Tag: ವಾರ್ಡ್

  • ಸುಧಾರಿಸಿದ ಹೆಚ್‌ಡಿಕೆ ಆರೋಗ್ಯ – ಐಸಿಯುನಿಂದ ವಾರ್ಡ್‌ಗೆ ಶಿಫ್ಟ್

    ಸುಧಾರಿಸಿದ ಹೆಚ್‌ಡಿಕೆ ಆರೋಗ್ಯ – ಐಸಿಯುನಿಂದ ವಾರ್ಡ್‌ಗೆ ಶಿಫ್ಟ್

    ಬೆಂಗಳೂರು: ಅನಾರೋಗ್ಯ ಹಿನ್ನೆಲೆ ಮಾಜಿ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿ(HD Kumaraswamy) ಅವರನ್ನು ಮಂಗಳವಾರ ತಡರಾತ್ರಿ ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಿದ್ದು, ಸದ್ಯ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದ ಹಿನ್ನೆಲೆ ಅವರನ್ನು ಐಸಿಯುನಿಂದ (ICU) ವಾರ್ಡ್‌ಗೆ (Ward) ಶಿಫ್ಟ್ ಮಾಡಲಾಗಿದೆ.

    ಕುಮಾರಸ್ವಾಮಿ ಅವರಿಗೆ ಎಡಭಾಗದಲ್ಲಿ ರಕ್ತನಾಳ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಗುರುವಾರ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ವೈದ್ಯರು ಅವರನ್ನು ಐಸಿಯುನಿಂದ ವಾರ್ಡ್‌ಗೆ ಶಿಫ್ಟ್ ಮಾಡಿ ನಿಗಾವಹಿಸಿದ್ದಾರೆ. ಇದನ್ನೂ ಓದಿ: ಸೆ.3 ರಂದು ಪಂಚಮಸಾಲಿ ಮೀಸಲಾತಿ ಹೋರಾಟಕ್ಕೆ ಮತ್ತೆ ಚಾಲನೆ: ಜಯಮೃತ್ಯುಂಜಯ ಸ್ವಾಮೀಜಿ

    ವಾರ್ಡ್‌ಗೆ ಶಿಫ್ಟ್ ಮಾಡುವ ಮೊದಲು ಹೆಚ್‌ಡಿಕೆ ಆರೋಗ್ಯ ಪರಿಸ್ಥಿತಿ ತಿಳಿಯುವ ಸಲುವಾಗಿ ಸಿಟಿ ಸ್ಕ್ಯಾನ್ ಮಾಡಿದ್ದು, ರಿಪೋರ್ಟ್‌ನಲ್ಲಿ ಆರೋಗ್ಯ ಸುಧಾರಿಸಿರುವುದು ಕಂಡುಬಂದಿದೆ. ಬಳಿಕ ಅವರನ್ನು ವಾರ್ಡ್‌ಗೆ ಶಿಫ್ಟ್ ಮಾಡಲಾಗಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ರೈಲಿಗೆ ಬೆಂಕಿ ಆಕಸ್ಮಿಕ ಅಲ್ಲ, ಮಾನವ ಕೃತ್ಯದ ಶಂಕೆ

    ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿರುವ ಕುಮಾರಸ್ವಾಮಿ ಅವರನ್ನು ನಿರ್ಮಲಾನಂದ ಶ್ರೀಗಳು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಆರೋಗ್ಯ ಸ್ಥಿರವಾಗಿದೆ. ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದಾರೆ. ಯಾವಾಗ ಡಿಸ್ಚಾರ್ಜ್ ಮಾಡಬೇಕೆಂಬುದನ್ನು ವೈದ್ಯರು ನಿರ್ಧರಿಸುತ್ತಾರೆ. ಕುಮಾರಸ್ವಾಮಿಯವರು ಚೆನ್ನಾಗಿ ಮಾತನಾಡಿದರು. ಅವರು ಬೇಗ ಗುಣಮುಖರಾಗಿ ಬರುತ್ತಾರೆ ಎಂದರು. ಇದನ್ನೂ ಓದಿ: ಪ್ರವಾಸಿಗರೇ ಎಚ್ಚರ, ಕಾಫಿನಾಡ ನಾನ್ ವೆಜ್ ಹೋಟೆಲ್‍ನಲ್ಲಿ ಕುರಿ ಬದಲು ದನದ ಮಾಂಸದ ಬಿರಿಯಾನಿ!

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಆಸ್ಪತ್ರೆಯ ಬೆಡ್ ಮೇಲೆ ನಾಯಿ ವಿಶ್ರಾಂತಿ – ಸಿಬ್ಬಂದಿ ನಿರ್ಲಕ್ಷ್ಯಕ್ಕೆ ರೋಗಿಗಳು ಗರಂ

    ಆಸ್ಪತ್ರೆಯ ಬೆಡ್ ಮೇಲೆ ನಾಯಿ ವಿಶ್ರಾಂತಿ – ಸಿಬ್ಬಂದಿ ನಿರ್ಲಕ್ಷ್ಯಕ್ಕೆ ರೋಗಿಗಳು ಗರಂ

    ಲಕ್ನೋ: ಕೊರೊನಾ ಸಮಯದಲ್ಲಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಬೆಡ್ ಇಲ್ಲ ಅಂತಹದರಲ್ಲಿ ಉತ್ತರ ಪ್ರದೇಶದ ಆಸ್ಪತ್ರೆಯೊಂದರಲ್ಲಿ ನಾಯಿಯೊಂದು ಬೆಡ್ ಮೇಲೆ ಬೆಚ್ಚಗೆ ಕುಳಿತು ವಿಶ್ರಾಂತಿ ಪಡೆಯುತ್ತಿರುವ ದೃಶ್ಯ ಬೆಳಕಿಗೆ ಬಂದಿದೆ.

     

    ಈ ವೀಡಿಯೋ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಇದೀಗ ಸೋಶಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗುತ್ತಿದೆ. ವೀಡಿಯೋದಲ್ಲಿ ಉತ್ತರ ಪ್ರದೇಶದ ಆಸ್ಪತ್ರೆಯ ಅವ್ಯವಸ್ಥೆ ಮತ್ತು ಸಿಬ್ಬಂದಿ ನಿರ್ಲಕ್ಷ್ಯ ಎದ್ದು ಕಾಣಿಸುತ್ತಿದೆ. ಆಸ್ಪತ್ರೆಯ ಈ ಅವ್ಯವಸ್ಥೆಯು ರೋಗಿಗಳ ನಿದ್ದೆಯನ್ನು ಕೆಡಿಸುತ್ತಿದೆ.

    ಈ ವಿಚಾರವಾಗಿ ತನಿಖೆ ನಡೆಸಲಾಗುತ್ತಿದ್ದು, ಸಿವಿಲ್ ಲೈನ್ಸ್ ಪ್ರದೇಶದ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಆಸ್ಪತ್ರೆಯಲ್ಲಿ ಬುಧವಾರ ಈ ಘಟನೆ ನಡೆದಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

    ಆಸ್ಪತ್ರೆಯ ಎರಡನೇ ಮಹಡಿಯಲ್ಲಿರುವ ಶಸ್ತ್ರಚಿಕಿತ್ಸಾ ವಾರ್ಡ್ ನಲ್ಲಿ ಬೀದಿ ನಾಯಿ ಪತ್ತೆಯಾಗಿದ್ದು, ಆಸ್ಪತ್ರೆಯ ಆವರಣದಲ್ಲಿ ನಾಯಿ ಸುತ್ತಾಡುವುದು ಸಾಮಾನ್ಯವಾಗಿ ಹೋಗಿದೆ ಇದರಲ್ಲಿ ಯಾವುದೇ ರೀತಿಯ ಆಶ್ಚರ್ಯವೇನಿಲ್ಲ. ಆಸ್ಪತ್ರೆಯಲ್ಲಿ ಸ್ವಚ್ಛತೆಯ ಕೊರತೆ ಮತ್ತು ಸಿಬ್ಬಂದಿಯಲ್ಲಿನ ಅಸಡ್ಡೆ ಎಲ್ಲರಿಗೂ ಕಾಣಿಸುತ್ತಿದೆ ಎಂದು ಸ್ಥಳೀಯ ನಿವಾಸಿಯೊಬ್ಬರು ಆರೋಪಿಸಿದ್ದಾರೆ.

