ಅಲ್ಲದೇ ಕೆಲವರು ಚಿಕಿತ್ಸೆಗಾಗಿ ವಿಜಯಪುರ, ಬಸವನ ಬಾಗೇವಾಡಿ, ಬಾಗಲಕೋಟೆ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ಜೊತೆಗೆ ತೀವ್ರವಾಗಿ ಅಸ್ವಸ್ಥಗೊಂಡಿದ್ದ ಓರ್ವನನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ರವಾನೆ ಮಾಡಿಲಾಗಿದೆ.
ವಿಜಯಪುರ: ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯನ್ನು ರಾಜಕೀಕರಣಗೊಳಿಸಬೇಡಿ ಎಂದು ಸತೀಶ್ ಜಾರಕಿಹೊಳಿ (Satish Jarkiholi) ಹೇಳಿದರು.
ವಿಜಯಪುರದಲ್ಲಿ (Vijayapura) ಮಾತನಾಡಿದ ಅವರು, ಎಸ್ಐಟಿ (SIT) ರಚನೆಯಾಗಿದೆ, ಪೊಲೀಸರು ಕೆಲಸ ಮಾಡ್ತಿದ್ದಾರೆ, ಮಾಡಲು ಬಿಡಿ. ಪ್ರಕರಣದ ತನಿಖೆಯನ್ನ ರಾಜಕೀಕರಣಗೊಳಿಸಬೇಡಿ. ಅಡ್ವಾನ್ಸ್ ಜಡ್ಜ್ಮೆಂಟ್ ಬರೆಯುವ ಅವಶ್ಯಕತೆ ಇಲ್ಲ. ತನಿಖೆ ಮಾಡಲಿ, ಏನು ಸತ್ಯಾಂಶವಿದೆ, ಅದು ಹೊರಗೆ ಬರುತ್ತದೆ ಎಂದರು. ಇನ್ನೂ ಈ ಕುರಿತು ಬಿಜೆಪಿಯವರು ಏನಾದರೂ ಹಬ್ಬಿಸೋದು ಕಾಮನ್. ಚುನಾವಣೆ ಸಮಯದಲ್ಲಿಯೂ 6 ತಿಂಗಳು ಇರುವಾಗ ಶುರು ಮಾಡುತ್ತಾರೆ. ಆದರೆ ಈಗ ಮೂರು ವರ್ಷ ಮುಂಚೆಯೇ ಶುರು ಮಾಡಿದ್ದಾರೆ. ಇದೇನು ಹೊಸದಲ್ಲ, ಹಿಂದೆ ಕರಾವಳಿಯಲ್ಲಿ ಹಿಂದೂಗಳ ಹತ್ಯೆ ಎಂದಿದ್ದರು. ಸಿಬಿಐ, ಎಸ್ಐಟಿ ರಚನೆ ಮಾಡಿದ್ದರು. ಅದಕ್ಕೂ ಇದಕ್ಕೂ ಸಂಬಂಧ ಇಲ್ಲ ಎಂದರು.ಇದನ್ನೂ ಓದಿ: ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ – ಆಗಸ್ಟ್ನಲ್ಲಿ ಯೆಲ್ಲೋ ಲೈನ್ ಉದ್ಘಾಟನೆ ಸಾಧ್ಯತೆ
ಇದೇ ವೇಳೆ ಬಿಜೆಪಿ ಶಾಸಕರಿಗೆ ಕಡಿಮೆ ಅನುದಾನ ವಿಚಾರವಾಗಿ ಮಾತನಾಡಿ, ಕಾಂಗ್ರೆಸ್ ಶಾಸಕರಿಗೆ 50 ಕೋಟಿ ರೂ. ಕೊಟ್ಟಿದ್ದಾರೆ. ಬಿಜೆಪಿ, ಜೆಡಿಎಸ್ ಶಾಸಕರಿಗೆ 25 ಕೋಟಿ ರೂ. ಕೊಟ್ಟಿದ್ದೇವೆ. ಬಿಜೆಪಿಯವರು ನಮಗೆ ಕೇವಲ 5 ಕೋಟಿ ರೂ. ಕೊಟ್ಟಿದ್ದರು. ನಾವು ಅವರಿಗಿಂತ ಹೆಚ್ಚಿಗೆ ಕೊಟ್ಟಿದ್ದೇವೆ ಎಂದು ಟಾಂಗ್ ಕೊಟ್ಟರು.
