Tag: ವಾಹನ ಸವಾರರು

  • ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದ್ರೆ ಸದ್ಯ ದಂಡ ಹೆಚ್ಚಳವಿಲ್ಲ- ಭಾಸ್ಕರ್ ರಾವ್

    ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದ್ರೆ ಸದ್ಯ ದಂಡ ಹೆಚ್ಚಳವಿಲ್ಲ- ಭಾಸ್ಕರ್ ರಾವ್

    ಬೆಂಗಳೂರು: ಟ್ರಾಫಿಕ್ ನಿಯಮವನ್ನು ಪಾಲಿಸಲಿಲ್ಲ ಎಂದರೆ ಭಾರೀ ದಂಡ ಕಟ್ಟಲು ಸವಾರರು ಸಿದ್ಧವಾಗಿರಬೇಕು ಎನ್ನುವ ಮೂಲಕ ಹೊಸ ಟ್ರಾಫಿಕ್ ರೂಲ್ಸ್ ಇಂದಿನಿಂದ ಜಾರಿಗೆ ಬರುತ್ತಿದೆ ಎಂದು ಹೇಳಲಾಗಿತ್ತು. ಆದರೆ ಸದ್ಯ ದಂಡ ಹೆಚ್ಚಳವಿಲ್ಲ ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ತಿಳಿಸಿದ್ದಾರೆ.

    ನಗರದಲ್ಲಿಂದು ಈ ಕುರಿತು ಮಾಹಿತಿ ನೀಡಿದ ಅವರು, ಮೋಟಾರು ವಾಹನ ಕಾಯಿದೆ ಹೊಸ ನಿಯಮ ಸದ್ಯ ಜಾರಿ ಇಲ್ಲ. ಕೇಂದ್ರ ಸರ್ಕಾರದ ಹೊಸ ನಿಯಮದ ಕುರಿತು ಅಧಿಕೃತ ಆದೇಶ ಇನ್ನೂ ನಮ್ಮ ಕೈ ಸೇರಿಲ್ಲ. ಆದೇಶ ಹೊರಬಿದ್ದರೂ ಸಹ ಮೊದಲು ರಾಜ್ಯ ಸರ್ಕಾರದ ಸಾರಿಗೆ ಇಲಾಖೆ ಮೂಲಕ ನಮ್ಮ ಬಳಿ ಬರುತ್ತದೆ. ಆದರೆ ಅದು ಇನ್ನೂ ನಮ್ಮ ಕೈ ತಲುಪಿಲ್ಲ. ಈ ಬಗ್ಗೆ ರಾಜ್ಯ ಸಾರಿಗೆ ಇಲಾಖೆಯಿಂದ ಅಧಿಕೃತ ಆದೇಶ ಬಂದ ಬಳಿಕ ಪರಿಷ್ಕೃತ ದರದಂತೆ ದಂಡ ಸಂಗ್ರಹಿಸಲಾಗುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.

    ಈ ಮೂಲಕ ಸದ್ಯಕ್ಕೆ ಪರಿಷ್ಕೃತ ದರ ಜಾರಿಯಿಲ್ಲ ಎಂದು ನಿರಾಳರಾಗಬಹುದಾಗಿದೆ. ಕೇಂದ್ರ ಸರ್ಕಾರ ರಾಜ್ಯ ಸರ್ಕಾರಗಳಿಗೆ ಆದೇಶದ ಪ್ರತಿ ರವಾನಿಸಲು ಇನ್ನೂ ಎರಡರಿಂದ ಮೂರು ದಿನ ಸಮಯ ಹಿಡಿಯಬಹುದು ಎಂದು ಹೇಳಲಾಗುತ್ತಿದೆ. ಹೀಗಾಗಿ ವಾಹನ ಸವಾರರು ಹಬ್ಬದ ಸಮಯದಲ್ಲಿ ಹೆಚ್ಚು ದಂಡ ತೆರುವುದರಿಂದ ತಪ್ಪಿಸಿಕೊಂಡಂತಾಗಿದೆ.

  • ವಾಹನ ಸವಾರರೇ ಎಚ್ಚರ- ಇಂದಿನಿಂದ ಹೊಸ ಟ್ರಾಫಿಕ್ ರೂಲ್ಸ್ ಜಾರಿಗೆ

    ವಾಹನ ಸವಾರರೇ ಎಚ್ಚರ- ಇಂದಿನಿಂದ ಹೊಸ ಟ್ರಾಫಿಕ್ ರೂಲ್ಸ್ ಜಾರಿಗೆ

    ಬೆಂಗಳೂರು: ಇವತ್ತಿನಿಂದ ಹೊಸ ಟ್ರಾಫಿಕ್ ರೂಲ್ಸ್ ಜಾರಿಗೆ ಬಂದಿದ್ದು, ವಾಹನ ಸವಾರರು ಎಚ್ಚರ ವಹಿಸಬೇಕಿದೆ. ಒಂದು ವೇಳೆ ಟ್ರಾಫಿಕ್ ನಿಯಮವನ್ನು ಪಾಲಿಸಲಿಲ್ಲ ಎಂದರೆ ಭಾರೀ ದಂಡ ಕಟ್ಟಲು ಸವಾರರು ಸಿದ್ಧವಾಗಿರಬೇಕು.

    ಹೌದು. 2019 ಮೋಟಾರು ವಾಹನ ತಿದ್ದುಪಡಿ ಕಾಯ್ದೆಯ ಆಯ್ದ 63 ನಿಯಮಗಳು ಇಂದಿನಿಂದ ಜಾರಿ ಬರುತ್ತಿವೆ. ಇಂದು ಮತ್ತು ನಾಳೆ ಗಣೇಶ ಹಬ್ಬದ ಕಾರಣ ಕೋರ್ಟಿಗೆ ರಜೆ ಇದೆ. ಆದ್ದರಿಂದ ಮೈ ಮರೆತರೆ ದಂಡ ಕಟ್ಟಲು ಕ್ರೆಡಿಟ್ ಕಾರ್ಡ್, ಡೆಬಿಟ್ ಕಾರ್ಡ್ ಬಳಸಬೇಕಾದೀತು ಜೋಕೆ. ಟ್ರಾಫಿಕ್ ಪೊಲೀಸರು ರಾತ್ರಿಯಿಂದಲೇ ಅಲರ್ಟ್ ಆಗಿದ್ದಾರೆ. ನಿಯಮ ಉಲ್ಲಂಘಿಸುವ ವಾಹನ ಸವಾರರಿಗೆ ದಂಡ ಹಾಕಲು ಕಾದು ಕುಳಿತ್ತಿದ್ದಾರೆ.

    ಯಾವ ರೂಲ್ಸ್ ವೈಲೇಷನ್‍ಗೆ ಎಷ್ಟೆಷ್ಟು ದಂಡ:

  • ವಾಹನ ಸವಾರರಿಗೆ ಕಾದಿದೆ ಶಾಕ್ – ಹಾಫ್ ಹೆಲ್ಮೆಟ್‍ಗೆ ಫೈನ್

    ವಾಹನ ಸವಾರರಿಗೆ ಕಾದಿದೆ ಶಾಕ್ – ಹಾಫ್ ಹೆಲ್ಮೆಟ್‍ಗೆ ಫೈನ್

    ಬೆಂಗಳೂರು: ವಾಹನ ಸವಾರರಿಗೆ ಬಿಗ್ ಶಾಕ್ ಕಾದಿದ್ದು, ಇನ್ಮುಂದೆ ಹಾಫ್ ಹೆಲ್ಮೆಟ್ ಧರಿಸಿ ವಾಹನ ಚಲಾಯಿಸಿದರೆ ಪೊಲೀಸರು ದಂಡ ವಿಧಿಸಲಿದ್ದಾರೆ.

    ಸೆಪ್ಟೆಂಬರ್ 1ರಂದು ಗೌರಿ-ಗಣೇಶನನ್ನು ಬರಮಾಡಿಕೊಳ್ಳಲು ಎಲ್ಲಡೆ ಭಾರೀ ಸಿದ್ಧತೆ ನಡೆಸಲಾಗುತ್ತಿದೆ. ಆದರೆ ಈ ಹಬ್ಬದ ಸಂಭ್ರಮದ ನಡುವೆ ವಾಹನ ಸವಾರರಿಗೆ ಕೇಂದ್ರ ಸರ್ಕಾರ ಶಾಕಿಂಗ್ ನ್ಯೂಸ್ ನೀಡಿದ್ದು, ಮೋಟಾರು ವಾಹನ ತಿದ್ದುಪಡಿ ಮಸೂದೆಯನ್ನು ಜಾರಿಗೊಳಿಸುತ್ತಿದೆ. ಈ ಕಾಯ್ದೆಯಂತೆ ನಿಯಮಗಳನ್ನು ಉಲ್ಲಂಘನೆ ಮಾಡಿದರೆ ವಾಹನ ಸವಾರರು ಮೂರು ಪಟ್ಟು ದಂಡ ಕಟ್ಟಬೇಕಾಗುತ್ತದೆ.

    ನಗರದ ವಾಹನಗಳ ಸಂಖ್ಯೆ ಹೆಚ್ಚಾದಂತೆ ಅಪಘಾತಗಳ ಸಂಖ್ಯೆ ಸಹ ಹೆಚ್ಚುತ್ತಿದೆ. ಇದೇ ವರ್ಷ ಜನವರಿ 1 ರಿಂದ ಜೂನ್ ಅಂತ್ಯಕ್ಕೆ ನಗರದಲ್ಲಿ ಉಂಟಾದ ಬೈಕ್ ಅಪಘಾತಗಳಲ್ಲಿ 105 ಮಂದಿ ಬೈಕ್ ಸವಾರರು ಮೃತಪಟ್ಟಿದ್ದಾರೆ. 667 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಹೀಗಾಗಿ ಅಪಘಾತಗಳ ಸಂಖ್ಯೆ ಕಡಿಮೆ ಮಾಡಲು ಹೆಲ್ಮೆಟ್ ಕಡ್ಡಾಯಗೊಳಿಸಿದ್ದರು. ಈಗ ಟೋಪಿಯಂತಹ ಅಥವಾ ಅರ್ಧ ಹೆಲ್ಮೆಟ್ ಧರಿಸಿದರೆ ಫೈನ್ ಹಾಕಲು ಸಂಚಾರಿ ಪೊಲೀಸ್ ಆಯುಕ್ತ ಡಾ. ಬಿ.ಆರ್ ರವಿಕಾಂತೇಗೌಡ ಸೂಚಿಸಿದ್ದಾರೆ ಎನ್ನಲಾಗಿದೆ.

    4 ವರ್ಷದ ನಂತರದ ಮಕ್ಕಳಿಗೂ ಹೆಲ್ಮೆಟ್ ಕಡ್ಡಾಯಗೊಳಿಸಲಾಗಿದೆ. ಈ ಟೋಪಿಯಂತಹ ಹೆಲ್ಮೆಟ್ ಅನ್ನು ಹೆಚ್ಚಾಗಿ ಪೊಲೀಸರೇ ಹಾಕಿಕೊಳ್ಳುತ್ತಾರೆ. ಹೀಗೆ ಹಾಕಿಕೊಳ್ಳುವವರಿಗೆ ದಂಡ ವಿಧಿಸಲು ಕಾನೂನಿನಲ್ಲಿಯೂ ಅವಕಾಶವಿದೆ. ಈ ನಿಯಮ ಸೆಪ್ಟೆಂಬರ್ 1 ಅಥವಾ ಗಣೇಶ ಹಬ್ಬದಿಂದ ಜಾರಿಗೆ ಬರುವ ಸಾಧ್ಯತೆ ಇದೆ. ಈ ನಿಯಮಕ್ಕೆ ವಾಹನ ಸವಾರರಿಂದ ಪರ-ವಿರೋಧ ಅಭಿಪ್ರಾಯಗಳು ವ್ಯಕ್ತವಾಗುತ್ತಿದೆ.

    ಈ ಹೊಸ ಕಾನೂನಿನ ಪ್ರಕಾರ ನಿಯಮ ಮೀರಿದರೆ ಕಟ್ಟಬೇಕಾದ ದಂಡಗಳ ವಿವರ ಇಂತಿದೆ.
    ಹೆಲ್ಮೆಟ್ ಹಾಕದಿದ್ರೆ: ಈಗಿನ ದಂಡ 100 ರೂ.  ಇದ್ದು, ಪರಿಷ್ಕೃತ ದಂಡ  1000 ರೂ.+3 ತಿಂಗಳು ಅಮಾನತು
    ಕುಡಿದು ವಾಹನ ಚಾಲನೆ:  2000 ರೂ. – 10,000 ರೂ.
    ಸೀಟ್ ಬೆಲ್ಟ್ ಹಾಕ್ಕೊಳ್ಳದಿದ್ರೆ : 100 ರೂ. –  1000 ರೂ.
    ಲೈಸೆನ್ಸ್ ಇಲ್ಲದಿದ್ರೆ : 500 ರೂ. – 5000 ರೂ.
    ಅತಿವೇಗ: 400 ರೂ. – 1000 ರೂ.
    ರೇಸಿಂಗ್ : 500 ರೂ. – 5000 ರೂ.
    ಇನ್ಶೂರೆನ್ಸ್ ಇಲ್ಲದಿದ್ರೆ : 1000 ರೂ. – 2000 ರೂ.
    ಡೇಂಜರಸ್ ಡ್ರೈವಿಂಗ್: 1000 ರೂ. – 5000 ರೂ.
    ಓವರ್ ಲೋಡಿಂಗ್: 100 ರೂ. – 2000 ರೂ.
    ಡಿಎಲ್ ರದ್ದಾದ್ರೂ ಚಾಲನೆ : 500 ರೂ. – 10,000 ರೂ.
    ಅಂಬ್ಯುಲೆನ್ಸ್ ಗೆ ದಾರಿ ಬಿಡದಿದ್ರೆ :  10,000 ರೂ.
    ಪರ್ಮಿಟ್ ಇಲ್ಲದ ವಾಹನ ಚಾಲನೆ: 5000 ರೂ. – 10,000 ರೂ.

  • ಬೆಂಗಳೂರಿನಲ್ಲೂ ಶುರುವಾಯ್ತು ವರುಣನ ಆರ್ಭಟ- ವಾಹನ ಸವಾರರ ಪರದಾಟ

    ಬೆಂಗಳೂರಿನಲ್ಲೂ ಶುರುವಾಯ್ತು ವರುಣನ ಆರ್ಭಟ- ವಾಹನ ಸವಾರರ ಪರದಾಟ

    ಬೆಂಗಳೂರು: ರಾಜ್ಯವನ್ನೇ ಬೆಚ್ಚಿ ಬೀಳಿಸಿರುವ ಮಹಾಮಳೆ ಇಂದು ಸಿಲಿಕಾನ್ ಸಿಟಿಯಲ್ಲು ತನ್ನ ಆರ್ಭಟ ತೋರಿದೆ. ಬೆಂಗಳೂರಿನಲ್ಲಿ ಹಲವು ಕಡೆ ಸುರಿದ ಮಳೆಯಿಂದ ವಾಹನ ಸವಾರರು ಪರದಾಡಿದ್ದಾರೆ.

    ಉತ್ತರ ಕರ್ನಾಟಕದಲ್ಲಿ ಅವಂತರ ಸೃಷ್ಟಿ ಮಾಡಿರುವ ಮಳೆ ಬೆಂಗಳೂರಿಗೂ ಬರುವ ಮನ್ಸೂಚನೆ ನೀಡಿದೆ. ಇಂದು ಬೆಂಗಳೂರಿನ ಯಶವಂತಪುರ, ಮಲ್ಲೇಶ್ವರಂ, ಮೆಜೆಸ್ಟಿಕ್ ಸೇರಿ ಬೆಂಗಳೂರಿನ ಬಹುತೇಕ ಕಡೆ ಜೋರು ಮಳೆಯಾಗಿದೆ.

    ವೆಸ್ಟ್ ಆಫ್ ಕಾರ್ಡ್ ರೋಡ್, ಮಹಾಲಕ್ಷ್ಮೀ ಲೇಔಟ್ ಮತ್ತು ಮೆಜೆಸ್ಟಿಕ್ ಸುತ್ತಮುತ್ತ ಮಳೆಯಿಂದಾಗಿ ಮನೆಗೆ ತೆರಳಲು ಆಗದೇ ಶಾಲಾ ಮಕ್ಕಳು ರಸ್ತೆ ಇಕ್ಕೆಲಗಳಲ್ಲೇ ನಿಂತಿದ್ದರು. ಇಂದು ಸುರಿದ ಮಳೆಯಿಂದಾಗಿ ವಿಜಯನಗರ ಆದಿಚುಂಚನಗಿರಿ ಮಠದ ಬಳಿ ಮರ ಬಿದ್ದು ರಸ್ತೆ ಸಂಚಾರಕ್ಕೆ ಸಮಸ್ಯೆಯಾಗಿತ್ತು.

    ಮುಂದಿನ 3 ಗಂಟೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಇದರ ಜೊತೆಗೆ ಉಡುಪಿ, ಉತ್ತರ ಕನ್ನಡ, ಬೆಳಗಾವಿ ಮತ್ತು ಶಿವಮೊಗ್ಗ ಸೇರಿದಂತೆ ಇತರೆ ಭಾಗಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ.

  • ರಾಜ್ಯದ ವಿವಿಧ ಭಾಗಗಳಲ್ಲಿ ರಾತ್ರಿಯಿಂದಲೇ ಸುರಿಯುತ್ತಿದೆ ಮಳೆ

    ರಾಜ್ಯದ ವಿವಿಧ ಭಾಗಗಳಲ್ಲಿ ರಾತ್ರಿಯಿಂದಲೇ ಸುರಿಯುತ್ತಿದೆ ಮಳೆ

    ಬೆಂಗಳೂರು: ರಾಜ್ಯದ ವಿವಿಧ ಭಾಗಗಳಲ್ಲಿ ಶನಿವಾರ ರಾತ್ರಿಯಿಂದ ಬಿಟ್ಟು ಬಿಡದೆ ಮಳೆ ಸುರಿಯುತ್ತಿದೆ. ಬೆಳಗಾವಿ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಕಳೆದ ರಾತ್ರಿಯಿಂದ ಬಿಟ್ಟು ಬಿಡದೆ ಸುರಿಯುತ್ತಿದೆ. ರಾತ್ರಿಯಿಂದ ಸುರಿಯುತ್ತಿರುವ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಅಲ್ಲದೆ ಬೆಳಗಾವಿಯ ಮಾರುತಿ ಗಲ್ಲಿಯ 20ಕ್ಕೂ ಅಧಿಕ ಮನೆಗಳಿಗೆ ನೀರು ನುಗ್ಗಿದೆ. ಮನೆಯ ಮುಂಭಾಗದ ರಸ್ತೆಗಳು ನದಿಯಂತಾಗಿದ್ದು, ಹೊರಬರಲು ಜನರು ಹರಸಾಹಸ ಪಡುತ್ತಿದ್ದಾರೆ.

    ಬೆಳಗಾವಿಯಲ್ಲಿ ಮುಂಗಾರು ಮಳೆಯ ಅಬ್ಬರ ಜೋರಾಗಿದ್ದು, ಕಳೆದ ರಾತ್ರಿ ಸುರಿದ ಭಾರೀ ಮಳೆಯಿಂದ ರಸ್ತೆ ಮೇಲೆ ನೀರು ಹರಿದಾಡುತ್ತಿದೆ. ಬೆಳಗಾವಿ ಜಿಲ್ಲೆಯಾದ್ಯಂತ ಸುರಿದ ಭಾರೀ ಮಳೆಗೆ ಪಟ್ಟಣದ ಮಾರುತಿ ನಗರದಲ್ಲಿ ಮನೆಗಳಿಗೆ ನೀರು ನುಗ್ಗಿದೆ. ಸದ್ಯ ನೀರನ್ನು ಹೊರಹಾಕಲು ಜನರು ಶ್ರಮಪಡುತ್ತಿದ್ದಾರೆ. ಮಳೆಯಿಂದಾಗಿ ರೈತರ ಮುಖದಲ್ಲಿ ಮಂದಹಾಸ ಮೂಡಿದೆ. ಇಂದು ಬೆಳಗ್ಗಿನಿಂದ ಕೂಡ ತುಂತುರು ಮಳೆ ಸುರಿಯುತ್ತಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ.

    ಧಾರವಾಡದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ. ಶನಿವಾರ ಸಂಜೆಯಿಂದ ರಾತ್ರಿಯಿಡೀ ಮಳೆಯ ಅಬ್ಬರ ನಿಂತಿಲ್ಲ. ಬೆಳಗ್ಗೆಯೂ ವರುಣ ತನ್ನ ಅಬ್ಬರವನ್ನು ಮುಂದುವರಿಸಿದ್ದಾನೆ. ಮಳೆಯಿಂದಾಗಿ ಬಹುತೇಕ ಕಡೆ ರಾತ್ರಿಯಿಂದಲೇ ವಿದ್ಯುತ್ ಕಡಿತಗೊಂಡಿದೆ. ತಂಪು ಗಾಳಿ ಸಹಿತ ಮಳೆ ಸುರಿಯುತ್ತಿದೆ.

    ಕಳೆದ ವಾರ ರಾಜ್ಯದ ನಾನಾ ಭಾಗಗಳಲ್ಲಿ ಉತ್ತಮ ಮಳೆ ಆಗಿತ್ತು. ಆದರೆ ಹಾವೇರಿ ಜಿಲ್ಲೆಯಲ್ಲಿ ಮಳೆರಾಯನ ಅವಕೃಪೆಯಿಂದ ಜನರಲ್ಲಿ ಆತಂಕ ಮನೆ ಮಾಡಿತ್ತು. ಇಂದು ಹಾವೇರಿ ಜಿಲ್ಲೆಯ ಹಲವು ಭಾಗಗಳಲ್ಲಿ ಉತ್ತಮ ಮಳೆ ಆಗಿದೆ. ಜಿಲ್ಲೆಯ ಬ್ಯಾಡಗಿ, ಹಾನಗಲ್ ತಾಲೂಕು ಸೇರಿದಂತೆ ವಿವಿಧ ಭಾಗದಲ್ಲಿ ಮಳೆ ಆಗಿದೆ. ಮುಂಗಾರು ಕೈಕೊಟ್ಟ ಹಿನ್ನೆಲೆಯಲ್ಲಿ ರೈತರು ಆತಂಕಕ್ಕೆ ಒಳಗಾಗಿದ್ದರು. ಒಂದು ಗಂಟೆಗಳ ಕಾಲ ಧಾರಕಾರವಾಗಿ ಮಳೆಯಾದ ಹಿನ್ನೆಲೆಯಲ್ಲಿ ಜಿಲ್ಲೆಯ ಜನರಿಗೆ ಸಂತಸವಾಗಿದೆ. ಜನರು ಹೆಚ್ಚಿನ ಮಳೆಯ ನಿರೀಕ್ಷೆಯಲ್ಲಿ ಇದ್ದಾರೆ. ಇದು ಸ್ವಲ್ಪ ಮಟ್ಟಿಗೆ ರೈತರ ಆತಂಕವನ್ನು ದೂರ ಮಾಡಿದೆ.

    ಉತ್ತರ ಕನ್ನಡ ಜಿಲ್ಲೆಯಾದ್ಯಂತ ಮಳೆರಾಯನ ಆರ್ಭಟ ಮುಂದುವರಿದಿದೆ. ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಒಟ್ಟು 524.7 ಮಿ.ಮೀ ಮಳೆಯಾಗಿದೆ. ಮಳೆಯಿಂದಾಗಿ ಕಾರವಾರದ ಹಲವು ಭಾಗದಲ್ಲಿ ಚರಂಡಿಯಲ್ಲಿ ಕಸ ಕಟ್ಟಿ ರಸ್ತೆಗಳಲ್ಲಿ ನೀರು ತುಂಬಿ ಹರಿಯುತ್ತಿದೆ. ಹಲವು ಜನವಸತಿ ಪ್ರದೇಶಗಳಲ್ಲಿ ರಸ್ತೆಗಳ ಮೇಲೆ ನೀರು ಹರಿಯುತ್ತಿದ್ದು ಸಂಚಾರಕ್ಕೆ ತೊಂದರೆಗಳಾಗಿವೆ. ಜಿಲ್ಲೆಯಾದ್ಯಂತ ಮಳೆ ಮುಂದುವರಿದಿದ್ದು ಮಂಡಗೋಡು ಭಾಗ ಹೊರತುಪಡಿಸಿ ಉಳಿದ ಭಾಗದಲ್ಲಿ ಉತ್ತಮ ಮಳೆಯಾಗುತ್ತಿದೆ.

  • ಫುಟ್‍ಪಾತ್ ಮೇಲೆ ವಾಹನಗಳ ಹಾವಳಿ- ಬೀದಿಗಿಳಿದ ಹಿರಿಯ ನಾಗರಿಕರು

    ಫುಟ್‍ಪಾತ್ ಮೇಲೆ ವಾಹನಗಳ ಹಾವಳಿ- ಬೀದಿಗಿಳಿದ ಹಿರಿಯ ನಾಗರಿಕರು

    ಬೆಂಗಳೂರು: ನಗರದಲ್ಲಿ ಫುಟ್ ಪಾತ್ ಗಳ ಪರಿಸ್ಥಿತಿ ಹೇಗಿದೆ ಅನ್ನೋದನ್ನು ಎಲ್ಲರೂ ನೋಡಿದ್ದೀವಿ. ಫುಟ್ ಪಾತ್ ಮೇಲೆ ನಡೆಯೋದಕ್ಕಿಂತ ರೋಡಲ್ಲೇ ನಡೆದು ಹೋಗಬಹುದೇನೋ ಅನ್ನುವ ಮಟ್ಟಿಗೆ ಫುಟ್ ಪಾತ್ ಅನ್ನು ದ್ವಿಚಕ್ರ ವಾಹನ ಸವಾರರು ಆಕ್ರಮಿಸಿಕೊಂಡಿರುತ್ತಾರೆ. ಆದರೆ ಇದನ್ನು ತಡೆಯಲು ವೃದ್ಧರಿಬ್ಬರು ಪಣ ತೊಟ್ಟಿದ್ದಾರೆ.

    ಹೌದು. ನಗರದ ಇಟ್ಟಮಡು ಜಂಕ್ಷನ್ ಬಳಿಯ ಅಕ್ಕಪಕ್ಕದ ಮನೆಯ ವೃದ್ಧರಾದ ಸುಬ್ರಮಣ್ಯಂ ಹಾಗೂ ಉಷಾ ಶ್ರೀಕಂಠನ್, ಪ್ರತಿ ದಿನ ಇದೇ ರಸ್ತೆಯಲ್ಲಿ ಓಡಾಡುತ್ತಾರೆ. ಆದರೆ ಇಲ್ಲಿನ ಫುಟ್ ಪಾತ್ ಮೇಲೆ ವಾಹನ ಚಾಲನೆಯಿಂದಾಗಿ ವೃದ್ಧರು, ಮಕ್ಕಳು ಮತ್ತು ವಿದ್ಯಾರ್ಥಿಗಳು ಗಾಬರಿ ಒಳಗಾಗುತ್ತಿದ್ದರು. ಹೀಗಾಗಿ ಸವಾರರಿಗೆ ರೂಲ್ಸ್ ಬ್ರೇಕ್ ಮಾಡಿಬೇಡಿ ಎಂದು ಎಂದು ವೃದ್ಧರು ಮನವಿ ಮಾಡುವ ಮೂಲಕ ಜಾಗೃತಿ ಮೂಡಿಸುತ್ತಿದ್ದಾರೆ.

    ಇಬ್ಬರು ವೃದ್ಧರು ಕೈಯಲ್ಲಿ ಒಂದು ಬೋರ್ಡ್ ಹಿಡಿದು, ಫುಟ್ ಪಾತ್ ಮೇಲೆ ಬರೋ ಗಾಡಿ ಸವಾರರಿಗೆ ಬುದ್ಧಿ ಹೇಳುತ್ತಿದ್ದಾರೆ. ಕೆಲವರು ಸರಿ  ಎಂದು ಹೋದರೆ ಇನ್ನೂ ಕೆಲವರು ಇವರನ್ನು ಛೇಡಿಸಿ ಹೋಗುತ್ತಾರೆ. ಅದರೂ ಸುಮಾರು ಮೂರು- ನಾಲ್ಕು ಗಂಟೆಗಳ ಕಾಲ ರಸ್ತೆ ಬದಿಯ ಫುಟ್ ಪಾತ್ ಮೇಲೆ ನಿಂತು ನಿಯಮ ಪಾಲನೆ ಮಾಡುವಂತೆ ಬೈಕ್ ಸವಾರರಲ್ಲಿ ಕೇಳಿಕೊಳ್ಳುತ್ತಿದ್ದಾರೆ.

    ಜಾಗೃತಿ ಮೂಡಿಸಲು ಕಾರಣವೇನು?:
    ಒಂದು ದಿನ ಇವರು ತಮ್ಮ ನಾಯಿ ಜೊತೆಗೆ ಫುಟ್ ಪಾತ್ ಮೇಲೆ ವಾಕ್ ಮಾಡುವಾಗ ದ್ವಿಚಕ್ರ ವಾಹನ ಟಚ್ ಆಗಿದೆ. ಸ್ವಲ್ವದರಲ್ಲೇ ಒಂದು ಅನಾಹುತ ತಪ್ಪಿದೆ. ಇದನ್ನು ಇಲ್ಲಿಗೆ ಬಿಡಬಾರದು ಎಂದು ಪೊಲೀಸರಿಗೆ ಮಾಹಿತಿ ನೀಡಿದರೂ ಪ್ರಯೋಜನವಾಗಿಲ್ಲ. ಆದ್ದರಿಂದ ನಾವೇ ಇದರ ಬಗ್ಗೆ ಕ್ರಮಕೈಗೊಳ್ಳಬೇಕು ಎಂದು ತೀರ್ಮಾನಿಸಿ “ಟೂ ವೀಲರ್ಸ್ ಪ್ಲೀಸ್ ಯೂಸ್ ರೋಡ್ ನೋ ಫುಟ್ ಪಾತ್ “ಅನ್ನೊ ಬೋರ್ಡ್ ಹಿಡಿದುಕೊಂಡು ಗಂಟೆಗಳ ಕಾಲ ನಿಂತು ವಾಹನ ಸವಾರರಿಗೆ ಬುದ್ಧಿ ಹೇಳುತ್ತಿದ್ದಾರೆ. ಈ ಒಂದು ಘಟನೆಯೇ ವೃದ್ಧರು ಈ ವಯಸ್ಸಿನಲ್ಲಿ ಇಂತಹ ನಿರ್ಧಾರ ತೆಗೆದುಕೊಳ್ಳಲು ಕಾರಣವಾಗಿದೆ.

