Tag: ವಿಐಪಿ ಸಂಸ್ಕೃತಿ

  • ಬೆಂಗಾವಲು ವಾಹನ ನಿಲ್ಲಿಸಿ ಅಂಬುಲೆನ್ಸ್‌ಗೆ ದಾರಿ ಮಾಡಿಕೊಟ್ಟ ಮೋದಿ

    ಬೆಂಗಾವಲು ವಾಹನ ನಿಲ್ಲಿಸಿ ಅಂಬುಲೆನ್ಸ್‌ಗೆ ದಾರಿ ಮಾಡಿಕೊಟ್ಟ ಮೋದಿ

    ಗಾಂಧಿನಗರ: ದೇಶದಲ್ಲಿರುವ ವಿಐಪಿ ಸಂಸ್ಕೃತಿ ಕುರಿತಂತೆ ಯಾವಾಗಲೂ ವಾಗ್ದಾಳಿ ನಡೆಸುವ ಪ್ರಧಾನಿ ನರೇಂದ್ರ ಮೋದಿ (Prime Minister Narendra Modi) ಅವರು, ಮಾರ್ಗಮಧ್ಯೆ ತಾವು ಪ್ರಯಾಣಿಸುತ್ತಿದ್ದ ಕಾರನ್ನು ನಿಲ್ಲಿಸುವಂತೆ ಬೆಂಗಾವಲು ಪಡೆಗೆ ಆದೇಶಿಸಿ ಅಂಬುಲೆನ್ಸ್‌ಗೆ (Ambulance) ದಾರಿ ಮಾಡಿಕೊಡುವ ಮೂಲಕ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಸದ್ಯ ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

    ಅಹಮದಾಬಾದ್‍ನಿಂದ (Ahmedabad) ಗಾಂಧಿನಗರಕ್ಕೆ ಹೋಗುವ ದಾರಿಯಲ್ಲಿ ಬರುತ್ತಿದ್ದ ಅಂಬುಲೆನ್ಸ್ ಕಂಡು ನರೇಂದ್ರ ಮೋದಿ ಅವರು, ತಮ್ಮ ವಾಹನವನ್ನು ನಿಲ್ಲಿಸಿ ಅಂಬುಲೆನ್ಸ್‌ಗೆ ದಾರಿ ಮಾಡಿಕೊಟ್ಟಿದ್ದಾರೆ. ಮೋದಿ ಯುಗದಲ್ಲಿ ವಿಐಪಿ ಸಂಸ್ಕೃತಿ ಇಲ್ಲ ಎಂದು ಬಿಜೆಪಿ ನಾಯಕ ರುತ್ವಿಜ್ ಪಟೇಲ್ (BJP leader Rutvij Patel) ಟ್ವಿಟರ್‌ನಲ್ಲಿ ವಿಡಿಯೋ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಹೋಟೆಲ್ ರೂಮ್‍ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಾಡೆಲ್ ಶವ ಪತ್ತೆ

    ಗುಜರಾತ್ (Gujarat) ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಅವರು ಅಂಬುಲೆನ್ಸ್‌ಗೆ ದಾರಿ ಮಾಡಿಕೊಡುವ ಸಲುವಾಗಿ ತಮ್ಮ ಬೆಂಗಾವಲು ಪಡೆಯನ್ನು ನಿಲ್ಲಿಸಿದರು. ವಿಐಪಿ ಸಂಸ್ಕೃತಿಯ ವಿರುದ್ಧ ಪ್ರಧಾನಿಯವರ ಮತ್ತೊಂದು ನಡೆ. ಇದೊಂದು ಮಾನವೀಯತೆಯನ್ನು ಸೂಚಿಸುತ್ತದೆ ಎಂದು ಬರೆಯಲಾಗಿದೆ. ಇದನ್ನೂ ಓದಿ: ಪಬ್ಲಿಕ್ ಟಿವಿ ಇಂಪ್ಯಾಕ್ಟ್- ಹೆಚ್ಚಿನ ದರ ಪಡೆದರೆ ಬಸ್ ರೂಟ್‍ಪರ್ಮಿಟ್ ಕ್ಯಾನ್ಸಲ್

    2017ರಿಂದಲೂ ಭಾರತದಲ್ಲಿರುವ ವಿಐಪಿ ಸಂಸ್ಕೃತಿಯ ವಿರುದ್ಧ ಮಾತನಾಡುವ ನರೇಂದ್ರ ಮೋದಿ ಅವರು, ಪ್ರತಿಯೊಬ್ಬ ವ್ಯಕ್ತಿಯೂ ವಿಐಪಿ ಸಂಸ್ಕೃತಿಯನ್ನು ಬದಲಾಯಿಸಿಕೊಳ್ಳುವುದು ಬಹಳ ಮುಖ್ಯ. ಎಲ್ಲಾ ಭಾರತೀಯರು ವಿಐಪಿ ಮನಸ್ಥಿತಿಯನ್ನು ತೊಡೆದುಹಾಕಬೇಕು. ಪ್ರತಿಯೊಬ್ಬ ವ್ಯಕ್ತಿಗೂ ಮೌಲ್ಯ ಮತ್ತು ಪ್ರಾಮುಖ್ಯತೆ ನೀಡಬೇಕು ಎಂದು ಹೇಳಿದ್ದರು.

    Live Tv
    [brid partner=56869869 player=32851 video=960834 autoplay=true]

  • 36 ವರ್ಷದ ಹಿಂದಿನ ವಿಐಪಿ ಸಂಸ್ಕೃತಿಗೆ ರೈಲ್ವೇ ಇಲಾಖೆಯಲ್ಲಿ ಬ್ರೇಕ್

    36 ವರ್ಷದ ಹಿಂದಿನ ವಿಐಪಿ ಸಂಸ್ಕೃತಿಗೆ ರೈಲ್ವೇ ಇಲಾಖೆಯಲ್ಲಿ ಬ್ರೇಕ್

    ನವದೆಹಲಿ: ರೈಲ್ವೆ ಇಲಾಖೆಯಲ್ಲಿ ಕಳೆದ ಮೂರುವರೆ ದಶಕಗಳಿಂದ ಪಾಲಿಸಿಕೊಂಡು ಬರುತ್ತಿದ್ದ ವಿಐಪಿ ಸಂಸ್ಕೃತಿಗೆ ಬ್ರೇಕ್ ಬಿದ್ದಿದೆ.

    ರೈಲ್ವೇ ಬೋರ್ಡ್ ಅಧ್ಯಕ್ಷ ಮತ್ತು ಬೋರ್ಡ್ ಇತರ ಸದಸ್ಯರು ಭೇಟಿಗೆಂದು ಆಗಮಿಸುವ ಮತ್ತು ನಿರ್ಗಮಿಸುವ ಸಮಯದಲ್ಲಿ ಕಡ್ಡಾಯವಾಗಿ ಜನರಲ್ ಮ್ಯಾನೇಜರ್ ಗಳು ಸ್ಥಳದಲ್ಲೇ ಇರಲೇಬೇಕೆಂಬ 36 ವರ್ಷ ಹಿಂದಿನ ಶಿಷ್ಟಾಚಾರಕ್ಕೆ ಸಚಿವಾಲಯ ತೆರೆ ಎಳೆದಿದೆ.

    ಸೆಪ್ಟೆಂಬರ್ 28 ಕ್ಕೆ ಆದೇಶ ಪ್ರಕಟವಾಗಿದ್ದು, ರೈಲ್ವೇ ಅಧಿಕಾರಿಗಳ ಭೇಟಿ ವೇಳೆ ಇನ್ನು ಮುಂದೆ ಯಾವುದೇ ಬೊಕ್ಕೆ ಅಥವಾ ಹೂ ಗುಚ್ಛಗಳನ್ನು ನೀಡಬಾರದು ಎಂದು ರೈಲ್ವೇ ಬೋರ್ಡ್ ಅಧ್ಯಕ್ಷ ಅಶ್ವನಿ ಲೊಹನಿ ತಿಳಿಸಿದ್ದಾರೆ.

    ಕಚೇರಿಯಲ್ಲಿ ಅಲ್ಲದೇ ಅಧಿಕಾರಿಗಳು ಈ ಶಿಷ್ಟಾಚಾರವನ್ನು ಮನೆಯಲ್ಲೂ ಪಾಲಿಸಬೇಕು. ಅಧಿಕಾರಿಗಳ ಮನೆಯಲ್ಲಿ ಕೆಲಸ ಮಾಡುತ್ತಿರುವ ರೈಲು ಸಿಬ್ಬಂದಿಯನ್ನು ಕೂಡಲೇ ತೆರವುಗೊಳಿಸಬೇಕು ಎಂದು ಸೂಚಿಸಲಾಗಿದೆ.

    ಸಮಾರು 30 ಸಾವಿರಕ್ಕೂ ಅಧಿಕ ಟ್ರ್ಯಾಕ್ ಮನ್ ಗಳು ಹಿರಿಯ ಅಧಿಕಾರಿಗಳ ಮನೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಕಳೆದ ಒಂದು ತಿಂಗಳಿನಿಂದ ಅಧಿಕಾರಿಗಳ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಸುಮಾರು 6 ಸಾವಿರ – 7 ಸಾವಿರ ರೈಲ್ವೇ ಸಿಬ್ಬಂದಿ ಮರಳಿ ತಮ್ಮ ಮೂಲಕ ಕೆಲಸಕ್ಕೆ ನಿಯೋಜನೆಗೊಂಡಿದ್ದಾರೆ ಎಂದು ಇಲಾಖೆಯ ಮೂಲಗಳು ತಿಳಿಸಿವೆ.

    ರೈಲ್ವೇ ಸಚಿವ ಪಿಯೂಶ್ ಗೋಯಲ್ ಅವರು ಹಿರಿಯ ಅಧಿಕಾರಿಗಳಿಗೆ, ನೀವು ದುಬಾರಿ ವರ್ಗದ ಬೋಗಿಗಳಲ್ಲೇ ಪ್ರಯಾಣಿಸದೇ ಸ್ಲೀಪರ್ ಮತ್ತು ಎಸಿ ತ್ರಿ ಟಯರ್ ಬೋಗಿಗಳಲ್ಲಿ ಪ್ರಯಾಣಿಸಬೇಕು. ಈ ಮೂಲಕ ಪ್ರಯಾಣಿಕರ ಕಷ್ಟಗಳನ್ನು ತಿಳಿದುಕೊಳ್ಳಬೇಕು ಎಂದು ಸೂಚಿಸಿದ್ದಾರೆ.