ಕೆಪಿಸಿಸಿ ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರವಾಗಿ ಮಾತನಾಡಿ, ಅದು ನಮ್ಮ ಹಂತದಲ್ಲಿ ಇಲ್ಲ. ಹೈಕಮಾಂಡ್ ನಿರ್ಧಾರ ಮಾಡುತ್ತದೆ. ಸಮಯ ಬಂದಾಗ ಅಧ್ಯಕ್ಷ ಸ್ಥಾನ ಬದಲಾವಣೆ ಮಾಡುತ್ತಾರೆ. ಸೂಕ್ತ ಸಮಯದಲ್ಲಿ ವರಿಷ್ಠರು ನಿರ್ಧಾರ ಮಾಡುತ್ತಾರೆ. ಇದನ್ನು ನಾವು ಹೇಳೋಕೆ ಆಗಲ್ಲ. ಕಾದು ನೋಡೋಣ ಎಂದರು.
ಕಾಂಗ್ರೆಸ್ನಲ್ಲಿ ಸಿಎಂ ಬದಲಾವಣೆ ಬಿರುಗಾಳಿ ವಿಚಾರವಾಗಿ ಮಾತನಾಡಿ, ಏನೇ ಇದ್ದರೂ ಹೈಕಮಾಂಡ್ ನಿರ್ಧಾರ ಮಾಡಬೇಕು. ಸಿಎಂ ಈಗಾಗಲೇ ನಾನೇ 5 ವರ್ಷ ಇರ್ತಿನಿ ಎಂದಿದ್ದಾರೆ. ಜಾಗ ಖಾಲಿ ಇಲ್ಲ ಎಂದು ಸ್ವತಃ ಡಿಸಿಎಂ ಹೇಳಿದ್ದಾರೆ. ಅವರೇ ಹೊಂದಾಣಿಕೆ ಆಗಿದ್ದಾರೆ, ನಾವೇನು ಹೇಳಬೇಕು ಎಂದು ತಿಳಿಸಿದರು.ಇದನ್ನೂ ಓದಿ: ದೆಹಲಿಯಲ್ಲಿ ಲ್ಯಾಂಡಿಂಗ್ ವೇಳೆ ಏರ್ ಇಂಡಿಯಾ ವಿಮಾನದಲ್ಲಿ ಬೆಂಕಿ – ಪ್ರಯಾಣಿಕರು ಸೇಫ್
ಕುಮಾರ್ಗೌಡನ ಬಳಿ ವ್ಯಕ್ತಿಯೋರ್ವ 20 ಸಾವಿರ ರೂ. ಸಾಲ ಪಡೆದಿದ್ದ. ಇದೀಗ ಸಾಲದ ಹಣವನ್ನು ವಾಪಸ್ ಕೊಡದಿದ್ದಕ್ಕೆ ಆತನ ಕಾಲಿಗೆ ಸರಪಳಿ ಹಾಕಿ ಕಂಬಕ್ಕೆ ಕಟ್ಟಿ ಹಾಕಿದ್ದಾನೆ. ಕುಮಾರ್ ಗೌಡನ ಈ ಕೃತ್ಯಕ್ಕೆ ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ. ಈ ಸಂಬಂಧ ಚಡಚಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇದನ್ನೂ ಓದಿ: ಭಾರತೀಯ ವಿಮಾನಗಳಿಗೆ ವಾಯು ಮಾರ್ಗ ಬಂದ್ – ಆ.24ರವರೆಗೆ ವಿಸ್ತರಿಸಿದ ಪಾಕ್
ಈ ಕುರಿತು ಎಸ್ಪಿ ಲಕ್ಷ್ಮಣ ನಿಂಬರಗಿ ಮಾತನಾಡಿ, ಹತ್ಯೆಯ ಬಳಿಕ ಪರಾರಿಯಾಗಿದ್ದ ಆರೋಪಿಗಳ ಪೈಕಿ ಅಪ್ರಾಪ್ತ ಸೇರಿ ಇಬ್ಬರನ್ನು ಇತ್ತೀಚಿಗೆ ಬಂಧಿಸಲಾಗಿತ್ತು. ಇದೀಗ ಇನ್ನುಳಿದಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಜೊತೆಗೆ ಬಂಧಿತರಿಂದ ಒಂದು ಕಂಟ್ರಿ ಮೇಡ್ ಪಿಸ್ತೂಲ್, ನಾಲ್ಕು ಜೀವಂತ ಗುಂಡುಗಳು, ಮೂರು ಬೈಕ್ಗಳನ್ನು ವಶಕ್ಕೆ ಪಡೆಯಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಏನಿದು ಘಟನೆ?
