Tag: ವಿಕೆ ಸಕ್ಸೇನಾ

  • ಸರ್ಕಾರಿ ಹಣದಲ್ಲಿ AAP ಜಾಹೀರಾತು – 97 ಕೋಟಿ ವಸೂಲಿಗೆ LG ಆದೇಶ

    ಸರ್ಕಾರಿ ಹಣದಲ್ಲಿ AAP ಜಾಹೀರಾತು – 97 ಕೋಟಿ ವಸೂಲಿಗೆ LG ಆದೇಶ

    ನವದೆಹಲಿ: ಸರ್ಕಾರಿ ಜಾಹೀರಾತು ಹೆಸರಿನಲ್ಲಿ ಆಮ್ ಆದ್ಮಿ ಪಕ್ಷ (AAP) ರಾಜಕೀಯ ಜಾಹೀರಾತುಗಳಿಗೆ ಬಳಸಿರುವ 97 ಕೋಟಿ ರೂ. ಹಣವನ್ನು ವಸೂಲಿ ಮಾಡುವಂತೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ (Lieutenant Governor VK Saxena) ಅವರು ಮುಖ್ಯ ಕಾರ್ಯದರ್ಶಿಗಳಿಗೆ ಮಂಗಳವಾರ ಆದೇಶ ನೀಡಿದ್ದಾರೆ.

    ದೆಹಲಿಯ ಆಡಳಿತಾರೂಢ ಆಪ್ ಸುಪ್ರೀಂ ಕೋರ್ಟ್‌ನ ಆದೇಶಗಳನ್ನು, 2016ರ ದೆಹಲಿ ಹೈಕೋಟ್ ಆದೇಶವನ್ನು ಹಾಗೂ 2016ರ ಸರ್ಕಾರಿ ಜಾಹೀರಾತುಗಳಲ್ಲಿ ವಿಷಯ ನಿಯಂತ್ರಣ ಸಮಿತಿ (CCRGA) ಆದೇಶಗಳನ್ನು ಉಲ್ಲಂಘಿಸಿದೆ ಎಂದು ಸಕ್ಸೇನಾ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಗಡಿ ವಿವಾದ – ಮಹಾರಾಷ್ಟ್ರ ಯಾವುದೇ ಕಾರಣಕ್ಕೂ ಹಿಂದೆ ಸರಿಯುವ ಪ್ರಶ್ನೆಯಿಲ್ಲ: ದೇವೇಂದ್ರ ಫಡ್ನವಿಸ್

    ಎಫ್ಟಿನೆಂಟ್ ಗವರ್ನರ್ ಸರ್ಕಾರ ಪ್ರಕಟಿಸಿರುವ ಕೆಲವು ನಿರ್ದಿಷ್ಟ ಜಾಹೀರಾತುಗಳನ್ನು ಗುರುತಿಸಿ, ಇದು ಮಾರ್ಗಸೂಚಿಗಳ ಸಂಪೂರ್ಣ ಉಲ್ಲಂಘನೆಯಾಗಿದೆ. ಅಂತಹ ಜಾಹೀರಾತುಗಳಿಗೆ ಖರ್ಚು ಮಾಡಿರುವ ಮೊತ್ತವನ್ನು ಲೆಕ್ಕ ಹಾಕಲು ಹಾಗೂ ಆಪ್ ನಿಂದ ವಸೂಲಿ ಮಾಡುವಂತೆ ಕಾರ್ಯದರ್ಶಿಗಳಿಗೆ ಸೂಚಿಸಲಾಗಿದೆ. ಇದನ್ನೂ ಓದಿ: ಕೊಟ್ಟ ಮಾತು ಉಳಿಸಿದ ಬಿಜೆಪಿ – ಸಭಾಪತಿ ಸ್ಥಾನಕ್ಕೆ ಹೊರಟ್ಟಿ ನಾಮಪತ್ರ ಸಲ್ಲಿಕೆ

    Live Tv
    [brid partner=56869869 player=32851 video=960834 autoplay=true]

  • ಸುದ್ದಿಗೋಷ್ಠಿ ವೇಳೆ ಮಾನನಷ್ಟ ನೋಟಿಸ್‍ನ್ನು ಹರಿದ ಆಪ್ ಸಂಸದ

    ಸುದ್ದಿಗೋಷ್ಠಿ ವೇಳೆ ಮಾನನಷ್ಟ ನೋಟಿಸ್‍ನ್ನು ಹರಿದ ಆಪ್ ಸಂಸದ

    ನವದೆಹಲಿ: ಖಾದಿ ಹಗರಣ ಹೇಳಿಕೆ ಹಿನ್ನೆಲೆಯಲ್ಲಿ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ(VK Saxena) ಅವರು ಕಳುಹಿಸಿದ್ದ ಮಾನನಷ್ಟ ನೋಟಿಸ್ (Defamation Notice)ಅನ್ನು ಆಮ್ ಆದ್ಮಿ ಪಕ್ಷದ(AAP) ಸಂಸದ ಸಂಜಯ್ ಸಿಂಗ್(Sanjay Singh) ಹರಿದು ಹಾಕಿದ್ದಾರೆ.

    ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತದ ಸಂವಿಧಾನವು ನನಗೆ ಸತ್ಯವನ್ನು ಮಾತನಾಡುವ ಹಕ್ಕನ್ನು ನೀಡಿದೆ. ರಾಜ್ಯಸಭೆಯ ಸದಸ್ಯನಾಗಿ ನನಗೆ ಸತ್ಯವನ್ನು ಮಾತನಾಡುವ ಹಕ್ಕಿದೆ. ಕಳ್ಳ, ಭ್ರಷ್ಟರು ಕಳುಹಿಸಿರುವ ಈ ನೋಟಿಸ್‍ಗೆ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ ಎಂದ ಅವರು ಅಲ್ಲೇ ಆ ನೋಟಿಸ್‍ನ್ನು ಹರಿದು ಹಾಕಿದ್ದಾರೆ. ನೋಟಿಸ್‍ನ್ನು ಹರಿದ ನಂತರ ಮಾತನಾಡಿದ ಅವರು, ನಾನು ಇಂತಹ ನೋಟಿಸ್‍ಗಳನ್ನು 10 ಬಾರಿ ಹರಿದು ಎಸೆಯಬಹುದು ಎಂದರು.

    ಈ ಹಿಂದೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್(Arvind Kejriwal) ನೇತೃತ್ವದ ಸರ್ಕಾರದಲ್ಲಿ ಸಚಿವರಾಗಿರುವ ಮನೀಶ್ ಸಿಸೋಡಿಯಾ(Manish Sisodia) ಮನೆ ಮೇಲೆ ಸಿಬಿಐ ದಾಳಿ ನಡೆಸಿತ್ತು. ಆ ಬಳಿಕ ಆಪ್‍ನ ಕೆಲ ನಾಯಕರು ಮಾತನಾಡಿ, ಕೇಂದ್ರ ಸರ್ಕಾರದಿಂದ ನೇಮಕಗೊಂಡಿರುವ ಲೆಫ್ಟಿನೆಂಟ್ ಗವರ್ನರ್ ಅವರು ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ನಿರ್ದೇಶನದ ಮೇರೆಗೆ ಈ ರೀತಿ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದ್ದರು. ಇದನ್ನೂ ಓದಿ: ಮಂಗೋಲಿಯಾ ಅಧ್ಯಕ್ಷನಿಂದ ರಾಜನಾಥ್ ಸಿಂಗ್‍ಗೆ ವಿಭಿನ್ನ ಉಡುಗೊರೆ

    ಅಷ್ಟೇ ಅಲ್ಲದೇ ಲೆಫ್ಟಿನೆಂಟ್ ಗವರ್ನರ್ ವಿರುದ್ಧ ಆಪ್ ಪಕ್ಷವು ಆರೋಪಗಳನ್ನು ಮಾಡಿದ್ದು, 2015 ರಿಂದ 2022ರ ಆರಂಭದವರೆಗೆ ಖಾದಿ ಮತ್ತು ಗ್ರಾಮೋದ್ಯೋಗ ಆಯೋಗದ (ಕೆವಿಐಸಿ) ಅಧ್ಯಕ್ಷರಾಗಿದ್ದಾಗ ಸಕ್ಸೇನಾ ಹಲವಾರು ಅಕ್ರಮಗಳನ್ನು ಮಾಡಿದ್ದಾರೆ. 2016ರಲ್ಲಿ 1400 ಕೋಟಿ ರೂ. ಹಾಗೂ ತಮ್ಮ ಸ್ಥಾನವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿದ್ದರು.

    ಈ ಹಿನ್ನೆಲೆಯಲ್ಲಿ ವಿಕೆ ಸಕ್ಸೇನಾ ಅವರು ಆಪ್ ಪಕ್ಷದ ಸಂಸದ ಸಂಜಯ್ ಸಿಂಗ್ ಮತ್ತು ದುರ್ಗೇಶ್ ಪಾಠಕ್, ಅತಿಶಿ, ಸೌರಭ್ ಭಾರದ್ವಾಜ್ ಮತ್ತು ಜಾಸ್ಮಿನ್ ಶಾ ಅವರಿಗೆ ಮಾನನಷ್ಟ ನೋಟಿಸ್‍ನ್ನು ಕಳುಹಿಸಿದ್ದರು. ಇದನ್ನೂ ಓದಿ: 2024ರ ಲೋಕಸಭೆ ಚುನಾವಣೆಗೆ ಬಿಜೆಪಿ ತಯಾರಿ ಹೇಗಿದೆ?- 144 ಕ್ಷೇತ್ರಗಳ ಮೇಲೆ ಮೋದಿ ಕಣ್ಣು

    Live Tv
    [brid partner=56869869 player=32851 video=960834 autoplay=true]