Tag: ವಿಜಯಕುಮಾರ್

  • ಗುಂಡು ಹಾರಿಸಿಕೊಂಡು ಕೊಯಮತ್ತೂರು ಡಿಐಜಿ ಆತ್ಮಹತ್ಯೆ

    ಗುಂಡು ಹಾರಿಸಿಕೊಂಡು ಕೊಯಮತ್ತೂರು ಡಿಐಜಿ ಆತ್ಮಹತ್ಯೆ

    ಚೆನ್ನೈ: ಕೊಯಮತ್ತೂರು ಪೊಲೀಸ್ ಉಪ ಮಹಾನಿರೀಕ್ಷಕ (Coimbatore DIG) ವಿಜಯಕುಮಾರ್ (IPS) ತಮ್ಮ ಅಧಿಕೃತ ನಿವಾಸದಲ್ಲಿ ಶುಕ್ರವಾರ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

    ಶುಕ್ರವಾರ ಬೆಳಗ್ಗೆ ಸುಮಾರು 6:15ರ ವೇಳೆಗೆ ವಿಜಯಕುಮಾರ್ ರೇಸ್ ಕೋರ್ಸ್ ಬಳಿಯ ರೆಡ್ ಫೀಲ್ಡ್ಸ್‌ನಲ್ಲಿರುವ ತಮ್ಮ ಅಧಿಕೃತ ನಿವಾಸದಲ್ಲಿ ಕರ್ತವ್ಯದಲ್ಲಿದ್ದ ಗನ್‌ಮ್ಯಾನ್‌ನಿಂದ ಪಿಸ್ತೂಲ್ ಅನ್ನು ಪಡೆದು ತನಗೆ ತಾನೇ ಗುಂಡು ಹಾರಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ವಿಜಯಕುಮಾರ್ (Vijayakumar) ತೀವ್ರ ಖಿನ್ನತೆಗೆ ಒಳಗಾಗಿದ್ದರು ಹಾಗೂ ನಿದ್ರಾಹೀನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಅವರಿಗೆ ಕೌನ್ಸೆಲಿಂಗ್ ಕೂಡಾ ನಡೆಯುತ್ತಿತ್ತು ಹಾಗೂ ಕೆಲ ದಿನಗಳ ಹಿಂದಷ್ಟೇ ಅವರ ಕುಟುಂಬವನ್ನು ಚೆನ್ನೈಯಿಂದ ಕೊಯಮತ್ತೂರಿಗೆ ಕರೆತರಲಾಗಿತ್ತು. ಇದನ್ನೂ ಓದಿ: ನಿತ್ಯಾನಂದನ ಕೈಲಾಸ ದೇಶಕ್ಕೆ ನಟಿ ರಂಜಿತಾ ಪ್ರಧಾನಿ

    2009ರ ಬ್ಯಾಚ್‌ನ ಐಪಿಎಸ್ ಅಧಿಕಾರಿ ವಿಜಯಕುಮಾರ್ ಅವರು ಈ ವರ್ಷದ ಜನವರಿಯಲ್ಲಿ ಕೊಯಮತ್ತೂರು ವ್ಯಾಪ್ತಿಯ ಡಿಐಜಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. ಇದಕ್ಕೂ ಮೊದಲು ಅವರು ಕಾಂಚೀಪುರಂ, ಕಡಲೂರು, ನಾಗಪಟ್ಟಿಣಂ ಮತ್ತು ತಿರುವರೂರಿನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಹಾಗೂ ಅಣ್ಣಾನಗರದ ಉಪ ಪೊಲೀಸ್ ಆಯುಕ್ತರಾಗಿ ಸೇವೆ ಸಲ್ಲಿಸಿದ್ದರು.

    ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಟ್ವೀಟ್ ಮಾಡಿ, ಅಧಿಕಾರಿ ವಿಜಯಕುಮಾರ್ ಅವರ ಅಕಾಲಿಕ ಮರಣದ ಸುದ್ದಿ ಕೇಳಿ ಆಘಾತ ಮತ್ತು ದುಃಖವಾಗಿದೆ. ಅವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ವಿವಿಧ ಪಾತ್ರಗಳಲ್ಲಿ ಉತ್ತಮ ಸೇವೆ ಸಲ್ಲಿಸಿದ್ದಾರೆ. ಅವರ ನಿಧನ ತಮಿಳುನಾಡು ಪೊಲೀಸ್ ಇಲಾಖೆಗೆ ದೊಡ್ಡ ನಷ್ಟವಾಗಿದೆ. ಅವರ ಕುಟುಂಬ ಮತ್ತು ಪೊಲೀಸ್ ಪಡೆಯಲ್ಲಿರುವ ಸ್ನೇಹಿತರಿಗೆ ನನ್ನ ತೀವ್ರ ಸಂತಾಪ ಸೂಚಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಶಿಸ್ತು ಕಾಪಾಡಲು ವಿದ್ಯಾರ್ಥಿಗಳ ಕೂದಲು ಕತ್ತರಿಸಿದ ಶಿಕ್ಷಕಿ – ಶಾಲೆಯಿಂದ ವಜಾ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ತಂದೆ ವಿರುದ್ಧವೇ ಕೊಲೆ ಬೆದರಿಕೆ ಆರೋಪ ಮಾಡಿದ ನಟಿ ಅರ್ಥನಾ ಬಿನು

    ತಂದೆ ವಿರುದ್ಧವೇ ಕೊಲೆ ಬೆದರಿಕೆ ಆರೋಪ ಮಾಡಿದ ನಟಿ ಅರ್ಥನಾ ಬಿನು

    ಖ್ಯಾತ ನಟಿ ಅರ್ಥನಾ ಬಿನು ಸ್ವತಃ ತಂದೆಯ ವಿರುದ್ಧವೇ ಕೊಲೆ ಆರೋಪ ಮಾಡಿದ್ದಾರೆ. ಅಲ್ಲದೇ, ತಮ್ಮ ಮನೆಗೆ ಅಕ್ರಮವಾಗಿ ನುಗ್ಗಿ ತೊಂದರೆ ಮಾಡುತ್ತಾರೆ ಎಂದು ಅವರು ಸುದೀರ್ಘವಾಗಿ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.  ಮಲಯಾಳಂ ತಾರೆಯಾಗಿರುವ ಅರ್ಥನಾ ಬಿನು ಅದಕ್ಕೆ ಸಾಕ್ಷಿ ಎನ್ನುವಂತೆ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ.

    ನಟಿ ಅರ್ಥನಾ ಬಿನು ಆರೋಪ ಮಾಡಿದ್ದು ಬೇರೆ ಯಾರೂ ಅಲ್ಲ, ಮಲಯಾಳಂನಲ್ಲಿ ನಟರೂ ಆಗಿರುವ ವಿಜಯಕುಮಾರ್ ಮೇಲೆ. ವಿಜಯ್ ಕುಮಾರ್ ಮತ್ತು ಅರ್ಥನಾ ಬಿನು ತಾಯಿ ಡಿವೋರ್ಸ್ ಆಗಿ ಹಲವು ವರ್ಷಗಳೇ ಕಳೆದಿವೆ. ಇದೀಗ ಅರ್ಥನಾ ತನ್ನ ತಾಯಿಯೊಂದಿಗೆ ಅಜ್ಜಿ ಮನೆಯಲ್ಲಿ ಇದ್ದಾರೆ. ತಂದೆಯಿಂದ ದೂರವಾಗಿ ನೆಮ್ಮದಿಯ ದಿನಗಳನ್ನು ಕಳೆಯುತ್ತಿರುವ ಈ ಕುಟುಂಬಕ್ಕೆ ತಂದೆಯೇ ವಿಲನ್ ಆಗಿದ್ದಾರೆ ಎನ್ನುವುದು ಅರ್ಥನಾ ಆರೋಪ. ಇದನ್ನೂಓದಿ:ದೊಡ್ಮನೆ ಕುಡಿ ‘ಯುವʼ ಸಿನಿಮಾ ಏನಾಯ್ತು? ಇಲ್ಲಿದೆ ಅಪ್‌ಡೇಟ್

