Tag: ವಿಜಯಪುರ

  • ಹೊನವಾಡದಲ್ಲಿ 11 ಎಕರೆ ಮಾತ್ರ ವಕ್ಫ್ ಜಾಗ, ಗೆಜೆಟ್ ನೋಟಿಫಿಕೇಷನ್‌ನಲ್ಲಿ ತಪ್ಪಾಗಿ ನಮೂದಾಗಿದೆ: ಎಂ.ಬಿ ಪಾಟೀಲ್‌

    ಹೊನವಾಡದಲ್ಲಿ 11 ಎಕರೆ ಮಾತ್ರ ವಕ್ಫ್ ಜಾಗ, ಗೆಜೆಟ್ ನೋಟಿಫಿಕೇಷನ್‌ನಲ್ಲಿ ತಪ್ಪಾಗಿ ನಮೂದಾಗಿದೆ: ಎಂ.ಬಿ ಪಾಟೀಲ್‌

    – ಇದ್ಯಾವುದು ವಕ್ಫ್‌ ಜಮೀನಲ್ಲ, ರೈತರ ಜಮೀನು ಎಂದ ಸಚಿವ

    ಬೆಂಗಳೂರು: ಗೆಜೆಟ್ ನೋಟಿಫಿಕೇಷನ್‌ನಲ್ಲಿ ತಪ್ಪಾಗಿ ನಮೂದು ಆಗಿದೆ. ಇದು ಯಾವುದು ವಕ್ಫ್ ಜಮೀನಲ್ಲ. ರೈತರ ಜಮೀನು ಎಂದು ಸಚಿವ ಎಂಬಿ ಪಾಟೀಲ್ ಹೇಳಿದ್ದಾರೆ.

    ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಮಟ್ಟದಲ್ಲಿ, ರಾಜ್ಯ ಮಟ್ಟದಲ್ಲಿ ಬಹಳಷ್ಟು ಚರ್ಚೆ ಆಗುತ್ತಿದೆ. ವಕ್ಫ್ ಬೋರ್ಡ್ ನೋಟಿಸ್ ಕೊಟ್ಟಿದ್ದಾರೆ. ತಹಶೀಲ್ದಾರ್ ಜೊತೆ ರೈತರ ಜೊತೆಗೆ ಚರ್ಚೆ ಮಾಡಿ, ರೈತರ ಒಂದಿಂಚು ಜಮೀನು ತಪ್ಪಾಗಿ ವಕ್ಫ್‌ಗೆ ಹೋಗುವುದಿಲ್ಲ ಎಂದು ಟ್ವೀಟ್ ಮಾಡಿದ್ದೆ. ಇದಾದ ಮೇಲೆ ತೇಜಸ್ವಿ ಸೂರ್ಯ ಕೂಡ ಹೋಗಿದ್ದಾರೆ. ರಾಷ್ಟ್ರೀಯ ಮಟ್ಟದಲ್ಲಿ ಇದು ದೊಡ್ಡ ಸುದ್ದಿ ಆಗಿದೆ ಎಂದರು. ಇದನ್ನೂ ಓದಿ: ಆತುರದಲ್ಲಿ ಬಿಪಿಎಲ್ ಕಾರ್ಡ್‌ಗೆ ಆಹಾರ ಇಲಾಖೆ ಕೊಕ್ಕೆ- ತೆರಿಗೆ ಕಟ್ಟದಿದ್ದರೂ, ಆದಾಯ ಇಲ್ಲದಿದ್ದರೂ ರದ್ದು

    ವಕ್ಫ್ ಆಸ್ತಿಗಳು 1974, 1978 ಗೆಜೆಟ್ ನೋಟಿಫಿಕೇಷನ್ ಆಗಿದೆ. 2016ರಲ್ಲೂ ಗೆಜೆಟ್ ನೋಟಿಫಿಕೇಷನ್ ಆಗಿದೆ. ಇದು ಮೂರನೇ ಬಾರಿಗೆ ನೋಟಿಫಿಕೇಷನ್ ಆಗಿದೆ. ಗೆಜೆಟ್ ನೋಟಿಫಿಕೇಷನ್‌ನಲ್ಲಿ ತಪ್ಪಾಗಿ ನಮೂದು ಆಗಿದೆ. ಇದು ಯಾವುದು ವಕ್ಫ್ ಜಮೀನಲ್ಲ. ರೈತರ ಜಮೀನು ಎಂದು ಹೇಳಿದರು.

    ವಿಜಯಪುರದಲ್ಲಿ ಎಲ್ಲಾ ದಾಖಲಾತಿಗಳನ್ನು ಪರಿಶೀಲನೆ ಮಾಡಿ, ರೆವೆನ್ಯೂ ರೆಕಾರ್ಡ್ಸ್ ತೆಗೆದುಕೊಂಡು ನಾನೇ ಖುದ್ದಾಗಿ ಬಗೆಹರಿಸುತ್ತೇನೆ. ಮುಂದಿನ ದಿನಗಳಲ್ಲಿ ನಾನೇ ಸಭೆ ಮಾಡುತ್ತೇನೆ. ಹೊನ್ನಾವಡದಲ್ಲಿ 11 ಎಕರೆ ಮಾತ್ರ ವಕ್ಫ್ ಜಾಗ ಇದೆ. ಯಾವುದೇ ಕಾರಣಕ್ಕೂ ಒಂದೇ ಒಂದು ಇಂಚು ತಪ್ಪಾಗಿ ರೈತರ ಜಮೀನನ್ನು ನೀಡುವುದಿಲ್ಲ ಎಂದರು. ಇದನ್ನೂ ಓದಿ: ಸತೀಶ್ ಸೈಲ್‌ಗೆ 6 ಕೇಸ್‌ನಲ್ಲಿ 7 ವರ್ಷ ಜೈಲು – ಕೋರ್ಟ್ ಆದೇಶ ಕೇಳಿ ನನಗೆ ಶಾಕ್ ಆಗಿದೆ: ಡಿಕೆಶಿ

    ತೇಜಸ್ವಿ ಸೂರ್ಯ ಆಗಲಿ ಯಾರೇ ಆಗಲಿ ರಾಜಕೀಯ ಮಾಡಬೇಡಿ. ಯತ್ನಾಳ್ ಅವರಿಗೂ ರಾಜಕೀಯ ಮಾಡಬೇಡಿ ಎಂದು ಹೇಳುತ್ತೇನೆ. ಯತ್ನಾಳ್ ಅವರು ಶೋ ಮಾಡಿದ್ದಾರೆ. ಕೆಲವರು ವೈಭವಿಕರಿಸಿದ್ದಾರೆ, ಇದು ರಾಷ್ಟ್ರೀಯ ಮಾಧ್ಯಮಗಳಲ್ಲಿ ಬಂದಿದೆ. ವಕ್ಫ್ ಆಸ್ತಿ ಇದ್ರೆ ಜಮೀರ್ ಅಹಮದ್ ತೆಗೆದುಕೊಳ್ಳಲಿ ನಾನು ಡಾಕ್ಯೂಮೆಂಟ್ ಕೊಡುತ್ತೇನೆ. ಗೆಜೆಟ್ ನೋಟಿಫಿಕೇಷನ್‌ನಲ್ಲಿ ಆಗಿರೋ ಎಡವಟ್ಟಿಗೆ ಈ ರೀತಿ ಆಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಶಿಗ್ಗಾಂವಿಯಲ್ಲಿ ಅಜ್ಜಂಪೀರ್ ಖಾದ್ರಿ ಬಂಡಾಯ ಶಮನವಾಗಿದೆ- ಡಿಕೆಶಿ

