Tag: ವಿಜಯಪುರ

  • ಸಿದ್ಧೇಶ್ವರ ಶ್ರೀ ಲಿಂಗೈಕ್ಯ – ಕನ್ನಡದಲ್ಲೇ ಟ್ವೀಟ್‌ ಮಾಡಿ ಪ್ರಧಾನಿ ಮೋದಿ ಸಂತಾಪ

    ಸಿದ್ಧೇಶ್ವರ ಶ್ರೀ ಲಿಂಗೈಕ್ಯ – ಕನ್ನಡದಲ್ಲೇ ಟ್ವೀಟ್‌ ಮಾಡಿ ಪ್ರಧಾನಿ ಮೋದಿ ಸಂತಾಪ

    ನವದೆಹಲಿ: ವಿಜಯಪುರದ (Vijayapura) ಜ್ಞಾನಯೋಗಾಶ್ರಮದಲ್ಲಿ ಸೋಮವಾರ ಸಿದ್ಧೇಶ್ವರ ಶ್ರೀಗಳು (Siddheshwara Swamiji) ಲಿಂಗೈಕ್ಯರಾಗಿದ್ದು, ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಅವರು ಟ್ವೀಟ್‌ ಮಾಡಿ ಸಂತಾಪ ಸೂಚಿಸಿದ್ದಾರೆ.

    ಪ್ರಧಾನಿ ನರೇಂದ್ರ ಮೋದಿ ಅವರು ಕನ್ನಡದಲ್ಲೇ ಟ್ವೀಟ್‌ ಮಾಡಿ ಶ್ರೀಗಳಿಗೆ ಗೌರವ ನಮನ ಸಲ್ಲಿಸಿದ್ದಾರೆ. ಇದನ್ನೂ ಓದಿ: ವಿಜಯಪುರ: ಸಿದ್ಧೇಶ್ವರ ಶ್ರೀಗಳ ಅಂತಿಮ ದರ್ಶನಕ್ಕೆ ಸೈನಿಕ ಶಾಲೆಯತ್ತ ಭಕ್ತಸಾಗರ

    “ಪರಮಪೂಜ್ಯ ಶ್ರೀ ಸಿದ್ಧೇಶ್ವರ ಸ್ವಾಮೀಜಿ ಅವರು ಸಮಾಜಕ್ಕೆ ನೀಡಿರುವ ಗಣನೀಯ ಸೇವೆಗಾಗಿ ಅವರನ್ನು ಸ್ಮರಿಸಲಾಗುತ್ತದೆ. ಅವರು ಇತರರ ಒಳಿತಿಗಾಗಿ ಅವಿಶ್ರಾಂತವಾಗಿ ಶ್ರಮಿಸಿದ್ದರು ಮತ್ತು ಅವರ ಜ್ಞಾನೋತ್ಸಾಹಕ್ಕಾಗಿ ಅವರು ಗೌರವಗಳಿಸಿದ್ದರು. ಈ ದುಃಖದ ಸಮಯದಲ್ಲಿ ಅವರ ಅಸಂಖ್ಯಾತ ಭಕ್ತರೊಂದಿಗೆ ನನ್ನ ಸಂವೇದನೆ ಇದೆ. ಓಂ. ಶಾಂತಿ” ಎಂದು ಟ್ವೀಟ್‌ ಮಾಡಿದ್ದಾರೆ.

    ಶ್ರೀಗಳು ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದಾಗ ಮೋದಿ ಅವರು ಫೋನ್‌ ಕರೆ ಮಾಡಿ ಆರೋಗ್ಯದ ಬಗ್ಗೆ ವಿಚಾರಿಸಿದ್ದರು. ಶೀಘ್ರವೇ ಗುಣಮುಖರಾಗುವಂತೆ ಪ್ರಾರ್ಥಿಸಿದ್ದರು. ಇದನ್ನೂ ಓದಿ: ಸಿದ್ದೇಶ್ವರ ಶ್ರೀಗಳ ನಿಧನಕ್ಕೆ ಗಣ್ಯರಿಂದ ಕಣ್ಣೀರ ವಿದಾಯ

    ಜ್ಞಾನಯೋಗಾಶ್ರಮದ ಸಿದ್ಧೇಶ್ವರ ಶ್ರೀಗಳ ಅಂತಿಮ ದರ್ಶನಕ್ಕೆ ಸೈನಿಕ ಶಾಲೆಯಲ್ಲಿ ವ್ಯವಸ್ಥೆ ಮಾಡಲಾಗಿದೆ. ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಶ್ರೀಗಳ ಅಂತಿಮ ದರ್ಶನ ಪಡೆಯುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ವಿಜಯಪುರ: ಸಿದ್ಧೇಶ್ವರ ಶ್ರೀಗಳ ಅಂತಿಮ ದರ್ಶನಕ್ಕೆ ಸೈನಿಕ ಶಾಲೆಯತ್ತ ಭಕ್ತಸಾಗರ

    ವಿಜಯಪುರ: ಸಿದ್ಧೇಶ್ವರ ಶ್ರೀಗಳ ಅಂತಿಮ ದರ್ಶನಕ್ಕೆ ಸೈನಿಕ ಶಾಲೆಯತ್ತ ಭಕ್ತಸಾಗರ

    ವಿಜಯಪುರ: ಸೋಮವಾರ ಅಸ್ತಂಗತರಾದ ಜ್ಞಾನಯೋಗಾಶ್ರಮದ ಸಿದ್ಧೇಶ್ವರ ಶ್ರೀಗಳ (Siddheswhara Swamiji) ಪಾರ್ಥೀವ ಶರೀರವನ್ನು ಆಶ್ರಮದಿಂದ ಸೈನಿಕ ಶಾಲೆಗೆ ತರಲಾಯಿತು. ಶ್ರೀಗಳ ಅಂತಿಮ ದರ್ಶನಕ್ಕೆ ಮಂಗಳವಾರ ಬೆಳ್ಳಂಬೆಳಗ್ಗೆಯಿಂದಲೇ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರ ದಂಡು ಆಗಮಿಸುತ್ತಿದೆ.

    ಆಶ್ರಮದಿಂದ ಸೈನಿಕ ಶಾಲೆ ಮೈದಾನಕ್ಕೆ ಶ್ರೀಗಳ ಪಾರ್ಥೀವ ಶರೀರವನ್ನು ತೆರೆದ ವಾಹನದಲ್ಲಿ ತರಲಾಯಿತು. ಈ ವೇಳೆ ರಸ್ತೆಯ ಇಕ್ಕೆಲಗಳಲ್ಲಿ ನಿಂತಿದ್ದ ಭಕ್ತರು, ಶ್ರೀಗಳಿಗೆ ದೂರದಿಂದಲೇ ಕೈಮುಗಿದು ಕಂಬನಿ ಮಿಡಿದರು. ಸೈನಿಕ ಶಾಲೆ ಮುಂಭಾಗದಲ್ಲಿ ವಚನ ಪಠಣ, ಮಂತ್ರ ಪಠಣ ಮಾಡಲಾಯಿತು. ಇದನ್ನೂ ಓದಿ: ಸಿದ್ದೇಶ್ವರ ಶ್ರೀಗಳ ನಿಧನಕ್ಕೆ ಗಣ್ಯರಿಂದ ಕಣ್ಣೀರ ವಿದಾಯ

    ಶ್ರೀಗಳ ಅಂತಿಮ ದರ್ಶನಕ್ಕೆ ಸೈನಿಕ ಶಾಲೆಯತ್ತ ನಸುಕಿನ ಜಾವದಲ್ಲೇ ಸಹಸ್ರಾರು ಭಕ್ತರು ಆಗಮಿಸಿದ್ದಾರೆ. ಭಕ್ತರಿಗಾಗಿ ವಿಜಯಪುರ ಬಸ್ ನಿಲ್ದಾಣದಿಂದ ಸೈನಿಕ ಶಾಲೆಗೆ 25 ವಿಶೇಷ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಸುಮಾರು 6 ಲಕ್ಷ ಭಕ್ತರಿಗೆ ಪ್ರಸಾದ, ನೀರು, ನೆರಳಿನ ವ್ಯವಸ್ಥೆ ಮಾಡಲಾಗಿದೆ. ಸರ್ಕಾರಿ ಗೌರವದಲ್ಲಿ ಸಿಎಂ ಬೊಮ್ಮಾಯಿ ಮತ್ತು ಸಂಪುಟ ಸಚಿವರು, ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಮಾಜಿ ಸಿಎಂ ಕುಮಾರಸ್ವಾಮಿ ಭಾಗಿಯಾಗಲಿದ್ದಾರೆ.

