Tag: ವಿಂಗ್ ಕಮಾಂಡರ್

  • ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್‍ಗೆ ವೀರ ಚಕ್ರ?

    ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್‍ಗೆ ವೀರ ಚಕ್ರ?

    ನವದೆಹಲಿ: ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಅವರಿಗೆ ವೀರ ಚಕ್ರ ಗೌರವವನ್ನು ಭಾರತ ಸರ್ಕಾರ ನೀಡುವ ಸಾಧ್ಯತೆಯಿದೆ.

    ಅಭಿನಂದನ್ ಅಲ್ಲದೇ ಬಾಲಕೋಟ್ ದಾಳಿಯಲ್ಲಿ ಕಾರ್ಯನಿರ್ವಹಿಸಿದ್ದ ಮಿಗ್ ಪೈಲಟ್ ಗಳಿಗೂ ವೀರ ಚಕ್ರ ನೀಡಿ ಗೌರವಿಸಲಾಗುತ್ತದೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಆಗಸ್ಟ್ 15 ಸ್ವತಂತ್ರ್ಯ ದಿನಾಚರಣೆಯಂದು ಮಹತ್ವದ ಘೋಷಣೆ ಮಾಡಲಾಗುವ ಸಾಧ್ಯತೆಯಿದೆ.

    ಯುದ್ಧದ ಸಮಯದಲ್ಲಿ ನೀಡುವ ಸೇನೆಯ 3ನೇ ಅತ್ಯುನ್ನತ ಪ್ರಶಸ್ತಿ ಇದಾಗಿದ್ದು, ಯುದ್ಧಕಾಲದಲ್ಲಿ ತೋರುವ ಅಪ್ರತಿಮ ಸಾಹಸಕ್ಕೆ ಯೋಧರಿಗೆ ಪರಮವೀರ ಚಕ್ರ, ಮಾಹಾವೀರ ಚಕ್ರ, ವೀರ ಚಕ್ರ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗುತ್ತದೆ. ಬಾಲಕೋಟ್ ದಾಳಿಯಲ್ಲಿ ಕಾರ್ಯನಿರ್ವಹಿಸಿದ್ದ ಮಿಗ್ ಪೈಲಟ್ ಗಳಿಗೂ ಕೂಡ `ವಾಯು ಸೇನಾ ಪದಕ’ ನೀಡಲು ಸೇನೆ ನಿರ್ಧರಿಸಿದೆ ಎಂದು ಹೇಳಲಾಗುತ್ತಿದೆ.

    ಪಾಕಿಸ್ತಾನದ ಎಫ್ 16 ಯುದ್ಧ ವಿಮಾನಗಳು ಭಾರತ ಗಡಿ ಪ್ರವೇಶ ಮಾಡಿ ದಾಳಿ ನಡೆಸಲು ಮುಂದಾಗಿತ್ತು. ಈ ವೇಳೆ ಅಭಿನಂದನ್ ವರ್ಧಮಾನ್ ಅವರು ಪಾಕಿಸ್ತಾನದ ಯುದ್ಧ ವಿಮಾನಗಳನ್ನು ಹಿಮ್ಮೆಟ್ಟಿಸಿದ್ದರು. ಇದಕ್ಕೂ ಮುನ್ನ ಭಾರತ ಸೇನೆ ಪುಲ್ವಾಮ ಸೈನಿಕರ ಮೇಲೆ ನಡೆದ ದಾಳಿಯ ಸೇಡನ್ನು ತೀರಿಸಿಕೊಳ್ಳಲು ಪಾಕಿಸ್ತಾನದ ಬಾಲಕೋಟ್ ಮೇಲೆ ದಾಳಿ ನಡೆಸಿ ಉಗ್ರರ ನೆಲೆಳನ್ನು ಧ್ವಂಸ ಮಾಡಿತ್ತು.

  • 8,500 ಅಡಿ ಎತ್ತರದಿಂದ ವಿಂಗ್‍ಸೂಟ್‍ನಲ್ಲಿ ಸ್ಕೈಡೈವಿಂಗ್ – ಭಾರತದ ಮೊದಲ ಐಎಎಫ್ ಪೈಲೆಟ್ ಎಂಬ ಹೆಗ್ಗಳಿಕೆ

    8,500 ಅಡಿ ಎತ್ತರದಿಂದ ವಿಂಗ್‍ಸೂಟ್‍ನಲ್ಲಿ ಸ್ಕೈಡೈವಿಂಗ್ – ಭಾರತದ ಮೊದಲ ಐಎಎಫ್ ಪೈಲೆಟ್ ಎಂಬ ಹೆಗ್ಗಳಿಕೆ

    ನವದೆಹಲಿ: ವಿಂಗ್ ಕಮಾಂಡರ್ ತರುಣ್ ಚೌಧರಿ ಅವರು 8,500 ಅಡಿ ಎತ್ತರದಿಂದ ವಿಂಗ್‍ಸೂಟ್‍ನಲ್ಲಿ ಸ್ಕೈಡೈವಿಂಗ್ ಮಾಡುವ ಮೂಲಕ ಭಾರತದ ಮೊದಲ ವಾಯು ಸೇನಾ ಪೈಲೆಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

    ಜುಲೈ 22ರಿಂದ ಶುರುವಾಗಿದ್ದ ಜೋಧ್‍ಪುರ್ ನಲ್ಲಿ ನಡೆದ ಕಾರ್ಗಿಲ್ ದಿನಾಚರಣೆಯ ಸಂದರ್ಭದಲ್ಲಿ ವಿಂಗ್ ಕಮಾಂಡರ್ ತರುಣ್ ಚೌಧರಿ ಅವರು ವಿಂಗ್‍ಸೂಟ್‍ನಲ್ಲಿ ಮಿಗ್-17 ಹೆಲಿಕಾಪ್ಟರ್ ದಿಂದ 8,500 ಅಡಿ ಎತ್ತರದಿಂದ ಸ್ಕೈಡೈವಿಂಗ್ ಮಾಡಿದ್ದಾರೆ.

    ಈ ಬಗ್ಗೆ ಐಎಎಫ್ ವಿಡಿಯೋವೊಂದನ್ನು ಟ್ವಿಟ್ಟರಿನಲ್ಲಿ ಹಾಕಿ ಅದಕ್ಕೆ, “ವಿಂಗ್ ಕಮಾಂಡರ್ ತರುಣ್ ಚೌಧರಿ ಅವರು ಜುಲೈ 21, 2019ರಂದು ವಿಂಗ್‍ಸೂಟ್ ಧರಿಸಿ ಮಿಗ್-17 ಹೆಲಿಕಾಪ್ಟರ್ ನಿಂದ ಸ್ಕೈಡೈವಿಂಗ್ ಪೂರ್ಣ ಮಾಡುವ ಮೂಲಕ ಮೈಲಿಗಲ್ಲು ಸಾಧಿಸಿದ್ದಾರೆ. ವಿಂಗ್‍ಸೂಟ್ ಧರಿಸಿ ಸ್ಕೈಡೈವಿಂಗ್ ಮಾಡಿದ ಮೊದಲ ಐಎಎಫ್ ಪೈಲೆಟ್ ಹೆಗ್ಗಳಿಕೆಗೆ ಇವರು ಪಾತ್ರರಾಗಿದ್ದಾರೆ” ಎಂದು ಟ್ವೀಟ್ ಮಾಡಿದೆ.

