Tag: ವಿಜಯಪುರ

  • ಮನೆಯ ವಸ್ತುಗಳನ್ನು ಮಾರಿ ಕುಡಿದು ಮಜಾ ಮಾಡ್ತಿದ್ದ ಮಗನನ್ನು ಕೊಂದ ತಂದೆ!

    ಮನೆಯ ವಸ್ತುಗಳನ್ನು ಮಾರಿ ಕುಡಿದು ಮಜಾ ಮಾಡ್ತಿದ್ದ ಮಗನನ್ನು ಕೊಂದ ತಂದೆ!

    ವಿಜಯಪುರ: ಮನೆಯ ವಸ್ತುಗಳನ್ನು ಮಾರಾಟ ಮಾಡಿ ಕಡಿದು ಮಜಾ ಮಾಡುತ್ತಿದ್ದ ಮಗನನ್ನು ತಂದೆಯೇ ಹತ್ಯೆ ಮಾಡಿದ ಘಟನೆ ನಾಗಠಾಣದಲ್ಲಿ (Nagathan) ನಡೆದಿದೆ.

    ಮುತ್ತಪ್ಪ ಮಸಳಿ (38) ಹತ್ಯೆಯಾದ ದುರ್ದೈವಿಯಾಗಿದ್ದಾನೆ. ತಂದೆ ಬಸಪ್ಪ ಮಸಳಿ ಮಗನನ್ನೇ ಹತ್ಯೆಗೈದಿರುವ ಆರೋಪಿಯಾಗಿದ್ದಾನೆ. ಮೃತ ಯುವಕ ತೀವ್ರ ಮದ್ಯ ವ್ಯಸನಿಯಾಗಿದ್ದ. ಆತನಿಗೆ ಹಲವು ಬಾರಿ ತಂದೆ ಬಸಪ್ಪ ಕುಡಿಯುವುದನ್ನು ಬಿಡುವಂತೆ ಬುದ್ಧಿವಾದ ಹೇಳಿದ್ದ. ಆದರೆ ಆತ ಕುಡಿಯುವುದನ್ನು ಬಿಟ್ಟಿರಲಿಲ್ಲ. ಇದನ್ನೂ ಓದಿ: ಇಸ್ರೋ ಮಾಜಿ ಅಧ್ಯಕ್ಷ, ಖ್ಯಾತ ವಿಜ್ಞಾನಿ ಕಸ್ತೂರಿ ರಂಗನ್‍ಗೆ ಹೃದಯಾಘಾತ

    ಕುಡಿಯಲು ಹಣ ಸಿಗದಿದ್ದಾಗ ಮನೆಯಲ್ಲಿದ್ದ ವಸ್ತುಗಳನ್ನು ಮಾರಾಟ ಮಾಡಿ ಕುಡಿಯುತ್ತಿದ್ದ. ಅಲ್ಲದೇ ಹೊಲದಲ್ಲಿದ್ದ ವಸ್ತುಗಳನ್ನು ಮಾರಾಟ ಮಾಡಿ ಕುಡಿಯುತ್ತಿದ್ದ ಎಂದು ತಿಳಿದು ಬಂದಿದೆ. ಈ ಸಲುವಾಗಿ ಹಲವು ಬಾರಿ ಮುತ್ತಪ್ಪನಿಗೆ ತಿಳುವಳಿಕೆ ಹೇಳಲಾಗಿತ್ತು. ಆದರೆ ಆತ ಹಳೆಯ ಚಾಳಿಯನ್ನು ಬಿಟ್ಟಿರಲಿಲ್ಲ. ಇದರಿಂದ ರೋಸಿ ಹೋಗಿದ್ದ ಆತನ ತಂದೆ ತಲೆಗೆ ಸಲಾಕೆಯಿಂದ ಹೊಡೆದಿದ್ದು, ಪರಿಣಾಮ ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

    ಈ ಸಂಬಂಧ ವಿಜಯಪುರ (Vijayapura) ಗ್ರಾಮೀಣ ಪೊಲೀಸ್ (Police) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಅಸಲಿ ಚಿನ್ನ ಕದ್ದು, ನಕಲಿ ಚಿನ್ನ ಇಟ್ಟು ವಂಚನೆ ಮಾಡ್ತಿದ್ದ ಚಾಲಾಕಿ ಕಳ್ಳಿಯರು ಅರೆಸ್ಟ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಜೈನಮುನಿ ಹತ್ಯೆಯ ಆರೋಪಿಗಳಿಗೆ ಗಲ್ಲು ಶಿಕ್ಷೆಯಾಗಲಿ : ಮನಗೂಳಿಯ ಹಿರೇಮಠದ ಸಂಗನಬಸವ ಶ್ರೀ ಆಗ್ರಹ

    ಜೈನಮುನಿ ಹತ್ಯೆಯ ಆರೋಪಿಗಳಿಗೆ ಗಲ್ಲು ಶಿಕ್ಷೆಯಾಗಲಿ : ಮನಗೂಳಿಯ ಹಿರೇಮಠದ ಸಂಗನಬಸವ ಶ್ರೀ ಆಗ್ರಹ

    ವಿಜಯಪುರ: ಚಿಕ್ಕೋಡಿಯಲ್ಲಿ (Chikkodi) ನಡೆದ ಜೈನಮುನಿ (Jain Muni) ಹತ್ಯೆಯನ್ನು ವಿಜಯಪುರದ ಮನಗೂಳಿ ಹಿರೇಮಠದ ಸಂಗನಬಸವ ಶ್ರೀಗಳು (Sanganabasava Swamiji) ಖಂಡಿಸಿದ್ದಾರೆ. ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದ್ದಾರೆ.

