Tag: ವಾರ್ನಿಂಗ್

  • ನಾವು ದಾಳಿ ಮಾಡುವ ಮೊದಲೇ ಅಪರಾಧ ಕೃತ್ಯಗಳನ್ನ ಬಿಟ್ಟುಬಿಡಿ: ರೌಡಿಗಳಿಗೆ ಎಸ್ಪಿ ಖಡಕ್ ವಾರ್ನಿಂಗ್

    ನಾವು ದಾಳಿ ಮಾಡುವ ಮೊದಲೇ ಅಪರಾಧ ಕೃತ್ಯಗಳನ್ನ ಬಿಟ್ಟುಬಿಡಿ: ರೌಡಿಗಳಿಗೆ ಎಸ್ಪಿ ಖಡಕ್ ವಾರ್ನಿಂಗ್

    ಬೀದರ್: ರೌಡಿಶೀಟರ್ (Rowdy Sheeter) ಪೇರೆಡ್‌ನಲ್ಲಿ ರೌಡಿಗಳಿಗೆ ಬೀದರ್ ಎಸ್ಪಿ ಪ್ರದೀಪ್ ಗುಂಟಿ (SP Pradeep Gunti) ಖಡಕ್ ವಾರ್ನಿಂಗ್ ನೀಡಿದ್ದಾರೆ.

    ಜಿಲ್ಲೆಯ ಪೊಲೀಸ್ ಪೇರೆಡ್ ಮೈದಾನದಲ್ಲಿ (Police Parade Ground) ನಡೆದ ರೌಡಿ ಪೆರೇಡ್‌ನಲ್ಲಿ ಜಿಲ್ಲೆಯಾದ್ಯಂತ ನೂರಾರು ರೌಡಿಗಳು ಭಾಗಿಯಾಗಿದ್ದು, ಇನ್ನೂ ಎಲ್ಲಾ ಅಪರಾಧ ಕೃತ್ಯಗಳು ಬಂದ್ ಆಗಬೇಕು. ನಾವು ಯಾವಾಗ ಮನೆ ಮೇಲೆ ದಾಳಿ ಮಾಡುತ್ತೇವೆ ಗೊತ್ತಿಲ್ಲ. ಹೀಗಾಗಿ ಮೊದಲೇ ಎಲ್ಲಾ ಅಪರಾಧಗಳನ್ನು ಬಿಟ್ಟು ಬಿಡಿ ಎಂದು ರೌಡಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಶ್ರೀರಂಗಪಟ್ಟಣ ದಸರಾ | ಜಂಬೂಸವಾರಿ ವೇಳೆ ಬೆದರಿ ಓಡಿದ ಹಿರಣ್ಯ ಆನೆ – ತಪ್ಪಿದ ಭಾರೀ ಅನಾಹುತ

    ಇರಾನಿ ಗ್ಯಾಂಗ್‌ನ ಖತರ್ನಾಕ್ ರೌಡಿ ಪೇರೆಡ್‌ಗೆ ಕ್ಯಾಪ್ ಹಾಕೊಂಡು ಬರುತ್ತಿಯಾ, ಮೂರೂ ಕಳ್ಳತನ ಕೇಸ್ ದಾಖಲಾಗಿದ್ದರೂ ಇನ್ನೂ ನೀನು ಪರಿವರ್ತನೆಯಾಗಿಲ್ವಾ ಎಂದು ವಾರ್ನಿಂಗ್ ನೀಡಿದರು.

    ಇನ್ನೂ ಗಾಂಜಾ ಕೇಸ್‌ನಲ್ಲಿ ಸಾಮೂಹಿಕವಾಗಿ ಸಿಪಿಐ ಮೇಲೆ ಹಲ್ಲೆ ಮಾಡಿದ ಆರೋಪಿಗಳಿಗೆ, ನೀವು ಪೊಲೀಸ್ ಮೇಲೆಯೇ ಹಲ್ಲೆ ಮಾಡುತ್ತೀರಾ ಎಂದು ಇವರನ್ನು ರೌಡಿ ಪೇರೆಡ್‌ಗೆ ಕರೆಸಿ ಎಂದು ಸೂಚಿಸಿದ್ದಾರೆ.

    ಇಂದು ರೌಡಿ ಪೇರೆಡ್‌ಗೆ ಯಾರು ಹಾಜರಾಗಿ¯್ಲ ಅಂಥವರ ಕೇಸ್ ಕ್ಲೋಸ್ ಮಾಡಲ್ಲ. ಎಲ್ಲಾ ರೌಡಿಗಳು ಪುಲ್ ಆಕ್ಟಿವ್ ಆಗಿರುವುದು ಮಾಹಿತಿ ಬಂದಿದೆ. ನಾವು ಮಧ್ಯರಾತ್ರಿ ಯಾವಾಗ ಮನೆ ಮೇಲೆ ದಾಳಿ ಮಾಡುತ್ತೆವೆ ಗೊತ್ತಿಲ್ಲ. ಹೀಗಾಗಿ ಮೊದಲೇ ಎಲ್ಲಾ ಅಪರಾಧಗಳನ್ನು ಬಿಟ್ಟು ಬಿಡಿ ಎಂದು ರೌಡಿಗಳಿಗೆ ಎಸ್ಪಿ ಖಡಕ್ ವಾರ್ನಿಂಗ್ ನೀಡಿದ್ದಾರೆ.ಇದನ್ನೂ ಓದಿ: ಸರಳವಾಗಿ ಜರುಗಿತು ವಿಜಯ್ ದಳಪತಿ, ಪೂಜಾ ಹೆಗ್ಡೆ ನಟನೆಯ ಸಿನಿಮಾ ಮುಹೂರ್ತ

  • ಅಣ್ಣಾವ್ರ ಹಾಗೆ ಬೆಳೀಬೇಕು, ಹೀಗೆ ಹೆದ್ರಿಸೋದಲ್ಲ- ಮತ್ತೆ ಹಿಂಗೆ ಮಾಡಿದ್ರೆ ಬಾಲ ಕಟ್ ಎಂದ ಎಸ್‍ಪಿ

    ಅಣ್ಣಾವ್ರ ಹಾಗೆ ಬೆಳೀಬೇಕು, ಹೀಗೆ ಹೆದ್ರಿಸೋದಲ್ಲ- ಮತ್ತೆ ಹಿಂಗೆ ಮಾಡಿದ್ರೆ ಬಾಲ ಕಟ್ ಎಂದ ಎಸ್‍ಪಿ

