ವಿಜಯಪುರ: ದೂರುದಾರ ಸ್ನೇಹಮಯಿ ಕೃಷ್ಣಗೆ (Snehamayi Krishna) ರಕ್ಷಣೆ ಕೊಡಲು ನಾವು ಬದ್ಧ ಎಂದು ಸಚಿವ ಎಂ.ಬಿ ಪಾಟೀಲ ಹೇಳಿದರು.
ಜಿಲ್ಲೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯರನ್ನು (CM Siddaramaiah) ಅರೆಸ್ಟ್ ಮಾಡಲು ಸ್ನೇಹಮಯಿ ಕೃಷ್ಣ ಆಗ್ರಹಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಬಂಧನ ಯಾಕೆ ಆಗಬೇಕು. ದೂರುದಾರರಿಗೆ ರಕ್ಷಣೆ ಕೊಡಲು ನಮ್ಮಲ್ಲಿ ಇದ್ದಾರೆ. ಆ ರೀತಿ ಸಿದ್ದರಾಮಯ್ಯ ಆಗಲಿ ಅಥವಾ ಬೇರೆಯಾರೇ ಆಗಲಿ ನಮ್ಮಲ್ಲಿ ಮಾಡುವುದಿಲ್ಲ. ನಿರ್ಭೀತಿಯಿಂದ ಅವರು ಇರಬಹುದು ಎಂದು ಪ್ರತಿಕ್ರಿಯಿಸಿದರು.ಇದನ್ನೂ ಓದಿ: ಸರ್ಕಾರಿ ಆಸ್ಪತ್ರೆ ವೈದ್ಯೆಯ ಯಡವಟ್ಟಿಗೆ ಬಾಣಂತಿ ಬಲಿ!
ಖರ್ಗೆ ಕುಟುಂಬದಿಂದ ಸಿಎ ಸೈಟ್ ವಾಪಸ್ ವಿಚಾರ:
ಇದೇ ವೇಳೆ ಖರ್ಗೆ ಕುಟುಂಬ ಸಿಎ ಸೈಟ್ (CA Site) ವಾಪಸ್ ನೀಡಿರುವ ವಿಚಾರವಾಗಿ ಮಾತನಾಡಿ, ನಾನು ದೇಶದಲ್ಲಿ ಇರಲಿಲ್ಲ. ಬೆಂಗಳೂರಿಗೆ ಹೋಗಿಲ್ಲ. ಸಿದ್ದಾರ್ಥ ವಿಹಾರ ಟ್ರಸ್ಟ್ನ ಸಿಎ ಸೈಟ್ ವಾಪಸ್ ನೀಡಿದ್ದರ ಬಗ್ಗೆ ನನಗೆ ಗೊತ್ತಿಲ್ಲ, ನಾನು ಅಮೇರಿಕಾದಿಂದ ನೇರವಾಗಿ ವಿಜಯಪುರ ಬಂದಿದ್ದೇನೆ. ನಾನು ಬೆಂಗಳೂರು ಹೋದ ನಂತರ ನೋಡುತ್ತೇನೆ. ಗೊತ್ತಿರದ ವಿಷಯದ ಕುರಿತು ನಾನು ಹೇಗೆ ಮಾತನಾಡಲಿ ಎಂದು ಪ್ರಶ್ನಿಸಿದ್ದಾರೆ.
ಗೌರಿ ಲಂಕೇಶ್ ಹತ್ಯೆ ಕೇಸ್ ವಿಚಾರ:
ಗೌರಿ ಲಂಕೇಶ್ (Gauri Lankesh) ಹತ್ಯೆ ಕೇಸ್ ಆರೋಪಿಗಳಿಗೆ ಸನ್ಮಾನ ಮಾಡಿದ್ದು ಅತ್ಯಂತ ಕೆಟ್ಟ ಕೆಲಸ. ಸನ್ಮಾನ ಮಾಡಿದ್ದಾರೆ ಎಂಬುದನ್ನು ನಾನು ನೋಡಿದ್ದೇನೆ. ಈ ರೀತಿ ಉಮೇಶ ವಂದಾಲ ಆಂಡ್ ಕಂಪನಿ ಎಂಬುವವರು ಮಾಡಿದ್ದಾರೆ. ಯಾರು ಸ್ವಾಗತ ಮಾಡಿ, ಸನ್ಮಾನ ಮಾಡಿದ್ದಾರೆ ಅವರು ಅರಿತುಕೊಳ್ಳಬೇಕು. ಯಾರ ಜೀವವನ್ನು ತಗೆದುಕೊಳ್ಳಲು ಯಾರಿಗೂ ಹಕ್ಕಿಲ್ಲ ಎಂದರು.
ಎಂ.ಎಂ ಕಲಬುರಗಿ (MM Kalaburagi) ಅವರು ವಿಜಯಪುರದ ಮಗ, ಹೆಮ್ಮೆಯ ಪುತ್ರ. ಅವರು ಸಿಂದಗಿ ತಾಲೂಕಿನ ಯರಗಲ್ನವರು. ನಮ್ಮ ಜಿಲ್ಲೆಯ ಒಬ್ಬ ಮೇಧಾವಿ, ಸಾಹಿತಿಯನ್ನು ಕೊಂದವರಿಗೆ ಇವರು ಸನ್ಮಾನ ಮಾಡುತ್ತಾರೆ ಎಂದರೆ ಅದೊಂದು ಹೇಯ ಕೃತ್ಯ. ಹೊಲಸು ಕೃತ್ಯ. ಅದರ ಬಗ್ಗೆ ನಾನು ವಿಚಾರ ಮಾಡುತ್ತೇನೆ. ಸಾಧ್ಯವಾದರೆ ಕೇಸ್ ಕೂಡ ಮಾಡುತ್ತೇನೆ ಎಂದು ತಿಳಿಸಿದರು.ಇದನ್ನೂ ಓದಿ: ಗದಗ, ಧಾರವಾಡದಲ್ಲಿ ಧಾರಾಕಾರ ಮಳೆ- ರಸ್ತೆ ಸಂಪರ್ಕ ಸಂಪೂರ್ಣ ಬಂದ್
ವಿಜಯಪುರ: ದೇವರಹಿಪ್ಪರಗಿ (Devarahipparagi) ಕ್ಷೇತ್ರದ ಜೆಡಿಎಸ್ (JDS) ಶಾಸಕ ರಾಜುಗೌಡ ಪಾಟೀಲ್ (Rajugouda Patil) ಅವರ ತಾಯಿ ವಯೋಸಹಜ ಕಾಯಿಲೆಗಳಿಂದ ನಿಧನರಾಗಿದ್ದಾರೆ.
ಶಾಸಕ ರಾಜೂಗೌಡ ತಾಯಿ ನೀಲಮ್ಮಗೌಡತಿ ಪಾಟೀಲ್ (NeelammaGoudti Patil) ತಮ್ಮ 70ನೇ ವಯಸ್ಸಿನಲ್ಲಿ ನಿಧನ ಹೊಂದಿದರು. ವಯೋ ಸಹಜ ಖಾಯಿಲೆಗಳಿಂದ ಬಳಲುತ್ತಿದ್ದ ಅವರು ಇಂದು ಬಸವನ ಬಾಗೇವಾಡಿ (Basavana Bagewad) ತಾಲೂಕಿನ ಸ್ವಗ್ರಾಮ ಕುದರಿಸಾಲವಾಡಗಿ (Kudari Salawadgi) ನಿವಾಸದಲ್ಲಿ ಕೊನೆಯುಸಿರೆಳೆದರು.ಇದನ್ನೂ ಓದಿ: ಜಗಳವಾಡಿಕೊಂಡು ತವರು ಮನೆ ಸೇರಿದ್ದ ಹೆಂಡತಿ – ಅತ್ತೆಯನ್ನೇ ಕೊಂದು ಅಳಿಯ ಎಸ್ಕೇಪ್
ಶಾಸಕ ರಾಜುಗೌಡ ಸೇರಿದಂತೆ ಮೂವರು ಪುತ್ರರು, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ. ವಿವಿಧ ಮಠಾಧೀಶರು, ಜಿಲ್ಲಾ ಉಸ್ತುವಾರಿ ಸಚಿವ ಎಂಬಿ ಪಾಟೀಲ್ (MB Patil), ಸಚಿವ ಶಿವಾನಂದ ಪಾಟೀಲ್ (Shivanand Patil) ಇತರೆ ಜನಪ್ರತಿನಿಧಿಗಳ ಸಂತಾಪ ಸೂಚಿಸಿದ್ದಾರೆ.
