ಲಕ್ನೋ: ಮಾಜಿ ಸೇನಾ ಮುಖ್ಯಸ್ಥ ಮತ್ತು ಮಾಜಿ ಕೇಂದ್ರ ಸಚಿವ ವಿಕೆ ಸಿಂಗ್ ವಿರುದ್ಧ ಮಾನಹಾನಿಕರ ವಿಷಯವನ್ನು ಯೂಟ್ಯೂಬ್ ಸುದ್ದಿ ಪೋರ್ಟಲ್ನಲ್ಲಿ ಪ್ರಸಾರ ಮಾಡಿದ ಆರೋಪದ ಮೇಲೆ ಅದರ ಮಾಲೀಕನನ್ನು ಗಾಜಿಯಾಬಾದ್ ಪೊಲೀಸರು ಬಂಧಿಸಿದ್ದಾರೆ.
ಯೂಟ್ಯೂಬ್ನಲ್ಲಿ ಪ್ರಸಾರವಾದ ಮಾನಹಾನಿ ವಿಚಾರದಿಂದ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ನನ್ನ ಹೆಸರಿಗೆ ಕಳಂಕ ಬಂದಿದೆ ಎಂದು ದೂರಿನಲ್ಲಿ ಗಂಭೀರ ಆರೊಪ ಮಾಡಿದ್ದರು. ತಮ್ಮ ವಿರುದ್ಧ ಪ್ರಸಾರವಾದ ಸುದ್ದಿ `ಆಧಾರರಹಿತ’ ಎಂದು ವಿಕೆ ಸಿಂಗ್ ಉಲ್ಲೇಖಿಸಿದ್ದರು.
ಈ ಕೃತ್ಯವನ್ನು ಕ್ಷಮಿಸಲಾಗುವುದಿಲ್ಲ ಮತ್ತು ಇದು ನನ್ನ ಭಾವನೆಗಳಿಗೆ ತೀವ್ರ ನೋವುಂಟು ಮಾಡಿದೆ. ಇದರಿಂದ ಮಾನಸಿಕವಾಗಿ ನೊಂದಿದ್ದೇನೆ. ಇದನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ ಎಂದಿದ್ದರು.
ನವದೆಹಲಿ: ಪುಲ್ವಾಮಾ ಭಯೋತ್ಪಾದಕ ದಾಳಿ ಪ್ರತಿಕಾರವಾಗಿ ಭಾರತ ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿದ ದಾಳಿಯಲ್ಲಿ ಸುಮಾರು 250 ಉಗ್ರರು ಸಾವನ್ನಪ್ಪಿರುವ ಸಾಧ್ಯತೆ ಇದೆ ಎಂದು ರಕ್ಷಣಾಖಾತೆ ರಾಜ್ಯ ಸಚಿವ ವಿಕೆ ಸಿಂಗ್ ಹೇಳಿದ್ದಾರೆ.
ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಭಾರತೀಯ ವಾಯುಸೇನೆ ಪಾಕಿಸ್ತಾನ ಉಗ್ರ ನೆಲೆಗಳ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲಿ ಸುಮಾರು 250 ಉಗ್ರರು ಸಾವನ್ನಪ್ಪಿರುವ ಸಾಧ್ಯತೆ ಇದೆ. ಭಾರತ ಏರ್ ಸ್ಟ್ರೈಕ್ ಉಗ್ರರ ನೆಲೆಗಳ ಮೇಲೆ ಮಾತ್ರ ನಡೆಸುವ ಉದ್ದೇಶ ಹೊಂದಿತ್ತು. ಏಕೆಂದರೆ ಜನವಸತಿ ಪ್ರದೇಶದಲ್ಲಿ ದಾಳಿ ನಡೆಸಿದರೆ ನಾಗರಿಕರು ಸಾವನ್ನಪ್ಪುವ ಕಾರಣದಿಂದ ಈ ನಿರ್ಧಾರವನ್ನು ಕೈಗೊಳ್ಳಲಾಗಿತ್ತು. ಅದ್ದರಿಂದ ಜನವಸತಿಯಿಂದ ದೂರ ನಿರ್ಮಾಣ ಮಾಡಲಾಗಿದ್ದ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಲಾಗಿದೆ ಎಂದು ಸ್ಪಷ್ಟನೆ ನೀಡಿದರು.