    ಜೊತೆಗೆ ಆಸ್ಪತ್ರೆಯ ಅಧಿಕಾರಿಗಳು ಆ ವಾರ್ಡ್ ನಲ್ಲಿ ಯಾರನ್ನು ದಾಖಲಿಸಿಕೊಳ್ಳದೆ ಇದ್ದರಿಂದ ಆ ಬೆಡ್ ಖಾಲಿ ಇತ್ತು. ಅದೇ ಸಮಯದಲ್ಲಿ ನಾಯಿ ಬಂದು ಕುಳಿತಿದೆ ತಿಳಿಸಿದರು. ಇನ್ನೂ ಈ ದೃಶ್ಯದ ಮೂಲಕ ಆಸ್ಪತ್ರೆ ಅವ್ಯವಸ್ಥೆ, ಸಿಬ್ಬಂದಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯ ತೋರಿಸುತ್ತಿದೆ.

    ಈ ಹಿಂದೆ ಕರ್ನಾಟಕದ ಮಂಡ್ಯ ಜಿಲ್ಲೆಯ ಆಸ್ಪತ್ರಯೊಂದರಲ್ಲಿ ಕೂಡ ಇದೇ ರೀತಿ ಬೀದಿ ನಾಯಿಗಳು ವಾರ್ಡ್‍ವೊಂದರ ಬೆಡ್ ನಲ್ಲಿ ರಾಜಾರೋಷವಾಗಿ ವಿಶ್ರಾಂತಿಸುತ್ತಿದ್ದ ಘಟನೆ ನಡೆದಿತ್ತು. ಘಟನೆ ಕುರಿತಂತೆ ಅಲ್ಲಿನ ರೋಗಗಳು ಆಸ್ಪತ್ರೆ ಅಧಿಕಾರಿಗಳ ವಿರುದ್ಧ ಕಿಡಿಕಾರಿದ್ದರು.

  • ಚೀನಾದಲ್ಲಿ 10 ದಿನದಲ್ಲಿ ಆಸ್ಪತ್ರೆ ಕಟ್ಟಿದ್ರು – ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೊರೊನಾಗೆ ಪ್ರತ್ಯೇಕ ವಾರ್ಡ್ ಇಲ್ಲ

    ಚೀನಾದಲ್ಲಿ 10 ದಿನದಲ್ಲಿ ಆಸ್ಪತ್ರೆ ಕಟ್ಟಿದ್ರು – ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೊರೊನಾಗೆ ಪ್ರತ್ಯೇಕ ವಾರ್ಡ್ ಇಲ್ಲ

    ಬೆಂಗಳೂರು: ಚೀನಾದಲ್ಲಿ ಹತ್ತು ದಿನದಲ್ಲಿ ಕೊರೊನಾಗೆ ವಿಶೇಷ ಆಸ್ಪತ್ರೆಯನ್ನೇ ಕಟ್ಟಿದ್ದರು. ಆದರೆ ಬೆಂಗಳೂರಿನ ವಿಕ್ಟೋರಿಯಾದಲ್ಲಿ ಕಳೆದ ಒಂದು ತಿಂಗಳಿನಿಂದ ಕೊರೊನಾಗೆ ಸ್ಪೆಷಲ್ ವಾರ್ಡ್ ಮಾಡುವುದಕ್ಕೆ ಕಷ್ಟವಾಗಿದೆ ಎಂದು ಹೇಳಲಾಗುತ್ತಿದೆ.

