Tag: ವಿಂಗ್ ಕಮಾಂಡರ್

  • ವಿಂಗ್ ಕಮಾಂಡರ್ ಮೇಲೆ ಕೊಲೆ ಯತ್ನ ಕೇಸ್ – ಸ್ಟೇಷನ್ ಬೇಲ್ ಮೇಲೆ ವಿಕಾಸ್ ರಿಲೀಸ್

    ವಿಂಗ್ ಕಮಾಂಡರ್ ಮೇಲೆ ಕೊಲೆ ಯತ್ನ ಕೇಸ್ – ಸ್ಟೇಷನ್ ಬೇಲ್ ಮೇಲೆ ವಿಕಾಸ್ ರಿಲೀಸ್

    – ಭಾಷಾ ಕಾರಣಕ್ಕೆ ಹಲ್ಲೆ ಸುಳ್ಳೆಂದ ಯುವಕ
    – ವಿಂಗ್ ಕಮಾಂಡರ್ ವಿರುದ್ಧವೂ ಎಫ್‌ಐಆರ್‌

    ಬೆಂಗಳೂರು: ವಿಂಗ್ ಕಮಾಂಡರ್ (Wing commander) ಶಿಲಾದಿತ್ಯ ಬೋಸ್‌ನಿಂದ ಹಲ್ಲೆಗೊಳಗಾದ ಯುವಕ ವಿಕಾಸ್ ಕುಮಾರ್ ಸ್ಟೇಷನ್ ಬೇಲ್ ಮೇಲೆ ರಿಲೀಸ್ ಆಗಿದ್ದಾರೆ. ಇದೇ ಏ.24 ಎಂದು ಮತ್ತೆ ವಿಚಾರಣೆಗೆ ಹಾಜರಾಗಲು ನೊಟೀಸ್ ಕೊಟ್ಟು ರಿಲೀಸ್ ಮಾಡಿದ್ದಾರೆ.

    ಬಳಿಕ ಮಾತಾಡಿರುವ ವಿಕಾಸ್, ವಿಂಗ್ ಕಮಾಂಡರ್ ನನ್ನ ಮೇಲೆ ಸುಳ್ಳು ಆರೋಪ ಮಾಡಿದ್ದಾರೆ. ಭಾಷಾ ಹಲ್ಲೆ ಅನ್ನೋದು ಸುಳ್ಳು. ಪ್ರಕರಣವನ್ನು ನಾನು ಇಲ್ಲಿಗೆ ಬಿಡಲ್ಲ. ನನಗೆ ನ್ಯಾಯ ಬೇಕು. ಸಿಎಂ, ಗೃಹಸಚಿವರು, ಕಮಿಷನರ್, ನನ್ನ ಪರವಾಗಿನಿಂದ ನಿಂತ ಕನ್ನಡಿಗರಿಗೆ ಧನ್ಯವಾದ ಅಂದಿದ್ದಾರೆ. ಜೊತೆಗೆ, ವಿಕಾಸ್ ಕುಮಾರ್ ಪ್ರತಿದೂರು ದಾಖಲಿಸಿದ್ದು, ಬೈಯಪ್ಪನಹಳ್ಳಿ ಪೊಲೀಸರು (Baiyyappanahalli Police) ಕಾರ್‌ನ ನಂಬರ್ ಆಧಾರದಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ. ಇದನ್ನೂ ಓದಿ: ಕುತ್ತಿಗೆ ಹಿಡಿದು ಕೊಲೆಗೆ ಯತ್ನಿಸಿದ್ದ – ವಿಂಗ್‌ ಕಮಾಂಡರ್‌ ವಿರುದ್ಧ ಕೊನೆಗೂ ಎಫ್‌ಐಆರ್‌

    Wing Commander fatally attacked BY gang in Bengaluru

    ಭಾರತೀಯ ನ್ಯಾಯ ಸಂಹಿತೆ ಅಡಿ ಸೆಕ್ಷನ್‌ 109 (ಕೊಲೆ ಯತ್ನ), 115 (2) (ಮಾರಣಾಂತಿಕ ಹಲ್ಲೆ), 304 (ಬಲವಂತವಾಗಿ ವಸ್ತು ಕಸಿದುಕೊಳ್ಳುವುದು), 324 (ಅರಿವಿಗೆ ಇದ್ದರೂ ಉದ್ದೇಶ ಪೂರಕವಾಗಿ ವಸ್ತುಗಳನ್ನು ಹಾಳು ಮಾಡೋದು) ಹಾಗೂ 352 (ಶಾಂತಿಭಂಗ) ಸೆಕ್ಷನ್‌ಗಳ ಅಡಿ ಕೇಸ್ ದಾಖಲಿಸಿದ್ದಾರೆ. ಎಫ್‌ಐಆರ್ ದಾಖಲಾಗ್ತಿದ್ದಂತೆಯೇ ಬೈಯಪ್ಪನಹಳ್ಳಿ ಠಾಣೆಗೆ ಏರ್‌ಪೋರ್ಸ್‌ನ ನಾಲ್ವರು ಅಧಿಕಾರಿಗಳು ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ. ಇದನ್ನೂ ಓದಿ: ಹಿಂದಿಯಲ್ಲಿ ಬೈದಿದ್ದು ಅರ್ಥ ಆಗಿಲ್ಲ ಎಂದಿದ್ದಕ್ಕೆ ಗಲಾಟೆ: ಯುವಕನ ತಾಯಿ ಅಳಲು

    ಘಟನೆ ಬಗ್ಗೆ ಏರ್‌ಫೋರ್ಸ್ ಪ್ರತಿಕ್ರಿಯಿಸಿದ್ದು, ಐಎಎಫ್ ಅಧಿಕಾರಿ ಭಾಗಿಯಾಗಿರುವುದು ದುರದೃಷ್ಟಕರ, ತನಿಖೆ ಮಾಡಲು ಸ್ಥಳೀಯ ಅಧಿಕಾರಿಗಳಿಗೆ ಸಹಾಯ ಮಾಡ್ತೇವೆ ಅಂದಿದೆ. ಬೈಯಪ್ಪನಹಳ್ಳಿ ಪೊಲೀಸರು ಕೂಡ ಸ್ಥಳ ಮಹಜರು ನಡೆಸಿ, ಇಬ್ಬರು ಪ್ರತ್ಯಕ್ಷದರ್ಶಿಗಳಿಂದ ಮಾಹಿತಿ ಪಡೆದರು. ಸ್ಥಳದಲ್ಲಿದ್ದ ಕಲ್ಲನ್ನು ವಶಕ್ಕೆ ಪಡೆದರು. ಇದನ್ನೂ ಓದಿ: ನೆಲಕ್ಕೆ ಬಿದ್ರೂ ಬಿಡದೆ ಡೆಲಿವರಿ ಬಾಯ್ ಮೇಲೆ ಹಲ್ಲೆ ಮಾಡಿ ವಿಂಗ್ ಕಮಾಂಡರ್ ದರ್ಪ

    ವಿಕಾಸ್ ಕೊಟ್ಟ ದೂರಿನಲ್ಲೇನಿದೆ..?
    ನಿನ್ನೆ (ಸೋಮವಾರ) ಬೆಳಗ್ಗೆ ಸ್ನೇಹಿತನ ಬೈಕ್ ವಾಪಸ್ ನೀಡಲು ಹೋಗ್ತಿದ್ದೆ. ಟಿನ್‌ಫ್ಯಾಕ್ಟರಿ ಸಿಗ್ನಲ್ ಬಳಿ ಬೈಕ್‌ಗೆ ಕಾರ್ ಟಚ್ ಆಯ್ತು. ಅದಕ್ಕೆ ಗೋಪಾಲನ್ ಗ್ರ್ಯಾಂಡ್‌ ಮಾಲ್ ಬಳಿ ಕಾರನ್ನು ಅಡ್ಡಹಾಕಿ ಪ್ರಶ್ನೆ ಮಾಡಿದೆ. ಕಾರಿಂದ ಇಳಿದು ಬಂದ ವ್ಯಕ್ತಿ ಕಾಲಿನಿಂದ ಒದ್ದು ಬೈಕ್ ಕೆಳಗೆ ಬೀಳಿಸಿದ. ಅದನ್ನು ಕೇಳಿದಾಗ ನಿರಂತರವಾಗಿ ಹಲ್ಲೆ ಮಾಡಿದ. ಸ್ವಯಂ ರಕ್ಷಣೆಗಾಗಿ ನಾನು ಒಂದು ಏಟು ಹೊಡೆದೆ. ಸ್ನೇಹಿತನಿಗೆ ಕರೆ ಮಾಡಲು ಮೊಬೈಲ್ ತೆಗೆದೆ, ಆದ್ರೆ ಅಲ್ಲಿದ್ದ ಅಪರಿಚಿತ ವ್ಯಕ್ತಿ ನನ್ನ ಕೈ ಕಚ್ಚಿ, ಫೋನ್ ಕಸಿದುಕೊಂಡು ಎಸೆದರು, ನನ್ನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲ್ಲುವ ಬೆದರಿಕೆ ಹಾಕಿದರು. ನನ್ನ ಕುತ್ತಿಗೆಗೆ ಹಿಂದಿನಿಂದ ಕೈ ಹಾಕಿ ಹೊಡೆದರು. ನನ್ನ ಕತ್ತು ಹಿಸುಕಿ ಕೊಲ್ಲಲು ಯತ್ನಿಸಿದ್ರು, ನನ್ನ ಬೈಕ್ ಕೀ ಕಸಿದುಕೊಂಡು ದೂಡಿದರು, ನಾನು ನೆಲಕ್ಕೆ ಬಿದ್ದೆ. ಮತ್ತೆ ನನ್ನ ಮುಖದ ಮೇಲೆ ಹಲ್ಲೆ ಮಾಡಿದರು. ಆ ಅಪರಿಚಿತನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ವಿಕಾಸ್‌ ತನ್ನ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

  • ವಿಕಾಸ್ ಮೇಲೆ ವಿಂಗ್ ಕಮಾಂಡರ್ ಅಟ್ಟಹಾಸ – ಕನ್ನಡಿಗರ ಸ್ವಾಭಿಮಾನ ಕೆಣಕುವ ದುಷ್ಟತನ ಮೆರೆದಿದ್ದಾರೆ: ಸಿಎಂ ಕಿಡಿ

    ವಿಕಾಸ್ ಮೇಲೆ ವಿಂಗ್ ಕಮಾಂಡರ್ ಅಟ್ಟಹಾಸ – ಕನ್ನಡಿಗರ ಸ್ವಾಭಿಮಾನ ಕೆಣಕುವ ದುಷ್ಟತನ ಮೆರೆದಿದ್ದಾರೆ: ಸಿಎಂ ಕಿಡಿ

    ಬೆಂಗಳೂರು: ಕನ್ನಡಿಗ ವಿಕಾಸ್ ಕುಮಾರ್ ಮೇಲೆ ವಿಂಗ್ ಕಮಾಂಡರ್ ಅಟ್ಟಹಾಸ ಮೆರೆದು ಹಲ್ಲೆ ನಡೆಸಿದ ಕುರಿತು ಸಿಎಂ ಸಿದ್ದರಾಮಯ್ಯ ( CM Siddaramaiah) ಖಂಡಿಸಿದ್ದು, ಕಠಿಣ ಕ್ರಮ ಜರುಗಿಸುವಂತೆ ಪೊಲೀಸ್ ಆಯುಕ್ತರಿಗೆ ಸೂಚನೆ ನೀಡಿದ್ದಾರೆ.

    ಈ ಕುರಿತು ಎಕ್ಸ್‌ನಲ್ಲಿ (X) ಪೋಸ್ಟ್ ಹಂಚಿಕೊಂಡಿರುವ ಸಿಎಂ, ಕನ್ನಡಿಗರ ಮೇಲಿನ ಆರೋಪವನ್ನು ಖಂಡಿಸಿ, ಕನ್ನಡಿಗ ವಿಕಾಸ್ ಕುಮಾರ್ ಪರ ನಿಂತಿದ್ದಾರೆ. ಬೆಂಗಳೂರಿನ ಸಿವಿ ರಾಮನ್ ನಗರದಲ್ಲಿ ವಾಹನ ಟಚ್ ಆದ ವಿಚಾರಕ್ಕೆ ಸಂಬಂಧಿಸಿದಂತೆ ಗಲಾಟೆಯಲ್ಲಿ ಕನ್ನಡಿಗ ವಿಕಾಸ್ ಕುಮಾರ್ ಮೇಲೆ ಹಲ್ಲೆ ನಡೆಸಿರುವ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್, ನಂತರ ಜಾಲತಾಣದಲ್ಲಿ ಕರ್ನಾಟಕ ಮತ್ತು ಕನ್ನಡಿಗರ ಬಗ್ಗೆ ಇಲ್ಲಸಲ್ಲದ ಆರೋಪ ಮಾಡಿದ್ದಾರೆ. ಈ ಮೂಲಕ ಕನ್ನಡಿಗರ ಸ್ವಾಭಿಮಾನ ಕೆಣಕುವ ದುಷ್ಟತನ ಮೆರೆದಿದ್ದಾರೆ.ಇದನ್ನೂ ಓದಿ: ಕ್ಕಿ ರೈ ಮೇಲೆ ಫೈರಿಂಗ್ ಪ್ರಕರಣ – ಗನ್ ಮ್ಯಾನ್ ವಿಠ್ಠಲ್ ಪೊಲೀಸರ ವಶಕ್ಕೆ

    ಕನ್ನಡಿಗರು ಮಾತೃ ಭಾಷೆಯ ಬಗ್ಗೆ ಅಭಿಮಾನ ಹೊಂದಿರುವವರೇ ಹೊರತು ದುರಭಿಮಾನಿಗಳಲ್ಲ. ಭಾಷೆಯ ವಿಚಾರಕ್ಕೆ ವಿನಾಕರಣ ಇತರರ ಮೇಲೆ ಹಲ್ಲೆ ಮಾಡುವ ಅಥವಾ ನಿಂದಿಸುವ ಸಣ್ಣತನ ಕನ್ನಡಿಗರದ್ದಲ್ಲ. ದೇಶದ ಮೂಲೆ ಮೂಲೆಗಳಿಂದ ಬಂದು ಇಲ್ಲಿ ನೆಲೆಸಿರುವ ಪ್ರತಿಯೊಬ್ಬರನ್ನು ಗೌರವದಿಂದ ಕಾಣುತ್ತಿರುವ, ಅವರನ್ನೂ ಕನ್ನಡಿಗರೇ ಎಂದು ಪ್ರೀತಿಸುವ ಸಂಸ್ಕೃತಿ ಕನ್ನಡ ಮಣ್ಣಿನದ್ದು. ಇದಕ್ಕೆ ಇತಿಹಾಸವೇ ಸಾಕ್ಷಿ ಎಂದು ಹೇಳಿದ್ದಾರೆ.

    ರಾಷ್ಟ್ರೀಯ ಮಾಧ್ಯಮಗಳು ತಮ್ಮ ಜವಾಬ್ದಾರಿ ಮತ್ತು ವೃತ್ತಿಧರ್ಮ ಮರೆತು ಯಾರೋ ಒಬ್ಬ ಮಾಡಿದ ಆಧಾರ ರಹಿತ ಆರೋಪವನ್ನು ಹಿಡಿದುಕೊಂಡು ಇಡೀ ಕರ್ನಾಟಕದ ಘನತೆಗೆ ಮಸಿಬಳಿಯುವ ಕೆಲಸವನ್ನು ಮಾಡಿದ್ದು, ನಿಜಕ್ಕೂ ವಿಷಾದನೀಯ. ಇದರಿಂದ ಪ್ರತಿಯೊಬ್ಬ ಕನ್ನಡಿಗನ ಮನಸಿಗೆ ಘಾಸಿಯಾಗಿದೆ ಎಂದು ಖಂಡಿಸಿದ್ದಾರೆ.

    ಕನ್ನಡಿಗರು ಉದ್ವೇಗ ಅಥವಾ ಪ್ರಚೋದನೆಗಳಿಗೆ ಒಳಗಾಗಿ ಕಾನೂನು ಕೈಗೆತ್ತಿಕೊಳ್ಳುವ ಕೆಲಸ ಮಾಡಬಾರದು. ಕನ್ನಡಿಗರಿಂದ ಆಯ್ಕೆಯಾದ ಕನ್ನಡದ್ದೇ ಸರ್ಕಾರ ಕರ್ನಾಟಕದಲ್ಲಿದೆ. ಸೋಮವಾರ ನಡೆದ ಘಟನೆಗೆ ಸಂಬಂಧಿಸಿದಂತೆ ತಪ್ಪಿತಸ್ಥರು ಯಾರೇ ಆಗಿರಲಿ, ಯಾವ ಹುದ್ದೆಯಲ್ಲೇ ಇರಲಿ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಪೊಲೀಸ್ ಕಮಿಷನರ್ ಅವರಿಗೆ ಆದೇಶಿಸಿದ್ದೇನೆ. ಪ್ರಕರಣವನ್ನು ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ಅನ್ಯಾಯಕ್ಕೊಳಗಾದ ವ್ಯಕ್ತಿಗೆ ನ್ಯಾಯ ಕೊಡಿಸಲು ಬದ್ಧವಾಗಿದೆ ಎಂದು ಟ್ವೀಟ್ ಮೂಲಕ ಸ್ಪಷ್ಟಪಡಿಸಿದ್ದಾರೆ.ಇದನ್ನೂ ಓದಿ: ಡಿವೋರ್ಸ್ ಆಗಿ 2 ತಿಂಗಳಲ್ಲಿ ಖ್ಯಾತ ಕಿರುತೆರೆ ನಟಿಯ ಮಾಜಿ ಪತಿ ವಿಧಿವಶ

  • ವಿಂಗ್ ಕಮಾಂಡರ್ ತಪ್ಪು ಮಾಡಿದ್ರೂ ತಪ್ಪೇ: ಸಿಎಂ

    ವಿಂಗ್ ಕಮಾಂಡರ್ ತಪ್ಪು ಮಾಡಿದ್ರೂ ತಪ್ಪೇ: ಸಿಎಂ

    ಮಂಡ್ಯ: ವಿಂಗ್ ಕಮಾಂಡರ್ (Wing Commander) ಯುವಕನ ಮೇಲೆ ಹಲ್ಲೆ ವಿಚಾರವಾಗಿ ಕಾನೂನು ಕ್ರಮಕ್ಕೆ ಸೂಚಿಸಲಾಗಿದೆ. ವಿಂಗ್ ಕಮಾಂಡರ್ ಆಗಲಿ ಯಾರೇ ಆಗಲಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ.

    ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಅದ್ದಿಹಳ್ಳಿ ಹೆಲಿಪ್ಯಾಡ್‌ನಲ್ಲಿ ವಿಂಗ್ ಕಮಾಂಡರ್ ಯುವಕನ ಮೇಲೆ ಹಲ್ಲೆ ವಿಚಾರಕ್ಕೆ ಅವರು ಪ್ರತಿಕ್ರಿಯೆ ನೀಡಿದರು. ಈಗಾಗಲೇ ಈ ಪ್ರಕರಣ ಸಂಬಂಧ ದೂರು ದಾಖಲಾಗಿದೆ. ಯಾರೇ ತಪ್ಪು ಮಾಡಿದ್ದರೂ ಅವರ ಮೇಲೆ ಕ್ರಮ ಆಗುತ್ತದೆ. ವಿಂಗ್ ಕಮಾಂಡರ್ ತಪ್ಪು ಮಾಡಿದ್ರೂ ತಪ್ಪೇ. ಸೂಕ್ತ ಕ್ರಮಕೈಗೊಳ್ಳಲು ಸೂಚನೆ ನೀಡಿದ್ದೇನೆ ಎಂದರು. ಇದನ್ನೂ ಓದಿ: ಸಂಸತ್ತೇ ಸರ್ವೋಚ್ಚ, ಚುನಾಯಿತ ಪ್ರತಿನಿಧಿಗಳು ಸಾಂವಿಧಾನಿಕ ವಿಷಯದ ಅಲ್ಟಿಮೇಟ್‌ ಮಾಸ್ಟರ್ಸ್‌: ಧನಕರ್‌

    ರಾಜ್ಯದಲ್ಲಿ ಹಿಂದಿ ಹೇರಿಕೆಗೆ ನಾವು ಬಿಡಲ್ಲ. ಕೇಂದ್ರ ಸರ್ಕಾರದ ಹಿಂದಿ ಹೇರಿಕೆ ಒಪ್ಪಲ್ಲ, ನಮ್ಮ ವಿರೋಧವಿದೆ. ರಾಜ್ಯದಲ್ಲಿ ದ್ವಿಭಾಷ ನೀತಿ ಜಾರಿಯಲ್ಲಿದೆ. ರಾಜ್ಯದಲ್ಲಿ ಮಾತೃಭಾಷೆ ಕನ್ನಡ ಮತ್ತು ಇಂಗ್ಲಿಷ್ ಕಲಿಯುವ ಅವಕಾಶ ಇದೆ. ನಮ್ಮಲ್ಲಿ ತ್ರಿಭಾಷ ಸೂತ್ರವಿಲ್ಲ. ಕನ್ನಡ, ಇಂಗ್ಲಿಷ್ ಮಾತ್ರ ಕಲಿಸುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ಮದುವೆಗೆ ನಿರಾಕರಿಸಿದಕ್ಕೆ ಯುವತಿಗೆ ಚಾಕು ಇರಿದ ಪ್ರಿಯಕರ

  • ವಿಂಗ್ ಕಮಾಂಡರ್ ಹಣೆಯಲ್ಲಿ ರಕ್ತ ಸೋರಿದ್ದು ಹೇಗೆ?

    ವಿಂಗ್ ಕಮಾಂಡರ್ ಹಣೆಯಲ್ಲಿ ರಕ್ತ ಸೋರಿದ್ದು ಹೇಗೆ?

    ಬೆಂಗಳೂರು: ವಿಂಗ್ ಕಮಾಂಡರ್ (Wing Commander) ಮೇಲೆ ಹಲ್ಲೆ ಪ್ರಕರಣ ಸಂಬಂಧ ವಿಂಗ್ ಕಮಾಂಡರ್ ಮಾಡಿದ್ದ ವೀಡಿಯೋದಲ್ಲಿ ಅವರ ಹಣೆಯಿಂದ ರಕ್ತ ಸೋರುತ್ತಿತ್ತು. ಯುವಕ ವಿಕಾಸ್ ಮಾರಣಾಂತಿಕ ಹಲ್ಲೆ ನಡೆಸಿದ ಪರಿಣಾಮ ಈ ರೀತಿಯಾಗಿದೆ ಎಂದು ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್ (Shiladitya Bose) ಬಿಂಬಿಸಿದ್ದರು. ಆದರೆ ಅಸಲಿ ಕಾರಣವೇ ಬೇರೆ ಇದೆ. ವಿಕಾಸ್‌ಗೆ ಡಿಚ್ಚಿ ಹೊಡೆಯಲು ಹೋಗಿ ವಿಂಗ್ ಕಮಾಂಡರ್ ಹಣೆಯಲ್ಲಿ ರಕ್ತ ಬರಿಸಿಕೊಂಡಿದ್ದಾರೆ.

    ಗಲಾಟೆ ನಡೆದ ಸಂದರ್ಭ ವಿಂಗ್‌ ಕಮಾಂಡರ್‌ ಬೈಕ್‌ ಅನ್ನು ಬೀಳಿಸಿದ್ದಾರೆ. ಈ ವೇಳೆ  ವಿಕಾಸ್‌ ಬೈಕ್‌ ಕೀಯನ್ನು ಬೈಕಿನಿಂದ ತೆಗೆದು ತಮ್ಮ ಕೈಯಲ್ಲಿ ಹಿಡಿದುಕೊಂಡಿದ್ದರು. ರೊಚ್ಚಿಗೆದ್ದ ವಿಂಗ್‌ ಕಮಾಂಡರ್ ವಿಕಾಸ್‌ಗೆ ಡಿಚ್ಚಿ ಹೊಡೆಯಲು ಹೋದ ಸಂದರ್ಭ ವಿಕಾಸ್ ಕೈಯಲ್ಲಿದ್ದ ಗಾಡಿ ಕೀ ವಿಂಗ್ ಕಮಾಂಡರ್ ಹಣೆಗೆ ತಗುಲಿ ರಕ್ತ ಬಂದಿದೆ. ಇದನ್ನೇ ಸಿಂಪತಿ ವೀಡಿಯೋಗೆ ಬಳಸಿಕೊಂಡ ವಿಂಗ್ ಕಮಾಂಡರ್, ದೇವರು ನನಗೆ ಪವರ್ ಕೊಟ್ಟಿರೋದು ಸೇಡು ತೀರಿಸಿಕೊಳ್ಳಲು ಅಲ್ಲ ಎಂದು ಸುಳ್ಳು ಹೇಳಿದ್ದಾರೆ. ಇದನ್ನೂ ಓದಿ: ಕುತ್ತಿಗೆ ಹಿಡಿದು ಕೊಲೆಗೆ ಯತ್ನಿಸಿದ್ದ – ವಿಂಗ್‌ ಕಮಾಂಡರ್‌ ವಿರುದ್ಧ ಕೊನೆಗೂ ಎಫ್‌ಐಆರ್‌ ದಾಖಲು

     

    ಭಾಷೆಯ ವಿಚಾರ ಹಾಗೂ ಸ್ಥಳೀಯರು ಯಾರೂ ನನ್ನ ನೆರವಿಗೆ ಬರಲಿಲ್ಲ ಎಂದು ವಿಂಗ್ ಕಮಾಂಡರ್ ವೀಡಿಯೋ ಮಾಡಿ ಸಿಂಪತಿಗಿಟ್ಟಿಸಿಕೊಳ್ಳಲು ಯತ್ನಿಸಿದ್ದಾರೆ. ವಿಂಗ್ ಕಮಾಂಡರ್ ಕಾರಿನ ಡ್ಯಾಶ್‌ಕ್ಯಾಮೆರಾ ವೀಡಿಯೋ ಬಿಡುಗಡೆ ಮಾಡದೇ ಹಲ್ಲೆಯ ವೀಡಿಯೋ ಅಷ್ಟೆ ಅಪ್ಲೋಡ್ ಮಾಡಿದ್ದರು. ಸಿಸಿಟಿವಿ ದೃಶ್ಯಗಳು ಬೆಳಕಿಗೆ ಬರುತ್ತಿದ್ದಂತೆ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್ ಮುಖವಾಡ ಕಳಚಿದೆ. ಇದನ್ನೂ ಓದಿ: ಹಿಂದಿಯಲ್ಲಿ ಬೈದಿದ್ದು ಅರ್ಥ ಆಗಿಲ್ಲ ಎಂದಿದ್ದಕ್ಕೆ ಗಲಾಟೆ: ಯುವಕನ ತಾಯಿ ಅಳಲು

    ವಿಕಾಸ್ ಪಕ್ಕೆಲುಬುಗಳಿಗೆ ವಿಂಗ್ ಕಮಾಂಡರ್ ಕಾಲಿನಿಂದ ಒದ್ದಿರುವ ಹಿನ್ನೆಲೆ ವಿಕಾಸ್ ಪಕ್ಕೆಲುಬು ನೋವಿನಿಂದ ಬಳಲುತ್ತಿದ್ದಾರೆ. ಸದ್ಯ ಹಲ್ಲೆಗೊಳಗಾದ ವಿಕಾಸ್ ಪರ ಹಲವು ಕನ್ನಡಪರ ಸಂಘಟನೆಗಳು ನಿಂತಿವೆ. ಸೋಮವಾರ ಸಂಜೆಯಿಂದಲೇ ಶಿಲಾದಿತ್ಯ ಬೋಸ್ ಬಂಧನಕ್ಕೆ ಆಗ್ರಹ ವ್ಯಕ್ತವಾಗಿತ್ತು. ವಿಕಾಸ್‌ಗೆ ಕಾನೂನಿನ ನೆರವು ನೀಡಲು ಸಂಘಟನೆಗಳು ಮುಂದಾಗಿವೆ. ಇದೀಗ ವಿಕಾಸ್ ನೀಡಿದ ದೂರನ್ನು ಸ್ವೀಕರಿಸಿದ ಬೈಯಪ್ಪನಹಳ್ಳಿ ಪೊಲೀಸರು ವಿಂಗ್ ಕಮಾಂಡರ್ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಇದನ್ನೂ ಓದಿ: ಓಂ ಪ್ರಕಾಶ್‌ ಹತ್ಯೆಗೆ 1 ವಾರದಿಂದ ಸ್ಕೆಚ್‌ ಹಾಕಿದ್ದ ಪತ್ನಿ, ಪುತ್ರಿ!

  • ಕುತ್ತಿಗೆ ಹಿಡಿದು ಕೊಲೆಗೆ ಯತ್ನಿಸಿದ್ದ – ವಿಂಗ್‌ ಕಮಾಂಡರ್‌ ವಿರುದ್ಧ ಕೊನೆಗೂ ಎಫ್‌ಐಆರ್‌ ದಾಖಲು

    ಕುತ್ತಿಗೆ ಹಿಡಿದು ಕೊಲೆಗೆ ಯತ್ನಿಸಿದ್ದ – ವಿಂಗ್‌ ಕಮಾಂಡರ್‌ ವಿರುದ್ಧ ಕೊನೆಗೂ ಎಫ್‌ಐಆರ್‌ ದಾಖಲು

    ಬೆಂಗಳೂರು: ಸುಳ್ಳು ಕಥೆ ಕಟ್ಟಿದ ವಿಂಗ್‌ ಕಮಾಂಡರ್‌ (Wing Commandor) ವಿರುದ್ಧ ಕೊನೆಗೂ ಎಫ್‌ಐಆರ್‌ (FIR) ದಾಖಲಾಗಿದೆ.

    ಹಲ್ಲೆಗೆ ಒಳಗಾದ ವಿಕಾಸ್‌ ನೀಡಿದ ದೂರಿನ ಆಧಾರದಲ್ಲಿ ಬೈಯಪ್ಪನಹಳ್ಳಿ ಪೊಲೀಸ್‌ ಠಾಣೆಯಲ್ಲಿ ಕಾರಿನ ನಂಬರ್‌ ಆಧಾರದಲ್ಲಿ ಶಿಲಾದಿತ್ಯಾ ಬೋಸೆ (Shiladitya Bose) ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್‌ ಅಡಿ ಪ್ರಕರಣ ದಾಖಲಾಗಿದೆ.

    ಬಿಎನ್‌ಎಸ್ 109(ಕೊಲೆಯತ್ನ), 115(2)(ಮಾರಣಾಂತಿಕ ಹಲ್ಲೆ), 304(ಬಲವಂತವಾಗಿ ಮೈ ಮೇಲೆ ಇರುವ ವಸ್ತು ಕಿತ್ತುಕೊಳ್ಳುವುದು), 324(ಅರಿವಿಗೆ ಇದ್ದರೂ ವಸ್ತುಗಳನ್ನು ಉದ್ದೇಶ ಪೂರಕವಾಗಿ ಹಾಳು ಮಾಡುವುದು), 352 (ಶಾಂತಿ ಭಂಗ)ಸೆಕ್ಷನ್‌ ಅಡಿ ಎಫ್‌ಐಆರ್‌ ದಾಖಲಾಗಿದೆ. ಇದನ್ನೂ ಓದಿ: ಹಿಂದಿಯಲ್ಲಿ ಬೈದಿದ್ದು ಅರ್ಥ ಆಗಿಲ್ಲ ಎಂದಿದ್ದಕ್ಕೆ ಗಲಾಟೆ: ಯುವಕನ ತಾಯಿ ಅಳಲು

     

    ದೂರಿನಲ್ಲಿ ಏನಿದೆ?
    ಸೋಮವಾರ ಬೆಳಗ್ಗೆ ಸ್ನೇಹಿತನ ಬೈಕ್ ವಾಪಸ್ ನೀಡಲು ನಾನು ಹೋಗುತ್ತಿದ್ದೆ. ಟಿನ್‌ ಫ್ಯಾಕ್ಟರಿಯ ಬಳಿ ಬೈಕ್‌ಗೆ ಕಾರು ತಾಗಿದೆ. ಇದಕ್ಕೆ ಕಾರನ್ನು ಅಡ್ಡ ಹಾಕಿ ಗುದ್ದಿದ್ದು ಯಾಕೆ ಎಂದು ಕೇಳಿದೆ. ಪ್ರಶ್ನೆ ಮಾಡಿದ್ದಕ್ಕೆ ಕಾರಿನಲ್ಲಿದ್ದ ವ್ಯಕ್ತಿ ಕಾಲಿನಿಂದ ಒದ್ದು ಬೈಕನ್ನು ಕೆಳಗೆ ಬೀಳಿಸಿದ್ದಾನೆ.

    ನಾನು ಆಕ್ಷೇಪ ವ್ಯಕ್ತಪಡಿಸಿದಾಗ ನಿರಂತರವಾಗಿ ಹಲ್ಲೆ ಮಾಡಿದ್ದಾನೆ. ಸ್ನೇಹಿತನಿಗೆ ಕರೆ ಮಾಡಲು ಮುಂದಾದಾಗ ಮೊಬೈಲ್ ಎಸೆದಿದ್ದಾನೆ. ಜೊತೆಗೆ ಬೈಕ್‌ ಕೀ ಎಸೆಯುತ್ತಾನೆ. ಕುತ್ತಿಗೆ ಹಿಡಿದು ಸಾಯಿಸಲು ಯತ್ನಿಸಿದ್ದ ಎಂದು ವಿಕಾಸ್‌ ದೂರು ನೀಡಿದ್ದಾರೆ. ಇದನ್ನೂ ಓದಿ: ನೆಲಕ್ಕೆ ಬಿದ್ರೂ ಬಿಡದೇ ಡೆಲಿವರಿ ಬಾಯ್ ಮೇಲೆ ಹಲ್ಲೆ ಮಾಡಿ ವಿಂಗ್ ಕಮಾಂಡರ್ ದರ್ಪ

  • ಹಿಂದಿಯಲ್ಲಿ ಬೈದಿದ್ದು ಅರ್ಥ ಆಗಿಲ್ಲ ಎಂದಿದ್ದಕ್ಕೆ ಗಲಾಟೆ: ಯುವಕನ ತಾಯಿ ಅಳಲು

    ಹಿಂದಿಯಲ್ಲಿ ಬೈದಿದ್ದು ಅರ್ಥ ಆಗಿಲ್ಲ ಎಂದಿದ್ದಕ್ಕೆ ಗಲಾಟೆ: ಯುವಕನ ತಾಯಿ ಅಳಲು

    ಬೆಂಗಳೂರು: ವಿಂಗ್ ಕಮಾಂಡರ್ (Wing Commander) ಮೇಲೆ ಯುವಕ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾದ ಯುವಕ ವಿಕಾಸ್ ತಾಯಿ ಪ್ರಕರಣದಲ್ಲಿ ಮಗನದ್ದು ಯಾವುದೇ ತಪ್ಪು ಇಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ.

    ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೈಕಿನ ಸೈಲೆನ್ಸರ್‌ಗೆ ಕಾರು ಟಚ್ ಆಗಿದೆ. ಈ ವೇಳೆ ಹಿಂದಿಯಲ್ಲಿ ಬೈದಿದ್ದಾರೆ. ಹಿಂದಿಯಲ್ಲಿ ಹೇಳಿದ್ದು ಅರ್ಥ ಆಗಿಲ್ಲ ಎಂದು ಹೇಳಿದ್ದಕ್ಕೆ ಗಲಾಟೆ ಮಾಡಿದ್ದಾರೆ. ಮಹಿಳೆ ಬಳಿ ಕೇಳಬಾರದೆಂದು ಗಂಡನ ಬಳಿ ಕೇಳಿದ್ದಾನೆ. ವಿಂಗ್ ಕಮಾಂಡರ್‌ನನ್ನು ಕೇಳಿದ್ದಕ್ಕೆ ಮಗನನ್ನು ತಳ್ಳಿದ್ದಾರೆ. ಕೈ ಕಚ್ಚಿ, ಮೈ ಪರಚಿದ್ದಾರೆ. ಬೈಕ್ ಅನ್ನು ಎತ್ತಿಹಾಕಿ ಕಾಲಿಂದ ಒದ್ದಿದ್ದಾರೆ. ನಮ್ಮ ಮೇಲೆ ಹಲ್ಲೆ ಮಾಡಿ ನಮ್ಮ ಮೇಲೆಯೇ ಗೂಬೆ ಕೂರಿಸಿದ್ದಾರೆ. ಇದು ಎಷ್ಟು ನ್ಯಾಯ ಎಂದು ಯುವಕನ ತಾಯಿ ಬೇಸರ ವ್ಯಕ್ತಪಡಿಸಿದ್ದಾರೆ.‌ ಇದನ್ನೂ ಓದಿ: ಓಂ ಪ್ರಕಾಶ್‌ ಹತ್ಯೆಗೆ 1 ವಾರದಿಂದ ಸ್ಕೆಚ್‌ ಹಾಕಿದ್ದ ಪತ್ನಿ, ಪುತ್ರಿ!

    ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರೌಡಿ ವಿಂಗ್ ಕಮಾಂಡರ್ ಬಂಧನಕ್ಕೆ ಆಗ್ರಹ ಹೆಚ್ಚಿದೆ. ಕನ್ನಡಿಗನ ಮೇಲೆ ವಿಂಗ್ ಕಮಾಂಡರ್ ಮನಸೋಇಚ್ಛೆ ಥಳಿಸಿದ್ದಾರೆ. ತೀವ್ರ ಹೊಡೆತದಿಂದ ಯುವಕ ಅಸ್ವಸ್ಥನಾಗಿ ಬಿದ್ದಿದ್ದಾನೆ. ಯುವಕನ ರಕ್ಷಣೆಗೆ ಧಾವಿಸಿದ ಸ್ಥಳೀಯರಿಗೆ ವಿಂಗ್ ಕಮಾಂಡರ್ ಶಿಲಾದಿತ್ಯಾ ಅವಾಜ್ ಕೂಡ ಹಾಕಿದ್ದಾರೆ. ಕನ್ನಡಿಗನ ಮೇಲೆ ಹಲ್ಲೆಗೆ ಕನ್ನಡಿಗರು ಕೆರಳಿದ್ದಾರೆ. ಸೈನಿಕನ ಹೆಸರಲ್ಲಿ ಸಿಂಪತಿ ಗಿಟ್ಟಿಸಿಕೊಂಡವನ ಬಂಧನಕ್ಕೆ ಪಟ್ಟುಹಿಡಿದಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಂಗ್ ಕಮಾಂಡರ್ ಬಂಧನಕ್ಕೆ ಆಗ್ರಹ ಹೆಚ್ಚಿದ್ದು, ಸಂಘಟನೆಗಳು ಬೈಯಪ್ಪನಹಳ್ಳಿ ಪೊಲೀಸರಿಗೆ ಮನವಿ ಮಾಡಲಿವೆ. ಇದನ್ನೂ ಓದಿ: ರಿಕ್ಕಿ ರೈ ಮೇಲೆ ನಡೆದ ಗುಂಡಿನ ದಾಳಿ ಪ್ರಕರಣ ಫೇಕಾ?

    ಪ್ರಕರಣ ಏನು?
    ಬೆಂಗಳೂರಿನಲ್ಲಿ ಕೋಲ್ಕತ್ತಾ ಮೂಲದ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್ ತಮ್ಮ ಪತ್ನಿಯೊಂದಿಗೆ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದಾಗ ಸಿವಿ ರಾಮನ್ ನಗರದ ಗೋಪಾಲನ್ ಗ್ರ್ಯಾಂಡ್ ಮಾಲ್ ಬಳಿ ತೆರಳುತ್ತಿದ್ದರು. ಈ ವೇಳೆ, ಬೈಕ್‌ನಲ್ಲಿ ಬಂದ ಸವಾರ, ನೆರೆ ರಾಜ್ಯದವರು ಎಂಬ ಕಾರಣಕ್ಕೆ ಹಲ್ಲೆ ಮಾಡಿದ್ದಾನೆ ಎಂದು ಶಿಲಾದಿತ್ಯ ಆರೋಪಿಸಿದ್ದಾರೆ. ಮುಖ, ತಲೆಗೆ ಗಾಯಗಳಾಗಿದ್ದು, ರಕ್ತ ಹರಿದಿದೆ. ಸ್ಥಳೀಯರು ಘಟನೆಯನ್ನು ನೋಡುತ್ತಾ ನಿಂತಿದ್ದರು. ಯಾರೂ ಕೂಡ ನನ್ನ ನೆರವಿಗೆ ಬರಲಿಲ್ಲ ಎಂದು ಬೇಸರ ತೋಡಿಕೊಂಡಿದ್ದ ವೀಡಿಯೋ ಹರಿಬಿಟ್ಟಿದ್ದರು. ಇದನ್ನೂ ಓದಿ: ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಭೇಟಿಯಾದ ಪ್ರಧಾನಿ ಮೋದಿ – ವ್ಯಾಪಾರ ಒಪ್ಪಂದದ ಬಗ್ಗೆ ಚರ್ಚೆ

    ಇದು ಭಾಷಾ ಹಲ್ಲೆ ಎಮದು ದೇಶಾದ್ಯಂತ ಚರ್ಚೆಗೀಡಾಗಿತ್ತು. ಇದರ ಬೆನ್ನಲ್ಲೇ ಬೈಯ್ಯಪ್ಪನಹಳ್ಳಿ ಪೊಲೀಸರು ತನಿಖೆಗೆ ಇಳಿದು ಇದು ಭಾಷಾ ವಿಚಾರಕ್ಕೆ ನಡೆದ ಹಲ್ಲೆ ಅಲ್ಲ. ಕಾರಿಗೆ ಬೈಕ್ ಟಚ್ ಆಗಿದ್ದಕ್ಕೆ ನಡೆದ ಹಲ್ಲೆ ಎಂದು ಸ್ಪಷ್ಟನೆ ನೀಡಿದರು. ಎಫ್‌ಐಆರ್ ದಾಖಲಿಸಿಕೊಂಡು, ಬೈಕ್ ಸವಾರ, ಡೆಲಿವರಿಬಾಯ್ ವಿಕಾಸ್ ಎಂಬಾತನನ್ನು ಅರೆಸ್ಟ್ ಮಾಡಿದ್ದಾರೆ. ಈ ಮಧ್ಯೆ ವಿಂಗ್ ಕಮಾಂಡರೇ ಆ ಯುವಕನ ಮೇಲೆ ಮುಗಿಬಿದ್ದು, ಪದೇ ಪದೇ ಹಲ್ಲೆ ಮಾಡಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅಲ್ಲದೇ ಯುವಕನ ಮೊಬೈಲ್ ಕೂಡ ಕಿತ್ತು ಬಿಸಾಕಿದ್ದಾರೆ. ಇದನ್ನೂ ಓದಿ: ನಿವೃತ್ತ ಡಿಜಿಪಿ ಕೊಲೆ ಕೇಸ್‌ – ಆರೋಪಿ ಪತ್ನಿಗೆ 14 ದಿನ ನ್ಯಾಯಾಂಗ ಬಂಧನ

  • ಬೈಕ್ ಸವಾರನಿಗೆ ಮನಸೋಇಚ್ಛೆ ಹಲ್ಲೆ ಮಾಡಿ ಕಥೆ ಕಟ್ಟಿದ ವಿಂಗ್ ಕಮಾಂಡರ್

    ಬೈಕ್ ಸವಾರನಿಗೆ ಮನಸೋಇಚ್ಛೆ ಹಲ್ಲೆ ಮಾಡಿ ಕಥೆ ಕಟ್ಟಿದ ವಿಂಗ್ ಕಮಾಂಡರ್

    – ಕನ್ನಡ ಮಾತನಾಡಿಲ್ಲ ಅಂತ ಹಲ್ಲೆ ಮಾಡಿದ್ದ ಎಂದು ವಿಂಗ್ ಕಮಾಂಡರ್ ಸುಳ್ಳು ಆರೋಪ
    – ಪ್ರಕರಣಕ್ಕೆ ಟ್ವಿಸ್ಟ್‌ ಕೊಟ್ಟ ಸ್ಥಳದಲ್ಲಿದ್ದ ಸಿಸಿಟಿವಿ ದೃಶ್ಯ

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮಾರಾಮಾರಿಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ತನ್ನ ಮೇಲೆ ಹಲ್ಲೆ ಮಾಡಲಾಯಿತು ಎಂದು ಕಥೆ ಕಟ್ಟಿದ್ದ ವಿಂಗ್ ಕಮಾಂಡರ್‌ನ (Wing Commander) ಅಸಲಿಯತ್ತು ಈಗ ಬಯಲಾಗಿದೆ.

    ಬೈಕ್ ಸವಾರನಿಗೆ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್ ಮನಸೋಇಚ್ಛೆ ಹಲ್ಲೆ ಮಾಡಿರುವುದು ಸಿಸಿಟಿವಿ ದೃಶ್ಯದಿಂದ ಬಯಲಾಗಿದೆ. ಹುಡುಗ ನೆಲದ ಮೇಲೆ ಬಿದ್ದರೂ ಬಿಡದೇ, ಸಿಕ್ಕಸಿಕ್ಕಂತೆ ವಿಂಗ್ ಕಮಾಂಡರ್ ಹಲ್ಲೆ ನಡೆಸಿ ದರ್ಪ ಮೆರೆದಿದ್ದಾರೆ. ಸ್ಥಳೀಯರು ಬಿಡಿಸಲು ಮುಂದಾದರೂ ಜಗ್ಗದೇ ಬೈಕ್ ಸವಾರನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ಇದನ್ನೂ ಓದಿ: DRDO ಸ್ಟಿಕ್ಕರ್ ನೋಡಿ ಕೆರಳಿದ ಪುಂಡರು – ಕಾರು ಅಡ್ಡಗಟ್ಟಿ ವಿಂಗ್‌ ಕಮಾಂಡರ್‌ ಮೇಲೆ ಮಾರಣಾಂತಿಕ ಹಲ್ಲೆ

    ವಿಕಾಸ್ ಹಲ್ಲೆಗೊಳಗಾದ ಬೈಕ್ ಸವಾರ. ಗಲಾಟೆ ವೇಳೆ ಆತನ ಮೊಬೈಲ್‌ನ್ನು ವಿಂಗ್ ಕಮಾಂಡರ್ ಕಿತ್ತು ಎಸೆದಿದ್ದಾರೆ. ಮನಸೋಇಚ್ಛೆ ಹುಡುಗನ ಮೇಲೆ ಹಲ್ಲೆ ಮಾಡಿದ್ದಾರೆ. ಈ ಗಲಾಟೆಯಲ್ಲಿ ಬೈಕ್ ಕೀ ಮುಖಕ್ಕೆ ತಗುಲಿ ರಕ್ತ ಬಂದಿದೆ. ಇದನ್ನೇ ಕನ್ನಡ ಮತ್ತು ಹಿಂದಿ ಅಂತಾ ಗಾಸಿಪ್ ಮಾಡಿ ವಿಂಗ್‌ ಕಮಾಂಡರ್‌ ವೀಡಿಯೋ ವೈರಲ್ ಮಾಡಿದ್ದಾರೆ ಅನ್ನೋದು ಗೊತ್ತಾಗಿದೆ.

    ಪ್ರಕರಣ ಏನು?
    ಕಾರಿಗೆ ಬೈಕ್ ಹಿಂದಿನಿಂದ ಟಚ್ ಆಗಿದ್ದಕ್ಕೆ ಗಲಾಟೆಯಾಗಿದೆ ಎನ್ನಲಾಗಿತ್ತು. ಪ್ರಕರಣ ಸಂಬಂಧ ವಿಂಗ್ ಕಮಾಂಡರ್ ವೀಡಿಯೋವೊಂದನ್ನು ಪೋಸ್ಟ್ ಮಾಡಿದ್ದರು. ವೀಡಿಯೋದಲ್ಲಿ, ‘ಬೈಕ್ ಸವಾರ ನನ್ನ ಮೇಲೆ ಹಲ್ಲೆ ನಡೆಸಿದ್ದಾನೆ. ಕನ್ನಡ ಮಾತನಾಡಿಲ್ಲ ಎಂದು ಹಲ್ಲೆ ಮಾಡಿದ. ನನ್ನ ಪತ್ನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ. ಈ ವೇಳೆ ನನ್ನ ಮೇಲೆ ಹಲ್ಲೆ ಮಾಡಿದ. ಸ್ಥಳೀಯರು ಯಾರೂ ಕೂಡ ಸಹಾಯಕ್ಕೆ ಬರಲಿಲ್ಲ’ ಎಂದು ವಿಂಗ್ ಕಮಾಂಡರ್ ಆರೋಪ ಮಾಡಿದ್ದರು. ತಲೆಗೆ ಮತ್ತು ಮೂಗಿನ ಭಾಗಕ್ಕೆ ಪೆಟ್ಟಾಗಿದೆ ಎಂದು ಬ್ಯಾಂಡೇಜ್ ಹಾಕಿಸಿದ್ದರು. ಇದನ್ನೂ ಓದಿ: ಸರ್ಕಾರಿ ಗೌರವಗಳೊಂದಿಗೆ ನಿವೃತ್ತ ಡಿಜಿಪಿ ಓಂ ಪ್ರಕಾಶ್ ಅಂತ್ಯಕ್ರಿಯೆ

    ಆದರೆ, ಹಲ್ಲೆಗೆ ಸಂಬಂಧಿಸಿದ ವೀಡಿಯೋ ಈಗ ‘ಪಬ್ಲಿಕ್ ಟಿವಿ’ಗೆ ಲಭ್ಯವಾಗಿದ್ದು, ವಿಂಗ್ ಕಮಾಂಡರ್ ಅಸಲಿಯತ್ತು ಬಯಲಾಗಿದೆ. ವೀಡಿಯೋದಲ್ಲಿ ಬೈಕ್ ಸವಾರನ ಮೇಲೆ ವಿಂಗ್ ಕಮಾಂಡರ್ ಮಾರಣಾಂತಿಕ ಹಲ್ಲೆ ನಡೆಸಿರುವುದು ಕಂಡುಬಂದಿದೆ.

  • Sukhoi, Mirage Fighter Jets Crash: ವಿಮಾನ ಅಪಘಾತದಲ್ಲಿ ಬೆಳಗಾವಿ ಮೂಲದ ವಿಂಗ್ ಕಮಾಂಡರ್ ಹುತಾತ್ಮ

    Sukhoi, Mirage Fighter Jets Crash: ವಿಮಾನ ಅಪಘಾತದಲ್ಲಿ ಬೆಳಗಾವಿ ಮೂಲದ ವಿಂಗ್ ಕಮಾಂಡರ್ ಹುತಾತ್ಮ

    ಬೆಳಗಾವಿ: ಮಧ್ಯಪ್ರದೇಶದ (Madhya Pradesh) ಮೊರೆನಾದಲ್ಲಿ ಭಾರತೀಯ ಯುದ್ದ ವಿಮಾನಗಳು ಪರಸ್ಪರ ಡಿಕ್ಕಿ ಪ್ರಕರಣದಲ್ಲಿ ಬೆಳಗಾವಿ ಮೂಲದ ವಿಂಗ್ ಕಮಾಂಡರ್ ಹುತಾತ್ಮರಾದ ಘಟನೆ ನಡೆದಿದೆ.

    ನಗರದ ಗಣೇಶಪುರದ ಸಂಭಾಜೀ ನಗರದ ನಿವಾಸಿ, ವಿಂಗ್ ಕಮಾಂಡರ್‌ ಹನುಮಂತರಾವ್ (Hanumanth Rao Sarathi) ಹುತಾತ್ಮರಾಗಿದ್ದಾರೆ. ಈ ಸಂಬಂಧ ಟ್ವೀಟ್‌ ಮಾಡಿ ಭಾರತೀಯ ವಾಯು ಪಡೆ (IAF) ವಿಷಾದ ವ್ಯಕ್ತಪಡಿಸಿದೆ. ಇದನ್ನೂ ಓದಿ: Madhya Pradesh Plane Crash: ಮಿರಾಜ್ 2000 ಯುದ್ಧ ವಿಮಾನದ ಪೈಲಟ್ ದುರ್ಮರಣ

    ಬೆಳಗಾವಿ ಗ್ರಾಮೀಣ ಕ್ಷೇತ್ರ ವ್ಯಾಪ್ತಿಯ ಗಣೇಶಪುರದ ಹನುಮಂತರಾವ್ ಮನೆಗೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ವಿಂಗ್ ಕಮಾಂಡರ್ ಸಾವಿನ‌ ಸುದ್ದಿ ತಿಳಿದ ಹನುಮಂತರಾವ್ ಮನೆಯಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

    ಮಧ್ಯಪ್ರದೇಶದ ಮೊರೆನಾ ಸಮೀಪ ಸುಖೋಯ್‌ 30 (Sukhoi) ಹಾಗೂ ಒಂದು ಮಿರಾಜ್‌ 2000 (Mirage) ಯುದ್ಧವಿಮಾನ ಪತನವಾಗಿತ್ತು. ಈ ಎರಡೂ ವಿಮಾನಗಳು ಗ್ವಾಲಿಯರ್‌ ವಾಯುನೆಲೆಯಿಂದ ಟೇಕಾಫ್‌ ಆಗಿದ್ದವು. ಘಟನೆಗೆ ಕಾರಣ ತಿಳಿಯಲು ಭಾರತೀಯ ವಾಯುಪಡೆ ತನಿಖೆಗೆ ಆದೇಶ ಮಾಡಿದೆ. ಇದನ್ನೂ ಓದಿ: Plane Crash: ಬೆಂಕಿ ಕಾಣಿಸಿಕೊಂಡು ಪತನಗೊಂಡ ಚಾರ್ಟರ್ಡ್ ವಿಮಾನ – ಪೈಲಟ್‍ಗಾಗಿ ಹುಡುಕಾಟ

    ವಾಯು ಪಡೆಯ ವಿಮಾನ ಸ್ಥಳಕ್ಕೆ ಧಾವಿಸಿ ‍‍ಪರಿಶೀಲನೆ ನಡೆಸಿತು. ಘಟನೆ ಬಗ್ಗೆ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರಿಗೆ ಮಾಹಿತಿ ನೀಡಲಾಗಿದೆ ಎಂದು ರಕ್ಷಣಾ ಇಲಾಖೆ ಹೇಳಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಎಲ್ಲರೊಂದಿಗೆ ನಗುನಗ್ತಾ ಮಾತಾಡ್ತಿದ್ದ ಮಗನ ನಗು ಈಗ ನಮ್ಮಿಂದ ದೂರವಾಗಿದೆ: ಪೃಥ್ವಿ ಸಿಂಗ್ ಚೌಹಾಣ್ ತಂದೆ ಕಣ್ಣೀರು

    ಎಲ್ಲರೊಂದಿಗೆ ನಗುನಗ್ತಾ ಮಾತಾಡ್ತಿದ್ದ ಮಗನ ನಗು ಈಗ ನಮ್ಮಿಂದ ದೂರವಾಗಿದೆ: ಪೃಥ್ವಿ ಸಿಂಗ್ ಚೌಹಾಣ್ ತಂದೆ ಕಣ್ಣೀರು

    – ಮಂಗಳವಾರವಷ್ಟೇ ಮಗನ ಜೊತೆ ಮಾತಾಡಿದ್ದೆ

    ಚೆನೈ: ತಮಿಳುನಾಡಿನ ಕುನೂರಿನಲ್ಲಿ ದುರಂತಕ್ಕೀಡಾದ ಹೆಲಿಕಾಪ್ಟರ್‌ನಲ್ಲಿ ಸೇನಾ ಸಿಬ್ಬಂದಿ ಮುಖ್ಯಸ್ಥ ಬಿಪಿನ್ ರಾವತ್ ಅವರೊಂದಿಗೆ ಮೃತಪಟ್ಟ 13 ಜನರಲ್ಲಿ ವಿಂಗ್ ಕಮಾಂಡರ್ ಪೃಥ್ವಿ ಸಿಂಗ್ ಚೌಹಾಣ್ ಕೂಡ ಒಬ್ಬರು.

    42 ವರ್ಷದ ಚೌಹಾಣ್ ಆಗ್ರಾದಲ್ಲಿ ಹುಟ್ಟಿ ಬೆಳೆದವರು. ಇವರು ಐವರು ಮಕ್ಕಳಲ್ಲಿ ಕೊನೆಯವರಾಗಿದ್ದು 2007ರಲ್ಲಿ ವಿವಾಹವಾದರು. ಇವರಿಗೆ 12 ವರ್ಷದ ಮಗಳು ಮತ್ತು 9 ವರ್ಷದ ಮಗ ಇದ್ದಾರೆ. ಇದೀಗ ಚೌಹಾಣ್‍ರನ್ನು ಕಳೆದುಕೊಂಡು ಕಣ್ಣೀರಾಗಿದ್ದು, ಗ್ರಾಮದಲ್ಲಿ ಮೌನ ಆವರಿಸಿದೆ. ಇದನ್ನೂ ಓದಿ: ಹೆಲಿಕಾಪ್ಟರ್ ದುರಂತ- ಪ್ರಾಣ ಕಳೆದುಕೊಂಡ ವಿವೇಕ್ ಕುಮಾರ್‌ಗಿದೆ 2 ತಿಂಗಳ ಪುಟ್ಟ ಕಂದಮ್ಮ

    ವೃತ್ತಿ ಜೀವನ:
    ಮಿಲಿಟರಿ ವೃತ್ತಿ ಜೀವನವು ಗಣ್ಯ ರಾಷ್ಟ್ರೀಯ ರಕ್ಷಣಾ ಅಕಾಡೆಮಿ(ಎನ್‍ಡಿಎ)ಯಲ್ಲಿ ಆರಂಭವಾಯಿತು. ಅಲ್ಲಿ ಉತ್ತೀರ್ಣರಾದ ನಂತರ 2000 ಇಸವಿಯಲ್ಲಿ ಭಾರತೀಯ ವಾಯುಪಡೆಗೆ ಸೇರಿದರು. ಬಳಿಕ 2008ರಲ್ಲಿ ವಾಯುಪಡೆಗೆ ಸೇರ್ಪಡೆಯಾದರು. 2015ನಿಂದ ವಿಂಗ್ ಕಮಾಂಡರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು ಮತ್ತು ಎಮ್‍ಐ-17ವಿ5 ಹೆಲಿಕಾಪ್ಟರ್‍ನಲ್ಲಿ ಪೈಲೆಟ್ ಇನ್ ಕಮಾಂಡರ್ ಆಗಿದ್ದರು. ಇದನ್ನೂ ಓದಿ: ತೀರಾ ಕೆಳಮಟ್ಟದಲ್ಲೇ ಹಾರಾಡ್ತಿದ್ದ ಹೆಲಿಕಾಪ್ಟರ್ ಕೊನೆಯ ದೃಶ್ಯ ಲಭ್ಯ

    ದುಖಃದಲ್ಲಿ ಕುಟುಂಬ:
    ಸುರೇಂದ್ರ ಸಿಂಗ್ ಅವರು ತಮ್ಮ ಮಗ ಚೌಹಾಣ್ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿ, ನನಗೆ ಐದು ಜನ ಮಕ್ಕಳಲ್ಲಿ ಕಿರಿಯ ಮತ್ತು ಒಬ್ಬನೇ ಮಗ. ಎಲ್ಲರೊಂದಿಗೆ ನಗು ನಗುತ್ತಾ ಮಾತನಾಡುತ್ತಿದ್ದ ಆದರೆ ಈಗ ಆ ನಗು ನಮ್ಮಿಂದ ದೂರ ಸರಿದಿದೆ ಎಂದು ಕಣ್ಣೀರಾಕಿದರು. ಇದನ್ನೂ ಓದಿ: ಹೆಲಿಕಾಪ್ಟರ್ ದುರಂತಕ್ಕೆ ಬಲಿಯಾಗಿರುವ ಸಾಯಿ ತೇಜ್‍ಗೆ 27 ವರ್ಷ!

    ಮಂಗಳವಾರ ರಾತ್ರಿಯಷ್ಟೇ ಮಗನೊಂದಿಗೆ ಮಾತನಾಡಿದೆ. ಆದರೆ ಬುಧವಾರ ಮಧ್ಯಾಹ್ನ ಅವನ ಸಾವಿನ ಸುದ್ದಿ ತೀವ್ರ ನೋವು ನೀಡಿದೆ. ಮಗನ ಸಾವಿನ ಬಗ್ಗೆ ಇನ್ನೂ ವೈಯುಕ್ತವಾಗಿ ತಿಳಿಸಿಲ್ಲ. ಆದರೆ ಮುಂಬೈನಲ್ಲಿ ನನ್ನ ಹಿರಿಯ ಮಗಳು ಮಧ್ಯಾಹ್ನ ಟಿವಿಯಲ್ಲಿ ಹೆಲಿಕಾಪ್ಟರ್ ಅಪಘಾತದ ಸುದ್ದಿಯನ್ನು ನೋಡಿದ್ದಾಳೆ ಎಂದು ಗದ್ಗದಿತರಾದರು. ಇತ್ತ ಪೃಥ್ವಿ ತಾಯಿ ಸುಶೀಲಾದೇವಿ ಕೂಡ ಮಗನ ಅಗಲಿಕೆ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ಪೃಥ್ವಿ ತಂದೆ, ತಾಯಿ, ಪತ್ನಿ, ಮಕ್ಕಳು, ಕುಟುಂಬದವರನ್ನು ಅಗಲಿದ್ದಾರೆ. ಇದನ್ನೂ ಓದಿ: ಇಂದು ಸಂಜೆ ದೆಹಲಿಗೆ ರಾವತ್ ಪಾರ್ಥಿವ ಶರೀರ – ನಾಳೆ ಮಧ್ಯಾಹ್ನವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ

  • ಸೇನಾ ಮುಖ್ಯಸ್ಥರ ಕಾಲು ನಡುಗುತ್ತಿತ್ತು- ಅಭಿನಂದನ್ ಬಿಡುಗಡೆಯ ಕಾರಣ ಬಿಚ್ಚಿಟ್ಟ ಪಾಕ್ ಸಂಸದ

    ಸೇನಾ ಮುಖ್ಯಸ್ಥರ ಕಾಲು ನಡುಗುತ್ತಿತ್ತು- ಅಭಿನಂದನ್ ಬಿಡುಗಡೆಯ ಕಾರಣ ಬಿಚ್ಚಿಟ್ಟ ಪಾಕ್ ಸಂಸದ

    – ಕೂಡಲೇ ಬಿಡುಗಡೆ ಮಾಡಿ ಎಂದಿದ್ದ ಪಾಕ್ ವಿದೇಶಾಂಗ ಸಚಿವ

    ಇಸ್ಲಾಮಬಾದ್: ಭಾರತದ ಪಾಕಿಸ್ತಾನ ಮೇಲೆ ದಾಳಿ ಮಾಡುವ ಭಯದಿಂದ ಇಮ್ರಾನ್ ಖಾನ್ ನೇತೃತ್ವದ ಸರ್ಕಾರ ಭಾರತ ಪೈಲಟ್ ಅಭಿನಂದನ್ ವರ್ಧಮಾನ್ ಅವರನ್ನು ಬಿಡುಗಡೆ ಮಾಡಿತ್ತು ಎಂದು ಪಾಕ್ ಸಂಸದ ಅಯಾಜ್ ಸಾದಿಕ್ ಹೇಳಿದ್ದಾರೆ.

    ಬುಧವಾರ ಸಂಸತ್ತಿನಲ್ಲಿ ಮಾತನಾಡಿರುವ ಪಾಕಿಸ್ತಾನ ಮುಸ್ಲಿಂ ಲೀಗ್ ಎನ್ ಪಕ್ಷದ ಮುಖ್ಯಸ್ಥ, ಸಂಸದ ಅಯಾಜ್ ಸಾದಿಕ್, ಪಾಕಿಸ್ತಾನ ಅಭಿನಂದನ್ ಅವರನ್ನು ಬಿಡುಗಡೆ ಮಾಡದಿದ್ದರೆ ಆ ರಾತ್ರಿ 9 ಗಂಟೆ ವೇಳೆಗೆ ಭಾರತ ಪಾಕಿಸ್ತಾನ ಮೇಲೆ ದಾಳಿ ಮಾಡುತ್ತದೆ ಎಂದು ವಿದೇಶಾಂಗ ಸಚಿವ ಖುರೇಷಿ ಒಂದು ಪ್ರಮುಖ ಬೇಡಿಕೊಂಡಿದ್ದರು ಎಂದು ಸಂಸತ್ತಿನಲ್ಲಿ ಮಾತನಾಡಿರುವ ಬಗ್ಗೆ ಅಲ್ಲಿನ ಮಾಧ್ಯಮವೊಂದು ವರದಿ ಮಾಡಿದೆ.

    ಪ್ರಮುಖ ಸಭೆಯಲ್ಲಿದ್ದ ಸೇನಾ ಮುಖ್ಯಸ್ಥ ಜನಲರ್ ಬಾಜ್ವಾ, ವಿರೋಧಿ ಪಕ್ಷ ನಾಯಕರು, ಸಂಸತ್ ಸದಸ್ಯರು ಸೇರಿದಂತೆ ಎಲ್ಲರೂ ಅಭಿನಂದನ್ ಅವರನ್ನು ಬಿಡುಗಡೆ ಮಾಡಲು ಹೇಳಿದ್ದರು. ಸಭೆಯಲ್ಲಿ ಭಾಗಿಯಾಗಲು ಇಮ್ರಾನ್ ಖಾನ್ ನಿರಾಕರಿಸಿದ್ದರು. ಈ ವೇಳೆ ಸೇನಾ ಮುಖ್ಯಸ್ಥ ಜನಲರ್ ಬಾಜ್ವಾ ಕೋಣೆಗೆ ಬಂದರು. ಅವರ ಕಾಲುಗಳು ನಡುಗುತ್ತಿದ್ದವು, ಅವರು ಬೆವರುತ್ತಿದ್ದರು. ವಿದೇಶಾಂಗ ಸಚಿವರು ದೇವರ ಸಲುವಾಗಿ ಅವರನ್ನು ಬಿಡಲಿ, ಭಾರತ ರಾತ್ರಿ 9 ಗಂಟೆಗೆ ದಾಳಿ ಮಾಡಲಿದೆ ಎಂದಿದ್ದರು ಎಂದು ಸಾದಿಕ್ ಅಂದಿನ ಘಟನೆಯ ಬಗ್ಗೆ ಬಿಚ್ಚಿಟ್ಟಿದ್ದಾರೆ. ಅಲ್ಲದೇ ಮೊದಲು ಅಭಿನಂದನ್ ಸೇರಿದಂತೆ ಎಲ್ಲಾ ವಿಷಯಗಳಲ್ಲಿ ಸರ್ಕಾರದ ಬೆಂಬಲಕ್ಕೆ ನಿಲ್ಲುತ್ತೇವೆ ಎಂದಿದ್ದ ಪ್ರತಿಪಕ್ಷಗಳು ಮತ್ತೆ ಅವರ ಬೆಂಬಲಿಸಲು ಸಾಧ್ಯವಾಗುವುದಿಲ್ಲ ಎಂದಿದ್ದಾರೆ.

    2019ರ ಫೆಬ್ರವರಿಯಲ್ಲಿ ಭಾರತ ಮತ್ತು ಪಾಕ್ ವಾಯುಸೇನೆಯ ನಡುವಿನ ನಡೆದ ಹೋರಾಟದ ಸಂದರ್ಭದಲ್ಲಿ ಭಾರತದ ವಾಯುಪ್ರದೇಶವನ್ನು ಅತಿಕ್ರಮಣ ಮಾಡಿದ್ದ ಪಾಕಿಸ್ತಾನದ ಎಫ್-19 ಯುದ್ಧ ವಿಮಾನವನ್ನು ಹೊಡೆದುರುಳಿಸಲಾಗಿತ್ತು. ಈ ವೇಳೆ ವಿಂಗ್ ಕಂಮಾಡರ್ ಆಗಿದ್ದ ವರ್ಧಮಾನ್ ಅವರು ಪಾಕ್ ನೆಲದಲ್ಲಿ ಇಳಿದಿದ್ದರು. ಮಾರ್ಚ್ 1 ರಂದು ಅಭಿನಂದನ್ ಅವರನ್ನು ಪಾಕ್ ಸರ್ಕಾರ ಭಾರತಕ್ಕೆ ಮರಳಿ ಕಳುಹಿಸಿತ್ತು.