    ಜಿಲ್ಲಾ ಉಸ್ತುವಾರಿ ಸಚಿವನಾಗಿ ನಾನು ಹೇಳುತ್ತೇನೆ ರೈತರದ್ದು ಆಗಲಿ ಅಥವಾ ಖಾಸಗಿ ಅವರದ್ದು ಆಗಲಿ, ಅದು ವಕ್ಫ್ ಬೋರ್ಡ್ದು ಆಗದೇ ಇದ್ದರೆ ಒಂದೇ ಒಂದು ಇಂಚು ಭೂಮಿ ಕೊಡುವುದಿಲ್ಲ. ಊರು ಅಂದ ಮೇಲೆ ಕಾಂಗ್ರೆಸ್ ಮತ್ತು ಬಿಜೆಪಿ ಎಂದು ಇದ್ದೇ ಇರುತ್ತೆ. ಏನು ಬೇಕಾದರೂ ಮಾಡಲಿ, ನಾನು ರೈತರ ಜೊತೆ ಮೀಟಿಂಗ್ ಮಾಡಿ ಮಾತಾಡಿದ್ದೇನೆ. 19 ನೇ ತಾರೀಕಿನಿಂದಲೇ ರೈತರ ಜೊತೆ ಸಭೆ ಮಾಡಿದ್ದೇನೆ. ಅಲ್ಲಿ ತಪ್ಪಾಗಿ ನಮೂದಾಗಿರೋದು ಗೊತ್ತಾಯಿತು. ಆಗ ತಹಶೀಲ್ದಾರ್‌ಗೆ ಪರಿಶೀಲನೆ ಮಾಡುವುದಕ್ಕೆ ಹೇಳಿದ್ದೇನೆ. ತೇಜಸ್ವಿ ಸೂರ್ಯ ಇವಾಗ ಬಂದಿದ್ದಾರೆ ಅಷ್ಟೇ ಎಂದು ಹರಿಯಾಯ್ದರು. ಇದನ್ನೂ ಓದಿ: ನ.15 ರೊಳಗೆ ರಾಜಕಾಲುವೆ ಒತ್ತುವರಿ ತೆರವುಗೊಳಿಸಿ: ಬಿಬಿಎಂಪಿ ಆಯುಕ್ತರ ಸೂಚನೆ

  • ರೈತರ ಆಸ್ತಿ ಒಂದಿಂಚೂ ಪಡೆದಿಲ್ಲ – ವಕ್ಫ್ ಆಸ್ತಿ ನಾವು ದಾಖಲಾತಿ ಮಾಡಿಕೊಂಡ್ರೆ ಏನು ತಪ್ಪು? – ಜಮೀರ್ ಪ್ರಶ್ನೆ

    ರೈತರ ಆಸ್ತಿ ಒಂದಿಂಚೂ ಪಡೆದಿಲ್ಲ – ವಕ್ಫ್ ಆಸ್ತಿ ನಾವು ದಾಖಲಾತಿ ಮಾಡಿಕೊಂಡ್ರೆ ಏನು ತಪ್ಪು? – ಜಮೀರ್ ಪ್ರಶ್ನೆ

    – ರೈತರ ಜಮೀನಿಗೆ ವಕ್ಫ್ ಬೋರ್ಡ್ ನೀಡಿರುವ ನೋಟಿಸ್‌ಗೆ ಸಚಿವರ ಸಮರ್ಥನೆ

    ವಿಜಯಪುರ: ಇಲ್ಲಿನ ರೈತರ ಜಮೀನಿಗೆ ವಕ್ಫ್ ಬೋರ್ಡ್‌ನಿಂದ (Waqf Board) ನೀಡರುವ ನೊಟೀಸ್‌ನ್ನು ಸಚಿವ ಜಮೀರ್ ಅಹಮದ್ ಖಾನ್ (Zameer Ahmed Khan) ಸಮರ್ಥನೆ ಮಾಡಿಕೊಂಡಿದ್ದಾರೆ.

    ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾವು ರೈತರ ಒಂದಿಂಚು ಜಮೀನು ನಾವು ಪಡೆದಿಲ್ಲ. ವಿಜಯಪುರದಲ್ಲಿ (Vijayapura) ನಾವು ವಕ್ಫ್ ಅದಾಲತ್ ಮಾಡುತ್ತಿದ್ದೇವು. ಆ ಸಭೆಗೆ ಶಾಸಕ ಯತ್ನಾಳ್ (Basanagouda Patil Yatnal) ಅವರನ್ನು ಕರೆದಿದ್ದೇವು. ಆದರೆ ಅವರು ಆ ಸಭೆಗೆ ಬರಲಿಲ್ಲ. ಈಗ ಸುಮ್ಮನೆ ಆರೋಪ ಮಾಡ್ತಿದ್ದಾರೆ ಎಂದು ಕಿಡಿಕಾರಿದರು.ಇದನ್ನೂ ಓದಿ: ಬೇಲೆಕೇರಿ ಅದಿರು ನಾಪತ್ತೆ ಕೇಸ್‌ – 1ನೇ ಪ್ರಕರಣದಲ್ಲಿ ಕಾಂಗ್ರೆಸ್‌ ಶಾಸಕ ಸತೀಶ್‌ ರೈಗೆ 7 ವರ್ಷ ಜೈಲು

    ರೈತರ ಒಂದು ಇಂಚು ಆಸ್ತಿ ಪಡೆದಿಲ್ಲ. ರೈತರ ಆಸ್ತಿ ಆಗಿದ್ರೆ ಅದನ್ನ ವಾಪಸ್ ಕೊಡ್ತೀವಿ. ಸುಮ್ಮನೆ ಆರೋಪ ಮಾಡ್ತಿದ್ದಾರೆ. ವಕ್ಫ್ ಆಸ್ತಿ ದಾಖಲಾತಿ ಮಾಡ್ತಿದ್ದೇವೆ. ಅದರಲ್ಲಿ ರೈತರ ಜಾಗ ಯಾವುದೂ ಇಲ್ಲ. ಇವರು ಸುಮ್ಮನೆ ಕ್ರಿಯೇಟ್ ಮಾಡಿಕೊಂಡಿದ್ದಾರೆ. ರೈತರ ಆಸ್ತಿ ಯಾರು ಮುಟ್ಟೋಕೆ ಆಗುವುದಿಲ್ಲ ಎಂದು ನೊಟೀಸ್ ಸಮರ್ಥನೆ ಮಾಡಿಕೊಂಡರು.

    ಯತ್ನಾಳ್ ಮೀಟಿಂಗ್‌ಗೆ ಬರಲಿಲ್ಲ. 3 ದಿನ ಆದ ಮೇಲೆ ಆರೋಪ ಮಾಡ್ತಿದ್ದಾರೆ. ವಕ್ಫ್ ಆಸ್ತಿ ನಾವು ದಾಖಲಾತಿ ಮಾಡಿಕೊಂಡರೆ ಏನು ತಪ್ಪು? ನಾವು ರೈತರ ಆಸ್ತಿ ಒಂದಿಂಚು ಪಡೆದಿಲ್ಲ. ವಕ್ಫ್ ಆಸ್ತಿ ಖಾತಾ ಮಾಡ್ತಿದ್ದೇವೆ. ರೈತರ ಆಸ್ತಿ ನಾವು ಮುಟ್ಟಲ್ಲ. ಬೇರೆಯವರ ಜಾಗ ನಾವು ಹೇಗೆ ಪಡೆಯೋಕೆ ಆಗುತ್ತದೆ? ಯತ್ನಾಳ್ ಸಭೆಗೆ ಬಂದು ವಿರೋಧ ಮಾಡಬೇಕಿತ್ತು. ಯಾಕೆ ವಿರೋಧ ಮಾಡಲಿಲ್ಲ? ಎಂದು ಪ್ರಶ್ನಿಸಿದರು.