-ರಾಜ್ಯದ 1.12 ಲಕ್ಷ ಎಕರೆ ವಕ್ಫ್ ಆಸ್ತಿಯಲ್ಲಿ 85 ಸಾವಿರ ಎಕರೆ ಅತಿಕ್ರಮಣವಾಗಿದೆ
– ರಾಜ್ಯದಲ್ಲೇ ವಿಜಯಪುರದಲ್ಲಿ ಅತಿ ಹೆಚ್ಚು ವಕ್ಫ್ ಆಸ್ತಿ ಇದೆ ಎಂದ ಸಚಿವ
ವಿಜಯಪುರ: ವಕ್ಫ್ ಆಸ್ತಿ (Waqf Property) ದೇವರ ಆಸ್ತಿ, ಅದರ ಕಬಳಿಕೆ ಅಥವಾ ಹಗರಣ ಆಗಬಾರದು, ರಕ್ಷಿಸುವ ಕೆಲಸವಾಗಬೇಕು. ಸದ್ಯ ರಾಜ್ಯದಲ್ಲಿರುವ ಒಟ್ಟು 1.12 ಲಕ್ಷ ಎಕರೆ ವಕ್ಫ್ ಆಸ್ತಿಯಲ್ಲಿ 85,000 ಎಕರೆ ಅತಿಕ್ರಮಣವಾಗಿ ಕೇವಲ 23,000 ಎಕರೆ ಮಾತ್ರ ಉಳಿದಿದೆ. ಆದ್ದರಿಂದ ಪ್ರತಿಯೊಬ್ಬರೂ ವಕ್ಫ್ ಆಸ್ತಿ ಸಂರಕ್ಷಣೆಗೆ ಮುಂದಾಗಬೇಕು ಎಂದು ಸಚಿವ ಜಮೀರ್ ಅಹ್ಮದ್ ಖಾನ್ (Zameer Ahmed Khan) ಕರೆ ನೀಡಿದರು.
ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ, ವಕ್ಫ್ ಇಲಾಖೆ ಹಾಗೂ ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಸಹಯೋಗದಲ್ಲಿ ಜಿಲ್ಲೆಯ ಮುತ್ತವಲ್ಲಿಗಳ ಸಮ್ಮೇಳನ ಹಾಗೂ ವಕ್ಫ್ ಅದಾಲತ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿ, ವಕ್ಫ್ ಆಸ್ತಿ ಸಂರಕ್ಷಣೆ ಹಾಗೂ ವಿವಿಧ ಸಮಸ್ಯೆಗಳ ಪರಿಹಾರಕ್ಕಾಗಿ ಈವರೆಗೆ ರಾಜ್ಯದಾದ್ಯಂತೆ 10 ಜಿಲ್ಲೆಗಳಲ್ಲಿ ವಕ್ಫ್ ಅದಾಲತ್ ಹಮ್ಮಿಕೊಳ್ಳಲಾಗಿದ್ದು, ಅದರಂತೆ ಸೋಮವಾರ ವಿಜಯಪುರದಲ್ಲಿ 11ನೇ ಅದಾಲತ್ ನಡೆಯಿತು. ಕಳೆದ 10-15 ವರ್ಷಗಳಿಂದ ಬಾಕಿ ಉಳಿದ ವಕ್ಫ್ ಖಾತೆ ಬದಲಾವಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ನಾನು ಸಚಿವನಾದ ಮೇಲೆ 727 ಖಾತೆ ಬದಲಾವಣೆಗೆ ಕ್ರಮ ವಹಿಸಲಾಗಿದೆ ಎಂದು ಅವರು ಹೇಳಿದರು. ಇದನ್ನೂ ಓದಿ: ವಿನೇಶ್ ಫೋಗಟ್ಗೆ ಆರಂಭಿಕ ಮುನ್ನಡೆ – ಜಮ್ಮು-ಕಾಶ್ಮೀರ, ಹರಿಯಾಣದಲ್ಲಿ ಕಾಂಗ್ರೆಸ್ಗೆ ಭರ್ಜರಿ ಮುನ್ನಡೆ
ಅದಾಲತ್ನಲ್ಲಿ ವಕ್ಫ್ ಆಸ್ತಿಗಳ ಅತಿಕ್ರಮಣದ 17 ಅರ್ಜಿಗಳು, ಖಬರಸ್ಥಾನ (ಸ್ಮಶಾನ)ಕ್ಕೆ ಸಂಬಂಧಿಸಿದ್ದು, ಖಾತೆ ಬದಲಾವಣೆಯ 81 ಅರ್ಜಿಗಳು, ಸರ್ವೇ ಕಾರ್ಯಕ್ಕಾಗಿ 25 ಅರ್ಜಿಗಳು ಸೇರಿದಂತೆ ಒಟ್ಟು 330 ಅರ್ಜಿಗಳು ಸಲ್ಲಿಕೆಯಾಗಿವೆ. ಇಲ್ಲಿ ಸಲ್ಲಿಕೆಯಾದ ಅರ್ಜಿಗಳು ಯಾವುದೇ ಕಾರಣಕ್ಕೂ ವ್ಯರ್ಥವಾಗುವುದಿಲ್ಲ, ಪ್ರತಿಯೊಂದು ಅರ್ಜಿಗಳಿಗೂ ಸ್ಪಂದಿಸಲಾಗುವುದು. ಸ್ವೀಕರಿಸಲಾದ ಅರ್ಜಿಗಳಿಗೆ ಸಂಬಂಧಿಸಿದಂತೆ ಶೀಘ್ರವೇ ಸಭೆ ನಡೆಸಿ, ಅಧಿಕಾರಿಗಳಿಗೆ ಒಂದು ತಿಂಗಳ ಕಾಲಾವಕಾಶ ಒದಗಿಸಿ ನಿಗದಿತ ಅವಧಿಯಲ್ಲಿಯೇ ಈ ಅರ್ಜಿಗಳ ಪರಿಹಾರಕ್ಕೆ ಕ್ರಮ ವಹಿಸಲಾಗುವುದು ಎಂದು ಅವರು ಹೇಳಿದರು. ಇದನ್ನೂ ಓದಿ: ರಾಜಕೀಯ ಕೈದಿಗಳಿಗೆ ಕ್ಷಮಾದಾನ, ಆರ್ಟಿಕಲ್ 370 ಮರುಸ್ಥಾಪನೆ – J&K ನಲ್ಲಿ ಪಕ್ಷಗಳ ಪ್ರಣಾಳಿಕೆ ಬಲ ನೀಡುತ್ತಾ?
ರಾಜ್ಯದಲ್ಲಿಯೇ ವಿಜಯಪುರದಲ್ಲಿ ಅತಿ ಹೆಚ್ಚು ವಕ್ಫ್ ಆಸ್ತಿ ಹೊಂದಿದೆ. ವಕ್ಫ್ ಆಸ್ತಿಯ ಸದ್ಭಳಕೆ ಮಾಡಿಕೊಂಡು ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಸೂರು ಕಲ್ಪಿಸುವ ಸದುದ್ದೇಶ ಹೊಂದಲಾಗಿದೆ. ರಾಜ್ಯದಲ್ಲಿ ಒಟ್ಟು 1.12 ಲಕ್ಷ ಎಕರೆ ವಕ್ಫ್ ಆಸ್ತಿಯಲ್ಲಿ 85 ಸಾವಿರ ಎಕರೆ ಅತಿಕ್ರಮಣವಾಗಿ ಕೇವಲ 23,000 ಎಕರೆ ಮಾತ್ರ ಉಳಿದಿದೆ. ವಕ್ಫ್ ಆಸ್ತಿ ಕಬಳಿಕೆ- ಹಗರಣಕ್ಕೆ ಮುಂದಾಗಬಾರದು. ವಕ್ಫ್ ಆಸ್ತಿ ದೇವರ ಆಸ್ತಿ, ಇದರ ಸಂರಕ್ಷಣೆ ನಮ್ಮ ಜವಾಬ್ದಾರಿಯಾಗಿದ್ದು, ಪ್ರತಿಯೊಬ್ಬರು ವಕ್ಫ್ ಆಸ್ತಿ ಸಂರಕ್ಷಣೆಗೆ ಮುಂದಾಗಬೇಕು ಎಂದು ಅವರು ಕರೆ ನೀಡಿದರು.
