Tag: ವಾಲ್ಮೀಕಿ ಸಮಾಜ

  • ವಾಲ್ಮೀಕಿ ಸಮಾಜಕ್ಕೆ ಶೇ. 7.5 ರಷ್ಟು ಮೀಸಲಾತಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ

    ವಾಲ್ಮೀಕಿ ಸಮಾಜಕ್ಕೆ ಶೇ. 7.5 ರಷ್ಟು ಮೀಸಲಾತಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ

    ಬೆಂಗಳೂರು: ವಾಲ್ಮೀಕಿ ಸಮಾಜಕ್ಕೆ ಶೇ.7.5 ರಷ್ಟು ಮೀಸಲಾತಿಗೆ ಆಗ್ರಹಿಸಿ ವಾಲ್ಮೀಕಿ ಸಮುದಾಯದಿಂದ ಬೃಹತ್ ಪ್ರತಿಭಟನೆ ನಡೆದಿದೆ.

    ನಗರದ ಫ್ರೀಡಂಪಾರ್ಕ್ ಬಳಿ ವಾಲ್ಮೀಕಿ ಸಮುದಾಯದರಿಂದ ಧರಣಿ ಸತ್ಯಾಗ್ರಹ ನಡೆದಿದ್ದು, ಧರಣಿ ಸತ್ಯಾಗ್ರಹದಲ್ಲಿ ನೂರಾರು ಜನ ಭಾಗಿಯಾಗುವ ಸಾಧ್ಯತೆ ಇದೆ. ವಾಲ್ಮೀಕಿ ಸಮುದಾಯದ ಬೇಡಿಕೆಯಂತೆ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪನವರು ಮೀಸಲಾತಿ ಕಲ್ಪಿಸುವುದಾಗಿ ಭರವಸೆ ನೀಡಿದ್ದರು. ಮೀಸಲಾತಿ ಕಲ್ಪಿಸುವ ವಿಚಾರವಾಗಿ ನಾಗಮೋಹನ್ ದಾಸ್ ವರದಿಯನ್ನು ಸರ್ಕಾರಕ್ಕೆ ಸಲ್ಲಿಕೆ ಮಾಡಿದ್ದರು. ಆದರೆ ಸರ್ಕಾರ ಮಾತ್ರ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಸಮುದಾಯದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ನೆಟ್ಟಿಗರಿಂದ ಟ್ರೋಲ್ ಆಯ್ತು ಎಸ್‍ಆರ್‌ಹೆಚ್ ಹೊಸ ಜೆರ್ಸಿ

    ಸರ್ಕಾರದದಿಂದ ಸ್ಪಷ್ಟ ನಿರ್ಧಾರ ಪ್ರಕಟವಾಗುವ ತನಕ ಹೋರಾಟ ಕೈಬಿಡದಿರಲು ನಿರ್ಣಯಿಸಿದ್ದಾರೆ. ವಾಲ್ಮೀಕಿ ಸಮುದಾಯಕ್ಕೆ ಶೇ.7.5 ಮೀಸಲಾತಿಗೆ ಸ್ವಾಮೀಜಿಗಳ ಧರಣಿ ವಿಚಾರವಾಗಿ ಧರಣಿ ಸತ್ಯಾಗ್ರಹ ವಾಪಾಸ್ ಪಡೆಯುವಂತೆ ಸಚಿವ ಶ್ರೀರಾಮುಲು ಅವರು, ಸಮುದಾಯದ ಸ್ವಾಮೀಜಿಗಳಿಗೆ ಮನವಿ ಮಾಡಿಕೊಂಡಿದ್ದಾರೆ. ಶ್ರೀರಾಮುಲು ಅವರ ಮನವಿಯನ್ನು ಜಗದ್ಗುರು ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ತಿರಸ್ಕರಿಸಿದ್ದಾರೆ. ಸ್ವಾಮೀಜಿ ಫ್ರೀಡಂ ಪಾರ್ಕ್‍ನಲ್ಲಿ ಕೆಲ ಸಮುದಾಯದ ಮುಖಂಡರ ಜೊತೆ ಧರಣಿ ಸತ್ಯಾಗ್ರಹ ಆರಂಭಿಸಿದ್ದಾರೆ. ಇದನ್ನೂ ಓದಿ: ಗುಪ್ತಚರ ವಿಭಾಗ ನನ್ನ ಫೋನ್ ಕದ್ದಾಲಿಕೆ ಮಾಡಿದೆ: ಅಣ್ಣಾಮಲೈ ಆರೋಪ