ಜು.14ರಂದು ವಿಜಯಪುರ ನಗರದ ಎಸ್ಎಸ್ ಕಾಂಪ್ಲೆಕ್ಸ್ನಲ್ಲಿ ಭೀಮಾತೀರದ ಹಂತಕ ಬಾಗಪ್ಪ ಹರಿಜನ ಶಿಷ್ಯ ಸುಶೀಲ್ ಕಾಳೆಯನ್ನು ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಹತ್ಯೆಯ ದೃಶ್ಯಗಳು ಸ್ಥಳದಲ್ಲೇ ಇದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ದೃಶ್ಯದಲ್ಲಿ ಸುಶೀಲ್ ಕಾಳೆಯನ್ನು ದುಷ್ಕರ್ಮಿಗಳು ಅಟ್ಟಾಡಿಸಿಕೊಂಡು, ಎಲ್ಲಿಗೂ ತಪ್ಪಿಸಿಕೊಂಡು ಹೋಗದಂತೆ ಬಿಡದೇ ಕೊನೆಗೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದರು. ಎಳನೀರು ಕೊಚ್ಚುವ ಮಚ್ಚಿನಿಂದ ಬೆನ್ನು, ತಲೆ, ಕುತ್ತಿಗೆ ಸೇರಿ ಹಲವೆಡೆ ಕೊಚ್ಚಿದ್ದರು. ಕೊನೆಗೆ ಮಚ್ಚನ್ನು ಸುಶೀಲ್ ಕಾಳೆ ದೇಹದ ಮೇಲೆ ಬಿಟ್ಟು ಪರಾರಿಯಾಗಿದ್ದರು.ಇದನ್ನೂ ಓದಿ: India’s Cleanest City: ದೇಶದ ‘ಸ್ವಚ್ಛ ನಗರ’ ಪಟ್ಟಿಯಲ್ಲಿ ಇಂದೋರ್ ನಂ.1 – ಮೈಸೂರಿಗೆ 3ನೇ ಸ್ಥಾನ
ಸಿದ್ದಾರ್ಥ್, ಇಡೀ ದಿನ ತಂದೆಯ ಜೊತೆ ಬಡಿಗತನ ಕೆಲಸಕ್ಕೆ ಸಹಾಯ ಮಾಡಿದ್ದ ಎನ್ನಲಾಗಿದೆ. ಕೆಲಸದಿಂದ ದಣಿದಿದ್ದ ಸಿದ್ದಾರ್ಥ್, ಮಧ್ಯಾಹ್ನ ವಿಶ್ರಾಂತಿಗಾಗಿ ಮಲಗಿದ್ದಾಗ ಹೃದಯಾಘಾತ ಸಂಭವಿಸಿದೆ.
ವಿಜಯಪುರ: ಬಿ.ಸರೋಜಾದೇವಿ ಅವರ ಸಾವಿನಿಂದ ಇಂದು ಕಲಾಜಗತ್ತು ಬಡವಾಗಿದೆ. ಅವರ ಆತ್ಮಕ್ಕೆ ಶಾಂತಿಸಿಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಸಂತಾಪ ಸೂಚಿಸಿದರು.
ಜಿಲ್ಲೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕನ್ನಡ ನಾಡು ಕಂಡಂತಹ ಪ್ರತಿಭಾವಂತೆ. ಅವರು ಕನ್ನಡ, ತೆಲುಗು, ತಮಿಳು ಹಾಗೂ ಹಿಂದಿ ಭಾಷೆಗಳಲ್ಲಿ ನಟಿಸಿದ್ದಾರೆ. ಅವರು ಒಬ್ಬ ಅಪ್ರತಿಮ ಕಲಾವಿದೆ. ಬಿ.ಸರೋಜಾದೇವಿ ಅವರ ಸಾವಿನಿಂದ ಇಂದು ಕಲಾಜಗತ್ತು ಬಡವಾಗಿದೆ. ಅವರ ಆತ್ಮಕ್ಕೆ ಶಾಂತಿಸಿಗಲಿ ಹಾಗೂ ಕುಟುಂಬ ವರ್ಗದವರಿಗೆ ಅವರ ಸಾವನ್ನು ಸಹಿಸಿಕೊಳ್ಳುವ ಶಕ್ತಿ ನೀಡಲಿ ಎಂದರು.ಇದನ್ನೂ ಓದಿ: ಪುದುಚೆರಿಯಲ್ಲಿ ಖ್ಯಾತ ಮಾಡೆಲ್ ಸ್ಯಾನ್ ರೆಚಲ್ ಆತ್ಮಹತ್ಯೆ
ಇದೇ ವೇಳೆ ಶಕ್ತಿ ಯೋಜನೆಯ ಬಗ್ಗೆ ಮಾತನಾಡಿ, 5 ಗ್ಯಾರಂಟಿ ಯೋಜನೆಗಳನ್ನು 2023ರ ವಿಧಾನಸಭಾ ಚುನಾವಣೆಯಲ್ಲಿ ಘೋಷಣೆ ಮಾಡಿದ್ದೆವು. ನಾವು ಕ್ಯಾಬಿನೆಟ್ ಸಭೆ ಮಾಡಿ ಕೂಡಲೇ ಅವುಗಳನ್ನು ಜಾರಿಗೆ ತರುತ್ತೇವೆ ಎಂದು ತೀರ್ಮಾನೆ ಮಾಡಿದ್ದೆವು. ಅದರಂತೆ 2023ರ ಮೇ 20ರಂದು ಅಧಿಕಾರಕ್ಕೆ ಬಂದೆವು. ಬಳಿಕ ಜೂ.11ಕ್ಕೆ ಶಕ್ತಿ ಯೋಜನೆಯನ್ನು ಜಾರಿಗೆ ತಂದೆವು. ಅಂದಿನಿಂದ ಈವರೆಗೂ ರಾಜ್ಯದ ಎಲ್ಲಾ ಹೆಣ್ಣು ಮಕ್ಕಳು ಸರ್ಕಾರಿ ಬಸ್ನಲ್ಲಿ ಉಚಿತವಾಗಿ ಪ್ರಯಾಣಿಸುತ್ತಿದ್ದಾರೆ. ಇಂದು 500 ಕೋಟಿ ಮಹಿಳೆಯರು ಸಂಚರಿಸಿದ್ದಾರೆ. ಇದಕ್ಕೆ ಸಾಂಕೇತಿಕವಾಗಿ ಟಿಕೆಟ್ ಹಂಚಿಕೆ ಮಾಡಿದ್ದೇವೆ ಎಂದು ಹೇಳಿದರು.