    – ಜಂಗ್ಲಿ ಟೈಟಲ್‍ಗಾಗಿ 100 ಬಾರಿ ಸಿನಿಮಾ ನೋಡಿದ್ದ ರೌಡಿ

    ಮಂಡ್ಯ: ಜಂಗ್ಲಿ ಟೈಟಲ್‍ಗಾಗಿ ಮಂಡ್ಯದ ರೌಡಿಶೀಟರ್ ಒಬ್ಬ ‘ಜಂಗ್ಲಿ’ ಸಿನಿಮಾವನ್ನು 100 ಬಾರಿ ವೀಕ್ಷಣೆ ಮಾಡಿರುವ ಸಂಗತಿ ಪೊಲೀಸರು ಮಾಡಿದ ರೌಡಿ ಶೀಟರ್‌ಗಳ ಪೆರೇಡ್‍ನಲ್ಲಿ ತಿಳಿದು ಬಂದಿದೆ.

    ರೌಡಿ ಶೀಟರ್ ಶೇಖರ್ 100 ಬಾರಿ ‘ಜಂಗ್ಲಿ’ ಸಿನಿಮಾವನ್ನು ವೀಕ್ಷಣೆ ಮಾಡಿದ್ದಾನೆ. ಇಂದು ಮಂಡ್ಯದ ಪೊಲೀಸ್ ಕವಾಯತು ಮೈದಾನದಲ್ಲಿ ರೌಡಿ ಶೀಟರ್‌ಗಳ ಪೆರೇಡ್ ನಡೆದಿದೆ. ಈ ಹಿಂದೆ ಯಾರೋ ಜಂಗ್ಲಿ ಎಂದು ಕರೆದಿದ್ದಕ್ಕೆ ‘ಜಂಗ್ಲಿ ಅಣ್ಣ’ ಅಂತ ಕರಿ ಎಂದು ಹಲ್ಲೆ ಮಾಡಿದ್ದನು. ಅದಕ್ಕೆ ಇಂದು ಪೆರೇಡ್‍ನಲ್ಲಿ ನಿಂಗೆ ಯಾರೋ ಟೈಟಲ್ ನೀಡಿದ್ದು ಎಂದು ಎಸ್‍ಪಿ ಕೇಳಿದ್ದಾರೆ.

    ಆಗ ಜಂಗ್ಲಿ ಶೇಖರ್, ನಾನು ಜಂಗ್ಲಿ ಸಿನಿಮಾವನ್ನು ನೂರು ಬಾರಿ ನೋಡಿದ್ದೇನೆ. ಅದಕ್ಕೆ ಎಲ್ಲರೂ ಜಂಗ್ಲಿ ಎಂದು ಕರೆಯುತ್ತಾರೆ ಎಂದು ಎಸ್‍ಪಿ ಪರಶುರಾಮ್ ಅವರಿಗೆ ಹೇಳಿದ್ದಾನೆ. ನಂತರ ಎಸ್‍ಪಿ ಅವರು, ನಿನ್ನ ಅಣ್ಣ ಎಂದು ಕರೀಬೇಕಾ. ಡಾ.ರಾಜ್‍ಕುಮಾರ್ ಅವರು ಇದ್ದರು. ಅವರು ನನ್ನ ಅಣ್ಣ ಎಂದು ಕರೀರಿ ಅಂತಾ ಯಾರಿಗೂ ಹೇಳಲಿಲ್ಲ. ಆದರೆ ಜನರು ಅವರನ್ನು ಈಗಲೂ ಅಣ್ಣಾವ್ರು ಎಂದೇ ಕರೆಯುತ್ತಾರೆ. ಅಣ್ಣಾವ್ರ ಹಾಗೆ ಬೆಳೆಯಬೇಕು ಅದನ್ನು ಬಿಟ್ಟು ಹೀಗೆ ಹೆದರಿಸುವುದು ಅಲ್ಲ, ಇನ್ನೊಂದು ಸಾರಿ ಹೀಗೆ ಮಾಡಿದ್ದು ತಿಳಿದರೆ ಬಾಲ ಕಟ್ ಮಾಡುತ್ತೇನೆ ಎಂದು ರೌಡಿಶೀಟರ್ ಶೇಖರ್‌ಗೆ ಎಸ್‍ಪಿ ವಾರ್ನಿಂಗ್ ಕೊಟ್ಟಿದ್ದಾರೆ.

    ರೌಡಿ ಪೆರೇಡ್‍ಗೆ ಬಂದಿದ್ದ ಮತ್ತೊಬ್ಬ ರೌಡಿ ಶೀಟರ್ ಬಸವನಿಗೂ ಎಸ್‍ಪಿ ಕ್ಲಾಸ್ ತೆಗೆದುಕೊಂಡರು. ಬಸವ ಮುಖದ ಶೈನಿಂಗ್‍ಗಾಗಿ ಕ್ರೀಮ್‍ವೊಂದನ್ನು ಹಾಕಿರುವ ಪರಿಣಾಮ ಮುಖ ಕೆಂಪಾಗಿ ಕಾಣುತ್ತಿತ್ತು. ಇದಕ್ಕೆ ಎಸ್‍ಪಿ ಪರಶುರಾಮ್ ಅವರು ಯಾಕೋ ಮುಖ ಇಷ್ಟೊಂದು ಕೆಂಪಾಗಿದೆ ಎಂದು ಕೇಳಿದ್ದಾರೆ. ಅದಕ್ಕೆ ಶೈನಿಂಗ್ ಕ್ರೀಮ್ ಹಾಕಿದ್ದೇನೆ ಎಂದು ಬಸವ ಹೇಳಿದ. ವೈಟ್ ಆಗಲು ಹೋಗಿ ರೆಡ್ ಆಗಿದಿಯಲ್ಲೋ, ಎಲ್ಲರೂ ಇವನು ಹಚ್ಚುವ ಕ್ರೀಮ್ ಹಚ್ಚಿ ಕೆಂಪಾಗಿ ಕಾಣುತ್ತೀರಾ ಎಂದು ಎಸ್‍ಪಿ ಗೇಲಿ ಮಾಡಿದರು.

