Tag: ವಾರಾಣಾಸಿ

  • ಮಹಾ ಕುಂಭಮೇಳ ಎಫೆಕ್ಟ್ – 45 ದಿನಗಳಲ್ಲಿ 3 ಕೋಟಿ ಭಕ್ತರಿಂದ ಕಾಶಿ ವಿಶ್ವನಾಥನ ದರ್ಶನ

    ಮಹಾ ಕುಂಭಮೇಳ ಎಫೆಕ್ಟ್ – 45 ದಿನಗಳಲ್ಲಿ 3 ಕೋಟಿ ಭಕ್ತರಿಂದ ಕಾಶಿ ವಿಶ್ವನಾಥನ ದರ್ಶನ

    ವಾರಾಣಾಸಿ: ಪ್ರಯಾಗ್‌ರಾಜ್‌ನಲ್ಲಿ (Prayagraj) ನಡೆದ ಮಹಾ ಕುಂಭಮೇಳ (Maha Kumbhamela) ಪರಿಣಾಮ ವಾರಣಾಸಿಯ (Varanasi) ಕಾಶಿ ವಿಶ್ವನಾಥನ ದೇವಸ್ಥಾನಕ್ಕೆ (Kashi Vishwanath Temple) ದಾಖಲೆಯ ಪ್ರಮಾಣದಲ್ಲಿ ಭಕ್ತರು ಭೇಟಿ ನೀಡಿದ್ದಾರೆ. ಕಳೆದ 45 ದಿನಗಳಲ್ಲಿ ಮೂರು ಕೋಟಿ ಭಕ್ತರು ದೇವಾಲಯಕ್ಕೆ ಭೇಟಿ ನೀಡಿದ್ದಾರೆ ಎಂದು ಶ್ರೀ ಕಾಶಿ ವಿಶ್ವನಾಥ ದೇವಾಲಯ ಟ್ರಸ್ಟ್ ಹೇಳಿದೆ.

    ಶ್ರೀ ಕಾಶಿ ವಿಶ್ವನಾಥ ದೇವಾಲಯ ಟ್ರಸ್ಟ್ ಬಿಡುಗಡೆ ಮಾಡಿದ ಮಾಹಿತಿಗಳ ಪ್ರಕಾರ, ಪ್ರತಿದಿನ ಸರಾಸರಿ ಆರೂವರೆ ಲಕ್ಷಕ್ಕೂ ಹೆಚ್ಚು ಭಕ್ತರು ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಇದು ದೇವಾಲಯದ ಇತಿಹಾಸದಲ್ಲಿ ಅತಿ ಹೆಚ್ಚು ದರ್ಶನ ಪಡೆದ ಭಕ್ತರ ಸಂಖ್ಯೆಯಾಗಿದೆ. ಶ್ರಾವಣಕ್ಕಿಂತ ಮಾಘ ಮತ್ತು ಫಾಲ್ಗುಣದಲ್ಲಿ ಹೆಚ್ಚಿನ ಭಕ್ತರು ದರ್ಶನ ಪಡೆದಿದ್ದಾರೆ.ಇದನ್ನೂ ಓದಿ: ಉಡುಪಿಯಲ್ಲಿ ದುಬೈ ಕಾರುಗಳ ಕರ್ಕಶ ಶಬ್ದ – ಮಣಿಪಾಲ ಪೊಲೀಸರಿಂದ ದಂಡ

    ಮಹಾಶಿವರಾತ್ರಿ ಮತ್ತು ಮೌನಿ ಅಮಾವಾಸ್ಯೆಯಂದು ಭಕ್ತರ ಸಂಖ್ಯೆಯಲ್ಲಿ ಭಾರಿ ಏರಿಕೆ ಕಂಡುಬಂದಿದೆ. ಮೌನಿ ಅಮಾವಾಸ್ಯೆಯಂದು 11 ಲಕ್ಷಕ್ಕೂ ಹೆಚ್ಚು ಭಕ್ತರು ಬಂದಿದ್ದರೆ, ಮಹಾಶಿವರಾತ್ರಿಯಂದು 46 ಗಂಟೆಗಳಲ್ಲಿ 17 ಲಕ್ಷಕ್ಕೂ ಹೆಚ್ಚು ಭಕ್ತರು ವಿಶ್ವನಾಥನ ದರ್ಶನ ಪಡೆದಿದ್ದಾರೆ.

