Tag: ವಿಜಯ್ ಕಿರಗಂದೂರ್

  • ಯಶ್, ರಿಷಬ್ ಶೆಟ್ಟಿ ಒಟ್ಟಿಗೆ ನಟಿಸುತ್ತಾರಾ? ನಿರ್ಮಾಪಕ ಹೇಳಿದ್ದೇನು?

    ಯಶ್, ರಿಷಬ್ ಶೆಟ್ಟಿ ಒಟ್ಟಿಗೆ ನಟಿಸುತ್ತಾರಾ? ನಿರ್ಮಾಪಕ ಹೇಳಿದ್ದೇನು?

    ರಮಹಾಲಕ್ಷ್ಮಿ ಹಬ್ಬದಂದು (ಆ.16) ಹೊಂಬಾಳೆ ಸಂಸ್ಥೆ ಮುಡಿಗೆ 4 ರಾಷ್ಟ್ರೀಯ  ಪ್ರಶಸ್ತಿಗಳು ಸಿಕ್ಕಿದೆ. ಈ ಖುಷಿಯ ಸಂದರ್ಭದಲ್ಲಿ ಯಶ್ (Yash) ಮತ್ತು ರಿಷಬ್ ಶೆಟ್ಟಿ (Rishab Shetty) ಜೊತೆಯಾಗಿ ನಟಿಸುವ ಕುರಿತು ಪಬ್ಲಿಕ್‌ ಟಿವಿಗೆ ನಿರ್ಮಾಪಕ ವಿಜಯ್ ಕಿರಗಂದೂರ್‌ (Vijay Kirgandur) ಫಸ್ಟ್‌ ರಿಯಾಕ್ಷನ್‌ ಕೊಟ್ಟಿದ್ದಾರೆ. ಅವರಿಬ್ಬರೂ ಓಕೆ ಅಂದರೆ ನಾನು ನಿರ್ಮಾಣ ಮಾಡಲು ಸಿದ್ಧ ಎಂದಿದ್ದಾರೆ.

    ಮೊದಲಿಗೆ ಕನ್ನಡ ನಾಡಿನ ಜನತೆಗೆ ಧನ್ಯವಾದಗಳು. ರಾಷ್ಟ್ರ ಪ್ರಶಸ್ತಿ ಕರುನಾಡಿನ ಜನತೆಗೆ ಸೇರಬೇಕಾಗಿದೆ. ‘ಕಾಂತಾರ’ ಹೊಂಬಾಳೆ ಸಂಸ್ಥೆಯಲ್ಲಿ ಮೂಡಿ ಬಂದಿರುವ ಸಿನಿಮಾ. ಈ 4 ಪ್ರಶಸ್ತಿ ಬಂದಿರೋದ್ದಕ್ಕೆ ನಮಗೆ ತುಂಬಾ ಖುಷಿ ಆಗಿದೆ. ‘ಕೆಜಿಎಫ್’, ‘ಕಾಂತಾರ’ ಚಿತ್ರಗಳು ಎರಡರಲ್ಲೂ ತುಂಬಾ ಎಫರ್ಟ್ ಇತ್ತು. ವರಮಹಾಲಕ್ಷ್ಮಿ ಹಬ್ಬದ ದಿನ ಈ ಪ್ರಶಸ್ತಿ ಬಂದಿದೆ. ಮುಂದೆ ಇನ್ನೂ ಒಳ್ಳೆಯ ಸಿನಿಮಾ ಕೊಡ್ತೀವಿ ಎಂದು ವಿಜಯ್ ಕಿರಗಂದೂರ್ ಮಾತನಾಡಿದ್ದಾರೆ.

    ಈಗ ಪ್ರಶಸ್ತಿ ಬಂದ್ಮೇಲೆ ನಮಗೆ ಮತ್ತೆ ಜವಾಬ್ದಾರಿ ಹೆಚ್ಚಾಗಿದೆ. ‘ಕಾಂತಾರ’ ಲಾಸ್ಟ್ 20 ನಿಮಿಷ ರಿಷಬ್ ಶೆಟ್ಟಿ ತುಂಬಾ ಚೆನ್ನಾಗಿ ನಟಿಸಿದ್ದಾರೆ. ‘ಕಾಂತಾರ’ ಸಿನಿಮಾ ಪೂರ್ತಿ ಎಡಿಟ್ ಆದ್ಮೇಲೆ ನಮಗೆ ಆ ವೈಬ್ರೇಶನ್ ಗೊತ್ತಾಗಿದ್ದು, ಕಾಂತಾರ ಮೊದಲ ಭಾಗಕ್ಕಿಂತ ಎರಡನೇ ಭಾಗದಲ್ಲಿ ಜಾಸ್ತಿ ನಿರೀಕ್ಷೆ ಮಾಡಬಹುದು ಎಂದಿದ್ದಾರೆ ವಿಜಯ್. ‘ಕೆಜಿಎಫ್ 2′ ಸಿನಿಮಾ ಯಶ್ ಮತ್ತು ಪ್ರಶಾಂತ್ ನೀಲ್ ಕನಸಾಗಿತ್ತು. ಈಗ ಅವರಿಬ್ಬರ ಪ್ರಯತ್ನಕ್ಕೆ ಗೆಲುವಾಗಿದೆ. ಯಶ್ ಮತ್ತು ಪ್ರಶಾಂತ್ ಸಿನಿಮಾ ಯಾವ ರೀತಿ ಮಾಡಬೇಕು ಅಂತ ತುಂಬಾ ಮಾತಾಡಿಕೊಳ್ತಿದ್ದರು. ಇಂದು ಅವರಿಂದಲೇ `ಕೆಜಿಎಫ್ 2’ ಚಿತ್ರಕ್ಕೆ ಯಶಸ್ಸು ಸಿಕ್ಕಿದೆ. ಇದೊಂದು ಕನ್ನಡ ಚಿತ್ರರಂಗದಲ್ಲಿ ಒಳ್ಳೆಯ ಬೆಳವಣಿಗೆ ಎಂದಿದ್ದಾರೆ.

    ಯಶ್ ಮತ್ತು ರಿಷಬ್ ಶೆಟ್ಟಿ ಕಾಂಬಿನೇಷನ್‌ನಲ್ಲಿ ಚಿತ್ರ ನಿರ್ಮಾಣ ಮಾಡುತ್ತೀರಾ ಎಂದು ಕೇಳಾದ ಪ್ರಶ್ನೆಗೆ, ಇದು ನಟರಿಗೆ ಬಿಟ್ಟ ವಿಚಾರವಾಗಿದೆ. ಅವರಿಬ್ಬರು ಓಕೆ ಅಂದರೆ, ನಾನು ನಿರ್ಮಾಪಕನಾಗಿ ನಾನು ರೆಡಿ ಇದ್ದೇನೆ. ಅವರಿಬ್ಬರ ಕಾಂಬಿನೇಷನ್‌ನಲ್ಲಿ ಚಿತ್ರ ಮಾಡಿದ್ದರೆ ನಮಗೂ ಖುಷಿ ಎಂದು ಸಂತಸದಿಂದ ಎಂದು ಹೊಂಬಾಳೆ ಸಂಸ್ಥೆ ವಿಜಯ್ ಕಿರಗಂದೂರ್ ಮಾತನಾಡಿದ್ದಾರೆ.