    ಮತ್ತೊಂದು ಟ್ವೀಟ್‍ನಲ್ಲಿ, ತರುಣ್ ಚೌಧರಿ ಅವರು ಮಿಗ್-17 ಹೆಲಿಕಾಪ್ಟರ್‍ನಿಂದ 8500 ಅಡಿ ಎತ್ತರದಿಂದ ಜಿಗಿದಿದ್ದಾರೆ. ಸಂಘಟಿತ ಕೂಟದಲ್ಲಿ ಇದೇ ಮೊದಲ ಫ್ಲೈಯಿಂಗ್ ವಿಂಗ್ ಸೂಟ್‍ನಲ್ಲಿ ಸ್ಕೈಡೈವಿಂಗ್ ಪ್ರದರ್ಶನ ಮಾಡಲಾಗಿದೆ. ಜೋಧಪುರ್‍ನ ಏರ್ ಫೋರ್ಸ್ ಸ್ಟೇಷನ್‍ನಲ್ಲಿ ಜುಲೈ 22ರಿಂದ 28 ರವರೆಗೆ 20ನೇ ಕಾರ್ಗಿಲ್ ವಿಜಯ ದಿನಾಚರಣೆಯನ್ನು ಆಚರಿಸಲಾದ ಸಂದರ್ಭದಲ್ಲಿ ಈ ಜಂಪ್ ಮಾಡಲಾಗಿದೆ” ಎಂದು ಬರೆದುಕೊಂಡಿದೆ.

  • ಬೆಂಗ್ಳೂರಿಗೆ ವಿಂಗ್ ಕಮಾಂಡರ್ ಅಭಿನಂದನ್ ಎಂಟ್ರಿ!

    ಬೆಂಗ್ಳೂರಿಗೆ ವಿಂಗ್ ಕಮಾಂಡರ್ ಅಭಿನಂದನ್ ಎಂಟ್ರಿ!

    ಬೆಂಗಳೂರು: ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಸದ್ಯದಲ್ಲಿಯೇ ಬೆಂಗಳೂರಿಗೆ ಎಂಟ್ರಿ ಕೊಡಲಿದ್ದಾರೆ. ಅಲ್ಲದೆ ಫೈಟರ್ ಜೆಟ್ ಕೂಡ ಏರಲಿದ್ದಾರೆ.

    ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಪಾಕ್‍ನ ಎಫ್16 ಹೊಡೆದುರುಳಿಸಿದ ಭಾರತ ಮಾತೆಯ ಹೆಮ್ಮೆಯ ಪುತ್ರ. ಆದರೆ ಈ ವೇಳೆ ಗಾಯಗೊಂಡಿದ್ದ ಅಭಿನಂದನ್, ಫೈಟರ್ ಜೆಟ್ ಏರುವುದು ಅನುಮಾನ ಎನ್ನಲಾಗಿತ್ತು. ಅಲ್ಲದೆ ಮಾರ್ಚ್ ನಲ್ಲಿ ಅವರನ್ನು ರಜೆ ಮೇಲೆ ಕಳುಹಿಸಲಾಗಿತ್ತು. ಬಳಿಕ ಬೆಂಗಳೂರಿನಲ್ಲಿ ದೈಹಿಕ ಪರೀಕ್ಷೆ ನಡೆಸಿದ್ದ ವೈದ್ಯರು, ಅಭಿನಂದನ್ ಫಿಟ್ ಆಗಿದ್ದಾರೆ ಎಂದು ಸರ್ಟಿಫಿಕೇಟ್ ಕೊಟ್ಟಿದ್ದಾರೆ. ಇದನ್ನೂ ಓದಿ: ವಿಂಗ್‍ಕಮಾಂಡರ್ ಅಭಿನಂದನ್ ಹೆಸರು ‘ವೀರ ಚಕ್ರ’ ಪ್ರಶಸ್ತಿಗೆ ಶಿಫಾರಸ್ಸು

    ಈಗ ಪುನಃ ಈ ತಿಂಗಳಾಂತ್ಯದಲ್ಲಿ ಬೆಂಗಳೂರಿನ ಹೆಚ್‍ಎಎಲ್‍ನಲ್ಲಿರುವ ಇನ್‍ಸ್ಟಿಟ್ಯೂಟ್ ಆಫ್ ಏರೋಸ್ಪೇಸ್‍ಗೆ ಅಭಿನಂದನ್ ಆಗಮಿಸಲಿದ್ದಾರೆ. ಸಾಮಾನ್ಯವಾಗಿ ಫೈಟರ್ ಜೆಟ್‍ನಿಂದ ಎಜೆಕ್ಟ್ ಆದವರನ್ನು 12 ವಾರಗಳ ಕಾಲ ತಪಾಸಣೆ ನಡೆಸಿ, ನಂತರವೇ ಅಧಿಕಾರಿಗಳು ಅಂತಿಮ ನಿರ್ಧಾರ ಕೈಗೊಳ್ತಾರೆ. ಈಗಾಗಲೇ ಅಭಿನಂದನ್ ಆರೋಗ್ಯ ಫೈಟರ್ ಜೆಟ್ ಏರಲು ಫಿಟ್ ಆಗಿದೆ ಎಂದು ವೈದ್ಯರು ಹೇಳಿದ್ದು, ಬೆಂಗಳೂರಿಗೆ ಬಂದು ಪ್ರಮಾಣ ಪತ್ರ ಪಡೆಯಲಿದ್ದಾರೆ.