    ಜನವರಿ 13ರಿಂದ ಫೆಬ್ರವರಿ 19ರ ನಡುವೆ, ಭಕ್ತರ ಸಂಖ್ಯೆ ಎರಡು ಕೋಟಿ ಗಡಿ ದಾಟಿದೆ. ಫೆಬ್ರವರಿ 27ರಂದು ಬಿಡುಗಡೆಯಾದ ಮಾಹಿತಿಯ ಪ್ರಕಾರ, ಈ ಸಂಖ್ಯೆ ಮೂರು ಕೋಟಿ ತಲುಪಿದೆ. ಅಂದರೆ ಕೇವಲ ಎಂಟು ದಿನಗಳಲ್ಲಿ (ಫೆಬ್ರವರಿ 20ರಿಂದ 27ರವರೆಗೆ) ಒಂದು ಕೋಟಿಗೂ ಹೆಚ್ಚು ಭಕ್ತರು ದರ್ಶನ ಪಡೆದಿದ್ದಾರೆ.

    2022ರ ಶ್ರಾವಣ ಮಾಸದಲ್ಲಿ, ಒಂದು ಕೋಟಿಗೂ ಹೆಚ್ಚು ಭಕ್ತರು ವಿಶ್ವನಾಥನ ಜಲಾಭಿಷೇಕವನ್ನು ನೆರವೇರಿಸಿದ್ದರು. 2023ರಲ್ಲಿ ಭಕ್ತರ ಸಂಖ್ಯೆ ಹೊಸ ದಾಖಲೆಯನ್ನು ಸೃಷ್ಟಿಸಿತ್ತು. ಜುಲೈ 4 ರಿಂದ ಪ್ರಾರಂಭವಾದ 60 ದಿನಗಳ ಶ್ರಾವಣದಲ್ಲಿ 1.63 ಕೋಟಿ ಭಕ್ತರು ದರ್ಶನ ಪಡೆದಿದ್ದರು. 2024ರ ಶ್ರಾವಣ ಮಾಸದಲ್ಲಿ 53.84 ಲಕ್ಷ ಭಕ್ತರು ವಿಶ್ವನಾಥನ ಜಲಾಭಿಷೇಕ ನೆರವೇರಿಸಿದ್ದರು. ಇದೇ ಮೊದಲ ಬಾರಿಗೆ ಮೂರು ಕೋಟಿ ಭಕ್ತರು ಭೇಟಿ ನೀಡಿದ್ದಾರೆ.ಇದನ್ನೂ ಓದಿ: ಬಿಜೆಪಿ-ಜೆಡಿಎಸ್‌ ಶಾಸಕರು ಸಂಪರ್ಕದಲ್ಲಿದ್ದರೆ ಕರ್ಕೊಂಡು ಹೋಗಲಿ ನೋಡೋಣ – ಜಮೀರ್‌ಗೆ ಅಶ್ವಥ್‌ ನಾರಾಯಣ್ ಸವಾಲು

     

  • ಕೆಎಸ್‍ಎಂಬಿ ಬ್ರಾಂಚ್‍ಗೆ ಜಾಗ ಗುರುತಿಸಿದ ಯುಪಿ ಸರ್ಕಾರ

    ಕೆಎಸ್‍ಎಂಬಿ ಬ್ರಾಂಚ್‍ಗೆ ಜಾಗ ಗುರುತಿಸಿದ ಯುಪಿ ಸರ್ಕಾರ

    ವಾರಣಾಸಿ: ವಾರಣಾಸಿಯಲ್ಲಿ ಕರ್ನಾಟಕ ರೇಷ್ಮೆ ಮಾರುಕಟ್ಟೆ ಸ್ಥಾಪನೆಗೆ ರೇಷ್ಮೆ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರ ಪ್ರಸ್ತಾಪಕ್ಕೆ ಉತ್ತರ ಪ್ರದೇಶ ಸರ್ಕಾರ ತಕ್ಷಣವೇ ಸ್ಪಂದಿಸಿದೆ.

    ವಾರಣಾಸಿಯ ಸಾರಂಗ್ ತಲಾಬ್ ಪ್ರದೇಶದಲ್ಲಿ ಕರ್ನಾಟಕ ರೇಷ್ಮೆ ಮಾರಾಟ ಮಂಡಳಿ ಶಾಖೆ ತೆರೆಯಲು ಯುಪಿ ಸರ್ಕಾರ ಜಾಗ ನೀಡಲು ಒಪ್ಪಿದೆ. ಸಾರಂಗ್ ತಲಾಬ್ ಪ್ರದೇಶದಲ್ಲಿ ಕೆಎಸ್‍ಎಂಬಿ ಶಾಖೆ ತೆರೆಯಲು ಒಪ್ಪಿಗೆ ನೀಡಲಾಗಿದ್ದು, ಕಟ್ಟಡದ ಜಾಗಕ್ಕೆ ನಾರಾಯಣಗೌಡ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದನ್ನೂ ಓದಿ: ಬಟ್ಟೆ ಬಿಚ್ಚಿ ತಿರುಗುವವರಿಗೇನ್‌ ಗೊತ್ತು ಗಾಂಧಿ ಮೌಲ್ಯ: ಕಂಗನಾ ವಿರುದ್ಧ ರಮೇಶ್‌ ಕುಮಾರ್‌ ಕಿಡಿ

    ಕೆಎಸ್‍ಎಂಬಿ ಕಚೇರಿ ಹಾಗೂ ಗೋದಾಮಿಗೆ ನೀಡಲು ಉದ್ದೇಶಿತ ಕಟ್ಟಡ ಪರಿಶೀಲನೆ ನಡೆಸಿ, ಶೀಘ್ರವೇ ಯುಪಿ ಸರ್ಕಾರದ ಜೊತೆ ಒಪ್ಪಂದ ಮಾಡಿಕೊಳ್ಳಲು ಅಗತ್ಯ ಕ್ರಮಗಳನ್ನು ಕೈಗೊಂಡು, ಕೂಡಲೇ ಅಗತ್ಯವಿರುವ ಕಾಮಗಾರಿಗಳನ್ನು ಕೈಗೊಳ್ಳುವಂತೆ ಸೂಚಿಸಿದರು. ಇದನ್ನೂ ಓದಿ: ನಿಮ್ಮ ತಟ್ಟೆಯಲ್ಲಿ ಬಿದ್ದಿರುವ ಕತ್ತೆಯನ್ನು ತೆಗೆಯಿರಿ – ಕಾಂಗ್ರೆಸ್ ವಿರುದ್ಧ ಶ್ರೀರಾಮುಲು ಕಿಡಿ

  • ದೇವರನ್ನೂ ಬಿಡದ ಮಾಲಿನ್ಯ – ವಾರಾಣಾಸಿಯಲ್ಲಿ ಮಾಸ್ಕ್ ತೊಟ್ಟ ಭಗವಂತ

    ದೇವರನ್ನೂ ಬಿಡದ ಮಾಲಿನ್ಯ – ವಾರಾಣಾಸಿಯಲ್ಲಿ ಮಾಸ್ಕ್ ತೊಟ್ಟ ಭಗವಂತ

    ವಾರಾಣಾಸಿ: ದೆಹಲಿ, ಪಂಜಾಬ್, ನೋಯ್ಡಾ, ಉತ್ತರ ಪ್ರದೇಶದಲ್ಲಿ ಹೆಚ್ಚುತ್ತಿರುವ ವಾಯುಮಾಲಿನ್ಯದಿಂದ ಜನರು ಉಸಿರಾಡಲು ಕಷ್ಟಪಡುತ್ತಿದ್ದಾರೆ. ಕೇವಲ ಮನುಷ್ಯ ಮಾತ್ರವಲ್ಲ ದೇವರಿಗೂ ಈ ಮಾಲಿನ್ಯ ಉಸಿರುಗಟ್ಟಿಸಿದ್ದು, ಭಗವಂತನ ರಕ್ಷಣೆಗಾಗಿ ಪೂಜಾರಿಗಳು ದೇವರ ಮೂರ್ತಿಗಳಿಗೆ ಮಾಸ್ಕ್ ಹಾಕಿ ಪೂಜಿಸುತ್ತಿದ್ದಾರೆ.