    ಸೈನಿಕ ಶಾಲೆಯಲ್ಲಿ ಶ್ರೀಗಳಿಗೆ ತ್ರಿವರ್ಣ ಧ್ವಜ ಹೊದಿಸಿ, ಗಾಜಿನ ಮಂಟಪದಲ್ಲಿ ಪಾರ್ಥೀವ ಶರೀರವನ್ನಿಟ್ಟು ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಬೆಳಗ್ಗೆಯೇ 30 ಸಾವಿರಕ್ಕೂ ಹೆಚ್ಚು ಭಕ್ತರು ಅಂತಿಮ ದರ್ಶನಕ್ಕೆ ಆಗಮಿಸಿದ್ದರು. ರಾಜ್ಯದ ಪ್ರಮುಖ ಮಠಗಳ ಮಠಾಧೀಶರು, ರಾಜಕೀಯ ಮುಖಂಡರು ಹಾಗೂ ಅಧಿಕಾರಿಗಳು ಸಹ ಭಾಗವಹಿಸಿದ್ದಾರೆ. ಇದನ್ನೂ ಓದಿ: ಮಂಗಳವಾರ ವಿಜಯಪುರ ಶಾಲಾ-ಕಾಲೇಜು, ಸರ್ಕಾರಿ ಕಚೇರಿಗಳಿಗೆ ರಜೆ ಘೋಷಣೆ

    Live Tv
    [brid partner=56869869 player=32851 video=960834 autoplay=true]

  • ಸಿದ್ದೇಶ್ವರ ಶ್ರೀಗಳ ನಿಧನಕ್ಕೆ ಗಣ್ಯರಿಂದ ಕಣ್ಣೀರ ವಿದಾಯ

    ಸಿದ್ದೇಶ್ವರ ಶ್ರೀಗಳ ನಿಧನಕ್ಕೆ ಗಣ್ಯರಿಂದ ಕಣ್ಣೀರ ವಿದಾಯ

    ವಿಜಯಪುರ: ನಡೆದಾಡುವ ದೇವರು ಎಂದೇ ಖ್ಯಾತರಾಗಿರುವ ಜ್ಞಾನಯೋಗಿ ಆಶ್ರಮದ ಸಿದ್ದೇಶ್ವರ ಸ್ವಾಮೀಜಿ ಅವರು ನಿಧನರಾದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಭಕ್ತರ ಆಕ್ರಂದನ ಮುಗಿಲು ಮುಟ್ಟಿದೆ. ರಾಜ್ಯದ ಪ್ರಮುಖ ಗಣ್ಯರೂ ಕಂಬನಿ ಮಿಡಿಯುವ ಮೂಲಕ ಶ್ರೀಗಳಿಗೆ ಕಣ್ಣೀರ ವಿದಾಯಹೇಳಿದ್ದಾರೆ.

    ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂಗಳಾದ ಸಿಎಂ ಬಿ.ಎಸ್‌.ಯಡಿಯೂರಪ್ಪ, ಹೆಚ್‌.ಡಿ ಕುಮಾರಸ್ವಾಮಿ, ಸಿದ್ದರಾಮಯ್ಯ, ಕೇಂದ್ರ ಸಚಿವ ಜಿ.ಪರಮೇಶ್ವರ್‌, ಶಾಸಕ ಬಸನಗೌಡ ಪಾಟೀಲ ಯತ್ನಾಳ್‌, ಸಚಿವ ವಿ.ಸೋಮಣ್ಣ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಸೇರಿದಂತೆ ರಾಜ್ಯಾದ್ಯಂತ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

    ಬಸವರಾಜ ಬೊಮ್ಮಾಯಿ:
    ವಿಜಯಪುರದ ಜ್ಞಾನ ಯೋಗಾಶ್ರಮದ ಪರಮ ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರು ಲಿಂಗೈಕ್ಯರಾದ ಸುದ್ದಿ ತಿಳಿದು ಅತ್ಯಂತ ದುಃಖವಾಗಿದೆ. ತಮ್ಮ ಪ್ರವಚನಗಳ ಮೂಲಕ ಮನುಕುಲದ ಉದ್ಧಾರಕ್ಕೆ ಶ್ರಮಿಸಿದ ಶ್ರೀಗಳ ಸೇವೆ ಅಮೋಘ ಹಾಗೂ ಅನನ್ಯವಾದುದು. ಶ್ರೀಗಳ ಅಗಲಿಕೆ ನಾಡಿಗೆ ತುಂಬಲಾರದ ನಷ್ಟವಾಗಿದೆ. ಶ್ರೀಗಳ ಆತ್ಮಕ್ಕೆ ಸದ್ಗತಿ ಕೋರುತ್ತೇನೆ. ನಾಡಿನಾದ್ಯಂತ ಇರುವ ಶ್ರೀಗಳ ಭಕ್ತ ಸಮೂಹಕ್ಕೆ ಈ ದುಃಖವನ್ನು ಸಹಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ.

    ಹೆಚ್‌.ಡಿ ಕುಮಾರಸ್ವಾಮಿ:
    ನಮ್ಮ ಪಾಲಿಗೆ ನಡೆದಾಡುವ ಬೆಳಕು, ನಡೆದಾಡುವ ಅರಿವು, ನಡೆದಾಡುವ ದೇವರೇ ಆಗಿದ್ದ ಜ್ಞಾನ ಯೋಗಾಶ್ರಮದ ಜ್ಞಾನಯೋಗಿ ಪರಮಪೂಜ್ಯ ಶ್ರೀ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರು ಶಿವೈಕ್ಯರಾಗಿದ್ದಾರೆ. ಸಮಾಜಕ್ಕೆ ಚಿಕಿತ್ಸರಾಗಿದ್ದ ಪೂಜ್ಯರು, ತಮ್ಮ ಪರಿಪೂರ್ಣ ಸಾರ್ಥಕ ಬದುಕಿನಿಂದಲೇ ನಮ್ಮನ್ನು ಪಾವನಗೊಳಿಸಿದವರು. ತಮ್ಮ ಪ್ರತಿ ಹೆಜ್ಜೆಯಲ್ಲೂ ಜ್ಞಾನದ ಬೆಳಕು ಮೂಡಿಸುತ್ತಿದ್ದ ಅವರ ನಿರ್ಗಮನ ಬಹುದೊಡ್ಡ ನಷ್ಟ. ಪೂಜ್ಯರು ಬಿಟ್ಟುಹೋಗಿರುವ ಅರಿವು ನಮಗೆಲ್ಲ ದಿವ್ಯಬೆಳಕು. ಆ ಬೆಳಕಿನಡಿಯಲ್ಲಿ ಮುನ್ನಡೆಯೋಣ ಎನ್ನುವ ಆಶಯ ನನ್ನದಾಗಿದೆ.

    ಡಿ.ಕೆ ಶಿವಕುಮಾರ್‌:
    ಖ್ಯಾತ ಪ್ರವಚನಕಾರರು ಹಾಗೂ ಜ್ಞಾನಕೋಶವೆಂದೇ ಪ್ರಸಿದ್ಧರಾದ ವಿಜಯಪುರದ ಜ್ಞಾನ ಯೋಗಾಶ್ರಮದ ಪರಮ ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರು ಲಿಂಗೈಕ್ಯರಾದ ವಿಚಾರ ಕೇಳಿ ಅತೀವ ನೋವುಂಟಾಯಿತು. ಅವರ ಸಾವು ತುಂಬಲಾಗದ ನಷ್ಟವಾಗಿದೆ. ಅವರ ಆತ್ಮಕ್ಕೆ ಸದ್ಗತಿ ಸಿಗಲಿ, ಅವರ ಅಪಾರ ಭಕ್ತರಿಗೆ ನನ್ನ ಸಂತಾಪಗಳು.