#WATCH Union minister VK Singh on Congress leader Digvijaya Singh terming #Pulwama terrorist attack an “accident”,says, "With due respect, I would like to ask Digvijaya Singh Ji, was Rajiv Gandhi's assassination an accident or a terror incident?" pic.twitter.com/Sm1blc2Gjj
ಅಮಿತ್ ಶಾ 250 ಮಂದಿ ಸಾವನ್ನಪ್ಪಿದ್ದಾರೆ ಎಂದು ಹೇಳಿಕೆ ನೀಡಿದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಬಾಲಕೋಟ್ ಕಟ್ಟಡದಲ್ಲಿ ನೆಲೆಸಿದ್ದ ವ್ಯಕ್ತಿಗಳನ್ನು ಆಧಾರಿಸಿ ಅವರು ಹೇಳಿಕೆ ಕೊಟ್ಟಿದ್ದಾರೆ. ಅವರು ಅಧಿಕೃತವಾಗಿ 250 ಮಂದಿ ಸಾವನ್ನಪ್ಪಿದ್ದಾರೆ ಎಂದು ಹೇಳಿಲ್ಲ. ಅಷ್ಟು ಮಂದಿ ಸಾವನ್ನಪ್ಪಿರಬಹುದು ಎಂದು ಅಂದಾಜಿನಲ್ಲಿ ಹೇಳಿದ್ದಾರೆ ಅಷ್ಟೇ ಎಂದು ತಿಳಿಸಿದರು.
ಕಾಂಗ್ರೆಸ್ ಪಕ್ಷದ ವಕ್ತಾರರದ ದಿಗ್ವಿಜಯ್ ಸಿಂಗ್ ಏರ್ ಸ್ಟ್ರೈಕ್ ನಡೆಸಿರುವ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು. ಅಲ್ಲದೇ ಪುಲ್ವಾಮಾ ದಾಳಿ ಒಂದು ಘಟನೆ ಆಕ್ಸಿಡೆಂಟ್ ಮಾತ್ರ ಎಂದು ಶಂಕೆ ವ್ಯಕ್ತಪಡಿಸಿದ್ದರು. ಈ ಹೇಳಿಕೆಗೆ ವಿಕೆ ಸಿಂಗ್ ತಿರುಗೇಟು ನೀಡಿ ದಿಗ್ವಿಜಯ್ ಸಿಂಗ್ ಸೇರಿಂದತೆ ಏರ್ ಸ್ಟ್ರೈಕ್ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಬಗ್ಗೆ ಕಿಡಿಕಾರಿದ್ದಾರೆ. ನಾನು ದಿಗ್ವಿಜಯ್ ಸಿಂಗ್ರನ್ನು ಗೌರವದಿಂದ ಪ್ರಶ್ನೆ ಮಾಡುತ್ತಿದ್ದೇನೆ. ರಾಜೀವ್ ಗಾಂಧಿ ಅವರ ಹತ್ಯೆ ಅಪಘಾತವೇ ಅಥವಾ ಉಗ್ರರ ದಾಳಿಯೇ ಎಂದು ಪ್ರಶ್ನಿಸಿದರು.
Union minister VK Singh on Congress leader Digvijay Singh terming #Pulwama terrorist attack an “accident”, in Ranchi: With due respect, I would like to ask Digvijaya Singh Ji, was Rajiv Gandhi's assassination an accident or a terror incident? pic.twitter.com/EJNQTqicS4
ಗುಜರಾತ್ನಲ್ಲಿ ಮಾತನಾಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಅಮಿತ್ ಶಾ, ಭಾರತದ ವಾಯುಪಡೆ ಬಾಲಕೋಟ್ ಮೇಲೆ ನಡೆಸಿದ ದಾಳಿಯಲ್ಲಿ 250ಕ್ಕೂ ಹೆಚ್ಚು ಉಗ್ರರು ಸಾವನ್ನಪ್ಪಿದ್ದಾರೆ. ಉರಿಯಲ್ಲಿ ಉಗ್ರರ ದಾಳಿ ಬಳಿಕ ಭಾರತ ಪ್ರತೀಕಾರವಾಗಿ ಸರ್ಜಿಕಲ್ ಸ್ಟ್ರೈಕ್ ನಡೆಸಿತ್ತು. ಪುಲ್ವಾಮಾ ದಾಳಿ ಬಳಿಕ ಪಾಕಿಸ್ತಾನದ ಉಗ್ರರು ಅಲರ್ಟ್ ಆಗಿದ್ದರಿಂದ ವಾಯು ದಾಳಿ ನಡೆಸಲಾಗಿದೆ. ಪುಲ್ವಾಮಾ ದಾಳಿಯ ಬಳಿಕ ಫೆಬ್ರವರಿ 26 ರಂದು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಏರ್ ಸ್ಟ್ರೈಕ್ ನಡೆಸಲು ಅನುಮತಿ ನೀಡಿತ್ತು. ಭಾರತ ಯಶಸ್ವಿಯಾಗಿ ಉಗ್ರರ ತಾಣಗಳನ್ನು ಯಶಸ್ವಿಯಾಗಿ ಧ್ವಂಸಗೊಳಿಸಿ ಯಾವುದೇ ಹಾನಿಗೆ ಒಳಗಾಗದೇ ಭಾರತಕ್ಕೆ ಹಿಂದಿರುಗಿತ್ತು ಎಂದು ಹೇಳಿದ್ದರು.