    ಹೌದು. ವಿಚಿತ್ರ ಎನಿಸಿದರು ಇದು ಸತ್ಯ. ಭಾರತ ಪ್ರಸಿದ್ಧ ಪುಣ್ಯಕ್ಷೇತ್ರಗಳಲ್ಲಿ ಒಂದಾದ ವಾರಾಣಾಸಿಯಲ್ಲಿ ವಾಯುಮಾಲಿನ್ಯ ಮಿತಿಮೀರಿದ್ದು, ಇಲ್ಲಿ ಜನರು ಮಾತ್ರವಲ್ಲ ದೇವರು ಕೂಡ ಮಾಸ್ಕ್ ಧರಿಸುತ್ತಿದ್ದಾನೆ. ಮಾಲಿನ್ಯದಿಂದ ರಕ್ಷಿಸಲು ಇಲ್ಲಿನ ದೇಗುಲಗಳಲ್ಲಿ ಪೂಜಾರಿಗಳು ದೇವರ ಮೂರ್ತಿಗೆ ಮಾಸ್ಕ್ ಹಾಕಿದ್ದಾರೆ. ಮೂಗು, ಬಾಯಿ ಮುಚ್ಚಿಕೊಂಡು ಮಾಸ್ಕ್ ತೊಟ್ಟ ದೇವರ ದರ್ಶನವನ್ನೇ ಭಕ್ತರು ಪಡೆಯಬೇಕಾದ ಪರಿಸ್ಥಿತಿ ಇಲ್ಲಿ ನಿರ್ಮಾಣವಾಗಿದೆ.

    ವಾರಾಣಾಸಿಯಲ್ಲಿಯ ಶಿವ-ಪಾರ್ವತಿ, ಆಂಜನೇಯ, ರಾಮ ಲಕ್ಷಣ ದೇವಾಲಯಗಳಲ್ಲಿ ಈ ರೀತಿ ಮಾಸ್ಕ್ ತೊಟ್ಟ ದೇವರನ್ನು ಕಾಣಬಹುದಾಗಿದೆ. ಈ ಬಗ್ಗೆ ಪೂಜಾರಿಗಳನ್ನ ಕೇಳಿದರೆ, ದೇವರಿಗೆ ವಿಶೇಷ ದಿನಗಳಲ್ಲಿ, ಹಬ್ಬದ ಸಮಯದಲ್ಲಿ ಹೊಸ ಬಟ್ಟೆ ಹಾಕಿ ಅಲಂಕರಿಸುತ್ತೇವೆ. ಅದೇ ರೀತಿ ನಗರದಲ್ಲಿ ಮಾಲಿನ್ಯ ಹೆಚ್ಚಾಗಿರುವುದಕ್ಕೆ ಅದರಿಂದ ರಕ್ಷಿಸಲು ಈ ರೀತಿ ಮೂರ್ತಿ ಮುಖಕ್ಕೆ ಬಟ್ಟೆ, ಮಾಸ್ಕ್ ಕಟ್ಟಿದ್ದೇವೆ ಎಂದಿದ್ದಾರೆ.