    ಮೇ ತಿಂಗಳ ಅಂತ್ಯದಲ್ಲಿ ಅಭಿನಂದರ್ ಫೈಟರ್ ಜೆಟ್ ಏರಲಿದ್ದು, ಮತ್ತೆ ಭಾರತ ಮಾತೆಯ ಸೇವೆಗೆ ಮರಳಲಿದ್ದಾರೆ. ಭದ್ರತೆ ದೃಷ್ಟಿಯಿಂದ ಅಭಿನಂದನ್‍ರನ್ನು ಬೇರೆ ಕಡೆ ಸೇವೆಗೆ ನಿಯೋಜಿಸಲು ವಾಯುಸೇನೆ ಪ್ಲಾನ್ ಮಾಡಿದೆ. ಅಲ್ಲದೆ ಶೌರ್ಯ ಪ್ರಶಸ್ತಿ ನೀಡುವಂತೆಯೂ ಅಧಿಕಾರಿಗಳು ಸರ್ಕಾರಕ್ಕೆ ಶಿಫಾರಸ್ಸು ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

    https://www.youtube.com/watch?v=ArvRnqPs81s

  • ಹೆವೀ ಸೌಂಡ್, ಕಣ್ಣಿಗೆ ಹೈ ಬೀಮ್ ಲೈಟ್ – ಪಾಕ್‍ನಲ್ಲಿ ಅಭಿಗೆ ಮಲಗಲು ಬಿಡದೆ ಟಾರ್ಚರ್

    ಹೆವೀ ಸೌಂಡ್, ಕಣ್ಣಿಗೆ ಹೈ ಬೀಮ್ ಲೈಟ್ – ಪಾಕ್‍ನಲ್ಲಿ ಅಭಿಗೆ ಮಲಗಲು ಬಿಡದೆ ಟಾರ್ಚರ್

    ನವದೆಹಲಿ: ಪಾಪಿ ಪಾಕಿಸ್ತಾನದ ಸೈನಿಕರ ವಶದಲ್ಲಿದ್ದರೂ ತಾಯ್ನಾಡಿನ ಬಗೆಗಿನ ರಹಸ್ಯವನ್ನು ಯೋಧ ಅಭಿನಂದನ್ ಬಾಯಿ ಬಿಡಲಿಲ್ಲ. ಆದ್ರೆ ಅಭಿನಂದನ್‍ಗೆ ಭಾರತದ ರಹಸ್ಯ ಬಾಯ್ಬಿಡುವಂತೆ ನಾನಾ ಹಿಂಸೆ ನೀಡಲಾಗಿತ್ತು.

    ಹೌದು. ಪಾಪಿ ಪಾಕಿಸ್ತಾನದವರಿಗೆ ಮಾನವೀಯತೆ ಸತ್ತು ಹೋಗಿದೆ. ಯಾಕಂದ್ರೆ ಪಾಕ್ ಯುದ್ಧ ವಿಮಾನವನ್ನು ಉಡಾಯಿಸಿದ ಬಳಿಕ ಸೆರೆ ಸಿಕ್ಕ ಅಭಿನಂದನ್‍ಗೆ ಪಾಕ್ ಕೊಟ್ಟ ಕಾಟ ಅಷ್ಟಿಷ್ಟಲ್ಲ. ಪಾಕ್ ಸೈನ್ಯ ಅಭಿನಂದನ್‍ನ್ನು ಸೆರೆಹಿಡಿದ ಮೊದಲ 24 ಗಂಟೆ ನಿದ್ರೆಯೇ ಮಾಡೋಕೆ ಬಿಟ್ಟಿಲ್ಲ. ಪದೇ ಪದೇ ಭಾರತದ ಬಗ್ಗೆ ಪ್ರಶ್ನೆಗಳನ್ನು ಕೇಳಿ ಕೇಳಿ ಟಾರ್ಚರ್ ಕೊಟ್ಟಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.

    ಇಷ್ಟು ಮಾತ್ರವಲ್ಲದೇ ಕಿವಿ ತಮಟೆ ಒಡೆದುಹೋಗುವಂತೆ ಜೋರಾಗಿ ಸೌಂಡ್ ಹಾಕಿ, ಕಣ್ಣೇ ಬಿಡದ ಹಾಗೇ ತುಂಬಾ ಪ್ರಕಾಶಮಾನವಾದ ಲೈಟನ್ನು ಆನ್ ಮಾಡಿದ್ದಾರೆ. ಒಬ್ಬರಿಂದ ಒಬ್ಬರು ಬಂದು ಪ್ರಶ್ನೆ ಮೇಲೆ ಪ್ರಶ್ನೆ ಕೇಳ್ತಿದ್ದರು. ಇನ್ನು, ಅಭಿನಂದನ್ ಅವರ ಬೆನ್ನಿಗೆ ಸ್ವಲ್ಪಮಟ್ಟಿನ ಗಾಯವಾಗಿದ್ದು ದೆಹಲಿಯ ಆರ್ ಆಂಡ್ ಆರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.  ಇದನ್ನೂ ಓದಿ: ಅಭಿನಂದನ್‍ಗೆ ಪಾಕ್ ಸೇನಾಧಿಕಾರಿಗಳು ಮಾನಸಿಕ ಕಿರುಕುಳ!

    ಇದೆಲ್ಲದರ ನಡುವೆ ಅಜರ್‍ನ ವಿಚಾರದಲ್ಲಿ ಪಾಕ್ ಮತ್ತೆ ಕುತಂತ್ರಿ ಬುದ್ಧಿ ತೋರ್ತಿದೆ. ಅಜರ್ ಬದುಕಿದ್ದಾನೆ. ಅಲ್ಲದೆ ಆತನಿಗೆ ಸೇನೆಯ ಆಸ್ಪತ್ರೆಯಲ್ಲೇ ಚಿಕಿತ್ಸೆ ಮುಂದುವರಿದಿದೆ ಎಂದು ಪಾಕ್ ಸಚಿವ ಫಯ್ಯಾಜ್ ಉಲ್ ಹಸನ್ ಹೇಳಿದ್ದಾರೆ. ಇದನ್ನೂ ಓದಿ: ಪಾಕ್ ಸೇನೆಯಿಂದ ಮಾನಸಿಕ ಕಿರುಕುಳ – ಅಭಿನಂದನ್ ಮುಂದೇನು..?

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಬೆಂಗ್ಳೂರಲ್ಲಿ ಟ್ರೆಂಡಿಂಗ್ ಆಯ್ತು ಅಭಿನಂದನ್ ಮೀಸೆ, ಹೇರ್ ಸ್ಟೈಲ್..!

    ಬೆಂಗ್ಳೂರಲ್ಲಿ ಟ್ರೆಂಡಿಂಗ್ ಆಯ್ತು ಅಭಿನಂದನ್ ಮೀಸೆ, ಹೇರ್ ಸ್ಟೈಲ್..!

    – ಕೊರಮಂಗಲ ಸೆಲೂನ್ ನಿಂದ ಸಖತ್ ಆಫರ್

    ಬೆಂಗಳೂರು: ಪಾಕ್ ಕಪಿಮುಷ್ಠಿಯಿಂದ ಬಿಡುಗಡೆಗೊಂಡು ತಾಯ್ನಾಡು ಭಾರತಕ್ಕೆ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಅವರು ವಾಪಸ್ ಆಗಿದ್ದಾರೆ. ಈ ಮಧ್ಯೆ ವೀರಪುತ್ರನ ಮೀಸೆ ಹಾಗೂ ಹೇರ್ ಕಟ್ ಸಖತ್ ಟ್ರೆಂಡಿಂಗ್ ಆಗಿದೆ. ಬೆಂಗಳೂರಿನಲ್ಲಿ ಕೂಡ ಅಭಿ ಮೀಸೆ ಸ್ಟೈಲ್ ಸಖತ್ ಹವಾ ಸೃಷ್ಟಿ ಮಾಡಿದೆ.