    ಪರದೇಶಕ್ಕೆ ಹೋದಾಗ ನಮ್ಮವರೇ ನಿಯಮ ಪಾಲನೆ ಮಾಡುತ್ತಾರೆ. ಆದರೆ ನಮ್ಮ ದೇಶದಲ್ಲೇ ಈ ರೀತಿ ಮಾಡಿಲ್ಲ ಎಂದರೆ ಅದು ನಮ್ಮ ದೇಶಕ್ಕೆ ನಾವು ಮಾಡೋ ಅವಮಾನ. ಇನ್ನೂ ಕೆಲ ದಿನಗಳಲ್ಲೇ ನಮ್ಮ ಈ ಫುಟ್ ಪಾತ್ ಅನ್ನು ವೆಹಿಕಲ್ ಫ್ರೀ ಮಾಡುತ್ತೇವೆ ಎಂದು ವೃದ್ಧರು ಭರವಸೆ ನೀಡಿದ್ದಾರೆ. ಇದಕ್ಕೆ ಪೊಲೀಸ್ ಇಲಾಖೆಯೂ ಕೈ ಜೋಡಿಸಿದರೆ ಪಾದಚಾರಿಗಳಿಗೆ ಒಳಿತು ಮಾಡಿದಂತಾಗುತ್ತದೆ ಎಂಬುದು ಸಾರ್ವಜನಿಕರ ಆಶಯವಾಗಿದೆ.

  • ರಾಜ್ಯದ ಹಲವೆಡೆ ಗುಡುಗು, ಸಿಡಿಲು ಸಹಿತ ವರುಣನ ಅಬ್ಬರ

    ರಾಜ್ಯದ ಹಲವೆಡೆ ಗುಡುಗು, ಸಿಡಿಲು ಸಹಿತ ವರುಣನ ಅಬ್ಬರ

    ಹಾಸನ/ಮಡಿಕೇರಿ/ಕೋಲಾರ: ರಾಜ್ಯದ ಹಲವೆಡೆ ಗುಡುಗು, ಸಿಡಿಲು ಸಹಿತ ವರುಣ ಅಬ್ಬರಿಸಿದ್ದಾನೆ. ಹಾಸನ ಜಿಲ್ಲೆಯ ವಿವಿಧೆಡೆ ಗುರುವಾರ ಗುಡುಗು ಗಾಳಿ ಸಹಿತ ಒಂದು ಗಂಟೆಗೂ ಹೆಚ್ಚು ಕಾಲ ಧಾರಾಕಾರ ಮಳೆ ಸುರಿಯಿತು. ಈ ಮೂಲಕ ಬಿಸಿಲ ಬೇಗೆಯಿಂದ ಬೆಂದಿದ್ದ ಭೂಮಿಗೆ ತಂಪೆರೆದಂತಾಯಿತು. ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿತ್ತು. ವಾಹನ ಸವಾರರು, ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು.

    ರಸ್ತೆಗಳಲ್ಲಿ ನೀರು ತುಂಬಿದ್ದರಿಂದ ಅಕ್ಷರಶಃ ಕೆರೆಯೆಂತಾಗಿದ್ದವು. ಮಳೆಯಿಂದಾಗಿ ಅನ್ನದಾತನ ಮೊಗದಲ್ಲಿ ಮಂದಹಾಸ ಮೂಡಿದೆ. ಈಗಾಗಲೇ ಕೃಷಿ ಚಟುವಟಿಕೆಗಳು ಆರಂಭಗೊಂಡಿವೆ. ಹಾಸನ ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಾದ ಆಲೂಗಡ್ಡೆ ಬಿತ್ತನೆ ಬೀಜ ಮಾರಾಟ ಆರಂಭಗೊಂಡು 15 ದಿನಗಳು ಕಳೆದಿದ್ದರೂ ಮಳೆ ಕೊರತೆಯಿಂದ ರೈತರು ಬಿತ್ತನೆ ಬೀಜ ಖರೀದಿಸಲು ಹಿಂದೇಟು ಹಾಕಿದ್ದರು. ಈಗ ಉತ್ತಮ ಮಳೆಯಾಗಿದ್ದು ಬಿತ್ತನೆ ಕಾರ್ಯ ಚುರುಕುಗೊಳ್ಳಲಿದೆ.

    ಮೊತ್ತಂದೆಡೆ ಬರಗಾಲದಿಂದ ಹಾಸನ ಜಿಲ್ಲೆ ತತ್ತರಿಸಿದ್ದು ಈಗಾಗಲೇ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಕಳೆದ ವರ್ಷ ಮೇ ತಿಂಗಳ ಅಂತ್ಯದ ವೇಳೆಗೆ ಜಿಲ್ಲೆಯ ಜೀವನದಿ ಹೇಮಾವತಿ ಭರ್ತಿಯಾಗಿತ್ತು. ಈ ಬಾರಿ ಹೇಮಾವತಿ ಬರಿದಾಗಿದೆ. ಮುಂದಿನ ದಿನಗಳಲ್ಲಿ ಉತ್ತಮ ಮಳೆಯಾಗದಿದ್ದಲ್ಲಿ ಕುಡಿಯುವ ನೀರು ಹಾಗೂ ಕೃಷಿ ಚಟುವಟಿಕೆಗಳಿಗೆ ನೀರಿನ ಸಮಸ್ಯೆ ಎದುರಾಗಲಿದೆ.

    ಕೊಡಗು ಜಿಲ್ಲೆಯ ಕೆಲವೆಡೆ ವರುಣನ ಅಬ್ಬರ ಜೋರಾಗಿತ್ತು. ಗುಡುಗು ಸಿಡಿಲಿನೊಂದಿಗೆ ವರುಣ ಅಬ್ಬರಿಸಿದ್ದಾನೆ. ದಿಢೀರ್ ಆಗಿ ಸುರಿದ ಮಳೆಗೆ ದ್ವಿಚಕ್ರ ವಾಹನ ಸವಾರರ ಪರದಾಡುವಂತಾಯಿತು. ಮಡಿಕೇರಿ ನಗರ ಸೇರಿದಂತೆ ವಿವಿಧೆಡೆ ವರುಣನ ಅಬ್ಬರ ಜೋರಾಗಿತ್ತು.

    ಕೋಲಾರದಲ್ಲಿ ಮಾಲೂರು ಭಾಗದಲ್ಲಿ ಗಾಳಿ ಸಹಿತ ಭರ್ಜರಿ ಮಳೆ ಆಗಿದೆ. ಬಾರಿ ಗಾಳಿಗೆ ಹಲವೆಡೆ ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು. ಅಲ್ಲದೆ ವಾಹನ ಸವಾರರು ಕೂಡ ಪರದಾಡುವಂತಾಯಿತು.