    ಬೆಂಗಳೂರಿನಲ್ಲಿ ಕೊರೊನಾ ಪಾಸಿಟಿವ್ ಇದ್ದರೂ ನಮಗೆ ವಾರ್ಡ್ ಮಾಡುವುದಕ್ಕೆ ಕಷ್ಟವಾಗುತ್ತೆ. ಇಲ್ಲಿ ಬರುವ ಬೇರೆ ರೋಗಿಗಳಿಗೆ ತೊಂದರೆ ಆಗಲ್ವೇ, ಕೊರೊನಾಗೆ ಸ್ಪೆಷಲ್ ವಾರ್ಡ್ ಎಂದರೆ ಅದಕ್ಕೆ ಪ್ರೊಸಿಜರ್ ಇರುತ್ತೆ. ವಿಂಡೋ ಬದಲಾಯಿಸಬೇಕು, ಎಸಿ ಹಾಕುವ ಹಾಗಿಲ್ಲ. ಅಲ್ಲದೆ ಆಕ್ಸಿಜನ್ ವ್ಯವಸ್ಥೆ ಆಗಬೇಕು. ಇದೆಲ್ಲ ನಮಗೆ ತುಂಬಾ ಕಷ್ಟವಾಗುತ್ತೆ ಎಂದು ಪ್ರತಿಷ್ಟಿತ ವಿಕ್ಟೋರಿಯಾ ಆಸ್ಪತ್ರೆ ಡೀನ್ ಜಯಂತಿ ಹೇಳಿದ್ದಾರೆ. ಇದನ್ನೂ ಓದಿ: 10 ದಿನದಲ್ಲಿ 1 ಸಾವಿರ ಬೆಡ್ ಸಾಮರ್ಥ್ಯದ ಆಸ್ಪತ್ರೆ ನಿರ್ಮಾಣಗೊಂಡಿದ್ದು ಹೇಗೆ? ಚೀನಾದ ಜೈವಿಕ ಅಸ್ತ್ರ ಕೊರೊನಾ?

    ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಈ ಕಷ್ಟ ಇದ್ದರೂ ಆರೋಗ್ಯ ಸಚಿವ ಶ್ರೀರಾಮುಲು ಅವರು ‘ಎಲ್ಲಾ ರೆಡಿ ಇದ್ದೇವೆ. ಕೊರೊನಾ ಬಂದರೆ ಓಡಿಸಿ ಬಿಡೋದೆ’ ಎಂದು ಡೈಲಾಗ್ ಹೇಳಿದ್ದರು. ಆದರೆ ವಾಸ್ತವ ಇಲ್ಲಿ ಭೀಕರವಾಗಿದೆ. ವಿಕ್ಟೋರಿಯಾದಲ್ಲಿ ಕೊರೊನಾ ಪತ್ತೆಗೆ ಲ್ಯಾಬ್ ಇದೆ. ಆದರೆ ಪ್ರತ್ಯೇಕ ವಾರ್ಡ್ ಮಾತ್ರ ಇಲ್ಲ. ಇದನ್ನೂ ಓದಿ: ಆಂಧ್ರದ ಟೆಕ್ಕಿಗೆ ಕೊರೊನಾ : ಬೆಂಗ್ಳೂರಲ್ಲಿ ಲ್ಯಾಂಡ್ ಆಗಿದ್ರೂ ಪತ್ತೆ ಆಗಲಿಲ್ಲ ಯಾಕೆ?-ಟೆಕ್ಕಿಗೆ ಕೊರೊನಾ ಬಂದಿದ್ದು ಹೇಗೆ?

    ರಾಜ್ಯದಲ್ಲಿ ಕೊರೊನಾ ವೈರಸ್ ಭೀತಿ ಹಿನ್ನೆಲೆ ಕರ್ನಾಟಕ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ಆಂಧ್ರ, ತೆಲಂಗಾಣ, ಕೇರಳ ಗಡಿಯಲ್ಲಿ ಎಚ್ಚರಿಕೆ ನೀಡಲಾಗಿದೆ. ಬಳ್ಳಾರಿ, ಕಲಬುರುಗಿ, ಬೆಳಗಾವಿ, ಚಾಮರಾಜನಗರ, ರಾಯಚೂರು ಭಾಗಗಳಲ್ಲಿ ಕೂಡ ಎಚ್ಚರಿಕೆ ವಹಿಸಲಾಗುತ್ತಿದೆ.

  • ಬಿಜೆಪಿ ವಾರ್ಡ್‌ಗೆ ಹೆಚ್ಚು ಅನುದಾನ – ಸರ್ಕಾರದ ತಾರತಮ್ಯಕ್ಕೆ ಕೈ, ತೆನೆ ಕಿಡಿ

    ಬಿಜೆಪಿ ವಾರ್ಡ್‌ಗೆ ಹೆಚ್ಚು ಅನುದಾನ – ಸರ್ಕಾರದ ತಾರತಮ್ಯಕ್ಕೆ ಕೈ, ತೆನೆ ಕಿಡಿ

    – ಕೋರ್ಟ್ ಮೂಲಕ ತಡೆಯಾಜ್ಞೆ

    ಕೊಪ್ಪಳ: ಸರ್ಕಾರ ಬದಲಾವಣೆಯಾದ ಬೆನ್ನಲ್ಲೇ ಇದೀಗ ಬಿಜೆಪಿ ಸರ್ಕಾರ ಶಾಕ್ ಕೊಟ್ಟಿದೆ. ಬಿಜೆಪಿ ಸದಸ್ಯರು ಇರುವ ಕ್ಷೇತ್ರಗಳಿಗೆ ಮಾತ್ರ ಅನುದಾನ ಬಿಡುಗಡೆ ಮಾಡಿ, ತಾರತಮ್ಯ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್-ಜೆಡಿಎಸ್ ಸದಸ್ಯರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

    ಹೌದು, ಕೊಪ್ಪಳದ ಗಂಗಾವತಿ ನಗರ ಪ್ರದೇಶದ ವಾರ್ಡ್ ಗಳ ಅಭಿವೃದ್ಧಿಗಾಗಿ ಸಮ್ಮಿಶ್ರ ಸರ್ಕಾರ 6.28 ಕೋಟಿ ರೂ. ಹಣ ಬಿಡುಗಡೆ ಮಾಡಿತ್ತು. ಆದರೆ ಸರ್ಕಾರ ಬದಲಾವಣೆಯಿಂದ ಇನ್ನೇನು ನಮ್ಮ ವಾರ್ಡ್ ಗಳಿಗೆ ಸಮನಾಗಿ ಅನುದಾನ ಬರುತ್ತದೆ ಎಂದು ಕಾದು ಕುಳಿತಿದ್ದ ಕಾಂಗ್ರೆಸ್ಸಿಗೆ ಇದೀಗ ಸರ್ಕಾರ ಶಾಕ್ ನೀಡಿದೆ.

    ಬಿಜೆಪಿ ಸರ್ಕಾರ ಬಂದಿದ್ದೇ ತಡ, ಬಿಜೆಪಿ ಸದಸ್ಯರು ಪ್ರತಿನಿಧಿಸುತ್ತಿರೋ ವಾರ್ಡ್ ಗಳಿಗೆ ಅನುದಾನ ಹಂಚಲಾಗಿದೆ. ಆದರೆ ಕಾಂಗ್ರೆಸ್-ಜೆಡಿಎಸ್ ಸದಸ್ಯರಿರೋ ವಾರ್ಡ್ ಗಳಿಗೆ ಒಂದೇ ಒಂದು ನಯಾಪೈಸೆ ಅನುದಾನ ಬಿಡುಗಡೆ ಆಗಿಲ್ಲ. ಇದರಿಂದ ಆಕ್ರೋಶಗೊಂಡ ಕಾಂಗ್ರೆಸ್, ಜೆಡಿಎಸ್ ಸದಸ್ಯರು ಧಾರವಾಡ ಹೈಕೋರ್ಟ್ ಮೇಟ್ಟಿಲೇರಿ ಬಿಜೆಪಿ ವಾರ್ಡ್ ಗಳಿಗೆ ಬಿಡುಗಡೆಯಾದ ಅನುದಾನಕ್ಕೆ ತಡೆಯಾಜ್ಞೆ ತಂದಿರುವುದಾಗಿ ಗಂಗಾವತಿ ನಗರಸಭೆ ಕಾಂಗ್ರೆಸ್ ಸದಸ್ಯ ರಾಘವೇಂದ್ರ ಹೇಳಿದ್ದಾರೆ.

    ಈ ಬಗ್ಗೆ ಜಿಲ್ಲಾಧಿಕಾರಿ ಪಿ. ಸುನೀಲ್ ಅವರನ್ನು ಕೇಳಿದರೆ, ಇಲ್ಲಿ ಕಾಂಗ್ರೆಸ್, ಬಿಜೆಪಿ ವಾರ್ಡ್ ಎಂದು ಡಿವೈಡ್ ಮಾಡಿಲ್ಲ. ಸಮಸ್ಯೆ ಯಾವ ವಾರ್ಡಿನಲ್ಲಿ ಜಾಸ್ತಿ ಇದೆ, ಅಂತಹ ವಾರ್ಡ್ ಗಳಿಗೆ ಹೆಚ್ಚಿನ ಅನುದಾನ ನೀಡಿಲಾಗಿದೆ ಅಷ್ಟೇ. ಇದರಲ್ಲಿ ಯಾವುದೇ ತಾರತಮ್ಯ ಮಾಡಿಲ್ಲ ಎಂದು ಹೇಳಿದರು.

    ಒಟ್ಟಿನಲ್ಲಿ ರಾಜಕೀಯ ತಿಕ್ಕಾಟಕ್ಕೆ ಗಂಗಾವತಿ ನಗರದ ಜನರು ಬಲಿಯಾಗುತ್ತಿದ್ದಾರೆ. ಈಗಲಾದರೂ ಜನಪ್ರತಿನಿಧಿಗಳು, ಅಧಿಕಾರಿಗಳು ತಾರತಮ್ಯ ಬಿಟ್ಟು ಸಮಾನವಾಗಿ ಎಲ್ಲಾ ವಾರ್ಡ್ ಗಳಿಗೆ ಅನುದಾನ ಬಿಡುಗಡೆ ಮಾಡಬೇಕಿದೆ ಎಂದು ಕೈ-ತೆನೆ ಸದಸ್ಯರು ಒತ್ತಾಯಿಸುತ್ತಿದ್ದಾರೆ.

  • ಒಂದೇ ವಾರ್ಡ್ ನಲ್ಲಿ ಮೂರು ಇಂದಿರಾ ಕ್ಯಾಂಟೀನ್- ಸರ್ಕಾರದ ವಿರುದ್ಧ ಸ್ಥಳೀಯರ ಆಕ್ರೋಶ

    ಒಂದೇ ವಾರ್ಡ್ ನಲ್ಲಿ ಮೂರು ಇಂದಿರಾ ಕ್ಯಾಂಟೀನ್- ಸರ್ಕಾರದ ವಿರುದ್ಧ ಸ್ಥಳೀಯರ ಆಕ್ರೋಶ

    ಬೆಂಗಳೂರು: ನಗರದ ಪ್ರತಿ ವಾರ್ಡ್ ನಲ್ಲೊಂದು ಇಂದಿರಾ ಕ್ಯಾಂಟೀನ್ ನಿರ್ಮಾಣ ಮಾಡೋದು ಸರ್ಕಾರದ ಯೋಜನೆ. ಆದರೆ ಇಲ್ಲೊಂದು ವಾರ್ಡ್ ನಲ್ಲಿ ಮೂರು ಇಂದಿರಾ ಕ್ಯಾಂಟೀನ್ ಗಳನ್ನು ನಿರ್ಮಿಸಲಾಗಿದ್ದು, ಇದೀಗ ಚರ್ಚೆಗೆ ಗ್ರಾಸವಾಗಿದೆ.

    ಹೌದು. ಕಾಮಾಕ್ಷಿ ಪಾಳ್ಯ ವಾರ್ಡ್ ಸ್ಥಳೀಯ ಬಿಬಿಎಂಪಿ ಸದಸ್ಯೆಯ ವಿರೋಧದ ನಡುವೆಯೂ ಕಸ ವಿಂಗಡನೆ ಘಟಕದ ಪಕ್ಕದಲ್ಲೇ ಈ ಕ್ಯಾಂಟೀನ್ ನಿರ್ಮಾಣ ಮಾಡಲಾಗಿದೆ ಅನ್ನೋದು ಕಾರ್ಪೋರೇಟರ್ ಪ್ರತಿಮಾ ಆರೋಪ. ಅದು ಹೋಗ್ಲಿ ಅಂದ್ರೆ ಈ ಇಂದಿರಾ ಕ್ಯಾಂಟೀನ್ ಇರುವ ರಸ್ತೆಯಲ್ಲೇ ಕೇವಲ 500 ಮೀಟರ್ ದೂರದಲ್ಲಿ ಮತ್ತೊಂದು ಕ್ಯಾಂಟೀನ್ ನಿರ್ಮಿಸಲಾಗಿದೆ. ಅದು ಪಕ್ಕದ ಗೋವಿಂದ್ ರಾಜ್ ನಗರ ವಾರ್ಡ್ ಗೆ ಸೇರಬೇಕಿದ್ದ ಕ್ಯಾಂಟೀನ್ ಅಗಿದ್ದು, ಕಾಮಾಕ್ಷಿ ಪಾಳ್ಯ ವಾರ್ಡ್ ನಲ್ಲಿ ನಿರ್ಮಿಸಿರೋದಕ್ಕೆ ಪ್ರತಿಮಾ ಆಕ್ರೋಶ ವ್ಯಕ್ತಪಡಿಸಿದ್ರು.

    ಒಂದಲ್ಲ, ಎರಡಲ್ಲ ಅಷ್ಟು ಸಾಲ್ದು ಅಂತಾ ಇದೀಗಾ ಇದೇ ವಾರ್ಡ್ ನ ಶಾರದ ಕಾಲೋನಿ ಬಸ್ ನಿಲ್ದಾಣದಲ್ಲಿ ಮತ್ತೊಂದು ಅಂದ್ರೆ ಮೂರನೇ ಇಂದಿರಾ ಕ್ಯಾಂಟೀನ್ ನಿರ್ಮಾಣಕ್ಕೆ ಪಾಯ ತೋಡಲಾಗಿದೆ. ಎಲ್ಲ ವಾರ್ಡ್ ನ ಸಾರ್ವಜನಿಕರಿಗೆ ಸಲ್ಲ ಬೇಕಿದ್ದ ಜನ ಪರ ಯೋಜನೆಯನ್ನು ಎಲ್ಲೆಂದರಲ್ಲಿ ನಿರ್ಮಾಣ ಮಾಡುತ್ತಿರೋದರ ಬೆನ್ನಲ್ಲೇ ಸಾರ್ವಜನಿಕರ ಹಿತಾಸಕ್ತಿಗಿಂತ ಕೇವಲ ಪಬ್ಲಿಸಿಟಿ ಗಿಮಿಕ್ ಮಾತ್ರ ಇದೆ ಅನ್ನೋದಾಗಿ ಆರೋಪಿಸಿದ್ರು.

    ವಾರ್ಡ್ ನಲ್ಲಿ ಮೂರು ಇಂದಿರಾ ಕ್ಯಾಂಟೀನ್ ನಿರ್ಮಾಣದ ಬಗ್ಗೆ ಸಾರ್ವಜನಿಕರು ಅಸಮಧಾನ ವ್ಯಕ್ತಪಡಿಸಿದ್ದು, ಜನರ ಹಿತಾಸಕ್ತಿಗಿಂತ ಸರ್ಕಾರಕ್ಕೆ ಲೆಕ್ಕ ತೋರಿಸೋ ಉದ್ದೇಶದಿಂದ ಈ ರೀತಿ ಹಠಕ್ಕೆ ಬಿದ್ದು ಅಕ್ಕ ಪಕ್ಕದ ವಾರ್ಡ್ ಗಳ ಇಂದಿರಾ ಕ್ಯಾಂಟೀನ್ ಗಳನ್ನು ಅನಗತ್ಯವಾಗಿ ನಿರ್ಮಿಸಿದ್ದಾರೆ ಅಂತ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

     

  • ಉಡುಪಿ ನಗರಸಭೆಯಲ್ಲಿ ಫೈಟಿಂಗ್: ಕಾಂಗ್ರೆಸ್ ಸದಸ್ಯರಿಂದಲೇ ಸಾರ್ವಜನಿಕನ ಮೇಲೆ ಹಲ್ಲೆ

    ಉಡುಪಿ ನಗರಸಭೆಯಲ್ಲಿ ಫೈಟಿಂಗ್: ಕಾಂಗ್ರೆಸ್ ಸದಸ್ಯರಿಂದಲೇ ಸಾರ್ವಜನಿಕನ ಮೇಲೆ ಹಲ್ಲೆ

    ಉಡುಪಿ: ನಗರಸಭೆ ಸಾಮಾನ್ಯ ಸಭೆಯಲ್ಲಿ ತನ್ನ ವಾರ್ಡ್ ಸದಸ್ಯೆಯ ಪರ ಹೇಳಿಕೆ ನೀಡಲು ಬಂದಿದ್ದ ವ್ಯಕ್ತಿಯೊಬ್ಬರ ಮೇಲೆ ಆಡಳಿತ ಕಾಂಗ್ರೆಸ್ ಪಕ್ಷದ ಸದಸ್ಯರು ಹಲ್ಲೆ ನಡೆಸಿದ್ದಾರೆ.

    ಕಾರ್ಯಕ್ರಮ ನಡೆಯುವ ವೇಳೆ ಬ್ಯಾನರ್‍ನಲ್ಲಿ ನನ್ನ ಭಾವಚಿತ್ರ ಹಾಕುತ್ತಿಲ್ಲ. ಶಾಸಕರಿಗೆ ಮಾಹಿತಿ ನೀಡದೆ ರಸ್ತೆಯೊಂದನ್ನು ಉದ್ಘಾಟನೆ ಮಾಡಲಾಗಿದೆ ಎಂದು ಪಕ್ಷದವರೇ ಕೆಲವರು ಆರೋಪ ಮಾಡಿದ್ದಾರೆ. ಅಲ್ಲದೆ ಕಡಿಯಾಳಿ ದೇವಸ್ಥಾನದ ಗೇಟ್ ಬಂದ್ ಮಾಡಿರುವುದರಿಂದ ಅಲ್ಲಿನ ಜನರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಹಾಗಾಗಿ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಸದಸ್ಯೆ ಗೀತಾ ಶೇಟ್ ಹೇಳಿದರು.

    ಈ ವೇಳೆ ಗೀತಾ ಅವರ ಪರವಾಗಿ ಹೇಳಿಕೆ ನೀಡಲು ರೋನಿ ಡೀಮೆಲ್ಲೊ ಎಂಬುವರು ಸದನದ ಒಳಗೆ ನುಗ್ಗಿದರು. ಹೀಗಾಗಿ ಕಾಂಗ್ರೆಸ್ ಸದಸ್ಯರು ಸೇರಿ ಅವರನ್ನು ತಡೆದು ಹಲ್ಲೆಮಾಡಿ ಹೊರ ದಬ್ಬಿದರು.

    ರಮೇಶ್ ಕಾಂಚನ್, ರಮೇಶ್ ಪೂಜಾರಿ, ಸುಕೇಶ್ ಹೆರ್ಗ ಎಂಬವರಿಂದ ಹಲ್ಲೆ ನಡೆದಿದೆ ಎನ್ನಲಾಗಿದೆ. ಉಡುಪಿ ಅಜ್ಜರಕಾಡು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

    https://youtu.be/0Lb4iGpcf30