    ವಿಜಯಪುರ ರೈತರಿಗೆ ವಕ್ಫ್ ಬೋರ್ಡ್ ನೋಟಿಸ್:
    ವಿಜಯಪುರ ಜಿಲ್ಲೆಯಲ್ಲಿ ಉಸ್ತುವಾರಿ ಸಚಿವ ಎಂ ಬಿ ಪಾಟೀಲ (MB Patil) ಮತಕ್ಷೇತ್ರದ ಹೊನವಾಡ ಗ್ರಾಮದ ರೈತರ ಜಮೀನು ತನ್ನದೆಂದು ವಕ್ಫ್ ಬೋರ್ಡ್ ನೋಟಿಸ್ ನೀಡಿತ್ತು. ಇದ್ರಿಂದ ರೈತರು ಆತಂಕಗೊಂಡಿದ್ದಾರೆ. ಆದ್ರೆ, ಡಿಸಿ ಮಾತ್ರ, ಹೆದರಬೇಡಿ.. ನಿಮ್ಮಲ್ಲಿರುವ ಸೂಕ್ತ ದಾಖಲೆ ನೀಡಿ ಎಂದಿದ್ದರು. ಇದ್ರಿಂದ ತೃಪ್ತಗೊಳ್ಳದ ರೈತರು ವಕ್ಫ್ ಕಾಯ್ದೆ ಕುರಿತ ಸಂಸದೀಯ ಜಂಟಿ ಸದನ ಸಮಿತಿ ಸದಸ್ಯರು ಆಗಿರುವ ಸಂಸದ ತೇಜಸ್ವೀ ಸೂರ್ಯರನ್ನು ಭೇಟಿ ಮಾಡಿದ್ದರು. ನ್ಯಾಯ ಒದಗಿಸುವಂತೆ ಕೋರಿ ಮನವಿ ಪತ್ರ ಸಲ್ಲಿಸಿದ್ದರು.

    ಈ ವೇಳೆ ಮಾತನಾಡಿದ್ದ ಸಂಸದ ತೇಜಸ್ವಿ ಸೂರ್ಯ, ರೈತರಿಗೆ ನ್ಯಾಯ ಕೊಡಿಸುವ ಭರವಸೆ ನೀಡಿದ್ದರು. ತರಾತುರಿಯಲ್ಲಿ ನೀಡಲಾಗಿರುವ ವಕ್ಫ್ ಬೋರ್ಡ್ ನೋಟೀಸ್‌ನಿಂದ ರಾಜ್ಯದ ಸಾವಿರಾರು ರೈತರು, ಸಾರ್ವಜನಿಕರು ಆತಂಕಕ್ಕೆ ಒಳಗಾಗಿದ್ದಾರೆ. ಶೀಘ್ರವೇ ಅವರ ಆತಂಕ ದೂರ ಮಾಡಿ, ನ್ಯಾಯ ನೀಡುವ ಕೆಲಸ ಮಾಡಲಾಗುವುದು ಅಂದ್ರು. ವಿಜಯಪುರ ಜಿಲ್ಲೆಯೊಂದರಲ್ಲೇ 15 ಸಾವಿರಕ್ಕೂ ಅಧಿಕ ಎಕರೆ ಕೆರೆ ಜಾಗವನ್ನು ವಕ್ಫ್, ತನ್ನ ಆಸ್ತಿ ಎಂದು ನೋಟೀಸ್ ಜಾರಿ ನೀಡಿದೆ ಎಂದು ತೇಜಸ್ವಿ ಸೂರ್ಯ ಆಪಾದಿಸಿದ್ದರು. ವಕ್ಫ್ ತಿದ್ದುಪಡಿ ಬಿಲ್ ಜಾರಿಗೆ ಮುನ್ನ ಸಾಧ್ಯವಾದಷ್ಟು ಜಾಗವನ್ನು ವಕ್ಫ್ ಹೆಸರಿಗೆ ನೋಂದಣಿ ಮಾಡಿಕೊಡುವ ಹುನ್ನಾರವನ್ನು ರಾಜ್ಯ ಸರ್ಕಾರ ಮಾಡ್ತಿರೋದು ಅಕ್ಷಮ್ಯ ಎಂದು ತೇಜಸ್ವಿ ಸೂರ್ಯ ಕಿಡಿಕಾರಿದ್ದರು.ಇದನ್ನೂ ಓದಿ: ಶಿಗ್ಗಾಂವಿ ಕಾಂಗ್ರೆಸ್‌ ಬಂಡಾಯ ಶಮನ – ಅಜ್ಜಂಪೀರ್‌ ಮನವೊಲಿಸುವಲ್ಲಿ ಸಿಎಂ ಯಶಸ್ವಿ

  • ರೈತರಿಗೆ ವಕ್ಫ್ ಬೋರ್ಡ್ ನೋಟಿಸ್ – ದಾಖಲೆ ಪರಿಶೀಲನೆ ಬಳಿಕ ಕ್ರಮ: ಪರಮೇಶ್ವರ್

    ರೈತರಿಗೆ ವಕ್ಫ್ ಬೋರ್ಡ್ ನೋಟಿಸ್ – ದಾಖಲೆ ಪರಿಶೀಲನೆ ಬಳಿಕ ಕ್ರಮ: ಪರಮೇಶ್ವರ್

    ಶಿವಮೊಗ್ಗ: ವಿಜಯಪುರದಲ್ಲಿ (Vijayapura) ರೈತರ ಆಸ್ತಿಗೆ ವಕ್ಫ್ ಆಡಳಿತ ಮಂಡಳಿ (Waqf Board) ನೋಟಿಸ್ ನೀಡಿದ್ದರ ಬಗ್ಗೆ ಕಂದಾಯ ಇಲಾಖೆ ಪರಿಶೀಲನೆ ನಡೆಸಲಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ (G.Parameshwar) ಹೇಳಿದ್ದಾರೆ.

    ನಗರದಲ್ಲಿ (Shivamogga) ನೂತನ ಪೊಲೀಸ್ ಸಮುದಾಯ ಭವನ ಉದ್ಘಾಟಿಸಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈ ವೇಳೆ, ವಿಜಯಪುರದ ರೈತರಿಗೆ ವಕ್ಫ್ ಆಡಳಿತ ಮಂಡಳಿ ನೋಟಿಸ್ ನೀಡಿದ ವಿಚಾರಕ್ಕೆ ಪ್ರತಿಕ್ರಿಯಿಸಿದರು. ಕಂದಾಯ ಇಲಾಖೆಯ ಅಧಿಕಾರಿಗಳು ಹಳೆಯ ದಾಖಲೆಗಳನ್ನು ಪರಿಶೀಲನೆ ಮಾಡಿ ಕ್ರಮಕೈಗೊಳ್ಳುತ್ತಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ವಿಜಯಪುರ ಜಿಲ್ಲೆ ರೈತರಿಗೆ ವಕ್ಫ್ ಬೋರ್ಡ್‌ನಿಂದ ನೋಟಿಸ್

    ಮೂರು ಕ್ಷೇತ್ರಗಳ ಉಪಚುನಾವಣೆ ವಿಚಾರವಾಗಿ, ಎಲ್ಲಾ ಕ್ಷೇತ್ರಗಳಲ್ಲೂ ನಾವು ಗೆಲ್ಲುತ್ತೇವೆ. ಬಿಜೆಪಿ ಹಾಗೂ ಜೆಡಿಎಸ್ ಒಂದಾಗಿದ್ದರೂ ಸಹ ರಾಜ್ಯದಲ್ಲಿ ಕಾಂಗ್ರೆಸ್ ಜನಪರ ಕೆಲಸ ಮಾಡ್ತಿದೆ. ಬಡ ಜನರಿಗೆ ಆರ್ಥಿಕವಾಗಿ ಮೇಲೆತ್ತುವ ಕೆಲಸ ಮಾಡುತ್ತಿದ್ದೇವೆ ಎಂದಿದ್ದಾರೆ.

    ಶಿಗ್ಗಾಂವಿಯಲ್ಲಿ ಬಂಡಾಯದ ವಿಚಾರವಾಗಿ, ಖಾದ್ರಿ ಅವರು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು. ಈ ಹಿಂದೆ ಚುನಾವಣೆಗೆ ಸ್ಪರ್ಧೆ ಮಾಡಿದ್ದರು. ಅವರ ಮನವೊಲಿಸುತ್ತೇವೆ, ಅವರು ನಾಮಪತ್ರ ವಾಪಸ್ ತೆಗೆದುಕೊಳ್ಳುತ್ತಾರೆ ಎಂದು ಸ್ಪಷ್ಟಪಡಿದ್ದಾರೆ.

    ಹೆಚ್‍ಎಮ್‍ಟಿ ಭೂಮಿ ಅರಣ್ಯ ಇಲಾಖೆ ವಶ ಪಡಿಸಿಕೊಂಡ ವಿಚಾರವಾಗಿ, ಹಿಂದೆ ಆ ಜಾಗವೆಲ್ಲಾ ಅರಣ್ಯ ಇಲಾಖೆಗೆ ಸೇರಿತ್ತು. ಇದೀಗ ಆ ಜಾಗ ಖಾಲಿ ಇದ್ದ ಕಾರಣ ಮತ್ತೆ ಇಲಾಖೆ ವಶಕ್ಕೆ ಪಡೆದಿದೆ. ಇನ್ನೂ ಶರಾವತಿ ನೀರು ಬೆಂಗಳೂರಿಗೆ ಕೊಂಡೊಯ್ಯುವ ವಿಚಾರವಾಗಿ, ಈ ಹಿಂದೆ ನಾನು ಡಿಸಿಎಂ ಆಗಿದ್ದಾಗ ಈ ಬಗ್ಗೆ ಚರ್ಚೆ ಮಾಡಿದ್ದೆ. ಈಗ ಅಂತಹ ಯಾವುದೇ ಚರ್ಚೆ ನಡೆಯುತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಧರ್ಮ ಕಾರ್ಯಗಳ ಮೂಲಕ ಶೃಂಗೇರಿ ಮಠ ಮುಂಚೂಣಿಯಲ್ಲಿದೆ: ಡಿಕೆಶಿ

  • ವಿಜಯಪುರ | ಬೈಕ್ ಸವಾರನ ಮೇಲೆ ಕ್ರೇನ್ ಹರಿದು ಸ್ಥಳದಲ್ಲೇ ಸಾವು

    ವಿಜಯಪುರ | ಬೈಕ್ ಸವಾರನ ಮೇಲೆ ಕ್ರೇನ್ ಹರಿದು ಸ್ಥಳದಲ್ಲೇ ಸಾವು

    ವಿಜಯಪುರ: ಬೈಕ್ ಸವಾರನ ಮೇಲೆ ಕ್ರೇನ್ ಹರಿದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮುದ್ದೇಬಿಹಾಳ (Muddebihal) ತಾಲೂಕಿನ ನಾಲತವಾಡ ಪಟ್ಟಣದಲ್ಲಿ ನಡೆದಿದೆ.

    ಮೃತ ವ್ಯಕ್ತಿಯನ್ನು ರಾಯಚೂರು (Raichuru) ಜಿಲ್ಲೆಯ ಲಿಂಗಸಗೂರು (Lingasaguru) ತಾಲೂಕಿನ ನಾಗರಹಾಳ ಗ್ರಾಮದ ನಿವಾಸಿ ಶಿವಪುತ್ರಪ್ಪ ಭಜಂತ್ರಿ (40) ಎಂದು ಗುರುತಿಸಲಾಗಿದೆ.ಇದನ್ನೂ ಓದಿ: ಫ್ಯಾನ್ಸ್‌ಗೆ ಸಿಹಿಸುದ್ದಿ- ಹೊಸ ರಿಲೀಸ್ ಡೇಟ್ ಅನೌನ್ಸ್ ಮಾಡಿದ ‘ಪುಷ್ಪ 2’ ಟೀಮ್

    ಪಟ್ಟಣದ ಹೋಂಡಾ ಶೋರೂಂ ಬಳಿ ಮುದ್ದೇಬಿಹಾಳ-ನಾರಾಯಣಪುರ ರಾಜ್ಯ ಹೆದ್ದಾರಿಯಲ್ಲಿ ಘಟನೆ ನಡೆದಿದೆ. ಅಪಘಾತದ ಬಳಿಕ ಸ್ಥಳದಲ್ಲೇ ಕ್ರೇನ್ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ.

    ಸ್ಥಳಕ್ಕೆ ಮುದ್ದೇಬಿಹಾಳ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಸದ್ಯ ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ (Muddebihal Police Station) ಪ್ರಕರಣ ದಾಖಲಾಗಿದೆ.ಇದನ್ನೂ ಓದಿ: ಚನ್ನಪಟ್ಟಣದಲ್ಲಿ ನಂಬಿಕೆ ದ್ರೋಹಿಗಳಿಗೆ ಜನ ಪಾಠ ಕಲಿಸ್ತಾರೆ: ಬಿಎಸ್‌ವೈ

  • ಬೆಲ್ಟ್ ಕಟ್ ಆಗಿ ರೇಂಜರ್ ಸ್ವಿಂಗ್‌ನಿಂದ ಬಿದ್ದು ಯುವತಿ ಸಾವು

    ಬೆಲ್ಟ್ ಕಟ್ ಆಗಿ ರೇಂಜರ್ ಸ್ವಿಂಗ್‌ನಿಂದ ಬಿದ್ದು ಯುವತಿ ಸಾವು

    ವಿಜಯಪುರ: ಸೊಂಟಕ್ಕೆ ಕಟ್ಟಿದ್ದ ಬೆಲ್ಟ್ ಕಟ್ ಆಗಿ ರೇಂಜರ್ ಸ್ವಿಂಗ್‌ನಿಂದ ಬಿದ್ದು ಯುವತಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ನವಭಾಗ್ ರಸ್ತೆಯ ಫಿಶ್ ಟನಲ್ ಎಕ್ಸ್ಪೋದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

    ಮೃತ ಯುವತಿಯನ್ನು ನಿಖಿತಾ ಎಂದು ಗುರುತಿಸಲಾಗಿದೆ.ಇದನ್ನೂ ಓದಿ: ‘ಕಸ್ಟಡಿ’ಯಲ್ಲಿ ಭೀಮ ಖ್ಯಾತಿಯ ನಟಿ ಪ್ರಿಯಾ

    ಅ.20ರಂದು ಸಾಯಂಕಾಲ ಫಿಶ್ ಟನಲ್ ಎಕ್ಸ್ಪೋದಲ್ಲಿರುವ ರೇಂಜರ್ ಸ್ವಿಂಗ್‌ನಲ್ಲಿ ನಿಖಿತಾ ಕುಳಿತಿದ್ದರು. ಮೂವರು ಯುವತಿಯರು ಒಟ್ಟಿಗೆ ಕುಳಿತಿದ್ದು, ಅದರಲ್ಲಿ ನಿಖಿತಾಳ ಸೊಂಟಕ್ಕೆ ಕಟ್ಟಿದ್ದ ಬೆಲ್ಟ್ ಕಟ್ಟಾಗಿ ಕೆಳಗೆ ಬಿದ್ದಿದ್ದಾಳೆ. ತಲೆ ಕೆಳಗಾಗಿ ಬಿದ್ದ ಪರಿಣಾಮ ತ್ರೀವವಾಗಿ ಗಾಯಗೊಂಡಿದ್ದರು. ತಕ್ಷಣ ಯುವತಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಇಂದು (ಅ.22) ಯುವತಿ ಮೃತಪಟ್ಟಿದ್ದಾಳೆ.