    ಸಮಾಜಕ್ಕಾಗಿ ಜೀವನವನ್ನೆ ಮುಡಿಪಾಗಿಟ್ಟ ಸ್ವಾಮೀಜಿಗಳ ಹತ್ಯೆಯಾದರೆ ಹೇಗೆ. ರಾಜ್ಯದಲ್ಲಿ ಸ್ವಾಮೀಜಿಗಳಿಗೆ ರಕ್ಷಣೆ ಇದೆಯೇ ಎಂದ ಮನಗೂಳಿ ಶ್ರೀ ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಖಟಕಬಾವಿ ಗದ್ದೆಯ ಕೊಳವೆಬಾವಿಯಲ್ಲಿ ಜೈನಮುನಿ ಮೃತದೇಹ ಪತ್ತೆ – ಪೀಸ್ ಪೀಸ್ ಮಾಡಿ ಎಸೆದ ಹಂತಕರು

    ಬೆಳಗಾವಿ ಜಿಲ್ಲೆಯ ಜನಪ್ರತಿನಿಧಿಗಳು, ಉಸ್ತುವಾರಿ ಸಚಿವರು ಸುಮ್ಮನೆ ಕೂರಬಾರದು. ಸರ್ಕಾರ ತಕ್ಷಣವೇ ಆ ಆರೋಪಿಗಳ ವಿರುದ್ಧ ಕಠಿಣ ಕ್ರಮ‌ ತೆಗೆದುಕೊಳ್ಳಬೇಕು. ಮುನಿಗಳ ಹಂತಕರನ್ನ ಗಲ್ಲಿಗೇರಿಸಬೇಕು. ಮುನಿಗಳ ಹತ್ಯೆ ವಿಚಾರದಲ್ಲಿ ಸರ್ಕಾರ ಎಚ್ಚರವಹಿಸಬೇಕು ಎಂದು ತಿಳಿಸಿದ್ದಾರೆ. ಅಲ್ಲದೇ ಹಿರಿಯ ಮುನಿಗಳು, ಜೈನ ಸಮುದಾಯದ ಭಕ್ತರು ನಡೆಸುತ್ತಿರುವ ಹೋರಾಟಕ್ಕೆ ಸರ್ಕಾರ ಸ್ಪಂದಿಸಬೇಕು ಎಂದು ಶ್ರೀಗಳು ಒತ್ತಾಯಿಸಿದ್ದಾರೆ.

    ಜುಲೈ 6ರಿಂದ ನಂದಿ ಪರ್ವತ ಆಶ್ರಮದ ಜೈನಮುನಿಗಳು ನಾಪತ್ತೆಯಾಗಿದ್ದರು. ಸ್ವಾಮೀಜಿಯ ನಾಪತ್ತೆಯ ಕುರಿತು ಭಕ್ತರು ಚಿಕ್ಕೋಡಿ ಪೊಲೀಸ್ (Police) ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಹಿನ್ನೆಲೆ ತನಿಖೆ ಕೈಗೊಂಡ ಪೊಲೀಸರು ಅನುಮಾನದ ಮೇಲೆ ಇಬ್ಬರು ಆರೋಪಿಗಳನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದರು. ವಿಚಾರಣೆ ವೇಳೆ ಸ್ವಾಮೀಜಿಯನ್ನು ಹತ್ಯೆ ಮಾಡಿರುವುದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ. ಜೈನಮುನಿಯ ಮೃತದೇಹವನ್ನು ಖಟಕಬಾವಿಯ ಗದ್ದೆಯಲ್ಲಿದ್ದ ತೆರೆದ ಕೊಳವೆಬಾವಿಗೆ ಹಾಕಿರುವುದಾಗಿ ಮಾಹಿತಿ ನೀಡಿದ್ದರು. ಇದನ್ನೂ ಓದಿ: ಕರೆಂಟ್ ಶಾಕ್ ಕೊಟ್ಟು, ಕತ್ತು ಹಿಸುಕಿ ಜೈನಮುನಿ ಹತ್ಯೆ – ಆರೋಪಿಗಳು ಸಿಕ್ಕಿಬಿದ್ದಿದ್ದು ಹೇಗೆ?

    ಆರೋಪಿಗಳು ನೀಡಿದ ಮಾಹಿತಿಯ ಮೇರೆಗೆ ಪೊಲೀಸರು ಶುಕ್ರವಾರ ರಾತ್ರಿಯಿಂದ ಖಟಕಬಾವಿಯಲ್ಲಿ ಶೋಧಕಾರ್ಯ ನಡೆಸಿದ್ದರು. ಸ್ವಾಮೀಜಿ ಮೃತದೇಹ ಪತ್ತೆಯಾಗದ ಹಿನ್ನೆಲೆ ಶನಿವಾರವೂ ಜೆಸಿಬಿ ಸಹಾಯದಿಂದ ಶೋಧ ಕಾರ್ಯ ಮುಂದುವರೆಸಿ ಕೊಳವೆ ಬಾವಿಯ 20 ಅಡಿ ಆಳದಲ್ಲಿ ಸ್ವಾಮೀಜಿ ಮೃತದೇಹ ಇರುವುದನ್ನು ಪತ್ತೆ ಹಚ್ಚಿದ್ದಾರೆ. ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮುಂದಿನ ವರ್ಷ ಎಲ್ಲ ಮಠ ಮಾನ್ಯಗಳಿಗೆ ಅನುದಾನ: ಎಂಬಿ ಪಾಟೀಲ್