ಏರ್ ಸ್ಟ್ರೈಕ್ ನಲ್ಲಿ ಎಷ್ಟು ಮಂದಿ ಸಾವನ್ನಪ್ಪಿದ್ದಾರೆ ಎನ್ನುವ ಪ್ರಶ್ನೆಗೆ ವಾಯುಸೇನೆ ಉತ್ತರ ನೀಡಿರಲಿಲ್ಲ. ಏರ್ ಚೀಫ್ ಮಾರ್ಷಲ್ ಧನೋವಾ ಅವರು ಸತ್ತವರ ಹೆಣವನ್ನು ಲೆಕ್ಕಹಾಕುವುದು ನಮ್ಮ ಕೆಲಸವಲ್ಲ. ನಮಗೆ ಏನು ಗುರಿಯನ್ನು ನೀಡಲಾಗಿತ್ತೋ ಆ ಗುರಿಯನ್ನು ಯಶಸ್ವಿಯಾಗಿ ಹೊಡೆದು ಹಾಕಿದ್ದೇವೆ ಎಂದು ಹೇಳಿದ್ದರು.
ಕೇಂದ್ರ ಸರ್ಕಾರ ಅಧಿಕೃತವಾಗಿ ಎಷ್ಟು ಮಂದಿ ಉಗ್ರರು ಸಾವನ್ನಪ್ಪಿದ್ದಾರೆ ಎನ್ನುವುದನ್ನು ತಿಳಿಸಿರಲಿಲ್ಲ. ಈ ಮಧ್ಯೆ ಅಮಿತ್ ಶಾ 250 ಮಂದಿ ಸಾವನ್ನಪ್ಪಿದ್ದಾರೆ ಎಂದು ಹೇಳಿಕೆ ನೀಡಿದ್ದರು. ಹೀಗಾಗಿ ಕಾಂಗ್ರೆಸ್ ನಾಯಕರು ಕಿಡಿಕಾರಿ, ದೇಶದ ರಕ್ಷಣಾ ಮಾಹಿತಿ ಬಿಜೆಪಿ ಪಕ್ಷದ ಅಧ್ಯಕ್ಷರ ಕೈಗೆ ಹೇಗೆ ಸಿಕ್ಕಿತ್ತು ಎಂದು ಪ್ರಶ್ನಿಸಿದ್ದರು. ಈಗ ಏರ್ ಸ್ಟ್ರೈಕ್ ನಡೆದ ಬಳಿಕ ಇದೇ ಮೊದಲ ಬಾರಿಗೆ ವಿಕೆ ಸಿಂಗ್ 250 ಮಂದಿ ಮೃತಪಟ್ಟಿದ್ದಾರೆ ಎಂದು ಹೇಳುವ ಮೂಲಕ ಕೇಂದ್ರ ಸರ್ಕಾರ ನೀಡಬೇಕಾದ ಉತ್ತರವನ್ನು ನೀಡಿದ್ದಾರೆ.
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಸಿಎಂ ಯಡಿಯೂರಪ್ಪ ಬಿಜೆಪಿಯ ಮರ್ಯಾದೆಯನ್ನು ರಾಷ್ಟ್ರ ಮಟ್ಟದಲ್ಲಿ ಹರಾಜು ಹಾಕಿದ್ದಾರೆ. ಆದರೆ ಈ ಹೇಳಿಕೆಯ ಕಸಿವಿಸಿ ಬಿಜೆಪಿ ರಾಷ್ಟ್ರ ಮಟ್ಟದ ನಾಯಕರಿಗೆ ಆಗಿದೆ ಎಂದು ಅರಿವಾಗುತ್ತಿದ್ದಂತೆಯೇ, ಬಿ.ಎಸ್.ವೈ ಈಗ ತಮ್ಮ ಮೇಲಿನ ಆರೋಪವನ್ನು ಮಾಧ್ಯಮಗಳ ಮೇಲೆ ಹಾಕುವ ಯತ್ನ ಮಾಡಿದ್ದಾರೆ. ಆದರೆ ಯಡಿಯೂರಪ್ಪನವರೇ ನೀವು ನಿನ್ನೆ ಅರ್ಥಾತ್ ಬುಧವಾರ ಏನು ಮಾತಾಡಿದ್ದೀರಿ ಎಂದು ನಿಮಗೆ ಮರೆತಿದ್ದರೆ ನಿನ್ನೆ ನೀವು ಚಿತ್ರದುರ್ಗದಲ್ಲಿ ಏನ್ ಹೇಳಿದ್ರಿ ಅನ್ನೋದನ್ನು ನೀವೇ ಒಂದ್ಸಾರಿ ಕೇಳಿಸಿಕೊಳ್ಳಿ.
ರಾಷ್ಟ್ರಮಟ್ಟದಲ್ಲಿ ಬಿಜೆಪಿ ನಾಯಕರು ತಲೆ ತಗ್ಗಿಸುವಂತಹ ಹೇಳಿಕೆ ನೀಡಿದ ಯಡಿಯೂರಪ್ಪ ಅವರು ಇಂದು ಟ್ವಿಟ್ಟರ್ ನಲ್ಲಿ, ನನ್ನ ಹೇಳಿಕೆಯನ್ನು ಬೇರೆ ರೀತಿ ಅರ್ಥೈಸಲಾಗಿದೆ. ನಾನು ಪರಿಸ್ಥಿತಿ ಬಿಜೆಪಿ ಪರವಾಗಿದೆ ಅಂತಾ ಹೇಳಿದ್ದೇನೆ. ಇದನ್ನ ನಾನು ಹಲವು ತಿಂಗಳಿನಿಂದ ಹೇಳುತ್ತಾ ಬಂದಿದ್ದೇನೆ. ಮೋದಿ ನಾಯಕತ್ವದಲ್ಲಿ ಕನಿಷ್ಠ 22 ಸೀಟು ಗೆಲ್ಲುವುದಾಗಿ ಹೇಳುತ್ತಿದ್ದೇನೆ. ಈ ರೀತಿ ನಾನು ಹೇಳಿರೋದು ಇದೇ ಮೊದಲಲ್ಲ ಎಂದು ಟ್ವೀಟ್ ಮಾಡಿ ಸ್ಪಷ್ಟನೆ ನೀಡಿದರು.
My statement is being reported out of context. I said that ‘situation favourable for BJP’ which i am saying for last couple of months. This is not first time that i said BJP in Karnataka will win minimum 22 seats under the able leadership of Modi ji.
ಆದರೆ ಈ ಟ್ವೀಟ್ ಮಾಡುವುದಕ್ಕೂ ಮುನ್ನ ಇಂದು ಯಾದಗಿರಿಯಲ್ಲಿದ್ದ ಯಡಿಯೂರಪ್ಪ, ನಾನು ಏನೂ ಪ್ರತಿಕ್ರಿಯೆ ನೀಡಲು ಇಷ್ಟಪಡುವುದಿಲ್ಲ ಎಂದು ಹೇಳಿದ್ದರು. ಇದಾಗಿ ಗಂಟೆಗಳು ಕಳೆಯುವ ಮುನ್ನವೇ ನಿನ್ನೆ ನೀಡಿದ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎನ್ನುತ್ತಿದ್ದಾರೆ.