    ಈ ವೇಳೆ, ‘ಕೆಜಿಎಫ್ 3’ ಮುಂದಿನ ದಿನಗಳಲ್ಲಿ ಬರುತ್ತದೆ. ಮುಂಬರುವ ದಿನಗಳಲ್ಲಿ ಜನರಿಗೆ ಏನು ಬೇಕು, ಆ ತರಹದ ಚಿತ್ರಗಳನ್ನ ನಮ್ಮ ಬ್ಯಾನರ್‌ನಲ್ಲಿ ಬರುತ್ತವೆ. ಕನ್ನಡ ಸಿನಿಮಾದಲ್ಲಿ ನಾವು ಎಲ್ಲಾ ಟೆಕ್ನಾಲಜಿ ಬಳಕೆ ಮಾಡಿಕೊಂಡಿದ್ದೀವಿ. ಅಂತರಾಷ್ಟ್ರೀಯಮಟ್ಟದಲ್ಲಿ ಮತ್ತೆ ಕನ್ನಡ ಚಿತ್ರರಂಗ ಹೋಗುತ್ತದೆ.

  • ‘ಕಾಂತಾರ 2’ ಸಿನಿಮಾ ಮಾಡಲು ಪಂಜುರ್ಲಿ ದೈವದಿಂದ ಸಿಕ್ತು ಅನುಮತಿ

    ‘ಕಾಂತಾರ 2’ ಸಿನಿಮಾ ಮಾಡಲು ಪಂಜುರ್ಲಿ ದೈವದಿಂದ ಸಿಕ್ತು ಅನುಮತಿ

    ರಿಷಬ್ ಶೆಟ್ಟಿ ನಿರ್ದೇಶನದಲ್ಲಿ ಕಾಂತಾರ 2 ಬರುತ್ತಾ ಎನ್ನುವ ಅನುಮಾನ ಎಲ್ಲರಲ್ಲಿತ್ತು. ದೈವಗಳ ಕುರಿತು ಸಿನಿಮಾ ಮಾಡಲು ಕೆಲವರು ಆಕ್ಷೇಪವನ್ನೂ ವ್ಯಕ್ತ ಪಡಿಸಿದ್ದರಿಂದ ‘ಕಾಂತಾರ 2’ ಬಗ್ಗೆ ಸಹಜವಾಗಿಯೇ ಕುತೂಹಲ ಕೂಡ ಮೂಡಿತ್ತು. ಹಾಗಾಗಿಯೇ ರಿಷಬ್ ಶೆಟ್ಟಿ ಪಂಜುರ್ಲಿ ದೈವದ ಮೊರೆ ಹೋಗಿದ್ದರು. ದೈವ ಹಲವು ಷರತ್ತುಗಳೊಂದಿಗೆ ಒಪ್ಪಿಗೆ ನೀಡಿದೆ ಎಂದು ತಿಳಿದು ಬಂದಿದೆ.

    ಮಂಗಳೂರು ನಗರ ಹೊರವಲಯದ ಬಂದಲೆಯ ಮನೆಯಲ್ಲಿ ನಡೆದ  ಪಂಜುರ್ಲಿ ಕೋಲದಲ್ಲಿ ಕಾಂತಾರ ಸಿನಿಮಾದ ನಿರ್ದೇಶಕ ರಿಷಬ್ ಶೆಟ್ಟಿ, ನಿರ್ಮಾಪಕ ವಿಜಯ್ ಕಿರಗಂದೂರ್, ನಾಯಕಿ ಗೌತಮಿ ಗೌಡ ಸೇರಿದಂತೆ ಬಹುತೇಕ ಸದಸ್ಯರು ಹಾಜರಿದ್ದರು. ಕದ್ರಿ ಮಂಜುನಾಥೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಕೃಷ್ಣ ಅಡಿಗ ಅವರ ನೇತೃತ್ವದಲ್ಲಿ ನಡೆದ ಅಣ್ಣಪ್ಪ ಪಂಜುರ್ಲಿ ಕೋಲಾದಲ್ಲಿ ಕಾಂತರ 2 ಸಿನಿಮಾ ಮಾಡುವ ಕುರಿತು ರಿಷಬ್ ಒಪ್ಪಿಗೆ ಕೇಳಿದ್ದರು. ಇದನ್ನೂ ಓದಿ: ಕರ್ನಾಟಕದ ಹುಡುಗಿಯ ಜೊತೆ ಸಲ್ಮಾನ್ ಖಾನ್‌ಗೆ ಪ್ಯಾರ್

    ಮಧ್ಯೆರಾತ್ರಿ ನಡೆದ ದೈವದ ಜೊತೆಗಿನ ಮಾತುಕತೆಯಲ್ಲಿ ದೈವ ಹಲವು ಸೂಚನೆಗಳ ಜೊತೆ ಸಿನಿಮಾ ಮಾಡಲು ಅನುಮತಿ ನೀಡಿದೆ ಎಂದು ಹೇಳಲಾಗುತ್ತಿದೆ. ಹಾಗಾಗಿ ಸಿನಿಮಾದ ಕಥೆ ಮಾಡಲು ರಿಷಬ್ ಶೆಟ್ಟಿ ಅಂಡ್ ಟೀಮ್ ಹುರುಪಿನಿಂದಲೇ ತಯಾರಾಗಿದೆ. ಈ ಕುರಿತು ಚಿತ್ರತಂಡ ಅಧಿಕೃತವಾಗಿ ಮಾಹಿತಿ ನೀಡಿದೇ ಇದ್ದರೂ, ಕೋಲದಲ್ಲಿ ಭಾಗವಹಿಸಿದ್ದ ಹಲವರು ಈ ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ.

    ಪಂಜುರ್ಲಿ ದೈವವು ಕೂಡ `ಕಾಂತಾರ 2′ ಮಾಡಲು ಅನುಮತಿ ನೀಡಿದೆ. ಜೊತೆಗೆ ಕೆಲವು ಸಲಹೆ ಮತ್ತು ಎಚ್ಚರಿಕೆಗಳನ್ನ ಕೂಡ ನೀಡಿದೆ. ಪಾರ್ಟ್ 2ನಲ್ಲಿ ಈ ಹಿಂದಿನ ಕಲಾವಿದರೇ ಮುಂದುವರೆಯಲಿದ್ದಾರೆ. ಇನ್ನೂ ಕಾಂತಾರ ಸಿನಿಮಾ ತಂಡದ ಜೊತೆ ರಿಷಬ್ ಕುಟುಂಬ ಕೂಡ ಕೋಲ ಕಾರ್ಯಕ್ರಮದಲ್ಲಿ ಭಾಗಿಯಾಗಿತ್ತು.

    Live Tv
    [brid partner=56869869 player=32851 video=960834 autoplay=true]

  • ಕೇಂದ್ರ ಸಚಿವ ಠಾಕೂರ್ ಭೇಟಿ ಮಾಡಿದ ‘ಕಾಂತಾರ’ ನಿರ್ಮಾಪಕ ವಿಜಯ್ ಕಿರಗಂದೂರ

    ಕೇಂದ್ರ ಸಚಿವ ಠಾಕೂರ್ ಭೇಟಿ ಮಾಡಿದ ‘ಕಾಂತಾರ’ ನಿರ್ಮಾಪಕ ವಿಜಯ್ ಕಿರಗಂದೂರ

    ಹೊಂಬಾಳೆ ಫಿಲ್ಮ್ಸ್ (Hombale Films) ಮೂಲಕ ಭಾರತೀಯ ಸಿನಿಮಾ ರಂಗಕ್ಕೆ ಉತ್ತಮ ಚಿತ್ರಗಳನ್ನು ನೀಡಿರುವ ನಿರ್ಮಾಪಕ ವಿಜಯ್ ಕಿರಗಂದೂರು (Vijay Kirgandur), ಇಂದು ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವ ಅನುರಾಗ್ ಠಾಕೂರ್ ಅವರನ್ನು ಭೇಟಿ ಮಾಡಿದ್ದಾರೆ. ಈ ಭೇಟಿಯಲ್ಲಿ ಸಿನಿಮಾ ರಂಗದ ಕುರಿತು ಹಲವು ವಿಚಾರಗಳನ್ನು ಸಚಿವರ ಜೊತೆ ಹಂಚಿಕೊಂಡಿರುವುದಾಗಿ ಅವರು ತಿಳಿಸಿದ್ದಾರೆ. ಅದೊಂದು ಅತ್ಯುತ್ತಮವಾದ ಭೇಟಿ ಆಗಿತ್ತು ಎಂದೂ ವಿಜಯ್ ಬರೆದುಕೊಂಡಿದ್ದಾರೆ.