    ವಿಜಯಕುಮಾರ್ ಮನೆಯ ಕಾಂಪೌಂಡ್ ಹಾರಿ, ಅನಧಿಕೃತವಾಗಿ ಮನೆಯೊಳಗೆ ಪ್ರವೇಶ ಮಾಡುವುದು ಮತ್ತು ಕಿಟಕಿಯಾಚೆ ನಿಂತು ಮಾತನಾಡುತ್ತಿರುವ ವಿಡಿಯೋವನ್ನು ಪೋಸ್ಟ್ ಮಾಡಿರುವ ನಟಿ, ‘ಸಿನಿಮಾಗಳಲ್ಲಿ ಮುಂದುವರೆಯದಂತೆ ನನ್ನ ತಂದೆ ಬೆದರಿಕೆ ಹಾಕುತ್ತಿದ್ದಾರೆ. ಸಿನಿಮಾದಲ್ಲಿ ಮುಂದುವರೆದರೆ ಕೊಲ್ಲುವುದಾಗಿ ಹೇಳುತ್ತಿದ್ದಾರೆ. ನಾನು ನಟಿಸುತ್ತಿರುವ ಚಿತ್ರತಂಡದ ವಿರುದ್ಧವೂ ನಿಂದನೆ ಮಾಡಿದ್ದಾರೆ. ಅವರು ಅಕ್ರಮವಾಗಿ ಮನೆ ಪ್ರವೇಶ ಮಾಡುತ್ತಾರೆ. ನಿಂದಿಸುತ್ತಾರೆ’ ಎಂದೆಲ್ಲ ಬರೆದುಕೊಂಡಿದ್ದಾರೆ.

     

    ಅವರು ಮನೆಗೆ ಬಂದಾಗ ಪೊಲೀಸ್ ಠಾಣೆಗೆ ಕಾಲ್ ಮಾಡಿದರೆ, ಪೊಲೀಸ್ ನವರು ಸರಿಯಾದ ರೀತಿಯಲ್ಲಿ ಸ್ಪಂದಿಸಲ್ಲ ಎನ್ನುವ ಆರೋಪವನ್ನೂ ಈ ನಟಿ ಮಾಡಿದ್ದಾರೆ. ತಮಗೆ ಜೀವ ಬೆದರಿಕೆಯಿದ್ದು, ಪೊಲೀಸರು ಸೂಕ್ತ ಕ್ರಮವನ್ನು ತೆಗೆದುಕೊಳ್ಳಬೇಕು ಎನ್ನುವುದು ನಟಿಯ ಆಗ್ರಹ. ಅಲ್ಲದೇ, ತಮ್ಮ ತಂದೆಯ ಮೇಲೆ ಹಲವಾರು ಪ್ರಕರಣಗಳೂ ಇದ್ದು, ಭಯ ಕಾಡುತ್ತಿದೆ ಎಂದಿದ್ದಾರೆ  ಅರ್ಥನಾ ಬಿನು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಜಯನಗರ ಲೈಬ್ರರಿ ಆವರಣದಲ್ಲಿ ಎಂಪಿ ಆಫೀಸ್ – ಇದು ಸರಿಯೇ ತೇಜಸ್ವಿ ಸೂರ್ಯ?

    ಜಯನಗರ ಲೈಬ್ರರಿ ಆವರಣದಲ್ಲಿ ಎಂಪಿ ಆಫೀಸ್ – ಇದು ಸರಿಯೇ ತೇಜಸ್ವಿ ಸೂರ್ಯ?

    ಬೆಂಗಳೂರು: ಯುವ ಸಂಸದ ತೇಜಸ್ವಿ ಸೂರ್ಯ ತನ್ನ ರಾಜಕೀಯ ಗುರುವಿಗೆ ತಿರುಮಂತ್ರ ಹೊಡೆದ್ರಾ ಎನ್ನುವ ಪ್ರಶ್ನೆ ಈಗ ಚರ್ಚೆಯಾಗುತ್ತಿದೆ.