    ಯುವ ಸಮೂಹ ಅಭಿನಂದನ್ ಸ್ಟೈಲ್ ಗೆ ಸಖತ್ ಫಿದಾ ಆಗಿದೆ. ನಗರದ ಬಹುತೇಕ ಸೆಲೂನ್ ನಲ್ಲಿ ಈ ಸ್ಟೈಲ್ ಗೆ ಭಾರೀ ಬೇಡಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೋರಮಂಗಲ ನಾನೇಶ್ ಹೇರ್ ಸಲೂನ್ ನಿಂದ್ ಸಖತ್ ಆಫರ್ ನೀಡಲಾಗಿದೆ.

    ಅಭಿನಂದನ್ ರೀತಿ ಸ್ಟೈಲ್ ಮಾಡುವವರಿಗೆ ಉಚಿತವಾಗಿ ಹೇರ್ ಸ್ಟೈಲ್ ಮಾಡಲಾಗುತ್ತಿದೆ. ಹೀಗಾಗಿ ಅಭಿನಂದನ್ ಅಭಿಮಾನಿಗಳು ಸಾಕಷ್ಟು ಸಂಖ್ಯೆಯಲ್ಲಿ ಅಭಿನಂದನ್ ಅಭಿಮಾನಿಗಳು ಆಗಮಿಸುತ್ತಿದ್ದಾರೆ. ಹೀಗಾಗಿ ಸೆಲೂನ್ ಮಾಲೀಕರು ಕೂಡ ವೀರ ಯೋಧನಿಗೆ ಗೌರವ ಸಲ್ಲಿಸಲು ಉಚಿತವಾಗಿ ಹೇರ್ ಆಂಡ್ ಮೀಸೆ ಸ್ಟೈಲ್ ಮಾಡುತ್ತಿದ್ದಾರೆ.

    ಮಾರ್ಚ್ 1ರ ಶುಕ್ರವಾರದಂದು ವೈರಿ ರಾಷ್ಟ್ರದಿಂದ ಬರುವ ವೇಳೆ ಮುಖದಲ್ಲಿ ಅದೇ ಮಂದಹಾಸ, ಅದೇ ಹುರಿ ಮೀಸೆ, ಅದೇ ಮಾನಸಿಕ ದೃಢತೆಯೊಂದಿಗೆ ಅಭಿನಂದನ್ ತಾಯ್ನಾಡಿಗೆ ಕಾಲಿಟ್ಟಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮಗನಿಗೆ ಅಭಿನಂದನ್ ಎಂದು ನಾಮಕರಣ ಮಾಡಿದ ಕೊಪ್ಪಳದ ದಂಪತಿ

    ಮಗನಿಗೆ ಅಭಿನಂದನ್ ಎಂದು ನಾಮಕರಣ ಮಾಡಿದ ಕೊಪ್ಪಳದ ದಂಪತಿ

    ಕೊಪ್ಪಳ: ಪೈಲಟ್, ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಅವರು ಪಾಕ್ ಕಪಿಮುಷ್ಠಿಯಿಂದ ಬಿಡುಗಡೆಯಾಗಿ ತಾಯ್ನಾಡಿಗೆ ಮರಳುತ್ತಿದ್ದಂತೆಯೇ ಇದೀಗ ವೀರಪುತ್ರನ ಹೆಸರನ್ನು ಹುಟ್ಟಿದ ಮಕ್ಕಳಿಗೆ ಇಡಲಾಗುತ್ತಿದೆ. ಇದಕ್ಕೆ ಪೂರಕವೆಂಬಂತೆ ಕೊಪ್ಪಳದ ಮಗುವಿಗೆ ಕೂಡ ಅಭಿನಂದನ್ ಹೆಸರನ್ನು ನಾಮಕರಣ ಮಾಡಲಾಗಿದೆ.

    ಹೌದು. ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದಲ್ಲಿ ದಂಪತಿ ವಿಂಗ್ ಕಮಾಂಡರ್ ಅಭಿನಂದನ್ ಗೌರವಾರ್ಥ ನಾಮಕರಣ ಮಾಡಿದ್ದಾರೆ. ಮಹಾಂತೇಶ್ ಶೆಟ್ಟರ್ ಹಾಗೂ ಶಾಂತಾ ಶೆಟ್ಟರ್ ದಂಪತಿ ತಮ್ಮ ಪುತ್ರನಿಗೆ ಅಭಿನಂದನ್ ಎಂದು ಹೆಸರಿಟ್ಟಿದ್ದಾರೆ. ಇದನ್ನೂ ಓದಿ: ತಮ್ಮ ಮಗುವಿಗೆ ಅಭಿನಂದನ್ ಎಂದು ಹೆಸರಿಟ್ಟ ದಂಪತಿ

    ದಂಪತಿ ಈ ಮುಂಚೆ ತಮ್ಮ ಪುತ್ರನಿಗೆ ಅಥರ್ವ ಅಥವಾ ಅಭಿನವ ಎಂದು ನಾಮಕರಣ ಮಾಡುವುದಾಗಿ ನಿರ್ಧರಿಸಿದ್ದರು. ಆದ್ರೆ ಇತ್ತೀಚೆಗೆ ಅಭಿನಂದನ್ ಮಾಡಿದ ಸಾಹಸಕ್ಕೆ ಇಡೀ ದೇಶವೇ ಮೆಚ್ಚುಗೆ ವ್ಯಕ್ತಪಡಿಸಿದೆ. ಈ ಹಿನ್ನಲೆಯಲ್ಲಿ ಮೂರು ತಿಂಗಳ ಗಂಡುಮಗುವಿಗೆ ಅಭಿನಂದನ್ ಎಂದು ನಾಮಕರಣ ಮಾಡಿರುವುದಾಗಿ ಅವರು ತಿಳಿಸಿದ್ದಾರೆ. ಇದನ್ನೂ ಓದಿ:  ಪಾಕ್ ಮೇಲೆ ಏರ್‌ಸ್ಟ್ರೈಕ್- ಮಗುವಿಗೆ `ಮಿರಾಜ್ ಸಿಂಗ್’ ಹೆಸರಿಟ್ಟ ರಾಜಸ್ಥಾನ ದಂಪತಿ..!

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಅಭಿನಂದನ್ ಪಕ್ಕೆಲುಬು ಮುರಿತ – ಮತ್ತೆ ಆಕಾಶದಲ್ಲಿ ಘರ್ಜಿಸುತ್ತಾರ ವಿಂಗ್ ಕಮಾಂಡರ್?