https://www.youtube.com/watch?v=LLIlyAySnxg
ಈ ಎಲ್ಲದರ ನಡುವೆಯೇ ವಿದೇಶಾಂಗ ಇಲಾಖೆಯ ರಾಜ್ಯ ಸಚಿವರಾಗಿರುವ ವಿ.ಕೆ.ಸಿಂಗ್ ಅವರು ಟ್ವಿಟ್ಟರ್ ನಲ್ಲೇ ಯಡಿಯೂರಪ್ಪಗೆ ಮಂಗಳಾರತಿ ಮಾಡಿದ್ದಾರೆ. ನಮ್ಮ ದೇಶದ ಕಾರ್ಯಾಚರಣೆ ಚುನಾವಣೆಯಲ್ಲಿ ಕೆಲವು ಎಕ್ಸ್ ಟ್ರಾ ಸೀಟುಗಳನ್ನು ಗೆಲ್ಲಲು ಮಾಡಿದ್ದಲ್ಲ. ನಾವೆಲ್ಲಾ ಜೊತೆಯಾಗಿದ್ದೇವೆ. ದೇಶದ ಹಿತದೃಷ್ಟಿಯಿಂದ ಹಾಗೂ ಜನರ ಸುರಕ್ಷತೆಗಾಗಿ ನಾವು ಈ ಕಾರ್ಯಾಚರಣೆ ಮಾಡಿದ್ದೇವೆ ಎಂದು ಯಡಿಯೂರಪ್ಪ ಅವರ ಹೇಳಿಕೆಯನ್ನು ಖಂಡಿಸಿದ್ದರು.
.@BSYBJP ji, I beg to differ. We stand as one nation, action taken by our government is to safeguard our nation & ensure safety of our citizens, not to win a few extra seats. https://t.co/V06LBMAJH3
ಅಲ್ಲದೆ ಇದರ ಜೊತೆಗೆ ಮಾಜಿ ಪ್ರಧಾನಿ ವಾಜಪೇಯಿಯವರು ಲೋಕಸಭೆಯಲ್ಲಿ ಮಾಡಿದ್ದ ಭಾಷಣದ ತುಣುಕು ಇರುವ ಯೂಟ್ಯೂಬ್ ಲಿಂಕ್ ಹಾಕಿದ್ದರು. ಅಂದಿನ ಭಾಷಣದಲ್ಲಿ ಮೋದಿಯವರು ಏನು ಹೇಳಿದ್ದರು ಎಂಬುದನ್ನೂ ಒಂದು ಸಾರಿ ಕೇಳಿಸ್ಕೊಳ್ಳಿ.
ಈ ಮಧ್ಯೆ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು, ಇಡೀ ದೇಶ ಕೇಂದ್ರ, ಸೇನೆಗೆ ಬೆಂಬಲಿಸುತ್ತಿದೆ. ಆದರೆ ಬಿಜೆಪಿ ನಾಯಕರು ಲೆಕ್ಕಾಚಾರದಲ್ಲಿ ತೊಡಗಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ವೈ ಹೆಚ್ಚು ಸೀಟಿನ ಲೆಕ್ಕಾಚಾರದಲ್ಲಿದ್ದಾರೆ. ಉಗ್ರರ ದಾಳಿ, ಯುದ್ಧವನ್ನು ಇಟ್ಟುಕೊಂಡು ರಾಜಕೀಯ ಮಾಡುತ್ತಿದೆ. ಇದು ನಾಚಿಕೆಗೇಡಿನ ವಿಚಾರ. ಸೈನಿಕರಿಗೆ ಮಾಡುತ್ತಿರುವ ಅವಮಾನ ಎಂದು ಯಡಿಯೂರಪ್ಪರನ್ನು ಟ್ವೀಟ್ ನಲ್ಲಿ ಕುಟುಕಿದ್ದರು.
The entire nation is united in supporting the central govt&our armed forces to fight terrorism,while #Bjp leader @BSYBJP is busy calculating howmany extra LS seats the terror attack&Pak war can bring to his party. It's shameful to exploit our jawans' sacrifice for electoral gains
— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) February 28, 2019
ಈ ಎಲ್ಲ ಬೆಳವಣಿಗೆಗಳ ನಡುವೆಯೇ ಯಡಿಯೂರಪ್ಪ ಅವರ ಟ್ವಿಟ್ಟರ್ ಖಾತೆಯಲ್ಲಿ ನಾನು ಹಾಗೆ ಹೇಳಿದ್ದಲ್ಲ ಎಂಬ ಟ್ವೀಟ್ ಕಾಣಿಸಿಕೊಂಡಿದೆ. ಯಡಿಯೂರಪ್ಪ ಅವರ 22 ಸೀಟಿನ ಹೇಳಿಕೆಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿದೆ.