Tag: ವಿಜಯ್ ಕಿರಗಂದೂರು

  • ಕಾಂತಾರ ಚಾಪ್ಟರ್‌ 1 ಸಕ್ಸಸ್‌ ಬೆನ್ನಲ್ಲೇ ಕಟೀಲು ಅಮ್ಮನ ದರ್ಶನ ಪಡೆದ ವಿಜಯ್‌ ಕಿರಗಂದೂರು

    ಕಾಂತಾರ ಚಾಪ್ಟರ್‌ 1 ಸಕ್ಸಸ್‌ ಬೆನ್ನಲ್ಲೇ ಕಟೀಲು ಅಮ್ಮನ ದರ್ಶನ ಪಡೆದ ವಿಜಯ್‌ ಕಿರಗಂದೂರು

    ಮಂಗಳೂರು: ಕಾಂತಾರ ಚಾಪ್ಟರ್‌ 1 (Kantara Chapter 1) ಯಶಸ್ವಿ ಹಿನ್ನೆಲೆಯಲ್ಲಿ ನಿರ್ಮಾಪಕ ವಿಜಯ್‌ ಕಿರಗಂದೂರು (Vijay Kiragandur), ಕರಾವಳಿ ದೇವಿಯ ಮೊರೆ ಹೋಗಿದ್ದಾರೆ.

    ಕಟೀಲು ಕ್ಷೇತ್ರಕ್ಕೆ ಭೇಟಿ ನೀಡಿದ ‘ಕಾಂತಾರ’ ನಿರ್ಮಾಪಕ ವಿಜಯ್‌ ಕಿರಗಂದೂರು ಅವರು ಶ್ರೀ ದುರ್ಗಾಪರಮೇಶ್ವರಿ ದೇವಿ (Kateel Durgaaparameshwari Temple) ದರ್ಶನ ಪಡೆದಿದ್ದಾರೆ. ಕಟೀಲಮ್ಮನಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ಬಾಕ್ಸಾಫೀಸ್‌ನಲ್ಲಿ ಕಾಂತಾರ ಚಾಪ್ಟರ್‌ 1 ಮಿಂಚಿನ ಓಟ – ಸಿದ್ಧಿವಿನಾಯಕನ ದರ್ಶನ ಪಡೆದ ರಿಷಬ್‌

    ದೇವಸ್ಥಾನಕ್ಕೆ ಸ್ನೇಹಿತರೊಂದಿಗೆ ವಿಜಯ್ ಕಿರಗಂದೂರು ಭೇಟಿ ನೀಡಿದರು. ಕ್ಷೇತ್ರದಲ್ಲೇ ಅನ್ನ ಪ್ರಸಾದ ಸ್ವೀಕರಿಸಿದರು. ಇತ್ತ ಕಾಂತಾರ ನಟ, ನಿರ್ದೇಶಕ ರಿಷಬ್‌ ಶೆಟ್ಟಿ ಅವರು ಮುಂಬೈನ ಸಿದ್ಧಿವಿನಾಯಕ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದ್ದಾರೆ.

    ಕಾಂತಾರ ಅಧ್ಯಾಯ 1 ಚಿತ್ರ ಬಿಡುಗಡೆಯಾದ ಮೊದಲ ವಾರದಲ್ಲೇ ವಿಶ್ವಾದ್ಯಂತ 500 ಕೋಟಿ ಗಳಿಸಿದೆ ಎಂದು ಹೊಂಬಾಳೆ ಫಿಲಂಸ್ ಅಧಿಕೃತವಾಗಿ ತಿಳಿಸಿದೆ. ‘ಗಲ್ಲಾಪೆಟ್ಟಿಗೆಯಲ್ಲಿ ದೈವಿಕ ಸಿನಿಮೀಯ ಚಂಡಮಾರುತವು ಇನ್ನೂ ಹೆಚ್ಚಿನ ಗಳಿಕೆಯನ್ನು ಮಾಡುತ್ತಿದೆ. ಕಾಂತಾರ ಅಧ್ಯಾಯ 1 ಮೊದಲ ವಾರದಲ್ಲಿ ವಿಶ್ವಾದ್ಯಂತ 509.25 ಕೋಟಿ+ ಜಿಬಿಒಸಿಯನ್ನು ದಾಟಿದೆ! ನಿಮ್ಮ ಹತ್ತಿರದ ಚಿತ್ರಮಂದಿರಗಳಲ್ಲಿ ಯಶಸ್ವಿಯಾಗಿ ಪ್ರದರ್ಶನಗೊಳ್ಳುತ್ತಿರುವ ಬ್ಲಾಕ್ಬಸ್ಟರ್ ಕಾಂತಾರ’ ಎಂದು ಪೋಸ್ಟ್‌ ಹಂಚಿಕೊಂಡಿದೆ. ಇದನ್ನೂ ಓದಿ: ಕಾಂತಾರ ಬ್ಲಾಕ್‌ಬಸ್ಟರ್ ಹಿಟ್ – 1 ವಾರಕ್ಕೆ 509 ಕೋಟಿ ಕಲೆಕ್ಷನ್

    ಅ.2 ರಂದು ಕಾಂತಾರ ಚಿತ್ರ ವಿಶ್ವದಾದ್ಯಂತ 7 ಭಾಷೆಗಳಲ್ಲಿ ತೆರೆಕಂಡಿತ್ತು. ಕನ್ನಡ ಹಾಗೂ ಹಿಂದಿ ಭಾಷೆಯಲ್ಲಿ ಕಾಂತಾರಕ್ಕೆ ಅತ್ಯದ್ಭುತ ರೆಸ್ಪಾನ್ಸ್ ಸಿಗುತ್ತಿದ್ದು, ವಿದೇಶದಲ್ಲೂ ಕಾಂತಾರ ಚಿತ್ರಕ್ಕೆ ಅತ್ಯುತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪರಿಣಾಮ ಮೊದಲ ವಾರ 509 ಕೋಟಿ ಕಲೆಕ್ಷನ್ ಮಾಡಿದೆ.

  • 70th National Film Awards: ‘ಕೆಜಿಎಫ್‌ 2’ ಚಿತ್ರಕ್ಕಾಗಿ ಪ್ರಶಸ್ತಿ ಸ್ವೀಕರಿಸಿದ ನಿರ್ಮಾಪಕ ವಿಜಯ್‌ ಕಿರಗಂದೂರು

    70th National Film Awards: ‘ಕೆಜಿಎಫ್‌ 2’ ಚಿತ್ರಕ್ಕಾಗಿ ಪ್ರಶಸ್ತಿ ಸ್ವೀಕರಿಸಿದ ನಿರ್ಮಾಪಕ ವಿಜಯ್‌ ಕಿರಗಂದೂರು

    ನ್ನಡದ ಸಿನಿಮಾಗಳು ರಾಷ್ಟ್ರ ಮಟ್ಟದಲ್ಲಿ ಸದ್ದು ಮಾಡುತ್ತಿವೆ. ದೆಹಲಿಯಲ್ಲಿ ಇಂದು (ಅ.8) ರಾಷ್ಟ್ರ ಪ್ರಶಸ್ತಿ ಪ್ರದಾನ ಸಮಾರಂಭ ನಡೆದಿದೆ. ‘ಕೆಜಿಎಫ್‌ 2’ (KGF 2) ಸಿನಿಮಾಗಾಗಿ ನ್ಯಾಷನಲ್‌ ಅವಾರ್ಡ್‌ ಗೆದ್ದ ಹಿನ್ನೆಲೆ ನಿರ್ಮಾಪಕ ವಿಜಯ್‌ ಕಿರಗಂದೂರು ಅವರು ರಾಷ್ಟ್ರ ಪ್ರಶಸ್ತಿ ಪಡೆದಿದ್ದಾರೆ.

    ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ರಾಷ್ಟ್ರ ಪ್ರಶಸ್ತಿ ಪ್ರದಾನ ಮಾಡಿದ್ದಾರೆ. ಅತ್ಯುತ್ತಮ ಪ್ರಾದೇಶಿಕ ಸಿನಿಮಾ, ಅತ್ಯುತ್ತಮ ಸಾಹಸ ನಿರ್ದೇಶನ ವಿಭಾಗದಲ್ಲಿ ‘ಕೆಜಿಎಫ್ 2’ಗೆ ರಾಷ್ಟ್ರ ಪ್ರಶಸ್ತಿ ದಕ್ಕಿದೆ. ಈ ಚಿತ್ರ ನಿರ್ಮಿಸಿರುವ  ಹೊಂಬಾಳೆ ಸಂಸ್ಥೆಯ ರೂವಾರಿ ವಿಜಯ್ ಕಿರಗಂದೂರು ಅವರಿಗೆ ರಾಷ್ಟ್ರ ಪ್ರಶಸ್ತಿ ನೀಡಲಾಗಿದೆ. ಇನ್ನೂ ಅತ್ಯುತ್ತಮ ಮನರಂಜನಾ ಚಿತ್ರ ‘ಕಾಂತಾರ’ ಮತ್ತು ಈ ಚಿತ್ರದ ನಟನೆಗೆ ರಿಷಬ್ ಶೆಟ್ಟಿಗೆ ರಾಷ್ಟ್ರ ಪ್ರಶಸ್ತಿ ನೀಡಲಾಗಿದೆ. ಇದನ್ನೂ ಓದಿ:70th National Film Awards: ಅತ್ಯುತ್ತಮ ನಟ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ

    ಇನ್ನೂ ಕನ್ನಡದ ನಟಿ ನಿತ್ಯಾ ಮೆನನ್‌ಗೆ ‘ತಿರುಚಿತ್ರಂಬಲಂ’ ಸಿನಿಮಾದ ನಟನೆಗಾಗಿ ಅತ್ಯುತ್ತಮ ನಟಿ ಪ್ರಶಸ್ತಿ ನೀಡಲಾಗಿದೆ.

  • ಏಪ್ರಿಲ್ ನಿಂದ ‘ಸಲಾರ್ 2’ ಚಿತ್ರದ ಕೆಲಸದಲ್ಲಿ ಪ್ರಶಾಂತ್ ನೀಲ್ ಬ್ಯುಸಿ

    ಏಪ್ರಿಲ್ ನಿಂದ ‘ಸಲಾರ್ 2’ ಚಿತ್ರದ ಕೆಲಸದಲ್ಲಿ ಪ್ರಶಾಂತ್ ನೀಲ್ ಬ್ಯುಸಿ

    ಪ್ರಭಾಸ್ ನಟನೆಯ ಸಲಾರ್ ಸಿನಿಮಾ ಬಾಕ್ಸಾಫೀಸಿನಲ್ಲಿ ಸಖತ್ ಸದ್ದು ಮಾಡಿತ್ತು. ಈಗಲೂ ಕೆಲವರು ಸಲಾರ್ ಸಿನಿಮಾದ ಗುಂಗಿನಲ್ಲೇ ಇದ್ದಾರೆ. ಈ ನಡುವೆ ಸಲಾರ್ 2 (Salaar 2) ಸಿನಿಮಾದ ಬಗ್ಗೆ ಒಂದಷ್ಟು ಮಾಹಿತಿಗಳು ಹೊರ ಬಿದ್ದಿವೆ. ಏಪ್ರಿಲ್ ನಿಂದ ಸಲಾರ್ 2 ಚಿತ್ರದ ಶೂಟಿಂಗ್ ಕೆಲಸದಲ್ಲಿ ನಿರ್ದೇಶಕ ಪ್ರಶಾಂತ್ ನೀಲ್ (Prashant Neel) ತೊಡಗಿಕೊಳ್ಳಲಿದ್ದಾರಂತೆ.

    ಈ ಹಿಂದೆ ಆಂಗ್ಲ ವೆಬ್ ಸೈಟ್ ಜೊತೆ ನಿರ್ಮಾಪಕ ವಿಜಯ ಕಿರಗಂದೂರು (Vijaya Kirgandur) ಕೆಲ ಮಾಹಿತಿಗಳನ್ನು ಹಂಚಿಕೊಂಡಿದ್ದರು. ಅದರ ಪ್ರಕಾರ ಸಲಾರ್ 2 ಸಿನಿಮಾ 2025ರಲ್ಲಿ ಬಿಡುಗಡೆ ಆಗಲಿದೆಯಂತೆ. ಇನ್ನೂ ಅಚ್ಚರಿಯ ಸಂಗತಿ ಅಂದರೆ, ಈಗಾಗಲೇ ಸಲಾರ್ 2 ಸಿನಿಮಾದ ಸ್ಕ್ರಿಪ್ಟ್ ರೆಡಿಯಾಗಿದ್ದು, ಸಲಾರ್ ಸಿನಿಮಾಗಿಂತಲೂ ಸಲಾರ್ 2 ಇನ್ನೂ ಅದ್ಧೂರಿಯಾಗಿ ಇರಲಿದೆ ಎಂದು ವಿಜಯ್ ತಿಳಿಸಿದ್ದರು.

    ಕನ್ನಡದಲ್ಲಿ ‘ಮಾಸ್ಟರ್ ಪೀಸ್‍’, ‘ರಾಜಕುಮಾರ’, ‘ಯುವರತ್ನ’, ‘ಕೆಜಿಎಫ್‍ 1 ಮತ್ತು 2’, ‘ಕಾಂತಾರ’, ‘ರಾಘವೇಂದ್ರ ಸ್ಟೋರ್ಸ್’, ಯುವ ಮುಂತಾದ ಚಿತ್ರಗಳನ್ನು ನಿರ್ಮಿಸಿರುವ ಹೊಂಬಾಳೆ ಫಿಲಂಸ್, ತನ್ನ ನಿರ್ಮಾಣದ ಚಿತ್ರಗಳ ಮೂಲಕ ಜಗತ್ತಿನ ಗಮನ ಸೆಳೆದಿರುವುದಷ್ಟೇ ಅಲ್ಲ, ಕನ್ನಡ ಚಿತ್ರಗಳನ್ನು ಇನ್ನೊಂದು ಹಂತಕ್ಕೆ ತೆಗೆದುಕೊಂಡು ಹೋಗುವ ಮೂಲಕ ಎಲ್ಲರ ಗಮನ ಸೆಳೆದಿರುವ ಹೆಗ್ಗಳಿಕೆಗೆ ಪಾತ್ರವಾಗಿದೆ.

    ‘ಸಲಾರ್ ’ ಪ್ಯಾನ್‍ ಇಂಡಿಯಾ ಚಿತ್ರವಾದರೂ, ಈ ಚಿತ್ರದ ಹಿಂದಿರುವ ತಾಂತ್ರಿಕ ತಂಡದವರೆಲ್ಲರೂ ಕನ್ನಡದವರಾಗಿದ್ದರು. ನಿರ್ಮಾಪಕರಾದ ವಿಜಯ್‍ ಕಿರಗಂದೂರು, ನಿರ್ದೇಶಕ ಪ್ರಶಾಂತ್‍ ನೀಲ್‍ (Prashant Neel), ಛಾಯಾಗ್ರಾಹಕ ಭುವನ್‍ ಗೌಡ, ಸಂಗೀತ ನಿರ್ದೇಶಕ ರವಿ ಬಸ್ರೂರು, ಕಲಾ ನಿರ್ದೇಶಕ ಶಿವಕುಮಾರ್ ಸೇರಿದಂತೆ ಚಿತ್ರದಲ್ಲಿ ಕೆಲಸ ಮಾಡಿರುವ ಹಲವು ತಂತ್ರಜ್ಞರು ಹಾಗೂ ಕಲಾವಿದರು  ಈ ನೆಲದ ಮಣ್ಣಿನವರಾಗಿದ್ದು, ಇದು ಕನ್ನಡದ ಪ್ರತಿಭಾ ಸಂಪತ್ತಿನ ಒಂದು ಉದಾಹರಣೆಯಷ್ಟೇ.

  • Breaking- ‘ಸಲಾರ್’ ಟ್ರೈಲರ್ ನೋಡಿ ಸಂಭ್ರಮಿಸಿದ ನಿರ್ಮಾಪಕ ವಿಜಯ್

    Breaking- ‘ಸಲಾರ್’ ಟ್ರೈಲರ್ ನೋಡಿ ಸಂಭ್ರಮಿಸಿದ ನಿರ್ಮಾಪಕ ವಿಜಯ್

    ಹುನಿರೀಕ್ಷಿತ ಸಲಾರ್ ಸಿನಿಮಾದ ಟ್ರೈಲರ್ ಇಂದು ಸಂಜೆ 7.19ಕ್ಕೆ ರಿಲೀಸ್ ಆಗಲಿದೆ. ಅದಕ್ಕೂ ಮುನ್ನ ಚಿತ್ರದ ನಿರ್ಮಾಪಕ ವಿಜಯ ಕಿರಗಂದೂರ್‌ (Vijay Kirgandur) ಟ್ರೈಲರ್ (Trailer) ಅನ್ನು ವೀಕ್ಷಣೆ ಮಾಡಿದ್ದು, ಟ್ರೈಲರ್ ಕಂಡು ಸಂಭ್ರಮಿಸಿದ್ದಾರೆ. ಆ ಫೋಟೋವನ್ನು ಅಲ್ಲಿದ್ದವರು ಸೆರೆ ಹಿಡಿದಿದ್ದಾರೆ. ಅದ್ಭುತವಾದ ಟ್ರೈಲರ್ ಇದಾಗಿದ್ದು, ಮೂರೂವರೆ ನಿಮಿಷಕ್ಕೂ ಹೆಚ್ಚು ಅವಧಿಯ ಟ್ರೈಲರ್ ಇದಾಗಿದೆ.