    ಇನ್ನೂ ಈ ಘಟನೆಯ ವಿಡಿಯೋ ಪೋಷಕರ ಮೊಬೈಲ್‌ನಲ್ಲಿ ಸೆರೆಯಾಗಿದ್ದು, ತಲೆ ಕೆಳಗಾಗಿ ಬಿದ್ದಿರುವುದು ತಿಳಿದು ಬಂದಿದೆ. ಗಾಂಧಿಚೌಕ್  ಪೊಲೀಸ್ ಠಾಣೆಯಲ್ಲಿ (Gandhi Chowk Police Station) ಪ್ರಕರಣ ದಾಖಲಾಗಿದೆ.ಇದನ್ನೂ ಓದಿ: ನನ್ನ ಪತ್ನಿ ಟ್ರಾನ್ಸ್‌ಜೆಂಡರ್‌ – ಲಿಂಗತ್ವ ಪರೀಕ್ಷೆಗೆ ಅನುಮತಿ ಕೋರಿ ಹೈಕೋರ್ಟ್‌ ಮೆಟ್ಟಿಲೇರಿದ ಪತಿ

  • ವಿಜಯಪುರದಲ್ಲಿ ಭೂಕಂಪನ: ಜೋರು ಶಬ್ದಕ್ಕೆ ಹೆದರಿ ಮನೆಯಿಂದಾಚೆ ಓಡಿ ಬಂದ ಜನ!

    ವಿಜಯಪುರದಲ್ಲಿ ಭೂಕಂಪನ: ಜೋರು ಶಬ್ದಕ್ಕೆ ಹೆದರಿ ಮನೆಯಿಂದಾಚೆ ಓಡಿ ಬಂದ ಜನ!

    ವಿಜಯಪುರ: ಜಿಲ್ಲೆಯ ವಿವಿಧ ಭಾಗಗಳಲ್ಲಿ ಭೂಮಿ ಕಂಪಿಸಿದ ಅನುಭವ ಆಗಿದೆ. ಭಾರೀ ಸದ್ದಿನೊಂದಿಗೆ ಭೂಮಿ ಕಂಪಿಸಿದ್ದು, ಇದರಿಂದ ಗ್ರಾಮಸ್ಥರು ಭಯಭೀತರಾಗಿದ್ದಾರೆ.ಇದನ್ನೂ ಓದಿ: ನಾನು ಅವರ ಹಾಸಿಗೆಯ ಮೇಲೆ ಕುಳಿತಿದ್ದೆ – ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಮತ್ತೆ ಸಾಕ್ಷಿ ಮಲಿಕ್‌ ಆರೋಪ

    ವಿಜಯಪುರ (Vijayapura) ಜಿಲ್ಲೆಯ ತಿಕೋಟಾ (Tikota) ತಾಲೂಕಿನ ಟಕ್ಕಳಕಿ, ಸೋಮದೇವರಹಟ್ಟಿ, ಮಲಕನದೇವರಹಟ್ಟಿ, ಕಳ್ಳಕವಟಗಿ, ಘೋಣಸಗಿ, ಹುಬನೂರ ಗ್ರಾಮದಲ್ಲಿ ಭೂಮಿ ಕಂಪಿಸಿದ ಅನುಭವ ಆಗಿದೆ. ಜೊತೆಗೆ ಮಹಾರಾಷ್ಟ್ರ (Maharashtra) ಗಡಿಭಾಗದ ಗ್ರಾಮಗಳಾದ ಮೊರಬಗಿ, ತಿಕ್ಕುಂಡಿ, ಆಸಂಗಿಯಲ್ಲೂ ಭೂಮಿ ನಡುಗಿದ ಅನುಭವ ಆಗಿದೆ.

    ಇಂದು (ಅ.22) ಬೆಳಗ್ಗೆ 11:29ಕ್ಕೆ ಜೋರಾದ ಶಬ್ದದೊಂದಿಗೆ ಭೂಮಿ ಕಂಪಿಸಿದ ಅನುಭವ ಆಗಿದೆ. ಕಂಪಿಸಿದ ಹಿನ್ನೆಲೆ ಅಡುಗೆ ಮನೆಯಲ್ಲಿನ ಪಾತ್ರೆಗಳು ಕೆಳಗೆ ಬಿದ್ದಿವೆ. ಜೋರು ಶಬ್ದದಿಂದ ಹೆದರಿ ಜನರು ಮನೆಯಿಂದಾಚೆಗೆ ಓಡಿ ಬಂದಿದ್ದಾರೆ.ಇದನ್ನೂ ಓದಿ: ಸೂರ್ಯ ನಟನೆಯ ‘ಕಂಗುವ’ ಚಿತ್ರದ ರೊಮ್ಯಾಂಟಿಕ್‌ ಸಾಂಗ್‌ ಔಟ್‌

  • ಬೈಕ್, ಮನೆಗಳ್ಳತನ ಮಾಡುತ್ತಿದ್ದ ಇಬ್ಬರ ಬಂಧನ – 9 ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳು ಜಪ್ತಿ

    ಬೈಕ್, ಮನೆಗಳ್ಳತನ ಮಾಡುತ್ತಿದ್ದ ಇಬ್ಬರ ಬಂಧನ – 9 ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳು ಜಪ್ತಿ

    ವಿಜಯಪುರ: ಬೈಕ್ ಹಾಗೂ ಮನೆಗಳ್ಳತನ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿದ್ದು, 9 ಲಕ್ಷಕ್ಕೂ ಅಧಿಕ ರೂ. ಮೌಲ್ಯದ ವಸ್ತುಗಳನ್ನು ವಿಜಯಪುರ ಪೊಲೀಸರು (Vijayapura Police) ವಶಕ್ಕೆ ಪಡೆದಿದ್ದಾರೆ.

    ಆರೋಪಿಗಳನ್ನು ಸಮೀರ ಇನಾಮದಾರ ಹಾಗೂ ಮೊಸೀನ ಕಲಾದಗಿ ಎಂದು ಗುರುತಿಸಲಾಗಿದೆ.ಇದನ್ನೂ ಓದಿ: ಕರ್ವಾ ಚೌತ್ ದಿನ ತಡವಾಗಿ ಬಂದ ಪತಿ ಜೊತೆ ಗಲಾಟೆ ಪತ್ನಿ ಆತ್ಮಹತ್ಯೆ

    ನಗರದ ಸಿಂದಗಿ ನಾಕಾ ಬಳಿ ಮನೆಗಳ್ಳತನ ಮಾಡಿ, ಓಡಾಡುತ್ತಿದ್ದ ವೇಳೆ ಪರಿಶೀಲನೆ ಮಾಡುತ್ತಿದ್ದ ಪೊಲೀಸರು ಓರ್ವನನ್ನು ಬಂಧಿಸಿದ್ದು, ಮತ್ತೊಂದೆಡೆ ಬೈಕ್ ಕಳ್ಳತನ ಮಾಡುತ್ತಿದ್ದ ವೇಳೆ ಓರ್ವನನ್ನು ಬಂಧಿಸಿದ್ದಾರೆ.

    ಮನೆಗಳ್ಳತನ ಮಾಡುತ್ತಿದ್ದ ಆರೋಪಿಯಿಂದ 7,59,600 ಲಕ್ಷ ರೂ. ಮೌಲ್ಯದ 100 ಗ್ರಾಂ ಚಿನ್ನ, 120 ಗ್ರಾಂ ಬೆಳ್ಳಿ ವಶಕ್ಕೆ ಪಡೆಯಲಾಗಿದೆ. ಇನ್ನೂ ಬೈಕ್ ಕಳ್ಳತನ ಮಾಡುತ್ತಿದ್ದ ಆರೋಪಿಯಿಂದ 2,20,000 ಲಕ್ಷ ರೂ. ಮೌಲ್ಯದ 4 ವಿವಿಧ ಕಂಪನಿಯ ಬೈಕ್‌ಗಳನ್ನು ವಶಕ್ಕೆ ಪಡೆಯಲಾಗಿದೆ.ಇದನ್ನೂ ಓದಿ: ಜಾತ್ಯಾತೀತ ರಾಷ್ಟ್ರದಲ್ಲಿ ಜಾತಿ ಗಣತಿ ಯಾಕೆ? – ವಿಶ್ವಪ್ರಸನ್ನ ತೀರ್ಥ ಶ್ರೀ

    ಈ ಪ್ರಕರಣ ಸಂಬಂಧ ಗೋಳಗುಮ್ಮಟ ಹಾಗೂ ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರ ಕಾರ್ಯಕ್ಕೆ ಎಸ್ಪಿ ಪ್ರಶಂಸೆ ವ್ಯಕಪಡಿಸಿದ್ದಾರೆ.