  • ಕ್ರೇನ್ ವಿದ್ಯುತ್ ಕಂಬಕ್ಕೆ ಡಿಕ್ಕಿ- ಹೈವೇಯಲ್ಲೇ ಜೋತು ಬಿದ್ದ ವಿದ್ಯುತ್ ತಂತಿ

    ಕ್ರೇನ್ ವಿದ್ಯುತ್ ಕಂಬಕ್ಕೆ ಡಿಕ್ಕಿ- ಹೈವೇಯಲ್ಲೇ ಜೋತು ಬಿದ್ದ ವಿದ್ಯುತ್ ತಂತಿ

    ಬೆಂಗಳೂರು: ಕ್ರೇನ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ರಾಷ್ಟ್ರೀಯ ಹೆದ್ದಾರಿಗೆ ಕಂಬ ಮುರಿದು ಬಿದ್ದಿರುವ ಘಟನೆ ರಾಜಧಾನಿಯ ನೆಲಮಂಗಲ ಸಮೀಪದ ಜಾಸ್ ಟೋಲ್ ಬಳಿ ನಡೆದಿದೆ.

    ಹೆದ್ದಾರಿಯಲ್ಲಿ ಸಾಗುತ್ತಿದ್ದ ಕ್ರೇನ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಇದರಿಂದ ವಿದ್ಯುತ್ ಕಂಬ ಮುರಿದು ರಸ್ತೆ ಮೇಲೆ ಬಿದ್ದಿದೆ. ಈ ಅಪಘಾತವಾದ ಕಾರಣ ತುಮಕೂರು ಬೆಂಗಳೂರು ಹೆದ್ದಾರಿಯಲ್ಲಿ ಎರಡು ಕಡೆ ಟ್ರಾಫಿಕ್ ಜಾಮ್ ಉಂಟಾಗಿದೆ. ಅಲ್ಲದೆ ಸ್ಥಳಕ್ಕೆ ಬೆಸ್ಕಾಂ ಸಿಬ್ಬಂದಿ ಬಾರದ ಕಾರಣಕ್ಕೆ ವಿದ್ಯುತ್ ಕಂಬ ರಸ್ತೆಯ ಮೇಲೆ ಇದ್ದು ವಿದ್ಯುತ್ ತಂತಿಗಳು ಹೆದ್ದಾರಿಯಲ್ಲೇ ಕೈಗೆಟಕುವ ರೀತಿ ಜೋತುಬಿದ್ದಿದ್ದು, ಸಾರ್ವಜನಿಕರು ಆತಂಕಗೊಂಡಿದ್ದಾರೆ.

    ಹೆದ್ದಾರಿಯ ಎರಡೂ ಭಾಗದಲ್ಲಿ ಕಿ.ಮೀ ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿದ್ದು ವಾಹನ ಸವಾರರು ಪರದಾಡುತ್ತಿದ್ದಾರೆ. ಸದ್ಯ ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ದೌಡಾಯಿಸಿದ್ದು, ಬೆಸ್ಕಾಂ ಸಿಬ್ಬಂದಿ ಬಾರದ ಕಾರಣ ವಾಹನ ಸವಾರರೇ ರಸ್ತೆಗೆ ಅಡ್ಡಲಾಗಿ ಬಿದ್ದ ವಿದ್ಯುತ್ ಕಂಬವನ್ನು ತೆರವುಗೊಳಿಸಿದ್ದಾರೆ. ಆದ್ರೆ ಸ್ಥಳಕ್ಕೆ ಬಾರದ ಬೆಸ್ಕಾಂ ಸಿಬ್ಬಂದಿ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮೈಸೂರು ರಸ್ತೆ ಫ್ಲೈಓವರ್ ಮೇಲೆ ಓಡಾಡುವ ವಾಹನ ಸವಾರರಿಗೆ ಶಾಕಿಂಗ್ ನ್ಯೂಸ್

    ಮೈಸೂರು ರಸ್ತೆ ಫ್ಲೈಓವರ್ ಮೇಲೆ ಓಡಾಡುವ ವಾಹನ ಸವಾರರಿಗೆ ಶಾಕಿಂಗ್ ನ್ಯೂಸ್

    ಬೆಂಗಳೂರು: ಗುಂಡಿ ಮುಚ್ಚುವ ಕಾಮಗಾರಿ ಹಿನ್ನೆಲೆಯಲ್ಲಿ ಇದೇ ತಿಂಗಳ 26 ರಿಂದ ಮೈಸೂರು ರಸ್ತೆ ಫ್ಲೈಓವರ್ (ಸಿರ್ಸಿ ಸರ್ಕಲ್) ಮುಚ್ಚಲಿದ್ದು, ವಾಹನ ಸವಾರರು ಮುಂದಿನ 4 ತಿಂಗಳು ಪರ್ಯಾಯ ಮಾರ್ಗ ನೋಡಿಕೊಳ್ಳಬೇಕಿದೆ.

    ಮೈಸೂರು ರಸ್ತೆ, ಬಸವನಗುಡಿ, ಮೆಜೆಸ್ಟಿಕ್, ಗೋರಿಪಾಳ್ಯ ಮಾರ್ಗವಾಗಿ ಸಂಚರಿಸಲು ಬೆಂಗಳೂರಿನ ಸಿರ್ಸಿ ಫ್ಲೈಓವರ್ ಬಳಸುತ್ತಿದ್ದ ವಾಹನ ಸವಾರರು ನೋಡಲೇಬೇಕಾದ ಸುದ್ದಿ ಇದಾಗಿದೆ. ಫ್ಲೈಓವರ್ ಮೇಲೆ ಬಿದ್ದಿರುವ ಗುಂಡಿಗಳನ್ನು ಮುಚ್ಚುವ ಕಾಮಗಾರಿ ಹಿನ್ನೆಲೆಯಲ್ಲಿ ಇದೇ ತಿಂಗಳ 27 ರಂದು ಫ್ಲೈಓವರ್ ಬಂದ್ ಆಗಲಿದೆ. ಈ ಮೂಲಕ ವಾಹನ ಸಂಚಾರಕ್ಕೆ ಬ್ರೇಕ್ ಬೀಳಲಿದೆ.

    ಅತ್ಯಾಧುನಿಕ ತಂತ್ರಜ್ಞಾನ ಹೊಂದಿರುವ ಟೆಕ್ಕಿ ಟಾರ್ ಶೀಟ್ ಅಳವಡಿಸಲಾಗುತ್ತದೆ. ಮೂರು ಮಿಲಿ ಮೀಟರ್ ಗಾತ್ರದ ಸಣ್ಣ ಡಾಂಬಾರ್ ಶೀಟ್ ಹಾಕಿ ಕಾಂಕ್ರಿಟ್ ಮೇಲ್ಭಾಗದಲ್ಲಿ ಡಾಂಬರೀಕರಣ ಮಾಡಲಾಗುತ್ತದೆ. ಇನ್ನು ಈ ಕಾಮಗಾರಿಗೆ 4 ತಿಂಗಳ ಸಮಯ ಕೇಳಿದ್ದು, 2 ತಿಂಗಳಲ್ಲಿ ಮುಗಿಸುವ ವಿಶ್ವಾಸವಿದೆ ಎಂದು ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ್ ತಿಳಿಸಿದ್ದಾರೆ.