    ಅಭಿನಂದನ್ ಪಕ್ಕೆಲುಬು ಮುರಿತ – ಮತ್ತೆ ಆಕಾಶದಲ್ಲಿ ಘರ್ಜಿಸುತ್ತಾರ ವಿಂಗ್ ಕಮಾಂಡರ್?

    ಪವಿತ್ರ ಕಡ್ತಲ
    ಬೆಂಗಳೂರಿಗೆ: ಪಾಕಿಸ್ತಾನದ ಅತ್ಯಾಧುನಿಕ ಯುದ್ಧ ವಿಮಾನ ಹೊಡೆದುರುಳಿಸಿದ್ದ ವಿಂಗ್ ಕಮಾಂಡರ್ ಅಭಿನಂದನ್ ಅವರು ಭಾರತಕ್ಕೆ ಹಸ್ತಾಂತರವಾದ ಬಳಿಕ ದೆಹಲಿಯ ಅರ್ಮಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ವೈದ್ಯಕೀಯ ಪರೀಕ್ಷೆ ವೇಳೆ ಪ್ಯಾರಾಚೂಟ್‍ನಿಂದ ಬಿದ್ದ ಪರಿಣಾಮ ಅವರ ಪಕ್ಕೆಲುಬು ಮುರಿದಿದೆ ಎಂಬ ಮಾಹಿತಿ ಲಭಿಸಿದೆ.

    ಭಾರತಕ್ಕೆ ಮರಳಿದ ಬಳಿಕ ಅಭಿನಂದನ್ ಅವರಿಗೆ ಹೆಚ್ಚಿನ ವೈದ್ಯಕೀಯ ಪರೀಕ್ಷೆ ನಡೆಸಲಾಗಿತ್ತು, ಈ ವೇಳೆ ಅವರ ಬೆನ್ನುಹುರಿ ಹಾಗೂ ಮೆದುಳಿಗೆ ಯಾವುದೇ ಸಮಸ್ಯೆ ಆಗಿಲ್ಲ ಎಂದು ವೈದ್ಯಕೀಯ ಪರೀಕ್ಷೆಯಲ್ಲಿ ತಿಳಿದು ಬಂದಿದೆ. ಪರಿಣಾಮ ಮತ್ತೆ ಅಭಿನಂದನ್ ಯುದ್ಧ ವಿಮಾನ ಹಾರಾಟ ನಡೆಸುವುದು ಖಚಿತವಾಗಿದೆ. ಒಂದೊಮ್ಮೆ ಅವರ ಬೆನ್ನುಹುರಿ, ಮೆದುಳಿಗೆ ಪೆಟ್ಟಾಗಿದ್ದರೆ, ಮತ್ತೆ ಯುದ್ಧ ವಿಮಾನದಲ್ಲಿ ಹಾರಾಟ ನಡೆಸುವುದು ಕಷ್ಟಸಾಧ್ಯವಾಗುತ್ತಿತ್ತು.

    ವಿಂಗ್ ಕಮಾಂಡರ್ ಅಭಿನಂದನ್‍ರ ಪಕ್ಕೆಲುಬು ಮುರಿತವಾಗಿರುವ ಕಾರಣ ಅವರಿಗೆ ಹೆಚ್ಚಿನ ಚಿಕಿತ್ಸೆ ಹಾಗೂ ವಿಶ್ರಾಂತಿಯ ಅಗತ್ಯವಿದೆ. ಆ ಬಳಿಕ ಅವರು ದೈಹಿಕವಾಗಿ ಫಿಟ್ ಆದ ಆಗಿ ಕರ್ತವ್ಯಕ್ಕೆ ಹಾಜರಾಗಬಹುದಾಗಿದೆ. ದೆಹಲಿಯ ಆರ್ಮಿ ಆಸ್ಪತ್ರೆಯಿಂದ ಮಂಗಳವಾರ ಅಭಿನಂದನ್ ಅವರು ಬಿಡುಗಡೆ ಆಗಲಿದ್ದಾರೆ ಎಂಬ ಮಾಹಿತಿ ಲಭಿಸಿದೆ.

    ಆಸ್ಪತ್ರೆಯಿಂದ ಬಂದ ಬಳಿಕ ಅಭಿನಂದನ್ ಅವರಿಗೆ ಸೇನಾ ಮುಖ್ಯ ಅಧಿಕಾರಿಗಳು ಡಿ ಬ್ರೀಫಿಂಗ್ ನಡೆಸುತ್ತಾರೆ. ಪಾಕ್ ವಿಮಾನವನದ ಮೇಲೆ ದಾಳಿ ನಡೆಸಿದ ಸಂದರ್ಭದಿಂದ ಬಿಡುಗಡೆಯಾಗವ ತನಕ ಸಂಭವಿಸಿದ ಘಟನೆಗಳ ಬಗ್ಗೆ ವಾಯುಪಡೆಯ ಅಧಿಕಾರಿಗಳು ಮಾಹಿತಿ ಪಡೆಯುತ್ತಾರೆ. ಅಭಿನಂದನ್ ಅವರು ಚೇತರಿಕೆಯಾದ ಬಳಿಕ ಕರ್ತವ್ಯಕ್ಕೆ ಹಾಜರಾಗಲು ಫಿಟ್ನೆಸ್ ಪ್ರಮಾಣ ಪತ್ರವನ್ನು ಸಲ್ಲಿಸಬೇಕಾಗುತ್ತದೆ.

    ಅಭಿನಂದನ್ ತಮ್ಮ ಫ್ಲೈಯಿಂಗ್ ಫಿಟ್ನೆಸ್ ಪ್ರಮಾಣ ಪತ್ರ ಪಡೆಯಲು ಬೆಂಗಳೂರಿಗೆ ಆಗಮಿಸಬೇಕಾಗಿದ್ದು, ಕೆಲವೇ ದಿನದಲ್ಲಿ ಬೆಂಗಳೂರಿಗೆ ಬಂದು ಹೆಚ್‍ಎಎಲ್ ನಲ್ಲಿರುವ ಇನ್ಸಿಟ್ಯೂಟ್ ಆಫ್ ಏರೋಸ್ಪೇಸ್ ನಲ್ಲಿ ಅಭಿನಂದನ್ ಫ್ಲೈಯಿಂಗ್ ಫಿಟ್ನೆಸ್ ಪ್ರಮಾಣ ಪತ್ರ ಪಡೆಯುವ ಸಾಧ್ಯತೆ ಇದೆ ಎಂಬ ಮಾಹಿತಿ ಲಭಿಸಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಆರೋಗ್ಯವಾಗಿದ್ದೇನೆ, ಮತ್ತೆ ಕರ್ತವ್ಯಕ್ಕೆ ಹಾಜರಾಗ್ತೇನೆ- ಅಭಿನಂದನ್

    ಆರೋಗ್ಯವಾಗಿದ್ದೇನೆ, ಮತ್ತೆ ಕರ್ತವ್ಯಕ್ಕೆ ಹಾಜರಾಗ್ತೇನೆ- ಅಭಿನಂದನ್

    ನವದೆಹಲಿ: ಪಾಕಿಸ್ತಾನ ಕಪಿಮುಷ್ಟಿಯಿಂದ ಬಿಡುಗಡೆಗೊಂಡಿರುವ ಭಾರತದ ಹಮ್ಮೆಯ ವೀರಪುತ್ರ, ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಅವರು ಆರೋಗ್ಯವಾಗಿದ್ದಾರೆ.

