Tag: ವಿಜಯ್ ದಳಪತಿ

  • ಸರಳವಾಗಿ ಜರುಗಿತು ವಿಜಯ್ ದಳಪತಿ, ಪೂಜಾ ಹೆಗ್ಡೆ ನಟನೆಯ ಸಿನಿಮಾ ಮುಹೂರ್ತ

    ಸರಳವಾಗಿ ಜರುಗಿತು ವಿಜಯ್ ದಳಪತಿ, ಪೂಜಾ ಹೆಗ್ಡೆ ನಟನೆಯ ಸಿನಿಮಾ ಮುಹೂರ್ತ

    ನ್ನಡದ ಕೆವಿಎನ್ ಪ್ರೋಡಕ್ಷನ್ಸ್ ನಿರ್ಮಾಣದ ‘ದಳಪತಿ 69’ (Thalapathy 69) ಚಿತ್ರದ ಮುಹೂರ್ತ ಕಾರ್ಯಕ್ರಮ ಇಂದು (ಅ.4) ಅದ್ಧೂರಿಯಾಗಿ ನಡೆಯಿತು. ಮುಹೂರ್ತ ಕಾರ್ಯಕ್ರಮದ ಫೋಟೋಗಳನ್ನು ನಿರ್ಮಾಣ ಸಂಸ್ಥೆ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ. ಇದನ್ನೂ ಓದಿ:ಗುಂಡೇಟಿನಿಂದ ಆಸ್ಪತ್ರೆ ಸೇರಿದ್ದ ನಟ ಗೋವಿಂದ ಡಿಸ್ಚಾರ್ಜ್

    ವಿಜಯ್ ದಳಪತಿ ಮತ್ತು ಪೂಜಾ ಹೆಗ್ಡೆ (Pooja Hegde) ನಟನೆಯ ಹೊಸ ಸಿನಿಮಾಗೆ ಇಂದು ಚಾಲನೆ ನೀಡಲಾಗಿದೆ. ‘ದಳಪತಿ 69’ ಚಿತ್ರದಲ್ಲಿ ವಿಜಯ್ ಜೊತೆ ಯಾರೆಲ್ಲಾ ನಟನೆ ಮಾಡ್ತಾರೆ ಎಂದು ಚಿತ್ರತಂಡ ರಿವೀಲ್ ಮಾಡಿದ ಬೆನ್ನಲ್ಲೇ ಈಗ ಸಿನಿಮಾ ಮುಹೂರ್ತ ಚೆನ್ನೈನಲ್ಲಿ ನೆರವೇರಿದೆ.

    ಈ ಕಾರ್ಯಕ್ರಮದಲ್ಲಿ ಕೆವಿಎನ್ ಸಂಸ್ಥೆಯ ನಿರ್ಮಾಪಕರು, ವಿಜಯ್ ದಳಪತಿ, ಪೂಜಾ ಹೆಗ್ಡೆ, ಅನಿಮಲ್ ನಟ ಬಾಬಿ ಡಿಯೋಲ್ ಸೇರಿದಂತೆ ಅನೇಕರು ಭಾಗಿದ್ದರು.

    ಇನ್ನೂ ಈ ಚಿತ್ರವು ವಿಜಯ್ ನಟಿಸಲಿರುವ ಕೊನೆಯ ಸಿನಿಮಾ ಆಗಿದ್ದು, ರಾಜಕೀಯ ಕುರಿತು ಸಿನಿಮಾ ಮೂಡಿ ಬರಲಿದೆ ಎನ್ನಲಾಗಿದೆ.

  • Thalapathy 69: ವಿಜಯ್‌ ಜೊತೆ ಕನ್ನಡದ ನಟಿ ಪ್ರಿಯಾಮಣಿ ಹೊಸ ಸಿನಿಮಾ

    Thalapathy 69: ವಿಜಯ್‌ ಜೊತೆ ಕನ್ನಡದ ನಟಿ ಪ್ರಿಯಾಮಣಿ ಹೊಸ ಸಿನಿಮಾ

    ಹುಭಾಷಾ ನಟಿ, ಕನ್ನಡತಿ ಪ್ರಿಯಾಮಣಿ (Priyamani) ಸದ್ಯ ಸೌತ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ‘ಜವಾನ್’ (Jawan) ಸಿನಿಮಾದ ಸಕ್ಸಸ್ ನಂತರ ನಟಿಯ ಬೇಡಿಕೆ ಹೆಚ್ಚಾಗಿದೆ. ಇದೀಗ ವಿಜಯ್ ನಟನೆಯ ಕೊನೆಯ ಸಿನಿಮಾದಲ್ಲಿ ಪ್ರಿಯಾಮಣಿ ಕೂಡ ನಟಿಸುತ್ತಿದ್ದಾರೆ. ನಟಿ ಕೂಡ ಚಿತ್ರತಂಡ ಸೇರ್ಪಡೆಯಾಗಿರುವ ಬಗ್ಗೆ ತಂಡ ಅಧಿಕೃತ ಘೋಷಣೆ ಮಾಡಿದೆ.

    ಇದೇ ಮೊದಲ ಬಾರಿಗೆ ನಟಿ ಪ್ರಿಯಾಮಣಿ ಅವರು ವಿಜಯ್ ದಳಪತಿ ಜೊತೆ ಕಾಣಿಸಿಕೊಳ್ಳುತ್ತಿದ್ದಾರೆ. ಚಿತ್ರದಲ್ಲಿ ಅವರ ಪಾತ್ರದ ಬಗ್ಗೆ ರಿವೀಲ್ ಮಾಡಿಲ್ಲ. ಆದರೆ ಪವರ್‌ಫುಲ್ ಪಾತ್ರದಲ್ಲಿ‌ ನಟಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ. ಈಗಾಗಲೇ ಪೂಜಾ ಹೆಗ್ಡೆ (Pooja Hegde), ಮಮಿತಾ ಬೈಜು (Mamitha Baiju), ಪ್ರಕಾಶ್ ರಾಜ್ ಚಿತ್ರತಂಡ ಸೇರಿಕೊಂಡ ಬೆನ್ನಲ್ಲೇ ಪ್ರಿಯಾಮಣಿ ಕೂಡ ‘ದಳಪತಿ 69’ ತಂಡ ಸೇರಿಕೊಂಡಿದ್ದಾರೆ. ಇದನ್ನೂ ಓದಿ:ರಾಷ್ಟ್ರ ಪ್ರಶಸ್ತಿ ವಿಜೇತ ‘ಮಧ್ಯಂತರ’ ಕಿರುಚಿತ್ರಕ್ಕೆ ಜಯಮಾಲಾ ಮೆಚ್ಚುಗೆ

     

    View this post on Instagram

     

    A post shared by KVN Productions (@kvn.productions)

    ಇನ್ನೂ ಇತ್ತೀಚಿನ ದಿನಗಳಲ್ಲಿ ಅವರಿಗೆ ಬಾಲಿವುಡ್‌ನಿಂದ ಉತ್ತಮ ಅವಕಾಶಗಳು ಸಿಗುತ್ತಿವೆ. ಪ್ರಿಯಾಮಣಿ ನಟಿಸಿರುವ ಜವಾನ್, ಆರ್ಟಿಕಲ್ 370, ಮೈದಾನ್ ಚಿತ್ರಗಳು ಸಕ್ಸಸ್ ಕಂಡಿವೆ. ತೆಲುಗು, ತಮಿಳು, ಹಿಂದಿಯಲ್ಲಿ ಅವರಿಗೆ ಬೇಡಿಕೆ ಹೆಚ್ಚಾಗಿದೆ.

    ಅಂದಹಾಗೆ, ಸ್ಯಾಂಡಲ್‌ವುಡ್‌ನಲ್ಲಿ ರಾಮ್, ಅಣ್ಣಾಬಾಂಡ್, ಚಾರುಲತಾ, ಅಂಬರೀಶ, ಕಲ್ಪನಾ 2 ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿದ್ದಾರೆ.

  • ‘ಪ್ರೇಮಲು’ ಬ್ಯೂಟಿಗೆ ಜಾಕ್‌ಪಾಟ್- ‘ದಳಪತಿ 69’ ಸಿನಿಮಾದಲ್ಲಿ ಮಮಿತಾ ಬೈಜು

    ‘ಪ್ರೇಮಲು’ ಬ್ಯೂಟಿಗೆ ಜಾಕ್‌ಪಾಟ್- ‘ದಳಪತಿ 69’ ಸಿನಿಮಾದಲ್ಲಿ ಮಮಿತಾ ಬೈಜು

    ‘ಪ್ರೇಮಲು’ ಸಿನಿಮಾದ ಮೂಲಕ ಪಡ್ಡೆಹುಡುಗರ ನಿದ್ದೆ ಕದ್ದ ನಟಿ ಮಮಿತಾ ಬೈಜುಗೆ (Mamitha Baiju) ಗೋಲ್ಡನ್ ಚಾನ್ಸ್‌ವೊಂದು ಸಿಕ್ಕಿದೆ. ವಿಜಯ್ ದಳಪತಿ (Vijay Thalapathy) ನಟನೆಯ ಕೊನೆಯ ಸಿನಿಮಾದಲ್ಲಿ ನಟಿಸುವ ಬಂಪರ್ ಅವಕಾಶವನ್ನು ನಟಿ ಬಾಚಿಕೊಂಡಿದ್ದಾರೆ.

    ವಿಜಯ್ ಕೊನೆಯ ಚಿತ್ರವನ್ನು ಕನ್ನಡದ ‘ಕೆವಿಎನ್’ ಸಂಸ್ಥೆ ನಿರ್ಮಾಣ ಮಾಡುತ್ತಿದೆ. ದಳಪತಿ 69 ಸಿನಿಮಾದಲ್ಲಿ ಯಾರೆಲ್ಲಾ ನಟಿಸುತ್ತಾರೆ ಎಂಬುದನ್ನು ತಂಡ ರಿವೀಲ್ ಮಾಡುತ್ತಿದೆ. ಬಾಬಿ ಡಿಯೋಲ್, ಪೂಜಾ ಹೆಗ್ಡೆ (Pooja Hegde) ನಟಿಸುತ್ತಿರುವ ಸುದ್ದಿ ಅಫಿಷಿಯಲ್ ಆಗಿ ತಿಳಿಸಿದ ಬಳಿಕ ಮಾಲಿವುಡ್ ಬ್ಯೂಟಿ ಮಮಿತಾ ಬೈಜು ಕೂಡ ಚಿತ್ರದ ಭಾಗವಾಗಿದ್ದಾರೆ ಎಂದು ನಿರ್ಮಾಣ ಸಂಸ್ಥೆ ತಿಳಿಸಿದೆ.

     

    View this post on Instagram

     

    A post shared by KVN Productions (@kvn.productions)

    ವಿಜಯ್ ಸಿನಿಮಾದಲ್ಲಿ ಪೂಜಾ ಹೆಗ್ಡೆ ಅಂತೆಯೇ ಮಮಿತಾ ಬೈಜು ಅವರಿಗೂ ಉತ್ತಮ ಪಾತ್ರ ಸಿಕ್ಕಿದೆಯಂತೆ. ನಟನೆಗೆ ಸ್ಕೋಪ್ ಇರುವ ಇದಾಗಿದೆ ಎನ್ನಲಾಗಿದೆ.

    ಅಂದಹಾಗೆ, ರೆಬೆಲ್, ಪ್ರೇಮಲು (Premalu) ಸಿನಿಮಾಗಳ ಮೂಲಕ ಖ್ಯಾತಿ ಗಳಿಸಿರುವ ಮಮಿತಾಗೆ ತಮಿಳು, ತೆಲುಗು ಮತ್ತು ಮಾಲಿವುಡ್‌ನಿಂದ ಉತ್ತಮ ಅವಕಾಶಗಳು ಅರಸಿ ಬರುತ್ತಿವೆ.

  • Thalapathy 69: ವಿಜಯ್ ಕೊನೆಯ ಚಿತ್ರಕ್ಕೆ ಪೂಜಾ ಹೆಗ್ಡೆ ಹೀರೋಯಿನ್

    Thalapathy 69: ವಿಜಯ್ ಕೊನೆಯ ಚಿತ್ರಕ್ಕೆ ಪೂಜಾ ಹೆಗ್ಡೆ ಹೀರೋಯಿನ್

    ರಾವಳಿ ಬೆಡಗಿ ಪೂಜಾ ಹೆಗ್ಡೆ (Pooja Hegde) ಸಕ್ಸಸ್ ಸಿಗದೆ ಇದ್ದರೂ ಅವಕಾಶಗಳ ಕೊರತೆಯಿಲ್ಲ. ಕಾಲಿವುಡ್‌ನಲ್ಲಿ ಮತ್ತೊಂದು ಬಂಪರ್ ಆಫರ್ ಗಿಟ್ಟಿಸಿಕೊಂಡಿದ್ದಾರೆ. ಮತ್ತೊಮ್ಮೆ ಸ್ಟಾರ್ ನಟ ವಿಜಯ್ ದಳಪತಿಗೆ (Vijay Thalapathy) ಪೂಜಾ ಹೆಗ್ಡೆ ನಾಯಕಿಯಾಗಿದ್ದಾರೆ. ಈ ಗುಡ್ ನ್ಯೂಸ್ ಅನ್ನು ಕೆವಿಎನ್ ನಿರ್ಮಾಣ ಸಂಸ್ಥೆ ಅಫಿಷಿಯಲ್ ಆಗಿ ತಿಳಿಸಿದೆ. ಇದನ್ನೂ ಓದಿ:ರಾಷ್ಟ್ರ ಪ್ರಶಸ್ತಿ ವಿಜೇತ ‘ಮಧ್ಯಂತರ’ ಕಿರುಚಿತ್ರಕ್ಕೆ ಜಯಮಾಲಾ ಮೆಚ್ಚುಗೆ

    ವಿಜಯ್ ನಟನೆಯ ಕೊನೆಯ ಸಿನಿಮಾ ‘ದಳಪತಿ 69ನೇ’ (Thalapathy 69) ಚಿತ್ರಕ್ಕೆ ನಾಯಕಿ ಯಾರಾಗ್ತಾರೆ ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಮತ್ತೊಮ್ಮೆ ವಿಜಯ್ ಜೊತೆ ರೊಮ್ಯಾನ್ಸ್ ಮಾಡುವ ಅವಕಾಶವನ್ನು ಪೂಜಾ ಹೆಗ್ಡೆ ಗಿಟ್ಟಿಸಿಕೊಂಡಿದ್ದಾರೆ.

     

    View this post on Instagram

     

    A post shared by KVN Productions (@kvn.productions)

    ಈ ಹಿಂದೆ ಕೂಡ 2022ರಲ್ಲಿ ತೆರೆಕಂಡ ‘ಬೀಸ್ಟ್’ ಚಿತ್ರದಲ್ಲಿ ವಿಜಯ್‌ಗೆ ಪೂಜಾ ನಾಯಕಿಯಾಗಿ ನಟಿಸಿದ್ದರು. ಆದರೆ ಈ ಚಿತ್ರ ಚಿತ್ರಮಂದಿರದಲ್ಲಿ ಮಕಾಡೆ ಮಲಗಿತ್ತು. ಈಗ ಮತ್ತೆ ವಿಜಯ್ ಜೊತೆ ನಟಿಸುವ ಚಾನ್ಸ್ ಸಿಕ್ಕಿದೆ. ಇನ್ನೂ ಬಾಬಿ ಡಿಯೋಲ್ (Bobby Deol) ಕೂಡ ನಟಿಸುವ ಬಗ್ಗೆ ಅಧಿಕೃತ ಮಾಹಿತಿ ನೀಡಿದೆ ಚಿತ್ರತಂಡ.

    ಅಂದಹಾಗೆ, ಶಾಹಿದ್ ಕಪೂರ್ ಜೊತೆ ‘ದೇವ’, ಸೂರ್ಯ 44, ಅಹಾನ್ ಶೆಟ್ಟಿ ಜೊತೆಗಿನ ಸಿನಿಮಾ ಸೇರಿದಂತೆ ಹಲವು ಪ್ರಾಜೆಕ್ಟ್‌ಗಳು ನಟಿಯ ಕೈಯಲ್ಲಿವೆ.

  • ವಿಜಯ್ ದಳಪತಿ ಸಿನಿಮಾದಲ್ಲಿ ಬಾಬಿ ಡಿಯೋಲ್- ಗುಡ್ ನ್ಯೂಸ್ ಕೊಟ್ಟ ‘ಕೆವಿಎನ್’ ಸಂಸ್ಥೆ

    ವಿಜಯ್ ದಳಪತಿ ಸಿನಿಮಾದಲ್ಲಿ ಬಾಬಿ ಡಿಯೋಲ್- ಗುಡ್ ನ್ಯೂಸ್ ಕೊಟ್ಟ ‘ಕೆವಿಎನ್’ ಸಂಸ್ಥೆ

    ಮಿಳಿನ ಸ್ಟಾರ್ ನಟ ವಿಜಯ್ ದಳಪತಿ (Vijay Thalapathy) ಕೊನೆಯ ಸಿನಿಮಾ ಕುರಿತು ಇದೀಗ ಇಂಟರೆಸ್ಟಿಂಗ್ ಅಪ್‌ಡೇಟ್‌ವೊಂದು ಸಿಕ್ಕಿದೆ. ಕನ್ನಡದ ಕೆವಿಎನ್ ಪ್ರೊಡಕ್ಷನ್ಸ್ ನಿರ್ಮಾಣದ ಸಿನಿಮಾದಲ್ಲಿ ವಿಜಯ್ ಕಡೆಯದಾಗಿ ಕಾಣಿಸಿಕೊಳ್ಳುತ್ತಿದ್ದು, ಈ ಚಿತ್ರದಲ್ಲಿ ಬಾಬಿ ಡಿಯೋಲ್ ವಿಲನ್ ಆಗಿ ಅಬ್ಬರಿಸಲಿದ್ದಾರೆ. ಈ ವಿಚಾರವನ್ನು ಚಿತ್ರತಂಡವೇ ಅಧಿಕೃತವಾಗಿ ತಿಳಿಸಿದೆ. ಇದನ್ನೂ ಓದಿ:Kantara Chapter 1: ರಿಷಬ್ ಶೆಟ್ಟಿ ತಂದೆ ಪಾತ್ರದಲ್ಲಿ ಮೋಹನ್‌ಲಾಲ್?

    ವಿಜಯ್ ನಟನೆಯ 69ನೇ ಸಿನಿಮಾದಲ್ಲಿ ‘ಅನಿಮಲ್’ ಖ್ಯಾತಿಯ ನಟ ಬಾಬಿ ಡಿಯೋಲ್ (Bobby Deol) ಕಾಣಿಸಿಕೊಳ್ಳಲಿದ್ದಾರೆ. ಇದರ ಬಗ್ಗೆ ನಿರ್ಮಾಣ ಸಂಸ್ಥೆಯೇ ಗುಡ್ ನ್ಯೂಸ್ ಕೊಟ್ಟಿದೆ. ಆದರೆ ಯಾವ ಪಾತ್ರ ಮಾಡಲಿದ್ದಾರೆ ಎಂಬುದನ್ನು ರಿವೀಲ್ ಮಾಡಿಲ್ಲ. ಮೂಲಗಳ ಪ್ರಕಾರ, ಈ ಚಿತ್ರದಲ್ಲಿ ವಿಜಯ್‌ಗೆ ವಿಲನ್ ಆಗಿ ನಟಿಸಲಿದ್ದಾರೆ ಎನ್ನಲಾಗಿದೆ.

     

    View this post on Instagram

     

    A post shared by KVN Productions (@kvn.productions)

    ಅಂದಹಾಗೆ, ‘ದಳಪತಿ 69’ ಮೇಲೆ ಬಲು ನಿರೀಕ್ಷೆ ಇರೋದ್ರಿಂದ ಭರ್ತಿ 500 ಕೋಟಿಯಲ್ಲಿ ಚಿತ್ರ ತಯಾರಾಗುತ್ತಿದೆ. ತಮಿಳು ಚಿತ್ರಪ್ರೇಮಿಗಳ ಪಾಲಿನ ಮಾಸ್ ಮ್ಯಾನ್ ಇನ್ಮುಂದೆ ಬಣ್ಣ ಹಚ್ಚೋದಿಲ್ಲ ಅನ್ನುವ ಕೊರಗಿನ ಮಧ್ಯೆ ದಳಪತಿ 69 ಮೇಲೆ ನಿರೀಕ್ಷೆಯಂತೂ ದುಪ್ಪಟ್ಟಾಗಿದೆ. ಈ ನಡುವೆ ಇನ್ನೊಂದು ವಿಷಯ ಭಾರೀ ಆಶ್ಚರ್ಯ ಹುಟ್ಟಿಸಿದೆ. ಅದುವೇ ವಿಜಯ್ ಸಂಭಾವನೆ.

    ಇನ್ನೂ ದಳಪತಿ 69 ಚಿತ್ರಕ್ಕೆ ವಿಜಯ್ ಭರ್ತಿ 275 ಕೋಟಿ ರೂ. ಸಂಭಾವನೆ ಪಡೆಯುತ್ತಿದ್ದಾಂತೆ. ಚಿತ್ರದ ಬಜೆಟ್‌ನ ಅರ್ಧ ಭಾಗದಷ್ಟು ವಿಜಯ್ ಸಂಭಾವನೆ ಇರುತ್ತದೆ ಎಂದು ಸುದ್ದಿಯಾಗಿದೆ. ಹಿಂದಿನ ದಿ ಗೋಟ್ ಚಿತ್ರಕ್ಕೆ ವಿಜಯ್ ಬರೋಬ್ಬರಿ 200 ಕೋಟಿ ಸಂಭಾವನೆ ಪಡೆದಿದ್ದರು ಎಂಬ ವದಂತಿ ಇದೆ. ಈ ಬೆನ್ನಲ್ಲೇ ಅದಕ್ಕಿಂತಲೂ ಹೆಚ್ಚು 275 ಕೋಟಿ ಹಣ ಸಂಭಾವನೆ ರೂಪದಲ್ಲಿ ವಿಜಯ್ ಪಡೆಯಲಿದ್ದಾರೆ ಎಂಬುದೇ ಕುತೂಹಲದ ಸಂಗತಿ.

    2026ರ ತಮಿಳುನಾಡು ವಿಧಾನಸಭೆ ಚುನಾವಣೆಗೆ ವಿಜಯ್ ಅಣಿಯಾಗುತ್ತಿದ್ದಾರೆ. ಸ್ವಂತ ಪಕ್ಷ ಸ್ಥಾಪಿಸಿ ರಾಜಕೀಯಕ್ಕೆ ಎಂಟ್ರಿಯಾಗಿದ್ದಾರೆ. ಲೋಗೋ ಮತ್ತಿತರ ಕೆಲಸಗಳನ್ನ ಮಾಡಿಕೊಂಡು ಬಂದಿದ್ದಾರೆ. ಈ ನಡುವೆ ವರ್ಷ ಕಳೆಯುವದರೊಳಗೆ ವಿಜಯ್ ಒಪ್ಪಿಕೊಂಡ 69ನೇ ಚಿತ್ರ ಮುಗಿಸಿ ಕೊಡಬೇಕಾಗಿದೆ.

  • ಆ ದೊಡ್ಡ ಸ್ಟಾರ್ ಜೊತೆ ನಟಿಸುತ್ತಿಲ್ಲ: ಸಿಮ್ರಾನ್ ಫುಲ್ ಗರಂ..!

    ಆ ದೊಡ್ಡ ಸ್ಟಾರ್ ಜೊತೆ ನಟಿಸುತ್ತಿಲ್ಲ: ಸಿಮ್ರಾನ್ ಫುಲ್ ಗರಂ..!

    ಕಾಲಿವುಡ್‌ನ ನಟ ವಿಜಯ್ ದಳಪತಿ (Vijay Thalapathy) ನಟನೆಯ ಕೊನೆಯ ಸಿನಿಮಾ `ದಳಪತಿ 69′. ಹಾಗಾಗಿನೇ ಈ ಸಿನಿಮಾ ಮೇಲೆ ಅಭಿಮಾನಿಗಳು ಬೆಟ್ಟದಷ್ಟು ನಿರೀಕ್ಷೆಗಳನ್ನ ಇಟ್ಟುಕೊಂಡಿದ್ದಾರೆ. ಆದ್ರೆ, ಅಸಲಿ ಮ್ಯಾಟರ್ ಇದಲ್ಲ. ಈ ಸಿನಿಮಾದಲ್ಲಿ ವಿಜಯ್‌ಗೆ ಜೋಡಿಯಾಗಿ ಸಿಮ್ರಾನ್ ಕಾಣಿಸಿಕೊಳ್ಳುತ್ತಿದ್ದಾರೆ ಅನ್ನೋ ಮಾತುಗಳು ಹರಿದಾಡ್ತಿದ್ದವು. ಆದ್ರೆ, ಈ ವಿಷಯ ಕೇಳಿ ನಟಿ ಸಿಮ್ರಾನ್ (Simran) ಫುಲ್ ಗರಂ ಆಗಿದ್ದಾರೆ.

    ಹೌದು, ಸುಳ್ಳು ಸುದ್ದಿ ಹರಡುವವರ ವಿರುದ್ಧ ಸಿಮ್ರಾನ್ ಕಿಡಿಕಾರಿದ್ದಾರೆ. `ಪ್ರತಿ ಸಲ ಈ ಥರದ ಸುಳ್ಳು ಸುದ್ದಿ ಕೇಳಿ ಕೇಳಿ ಸಾಕಾಗಿ ಹೋಗಿದೆ. ಯಾರೋ ಹೇಳುವುದನ್ನ ಕೇಳಿ ನನ್ನ ಸ್ನೇಹಿರು ನಂಬುವುದು ನನಗೆ ನೋವುಂಟು ಮಾಡಿದೆ. ಇಲ್ಲಿಯವರೆಗೆ ನಾನು ಸೈಲಾಂಟಾಗಿದ್ದೆ. ಯಾವ ದೊಡ್ಡ ಸ್ಟಾರ್ ನಟರ ಜೊತೆ ಸಿನಿಮಾ ಮಾಡುವ ಆಸೆ ನನಗಿಲ್ಲ. ನನ್ನ ಗಮನ ಬೇರೆಕಡೆ ಇದೆ. ನಾನು ಈಗಾಗಲೇ ಸಾಕಷ್ಟು ಸಿನಿಮಾಗಳನ್ನ ವಿಜಯ್ ಜೊತೆಗೆ ಮಾಡಿದ್ದೀನಿ’ ಅಂತಾ ಟ್ವಿಟ್ ಮೂಲಕ ಸ್ಪಷ್ಟನೆ ನೀಡಿದ್ದಾರೆ ಸಿಮ್ರಾನ್. ಇದನ್ನೂ ಓದಿ: ‘ದೇವರ’ ಚಿತ್ರದ ಟ್ರೈಲರ್ ರಿಲೀಸ್- ಆ್ಯಕ್ಷನ್ ಅವತಾರದಲ್ಲಿ ಜ್ಯೂ.ಎನ್‌ಟಿಆರ್

    ವಿಜಯ್ ದಳಪತಿ ಜೊತೆ ಈಗಾಗಲೇ ಸಾಕಷ್ಟು ಸಿನಿಮಾಗಳನ್ನ ಮಾಡಿದ್ದೇನೆ. ಯಾವ ಸ್ಟಾರ್ ನಟರ ಸಿನಿಮಾದಲ್ಲಿ ನಟಿಸುವ ಬಯಕೆ ನನಗಿಲ್ಲ ಎಂದು ಕಡ್ಡಿ ತುಂಡಾಗುವ ಹಾಗೆ ತಮ್ಮ ಸಾಮಾಜಿಕ ಜಾಲತಾಣದ ಮೂಲಕ ರೂರ‍್ಸ್ ಹರಡುವವರಿಗೆ ಸಿಮ್ರಾನ್ ಉತ್ತರ ಕೊಟ್ಟಿದ್ದಾರೆ. `ದಳಪತಿ 69′ ಸಿನಿಮಾದಲ್ಲಿ ಸಿಮ್ರಾನ್ ಹೆಸರು ತಳುಕು ಹಾಕಿಕೊಂಡಿತ್ತು ಈಗ ಗಾಳಿ ಸುದ್ದಿಗೆ ಖುದ್ದಾಗಿ ಸಿಮ್ರಾನ್ ತೆರೆ ಎಳೆದಿದ್ದಾರೆ.

    ವಿಜಯ್ ದಳಪತಿ ಅಭಿನಯದ `ದಿ ಗೋಟ್’ ಇದೇ ತಿಂಗಳು ತೆರೆಕಂಡು ಅಭಿಮಾನಿಗಳಿಗೆ ರಸದೌತಣ ನೀಡಿತ್ತು. ಇನ್ನೇನು ದಳಪತಿ ವಿಜಯ್ ನಟನೆಯ ಕೊನೆಯ ಸಿನಿಮಾ `69′ ಪ್ರಿ-ಪ್ರೊಡಕ್ಷನ್ ವರ್ಕ್ ಮುಗಿಸಿದ್ದು, ಶೂಟಿಂಗ್‌ಗೆ ಹೋಗೋಕೆ ತಯಾರಿ ಮಾಡಿಕೊಂಡಿದೆ. ಇದನ್ನೂ ಓದಿ: ಹರಿದ ಪ್ಯಾಂಟ್ ಧರಿಸಿ ಸ್ಟೈಲೀಶ್ ಆಗಿ ಕಾಣಿಸಿಕೊಂಡ ರಶ್ಮಿಕಾ ಮಂದಣ್ಣ

  • ವಿಜಯ್ ಕೊನೆಯ ಸಿನಿಮಾದಲ್ಲಿ ಬಾಬಿ ಡಿಯೋಲ್ ವಿಲನ್

    ವಿಜಯ್ ಕೊನೆಯ ಸಿನಿಮಾದಲ್ಲಿ ಬಾಬಿ ಡಿಯೋಲ್ ವಿಲನ್

    ಮಿಳಿನ ಸ್ಟಾರ್ ನಟ ವಿಜಯ್ ದಳಪತಿ (Vijay Thalapathy) ಕೊನೆಯ ಸಿನಿಮಾ ಕುರಿತು ಇದೀಗ ಇಂಟರೆಸ್ಟಿಂಗ್‌ ಅಪ್‌ಡೇಟ್‌ವೊಂದು ಸಿಕ್ಕಿದೆ. ಕನ್ನಡದ ಕೆವಿಎನ್ ಪ್ರೊಡಕ್ಷನ್ಸ್ ನಿರ್ಮಾಣದ ಸಿನಿಮಾದಲ್ಲಿ ವಿಜಯ್ ಕಡೆಯದಾಗಿ ಕಾಣಿಸಿಕೊಳ್ಳುತ್ತಿದ್ದು, ಈ ಚಿತ್ರದಲ್ಲಿ ಬಾಬಿ ಡಿಯೋಲ್ (Bobby Deol) ವಿಲನ್ ಆಗಿ ಅಬ್ಬರಿಸಲಿದ್ದಾರೆ ಎಂಬ ಸುದ್ದಿಯೊಂದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಇದನ್ನೂ ಓದಿ:ಹೀರೋ ಆದ ‘ಶ್ರೀಗೌರಿ’ ಸೀರಿಯಲ್ ವಿಲನ್- ‘ಪೀಟರ್’ ಚಿತ್ರಕ್ಕೆ ಡಾಲಿ, ವಿಜಯ್ ಸೇತುಪತಿ ಸಾಥ್

    ವಿಜಯ್ ನಟನೆಯ 69ನೇ ಸಿನಿಮಾದಲ್ಲಿ ‘ಅನಿಮಲ್’ (Animal) ಖ್ಯಾತಿಯ ನಟ ಬಾಬಿ ಡಿಯೋಲ್ ಖಳನಾಯಕನಾಗಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ. ಸಾಕಷ್ಟು ಸಿನಿಮಾಗಳಲ್ಲಿ ಬ್ಯುಸಿಯಿರುವ ನಟನನ್ನು ಚಿತ್ರತಂಡ ಸಂಪರ್ಕಿಸಿದೆ. ವಿಜಯ್ ಸಿನಿಮಾದಲ್ಲಿ ನಟಿಸುವ ಕುರಿತು ಬಾಬಿ ಡಿಯೋಲ್‌ ಜೊತೆ ಒಂದು ಹಂತದ ಮಾತುಕತೆಯಾಗಿದ್ದು, ಕಥೆ ಮತ್ತು ಪಾತ್ರದ ಕುರಿತು ಚರ್ಚೆಯಾಗಿದೆ ಎನ್ನಲಾಗಿದೆ. ಅಷ್ಟಕ್ಕೂ ಈ ಸುದ್ದಿ ನಿಜನಾ? ಎಂಬುದನ್ನು ಚಿತ್ರತಂಡ ಅಧಿಕೃತವಾಗಿ ತಿಳಿಸುವವರೆಗೂ ಕಾದುನೋಡಬೇಕಿದೆ.

    ಅಂದಹಾಗೆ, ‘ದಳಪತಿ 69’ ಮೇಲೆ ಬಲು ನಿರೀಕ್ಷೆ ಇರೋದ್ರಿಂದ ಭರ್ತಿ 500 ಕೋಟಿಯಲ್ಲಿ ಚಿತ್ರ ತಯಾರಾಗುತ್ತಿದೆ. ತಮಿಳು ಚಿತ್ರಪ್ರೇಮಿಗಳ ಪಾಲಿನ ಮಾಸ್‌ ಮ್ಯಾನ್ ಇನ್ಮುಂದೆ ಬಣ್ಣ ಹಚ್ಚೋದಿಲ್ಲ ಅನ್ನುವ ಕೊರಗಿನ ಮಧ್ಯೆ ದಳಪತಿ 69 ಮೇಲೆ ನಿರೀಕ್ಷೆಯಂತೂ ದುಪ್ಪಟ್ಟಾಗಿದೆ. ಈ ನಡುವೆ ಇನ್ನೊಂದು ವಿಷಯ ಭಾರೀ ಆಶ್ಚರ್ಯ ಹುಟ್ಟಿಸಿದೆ. ಅದುವೇ ವಿಜಯ್ ಸಂಭಾವನೆ.

    ಇನ್ನೂ ದಳಪತಿ 69 ಚಿತ್ರಕ್ಕೆ ವಿಜಯ್ ಭರ್ತಿ 275 ಕೋಟಿ ರೂ. ಸಂಭಾವನೆ ಪಡೆಯುತ್ತಿದ್ದಾಂತೆ. ಚಿತ್ರದ ಬಜೆಟ್‌ನ ಅರ್ಧ ಭಾಗದಷ್ಟು ವಿಜಯ್ ಸಂಭಾವನೆ ಇರುತ್ತದೆ ಎಂದು ಸುದ್ದಿಯಾಗಿದೆ. ಹಿಂದಿನ ‘ದಿ ಗೋಟ್’ ಚಿತ್ರಕ್ಕೆ ವಿಜಯ್ ಬರೋಬ್ಬರಿ 200 ಕೋಟಿ ಸಂಭಾವನೆ ಪಡೆದಿದ್ದರು ಎಂಬ ವದಂತಿ ಇದೆ. ಈ ಬೆನ್ನಲ್ಲೇ ಅದಕ್ಕಿಂತಲೂ ಹೆಚ್ಚು 275 ಕೋಟಿ ಹಣ ಸಂಭಾವನೆ ರೂಪದಲ್ಲಿ ವಿಜಯ್ ಪಡೆಯಲಿದ್ದಾರೆ ಎಂಬುದೇ ಕುತೂಹಲದ ಸಂಗತಿ.

    2026ರ ತಮಿಳುನಾಡು ವಿಧಾನಸಭೆ ಚುನಾವಣೆಗೆ ವಿಜಯ್ ಅಣಿಯಾಗುತ್ತಿದ್ದಾರೆ. ಸ್ವಂತ ಪಕ್ಷ ಸ್ಥಾಪಿಸಿ ರಾಜಕೀಯಕ್ಕೆ ಎಂಟ್ರಿಯಾಗಿದ್ದಾರೆ. ಲೋಗೋ ಮತ್ತಿತರ ಕೆಲಸಗಳನ್ನ ಮಾಡಿಕೊಂಡು ಬಂದಿದ್ದಾರೆ. ಈ ನಡುವೆ ವರ್ಷ ಕಳೆಯುವದರೊಳಗೆ ವಿಜಯ್ ಒಪ್ಪಿಕೊಂಡ 69ನೇ ಚಿತ್ರ ಮುಗಿಸಿ ಕೊಡಬೇಕಾಗಿದೆ. ಹೀಗಾಗಿ ಶೀಘ್ರದಲ್ಲೇ ‘ದಳಪತಿ 69’ ಚಿತ್ರೀಕರಣ ಶುರುವಾಗಲಿದೆ ಎಂಬ ಮಾಹಿತಿ ಇದೆ. ಇನ್ನು ವಿಜಯ್ ಪಡೆದುಕೊಳ್ತಿರುವ 275 ಕೋಟಿ ಸಂಭಾವನೆ ಸುದ್ದಿಯಂತೂ ಇನ್ನುಳಿದ ಸ್ಟಾರ್ ನಟರಿಗೆ ಆಶ್ಚರ್ಯ ಮೂಡಿಸಿದೆ. ಇಲ್ಲಿಯವರೆಗೆ 200 ಕೋಟಿ ಸಂಭಾವನೆಯನ್ನ ಭಾರತದಲ್ಲಿ ಸ್ಟಾರ್ ನಟರು ನೇರವಾಗಿ ಪಡೆದಿರಲಿಲ್ಲ. ಶೇರ್ ರೂಪದಲ್ಲಿ ಬಂದಿರೋ ಆದಾಯದಲ್ಲಿ ಲೆಕ್ಕ ಚುಕ್ತಾ ಮಾಡಿಕೊಳ್ತಿದ್ದರು. ಅದನ್ನೇ ಸಂಭಾವನೆಯಾಗಿ ಲಾಭ ಗಳಿಸಿಸುತ್ತಿದ್ದ ಹಲವರು ನಟರ ಉದಾಹರಣೆ ಇದೆ. ಆದರೆ ಈಗ ವಿಜಯ್ ಭರ್ತಿ 275 ಕೋಟಿ ಮೊತ್ತದ ರೂಪದಲ್ಲೇ ಸಂಭಾವನೆ ಪಡೆಯುತ್ತಿದ್ದಾರೆ ಎಂಬ ವಿಷಯ ಭಾರೀ ಚರ್ಚೆಗೀಡು ಮಾಡಿದೆ.

  • TVK Flag Launch: ಪಕ್ಷದ ಚಿಹ್ನೆ ಬಿಡುಗಡೆ ಮಾಡಿದ ವಿಜಯ್‌ ದಳಪತಿ

    TVK Flag Launch: ಪಕ್ಷದ ಚಿಹ್ನೆ ಬಿಡುಗಡೆ ಮಾಡಿದ ವಿಜಯ್‌ ದಳಪತಿ

    ಮಿಳು ನಟ ವಿಜಯ್ (Actor Vijay)  ಇಂದು (ಆ.22) ತಮ್ಮ ರಾಜಕೀಯ ಪಕ್ಷದ ಬಾವುಟ ಮತ್ತು ಚಿಹ್ನೆಯನ್ನು ಬಿಡುಗಡೆ ಮಾಡಿದ್ದಾರೆ. ಮುಂಬರುವ ಚುನಾವಣೆಗೆ ವಿಜಯ್ ಈಗಿನಿಂದಲೇ ಸಿದ್ಧತೆ ಮಾಡಿಕೊಳ್ತಿದ್ದಾರೆ. ಇದನ್ನೂ ಓದಿ:1 ಸೆಕೆಂಡ್ ರೀಲ್ಸ್‌ ಮಾಡಿದ ದೀಪಿಕಾ ಪಡುಕೋಣೆ ಫುಲ್‌ ಟ್ರೆಂಡಿಂಗ್

    ಈ ವರ್ಷದ ಫೆಬ್ರವರಿಯಲ್ಲಿ ರಾಜಕೀಯ ಎಂಟ್ರಿ ಕುರಿತು ಘೋಷಿಸುವುದರ ಜೊತೆಗೆ ‘ತಮಿಳಿಗ ವೆಟ್ರಿ ಕಳಗಂ’ (TVK Party) ಎಂದು ಪಕ್ಷದ ಹೆಸರನ್ನು ವಿಜಯ್ ತಿಳಿಸಿದ್ದರು. ಈ ಬೆನ್ನಲ್ಲೇ ತಮ್ಮ ಪಕ್ಷದ ಬಾವುಟ ಮತ್ತು ಚಿಹ್ನೆಯನ್ನು ಇಂದು ಬಿಡುಗಡೆ ಮಾಡಿದ್ದಾರೆ.