  • ಸಿಎಂ ಸಿದ್ದರಾಮಯ್ಯ ಉತ್ತರ ಕುಮಾರ ಇದ್ದಂತೆ: ಈಶ್ವರಪ್ಪ ಲೇವಡಿ

    ಸಿಎಂ ಸಿದ್ದರಾಮಯ್ಯ ಉತ್ತರ ಕುಮಾರ ಇದ್ದಂತೆ: ಈಶ್ವರಪ್ಪ ಲೇವಡಿ

    ವಿಜಯಪುರ: ಒಂದರ್ಥದಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah) ಉತ್ತರ ಕುಮಾರನ ತರಹ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ (KS Eshwarappa) ಲೇವಡಿ ಮಾಡಿದರು.

    ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತಿಗಣತಿ (Caste Census) ವಿಚಾರವಾಗಿ ಒಂದರ್ಥದಲ್ಲಿ ಸಿಎಂ ಸಿದ್ದರಾಮಯ್ಯ ಉತ್ತರ ಕುಮಾರನ ತರಹ. ಜಾತಿಗಣತಿ ವರದಿಯನ್ನು ಸಚಿವ ಸಂಪುಟದ ಎದುರು ಇಟ್ಟೇ ಇಡುತ್ತೇವೆ ಎಂದು ಹೇಳುತ್ತಲೇ ಇದ್ದಾರೆ. ಈವರೆಗೂ ಇಟ್ಟಿಲ್ಲ. ಇದೀಗ ಹೊಸ ದಿನಾಂಕ ಸಹ ಪ್ರಕಟಿಸಿದ್ದು, ಅದನ್ನೂ ಕಾಯ್ದು ನೋಡೋಣ. ಈಗಾಗಲೇ ಜಾತಿಗಣತಿ ಮಾಡಲು ನೂರಾರು ಕೋಟಿ ರೂಪಾಯಿ ಖರ್ಚು ಮಾಡಲಾಗಿದೆ. ಕೂಡಲೇ ಅದನ್ನು ಸಚಿವ ಸಂಪುಟದ ಮುಂದೆ ತನ್ನಿ, ಚರ್ಚೆ ಮಾಡಿ ಬಳಿಕ ಬಿಡುಗಡೆ ಮಾಡಿ ಎಂದರು.ಇದನ್ನೂ ಓದಿ: ಬೆಂಗಳೂರಿನಲ್ಲಿ ತಂದೆಯಿಂದಲೇ ಮಗನ ಭೀಕರ ಕೊಲೆ

    ರಾಜ್ಯದಲ್ಲಿ ಮಳೆ ಬಂದು ರೈತರು ಸಂಕಷ್ಟದಲ್ಲಿದ್ದಾರೆ. ಯಾವೊಬ್ಬ ಮಂತ್ರಿಯೂ ಸ್ಥಳಕ್ಕೆ ಭೇಟಿ ನೀಡಿಲ್ಲ. ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ನಿಂತಿದ್ದು, ಕಾಂಗ್ರೆಸ್ (Congress) ಅಧಿಕಾರದಲ್ಲಿದೆ ಎಂಬುವುದನ್ನು ಮರೆತಂತಿದೆ. ಹಿಂದುಳಿದವರ, ದಲಿತರ ಅಭಿವೃದ್ಧಿ ಮಾಡುತ್ತೇವೆ ಎಂದು ಮಾತು ಕೊಟ್ಟಿದ್ದನ್ನು ಮರೆತಿದ್ದಾರೆ. ಈ ಹಿಂದೆ ಬಿಜೆಪಿ (BJP) ಸರ್ಕಾರ ಹಿಂದುಳಿದ ವರ್ಗದ ಇಲಾಖೆಯಿಂದ 1,073 ಯೋಜನೆಗಳನ್ನು ಜಾರಿಗೊಳಿಸಿತ್ತು. ಆ ಯೋಜನೆಗಳನ್ನೆಲ್ಲ ರದ್ದು ಮಾಡಲಾಗಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣವಂತೂ ಬಹಿರಂಗವಾಗಿದೆ. ಅಲ್ಲಿನ ಹಣ ನುಂಗಿ ನೀರು ಕುಡಿದಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

    ವಿಪಕ್ಷದವರ ಮೇಲೆ ಕೇಸ್ ವಿಚಾರ:
    ಹಲವಾರು ಹಗರಣ ಮಾಡಿರುವ ಸಿದ್ದರಾಮಯ್ಯವರೇ ಅದಕ್ಕೆ ಪ್ರತಿಯಾಗಿ ವಿರೋಧಿಗಳ ಮೇಲೆ ಕೇಸ್ ಮಾಡುವ ನಿಟ್ಟಿನಲ್ಲಿ ತಲ್ಲೀನರಾಗಿದ್ದಾರೆ. ಅದನ್ನು ಬಿಟ್ಟು ರೈತರು, ಸಾಮಾನ್ಯ ಜನರು, ಹಿಂದುಳಿದ, ದಲಿತರ ಬಗ್ಗೆ ಕಾಳಜಿ ವಹಿಸಬೇಕು. ಏನಾದರೂ ಹೇಳಲು ಹೊರಟರೇ ನಾನು ದೇವರಾಜು ಅರಸು ತರಹ ಎಂದು ಹೇಳುತ್ತಾರೆ. ಹೀಗೆ ಹೇಳುವವರು ಆ ನಿಟ್ಟಿನಲ್ಲಿ ನಡೆದುಕೊಳ್ಳಬೇಕು. ಮಳೆ ಬಂದು ಬೆಳೆ ಹಾಳಾಗಿದೆ. ತಾತ್ಕಾಲಿಕವಾಗಿ ಯಾರಾದರೂ ರೈತರಿಗೆ ಪರಿಹಾರ ಕೊಡಿ. ರಸ್ತೆ, ಚರಂಡಿಗಳನ್ನು ತ್ವರಿತವಾಗಿ ರಿಪೇರಿಗೊಳಿಸಿ ಎಂದು ಕಿಡಿಕಾರಿದರು.

    ಹೊಸ ಬ್ರಿಗೇಡ್ ಸ್ಥಾಪನೆ ವಿಚಾರ:
    ಈ ಹಿಂದೆ ಕೂಡಲ ಸಂಗಮ ಸ್ವಾಮೀಜಿಯವರು ಹಿಂದುತ್ವದ ರಕ್ಷಣೆಗಾಗಿ ಬ್ರಿಗೇಡ್ ಸ್ಥಾಪಿಸಿ ಎಂದು ಹೇಳಿದ್ದರು. ಅದಕ್ಕಾಗಿ ಬಸನಗೌಡ ಪಾಟೀಲ ಯತ್ನಾಳ್ (Basanagouda Patil Yatnal) ಹಾಗೂ ಈಶ್ವರಪ್ಪ ಕೈಗೆ ಖಡ್ಗ ಕೊಟ್ಟಿರುವುದಾಗಿ ಹೇಳಿದ್ದರು. ಆ ನಿಟ್ಟಿನಲ್ಲಿ ನೂರಾರು ಸಂತರು ಸೇರಿ ಪ್ರೋತ್ಸಾಹ ನೀಡಿದ ಫಲವಾಗಿ ಇದೀಗ ಸಭೆ ಕರೆಯಲಾಗಿದೆ. ರಾಜ್ಯದ ಎರಡು ಸಾವಿರಕ್ಕೂ ಅಧಿಕ ಪ್ರಮುಖರು ಬಾಗಲಕೋಟೆಯಲ್ಲಿ ಸಭೆ ಸೇರುತ್ತಿದ್ದಾರೆ. ಸಭೆ ಸೇರಿ ಬ್ರಿಗೇಡ್‌ಗೆ ಯಾವ ಹೆಸರಿಡುವುದು ಎಂಬ ತೀರ್ಮಾನ ಕೈಗೊಳ್ಳುತ್ತಾರೆ. ಸಭೆಯಲ್ಲಿ ಬಸನಗೌಡ ಪಾಟೀಲ ಯತ್ನಾಳ್ ಸಹ ಪಾಲ್ಗೊಳ್ಳಲಿದ್ದಾರೆ. ಯತ್ನಾಳ್ ಅವರೇ ಇಂಥದ್ದೊಂದು ವಿಚಾರ ಪ್ರಸ್ತಾಪಿಸುತ್ತಾರೆ ಎಂದು ನನಗೆ ಕಲ್ಪನೆ ಇರಲಿಲ್ಲ. ಸಾಧು ಸಂತರೇ ಇದರ ನೇತೃತ್ವ ವಹಿಸಲಿದ್ದು, ಅವರ ಅಪೇಕ್ಷೆ ಮೇರೆಗೆ ಬ್ರಿಗೇಡ್ ನಡೆಯುತ್ತಿದೆ ಎಂದರು.

    ಓಪನ್ ಆಗಿ ತಲ್ವಾರ, ಪೆಟ್ರೋಲ್ ಬಾಂಬ್ ತಂದು ಹಿಂದೂಗಳ ಅಂಗಡಿ ಮುಂಗಟ್ಟು ಮೇಲೆ ದಾಳಿ ನಡೆಸುತ್ತಿದ್ದಾರೆ. ಗಣಪತಿ ವಿಚಾರದಲ್ಲಿ ಗಲಭೆಯಾದರೆ ಸರ್ಕಾರ ಹಿಂದೂಗಳ ಮೇಲೆಯೇ ಪ್ರಕರಣ ದಾಖಲಿಸುತ್ತದೆ. ಹೀಗಾಗಿ ಸಮಸ್ತ ಹಿಂದೂ ಸಮಾಜದ ರಕ್ಷಣೆಗೆ ಬ್ರಿಗೇಡ್ ಸಿದ್ಧವಾಗುತ್ತಿದೆ. ಬಿಜೆಪಿ ಶುದ್ಧೀಕರಣ ಆಗಬೇಕೆಂಬುದು ಬಹಳಷ್ಟು ಜನರ ಮನದಿಂಗಿತವಾಗಿದೆ. ರಾಜ್ಯದಿಂದ ದೆಹಲಿ ಮಟ್ಟದವರೆಗೆ ಈ ಬಗ್ಗೆ ಚರ್ಚೆ ನಡೆದಿದೆ ಎಂದು ತಿಳಿಸಿದರು.

    ಸರ್ಕಾರವು ತಮಗೆ ಬೇಕಾದ ಹಿರಿಯರನ್ನು ಇಟ್ಟುಕೊಂಡು ಬೇಡವಾದ ಹಿರಿಯರನ್ನು ಹೊರ ಹಾಕುತ್ತಿದ್ದಾರೆ. ಇಲ್ಲಿ ಸ್ವಜನ ಪಕ್ಷಪಾತ ನಡೆದಿದೆ. ನಾವು ಅಪೇಕ್ಷೆಪಟ್ಟಂತೆ ರಾಜ್ಯದಲ್ಲಿ ಹಿಂದುತ್ವ ಇಲ್ಲ. ಇದರಿಂದ ಸಾಕಷ್ಟು ಜನರಿಗೆ ನೋವಿದೆ. ನಾನು ಹಿಂದುತ್ವದಿಂದಲೇ ಮೇಲೆ ಬಂದಿದ್ದೇನೆ. ಹೀಗಾಗಿ ಬ್ರಿಗೇಡ್ ಮಾಡಿ ಆ ಮೂಲಕ ಹಿಂದುತ್ವದ ಋಣ ತೀರಿಸಲು ಮುಂದಾಗಿದ್ದೇನೆ. ಹಿಂದುತ್ವ ರಕ್ಷಣೆಗೆ ಸಿದ್ದರಾಮಯ್ಯ ನಿಲ್ಲಲಿ. ಯಾವ ವ್ಯಕ್ತಿ ಕುಂಕುಮ, ಕೇಸರಿ ಕಂಡರೆ ಮೈಮೇಲೆ ಭೂತ ಬಂದವರಂತೆ ಆಡುತ್ತಾರೆ ಅವರೆ ರಕ್ಷಣೆಗೆ ನಿಲ್ಲಲಿ. ಹಗರಣ ಮೈಮೇಲೆ ಬರುತ್ತಿದ್ದಂತೆ ಸೌದತ್ತಿ ಯಲ್ಲಮ್ಮಗೂ ಹೋಗುತ್ತಾರೆ, ಚಾಮುಂಡಿಗೂ ಹೋಗುತ್ತಾರೆ. ಎದೆಯಲ್ಲಿ ಇಷ್ಟಾದರೂ ಹಿಂದುತ್ವ ಇದೆ ಎಂಬುದಕ್ಕೆ ನಿಮಗೆ ಧನ್ಯವಾದ ತಿಳಿಸುತ್ತೇನೆ. ಹಿಂದುತ್ವ ಉಳಿಸಿದರೆ ಚಾಮುಂಡಿ ನಿಮ್ಮನ್ನು ಉಳಿಸುತ್ತಾಳೆ. ಇದು ನಾಟಕೀಯವಾಗಿದ್ದರೆ ಯಲ್ಲಮ್ಮ, ಚಾಮುಂಡಿಯೇ ಶಿಕ್ಷೆ ಕೊಡಿಸುತ್ತಾರೆ ಎಂದು ಹೇಳಿದರು.

    ಜೋಶಿ ಕುಟುಂಬದ ಮೇಲಿನ ಆಪಾದನೆ ವಿಚಾರ:
    ಪ್ರಹ್ಲಾದ್ ಜೋಶಿ ಅವರ ಕುಟುಂಬಸ್ಥರ ಮೇಲೆ ಆಪಾದನೆ ಬಂದಿರುವುದು ದುರ್ದೈವ. ತಕ್ಷಣ ತನಿಖೆ ಆಗಬೇಕು. ತಲೆ ಮರೆಸಿಕೊಳ್ಳುವ ಬದಲು ಸ್ಪಷ್ಟನೆ ಕೊಡಬಹುದಿತ್ತು. ಆದರೆ ಯಾಕೆ ತಲೆ ಮರೆಸಿಕೊಂಡರು ಗೊತ್ತಿಲ್ಲ. ಬೇಲಿನೆ ಎದ್ದು ಹೊಲ ಮೇಯ್ದಂತೆ ಆಗಬಾರದು. ಹಿಂದುತ್ವದ ಹೆಸರು ಹೇಳಿಕೊಂಡು ಮಾಡಬಾರದ್ದನ್ನು ಮಾಡುವವರ ಬಗ್ಗೆ ಸಮಾಜ ಎಚ್ಚರ ವಹಿಸಬೇಕೆಂದು ಮನವಿ ಮಾಡಿದರು.ಇದನ್ನೂ ಓದಿ: 700 ಶಾರ್ಪ್‌ ಶೂಟರ್ಸ್‌.. ಸ್ಟಾರ್‌ ನಟ, ಜನಪ್ರಿಯ ವ್ಯಕ್ತಿಗಳೇ ಟಾರ್ಗೆಟ್‌ – ಮುಂಬೈ ಭೂಗತ ಜಗತ್ತಿಗೆ ಬಿಷ್ಣೋಯ್‌ ಗ್ಯಾಂಗ್‌ ಎಂಟ್ರಿ?