    ಸಲಾರ್ ರೀಮೇಕಾ?

    ಸಲಾರ್ ಸಿನಿಮಾದ ಕಥೆಯ (Story) ಬಗ್ಗೆ ಸಾಕಷ್ಟು ಚರ್ಚೆ ನಡೆದಿತ್ತು. ಪ್ರಶಾಂತ್ ನೀಲ್ (Prashant Neel) ಈ ಹಿಂದೆ ಕನ್ನಡದಲ್ಲಿ ಮಾಡಿದ್ದ ಉಗ್ರಂ ಸಿನಿಮಾವನ್ನೇ ಕೊಂಚ ಬದಲಿಸಿಕೊಂಡು ಚಿತ್ರ ಮಾಡಿದ್ದಾರೆ ಎಂದು ಹೇಳಲಾಗಿತ್ತು. ಈ ಕುರಿತಂತೆ ಪ್ರಶಾಂತ್ ನೀಲ್ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಇದೇ ಮೊದಲ ಬಾರಿಗೆ ಕಥೆಯ ಬಗ್ಗೆ ಪ್ರಶಾಂತ್ ಮಾತನಾಡಿದ್ದಾರೆ.

    ಇದು ರಿಮೇಕ್ ಸಿನಿಮಾವಲ್ಲ ಎಂದು ಸ್ಪಷ್ಟಪಡಿಸಿದ ಅವರು, ಸ್ನೇಹಿತರಿಬ್ಬರು ದೊಡ್ಡ ಶತ್ರುಗಳಾಗಿ ಬದಲಾಗುವ ಕಥೆಯನ್ನು ಸಿನಿಮಾದಲ್ಲಿ ತೋರಿಸಲಾಗುತ್ತಿದೆ ಎಂದಿದ್ದಾರೆ. ಈ ಇಬ್ಬರ ಜರ್ನಿಯನ್ನು ಎರಡು ಭಾಗವಾಗಿ ತೋರಿಸಲಾಗುವುದು ಎಂದು ಇದೇ ಮೊದಲ ಬಾರಿಗೆ ಕಥೆಯ ಬಗ್ಗೆ ಬಾಯ್ಬಿಟ್ಟಿದ್ದಾರೆ.

    ಸದ್ಯ ಚಿತ್ರೋದ್ಯಮದಲ್ಲಿ ಇವೆಂಟ್ ಟ್ರೆಂಡ್ ಹೆಚ್ಚಾಗಿದೆ. ಪೋಸ್ಟ್ ರಿಲೀಸ್ ಇವೆಂಟ್, ಪ್ರಿ-ರಿಲೀಸ್ (Event) ಇವೆಂಟ್ ಹೀಗೆ ಜನರನ್ನು ಸೇರಿಸುವುದಕ್ಕಾಗಿ ನಾನಾ ರೀತಿಯ ಕಸರತ್ತುಗಳನ್ನು ಮಾಡಲಾಗುತ್ತದೆ. ಇಂಥದ್ದೊಂದು ಯಾವುದೇ ಇವೆಂಟ್ ಸಲಾರ್ ಚಿತ್ರಕ್ಕಾಗಿ ಮಾಡುತ್ತಿಲ್ಲ ಎನ್ನುವ ವಿಷಯ ಗಾಂಧಿನಗರದಲ್ಲಿ ಓಡಾಡುತ್ತಿದೆ. ಯಾವುದೇ ಇವೆಂಟ್ ಮಾಡದೇ, ಟ್ರೈಲರ್ ಬಿಡುಗಡೆ ನಂತರ ನೇರವಾಗಿ ಸಿನಿಮಾ ರಿಲೀಸ್ ಮಾಡಲು ಮುಂದಾಗಿದೆಯಂತೆ ಹೊಂಬಾಳೆ ಸಂಸ್ಥೆ.

     

    ಸಲಾರ್ ಪ್ರಭಾಸ್ (Prabhas) ಸಿನಿಮಾ ಅನ್ನೋದಕ್ಕಿಂತ ಹೆಚ್ಚಾಗಿ ಇದು ಕೆಜಿಎಫ್ (KGF) ನಿರ್ದೇಶಕನ ಸಿನಿಮಾ ಎನ್ನುವ ನಿರೀಕ್ಷೆ. ಕೆಜಿಎಫ್ ಅನ್ನೋ ದೃಶ್ಯಕಾವ್ಯ ಕೊಟ್ಟು ಸಿನಿಮಾ ಮೇಕಿಂಗ್ ಸ್ಟೈಲ್‌ಗೆ ಹೊಸ ಭಾಷ್ಯ ಬರೆದ ನಿರ್ದೇಶಕನ ಇನ್ನೊಂದು ಸಿನಿಮಾ ಕೊನೆಗೂ ಬರ್ತಿದೆ. ಕೆಜಿಎಫ್ ಹೇಗೆ ವಿಶ್ವದಗಲ ಬಾಹು ಹಸ್ತ ಚಾಚಿತ್ತೋ ಅದಕ್ಕಿಂತ ಹೆಚ್ಚಾಗಿ ಸಲಾರ್ ಅಜಾನುಬಾಹುವಾಗಿ ಹೊರಹೊಮ್ಮಲಿದೆ. ಹೊಂಬಾಳೆ ಸಂಸ್ಥೆ ಈಗಿನಿಂದಲೇ ಸಕಲ ಸಿದ್ಧತೆ ಮಾಡಿಕೊಂಡ ಪರಿಣಾಮ ಅಮೆರಿಕಾದಲ್ಲೂ ಮುಂಗಡ ಟಿಕೆಟ್ ಬುಕಿಂಗ್ ನಡೆಯುತ್ತಿದೆ.

  • ಪ್ರಧಾನಿ ಮೋದಿ ಔತಣಕೂಟಕ್ಕೆ ನಿರ್ದೇಶಕ ಪ್ರಶಾಂತ್ ನೀಲ್ ಗೈರು

    ಪ್ರಧಾನಿ ಮೋದಿ ಔತಣಕೂಟಕ್ಕೆ ನಿರ್ದೇಶಕ ಪ್ರಶಾಂತ್ ನೀಲ್ ಗೈರು

    ಪ್ರಧಾನಿ ನರೇಂದ್ರ ಮೋದಿ (Narendra Modi) ನಿನ್ನೆ ಬೆಂಗಳೂರಿನಲ್ಲಿ ಹಲವು ಕ್ಷೇತ್ರಗಳ ಗಣ್ಯರಿಗೆ ಔತಣಕೂಡ ಏರ್ಪಡಿಸಿದ್ದರು. ಸಿನಿಮಾ, ಕ್ರಿಕೆಟ್ ಮತ್ತು ನಾನಾ ಯುವಉದ್ಯಮಿಗಳನ್ನು ಆಹ್ವಾನಿಸಲಾಗಿತ್ತು. ಸಿನಿಮಾ ಕ್ಷೇತ್ರದಿಂದ ನಿರ್ಮಾಪಕರಾದ ಅಶ್ವಿನಿ ಪುನೀತ್ ರಾಜ್ ಕುಮಾರ್, ಹೊಂಬಾಳೆಯ ವಿಜಯ್ ಕಿರಗಂದೂರು, ನಿರ್ದೇಶಕ ಪ್ರಶಾಂತ್ ನೀಲ್ (Prashant Neel), ನಟರಾದ ಯಶ್ ಮತ್ತು ರಿಷಬ್ ಶೆಟ್ಟಿ ಹಾಗೂ ಮಾಜಿ ರೇಡಿಯೋ ಜಾಕಿ ಶ್ರದ್ಧಾ ಜೈನ್ ಇವರಿಗೆಲ್ಲ ಆಹ್ವಾನ ಹೋಗಿತ್ತು. ಪ್ರಶಾಂತ್ ನೀಲ್ ಹೊರತುಪಡಿಸಿ ಉಳಿದವರೆಲ್ಲರೂ ಪ್ರಧಾನಿ ಭೇಟಿ ಮಾಡಿ, ಔತಣಕೂಟದಲ್ಲಿ ಭಾಗಿಯಾಗಿದ್ದಾರೆ.