    ಮುಂದಿನ ವರ್ಷ ಎಲ್ಲ ಮಠ ಮಾನ್ಯಗಳಿಗೆ ಅನುದಾನ: ಎಂಬಿ ಪಾಟೀಲ್

    – ಸಿಸಿ ಪಾಟೀಲ್‌ರ ಮಠ ಇದ್ದರೂ ಹೇಳಲಿ ಎಂದು ಟಾಂಗ್ ಕೊಟ್ಟ ಸಚಿವ

    ವಿಜಯಪುರ: ನಮಗೆ ಮಠ ಮಾನ್ಯಗಳ ಬಗ್ಗೆ ಅಪಾರ ಗೌರವ ಇದೆ. ಈ ವರ್ಷ ನಾವು ಗ್ಯಾರಂಟಿಗಳಲ್ಲಿ ಘೋಷಣೆ ಮಾಡಿದ್ದೇವೆ. ಮುಂದಿನ ವರ್ಷ ಎಲ್ಲ ಮಠ ಮಾನ್ಯಗಳಿಗೆ ಅನುದಾನ ಕೊಡುತ್ತೇವೆ. ಸಿಸಿ ಪಾಟೀಲ್ (CC Patil) ಅವರ ಮಠ ಇದ್ದರೂ ಹೇಳಲಿ ಎಂದು ಟಾಂಗ್ ಕೊಡುವ ಮೂಲಕ ಸಚಿವ ಎಂಬಿ ಪಾಟೀಲ್ (MB Patil) ಮಠಗಳಿಗೆ ಅನುದಾನ ಕೊಡುವ ಭರವಸೆ ನೀಡಿದ್ದಾರೆ.

    ಮಠ ಮಾನ್ಯಗಳ ಅನುದಾನ ಕಡಿತ ಮಾಡಲಾಗುತ್ತಿರುವ ಬಗ್ಗೆ ಮಾಜಿ ಸಚಿವ ಸಿಸಿ ಪಾಟೀಲ್ ಆರೋಪ ಮಾಡಿರುವ ವಿಚಾರವಾಗಿ ಮಾತನಾಡಿದ ಎಂಬಿ ಪಾಟೀಲ್, ನಾವು ಭೇದ-ಭಾವ ಮಾಡಲ್ಲ. ಎಲ್ಲರಿಗೂ ಅನುದಾನ ಕೊಡುತ್ತೇವೆ. ಹಿಂದೂ ಮಠಗಳು, ಕ್ರಿಶ್ಚಿಯನ್ ಚರ್ಚ್ಗಳು, ಮುಸ್ಲಿಂ ಮಸೀದಿ, ಜೈನರ ಬಸದಿ, ಬೌದ್ಧ ವಿಹಾರಗಳನ್ನು ಸಮಾನವಾಗಿ ಕಾಣುತ್ತೇವೆ. ಎಲ್ಲರಿಗೂ ಹಣಕಾಸಿನ ಅನುದಾನ ಕೊಡುತ್ತೇವೆ. 1 ವರ್ಷ ಸಿಸಿ ಪಾಟೀಲ್ ತಾಳ್ಮೆಯಿಂದಿರಲಿ ಎಂದರು.

    ಬಿಜೆಪಿ ಸರ್ಕಾರದ ಮೇಲೆ ಗಂಭೀರ ಆರೋಪ ಮಾಡಿದ ಎಂಬಿ ಪಾಟೀಲ್, ಸಿಸಿ ಪಾಟೀಲ್ ತಮ್ಮ ಬಜೆಟ್‌ಗಿಂತ 4-5 ಸಾವಿರ ಕೋಟಿ ರೂ. ಜಾಸ್ತಿ ಖರ್ಚು ಮಾಡಿದ್ದಾರೆ. ಸಿಸಿ ಪಾಟೀಲ್ ಯಾಕೆ ಹೆಚ್ಚು ಖರ್ಚು ಮಾಡಿದ್ರು? ನೀರಾವರಿ ಇಲಾಖೆಯಲ್ಲಿ 10-15 ಸಾವಿರ ಕೋಟಿ ರೂ. ಹೆಚ್ಚು ಖರ್ಚು ಮಾಡಿದ್ದಾರೆ. ಬಜೆಟ್‌ಗಿಂತ ಹೆಚ್ಚು ಯಾಕೆ ಖರ್ಚು ಮಾಡಿದ್ದೀರಿ? ಜನರನ್ನು ಯಾಕೆ ಮರಳು ಮಾಡಿದ್ದೀರಿ? ಇದರ ಹಿಂದಿನ ಉದ್ದೇಶ ಏನು ಹಾಗಿದ್ರೆ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಚಿಕ್ಕೋಡಿಯ ಜೈನಮುನಿ ಹತ್ಯೆ ಖಂಡನೀಯ – ಸಮಗ್ರ ತನಿಖೆ ಆಗಲಿ: ಕಟೀಲ್ ಒತ್ತಾಯ

    ಬಿಬಿಎಂಪಿಯಲ್ಲೂ ಭ್ರಷ್ಟಾಚಾರ. ಲೂಟಿ ಹೊಡೆಯಲು ಬಜೆಟ್‌ಗಿಂತ ಹೆಚ್ಚಿನ ಅನುದಾನ ಖರ್ಚು ಮಾಡಿದ್ದೀರಿ. ಬಜೆಟ್‌ಗಿಂತ ಹೆಚ್ಚು ಖರ್ಚು ಮಾಡುವಾಗ ನಿಮ್ಮ ಶಿಸ್ತು ಎಲ್ಲಿತ್ತು? ನೀವು ಮಾಡಿದ ಅಕ್ರಮಗಳನ್ನು ಅಶಿಸ್ತನ್ನು ಎಳೆ-ಎಳೆಯಾಗಿ ನಮ್ಮ ಸಿಎಂ ಬಜೆಟ್ ಪುಸ್ತಕದಲ್ಲಿಯೇ ಹೇಳಿ ಬಿಟ್ಟಿದ್ದಾರೆ. ಇವರ ಮುಖ ಏನು ಉಳಿದಿಲ್ಲ, ಇವರನ್ನು ಸಿಎಂ ಎಕ್ಸ್ಪೋಸ್ ಮಾಡಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಅನಾರೋಗ್ಯದಿಂದ ಬಿಜೆಪಿ ಮಾಜಿ ಶಾಸಕ ಸಿಎಂ ನಿಂಬಣ್ಣವರ್ ನಿಧನ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬಾವಿಯಲ್ಲಿ ಯುವತಿ ಶವ ಪತ್ತೆ