    ಆರಗ ಜ್ಞಾನೇಂದ್ರ:
    ವಿಜಯಪುರದ ಜ್ಞಾನಯೋಗಾಶ್ರಮದ ಪರಮಪೂಜ್ಯ ಶ್ರೀ ಸಿದ್ದೇಶ್ವರ ಶ್ರೀಗಳು ನಿಧನರಾದ ಸುದ್ದಿ ತಿಳಿದು ಬಹಳ ದುಃಖ ಉಂಟಾಗಿದೆ. ನಾಡಿನ ಸಾಮಾಜಿಕ ಹಾಗೂ ಅಧ್ಯಾತ್ಮ ವಲಯಕ್ಕೆ ಅವರ ಸೇವೆ ಸ್ಮರಣೀಯವಾದುದು. ಶ್ರೀಗಳ ಆತ್ಮಕ್ಕೆ ಸದ್ಗತಿ ದೊರೆಯಲಿ. ಅನುಯಾಯಿಗಳಿಗೆ ಈ ನೋವು ಭರಿಸುವ ಶಕ್ತಿ ದೊರೆಯಲಿ. ಶ್ರೀಗಳು ‘ನಡೆದಾಡುವ ದೇವರು’ ಎಂದೇ ಹೆಸರು ಪಡೆದಿದ್ದರು. ತಮ್ಮ ಅಪಾರ ಜ್ಞಾನಧಾರೆಯನ್ನು ಜನರಿಗೆ ಎರೆದು ಬದುಕಿಗೆ ಉತ್ತಮ ಮಾರ್ಗದರ್ಶನ ನೀಡುತ್ತಿದ್ದರು. ಅವರ ಸೇವೆ ಅಜರಾಮರ.

    Live Tv
    [brid partner=56869869 player=32851 video=960834 autoplay=true]

  • ಗೌರವ ಡಾಕ್ಟರೇಟ್, ಪ್ರಶಸ್ತಿಗಳನ್ನು ತಿರಸ್ಕರಿಸಿದ್ದ ಕಾಯಕಯೋಗಿ – ನಿರಾಣಿ ಸಂತಾಪ

    ಗೌರವ ಡಾಕ್ಟರೇಟ್, ಪ್ರಶಸ್ತಿಗಳನ್ನು ತಿರಸ್ಕರಿಸಿದ್ದ ಕಾಯಕಯೋಗಿ – ನಿರಾಣಿ ಸಂತಾಪ

    ಬೆಂಗಳೂರು: ತಮ್ಮ ಸರಳ ಜೀವನ ಹಾಗೂ ಪ್ರವಚನದ ಮೂಲಕ ನಾಡದಾಡುವ ನಿಜ ದೇವರು ಎಂದೇ ಭಕ್ತರಿಂದ ಕರೆಯುತ್ತಿದ್ದ ವಿಜಯಪುರ ಜ್ಞಾನ ಯೋಗಾನಂದಾ ಸಿದ್ದೇಶ್ವರ ಸ್ವಾಮೀಜಿ(Siddheshwar Swamiji) ಅವರ ನಿಧನಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ್ ಆರ್ ನಿರಾಣಿ(Murugesh Nirani) ಅವರು ತೀವ್ರ ಕಂಬನಿ ಮಿಡಿದಿದ್ದಾರೆ.

    ವಿಜಯಪುರದ ಸಿದ್ದೇಶ್ವರ ಸ್ವಾಮಿಗಳು ನಡೆದಾಡುವ ವಿಶ್ವಕೋಶ. ಅವರ ಜ್ಞಾನ ಬೋಧನೆಯ ಲಾಭ ಪಡೆದು ಸನ್ಮಾರ್ಗದಲ್ಲಿ ನಡೆಯಬೇಕು. ಇವರ ಜ್ಞಾನ ಖ್ಯಾತಿ ದೇಶ-ವಿದೇಶಗಳಲ್ಲಿ ಪಸರಿಸಿದೆ. ಇಂತಹ ಮಹಾನ್‌ ಜ್ಞಾನಿಯ ಜ್ಞಾನ ಸುಧೆಯ ಬೆಳಕಿನಲ್ಲಿ ಎಲ್ಲರೂ ಮುನ್ನಡೆಯುವ ಅಗತ್ಯವಿದ್ದು, ಇದುವೇ ಅವರಿಗೆ ನಾವು ಸಲ್ಲಿಸುವ ನಿಜವಾದ ಗೌರವ ಎಂದು ಹೇಳಿದ್ದಾರೆ.

     

    ಸಿದ್ದೇಶ್ವರ ಸ್ವಾಮೀಜಿ ಅವರಂತಹ ಸರಳ ವ್ಯಕ್ತಿಯನ್ನು ಎಲ್ಲಿಯೂ ನೋಡಿಲ್ಲ, ಜ್ಞಾನದಲ್ಲಿ ಬೃಹತ್‌ ಪರ್ವತದಂತಿದ್ದರು. ಪ್ರತಿಯೊಬ್ಬರೂ ಸರಿದಾರಿಯಲ್ಲಿ ಜೀವನ ಸಾಗಿಸಲು ಸಿದ್ದೇಶ್ವರ ಸ್ವಾಮಿಗಳ ಪ್ರವಚನ ಕೇಳಲೇಬೇಕು ಎಂದು ಮನವಿ ಮಾಡಿದ್ದಾರೆ.

    ಪರಮ ಪೂಜ್ಯ ಶ್ರೀ ಸಿದ್ಧೇಶ್ವರ ಸ್ವಾಮೀಜಿಗಳು ಆಧ್ಯಾತ್ಮದ ಬಗ್ಗೆ ತುಂಬ ಆಳವಾದ ಅಧ್ಯಯನ ಚಿಂತನೆಗಳನ್ನು ನಡೆಸಿರುವ ಶ್ರೇಷ್ಠ ಅನುಭಾವಿಗಳೂ ಮಧುರ ಸ್ವಭಾವದವರೂ ಆಗಿದ್ದ ಅವರು, ಕನ್ನಡ, ಸಂಸ್ಕೃತ, ಇಂಗ್ಲಿಷ್, ಮರಾಠಿ ಮತ್ತು ಹಿಂದಿ ಭಾಷೆಗಳಲ್ಲಿ ನಿಷ್ಣಾತರು. ಅತ್ಯಂತ ಸರಳ ಸಜ್ಜನಿಕೆಯ ಸಾಕಾರ ಮೂರ್ತಿ, ನನ್ನದು-ತನ್ನದೆಂಬ ಮಮಕಾರ ತೊರೆದ ಮಹಾಪುರುಷರು ಎಂದು ಬಣ್ಣಿಸಿದ್ದಾರೆ.

    ತಮ್ಮ ಗುರುಗಳಾದ ಶ್ರೀ ಮಲ್ಲಿಕಾರ್ಜುನ ಸ್ವಾಮಿಗಳು ಮಾಡಿದ ಪ್ರವಚನಗಳನ್ನು ಒಂದುಗೂಡಿಸಿ “ಸಿದ್ದಾಂತ ಶಿಖಾಮಣಿ “ಎಂಬ ಪುಸ್ತಕ ಬರೆದು ಗುರುಗಳ ಹೆಸರಿನಲ್ಲೇ ಪ್ರಕಟಿಸಿದ್ದರು. ಆಗ ಅವರಿಗೆ ಕೇವಲ 19 ವರ್ಷ ಮಾತ್ರ ಆಗಿತ್ತೆಂಬುದು ಗಮನಾರ್ಹ ಇದು ಅವರ ಪ್ರತಿಭೆಗೆ ಹಿಡಿದ ಕೈ ಗನ್ನಡಿ ಎಂದು ಅಭಿಪ್ರಾಯ ಪಟ್ಟಿದ್ದಾರೆ. ಇದನ್ನೂ ಓದಿ: ವಿಜಯಪುರ ಜ್ಞಾನಯೋಗಾಶ್ರಮ ಮಠದ ಸಿದ್ದೇಶ್ವರ ಸ್ವಾಮೀಜಿ ವಿಧಿವಶ

    ಅವರ ನಿಸ್ವಾರ್ಥ ಸೇವೆಯನ್ನು ಕಂಡು ಕೇಂದ್ರ ಸರ್ಕಾರ ಎರಡನೇ ಅತ್ಯುನ್ನತ ನಾಗರಿಕ ಗೌರವ ಪ್ರಶಸ್ತಿಯಾದ ಪದ್ಮಶ್ರೀ, ಕರ್ನಾಟಕ ವಿಶ್ವವಿದ್ಯಾನಿಲಯದಿಂದ ಗೌರವ ಡಾಕ್ಟರೇಟ್ ಹೀಗೆ ತಮಗೆ ಸಂದ ಎಷ್ಟೋ ಪ್ರಶಸ್ತಿ ಮತ್ತು ಪುರಸ್ಕಾರಗಳನ್ನು ಅವರು ವಿನಮೃವಾಗಿಯೇ ನಿರಾಕರಿಸಿದ್ದ ಅಪರೂಪದ ಕಾಯಕಯೋಗಿ ಎಂದು ಪ್ರಶಂಸಿದ್ದಾರೆ.

    ಆಧ್ಯಾತ್ಮ, ಆದರ್ಶ ಮತ್ತು ನೈತಿಕತೆ ಬಗ್ಗೆ ಕೇವಲ ಬೋಧನೆ ಮಾಡುವುದಷ್ಟೇ ಅಲ್ಲ. ಅವುಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು, ನುಡಿದಂತೆ ನಡೆಯುವ ಮತ್ತು ನಡೆದಂತೆಯೇ ನುಡಿಯುವ ವ್ಯಕ್ತಿತ್ವ ಅವರದ್ದಾಗಿತ್ತು. ಇಂತಹ ಶ್ರೇಷ್ಠ ಸಂತನನ್ನು ಮತ್ತೆ ಕಾಣಲು ಸಾಧ್ಯವಿಲ್ಲ ಎಂದು ನಿರಾಣಿ ಅವರು ಹೇಳಿದ್ದಾರೆ.

    ಮಹಾ ಸಂತನೊಬ್ಬನನ್ನು ಕಳೆದುಕೊಂಡು ದುಃಖದಲ್ಲಿರುವ ಅವರ ಅಸಂಖ್ಯಾತ ಭಕ್ತರಿಗೆ ಶ್ರೀಗಳ ಅಗಲಿಕೆಯ ದುಃಖವನ್ನು ಭರಿಸುವಂತಹ ಶಕ್ತಿಯನ್ನು ಆ ದೇವರು ಕರುಣಿಸಲಿ ಎಂದು ಬೇಡಿಕೊಳ್ಳುವುದಾಗಿ ಸಚಿವ ನಿರಾಣಿ ಅವರು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

     

    Live Tv
    [brid partner=56869869 player=32851 video=960834 autoplay=true]

  • ವಿಜಯಪುರ ಜ್ಞಾನಯೋಗಾಶ್ರಮ ಮಠದ ಸಿದ್ದೇಶ್ವರ ಸ್ವಾಮೀಜಿ ವಿಧಿವಶ

    ವಿಜಯಪುರ ಜ್ಞಾನಯೋಗಾಶ್ರಮ ಮಠದ ಸಿದ್ದೇಶ್ವರ ಸ್ವಾಮೀಜಿ ವಿಧಿವಶ

    ವಿಜಯಪುರ: ನಡೆದಾಡುವ ದೇವರು ಎಂದೇ ಖ್ಯಾತರಾಗಿದ್ದ ಜ್ಞಾನಯೋಗಿ ಆಶ್ರಮದ ಸಿದ್ದೇಶ್ವರ ಸ್ವಾಮೀಜಿ(82) ವಿಧಿವಶರಾಗಿದ್ದಾರೆ.

    ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಸಿದ್ದೇಶ್ವರ ಶ್ರೀಗಳ(Siddheshwar Swamiji)  ಆರೋಗ್ಯದಲ್ಲಿ ಏರುಪೇರು ಉಂಟಾಗಿ ವೈದ್ಯರ (Doctors) ತಂಡ ಚಿಕಿತ್ಸೆಯಲ್ಲಿ ನಿರತವಾಗಿತ್ತು. ಆಶ್ರಮದ ಕೊಠಡಿಯಲ್ಲೇ ಚಿಕಿತ್ಸೆ ಮುಂದುವರಿದಿತ್ತು. ಜಿಲ್ಲಾಧಿಕಾರಿ ಡಾ. ವಿಜಯ ಮಾಂತೇಶ ದಾನಮನ್ನವರ, ಎಸ್ಪಿ ಎಚ್. ಡಿ.ಆನಂದ್ ಕುಮಾರ್ ಹಾಗೂ ಹಲವು ಮಠಾಧೀಶರು ಆಶ್ರಮದ ಆವರಣದಲ್ಲಿ ಬೀಡು ಬಿಟ್ಟಿದ್ದರು.  ಆದರೆ ಚಿಕಿತ್ಸೆ ಫಲಿಸದೇ  ಇಂದು ಸಂಜೆ 6:05ಕ್ಕೆ ಸ್ವಾಮೀಜಿ ಲಿಂಗೈಕ್ಯರಾದರು.

    ಕಳೆದ ನಾಲ್ಕು ದಿನಗಳಿಂದ ಸಿದ್ದೇಶ್ವರ ಸ್ವಾಮೀಜಿ ಅನಾರೋಗ್ಯದಿಂದ ಬಳಲುತ್ತಿದ್ದರು. ಸಿದ್ದೇಶ್ವರ ಸ್ವಾಮೀಜಿ ಆರೋಗ್ಯ ಸ್ಥಿರವಾಗಿತ್ತು. ಆದರೆ ಮಧ್ಯಾಹ್ನ ಮತ್ತು ಸಂಜೆಯ ಹೆಲ್ತ್ ಬುಲೆಟಿನ್‍ನಲ್ಲಿ ಸ್ವಾಮೀಜಿಗೆ ಉಸಿರಾಟ ತೊಂದರೆ ಜಾಸ್ತಿಯಾಗಿದೆ. ಸ್ವಾಮೀಜಿ ಬಿಪಿ ಸ್ವಲ್ಪ ಕಡಿಮೆಯಾಗಿದೆ. ಸ್ವಾಮೀಜಿ ಆಹಾರ ತೆಗೆದುಕೊಳ್ಳುತ್ತಿಲ್ಲ. ಆದರೂ ಸಿದ್ದೇಶ್ವರ ಸ್ವಾಮೀಜಿ ಅವರ ಆರೋಗ್ಯ ಸ್ಥಿರವಾಗಿದೆ. ನಾವು ನಮ್ಮ ಶಕ್ತಿ ಮೀರಿ ಪ್ರಯತ್ನ ಪಡುತ್ತಿದ್ದೇವೆ. ಸ್ವಾಮೀಜಿ ಆಸ್ಪತ್ರೆಗೆ ಬರಲು ಒಪ್ಪುತ್ತಿಲ್ಲ. ಏನು ಚಿಕಿತ್ಸೆ ಕೊಡುತ್ತಿರೋ ಇಲ್ಲೇ ಕೊಡಿ ಸ್ವಾಮೀಜಿ ಹೇಳಿದ್ದರು ಎಂದು ಹೆಲ್ತ್‌ ಬುಲೆಟಿನ್‌ನಲ್ಲಿ ವೈದ್ಯರು ತಿಳಿಸಿದ್ದರು.

    ಡಿ.31ರಂದು ಭೇಟಿ ನೀಡಿದ್ದ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಶ್ರೀಗಳ ದರ್ಶನ ಪಡೆದಿದ್ದರು. ಸಿದ್ದೇಶ್ವರ ಸ್ವಾಮೀಜಿ ಅವರ ಆರೋಗ್ಯ ವಿಚಾರಿಸಿದ್ದರು. ಶ್ರೀಗಳು ಪ್ರಧಾನಿ ಮೋದಿ (Narendra Modi) ಅವರ ಜತೆ ಫೋನಿನಲ್ಲಿ ಮಾತನಾಡಿಸಿದ್ದರು. ಉನ್ನತ ಚಿಕಿತ್ಸೆ ನೀಡುವುದರ ಬಗ್ಗೆ ಪ್ರಧಾನಿಯವರು ಚರ್ಚಿಸಿದಾಗ ಕೈ ಮುಗಿದು ಧನ್ಯವಾದ ಅರ್ಪಿಸಿದ್ದರು. ಅಲ್ಲದೆ ಗುರುಗಳ ಕಿಡ್ನಿ, ಹೃದಯ, ಶ್ವಾಸಕೋಶ ಪ್ಯಾರಾಮೀಟರ್ಸ್ ಸಾಮಾನ್ಯವಾಗಿದೆ ಎಂಬುದಾಗಿ ಸಿಎಂ ತಿಳಿಸಿದ್ದರು.

    ಆರೋಗ್ಯ ಸ್ಥಿತಿ ಗಂಭೀರವಾಗಿದ್ದ ಹಿನ್ನೆಲೆಯಲ್ಲಿ ವಿಜಯಪುರದ ಜ್ಞಾನಯೋಗಾಶ್ರಮ ಮಠಕ್ಕೆ ಸುತ್ತೂರು ಶ್ರೀಗಳೂ ಭೇಟಿ ನೀಡಿ, ಆರೋಗ್ಯ ವಿಚಾರಿಸಿದ್ದರು. ಇದನ್ನೂ ಓದಿ: ಹೊಸವರ್ಷಕ್ಕೆ ಶಿವರಾಜ್ ಕುಮಾರ್ ನಟನೆಯ ‘ಘೋಸ್ಟ್’ ಮೋಷನ್ ಪೋಸ್ಟರ್

    ಜ್ಞಾನಯೋಗ ಸಂಪುಟ ಬಿಡುಗಡೆ: ಸಿದ್ದೇಶ್ವರ ಶ್ರೀಗಳು ರಚಿಸಿರುವ 20 ಸಾವಿರ ಪುಟಗಳ ಜ್ಞಾನಯೋಗ ಸಂಪುಟವನ್ನು ಗದುಗಿನ ಶ್ರೀಗಳಿಂದ ಪುಸ್ತಕ ಬಿಡುಗಡೆಗೊಳಿಸಲಾಗಿತ್ತು. ಸಿದ್ದೇಶ್ವರ ಸ್ವಾಮೀಜಿಗಳ ಗುರುಗಳಾದ ಮಲ್ಲಿಕಾರ್ಜುನ ಶ್ರೀಗಳ ಕುರಿತಾಗಿ ಬರೆದಿರುವ ಪುಸ್ತಕ ಇದಾಗಿದೆ.

    ಪುಸ್ತಕ ಬಿಡುಗಡೆ ಬಳಿಕ ಭಕ್ತರನ್ನು ಉದ್ದೇಶಿಸಿ ಸುತ್ತೂರು ಶ್ರೀಗಳು ಮಾತನಾಡಿ, ಸಿದ್ದೇಶ್ವರ ಶ್ರೀಗಳು ಅಪರೂಪದ ಕೃತಿಗಳನ್ನು ನೀಡಿದ್ದಾರೆ. ಅಲ್ಲದೇ ಶ್ರೀಗಳು ಆರೋಗ್ಯವಾಗಿದ್ದಾರೆ ವಿಶ್ರಾಂತಿ ಪಡೆಯುತ್ತಿದ್ದಾರೆಂದು ಅಭಯ ನೀಡಿದ್ದರು.

    Live Tv
    [brid partner=56869869 player=32851 video=960834 autoplay=true]

  • ಸಿದ್ದೇಶ್ವರ ಶ್ರೀಗಳ ಹೆಲ್ತ್‌ಬುಲೆಟಿನ್- ದ್ರವಾಹಾರ ಸೇವಿಸ್ತಿದ್ದು, ಭಕ್ತರಿಗೆ ಆತಂಕ ಬೇಡ

    ಸಿದ್ದೇಶ್ವರ ಶ್ರೀಗಳ ಹೆಲ್ತ್‌ಬುಲೆಟಿನ್- ದ್ರವಾಹಾರ ಸೇವಿಸ್ತಿದ್ದು, ಭಕ್ತರಿಗೆ ಆತಂಕ ಬೇಡ

    – ವಿದ್ಯಾರ್ಥಿಗಳಿಂದ ಶ್ರೀಗಳಿಗಾಗಿ ಪ್ರಾರ್ಥನೆ

    ವಿಜಯಪುರ: ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ (Siddeshwara Swamiji) ಗಳ ಆರೋಗ್ಯ ಸ್ಥಿರವಾಗಿದೆ ಎಂದು ಡಾ.ಎಸ್.ಬಿ ಪಾಟೀಲ್ (Dr. S B Patil) ತಂಡದಿಂದ ಹೆಲ್ತ್ ಬುಲೆಟಿನ್ ಬಿಡುಗಡೆಯಾಗಿದೆ.

    ಜಾಸ್ತಿ ಆಹಾರ ಸ್ವೀಕರಿಸ್ತಿಲ್ಲ ಅಷ್ಟೇ. ಗಂಜಿ, ನೀರು, ದ್ರವಾಹಾರ ಕೊಡ್ತಿದ್ದೀವಿ. ಬೇಗ ಚೇತರಿಕೆ ಆಗ್ತಾರೆ. ಹೆಚ್ಚಿನ ಚಿಕಿತ್ಸೆಯ ಅಶ್ಯಕತೆ ಇಲ್ಲ. ಭಕ್ತರ ಜೊತೆ ಶ್ರೀಗಳು ಮಾತನಾಡಿದ್ದಾರೆ ಎಂದು ಡಾ. ಎಸ್.ಬಿ. ಪಾಟೀಲ್, ಡಾ.ಮಲ್ಲನ್ಣ ಮೂಲಿಮನಿ ಸ್ಪಷ್ಟನೆ ನೀಡಿದರು. ಇದನ್ನೂ ಓದಿ: ಸಿದ್ದೇಶ್ವರ ಸ್ವಾಮೀಜಿ ನನ್ನನ್ನು ಗುರುತು ಹಿಡಿದರು : ಬೊಮ್ಮಾಯಿ

    ಸಿದ್ದೇಶ್ವರ ಸ್ವಾಮೀಜಿ ಆರೋಗ್ಯ ಚೇತರಿಕೆ ಕಾಣುತ್ತಿದ್ದು, ಜ್ಞಾನಯೋಗಾಶ್ರಮಕ್ಕೆ ನಾಯಕರ ದಂಡೇ ಹರಿದುಬರುತ್ತಿದೆ. ಕಾಂಗ್ರೆಸ್ ನಾಯಕರ ಎಂ.ಬಿ ಪಾಟೀಲ್, ಎಂ.ಎಲ್.ಸಿ ಪ್ರಕಾಶ್ ಹುಕ್ಕೇರಿ, ಎಂ.ಬಿ ಪಾಟೀಲ್ ಜೊತೆ ಶ್ರೀಗಳು ಮೆದು ಧ್ವನಿಯಲ್ಲಿ ಮಾತನಾಡಿದರು. ಮಾಜಿ ಸಿಎಂ ಸಿದ್ದರಾಮಯ್ಯ ಕೂಡ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ.

    ಸಿದ್ದೇಶ್ವರ ಶ್ರೀಗಳು ಆರಾಮಾಗಿದ್ದಾರೆ. ಯಾವುದೇ ಆತಂಕ ಪಡುವುದು ಬೇಡ. ಭಕ್ತರು ವದಂತಿಗೆ ಕಿವಿಗೊಡಬೇಡಿ ಎಂದು ಸಿದ್ದೇಶ್ವರ ಶ್ರೀ ಭೇಟಿ ಬಳಿಕ ಸುತ್ತೂರು ಶ್ರೀ (Suttur Sri) ಗಳು ಸ್ಪಷ್ಟನೆ ನೀಡಿದ್ದಾರೆ. ಇತ್ತ ಸಿದ್ದೇಶ್ವರ ಶ್ರೀಗಳ ಆರೋಗ್ಯಕ್ಕಾಗಿ ವಿದ್ಯಾರ್ಥಿಗಳು ತಿಕೋಟ ತಾಲೂಕಿನ ಬಿಜ್ಜರಗಿ ಗ್ರಾಮದ ಮಾಣಿಕೇಶ್ವರ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.

    ಜ್ಞಾನಯೋಗಾಶ್ರಮದ ಎದುರು ಸಿದ್ದೇಶ್ವರ ಸ್ವಾಮೀಜಿ ಬೇಗ ಗುಣಮುಖರಾಗಲಿ ಎಂದು ಭಕ್ತಗಣ ಹಾಗೂ ಶ್ರೀಗಳು ಸಿದ್ದೇಶ್ವರ ಸ್ವಾಮೀಜಿಯವರ ಗುರುಗಳಾಗಿದ್ದ ಮಲ್ಲಿಕಾರ್ಜುನ ಸ್ವಾಮೀಜಿ ಅವ್ರ ಗದ್ದುಗೆಗೆ ವಿಷೇಶ ಪೂಜೆ ಸಲ್ಲಿಸಿದ್ರು. ಹೂ, ಹಾರ, ಕಾಯಿ ಮೂಲಕ ವಿಶೇಷ ಪ್ರಾರ್ಥನೆ ಸಲ್ಲಿಸಿ, ಮಂಗಳಾರತಿ ಮಾಡಿ, ಆದ್ಯಾತ್ಮದ ದೇವರು ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ರು.

    Live Tv
    [brid partner=56869869 player=32851 video=960834 autoplay=true]

  • ನಡೆದಾಡುವ ದೇವರು ಸಿದ್ದೇಶ್ವರ ಶ್ರೀಗಳ ಆರೋಗ್ಯ ಸ್ಥಿರ- ಭಕ್ತರಿಗೆ ದರ್ಶನ

    ನಡೆದಾಡುವ ದೇವರು ಸಿದ್ದೇಶ್ವರ ಶ್ರೀಗಳ ಆರೋಗ್ಯ ಸ್ಥಿರ- ಭಕ್ತರಿಗೆ ದರ್ಶನ

    ವಿಜಯಪುರ: ನಡೆದಾಡುವ ದೇವರು ಶ್ರೀ ಸಿದ್ದೇಶ್ವರ ಶ್ರೀ (Siddeshwara Sri) ಗಳು ಆರೋಗ್ಯ ಸ್ಥಿರವಾಗಿದೆ. ಶ್ರೀಗಳು ಆರೋಗ್ಯ ಚೇತರಿಕೆ ಆಗುತ್ತಿದೆ. ಶ್ರೀಗಳ ಭೇಟಿಗಾಗಿ ಗಣ್ಯಾತೀಗಣ್ಯರು, ಜನಪ್ರತಿನಿಧಿಗಳು ಸೇರಿದಂತೆ ಮಠಾಧೀಶರು ತಂಡೋಪ ತಂಡವಾಗಿ ಬರುತ್ತಿದ್ದಾರೆ. ಇನ್ನು ಭಕ್ತಸಾಗರವೂ ಸಹಸ್ರಾರೂ ಸಂಖ್ಯೆಯಲ್ಲಿ ಹರಿದುಬರುತ್ತಿದೆ.

    ವಿಜಯಪುರ (Vijayapura) ದ ಜ್ಞಾನ ಯೋಗಾಶ್ರಮದ ನಡೆದಾಡುವ ದೇವರು ಶ್ರೀ ಸಿದ್ದೇಶ್ವರ ಶ್ರೀಗಳು ಆರೋಗ್ಯ ಸ್ಥಿರವಾಗಿದೆ. ಶ್ರೀಗಳು ಆರೋಗ್ಯ ಚೇತರಿಕೆ ಆಗುತ್ತಿದೆ. ಪಲ್ಸ್, ಬಿಪಿ ಸರಿಯಾಗಿದೆ. ಯಾವುದೇ ಆತಂಕ ಇಲ್ಲ ಅಂತ ವೈದ್ಯರು ತಿಳಿಸಿದ್ದಾರೆ. ಶ್ರೀ ಸಿದ್ದೇಶ್ವರ ಶ್ರೀಗಳಿಗೆ ವೈದ್ಯರಿಂದ ಚಿಕಿತ್ಸೆ ಮುಂದುವರಿದಿದೆ.

    ಶ್ರೀಗಳ ದರ್ಶನಕ್ಕೆ ಭಕ್ತಸಾಗರವೇ ಹರಿದುಬರುತ್ತಿದೆ. ಸ್ವಾಮೀಜಿ ದರ್ಶನಕ್ಕಾಗಿ ಭಕ್ತಗಣ ಕಾಯ್ದುಕುಳಿತಿದ್ರು. ಜ್ಞಾನಯೋಗಿ ಆಶ್ರಮದ ಆವರಣದಲ್ಲಿ ಭಕ್ತರ ಸಾಗರವೇ ಸೇರಿತ್ತು. ದೇವರ ದರ್ಶನ ಆಗಬೇಕು, ಮತ್ತೆ ಅವರು ಪ್ರವಚನ ಹೇಳಬೇಕು ಅಂತ ಭಕ್ತರು ಕಣ್ಣೀರಿಟ್ಟರು.

    ಹೀಗಾಗಿ ಜ್ಞಾನಯೋಗಾಶ್ರಮ ಆವರಣದಲ್ಲಿ ಎಲ್‍ಇಡಿ (LED) ಮೂಲಕ ಶ್ರೀಗಳ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಭಕ್ತರಿಗೆ ಸಿದ್ದೇಶ್ವರ ಶ್ರೀಗಳು ದರ್ಶನ ನೀಡಿದ್ರು. ಶ್ರೀಗಳ ದರ್ಶನವಾಗುತ್ತಿದ್ದಂತೆ ಭಾವುಕರಾದ ಭಕ್ತರು ಸಾಷ್ಟಾಂಗ ನಮಸ್ಕಾರ ಹಾಕಿ ನಮನ ಸಲ್ಲಿಸಿದರು. ಸಿದ್ದೇಶ್ವರ ಸ್ವಾಮೀಜಿಗೆ ಜೈಕಾರ ಕೂಗಿದ್ರು.