  • ಚರಂಡಿಯಲ್ಲಿ ಬಿದ್ದು ಎರಡು ವರ್ಷದ ಮಗು ಸಾವು

    ಚರಂಡಿಯಲ್ಲಿ ಬಿದ್ದು ಎರಡು ವರ್ಷದ ಮಗು ಸಾವು

    – ಪಾಲಿಕೆಯ ವಿರುದ್ಧ ಕುಟುಂಬಸ್ಥರ ಆಕ್ರೋಶ

    ವಿಜಯಪುರ: ಚರಂಡಿಯಲ್ಲಿ ಬಿದ್ದು ಎರಡು ವರ್ಷದ ಮಗು ಸಾವನ್ನಪ್ಪಿದ್ದ ದಾರುಣ ಘಟನೆ ನಗರದ ಬಡಿಕಮಾನ್ ರಸ್ತೆಯ ಬಳಿ ನಡೆದಿದೆ.

    ಮೃತ ಮಗುವನ್ನು 2 ವರ್ಷದ ಯಾಸೀನ್ ಸದ್ದಾಂ ಮುಲ್ಲಾ ಎಂದು ಗುರುತಿಸಲಾಗಿದೆ.

    ಕಳೆದ ಕೆಲವು ದಿನಗಳ ಹಿಂದೆ ಭಾರೀ ಮಳೆ ಹಿನ್ನೆಲೆ ಚರಂಡಿ ಮೇಲಿನ ಕಲ್ಲು ತೆಗೆಯಲಾಗಿತ್ತು. ಬಳಿಕ ಮಹಾನಗರ ಪಾಲಿಕೆಯವರು (City Corporation) ಚರಂಡಿಯ ಮೇಲ್ಭಾಗವನ್ನು ಮುಚ್ಚಿರಲಿಲ್ಲ. ಇದರಿಂದಾಗಿ ಮಂಗಳವಾರ (ಅ.15) ಸಂಜೆ ಮಗು ಚರಂಡಿಗೆ ಬಿದ್ದು ಸಾವನ್ನಪ್ಪಿದೆ. ಅವಘಡಕ್ಕೆ ಮಹಾನಗರ ಪಾಲಿಕೆಯ ನಿರ್ಲಕ್ಷ್ಯವೇ ಕಾರಣ ಎಂದು ಮಗುವಿನ ಕುಟುಂಬಸ್ಥರು ಆರೋಪಿಸಿದ್ದಾರೆ.

    ಮಹಾನಗರ ಪಾಲಿಕೆಯ ವಿರುದ್ಧ ಸ್ಥಳೀಯರು, ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಗೋಳಗುಮ್ಮಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ (Gol Gumbaz Police Station) ಈ ಘಟನೆ ನಡೆದಿದೆ.

  • ನಾನು ರಾಜಕಾರಣ ಮಾತಾಡಲ್ಲ.. ಮೋದಿಗಾಗಿ ಮಾತ್ರ ಮಾತನಾಡ್ತೀನಿ: ಚಕ್ರವರ್ತಿ ಸೂಲಿಬೆಲೆ

    ನಾನು ರಾಜಕಾರಣ ಮಾತಾಡಲ್ಲ.. ಮೋದಿಗಾಗಿ ಮಾತ್ರ ಮಾತನಾಡ್ತೀನಿ: ಚಕ್ರವರ್ತಿ ಸೂಲಿಬೆಲೆ

    – ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ದೇವರ ಮುಂದೆ ನಿಂತು ಕಣ್ಣೀರು ಹಾಕಿ

    ವಿಜಯಪುರ: ನಾನು ರಾಜಕಾರಣ ಮಾತನಾಡಲ್ಲ, ಮೋದಿಗಾಗಿ ಮಾತ್ರ ರಾಜಕಾರಣ ಮಾತನಾಡಿದ್ದೇನೆ ಎಂದು ವಾಗ್ಮಿ ಚಕ್ರವರ್ತಿ ಸೂಲಿಬೆಲೆ (Chakravarthy Sulibele) ತಿಳಿಸಿದರು.

    ವಿಜಯಪುರದಲ್ಲಿ (Vijayapura) ಮಾತನಾಡಿದ ಅವರು, ಈಗ ಕಾಂಗ್ರೆಸ್‌ಗೆ ವೋಟು ಹಾಕಿದ್ದಕ್ಕೆ ದೇವರ ಮುಂದೆ ನಿಂತು ಕಣ್ಣೀರು ಹಾಕಿ ಎಂದು ಹೇಳಿದರು. ಇದನ್ನೂ ಓದಿ: ಅತ್ಯಾಚಾರ ಕೇಸ್‌- ಶಾಸಕ ಮುನಿರತ್ನಗೆ ಜಾಮೀನು

    ಗಲಭೆ ಮಾಡಿದವರನ್ನ ಪೊಲೀಸರು ಬಂಧಿಸಿದಾಗ, ಸಚಿವರೇ.. ‘ಅವರು ಅಮಾಯಕರು ಬಿಡಿ’ ಎಂದು ಪತ್ರ ಬರೆಯುತ್ತಾರೆ. ಜ್ಞಾನ ದೇಗುಲ ಹೆಸರು, ಕಾಲೇಜುಗಳಲ್ಲಿ ಸರಸ್ವತಿ ಪೂಜೆ ನಿಲ್ಲಿಸಿದ್ರು ಎಂದು ಕಾಂಗ್ರೆಸ್‌ ವಿರುದ್ಧ ಆಕ್ರೋಶ ಹೊರಹಾಕಿದರು.

    ಇಂದು ವಕ್ಫ್‌ ಬೋರ್ಡ್‌ಗೆ ಯುವಕರು ಕಳೆದುಕೊಂಡರೆ, ನಾಳೆ ತಲೆ ತಗ್ಗಿಸಿಕೊಂಡು ನಮ್ಮ ಭೂಮಿಯನ್ನ ಕೊಡಬೇಕಾಗುತ್ತೆ. ನಾಳೆ ನಮ್ಮದೇ ಹಿಂದೂಗಳು, ಇಷ್ಟು ಭೂಮಿ ಕೊಟ್ಟರೆ ಏನಾಗುತ್ತೆ ಕೊಡಿ ಎನ್ನುತ್ತಾರೆ. ಈಗ ಹೋರಾಡುವ ಸಮಯ ಎಂದು ಎಚ್ಚರಿಸಿದರು. ಇದನ್ನೂ ಓದಿ: ಪರಿಶಿಷ್ಟ ಪಂಗಡಗಳ ಜಾತಿ ಪ್ರಮಾಣಪತ್ರ ಗೊಂದಲ ನಿವಾರಣೆಗೆ ಕ್ರಮ: ಸಿದ್ದರಾಮಯ್ಯ

    ವಿಜಯಪುರದಲ್ಲಿ ಅತಿ ಹೆಚ್ಚು ಸ್ಲೀಪರ್ ಸೆಲ್‌ಗಳಿದ್ದಾರೆ.‌ ಇಲ್ಲಿಯೆ ಕುಂತು ಮಾಹಿತಿ ಕೊಡ್ತಾರೆ. ವಕ್ಫ್‌ ಬೋರ್ಡ್ ಹೋರಾಟ ವಿಜಯಪುರದ ಹೋರಾಟ ಅಲ್ಲ, ತಮಿಳುನಾಡಿನಿಂದ ಶುರುವಾಗಿದೆ. ಇಸ್ಲಾಂ ಧರ್ಮ ಹುಟ್ಟಿಯೇ ಇರಲಿಲ್ಲ, ಆಗ ಹಿಂದೂ ದೇಗುಲಗಳಲ್ಲಿ ಗಂಟೆ, ಜಾಗಟೆ ಸದ್ದು ಕೇಳ್ತಿದ್ವು ಎಂದರು.

    ವಿಜಯಪುರದಲ್ಲಿ ಹಿಂದೂಗಳು ಜಾಗೃತರಾಗಿದ್ದಾರೆ. ವಿಜಯಪುರದಿಂದಲೇ ಹಿಂದೂಸ್ತಾನ ಹೋರಾಟ ಆರಂಭವಾಗಲಿದೆ. ವಿಜಯಪುರದ ಒಂದಿಂಚು ಜಾಗ ಮುಟ್ಟಲು ಬಿಡಲ್ಲ ಎಂದು ತಿಳಿಸಿದರು.