    ಇನ್ನೂ 2026ರಲ್ಲಿ ನಡೆಯಲಿರುವ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿಯೂ ವಿಜಯ್ ಈ ಹಿಂದೆ ಹೇಳಿದ್ದರು. ಈ ವರ್ಷ ನಡೆದ ಲೋಕಸಭೆ ಚುನಾವಣೆಯಲ್ಲಿ ವಿಜಯ್ ಯಾವುದೇ ಮೈತ್ರಿ ಅಥವಾ ಪಕ್ಷದ ಪರ ಅವರು ನಿಲ್ಲಲಿಲ್ಲ.

  • ವಿಜಯ್ ದಳಪತಿ ಸಿನಿಮಾದಲ್ಲಿ ಶ್ರೀಲೀಲಾ

    ವಿಜಯ್ ದಳಪತಿ ಸಿನಿಮಾದಲ್ಲಿ ಶ್ರೀಲೀಲಾ

    ನ್ನಡದ ಬ್ಯೂಟಿ ಶ್ರೀಲೀಲಾ (Sreeleela) ತೆಲುಗಿನಲ್ಲಿ ಸಖತ್ ಹೈಪ್ ಕ್ರಿಯೇಟ್ ಮಾಡಿದ್ದಾರೆ. ಆದರೆ ಇತ್ತೀಚೆಗೆ ಸತತ ತೆಲುಗು ಸಿನಿಮಾಗಳ ಸೋಲಿನ ಬೆನ್ನಲ್ಲೇ ಕಾಲಿವುಡ್‌ನತ್ತ ‘ಕಿಸ್’ (Kiss Film) ನಟಿ ಮುಖ ಮಾಡಿದ್ದಾರೆ. ಮತ್ತೊಂದು ತಮಿಳು ಸಿನಿಮಾದಲ್ಲಿ ಸ್ಟಾರ್ ನಟ ವಿಜಯ್ ದಳಪತಿ ಜೊತೆ ತೆರೆಹಂಚಿಕೊಳ್ಳುವ ಚಾನ್ಸ್ ಗಿಟ್ಟಿಸಿಕೊಂಡಿದ್ದಾರೆ.

    ವಿಜಯ್ ಸದ್ಯ ‘ಗೋಟ್’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ನಟನೆಯ ಬದಲು ಸ್ಪೆಷಲ್ ಹಾಡಿಗೆ ಕುಣಿಯಲು ಚಾನ್ಸ್ ಸಿಕ್ಕಿದೆ. ಮೊದಲೇ ಶ್ರೀಲೀಲಾ ಡ್ಯಾನ್ಸ್‌ನಲ್ಲಿ ಎತ್ತಿದ ಕೈ. ಹಾಗಾಗಿ ವಿಜಯ್ (Vijay Thalapathy) ಜೊತೆ ಸೊಂಟ ಬಳುಕಿಸಲು ಶ್ರೀಲೀಲಾ ಚಿತ್ರತಂಡ ಆಫರ್ ಕೊಟ್ಟಿದೆ ಎನ್ನಲಾಗಿದೆ. ಸದ್ಯದಲ್ಲೇ ಅಧಿಕೃತ ಮಾಹಿತಿ ಚಿತ್ರತಂಡದಿಂದ ಹೊರಬೀಳಲಿದೆ. ಅಲ್ಲಿಯವರೆಗೂ ಕಾಯಬೇಕಿದೆ. ಇದನ್ನೂ ಓದಿ:ಆಗಸ್ಟ್ 2ರಂದು ‘ದಿ ಸಾಬರಮತಿ ರಿಪೋರ್ಟ್’ ಸಿನಿಮಾ ರಿಲೀಸ್

    ವಿಜಯ್ ಜೊತೆಗಿನ ಸಿನಿಮಾ ಮಾತ್ರವಲ್ಲ. ತಮಿಳಿನ ಸ್ಟಾರ್ ನಟ ಅಜಿತ್ ಕುಮಾರ್‌ಗೆ ನಾಯಕಿಯಾಗಿ ಶ್ರೀಲೀಲಾಗೆ ನಟಿಸುವ ಚಾನ್ಸ್ ಸಿಕ್ಕಿದೆ. ತೆಲುಗಿನ ಸಿನಿಮಾಗಳಿಂದ ಔಟ್ ಆದ್ಮೇಲೆ ಸದ್ಯ ತಮಿಳಿನ 2 ಪ್ರಾಜೆಕ್ಟ್‌ಗಳನ್ನು ನಟಿ ಒಪ್ಪಿಕೊಂಡಿದ್ದಾರೆ.

    ಅಜಿತ್ ಕುಮಾರ್ (Ajith Kumar) ನಟನೆಯ ‘ಗುಡ್ ಬ್ಯಾಡ್ ಅಗ್ಲಿ’ ಚಿತ್ರಕ್ಕೆ ಅಧಿಕ್ ರವಿಚಂದ್ರನ್ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ನಟಿಸಲು ಶ್ರೀಲೀಲಾರನ್ನು ಸಂಪರ್ಕಿಸಿದೆ ಚಿತ್ರತಂಡ. ನಟಿ ಕೂಡ ಕಥೆ ಕೇಳಿ ಓಕೆ ಎಂದಿದ್ದಾರೆ. ಮೇ 1ರಂದು ಅಜಿತ್ ಹುಟ್ಟುಹಬ್ಬದಂದು ಅಧಿಕೃತ ಮಾಹಿತಿ ಹೊರಬೀಳಲಿದೆ. ‘ವಿದಾ ಮುಯಾರ್ಚಿ’ ಚಿತ್ರೀಕರಣದಲ್ಲಿ ನಟ ಬ್ಯುಸಿಯಾಗಿದ್ದಾರೆ. ಇದಾದ ಬಳಿಕ ‘ಗುಡ್ ಬ್ಯಾಡ್ ಅಗ್ಲಿ’ ಚಿತ್ರವನ್ನು ಕೈಗೆತ್ತಿಕೊಳ್ಳಲಿದ್ದಾರೆ.


    ಕೆಲದಿನಗಳ ಹಿಂದೆ ಕಾರ್ಯಕ್ರಮವೊಂದರಲ್ಲಿ ತಮಿಳು ಸಿನಿಮಾದಲ್ಲಿ ನಟಿಸುವ ಇಂಗಿತವನ್ನು ಶ್ರೀಲೀಲಾ ವ್ಯಕ್ತಪಡಿಸಿದ್ದರು. ಇದೀಗ ವಿಜಯ್ ಮತ್ತು ಅಜಿತ್ ಕುಮಾರ್ ಜೊತೆಗಿನ ಸಿನಿಮಾ ಸುದ್ದಿ ಕೇಳುತ್ತಿದ್ದಂತೆ ಅಭಿಮಾನಿಗಳು ಥ್ರಿಲ್ ಆಗಿದ್ದಾರೆ.