    ಆದಿಚುಂಚನ ಶ್ರೀಗಳು, ವಚನಾನಂದ ಶ್ರೀಗಳು ಸೇರಿದಂತೆ ನಾನಾ ಮಠಾಧೀಶರು ಜ್ಞಾನಯೋಗಾಶ್ರಮಕ್ಕೆ ಭೇಟಿ ನೀಡಿದ್ರು. ಸಿದ್ದೇಶ್ವರ ಶ್ರೀಗಳನ್ನ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಇದನ್ನೂ ಓದಿ: ಕಾರಿನಲ್ಲಿ ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ- ಡೆತ್‌ನೋಟ್‌ನಲ್ಲಿ ಪ್ರಭಾವಿ ರಾಜಕಾರಣಿ ಹೆಸರು ಉಲ್ಲೇಖ

    ಶಾಸಕ ಬಸನಗೌಡ ಪಾಟೀಲ ಯತ್ನಾಳ್, ವಿಜಯೇಂದ್ರ ಸೇರಿದಂತೆ ಜಿಲ್ಲೆಯ ಹಲವು ಶಾಸಕರು, ಮಾಜಿ ಶಾಸಕರು ಸೇರಿದಂತೆ ಗಣ್ಯರು ತಂಡೋಪ ತಂಡವಾಗಿ ಬಂದು ಶ್ರೀಗಳ ದರ್ಶನ ಪಡೆದರು. ವೈದ್ಯರ ತಂಡದೊಂದಿಗೆ ಸುದೀರ್ಘ ಸಮಾಲೋಚನೆ ನಡೆಸಿದರು. ಸದ್ಯ ಸಿದ್ದೇಶ್ವರ ಶ್ರೀಗಳು ಆರೋಗ್ಯವಾಗಿದ್ದಾರೆ ಅಂತ ವೈದ್ಯರು ಹೇಳಿದ್ದಾರೆ. ಆದ್ರೆ ಭಕ್ತರು ಮಾತ್ರ ಮಠದ ಹೊರಗಡೆನೇ ಶ್ರೀಗಳ ದರ್ಶನಕ್ಕೆ ಕಾದು ಕುಳಿತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಗಡಿ ಕನ್ನಡಿಗರಿಗೆ ಶಿಂಧೆ ಸರ್ಕಾರ ಬೆದರಿಕೆ- 11 ತಾಲೂಕಿನ ಗ್ರಾ.ಪಂಚಾಯ್ತಿ ವಿಸರ್ಜನೆ ಎಚ್ಚರಿಕೆ

    ಗಡಿ ಕನ್ನಡಿಗರಿಗೆ ಶಿಂಧೆ ಸರ್ಕಾರ ಬೆದರಿಕೆ- 11 ತಾಲೂಕಿನ ಗ್ರಾ.ಪಂಚಾಯ್ತಿ ವಿಸರ್ಜನೆ ಎಚ್ಚರಿಕೆ

    ವಿಜಯಪುರ: ಮಹರಾಷ್ಟ್ರ (Maharastra) ದ ಸೋಲಾಪುರ ಜಿಲ್ಲೆಯ ಅಕ್ಕಲಕೋಟ ತಾಲೂಕಿನ ಕನ್ನಡಿಗರಿಗೆ ಮಹಾ ಸರ್ಕಾರ ಬೆದರಿಕೆ ಹಾಕಿದೆ. ಕರ್ನಾಟಕ ಸೇರಲು ನಿರ್ಧಾರ ಮಾಡಿರೋ ಕನ್ನಡಿಗರಿಗೆ ಮಹಾ ಸರ್ಕಾರ ಬೆದರಿಕೆ ಹಾಕಿದೆ.

    ಕರ್ನಾಟಕ ಸೇರೋ ನಿರ್ಧಾರ ಮಾಡಿರೋ ಗ್ರಾಮಗಳ ಗ್ರಾಮ ಪಂಚಾಯ್ತಿ ವಿಸರ್ಜನೆ ಮಾಡೋದಾಗಿ ಮಹಾಸರ್ಕಾರ ಬೆದರಿಕೆ ಹಾಕಿದೆ. ಅಕ್ಕಲಕೋಟ ತಾಲೂಕಿನ 11 ಗ್ರಾಮ ಪಂಚಾಯತಿಗಳನ್ನು ವಿಸರ್ಜನೆ ಮಾಡಲು ಮಹಾ ಸರ್ಕಾರ ಮುಂದಾಗಿದೆ. ಈ ಮೂಲಕ ಉದ್ಧಟತನ ಮೆರೆಯುತ್ತಿರೋ ಮಹಾರಾಷ್ಟ್ರ (Maharastra) ಸರ್ಕಾರಕ್ಕೆ ಸೆಡ್ಡು ಹೊಡೆಯಲು ಮಹಾ ಕನ್ನಡಿಗರು ರೆಡಿ ಆಗಿದ್ದಾರೆ.

    ಕರ್ನಾಟಕಕ್ಕೆ ಸೇರಲು ಠರಾವು ಪಾಸ್ ಮಾಡಿರುವ ಗಾ.್ರಪಂ ವಿಸರ್ಜನೆ ಹಾಗೂ ಗ್ರಾಮ ಅಧಿಕಾರಗಳನ್ನು ಸೇವೆಯಿಂದ ತೆಗೆದು ಹಾಕೋ ಬೆದರಿಕೆ ಹಾಕಲಾಗಿದೆ. ಗಲ್ಲು ಶಿಕ್ಷೆ ನೀಡಿದರೂ ನಾವು ಯಾವುದಕ್ಕೂ ಹೆದರಲ್ಲಾ ಗಡಿನಾಡ ಕನ್ನಡಿಗರು ಸೆಡ್ಡು ಹೊಡೆದಿದ್ದಾರೆ. 2002 ರಲ್ಲಿ ಬೆಳಗಾವಿ (Belagavi) ಜಿಲ್ಲೆಯ ಅಥಣಿ ತಾಲೂಕಿನ 22 ಗ್ರಾಮಗಳ ಜನರು ಮಹಾರಾಷ್ಟ್ರಕ್ಕೆ ಸೇರಲು ನಿರ್ಧಾರ ಮಾಡಿದ್ದರು. ಅಗತ್ಯ ಮೂಲಭೂತ ಸೌಕರ್ಯ ನೀಡಿ ಇಲ್ಲವೇ ಮಹಾರಾಷ್ಟ್ರಕ್ಕೆ ಸೇರುತ್ತೇವೆಂದು ತೀರ್ಮಾಣ ಮಾಡಿದ್ದರು. ಇದನ್ನೂ ಓದಿ: ಬೆಳಗಾವಿ – ಮಹಾರಾಷ್ಟ್ರ ಮಧ್ಯೆ ಬಸ್ ಸಂಚಾರ ಪುನರಾರಂಭ

    ಆಗಿನ ಕರ್ನಾಟಕ ಸಿಎಂ ಆಗಿದ್ದ ಎಸ್.ಎಂ ಕೃಷ್ಣ (S.M Krishna) 204 ಕೋಟಿ ರೂಪಾಯಿ ಆ ಭಾಗಕ್ಕೆ ಅನುದಾನ ನೀಡಿದ್ದರು. ಆ ಮಾದರಿಯಲ್ಲೇ ಮಹಾರಾಷ್ಟ್ರ ಸರ್ಕಾರ ನಮಗೆ ಅನುದಾನ ನೀಡಿ ಎಲ್ಲಾ ಸೌಕರ್ಯ ನೀಡಲಿ ಎಂದು ಅಕ್ಕಲಕೋಟ ಜನರು ಒತ್ತಾಯಿಸಿದ್ದಾರೆ. ಅನುದಾನ ಹಾಗೂ ಇತರೆ ಸೌಕರ್ಯ ನೀಡಿ ಇಲ್ಲವೇ ಕರ್ನಾಟಕಕ್ಕೆ ಸೇರಲು ಅನುಮತಿ ನೀಡಿ ಎಂದು ಜಮರು ಒತ್ತಾಯ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • IAS ಆಕಾಂಕ್ಷಿ ಅಂತಾ ಬಿಲ್ಡಪ್‌; ಬೆತ್ತಲೆ ವೀಡಿಯೋ ಇಟ್ಕೊಂಡು ಯುವಕನಿಗೆ 40 ಲಕ್ಷ ಪಂಗನಾಮ – ಖತರ್ನಾಕ್‌ ಲೇಡಿ ಅರೆಸ್ಟ್‌

    IAS ಆಕಾಂಕ್ಷಿ ಅಂತಾ ಬಿಲ್ಡಪ್‌; ಬೆತ್ತಲೆ ವೀಡಿಯೋ ಇಟ್ಕೊಂಡು ಯುವಕನಿಗೆ 40 ಲಕ್ಷ ಪಂಗನಾಮ – ಖತರ್ನಾಕ್‌ ಲೇಡಿ ಅರೆಸ್ಟ್‌

    ವಿಜಯಪುರ: ಐಎಎಸ್‌ ಆಕಾಂಕ್ಷಿ ಎಂದು ಹೇಳಿಕೊಂಡು ಫೇಸ್‌ಬುಕ್‌ನಲ್ಲಿ ಯುವಕನನ್ನು ಪರಿಚಯ ಮಾಡಿಕೊಂಡು, ಆತನಿಂದ ಬೆತ್ತಲೆ ವೀಡಿಯೋ ಬಳಸಿಕೊಂಡು ಬ್ಲ್ಯಾಕ್‌ಮೇಲ್‌ ಮಾಡಿ 40 ಲಕ್ಷ ರೂ. ಪಡೆದು ವಂಚಿಸಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ.

