Tag: ವಿಕ್ಟರಿ ಪರೇಡ್‌

  • ಬೆಂಗಳೂರಿಗೆ ʻರಾಯಲ್‌ʼ ಆಗಿ ಎಂಟ್ರಿ ಕೊಟ್ಟ ಆರ್‌ಸಿಬಿ ತಂಡ

    ಬೆಂಗಳೂರಿಗೆ ʻರಾಯಲ್‌ʼ ಆಗಿ ಎಂಟ್ರಿ ಕೊಟ್ಟ ಆರ್‌ಸಿಬಿ ತಂಡ

    ಬೆಂಗಳೂರು: ಐಪಿಎಲ್ 2025ರ ಫೈನಲ್ (IPL 2025 Final) ಪಂದ್ಯದಲ್ಲಿ ಕಪ್ ಗೆದ್ದ ಆರ್‌ಸಿಬಿ (RCB) ತಂಡ ಅಭಿಮಾನಿಗಳೊಂದಿಗೆ ವಿಜಯೋತ್ಸವ ಆಚರಿಸಲು ತವರಿಗೆ ಬಂದಿಳಿದಿದೆ. ಹೆಚ್‌ಎಎಲ್‌ಗೆ ವಿಶೇಷ ವಿಮಾನದಲ್ಲಿ ಆರ್‌ಸಿಬಿ ಆಟಗಾರರು ಬಂದಿಳಿದಿದ್ದು, ಜೊತೆಗೆ ಎಬಿಡಿ ಹಾಗೂ ಕ್ರಿಸ್ ಗೇಲ್ ಸಹ ಬಂದಿದ್ದಾರೆ. ಕೊಹ್ಲಿಯವರಿಗೆ ಡಿಸಿಎಂ ಡಿ.ಕೆ ಶಿವಕುಮಾರ್‌ ಬಾವುಟ ನೀಡಿ ಸ್ವಾಗತ ಕೋರಿದ್ದಾರೆ.

    ಅಹಮದಾಬಾದ್‌ನಿಂದ ವಿಶೇಷ ವಿಮಾನದಲ್ಲಿ ಆರ್‌ಸಿಬಿ ಆಟಗಾರರು ಹೊರಟು ಮಧ್ಯಾಹ್ನ 2:10ಕ್ಕೆ ಬೆಂಗಳೂರು ಹೆಚ್‌ಎಎಲ್ ವಿಮಾನ ನಿಲ್ದಾಣ ತಲುಪಿದ್ದಾರೆ. ಇಲ್ಲಿಂದ ಆರ್‌ಸಿಬಿ ತಂಡ ತಾಜ್ ವೆಸ್ಟೆಂಡ್ ಹೋಟೆಲ್‌ಗೆ ತೆರಳಲಿದೆ. ಇಲ್ಲಿ ವಿಶ್ರಾಂತಿ ಪಡೆದ ಬಳಿಕ ಸಂಜೆ 4 ಗಂಟೆಗೆ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಟ್ರೋಫಿ ನೀಡಲಿದೆ. ಇದನ್ನೂ ಓದಿ: ಇಂದು ಸಂಜೆ ಬೆಂಗಳೂರಿನಲ್ಲಿ ಆರ್‌ಸಿಬಿ ವಿಕ್ಟರಿ ಪರೇಡ್

    ಸಿಎಂ ಭೇಟಿ ಬಳಿಕ 5 ಗಂಟೆಗೆ ವಿಧಾನಸೌಧದಿಂದ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ (Chinnaswamy Stadium) ತೆರಳಿ, ಆರ್‌ಸಿಬಿ ತಂಡದ ಪರೇಡ್ ನಡೆಯಲಿದೆ. 6 ಗಂಟೆಗೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭ್ರಮಾಚರಣೆ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಆರ್‌ಸಿಬಿ ಅಭಿಮಾನಿಗಳು ಪಾಲ್ಗೊಳ್ಳಲಿದ್ದಾರೆ.