    ಈ ಕುರಿತು ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಅವರು, ಸಮುದಾಯದ ವಿಚಾರ ಬಂದರೆ ನಾನು ಯಾವ ತ್ಯಾಗಕ್ಕೂ ಸಿದ್ಧನಾಗಿದ್ದೇನೆ. ಮೀಸಲಾತಿಗೆ ಸಂಬಂಧಿಸಿದಂತೆ ವರದಿ ಕೊಟ್ಟು 1 ವರ್ಷ 8 ತಿಂಗಳಾಗಿದೆ. ಇಷ್ಟು ದಿನ ಸರ್ಕಾರ ಏನು ಮಾಡಿತು. ಧರಣಿ ಸತ್ಯಾಗ್ರಹವನ್ನು ಸದ್ಯಕ್ಕೆ ವಾಪಸ್ ಪಡೆಯಲ್ಲ. ಈ ಹಿಂದೆ ಬಿಎಸ್ ಯಡಿಯೂರಪ್ಪನವರು ಭರವಸೆ ಕೊಟ್ಟಿದ್ದರು. ಆದರೆ ಇಲ್ಲಿವರೆಗೂ ಭರವಸೆ ಈಡೇರಿಲ್ಲ. ಸಮುದಾಯದ ಶಾಸಕರು, ಸಂಸದರ ಇಚ್ಛಾಶಕ್ತಿಯ ಕೊರತೆಯಿಂದ ಇನ್ನೂ ನಮ್ಮ ಬೇಡಿಕೆ ಈಡೇರಿಲ್ಲ. ನಾವು ಜನಪ್ರತಿನಿಧಿಗಳಲ್ಲ, ಸ್ವಾಮೀಜಿಗಳು ನಮ್ಮ ಮೇಲೆ ಜನರಿಗೆ ನಂಬಿಕೆಯಿದೆ. ಸಮಾಜಕ್ಕೆ ಕರೆ ಕೊಟ್ಟು ಧರಣಿ ಸತ್ಯಾಗ್ರಹಕ್ಕೆ ಬಂದಿದ್ದೇನೆ. ಯಾವುದೇ ಕಾರಣಕ್ಕೂ ಧರಣಿ ಸತ್ಯಾಗ್ರಹ ವಾಪಸ್ ಪಡೆಯಲ್ಲ ಎಂದು ಪಟ್ಟು ಹಿಡಿದು ಕುಳಿತಿದ್ದಾರೆ.

  • ನಮ್ಮವರಿಗೆ ಡಿಸಿಎಂ ಸ್ಥಾನ ಸಿಗದಿದ್ದಕ್ಕೆ ಬಿಎಸ್‍ವೈಗೆ ಉಗಿದಿದ್ದೇನೆ: ಪ್ರಸನ್ನಾನಂದ ಪುರಿ ಸ್ವಾಮೀಜಿ

    ನಮ್ಮವರಿಗೆ ಡಿಸಿಎಂ ಸ್ಥಾನ ಸಿಗದಿದ್ದಕ್ಕೆ ಬಿಎಸ್‍ವೈಗೆ ಉಗಿದಿದ್ದೇನೆ: ಪ್ರಸನ್ನಾನಂದ ಪುರಿ ಸ್ವಾಮೀಜಿ

    ಕೊಪ್ಪಳ: ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಅಧಿಕಾರಕ್ಕೆ ಬಂದ ಬಳಿಕ ವಾಲ್ಮೀಕಿ ಸಮಾಜಕ್ಕೆ ತಕ್ಷಣ ಉಪ ಮುಖ್ಯಮಂತ್ರಿ ಸ್ಥಾನ ಕೊಡದಿದ್ದಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ನಾನು ಉಗಿದಿದ್ದೇನೆ ಎಂದು ವಾಲ್ಮೀಕಿ ಸಮಾಜದ ಶ್ರೀ ಪ್ರಸನ್ನಾನಂದ ಪುರಿ ಸ್ವಾಮೀಜಿ ಹೇಳಿದ್ದಾರೆ.

    ಕೊಪ್ಪಳದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬಿಜೆಪಿ ವಾಲ್ಮೀಕಿ ಸಮಾಜವನ್ನು ವೋಟ್ ಬ್ಯಾಂಕ್ ಮಾಡಿಕೊಂಡಿದೆ. ಚುನಾವಣಾ ಪೂರ್ವದಲ್ಲಿ ವಾಲ್ಮೀಕಿ ಸಮಾಜಕ್ಕೆ ಡಿಸಿಎಂ ಸ್ಥಾನ ಕೊಡುವುದಾಗಿ ಭರವಸೆ ನೀಡಿತ್ತು. ಆದರೆ ಅಧಿಕಾರಕ್ಕೆ ಬಂದ ಬಳಿಕ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ನಮ್ಮ ಸಮಾಜಕ್ಕೆ ಡಿಸಿಎಂ ಸ್ಥಾನ ಕೊಡಲಿಲ್ಲ. ಇದರಿಂದ ನಾನು ಅಂದೇ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಸಿಎಂ ನಡೆ ಬಗ್ಗೆ ಉಗುದಿದ್ದೀನಿ ಎಂದರು.

    ನನಗೆ ಮಾಜಿ ಸಿಎಂಗಳಾದ ಸಿದ್ದರಾಮಯ್ಯ, ಎಚ್.ಡಿ.ಕುಮಾರಸ್ವಾಮಿ ಹಾಗೂ ಸಿಎಂ ಯಡಿಯೂರಪ್ಪ ಅವರನ್ನು ಕಟ್ಕೊಂಡ್ ನಾನೇನ್ ಮಾಡ್ಲಿ. ನನಗೆ ನನ್ನ ವಾಲ್ಮೀಕಿ ಸಮುದಾಯ ಹಾಗೂ ಸಮುದಾಯದ ಜನರೇ ಮುಖ್ಯ. ವಾಲ್ಮೀಕಿ ಸಮಾಜಕ್ಕೆ ಅನ್ಯಾಯ ಆಗಿದೆ ಎಂದು ಅಸಮಾಧಾನ ಹೊರ ಹಾಕಿದರು.

    ಚುನಾವಣಾ ಪೂರ್ವದಲ್ಲಿ ಕೊಟ್ಟ ಭರವಸೆಯಂತೆ ಡಿಸಿಎಂ ಸ್ಥಾನ ಕೊಡಲಿ. ಅಲ್ಲದೆ ಈಗ ಡಿಸಿಎಂ ಸ್ಥಾನಕ್ಕೆ ರಮೇಶ್ ಜಾರಕಿಹೊಳೆ ಹಾಗೂ ಶ್ರೀರಾಮುಲು ಇಬ್ಬರೂ ಆಕಾಂಕ್ಷಿತರಾಗಿದ್ದು, ಇಬ್ಬರಲ್ಲಿ ಯಾರಿಗೆ ಸ್ಥಾನ ಕೊಟ್ಟರೂ ಸಂತೋಷ. ಇಬ್ಬರು ನನ್ನ ಎರಡು ಕಣ್ಣುಗಳಿದ್ದಂತೆ ಎಂದರು.

    ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಮುಂದಾಗಿದೆ. ವಾಲ್ಮೀಕಿ ಮಹರ್ಷಿ ಅವರು ರಾಮಾಯಣ ಬರೆದವರು. ಅವರ ಮಂದಿರ ನಿರ್ಮಾಣ ಮಾಡಬೇಕು. ಹಂಪಿಯ ಕನ್ನಡ ವಿಶ್ವವಿದ್ಯಾಲಯಕ್ಕೆ ವಾಲ್ಮೀಕಿ ಶ್ರೀಗಳ ಹೆಸರನ್ನು ನಾಮಕರಣ ಮಾಡಬೇಕು. ಸರ್ಕಾರ ಮುಂದೆ ನಿರ್ಮಾಣ ಮಾಡುವ ಕ್ಯಾಂಟಿನ್‍ಗಳಿಗೆ ಇಂದಿರಾ ಬದಲಾಗಿ ವಾಲ್ಮೀಕಿ ಅನ್ನ ಕುಟೀರ ಎಂದು ನಾಮಕರಣ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಈ ನಿರ್ಧಾರವನ್ನು ಸ್ವಾಗತಿಸ್ತೇವೆ ಎಂದು ತಿಳಿಸಿದರು.