    ವಿಜಯಪುರ (Vijayapura) ಜಿಲ್ಲೆಯ ಸಿಂದಗಿ ತಾಲೂಕಿನ ಬಗಲೂರು ಗ್ರಾಮ ಪರಮೇಶ್ವರ್ ಹಿಪ್ಪರಗಿ ಎಂಬ ಯುವಕನಿಗೆ ಫೇಸ್‌ಬುಕ್‌ನಲ್ಲಿ ಪರಿಚಯವಾಗಿದ್ದ ಮಹಿಳೆಯೊಬ್ಬಳು 40 ಲಕ್ಷ ಪಡೆದು ವಂಚಿಸಿದ್ದಳು. ಈ ಸಂಬಂಧ ʼಪಬ್ಲಿಕ್‌ ಟಿವಿʼಯಲ್ಲಿ ಸರಣಿ ವರದಿಗಳು ಬಿತ್ತರವಾದ ನಂತರ ಎಚ್ಚೆತ್ತ ವಿಜಯಪುರ ಸಿಇಎನ್‌ ಪೊಲೀಸರು ಪ್ರಕರಣ ಭೇದಿಸಿ ಮಹಿಳೆಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದನ್ನೂ ಓದಿ: ಮೈಸೂರಿನಲ್ಲಿ ಚಿರತೆ ದಾಳಿಗೆ ಎರಡನೇ ಬಲಿ – ಕಂಡಲ್ಲಿ ಗುಂಡು ಹಾರಿಸಲು ಅರಣ್ಯ ಇಲಾಖೆ ಸೂಚನೆ

    ಹಾಸನ ಮೂಲದ ಮಂಜುಳಾ ಎಂಬಾಕೆ ಫೇಸ್‌ಬುಕ್‌ ಫ್ರೆಂಡ್‌ ಆಗಿ ಯುವಕನನ್ನು ವಂಚಿಸಿದ್ದಳು. ಇದಕ್ಕೆ ಆಕೆಯ ಪತಿಯೇ ಸಾಥ್‌ ನೀಡಿದ್ದ ಎಂಬುದು ಪೊಲೀಸರ ವಿಚಾರಣೆ ವೇಳೆ ತಿಳಿದುಬಂದಿದೆ. ಪತಿ ಸ್ವಾಮಿ ಹಾಗೂ ತಾನು ಸೇರಿಯೇ ಈ ಯುವಕನ ಬೆತ್ತಲೆ ವೀಡಿಯೋ ಇಟ್ಟುಕೊಂಡು ವಂಚನೆ ಮಾಡಿದ್ದೇವೆ ಎಂದು ಮಹಿಳೆ ತಪ್ಪೊಪ್ಪಿಕೊಂಡಿದ್ದಾಳೆ.

    ಸಂತ್ರಸ್ತ ಯುವಕನಿಗೆ ಬೆತ್ತಲೆ ಸ್ನಾನ ಮಾಡುವಂತೆ ಒತ್ತಾಯಿಸಿ ವೀಡಿಯೋ ಮಾಡಿಕೊಂಡಿದ್ದ ವಂಚಕರು ಬಳಿಕ ಹಣಕ್ಕಾಗಿ ಡಿಮ್ಯಾಂಡ್ ಮಾಡಿದ್ದಾರೆ. ವಂಚಿಸಿ 40 ಲಕ್ಷ ಹಣ ತನ್ನ ಫೆಡರಲ್ ಬ್ಯಾಂಕ್ ಅಕೌಂಟ್‌ಗೆ ಹಾಕಿಸಿಕೊಂಡಿದ್ದಳು. ಆ ಹಣದಲ್ಲಿ 100 ಗ್ರಾಂ ಬಂಗಾರ, ಹುಂಡೈ ಕಾರ್, ಬೈಕ್ ಖರೀದಿ ಮಾಡಿದ್ದಳು. ಜೊತೆಗೆ ಊರಲ್ಲಿ ಮನೆ ನಿರ್ಮಾಣ ಮಾಡುತ್ತಿದ್ದಳು. ಮಂಜುಳಾ ಹಾಗೂ ಪತಿ ಸ್ವಾಮಿ ಬಂಧನದ ಬಳಿಕ ಅಸಲಿ ಪ್ರಕರಣ ಬಯಲಾಗಿದೆ. ಈ ಸಂಬಂಧ ವಿಜಯಪುರ ಸಿಇಎನ್ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಪಾರಿವಾಳ ಹಿಡಿಯಲು ಹೋಗಿ ಮಕ್ಕಳಿಬ್ಬರಿಗೆ ಕರೆಂಟ್ ಶಾಕ್ – ಸ್ಥಿತಿ ಚಿಂತಾಜನಕ

    Live Tv
    [brid partner=56869869 player=32851 video=960834 autoplay=true]

  • ಸಿಂದಗಿಯಲ್ಲಿ ಹಾಡಹಗಲೇ ಮಹಿಳೆಯ ಬರ್ಬರ ಹತ್ಯೆ

    ಸಿಂದಗಿಯಲ್ಲಿ ಹಾಡಹಗಲೇ ಮಹಿಳೆಯ ಬರ್ಬರ ಹತ್ಯೆ

    ವಿಜಯಪುರ: ಹಾಡಹಗಲೇ ಮಹಿಳೆಯ ಬರ್ಬರ ಹತ್ಯೆ ನಡೆದ ಘಟನೆ ನಡೆದಿದೆ. ಬರ್ಬರವಾಗಿ ನಡು ರಸ್ತೆಯಲ್ಲಿ ಹತ್ಯೆಗೈದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

    ವಿಜಯಪುರ (Vijayapura) ಜಿಲ್ಲೆಯ ಸಿಂದಗಿ ಪಟ್ಟಣದ ಹುಡ್ಕೊ ಕಾಲೋನಿಯಲ್ಲಿ ಘಟನೆ ನಡೆದಿದೆ. 54 ವರ್ಷದ ಶಾಂತಾಬಾಯಿ ತಳವಾರ ಮೃತಪಟ್ಟಿರುವ ದುರ್ದೈವಿಯಾಗಿದ್ದಾಳೆ. ಇದನ್ನೂ ಓದಿ; ಇಟಲಿಯ ಇಶಿಯಾ ದ್ವೀಪದಲ್ಲಿ ಭೂಕುಸಿತ – 3 ವಾರದ ಶಿಶು ಸೇರಿ 7 ಸಾವು

    ದುಷ್ಕರ್ಮಿಗಳು ಹರಿತವಾದ ಆಯುಧದಿಂದ ತಲೆಗೆ ಹೊಡೆದ ಹತ್ಯೆಗೈದು ಪರಾರಿಯಾಗಿದ್ದಾರೆ. ಸ್ಥಳದಲ್ಲಿ ಅನುಮಾಸ್ಪದ ರೀತಿಯಲ್ಲಿ ಬೈಕ್ ಪತ್ತೆಯಾಗಿದೆ. ಸ್ಥಳಕ್ಕೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    ಸಿಂದಗಿ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ.

    Live Tv
    [brid partner=56869869 player=32851 video=960834 autoplay=true]