    ಅಧಿಕೃತ ಟಿಕೆಟ್‌ ಮತ್ತು ಪಾಸ್‌ ಹೊಂದಿದವರಿಗೆ ಮಾತ್ರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ (Chinnaswamy Stadium) ಆರ್‌ಸಿಬಿ (RCB) ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಲು ಅನುಮತಿ ನೀಡಲಾಗುತ್ತದೆ. ಚಿನ್ನಸ್ವಾಮಿ ಕ್ರೀಡಾಂಗಣದತ್ತ ಸಾಕಷ್ಟು ಸಂಖ್ಯೆಯಲ್ಲಿ ಅಭಿಮಾನಿಗಳು ಬರುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸರು ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಇದನ್ನೂ ಓದಿ: ಮಾರ್ಚ್‌ನಲ್ಲಿ ಸ್ಕ್ರಿಪ್ಟ್‌ ಬರೆದು ಜೂನ್‌ನಲ್ಲಿ ‘ಪಿಕ್ಚರ್‌’ ತೆಗೆದ ಜಿತೇಶ್‌ ಶರ್ಮಾ!

  • ಮಧ್ಯಾಹ್ನ ಬೆಂಗಳೂರಿಗೆ ಚಾಂಪಿಯನ್ಸ್ – ಸಂಜೆ ವಿಜಯೋತ್ಸವ ಮೆರವಣಿಗೆ | ಎಷ್ಟು ಗಂಟೆಗೆ ಏನು?

    ಮಧ್ಯಾಹ್ನ ಬೆಂಗಳೂರಿಗೆ ಚಾಂಪಿಯನ್ಸ್ – ಸಂಜೆ ವಿಜಯೋತ್ಸವ ಮೆರವಣಿಗೆ | ಎಷ್ಟು ಗಂಟೆಗೆ ಏನು?

    ಬೆಂಗಳೂರು: ಐಪಿಎಲ್ 2025 ಫೈನಲ್ (IPL 2025 Final) ಪಂದ್ಯದಲ್ಲಿ ಗೆದ್ದು ಕಪ್ ಎತ್ತಿಹಿಡಿದ ಆರ್‌ಸಿಬಿ (RCB) ತಂಡ ಅಭಿಮಾನಿಗಳೊಂದಿಗೆ ವಿಜಯೋತ್ಸವ ಆಚರಿಸುವ ಸಲುವಾಗಿ ತವರೂರು ಬೆಂಗಳೂರಿಗೆ (Bengaluru) ಆಗಮಿಸಲಿದೆ. ಅಹಮದಾಬಾದ್‌ನಿಂದ ವಿಶೇಷ ವಿಮಾನದಲ್ಲಿ ಆರ್‌ಸಿಬಿ ಆಟಗಾರರು ಹೊರಟು ಮಧ್ಯಾಹ್ನ 1:30ರ ವೇಳೆಗೆ ಬೆಂಗಳೂರು ಹೆಚ್‌ಎಎಲ್ ವಿಮಾನ ನಿಲ್ದಾಣ ತಲುಪಲಿದ್ದಾರೆ.

    ವಿಮಾನ ನಿಲ್ದಾಣದಲ್ಲಿ ಇಳಿದ ಬಳಿಕ ಆರ್‌ಸಿಬಿ ತಂಡ ತಾಜ್ ವೆಸ್ಟೆಂಡ್ ಹೋಟೆಲ್‌ಗೆ ತೆರಳಲಿದೆ. ಇಲ್ಲಿ ವಿಶ್ರಾಂತಿ ಪಡೆದ ಬಳಿಕ ಸಂಜೆ 4 ಗಂಟೆಗೆ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಟ್ರೋಫಿ ನೀಡಲಿದೆ. ಸಿಎಂ ಭೇಟಿ ಬಳಿಕ 5 ಗಂಟೆಗೆ ವಿಧಾನಸೌಧದಿಂದ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ (Chinnaswamy Stadium) ಓಪನ್-ಟಾಪ್ ಬಸ್ ಮೂಲಕ ಆರ್‌ಸಿಬಿ ತಂಡದ ಪರೇಡ್ ನಡೆಯಲಿದೆ. ಸುಮಾರು 1 ಕಿ.ಮೀ ವಿಜಯಯಾತ್ರೆ ನಡೆಸಲು ಸಿದ್ಧತೆ ನಡೆದಿದೆ. ಇದನ್ನೂ ಓದಿ: ಕೊಹ್ಲಿಗೆ ಎಚ್ಚರಿಕೆ ನೀಡದ ಅಂಪೈರ್‌ ವಿರುದ್ಧ ಗವಾಸ್ಕರ್ ಗರಂ

    ಸಾರ್ವಜನಿಕ ಮೆರವಣಿಗೆ ಬಳಿಕ 6 ಗಂಟೆಗೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭ್ರಮಾಚರಣೆ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಆರ್‌ಸಿಬಿ ಅಭಿಮಾನಿಗಳು ಪಾಲ್ಗೊಳ್ಳಲಿದ್ದಾರೆ. ಇದನ್ನೂ ಓದಿ: ಇಂದು ಸಂಜೆ ಬೆಂಗಳೂರಿನಲ್ಲಿ ಆರ್‌ಸಿಬಿ ವಿಕ್ಟರಿ ಪರೇಡ್

  • ಇಂದು ಸಂಜೆ ಬೆಂಗಳೂರಿನಲ್ಲಿ ಆರ್‌ಸಿಬಿ ವಿಕ್ಟರಿ ಪರೇಡ್

    ಇಂದು ಸಂಜೆ ಬೆಂಗಳೂರಿನಲ್ಲಿ ಆರ್‌ಸಿಬಿ ವಿಕ್ಟರಿ ಪರೇಡ್

    ಬೆಂಗಳೂರು: ಆರ್‌ಸಿಬಿಯ (RCB) ಬೆಂಗಳೂರಿನ ಅಭಿಮಾನಿಗಳಿಗೆ ಸಿಹಿ ಸುದ್ದಿ. 18 ವರ್ಷಗಳ ಕನಸು ನನಸಾದ ಬೆನ್ನಲ್ಲೇ ಇಂದು ಸಂಜೆ ಬೆಂಗಳೂರಿನಲ್ಲಿ (Bengaluru) ಆರ್‌ಸಿಬಿಯ ವಿಕ್ಟರಿ ಪರೇಡ್‌ (RCB Victory Parade) ನಡೆಯಲಿದೆ.

    ಅಧಿಕೃತವಾಗಿ ಆರ್‌ಸಿಬಿ ಈ ವಿಚಾರವನ್ನು ತಿಳಿಸಿದ್ದು ಮಧ್ಯಾಹ್ನ 3:30ಕ್ಕೆ ವಿಧಾನಸೌಧದಿಂದ ವಿಜಯೋತ್ಸವ ಮೆರವಣಿಗೆ ಆರಂಭಗೊಳ್ಳಲಿದ್ದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕೊನೆಯಾಗಲಿದೆ. ಈ ಬಗ್ಗೆ ಶೀಘ್ರವೇ ಮತ್ತಷ್ಟು ಮಾಹಿತಿಯನ್ನು ನೀಡಲಾಗುವುದು ಎಂದು ಆರ್‌ಸಿಬಿ ತಿಳಿಸಿದೆ. ಇದನ್ನೂ ಓದಿ: IPL 2025 – ಫೈನಲ್ ಪಂದ್ಯದ ‘ಲಕ್ಕಿ ಕ್ರಿಕೆಟರ್’ ಹೇಜಲ್‌ವುಡ್

    ಫೈನಲ್‌ ಪಂದ್ಯ ಗೆದ್ದ ಬಳಿಕ ವಿರಾಟ್‌ ಕೊಹ್ಲಿ ಬೆಂಗಳೂರಿನಲ್ಲಿ ವಿಕ್ಟರಿ ಪರೇಡ್‌ ನಡೆಸಲಾಗುವುದು ಎಂದು ತಿಳಿಸಿದ್ದರು. ಇದನ್ನೂ ಓದಿ: UnSold ಪ್ಲೇಯರ್‌, ಟೂರ್ನಿ ಅರ್ಧದಲ್ಲೇ ಸೇರ್ಪಡೆ, ಸ್ಫೋಟಕ ಶತಕ ಸಿಡಿಸಿ ದಾಖಲೆ – ಈಗ ಆರ್‌ಸಿಬಿಯ ಯಶಸ್ವಿ ನಾಯಕ

    ಅಭಿಮಾನಿಗಳನ್ನು 12ನೇ ಸೇನೆ ಎಂದೇ ಆರ್‌ಸಿಬಿ ಕರೆಯುತ್ತಿದೆ. ಈ ಕಿರೀಟ ನಿಮಗೆ ಸೇರಿದ್ದು ಎಂದು ಹೇಳಿದೆ.