ವಕ್ಫ್ ಅನುದಾನ ಮರಳಿ ಪಡೆಯಲಾಗಿದೆ
ಹಣಕಾಸು ಇಲಾಖೆಗೆ ಮರಳಿ ಹೋದ ವಕ್ಫ್ ಅನುದಾನವನ್ನು ನಾನು ಸಚಿವನಾದ ಮೇಲೆ ಮತ್ತೆ ಮರಳಿ ಪಡೆಯಲಾಗಿದೆ. ಯಾವುದೇ ಸಮಾಜದ ಅಭಿವೃದ್ದಿಯಾಗಬೇಕಾದರೆ ಶಿಕ್ಷಣ ಅತ್ಯಂತ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಈ ಅನುದಾನ ಬಳಸಿಕೊಂಡು ಅಲ್ಪಸಂಖ್ಯಾತ ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡಿ, ರಾಜ್ಯದ 15 ಜಿಲ್ಲೆಗಳಲ್ಲಿ ವಕ್ಫ್ ಮಂಡಳಿಯಿಂದ ಪಿಯು ಕಾಲೇಜು ನಿರ್ಮಾಣ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ರಾಜ್ಯದ ಪ್ರತಿಯೊಂದು ಜಿಲ್ಲೆಗಳಲ್ಲಿ ಕಾಲೇಜ್ ನಿರ್ಮಾಣದ ಉದ್ದೇಶ ಹೊಂದಲಾಗಿದೆ ಎಂದು ಹೇಳಿದರು. ಇದನ್ನೂ ಓದಿ: ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ತುಳು ನಾಡಿದ ದೈವ ನರ್ತನ – ಕಾನೂನು ಸಮರಕ್ಕೆ ಮುಂದಾಗಿರುವ ಕೊಡಗು ದೈವ ನರ್ತಕರ ಸಂಘ
ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಅತಿ ಹೆಚ್ಚು ಶಿಕ್ಷಣಕ್ಕಾಗಿ ಒತ್ತು ನೀಡಲಾಗುತ್ತಿದೆ. ಕೇಂದ್ರ ಸರ್ಕಾರದಿಂದ ಸ್ಥಗಿತಗೊಂಡಿದ್ದ ವಿದ್ಯಾರ್ಥಿವೇತನ ಪುನ ಒದಗಿಸಲಾಗುತ್ತಿದೆ. ಇಡೀ ದೇಶದಲ್ಲಿಯೇ ಮಾದರಿಯಾದ ಹಜ್ ಭವನ ಕರ್ನಾಟಕದಲ್ಲಿ ನಿರ್ಮಿಸಲಾಗಿದೆ. ಸಮಾಜದ ಮಕ್ಕಳು ಉನ್ನತ ಶಿಕ್ಷಣ ಪಡೆದು, ಉನ್ನತ ಹುದ್ದೆ ಪಡೆಯಲು ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ದಿ ನಿಗಮದಿಂದ 1,300 ವಿದ್ಯಾರ್ಥಿಗಳಿಗೆ ನೆರವು ಒದಗಿಸಲಾಗಿದೆ. ವಿದೇಶದಲ್ಲಿ ವ್ಯಾಸಂಗಕ್ಕಾಗಿ ನೆರವು ಒದಗಿಸಲಾಗುತ್ತಿದೆ. ನಿರುದ್ಯೋಗಿ ಯುವಕರಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ವಾಹನ ಖರೀದಿಗೆ ಸಬ್ಸಿಡಿ ಒದಗಿಸಲಾಗುತ್ತಿದೆ. ಮದರಸಾಗಳಲ್ಲಿ ಶಿಕ್ಷಕರನ್ನು ನೇಮಕ ಮಾಡಿ ಗುಣಮಟ್ಟದ ಶಿಕ್ಷಣ ಒದಗಿಸಲಾಗುತ್ತಿದೆ. ಹಜ್ ಭವನದಲ್ಲಿ 400 ವಿದ್ಯಾರ್ಥಿಗಳಿಗೆ ಐಎಎಸ್, ಐಪಿಎಸ್, ಕೆಎಎಸ್ ತರಬೇತಿ ನೀಡಲಾಗುತ್ತಿದೆ ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಅಬ್ದುಲ ಜಬ್ಬಾರ, ಸಿಂದಗಿ ಶಾಸಕ ಅಶೋಕ ಮನಗೂಳಿ, ನಾಗಠಾಣ ಶಾಸಕ ವಿಠ್ಠಲ ಕಟಕದೊಂಡ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಅನ್ವರಬಾಶಾ ಅವರು ಮಾತನಾಡಿದರು. ಮೌಲಾನಾ ತನ್ವೀರ ಪೀರಾ ಹಾಸ್ಮೀ ಕಾರ್ಯಕ್ರಮದ ಸಾನಿಧ್ಯ ವಹಿಸಿದ್ದರು. ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಕನ್ನಾನ್ ಮುಶ್ರೀಫ್ ಸೇರಿದಂತೆ ಇತರರು ಉಪಸ್ಥಿತರಿದ್ದರು. ಇದನ್ನೂ ಓದಿ: ಒಂದೇ ಗಂಟೆಯೊಳಗೆ 120ಕ್ಕೂ ಹೆಚ್ಚು ಹಿಜ್ಬುಲ್ಲಾ ಉಗ್ರರ ತಾಣಗಳನ್ನು ಧ್ವಂಸ ಮಾಡಿದ ಇಸ್ರೇಲ್
ವಿಜಯಪುರ: ನಮ್ಮ ಹೈಕಮಾಂಡ್ ಹೇಳಬೇಕು, ಇವ್ರು ಯಾರು ಹೇಳೋಕೆ ಎಂದು ವಿಜಯೇಂದ್ರ ಹೇಳಿಕೆ ವಿಚಾರವಾಗಿ ಸಚಿವ ಜಮೀರ್ ಅಹ್ಮದ್ (Zammer Ahmed) ಟಾಂಗ್ ಕೊಟ್ಟಿದ್ದಾರೆ.
ವಿಜಯಪುರದಲ್ಲಿ (Vijayapura) ಮಾತನಾಡಿದ ಅವರು, ದಸರಾ ಬಳಿಕ ಸಿದ್ದರಾಮಯ್ಯ (CM Siddaramaiah) ರಾಜೀನಾಮೆ ನೀಡುತ್ತಾರೆ ವಿಜಯೇಂದ್ರ ಹೇಳಿದ್ದಾರೆ. ನಿವೇನು ಕಾಂಗ್ರೆಸ್ (Congress) ಹೈಕಮಾಂಡಾ? ನೀವು ಬಿಜೆಪಿ ಪಕ್ಷದ ಅಧ್ಯಕ್ಷರು. ನೀವು ಹೇಳಿದಾಗ ರಾಜೀನಾಮೆ ನೀಡೋಕೆ ಆಗತ್ತಾ? ಎಂದು ಪ್ರತಿಕ್ರಿಯಿಸಿದ್ದಾರೆ.ಇದನ್ನೂ ಓದಿ: ಪೋಕ್ಸೋ ಕೇಸ್ – ಮುರುಘಾ ಶ್ರೀಗೆ ಜಾಮೀನು ಮಂಜೂರು
ನಮ್ಮ ಪಕ್ಷದ ಹೈಕಮಾಂಡ್ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಇದ್ದಾರೆ. ನಮ್ಮ ಹೈಕಮಾಂಡ್ ಸಿದ್ದರಾಮಯ್ಯ ಜೊತೆಗೆ ಇದೆ. ಇದನ್ನು ನಮ್ಮ ಹೈಕಮಾಂಡ್ ಹೇಳಬೇಕು, ಇವ್ರು ಯಾರು ಹೇಳೋಕೆ? ನಮ್ಮ ಪಕ್ಷದ ವಿಚಾರ ಹೇಳೋಕೆ ವಿಜಯೇಂದ್ರ ಯಾರು? ನೂರಕ್ಕೆ ನೂರು ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿಯುತ್ತಾರೆ. ರಾಜೀನಾಮೆ ಇಲ್ಲ ಎಂದು ವೇಣುಗೋಪಾಲ, ಸುರ್ಜೆವಾಲಾ ಬೆಂಗಳೂರಲ್ಲಿ ಸುದ್ದಿಗೋಷ್ಠಿ ಮಾಡಿದ್ದಾರೆ. ಹೈಕಮಾಂಡ್ ನಿಮ್ಮ ಜೊತೆ ಇದೆ ಎಂದು ಬೆಂಗಳೂರಿಗೆ ಬಂದು ಹೇಳಿದ್ದಾರೆ ಎಂದು ಕಿಡಿಕಾರಿದರು.
ಸತೀಶ್ ಜಾರಕಿಹೊಳಿ ಸಿಎಂ ಘೋಷಣೆ ವಿಚಾರ:
ಸತೀಶ್ ಜಾರಕಿಹೊಳಿ (Satish Jarkiholi) ಸಿಎಂ ಘೋಷಣೆ ವಿಚಾರವಾಗಿ ಮಾತನಾಡಿ, ಕಾರ್ಯಕ್ರಮವೊಂದರಲ್ಲಿ ಜನಾ ಕೂಗುತ್ತಾರೆ. ಅಭಿಮಾನಿಗಳು ಕೂಗಿದ ತಕ್ಷಣ ಸಿಎಂ ಆಗಿ ಬಿಡ್ತಾರಾ? ನನ್ನ ಅಭಿಮಾನಿಗಳು ಕೂಗ್ತಾರೆ, ನಾನು ಸಿಎಂ ಆಗ್ತೀನಾ ಎಂದು ವ್ಯಂಗ್ಯವಾಡಿದರು.
ವಿಜಯಪುರ: ಸರ್ಕಾರ ಕೆಡವಲು 1,000 ಕೋಟಿ ರೆಡಿ ಮಾಡಿಕೊಂಡಿದ್ದಾರೆಂದು ಬಿಜೆಪಿ (BJP) ನಾಯಕರೇ ಹೇಳಿದ್ದಾರೆ ಎಂದು ಸಚಿವ ಶರಣ ಪ್ರಕಾಶ ಪಾಟೀಲ್ (Sharan Prakash Patil), ವಿಜಯಪುರ ಶಾಸಕ ಬಸನಗೌಡ ಪಾಟೀಲ್ (Basanagouda Patil Yatnal) ಅವರ ಹೇಳಿಕೆಯನ್ನ ಪುನರುಚ್ಛರಿಸಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಯತ್ನಾಳ್ ಹೇಳಿಕೆ ವಿಚಾರವಾಗಿ ಮಾತನಾಡಿ, ಸರ್ಕಾರ ಕೆಡವಲು 1000 ಕೋಟಿ ರೂ. ತಯಾರಿ ಮಾಡಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಬಿಜೆಪಿಯಲ್ಲಿ ಅವರೊಬ್ಬ ಪ್ರಮುಖ ನಾಯಕರಿದ್ದಾರೆ. ಅವರಿಗೆ ಏನು ಮಾಹಿತಿ ಇದೆ, ನನಗೆ ಗೊತ್ತಿಲ್ಲ. ಆದ್ರೆ ಸರ್ಕಾರ ಬೀಳಿಸಲು ಬಹಳ ದೊಡ್ಡ ಹಣ ಉಪಯೋಗ ಆಗಿದೆ ಎಂದು ಎಲ್ಲರಿಗೂ ಗೊತ್ತಿದೆ. ಈ ಹಿಂದೆಯೂ 17 ಶಾಸಕರು ರಾಜೀನಾಮೆ ನೀಡಿದ್ದರು. ಇದೆಲ್ಲ ಹಣಬಲದ ಮೇಲೆ ಆಗಿದೆ. ಈಗಲೂ ಅದೇ ರೀತಿ ಪಿತೂರಿ ನಡೆಯುತ್ತಿರಬಹುದು ಎಂದು ಆಗ್ರಹಿಸಿದರು.ಇದನ್ನೂ ಓದಿ: ಭೋಪಾಲ್ನಲ್ಲಿ 1,814 ಕೋಟಿ ಮೌಲ್ಯದ ಮಾದಕ ವಸ್ತು ಸೀಜ್ – ಇಬ್ಬರು ಅರೆಸ್ಟ್
ಬಿಜೆಪಿಯವರು 4 ವರ್ಷ 2019 ರಿಂದ 2023ರ ವರೆಗೆ ರಾಜ್ಯವನ್ನ ವ್ಯವಸ್ಥಿತವಾಗಿ ಲೂಟಿ ಹೊಡೆದಿದ್ದಾರೆ. ಅವರು ಮಾಡಿದ ಕೆಲಸ ಕಾರ್ಯಗಳು, ನಡೆದುಕೊಂಡಂತಹ ರೀತಿ ಇದೆಲ್ಲವನ್ನು ನೋಡಿಯೇ ರಾಜ್ಯದ ಜನರು ನಮಗೆ ಬೆಂಬಲ ನೀಡಿದ್ದಾರೆ. 135 ಶಾಸಕರನ್ನ ಆಯ್ಕೆ ಮಾಡುವ ಮುಖಾಂತರ ಸ್ಥಿರ ಸರ್ಕಾರವನ್ನ ರಾಜ್ಯದ ಜನರು ನೀಡಿದ್ದಾರೆ. ಇದನ್ನ ಅಸ್ಥಿರಗೊಳಿಸುವ ಕೆಲಸ ಬಿಜೆಪಿ ಮಾಡುತ್ತಿದೆ. ಇದು ಸಂವಿಧಾನ ವಿರೋಧಿ ನೀತಿಯಾಗಿದೆ. ಇದರಿಂದ ರಾಜ್ಯದ ಜನರಿಗೆ ಹಾನಿಯಾಗುತ್ತಿದೆ. ರಾಜ್ಯದ ಜನರು ಇದನ್ನು ನೋಡುತ್ತಿದ್ದಾರೆ ಎಂದು ಕಿಡಿಕಾರಿದರು.
ವಿಪಕ್ಷದ ನಾಯಕ ಸ್ಥಾನಕ್ಕೆ ಆರ್.ಅಶೋಕ್ (R.Ashok) ರಾಜೀನಾಮೆ ವಿಚಾರವಾಗಿ ಮಾತನಾಡಿ, ನೋಡಿ ಅಧಿಕಾರದಲ್ಲಿದ್ದಾಗ ನೀವು ರಾಜೀನಾಮೆ ಕೊಟ್ಟು, ನಮಗೂ ಕೊಡಿ ಎಂದರೆ ಅದಕ್ಕೆ ಅರ್ಥ? ಆಗ ಅವರು ಕೊಟ್ಟಿಲ್ಲ. ಒಂದು ವೇಳೆ ಕೊಟ್ಟಿದ್ದರೆ ಸಿದ್ದರಾಮಯ್ಯ ಅವರ ರಾಜೀನಾಮೆ ಕೇಳಬಹುದಿತ್ತು. ಸಿದ್ದರಾಮಯ್ಯ (CM Siddaramaiah) ಓರ್ವ ನಿಷ್ಕಳಂಕ, ಜನಪರ ನಾಯಕ. ಒಳ್ಳೆಯ ಆಡಳಿತ ನೀಡಿರುವಂತಹ ಸಿಎಂ ಇವರು ಎಂದರು.
ಗ್ಯಾರಂಟಿಗಳ ಬಗ್ಗೆ ಬಿಜೆಪಿ ಸುಳ್ಳು ಪ್ರಚಾರ:
ಇವತ್ತು ಬಿಜೆಪಿ ಅವರಿಗೆ ತಕರಾರು ಏನು ಎಂದರೆ, ನಮ್ಮ ಸರಕಾರ ರಾಜ್ಯದ ಜನರಿಗೆ 5 ಗ್ಯಾರಂಟಿಗಳನ್ನ (Gurantee) ನೀಡಿದೆ. ಇದರಿಂದ ರಾಜ್ಯದ ಜನರ ಮನಸ್ಥಿತಿ ಬದಲಾಗುತ್ತಿದೆ ಎಂಬ ಭಯ ಬಿಜೆಪಿಯವರಿಗೆ ಕಾಡುತ್ತಿದೆ. ಅದಕ್ಕಾಗಿ ಗ್ಯಾರಂಟಿಗಳನ್ನು ನೀಡಲು ಆಗುವುದಿಲ್ಲ ಎಂದು ಬಿಜೆಪಿಯವರು ಸುಳ್ಳು ಪ್ರಚಾರ ಮಾಡಿದ್ದಾರೆ. ಆದರೆ ನಾವು ಯಶಸ್ವಿಯಾಗಿ ಗ್ಯಾರಂಟಿಗಳನ್ನ ಈಡೇರಿಸಿದ್ದೇವೆ. ಈ ಗ್ಯಾರಂಟಿಗಳು ಈಡೇರಲ್ಲ ಎಂದು ಮೋದಿಯವರು (PM Modi) ಕೂಡ ಹೇಳಿದ್ದರು. ಅವರಿಗೆ ಭಯ ಶುರುವಾಗಿದೆ. ಅದಕ್ಕೆ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಹೇಳಿದರು.
ಇದೇ ವೇಳೆ ಎಐಸಿಸಿ ಅಧ್ಯಕ್ಷ ಹಾಗೂ ಸಚಿವ ಸತೀಶ ಜಾರಕಿಹೋಳಿ ಭೇಟಿ ವಿಚಾರವಾಗಿ ಮಾತನಾಡಿ, ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಸಿಎಂ ಆಗುವ ಬಗ್ಗೆ ಚರ್ಚೆ ವದಂತಿಯಷ್ಟೇ. ಈ ಭೇಟಿ ಕುರಿತು ಈಗಾಗಲೇ ಸಿಎಂ ಸ್ಪಷ್ಟನೆ ನೀಡಿದ್ದಾರೆ. ದೆಹಲಿಗೆ ಹೋದ ಸಚಿವರು ಎಐಸಿಸಿ (AICC) ಆಧ್ಯಕ್ಷರನ್ನ ಭೇಟಿಯಾಗುತ್ತಾರೆ, ಇದು ಸಹಜ. ಇದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಹೇಳಿದರು.
ವಿಜಯಪುರ: ನಮ್ಮ ಮನೆಯಲ್ಲಿ ನಾನು ಹೇಳದೇ ನನ್ನ ಹೆಂಡತಿ ತೀರ್ಮಾನ ಮಾಡ್ತಾಳಾ? ಇದೆಲ್ಲ ನಾಟಕ ಎಂದು ಹೇಳುವ ಮೂಲಕ ಸಿಎಂ ಪತ್ನಿ ಮುಡಾ ಸೈಟ್ (MUDA Site) ವಾಪಸ್ ನೀಡಿರುವ ವಿಚಾರವಾಗಿ ಸಂಸದ ರಮೇಶ ಜಿಗಜಿಣಗಿ (Ramesh Jigajinagi) ವಾಗ್ದಾಳಿ ನಡೆಸಿದ್ದಾರೆ.
ಜಿಲ್ಲೆಯಲ್ಲಿ ಮಾತನಾಡಿದ ಅವರು, ಸಿಎಂ ಯಾಕೆ ಸೈಟ್ ತಗೋಬೇಕಿತ್ತು? ಸೈಟ್ ತಗೊಂಡ ಮೇಲೆ ವಾಪಸ್ ಯಾಕೆ ಕೊಡಬೇಕು? ತಪ್ಪು ಮಾಡಿದ್ದಾರೆ ಅದಕ್ಕೆ ವಾಪಸ್ ಕೊಟ್ಟಿದ್ದಾರೆ. ಸಿದ್ದರಾಮಯ್ಯ (CM Siddaramaiah) ಸಲಹೆಯಿಂದಲೇ ಅವರ ಪತ್ನಿ ಸೈಟ್ ವಾಪಸ್ ನೀಡಿದ್ದಾರೆ. ನಮ್ಮ ಮನೆಯಲ್ಲಿ ನಾನು ಹೇಳದೇ ನನ್ನ ಹೆಂಡತಿ ತೀರ್ಮಾನ ಮಾಡ್ತಾಳಾ? ಇದೆಲ್ಲವೂ ನಾಟಕ? ಸೈಟ್ ವಾಪಸ್ ನೀಡಿದ್ದು ನಾಟಕ? ಎಂದರು.ಇದನ್ನೂ ಓದಿ: ಸ್ವಾಭಿಮಾನಕ್ಕೆ ಮತ್ತೊಂದು ಹೆಸರು ಕಿತ್ತೂರು ರಾಣಿ ಚನ್ನಮ್ಮ – ಸಿಎಂ
ರಾಮಕೃಷ್ಣ ಹೆಗಡೆಯವರಂತೆ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿ. ನಾನು ಹಿಂದೆನೇ ಸಿದ್ದರಾಮಯ್ಯ ರಾಜೀನಾಮೆ ಕೊಡುವುದು ಯೋಗ್ಯ ಎಂದು ಹೇಳಿದ್ದೆ. ಈಗ ಸಿಎಂ ಕೆಸರಲ್ಲಿ ಸಿಕ್ಕು ಒದ್ದಾಡುತ್ತಿದ್ದಾರೆ. ಕೆಸರಲ್ಲಿ ಸಿಕ್ಕು ಒದ್ದಾಡುವಾಗ ಯಾರು ಬದುಕಿಸುತ್ತಾರೆ? ರಾಜಕಾರಣ ಗಬ್ಬೆದ್ದು ನಾರುತ್ತಿದೆ. ಎಲ್ಲ ಪಕ್ಷಗಳಲ್ಲೂ ಇದೆ ಸ್ಥಿತಿಯಿದೆ. ಎಲ್ಲರೂ ಸೇರಿಕೊಂಡೆ ರಾಜಕಾರಣವನ್ನ ಗಬ್ಬು ಹಿಡಿಸಿದ್ದೇವೆ. ಎಲ್ಲ ಪಕ್ಷಗಳು ನಿಷ್ಠೆಯಿಂದ ಕೆಲಸ ಮಾಡುತ್ತಿವೆ. ನಾವು ರಾಜಕಾರಣಿಗಳು ಗಬ್ಬು ಹಿಡಿಸಿದ್ದೇವೆ ಎಂದು ಸದ್ಯದ ರಾಜಕೀಯದ ಬಗ್ಗೆ ಅಸಮಧಾನ ಹೊರಹಾಕಿದರು.
ಇದೇ ವೇಳೆ ದಲಿತರ ಗೌಪ್ಯ ಮೀಟಿಂಗ್ ವಿಚಾರವಾಗಿ ಮಾತನಾಡಿ, ಕಾಂಗ್ರೆಸ್ನಲ್ಲಿ (Congress) ದಲಿತರ ಗೌಪ್ಯ ಮೀಟಿಂಗ್ ನಾಟುವುದಿಲ್ಲ. ದೆಹಲಿಯಿಂದ ಏನು ಬರುತ್ತದೆ ಅದು ಮಾತ್ರ ನಾಟುತ್ತದೆ. ಜನುಮದಲ್ಲಿ ಕಾಂಗ್ರೆಸ್ನವರು ದಲಿತರನ್ನು ಸಿಎಂ ಮಾಡಲ್ಲ. ಇದು ಸತ್ಯ. ಕಾಂಗ್ರೆಸ್ನ ದಲಿತರು ಕನಸು ಕಾಣುತ್ತಿದ್ದಾರೆ ಅಷ್ಟೇ. ಮಹದೇವಪ್ಪ ಹುಚ್ಚನಿದ್ದಾನೆ. ಪೈಪೋಟಿ ನಡೆಯುತ್ತದೆ ಅದರಿಂದ ಏನು ನಡೆಯಲ್ಲ ಎಂದು ಕಿಡಿಕಾರಿದ್ದಾರೆ.ಇದನ್ನೂ ಓದಿ: HMT ಕ್ಯಾಂಪಸ್ನಲ್ಲಿ ಪೌರ ಕಾರ್ಮಿಕರೊಂದಿಗೆ ಕಸ ಗುಡಿಸಿದ ಹೆಚ್ಡಿಕೆ
ವಿಜಯಪುರ: ರೇಬಿಸ್ (Rabies) ರೋಗಕ್ಕೆ ಆರಂಭದಲ್ಲಿಯೇ ಚಿಕಿತ್ಸೆ ಪಡೆದರೆ ಗುಣಪಡಿಸಬಹುದಾಗಿದೆ. ಇಲ್ಲದಿದ್ದರೆ ಅದು ನೇರವಾಗಿ ನರಮಂಡಲದ ಮೇಲೆ ಪರಿಣಾಮ ಬೀರಿ ಮಾರಣಾಂತಿಕವಾಗಬಹುದು ಎಂದು ಶ್ರೀ ಬಿ. ಎಂ.ಪಾಟೀಲ ವೈದ್ಯಕೀಯ ಕಾಲೇಜಿನ (Shri B. M. Patil Medical College) ಶಸ್ತ್ರಚಿಕಿತ್ಸೆ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಮಂಜುನಾಥ ಸಾವಂತ ಹೇಳಿದ್ದಾರೆ.
ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರೇಬಿಸ್ ಸಸ್ತನಿಗಳಲ್ಲಿ ವೈರಾಣುವಿನಿಂದ ಹರಡುವ ಕಾಯಿಲೆಯಾಗಿದೆ. ಈ ರೋಗ ಹರಡಲು ಲಿಸ್ಸಾವೈರಸ್ ಮುಖ್ಯ ಕಾರಣವಾಗಿದೆ. ನಾಯಿ, ಬೆಕ್ಕುಗಳ ಕಡಿತ ಅಥವಾ ಲಾಲಾರಸದ ಸಂಪರ್ಕದಿಂದ ಹಾಗೂ ಸಸ್ತನಿಗಳು ಅದರಲ್ಲೂ ವಿಶೇಷವಾಗಿ ಕಾಡುಪ್ರಾಣಿಗಳ ಮೂಲಕ ಈ ಸೋಂಕು ಹರಡುತ್ತದೆ. ರೇಬಿಸ್ ಕಾಯಿಲೆಯ ಹರಡುವಿಕೆ, ಅದನ್ನು ತಡೆಗಟ್ಟುವ ವಿಧಾನ, ಪ್ರಾಣಿ ಹಾಗೂ ಮನುಷ್ಯರಿಗೆ ಲಭ್ಯವಿರುವ ರೇಬೀಸ್ ಲಸಿಕೆಯ ಬಗ್ಗೆ ಮಾಹಿತಿ ನೀಡಿದರು.
ಸಮುದಾಯ ವೈದ್ಯಕೀಯ ಕಾರ್ಯಕರ್ತ ಸಂಜೀವ ಖಾನಗೌಡ್ರ ಮಾತನಾಡಿ, ರೇಬಿಸ್ ರೋಗ ಬಂದ ನಂತರ ಪರದಾಡುವುದಕ್ಕಿಂತ, ರೋಗ ಬರದಂತೆ ಮುನ್ನೆಚ್ಚರಿಕೆ ವಹಿಸುವುದು ಅತೀ ಮುಖ್ಯವಾಗಿದೆ. ಇದರ ಭಾಗವಾಗಿ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವುದು ಈ ವಿಶ್ವ ರೆಬಿಸ್ ದಿನಾಚರಣೆಯ ಮುಖ್ಯ ಉದ್ದೇಶವಾಗಿದೆ. ಈ ರೋಗದ ಕುರಿತು ಸಮುದಾಯದ ಜನರಲ್ಲಿ ಜನಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಬಿ.ಎಲ್. ಡಿ. ಇ ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯ ಎ. ಎಸ್. ನಾವಿ, ಸಹಾಯಕ ಪ್ರಾಧ್ಯಾಪಕಿ ಡಾ. ಪೂಜಾ ತೊದಲಬಾಗಿ, ವೈದ್ಯಕೀಯ ಸ್ನಾತಕೋತರ ವಿದ್ಯಾರ್ಥಿಗಳಾದ ಡಾ. ಈಶ್ವರ, ಡಾ. ಸ್ಮಿತ್, ಡಾ. ಶಮಿನ್, ಜಿ. ಬಿ. ಮನಗೂಳಿ, ಡಿ. ಬಿ ಚೆಣೆಗಾಂವ, ಡಿ. ಐ. ಮಠಪತಿ ಮುಂತಾದವರು ಉಪಸ್ಥಿತರಿದ್ದರು.ಇದನ್ನೂ ಓದಿ: ವೈಯಾಲಿಕಾವಲ್ ಮಹಾಲಕ್ಷ್ಮಿ ಕೊಲೆ ಪ್ರಕರಣ – ಹತ್ಯೆ ಬಳಿಕ ಪಶ್ಚಾತ್ತಾಪ ಪಟ್ಟಿದ್ದ ಹಂತಕ
– ಗಡಿ ಭಾಗದ ಕನ್ನಡ ಶಾಲೆಗಳಿಗೆ ರಾಜ್ಯ ಸರ್ಕಾರದಿಂದ ನಲಿ-ಕಲಿ ಪರಿಕರ ವಿತರಣೆ
ವಿಜಯಪುರ: ರಾಜ್ಯದ ಮಹರಾಷ್ಟ್ರ ಗಡಿಭಾಗದಲ್ಲಿರುವ ಕನ್ನಡ ಶಾಲೆಗೆ (Kannada School) ಮಹರಾಷ್ಟ್ರ (Maharashtra) ಸರ್ಕಾರ ಮರಾಠಿ (Marathi) ಭಾಷೆಯ ನಲಿಕಲಿ ಪರಿಕರಗಳನ್ನು ಒದಗಿಸಿತ್ತು. ಇದರಿಂದಾಗಿ ಕನ್ನಡದ ಕಂದಮ್ಮಗಳು ಪರದಾಡುತ್ತಿದ್ದವು. ಈ ಸಮಸ್ಯೆಯನ್ನು `ಪಬ್ಲಿಕ್ ಟಿವಿ ಬೆಳಕು’ (PUBLiC TV Belaku Program) ಕಾರ್ಯಕ್ರಮ ಸೆ.8 ರಂದು ಬಿತ್ತರಿಸಿತ್ತು.
ರಾಜ್ಯಾದ್ಯಂತ ನೆರೆಯ ರಾಜ್ಯಗಳ ಗಡಿ ಭಾಗದಲ್ಲಿ ಕನ್ನಡ ಶಾಲೆಗಳು ಕೆಲಸ ನಿರ್ವಹಿಸುತ್ತಿವೆ. ಅದೇ ರೀತಿ ವಿಜಯಪುರ ಜಿಲ್ಲೆಯ ಗಡಿ ರಾಜ್ಯವಾದ ಮಹರಾಷ್ಟ್ರದ ಗಡಿ ಭಾಗದಲ್ಲಿ ಕನ್ನಡ ಶಾಲೆಗಳು ಕನ್ನಡ ಸಾಹಿತ್ಯ, ಸಂಸ್ಕೃತಿಯನ್ನು ಪಸರಿಸುತ್ತಿವೆ. ಆದರೆ ಮಹಾರಾಷ್ಟ್ರ ಸರ್ಕಾರ ಈ ಶಾಲೆಗಳಿಗೆ ಮರಾಠಿ ಭಾಷೆಯ ನಲಿಕಲಿ ಪರಿಕರಗಳನ್ನು ಒದಗಿಸಿದೆ. ಇದರಿಂದ ಕನ್ನಡದ ಕಂದಮ್ಮಗಳು ಪರದಾಡುತ್ತಿದ್ದವು. ಈ ಸಮಸ್ಯೆಯನ್ನು ಇಟ್ಟುಕೊಂಡು ಗಡಿ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಬೆಳಕು ಕಾರ್ಯಕ್ರಮಕ್ಕೆ ಬಂದಿದ್ದರು.
ಅನೇಕ ಕನ್ನಡ ಶಾಲೆಗಳು ಅತೀ ಉತ್ಸುಕತೆಯಿಂದ ಕೆಲಸ ಮಾಡುತ್ತಿದ್ದು, ವಿದ್ಯಾರ್ಥಿಗಳು ಕೂಡ ಬಹಳ ಉತ್ಸುಕತೆಯಿಂದ ಶಾಲೆಗೆ ಹೋಗುತ್ತಿದ್ದಾರೆ. ಜೊತೆಗೆ ಮಹಾರಾಷ್ಟ್ರ ಸರ್ಕಾರ ಕೂಡ ಅನೇಕ ಮೂಲಭೂತ ಸೌಕರ್ಯಗಳನ್ನು ಒದಗಿಸಿತ್ತು. ಆದರೆ ನಲಿ-ಕಲಿ ಪರಿಕರಗಳನ್ನು ಮರಾಠಿ ಭಾಷೆಯಲ್ಲಿ ಮುದ್ರಿಸಿ ಕನ್ನಡ ಶಾಲೆಗೆ ವಿತರಿಸಿತ್ತು. ಇದರಿಂದ ಪ್ರತಿ ನಿತ್ಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಪರದಾಡುವಂತಾಗಿತ್ತು. ಈ ಸಮಸ್ಯೆಯನ್ನು ಇಟ್ಟುಕೊಂಡು ಮಹರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಜತ್ತ ತಾಲೂಕಿನ ಬಾಲಗಾಂವ ಗ್ರಾಮದ ಜಿಲ್ಲಾ ಪರಿಷದ್ ಪ್ರಾಥಮಿಕ ಕನ್ನಡ ಶಾಲೆಯವರು ಬೆಳಕು ಕಾರ್ಯಕ್ರಮಕ್ಕೆ ಸೆ.8 ರಂದು ಬಂದಿದ್ದರು.
ಈ ಸಮಸ್ಯೆಯನ್ನು ಪಬ್ಲಿಕ್ ಟಿವಿ ವಾಹಿನಿಯೂ ಯಳಯಳೆಯಾಗಿ ವಿವರಿಸಿತ್ತು. ಬಾಲಗಾಂವ ಶಾಲೆಗೆ ಪಬ್ಲಿಕ್ ಟಿವಿಯಿಂದಲೇ ನಲಿಕಲಿ ಪರಿಕರಗಳನ್ನು ಒದಗಿಸುವುದಾಗಿ ಪಬ್ಲಿಕ್ ಟಿವಿ ಮುಖ್ಯಸ್ಥರಾದ ಹೆಚ್. ಆರ್ ರಂಗನಾಥ್ (H R Ranganath) ಸರ್ ಭರವಸೆ ನೀಡಿದ್ದರು. ಜೊತೆಗೆ ಈ ಸಮಸ್ಯೆ ಬಗ್ಗೆ ಸಿಎಂ ಸೇರಿದಂತೆ ಸಂಬಂಧಿಸಿದವರ ಕಡೆ ಮಾತನಾಡಿ ಸಮಸ್ಯೆ ಬಗೆಹರಿಸುವುದಾಗಿ ಹೇಳಿದ್ದರು.
ಹೆಚ್.ಆರ್ ರಂಗನಾಥ್ ಅವರು ನಡೆಸಿಕೊಟ್ಟ ನಲಿಕಲಿಯ ಬೆಳಕು ಕಾರ್ಯಕ್ರಮವನ್ನು ರಾಜ್ಯ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ (Sommanna Bevinamarad) ವೀಕ್ಷಿಸಿದ್ದಾರೆ. ನಂತರ ಈ ಸಮಸ್ಯೆ ಬಗ್ಗೆ ಸಿಎಂ ಜೊತೆ ಕೂಡ ಚರ್ಚಿಸಿದ್ದಾರೆ. ಇದರ ಫಲವಾಗಿ ಇದೇ ತಿಂಗಳ 30 ರಂದು ಮಹಾರಾಷ್ಟ್ರದ ಸಾಂಗ್ಲಿ (Sangli) ಜಿಲ್ಲೆಯ ಜತ್ತ (Jath) ತಾಲೂಕಿನ ಗುಡ್ಡಾಪುರದಲ್ಲಿ (Guddapura) ಕರ್ನಾಟಕ ಸಂಭ್ರಮ – 50 ಕಾರ್ಯಕ್ರಮ ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಖುದ್ದು ಸಿಎಂ ಸಿದ್ಧರಾಮಯ್ಯ ಭಾಗಿಯಾಗಲಿದ್ದಾರೆ.
ಈ ಮೂಲಕ ಎಲ್ಲ ಗಡಿ ರಾಜ್ಯಗಳ ಕನ್ನಡ ಶಾಲೆಗೆ ನಲಿಕಲಿ ಪರಿಕರಗಳನ್ನು ಒದಗಿಸುವುದಾಗಿ ಘೋಷಣೆ ಮಾಡಲಿದ್ದಾರೆ. ಅಲ್ಲದೆ ಎರಡು ದಿನದಲ್ಲಿ ರಾಜ್ಯದ ಎಲ್ಲಾ ಗಡಿ ಭಾಗದ ಕನ್ನಡ ಶಾಲೆಗೆ ನಲಿಕಲಿ ಪರಿಕರಗಳನ್ನ ಒದಗಿಸುವುದಾಗಿ ಬೇವಿನಮರದ ಸ್ಪಷ್ಟಪಡಿಸಿದ್ದಾರೆ. ಇಂತಹ ಸಮಸ್ಯೆಯನ್ನು ಬಿತ್ತರಿಸಿದಕ್ಕೆ ಪಬ್ಲಿಕ್ ಟಿವಿಗೆ ಹಾಗೂ ರಂಗನಾಥ್ ಸರ್ಗೆ ಅಭಿನಂದನೆ ಸಲ್ಲಿದ್ದಾರೆ. ಇನ್ನೂ ಈ ಸುದ್ದಿಯನ್ನು ತಿಳಿದು ಗಡಿ ಭಾಗದ ಕನ್ನಡ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಪಬ್ಲಿಕ್ ಟಿವಿಗೆ ಅಭಿನಂದನೆ ಸಲ್ಲಿಸಿದ್ದಾರೆ.ಇದನ್ನೂ ಓದಿ: ಐಎಎಸ್ ಅಧಿಕಾರಿ ಪತ್ನಿ ರೇಪ್ ಕೇಸ್; ತನಿಖೆಯಲ್ಲಿ ಲೋಪವೆಸಗಿದ ಪೊಲೀಸರ ವಿರುದ್ಧ ಕ್ರಮಕ್ಕೆ ಕೋಲ್ಕತ್ತಾ ಹೈಕೋರ್ಟ್ ಸೂಚನೆ
ವಿಜಯಪುರ: ಮುಡಾ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah) ಗೌರವಯುತವಾಗಿ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ (Congress) ನಾಯಕರ ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಕಿಡಿಕಾರಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯದಲ್ಲಿ ನೀವು ಸ್ವಚ್ಛವಾಗಿರಿ. ಅವರು ಕಳ್ಳರಿದ್ದಾರೆ ಇವರು ಕಳ್ಳರಿದ್ದಾರೆ ಎಂದು ನೀವು ಹಾಗೇ ಮಾಡಬೇಡಿ. ನೀವು ಸ್ವಚ್ಛವಾಗಿರಿ. ಮುಡಾ ವಿಚಾರದಲ್ಲಿ (MUDA Scam) ನೀವು ಗೌರವಯುತವಾಗಿ ರಾಜೀನಾಮೆ ನೀಡಬೇಕು ಎಂದು ಸಲಹೆ ನೀಡಿದರು.ಇದನ್ನೂ ಓದಿ: ಸುನೀತಾ ವಿಲಿಯಮ್ಸ್ ಕರೆತರಲು ಇಂದು ನಭಕ್ಕೆ ನೆಗೆಯಲಿದೆ ಕ್ರ್ಯೂ -9
ಈ ಹಿಂದೆ ಬೊಫೋರ್ಸ್ ವಿಚಾರದಲ್ಲಿ ಎಲ್ಕೆ ಅಡ್ವಾನಿಯವರ (L. K. Advani) ಹೆಸರು ಕೇಳಿ ಬಂದಿತ್ತು. ಕೇವಲ 50 ಲಕ್ಷ ರೂ. ಆರೋಪ ಬಂದಿತ್ತು. ಎಲ್ಕೆಎ ಎಂದು ಜೈನ್ ಡೈರಿಯಲ್ಲಿ ಬರೆಯಲಾಗಿತ್ತು. ಈ ಆರೋಪಕ್ಕೆ ರಾಜ್ಯಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಜೊತೆಗೆ ಇದರಿಂದ ಮುಕ್ತವಾಗುವವರೆಗೆ ಸಂಸತ್ ಪ್ರವೇಶ ಮಾಡುವುದಿಲ್ಲ ಎಂದು ನಿರ್ಧಾರ ಮಾಡಿದ್ದರು.
ಅದು ಆದರ್ಶ. ರಾಜೀನಾಮೆ ನೀಡುವ ಮೂಲಕ ಸಿದ್ದರಾಮಯ್ಯ ರಾಜ್ಯಕ್ಕೆ ಹೊಸ ಆದರ್ಶವಾಗಬೇಕು. ಇಲ್ಲವಾದರೆ ಅವರು ಸಹ ಯಡಿಯೂರಪ್ಪ ಅವರ ಹಾಗೇ ಆಗುತ್ತಾರೆ ಎಂದರು. ಅವರು ಸಿಎಂ ಆಗಿರೋದು ತನಿಖೆ ಮೇಲೆ ಪರಿಣಾಮ ಬೀರುತ್ತದೆ. ಅಧಿಕಾರಿಗಳು ಅವರ ವಿರುದ್ಧ ರಿಪೋರ್ಟ್ ಕೊಟ್ಟರೆ ವರ್ಗಾವಣೆ ಇಲ್ಲ ಸಸ್ಪೆಂಡ್ ಮಾಡುತ್ತಾರೆ. ಈ ಭಯದಲ್ಲಿ ಪಾರದರ್ಶಕವಾಗಿ ನಿಷ್ಪಕ್ಷಪಾತವಾಗಿ ಸರಿಯಾಗಿ ತನಿಖೆ ಮಾಡಲಾಗುವುದಿಲ್ಲ. ಸಿಎಂ ರಾಜೀನಾಮೆ ನೀಡಿದರೆ ನಿಷ್ಪಕ್ಷಪಾತವಾದ ತನಿಖೆ ಮಾಡಬಹುದು ಎಂದರು.
ಸಿಎಂ ಹಿಂದೆ ಅಹಿಂದ ಸಂಘಟನೆ ಮಾಡಿದ್ದರು. ಆಗ ಅವರಿಗೆ ನಾನು ಬೆಂಬಲ ಕೊಟ್ಟು ಭಾಗಿಯಾಗಿದ್ದೆ. ಈಗಲೇ ಅವರು ಮತ್ತೆ ಅಹಿಂದ ಸಂಘಟನೆ ಮಾಡಿದರೆ ಬೆಂಬಲ ಕೊಡುತ್ತೇನೆ ಎಂದು ಹೇಳಿದರು.
ಇದೇ ವೇಳೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ವಿರುದ್ಧ ಕೇಸ್ ದಾಖಲಿಸಲು ಕೋರ್ಟ್ ಆದೇಶ ಹಿನ್ನೆಲೆ ಮಾತನಾಡಿ, ನ್ಯಾಯಾಲಯದ ಆದೇಶ ಪಾಲಿಸಬೇಕು. ಎಲ್ಲರಿಗೂ ಅನ್ವಯವಾಗುತ್ತದೆ. ನನಗೂ ಅಷ್ಟೇ, ಪ್ರಧಾನ ಮಂತ್ರಿಗಳಿಗೂ ಅಷ್ಟೇ, ರಾಷ್ಟ್ರಪತಿಗಳಿಗೂ ಅಷ್ಟೇ, ನೆಲಕ್ಕೆ ನಾವು ಗೌರವ ಕೊಡಬೇಕು ಎಂದು ಪ್ರತಿಕ್ರಿಯಿಸಿದರು.
ಎಲ್ಲಾ ಪಕ್ಷಗಳು ಚುನಾವಣಾ ಬಾಂಡ್ಗಳನ್ನು ತೆಗೆದುಕೊಂಡಿವೆ. ಚುನಾವಣಾ ಬಾಂಡುಗಳನ್ನು ಕಾಂಗ್ರೆಸ್ ತೆಗೆದುಕೊಂಡಿದೆ. ಲಾಲು ಪ್ರಸಾದ್ ಯಾದವ್ ತೆಗೆದುಕೊಂಡಿದ್ದಾರೆ. ಅಖಿಲೇಶ್ ಯಾದವ್ ತೆಗೆದುಕೊಂಡಿದ್ದಾರೆ, ಬಿಜೆಪಿ (BJP), ಕಾಂಗ್ರೆಸ್ (Congress) ಎಲ್ಲರೂ ತೆಗೆದುಕೊಂಡಿದ್ದಾರೆ. ಹಾಗಾದರೆ ರಾಹುಲ್ ಗಾಂಧಿ ರಾಜೀನಾಮೆ ಕೊಡುತ್ತಾರಾ ಎಂದು ಕಾಂಗೆಸ್ಸಿಗರ ವಿರುದ್ದ ಕಿಡಿ ಕಾರಿದರು.
– ಹಾದಿಯಲ್ಲಿ ಹೋಗುವವರೆಲ್ಲಾ ರಾಜ್ಯಪಾಲರಿಗೆ ದೂರು ಕೊಟ್ಟರೆ ಹೇಗೆ? ಎಂದ ಸಚಿವ
ವಿಜಯಪುರ: ತಿರುಪತಿ ಲಡ್ಡು ವಿಚಾರ (Tirupati Laddu controversy) ಜನರ ಧಾರ್ಮಿಕ ಭಾವನೆಗೆ ಸಂಬಂಧಿಸಿದ್ದು, ದನದ ಕೊಬ್ಬು ಬೆರಸುವುದು ಘೋರ ಅಪರಾಧ. ದನದ ಕೊಬ್ಬನ್ನು ಬೆರಸಿದ್ದರೇ ನಿರ್ದಾಕ್ಷಿಣ್ಯವಾಗಿ ಕ್ರಮ ಆಗಬೇಕು ಎಂದು ಸಚಿವ ಎಂ.ಬಿ ಪಾಟೀಲ್ (MB Patil) ಆಗ್ರಹಿಸಿದ್ದಾರೆ.
ವಿಜಯಪುರದಲ್ಲಿಂದು (Vijayapura) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತಿರುಪತಿ ಲಡ್ಡಿನಲ್ಲಿ ದನದ ಕೊಬ್ಬು ಮಿಶ್ರಣ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದರು. ಇದು ಜನರ ಧಾರ್ಮಿಕ ಭಾವನೆಗೆ ಸಂಬಂಧಿಸಿದ್ದು, ದನದ ಕೊಬ್ಬನ್ನು ಬೆರೆಸಿದ್ದರೇ ನಿರ್ದಾಕ್ಷಿಣ್ಯವಾಗಿ ಕ್ರಮ ಆಗಬೇಕು. ಭಕ್ತರ ಭಾವನೆಗಳ ಜೊತೆ ಆಟ ಆವಡುವುದು ಸರಿಯಲ್ಲ. ಅದರಲ್ಲಿ ಪಾವಿತ್ರ್ಯತೆ ಇದೆ, ದನದ ಕೊಬ್ಬು ಬೆರೆಸುವುದು ಘೋರ ಅಪರಾಧ. ಆಗಾಗ ಪ್ರಸಾದದ ತಪಾಸಣೆ ಮಾಡಬೇಕಿತ್ತು ಎಂದು ಹೇಳಿದ್ದಾರೆ.
ಇದೇ ವೇಳೆ ಶಾಸಕ ಮುನರತ್ನ (Munirathna) ವಿಚಾರಕ್ಕೆ ಪ್ರತಿಕ್ರಿಯಿಸಿ, ಸ್ವಾಭಾವಿಕವಾಗಿ ಯಾರೂ ಊಹಿಸದ ಆಪಾದನೆಗಳು ಅವರ ಮೇಲೆ ಬರುತ್ತಿವೆ. ಎಲ್ಲದರ ಕುರಿತು ತನಿಖೆ ಆಗಲಿ. ನಿಜವಾಗಿ ಆ ರೀತಿ ಘೋರವಾದಂತಹ ಕೃತ್ಯ ಮಾಡಿದ್ದರೇ ನಿರ್ದಾಕ್ಷಿಣ್ಯ ಕ್ರಮ ಆಗಲಿದೆ. ಫಸ್ಟ್ ಟೈಮ್ ಊಹಿಸದಂತಹ ಆಪಾದನೆ ಕೇಳಿ ನಾನು ಗಾಬರಿಯಾದೆ. ಹನಿಟ್ರ್ಯಾಪ್, ಸಿಡಿ ಮಾಡೋದು, ಹೆಣ್ಣುಮಕ್ಕಳ ಬಳಕೆ ಇವೆಲ್ಲ ಹೇಯ ಕೃತ್ಯಗಳು ಎಂದು ಆಕ್ಷೇಪಿಸಿದ್ದಾರೆ. ಇದನ್ನೂ ಓದಿ: ಹಿಂದೂಗಳ ಶ್ರದ್ಧೆಗೆ ಭಂಗ, ಜಗನ್ ಮೋಹನ್ ರೆಡ್ಡಿಯನ್ನು ಬಂಧಿಸಬೇಕು: ಈಶ್ವರಪ್ಪ ಆಗ್ರಹ
ರಾಜ್ಯಪಾಲರಿಗೆ ದೂರು ಕೊಡೊದೇ ಹೊಸ ದಂಧೆ ಆಗುತ್ತೆ:
ರಾಜ್ಯಪಾಲರ ಹಸ್ತಕ್ಷೇಪ ವಿಚಾರ ಕುರಿತು ಮಾತನಾಡಿದ ಸಚಿವರು, ಇದು ರಾಜ್ಯಪಾಲರು ಹಾಗೂ ರಾಜ್ಯ ಸರ್ಕಾರದ ಮದ್ಯೆದ ಸಂಘರ್ಷವಲ್ಲ. ಆಡಳಿತದಲ್ಲಿ ರಾಜ್ಯಪಾಲರು ಹಸ್ತಕ್ಷೆಪ ಮಾಡಬಾರದು. ಎಲ್ಲರೂ ಹೋಗಿ ರಾಜ್ಯಪಾಲರಿಗೆ ದೂರು ಕೊಡುವುದು, ಅವರು ಅದನ್ನು ಪರಿಗಣಿಸುವುದು ಆಗಬಾರದು ಎಂದಿದ್ದಾರೆ. ಇದನ್ನೂ ಓದಿ: ಸ್ಪಿನ್ ಮಾಂತ್ರಿಕ ಅಶ್ವಿನ್ ಆಲ್ರೌಂಡ್ ಆಟ – ಭಾರತಕ್ಕೆ 280 ರನ್ಗಳ ಭರ್ಜರಿ ಜಯ; 1-0 ಸರಣಿ ಮುನ್ನಡೆ
ಪೊಲೀಸ್ ಸ್ಟೇಷನ್ ಬದಲು ರಾಜ್ಯಪಾಲಿಗೆ ದೂರು ಕೊಟ್ಟಂತೆ ಆಗುತ್ತದೆ. ರಾಜ್ಯಪಾಲರಿಗೆ ದೂರು ಕೊಡೊದೇ ಒಂದು ಹೊಸ ದಂಧೆ ಶುರು ಆಗುತ್ತದೆ. ಅದಾಗ್ಯೂ ರಾಜ್ಯಪಾಲರ ಹಸ್ತಕ್ಷೇಪದ ಬಗ್ಗೆ ಸರ್ಕಾರ ತೀರ್ಮಾನ ಕೈಗೊಳ್ಳುತ್ತದೆ. ರಾಜ್ಯಪಾಲರ ಕಚೇರಿ ಬಿಜೆಪಿ ಕಚೇರಿ ಆಗಿದೆ, ಅವರು ಬಿಜೆಪಿ ವಕ್ತಾರರಂತೆ ವರ್ತಿಸುತ್ತಿದ್ದಾರೆ. ಹಾದಿಯಲ್ಲಿ ಹೋಗುವವರು ಬಂದು ಸಿಕ್ಕ ಸಿಕ್ಕವರ ಮೇಲೆ ಮೇಲೆ ಅರ್ಜಿ ಹಾಕಿದರೆ ಹೇಗೆ? ಎಂದು ಲೇವಡಿ ಮಾಡಿದ್ದಾರೆ. ಇದನ್ನೂ ಓದಿ: ಆಡಳಿತ ಯಂತ್ರದ ಮೇಲೆ ಹದ್ದಿನ ಕಣ್ಣು – ಅನಗತ್ಯ ಸಿಬ್ಬಂದಿಗೆ ಗೇಟ್ಪಾಸ್ ಕೊಡಲು ಸರ್ಕಾರ ಪ್ಲ್ಯಾನ್!