    ಹೌದು. ಸಂಸದ ಅನಂತ ಕುಮಾರ್ ಉದ್ಘಾಟಿಸಿದ, ಶಾಸಕ ವಿಜಯ ಕುಮಾರ್ ಪಾಠ ಹೇಳಿದ್ದ ಲೈಬ್ರರಿ ಜಾಗಕ್ಕೆ ತೇಜಸ್ವಿ ಕಾಲಿಟ್ಟಿದ್ದು ಈಗ ವಿವಾದಕ್ಕೆ ಕಾರಣವಾಗಿದೆ.

    ಸಂಸದರಾಗಿ ಆಯ್ಕೆಯಾದ ಬಳಿ ಸಂಸದರ ಕಚೇರಿ ಕೊಡಿ ಎಂದು ತೇಜಸ್ವಿ ಸೂರ್ಯ ಬಿಬಿಎಂಪಿಗೆ ಮನವಿ ಮಾಡಿದ್ದರು. ಈ ವೇಳೆ ಅನಂತಕುಮಾರ್ ಅವರ ಕಚೇರಿಯನ್ನು ಬಳಕೆ ಮಾಡಲು ನಿರಾಕರಿಸಿದ ಪರಿಣಾಮ ಅವರಿಗೆ ಜಯನಗರದ ಸಾರ್ವಜನಿಕ ಲೈಬ್ರರಿ ಆವರಣದಲ್ಲಿ ಕಚೇರಿ ತೆರೆಯಲು ಅನುಮತಿ ನೀಡಲಾಗಿದೆ.

    ಇದು ಸರಿಯೇ?
    ಸಿಎ, ಐಎಎಸ್, ಐಪಿಎಸ್ ಅಧಿಕಾರಿಗಳಾಗಲು ಈ ಲೈಬ್ರರಿಯಲ್ಲಿ ವಿದ್ಯಾರ್ಥಿಗಳು ನಿತ್ಯ ಓದುತ್ತಾರೆ. ಸದ್ಯ ಸಂಸದರ ಕಚೇರಿ ಇಲ್ಲಿ ತೆರೆದರೆ ಪಕ್ಷದ ಕಾರ್ಯಕರ್ತರು, ಸಾರ್ವಜನಿಕರು ಸಂಸದರನ್ನು ನೋಡಲು ನಿತ್ಯ ಬರುತ್ತಾರೆ. ಈ ವೇಳೆ ವಾಹನಗಳ ಸಂಖ್ಯೆ ಹೆಚ್ಚಾಗುತ್ತದೆ. ಅಲ್ಲದೇ ಜೊತೆಗೆ ಮುಖ್ಯ ರಸ್ತೆ ಆಗಿರುವುದರಿಂದ ಪಾರ್ಕಿಂಗ್ ಸಮಸ್ಯೆಯೂ ಹೆಚ್ಚಾಗಲಿದೆ. ಇದರಿಂದ ಲೈಬ್ರರಿಗೆ ಬರುವ ವಿದ್ಯಾರ್ಥಿಗಳಿಗೆ ಓದಲು ಸಮಸ್ಯೆಯಾಗುತ್ತದೆ. ಈ ವಿಚಾರ ತಿಳಿದಿದ್ದರೂ ತೇಜಸ್ವಿ ಸೂರ್ಯ ಅವರು ಇಲ್ಲೇ ಕಚೇರಿ ಮಾಡುತ್ತಿರುವುದು ಎಷ್ಟು ಸರಿ ಎಂದು ವಿದ್ಯಾರ್ಥಿಗಳು ಪ್ರಶ್ನೆ ಮಾಡುತ್ತಿದ್ದಾರೆ.

