅಭಿಜಿನ್ ಲಗ್ನದಲ್ಲಿ ಮೋದಿ ನಾಮಪತ್ರ ಸಲ್ಲಿಸುವುದು ಶ್ರೇಯಸ್ಕರ ಎಂದು ಪಂಡಿತ್ ಗಣೇಶ್ವರ್ ಶಾಸ್ತ್ರಿ ಸೂಚಿಸಿದ ಹಿನ್ನೆಲೆಯಲ್ಲಿ ಇಂದು ಮೋದಿ ನಾಮಪತ್ರ ಸಲ್ಲಿಕೆ ಮಾಡಿದರು. ರಾಮಮಂದಿರ ಲೋಕಾರ್ಪಣೆಗೆ ಮಹೂರ್ತವನ್ನು ಪಂಡಿತ್ ಗಣೇಶ್ವರ್ ಶಾಸ್ತ್ರಿ ನೀಡಿದ್ದರು.
ಲಕ್ನೋ: ಮೂರನೇ ಬಾರಿ ಅಧಿಕಾರ ಹಿಡಿಯಲು ಹೊರಟಿರುವ ಪ್ರಧಾನಿ ನರೇಂದ್ರ ಮೋದಿ (PM Narendra Modi) ವಾರಣಾಸಿ ಲೋಕಸಭಾ ಕ್ಷೇತ್ರದ (Varanasi Lok Sabha Constituency) ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಮಧ್ಯಾಹ್ನ ವಾರಣಾಸಿ ಜಿಲ್ಲಾ ಕೇಂದ್ರಕ್ಕೆ ಆಗಮಿಸಿ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಯ ಸಂದರ್ಭದಲ್ಲಿ ಎನ್ಡಿಎ ಮಿತ್ರ ಪಕ್ಷದ ನಾಯಕರು, ಬಿಜೆಪಿ ಮುಖ್ಯಮಂತ್ರಿಗಳು ಮೋದಿಗೆ ಸಾಥ್ ನೀಡಿದರು.
ನಾಮಪತ್ರ ಸಲ್ಲಿಕೆ ಮಾಡುವುದಕ್ಕೆ ಮೊದಲು ದಶಾಶ್ವಮೇಧ ಘಾಟ್ನಲ್ಲಿ (Dashashwamedh Ghat) ಗಂಗಾ ನದಿಗೆ (Ganga River) ಗಂಗಾ ಆರತಿ ಮಾಡಿದರು. ನಂತರ ವಾರಣಾಸಿ ಕಾಲಭೈರವ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ ವಾರಣಾಸಿ ಜಿಲ್ಲಾ ಕೇಂದ್ರಕ್ಕೆ ಆಗಮಿಸಿ ಮೂರನೇ ಬಾರಿ ನಾಮಪತ್ರ ಸಲ್ಲಿಕೆ ಮಾಡಿದರು.
ಇಂದೇ ನಾಮಪತ್ರ ಸಲ್ಲಿಸಿದ್ದು ಯಾಕೆ?
ಇಂದು ಗಂಗಾ ಸಪ್ತಮಿ. ಹಿಂದೂಗಳ ಪಾಲಿಗೆ ಪವಿತ್ರವಾದ ದಿನವಾಗಿದೆ. ಗಂಗೆ ಜನಿಸಿದಳು ಎಂಬ ನಂಬಿಕೆಯಿದೆ. ಗಂಗಾ ಸಪ್ತಮಿಯಂದು ಶುಭ ಅಭಿಜಿನ್ ಲಗ್ನದಲ್ಲಿ ಮೋದಿ ನಾಮಪತ್ರ ಸಲ್ಲಿಸುವುದು ಶ್ರೇಯಸ್ಕರ ಎಂದು ಪಂಡಿತ್ ಗಣೇಶ್ವರ್ ಶಾಸ್ತ್ರಿ ಸೂಚಿಸಿದ ಹಿನ್ನೆಲೆಯಲ್ಲಿ ಇಂದು ಮೋದಿ ನಾಮಪತ್ರ ಸಲ್ಲಿಕೆ ಮಾಡಿದರು. ರಾಮಮಂದಿರ ಲೋಕಾರ್ಪಣೆಗೆ ಮಹೂರ್ತವನ್ನು ಪಂಡಿತ್ ಗಣೇಶ್ವರ್ ಶಾಸ್ತ್ರಿ ನೀಡಿದ್ದರು.
2024 ರ ಲೋಕಸಭಾ ಚುನಾವಣೆಗೆ 11:40 ಕ್ಕೆ ನಾಮಪತ್ರ ಸಲ್ಲಿಸಲಿದ್ದು, ಅದಕ್ಕೂ ಮುಂಚಿತವಾಗಿ ಅವರು ಗಂಗಾ ನದಿಗೆ ಪ್ರಾರ್ಥನೆ ಸಲ್ಲಿಸಿದ್ದಾರೆ. ‘ಹರ್ ಹರ್ ಮಹಾದೇವ್’ ಘೋಷಣೆಯ ನಡುವೆ ಗಂಗಾ ಪೂಜೆಯನ್ನು ಪೂರ್ಣಗೊಳಿಸಿದರು. ವೇದ ಮಂತ್ರಗಳ ಪಠಣದ ಜೊತೆಗೆ ಮೋದಿ ದಶಾಶ್ವಮೇಧ್ ಘಾಟ್ನಲ್ಲಿ Dasaswamedh Ghat) ಗಂಗಾ ಮಾತೆಗೆ ಪ್ರಾರ್ಥನೆ ಸಲ್ಲಿಸಿದರು.
ಇದಕ್ಕೂ ಮುನ್ ತಮ್ಮ ಎಕ್ಸ್ ನಲ್ಲಿ, ಕಾಶಿಯೊಂದಿಗಿನ ನನ್ನ ಸಂಬಂಧವು ಅದ್ಭುತವಾಗಿದೆ. ಅದನ್ನು ಪದಗಳಲ್ಲಿ ವ್ಯಕ್ತಪಡಿಸಲು ಸಾಧ್ಯವಿಲ್ಲ. ಅಲ್ಲದೇ 10 ವರ್ಷಗಳ ಹಿಂದೆ ನಾನು ಕಾಶಿಗೆ ಬಂದಾಗ, ಗಂಗಾ ಮಾತೆ ನನ್ನನ್ನು ಕರೆದಿದ್ದಾಳೆ ಎಂದು ಹೇಳಿದ್ದೆ. ಆದರೆ ಕಳೆದ 10 ವರ್ಷಗಳಲ್ಲಿ ಗಂಗೆ ನನ್ನನ್ನು ದತ್ತು ತೆಗೆದುಕೊಂಡಿದ್ದಾಳೆ ಎಂದು ಪ್ರಧಾನಿ ಮೋದಿ ಹೇಳಿದರು.