    ಇಂದು ನಡೆದ ಮಂಡ್ಯ ರೌಡಿ ಶೀಟರ್‌ಗಳ ಪೈಕಿ 200 ಮಂದಿ ರೌಡಿಗಳು ಹಾಜರಿದ್ದರು. ಬಂದ ಎಲ್ಲಾ ರೌಡಿಗಳಿಗೂ ಮಂಡ್ಯ ಪೊಲೀಸ್ ವರಿಷ್ಠಾಧಿಕಾರಿ ಪರಶುರಾಮ್ ಅವರು ಖಡಕ್ ವಾರ್ನಿಂಗ್ ನೀಡಿ ಎಲ್ಲಾ ರೌಡಿ ಚುಟುವಟಿಕೆಗಳನ್ನು ನಿಲ್ಲಿಸಬೇಕೆಂದು ಎಚ್ಚರಿಕೆ ನೀಡಿದರು. ಪೆರೇಡ್‍ಗೆ ಬಂದ 200 ರೌಡಿ ಶೀಟರ್‌ಗಳ ಪೈಕಿ 20 ಮಂದಿಯ ಉತ್ತಮ ನಡತೆಯನ್ನು ಗಮನಿಸಿ ರೌಡಿ ಶೀಟರ್ ನಿಂದ ಕೈ ಬಿಡಲಾಯಿತು.

  • ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗ್ಬೇಡಿ- ರೌಡಿಗಳಿಗೆ ಖಡಕ್ ವಾರ್ನಿಂಗ್

    ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗ್ಬೇಡಿ- ರೌಡಿಗಳಿಗೆ ಖಡಕ್ ವಾರ್ನಿಂಗ್

    ಆನೇಕಲ್: ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ ರೌಡಿಗಳನ್ನು ಕರೆಸಿ ಬೆಂಗಳೂರು ಹೊರವಲಯ ಆನೇಕಲ್ ಪೊಲೀಸ್ ಠಾಣಾ ವಿಭಾಗದಲ್ಲಿ ಪೊಲೀಸರು ಖಡಕ್ ಎಚ್ಚರಿಕೆಯನ್ನು ನೀಡಿದ್ದಾರೆ.

    ಕೊಲೆ, ಕಳ್ಳತನ, ದರೋಡೆ ಸೇರಿದಂತೆ ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಗಳಲ್ಲಿ ಸುಮಾರು 50ಕ್ಕೂ ಹೆಚ್ಚು ರೌಡಿ ಶೀಟರ್ ಗಳನ್ನು ಪೊಲೀಸ್ ಠಾಣೆಗೆ ಕರೆಸಿ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗದಂತೆ ಖಡಕ್ ವಾರ್ನಿಂಗ್ ನೀಡಿದ್ದಾರೆ.

    ಮುಂದಿನ ದಿನಗಳಲ್ಲಿ ಯಾವುದೇ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗದೆ ಸಮಾಜದಲ್ಲಿ ಒಳ್ಳೆಯ ರೀತಿಯಲ್ಲಿ ಬದುಕಬೇಕೆಂದು ಎಚ್ಚರಿಕೆಯನ್ನು ನೀಡಿದ್ದಾರೆ. ಅದರಲ್ಲೂ ಆನೇಕಲ್ ಸುತ್ತಮುತ್ತ ಗಾಂಜಾ ಮಾರಾಟ ಹಾಗೂ ಮನೆಕಳ್ಳತನ ಪ್ರಕರಣಗಳು ಹೆಚ್ಚಾಗಿದ್ದು, ಇಂತಹ ಪ್ರಕರಣಗಳು ಕಂಡುಬಂದಾಗ ಕಾನೂನು ಕ್ರಮಕೈಗೊಳ್ಳಲಾಗುವುದು. ಮುಂದಿನ ದಿನಗಳಲ್ಲಿ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದೆ. ಒಳ್ಳೆಯ ನಡವಳಿಕೆಯಿಂದ ನಡೆದುಕೊಂಡರೆ, ರೌಡಿ ಶೀಟರ್ ಪಟ್ಟಿಯಿಂದ ಕೈ ಬಿಡಲಾಗುತ್ತದೆ ಎಂಬ ವಿಷಯವನ್ನು ಆನೇಕಲ್ ಪೊಲೀಸ್ ಇನ್ಸ್ ಪೆಕ್ಟರ್ ಕೃಷ್ಣ ಲಮಾಣಿ, ಸಬ್ ಇನ್ಸ್ ಪೆಕ್ಟರ್ ಮುರಳೀಧರ್ ರೌಡಿ ಶೀಟರ್ ಗಳಿಗೆ ಮನವರಿಕೆ ಮಾಡಿಕೊಟ್ಟರು.

  • ಸಾರಿಗೆ ಸಿಬ್ಬಂದಿಗೆ ಡಿಸಿಎಂ ಸವದಿ ವಾರ್ನಿಂಗ್

    ಸಾರಿಗೆ ಸಿಬ್ಬಂದಿಗೆ ಡಿಸಿಎಂ ಸವದಿ ವಾರ್ನಿಂಗ್

    ಬೆಂಗಳೂರು: ನಾಳೆ ನಡೆಯುವ ಭಾರತ್ ಬಂದ್ ನಲ್ಲಿ ಕೆ.ಎಸ್.ಆರ್.ಟಿ.ಸಿ, ಬಿಎಂಟಿಸಿ ಸಿಬ್ಬಂದಿ ಭಾಗವಹಿಸಬಾರದು. ಸಂಸ್ಥೆಯ ಕೆಲಸಕ್ಕೆ ಗೈರು ಹಾಜರಾದರೆ ಅಂತಹವರ ವೇತನವನ್ನು ಕಡಿತಗೊಳಿಸಲಾಗುವುದು ಹಾಗೂ ಅವರ ವಿರುದ್ಧ ಶಿಸ್ತಿನ ಕ್ರಮ ಕೈಗೊಳ್ಳಲಾಗುವುದೆಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಸಾರಿಗೆ ಸಿಬ್ಬಂದಿಗೆ ವಾರ್ನಿಂಗ್ ಕೊಟ್ಟಿದ್ದಾರೆ.

    ಸಾರಿಗೆ ನಿಗಮಗಳನ್ನು ಸರ್ಕಾರವು ಸಾರ್ವಜನಿಕ ಅಗತ್ಯ ಸೇವಾ ಸಂಸ್ಥೆ ಎಂದು ಘೋಷಿಸಿದೆ. ಆ ಪ್ರಕಾರ ಸಮರ್ಪಕವಾದ ಸಾರಿಗೆ ಸೌಲಭ್ಯವನ್ನು ಒದಗಿಸುವುದು ಪ್ರತಿಯೊಬ್ಬ ಅಧಿಕಾರಿ ಹಾಗೂ ನೌಕರರ ಆದ್ಯ ಕರ್ತವ್ಯವಾಗಿದೆ. ಹೀಗಾಗಿ ಕೆ.ಎಸ್.ಆರ್.ಟಿ.ಸಿ ಹಾಗೂ ಬಿಎಂಟಿಸಿ ಎಂದಿನಂತೆ ಕಾರ್ಯ ನಿರ್ವಹಿಸಬೇಕೆಂದು ಮುನ್ನೆಚ್ಚರಿಕೆ ನೀಡಲಾಗಿದೆಂದು ತಿಳಿಸಿದ್ದಾರೆ.

    ಸಾರ್ವಜನಿಕರಿಗೆ ಅಗತ್ಯ ಸೇವೆ ಕಲ್ಪಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗುತ್ತಿದೆ. ಆದ್ದರಿಂದ ಬಂದ್-ಮುಷ್ಕರದಲ್ಲಿ ಭಾಗವಹಿಸುವ ಯಾರೊಬ್ಬರೂ ಸರ್ಕಾರಿ ಆಸ್ತಿ- ಪಾಸ್ತಿಗಳಿಗೆ ಅದರಲ್ಲೂ ವಿಶೇಷವಾಗಿ ಸಾರಿಗೆ ಬಸ್ಸುಗಳಿಗೆ ಹಾನಿ ಉಂಟುಮಾಡುವ ದುಷ್ಕೃತ್ಯಕ್ಕೆ ಮುಂದಾಗಬಾರದು. ಒಂದು ವೇಳೆ ಕಾನೂನು ಉಲ್ಲಂಘಿಸಿ ಅಹಿತಕರ ಘಟನೆಗಳಿಗೆ ಯತ್ನಿಸಿದ್ದಲ್ಲಿ ಅಂತಹವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ನಮ್ಮ ಸರ್ಕಾರ ಹಿಂದೆ ಮುಂದೆ ನೋಡುವುದಿಲ್ಲ ಎಂದು ಎಚ್ಚರಿಸಿದ್ದಾರೆ.

    ಈ ರೀತಿಯ ಬಂದ್‍ಗಳಿಂದಾಗಿ ನಮ್ಮ ಸರ್ಕಾರಿ ಸಂಸ್ಥೆಗಳಿಗೆ ನಷ್ಟವಾಗುವುದಲ್ಲದೇ ರಾಷ್ಟ್ರದ ಆರ್ಥಿಕ ಚಟುವಟಿಕೆಗಳು ಅಧೋಗತಿಗೆ ತಲುಪುವಂತಾಗುತ್ತದೆ ಎಂದು ಪ್ರಕಟನೆ ಹೊರಡಿಸಿದ್ದಾರೆ.

  • ಹುಡುಗೀರಿಗೆ ಚುಡಾಯಿಸಿದ್ರೆ ಒನಕೆ ಓಬವ್ವ ಬರ್ತಾಳೆ: ಎಸ್‍ಪಿ ನಿಶಾ ಜೇಮ್ಸ್ ಖಡಕ್ ವಾರ್ನಿಂಗ್

    ಹುಡುಗೀರಿಗೆ ಚುಡಾಯಿಸಿದ್ರೆ ಒನಕೆ ಓಬವ್ವ ಬರ್ತಾಳೆ: ಎಸ್‍ಪಿ ನಿಶಾ ಜೇಮ್ಸ್ ಖಡಕ್ ವಾರ್ನಿಂಗ್

    ಉಡುಪಿ: 2020ಯನ್ನು ಬರಮಾಡಿಕೊಳ್ಳಲು ಎಲ್ಲೆಡೆ ಸಿದ್ಧತೆ ನಡೆಯುತ್ತಿದೆ. ಉಡುಪಿ ಜಿಲ್ಲೆ ಮಣಿಪಾಲದಲ್ಲಿ ಸ್ಪೆಷಲ್ ಅರೇಂಜ್ಮೆಂಟ್ ಮಾಡಲಾಗಿದೆ. ಈ ನಡುವೆ ಉಡುಪಿ ಎಸ್ ಪಿ ನಿಶಾ ಜೇಮ್ಸ್ ಕುಡುಕರಿಗೆ ಮತ್ತು ಪೋಕರಿಗಳಿಗೆ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ.

    ಇವತ್ತು ಸಂಜೆಯಾಗುತ್ತಲೇ ಹೊಸ ವರ್ಷದ ಕಿಚ್ಚು ಹಚ್ಕೊಳುತ್ತೆ. ಕುಡಿದ ಮತ್ತಲ್ಲಿ ಮಣಿಪಾಲದ ಮಾಡರ್ನ್ ಯುವತಿಯರನ್ನು ಕೆಲ ಪೋಕರಿಗಳು ಚುಡಾಯಿಸಲು ಶುರುಮಾಡ್ತಾರೆ. ಹಾಗೇನಾದ್ರು ಯಾರಾದರೂ ಚುಡಾಯಿಸಿದ್ರೊ ಅವರ ಕಥೆ ಕ್ಲೋಸ್. ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಎಸ್‍ಪಿ ನಿಶಾ ಜೇಮ್ಸ್, ಮಣಿಪಾಲದಲ್ಲಿ ರಾಣಿ ಅಬ್ಬಕ್ಕ ಪಡೆಯನ್ನು ನಿಯೋಜಿಸಿದ್ದು, ಗಸ್ತು ತಿರುಗಲಿದ್ದಾರೆ. ಯಾರಾದ್ರೂ ಕಾನೂನು ಮೀರಿದ್ರೆ ಶಿಕ್ಷೆ ಅನುಭವಿಸಬೇಕಾಗುತ್ತೆ ಎಂದು ಹೇಳಿದ್ದಾರೆ.

    ಹೊಸ ವರ್ಷದ ನೆಪದಲ್ಲಿ ಯಾರಾದರೂ ಬಾಲ ಬಿಚ್ಚೋಕೆ ಟ್ರೈ ಮಾಡಿದರೆ ನಿಮ್ನ ಚಚ್ಚೋಕೆ ಲೇಡಿ ಪೊಲೀಸರು ರೆಡಿಯಾಗಿದ್ದಾರೆ. ಖಾಸಗಿ ಹೋಟೆಲ್, ಪಬ್‍ನಲ್ಲಿ ಕಾರ್ಯಕ್ರಮ ಸಂದರ್ಭ ಖಾಸಗಿ ಸೆಕ್ಯೂರಿಟಿ ನೇಮಿಸಬೇಕು. 12.30 ರೊಳಗೆ ಎಲ್ಲಾ ಸಂಭ್ರಮಾಚರಣೆಗಳು ಮುಗಿಸಬೇಕು ಎಂದು ತಿಳಿಸಿದ್ದಾರೆ.

    ಕೇರಳ ಮತ್ತು ಹೊರ ಜಿಲ್ಲೆಯ ಯುವಕರು ಮೋಜು ಮಸ್ತಿಗೆ ಉಡುಪಿ ಮಣಿಪಾಲ ಬರುವುದರ ಮೇಲೆ ಪೊಲೀಸರು ಹದ್ದಿನಕಣ್ಣಿಟ್ಟಿದ್ದಾರೆ. ಸ್ಪೆಷಲ್ ಚೆಕ್ ಪೋಸ್ಟ್ ನಿರ್ಮಾಣ ಮಾಡಿದ್ದು ಸಿಸಿಟಿವಿ ಅಳವಡಿಸಲಾಗಿದೆ. ಹೊರ ರಾಜ್ಯ ಜಿಲ್ಲೆಯ ವಾಹನಗಳ ಮೇಲೆ ಗಸ್ತು ಪೊಲೀಸರು ನಿಗಾ ವಹಿಸಿದ್ದು, ಕೇಸ್ ದಾಖಲಿಸೋಕೆ ರೆಡಿಯಾಗಿದ್ದಾರೆ.

    ಪೇಜಾವರಶ್ರೀ ನಿಧನದಿಂದ ಸರ್ಕಾರಿ ಕಾರ್ಯಕ್ರಮಗಳು ರದ್ದಾಗಿದ್ದು, ಮಲ್ಪೆಯ ಬೀಚ್ ಫೆಸ್ಟಿವಲ್ ಕೂಡಾ ರದ್ದು ಮಾಡಲಾಗಿದೆ. ಕುಡಿದು ವಾಹನ ಚಲಾಯಿಸೋರಿಗೆ ಫೈನ್ ಜೊತೆ ಕೇಸ್ ಹಾಕೋದಕ್ಕೆ ಪೊಲೀಸರು ದಂಡದ ಪುಸ್ತಕ ಕೈಗೆತ್ತಿಕೊಂಡಿದ್ದು, ಕುಡಿತದ ಅಭ್ಯಾಸ ಇರದ ಚಾಲಕನನ್ನು ಜೊತೆಗೆ ಕರೆದುಕೊಂಡು ಹೋಗಿ ಎಂದು ಎಸ್‍ಪಿ. ನಿಶಾ ಜೇಮ್ಸ್ ಸಲಹೆ ಕೊಟ್ಟಿದ್ದಾರೆ.

  • ಪ್ರತಿಭಟನೆ ನಡೆಸಿದ್ರೆ ಹುಷಾರ್ – ಬೆಂಗಳೂರು ನಗರ ಪೊಲೀಸ್ ಆಯುಕ್ತರಿಂದ ಖಡಕ್ ವಾರ್ನಿಂಗ್

    ಪ್ರತಿಭಟನೆ ನಡೆಸಿದ್ರೆ ಹುಷಾರ್ – ಬೆಂಗಳೂರು ನಗರ ಪೊಲೀಸ್ ಆಯುಕ್ತರಿಂದ ಖಡಕ್ ವಾರ್ನಿಂಗ್

    ಬೆಂಗಳೂರು: ರಾಷ್ಟ್ರೀಯ ಪೌರತ್ವ ಕಾಯ್ದೆ ತಿದ್ದುಪಡಿ ವಿಚಾರ ಸಂಬಂಧ ದೇಶಾದ್ಯಂತ ಪರ- ವಿರೋಧ ಹೇಳಿಕೆಗಳು ವ್ಯಕ್ತವಾಗುತ್ತಿವೆ. ಜೊತೆಗೆ ಉತ್ತರ ಭಾರತದ ಕೆಲ ರಾಜ್ಯಗಳಲ್ಲಿ ಪ್ರತಿಭಟನೆಯ ಕಾವು ಜೋರಾಗುತ್ತಿದೆ. ಇದರಿಂದ ಎಚ್ಚತ್ತ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಖಡಕ್ ವಾರ್ನಿಂಗ್ ನೀಡಿದ್ದಾರೆ.

    ಪೌರತ್ವ ಕಾಯ್ದೆ ತಿದ್ದುಪಡಿ ವಿಚಾರ ಸಂಬಂಧ ಯಾವುದೇ ಪ್ರತಿಭಟನೆಗೆ ಅವಕಾಶ ಇಲ್ಲ. ಒಂದು ವೇಳೆ ಪ್ರತಿಭಟನೆ ನಡೆಸಿದರೆ ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ಕೆಲ ಶಿಕ್ಷಣ, ಸಂಸ್ಥೆ ವಿದ್ಯಾರ್ಥಿಗಳು ನಗರದಲ್ಲಿ ಪ್ರತಿಭಟನೆ ನಡೆಸಿವೆ. ವಿಡಿಯೋ ಗ್ರಾಫ್ ಅಧಾರದ ಮೇಲೆ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು, ಶಿಕ್ಷಣ ಸಂಸ್ಥೆಗಳಿಗೆ ನೋಟಿಸ್ ನೀಡಲಾಗಿದೆ ಎಂದು ತಿಳಿಸಿದರು.

    ಪ್ರತಿಭಟನೆಗೆ ಅವಕಾಶ ಕೋರಿ ಸಾಕಷ್ಟು ಅರ್ಜಿಗಳು ಬಂದಿದ್ದವು. ಇಲ್ಲಿವರೆಗೂ ಯಾರಿಗೂ ಅನುಮತಿ ಕೊಟ್ಟಿಲ್ಲ. ಪ್ರತಿಭಟನೆ ಮಾಡುವವರು ಉತ್ತರ ಭಾರತದ ರಾಜ್ಯಕ್ಕೆ ಹೋಗಿ ಅಲ್ಲಿ ಪ್ರತಿಭಟನೆ ಮಾಡಿ, ನಗರದಲ್ಲಿ ಮಾಡಲು ಅವಕಾಶ ಇಲ್ಲ ಎಂದರು.

    ಇದೇ ವೇಳೆ ಇನ್ನೂ ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್ ಗಳನ್ನು ಹಾಕುತ್ತಿದ್ದಾರೆ. ಅಂತವರ ಮೇಲೆ ಐಟಿ ಸೆಲ್‍ನಿಂದ ನಿಗಾ ವಹಿಸಲಾಗಿದ್ದು, ಸೂಕ್ತ ಕ್ರಮದ ಎಚ್ಚರಿಕೆ ನೀಡಿದರು.

  • ಪುಡಾರಿಗಳಿಗೆ ಡಿಸಿಪಿ ಶರಣಪ್ಪ ಖಡಕ್ ಎಚ್ಚರಿಕೆ

    ಪುಡಾರಿಗಳಿಗೆ ಡಿಸಿಪಿ ಶರಣಪ್ಪ ಖಡಕ್ ಎಚ್ಚರಿಕೆ

    ಬೆಂಗಳೂರು: ಪೂರ್ವ ವಿಭಾಗದ ಡಿಸಿಪಿ ಶರಣಪ್ಪ ಆ ವಿಭಾಗದ ಪುಡಾರಿಗಳನ್ನು ಕರೆಸಿ ಪರೇಡ್ ಮಾಡಿ ಖಡಕ್ ವಾರ್ನಿಂಗ್ ನೀಡಿದ್ದಾರೆ.

    ಪೂರ್ವ ವಿಭಾಗದ ಬಾಣಸವಾಡಿ, ಹಲಸೂರು, ರಾಮೂರ್ತಿ ನಗರ, ಬೈಯ್ಯಪ್ಪನ ಹಳ್ಳಿ, ಇಂದಿರಾ ನಗರ, ಜೀವನ್ ಭೀಮಾನಗರ ಸೇರಿದಂತೆ ಪೂರ್ವ ವಿಭಾಗದ ಎಲ್ಲಾ ಪೊಲೀಸ್ ರೌಡಿ ಶೀಟರ್ ಗಳನ್ನು ಕರೆದು ಪರೇಡ್ ಮಾಡಲಾಯ್ತು. ಪರೇಡ್‍ನಲ್ಲಿ ಸುಮಾರು 150 ಕ್ಕೂ ಹೆಚ್ಚು ಪುಡಿ ರೌಡಿಗಳಿಗೆ ಲೆಫ್ಟ್ ರೈಟ್ ಮಾಡಿ ಖಡಕ್ ವಾರ್ನ್ ಮಾಡಿದ್ರು. ಅಷ್ಟೇ ಅಲ್ಲದೇ ನಿರಂತರವಾಗಿ ಅಪರಾಧ ಚಟುವಟಿಕೆಯಲ್ಲಿ ನಿರತರಾದರೆ ಗೂಂಡ ಆಕ್ಟ್ ಆಗಿ ಜೈಲಿಗೆ ಕಳಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

    ನಗರದಲ್ಲಿ ಅದರಲ್ಲೂ ಕೆಲ ದಿನಗಳಿಂದ ಪೂರ್ವ ವಿಭಾಗದ ರಾಮಮೂರ್ತಿ ನಗರ, ಬೈಯ್ಯಪ್ಪನಹಳ್ಳಿ ಅಸುಪಾಸಿನಲ್ಲಿ ಸರಗಳ್ಳತನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರೌಡಿ ಪರೇಡ್ ಮಾಡಿ ಡಿಸಿಪಿ ವಾರ್ನ್ ಮಾಡಿದ್ದಾರೆ. ಪರೇಡ್ ವೇಳೆ ಆಕ್ಟಿವ್ ಆಗಿರುವ ಅಪಾಯಕಾರಿ ಕ್ರಿಮಿನಲ್‍ಗಳ ಮೇಲೆ ಹದ್ದಿನ ಕಣ್ಣಿಡುವಂತೆ ಆಯಾ ಠಾಣಾ ಇನ್ಸ್ ಪೆಕ್ಟರ್ ಹಾಗೂ ಕ್ರೈಂ ಸಿಬ್ಬಂದಿಗೆ ಡಿಸಿಪಿ ಶರಣಪ್ಪ ತಾಕೀತು ಮಾಡಿದರು. ಅಪರಾಧ ಚಟುವಟಿಕೆಯಲ್ಲಿ ಭಾಗಿರುತ್ತಿರುವುದು ಗಮನಕ್ಕೆ ಬಂದರೆ ಮುಲಾಜಿಲ್ಲದೇ ಬಂಧಿಸಿ ಜೈಲಿಗೆ ಕಳಿಸುವಂತೆ ಸೂಚಿಸಿದರು.

  • ಅಲೋಕ್ ಕುಮಾರ್ ನೈಟ್ ರೌಂಡ್ಸ್ – ಖಾಕಿಯ ಬೆವರಿಳಿಸಿದ ಕಮಿಷನರ್

    ಅಲೋಕ್ ಕುಮಾರ್ ನೈಟ್ ರೌಂಡ್ಸ್ – ಖಾಕಿಯ ಬೆವರಿಳಿಸಿದ ಕಮಿಷನರ್

    – ಡ್ರಿಂಕ್ ಆ್ಯಂಡ್ ಡ್ರೈವ್ ಸವಾರರಿಗೆ ಖಡಕ್ ವಾರ್ನಿಂಗ್
    – 1000ಕ್ಕೂ ಹೆಚ್ಚು ಬೈಕ್‍ಗಳು ವಶ

    ಬೆಂಗಳೂರು: ಖಡಕ್ ಪೊಲೀಸ್ ಕಮಿಷನರ್ ಅಲೋಕ್ ಕುಮಾರ್ ಅವರು ಮತ್ತೆ ನಗರದಲ್ಲಿ ನೈಟ್ ರೌಂಡ್ಸ್ ಹೊಡೆದಿದ್ದಾರೆ. ನಗರದ ಕಾನೂನು ಸುವ್ಯವಸ್ಥೆ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ ಎಂದು ನೂತನ ಸಿ.ಎಂ ಬಿ.ಎಸ್ ಯಡಿಯೂರಪ್ಪ ಅವರ ಸೂಚನೆ ಬೆನ್ನಲ್ಲೇ ನಗರ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಫುಲ್ ಆ್ಯಕ್ಟೀವ್ ಆಗಿದ್ದಾರೆ.

    ಶನಿವಾರ ರಾತ್ರಿ ಹೆಬ್ಬಾಳ, ಮಲ್ಲೇಶ್ವರಂ, ಬಾಣಸವಾಡಿ, ಕಮರ್ಷಿಯಲ್ ಸ್ಟ್ರೀಟ್ ಸೇರಿ ಹಲವೆಡೆಗಳಲ್ಲಿ ನೈಟ್ ರೌಂಡ್ಸ್ ಮಾಡಿ, ಪೊಲೀಸರಿಗೆ ನಡುಕ ಹುಟ್ಟಿಸಿದ್ದಾರೆ. ಕಮರ್ಷಿಯಲ್ ಸ್ಟ್ರೀಟ್, ಹೆಬ್ಬಾಳ, ಮಲ್ಲೇಶ್ವರಂ ಪೊಲೀಸ್ ಠಾಣೆಗಳಿಗೆ ದಿಢೀರ್ ಭೇಟಿ ನೀಡಿದ್ದಾರೆ. ಭೇಟಿ ವೇಳೆ ಪೊಲೀಸರ ನಿರ್ಲಕ್ಷ್ಯ ಕಂಡು ಫುಲ್ ಗರಂ ಆಗಿದ್ದಾರೆ.

    ಡ್ರಿಂಕ್ ಆ್ಯಂಡ್ ಡ್ರೈವ್ ಹಾಗೂ ರಾತ್ರಿ ವೇಳೆ ಹೆಲ್ಮೆಟ್ ಹಾಕದೆ ಬೈಕ್ ರೈಡ್ ಮಾಡುತ್ತಿದ್ದ ರೋಡ್ ರೋಮಿಯೋಗಳಿಗೆ ಸಖತ್ ಕ್ಲಾಸ್ ತೆಗೆದುಕೊಂಡಿದ್ದಾರೆ. ಅಲ್ಲದೆ ಕೆಲ ಡ್ರಿಂಕ್ ಆ್ಯಂಡ್ ಡ್ರೈವ್ ಚೆಕ್ ಪಾಯಿಂಟ್‍ಗಳಲ್ಲಿ ಪೊಲೀಸರ ನಿರ್ಲಕ್ಷ್ಯ ಕಂಡು ಕೆಂಡಮಂಡಲರಾಗಿದ್ದಾರೆ. ನಗರದ 20ಕ್ಕೂ ಹೆಚ್ಚಿನ ಚೆಕ್ ಪಾಯಿಂಟ್‍ಗಳಲ್ಲಿ ಕಾರು, ಬೈಕ್‍ಗಳನ್ನ ತಾಪಸಣೆ ಮಾಡಿ, ಬೈಕ್ ಸವಾರರಿಗೆ ಹೆಲ್ಮೆಟ್ ಧರಿಸುವಂತೆ ಬುದ್ಧಿವಾದ ಹೇಳಿ ಕಳುಹಿಸಿದ್ದಾರೆ.

    ಇನ್ನು ಮುಂದೆ ವಾರದಲ್ಲಿ ಒಮ್ಮೆ ವಿಶೇಷ ಕಾರ್ಯಾಚರಣೆ ಮಾಡುತ್ತೇವೆ. ಸಾರ್ವಜನಿಕರಿಗೆ ರಾತ್ರಿ ಟೈಮಲ್ಲಿ ಪೊಲೀಸರು ಇದ್ದಾರೆ ಎಂಬ ನಂಬಿಕೆ ಬರಬೇಕು. ದಾಖಲೆಗಳಿಲ್ಲದ ಸಾವಿರಕ್ಕೂ ಹೆಚ್ಚಿನ ಬೈಕ್‍ಗಳನ್ನ ವಶಕ್ಕೆ ಪಡೆಯಲಾಗಿದೆ ಎಂದು ಅಲೋಕ್ ಕುಮಾರ್ ಹೇಳಿದ್ದಾರೆ.

  • ರಾತ್ರೋರಾತ್ರಿ ಪುಂಡರಿಗೆ ಪೊಲೀಸರಿಂದ ಖಡಕ್ ವಾರ್ನಿಂಗ್

    ರಾತ್ರೋರಾತ್ರಿ ಪುಂಡರಿಗೆ ಪೊಲೀಸರಿಂದ ಖಡಕ್ ವಾರ್ನಿಂಗ್

    ಬೆಂಗಳೂರು: ನಗರದ ಉತ್ತರ ವಿಭಾಗದ ಪೊಲೀಸರು ಪುಂಡ ಪೋಕರಿಗಳಿಗೆ ರಾತ್ರೋರಾತ್ರಿ ವಾರ್ನಿಂಗ್ ನೀಡಿದ್ದಾರೆ.

    ರಸ್ತೆ ಬದಿ ಸಿಗರೇಟ್ ಸೇದಿ, ಮದ್ಯ ಸೇವಿಸಿ ಗುಂಪಾಗಿ ನಿಂತು ಹೆಣ್ಣು ಮಕ್ಕಳನ್ನು ರೇಗಿಸುವ ವ್ಯಕ್ತಿಗಳನ್ನು ಕರೆಸಿ ಉತ್ತರ ವಿಭಾಗ ಡಿಸಿಪಿ ಶಶಿಕುಮಾರ್ ನೇತೃತ್ವದಲ್ಲಿ ಎಚ್ಚರಿಕೆ ನೀಡಿದ್ದಾರೆ.

    ಡಿಸಿಪಿ ಶಶಿಕುಮಾರ್ ಅವರ ಜೊತೆ ಮಲ್ಲೇಶ್ವರಂ ಉಪವಿಭಾಗದ ಎಸಿಪಿ ಧನಂಜಯ್ ಹಾಗೂ ಇನ್ಸ್ ಪೆಕ್ಟರ್ ಭಾಗಿಯಾಗಿದ್ದರು. ಪೊಲೀಸರು ಪುಂಡರನ್ನು ಓಕಳಿಪುರದ ಕಲ್ಯಾಣ ಮಂಟಪವೊಂದಕ್ಕೆ ಕರೆಸಿ ಬುದ್ಧಿವಾದ ಹೇಳಿದ್ದಾರೆ.

    ಬುದ್ಧಿವಾದ ಹೇಳಿದ ನಂತರ ಗುರುತಿನ ಚೀಟಿ ಪಡೆದು ಅಪರಾಧ ಕೃತ್ಯದಲ್ಲಿ ತೊಡಗದಂತೆ ಎಚ್ಚರಿಕೆ ನೀಡಿದ್ದಾರೆ.

  • ಸಚಿವ, ಶಾಸಕರಿಗೆ ಜೆಡಿಎಸ್ ವರಿಷ್ಠರಿಂದ ಖಡಕ್ ವಾರ್ನಿಂಗ್ ಬಂದಿದೆ: ಸಾ.ರಾ ಮಹೇಶ್

    ಸಚಿವ, ಶಾಸಕರಿಗೆ ಜೆಡಿಎಸ್ ವರಿಷ್ಠರಿಂದ ಖಡಕ್ ವಾರ್ನಿಂಗ್ ಬಂದಿದೆ: ಸಾ.ರಾ ಮಹೇಶ್

    ಮೈಸೂರು: ಮೈಸೂರು ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮೈಸೂರಿನಲ್ಲಿರುವ ಸಚಿವ ಸಾ.ರಾ. ಮಹೇಶ್ ನಿವಾಸಕ್ಕೆ ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿ ಸಿ.ಎಚ್. ವಿಜಯಶಂಕರ್ ಭೇಟಿ ನೀಡಿ ಮಾತುಕತೆ ನಡೆಸಿದರು. ಜೆಡಿಎಸ್ – ಕಾಂಗ್ರೆಸ್ ಉಭಯ ಪಕ್ಷಗಳ ಕಾರ್ಯಕರ್ತರ ನಡುವೆ ಸಮನ್ವಯತೆ ಮೂಡಿಸುವ ಬಗ್ಗೆ ಮಾತುಕತೆ ನಡೆಸಲಾಯಿತು.

    ನಂತರ ಮಾಧ್ಯಮದವರ ಜೊತೆ ಮಾತನಾಡಿದ ಸಚಿವರು, ಜೆಡಿಎಸ್ ವರಿಷ್ಠರಿಂದ ಜೆಡಿಎಸ್ ಸಚಿವರಿಗೆ ಹಾಗೂ ಶಾಸಕರಿಗೆ ಖಡಕ್ ವಾರ್ನಿಂಗ್ ಬಂದಿದೆ. ನಿಮ್ಮ ನಿಮ್ಮ ಕ್ಷೇತ್ರದಲ್ಲಿ ಮತ ಪ್ರಮಾಣ ಕಡಿಮೆಯಾದರೆ, ಅದಕ್ಕೆ ನೀವೇ ಹೊಣೆ. ಮೈತ್ರಿ ಅಭ್ಯರ್ಥಿ ವಿಚಾರದಲ್ಲಿ ನಿರ್ಲಕ್ಷ್ಯ ಮಾಡಿದರೆ, ಚುನಾವಣೆ ನಂತರ ಅದಕ್ಕೆ ನೀವು ಉತ್ತರ ಕೊಡಬೇಕಾಗುತ್ತದೆ. ವಿಧಾನಸಭಾ ಚುನಾವಣೆ ಮತಪ್ರಮಾಣದ ಆಧಾರದ ಮೇಲೆ ಈ ಚುನಾವಣೆ ಮತಗಳಿಕೆ ನೋಡುತ್ತೇವೆ ಎಂದು ಹೇಳಿದ್ದಾರೆ.

    ಜೆಡಿಎಸ್ ವರಿಷ್ಠರು ಸೂಚನೆ ನೀಡಿರುವಂತೆ, ಕಾಂಗ್ರೆಸ್ ಕೂಡ ತಮ್ಮ ಶಾಸಕರು ಹಾಗೂ ಸಚಿವರಿಗೆ ವಾರ್ನಿಂಗ್ ನೀಡಬೇಕು ಎಂದರು. ಮೈತ್ರಿ ಧರ್ಮ ಪಾಲಿಸದ ಕಾರ್ಯಕರ್ತರಿಗೆ ಮೊದಲು ವಾರ್ನಿಂಗ್ ಮಾಡುತ್ತೇವೆ. ನಂತರ ಶಿಸ್ತು ಕ್ರಮ ನಿಶ್ಚಿತ. ಕಾಂಗ್ರೆಸ್ ಕೂಡ ಇದೇ ನಿಲುವು ಪಾಲಿಸುತ್ತಿದೆ. ನಾವು ಇದನ್ನೇ ಪಾಲಿಸುತ್ತೇವೆ. ಈ ನಿಲುವು ಪಾಲಿಸಿ ಇದರೆ ಮಾತ್ರ ಚುನಾವಣೆಯಲ್ಲಿ ಫಲಿತಾಂಶ ಪಡೆಯಲು ಸಾಧ್ಯ ಎಂದು ತಿಳಿಸಿದರು.

    ನಟರ ವೈಯಕ್ತಿಕ ಟೀಕೆ ಬೇಡ:
    ಇದೇ ವೇಳೆ ಸಚಿವರು, ನಟ ದರ್ಶನ್ ವಿಚಾರದಲ್ಲಿ ಜೆಡಿಎಸ್ ಮುಖಂಡರು ಮಾಡಿರುವ ವೈಯಕ್ತಿಕ ಟೀಕೆಗೆ ಪ್ರತಿಕ್ರಿಯಿಸಿ, ಯಾವುದೇ ಪಕ್ಷದ ಬೆಂಬಲಿತರ ಬಗ್ಗೆ ಯಾರೂ ವೈಯಕ್ತಿಕವಾಗಿ ಮಾತನಾಡಬಾರದು. ದರ್ಶನ್ ವಿಚಾರದಲ್ಲಿ ನಮ್ಮ ಪಕ್ಷದ ಮುಖಂಡರು ವೈಯುಕ್ತಿಕವಾಗಿ ಮಾತನಾಡಿರೋದನ್ನು ಪಕ್ಷ ಗಂಭೀರವಾಗಿ ಪರಿಗಣಿಸುತ್ತದೆ. ಇನ್ನು ಮುಂದೆ ಯಾರೂ, ನಟರನ್ನು ವೈಯುಕ್ತಿಕವಾಗಿ ಟೀಕಿಸಬೇಡಿ ಎಂದು ಹೇಳಿದ್ದಾರೆ.