    ಪ್ರಸಿದ್ಧ ಪುಣ್ಯಕ್ಷೇತ್ರವಾದ ವಾರಾಣಾಸಿಯಲ್ಲಿನ ದೇಗಾಲಯಗಳಲ್ಲಿ ದೇವರ ಮೂರ್ತಿಗಳನ್ನು ಜೀವಂತ ವಿಗ್ರಹದಂತೆ ಪರಿಗಣಿಸಿ, ಪೂಜಿಸಲಾಗುತ್ತದೆ. ಇಲ್ಲಿನ ದೇವರ ಮೂರ್ತಿಗಳನ್ನು ಚೆನ್ನಾಗಿ ನೋಡಿಕೊಳ್ಳಲಾಗುತ್ತೆ. ಹೀಗಾಗಿ ಬೇಸಿಗೆಯಲ್ಲಿ ಇಲ್ಲಿನ ದೇವರ ವಿಗ್ರಹಗಳು ತಂಪಾಗಿಡಲು ಶ್ರೀಗಂಧವನ್ನು ಹಚ್ಚಲಾಗುತ್ತದೆ. ಚಳಿಗಾಲದಲ್ಲಿ ಉಣ್ಣೆ ಬಟ್ಟೆಗಳಿಂದ ದೇವರನ್ನು ಅಲಂಕರಿಸಿ ಚಳಿಯಿಂದ ರಕ್ಷಿಸಲಾಗುತ್ತದೆ. ಅದೇ ರೀತಿ ಮಾಲಿನ್ಯದಿಂದ ರಕ್ಷಿಸಲು ಈ ಕ್ರಮಕ್ಕೆ ಮುಂದಾಗಿದ್ದೇವೆ ಎಂದು ಅರ್ಚಕರೊಬ್ಬರು ತಿಳಿಸಿದ್ದಾರೆ.

    ದೀಪಾವಳಿ ಬಳಿಕ ವಾರಾಣಾಸಿಯಲ್ಲಿ ಮಾಲಿನ್ಯ ಪ್ರಮಾಣ 2.5 ಪಿಎಂ ಮಟ್ಟಕ್ಕೆ ತಲುಪಿದೆ. ಇತ್ತ ಉತ್ತರ ಪ್ರದೇಶದಲ್ಲಿ ವಾಯುಮಾಲಿನ್ಯ ಮಟ್ಟ ಹೆಚ್ಚಿರುವ ಹಿನ್ನೆಲೆ ಸಿಎಂ ಯೋಗಿ ಆದಿತ್ಯನಾಥ್ ಮಾಲಿನ್ಯ ನಿಯಂತ್ರಣಕ್ಕೆ ದೆಹಲಿ ಸರ್ಕಾರ ಜಾರಿಗೆ ತಂದಿರುವಂತೆ ಸಮ-ಬೆಸ ಸಂಖ್ಯೆಗಳ ವಾಹನಸಂಚಾರವನ್ನು ಲಕ್ನೋದಲ್ಲಿ ಅಳವಡಿಸಿಕೊಳ್ಳುವ ಕುರಿತು ಅಧಿಕಾರಿಗಳ ಸೂಚಿಸಿದ್ದಾರೆ.

    https://twitter.com/Real_Anuj/status/1192027224821469189

    ಹಾಗೆಯೇ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಿತಿಮೀರಿದ ವಾಯುಮಾಲಿನ್ಯ ಸಂಬಂಧ ಹರ್ಯಾಣ, ಪಂಜಾಬ್, ಉತ್ತರ ಪ್ರದೇಶದ ಮುಖ್ಯ ಕಾರ್ಯದರ್ಶಿಗಳಿಗೆ ಸುಪ್ರೀಂಕೋರ್ಟ್ ಛೀಮಾರಿ ಹಾಕಿದೆ. ಯಾವುದೇ ದೇಶದಲ್ಲಿ ಕೃಷಿ ತ್ಯಾಜ್ಯ ಸುಡಲು ಸರ್ಕಾರಗಳು ಅನುಮತಿ ಕೊಟ್ಟಿಲ್ಲ. ವಾಯುಮಾಲಿನ್ಯ ತಡೆ ಕ್ರಮಗಳನ್ನು ಕಟ್ಟು ನಿಟ್ಟಾಗಿ ಪಾಲಿಸದ ಅಧಿಕಾರಿಗಳು, ರೈತರ ಮೇಲೆ ಗೂಬೆ ಕೂರಿಸ್ತಿದ್ದೀರಾ? ನಿಮಗೆ ನಾಚಿಕೆ ಆಗುದಿಲ್ಲವೇ ಎಂದು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಬುಧವಾರ ತರಾಟೆಗೆ ತೆಗೆದುಕೊಂಡಿತ್ತು.