    ಈ ಸ್ಥಳವನ್ನು ಕೆಲ ಸಂಘ ಸಂಸ್ಥೆಗಳು ಬಡ ಮಕ್ಕಳಿಗೆ ಟ್ಯೂಷನ್ ನೀಡಲು ಬಳಸುತ್ತಿದ್ದವು. ಈ ಎಲ್ಲಾ ಮಾಹಿತಿ ಸಂಸದರಿಗೆ ಗೊತ್ತಾಗಲಿಲ್ಲವೇ ಎಂಬ ಪ್ರಶ್ನೆ ಸಾರ್ವಜನಿಕರದಲ್ಲಿ ಮೂಡಿದೆ.

    ಈ ಕುರಿತು ಪಬ್ಲಿಕ್ ಟಿವಿಗೆ ಪ್ರತಿಕ್ರಿಯೆ ನೀಡಿದ ಸಂಸದ ತೇಜಸ್ವಿ ಸೂರ್ಯ ಅವರು, ಸಂಸದರ ಕಚೇರಿ ನಿರ್ಮಾಣವಾಗುತ್ತಿರುವುದು ಜಯನಗರದ ಸಾರ್ವಜನಿಕ ಲೈಬ್ರರಿ ಇರುವ ಕಟ್ಟದ ಗ್ರೌಂಡ್ ಫ್ಲೋರಿನಲ್ಲಿ. ಈ ಕಟ್ಟಡ ಮೊದಲ ಫ್ಲೋರಿನಲ್ಲಿ ಲೈಬ್ರರಿ ಇದೆ. ಅದರ ಕೆಳಗೆ ಇರುವ ಟ್ರಸ್ಟ್ ಕಚೇರಿಯನ್ನು ಸಂಸದರ ಕಚೇರಿಯಾಗಿ ಮಾಡುತ್ತಿದ್ದೇವೆ. ಈ ವಿಚಾರದಲ್ಲಿ ವಿದ್ಯಾರ್ಥಿಗಳು ನನ್ನ ಪರವಿದ್ದಾರೆ. ಕೆಲವರು ಇದನ್ನೇ ದುರುಪಯೋಗ ಪಡಿಸಿಕೊಂಡು ಅಪಪ್ರಚಾರ ಮಾಡುತ್ತಿದ್ದಾರೆ ಅಷ್ಟೇ. ಕೆಲವರು ಮೊದಲು ವಿದ್ಯಾರ್ಥಿಗಳಿಗೆ ಪಾಠ ಮಾಡುತ್ತಿದ್ದ ಟ್ರಸ್ಟನ್ನು ಅಲ್ಲಿಂದ ಖಾಲಿ ಮಾಡಿಸಿ ಬೇರೆಯವರಿಗೆ ನೀಡಲು ತೀರ್ಮಾನ ಮಾಡಿದ್ದರು. ಸದ್ಯ ಬಿಬಿಎಂಪಿ ಸಂಸದರ ಕಚೇರಿಗೆ ನೀಡಿದೆ ಎಂದರು.

  • ತಿವಾರಿ ಸಾವಿನ ಹಿಂದೆ ಐಎಎಸ್ ಮಾಫಿಯಾದ ಕೈವಾಡವಿದೆ, ನನಗೂ ಜೀವ ಬೆದರಿಕೆ ಇತ್ತು: ನಿವೃತ್ತ ಅಧಿಕಾರಿ ವಿಜಯಕುಮಾರ್

    ತಿವಾರಿ ಸಾವಿನ ಹಿಂದೆ ಐಎಎಸ್ ಮಾಫಿಯಾದ ಕೈವಾಡವಿದೆ, ನನಗೂ ಜೀವ ಬೆದರಿಕೆ ಇತ್ತು: ನಿವೃತ್ತ ಅಧಿಕಾರಿ ವಿಜಯಕುಮಾರ್

    ಬೆಂಗಳೂರು: ಐಎಎಸ್ ಅಧಿಕಾರಿ ಅನುರಾಗ್ ತಿವಾರಿಯಂತೆ ನನ್ನ ಅಧಿಕಾರಿವಾಧಿಯಲ್ಲಿ ಕೂಡ ನನ್ನನ್ನು ಮೂರು ಬಾರಿ ಕೊಲೆ ಮಾಡಲು ಪ್ರಯತ್ನ ಮಾಡಿದ್ರು ಅಂತಾ ನಿವೃತ್ತ ಐಎಎಸ್ ಅಧಿಕಾರಿ ಎಮ್‍ಎನ್ ವಿಜಯಕುಮಾರ್ ಹೇಳಿದ್ದಾರೆ.

    ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ತಿವಾರಿ ಅನುಮಾನಾಸ್ಪದ ಸಾವಿನ ಪ್ರಕರಣದ ಸಿಬಿಐನಿಂದ ತನಿಖೆಯಾದ್ರೂ ಸತ್ಯ ಹೊರಬರುವ ಲಕ್ಷಣಗಳು ಇಲ್ಲ. ಯಾಕಂದ್ರೆ ಪ್ರಕರಣ ಕುರಿತು ಸೂಕ್ತ ರೀತಿಯಲ್ಲಿ ತನಿಖೆ ನಡೆಯುತ್ತಿಲ್ಲ. ಅಲ್ಲದೇ ಅತ್ಯಂತ ಕಳಪೆ ಮಟ್ಟದ ಅಧಿಕಾರಿಗಳು ಅನುರಾಗ್ ತಿವಾರಿಯ ಸಾವಿನ ಸಂಬಂಧ ತನಿಖೆ ನಡೆಸುತ್ತಿದ್ದಾರೆ ಅಂತಾ ಆರೋಪಿಸಿದರು.

    ಅನುರಾಗ್ ತಿವಾರಿಯವರ ಸಾವಿನ ಹಿಂದೆ ಐಎಎಸ್ ಮಾಫಿಯಾದ ಕೈವಾಡವಿದೆ. ರಾಜ್ಯದಲ್ಲಿ ಐಎಎಸ್ ಮಾಫಿಯಾ ಹೆಮ್ಮರವಾಗಿ ಬೆಳೆದಿದೆ ಎಂದ ವಿಜಯ್ ಕುಮಾರ್, ಅನುರಾಗ್ ತಿವಾರಿಯವರ ಕೇಸನ್ನ ಸಿಬಿಐಗೆ ಒಪ್ಪಿಸ್ಸಿದ್ರೂ ನ್ಯಾಯ ಸಿಗುವುದು ಅನುಮಾನ ಅಂತಾ ಅನುಮಾನ ವ್ಯಕ್ತಪಡಿಸಿದರು.

    ಇದೇ ಸಂದರ್ಭದಲ್ಲಿ ಮಾತನಾಡಿದ ಅನುರಾಗ್ ತಿವಾರಿಯ ಕಾಲೇಜು ಸ್ನೇಹಿತರು, ಈ ಸಿಸ್ಟಮ್ ನಲ್ಲಿ ನಮಗೆ ನಂಬಿಕೆಯಿಲ್ಲ, ಸಾವಿನ ತನಿಖೆ ನಿಷ್ಪಕ್ಷಪಾತವಾಗಿ ನಡೆಸಿದ್ರೆ ಮಾತ್ರ ಅನುರಾಗ್ ತಿವಾರಿಯವರ ಸಾವಿನ ಸತ್ಯ ಹೊರಬರುತ್ತೆ ಅಂತಾ ಹೇಳಿದ್ರು.

    ಅನುರಾಗ್ ತಿವಾರಿಯ ಸ್ನೇಹಿತರಾದ ಮದನ್ ಮೋಹನ್ ಮಾಳವೀರಾ ಕಾಲೇಜಿನ ರಶ್ಮಿ, ಆಶಿಶ್, ಪವನ್ ಸುದ್ದಿಗೋಷ್ಠಿ ಯಲ್ಲಿ ಭಾಗಿಯಾಗಿದ್ದು, ತಮ್ಮ ಗೆಳೆಯನ ಸಾವಿನ ತನಿಖೆಯನ್ನು ಸರಿಯಾಗಿ ಮಾಡಿ ಅಂತಾ ಸರ್ಕಾರಕ್ಕೆ ಒತ್ತಾಯಿಸಿದರು.