    ಆಹ್ವಾನಿಸಿದ ಪ್ರತಿಯೊಬ್ಬರೂ ಪ್ರಧಾನಿಯನ್ನು ಭೇಟಿ ಮಾಡಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಕೂಡ ಆಗಿವೆ. ಆದರೆ, ಪ್ರಶಾಂತ್ ನೀಲ್ ಫೋಟೋ ಮಾತ್ರ ಎಲ್ಲಿಯೂ ಕಾಣಿಸಿಕೊಂಡಿಲ್ಲ. ಕಾರಣ, ಅವರು ಭಾಗಿಯಾಗಿಲ್ಲವಂತೆ. ಖುದ್ದು ಪ್ರಧಾನಿ ಕಚೇರಿಯೇ ಪ್ರಶಾಂತ್ ಅವರಿಗೆ ಆಹ್ವಾನ ನೀಡಿದರೆ, ಪ್ರಶಾಂತ್ ಗೈರಿಗೆ ಕಾರಣವೇನು ಎನ್ನುವ ಚರ್ಚೆ ಕೂಡ ನಡೆದಿದೆ. ರಾಜಕಾರಣದಿಂದ ದೂರ ಇರುವುದಕ್ಕಾಗಿ ಪ್ರಶಾಂತ್ ಹೀಗೆ ಮಾಡಿದ್ದಾರೆ ಎಂದೂ ಹೇಳಲಾಗುತ್ತಿದೆ. ಆದರೆ, ಅಸಲಿ ಕಾರಣವೇ ಬೇರೆ ಇದೆ. ಇದನ್ನೂ ಓದಿ:ಐಷಾರಾಮಿ ಅಪಾರ್ಟ್‌ಮೆಂಟ್ ಹೊಂದಿರುವ ವಿಚಾರ ನಿಜಾನಾ? ಸ್ಪಷ್ಟನೆ ನೀಡಿದ ರಶ್ಮಿಕಾ ಮಂದಣ್ಣ

    ಪ್ರಶಾಂತ್ ನೀಲ್ ಆಪ್ತರ ಪ್ರಕಾರ, ಅವರು ಹೈದರಾಬಾದ್ ನಲ್ಲಿದ್ದಾರೆ. ಅಲ್ಲದೇ, ಪ್ರಶಾಂತ್ ಜ್ವರದಿಂದ ಬಳಲುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಆರೋಗ್ಯ ಸರಿ ಇಲ್ಲದ ಕಾರಣದಿಂದಾಗಿ ಅವರು ಗೈರಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಜ್ವರದ ಕಾರಣದಿಂದಾಗಿ ಅವರಿಗೆ ಬರಲು ಸಾಧ್ಯವಾಗಿಲ್ಲ, ಬೇರೆ ಯಾವ ಕಾರಣವೂ ಇಲ್ಲ ಎನ್ನುತ್ತಾರೆ ಪ್ರಶಾಂತ್ ಆಪ್ತರು. ಅಂತೂ ಪ್ರಧಾನಿ ಅವರು ಕನ್ನಡ ಸಿನಿಮಾ ರಂಗದ ಗಣ್ಯರನ್ನೂ ಕರೆಯಿಸಿಕೊಂಡು ಮಾತನಾಡಿರುವುದು ಚಿತ್ರರಂಗದ ಬೃಹತ್ ಬೆಳವಣಿಗೆಯನ್ನು ತೋರಿಸುತ್ತಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • Exclusive Photo Album- ಮೋದಿ ಔತಣಕೂಟ : ಎಕ್ಸ್ ಕ್ಲೂಸಿವ್ ಫೋಟೋ ಆಲ್ಬಂ

    Exclusive Photo Album- ಮೋದಿ ಔತಣಕೂಟ : ಎಕ್ಸ್ ಕ್ಲೂಸಿವ್ ಫೋಟೋ ಆಲ್ಬಂ

    ನಿನ್ನೆ ನಡೆದ ಪ್ರಧಾನಿ ನರೇಂದ್ರ ಮೋದಿ ಜೊತೆಗಿನ ಔತಣಕೂಟದಲ್ಲಿ ಪ್ರಮುಖ ಆಕರ್ಷಣೆಯಾಗಿದ್ದು ಸ್ಯಾಂಡಲ್ ವುಡ್ ಸಿಲೆಬ್ರಿಟಿಗಳು. ರಾತ್ರಿ 8.20 ರಿಂದ ರಾಜಭವನದಲ್ಲಿ ನಡೆದ ಔತಣಕೂಟದಲ್ಲಿ ಯಾರೆಲ್ಲ ಭಾಗಿ ಆಗಲಿದ್ದಾರೆ ಎನ್ನುವುದು ಸಂಜೆವರೆಗೂ ಸ್ವತಃ ರಾಜ್ಯ ಸರಕಾರಕ್ಕೂ ಮಾಹಿತಿ ಇರಲಿಲ್ಲ. ಆ ಮಟ್ಟದಲ್ಲಿ ಗೌಪ್ಯತೆಯನ್ನು ಕಾಪಾಡಿಕೊಳ್ಳಲಾಗಿತ್ತು. ಸಂಜೆ 8.30ರ ನಂತರ ನಡೆದ ಔತಣಕೂಟದಲ್ಲಿ ನಟ ಯಶ್, ನಟ ಮತ್ತು ನಿರ್ದೇಶಕ ರಿಷಬ್ ಶೆಟ್ಟಿ, ನಿರ್ಮಾಪಕರಾದ ವಿಜಯ್ ಕಿರಗಂದೂರು ಮತ್ತು ಅಶ್ವಿನಿ ಪುನೀತ್ ರಾಜ್ ಕುಮಾರ್, ಹಾಗೂ   ಶ್ರದ್ಧಾ ಜೈನ್ ಅವರು ಭಾಗಿಯಾಗಿದ್ದರು.

    ನಿನ್ನೆ ನಡೆದ ಔತಣಕೂಟದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕನ್ನಡ ಚಿತ್ರೋದ್ಯಮದ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಉತ್ತರ ಭಾರತದ ಚಿತ್ರಗಳಿಗಿಂತ ಹೆಚ್ಚು ಖ್ಯಾತಿ ಗಳಿಸುತ್ತಿರುವುದಕ್ಕೆ ಪ್ರಧಾನಿ ಮೆಚ್ಚುಗೆಯನ್ನೂ ಈ ಸಂದರ್ಭದಲ್ಲಿ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ:`ಕಾಂತಾರ’ ಚಿತ್ರ ಪ್ಯಾನ್ ಇಂಡಿಯಾ ಸಿನಿಮಾವಾಗಿ ಗೆಲ್ಲಲು ಅಸಲಿ ಕಾರಣ ಬಿಚ್ಚಿಟ್ಟ ರಿಷಬ್ ಶೆಟ್ಟಿ

    ನಾಡಿನ ಸಾಂಸ್ಕೃತಿಕ ಪರಂಪರೆಗೆ ಕನ್ನಡ ಚಿತ್ರೋದ್ಯಮವು ಒತ್ತು ನೀಡುತ್ತಿರುವುದು ಒಳ್ಳೆಯ ಬೆಳವಣಿಗೆ ಎಂದು ಹಾಡಿಹೊಗಳಿದ್ದಾರೆ. ದೇಶ-ವಿದೇಶಗಳಿಗೆ ನಮ್ಮ ಪರಂಪರೆಯನ್ನು ಕನ್ನಡ ಚಿತ್ರರಂಗದ ಮೂಲಕ ಪರಿಚಯಿಸುತ್ತಿರುವುದಕ್ಕೆ ಅಭಿನಂದನೆ ವ್ಯಕ್ತ ಪಡಿಸಿದ್ದಾರೆ. ಕನ್ನಡ ಚಿತ್ರೋದ್ಯಮದ ಯಾವುದೇ ಸಮಸ್ಯೆಗಳಿದ್ದರೂ ಗಮನಕ್ಕೆ ತನ್ನಿ ಎಂದು ಹೇಳಿದ್ದಾರೆ.

    ಕನ್ನಡ ಸಿನಿಮಾ ರಂಗದ ಹೆಸರಾಂತ ನಟ ಪುನೀತ್ ರಾಜ್ ಕುಮಾರ್ ಅವರ ಜನಪ್ರಿಯತೆಯನ್ನು ಪ್ರಧಾನಿ ಮೋದಿ ಇದೇ ಸಂದರ್ಭದಲ್ಲಿ ಸ್ಮರಿಸಿದ್ದಾರೆ. ಅಶ್ವಿನಿ ಕುಮಾರ್ ಜೊತೆ ಕೆಲ ಸಮಯ ಮಾತನಾಡಿದ ಪ್ರಧಾನಿ, ಪುನೀತ್ ಅವರು ಈ ನಾಡಿಗೆ ನೀಡಿದ ಕೊಡುಗೆಯನ್ನು ಕೊಂಡಾಡಿದ್ದಾರೆ. ಪುನೀತ್ ಅವರ ಸೇವೆಯನ್ನು ಈ ದೇಶ ಯಾವತ್ತೂ ಮರೆಯುವುದಿಲ್ಲ ಎಂದು ಸ್ಮರಿಸಿದ್ದಾರೆ.

     

    ಕನ್ನಡ ಸಿನಿಮಾಗಳ ಮೂಲಕ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಬೆಳೆದಿರುವ ನಟ ಯಶ್ ಮತ್ತು ರಿಷಬ್ ಶೆಟ್ಟಿ ಜೊತೆಯೂ ಪ್ರಧಾನಿ ಮೋದಿ ವೈಯಕ್ತಿಕವಾಗಿ ಭೇಟಿ ಮಾಡಿದ್ದಾರೆ. ಇಬ್ಬರ ಕಲಾಪ್ರೌಢಿಮೆಯನ್ನು ಮೆಚ್ಚಿ ಮಾತನಾಡಿದ್ದಾರೆ.

    ಇನ್ನಷ್ಟು ಕೀರ್ತಿಗಳಿಸುವಂತೆ ಇಬ್ಬರಿಗೂ ಬೆನ್ನು ತಟ್ಟಿ ಶುಭ ಹಾರಿಸಿದ್ದಾರೆ. ಜೊತೆಗೆ ಹೊಂಬಾಳೆ ಫಿಲ್ಮ್ಸ್ ಬಗ್ಗೆಯೂ ಮೆಚ್ಚಿಕೊಂಡ ಮೋದಿ, ಯುವ ನಿರ್ಮಾಪಕ ವಿಜಯ್ ಕಿರಗಂದೂರು ಬೆನ್ನು ತಟ್ಟಿದ್ದಾರೆ. ಮಾಜಿ ರೆಡಿಯೋ ಜಾಕಿ ಶ್ರದ್ಧಾ ಜೈನ್ ಕೂಡ ಈ ಸಂದರ್ಭದಲ್ಲಿ ಹಾಜರಿದ್ದರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • Exclusive details- ಮೋದಿ ಔತಣಕೂಟ : ಸಿನಿಮಾ ರಂಗದಿಂದ ಯಾರೆಲ್ಲ ಭಾಗಿ, ಆದ ಮಾತುಕತೆ ಏನು?

    Exclusive details- ಮೋದಿ ಔತಣಕೂಟ : ಸಿನಿಮಾ ರಂಗದಿಂದ ಯಾರೆಲ್ಲ ಭಾಗಿ, ಆದ ಮಾತುಕತೆ ಏನು?

    ನಿನ್ನೆ ನಡೆದ ಪ್ರಧಾನಿ ನರೇಂದ್ರ ಮೋದಿ (Narendra Modi) ಜೊತೆಗಿನ ಔತಣಕೂಟದಲ್ಲಿ ಪ್ರಮುಖ ಆಕರ್ಷಣೆಯಾಗಿದ್ದು ಸ್ಯಾಂಡಲ್ ವುಡ್ ಸಿಲೆಬ್ರಿಟಿಗಳು. ರಾತ್ರಿ 8.20 ರಿಂದ ರಾಜಭವನದಲ್ಲಿ ನಡೆದ ಔತಣಕೂಟದಲ್ಲಿ ಯಾರೆಲ್ಲ ಭಾಗಿ ಆಗಲಿದ್ದಾರೆ ಎನ್ನುವುದು ಸಂಜೆವರೆಗೂ ಸ್ವತಃ ರಾಜ್ಯ ಸರಕಾರಕ್ಕೂ ಮಾಹಿತಿ ಇರಲಿಲ್ಲ. ಆ ಮಟ್ಟದಲ್ಲಿ ಗೌಪ್ಯತೆಯನ್ನು ಕಾಪಾಡಿಕೊಳ್ಳಲಾಗಿತ್ತು. ಸಂಜೆ 8.30ರ ನಂತರ ನಡೆದ ಔತಣಕೂಟದಲ್ಲಿ ನಟ ಯಶ್ (Yash), ನಟ ಮತ್ತು ನಿರ್ದೇಶಕ ರಿಷಬ್ ಶೆಟ್ಟಿ (Rishabh Shetty), ನಿರ್ಮಾಪಕರಾದ ವಿಜಯ್ ಕಿರಗಂದೂರು (Vijay Kirgandur) ಮತ್ತು ಅಶ್ವಿನಿ ಪುನೀತ್ ರಾಜ್ ಕುಮಾರ್ (Puneeth rajkumar, ಹಾಗೂ   ಶ್ರದ್ಧಾ ಜೈನ್ ಅವರು ಭಾಗಿಯಾಗಿದ್ದರು.

     

    ಕನ್ನಡ ಚಿತ್ರೋದ್ಯಮದ ಬಗ್ಗೆ ಮೋದಿ ಪ್ರಂಶಸೆ 

    ನಿನ್ನೆ ನಡೆದ ಔತಣಕೂಟದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕನ್ನಡ ಚಿತ್ರೋದ್ಯಮದ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಉತ್ತರ ಭಾರತದ ಚಿತ್ರಗಳಿಗಿಂತ ಹೆಚ್ಚು ಖ್ಯಾತಿ ಗಳಿಸುತ್ತಿರುವುದಕ್ಕೆ ಪ್ರಧಾನಿ ಮೆಚ್ಚುಗೆಯನ್ನೂ ಈ ಸಂದರ್ಭದಲ್ಲಿ ವ್ಯಕ್ತಪಡಿಸಿದ್ದಾರೆ. ನಾಡಿನ ಸಾಂಸ್ಕೃತಿಕ ಪರಂಪರೆಗೆ ಕನ್ನಡ ಚಿತ್ರೋದ್ಯಮವು ಒತ್ತು ನೀಡುತ್ತಿರುವುದು ಒಳ್ಳೆಯ ಬೆಳವಣಿಗೆ ಎಂದು ಹಾಡಿಹೊಗಳಿದ್ದಾರೆ. ದೇಶ-ವಿದೇಶಗಳಿಗೆ ನಮ್ಮ ಪರಂಪರೆಯನ್ನು ಕನ್ನಡ ಚಿತ್ರರಂಗದ ಮೂಲಕ ಪರಿಚಯಿಸುತ್ತಿರುವುದಕ್ಕೆ ಅಭಿನಂದನೆ ವ್ಯಕ್ತ ಪಡಿಸಿದ್ದಾರೆ. ಕನ್ನಡ ಚಿತ್ರೋದ್ಯಮದ ಯಾವುದೇ ಸಮಸ್ಯೆಗಳಿದ್ದರೂ ಗಮನಕ್ಕೆ ತನ್ನಿ ಎಂದು ಹೇಳಿದ್ದಾರೆ.

    ಪುನೀತ್ ಸ್ಮರಿಸಿದ ಪ್ರಧಾನಿ 

    ಕನ್ನಡ ಸಿನಿಮಾ ರಂಗದ ಹೆಸರಾಂತ ನಟ ಪುನೀತ್ ರಾಜ್ ಕುಮಾರ್ ಅವರ ಜನಪ್ರಿಯತೆಯನ್ನು ಪ್ರಧಾನಿ ಮೋದಿ ಇದೇ ಸಂದರ್ಭದಲ್ಲಿ ಸ್ಮರಿಸಿದ್ದಾರೆ. ಅಶ್ವಿನಿ ಕುಮಾರ್ ಜೊತೆ ಕೆಲ ಸಮಯ ಮಾತನಾಡಿದ ಪ್ರಧಾನಿ, ಪುನೀತ್ ಅವರು ಈ ನಾಡಿಗೆ ನೀಡಿದ ಕೊಡುಗೆಯನ್ನು ಕೊಂಡಾಡಿದ್ದಾರೆ. ಪುನೀತ್ ಅವರ ಸೇವೆಯನ್ನು ಈ ದೇಶ ಯಾವತ್ತೂ ಮರೆಯುವುದಿಲ್ಲ ಎಂದು ಸ್ಮರಿಸಿದ್ದಾರೆ.

    ಯಶ್ ಮತ್ತು ರಿಷಬ್ ಗೆ ಶಹಬ್ಬಾಶ್ ಎಂದ ಮೋದಿ 

    ಕನ್ನಡ ಸಿನಿಮಾಗಳ ಮೂಲಕ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಬೆಳೆದಿರುವ ನಟ ಯಶ್ ಮತ್ತು ರಿಷಬ್ ಶೆಟ್ಟಿ ಜೊತೆಯೂ ಪ್ರಧಾನಿ ಮೋದಿ ವೈಯಕ್ತಿಕವಾಗಿ ಭೇಟಿ ಮಾಡಿದ್ದಾರೆ. ಇಬ್ಬರ ಕಲಾಪ್ರೌಢಿಮೆಯನ್ನು ಮೆಚ್ಚಿ ಮಾತನಾಡಿದ್ದಾರೆ. ಇನ್ನಷ್ಟು ಕೀರ್ತಿಗಳಿಸುವಂತೆ ಇಬ್ಬರಿಗೂ ಬೆನ್ನು ತಟ್ಟಿ ಶುಭ ಹಾರಿಸಿದ್ದಾರೆ. ಜೊತೆಗೆ ಹೊಂಬಾಳೆ ಫಿಲ್ಮ್ಸ್ ಬಗ್ಗೆಯೂ ಮೆಚ್ಚಿಕೊಂಡ ಮೋದಿ, ಯುವ ನಿರ್ಮಾಪಕ ವಿಜಯ್ ಕಿರಗಂದೂರು ಬೆನ್ನು ತಟ್ಟಿದ್ದಾರೆ. ಮಾಜಿ ರೆಡಿಯೋ ಜಾಕಿ ಶ್ರದ್ಧಾ ಜೈನ್ ಕೂಡ ಈ ಸಂದರ್ಭದಲ್ಲಿ ಹಾಜರಿದ್ದರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ವರಾಹ ರೂಪಂ ವಿವಾದ : ರಿಷಬ್ ಶೆಟ್ಟಿ ಮತ್ತು ತಂಡಕ್ಕೆ ಸುಪ್ರೀಂಕೋರ್ಟ್ ನಿಂದ ಬಿಗ್ ರಿಲೀಫ್

    ವರಾಹ ರೂಪಂ ವಿವಾದ : ರಿಷಬ್ ಶೆಟ್ಟಿ ಮತ್ತು ತಂಡಕ್ಕೆ ಸುಪ್ರೀಂಕೋರ್ಟ್ ನಿಂದ ಬಿಗ್ ರಿಲೀಫ್

    ‘ವರಾಹ ರೂಪಂ’ (Varaha Rupam) ಹಾಡಿಗೆ (Song) ಸಂಬಂಧಿಸಿದಂತೆ ಕೇರಳ ಹೈಕೋರ್ಟ್ ವಿಧಿಸಿದ್ದ ಷರತ್ತನ್ನು ಇಂದು ಸುಪ್ರೀಂ ಕೋರ್ಟ್ ಸಡಿಲಿಸಿದೆ. ಕೆಲವು ಷರತ್ತುಗಳನ್ನು ಹಾಕುವ ಮೂಲಕ ‘ಕಾಂತಾರ’ (Kantara) ಸಿನಿಮಾದ ನಟ, ನಿರ್ದೇಶಕ ರಿಷಬ್ ಶೆಟ್ಟಿ (Rishabh Shetty) ಹಾಗೂ ನಿರ್ಮಾಪಕ ವಿಜಯ್ ಕಿರಗಂದೂರು (Vijay Kirgandur) ಅವರಿಗೆ ಕೇರಳ ಹೈಕೋರ್ಟ್ ಮೊನ್ನೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ‘ವರಾಹ ರೂಪಂ’ ಹಾಡಿಗೆ ಸಂಬಂಧಿಸಿದಂತೆ ಕೇರಳದ ಹೈಕೋರ್ಟ್ ನ್ಯಾಯಮೂರ್ತಿ ಎ.ಬದ್ರುದ್ದೀನ್ ಅವರು ‘ಕಾಪಿರೈಟ್ ಪ್ರಕರಣದಲ್ಲಿ ಸಿವಿಲ್ ಕೋರ್ಟ್ ನಿಂದ ಆದೇಶ ಬರೋವರೆಗೂ ವರಾಹ ರೂಪಂ ಹಾಡನ್ನು ಬಳಕೆ ಮಾಡುವಂತಿಲ್ಲ’ ಎನ್ನುವ ಷರತ್ತೂ ಸೇರಿದಂತೆ ಹಲವು ಷರತ್ತುಗಳು ಹಾಕಿತ್ತು.

    ಎರಡು ದಿನಗಳ ಕಾಲ ಅಂದರೆ ಫೆ.12 ಮತ್ತು 13 ರಂದು ವಿಚಾರಣೆಗಾಗಿ ತನಿಖಾಧಿಕಾರಿಗಳ ಮುಂದೆ ಹಾಜರಾಗಬೇಕು. ತನಿಖಾಧಿಕಾರಿಯು ಅವರನ್ನು ವಿಚಾರಣೆಗೆ ಒಳಪಡಿಸಿ, ಒಂದು ವೇಳೆ ಬಂಧಿಸಿದರೆ ನ್ಯಾಯವ್ಯಾಪ್ತಿಯ ನ್ಯಾಯಾಲಯಕ್ಕೆ ಹಾಜರು ಪಡಿಸಬೇಕು. ನಂತರ  50 ಸಾವಿರ ಬಾಂಡ್  ಹಾಗೂ ಇಬ್ಬರ ಶ್ಯೂರಿಟಿ ಮೇಲೆ ಕೋರ್ಟ್ ಜಾಮೀನು ನೀಡಬೇಕು. ಆರೋಪಿಗಳು ಅರ್ಜಿದಾರರನ್ನು ಹಾಗೂ ಸಾಕ್ಷಿಗಳನ್ನು ಬೆದರಿಸಬಾರದು ಮತ್ತು ಸಾಕ್ಷ್ಯ ನಾಶ ಮಾಡುವಂತಹ ಕೆಲಸಕ್ಕೆ ಕೈ ಹಾಕಬಾರದು. ಹಾಗೂ ತನಿಖೆಗೆ ಸಹಕರಿಸಬೇಕು. ನ್ಯಾಯಾಲಯದ ಪೂರ್ವಾನುಮತಿಯಿಲ್ಲದೇ ಆರೋಪಿಗಳು ಭಾರತವನ್ನು ತೊರೆಯುವಂತಿಲ್ಲ. ಜಾಮೀನು ಪಡೆದ ಸಮಯದಲ್ಲಿ ಆರೋಪಿಗಳು ಯಾವುದೇ ಅಪರಾಧದ ಕೃತ್ಯದಲ್ಲಿ ಭಾಗಿಯಾಗುವಂತಿಲ್ಲ. ಅಂತಹ ಘಟನೆಗಳು ನಡೆದಿರುವುದು ಕೋರ್ಟ್ ಗಮನಕ್ಕೆ ಬಂದರೆ, ಜಾಮೀನನ್ನು ರದ್ದುಗೊಳಿಸಲಾಗುವುದು ಎಂದು ಕೋರ್ಟ್ ತಿಳಿಸಿತ್ತು. ಇದೀಗ ಸುಪ್ರೀಂ ಕೋರ್ಟ್, ನಟ ನಿರ್ದೇಶಕ ರಿಷಬ್ ಶೆಟ್ಟಿ, ನಿರ್ಮಾಪಕ ವಿಜಯ್ ಕಿರ್ಗಂದೂರ್ ಗೆ ಮಧ್ಯಂತರ ರಕ್ಷಣೆ ನೀಡಿದೆ. ತನಿಖೆ ವೇಳೆ ಬಂಧಿಸದಂತೆ ಸುಪ್ರೀಂ ಸೂಚಿಸಿದೆ. ಇದನ್ನೂ ಓದಿ: ಕ್ರಶ್ ಮದುವೆ ಆಗಿದ್ದಕ್ಕೆ ಸೋಷಿಯಲ್ ಮೀಡಿಯಾದಲ್ಲಿ ಬೇಸರ ಹೊರಹಾಕಿದ ಸುದೀಪ್ ಪುತ್ರಿ

    ‘ಕಾಂತಾರ’ ಸಿನಿಮಾದ ಸೂಪರ್ ಹಿಟ್ ‘ವರಾಹ ರೂಪಂ’ ಹಾಡಿನ ಟ್ಯೂನ್ ಅನ್ನು ಕದಿಯಲಾಗಿದೆ ಎಂದು ಮಲಯಾಳಂನ ತೈಕ್ಕುಡಂ ಬ್ರಿಡ್ಜ್ ಆರೋಪಿಸಿ ದೂರು ನೀಡಿತ್ತು.  ಅದು ತಮ್ಮ ‘ನವರಸಂ’ ಹಾಡಿನದ್ದು ಎನ್ನುವುದನ್ನು ಸಾಕ್ಷ್ಯ ಸಮೇತ ಕೋಯಿಕ್ಕೋಡ್ ನ ಠಾಣೆಯಲ್ಲಿ ದೂರು ದಾಖಲಿಸಿತ್ತು.  ಈ ದೂರಿಗೆ ಸಂಬಂಧಿಸಿದಂತೆ ಮೊನ್ನೆ ಹೊಂಬಾಳೆ ಫಿಲ್ಮ್ಸ್ ನ ವಿಜಯ್ ಕಿರಗಂದೂರು ಮತ್ತು ರಿಷಬ್ ಶೆಟ್ಟಿ ನಿರೀಕ್ಷಣಾ ಜಾಮೀನು ಪಡೆದಿದ್ದಾರೆ.

    ರವಿವಾರವಷ್ಟೇ ‘ಕಾಂತಾರ’ ಸಿನಿಮಾದ ಶತದಿನೋತ್ಸವ ಆಚರಿಸಿದೆ ಚಿತ್ರತಂಡ. ಈ ವೇಳೆಯಲ್ಲಿ ‘ಕಾಂತಾರ 1’ ಸಿನಿಮಾದ ವಿಷಯವನ್ನೂ ಹಂಚಿಕೊಂಡಿದೆ. ಏಪ್ರಿಲ್ ಹೊತ್ತಿಗೆ ‘ಕಾಂತಾರ 1’ ಸಿನಿಮಾದ ಕೆಲವು ವಿಷಯಗಳನ್ನೂ ನಿರ್ದೇಶಕರು ಹಂಚಿಕೊಳ್ಳಲಿದ್ದಾರೆ. ಈಗಾಗಲೇ ಸ್ಕ್ರಿಪ್ಟ್ ಕೆಲಸದಲ್ಲಿ ಚಿತ್ರತಂಡ ತೊಡಗಿಕೊಂಡಿದೆ. ಆದರೂ, ವರಾಹ ರೂಪಂ ಹಾಡಿನ ಸಮಸ್ಯೆ ಬಗೆಹರಿದಿಲ್ಲ. ಮುಂದಿನ ದಿನಗಳಲ್ಲಿ ಯಾರ ಪರ ತೀರ್ಪು ಬರಬಹುದು ಎನ್ನುವುದು ಸದ್ಯಕ್ಕಿರುವ ಕುತೂಹಲವಷ್ಟೇ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ವರಾಹ ರೂಪಂ ವಿವಾದ : ನಿರೀಕ್ಷಣಾ ಜಾಮೀನು ಪಡೆದ ರಿಷಬ್, ವಿಜಯ್ ಕಿರಗಂದೂರು

    ವರಾಹ ರೂಪಂ ವಿವಾದ : ನಿರೀಕ್ಷಣಾ ಜಾಮೀನು ಪಡೆದ ರಿಷಬ್, ವಿಜಯ್ ಕಿರಗಂದೂರು

    ಕೆಲವು ಷರತ್ತುಗಳನ್ನು ಹಾಕುವ ಮೂಲಕ ‘ಕಾಂತಾರ’ (Kantara) ಸಿನಿಮಾದ ನಟ, ನಿರ್ದೇಶಕ ರಿಷಬ್ ಶೆಟ್ಟಿ (Rishabh Shetty) ಹಾಗೂ ನಿರ್ಮಾಪಕ ವಿಜಯ್ ಕಿರಗಂದೂರು (Vijay Kirgandur) ಅವರಿಗೆ ಕೇರಳ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ‘ವರಾಹ ರೂಪಂ’ (Varaha Rupam) ಹಾಡಿಗೆ (Song) ಸಂಬಂಧಿಸಿದಂತೆ ಕೇರಳದ ಹೈಕೋರ್ಟ್ ನ್ಯಾಯಮೂರ್ತಿ ಎ.ಬದ್ರುದೀನ್ ಅವರು ‘ಕಾಪಿರೈಟ್ ಪ್ರಕರಣದಲ್ಲಿ ಸಿವಿಲ್ ಕೋರ್ಟ್ ನಿಂದ ಆದೇಶ ಬರೋವರೆಗೂ ವರಾಹ ರೂಪಂ ಹಾಡನ್ನು ಬಳಕೆ ಮಾಡುವಂತಿಲ್ಲ’ ಎಂದು ಷರತ್ತು ಹಾಕಿದ್ದಾರೆ.  ಅಲ್ಲದೇ, ಮರುವಿಚಾರಣೆಗೆ ಕೋರಲು ಅರ್ಜಿದಾರರಿಗೆ ಅವಕಾಶವಿದೆ ಎಂದು ಹೇಳಿದ್ದಾರೆ.

    ‘ಕಾಂತಾರ’ ಸಿನಿಮಾದ ಸೂಪರ್ ಹಿಟ್ ‘ವರಾಹ ರೂಪಂ’ ಹಾಡಿನ ಟ್ಯೂನ್ ಅನ್ನು ಕದಿಯಲಾಗಿದೆ ಎಂದು ಮಲಯಾಳಂನ ತೈಕ್ಕುಡಂ ಬ್ರಿಡ್ಜ್ ಆರೋಪಿಸಿ ದೂರು ನೀಡಿತ್ತು.  ಅದು ತಮ್ಮ ‘ನವರಸಂ’ ಹಾಡಿನದ್ದು ಎನ್ನುವುದನ್ನು ಸಾಕ್ಷ್ಯ ಸಮೇತ ಕೋಯಿಕ್ಕೋಡ್ ನ ಠಾಣೆಯಲ್ಲಿ ದೂರು ದಾಖಲಿಸಿತ್ತು.  ಈ ದೂರಿಗೆ ಸಂಬಂಧಿಸಿದಂತೆ ನಿನ್ನೆ ಹೊಂಬಾಳೆ ಫಿಲ್ಮ್ಸ್ ನ ವಿಜಯ್ ಕಿರಗಂದೂರು ಮತ್ತು ರಿಷಬ್ ಶೆಟ್ಟಿ ನಿರೀಕ್ಷಣಾ ಜಾಮೀನು ಪಡೆದಿದ್ದಾರೆ. ಇದನ್ನೂ ಓದಿ: ಸಾಲು ಸಾಲು ಸಿನಿಮಾಗಳ ನಡುವೆ ಕಾವಿತೊಟ್ಟು ಅಚ್ಚರಿ ಮೂಡಿಸಿದ ಮಿಲ್ಕಿ ಬ್ಯೂಟಿ

    ರವಿವಾರವಷ್ಟೇ ‘ಕಾಂತಾರ’ ಸಿನಿಮಾದ ಶತದಿನೋತ್ಸವ ಆಚರಿಸಿದೆ ಚಿತ್ರತಂಡ. ಈ ವೇಳೆಯಲ್ಲಿ ‘ಕಾಂತಾರ 1’ ಸಿನಿಮಾದ ವಿಷಯವನ್ನೂ ಹಂಚಿಕೊಂಡಿದೆ. ಏಪ್ರಿಲ್ ಹೊತ್ತಿಗೆ ‘ಕಾಂತಾರ 1’ ಸಿನಿಮಾದ ಕೆಲವು ವಿಷಯಗಳನ್ನೂ ನಿರ್ದೇಶಕರು ಹಂಚಿಕೊಳ್ಳಲಿದ್ದಾರೆ. ಈಗಾಗಲೇ ಸ್ಕ್ರಿಪ್ಟ್ ಕೆಲಸದಲ್ಲಿ ಚಿತ್ರತಂಡ ತೊಡಗಿಕೊಂಡಿದೆ. ಆದರೂ, ವರಾಹ ರೂಪಂ ಹಾಡಿನ ಸಮಸ್ಯೆ ಬಗೆಹರಿದಿಲ್ಲ. ಮುಂದಿನ ದಿನಗಳಲ್ಲಿ ಯಾರ ಪರ ತೀರ್ಪು ಬರಬಹುದು ಎನ್ನುವುದು ಸದ್ಯಕ್ಕಿರುವ ಕುತೂಹಲವಷ್ಟೇ.

    ನ್ಯಾಯಾಲಯ ಹಾಕಿದ ಷರತ್ತುಗಳು :

    1. ಎರಡು ದಿನಗಳ ಕಾಲ ಅಂದರೆ ಫೆ.12 ಮತ್ತು 13 ರಂದು ವಿಚಾರಣೆಗಾಗಿ ತನಿಖಾಧಿಕಾರಿಗಳ ಮುಂದೆ ಹಾಜರಾಗಬೇಕು. ತನಿಖಾಧಿಕಾರಿಯು ಅವರನ್ನು ವಿಚಾರಣೆಗೆ ಒಳಪಡಿಸಿ, ಒಂದು ವೇಳೆ ಬಂಧಿಸಿದರೆ ನ್ಯಾಯವ್ಯಾಪ್ತಿಯ ನ್ಯಾಯಾಲಯಕ್ಕೆ ಹಾಜರು ಪಡಿಸಬೇಕು. ನಂತರ 50 ಸಾವಿರ ಬಾಂಡ್ ಹಾಗೂ ಇಬ್ಬರ ಶ್ಯೂರಿಟಿ ಮೇಲೆ ಕೋರ್ಟ್ ಜಾಮೀನು ನೀಡಬೇಕು.
    2. ಆರೋಪಿಗಳು ಅರ್ಜಿದಾರರನ್ನು ಹಾಗೂ ಸಾಕ್ಷಿಗಳನ್ನು ಬೆದರಿಸಬಾರದು ಮತ್ತು ಸಾಕ್ಷ್ಯ ನಾಶ ಮಾಡುವಂತಹ ಕೆಲಸಕ್ಕೆ ಕೈ ಹಾಕಬಾರದು. ಹಾಗೂ ತನಿಖೆಗೆ ಸಹಕರಿಸಬೇಕು.
    3. ನ್ಯಾಯಾಲಯದ ಪೂರ್ವಾನುಮತಿಯಿಲ್ಲದೇ ಆರೋಪಿಗಳು ಭಾರತವನ್ನು ತೊರೆಯುವಂತಿಲ್ಲ.
    4. ಜಾಮೀನು ಪಡೆದ ಸಮಯದಲ್ಲಿ ಆರೋಪಿಗಳು ಯಾವುದೇ ಅಪರಾಧದ ಕೃತ್ಯದಲ್ಲಿ ಭಾಗಿಯಾಗುವಂತಿಲ್ಲ. ಅಂತಹ ಘಟನೆಗಳು ನಡೆದಿರುವುದು ಕೋರ್ಟ್ ಗಮನಕ್ಕೆ ಬಂದರೆ, ಜಾಮೀನನ್ನು ರದ್ದುಗೊಳಿಸಲಾಗುವುದು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಸದ್ಯಕ್ಕಿಲ್ಲ ಶಾರುಖ್ ಖಾನ್ ಸಿನಿಮಾ ಎಂದ ವಿಜಯ್ ಕಿರಗಂದೂರು

    ಸದ್ಯಕ್ಕಿಲ್ಲ ಶಾರುಖ್ ಖಾನ್ ಸಿನಿಮಾ ಎಂದ ವಿಜಯ್ ಕಿರಗಂದೂರು

    ಗಾಗಲೇ ಸಾಕಷ್ಟು ಹಿಟ್ ಸಿನಿಮಾಗಳನ್ನು ನೀಡಿರುವ ಹೊಂಬಾಳೆ ಫಿಲ್ಮ್ಸ್, (Hombale Films) ಸದ್ಯದಲ್ಲೇ ಬಾಲಿವುಡ್ (Bollywood) ಸಿನಿಮಾವನ್ನು ನಿರ್ಮಾಣ ಮಾಡಲಿದೆ ಎನ್ನುವ ಸುದ್ದಿ ಇತ್ತು. ಅದರಲ್ಲೂ ಅವರು ಶಾರುಖ್ ಖಾನ್ ಜೊತೆ ಸಿನಿಮಾ ಮಾಡಲಿದ್ದಾರೆ ಎಂದು ಹೇಳಲಾಗಿತ್ತು. ಶಾರುಖ್ (Shah Rukh Khan)  ನಟನೆಯ ಪಠಾಣ್ ಸಿನಿಮಾ ಹಿಟ್ ಆಗುತ್ತಿದ್ದಂತೆಯೇ ಈ ಸುದ್ದಿ ಮತ್ತೆ ಮುನ್ನೆಲೆಗೆ ಬಂತು. ಈ ಕುರಿತು ನಿರ್ಮಾಪಕ ವಿಜಯ್ ಕಿರಗಂದೂರು (Vijay Kirgandur) ಸ್ಪಷ್ಟನೆಯನ್ನು ನೀಡಿದ್ದಾರೆ.

    ಪಠಾಣ್ ಸಿನಿಮಾ ಬಾಕ್ಸ್ ಆಫೀಸಿನಲ್ಲಿ ಕೋಟಿ ಕೋಟಿ ಬಾಚುತ್ತಿದ್ದಂತೆಯೇ, ಶಾರುಖ್ ನಟನೆಯ ಮುಂದಿನ ಚಿತ್ರಕ್ಕೆ ಹೊಂಬಾಳೆ ಫಿಲ್ಮ್ಸ್ ಹಣ ಹೂಡಲಿದೆ ಎನ್ನುವ ಸುದ್ದಿ ಹರಡಿತ್ತು. ಈ ಕುರಿತು ಮಾಧ್ಯಮವೊಂದರ ಜೊತೆ ಮಾತನಾಡಿರುವ ಕಿರಗಂದೂರು, ‘ಸದ್ಯ ಬಾಲಿವುಡ್ ಸಿನಿಮಾ ಮಾಡುವ ಆಲೋಚನೆ ನಮ್ಮ ಮುಂದಿಲ್ಲ. ಸದ್ಯ ನಾವು ದಕ್ಷಿಣದ ಸಿನಿಮಾಗಳಿಗೆ ಹಣ ಹೂಡಿದ್ದೇವೆ’ ಎಂದು ಹೇಳುವ ಮೂಲಕ ಸುದ್ದಿಯನ್ನು ಅಲ್ಲಗಳೆದಿದ್ದಾರೆ. ಪರೋಕ್ಷವಾಗಿ ತಾವು ಶಾರುಖ್ ಸಿನಿಮಾ ಮಾಡುತ್ತಿಲ್ಲ ಎನ್ನುವುದನ್ನು ಸ್ಪಷ್ಟ ಪಡಿಸಿದ್ದಾರೆ. ಇದನ್ನೂ ಓದಿ: ʻಘೋಸ್ಟ್ʼ ಸಿನಿಮಾದಲ್ಲಿ ಪತ್ರಕರ್ತೆಯಾದ ಕೆಜಿಎಫ್‌ ನಟಿ ಅರ್ಚನಾ ಜೋಯಿಸ್

    ಈಗಾಗಲೇ ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ನಲ್ಲಿ ಮಲೆಯಾಳಂ, ತೆಲುಗು ಮತ್ತು ತಮಿಳು ಸಿನಿಮಾವನ್ನು ಮಾಡಲಾಗುತ್ತಿದೆ. ದಕ್ಷಿಣದ ಅಷ್ಟೂ ಭಾಷೆಯ ಸಿನಿಮಾಗಳಿಗೆ ದುಡ್ಡು ಹಾಕಿದ ನಂತರ, ಮುಂದಿನ ಹೆಜ್ಜೆಯಾಗಿ ಬಾಲಿವುಡ್ ಗೂ ಅದು ಬಂಡವಾಳ ಹೂಡಲಿದೆ ಎಂದು ಹೇಳಲಾಗಿತ್ತು. ಆದರೆ, ಸದ್ಯಕ್ಕೆ ತಾವು ಬಾಲಿವುಡ್ ನತ್ತ ದೃಷ್ಟಿ ನೆಟ್ಟಿಲ್ಲ ಎಂದು ಹೇಳುವ ಮೂಲಕ ನಿರಾಸೆ ಮೂಡಿಸಿದ್ದಾರೆ ವಿಜಯ್ ಕಿರಗಂದೂರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k