ವಿಜಯಪುರ: ವಿವಾಹ ವಿಚ್ಛೇದನ (Divorce) ಪ್ರಕರಣಕ್ಕೆ ಅರ್ಜಿ ಸಲ್ಲಿಸಿದ್ದ ವ್ಯಕ್ತಿಯೊಬ್ಬ ಕೋರ್ಟ್ಗೆ (Court) ಬಂದಿದ್ದ ವೇಳೆ ಆತನ ಪತ್ನಿಯ ಕುಟುಂಬಸ್ಥರು ಕಂಬಕ್ಕೆ ಕಟ್ಟಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಮುದ್ದೇಬಿಹಾಳದಲ್ಲಿ (Muddebihal) ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಮುದ್ದೇಬಿಹಾಳದ ರೂಢಗಿ ಗ್ರಾಮದ ಮಹೇಶ್ ಬಸಪ್ಪ ನಂದಿಹಾಳ ಎಂಬಾತ ತನ್ನ ಪತ್ನಿಗೆ ವಿಚ್ಛೇದನ ನೀಡಲು ನಿರ್ಧರಿಸಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದ. ಇದರ ಸಲುವಾಗಿ ವಿಚಾರಣೆಗಾಗಿ ಡಿ.20 ರಂದು ಆತ ಕೋರ್ಟಿಗೆ ಬಂದಿದ್ದ. ಈ ವೇಳೆ ಆತನನ್ನು ನ್ಯಾಯಾಲಯದ ಎದುರಿನ ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಬಂದಿದೆ. ಇದನ್ನೂ ಓದಿ: ಇಂಡಿಯಾ- ಪಾಕ್ ಗಡಿ ಸೀಮಾ ಹೈದರ್, ಉದ್ದ 5 ಅಡಿ 6 ಇಂಚು- ಉತ್ತರ ಪತ್ರಿಕೆ ಫುಲ್ ವೈರಲ್
ಕೋರ್ಟಿನ ಮೊದಲನೇ ಗೇಟ್ನ ಮುಂಭಾಗದಲ್ಲಿ ಮುತ್ತಪ್ಪ ಬಸಪ್ಪ ಬಿರಾದಾರ, ಬಸಪ್ಪ ಭೀಮಪ್ಪ ಬಿರಾದಾರ, ಚನ್ನಮ್ಮ ಬಸಪ್ಪ ಬಿರಾದಾರ, ಈರಮ್ಮ ಉರ್ಫ ಸುಮಿತ್ರಾ ಸೇರಿಕೊಂಡು ತನ್ನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಬಳಿಕ ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ. ಈ ವೇಳೆ ಅಲ್ಲೇ ಇದ್ದ ಕೆಲವರು ತನ್ನನ್ನು ರಕ್ಷಣೆ ಮಾಡಿದ್ದಾರೆ. ಬಳಿಕ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿದ್ದಾರೆ ಎಂದು ಮಹೇಶ್ ನೀಡಿರುವ ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಕಳೆದ ಎರಡು ವರ್ಷಗಳ ಹಿಂದೆ ಹಲ್ಲೆಗೊಳಗಾದ ಮಹೇಶ್, ಈರಮ್ಮ ಉರ್ಫ ಸುಮಿತ್ರಾ ಎಂಬಾಕೆಯನ್ನು ಮದುವೆ ಆಗಿದ್ದ. ಮದುವೆಯ ಬಳಿಕ ಕೆಲವು ದಿನಗಳಲ್ಲೇ ಮಹಿಳೆ ಏಳು ತಿಂಗಳ ಗರ್ಭಿಣಿ ಎಂಬುದು ಗೊತ್ತಾಗಿ, ಮಹಿಳೆಯ ತವರು ಮನೆಯವರನ್ನು ಕರೆಸಿ ಆಕೆಯನ್ನು ಅವರೊಂದಿಗೆ ಕಳಿಸಿದ್ದ. ಬಳಿಕ ವಿವಾಹ ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿದ್ದ.
ವಿಜಯಪುರ: ಬಂಡೆಗೆ (Rock) ತಲೆ ಜಜ್ಜುವ ವಿಶಿಷ್ಟ ಆಚರಣೆಯೊಂದು ವಿಜಯಪುರ (Vijayapura) ಜಿಲ್ಲೆಯಲ್ಲಿ ನಡೆಯುತ್ತದೆ. ಇಲ್ಲಿ ಭಕ್ತರು ಓಡೋಡಿ ಬಂದು ಕಲ್ಲಿಗೆ ಜೋರಾಗಿ ತಲೆ ಜಜ್ಜಿ ದೇವರಿಗೆ ನಮಸ್ಕಾರ ಮಾಡತ್ತಾರೆ. ಈ ವಿಚಿತ್ರ ಜಾತ್ರೆ ವಿಜಯಪುರ ಜಿಲ್ಲೆಯ ನಿಡಗುಂದಿ (Nidgundi) ತಾಲೂಕಿನ ಗಣಿ ಗ್ರಾಮದಲ್ಲಿ ನಡೆಯುತ್ತದೆ.
ಗಣಿ ಗ್ರಾಮದ ಸೋಮೇಶ್ವರ ದೇವರ ಜಾತ್ರೆ (Fair) ವೇಳೆ ಈ ರೀತಿಯ ವಿಶಿಷ್ಟ ಆಚರಣೆ ನಡೆಯುತ್ತದೆ. ಭಕ್ತರು ಒಟ್ಟು ಮೂರು ಸಲ ಬಂಡೆಗೆ ತಲೆಯನ್ನು ಜಜ್ಜಿ ನಮಸ್ಕಾರ ಮಾಡುವ ಪದ್ಧತಿ ಇಲ್ಲಿದೆ. ನೂರಾರು ಭಕ್ತರಿಂದ ನಡೆಯುವ ಈ ವಿಶಿಷ್ಟ ಆಚರಣೆ ಹಲವಾರು ವರ್ಷಗಳಿಂದ ನಡೆದುಕೊಂಡು ಬಂದಿದೆ. ವಿಶೇಷ ಎಂದರೆ ಕಲ್ಲಿಗೆ ಎಷ್ಟೇ ಜೋರಾಗಿ ತಲೆ ಜಜ್ಜಿಕೊಂಡರೂ ಯಾರಿಗೂ ಇದುವರೆಗೂ ಒಂದು ಸಣ್ಣಪುಟ್ಟ ಗಾಯ ಕೂಡ ಆಗಿಲ್ಲ. ಇದನ್ನೂ ಓದಿ: ಹಿಂದೂಗಳು ಹಲಾಲ್ ಮಾಂಸ ಸೇವನೆ ಬಿಡಿ, ಝಟ್ಕಾಗೆ ಆದ್ಯತೆ ನೀಡಿ: ಕೇಂದ್ರ ಸಚಿವ
ವಿಜಯಪುರ: ಲೋಕಸಭಾ ಸದಸ್ಯರು ಹಾಗೂ ವಿಧಾನಸಭಾ ಸದಸ್ಯರ ಬಳಿ ಪಾಸ್ ಕೊಡಿ ಎಂದು ಜನ ಬರುತ್ತಾರೆ. ಪಾಸ್ ಪಡೆದು ಹೋದವರನ್ನು, ನಾವೇ ಬಾಂಬ್ ಇಟ್ಟುಕೊಂಡಿದ್ದಾರಾ? ಭಯೋತ್ಪಾದಕರಾ? ಎಂದು ಸ್ಕ್ರೀನಿಂಗ್ ಮಾಡಲು ಆಗುತ್ತದೆಯೇ? ಈ ಪ್ರಕರಣದ ತನಿಖೆಯಾದರೆ ಯಾರು ಈಗ ಟೀಕೆ ಮಾಡುತ್ತಿದ್ದಾರೋ ಅವರೇ ಸಿಕ್ಕಿಬೀಳುತ್ತಾರೆ ಎಂದು ಬಿಜೆಪಿ (BJP) ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಹೇಳಿದ್ದಾರೆ.
ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಬಳಿ ಹಲವರು ಪಾಸ್ಗಾಗಿ ಬರುತ್ತಾರೆ. ಕಾಂಗ್ರೆಸ್ನವರು ಬಂದ್ರೂ ನಾವು ಪಾಸ್ ಕೊಡುತ್ತೇವೆ. ನನ್ನ ಬಳಿ ಕಾಂಗ್ರೆಸ್ನವರು ಬಂದು ಪಾಸ್ ಒಯ್ಯುತ್ತಾರೆ. ಅವರನ್ನೆಲ್ಲ ನಾವು ಸ್ಕ್ರೀನಿಂಗ್ ಮಾಡಲು ಆಗುವುದಿಲ್ಲ. ಅದು ಭದ್ರತಾ ಸಿಬ್ಬಂದಿಯ ಕೆಲಸ ಎಂದು ಸಂಸದ ಪ್ರತಾಪ್ ಸಿಂಹ ಪರ ಅವರು ಬ್ಯಾಟ್ ಬೀಸಿದ್ದಾರೆ. ಇದನ್ನೂ ಓದಿ: ವಾರಣಾಸಿ ರೋಡ್ ಶೋ ವೇಳೆ ಅಂಬುಲೆನ್ಸ್ಗೆ ದಾರಿ ಮಾಡಿಕೊಟ್ಟ ಪ್ರಧಾನಿ ಮೋದಿ!
ಬೆಳಗಾವಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಉತ್ತರ ಪ್ರದೇಶ ಹಾಗೂ ಮಣಿಪುರ ಬೆತ್ತಲೆ ಪ್ರಕರಣದ ವಿಚಾರಕ್ಕೆ ಕಾಂಗ್ರೆಸ್ನ (Congress) ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಮೊಸಳೆ ಕಣ್ಣೀರು ಹಾಕಿದ್ದರು. ಅದನ್ನೇನು ಬಿಜೆಪಿಯವರು ಮಾಡಿದ್ರಾ? ಯಾವುದೇ ರಾಜ್ಯದಲ್ಲಿಯಾಗಲಿ, ಯಾವುದೇ ಜಾತಿಯವರು ಇರಲಿ, ಯಾವ ಸರ್ಕಾರವಿದ್ದರೂ ಮಹಿಳೆಯರ ಮೇಲೆ ಇಂತಹ ದೌರ್ಜನ್ಯ ನಡೆಯಬಾರದು. ಈಗ ರಾಜ್ಯದಲ್ಲಿ ಇಂತಹ ಪ್ರಕರಣ ನಡೆದು ಬಿಟ್ಟಿದೆ. ಈಗೇಕೆ ರಾಹುಲ್ ಹಾಗೂ ಪ್ರಿಯಾಂಕಾ ಇಬ್ಬರೂ ಖಂಡಿಸಿಲ್ಲ ಅಲ್ಲದೇ ಅವರು ಈಗ ಇಲ್ಲಿಗೆ ಬರಲಿಲ್ಲ. ರಾಜಸ್ಥಾನದಲ್ಲಿ ದಲಿತ ಮಹಿಳೆ ದೌರ್ಜನ್ಯ ಆದರೂ ಬರಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ಎಲ್ಲಿ ಬಿಜೆಪಿ ಸರ್ಕಾರ ಇದೆ ಅಲ್ಲಿಗೆ ಹೋಗಿ ರಾಹುಲ್ ಮತ್ತು ಪ್ರಿಯಾಂಕಾ ಗಾಂಧಿ ನಾಟಕ ಮಾಡುತ್ತಾರೆ. ಬೆಳಗಾವಿಗೆ ಅವರು ಬರಬೇಕಾಗಿತ್ತು. ಅದನ್ನು ಬಿಟ್ಟು ಕೇವಲ ರಾಜಕೀಯ ಮಾಡುವುದು ಬೇಡ. ಯಾವುದೇ ರಾಜಕೀಯ ಪಕ್ಷವಿರಲಿ ಇತಂಹ ಘಟನೆಗಳು ನಡೆದಾಗ ಅದನ್ನು ಖಂಡಿಸಬೇಕು. ಗೃಹಸಚಿವರು ಹೋಗಿ ಭೇಟಿ ಆಗಿ ಏನು ಮಾಡಿದ್ದಾರೆ? ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗಬೇಕು. ಎಲ್ಲದರಲ್ಲೂ ರಾಜಕೀಯ ಮಾಡುತ್ತಾ ಹೋದರೆ ಹೇಗೆ ಎಂದು ಅವರು ಪ್ರಶ್ನಿಸಿದ್ದಾರೆ. ಅಲ್ಲದೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಬಯ್ಯುವುದು ಹಾಗೂ ಭಾಷಣ ಮಾಡುವುದು ಇದಕ್ಕೆ ಪರಿಹಾರ ಅಲ್ಲ ಎಂದು ಕಿಡಿಕಾರಿದ್ದಾರೆ.
ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಹೆಸರಿಡುವ ವಿಚಾರವಾಗಿ, ಮೈಸೂರಲ್ಲಿ ಟಿಪ್ಪು ಸುಲ್ತಾನ್ ಏನು, ಒಡೆಯರು ಏನು ಎಂಬ ಇತಿಹಾಸ ಇದೆ. ಮೈಸೂರು ಭಾಗ ಅಭಿವೃದ್ಧಿ ಆಗಲು ಮಹರಾಜರು ಕಾರಣ. ಇನ್ನೂ ಈ ಭಾಗ ಏಕೆ ಅಭಿವೃದ್ಧಿ ಆಗಲಿಲ್ಲ, ಆದಿಲ್ ಶಾಹಿ, ಕುತುಬ್ ಶಾಹಿ, ಆ ಶಾಹಿ, ಈ ಶಾಹಿ ಇವರು ಕೇವಲ ತಮ್ಮ ಹೆಂಡಿರು, ಮಕ್ಕಳು, ಪ್ರಿಯತಮೆಯರ ಗೋರಿ ಮಾಡುವುದನ್ನ ಬಿಟ್ರೆ ಏನೂ ಮಾಡಲಿಲ್ಲ. ಗೋಲಗುಬಂಜ್ಗೆ ಹೋಗಿ ನೋಡಿ ಆದಿಲ್ ಶಾಹಿ ಆ ಕಡೆ ಈ ಕಡೆ ಬರೀ ಹೆಂಗಸರ ಗೋರಿಗಳಿವೆ. ಬೀದರ್ಗೆ ಹೋಗಿ ನೋಡಿ, ರಾಯಚೂರಗೆ ಹೋಗಿ ನೋಡಿ ಬರಿ ಗೋರಿಗಳೇ ಇದಾವೆ ಎಂದು ವ್ಯಂಗ್ಯವಾಡಿದ್ದಾರೆ.
ನೀರಾವರಿ ಮಾಡಲಿಲ್ಲ, ಮೈಸೂರು ಒಡೆಯರು ಬಂಗಾರ ಒತ್ತೆ ಇಟ್ಟು ಕನ್ನಂಬಾಡಿ ಕಟ್ಟಿದರು. ಅದಕ್ಕೆ ಅದು ಅಭಿವೃದ್ಧಿ ಆಯ್ತು, ಇದನ್ನ ಸಿಎಂ ಕೂಡ ಒಪ್ಪಿಕೊಂಡಿದ್ದಾರೆ. ಇದನ್ನ ನಾನು ಮಾತ್ರ ಹೇಳುತ್ತಿಲ್ಲ. ಟಿಪ್ಪು ಸುಲ್ತಾನ್ ಏನು ಮಾಡಿದ. ಮೂರುವರೆ, ನಾಲ್ಕು ಸಾವಿರ ಹಿಂದೂ ದೇವಸ್ಥಾನಗಳನ್ನು ನಾಶ ಮಾಡಿದ. ಮಂಡ್ಯದಲ್ಲಿ ಐಯ್ಯಂಗಾರ್ ಬ್ರಾಹ್ಮಣರು ಇದುವರೆಗೂ ದೀಪಾವಳಿ ಆಚರಣೆ ಮಾಡಲ್ಲ. ದೀಪಾವಳಿ ದಿನ ಸಾವಿರಾರು ಹಿಂದೂಗಳ ಕಗ್ಗೋಲೆ ಆಗಿತ್ತು. ಈ ರೀತಿ ಇತಿಹಾಸಕ್ಕೆ ಯಾರು ಅಪಚಾರ ಮಾಡಿದ್ದಾರೆ ಅವರ ಹೆಸರು ಇಡುವುದಲ್ಲ. ಸಮಾಜಕ್ಕೆ ಕೊಡುಗೆ ಕೊಟ್ಟವರ ಹೆಸರನ್ನು ಇಡಬೇಕು. ಟಿಪ್ಪು ಸುಲ್ತಾನ್ ಬೆನ್ನು ಹತ್ತಿದವರಿಗೆ ರಾಜಕೀಯ ಭವಿಷ್ಯವಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಯತ್ನಾಳ್ನಂತಹ ಹುಚ್ಚ ಯಾರಿಲ್ಲ ಬಿಡಿ: ಹೆಚ್.ವಿಶ್ವನಾಥ್
ವಿಜಯಪುರ: ಮೈಸೂರು ವಿಮಾನ ನಿಲ್ದಾಣಕ್ಕೆ (Mysuru Airport) ಮೈಸೂರು ಮಹಾರಾಜರ ಹೆಸರು ಇಡಬೇಕು. ಮೈಸೂರು ಮಹಾರಾಜರ ದೂರ ದೃಷ್ಟಿಯಿಂದ ಮೈಸೂರು ಅಭಿವೃದ್ಧಿಯಾಗಿದೆ. ಏಷ್ಯಾದಲ್ಲಿ ಮೊದಲು ವಿದ್ಯುತ್ ಆಗಿದ್ದು ಜಯಚಾಮರಾಜೇಂದ್ರ ಒಡೆಯರ್ ಸಮಯದಲ್ಲಿ ಎಂದು ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಹೇಳಿದರು.
ಬಿಜೆಪಿ, ಹಿಂದೂ ಕಾರ್ಯಕರ್ತ ಮೇಲೆ ದೌರ್ಜನ್ಯ ವಿಚಾರಕ್ಕೆ ಮಾತನಾಡಿ, ದೌರ್ಜನ್ಯಕ್ಕೆ ಒಳಗಾಗದ ಹಿಂದೂ ಕಾರ್ಯಕರ್ತರು, ಬಿಜೆಪಿ ಕಾರ್ಯಕರ್ತರ ನೆರವಿಗೆ ಬಿಜೆಪಿ ಇದೆ. ಬಿಜೆಪಿ ಕಾರ್ಯಕರ್ತರಿಗೆ ಕಾನೂನು ಹೋರಾಟಕ್ಕೆ ನೆರವು ನೀಡ್ತೇವೆ. ಅಲ್ಲದೆ ಕೆಲವೇ ದಿನಗಳಲ್ಲಿ ಬೆಂಗಳೂರಿನಲ್ಲಿ ಆಫೀಸ್ ತೆರೆಯಲಾಗ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಅಭಿಪ್ರಾಯ ಹಂಚಿಕೊಂಡರು, ಅವರನ್ನ ಸ್ಟೇಷನ್ ಗೆ ಕರೆಯಿಸಿ ಮುಚ್ಚಳಿಕೆ ಪತ್ರ ಬರೆಯಿಸಿಕೊಳ್ತಿದ್ದಾರೆ. ಈ ದೌರ್ಜನ್ಯ ನಾವು ಸಹಿಸಲ್ಲ. ಪ್ರಚೋದನೆ ಮಾಡಿದ್ದರೇ ಬೇಕಾದ್ರೆ ಕ್ರಮ ಕೈಗೊಳ್ಳಲಿ. ವಾಕ್ ಸ್ವಾತಂತ್ರ್ಯ ಇದೆ, ಅಭಿವ್ಯಕ್ತಿ ಸ್ವಾತಂತ್ರ್ಯ ತಡೆಯುವ ಅವಕಾಶ ಇಲ್ಲ. ವಿನಾಕಾರಣ ದೌರ್ಜನ್ಯ ಸರಿ ಅಲ್ಲ ಎಂದು ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು.
ಬಿಜೆಪಿ (BJP) ಕಾರ್ಯಕರ್ತರ, ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆ, ದೌರ್ಜನ್ಯವಾದ್ರೆ ಕಾನೂನು ನೆರವಿಗೆ ನಾವು ಮುಂದಾಗುತ್ತೇವೆ. 2 ತಿಂಗಳಲ್ಲಿ ಕಚೇರಿ ಮಾಡ್ತೇವೆ, ಉಚಿತ ಕಾಲಿಂಗ್ ಸೇವೆಯನ್ನು ನೀಡಲಿದ್ದೇವೆ. ಸಾಕಷ್ಟು ವಕೀಲರು ನೆರವು ನೀಡಲು ಮುಂದೆ ಬಂದಿದ್ದಾರೆ. ಭಯ ಭೀತರಾಗಿದ್ದಾರೆ ಅವರಿಗೆ ಧೈರ್ಯ ತುಂಬುವ ಕೆಲಸ ಮಾಡ್ತೇವೆ ಎಂದರು.
ಹೈಕೋರ್ಟ್ನಲ್ಲಿ (High Court) ಡಿಕೆಶಿ ಕೇಸ್ ವಿಚಾರಕ್ಕೆ ಪ್ರತಿಕ್ರಿಯಿಸಿ, ಜನವರಿ 5ಕ್ಕೆ ಮತ್ತೆ ವಿಚಾರಣೆ ಪ್ರಾರಂಭವಾಗುತ್ತೆ. ನ್ಯಾಯಕ್ಕೆ ಜಯ ಸಿಕ್ಕಿಯೇ ಸಿಗುತ್ತೆ. ಭ್ರಷ್ಟಾಚಾರದ ವಿರುದ್ಧ ನಾವಿದ್ದೇವೆ. ನಾಳೆ ಕೊಲೆ ಆರೋಪಿಯನ್ನು ಸರ್ಕಾರ ವಾಪಸ್ ತೆಗೆದುಕೊಳ್ತೀನಿ ಅಂದ್ರೆ ಅರಾಜಕತೆ ಉಂಟಾಗುತ್ತೆ. ಡಿಕೆಶಿ ಕೇಸ್ ವಾಪಸ್ ಪಡೆದಿದ್ದು ಅರಾಜಕತೆ ಎಂದು ವಾಗ್ದಾಳಿ ನಡೆಸಿದರು.
ವಿಜಯಪುರ: ಬೆಳ್ಳಂಬೆಳಿಗ್ಗೆ ಜನತಾ ಟ್ರಾವೆಲ್ಸ್ಗೆ (Janatha Travels) ಸೇರಿದ ಬಸ್ಸು ನಡು ರಸ್ತೆಯಲ್ಲೇ ಹೊತ್ತಿ ಉರಿದು ಸುಟ್ಟು ಕರಕಲಾದ ಘಟನೆ ವಿಜಯಪುರ (Vijayapura) ತಾಲೂಕಿನ ಹಿಟ್ಟನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ.
ಸ್ಫೋಟಗೊಳ್ಳುತ್ತಿದ್ದಂತೆ ಪ್ರಯಾಣಿಕರು ಬಸ್ಸಿನಿಂದ ಕೆಳಗಡೆ ಇಳಿದ ಪರಿಣಾಮ ಯಾವುದೇ ಸಾವು ನೋವು ಸಂಭವಿಸಿಲ್ಲ. ಪ್ರಯಾಣಿಕರ ಬೆಲೆಬಾಳುವ ವಸ್ತುಗಳು, ಬಟ್ಟೆಗಳು ಸುಟ್ಟು ಭಸ್ಮವಾಗಿವೆ. ಗಾಬರಿಗೊಂಡ ಪ್ರಯಾಣಿಕರು ಬೇರೆ ವಾಹನಗಳ ಸಹಾಯದಿಂದ ಊರು ಸೇರಿದ್ದಾರೆ.
ಸ್ಥಳಕ್ಕೆ ವಿಜಯಪುರ ಗ್ರಾಮೀಣ ಪೊಲೀಸರು ಮತ್ತು ಅಗ್ನಿ ಶಾಮಕ ದಳ ದೌಡಾಯಿಸಿದ್ದು ಬೆಂಕಿ ನಂದಿಸಿದ್ದಾರೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ವಿಜಯಪುರ: ಹುಬ್ಬಳ್ಳಿಯಲ್ಲಿ ನಡೆದ ಮುಸ್ಲಿಂ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಜೊತೆ ವೇದಿಕೆ ಹಂಚಿಕೊಂಡಿದ್ದ ತನ್ವೀರ್ ಪೀರಾ (Tanveer Peera) ಈ ವರ್ಷದ ಮೇ ತಿಂಗಳಿನಲ್ಲಿ ವಿಜಯಪುರದಲ್ಲಿ ನಡೆದಿದ್ದ ಶೂಟೌಟ್ ಕೇಸಲ್ಲಿ ಮೂರನೇ ಆರೋಪಿಯಾಗಿದ್ದಾರೆ.
ಮೇ 6 ರಂದು ವಿಜಯಪುರದಲ್ಲಿ ನಡೆದ ಶೂಟೌಟ್ನಲ್ಲಿ ರೌಡಿ ಶೀಟರ್ ಹೈದರಾಲಿ ನದಾಫ್ ಎಂಬುವನ ಹತ್ಯೆ ನಡೆದಿತ್ತು. ಆ ಹತ್ಯೆಯನ್ನು ತನ್ವೀರ್ ಪೀರಾ ಹಾಸ್ಮಿ ಮಾಡಿಸಿದ್ದಾರೆಂಬ ಆರೋಪ ಕೇಳಿ ಬಂದಿತ್ತು. ಹತ್ಯೆಯಾದ ಹೈದರಾಲಿ ಪತ್ನಿ ನಿಶಾತ್ ದೂರು ದಾಖಲಿಸಿದ್ದರು. ದೂರಿನಲ್ಲಿ ತನ್ವೀರ್ ಪೀರಾ ಹೆಸರನ್ನು ಕೂಡ ಹಾಕಲಾಗಿತ್ತು. ಈ ಪ್ರಕರಣದ ತನಿಖೆ ನಡೆಯುತ್ತಿದೆ.
ವಿಜಯಪುರ ಮೂಲದವ ಸದ್ಯ ಸೂಫಿ ಎಂದು ಗುರುತಿಸಿಕೊಂಡಿರುವ ತನ್ವೀರ್ ಪೀರಾ ದೇಶಾದ್ಯಂತ ಸುತ್ತಾಟ ನಡೆಸುತ್ತಿದ್ದಾರೆ.
ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಮತ್ತು ತನ್ವೀರ್ ಪೀರಾ ನಡುವಣ ವೈರತ್ವ ಇಂದಿನದ್ದಲ್ಲ. 2018ರಲ್ಲಿ ನಡೆದ ಕಾರ್ಯಕ್ರಮದಲ್ಲಿ ಯತ್ನಾಳ್ ವಿರುದ್ಧ ತನ್ವೀರ್ ಅಬ್ಬರಿಸಿದ್ದರು.
ಮುಂದೆ ಬಕ್ರೀದ್ ಬರಲಿದೆ. ಆಗ ಕುರುಬಾನಿ ಕೊಡುತ್ತೇವೆ. ಆಗ ಸೈತಾನ್ ವಿರೋಧಿಸಿದರೆ ನಾವು ಸುಮ್ಮನಿರಲ್ಲ. ಒಂದು ಕುರುಬಾನಿ ಜೊತೆಗೆ ಇನ್ನೊಂದು ಕುರುಬಾನಿ ಆಗಬಾರದು. ಈಗಲೇ ಎಚ್ಚರಿಸುತ್ತಿದ್ದೇನೆ ಎಂದಿದ್ದರು. ಈ ಸಂಬಂಧ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದ ಮೇಲೆ ತನ್ವೀರ್ ವಿರುದ್ಧ ಕೇಸ್ ದಾಖಲಾಗಿತ್ತು.
ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಯತ್ನಾಳ್, ತನ್ವೀರ್ ಪೀರಾ ಮದರಸಾ ನಡೆಸುತ್ತಿದ್ದು, ವಿಮಾನದಲ್ಲೇ ದೇಶ, ವಿದೇಶಗಳನ್ನು ಸುತ್ತುತ್ತಿದ್ದಾರೆ. ಈ ವ್ಯಕ್ತಿಗೆ ಹಣ ನೀಡುವವರು ಯಾರು? ಟಿಕೆಟ್ ಬುಕ್ ಮಾಡುವವರು ಯಾರು ಎಂದು ಪತ್ತೆ ಹಚ್ಚಿದರೆ ಎಲ್ಲಾ ವಿಚಾರಗಳು ಬಯಲಾಗುತ್ತದೆ. ಈ ಸಂಬಂಧ ರಾಷ್ಟ್ರೀಯ ತನಿಖಾ ದಳ (NIA) ಈ ವ್ಯಕ್ತಿಯ ಮೇಲೆ ತನಿಖೆ ನಡೆಸಬೇಕೆಂದು ಕೋರಿ ಪತ್ರ ಬರೆದಿದ್ದೇನೆ ಎಂದು ಹೇಳಿದರು.
ವಿಜಯಪುರ: ಇಲ್ಲಿನ ರಾಜಗುರು ಗೋದಾಮಿನ (Warehouse) ಸಂಸ್ಕರಣಾ ಘಟಕದಲ್ಲಿ ಮೆಕ್ಕೆ ಜೋಳ (Maize) ಮೂಟೆ ತುಂಬುವ ಯಂತ್ರ ಕುಸಿದು, ಮೂವರು ಮೂವರು ಕಾರ್ಮಿಕರು (Workers) ಸಾವನ್ನಪ್ಪಿರುವ ಘಟನೆ ನಡೆದಿದೆ. ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ.
ಅವಶೇಷಗಳ ಅಡಿ ಸಿಲುಕಿರುವ ಕಾರ್ಮಿಕರು ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ. ರಾತ್ರಿಯಿಂದಲೂ 4 ಜೆಸಿಬಿಗಳ ಮೂಲಕ ಕಾರ್ಮಿಕರ ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿದೆ. ಸ್ಥಳದಲ್ಲಿ ಕಾರ್ಮಿಕರು, ಅವರ ಸಂಬಂಧಿಕರು ಗುಂಪುಗೂಡಿದ್ದು, ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ, ಸ್ಥಳದಲ್ಲೇ ಬೀಡುಬಿಟ್ಟು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ವೈದ್ಯರ ತಂಡವೂ ಕಾರ್ಮಿಕರಿಗೆ ಆಮ್ಲಜನಕ ಪೂರೈಕೆ ಮಾಡುತ್ತಿದ್ದಾರೆ. ಅಗ್ನಿಶಾಮಕ ದಳ ಸಿಬ್ಬಂದಿ, ಪೊಲೀಸರು ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ.
ವಿಜಯಪುರ: ಕುಡಿಯುವ ನೀರು ಪೂರೈಕೆಗೆ ಆಗ್ರಹಿಸಿ ಯುವಕನೊಬ್ಬ ಅರೆಬೆತ್ತಲಾಗಿ ಪ್ರತಿಭಟನೆ (Half Naked Protest) ಮಾಡಿದ್ದಾನೆ. ಆದರೆ ಕುಡಿಯುವ ನೀರು ಕೇಳಿದ್ದಕ್ಕೆ ಗ್ರಾಮ ಪಂಚಾಯತ್ ಪಿಡಿಒ (PDO) ಯುವಕನಿಗೆ ಕಪಾಳಮೋಕ್ಷ ಮಾಡಿರುವ ಘಟನೆ ವಿಜಯಪುರ (Vijaypura) ಜಿಲ್ಲೆಯ ಇಂಡಿ ತಾಲೂಕಿನ ಹಿರೇಮಸಳಿ ಗ್ರಾಮದಲ್ಲಿ ನಡೆದಿದೆ.
ಅರೆಬೆತ್ತಲೆಯಾಗಿ ಗ್ರಾಮ ಪಂಚಾಯಿತಿಗೆ ಆಗಮಿಸಿದ ಯುವಕ ಸಂತೋಷ್ ಮಳೆಯಾಗಿಲ್ಲ, ಕುಡಿಯಲು ನೀರು ಬಿಡುತ್ತಿಲ್ಲ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದ್ದಾನೆ. ಪಿಡಿಒ ಶೋಭಾ ಹೊರಪೇಟ ಅವರನ್ನು ತಮ್ಮ ಕಚೇರಿಯೊಳಗೆ ಹೋಗಲು ಬಿಡದೇ ತಡೆದು ಪ್ರತಿಭಟಿಸಿದ್ದಕ್ಕೆ ಪಿಡಿಒ ಯುವಕನಿಗೆ ಕಪಾಳಮೋಕ್ಷ ಮಾಡಿದ್ದಾರೆ. ಇದನ್ನೂ ಓದಿ: ಸಿಪಿ ಯೋಗೇಶ್ವರ್ ಬಾವ ಮಹದೇವಯ್ಯ ಪತ್ತೆಗೆ ನಾಲ್ಕು ತಂಡ ರಚನೆ: ಎಸ್ಪಿ
ವಿಜಯಪುರ: ಹೆಣ್ಣು (Girl) ಲಕ್ಷ್ಮಿ ಇದ್ದ ಹಾಗೆ. ಗಂಡು ಮಕ್ಕಳಿಗಿಂತ ಹೆಣ್ಣು ಮಕ್ಕಳೇ ಒಳ್ಳೆಯವರು. ತಂದೆ-ತಾಯಿಯನ್ನು ಸಾಕುವವರೇ ಅವರು ಎಂದು ಸಚಿವ ಎಂಬಿ ಪಾಟೀಲ್ (MB Patil) ಭ್ರೂಣ ಹತ್ಯೆ (Foeticide) ವಿರುದ್ಧ ಕಿಡಿಕಾರಿದ್ದಾರೆ.
ವಿಜಯಪುರದಲ್ಲಿ (Vijayapura) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭ್ರೂಣ ಹತ್ಯೆ ಅತ್ಯಂತ ಹೀನ, ಅಕ್ಷಮ್ಯ ಕೃತ್ಯ. ಈ ಕೃತ್ಯ ಮಾಡುವವರಿಗೆ ತಕ್ಕ ಪಾಠ, ಕಠಿಣ ಶಿಕ್ಷೆಯಾಗುವ ನಿಟ್ಟಿನಲ್ಲಿ ಕ್ರಮವಾಗಬೇಕು. ಭ್ರೂಣ ಹತ್ಯೆ ಮಾಡುವವರ ವಿರುದ್ಧ ಸರ್ಕಾರ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳುತ್ತದೆ. ಅಲ್ಲದೇ ನಿರ್ದಾಕ್ಷಿಣ್ಯ ಕ್ರಮಕ್ಕೆ ನನ್ನ ಬೆಂಬಲ, ಒತ್ತಾಯವಿದೆ ಎಂದರು. ಇದನ್ನೂ ಓದಿ: ಹೆಚ್ಚುವರಿ ಅಂಬುಲೆನ್ಸ್ ಖರೀದಿಗೆ ಹಣ ಒದಗಿಸ್ತೇವೆ: ಸಿದ್ದರಾಮಯ್ಯ
ಇದೇ ವೇಳೆ ಪಂಚರಾಜ್ಯ ಚುನಾವಣೆ (Five State Election) ಇಂದು ಮತಗಟ್ಟೆ ಸಮೀಕ್ಷೆ ಬಹಿರಂಗ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಕನಿಷ್ಠ ಮೂರು ರಾಜ್ಯದಲ್ಲಿ ನಾವು ಗೆಲುವು ಸಾಧಿಸಿ ಅಧಿಕಾರಕ್ಕೆ ಬರುತ್ತೇವೆ. ನಾಲ್ಕರಲ್ಲೂ ಅಧಿಕಾರಕ್ಕೆ ಬರುವ ಸಾಧ್ಯತೆ ಇದೆ. ಇಂದು ಸಂಜೆ ಎಕ್ಸಿಟ್ ಪೋಲ್ (Exit Poll) ಬರಲಿದೆ. ಎಕ್ಸಿಟ್ ಪೋಲ್ನಲ್ಲಿ ನಾಲ್ಕು ರಾಜ್ಯಗಳಲ್ಲಿ ಗೆಲ್ಲುವ ನಿರೀಕ್ಷೆ ಇದೆ ಎಂದು ಹೇಳಿದರು. ಇದನ್ನೂ ಓದಿ: 108 ಅಂಬುಲೆನ್ಸ್ನವ್ರು ಖಾಸಗಿ ಆಸ್ಪತ್ರೆಗಳ ಜೊತೆ ಒಪ್ಪಂದ ಮಾಡಿಕೊಳ್ತಾರೆ: ಡಿಕೆಶಿ ಅಸಮಾಧಾನ
ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್ಗಢ, ಮಿಜೋರಾಂಗಳಲ್ಲಿ ಈಗಾಗಲೇ ಮತದಾನ ಮುಕ್ತಾಯವಾಗಿದೆ. ತೆಲಂಗಾಣದಲ್ಲಿ ಇಂದು ಮತದಾನ ನಡೆಯುತ್ತಿದೆ. ಈ ಮೂಲಕ ಪಂಚರಾಜ್ಯ ಚುನಾವಣೆಗೆ ತೆರೆ ಬೀಳಲಿದ್ದು, ಡಿಸೆಂಬರ್ 3 ರಂದು ಫಲಿತಾಂಶ ಪ್ರಕಟವಾಗಲಿದೆ. ಇದನ್ನೂ ಓದಿ: ಜಾತಿಗಣತಿ ವರದಿ ಬಂದ ಬಳಿಕವೇ ಅನುಷ್ಠಾನಕ್ಕೆ ತೀರ್ಮಾನ – ಶಿವರಾಜ್ ತಂಗಡಗಿ
ವಿಜಯಪುರ: ಸಿಎಂಗೆ ಬಿಆರ್ ಪಾಟೀಲ್ (BR Patil) ಅವರು ಪತ್ರ ಬರೆದಿದ್ದಾರೆ. ಸಿಎಂ ಅದರ ಬಗ್ಗೆ ನಿರ್ಣಯ ಮಾಡುತ್ತಾರೆ ಎಂದು ಸಚಿವ ಕೃಷ್ಣ ಬೈರೇಗೌಡ (Krishna Byre Gowda)ಹೇಳಿದ್ದಾರೆ.
ತನಿಖೆ ಮಾಡಿ ಎಂಬ ಬಿಆರ್ ಪಾಟೀಲ್ ಆಗ್ರಹ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಆ ಇಲಾಖೆ ನನಗೆ ಸಂಬಂಧಿಸಿದ್ದಲ್ಲ. ನಾನು ಅದರ ಬಗ್ಗೆ ಮಾತ್ರ ಉತ್ತರ ನೀಡಿದ್ದೇನೆ. ತನಿಖೆ ಮಾಡುವುದು ಬಿಡುವುದು ಮುಖ್ಯಮಂತ್ರಿಗಳಿಗೆ ಬಿಟ್ಟಿದ್ದು ಎಂದು ಹೇಳಿದರು. ಇದನ್ನೂ ಓದಿ: ಮೊದಲ ಬಾರಿಗೆ ಶಾಸಕರಾದವರಿಗೆ ನಿಗಮ-ಮಂಡಳಿ ಸ್ಥಾನ ಇಲ್ಲ: ಡಿಕೆಶಿ