    ಬಾವಿಯಲ್ಲಿ ಯುವತಿ ಶವ ಪತ್ತೆ

    ವಿಜಯಪುರ: ಅವಿವಾಹಿತೆಯೊಬ್ಬಳ ಶವ ಬಾವಿಯಲ್ಲಿ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

    ವಿಜಯಪುರ (Vijayapura) ಜಿಲ್ಲೆಯ ಮುದ್ದೇಬಿಹಾಳ ತಾಲೂಕು ಹಳ್ಳೂರ ಗ್ರಾಮದಲ್ಲಿ ಘಟನೆ ನಡೆದಿದೆ. ಯುವತಿಯನ್ನು ಮಂಜುಳಾ ಚನ್ನಪ್ಪಗೌಡ ಪಾಟೀಲ್ (22) ಎಂದು ಗುರುತಿಸಲಾಗಿದೆ.

    ಶವ ಪತ್ತೆಯಾಗುತ್ತಿದ್ದಂತೆಯೇ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಇದನ್ನೂ ಓದಿ: ಬಿಸಿಯೂಟದಲ್ಲಿ ಹಲ್ಲಿ ಪತ್ತೆ – ವಿದ್ಯಾರ್ಥಿಗಳು ಅಸ್ವಸ್ಥ

    ಈ ಕುರಿತು ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಎಕ್ಸ್‌ಪ್ರೆಸ್ ವೇಯಲ್ಲಿ ಮತ್ತೊಂದು ಅಪಘಾತ – ಕೆಎಸ್‌ಆರ್‌ಟಿಸಿ ಬಸ್ ಕಂಡಕ್ಟರ್ ಸಾವು, ಚಾಲಕ ಗಂಭೀರ

    ಎಕ್ಸ್‌ಪ್ರೆಸ್ ವೇಯಲ್ಲಿ ಮತ್ತೊಂದು ಅಪಘಾತ – ಕೆಎಸ್‌ಆರ್‌ಟಿಸಿ ಬಸ್ ಕಂಡಕ್ಟರ್ ಸಾವು, ಚಾಲಕ ಗಂಭೀರ

    ರಾಮನಗರ: ಬೆಂಗಳೂರು – ಮೈಸೂರು ಎಕ್ಸ್‌ಪ್ರೆಸ್‌ (Bengaluru-Mysuru Expressway) ವೇಯಲ್ಲಿ ಫ್ಲೈವುಡ್ (Flywood) ತುಂಬಿದ ಬೊಲೆರೋ (Bolero) ವಾಹನಕ್ಕೆ ಕೆಎಸ್‌ಆರ್‌ಟಿಸಿ (KSRTC) ಬಸ್ ಡಿಕ್ಕಿ ಹೊಡೆದಿದೆ. ಅಫಘಾತದ ಪರಿಣಾಮ ಬಸ್ ಕಂಡಕ್ಟರ್ (Conductor) ಸ್ಥಳದಲ್ಲೇ ಸಾವನ್ನಪ್ಪಿದ್ದು, ಚಾಲಕ ಸೇರಿದಂತೆ ನಾಲ್ವರಿಗೆ ಗಂಭೀರ ಗಾಯಗಳಾಗಿವೆ.

    ಮೈಸೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಎಲೆಕ್ಟ್ರಿಕ್ ಬಸ್ (Electric Bus) ರಾಮನಗರ (Ramanagara) ತಾಲೂಕಿನ ವಿಜಯಪುರ (Vijayapura) ಗ್ರಾಮದ ಬಳಿ ಫ್ಲೈವುಡ್ ತುಂಬಿದ್ದ ಬೊಲೆರೋ ವಾಹನವನ್ನು ಓವರ್‌ಟೇಕ್ ಮಾಡಲು ಹೋಗಿ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ಬಸ್ ಸರ್ವಿಸ್ ರಸ್ತೆ ಪಕ್ಕದ ಜಮೀನಿಗೆ ಬಂದು ನಿಂತಿದೆ. ಘಟನೆಯ ಪರಿಣಾಮ ಬಸ್ ಕಂಡಕ್ಟರ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಓವರ್‌ಟೇಕ್ ಅಲ್ಲ, ಬೊಲೆರೋ ಟಯರ್ ಸ್ಫೋಟದಿಂದ Expressway ಅಪಘಾತ – KSRTC ಸ್ಪಷ್ಟನೆ

    ಬಸ್‌ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಎಸ್ಪಿ ಕಾರ್ತಿಕ್ ರೆಡ್ಡಿ ಸ್ಥಳಕ್ಕೆ ಭೆಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ರಾಮನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಐಸ್‌ಕ್ರೀಮ್ ಕಂಟೇನರ್ ಪಲ್ಟಿ – ಚಾಲಕ, ಕ್ಲೀನರ್ ಸ್ಥಳದಲ್ಲೇ ಸಾವು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಳೆಗಾಗಿ ವಿಚಿತ್ರವಾದ ಆಚರಣೆ- ಸ್ಮಶಾನದ ಗೋರಿಗಳಿಗೆ ನೀರುಣಿಸಿದ ಗ್ರಾಮಸ್ಥರು

    ಮಳೆಗಾಗಿ ವಿಚಿತ್ರವಾದ ಆಚರಣೆ- ಸ್ಮಶಾನದ ಗೋರಿಗಳಿಗೆ ನೀರುಣಿಸಿದ ಗ್ರಾಮಸ್ಥರು

    ವಿಜಯಪುರ: ಈ ಬಾರಿ ರಾಜ್ಯದೆಲ್ಲೆಡೆ ಮುಂಗಾರು ಮಳೆ (Monsoon Rain) ಕೈ ಕೊಟ್ಟಿದೆ. ಅದರಂತೆ ಬಿಸಿಲನಾಡು ವಿಜಯಪುರ (Vijayapura) ಜಿಲ್ಲೆಯಲ್ಲಿ ಒಂದು ಮಳೆ (Rain) ಆಗದೆ ರೈತರು ಕಂಗಾಲಾಗಿದ್ದಾರೆ. ಅದಕ್ಕೆ ಎಲ್ಲೂ ಕಂಡರಿಯದ ವಿಚಿತ್ರವಾದ ಪ್ರಾರ್ಥನೆ ಮಾಡಿದ್ದಾರೆ.

    ಹೌದು. ಮುಂಗಾರು ಮಳೆ ಇಲ್ಲದೆ ಬಿಸಿಲನಾಡು ವಿಜಯಪುರ ಜಿಲ್ಲೆಯ ಜನರು ಕಂಗಾಲಾಗಿದ್ದಾರೆ. ಭೂಮಿಯಲ್ಲಿ ಬಿತ್ತಿದ ರೈತರು ಮತ್ತು ಬಿತ್ತದೆ ಇರುವವರು ಪ್ರತಿದಿನ ಮುಗಿಲಿನತ್ತ ಮುಖಮಾಡಿ ಕುಳಿತಿದ್ದಾರೆ. ಕಾರಣ ಉತ್ತಮ ಮಳೆಗಾಗಿ ಗೋರಿ (Grave) ಗಳಲ್ಲಿ ನೀರನ್ನು ಗ್ರಾಮಸ್ಥರು ಹಾಕಿದ್ದಾರೆ. ಇದನ್ನೂ ಓದಿ: ವಿದೇಶ ಪ್ರವಾಸದಿಂದ ವಾಪಸ್ಸಾಗ್ತಿದ್ದಂತೆ ಮೋದಿ ಮಹತ್ವದ ಸಭೆ

    ವಿಜಯಪುರ ಜಿಲ್ಲೆಯ ತಾಳಿಕೋಟಿ ತಾಲೂಕಿನ ಕಲಕೇರಿ ಗ್ರಾಮದಲ್ಲಿರುವ ಸ್ಮಶಾನದಲ್ಲಿರುವ ಗೋರಿಗಳಿಗೆ ಗ್ರಾಮಸ್ಥರು ನೀರಿನ ಟ್ಯಾಂಕರ್ ಸಮೇತ ತೆರಳಿದ್ದಾರೆ. ಟ್ಯಾಂಕರ್ ನಿಂದ ಗೋರಿಗಳನ್ನ ಅಗಿದು ಶವಗಳ ಬಾಯಿಗೆ ನೀರು ಹಾಕಿದ್ದಾರೆ. ಅಲ್ಲದೆ ವಾಗೀಶ ಹಿರೇಮಠ ಎಂಬವರು ಗೋರಿ ಮೇಲೆ ಕುಳಿತು ಕೈಯಲ್ಲಿ ಜಪ ಮಣಿ ಹಿಡಿದು ಮಳೆಗಾಗಿ ಪ್ರಾರ್ಥನೆ ಮಾಡಿದ್ದಾರೆ.

    ಸಾಮಾನ್ಯವಾಗಿ ಮಳೆಗಾಗಿ ಕಪ್ಪೆ ಮದುವೆ (Frog wedding), ಕತ್ತೆ ಮದುವೆ (Donkey Wedding) ಸೇರಿದಂತೆ ಅನೇಕ ರೀತಿಯಲ್ಲಿ ನಾನಾ ಪ್ರಾರ್ಥನೆ, ಆಚರಣೆಗಳು ನಡೆಯತ್ತವೆ. ಆದರೆ ಇದೇ ಮೊದಲ ಬಾರಿಗೆ ಇಂತಹ ವಿಚಿತ್ರ ಆಚರಣೆ ಬೆಳಕಿಗೆ ಬಂದಿದೆ. ಈ ರೀತಿ ಬರಗಾಲ ಬಿದ್ದಾಗಲೆಲ್ಲ ಗ್ರಾಮದ ಹಿರಿಯರು ಹಿಂದೆ ಕೂಡ ಮಾಡ್ತಿದ್ದರಂತೆ. ಆಗೆಲ್ಲ ಉತ್ತಮ ಮಳೆ ಆಗಿತ್ತಂತೆ. ಅದೇ ನಂಬಿಕೆಯಿಂದ ಈಗ ಗ್ರಾಮಸ್ಥರು ಈ ವಿಚಿತ್ರ ಆಚರಣೆ ಮಾಡಿದ್ದಾರೆ.

  • ಆತ್ಮೀಯ ಗೆಳೆಯನ ಜೊತೆಗೆ ತನ್ನ ಪತ್ನಿಯ ರಾಸಲೀಲೆ ನೋಡಿದ ಪತಿ ಮಟಾಶ್

    ಆತ್ಮೀಯ ಗೆಳೆಯನ ಜೊತೆಗೆ ತನ್ನ ಪತ್ನಿಯ ರಾಸಲೀಲೆ ನೋಡಿದ ಪತಿ ಮಟಾಶ್

    ವಿಜಯಪುರ: ಆತ್ಮೀಯ ಗೆಳೆಯ ಮತ್ತು ತನ್ನ ಪತ್ನಿಯ ರಾಸಲೀಲೆಗೆ ಪತಿ ಬಲಿಯಾದ ಘಟನೆ ನಡೆದಿದೆ.

    ವಿಜಯಪುರ (Vijayapura) ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಚಟ್ಟರಕಿ ಗ್ರಾಮದಲ್ಲಿ ಘಟನೆ ನಡೆದಿದೆ. ಆತ್ಮೀಯ ಗೆಳಯ ಅಬ್ಬಾಸ್ ಅಲಿ ಮತ್ತು ಪತ್ನಿ ರಾಜ್ಮಾಳ ರಾಸಲೀಲೆಯನ್ನ ಕಣ್ಣಾರೆ ಕಂಡ ಪತಿ ಸೈಫನ್ ಹತ್ಯೆಗೀಡಾಗಿದ್ದಾನೆ. ಇದನ್ನೂ ಓದಿ: ಕಾಣೆಯಾದ ಕವಿತಾ ಶವವಾಗಿ ಪತ್ತೆ- ಗೆಳೆಯ ಸಲೀಂನಿಂದಲೇ ಹತ್ಯೆ

    ಕಳೆದ ತಿಂಗಳ ವಿಧಾನಸಭೆ ಮತದಾನದ ದಿನ ಮೇ 10 ರಂದು ಸೈಫನ್ ಮನೆಯಲ್ಲಿ ಫ್ಯಾನ್ ನ ಕರೆಂಟ್ ಶಾಕ್ ನಿಂದ ಸಾವಿಗೀಡಾದ ಬಗ್ಗೆ ತಿಳಿದು ಕುಟುಂಬಸ್ಥರು ಸಹಜ ಸಾವು ಎಂದು ಸೈಫನ್ ಅಂತ್ಯಸಂಸ್ಕಾರ ನೆರವೇರಿಸಿದ್ದಾರೆ. ಆದರೆ ನಂತರದ ದಿನಗಳಲ್ಲಿ ಸೈಫನ್ ಸಾವಿನ ಬಗ್ಗೆ ಅನುಮಾನ ಮೂಡಿ ಸೈಫನ್ ಸಾವು ಸಹಜ ಸಾವಲ್ಲ. ಇದು ಒಂದು ಹತ್ಯೆ. ಇದಕ್ಕೆ ಅಬ್ಬಾಸ್ ಅಲಿ ಮತ್ತು ಪತ್ನಿ ರಾಜ್ಮಾನೇ ಕಾರಣ ಅಂತಾ ಆರೋಪಿಸಿ ದೇವರಹಿಪ್ಪರಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

    ಕಾರಣ ಇದೀಗ ತಹಶೀಲ್ದಾರ್ ನೇತೃತ್ವದಲ್ಲಿ ಸೈಫನ್ ದೇಹ ಮರು ಪರೀಕ್ಷೆಗೆ ಮಣ್ಣಿನಡಿಯಿಂದ ಸೈಫನ್ ದೇಹವನ್ನ ಹೊರತಗೆಯಲಾಗಿದೆ. ಸೈಫನ್ ಸಾವಿನ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಪೊಲೀಸರ ಪಾರದರ್ಶಕ ತನಿಖೆ ನಡೆಸಿದ್ದಲ್ಲಿ ಸತ್ಯ ಹೊರಬೀಳುತ್ತಾ ಅಂತಾ ಕುಟುಂಬಸ್ಥರು ಸೇರಿದಂತೆ ಗ್ರಾಮಸ್ಥರು ಕಾದು ಕುಳಿತಿದ್ದಾರೆ.

  • ಭಾರೀ ಅನಾಹುತದಿಂದ ಮಹಾರಾಷ್ಟ್ರ ಸಚಿವರು ಜಸ್ಟ್ ಮಿಸ್

    ಭಾರೀ ಅನಾಹುತದಿಂದ ಮಹಾರಾಷ್ಟ್ರ ಸಚಿವರು ಜಸ್ಟ್ ಮಿಸ್

    ವಿಜಯಪುರ: ಭಾರೀ ಅನಾಹುತದಿಂದ ಮಹರಾಷ್ಟ್ರ ಸಚಿವರು ಪಾರಾದ ಘಟನೆ ವಿಜಯಪುರದಲ್ಲಿ ನಡೆದಿದೆ.

    ನೃತ್ಯ ಮಾಡುತ್ತಿದ್ದ ಮಹಿಳೆಯ ತಲೆಯ ಮೇಲಿಂದ ಮಡಿಕೆಗಳು ಬಿದ್ದಿದ್ದು, ಮಹಾರಾಷ್ಟ್ರ (Maharastra) ದ ಆಹಾರ ಸಚಿವ ಸಂಜಯ್ ಬಾವು ರಾಠೋಡ್ (Sanjay Bhau Rathod) ಬಚಾವ್ ಆಗಿದ್ದಾರೆ. ಇದನ್ನೂ ಓದಿ: ಅನ್ನಭಾಗ್ಯ ಗ್ಯಾರಂಟಿ ಗೊಂದಲ- ರಾಜ್ಯದ ರೈತರಿಂದ ಅಕ್ಕಿ ಖರೀದಿಸಲ್ವಾ ಸಿಎಂ?

    ಏನಿದು ಘಟನೆ..?: ವಿಜಯಪುರ (Vijayapura) ಜಿಲ್ಲೆಯ ತಿಕೋಟಾ ತಾಲೂಕಿನ ಸೋಮದೇವರಹಟ್ಟಿ ತಾಂಡಾದಲ್ಲಿ ಭಾನುವಾರ ದುರ್ಗಾದೇವಿ ಜಾತ್ರೆ ಇತ್ತು. ಇದರ ವೇದಿಕೆ ಕಾರ್ಯಕ್ರಮಲ್ಲಿ ವೇದಿಕೆ ಮೇಲೆ ಮಹಿಳೆ ನೃತ್ಯ ಮಾಡುತ್ತಿದ್ದಳು. ಆಗ ತಲೆಯ ಮೇಲೆ ಮಡಿಕೆಗಳನ್ನು ಇಟ್ಟುಕೊಂಡು ಗ್ಲಾಸ್ ಮೇಲೇ ನಿಂತು ನೃತ್ಯ ಮಾಡುತ್ತಿದ್ದ ವೇಳೆ ಘಟನೆ ನಡೆದಿದೆ.

    ಒಂದರ ಮೇಲೊಂದರಂತೆ 10 ಕ್ಕೂ ಅಧಿಕ ಮಡಿಕೆಗಳನ್ನು ತಲೆಯ ಮಹಿಳೆ ಮೇಲಿಟ್ಟುಕೊಂಡಿದ್ದಳು. ಈ ವೇಳೆ ಮಂಟಪದ ಮೇಲ್ಭಾಗ ತಗುಲಿ ಏಕಾಏಕಿ ಕೆಳಗೆ ಮಡಿಕೆಗಳು ಬಿದ್ದವು. ಸಚಿವರ ಕುಳಿತ ಜಾಗದಲ್ಲೇ ಮಡಿಕೆಗಳು ಬಿದ್ದವು. ಪಕ್ಕದಲ್ಲಿ ಕುಳಿತ ವ್ಯಕ್ತಿಗಳು ಮಡಿಕೆಗಳಿಗೆ ಕೈ ಅಡ್ ಹಿಡಿದ ಕಾರಣ ಭಾರೀ ಅನಾಹುತ ತಪ್ಪಿದಂತಾಗಿ ಸಚಿವರು ಸ್ವಲ್ಪದ್ರಲ್ಲೆ ಪಾರಾಗಿದ್ದಾರೆ.

  • ಹೆಡ್‍ಕಾನ್ಸ್ಟೇಬಲ್ ಮೇಲೆ ಟ್ರ್ಯಾಕ್ಟರ್ ಹರಿಸಿ ಕೊಲೆಗೈದಿದ್ದ ಆರೋಪಿ ಕಾಲಿಗೆ ಗುಂಡು ಹಾರಿಸಿದ ಪೊಲೀಸರು

    ಹೆಡ್‍ಕಾನ್ಸ್ಟೇಬಲ್ ಮೇಲೆ ಟ್ರ್ಯಾಕ್ಟರ್ ಹರಿಸಿ ಕೊಲೆಗೈದಿದ್ದ ಆರೋಪಿ ಕಾಲಿಗೆ ಗುಂಡು ಹಾರಿಸಿದ ಪೊಲೀಸರು

    ಕಲಬುರಗಿ: ಹೆಡ್‍ಕಾನ್ಸ್ಟೇಬಲ್ (Head Constable) ಮೇಲೆ ಟ್ರ್ಯಾಕ್ಟರ್ (Tractor) ಹರಿಸಿ ಕೊಲೆ ಮಾಡಿದ್ದ ಮರಳು ದಂಧೆಕೋರನನ್ನು (Sand Mafia) ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧನಕ್ಕೆ ತೆರಳಿದ್ದ ವೇಳೆ ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ಆತನ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ.

    ಗುಂಡೇಟು ತಿಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅರೋಪಿಯನ್ನು ಸಾಯಿಬಣ್ಣ ಎಂದು ಗುರುತಿಸಲಾಗಿದೆ. ಟ್ರ್ಯಾಕ್ಟರ್ ಚಾಲಕ ಸಿದ್ದಣ್ಣ ಮತ್ತು ಸಾಯಿಬಣ್ಣ ಇಬ್ಬರು ಸಹೋದರರು. ಆರೋಪಿ ಸಿದ್ದಣ್ಣನನ್ನು ಪೊಲೀಸರು ಈಗಾಗಲೇ ಬಂಧಿಸಿದ್ದರು ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಪಾತ್ರೆ ತೊಳೆದ ನೀರು ಪಕ್ಕದ ಮನೆಯತ್ತ ಹರಿದಿದ್ದಕ್ಕೆ ಜಗಳ- ಯುವಕನ ಕೊಲೆ

    ಸಾಯಿಬಣ್ಣ ವಿಜಯಪುರ (Vijayapur) ಜಿಲ್ಲೆಯ ಆಲಮೇಲ ಪಟ್ಟಣದ ಹೊರವಲಯದ ಜಮೀನಿನಲ್ಲಿ ಅಡಗಿ ಕುಳಿತ್ತಿದ್ದ. ಆತನನ್ನು ಬಂಧಿಸಿ ಕಲಬುರಗಿಗೆ ಕರೆತರುವಾಗ, ಜೇರಟಗಿ ಗ್ರಾಮದ ಮಧ್ಯೆ ಮೂತ್ರ ವಿಸರ್ಜನೆಗೆ ಎಂದು ವಾಹನ ನಿಲ್ಲಿಸಲು ಮನವಿ ಮಾಡಿದ್ದಾನೆ. ಈ ವೇಳೆ ಲುಂಗಿಯಲ್ಲಿ ಬಚ್ಚಿಟ್ಟುಕೊಂಡಿದ್ದ ಬಟನ್ ಚಾಕುವಿನಿಂದ ಯಡ್ರಾಮಿ ಠಾಣೆ ಪಿಎಸ್‍ಐ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ಪಿಎಸ್‍ಐ ಬಸವರಾಜ್ ಆತ್ಮರಕ್ಷಣೆಗಾಗಿ ಆರೋಪಿ ಸಾಯಿಬಣ್ಣ ಕಾಲಿಗೆ ಎರಡು ಸುತ್ತು ಫೈರಿಂಗ್ ಮಾಡಿ ಬಂಧಿಸಿ ಕಲಬುರಗಿ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ.

    ಜೂನ್ 15 ರಂದು ಕಲಬುರಗಿ (Kalaburagi) ಜಿಲ್ಲೆ ಜೇವರ್ಗಿ ತಾಲೂಕಿನ ನಾರಾಯಣಪುರ ಗ್ರಾಮದ ಬಳಿ ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ಟ್ರ್ಯಾಕ್ಟರ್‌ನ್ನು ತಡೆಯಲು ನೇಲೋಗಿ ಠಾಣೆ ಹೆಡ್‍ಕಾನ್ಸ್ಟೆಬಲ್ ಮೈಸೂರು ಅಲಿಯಾಸ್ ಮಯೂರ್ ಚೌವ್ಹಾಣ್ ಪ್ರಯತ್ನಿಸಿದ್ದರು. ಆದರೆ ಆರೋಪಿಗಳು ವಾಹನ ನಿಲ್ಲಿಸದೆ ಮಯೂರ್ ಮೇಲೆ ವಾಹನ ಹರಿಸಿದ್ದರು. ಬಳಿಕ ಪ್ರಮುಖ ಆರೋಪಿ ಸಾಯಿಬಣ್ಣ ತಲೆಮರೆಸಿಕೊಂಡಿದ್ದ.

    ಆರೋಪಿ ಸಾಯಿಬಣ್ಣ ಕುಖ್ಯಾತ ರೌಡಿಶೀಟರ್ ಆಗಿದ್ದು, ಆತನ ಮೇಲೆ ನೇಲೋಗಿ ಪೊಲೀಸ್ ಠಾಣೆಯಲ್ಲಿ 2016 ರಲ್ಲೇ ರೌಡಿಶೀಟರ್ ಓಪನ್ ಮಾಡಲಾಗಿತ್ತು. ಅಲ್ಲದೇ ಸಾಯಿಬಣ್ಣನ ಮೇಲೆ ಕೊಲೆ ಯತ್ನ, ಡಕಾಯಿತಿ ಸೇರಿದಂತೆ ಎರಡು ಪ್ರಕರಣಗಳು ದಾಖಲಾಗಿದ್ದವು. ಜೇವರ್ಗಿ ತಾಲೂಕಿನ ನಾರಾಯಣಪುರ ಗ್ರಾಮದ ಭೀಮಾ ನದಿ ತಟದಲ್ಲಿ ಅಕ್ರಮವಾಗಿ ಮರಳು ಸಾಗಾಟ ಮಾಡುವುದನ್ನೆ ಕಸುಬು ಮಾಡಿಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

    ಪ್ರಕರಣದಲ್ಲಿ ಕರ್ತವ್ಯ ನಿರ್ಲಕ್ಷ ಆರೋಪದ ಮೇಲೆ ಜೇವರ್ಗಿ (Jevargi) ಠಾಣೆ ಸಿಪಿಐ ಭೀಮನಗೌಡ್ ಬಿರಾದರ್, ನೆಲೋಗಿ ಠಾಣೆಯ ಪಿಎಸ್‍ಐ ಗೌತಮ್ ಮತ್ತು ಕಾನ್ಸ್ಟೇಬಲ್ ರಾಜಶೇಖರ ಇವರನ್ನು ಎಸ್ಪಿ ಇಶಾ ಪಂತ್ ಅಮಾನತ್ತು ಮಾಡಿದ್ದಾರೆ. ಇದನ್ನೂ ಓದಿ: PublicTV Explainer: ಗೃಹಜ್ಯೋತಿ ಗ್ಯಾರಂಟಿ- ನಿಮ್ಮ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ

  • ನಡುರಸ್ತೆಯಲ್ಲೇ ಯುವತಿ ಹತ್ಯೆಗೈದು ಕುತ್ತಿಗೆಯಲ್ಲಿ ಚಾಕು ಇಟ್ಟು ಸ್ಕೂಟಿ ಕೊಂಡೊಯ್ದರು!

    ನಡುರಸ್ತೆಯಲ್ಲೇ ಯುವತಿ ಹತ್ಯೆಗೈದು ಕುತ್ತಿಗೆಯಲ್ಲಿ ಚಾಕು ಇಟ್ಟು ಸ್ಕೂಟಿ ಕೊಂಡೊಯ್ದರು!

    ವಿಜಯಪುರ: ಯುವತಿಯೊಬ್ಬಳನ್ನು ನಡುರಸ್ತೆಯಲ್ಲಿಯೇ ಬರ್ಬರವಾಗಿ ಹತ್ಯೆ ಮಾಡಿ ದುಷ್ಕರ್ಮಿಗಳು ಪರಾರಿಯಾದ ಘಟನೆ ವಿಜಯಪುರ (Vijayapura Young Woman Murder) ದಲ್ಲಿ ನಡೆದಿದೆ.

    ಗಂಗೂಬಾಯಿ ಯಂಕಂಚಿ(28) ಹತ್ಯೆಯಾದ ಯುವತಿ. ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದ ಹೊರವಲಯದಲ್ಲಿ ಈ ಘಟನೆ ನಡೆದಿದೆ. ಇದನ್ನೂ ಓದಿ: ಕುಡಿದ ಮತ್ತಲ್ಲಿ ಯುವಕನನ್ನು ಬೆತ್ತಲಾಗಿಸಿ ರಸ್ತೆಯಲ್ಲಿ ಅಟ್ಟಾಡಿಸಿದ ಪುಂಡರು – ಮೂವರ ಬಂಧನ

    ನಡೆದಿದ್ದೇನು..?: ಗಂಗೂಬಾಯಿ ತನ್ನ ಸ್ಕೂಟಿಯಲ್ಲಿ ಸಿಂದಗಿ ಪಟ್ಟಣಕ್ಕೆ ವಾಪಸ್ ಆಗುತ್ತಿದ್ದರು. ಈ ವೇಳೆ ಪಟ್ಟಣದ ಹೊರವಲಯದ ಕೊಬೊಟೊ ಶೋರೂಂ ಬಳಿ ಮೇಲೆ ದುಷ್ಕರ್ಮಿಗಳು ಏಕಾಏಕಿ ಅಟ್ಯಾಕ್ ಮಾಡಿದ್ದಾರೆ. ನಡುರಸ್ತೆಯಲ್ಲಿಯೇ ಗಂಗೂಬಾಯಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.

    ಇತ್ತ ಹತ್ಯೆ ಮಾಡಿದ ಬಳಿಕ ಗಂಗೂಬಾಯಿ ಕುತ್ತಿಗೆಯಲ್ಲೆ ಚಾಕು ಬಿಟ್ಟು ಆಕೆಯ ಸ್ಕೂಟಿ ಜೊತೆ ಪರಾರಿಯಾಗಿದ್ದಾರೆ. ಈ ಘಟನೆ ಸಿಂದಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.