    ಕೇಂದ್ರ ಸಚಿವರನ್ನು ಭೇಟಿ ಮಾಡಿದ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ವಿಜಯ್ ಕಿರಗಂದೂರ, ‘ಅನುರಾಗ್ ಠಾಕೂರ್ (Anurag Thakur) ಜೊತೆ ಭಾರತೀಯ ಸಿನಿಮಾ ರಂಗದ ಕುರಿತು ಚರ್ಚಿಸಲಾಯಿತು. ನಮ್ಮ ನೆಲದ ಸಂಸ್ಕೃತಿಯನ್ನು ಬಿಂಬಿಸುವಂತಹ, ಅದನ್ನು ಮುಂದುವರೆಸಿಕೊಂಡು ಹೋಗು ಸಾಧ್ಯತೆಯ ಕುರಿತಾಗಿ ಮಾತನಾಡಲಾಯಿತು. ಭಾರತೀಯ ಸಿನಿಮಾ ರಂಗದ ಕುರಿತಾದ ಸೂಕ್ಷ್ಮ ಒಳನೋಟ ಈ ವಿಷಯದಲ್ಲಿ ಇತ್ತು’ ಎಂದು ಅವರು ಬರೆದುಕೊಂಡಿದ್ದಾರೆ. ಇದನ್ನೂ ಓದಿ:‘ಆದಿಪುರುಷ್’ ಸಿನಿಮಾ ಟೀಮ್ ಮೇಲೆ ಬಿತ್ತು ಕೇಸ್: ಅ.27ಕ್ಕೆ ವಿಚಾರಣೆ ನಿಗದಿ

    ಕನ್ನಡ ಸಿನಿಮಾ ರಂಗಕ್ಕೆ ಗೆಲುವಿನ ಚಿತ್ರಗಳನ್ನು ಕೊಟ್ಟ ಹೆಗ್ಗಳಿಕೆ ವಿಜಯ್ ಕಿರಗಂದೂರ ಅವರದ್ದು. ಇವರ ಬ್ಯಾನರ್ ನಲ್ಲಿ ಮೂಡಿ ಬಂದ ಕೆಜಿಎಫ್ 2 ಸಿನಿಮಾ ಐತಿಹಾಸಿಕ ದಾಖಲೆ ಮಾಡಿತು. ಅಲ್ಲದೇ, ಈಗ ಬಿಡುಗಡೆ ಆಗಿರುವ ಕಾಂತಾರ ಸಿನಿಮಾ ಕೂಡ ಬಾಕ್ಸ್ ಆಫೀಸ್ ನಲ್ಲಿ ಧೂಳ್ ಎಬ್ಬಿಸುತ್ತಿದೆ. ಕನ್ನಡದಲ್ಲಿ ಮಾತ್ರವಲ್ಲ, ಹಲವು ಭಾಷೆಗಳಲ್ಲೂ ಈ ಸಿನಿಮಾವನ್ನು ರಿಲೀಸ್ ಮಾಡುತ್ತಿದ್ದಾರೆ ಹೊಂಬಾಳೆ ಫಿಲ್ಮ್ಸ್.

    ನಾಳೆಯಿಂದ ಕಾಂತಾರ (Kantara) ಸಿನಿಮಾ ಬಾಲಿವುಡ್ (Bollywood) ನಲ್ಲಿ ಬಿಡುಗಡೆ ಆಗುತ್ತಿದೆ. ಈ ಸಿನಿಮಾದ ಪ್ರಮೋಷನ್‍ಗಾಗಿ ಇಡೀ ತಂಡ ಮುಂಬೈನಲ್ಲಿ ಬೀಡು ಬಿಟ್ಟಿದೆ. ಇದೇ ಸಂದರ್ಭದಲ್ಲೇ ಕೇಂದ್ರ ಸಚಿವರನ್ನು ವಿಜಯ್ ಅವರು ಭೇಟಿ ಮಾಡಿ, ಭಾರತೀಯ ಸಿನಿಮಾ ರಂಗದ ಬಗ್ಗೆ ಮಾತನಾಡಿದ್ದಾರೆ. ಅದನ್ನು ಸೋಷಿಯಲ್ ಮೀಡಿಯಾ ಮೂಲಕ ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • 400 ಚಿತ್ರಮಂದಿರಗಳಲ್ಲಿ 50 ದಿನ ಪೂರೈಸಿದ ಕೆಜಿಎಫ್ 2 : ಆದರೂ, ಯಶ್ ಅಭಿಮಾನಿಗಳಿಗೆ ನಿರಾಸೆ

    400 ಚಿತ್ರಮಂದಿರಗಳಲ್ಲಿ 50 ದಿನ ಪೂರೈಸಿದ ಕೆಜಿಎಫ್ 2 : ಆದರೂ, ಯಶ್ ಅಭಿಮಾನಿಗಳಿಗೆ ನಿರಾಸೆ

    ಶ್ ಮತ್ತು ಪ್ರಶಾಂತ್ ನೀಲ್ ಕಾಂಬಿನೇಷನ್ ನ ‘ಕೆಜಿಎಫ್ 2’ ಸಿನಿಮಾ ಬಿಡುಗಡೆ ಆಗಿ ಇಂದಿಗೆ 50 ದಿನಗಳನ್ನು ಪೂರೈಸಿದೆ. ವಿಶ್ವದಾದ್ಯಂತ 400 ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಈ ಸಿನಿಮಾ 50 ದಿನಗಳನ್ನು ಪೂರೈಸುತ್ತಿದೆ ಎಂದು ಹೊಂಬಾಳೆ ಫಿಲ್ಮ್ಸ್ ಘೋಷಿಸಿದೆ. ಬಾಕ್ಸ್ ಆಫೀಸಿನಲ್ಲೂ ದಾಖಲೆ ಬರೆದ ಈ ಸಿನಿಮಾ 100 ದಿನಗಳತ್ತ ಮುನ್ನುಗ್ಗುತ್ತಿದೆ. ಇದನ್ನೂ ಓದಿ :  ಪಠ್ಯಪುಸ್ತಕದಲ್ಲಿ ನಮ್ಮ ರಾಜರ ಬಗ್ಗೆ 2 ಸಾಲು, ಮೊಘಲರ ಬಗ್ಗೆ ಜಾಸ್ತಿ ಉಲ್ಲೇಖ: ಅಕ್ಷಯ್ ಕುಮಾರ್

    KGF 2 Prakash raj (4)