  • Citizenship Law: ಸಿಎಎ ಜಾರಿಗೆ ದಳಪತಿ ವಿಜಯ್‌ ವಿರೋಧ

    ಚೆನ್ನೈ: ಇತ್ತೀಚೆಗಷ್ಟೇ ತಮಿಳಗ ವೆಟ್ರಿ ಕಳಗಂ ಪಕ್ಷ ಸ್ಥಾಪಿಸಿ ರಾಜಕೀಯ ಪ್ರವೇಶಿಸಿರುವ ನಟ ವಿಜಯ್‌ ದಳಪತಿ (Vijay Thalapathy) ಪೌರತ್ವ ತಿದ್ದುಪಡಿ ಕಾಯ್ದೆ (CAA) ಜಾರಿಗೆ ವಿರೋಧ ವ್ತಕ್ಯಪಡಿಸಿದ್ದಾರೆ.

    ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಪ್ರಧಾನಿ ಮೋದಿ (Narendra Modi) ನೇತೃತ್ವದ ಸರ್ಕಾರ ದೇಶಾದ್ಯಂತ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಮಾಡಿ ಸೋಮವಾರವಷ್ಟೇ (ಮಾ.11) ಅಧಿಸೂಚನೆ ಹೊರಡಿಸಿತ್ತು. ಸಿಎಎ ಕಾಯ್ದೆಗೆ ಕೆಲವರು ಮೆಚ್ಚುಗೆ ಸೂಚಿಸಿದ್ರೆ, ಇನ್ನೂ ಕೆಲವರು ವಿರೋಧಿಸಿ ಸೋಶಿಯಲ್‌ ಮೀಡಿಯಾಗಳಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಈ ಬೆನ್ನಲ್ಲೇ ದಳಪತಿ ವಿಜಯ್‌ ಸಹ ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ: ಭಾರತದ ಪ್ರತಿಯೊಬ್ಬ ಮುಸ್ಲಿಮರೂ ಸಿಎಎಯನ್ನು ಸ್ವಾಗತಿಸಬೇಕು: ಮುಸ್ಲಿಂ ಜಮಾತ್‌ ಅಧ್ಯಕ್ಷ ಕರೆ

    ದಳಪತಿ ಹೇಳಿದ್ದೇನು?
    ಸಿಎಎ ಜಾರಿಗೆ ವಿರೋಧಿಸಿ ಪತ್ರಿಕಾ ಪ್ರಕಟಣೆ ಹೊರಡಿಸಿರುವ ವಿಜಯ್‌, ಸಿಎಎ ಜಾರಿಗೆ ಜಾರಿ ಸ್ವೀಕಾರಾರ್ಹವಲ್ಲ ಎಂದು ಹೇಳಿದ್ದಾರೆ. ದೇಶದ ಎಲ್ಲಾ ನಾಗರಿಕರು ಸಾಮಾಜಿಕ ಸಾಮರಸ್ಯದಿಂದ ಬದುಕುವ ವಾತಾವರಣದಲ್ಲಿ ಭಾರತೀಯ ಪೌರತ್ವ ತಿದ್ದುಪಡಿ ಕಾಯಿದೆ-2019 (ಸಿಎಎ) ನಂತಹ ಯಾವುದೇ ಕಾನೂನನ್ನು ಜಾರಿಗೆ ತರುವುದು ಸ್ವೀಕಾರಾರ್ಹವಲ್ಲ ಎಂದಿದ್ದಾರೆ. ಅಲ್ಲದೇ ತಮಿಳುನಾಡಿನಲ್ಲಿ ಈ ಕಾಯ್ದೆ ಜಾರಿಯಾಗದಂತೆ ನೋಡಿಕೊಳ್ಳಬೇಕು ಎಂದು ಸರ್ಕಾರಕ್ಕೆ (Tamil Nadu government) ಮನವಿ ಮಾಡಿದ್ದಾರೆ. ಇದನ್ನೂ ಓದಿ: ಮಿಷನ್‌ ದಿವ್ಯಾಸ್ತ್ರ ಪ್ರಯೋಗ ಯಶಸ್ವಿ – ಏನಿದು MIRV ತಂತ್ರಜ್ಞಾನ? ಯುದ್ಧದ ವೇಳೆ ಹೇಗೆ ಸಹಾಯವಾಗುತ್ತೆ? ಯಾರ ಬಳಿಯಿದೆ?

    ಸಿಎಎಯಲ್ಲಿ ಏನಿದೆ?
    ಪಾಕಿಸ್ತಾನ, ಬಾಂಗ್ಲಾದೇಶ, ಅಫ್ಘಾನಿಸ್ತಾನದಲ್ಲಿ ಕಿರುಕುಳಕ್ಕೆ ಒಳಗಾಗಿ ಭಾರತಕ್ಕೆ ವಲಸೆ ಬಂದಿರುವ ಮುಸ್ಲಿಮೇತರರಿಗೆ ಭಾರತದ ಪೌರತ್ವ (Citizenship) ನೀಡಲಾಗುತ್ತದೆ. 2014ರ ಡಿಸೆಂಬರ್ 31ಕ್ಕೆ ಮೊದಲು ರಕ್ಷಣೆ ಬಯಸಿ ಭಾರತಕ್ಕೆ ಶರಣಾರ್ಥಿಗಳಾಗಿ ಬಂದಿರುವ ಹಿಂದೂಗಳು, ಕ್ರೈಸ್ತರು, ಸಿಖ್ಖರು, ಜೈನರು, ಬೌದ್ಧರು, ಪಾರ್ಸಿಗಳಿಗೆ ಮಾತ್ರ ಸಿಎಎ ಅನ್ವಯ ಪೌರತ್ವ ನೀಡಲಾಗುತ್ತದೆ. ಪೌರತ್ವ ನೋಂದಣಿ ಪ್ರಕ್ರಿಯೆ ಸಂಪೂರ್ಣವಾಗಿ ಆನ್‌ಲೈನ್‌ನಲ್ಲಿಯೇ ಮುಗಿಯಲಿದ್ದು, ದೇಶದಲ್ಲಿರುವ ಮುಸ್ಲಿಮರಿಗೆ ಸಿಎಎಯಿಂದ ಯಾವುದೇ ತೊಂದರೆ ಆಗುವುದಿಲ್ಲ ಎಂಬುದನ್ನು ಅಧಿಸೂಚನೆಯಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ದೇಶಾದ್ಯಂತ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ – ಕೇಂದ್ರದಿಂದ ಅಧಿಸೂಚನೆ ಪ್ರಕಟ