    ಶುಕ್ರವಾರ ರಾತ್ರಿ ಪಾಕ್ ಸೈನಿಕರು ಭಾರತಕ್ಕೆ ಹಸ್ತಾಂತರಿಸಿದ ಬಳಿಕ ಅಭಿನಂದನ್ ಅವರು ತಮ್ಮ ಪೋಷಕರನ್ನು ಭೇಟಿಯಾಗಿದ್ದಾರೆ. ಈ ವೇಳೆ ನಾನು ಆರಾಮವಾಗಿದ್ದೇನೆ. ನನ್ನ ಆರೋಗ್ಯ ಚೆನ್ನಾಗಿದೆ ಎಂದು ಅವರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಅಲ್ಲದೆ ಇದೇ ವೇಳೆ ಮತ್ತೆ ನಾನು ವಾಯುಸೇನೆಯ ಕರ್ತವ್ಯಕ್ಕೆ ಹಾಜರಾಗುತ್ತೇನೆ ಎಂಬ ಭರವಸೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

    ಅಮೃತಸರದಿಂದ ಇಂದು ಬೆಳಗ್ಗೆ ದೆಹಲಿಗೆ ಅಭಿನಂದನ್ ಆಗಮಿಸಿದರು. ಅವರನ್ನು ಮೊದಲು ವಾಯುಸೇನೆ ಕಚೇರಿಗೆ ಕರೆತರಲಾಯಿತು. ಬಳಿಕ ಬೇರೆ ಬೇರೆ ಹಂತಗಳಲ್ಲಿ ಅವರಿಗೆ ವೈದ್ಯಕೀಯ ತಪಾಸಣೆ ನಡೆಸಲಾಯಿತು. ಸದ್ಯ ವೈದ್ಯಕೀಯ ವರದಿಗಾಗಿ ಕಾಯುತ್ತಿದ್ದಾರೆ. ಆ ವರದಿ ಬಂದ ಬಳಿಕ ಅವರು ದೈಹಿಕವಾಗಿ ಫಿಟ್ ಆಗಿದ್ದಾರೆ ಎಂಬುದನ್ನು ಅರಿತುಕೊಂಡು ವಾಯುಸೇನೆಯ ಮುಖ್ಯ ಅಧಿಕಾರಿಗಳು ಅವರ ವಿಚಾರಣೆ ನಡೆಸುತ್ತಾರೆ. ಪಾಕಿಸ್ತಾನದಲ್ಲಿ ನಡೆದ ಘಟನೆಗಳ ಬಗ್ಗೆ ಮಾಹಿತಿಯನ್ನು ಕೋರುತ್ತಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇದನ್ನೂ ಓದಿ: ವೀರಪುತ್ರ ಅಭಿನಂದನ್ ಬಿಡುಗಡೆ ವಿಳಂಬವಾಗಿದ್ದೇಕೆ..?

    ಪಾಕಿಸ್ತಾನದ ವಾಯುದಾಳಿಯನ್ನು ಹಿಮ್ಮೆಟ್ಟುವ ವೇಳೆ ಗಡಿ ದಾಟಿ ಪಾಕ್ ಸೈನ್ಯದ ವಶದಲ್ಲಿದ್ದ ಅಭಿನಂದನ್ ಶುಕ್ರವಾರ ಸಂಜೆ ವೇಳೆಗೆ ಬಿಡುಗಡೆ ಮಾಡುತ್ತೇನೆ ಎಂದು ಹೇಳಿ ಮತ್ತೆ ತನ್ನ ಕುತಂತ್ರವನ್ನು ಪ್ರದರ್ಶಿಸಿತ್ತು. ನಿನ್ನೆ ಮುಂಜಾನೆಯಿಂದಲೇ ವಾಘಾ ಗಡಿಯಲ್ಲಿ ಕಾದು ಕುಳಿತಿದ್ದ ಭಾರತೀಯ ಅಭಿಮಾನಿಗಳ ಛಲ ರಾತ್ರಿಯಾದ್ರು ಕಡಿಮೆ ಆಗಲಿಲ್ಲ. ಸಂಜೆ ವೇಳೆಗೆ ಮಳೆ ಬಂದಿದ್ದರೂ ಕೂಡ ಲೆಕ್ಕಿಸದ ಭಾರತೀಯರು ಅಲ್ಲೇ ನಿಂತಿದ್ದರು. ಇವೆಲ್ಲದರ ನಡುವೆಯೇ ರಾತ್ರಿ 9.15 ಗಂಟೆ ವೇಳೆಗೆ ಅಭಿನಂದನ್ ಭಾರತದ ನೆಲವನ್ನು ಪ್ರವೇಶಿಸಿದ್ದರು.

    ಅಭಿನಂದನ್ ಅವರನ್ನು ಸ್ವಾಗತ ಮಾಡಲು ವಾಯುಸೇನಾ ಅಧಿಕಾರಿ ಗ್ರೂಪ್ ಕ್ಯಾಪ್ಟನ್ ಥಾಮಸ್ ಕುರಿಯನ್ ಹಾಗೂ ಭಾರತ ಸರ್ಕಾರದ ಅಧಿಕಾರಿಗಳು ವಾಘಾ ಗಡಿಗೆ ಆಗಮಿಸಿದ್ದರು. ಅಲ್ಲದೇ ಅಭಿನಂದನ್ ಪೋಷಕರು ಕೂಡ ಸ್ಥಳದಲ್ಲಿ ಹಾಜರಿದ್ದರು. ವಾಘಾ ಗಡಿಯಿಂದ ನೇರ ಅವರನ್ನು ಅಮೃತಸರಕ್ಕೆ ಕರೆದ್ಯೊಯಲಾಯಿತು. ಆ ಬಳಿಕ ಅಲ್ಲಿಂದ ಸೇನಾಧಿಕಾರಿಗಳೊಂದಿಗೆ ದೆಹಲಿಗೆ ವಿಮಾನದಲ್ಲಿ ಕರೆತಂದಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ವೀರಪುತ್ರ ಅಭಿನಂದನ್ ಬಿಡುಗಡೆ ವಿಳಂಬವಾಗಿದ್ದೇಕೆ..?

    ವೀರಪುತ್ರ ಅಭಿನಂದನ್ ಬಿಡುಗಡೆ ವಿಳಂಬವಾಗಿದ್ದೇಕೆ..?

    ನವದೆಹಲಿ: ಭಾರತೀಯ ಹೆಮ್ಮೆಯ ಯೋಧ, ಪೈಲಟ್ ಅಭಿನಂದನ್ ವರ್ಧಮಾನ್ ಅವರ ಬಿಡುಗಡೆ ವಿಚಾರದಲ್ಲಿ ಕೊನೆಯವರೆಗೂ ಪಾಕಿಸ್ತಾನ ಆಟವಾಡಿದ್ದು, ಭಾರತೀಯ ಆಕ್ರೋಶಕ್ಕೆ ಕಾರಣವಾಗಿತ್ತು.

    ಶುಕ್ರವಾರ ಮಧ್ಯಾಹ್ನದ ವೇಳೆಗೆ ಭಾರತದ ಪೈಲಟ್ ಅಭಿನಂದನ್ ಅವರನ್ನು ಭಾರತಕ್ಕೆ ಹಸ್ತಾಂತರಿಸುತ್ತೇವೆ ಎಂದು ಹೇಳಿದ್ದ ಪಾಕಿಸ್ತಾನ ಕೊನೆ ಕ್ಷಣದವರೆಗೂ ಕಿರಿಕ್ ತೆಗೆದಿದೆ. ಭಾರತಕ್ಕೆ ಹಸ್ತಾಂತರ ಮಾಡುವುದಕ್ಕೂ ಮೊದಲು ಪಾಕ್ ನಿಂದ ಅಭಿನಂದನ್ ಕೈಯಲ್ಲಿ ವಿಡಿಯೋ ರೆಕಾರ್ಡ್ ಮಾಡಿಸಲಾಗಿತ್ತು.

    ವಿಡಿಯೋ ರೆಕಾರ್ಡ್ ಮಾಡಿಯೇ ಹಸ್ತಾಂತರ ಮಾಡುವುದೆಂದು ಪಾಕ್ ಹಟಕ್ಕೆ ಬಿದ್ದಿತ್ತು. ನಾಲ್ಕೈದು ಗಂಟೆ ಲಾಹೋರ್ ನಲ್ಲಿ ಪಾಕಿಸ್ತಾನದ ಮಿಲಿಟರಿ ಅಧಿಕಾರಿಗಳು ಕಿರಿಕ್ ತೆಗೆದಿದ್ದರು. ಹೀಗಾಗಿ ಸಂಜೆ 4 ಗಂಟೆಗೆ ಲಾಹೋರ್‍ಗೆ ಬಂದರೂ ಭಾರತ ಪ್ರವೇಶಿಸುವ ವೇಳೆ ರಾತ್ರಿ 9 ಗಂಟೆ ಆಗಿದೆ ಎಂಬುದಾಗಿ ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

    ಪಾಕಿಸ್ತಾನದ ವಾಯುದಾಳಿಯನ್ನು ಹಿಮ್ಮೆಟ್ಟುವ ವೇಳೆ ಗಡಿ ದಾಟಿ ಪಾಕ್ ಸೈನ್ಯದ ವಶದಲ್ಲಿದ್ದ ಅಭಿನಂದನ್ ಅವರನ್ನು ನೋಡಲು ನಿನ್ನೆ ಮುಂಜಾನೆಯಿಂದಲೇ ವಾಘಾ ಗಡಿಯಲ್ಲಿ ಕಾದು ಕುಳಿತಿದ್ದರು. ಭಾರತೀಯ ಅಭಿಮಾನಿಗಳ ಈ ಛಲ ರಾತ್ರಿಯಾದ್ರೂ ಕಡಿಮೆ ಆಗಲಿಲ್ಲ. ಸಂಜೆ ವೇಳೆಗೆ ಮಳೆ ಬಂದಿದ್ದರೂ ಕೂಡ ಲೆಕ್ಕಿಸದ ಭಾರತೀಯರು ಅಲ್ಲೇ ನಿಂತಿದ್ದರು. ಇವೆಲ್ಲದರ ನಡುವೆಯೇ ರಾತ್ರಿ 9.15 ಗಂಟೆ ವೇಳೆಗೆ ಅಭಿನಂದನ್ ಭಾರತದ ನೆಲವನ್ನು ಪ್ರವೇಶಿಸಿದ್ದರು.

    ಅಭಿನಂದನ್ ಅವರನ್ನು ಸ್ವಾಗತ ಮಾಡಲು ವಾಯುಸೇನಾ ಅಧಿಕಾರಿ ಗ್ರೂಪ್ ಕ್ಯಾಪ್ಟನ್ ಥಾಮಸ್ ಕುರಿಯನ್ ಹಾಗೂ ಭಾರತ ಸರ್ಕಾರದ ಅಧಿಕಾರಿಗಳು ವಾಘಾ ಗಡಿಗೆ ಆಗಮಿಸಿದ್ದರು. ಅಲ್ಲದೇ ಅಭಿನಂದನ್ ಪೋಷಕರು ಕೂಡ ಸ್ಥಳದಲ್ಲಿ ಹಾಜರಿದ್ದರು. ವಾಘಾ ಗಡಿಯಿಂದ ನೇರ ಅವರನ್ನು ಅಮೃತಸರಕ್ಕೆ ಕರೆದ್ಯೊಯಲಾಯಿತು. ಆ ಬಳಿಕ ಅಲ್ಲಿಂದ ಸೇನಾಧಿಕಾರಿಗಳೊಂದಿಗೆ ದೆಹಲಿಗೆ ವಿಮಾನದಲ್ಲಿ ಕರೆತಂದಿದ್ದಾರೆ. ದೆಹಲಿಯಲ್ಲಿಂದು ಅವರ ಆರೋಗ್ಯ ತಪಾಸಣೆ ಹಾಗೂ ಸೇನಾ ವಿಚಾರಣೆ ನಡೆಯಲಿದೆ.

    https://www.youtube.com/watch?v=ArvRnqPs81s

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ದೆಹಲಿಯಲ್ಲಿಂದು ಅಭಿಗೆ ಆರೋಗ್ಯ ತಪಾಸಣೆ – ಬೇಹುಗಾರಿಕೆ ಕೋನದಲ್ಲೂ ಸೇನಾ ವಿಚಾರಣೆ

    ದೆಹಲಿಯಲ್ಲಿಂದು ಅಭಿಗೆ ಆರೋಗ್ಯ ತಪಾಸಣೆ – ಬೇಹುಗಾರಿಕೆ ಕೋನದಲ್ಲೂ ಸೇನಾ ವಿಚಾರಣೆ

    ನವದೆಹಲಿ: ಶುಕ್ರವಾರ ರಾತ್ರಿ ತಾಯ್ನಾಡು ಭಾರತಕ್ಕೆ ವಾಪಸ್ ಆಗಿರೋ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಅವರಿಗೆ ಇಂದು ದೆಹಲಿಯಲ್ಲಿ ಸಂಪೂರ್ಣ ವೈದ್ಯಕೀಯ ತಪಾಸಣೆ ನಡೆಯಲಿದೆ.

    ನಿನ್ನೆ ಅಟಾರಿ ಗಡಿಯಿಂದ ಅಮೃತಸರಕ್ಕೆ ತೆರಳಿದ ಧೀರಯೋಧ ಅಭಿನಂದನ್ ಅಲ್ಲಿಂದ ದೆಹಲಿ ತಲುಪಿದ್ದಾರೆ. ಹೀಗಾಗಿ ಇಂದು ಅಲ್ಲಿ ಅವರಿಗೆ ವೈದ್ಯಕೀಯ ತಪಾಸಣೆ ನಡೆಯಲಿದೆ. ಪ್ಯಾರಾಚೂಟ್‍ನಿಂದ ಜಿಗಿದಿದ್ದ ಕಾರಣ ವಾರದ ಕಾಲ ತಪಾಸಣೆ ಜೊತೆಗೆ ಭಾರತೀಯ ಸೇನೆ ವಿಚಾರಣೆಗೆ ಒಳಪಡಿಸಲಿದೆ ಎನ್ನಲಾಗಿದೆ.

    ಅಭಿನಂದನ್ ಎದುರಿಸಬಹುದಾದ ವಿಚಾರಣೆಗಳು..?
    ವಾಯುಸೇನೆ ಅಧಿಕಾರಿಗಳು ವಾಯುಸೇನೆಯ ಗುಪ್ತಚರ ಘಟಕಕ್ಕೆ ಕರೆದೊಯ್ಯುತ್ತಾರೆ. ಈ ವೇಳೆ ಫಿಟ್‍ನೆಸ್ ಸೇರಿ, ಸಾಕಷ್ಟು ವೈದ್ಯಕೀಯ ಪರೀಕ್ಷೆ ನಡೆಯುತ್ತದೆ. ದೇಹದಲ್ಲಿ ಯಾವುದಾದರೂ ಟ್ರ್ಯಾಕಿಂಗ್ ಡಿವೈಸ್ ಇದೆಯೇ ಅಂತ ಸ್ಕ್ಯಾನಿಂಗ್ ಮಾಡ್ತಾರೆ. ಶತ್ರುರಾಷ್ಟ್ರ ದೈಹಿಕವಾಗಿ ಅಲ್ಲದೆ ಮಾನಸಿಕವಾಗಿ ಕಿರುಕುಳ ನೀಡಿದ್ಯಾ ಅಂತ ತಪಾಸಣೆ ನಡೆಸಬಹುದು. ಹೆಚ್ಚಿನ ತನಿಖೆಗಾಗಿ ಗುಪ್ತಚರ ಇಲಾಖೆಗೆ ಅಥವಾ ರಾ ಸಂಸ್ಥೆಗೆ ಹಸ್ತಾಂತರಿಸಬಹುದು. ನಮ್ಮ ದೇಶದ ಗುಪ್ತ ವಿಚಾರವನ್ನು ವೈರಿರಾಷ್ಟ್ರಕ್ಕೆ ಬಿಟ್ಟುಕೊಟ್ಟಿದ್ದಾರೆಯೇ ಅಂತ ವಿಚಾರಣೆ ನಡೆಸಬಹುದು. ಹಾಗೂ ಶತ್ರುರಾಷ್ಟ್ರದ ರಹಸ್ಯವೇನಾದರೂ ತಿಳಿದಿದ್ದರೆ ನಮಗೆ ತಿಳಿಸಿ ಅಂತ ಕೇಳುವ ಸಾಧ್ಯತೆಗಳಿವೆ.

    ಪಾಕಿಸ್ತಾನದ ವಾಯುದಾಳಿಯನ್ನು ಹಿಮ್ಮೆಟ್ಟುವ ವೇಳೆ ಗಡಿ ದಾಟಿ ಪಾಕ್ ಸೈನ್ಯದ ವಶದಲ್ಲಿದ್ದ ಅಭಿನಂದನ್ ಶುಕ್ರವಾರ ಸಂಜೆ ವೇಳೆಗೆ ಬಿಡುಗಡೆ ಮಾಡುತ್ತೇನೆ ಎಂದು ಹೇಳಿ ಮತ್ತೆ ತನ್ನ ಕುತಂತ್ರವನ್ನು ಪ್ರದರ್ಶಿಸಿತ್ತು. ನಿನ್ನೆ ಮುಂಜಾನೆಯಿಂದಲೇ ವಾಘಾ ಗಡಿಯಲ್ಲಿ ಕಾದು ಕುಳಿತಿದ್ದ ಭಾರತೀಯ ಅಭಿಮಾನಿಗಳ ಛಲ ರಾತ್ರಿಯಾದ್ರು ಕಡಿಮೆ ಆಗಲಿಲ್ಲ. ಸಂಜೆ ವೇಳೆಗೆ ಮಳೆ ಬಂದಿದ್ದರೂ ಕೂಡ ಲೆಕ್ಕಿಸದ ಭಾರತೀಯರು ಅಲ್ಲೇ ನಿಂತಿದ್ದರು. ಇವೆಲ್ಲದರ ನಡುವೆಯೇ ರಾತ್ರಿ 9.15 ಗಂಟೆ ವೇಳೆಗೆ ಅಭಿನಂದನ್ ಭಾರತದ ನೆಲವನ್ನು ಪ್ರವೇಶಿಸಿದ್ದರು.

    ಅಭಿನಂದನ್ ಅವರನ್ನು ಸ್ವಾಗತ ಮಾಡಲು ವಾಯುಸೇನಾ ಅಧಿಕಾರಿ ಗ್ರೂಪ್ ಕ್ಯಾಪ್ಟನ್ ಥಾಮಸ್ ಕುರಿಯನ್ ಹಾಗೂ ಭಾರತ ಸರ್ಕಾರದ ಅಧಿಕಾರಿಗಳು ವಾಘಾ ಗಡಿಗೆ ಆಗಮಿಸಿದ್ದರು. ಅಲ್ಲದೇ ಅಭಿನಂದನ್ ಪೋಷಕರು ಕೂಡ ಸ್ಥಳದಲ್ಲಿ ಹಾಜರಿದ್ದರು. ವಾಘಾ ಗಡಿಯಿಂದ ನೇರ ಅವರನ್ನು ಅಮೃತಸರಕ್ಕೆ ಕರೆದ್ಯೊಯಲಾಯಿತು. ಆ ಬಳಿಕ ಅಲ್ಲಿಂದ ಸೇನಾಧಿಕಾರಿಗಳೊಂದಿಗೆ ದೆಹಲಿಗೆ ವಿಮಾನದಲ್ಲಿ ಕರೆತಂದಿದ್ದಾರೆ.

    https://www.youtube.com/watch?v=ArvRnqPs81s

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv