Tag: ವಿಕೆಟ್ ಕೀಪರ್

  • ದೇಶೀಯ, ಅಂತಾರಾಷ್ಟ್ರೀಯ ಕ್ರಿಕೆಟಿಗೆ ಕನ್ನಡಿಗ ರಾಬಿನ್‌ ಉತ್ತಪ್ಪ ಗುಡ್‌ಬೈ

    ದೇಶೀಯ, ಅಂತಾರಾಷ್ಟ್ರೀಯ ಕ್ರಿಕೆಟಿಗೆ ಕನ್ನಡಿಗ ರಾಬಿನ್‌ ಉತ್ತಪ್ಪ ಗುಡ್‌ಬೈ

    ಬೆಂಗಳೂರು: ಕನ್ನಡಿಗ, ಟೀಂ ಇಂಡಿಯಾ(Team India) ಕ್ರಿಕೆಟಿಗ ರಾಬಿನ್ ಉತ್ತಪ್ಪ(Robin Uthappa) ಎಲ್ಲಾ ದೇಶೀಯ ಮತ್ತು ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ(Cricket) ನಿವೃತ್ತಿ ಹೇಳಿದ್ದಾರೆ.

    ಎಲ್ಲಾ ಮಾದರಿ ಕ್ರಿಕೆಟ್‌ಗೆ ವಿದಾಯ ಘೋಷಿಸಿರುವ ಕೊಡಗಿನ ಬ್ಯಾಟರ್‌, 36 ವರ್ಷದ ರಾಬಿನ್ ಉತ್ತಪ್ಪ ವಿದೇಶಿ ಲೀಗ್ ಟೂರ್ನಿಯಲ್ಲಿ ಪಾಲ್ಗೊಳ್ಳಲ್ಲಿದ್ದಾರೆ.

    ಸಾಮಾಜಿಕ ಜಾಲತಾಣದಲ್ಲಿ ಭಾವನಾತ್ಮಕ ಪತ್ರ ಬರೆದು ಅವಕಾಶ ನೀಡಿದ್ದಕ್ಕೆ ಬಿಸಿಸಿಐ, ಕರ್ನಾಟಕ, ಸೌರಾಷ್ಟ್ರ, ಕೇರಳ ಕ್ರಿಕೆಟ್‌ ಬೋರ್ಡ್‌ಗೆ ಧನ್ಯವಾದ ಹೇಳಿದ್ದಾರೆ.

    2006ರಲ್ಲಿ ಅಂತಾರಾಷ್ಟ್ರೀಯ ಪಂದ್ಯಕ್ಕೆ ಪಾದರ್ಪಣೆ ಮಾಡಿದ್ದ ರಾಬಿನ್‌ ಉತ್ತಪ್ಪ ವಿಕೆಟ್ ಕೀಪರ್ ಆಗಿ ಟೀಂ ಇಂಡಿಯಾದಲ್ಲಿ ಮಿಂಚಿದ್ದರು. 2007ರ ಟಿ20 ವಿಶ್ವಕಪ್ ಚಾಂಪಿಯನ್ ತಂಡದ ಸದಸ್ಯರಾಗಿದ್ದರು. 2015ರ ಬಳಿಕ ಟೀಂ ಇಂಡಿಯಾದಲ್ಲಿ ಅವಕಾಶ ವಂಚಿತರಾಗಿದ್ದ ರಾಬಿನ್ ಉತ್ತಪ್ಪ, ಐಪಿಎಲ್ ಹಾಗೂ ರಣಜಿ ಕ್ರಿಕೆಟ್ ಆಡುತ್ತಿದ್ದರು.

    ಫಿಟ್ನೆಸ್ ಸಮಸ್ಯೆ, ಗಾಯ ಹಾಗೂ ಫಾರ್ಮ್ ಸಮಸ್ಯೆಯಿಂದ ಅವಕಾಶ ವಂಚಿತರಾಗಿದ್ದ ರಾಬಿನ್ ಉತ್ತಪ್ಪ 2015ರಲ್ಲಿ ಜಿಂಬಾಬ್ವೆ ವಿರುದ್ಧ ಕೊನೆಯ ಬಾರಿಗೆ ಟಿ20 ಹಾಗೂ ಏಕದಿನ ಪಂದ್ಯ ಆಡಿದ್ದರು. ಬಳಿಕ ಟೀಂ ಇಂಡಿಯಾದಿಂದ ದೂರ ಉಳಿದಿದ್ದರು.

    46 ಏಕದಿನ ಪಂದ್ಯಗಳ 42 ಇನ್ನಿಂಗ್ಸ್‌ ಆಡಿ 934 ರನ್‌ ಹೊಡೆದಿದ್ದಾರೆ. 13 ಟಿ 20 ಪಂದ್ಯ ಆಡಿರುವ ಉತ್ತಪ್ಪ 12 ಇನ್ನಿಂಗ್ಸ್‌ಗಳಿಂದ 249 ರನ್‌ ಗಳಿಸಿದ್ದಾರೆ. 203 ಪ್ರಥಮ ದರ್ಜೆ ಪಂದ್ಯಗಳಿಂದ 6,534 ರನ್‌ ಹೊಡೆದಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ವಾಸಿಮ್ ಜಾಫರ್ ತಂಡದಲ್ಲಿ ಧೋನಿಯೇ ಕ್ಯಾಪ್ಟನ್, ಕೀಪರ್

    ವಾಸಿಮ್ ಜಾಫರ್ ತಂಡದಲ್ಲಿ ಧೋನಿಯೇ ಕ್ಯಾಪ್ಟನ್, ಕೀಪರ್

    ನವದೆಹಲಿ: ಟೀಂ ಇಂಡಿಯಾ ಮಾಜಿ ಆರಂಭಿಕ ಬ್ಯಾಟ್ಸ್‌ಮನ್ ವಾಸಿಮ್ ಜಾಫರ್ ತಂಡವೊಂದನ್ನು ರಚಿಸಿದ್ದು, ಅದರಲ್ಲಿ ಎಂ.ಎಸ್.ಧೋನಿ ಅವರೇ ನಾಯಕ, ವಿಕೆಟ್ ಕೀಪರ್ ಆಗಿದ್ದಾರೆ.

    ಹೌದು. ವಾಸಿಮ್ ಜಾಫರ್ ತಮ್ಮ ಸಾರ್ವಕಾಲಿಕ ಏಕದಿನ ತಂಡವನ್ನು ಶನಿವಾರ ಆಯ್ಕೆ ಮಾಡಿದ್ದಾರೆ. ಅದರಲ್ಲಿ ಮಹೇಂದ್ರ ಸಿಂಗ್ ಧೋನಿ ಅವರಿಗೆ ನಾಯಕ ಸ್ಥಾನ ನೀಡಿದ್ದಾರೆ. ಜೊತೆಗೆ ಸಚಿನ್ ತೆಂಡೂಲ್ಕರ್ ಮತ್ತು ರೋಹಿತ್ ಶರ್ಮಾ ಅವರನ್ನು ತಂಡದಲ್ಲಿ ಓಪನರ್ ಆಗಿದ್ದಾರೆ. ಉಳಿದಂತೆ ವಿರಾಟ್ ಕೊಹ್ಲಿ ಅವರನ್ನು ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟಿಂಗ್‍ನಲ್ಲಿ ಇರಿಸಲಾಗಿದೆ. ಆಶ್ಚರ್ಯಕರ ಸಂಗತಿಯೆಂದರೆ, ಆಸ್ಟ್ರೇಲಿಯಾಕ್ಕೆ 2003 ಹಾಗೂ 2007ರಲ್ಲಿ ಏಕದಿನ ವಿಶ್ವಕಪ್ ತಂದುಕೊಟ್ಟ ರಿಕಿ ಪಾಂಟಿಂಗ್ ಅವರಿಗೆ ಜಾಫರ್ ತಮ್ಮ ತಂಡದಲ್ಲಿ 12ನೇ ಸ್ಥಾನ ನೀಡಿದ್ದಾರೆ.

    ವೆಸ್ಟ್ ಇಂಡೀಸ್ ದಂತಕಥೆ ವಿವಿಯನ್ ರಿಚಡ್ರ್ಸ್ ಜಾಫರ್ ತಂಡದ ಮೂರನೇ ಕ್ರಮಾಂಕದ ಬ್ಯಾಟ್ಸ್‌ಮನ್ ಆಗಿದ್ದಾರೆ. ದಕ್ಷಿಣ ಆಫ್ರಿಕಾದ ಮಾಜಿ ಕ್ರಿಕೆಟಿಗ ಎಬಿ ಡಿವಿಲಿಯರ್ಸ್ 5ನೇ ಸ್ಥಾನದಲ್ಲಿದ್ದರೆ ಮತ್ತು ಇಂಗ್ಲೆಂಡ್ ಆಲೌರೌಂಡರ್ ಬೆನ್ ಸ್ಟೋಕ್ಸ್ ಆರನೇ ಸ್ಥಾನದಲ್ಲಿದ್ದಾರೆ.

    ಒಬ್ಬ ಭಾರತೀಯ ಬೌಲರ್‌ಗೂ ಜಾಫರ್ ತಮ್ಮ ತಂಡದಲ್ಲಿ ಸ್ಥಾನ ನೀಡಿಲ್ಲ. ಅವರು ಪಾಕಿಸ್ತಾನದ ಸಕ್ಲೇನ್ ಮುಷ್ತಾಕ್ ಮತ್ತು ಆಸ್ಟ್ರೇಲಿಯಾದ ಶೇನ್ ವಾರ್ನ್ ಅವರನ್ನು ಸ್ಪಿನ್ನರ್ ಆಗಿ ಆಯ್ಕೆ ಮಾಡಿಕೊಂಡಿದ್ದಾರೆ. ವೇಗದ ಬೌಲರ್‌ಗಳಲ್ಲಿ ವಿಂಡೀಸ್‍ನ ಜೊವಾನ್ನೆ ಗಾರ್ನರ್, ಪಾಕಿಸ್ತಾನದ ದಂತಕಥೆ ವಾಸಿಮ್ ಅಕ್ರಮ್ ಮತ್ತು ಆಸ್ಟ್ರೇಲಿಯಾದ ಗ್ಲೆನ್ ಮೆಕ್‍ಗ್ರಾತ್ ಸೇರಿದ್ದಾರೆ.

    ಧೋನಿ ನಾಯಕತ್ವ ಯಾಕೆ?:
    ಟೀಂ ಇಂಡಿಯಾ ಮಾಜಿ ನಾಯಕ ಎಂ.ಎಸ್.ಧೋನಿ ಸದ್ಯ ಭಾರತ ತಂಡದಿಂದ ಹೊರಗುಳಿದಿದ್ದಾರೆ. ಜುಲೈನಲ್ಲಿ ನಡೆದ ಏಕದಿನ ವಿಶ್ವಕಪ್‍ನಲ್ಲಿ ಅವರು ಕೊನೆಯ ಬಾರಿಗೆ ನ್ಯೂಜಿಲೆಂಡ್ ವಿರುದ್ಧ ಸೆಮಿಫೈನಲ್ ಪಂದ್ಯದಲ್ಲಿ ಆಡಿದ್ದರು. ಧೋನಿ ಭಾರತದ ಪರ 90 ಟೆಸ್ಟ್, 350 ಏಕದಿನ ಮತ್ತು 98 ಟಿ20 ಪಂದ್ಯಗಳನ್ನು ಆಡಿದ್ದಾರೆ. ಅವರ ನಾಯಕತ್ವದಲ್ಲಿಯೇ ಭಾರತ ತಂಡವು 2007ರಲ್ಲಿ ಟಿ20 ಮತ್ತು 2011ರಲ್ಲಿ ಏಕದಿನ ವಿಶ್ವಕಪ್ ಗೆದ್ದಿತ್ತು. ಇದೇ ಕಾರಣಕ್ಕೆ ಧೋನಿ ಅವರನ್ನೇ ವಾಸಿಮ್ ಜಾಫರ್ ನಾಯಕನನ್ನಾಗಿ ಆಯ್ಕೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.

    ದೇಶೀಯ ಕ್ರಿಕೆಟ್‍ನಲ್ಲಿ ಜಾಫರ್ ರನ್ ಮಳೆ:
    ವಾಸಿಮ್ ಜಾಫರ್ ರಣಜಿ ಟ್ರೋಫಿ, ಇರಾನಿ ಟ್ರೋಫಿ ಮತ್ತು ದುಲೀಪ್ ಟ್ರೋಫಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ. ರಣಜಿಯಲ್ಲಿ 12,038 ರನ್, ಇರಾನಿ ಟ್ರೋಫಿಯಲ್ಲಿ 1,294 ರನ್ ಮತ್ತು ದುಲೀಪ್ ಟ್ರೋಫಿಯಲ್ಲಿ 2,545 ರನ್ ಗಳಿಸಿದ್ದಾರೆ. ಅವರು ಅತಿ ಹೆಚ್ಚು 156 ರಣಜಿ ಪಂದ್ಯಗಳನ್ನು ಆಡಿದ ಆಟಗಾರರಾಗಿದ್ದಾರೆ. ಜಾಫರ್ ಮುಂಬೈ ತಂಡಕ್ಕೆ ಎರಡು ಬಾರಿ ರಣಜಿ ಚಾಂಪಿಯನ್ ಪಟ್ಟ ತಂದುಕೊಟ್ಟಿದ್ದಾರೆ. ಜೊತೆಗೆ ಎರಡು ಬಾರಿ ರಣಜಿ ಪ್ರಶಸ್ತಿಯನ್ನು ಗೆದ್ದ ವಿದರ್ಭ ತಂಡದ ಸದಸ್ಯರಾಗಿದ್ದರು. ವಿಶೇಷವೆಂದರೆ ರಣಜಿಯಲ್ಲಿ 12 ಸಾವಿರಕ್ಕೂ ಹೆಚ್ಚು ರನ್ ಗಳಿಸಿದ ಏಕೈಕ ಆಟಗಾರ ಎಂಬ ಹೆಗ್ಗಳಿಕೆಯನ್ನು ಜಾಫರ್ ಪಡೆದುಕೊಂಡಿದ್ದಾರೆ.

  • ಪಂತ್ ಬದಲು ಕೀಪಿಂಗ್ ಗ್ಲೌಸ್ ತೊಟ್ಟ ರಾಹುಲ್

    ಪಂತ್ ಬದಲು ಕೀಪಿಂಗ್ ಗ್ಲೌಸ್ ತೊಟ್ಟ ರಾಹುಲ್

    ಮುಂಬೈ: ಟೀಂ ಇಂಡಿಯಾ ವಿಕೆಟ್ ಕೀಪರ್ ರಿಷಬ್ ಪಂತ್ ಬದಲು ಇಂದು ಬ್ಯಾಟ್ಸ್‌ಮನ್‌ ಕೆ.ಎಲ್.ರಾಹುಲ್ ಗ್ಲೌಸ್ ತೊಟ್ಟು ಕೀಪಿಂಗ್ ಮಾಡಿದ್ದಾರೆ.

    ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ ಹೀನಾಯ ಸೋಲನ್ನು ಕಂಡಿದೆ. ಭಾರತ ಇನ್ನಿಂಗ್ಸ್ ನಲ್ಲಿ ಪ್ಯಾಟ್ ಕಮ್ಮಿನ್ಸ್ ಎಸೆದ ಬೌನ್ಸರ್ ಬಾಲ್ ರಿಷಬ್ ಪಂತ್ ತಲೆಗೆ ಬಿದ್ದ ಪರಿಣಾಮ ಅವರು ಗಾಯಗೊಂಡರು. ಹೀಗಾಗಿ ಪಂತ್‍ಗೆ ವಿಶ್ರಾಂತಿ ನೀಡಿ ಅವರ ಜವಾಬ್ದಾರಿಯನ್ನು ಕೆ.ಎಲ್.ರಾಹುಲ್‍ಗೆ ನೀಡಲಾಯಿತು.

    ಈ ಪಂದ್ಯದಲ್ಲಿ ಆರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ ರಿಷಭ್ ಪಂತ್ 28 ರನ್ (33 ಎಸೆತ, 2 ಬೌಂಡರಿ, ಸಿಕ್ಸರ್) ಗಳಿಸಿದ್ದರು. ಉತ್ತಮ ಬ್ಯಾಟಿಂಗ್ ಆರಂಭಿಸಿದ್ದ ಪಂತ್ ಕಮ್ಮಿನ್ಸ್ ಎಸೆದ ಇನ್ನಿಂಗ್ಸ್ ನ 43ನೇ ಓವರ್ ನ 2ನೇ ಎಸೆತದಲ್ಲಿ ವಿಕೆಟ್ ಒಪ್ಪಿಸಿದರು.

    ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ್ದ ಟೀಂ ಇಂಡಿಯಾ 49.1 ಓವರ್ ಗಳಲ್ಲಿ ಎಲ್ಲಾ ವಿಕೆಟ್ ಕಳೆದುಕೊಂಡು 255 ರನ್ ಪೇರಿಸಿತ್ತು. ಶಿಖರ್ ಧವನ್ 74 ರನ್ (91 ಎಸೆತ, 9 ಬೌಂಡರಿ, ಸಿಕ್ಸ್), ಕೆ.ಎಲ್.ರಾಹುಲ್ 47 ರನ್ (61 ಎಸೆತ, 4 ಬೌಂಡರಿ) ಹೊಡೆದಿದ್ದರು. ಈ ಸಾಧಾರಣ ಮೊತ್ತವನ್ನು ಬೆನ್ನತ್ತಿದ ಆಸ್ಟ್ರೇಲಿಯಾ ಆ್ಯರನ್ ಫಿಂಚ್ 110 ರನ್ (114 ಎಸೆತ, 13 ಬೌಂಡರಿ, 2 ಸಿಕ್ಸರ್) ಹಾಗೂ ಡೇವಿಡ್ ವಾರ್ನರ್ 128 ರನ್ (112 ಎಸೆತ, 17 ಬೌಂಡರಿ, 3 ಸಿಕ್ಸರ್) ಹೊಡೆದಿದ್ದರಿಂದ 37.4 ಓವರ್ ನಲ್ಲಿ 258 ರನ್ ಗಳಿಸಿ ಭರ್ಜರಿ ಗೆಲುವು ಸಾಧಿಸಿತು. ಈ ಮೂಲಕ ಮೂರು ಏಕದಿನ ಪಂದ್ಯಗಳ ಸರಣಿಯಲ್ಲಿ ಆಸ್ಟ್ರೇಲಿಯಾ 1-0 ಮುನ್ನಡೆ ಸಾಧಿಸಿದೆ.

  • ಧೋನಿಯನ್ನು ಟೆಸ್ಟ್ ಕ್ರಿಕೆಟ್‍ನಲ್ಲಿ ಹಿಂದಿಕ್ಕಿದ ಪಂತ್

    ಧೋನಿಯನ್ನು ಟೆಸ್ಟ್ ಕ್ರಿಕೆಟ್‍ನಲ್ಲಿ ಹಿಂದಿಕ್ಕಿದ ಪಂತ್

    ನವದೆಹಲಿ: ಭಾರತದ ಮಾಜಿ ನಾಯಕ ಎಂ.ಎಸ್ ಧೋನಿಯನ್ನು ಯುವ ಆಟಗಾರ ರಿಷಬ್ ಪಂತ್ ಟೆಸ್ಟ್ ವಿಕೆಟ್ ಕೀಪಿಂಗ್‍ನಲ್ಲಿ ಹಿಂದಿಕ್ಕಿದ್ದಾರೆ.

    ಸದ್ಯ ವೆಸ್ಟ್ ಇಂಡೀಸ್ ವಿರುದ್ಧ ಟೆಸ್ಟ್ ಸರಣಿ ರಿಷಬ್ ಪಂತ್ ಆಡುತ್ತಿದ್ದಾರೆ. ಭಾರತದ ವಿಕೆಟ್ ಕೀಪರ್‍ ಗಳಲ್ಲಿ ಟೆಸ್ಟ್ ಪಂದ್ಯದಲ್ಲಿ ಅತಿ ಬೇಗ 50 ಬ್ಯಾಟ್ಸ್ ಮನ್‍ಗಳನ್ನು ಔಟ್ ಮಾಡಿದ ಹೆಗ್ಗಳಿಕೆ ಪಾತ್ರರಾಗಿದ್ದಾರೆ. ಈ ಮೂಲಕ ಎಂ.ಎಸ್ ಧೋನಿ ಅವರ ದಾಖಲೆಯನ್ನು ಮುರಿದು ಹಾಕಿದ್ದಾರೆ.

    ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಎರಡನೇ ಟೆಸ್ಟ್ ಪಂದ್ಯದ ಮೂರನೇ ದಿನದಲ್ಲಿ ವಿಂಡೀಸ್ ಆಟಗಾರ ಕ್ರೈಗ್ ಬ್ರಾಥ್‍ವೈಟ್ ಅವರನ್ನು ಕ್ಯಾಚ್ ಹಿಡಿದು ಔಟ್ ಮಾಡುವ ಮೂಲಕ ಈ ಸಾಧನೆ ಮಾಡಿದ್ದಾರೆ. ಈ ಹಿಂದೆ ಎಂ.ಎಸ್ ಧೋನಿ 15 ಟೆಸ್ಟ್ ಪಂದ್ಯಗಳಲ್ಲಿ 50 ಬ್ಯಾಟ್ಸ್ ಮನ್‍ಗಳನ್ನು ಔಟ್ ಮಾಡಿದ್ದರು. ಆದರೆ ಆಡಿದ 11 ಪಂದ್ಯಗಳಲ್ಲೇ 50 ಬ್ಯಾಟ್ಸ್ ಮನ್ ಗಳನ್ನು ಬಲಿ ಪಡೆದಿರುವ ಪಂತ್, ಧೋನಿ ಅವರ ಸಾಧನೆಯನ್ನು ಹಿಂದಿಕ್ಕಿದ್ದಾರೆ.

    ಈ ಸಾಧನೆ ಮಾಡಿದ ವಿಶ್ವದ ಟಾಪ್ ವಿಕೆಟ್ ಕೀಪರ್‍ ಗಳಲ್ಲಿ ಪಂತ್ ಆಸ್ಟ್ರೇಲಿಯಾದ ಮಾಜಿ ವಿಕೆಟ್ ಕೀಪರ್ ಆಡಮ್ ಗಿಲ್‍ಕ್ರಿಸ್ಟ್ ಅವರ ಜೊತೆ ಎರಡನೇ ಸ್ಥಾನದಲ್ಲಿದ್ದಾರೆ. ಇದರ ಜೊತೆಗೆ 10 ಟೆಸ್ಟ್ ಪಂದ್ಯಗಳಲ್ಲಿ ಈ ಸಾಧನೆ ಮಾಡಿದ ದಕ್ಷಿಣ ಆಫ್ರಿಕಾದ ಮಾಜಿ ಕೀಪರ್ ಮಾರ್ಕ್ ಬೌಚರ್, ಇಂಗ್ಲೆಂಡ್‍ನ ಜೋಸ್ ಬಟ್ಲರ್ ಮತ್ತು ಆಸ್ಟ್ರೇಲಿಯಾದ ಟಿಮ್ ಪೈನ್ ಮೊದಲ ಸ್ಥಾನದಲ್ಲಿ ಇದ್ದಾರೆ.

    ದೆಹಲಿಯ ರಿಷಬ್ ಪಂತ್ ಅವರನ್ನು ಎಂ.ಎಸ್ ಧೋನಿಯ ನಂತರ ಭಾರತದ ಭವಿಷ್ಯದ ವಿಕೆಟ್ ಕೀಪರ್ ಎಂದು ಹೇಳಲಾಗಿದೆ. ಈ ನಿಟ್ಟಿನಲ್ಲಿ ಅವರನ್ನು ಮುಂದಿನ ಟೂರ್ನಿಗೆ ಸಿದ್ಧ ಮಾಡಲು ಈಗ ಅವರಿಗೆ ಎಲ್ಲಾ ಮಾದರಿಯ ಕ್ರಿಕೆಟ್‍ನಲ್ಲಿ ಹೆಚ್ಚು ಅವಕಾಶ ನೀಡುತ್ತಿದ್ದೇವೆ ಎಂದು ಭಾರತದ ಆಯ್ಕೆ ಸಮಿತಿ ಅಧ್ಯಕ್ಷ ಎಂಎಸ್‍ಕೆ ಪ್ರಸಾದ್ ಹೇಳಿದ್ದರು.

    ಎಡಗೈ ಬ್ಯಾಟ್ಸ್ ಮನ್ ಆಗಿರುವ ಈ ಯುವ ಪ್ರತಿಭೆಗೆ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಕೂಡ ಬೆಂಬಲ ನೀಡಿದ್ದು, ರಿಷಬ್ ಪಂತ್ ಅವರಲ್ಲಿ ನಾವು ಭವಿಷ್ಯವನ್ನು ನೋಡುತ್ತಿದ್ದೇವೆ. ಖಂಡಿತವಾಗಿಯೂ ಅವರು ಒಬ್ಬ ಒಳ್ಳೆಯ ಪ್ರತಿಭೆ ಇರುವಂತ ಆಟಗಾರ ಎಂದು ಹೇಳಿದ್ದರು.

  • ರನೌಟ್ ವೇಳೆ ತಪ್ಪಾಗಿ ಬಾಲ್ ಎಸೆದ ಕೀಪರ್ – ಪಿಚ್ ಬಿಟ್ಟು ಓಡಿದ ಬೌಲರ್

    ರನೌಟ್ ವೇಳೆ ತಪ್ಪಾಗಿ ಬಾಲ್ ಎಸೆದ ಕೀಪರ್ – ಪಿಚ್ ಬಿಟ್ಟು ಓಡಿದ ಬೌಲರ್

    ಲಂಡನ್: ರನೌಟ್ ಮಾಡುವ ಸಂದರ್ಭದಲ್ಲಿ ವಿಕೆಟ್ ಕೀಪರ್ ವಿಕೆಟ್‍ಗೆ ಬಾಲನ್ನು ಎಸೆಯುವ ಬದಲು ತಪ್ಪಾಗಿ ಬೌಲರಿಗೆ ಎಸೆಯುತ್ತಿರುವ ವಿಡಿಯೋ ಈಗ ವೈರಲ್ ಆಗಿದೆ.

    ಡರ್ಹಾಮ್ ಮತ್ತು ಯಾರ್ಕ್ ಶೈರ್ ನಡುವಿನ ಟಿ20 ಪಂದ್ಯ ರಿವರ್ಸೈಡ್ ಮೈದಾನದಲ್ಲಿ ನಡೆಯುತಿತ್ತು. ಯಾರ್ಕ್‍ಶೈರ್ ಸ್ಪಿನ್ ಬೌಲರ್ ಕೇಶವ್ ಮಹಾರಾಜ್ ಎಸೆದ ಬಾಲ್ ಬ್ಯಾಟ್ಸ್ ಮನ್ ಪ್ಯಾಡಿಗೆ ಬಡಿದಿತ್ತು. ಈ ವೇಳೆ ಕೇಶವ್ ಮಹಾರಾಜ್ ಅಂಪೈರ್ ಬಳಿ ಮನವಿ ಸಲ್ಲಿಸುತ್ತಿದ್ದಾಗ ಇಬ್ಬರು ಬ್ಯಾಟ್ಸ್ ಮನ್ ರನ್ ಗಳಿಸಲು ಓಡಿದ್ದಾರೆ.

    ಇಬ್ಬರು ಓಡಲು ಆರಂಭಿಸಿದ್ದನ್ನು ನೋಡಿದ ಕೀಪರ್ ಮುಂದುಗಡೆ ಬಂದು ನಾನ್ ಸ್ಟ್ರೈಕ್ ನಲ್ಲಿರುವ ವಿಕೆಟಿಗೆ ಎಸೆಯುವ ಬದಲು ತಪ್ಪಾಗಿ ಅಲ್ಲಿದ್ದ ಬೌಲರ್ ಗೆ ಹಿಂಭಾಗಕ್ಕೆ ಎಸೆದಿದ್ದಾರೆ. ವೇಗವಾಗಿ ಬಾಲ್ ಬಿದ್ದ ರಭಸಕ್ಕೆ ಕೇಶವ್ ಮಹಾರಾಜ್ ಎಡಗಾಲಿಗೆ ಬಲವಾದ ಪೆಟ್ಟು ಬಿದ್ದಿದೆ. ಬಾಲ್ ಬಿದ್ದ ಕೂಡಲೇ ಅವರು ತೊಡೆಯನ್ನು ಉಜ್ಜಿಕೊಳ್ಳುತ್ತಾ ಓಡುತ್ತಿರುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ.

    ಇದಾದ ನಂತರವೂ ಕೇಶವ್ ಅವರು 4 ಓವರ್ ಕೋಟಾವನ್ನು ಪೂರ್ಣಗೊಳಿಸಿದ್ದಾರೆ. ಆದರೆ ಯಾವುದೇ ವಿಕೆಟ್ ಪಡೆಯಲು ಯಶಸ್ವಿಯಾಗಲಿಲ್ಲ.

  • ಶ್ರೇಷ್ಠ ಕೀಪರ್ ವಿಶ್ವಕಪ್‍ಗೆ ಆಯ್ಕೆಯಾದರೆ  ಪ್ರಶ್ನೆ ಮಾಡೋದು ಯಾಕೆ – ಧೋನಿ ಪರ ಶೇನ್ ವಾರ್ನ್ ಬ್ಯಾಟಿಂಗ್

    ಶ್ರೇಷ್ಠ ಕೀಪರ್ ವಿಶ್ವಕಪ್‍ಗೆ ಆಯ್ಕೆಯಾದರೆ ಪ್ರಶ್ನೆ ಮಾಡೋದು ಯಾಕೆ – ಧೋನಿ ಪರ ಶೇನ್ ವಾರ್ನ್ ಬ್ಯಾಟಿಂಗ್

    ನವದೆಹಲಿ: ಟೀಂ ಇಂಡಿಯಾದ ಮಾಜಿ ನಾಯಕ ಎಂ.ಎಸ್ ಧೋನಿ ಅವರು ಒಬ್ಬ ಭಯಂಕರ ಆಟಗಾರ, ಅವರು ತನಗೆ ಬೇಕಾದಾಗ ನಿವೃತ್ತಿ ಹೊಂದುತ್ತಾರೆ ಎಂದು ಆಸ್ಟ್ರೇಲಿಯಾದ ಮಾಜಿ ಲೆಗ್ ಸ್ಪಿನ್ನರ್ ಶೇನ್ ವಾರ್ನ್ ಹೇಳಿದ್ದಾರೆ.

    ಧೋನಿ ಅವರು ಉತ್ತಮ ಆಟಗಾರ. ಆದರೆ ಜನರು ಯಾವಾಗಲೂ ಯಾಕೆ ಅವರ ನಿವೃತ್ತಿಯ ಬಗ್ಗೆ ಮಾತನಾಡುತ್ತಾರೆ? ಭಾರತದ ಕ್ರಿಕೆಟ್ ತಂಡಕ್ಕೆ ಧೋನಿ ಅವರ ಕೊಡುಗೆ ಬಹಳ ಇದೆ. ಈ ರೀತಿ ಇರುವಾಗ ಅವರ ನಿವೃತ್ತಿಯ ಬಗ್ಗೆ ಮಾತನಾಡುವುದು ತಪ್ಪು ಎಂದು ತಿಳಿಸಿದರು.

    ಧೋನಿ ಅವರು ಒಬ್ಬ ಒಳ್ಳೆಯ ಬ್ಯಾಟ್ಸ್‍ಮ್ಯಾನ್ ಮತ್ತು ಚಾಣಾಕ್ಷ ವಿಕೆಟ್ ಕೀಪರ್ ಇಂತಹ ಆಟಗಾರ ವಿಶ್ವಕಪ್ ತಂಡಕ್ಕೆ ಆಯ್ಕೆಯಾದರೆ ಕೆಲವರು ಪ್ರಶ್ನೆ ಮಾಡುತ್ತಾರೆ ಎಂದರೆ ನನಗೆ ನಂಬಲು ಆಗುತ್ತಿಲ್ಲ. ಅವರು ಈ ವಿಶ್ವಕಪ್ ಮುಗಿದ ನಂತರ ಇಲ್ಲವೇ ಇನ್ನೂ 5 ವರ್ಷ ಕಳೆದ ನಂತರವೋ ನಿವೃತ್ತಿ ಪಡೆಯಬಹುದು. ಈ ನಿವೃತ್ತಿ ವಿಷಯದ ಬಗ್ಗೆ ಧೋನಿಗೆ ಚೆನ್ನಾಗಿ ಗೊತ್ತು. ಯಾವ ಸಮಯದಲ್ಲಿ ನಿವೃತ್ತಿ ಹೊಂದಬೇಕು ಎಂದು ಗೊತ್ತಿರುವ ಏಕೈಕ ಆಟಗಾರ ಎಂದರೆ ಆದು ಧೋನಿ ಎಂದು ಶೇನ್ ವಾರ್ನ್ ಹೇಳಿದ್ದಾರೆ.

    2018ರ ನಂತರ 9 ಅಂತಾರಾಷ್ಟ್ರೀಯ ಏಕದಿನ ಪಂದ್ಯಗಳನ್ನು ಆಡಿರುವ ಧೋನಿ 81.75ರ ಸರಾಸರಿಯಲ್ಲಿ ಭರ್ಜರಿ 327 ರನ್ ಹೊಡೆದಿದ್ದಾರೆ. ಐಪಿಎಲ್ 12 ರ ಅವೃತ್ತಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕರಾಗಿದ್ದ ಧೋನಿ ಅವರು ಆಡಿದ 15 ಪಂದ್ಯಗಳಲ್ಲಿ 12 ಇನ್ನಿಂಗ್ಸ್‍ಗಳಲ್ಲಿ 83.20ರ ಸರಾಸರಿಯಲ್ಲಿ ಬ್ಯಾಟ್ ಬೀಸಿದ ಧೋನಿ 134.62ರ ಸ್ಟ್ರೈಕ್ ರೇಟ್‍ನಲ್ಲಿ 416 ರನ್ ಸಿಡಿಸಿ ಉತ್ತಮ ಲಯದಲ್ಲಿದ್ದಾರೆ.

    ಪ್ರಸಕ್ತ ಸಂದರ್ಭದಲ್ಲಿ ವಿಶ್ವದ ನಂಬರ್ ಒನ್ ವಿಕೆಟ್ ಕೀಪರ್ ಆಗಿರುವ ಧೋನಿ ಅವರು ವಿಶ್ವಕಪ್ ಟೂರ್ನಿಯಲ್ಲಿ ಭಾರತದ ತಂಡದಲ್ಲಿ ಇರುವುದು ನಮಗೆ ವರದಾನವಾಗಲಿದೆ ಎಂದು ಟೀಂ ಇಂಡಿಯಾ ಕ್ಯಾಪ್ಟನ್ ವಿರಾಟ್ ಕೊಹ್ಲಿ ಹೇಳಿದ್ದಾರೆ.

  • ಸಂಭ್ರಮದಲ್ಲಿ ರಿಷಬ್ ಪಂತ್ Kip-Up – ವಿಡಿಯೋ ವೈರಲ್

    ಸಂಭ್ರಮದಲ್ಲಿ ರಿಷಬ್ ಪಂತ್ Kip-Up – ವಿಡಿಯೋ ವೈರಲ್

    ಸಿಡ್ನಿ: ಆಸ್ಟ್ರೇಲಿಯಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಶತಕ ಸಿಡಿಸಿ ದಾಖಲೆ ಬರೆದಿರುವ ಟೀಂ ಇಂಡಿಯಾ ಯುವ ವಿಕೆಟ್ ಕೀಪರ್, ಬ್ಯಾಟ್ಸ್ ಮನ್ ರಿಷಬ್ ಪಂತ್ ಆನ್ ಫೀಲ್ಡ್ ನಲ್ಲೇ ಕಿಪ್ ಅಪ್ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ.

    2ನೇ ಟೆಸ್ಟ್ ಪಂದ್ಯದ ವೇಳೆ ರಿಷಬ್ ಪಂತ್ ಡ್ರಿಂಕ್ಸ್ ಬ್ರೇಕ್ ವೇಳೆ ವಿಶ್ರಾಂತಿಗಾಗಿ ಮೈದಾನದಲ್ಲೇ ಕೆಲ ಕ್ಷಣಗಳ ಕಾಲ ಮಲಗಿದ್ದರು. ಈ ವೇಳೆ ಏಕಾಏಕಿ ಕಿಪ್ ಅಪ್ ಮಾಡಿ ಎದ್ದು ನಿಂತಿದ್ದಾರೆ. ಈ ರೀತಿ ಕಿಪ್ ಅಪ್ ಮಾಡಬೇಕಾದರೆ ಅತ್ಯುತ್ತಮವಾದ ದೈಹಿಕ ಸಾಮರ್ಥ್ಯ ಹೊಂದಿದರೆ ಮಾತ್ರ ಸಾಧ್ಯವಾಗುತ್ತದೆ.

    ಪಂದ್ಯದ ಬಳಿಕ ಮಾತನಾಡಿದ ಪಂತ್, ನಾನು 90 ರನ್ ಗಳಿಸಿದ ವೇಳೆ ಕ್ಷಣ ಕಾಲ ಆತಂಕಕ್ಕೆ ಒಳಗಾಗಿದ್ದೆ. ಏಕೆಂದರೆ ವೆಸ್ಟ್ ಇಂಡೀಸ್ ವಿರುದ್ಧ ಪಂದ್ಯದ 2 ಇನ್ನಿಂಗ್ಸ್ ಗಳಲ್ಲಿ 92, 92 ರನ್ ಗಳಿಗೆ ಔಟಾಗಿದ್ದೆ. ಆದರೆ ಇಂದಿನ ಶತಕ ನನಗೆ ಮತ್ತಷ್ಟು ಆತ್ಮವಿಶ್ವಾಸ ನೀಡಿದೆ. ಶತಕ ಸಂಭ್ರಮದ ವೇಳೆ ಆ ಕ್ಷಣದಲ್ಲಿ ಏನು ತೋಚಿದೆಯೋ ಅದನ್ನು ಮಾಡಿದ್ದೇನೆ ಅಷ್ಟೇ ಎಂದು ತಿಳಿಸಿದ್ದಾರೆ. ಇದನ್ನು ಓದಿ: 15 ವರ್ಷಗಳ ಹಿಂದಿನ `ದಿ ವಾಲ್’ ದ್ರಾವಿಡ್ ದಾಖಲೆ ಮುರಿದ ಪೂಜಾರ

    21 ವರ್ಷದ ರಿಷಬ್ ಪಂತ್ ಅಜೇಯ 159 ರನ್ (189 ಎಸೆತ, 15 ಎಸೆತ, 1 ಸಿಕ್ಸರ್) ಸಿಡಿಸಿದ್ದು, ಈ ಮೂಲಕ ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾದ ನೆಲದಲ್ಲಿ ಭಾರತದ ಪರ ಶತಕ ಸಿಡಿಸಿದ ಮೊದಲ ವಿಕೆಟ್ ಕೀಪರ್ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ. ಅಲ್ಲದೇ ಆಸೀಸ್ ನೆಲದಲ್ಲಿ ಪ್ರವಾಸಿ ವಿಕೆಟ್ ಕೀಪರ್ ಸಿಡಿಸಿದ 2ನೇ ಅಧಿಕ ಮೊತ್ತವಾಗಿದೆ. 2012ರ ಪರ್ತ್ ಟೆಸ್ಟ್ ಪಂದ್ಯದಲ್ಲಿ ಎಬಿ ಡಿವಿಲಿಯರ್ಸ್ 169 ರನ್ ಸಿಡಿಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಒಂದೇ ಪಂದ್ಯದಲ್ಲಿ ನಾಲ್ಕು ದಾಖಲೆಗಳನ್ನು ನಿರ್ಮಿಸಿದ ಧೋನಿ!

    ಲಂಡನ್: ಭಾನುವಾರ ನಡೆದ ಇಂಗ್ಲೆಂಡ್ ತಂಡದ ವಿರುದ್ಧದ ಮೂರನೇ ಟಿ-20 ಪಂದ್ಯದಲ್ಲಿ ಭಾರತದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿಯವರು 4 ದಾಖಲೆಗಳನ್ನು ಬರೆದು ಇತಿಹಾಸ ನಿರ್ಮಿಸಿದ್ದಾರೆ.

    ಇಂಗ್ಲೆಂಡ್ ವಿರುದ್ಧದ ಕೊನೆಯ ಟಿ-20 ಪಂದ್ಯದಲ್ಲಿ 6 ಮಂದಿಯನ್ನು ಧೋನಿ ಔಟ್ ಮಾಡಿದ್ದಾರೆ. ಈ ಮೂಲಕ ಅಂತರಾಷ್ಟ್ರೀಯ ಟಿ-20ಯ ಒಂದೇ ಪಂದ್ಯದಲ್ಲಿಯೇ 6 ಮಂದಿಯನ್ನು ಔಟ್ ಮಾಡಿದ ಮೊದಲ ವಿಕೆಟ್ ಕೀಪರ್ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

    ಅಷ್ಟೇ ಅಲ್ಲದೇ ಅಂತರಾಷ್ಟ್ರೀಯ ಟಿ20 ಪಂದ್ಯವೊಂದರಲ್ಲಿ 5 ಕ್ಯಾಚ್ ಹಿಡಿದ ಮೊದಲ ಕೀಪರ್ ಎನ್ನುವ ದಾಖಲೆಯನ್ನು ಧೋನಿ ನಿರ್ಮಿಸಿದರು.

    ಇದಲ್ಲದೇ ಅಂತರಾಷ್ಟ್ರೀಯ ಟಿ-20 ಪಂದ್ಯಗಳಲ್ಲಿ 50 ಕ್ಯಾಚ್ ಹಿಡಿದ ಮೊದಲ ಕೀಪರ್ ಹಾಗೂ ಟಿ-20ಯಲ್ಲಿ 150 ಕ್ಯಾಚ್ ಪೂರೈಸಿದ ವಿಶ್ವದ ಮೊದಲನೇ ವಿಕೆಟ್ ಕೀಪರ್ ಎನ್ನುವ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ಈ ಮೂಲಕ ಒಂದೇ ಟಿ-20 ಪಂದ್ಯದಲ್ಲಿ ನಾಲ್ಕು ದಾಖಲೆಗಳನ್ನು ನಿರ್ಮಿಸುವ ಮೂಲಕ ಧೋನಿ ಇತಿಹಾಸ ನಿರ್ಮಿಸಿದ್ದಾರೆ.

  • ಧೋನಿಯ ಸರಳತೆಯನ್ನು ಹೊಗಳಿದ ಚಹಲ್

    ಧೋನಿಯ ಸರಳತೆಯನ್ನು ಹೊಗಳಿದ ಚಹಲ್

    ಮುಂಬೈ: ಸಂದರ್ಶನವೊಂದರಲ್ಲಿ ಸ್ಪಿನ್ನರ್ ಯಜುವೇಂದ್ರ ಚಹಲ್ ಧೋನಿಯವರ ಸರಳತೆಯನ್ನು ಕುರಿತು ಹಾಡಿ ಹೊಗಳಿದ್ದಾರೆ. ನಟ ಗೌರವ್ ಕಪೂರ್ ನಡೆಸಿಕೊಡುವ “ಬ್ರೇಕ್‍ಫಾಸ್ಟ್ ವಿತ್ ಚಾಂಪಿಯನ್ಸ್” ಸಂದರ್ಶನದಲ್ಲಿ ಮಾತನಾಡುವಾಗ ಧೋನಿಯವರ ಕುರಿತು ಕೆಲವು ನೆನಪುಗಳನ್ನು ಹಂಚಿಕೊಂಡಿದ್ದಾರೆ.

    ನನ್ನ ಜೀವನದ ಮರೆಯಲಾಗದ ಘಟನೆಯಂದರೆ ಕ್ರಿಕೆಟ್ ದಿಗ್ಗಜ ಧೋನಿಯವರಿಂದ ಏಕದಿನ ಪಂದ್ಯಕ್ಕೆ ಕ್ಯಾಪ್ ಪಡೆದಿದ್ದು, ನನ್ನ ಮೊದಲ ಏಕದಿನ ಪಂದ್ಯವನ್ನು ಇಂತಹ ದಿಗ್ಗಜ ಆಟಗಾರನೊಂದಿಗೆ ಆಟವಾಡಿದ್ದು ನನಗೆ ಹೆಮ್ಮೆ ಅನಿಸುತ್ತದೆ ಎಂದು ಹೇಳಿದರು.

    ಅಂದು ನನಗೆ ಧೋನಿಯವರ ಎದುರು ನಿಂತು ಮಾತನಾಡುವ ಅರ್ಹತೆ ಇರಲಿಲ್ಲ, ಆದರೆ ಅವರು ನನ್ನ ಜೊತೆ ಆತ್ಮೀಯವಾಗಿ ಮಾತನಾಡಿದ್ದರು. ಪಂದ್ಯದಲ್ಲಿ ಮೊದಲು ಅವರನ್ನು ಕಂಡಾಗ ನಾನು `ಸರ್’ ಎಂದು ಕರೆಯುತ್ತಿದ್ದೆ. ಪಂದ್ಯದ 2ನೇ ಓವರ್ ಮುಗಿದ ಬಳಿಕ ಅವರು ನನ್ನನ್ನು ಕರೆದು, ನನಗೆ ಸರ್ ಅಂತ ಕರೆಯಬೇಡ ಎಂದರು. ಸರ್ ಬದಲು ಮಾಹಿ, ಧೋನಿ, ಮಹೇಂದ್ರ ಸಿಂಗ್ ಧೋನಿ ಅಥವಾ ಭಾಯಿ ಅಂತ ನಿನಗೆ ಇಷ್ಟ ಆಗುತ್ತದೋ ಹಾಗೆ ಕರೆದು ಬಿಡು ಎಂದು ಹೇಳಿದ್ದರು. ಇದು ನನಗೆ ಅವರ ಮೇಲಿನ ಗೌರವ ಹೆಚ್ಚಾಗುವಂತೆ ಮಾಡಿತ್ತು ಎಂದು ಚಹಲ್ ತಿಳಿಸಿದರು.

    ಧೋನಿಯವರ ಈ ಸರಳತೆಯು ನನಗೆ ಸ್ಫೂರ್ತಿ ನೀಡಿತು, ಯಾವುದೇ ಆಟಗಾರರನ್ನು ಸಮಾನವಾಗಿ ನೋಡುವುದು ಧೋನಿ ಮಾತ್ರವೇ ಆದ್ದರಿಂದಲೇ ನಾನು ಅವರನ್ನು ಭಾಯಿ ಎಂದೇ ಕರೆಯುತ್ತೇನೆ ಎಂದರು. ಅಷ್ಟೇ ಅಲ್ಲದೇ ತಮ್ಮ ಎಲ್ಲಾ ಸಾಧನೆಗಳನ್ನು ಧೋನಿಯವರಿಗೆ ಅರ್ಪಿಸುತ್ತೇನೆ ಎಂದು ಈ ವೇಳೆ ಹೇಳಿದರು.

    27 ವರ್ಷದ ಯಜುವೇಂದ್ರ ಚಹಲ್, ಇಂದು ಭಾರತ ತಂಡದ ಪ್ರಮುಖ ಆಟಗಾರರಾಗಿದ್ದಾರೆ. ಇವರು ಕಳೆದ 12 ತಿಂಗಳಿಂದ ತಂಡದಲ್ಲಿ ಗುರುತಿಸಿಕೊಂಡಿದ್ದಾರೆ. 2016ರಲ್ಲಿ ನಡೆದ ಜಿಂಬಾಬೆ ವಿರುದ್ಧ ಪಂದ್ಯದಲ್ಲಿ ಪಾದಾರ್ಪಣೆ ಮಾಡಿದ್ದರು. ಚಹಲ್ ಲೆಗ್-ಸ್ಪಿನ್ನರ್ ಆಗಿದ್ದು, ಕಳೆದ ಒಂದು ವರ್ಷದಲ್ಲಿ ಹಲವು ವಿಕೆಟ್‍ಗಳನ್ನು ಪಡೆದು ಸೈ ಎನಿಸಿಕೊಂಡಿದ್ದಾರೆ. ಇವರ ಬೌಲಿಂಗ್ ದಾಳಿಗೆ ದಕ್ಷಿಣ ಆಫ್ರಿಕಾ ತಂಡ ತವರು ನೆಲದಲ್ಲಿಯೇ ತತ್ತರಿಸಿ ಹೋಗಿತ್ತು. ಶ್ರೀಲಂಕಾ ವಿರುದ್ದ ಉತ್ತಮ ಪ್ರದರ್ಶನ ನೀಡಿ, ಏಕದಿನ ಮತ್ತು ಟಿ-20ಗಳಲ್ಲಿ ಉತ್ತಮ ಸ್ಥಿರತೆ ಹೊಂದಿದ್ದರು.

    ಜಿಂಬಾಬ್ವೆ ಪ್ರವಾಸದ ಆಯ್ಕೆ ಸಂದರ್ಭದಲ್ಲಿ, ತಂಡದ ಪ್ರಮುಖ ಸ್ಪಿನ್ನರ್ ಗಳಾದ ರವೀಂದ್ರ ಜಡೇಜಾ ಮತ್ತು ಆರ್ ಅಶ್ವಿನ್‍ರವರು ಸತತ ಟೆಸ್ಟ್ ಪಂದ್ಯಗಳನ್ನಾಡಿ ವಿಶ್ರಾಂತಿ ಪಡೆದಿದ್ದರು. ಇವರ ಅನುಪಸ್ಥಿತಿಯಲ್ಲಿ ತಂಡಕ್ಕೆ ಭಾರೀ ನಷ್ಟವುಂಟಾಗಿತ್ತು. ಈ ಸಮಯದಲ್ಲಿ ಆಯ್ಕೆಗಾರರು ಎರಡನೇ ತಂಡದಲ್ಲಿದ್ದ ಹಲವು ಸದಸ್ಯರಲ್ಲಿ ಚಹಲ್‍ರನ್ನು ಆಯ್ಕೆಮಾಡಿದ್ದರು. ಚಹಲ್ ಆಯ್ಕೆಯಲ್ಲಿ ಮಹೇಂದ್ರ ಸಿಂಗ್ ಧೋನಿ ಪ್ರಮುಖ ಪಾತ್ರವಹಿಸಿದ್ದರು.

  • ಧೋನಿ, 2019ರ ವಿಶ್ವಕಪ್ ಆಡ್ತಾರಾ: ಆಯ್ಕೆ ಸಮಿತಿ ಅಧ್ಯಕ್ಷ ಎಂಎಸ್‍ಕೆ ಪ್ರಸಾದ್ ಹೇಳಿದ್ದು ಹೀಗೆ

    ಧೋನಿ, 2019ರ ವಿಶ್ವಕಪ್ ಆಡ್ತಾರಾ: ಆಯ್ಕೆ ಸಮಿತಿ ಅಧ್ಯಕ್ಷ ಎಂಎಸ್‍ಕೆ ಪ್ರಸಾದ್ ಹೇಳಿದ್ದು ಹೀಗೆ

    ಮುಂಬೈ: 2019ರ ವಿಶ್ವಕಪ್ ಟೂರ್ನಿಯಲ್ಲಿ ಮಾಜಿ ನಾಯಕ ಧೋನಿ ಆಡುವುದು ಖಚಿತ ಎಂದು ಬಿಬಿಸಿಐ ಆಯ್ಕೆ ಸಮಿತಿಯ ಅಧ್ಯಕ್ಷ ಎಂಎಸ್‍ಕೆ ಪ್ರಸಾದ್ ಸ್ಪಷ್ಟಪಡಿಸಿದ್ದಾರೆ.

    ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾ ತಂಡವನ್ನು ಪ್ರಕಟಿಸಿದ ನಂತರ ಮಾಧ್ಯಮ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಧೋನಿ ಟೀಂ ಇಂಡಿಯಾದಲ್ಲಿ 2019 ರ ವಿಶ್ವಕಪ್ ವರೆಗೂ ಮುಂದವರೆಯುತ್ತಾರೆ, ಅನಂತರದಲ್ಲಿ ಟೀಂ ಇಂಡಿಯಾದ ವಿಕೆಟ್ ಕೀಪರ್ ಯಾರಾಗಬೇಕು ಎನ್ನುವುದನ್ನು ನಿರ್ಧರಿಸಲಾಗುತ್ತದೆ ಎಂದರು. ಇದನ್ನೂ ಓದಿ: ಮೂರು ವರ್ಷದ ಬಳಿಕ ಟ್ವೀಟ್ ಲೈಕಿಸಿದ ಧೋನಿ: ಆ ಟ್ವೀಟ್ ನಲ್ಲಿ ಏನಿದೆ?

    ಧೋನಿ ವಿಶ್ವ ಕ್ರಿಕೆಟ್‍ನ ನಂ.1 ವಿಕೆಟ್ ಕೀಪರ್ ಎಂಬ ಹೆಗ್ಗಳಿಕೆ ಹೊಂದಿದ್ದಾರೆ. ಶ್ರೀಲಂಕಾ ಸರಣಿಯ ವೇಳೆಯೂ ಅವರು ವಿಕೆಟ್ ಹಿಂದೆ ಉತ್ತಮ ಪ್ರದರ್ಶನವನ್ನು ನೀಡಿದ್ದಾರೆ. ಪ್ರಸ್ತುತ ವಿಶ್ವ ಕ್ರಿಕೆಟ್‍ನಲ್ಲಿ ಧೋನಿ ಅವರಿಗೆ ಹೋಲಿಕೆ ಮಾಡುವಂತಹ ಯಾವ ಆಟಗಾರರು ಇಲ್ಲ ಎಂದು ಹೇಳಿದರು.

    ಈಗಾಗಲೇ ಟೀಂ ಇಂಡಿಯಾದ `ಎ’ ತಂಡದಲ್ಲಿ ಹಲವು ಮಂದಿ ಅವಕಾಶ ನೀಡಲಾಗಿದ್ದು ಅವರು ನಮ್ಮ ನಿರೀಕ್ಷೆಯ ಮಟ್ಟದಲ್ಲಿ ಪ್ರದರ್ಶನವನ್ನು ನೀಡುತ್ತಿಲ್ಲ ಎಂದರು.  ಇದನ್ನೂ ಓದಿ: 100 ಮೀಟರ್ ಓಡಿದ್ರು ಧೋನಿ, ಪಾಂಡ್ಯ: ವಿನ್ನರ್ ಯಾರು ಗೊತ್ತಾ?

    ಭಾರತದ ಕ್ರಿಕೆಟ್ ತಂಡ ವಿಕೆಟ್ ಕೀಪರ್ ಆಗಿ ಧೋನಿ ಹಲವು ದಾಖಲೆಗಳನ್ನು ಮಾಡಿದ್ದಾರೆ. ಆದರೆ ಧೋನಿ ಈಗಾಗಲೇ ಟೆಸ್ಟ್ ಕ್ರಿಕೆಟ್‍ಗೆ ನಿವೃತ್ತಿ ನೀಡಿದ್ದು, ಅವರ ನಂತರದಲ್ಲಿ ಟೀಂ ಇಂಡಿಯಾದ ಖಾಯಂ ವಿಕೆಟ್ ಕೀಪರ್ ಯಾರು ಎಂಬ ಚರ್ಚೆ ಆರಂಭವಾಗಿದೆ. ಪ್ರಸ್ತುತ ವಿಕೆಟ್ ಕೀಪರ್ ರೆಸ್‍ನಲ್ಲಿ ದೆಹಲಿ ತಂಡದ ನಾಯಕ ರಿಷಭ್ ಪಂತ್, 32 ವರ್ಷದ ದಿನೇಶ್ ಕಾರ್ತಿಕ್ ಹಾಗೂ ಸಂಜು ಸ್ಯಾಮ್ಸನ್ ಗುರುತಿಸಿಕೊಂಡಿದ್ದಾರೆ. ಇದನ್ನೂ ಓದಿ: ವಿರಾಟ್, ಧೋನಿ ನಡುವೆ ಹೊಂದಾಣಿಕೆ ಎಷ್ಟಿದೆ? ಕೊಹ್ಲಿಯ ಮಾತು ಕೇಳಿದ್ರೆ ನಿಮ್ಗೆ ಇಷ್ಟವಾಗುತ್ತೆ