ಕನ್ನಡದ ಹಿರಿಯ ನಟಿ ಬಿ.ಸರೋಜಾದೇವಿ ಅವರ ನಿಧನವಾರ್ತೆ ನೋವುಂಟುಮಾಡಿದೆ. ಕನ್ನಡ ಚಿತ್ರರಂಗವು ಸೇರಿದಂತೆ ತಮಿಳು, ತೆಲುಗು ಮತ್ತು ಹಿಂದಿಯ ಸುಮಾರು 200 ಚಿತ್ರಗಳಲ್ಲಿ ನಟಿಸಿ, ಅಭಿನಯ ಸರಸ್ವತಿ ಎಂದೇ ಖ್ಯಾತರಾಗಿದ್ದರು.
ಸರೋಜಾದೇವಿ ಎಂದಾಕ್ಷಣ ಕಿತ್ತೂರು ಚೆನ್ನಮ್ಮ, ಬಬ್ರುವಾಹನ, ಅಣ್ಣತಂಗಿ ಮುಂತಾದ ಚಿತ್ರಗಳಲ್ಲಿನ ಅವರ ಮನೋಜ್ಞ ಅಭಿನಯ… pic.twitter.com/ZOVdrXGqlp
ಸಿಗಂದೂರು ಸೇತುವೆ ವಿಚಾರವಾಗಿ ನಿತಿನ್ ಗಡ್ಕರಿಗೆ ಪತ್ರ ಬರೆದ ಬಗ್ಗೆ ಮಾತನಾಡಿ, ಇಂದು ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಯಾರು ಭಾಗಿಯಾಗಿಲ್ಲ, ನನಗೆ ಆಹ್ವಾನಿಸಿಲ್ಲ, ಹಾಗಾಗಿ ಗಡ್ಕರಿಯವರಿಗೆ ಕರೆ ಮಾಡಿದೆ. ಆಗ ಅವರು ಕಾರ್ಯಕ್ರಮ ಮುಂದಕ್ಕೆ ಹಾಕುವುದಾಗಿ ತಿಳಿಸಿದರು. ಬಳಿಕ ಪತ್ರ ಬರೆದೆ. ಬಿಜೆಪಿ ನಾಯಕರು ಒತ್ತಾಯಿಸಿರಬಹುದು, ನನಗೆ ಏನು ಹೇಳದೇ ಮಾಡಿದ್ದಾರೆ. ಸದ್ಯ ನಾನು ಇಂಡಿ ತಾಲೂಕಿನಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಹೊರಟಿದ್ದೇನೆ. ಸದ್ಯ ಸಿಗಂದೂರು ಕಾರ್ಯಕ್ರಮಕ್ಕೆ ನಾವ್ಯಾರು ಹೋಗುವುದಿಲ್ಲ ಎಂದು ತಿಳಿಸಿದರು.ಇದನ್ನೂ ಓದಿ: ಸರೋಜಾದೇವಿ ಭಾರತೀಯ ಚಿತ್ರರಂಗದ ಇತಿಹಾಸದಲ್ಲಿ ಅತ್ಯಂತ ಯಶಸ್ವಿ ನಟಿಯರಲ್ಲಿ ಒಬ್ಬರು – ಬಿವೈವಿ
ಬೆಂಗಳೂರು/ಶಿವಮೊಗ್ಗ: ದೇಶದ ಎರಡನೇ ಅತಿ ದೊಡ್ಡ ಕೇಬಲ್ ಬ್ರಿಡ್ಜ್ ಸಿಗಂದೂರು ಸೇತುವೆ (Sigandur Bridge) ಉದ್ಘಾಟನಾ ಕಾರ್ಯಕ್ರಮವನ್ನು ಮುಂದೂಡುವಂತೆ ಸಿಎಂ ಸಿದ್ದರಾಮಯ್ಯ (CM Siddaramaiah) ಕೇಂದ್ರ ಸಚಿವ ನಿತಿನ್ ಗಡ್ಕರಿಗೆ (Nitin Gadkari) ಪತ್ರ ಬರೆದಿದ್ದಾರೆ.
ಜುಲೈ 11ರಂದೇ ಸಿಎಂ ಸಿದ್ದರಾಮಯ್ಯ ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರಿಗೆ ಪತ್ರ ಬರೆದು ಕಾರ್ಯಕ್ರಮದ ಆಹ್ವಾನ ಮುಂಚಿತವಾಗಿ ತಿಳಿಸಿಲ್ಲ. ಬೇರೊಂದು ಪೂರ್ವ ನಿಗದಿತ ಕಾರ್ಯಕ್ರಮದಲ್ಲಿ ಭಾಗಿ ಆಗುತ್ತಿರುವ ಕಾರಣ ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ. ಬೇರೊಂದು ದಿನಾಂಕವನ್ನು ನಿಗದಿ ಮಾಡುವಂತೆ ಕೋರಿದ್ದರು.
ಸಾಗರ – ಸಿಗಂದೂರು ನಡುವಿನ ಸೇತುವೆ ಉದ್ಘಾಟನಾ ಸಮಾರಂಭಕ್ಕೆ ನನ್ನನ್ನು ತಡವಾಗಿ ಆಮಂತ್ರಿಸಿದ್ದು, ಬೇರೆಡೆ ಕಾರ್ಯಕ್ರಮಗಳನ್ನು ನಾನು ಹಮ್ಮಿಕೊಂಡಿರುವುದರಿಂದ ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಕಾರ್ಯಕ್ರಮ ಮುಂದೂಡಿ, ಬೇರೊಂದು ದಿನ ಆಯೋಜಿಸಬೇಕು ಎಂದು ಕೇಂದ್ರ ಹೆದ್ದಾರಿ ಮತ್ತು ಭೂಸಾರಿಗೆ ಇಲಾಖೆ… pic.twitter.com/VS5oCRFaLJ
ಸಿಎಂ ಪತ್ರದಲ್ಲಿ ಏನಿದೆ?
ಕೇಂದ್ರ ಹೆದ್ದಾರಿ ಮತ್ತು ಭೂಸಾರಿಗೆ ಇಲಾಖೆ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಶಿವಮೊಗ್ಗ ಜಿಲ್ಲೆ ಸಾಗರದ ನೆಹರೂ ಕ್ರೀಡಾಂಗಣದಲ್ಲಿ ಇಂದು ಸಾಗರ – ಸಿಗಂದೂರು ನಡುವಿನ ಸೇತುವೆ ಉದ್ಘಾಟನಾ ಸಮಾರಂಭವನ್ನು ಏರ್ಪಡಿಸಿದೆ. ಈ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯಲ್ಲಿ ನನ್ನ ಹೆಸರನ್ನು ಸಹಾ ಮುದ್ರಿಸಲಾಗಿದೆ. ಆದರೆ ನನಗೆ ಈ ಬಗ್ಗೆ ಮುಂಚಿತವಾಗಿ ಮಾಹಿತಿ ನೀಡದ ಕಾರಣದಿಂದ ಈಗಾಗಲೇ ನನ್ನ ಅಧ್ಯಕ್ಷತೆಯಲ್ಲಿ ವಿಜಯಪುರ (Vijayapura) ಜಿಲ್ಲೆಯ ಇಂಡಿ ತಾಲ್ಲೂಕಿನಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಹಮ್ಮಿಕೊಳ್ಳಲಾಗಿದೆ.
ಕೇಂದ್ರ ಹೆದ್ದಾರಿ ಮತ್ತು ಭೂಸಾರಿಗೆ ಇಲಾಖೆಯು ಇಂತಹ ರಾಜ್ಯಮಟ್ಟದ ಕಾರ್ಯಕ್ರಮ ಆಯೋಜನೆಗೆ ಮುನ್ನ ರಾಜ್ಯ ಸರ್ಕಾರವನ್ನು ಮುಂಚಿತವಾಗಿಯೇ ಸಂಪರ್ಕಿಸಿದ್ದರೆ ಮತ್ತಷ್ಟು ಸಮರ್ಪಕವಾಗಿರುತ್ತಿತ್ತು. ಮುಂದೆ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸುವ ಸಂದರ್ಭದಲ್ಲಿ ರಾಜ್ಯ ಸರ್ಕಾರವನ್ನು ಸಕಾಲದಲ್ಲಿ ಸಂಪರ್ಕಿಸುವಂತೆ ಹೆದ್ದಾರಿ ಮತ್ತು ಭೂಸಾರಿಗೆ ಇಲಾಖೆಗೆ ಸೂಚನೆ ನೀಡಬೇಕು ಎಂದು ತಮ್ಮಲ್ಲಿ ವಿನಂತಿಸುತ್ತೇನೆ. ಇದನ್ನೂಓದಿ: 60 ವರ್ಷಗಳ ಕನಸು ನನಸು | ಇಂದು ಸಿಗಂದೂರು ಸೇತುವೆ ಲೋಕಾರ್ಪಣೆ – ಬ್ರಿಡ್ಜ್ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ
ಇಂದಿನ ಕಾರ್ಯಕ್ರಮವನ್ನು ಮುಂದೂಡಿ, ನಿಮಗೆ ಅನುಕೂಲವಾಗುವ ಒಂದೆರೆಡು ದಿನಾಂಕಗಳನ್ನು ನನಗೆ ಒದಗಿಸಬೇಕೆಂದು ಕೋರುತ್ತೇನೆ. ಆ ಮೂಲಕ ಇಂಥದ್ದೊಂದು ಮಹತ್ವದ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ನಾನು ಕೂಡ ಭಾಗವಹಿಸಲು ಸಾಧ್ಯವಾಗಲಿದೆ.
ವಿಜಯಪುರ: ಸಿನಿಮೀಯ ರೀತಿಯಲ್ಲಿ ಬ್ಯಾಂಕ್ ದರೋಡೆ ಮಾಡಿ, 10.5 ಕೋಟಿ ರೂ. ಮೌಲ್ಯದ ಚಿನ್ನವನ್ನು ಕಳ್ಳತನ ಮಾಡಿದ್ದ ಪ್ರಕರಣದ 12 ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ ವಿಜಯಪುರ ಪೊಲೀಸರು (Vijayapura Police) ಯಶಸ್ವಿಯಾಗಿದ್ದಾರೆ.
ಬಾಲರಾಜ್ ಮಣಿಕಮ್ ಯರೆಕುಲಾ, ಚಂದನರಾಜ್ ಪಿಳ್ಳೈ, ಗುಂಡು ಜೋಸೆಫ್ ಶ್ಯಾಮಬಾಬು, ಪೀಟರ್ ಚಂದ್ರಪಾಲ್, ಇಜಾಜ್ ಧಾರವಾಡ, ಸುಸೈರಾಜ್ ಡ್ಯಾನಿಯಲ್, ಬಾಬುರಾವ್ ಮಿರಿಯಾಲ್, ಮಹಮ್ಮದ್ ಆಸೀಫ್ ಕಲ್ಲೂರ, ಅನಿಲ್ ಮಿರಿಯಾಲ್, ಮೋಹನಕುಮಾರ, ಸುಲೇಮನ್ವೇಸ್ಲಿ ಪಲುಕುರಿ, ಮರಿಯಾದಾಸ ಗೋನಾ ಎಂಬ 12 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಭಾರತಕ್ಕೆ ಟೆಸ್ಲಾ: 5 ಮಾಡೆಲ್ Y ವಾಹನಗಳು ಈಗಾಗಲೇ ಮುಂಬೈಗೆ ಎಂಟ್ರಿ
ಇನ್ನು ಬಂಧಿತರೆಲ್ಲರು ಹುಬ್ಬಳ್ಳಿ (Hubballi) ಮೂಲದವರಾಗಿದ್ದು, ಇಲ್ಲಿವರೆಗೆ ಬಂಧಿತರಿಂದ ಒಟ್ಟು 39 ಕೆಜಿ ಗಟ್ಟಿ ಬಂಗಾರ, 1.16 ಕೋಟಿ ರೂ. ನಗದು ವಶಕ್ಕೆ ಪಡೆಯಲಾಗಿದೆ. ಜೊತೆಗೆ ಕೃತ್ಯಕ್ಕೆ ಬಳಸಿದ ಒಂದು ಲಾರಿ, 5 ಕಾರು ಸೇರಿದಂತೆ 39.26 ಕೋಟಿ ರೂ.ಗೂ ಅಧಿಕ ಮೌಲ್ಯದ ವಸ್ತುಗಳು ಜಪ್ತಿ ಮಾಡಲಾಗಿದೆ. ಇದನ್ನೂ ಓದಿ: ತಮಿಳುನಾಡು ಲಾಕಪ್ ಡೆತ್ ಪ್ರಕರಣ – ಕ್ಷಮೆಯಾಚಿಸಿದ ಪೊಲೀಸ್ ಮುಖ್ಯಸ್ಥ
ಏನಿದು ಪ್ರಕರಣ?
ಕಳೆದ ಮೇ 25ರಂದು ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಣಣದಲ್ಲಿನ ಕೆನೆರಾ ಬ್ಯಾಂಕ್ ಕಳ್ಳತನ ಮಾಡಲಾಗಿತ್ತು. ದರೋಡೆಕೊರರು ಕೋಟಿ ಕೋಟಿ ಬೆಲೆ ಬಾಳುವ ಚಿನ್ನಾಭರಣ, ನಗದು ಕದ್ದು ಪರಾರಿಯಾಗಿದ್ದರು.
ವಿಜಯಕುಮಾರ ಮಿರಿಯಾಲ ಹುಬ್ಬಳ್ಳಿಯ ಕೋಠಾರಿ ನಗರದ ಕೆನರಾ ಬ್ಯಾಂಕ್ನಲ್ಲಿ ಸೀನಿಯರ್ ಮ್ಯಾನೇಜರ್ ಆಗಿದ್ದು, ಈತ ದರೋಡೆಯ ಮಾಸ್ಟರ್ ಮೈಂಡ್ ಆಗಿದ್ದ. ಮೇ 25ರಂದು ಬ್ಯಾಂಕ್ನ ಕಿಟಕಿಯ ಸರಳುಗಳನ್ನು ಕಟ್ ಮಾಡಿ ಬ್ಯಾಂಕ್ಗೆ ನುಗ್ಗಿ ದರೋಡೆ ಮಾಡಿದ್ದರು. ಅಲ್ಲದೆ ಪೊಲೀಸರ ದಿಕ್ಕು ತಪ್ಪಿಸಲು ಒಂದು ಗೊಂಬೆ ಇಟ್ಟು ವಾಮಾಚಾರ ಮಾಡಿದ್ದರು. ಈ ಪ್ರಕರಣದ ಆರೋಪಿಗಳ ಪತ್ತೆಗಾಗಿ ವಿಜಯಪುರ ಎಸ್ಪಿ ಲಕ್ಷ್ಮಣ ನಿಂಬರಗಿ 8 ತಂಡಗಳನ್ನ ರಚಿಸಿದ್ದರು. ಎಲ್ಲಾ ತಂಡಗಳು ಎಲ್ಲ ಆಯಾಮಗಳಲ್ಲಿ ತನಿಖೆ ಮಾಡಿ ಆರೋಪಿತರನ್ನು ಪತ್ತೆ ಮಾಡಿದ್ದಾರೆ.
ಸದ್ಯ ಪ್ರಕರಣ ಬಹುತೇಕ ಆರೋಪಿಗಳ ಪತ್ತೆಯಾಗಿದ್ದು, ಪೊಲೀಸರ ತನಿಖೆ ಮುಂದುವರೆದಿದೆ. ವಿಜಯಪುರ ಪೊಲೀಸರ ಈ ಕಾರ್ಯಕ್ಕೆ ಬ್ಯಾಂಕ್ ಗ್ರಾಹಕರು, ಸಾರ್ವಜನಿಕರು ಮೆಚ್ವುಗೆ ವ್ಯಕ್ತಪಡಿಸಿದ್ದಾರೆ.
ವಿಜಯಪುರ: 1998ರಲ್ಲಿ ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದಿದ್ದ ಬಾಂಬ್ ಬ್ಲಾಸ್ಟ್ನಲ್ಲಿ (Coimbatore Bomb Blast) ಪ್ರಮುಖ ಪಾತ್ರವಹಿಸಿದ್ದ ಆರೋಪಿಯನ್ನು ಕೊಯಮತ್ತೂರು ಪೊಲೀಸರು ವಿಜಯಪುರದಲ್ಲಿ (Vijayapura) ಬಂಧಿಸಿದ್ದಾರೆ.
ಸಿದ್ದಿಕಿ ರಾಜ್ ಬಂಧಿತ ಆರೋಪಿ. ಮೂಲತಃ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ನಿವಾಸಿಯಾಗಿದ್ದ ಸಿದ್ದಿಕಿ ರಾಜ್ ಹುಬ್ಬಳ್ಳಿ ಮೂಲದ ಮಹಿಳೆಯೊಂದಿಗೆ ವಿವಾಹವಾಗಿ ಕಳೆದ 12 ವರ್ಷಗಳಿಂದ ತರಕಾರಿ ಮಾರಾಟ ಮಾಡಿಕೊಂಡು ಜೀವನ ನಡೆಸುತ್ತಿದ್ದ.
ಬ್ಲಾಸ್ಟ್ ಬಳಿಕ ತಮಿಳುನಾಡಿನಿಂದ ತಲೆ ಮರೆಸಿಕೊಂಡಿದ್ದ ಸಿದ್ದಿಕಿ ರಾಜ್ ಕಳೆದ 27 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ. ಬೇರೆ ಬೇರೆ ಸ್ಥಳಗಳಲ್ಲಿ ಅಡಗಿದ್ದ ಆರೋಪಿ ಸಿದ್ದಿಕಿ ರಾಜ್ ಕೊನೆಗೆ ವಿಜಯಪುರ ನಗರದಲ್ಲಿ ಗುಪ್ತವಾಗಿ ಠಿಕಾಣಿ ಹೂಡಿದ್ದ. ಆರೋಪಿ ಸಿದ್ದಿಕಿ ರಾಜ್ನನ್ನು ಪತ್ತೆ ಮಾಡಿದ ಕೊಯಮತ್ತೂರು ಪೊಲೀಸರು ಆತನನ್ನು ಬಂಧಿಸಿದ್ದಾರೆ.
ಬಂಧಿತ ಸಿದ್ದಿಕಿಯನ್ನು ಐದನೇ ಕ್ರಿಮಿನಲ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ವಿಚಾರಣೆ ನಡೆಸಿದ ನ್ಯಾಯಾಧೀಶೆ ವರ್ಜಿನ್ ವೆಸ್ಟಾ ಅವರು ಅಲ್ ಉಮ್ಮಾ ಚಳವಳಿಯ ಸದಸ್ಯ ಟೈಲರ್ ರಾಜಾನನ್ನು ಜುಲೈ 24ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರು. ಬಳಿಕ ಆತನನ್ನು ಬಿಗಿ ಭದ್ರತೆಯಲ್ಲಿ ಕೊಯಮತ್ತೂರು ಕೇಂದ್ರ ಕಾರಾಗೃಹಕ್ಕೆ ಕರೆದೊಯ್ಯಲಾಯಿತು.
ಕೊಯಮತ್ತೂರು ಬಾಂಬ್ ಬ್ಲಾಸ್ಟ್:
1998ರ ಫೆಬ್ರವರಿ 14 ರಂದು ಕೊಯಮತ್ತೂರಿನ ಆರ್.ಎಸ್. ಪುರಂನಲ್ಲಿ ಬಿಜೆಪಿ ಸಾರ್ವಜನಿಕ ಸಭೆಯನ್ನು ಆಯೋಜಿಸಿತ್ತು. ಪಕ್ಷದ ಹಿರಿಯ ನಾಯಕ ಎಲ್ಕೆ ಅಡ್ವಾಣಿ ಅವರು ಸಭೆಯಲ್ಲಿ ಭಾಗವಹಿಸಿ ಮಾತನಾಡಬೇಕಿತ್ತು. ಆ ಸಮಯದಲ್ಲಿ, ಸಾರ್ವಜನಿಕ ಸಭೆಯ ವೇದಿಕೆಯಿಂದ 100 ಮೀಟರ್ ದೂರದಲ್ಲಿ ಇರಿಸಲಾಗಿದ್ದ ಬಾಂಬ್ ಸ್ಫೋಟಗೊಂಡಿತ್ತು.
ಅಡ್ವಾಣಿ ಅವರು ಬರಬೇಕಿದ್ದ ವಿಮಾನ ವಿಳಂಬವಾದ ಕಾರಣ ಸ್ಫೋಟ ಘಟನೆಯಿಂದ ತಪ್ಪಿಸಿಕೊಂಡು ಬದುಕುಳಿದಿದ್ದರು. ನಂತರ ಕೊಯಮತ್ತೂರಿನ ವಿವಿಧ ಸ್ಥಳಗಳಲ್ಲಿ ಸರಣಿ ಬಾಂಬ್ ಸ್ಫೋಟಗಳು ನಡೆದು, ಇದರಲ್ಲಿ 58 ಜನರು ಸಾವಿಗೀಡಾಗಿದ್ದರು. 250ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದರು.
ಅಪರಿಚಿತ ದುಷ್ಕರ್ಮಿಗಳು ಮಾರಕಾಸ್ತ್ರದಿಂದ ಇರಿದು ಯುವಕನನ್ನು ಕೊಲೆ ಮಾಡಿದ್ದಾರೆ. ಘಟನಾ ಸ್ಥಳಕ್ಕೆ ಎಸ್ಪಿ ಲಕ್ಷ್ಮಣ ನಿಂಬರಗಿ, ಎಎಸ್ಪಿ ಶಂಕರ ಮಾರಿಹಾಳ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಈವರೆಗೂ ಕೊಲೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ, ಪೊಲೀಸರು ಶ್ವಾನದಳ, ಬೆರಳಚ್ಚು ತಂಡದಿಂದ ಪರೀಕ್ಷೆ ನಡೆಸಲಾಗಿದೆ. ಸದ್ಯ ಗಾಂಧಿಚೌಕ್ ಪೊಲೀಸ್ ಠಾಣೆ (Gandhi Chowk Police Station) ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.