    ಎಲ್ಲರೂ ಮತ ಬ್ಯಾಂಕ್‍ಗಾಗಿ ಕೀಳುಮಟ್ಟದ ರಾಜಕಾರಣ ಮಾಡುತ್ತಾರೆ. ಸಚಿವ ಶ್ರೀರಾಮುಲು ಅವರು ಸಿದ್ದರಾಮಯ್ಯ ಅವರ ವಿರುದ್ಧ ಬಾದಾಮಿಯಲ್ಲಿ ಸ್ಪರ್ಧೆ ಮಾಡಿದ್ದರು. ಆಗ ನಾನೇ ಶ್ರೀರಾಮುಲು ಅವರಿಗೆ ಬೇಡ ಎಂದಿದ್ದೆ. ಏಕೆಂದರೆ ಸಮಾಜ ಸಮಾಜದ ನಡುವೆ ವೈಮನಸ್ಸು ಮೂಡುತ್ತದೆ ಎನ್ನುವುದು ನನ್ನ ವಿಚಾರವಾಗಿತ್ತು. ಇಂದು ಆ ಪರಿಸ್ಥಿತಿ ಎದುರಿಸುತ್ತಿದ್ದೇವೆ ಎಂದರು.

  • ಸರ್ಕಾರ ಯಾವುದೇ ಇರಲಿ, ನಮ್ಮ ಬೇಡಿಕೆ ಪೂರೈಕೆ ಆಗ್ಬೇಕು: ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ

    ಸರ್ಕಾರ ಯಾವುದೇ ಇರಲಿ, ನಮ್ಮ ಬೇಡಿಕೆ ಪೂರೈಕೆ ಆಗ್ಬೇಕು: ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ

    ದಾವಣಗೆರೆ: ಸರ್ಕಾರ ಯಾವುದೇ ಇರಲಿ. ನಮ್ಮ ಬೇಡಿಕೆ ಎರಡು ತಿಂಗಳಲ್ಲಿ ಪೂರೈಕೆ ಆಗಬೇಕು ಎಂದು ಮತ್ತೆ ಸರ್ಕಾರದ ವಿರುದ್ಧ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ಗುಡುಗಿದ್ದಾರೆ.

    ಇಂದು ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿ ವಾಲ್ಮೀಕಿ ಮಠದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ನಮ್ಮ ಬೇಡಿಕೆಯನ್ನು ನೆರವೇರಿಸುವಲ್ಲಿ ವಿಳಂಬವಾದರೆ ನಮ್ಮ 15 ಶಾಸಕರು ಪಕ್ಷಾತೀತವಾಗಿ ರಾಜೀನಾಮೆ ನೀಡಲಿದ್ದಾರೆ ಎಂದು ಎಚ್ಚರಿಕೆ ನೀಡಿದರು.

    ಕೆಲ ದಿನಗಳ ಹಿಂದೆ ಪರಿಶಿಷ್ಟ ಪಂಗಡಕ್ಕೆ ಈಗ ಇರುವ ಶೇ 3.5 ರಷ್ಟು ಮೀಸಲಾತಿಯನ್ನು ಕೇಂದ್ರ ಸರ್ಕಾರದ ಮಾದರಿಯಲ್ಲಿ ಶೇಕಡಾ 7.5ಕ್ಕೆ ಏರಿಸುವಂತೆ ಆಗ್ರಹಿಸಿ ಸ್ವಾಮೀಜಿ ಪಾದಯಾತ್ರೆ ಮಾಡಿದ್ದರು. ಅ ಸಮಯದಲ್ಲಿ ರಾಜ್ಯ ಸರ್ಕಾರ ಸ್ವಾಮೀಜಿ ಅವರ ಬಳಿ ಎರಡು ತಿಂಗಳು ಗಡುವು ಕೇಳಿತ್ತು. ಆದರೆ ಈಗ ಶಾಸಕರ ರಾಜೀನಾಮೆ ಇಂದ ಸರ್ಕಾರವೇ ಪತನವಾಗುತ್ತಿದೆ.

    ಈ ಸಮಯದಲ್ಲಿ ಸರ್ಕಾರ ಯಾವುದೇ ಇರಲಿ. ನಮ್ಮ ಬೇಡಿಕೆ ಪೂರೈಕೆ ಆಗಬೇಕು. ವಿಳಂಬವಾದರೆ ಮತ್ತೆ ಹೋರಾಟ ಮಾಡುತ್ತೇವೆ. ಇಲ್ಲದಿದ್ದರೆ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್‍ನಲ್ಲಿ ಇರುವ ವಾಲ್ಮೀಕಿ ಸಮಾಜದ 15 ಜನ ಶಾಸಕರು ರಾಜೀನಾಮೆ ಕೊಡುವುದು ಶತಸಿದ್ಧ ಎಂದು ಎಚ್ಚರಿಕೆ ನೀಡಿದ್ದಾರೆ.