    50ನೇ ದಿನದ ಸಂಭ್ರಮದಲ್ಲಿ ಯಶ್ ಅಭಿಮಾನಿಗಳು ವಿಶೇಷ ಸುದ್ದಿಯೊಂದಕ್ಕಾಗಿ ಕಾದಿದ್ದರು. ಇವರ ಹೊಸ ಸಿನಿಮಾ ಇಂದು ಘೋಷಣೆ ಆಗಲಿದೆ ಎಂದು ಸುದ್ದಿಯಾಗಿದ್ದರಿಂದ,  ಈ ಸಿನಿಮಾದ ಕುರಿತು ಯಾವೆಲ್ಲ ಮಾಹಿತಿಗಳು ಹೊರ ಬೀಳಲಿವೆ ಎಂದು ಕುತೂಹಲಗೊಂಡಿದ್ದರು. ಆದರೆ, ಅಂತಹ ಯಾವುದೇ ಸುದ್ದಿಯು ಇಂದು ಹೊರ ಬಂದಿಲ್ಲ. ಹಾಗಾಗಿ ಸಹಜವಾಗಿಯೇ ಯಶ್ ಅಭಿಮಾನಿಗಳು ನಿರಾಸೆಗೊಂಡಿದ್ದಾರೆ. ಇದನ್ನೂ ಓದಿ : ಪತ್ನಿ ವಿರುದ್ಧ ಹೂಡಿದ್ದ ಮಾನನಷ್ಟ ಮೊಕದ್ದಮೆಯಲ್ಲಿ ಗೆದ್ದ ಹಾಲಿವುಡ್ ಸ್ಟಾರ್ ನಟ ಜಾನಿ ಡೆಪ್ : ನೂರಾರು ಕೋಟಿ ಪರಿಹಾರ

    50ನೇ ದಿನ ಪೂರೈಸಿದ ಹಿನ್ನೆಲೆಯಲ್ಲಿ ಸಿನಿಮಾ ನೋಡುಗರಿಗೆ ಗುಡ್ ನ್ಯೂಸ್ ಕೂಡ ನೀಡಿದೆ ಚಿತ್ರತಂಡ. ನಾಳೆಯಿಂದ ಕೆಜಿಎಫ್ 2 ಸಿನಿಮಾ ಓಟಿಟಿಯಲ್ಲಿ ಲಭ್ಯವಿದೆ. ಥಿಯೇಟರ್ ಗೆ ಬಂದು ಸಿನಿಮಾವನ್ನು ಕಣ್ತುಂಬಿಕೊಳ್ಳದವರು ಮನೆಯಲ್ಲೇ ಕೂತು ಓಟಿಟಿಯಲ್ಲಿ ವೀಕ್ಷಿಸಬಹುದಾಗಿದೆ. ಅಲ್ಲಿಯೂ ದಾಖಲೆ ಬರೆಯುವ ಮುನ್ಸೂಚನೆಗಳು ದಟ್ಟವಾಗಿದೆ. ಇದನ್ನೂ ಓದಿ : ಸರಾಯಿ ಜೊತೆ ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ನಟಿ

    ಕೆಜಿಎಫ್ 2 ಹಿಂದಿಯಲ್ಲಿ ಭಾರೀ ಯಶಸ್ಸು ಕಂಡಿದ್ದು, 440 ಕೋಟಿಗೂ ಅಧಿಕ ಹಣ ಕೇವಲ ಬಾಲಿವುಡ್ ನಿಂದ ಬಂದಿದೆ ಎಂದು ಹೇಳಲಾಗುತ್ತಿದೆ. ಇತರ ಭಾಷೆಯೂ ಸೇರಿದಂತೆ ಸಾವಿರಾರು ಕೋಟಿಯನ್ನು ಗಳಿಸುವ ಮೂಲಕ ಕೆಜಿಎಫ್ 2 ದಾಖಲೆ ಬರೆದಿದೆ.

  • ಮತ್ತೆ ಜೋಡಿಯಾಗಿ ಮಿಂಚಲು ರೆಡಿಯಾದ್ರು ಡಾಲಿ-ಅಮೃತಾ: `ಹೊಯ್ಸಳ’ನಾಗಿ ಡಾಲಿ ಅಬ್ಬರ!

    ಮತ್ತೆ ಜೋಡಿಯಾಗಿ ಮಿಂಚಲು ರೆಡಿಯಾದ್ರು ಡಾಲಿ-ಅಮೃತಾ: `ಹೊಯ್ಸಳ’ನಾಗಿ ಡಾಲಿ ಅಬ್ಬರ!

    ಸ್ಯಾಂಡಲ್‌ವುಡ್‌ನಲ್ಲಿ ಹವಾ ಕ್ರಿಯೇಟ್ ಮಾಡಿದ್ದ `ಬಡವ ರಾಸ್ಕಲ್’ ಜೋಡಿ ಮತ್ತೆ ತೆರೆಯ ಮೇಲೆ ಒಂದಾಲು ಸಜ್ಜಾಗಿದ್ದಾರೆ. ಈ ಬಾರಿ ಹೊಯ್ಸಳನಾಗಿ ಡಾಲಿ ಮಿಂಚಲಿದ್ದಾರೆ. ಸದ್ಯ `ಹೊಯ್ಸಳ’ ಚಿತ್ರತಂಡ ಅದ್ದೂರಿಯಾಗಿ ಮುಹೂರ್ತ ನೆರೆವೇರಿಕೊಂಡಿದೆ.

    ವಿಜಯ್ ಕಿರಗಂದೂರ್ ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಅಡಿಯಲ್ಲಿ ಡಾಲಿ ಧನಂಜಯ ನಾಯಕರಾಗಿ ನಟಿಸುತ್ತಿರುವ `ಹೊಯ್ಸಳ’ ಚಿತ್ರದ ಮುಹೂರ್ತ ಸಮಾರಂಭ ಕಂಠೀರವ ಸ್ಟುಡಿಯೋದಲ್ಲಿ ಅದ್ದೂರಿಯಾಗಿ ನಡೆಯಿತು. ಡಾಲಿಗೆ ನಾಯಕಿಯಾಗಿ ಅಮೃತಾ ಸ್ಕ್ರೀನ್‌ ಶೇರ್‌ ಮಾಡಲಿದ್ದಾರೆ.

    ವಿಜಯ್ ಎನ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ `ಹೊಯ್ಸಳ’ ಚಿತ್ರದಲ್ಲಿ ಡಿಫರೆಂಟ್ ರೋಲ್‌ನಲ್ಲಿ ಡಾಲಿ ಮಿಂಚಲಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ಕಾರ್ತಿಕ್ ಎಸ್ ಛಾಯಾಗ್ರಹಣವಿದೆ. ಚಿತ್ರದಲ್ಲಿ ಅಚ್ಯುತಕುಮಾರ್, ನವೀನ್ ಶಂಕರ್, ಅವಿನಾಶ್, ರಾಜೇಶ್ ನಟರಂಗ ಹಾಗೂ ನಾಗಭೂಷಣ್ ಸಾಥ್ ನೀಡಲಿದ್ದಾರೆ. ಇದನ್ನೂ ಓದಿ: Love…ಲಿ ಅಂತಿದ್ದಾರೆ ಆಂಗ್ರಿ ಯಂಗ್ ಮ್ಯಾನ್ ವಸಿಷ್ಠ ಸಿಂಹ: ಚಿಟ್ಟೆ ನ್ಯೂ ಲುಕ್‌ ಹೇಗಿದೆ ಗೊತ್ತಾ?

    `ಪಾಪ್ ಕಾರ್ನ್ ಮಂಕಿ ಟೈಗರ್’ ಮತ್ತು `ಬಡವ ರಾಸ್ಕಲ್’ ನಂತರ ಡಾಲಿ ಮತ್ತು ಅಮೃತಾ ಜೋಡಿ ಮತ್ತೆ ಒಟ್ಟಿಗೆ ತೆರೆ ಹಂಚಿಕೊಳ್ತಿರೋದು ಅಭಿಮಾನಿಗಳಲ್ಲಿ ನಿರೀಕ್ಷೆ ಹೆಚ್ಚಿಸಿದೆ. ಡಾಲಿಯನ್ನ ಹೊಯ್ಸಳನಾಗಿ ನೋಡಲು ಅಭಿಮಾನಿಗಳು ಕಾಯ್ತಿದ್ದಾರೆ.

  • ಕೆಜಿಎಫ್ 2 ಟ್ರೈಲರ್: ತಮಿಳಿನಲ್ಲಿ ಸೂರ್ಯ, ತೆಲುಗಿನಲ್ಲಿ ರಾಮ್ ಚರಣ್ ತೇಜ್ ರಿಲೀಸ್

    ಕೆಜಿಎಫ್ 2 ಟ್ರೈಲರ್: ತಮಿಳಿನಲ್ಲಿ ಸೂರ್ಯ, ತೆಲುಗಿನಲ್ಲಿ ರಾಮ್ ಚರಣ್ ತೇಜ್ ರಿಲೀಸ್

    ಇಂದು ಸಂಜೆ 6.40ಕ್ಕೆ ಯಶ್ ನಟನೆಯ ಕೆಜಿಎಫ್ 2 ಸಿನಿಮಾದ ಟ್ರೈಲರ್ ಬಿಡುಗಡೆ ಆಗಲಿದೆ. ಐದು ಭಾಷೆಗಳಲ್ಲಿ ಈ ಸಿನಿಮಾ ಬಿಡುಗಡೆ ಆಗುತ್ತಿದ್ದು, ಹಾಗಾಗಿ ಐದು ಭಾಷೆಯಲ್ಲೂ ಏಕಕಾಲಕ್ಕೆ ಟ್ರೈಲರ್ ರಿಲೀಸ್ ಮಾಡಲು ಸಿದ್ಧತೆ ಮಾಡಿಕೊಂಡಿದ್ದಾರೆ ನಿರ್ದೇಶಕ ಪ್ರಶಾಂತ್ ನೀಲ್. ಇದನ್ನು ಓದಿ : ಚಂದನವನ ವಿಮರ್ಶಕರ ಪ್ರಶಸ್ತಿ: ರಾಜ್ ಬಿ ಶೆಟ್ಟಿ ಅತ್ಯುತ್ತಮ ನಟ, ಗಾನವಿ ಲಕ್ಷ್ಮಣ್ ನಟಿ, ಉಳಿದ ಪ್ರಶಸ್ತಿ ವಿವರ

    ತೆಲುಗಿನ ಖ್ಯಾತ ನಟ ರಾಮ್ ಚರಣ್ ತೇಜ ಕೆಜಿಎಫ್‍ 2 ತೆಲುಗು ಸಿನಿಮಾದ ಟ್ರೈಲರ್ ರಿಲೀಸ್ ಮಾಡಿದರೆ, ತಮಿಳಿನ ಖ್ಯಾತ ನಟ ಸೂರ್ಯ ಕೆಜಿಎಫ್ 2 ತಮಿಳು ಸಿನಿಮಾದ ಟ್ರೈಲರ್ ಬಿಡುಗಡೆ ಮಾಡಲಿದ್ದಾರೆ. ಈ ಟ್ರೈಲರ್ ರಿಲೀಸ್ ಅನ್ನು ವಿಶೇಷ ರೀತಿಯಲ್ಲಿ ಬಿಡುಗಡೆಗೆ ಸಿದ್ಧತೆ ಮಾಡಿಕೊಂಡಿದ್ದು, ಯಶ್ ಅಭಿಮಾನಿಗಳು ರಾಜ್ಯದ ನಾನಾ ಕಡೆ ಹಬ್ಬದಂತೆ ಆಚರಿಸುತ್ತಿದ್ದಾರೆ. ಇದನ್ನೂ ಓದಿ : ಕಾಂಗ್ರೆಸ್ ಅವಧಿಯಲ್ಲಿ ನಡೆದ ಭಯೋತ್ಪಾದನೆ ತಿಳಿಯಲು ‘ದಿ ಕಾಶ್ಮೀರ್ ಫೈಲ್ಸ್’ ನೋಡಿ: ಅಮಿತ್ ಶಾ

    ಅವತ್ತು ಬೆಂಗಳೂರಿಗೆ ಪ್ರತಿಷ್ಠತ ಸ್ಟಾರ್ ಹೋಟೆಲ್ ನಲ್ಲಿ ಕೇವಲ ಮಾಧ್ಯಮ ಗೋಷ್ಠಿ ಮಾಡುವ ಮೂಲಕ ಟ್ರೇಲರ್ ಬಿಡುಗಡೆ ಆಗುತ್ತಿದ್ದು ಭಾರತೀಯ ಭಾಷೆಯ 180ಕ್ಕೂ ಹೆಚ್ಚು ಬೇರೆ ಭಾಷೆಯ ಪತ್ರಕರ್ತರು ಅಂದು ಟ್ರೇಲರ್ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ. ಸಂಜೆ 6.45ಕ್ಕೆ ಟ್ರೇಲರ್ ಬಿಡುಗಡೆ ಆಗಲಿದ್ದು, ಚಿತ್ರತಂಡದ ಪ್ರಮುಖ ಕಲಾವಿದರು, ತಂತ್ರಜ್ಞರು ಮತ್ತು ಕನ್ನಡದ ಹೆಸರಾಂತ ನಟರು ಹಾಗೂ ಮಂತ್ರಿಗಳು ಈ ಕಾರ್ಯಕ್ರಮದಲ್ಲಿ ಹಾಜರಿರಲಿದ್ದಾರೆ. ಇದನ್ನೂ ಓದಿ: ಫ್ಯಾನ್ಸ್ ಜೊತೆ ‘ಜೇಮ್ಸ್’ ವೀಕ್ಷಿಸಿದ ಶಿವಣ್ಣ ದಂಪತಿ – ಏನ್ ಹೇಳಲಿ ನನ್ನ ತಮ್ಮನ ಆ್ಯಕ್ಟಿಂಗ್ ಬಗ್ಗೆ

    ಅತಿಥಿಗಳು ಯಾರು?

    ಟ್ರೇಲರ್ ಬಿಡುಗಡೆ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ್ ಮತ್ತು ಶಿವರಾಜ್ ಕುಮಾರ್ ಆಗಮಿಸುತ್ತಿದ್ದು, ಸಿನಿಮಾದ ಕಲಾವಿದರಾದ ಬಾಲಿವುಡ್ ನಟ ಸಂಜಯ್ ದತ್, ಮಲಯಾಳಂ ಹೆಸರಾಂತ ನಟ ಪೃಥ್ವಿರಾಜ್, ಬಾಲಿವುಡ್ ನಟಿ ರವೀನಾ ಟಂಡನ್, ನಟ ಯಶ್, ನಟಿ ಶ್ರೀನಿಧಿ ಶೆಟ್ಟಿ, ನಿರ್ದೇಶಕ ಪ್ರಶಾಂತ್ ನೀಲ್, ಸಂಗೀತ ನಿರ್ದೇಶಕ ರವಿ ಬಸ್ರೂರು, ನಿರ್ಮಾಪಕ ವಿಜಯ ಕಿರಗಂದೂರು ಟ್ರೇಲರ್ ಬಿಡುಗಡೆ ಸಂದರ್ಭದಲ್ಲಿ ವೇದಿಕೆಯ ಮೇಲೆ ಇರಲಿದ್ದಾರೆ. ಇದನ್ನು ಓದಿ : ಮತ್ತೆ ನಟನೆಗೆ ಮರಳಿದ ಮಾಲಾಶ್ರೀ

    7 ಸಾವಿರ ಚಿತ್ರಮಂದಿರದಲ್ಲಿ ಸಿನಿಮಾ ರಿಲೀಸ್

    ಕೆಜಿಎಫ್ 2 ಸಿನಿಮಾ ಕನ್ನಡ, ಮಲಯಾಳಂ, ಹಿಂದಿ, ತಮಿಳು ಮತ್ತು ತೆಲುಗಿನಲ್ಲಿ ಬಿಡುಗಡೆ ಆಗುತ್ತಿದ್ದು ವಿಶ್ವದಾದ್ಯಂತ ಏಳು ಸಾವಿರಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ರಿಲೀಸ್ ಮಾಡುವ ಪ್ಲ್ಯಾನ್ ಮಾಡಲಾಗಿದೆ ಅಂತಾರೆ ನಿರ್ಮಾಪಕ ವಿಜಯ್ ಕಿರಗಂದೂರು. ಕರ್ನಾಟಕದಲ್ಲೇ 450ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ರಿಲೀಸ್ ಆದರೆ, ತಮಿಳಿನಲ್ಲಿ ಸಾವಿರಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಕೆಜಿಎಫ್ 2 ಪ್ರದರ್ಶನ ಕಾಣಲಿದೆ. ಹಾಗೆಯೇ ವಿವಿಧ ಭಾಷೆಯ ಚಿತ್ರಮಂದಿರಗಳಲ್ಲಿ ಸಾವಿರ ಸಾವಿರ ಥಿಯೇಟರ್ ನಲ್ಲಿ ಈ ಸಿನಿಮಾ ರಿಲೀಸ್ ಆಗುತ್ತಿರುವುದು ವಿಶೇಷ.

  • ಕೆಜಿಎಫ್ 2 ಟ್ರೈಲರ್ ಬಿಡುಗಡೆಗೆ ಹೋಸ್ಟ್ ಮಾಡಲಿದ್ದಾರೆ ಕರಣ್ ಜೋಹಾರ್

    ಕೆಜಿಎಫ್ 2 ಟ್ರೈಲರ್ ಬಿಡುಗಡೆಗೆ ಹೋಸ್ಟ್ ಮಾಡಲಿದ್ದಾರೆ ಕರಣ್ ಜೋಹಾರ್

    ಬಾಲಿವುಡ್ ನ ಖ್ಯಾತ ನಿರ್ದೇಶಕ, ನಿರ್ಮಾಪಕ, ಬರಹಗಾರ, ಕಲಾವಿದ ಕರಣ್ ಜೋಹಾರ್ ರವಿವಾರ ಬೆಂಗಳೂರಿಗೆ ಬಂದು ಇಳಿಯಲಿದ್ದಾರೆ. ಇದೇ ಮೊದಲ ಬಾರಿಗೆ ಅವರು ಕನ್ನಡ ಸಿನಿಮಾವೊಂದರ ಕಾರ್ಯಕ್ರಮವನ್ನು ಹೋಸ್ಟ್ ಮಾಡಲಿದ್ದಾರೆ. ಈಗಾಗಲೇ ಬಾಲಿವುಡ್ ನಲ್ಲಿ ಸಾಕಷ್ಟು ಪ್ರತಿಷ್ಠಿತ ಕಾರ್ಯಕ್ರಮಗಳಲ್ಲಿ ನಿರೂಪಣೆ ಮಾಡಿರುವ ಅವರು ಇದೇ ಮೊದಲ ಬಾರಿಗೆ ಕನ್ನಡದ ಪ್ಯಾನ್ ಇಂಡಿಯಾ ಚಿತ್ರವೊಂದಕ್ಕೆ ಹೋಸ್ಟ್ ಮಾಡುತ್ತಿರುವುದು ಇದೇ ಮೊದಲು. ಇದನ್ನೂ ಓದಿ : RRR- ಸ್ಟಾರ್ ವಾರ್ ಬೆಂಕಿಗೆ ತಣ್ಣನೆಯ ನೀರು ಸುರಿದ ನಿರ್ದೇಶಕ ರಾಜಮೌಳಿ

    ಯಶ್ ನಟನೆಯ ‘ಕೆಜಿಎಫ್ 2’ ಸಿನಿಮಾದ ಟ್ರೈಲರ್ ಇದೇ ರವಿವಾರ ಮಾರ್ಚ್ 27ರಂದು ಬಿಡುಗಡೆ ಆಗುತ್ತಿದ್ದು, ಈ ಕಾರ್ಯಕ್ರಮದ ನಿರೂಪಣೆಯ ಜವಾಬ್ದಾರಿಯನ್ನು ಕರಣ್ ಜೋಹಾರ್ ಹೊತ್ತುಕೊಂಡಿದ್ದಾರೆ. ಸಂಜೆ 6.45ಕ್ಕೆ ಟ್ರೇಲರ್ ಬಿಡುಗಡೆ ಆಗಲಿದ್ದು, ಚಿತ್ರತಂಡದ ಪ್ರಮುಖ ಕಲಾವಿದರು, ತಂತ್ರಜ್ಞರು ಮತ್ತು ಕನ್ನಡದ ಹೆಸರಾಂತ ನಟರು ಹಾಗೂ ಮಂತ್ರಿಗಳು ಈ ಕಾರ್ಯಕ್ರಮದಲ್ಲಿ ಹಾಜರಿರಲಿದ್ದಾರೆ. ಇದನ್ನೂ ಓದಿ : RRR ಸಿನೆಮಾ ನೋಡಲು ಬಾಗಿಲು ಮುರಿದು ಚಿತ್ರಮಂದಿರಕ್ಕೆ ನುಗ್ಗಿದ ಪ್ರೇಕ್ಷಕರು

    ಯಶ್ ನಟನೆಯ ಪ್ಯಾನ್ ಇಂಡಿಯಾ ಸಿನಿಮಾ ಏ.14 ರಂದು ವಿಶ್ವದಾದ್ಯಂತ ಬಿಡುಗಡೆ ಆಗುತ್ತಿದೆ. ಕನ್ನಡ, ತಮಿಳು, ತೆಲುಗು, ಮಲಯಾಳ ಮತ್ತು ಹಿಂದಿಯಲ್ಲಿ ಈ ಸಿನಿಮಾ ಏಕಕಾಲಕ್ಕೆ ರಿಲೀಸ್ ಆಗುತ್ತಿದ್ದು, ಅದಕ್ಕೂ ಮುನ್ನ ಮಾ.27ರಂದು ಚಿತ್ರದ ಟ್ರೇಲರ್ ಬಿಡುಗಡೆ ಮಾಡಲು ಸಿನಿಮಾ ತಂಡ ಸಿದ್ಧತೆ ಮಾಡಿಕೊಂಡಿದೆ. ಅವತ್ತು ಬೆಂಗಳೂರಿಗೆ ಪ್ರತಿಷ್ಠತ ಸ್ಟಾರ್ ಹೋಟೆಲ್ ನಲ್ಲಿ ಕೇವಲ ಮಾಧ್ಯಮ ಗೋಷ್ಠಿ ಮಾಡುವ ಮೂಲಕ ಟ್ರೇಲರ್ ಬಿಡುಗಡೆ ಆಗುತ್ತಿದ್ದು ಭಾರತೀಯ ಭಾಷೆಯ 180ಕ್ಕೂ ಹೆಚ್ಚು ಬೇರೆ ಭಾಷೆಯ ಪತ್ರಕರ್ತರು ಅಂದು ಟ್ರೇಲರ್ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ. ಇದನ್ನೂ ಓದಿ: RRR ಬ್ಯಾನ್ ಮಾಡಿದ್ರೆ ಕೆಜಿಎಫ್‍ಗಿದೆ ಕಂಟಕ

    ಟ್ರೇಲರ್ ಬಿಡುಗಡೆ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ್ ಮತ್ತು ಶಿವರಾಜ್ ಕುಮಾರ್ ಆಗಮಿಸುತ್ತಿದ್ದು, ಸಿನಿಮಾದ ಕಲಾವಿದರಾದ ಬಾಲಿವುಡ್ ನಟ ಸಂಜಯ್ ದತ್, ಮಲಯಾಳಂ ಹೆಸರಾಂತ ನಟ ಪೃಥ್ವಿರಾಜ್, ಬಾಲಿವುಡ್ ನಟಿ ರವೀನಾ ಟಂಡನ್, ನಟ ಯಶ್, ನಟಿ ಶ್ರೀನಿಧಿ ಶೆಟ್ಟಿ, ನಿರ್ದೇಶಕ ಪ್ರಶಾಂತ್ ನೀಲ್, ಸಂಗೀತ ನಿರ್ದೇಶಕ ರವಿ ಬಸ್ರೂರು, ನಿರ್ಮಾಪಕ ವಿಜಯ ಕಿರಗಂದೂರು ಟ್ರೇಲರ್ ಬಿಡುಗಡೆ ಸಂದರ್ಭದಲ್ಲಿ ವೇದಿಕೆಯ ಮೇಲೆ ಇರಲಿದ್ದಾರೆ.

  • ಕೆಜಿಎಫ್ 2 ನಿರ್ಮಾಪಕರಿಗೇ ಚಮಕ್ ಕೊಟ್ಟ ಫ್ಯಾನ್ಸ್ : ಮೋದಿ ಪತ್ರದ ಅಸಲಿಯತ್ತೇನು?

    ಕೆಜಿಎಫ್ 2 ನಿರ್ಮಾಪಕರಿಗೇ ಚಮಕ್ ಕೊಟ್ಟ ಫ್ಯಾನ್ಸ್ : ಮೋದಿ ಪತ್ರದ ಅಸಲಿಯತ್ತೇನು?

    ಕೆಜಿಎಫ್ 2 ಸಿನಿಮಾದ ನಿರ್ಮಾಪಕ ವಿಜಯ್ ಕಿರಗಂದೂರ್ ಅವರಿಗೆ ಖುದ್ದು ಪ್ರಧಾನಿ ನರೇಂದ್ರ ಮೋದಿ ಅವರೇ ಪತ್ರ ಬರೆದು, ಸಿನಿಮಾದ ಅಪ್ ಡೇಟ್ ಕೇಳಿ ಬೆಚ್ಚಿ ಬೀಳಿಸಿದ್ದಾರೆ. ಹೌದು, “ಕೆಜಿಎಫ್ 2 ಸಿನಿಮಾದ ಅಪ್ ಡೇಟ್ ಏನು? ಮಿಲಿಯನ್ ಗಟ್ಟಲೇ ಅಭಿಮಾನಿಗಳು ಈ ಸಿನಿಮಾದ ಕುರಿತು ತಿಳಿದುಕೊಳ್ಳಲು ಕಾತುರರಾಗಿದ್ದಾರೆ. ಕೂಡಲೇ ಅಪ್ ಡೇಟ್ ನೀಡಬೇಕು” ಎಂದು ಪ್ರಧಾನ ಮಂತ್ರಿಗಳ ಲೆಟರ್ ಹೆಡ್ ನಲ್ಲಿಯ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಯಿತು. ಇದನ್ನೂ ಓದಿ : ಅಶರೀರವಾಣಿ ಆಲ್ಬಂಗೆ ನೀನಾಸಂ ಸತೀಶ್ ಸಿಂಗರ್ : ಮಗಳೊಂದಿಗೆ ಹಾಡಿದ ಸ್ಟಾರ್ ನಟ

    ಸುಮ್ಮನೆ ಇದ್ದರೆ ಈ ಪತ್ರಕ್ಕೆ ಅಷ್ಟೊಂದು ಮಹತ್ವ ಬರುತ್ತಿತ್ತೋ ಇಲ್ಲವೋ? ಆದರೆ, ಹೊಂಬಾಳೆ ಫಿಲ್ಮ್ಸ್ ಟಿಟ್ವರ್ ಖಾತೆಯಿಂದ ಅದಕ್ಕೆ ಪ್ರತಿಕ್ರಿಯೆ ಕೂಡ ಬಂತು. ಹಾಗಾಗಿ ಅಭಿಮಾನಿಗಳಿಗೆ ಕುತೂಹಲ ಹೆಚ್ಚಾಯಿತು. ಅರೇ, ಪ್ರಧಾನಿ ಅವರೇ ಅಪ್ ಡೇಟ್ ಕೇಳಿದ್ರಾ ಎನ್ನುವ ಅಚ್ಚರಿ ಬೇರೆ. ಇದನ್ನೂ ಓದಿ : ನಾನು ರಾಧಿಕಾ ಕುಮಾರಸ್ವಾಮಿ’.. ನಿಮ್ಮೊಂದಿಗೆ..

    ಪ್ರಧಾನಿ ಅವರ ಲೆಟರ್ ಹೆಡ್ ಬಳಿಸಿಕೊಂಡು ವೈರಲ್ ಆದ ಪತ್ರದ ಅಸಲಿಯತ್ತೇ ಬೇರೆಯಿದೆ. ಯಾರೋ ಫ್ಯಾನ್ಸ್ ಈ ಕಿರಿಕ್ ಕೆಲಸ ಮಾಡಿದ್ದು, ಈಗಲಾದರೂ ನಿರ್ಮಾಪಕರು ಉತ್ತರಿಸುತ್ತಾರಾ ಎನ್ನುವುದು ಅದರ ಹಿಂದಿನ ಉದ್ದೇಶವಾಗಿತ್ತು. ಸಿನಿಮಾ ಟೀಮ್ ಕೂಡ ಅದನ್ನು ಫನ್ನಿಯಾಗಿ ತಗೆದುಕೊಂಡಿದ್ದರು.  ಇದನ್ನೂ ಓದಿ : ಜೈಲಿನಲ್ಲಿ ಚೇತನ್ ಕೂಲ್ ಆಗಿದ್ದಾರೆ : ಪತ್ನಿ ಮೇಘಾ

    ಕೆಜಿಎಫ್ 2 ಸಿನಿಮಾದ ಬಿಡುಗಡೆ ದಿನಾಂಕ ಹೊರತಾಗಿ ಬೇರೆ ಯಾವ ಸುದ್ದಿಯನ್ನೂ ಈವರೆಗೂ ಚಿತ್ರತಂಡದಿಂದ ಬಂದಿಲ್ಲ. ಹಾಗಾಗಿ ಅಭಿಮಾನಿಗಳಿಗೆ ಬೇಸರವಾಗಿ ಈ ಮಾರ್ಗದ ಮೂಲಕ ಅಪ್ ಡೇಟ್ ಕೇಳುವ ಪ್ರಯತ್ನ ಮಾಡಿದ್ದಾರೆ.

  • ಯುಗಾದಿ ಹಬ್ಬಕ್ಕೆ ಅಭಿಮಾನಿಗಳಿಗೆ ಅಪ್ಪು ಭರ್ಜರಿ ಸಿಹಿ ಸುದ್ದಿ

    ಯುಗಾದಿ ಹಬ್ಬಕ್ಕೆ ಅಭಿಮಾನಿಗಳಿಗೆ ಅಪ್ಪು ಭರ್ಜರಿ ಸಿಹಿ ಸುದ್ದಿ

    – ಹೊಂಬಾಳೆ ಫಿಲಂಸ್ ಬ್ಯಾನರಿ ಅಡಿ ಮತ್ತೊಂದು ಸಿನಿಮಾ

    ಬೆಂಗಳೂರು: ಯುಗಾದಿ ಹಬ್ಬದಂದು ನಟ ಪುನೀತ್ ರಾಜ್‍ಕುಮಾರ್ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದ್ದು, ಯುವರತ್ನ ಸಿನಿಮಾ ಬಳಿಕ ಮತ್ತೆ ಹೊಂಬಾಳೆ ಫಿಲಂಸ್ ಬ್ಯಾನರ್ ಅಡಿ ಪುನೀತ್ ರಾಜ್‍ಕುಮಾರ್ ಅಭಿನಯಿಸುತ್ತಿದ್ದಾರೆ.

    ಈ ಕುರಿತು ಹೊಂಬಾಳೆ ಫಿಲಂಸ್‍ನ ವಿಜಯ್ ಕಿರಗಂದೂರ್ ಟ್ವೀಟ್ ಮಾಡಿ ಖಚಿತಪಡಿಸಿದ್ದು, ಹೊಂಬಾಳೆ ಫಿಲಂಸ್ ಬ್ಯಾನರ್ ಅಡಿ ಪುನೀತ್ ರಾಜ್‍ಕುಮಾರ್ ಅವರಿಗೆ ಮತ್ತೊಂದು ಸಿನಿಮಾ ನಿರ್ಮಿಸುತ್ತಿರುವುದಾಗಿ ಘೋಷಿಸಿದ್ದಾರೆ. ಅಪ್ಪು ಸಹ ಇದನ್ನು ರೀ ಟ್ವೀಟ್ ಮಾಡಿದ್ದಾರೆ.

    ಇನ್ನೂ ವಿಶೇಷ ಎಂಬಂತೆ ಈ ಸಿನಿಮಾಗೆ ಯು ಟರ್ನ್ ಖ್ಯಾತಿಯ ಪವನ್ ಕುಮಾರ್ ಆ್ಯಕ್ಷನ್ ಕಟ್ ಹೇಳುತ್ತಿದ್ದು, ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಿದೆ. ಯಾವ ರೀತಿಯ ಸಿನಿಮಾ ಇರಬಹುದು, ಥ್ರಿಲ್ಲರ್ ಮೂವಿನಾ ಎಂದು ಅಭಿಮಾನಿಗಳು ಚರ್ಚೆ ನಡೆಸುತ್ತಿದ್ದಾರೆ. ಆದರೆ ಚಿತ್ರದ ಬಗ್ಗೆ ಮುಂದಿನ ದಿನಗಳಲ್ಲಿ ಅಪ್‍ಡೇಟ್ ಸಿಗಲಿದೆ. ನಿರ್ದೇಶಕ ಪವನ್ ಕುಮಾರ್ ಅವರು ಯು ಟರ್ನ್ ಹಾಗೂ ಲೂಸಿಯಾ ಸಿನಿಮಾಗಳ ಮೂಲಕ ಪರಿಚಿತರಾಗಿದ್ದಾರೆ, ಹೀಗಾಗಿ ನಿರೀಕ್ಷೆ ಹೆಚ್ಚಿದೆ.

    ಇನ್ನೂ ಸಂತಸ ಸಂಗತಿ ಎಂದರೆ ಜುಲೈ ತಿಂಗಳಲ್ಲಿ ಪ್ರಿನ್ಸಿಪಲ್ ಫೋಟೋಗ್ರಫಿ ಆರಂಭವಾಗಲಿದೆ ಎಂದು ವಿಜಯ್ ಕಿರಗಂದೂರ್ ತಮ್ಮ ಟ್ವೀಟ್‍ನಲ್ಲಿ ತಿಳಿಸಿದ್ದಾರೆ. ಫೋಟೋ ಶೂಟ್ ಬಳಿಕ ಯಾವ ರೀತಿಯ ಸಿನಿಮಾ ಎಂಬ ಬಗ್ಗೆ ಸುಳಿವು ಸಿಗಲಿದೆಯೇ ಕಾದು ನೋಡಬೇಕಿದೆ. ಯುವರತ್ನ ಸಕ್ಸಸ್ ಬಳಿಕ ಜೇಮ್ಸ್ ಚಿತ್ರೀಕರಣದಲ್ಲಿ ಬ್ಯುಸಿಯಾಗಿರುವ ಪುನೀತ್ ರಾಜ್‍ಕುಮಾರ್, ಇದೀಗ ಮತ್ತೊಂದು ಸಿನಿಮಾ ಒಪ್ಪಿಕೊಳ್ಳುವ ಮೂಲಕ ಮತ್ತೆ ಬ್ಯುಸಿಯಾಗುತ್ತಿದ್ದಾರೆ.

  • ಪ್ರಶಾಂತ್ ನೀಲ್, ಪ್ರಭಾಸ್ ಸಲಾರ್ ಚಿತ್ರಕ್ಕೆ ನಾಳೆ ಮುಹೂರ್ತ

    ಪ್ರಶಾಂತ್ ನೀಲ್, ಪ್ರಭಾಸ್ ಸಲಾರ್ ಚಿತ್ರಕ್ಕೆ ನಾಳೆ ಮುಹೂರ್ತ

    ಬೆಂಗಳೂರು: ಈಗಾಗಲೇ ಕೆಜಿಎಫ್-2 ಟೀಸರ್ ಬಿಡುಗಡೆ ಮಾಡಿ ದಾಖಲೆ ಮೇಲೆ ದಾಖಲೆ ನಿರ್ಮಿಸಿ ಸುದ್ದಿಯಲ್ಲಿರುವ ನಿರ್ದೇಶಕ ಪ್ರಶಾಂತ್ ನೀಲ್ ಅವರ ಮುಂದಿನ ಪ್ಯಾನ್ ಇಂಡಿಯಾ ಮೂವಿ ಸಲಾರ್‍ಗೆ ನಾಳೆ ಮುಹೂರ್ತ ನಡೆಯಲಿದೆ.

    ಸಿನಿಮಾದ ಮೂಹೂರ್ತ ಪೂಜೆಯನ್ನು ನಾಳೆ ಹೈದರಾಬಾದ್‍ನಲ್ಲಿ ಬೆಳಿಗ್ಗೆ 11 ಗಂಟೆಗೆ ಮಾಡಲು ತೀರ್ಮಾನಿಸಿದ್ದು, ಕರ್ನಾಟಕ ಸರ್ಕಾರದ ಉಪಮುಖ್ಯಮಂತ್ರಿ ಡಾ.ಸಿ.ಎನ್ ಅಶ್ವತ್ಥ್ ನಾರಾಯಣ್ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಚಿತ್ರತಂಡ ತಿಳಿಸಿದೆ.

    ಈ ಸಿನಿಮಾದಲ್ಲಿ ಬಾಹುಬಲಿ ಖ್ಯಾತಿಯ ಪ್ರಭಾಸ್ ಹೀರೋ ಆಗಿ ಅಭಿನಯಿಸಲಿದ್ದಾರೆ. ಉಗ್ರಂ ಸಿನಿಮಾದ ನಂತರ ಕೆಜಿಎಫ್ ಸಿನಿಮಾ ಮಾಡಿ ಎಲ್ಲರ ಮನಗೆದ್ದ ಪ್ರಶಾಂತ್ ನೀಲ್ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ ಮಾಡಲು ಹೊರಟಿದ್ದಾರೆ. ಸಲಾರ್ ಚಿತ್ರ ಕೂಡ ಕೆಜಿಎಫ್ ಸಿನಿಮಾವನ್ನು ನಿರ್ಮಾಣ ಮಾಡಿದ್ದ ವಿಜಯ್ ಕಿರಗಂದೂರ್ ಅವರ ಹೊಂಬಾಳೆ ಫಿಲ್ಮಂ ಬ್ಯಾನರ್ ಅಡಿಯಲ್ಲೇ ಹೊರ ಬರಲಿದೆ.