    ಕಳೆದ 4 ವರ್ಷಗಳ ಹಿಂದೆ ಫ್ಲೈಓವರ್ ಡಾಂಬರೀಕರಣ ಮಾಡಲಾಗಿತ್ತು. ಗುಂಡಿ ಬಿದ್ದಿದೆ ಎಂದು 3 ತಿಂಗಳ ಹಿಂದೆಯಷ್ಟೇ ಗುಂಡಿ ಮುಚ್ಚುವ ಕೆಲಸವೂ ಆಗಿದೆ. ಈಗ ಮತ್ತೆ 4 ಕೋಟಿ 50 ಲಕ್ಷ ವೆಚ್ಚದಲ್ಲಿ ಮತ್ತೆ ಕಾಮಗಾರಿ ಕೈಗೆತ್ತಿಕೊಂಡಿದೆ.

    4 ಹಂತದಲ್ಲಿ ಫ್ಲೈಓವರ್ ಬಂದ್ ಆಗಲಿದೆ. ಮೊದಲು ರಾಯನ್ ಸರ್ಕಲ್ ನಿಂದ ಮೈಸೂರು ರಸ್ತೆವರೆಗೂ ಬಂದ್ ಮಾಡಲಾಗುತ್ತದೆ. ಮತ್ತೆ ಟೌನ್‍ಹಾಲ್ ಭಾಗದಿಂದ ರಾಯನ್ ಸರ್ಕಲ್‍ವರೆಗೂ ಕಾಮಗಾರಿ ಮಾಡಲಾಗುತ್ತದೆ. ಇತ್ತ ಮೂರನೇ ಹಂತದಲ್ಲಿ ಮೈಸೂರು ರಸ್ತೆಯಿಂದ ಮಾರುಕಟ್ಟೆವರೆಗೂ ಬಂದ್ ಮಾಡಲಾಗುತ್ತದೆ. ಕಡೆಯದಾಗಿ ಕೆ.ಆರ್.ಮಾರುಕಟ್ಟೆಯಿಂದ ಟೌನ್ ಹಾಲ್ ತಲುಪುವ ಫ್ಲೈಓವರ್ ತಲುಪುವ ಕಡೆಯ ಭಾಗದವರೆಗೂ ಡಾಂಬರೀಕರಣ ಕಾಮಗಾರಿ ನಡೆಯಲಿದೆ. ಹೀಗಾಗಿ ವಾಹನ ಸವಾರರು ಮುಂದಿನ 4 ತಿಂಗಳೂ ಪರ್ಯಾಯ ಮಾರ್ಗ ನೋಡಿಕೊಳ್ಳಬೇಕಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಬಿಸಿಲನಾಡು ವಿಜಯಪುರದಲ್ಲಿ ಇಬ್ಬನಿಯ ಅಬ್ಬರಕ್ಕೆ ಪರದಾಡಿದ ವಾಹನ ಸವಾರರು

    ಬಿಸಿಲನಾಡು ವಿಜಯಪುರದಲ್ಲಿ ಇಬ್ಬನಿಯ ಅಬ್ಬರಕ್ಕೆ ಪರದಾಡಿದ ವಾಹನ ಸವಾರರು

    ವಿಜಯಪುರ: ಬಿಸಿಲ ನಾಡು ಗುಮ್ಮಟ ನಗರಿ ವಿಜಯಪುರದಲ್ಲಿ ಈಗ ಇಬ್ಬನಿಯ ಅಬ್ಬರ ಶುರುವಾಗಿದೆ.

    ಗುಮ್ಮಟ ನಗರಿಯಲ್ಲಿ ಮಿತಿಮೀರಿದ ಮೈ ಕೊರೆಯುವ ಚಳಿ ಆರಂಭವಾಗಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಹೆಚ್ಚಾಗಿರುವ ಚಳಿಯಿಂದ ಜನರು ತತ್ತರಿಸಿದ್ದು, ಬುಧವಾರ ಬಿದ್ದ ಭಾರೀ ಪ್ರಮಾಣದ ಇಬ್ಬನಿಯಿಂದಾಗಿ ವಾಹನ ಸವಾರರು ಪರದಾಡಿದ್ದಾರೆ.

    ಜನರು ಹಾಗೂ ವಾಹನಗಳು ಬೆಳಗ್ಗೆ ಎಂಟು ಗಂಟೆ ಆದರೂ ರಸ್ತೆ ಮೇಲೆ ಕಾಣಿಸುತ್ತಿಲ್ಲ. ಎದುರಿಗೆ ಬರುವ ವಾಹನಗಳು ಕಾಣದಂತಾಗಿದ್ದು ಸವಾರರ ಪರದಾಟಕ್ಕೆ ಕಾರಣವಾಗಿತ್ತು. ಮೊದಲ ಬಾರಿಗೆ ಆವರಿಸಿದ ಮಂಜಿನಿಂದಾಗಿ ವಿಜಯಪುರ ಜನತೆ ಒಂದೆಡೆ ಪರದಾಡಿದರೆ, ಇನ್ನೊಂದೆಡೆ ಬಿಸಿಲ ನಾಡಲ್ಲಿ ಮಲೆನಾಡ ಸೊಬಗು ಕಂಡು ಫುಲ್ ಖುಷಿಯಾಗಿದ್ದಾರೆ.

    ಬರದಿಂದ ಕಂಗಲಾಗಿದ್ದ ಜಿಲ್ಲೆಯ ರೈತರು ಇಬ್ಬನಿಯನ್ನು ಕಂಡು ಕೊಂಚ ಸಂತಸಗೊಂಡಿದ್ದಾರೆ. ಇಬ್ಬನಿಯಿಂದ ಜೋಳ ಸೇರಿದಂತೆ ಕೆಲ ಬೆಳೆಗಳು ಚೆನ್ನಾಗಿ ಬರಲಿರುವ ಕಾರಣ ರೈತರು ಸಂತೋಷದಲ್ಲಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv