Tag: ವಿಜಯ್ ದೇವರಕೊಂಡ

  • ‘ಲೈಗರ್’ ಸಿನಿಮಾದಲ್ಲಿ ನಟಿಸಲು 25 ಕೋಟಿ ಸಂಭಾವನೆ ಪಡೆದರೂ, ಸಿನಿಮಾನೇ ಮರೆತಿದ್ದರಾ ಮೈಕ್ ಟೈಸನ್

    ‘ಲೈಗರ್’ ಸಿನಿಮಾದಲ್ಲಿ ನಟಿಸಲು 25 ಕೋಟಿ ಸಂಭಾವನೆ ಪಡೆದರೂ, ಸಿನಿಮಾನೇ ಮರೆತಿದ್ದರಾ ಮೈಕ್ ಟೈಸನ್

    ಬಾಕ್ಸಿಂಗ್ ಲೋಕದ ದಂತಕಥೆಯಾಗಿರುವ ಮೈಕ್ ಟೈಸನ್, ಇದೇ ಮೊದಲ ಬಾರಿಗೆ ಭಾರತೀಯ ಸಿನಿಮಾದಲ್ಲಿ ನಟಿಸಿದ್ದರು. ವಿಜಯ್ ದೇವರಕೊಂಡ ನಾಯಕನಾಗಿ ನಟಿಸಿರುವ ಲೈಗರ್ ಸಿನಿಮಾದಲ್ಲಿ ಅವರು ವಿಶೇಷ ಪಾತ್ರವನ್ನು ನಿರ್ವಹಿಸಿದ್ದರು. ಅದು ಕೆಲವೇ ನಿಮಿಷಗಳಲ್ಲಿ ಬಂದು ಹೋಗುವ ಪಾತ್ರವಾದರೂ, ಅವರು ಈ ಚಿತ್ರದಲ್ಲಿ ನಟಿಸಲು ಬರೋಬ್ಬರಿ 25 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ ಎನ್ನಲಾಗುತ್ತಿದೆ.

    ಪುರಿ ಜಗನ್ನಾಥ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಈ ಸಿನಿಮಾದಲ್ಲಿ ಬಾಕ್ಸಿಂಗ್ ಕುರಿತಾದ ಕಥೆಯಿದೆ. ಹಾಗಾಗಿ ಕ್ಲೈಮ್ಯಾಕ್ಸ್ ನಲ್ಲಿ ಮೈಕ್ ಟೈಸನ್ ಆಗಮನವಾಗುತ್ತದೆ. ಈ ದೃಶ್ಯದಲ್ಲಿ ನಟಿಸಲು ಅವರು ಭಾರೀ ಮೊತ್ತದ ಹಣ ಬೇಡಿಕೆ ಇಟ್ಟಿದ್ದರು. ಅಷ್ಟೂ ಹಣವನ್ನು ನಿರ್ಮಾಪಕರು ಸಂದಾಯ ಮಾಡಿದ್ದಾರೆ. ಆದರೆ, ಸಿನಿಮಾ ರಿಲೀಸ್ ವೇಳೆಯಲ್ಲಿ ಟೈಸನ್ ತಾವು ಲೈಗರ್ ಸಿನಿಮಾದಲ್ಲಿ ನಟಿಸಿದ್ದೇನೆ ಎನ್ನುವುದನ್ನೇ ಮರೆತು ಹೋಗಿದ್ದರು. ಸಂದರ್ಶನವೊಂದರಲ್ಲಿ ನಾನು ಆ ರೀತಿಯ ಸಿನಿಮಾ ಮಾಡಿದ್ದೇನಾ ಎನ್ನುವಂತೆ ಉತ್ತರ ನೀಡಿದ್ದರು. ಇದನ್ನೂ ಓದಿ:ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ‘ಗಂಡುಮಗ’ ಎಂದು ಹಾಡಿ ಹೊಗಳಿದ ಜಗ್ಗೇಶ್

    ಮೈಕ್ ಟೈಸನ್ ತಮ್ಮ ಸಿನಿಮಾದಲ್ಲಿ ನಟಿಸಿದರೆ, ಚಿತ್ರಕ್ಕೆ ಮತ್ತೊಂದು ತೂಕ ಬರಲಿದೆ ಎಂದು ಚಿತ್ರತಂಡ ನಂಬಿತ್ತು. ಬಹುಶಃ ಆ ನಂಬಿಕೆ ಸುಳ್ಳಾಗಿದೆ. ಸಿನಿಮಾವನ್ನು ಪ್ರೇಕ್ಷಕ ಒಪ್ಪದೇ ಇರುವ ಕಾರಣಕ್ಕಾಗಿ ಸಿನಿಮಾದಲ್ಲಿ ಟೈಸನ್ ಇದ್ದರೂ, ಸಿನಿಮಾ ನಿರೀಕ್ಷೆಯ ಮಟ್ಟ ತಲುಪಿಲ್ಲ. ಸಿನಿಮಾ ರಿಲೀಸ್ ಆಗಿ ಎರಡನೇ ದಿನಕ್ಕೆ ಸಿನಿಮಾ ಫ್ಲ್ಯಾಪ್ ಎಂದು ಘೋಷಿಸಿ ಬಿಟ್ಟರು ನೋಡುಗರು. ಹಾಗಾಗಿ ಸಿನಿಮಾದಲ್ಲಿ ಏನೇ ಕಸರತ್ತು ಮಾಡಿದರು ಅದು ವರ್ಕ್ ಆಗಿಲ್ಲ ಎನ್ನುವುದು ನಿಜವಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಅನಕೊಂಡ ಅಂತ ಬೈದ ಥಿಯೇಟರ್ ಮಾಲೀಕನನ್ನು ಭೇಟಿ ಮಾಡಿದ ವಿಜಯ್ ದೇವರಕೊಂಡ

    ಅನಕೊಂಡ ಅಂತ ಬೈದ ಥಿಯೇಟರ್ ಮಾಲೀಕನನ್ನು ಭೇಟಿ ಮಾಡಿದ ವಿಜಯ್ ದೇವರಕೊಂಡ

    ಮುಂಬೈನ ಸುಪ್ರಸಿದ್ಧ ಮರಾಠ ಮಂದಿರ್ ಥಿಯೇಟರ್ ಮಾಲೀಕ ಮನೋಜ್ ದೇಸಾಯಿ ಎರಡು ದಿನಗಳ ಹಿಂದೆಯಷ್ಟೇ ವಿಜಯ್ ದೇವರಕೊಂಡ ಅವರನ್ನು ಹಿಗ್ಗಾಮುಗ್ಗ ಬೈದಿದ್ದರು. ಲೈಗರ್ ಸಿನಿಮಾದಲ್ಲಿ ನಟಿಸಿರುವ ಆ ವಿಜಯ್ ದೇವರಕೊಂಡ ಎನ್ನುವ ನಟ, ದೇವರಕೊಂಡ ಅಲ್ಲ, ಅನಕೊಂಡ ಎಂದು ಜರಿದಿದ್ದರು. ಮನೋಜ್ ದೇಸಾಯಿ ಆಡಿದ ಮಾತುಗಳ ವಿಡಿಯೋ ಸಖತ್ ವೈರಲ್ ಆಗಿತ್ತು. ಇದರ ಬೆನ್ನಲ್ಲೆ ವಿಜಯ್ ಮುಬೈಗೆ ತೆರಳಿ, ಮನೋಜ್ ದೇಸಾಯಿ ಅವರನ್ನು ಭೇಟಿ ಮಾಡಿದ್ದಾರೆ.

    ವಿಜಯ್ ದೇವರಕೊಂಡ ಮೊದಲ ಸಿನಿಮಾದಲ್ಲೇ ಅಹಂಕಾರ ತೋರಿಸಿದ್ದಾರೆ ಎನ್ನುವ ಕಾರಣಕ್ಕಾಗಿ ಮನೋಜ್ ದೇಸಾಯಿ ಹಿಗ್ಗಾಮುಗ್ಗ ಝಾಡಿಸಿದ್ದರು. ‘ನಮ್ಮ ಸಿನಿಮಾವನ್ನು ಯಾರು ತಡೆಯುತ್ತಾರೋ ನೋಡೋಣ’ ಎನ್ನುವ ಮಾತುಗಳನ್ನು ಬಾಯ್ಕಾಟ್ ಸೇರಿದಂತೆ ತಮ್ಮ ಸಿನಿಮಾವನ್ನು ವಿರೋಧಿಸುವವರಿಗೆ ವಿಜಯ್ ದೇವರಕೊಂಡ ಈ ಮಾತುಗಳನ್ನು ಆಡಿದ್ದರು. ಇದಕ್ಕೆ ಮನೋಜ್ ವಿರೋಧ ವ್ಯಕ್ತ ಪಡಿಸಿದ್ದರು. ಇದನ್ನೂ ಓದಿ:ನಾನು ಅಂಬರೀಶ್ ಅಣ್ಣನ ಅಭಿಮಾನಿ, ಅವರ ಮಗನಿಗೆ ಸಿನಿಮಾ ಮಾಡುತ್ತಿರುವುದು ಹೆಮ್ಮೆ : ನಿರ್ದೇಶಕ ಮಹೇಶ್ ಕುಮಾರ್

    ಲೈಗರ್ ಸಿನಿಮಾ ವಿಚಾರದಲ್ಲಿ ವಿಜಯ್ ದೇವರಕೊಂಡ ಅತಿರೇಕವಾಗಿ ಮಾತನಾಡುತ್ತಿದ್ದಾರೆ ಎಂದು ಈಗಾಗಲೇ ಸೋಷಿಯಲ್ ಮೀಡಿಯಾದಲ್ಲಿ ಚರ್ಚೆ ಆಗಿದೆ. ಓಟಿಟಿ ಹಕ್ಕುಗಳು 200 ಕೋಟಿಗೆ ಸೇಲ್ ಆದಾಗ, ನಾವು ಥಿಯೇಟರ್ ನಲ್ಲಿ ಇದಕ್ಕಿಂತ ಹೆಚ್ಚಿನ ಹಣವನ್ನು ಮಾಡುತ್ತೇವೆ ಎಂದು ನಿರಾಕರಿಸಿದ ಪೋಸ್ಟ್ ವೊಂದನ್ನು ವಿಜಯ್ ಮಾಡಿದ್ದರು. ಅದು ಕೂಡ ಇದೀಗ ಟ್ರೋಲ್ ಆಗುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ಬ್ಯಾಡ್ ಕಾಮೆಂಟ್ ಮಾಡಿದವನಿಗೆ ಮುಟ್ಟಿ ನೋಡಿಕೊಳ್ಳುವಂತೆ ಖಡಕ್ ಉತ್ತರ ಕೊಟ್ಟ ಅನಸೂಯ

    ಬ್ಯಾಡ್ ಕಾಮೆಂಟ್ ಮಾಡಿದವನಿಗೆ ಮುಟ್ಟಿ ನೋಡಿಕೊಳ್ಳುವಂತೆ ಖಡಕ್ ಉತ್ತರ ಕೊಟ್ಟ ಅನಸೂಯ

    ಟಾಲಿವುಡ್‌ನಲ್ಲಿ ನಟ ವಿಜಯ್ ದೇವರಕೊಂಡ ಮತ್ತು ನಿರೂಪಕಿ ಅನಸೂಯ ನಡುವಿನ ಜಟಾಪಟಿ ಇದೀಗ ಮತ್ತೆ ಭಾರೀ ಸುದ್ದಿಯಲ್ಲಿದೆ. ಇತ್ತೀಚೆಗೆ ವಿಜಯ್ ವಿರುದ್ಧ ಅನಸೂಯ ಅವರು ಹಾಕಿದ ಪೋಸ್ಟ್ ಎಲ್ಲೆಡೆ ಸಖತ್ ವೈರಲ್ ಆಗುತ್ತಿದೆ. ಈ ಬೆನ್ನಲ್ಲೇ ಅನಸೂಯ ವಿರುದ್ಧ ವಿಜಯ್ ಫ್ಯಾನ್ಸ್ ತಿರುಗಿಬಿದ್ದಿದ್ದಾರೆ. ವಿಜಯ್ ಅಭಿಮಾನಿಗಳನ್ನ ಇದೀಗ ನಟಿ ಕ್ಲಾಸ್‌ ತೆಗೆದುಕೊಂಡಿದ್ದಾರೆ.

    vijaydevarakonda

    ವಿಜಯ್ ದೇವರಕೊಂಡ ನಟನೆಯ `ಅರ್ಜುನ್ ರೆಡ್ಡಿ’ ಸಿನಿಮಾದ ಕಾರ್ಯಕ್ರಮದಲ್ಲಿ ನಿರೂಪಕಿ ಅನಸೂಯ ಮತ್ತು ವಿಜಯ್ ದೇವರಕೊಂಡ ನಡುವೆ ಜಟಾಪಟಿ ನಡೆದಿತ್ತು. ಮಹಿಳೆಯರ ಕುರಿತಾಗಿ ವಿಜಯ್ ದೇವರಕೊಂಡ ಅವಮಾನಕರ ರೀತಿಯಲ್ಲಿ ಸಂಭಾಷಣೆ ಹೇಳಿದರು ಎಂದು ವೇದಿಕೆಯ ಮೇಲೆಯೇ ಅನಸೂಯ ಆಕ್ಷೇಪಿಸಿದ್ದರು. `ಲೈಗರ್’ ಸಿನಿಮಾ ಗಲ್ಲಾಪೆಟ್ಟಿಗೆಯಲ್ಲಿ ಸೋತಿರುವ ಬೆನ್ನಲ್ಲೇ ವಿಜಯ್ ವಿರುದ್ಧ ನಿರೂಪಕಿ ಅನಸೂಯ ಬರೆದಿರುವ ಪೋಸ್ಟ್ ವೈರಲ್ ಆಗುತ್ತಿದ್ದಂತೆ ವಿಜಯ್ ಅಭಿಮಾನಿಗಳು ಅನುಸೂಯ ವಿರುದ್ಧ ತಿರುಗಿ ಬಿದ್ದಿದ್ದಾರೆ. ಸೋಷಿಯಲ್‌ ಮೀಡಿಯಾದಲ್ಲಿ ವಿಜಯ್‌ ಫ್ಯಾನ್ಸ್‌ ಮತ್ತು ಅನಸೂಯ ನಡುವೆ ಬಿಗ್‌ ವಾರ್‌ ನಡೆಯುತ್ತಿದೆ. ಇದನ್ನೂ ಓದಿ:1 ವರ್ಷದ ಬಳಿಕ ಆಫ್ಘನ್‌ನಲ್ಲಿ ಚಿತ್ರಮಂದಿರಗಳು ಓಪನ್ – ಸಿನಿಮಾದಲ್ಲಿ ಮಹಿಳಾ ಪಾತ್ರಗಳಿಗೆ ತಾಲಿಬಾನ್ ನಿರ್ಬಂಧ

    ಅದರಲ್ಲಿ ಒಬ್ಬ ಅಭಿಮಾನಿ, ಅಸಹ್ಯವಾಗಿ ಕಾಮೆಂಟ್ ಮಾಡಿದ್ದಾರೆ. ಒಂದು ದಿನಕ್ಕೆ ನಿನ್ನ ರೇಟ್ ಎಷ್ಟು ಎಂದು ಕೇಳಿದ್ದಾರೆ. ಆ ಕಾಮೆಂಟ್ ನೋಡಿರುವ ಅನಸೂಯ, ಮುಟ್ಟಿ ನೋಡಿಕೊಳ್ಳುವಂತೆ ಖಡಕ್ ಉತ್ತರ ನೀಡಿದ್ದಾರೆ.

    ನಿಮ್ಮ ಸಹೋದರಿಯರಿಗೆ, ಅಥವಾ ನೀವು ಮದುವೆಯಾಗಿದ್ದರೆ, ನಿಮ್ಮ ಹೆಂಡತಿ ಅಥವಾ ಸಹೋದರಿಯ ಬಳಿ ಕೇಳಿ ಒಂದು ದಿನದಲ್ಲಿ ಎಷ್ಟು ತೆಗೆದುಕೊಳ್ಳುತ್ತಾರೆ ಎಂದು ರಿಪ್ಲೇ ಮಾಡಿದ್ದಾರೆ. ನೆಟ್ಟಿಗರು ಹೆದರಿ ತಮ್ಮ ಟ್ವೀಟ್ ಅನ್ನು ಡಿಲೀಟ್ ಮಾಡಿದ್ದಾರೆ. ಅನಸೂಯ ಅವರ ಈ ಕಾಮೆಂಟ್ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇನ್ನು ಕೆಲವೊಬ್ಬರು ಆಂಟಿ ಎಂದು ಕರೆದಿದ್ದಾರೆ. ಕೆಲವರ ಬ್ಯಾಡ್ ಕಾಮೆಂಟ್‌ಗೆ ನಟಿ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ನಡುರಸ್ತೆಯಲ್ಲಿ ನಿಶ್ಚಿತಾರ್ಥ ಮಾಡಿಕೊಂಡ ನಟ ವಿಜಯ್ ದೇವರಕೊಂಡ

    ನಡುರಸ್ತೆಯಲ್ಲಿ ನಿಶ್ಚಿತಾರ್ಥ ಮಾಡಿಕೊಂಡ ನಟ ವಿಜಯ್ ದೇವರಕೊಂಡ

    ಟಾಲಿವುಡ್ ನಟ ವಿಜಯ್ ದೇವರಕೊಂಡಗೆ ರಾಜ್ಯದೆಲ್ಲೆಡೆ ಅಭಿಮಾನಿಗಳಿದ್ದಾರೆ. ಅದರಲ್ಲೂ ವಿಜಯ್‌ಗೆ ಫೀಮೇಲ್ ಫ್ಯಾನ್ಸ್ ಜಾಸ್ತಿ. ಇದೀಗ ನಡುರಸ್ತೆಯಲ್ಲಿ `ಅರ್ಜುನ್ ರೆಡ್ಡಿ’ ಸ್ಟಾರ್ ವಿಜಯ್ ಎಂಗೇಜ್‌ಮೆಂಟ್ ಮಾಡಿಕೊಂಡಿದ್ದಾರೆ.

    vijaydevarakonda

    ದಕ್ಷಿಣದ ಸ್ಟಾರ್ ನಟರಲ್ಲಿ ಒಬ್ಬರಾಗಿ ಗುರುತಿಸಿಕೊಂಡಿರುವ ವಿಜಯ್‌ಗೆ ಅಪಾರ ಅಭಿಮಾನಿಗಳಿದ್ದಾರೆ. ವಿಜಯ್ ಸಿನಿಮಾಗಾಗಿಯೇ ಕಾದು ಕೂರುವ ಫ್ಯಾನ್ಸ್ ಕೂಡ ಇದ್ದಾರೆ. ಇತ್ತೀಚೆಗೆ ಚಿತ್ರದ ಪ್ರಚಾರವೊಂದಕ್ಕೆ ವಿಜಯ್ ದೇವರಕೊಂಡ ಬೆಂಗಳೂರಿಗೆ ಬಂದಿದ್ದರು. ಈ ವೇಳೆ ಕ್ರೇಜಿ ಫೀಮೇಲ್ ಫ್ಯಾನ್ ಒಬ್ಬರು ವಿಜಯ್ ಅವರನ್ನ ಭೇಟಿ ಮಾಡಿದ್ದಾರೆ. ಅಷ್ಟೇ ಅಲ್ಲ, ನಡುರಸ್ತೆಯಲ್ಲಿ ಯುವತಿ ಜತೆ ಎಂಗೇಜ್‌ಮೆಂಟ್ ಮಾಡಿಕೊಂಡಿದ್ದಾರೆ. ಇದನ್ನೂ ಓದಿ:ಕಾಫಿನಾಡು ಚಂದುಗೆ ಸರ್ಪ್ರೈಸ್ ಗಿಫ್ಟ್ ನೀಡಿದ ಅನುಶ್ರೀ

    ಈ ವೇಳೆ ಅಭಿಮಾನಿಯೊಬ್ಬರು, ವಿಜಯ್‌ಗೆ ಉಂಗುರ ಕೊಟ್ಟಿದ್ದಾರೆ. ಸಂತೋಷದಿಂದ ಮಂಡಿಯೂರಿ ಸ್ವೀಕರಿಸಿದ್ದಾರೆ. ನೆಚ್ಚಿನ ನಟನನ್ನ ನೋಡಿ ಅಭಿಮಾನಿ ಭಾವುಕರಾಗಿದ್ದಾರೆ. ಅಭಿಮಾನಿಯ ಆಸೆಯಂತೆ, ಆಕೆಯ ಕೈಯಿಂದ ಉಂಗುರ ತೊಡಿಸಿಕೊಂಡಿದ್ದಾರೆ. ಸದ್ಯ ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ವಿಜಯ್ ದೇವರಕೊಂಡ ವಿರುದ್ಧ ಹಳೆಯ ಸೇಡು ತೀರಿಸಿಕೊಂಡ ನಿರೂಪಕಿ ಅನಸೂಯ

    ವಿಜಯ್ ದೇವರಕೊಂಡ ವಿರುದ್ಧ ಹಳೆಯ ಸೇಡು ತೀರಿಸಿಕೊಂಡ ನಿರೂಪಕಿ ಅನಸೂಯ

    ವಿಜಯ್ ದೇವರಕೊಂಡ ನಟನೆಯ ಅರ್ಜುನ್ ರೆಡ್ಡಿ ಸಿನಿಮಾದ ಕಾರ್ಯಕ್ರಮದಲ್ಲಿ ನಿರೂಪಕಿ ಅನಸೂಯ ಮತ್ತು ವಿಜಯ್ ದೇವರಕೊಂಡ ನಡುವೆ ಜಟಾಪಟಿ ನಡೆದಿತ್ತು. ಮಹಿಳೆಯರ ಕುರಿತಾಗಿ ವಿಜಯ್ ದೇವರಕೊಂಡ ಅವಮಾನಕರ ರೀತಿಯಲ್ಲಿ ಸಂಭಾಷಣೆ ಹೇಳಿದರು ಎಂದು ವೇದಿಕೆಯ ಮೇಲೆಯೇ ಅನಸೂಯ ಆಕ್ಷೇಪಿಸಿದ್ದರು. ಈ ಘಟನೆಯಿಂದ ವಿಜಯ್ ಮುಜಗರ ಕೂಡ ಅನುಭವಿಸಿದ್ದರು. ಹೀಗಾಗಿ ಇಬ್ಬರ ಮಧ್ಯ ಮನಸ್ತಾಪ ಉಂಟಾಗಿತ್ತು.

    ಈ ಘಟನೆಯ ನಂತರ ವಿಜಯ್ ದೇವರಕೊಂಡ ಅವರ ಯಾವ ಕಾರ್ಯಕ್ರಮಕ್ಕೂ ಅನಸೂಯ ಇರುತ್ತಿರಲಿಲ್ಲ ಎನ್ನಲಾಗುತ್ತಿದೆ. ಮಹಿಳೆಯರ ಪರ ನಿಂತಿದ್ದಕ್ಕೆ ಅನಸೂಯ ಸಾಕಷ್ಟು ನೋವುಗಳನ್ನು ಅನುಭವಿಸಿದ್ದರಂತೆ. ಈ ಘಟನೆ ನಡೆದು ಹಲವು ವರ್ಷಗಳಾದರೂ, ವಿಜಯ್ ದೇವರಕೊಂಡ ಮೇಲಿನ ಕೋಪ ಹಾಗೆಯೇ ಇತ್ತು. ವಿಜಯ್ ನಟನೆಯ ಲೈಗರ್ ಸಿನಿಮಾ ಬಾಕ್ಸ್ ಆಫೀಸಿನಲ್ಲಿ ಸೋಲುತ್ತಿದ್ದಂತೆಯೇ ಅನಸೂಯ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಕರ್ಮ ಯಾವತ್ತಿದ್ದರೂ ವಾಪಸ್ಸು ಕೊಡುತ್ತೆ ಅಂದಿದ್ದಾರೆ. ಇದನ್ನೂ ಓದಿ:ರಮ್ಯಾ ಮನೆಯಲ್ಲೇ ಕಥೆ ಹೇಳಿದ್ರಂತೆ ನಟ, ನಿರ್ದೇಶಕ ರಾಜ್ ಬಿ ಶೆಟ್ಟಿ : ಪದ್ಮಾವತಿ ಕಮ್ ಬ್ಯಾಕ್ ಕನ್ಫರ್ಮ್

    ಲೈಗರ್ ಸಿನಿಮಾ ಬಾಕ್ಸ್ ಆಫೀಸಿನಲ್ಲಿ ನಿರೀಕ್ಷಿತ ಮಟ್ಟ ತಲುಪಿಲ್ಲ. ಜನರು ಮಿಶ್ರ ಪ್ರತಿಕ್ರಿಯೆ ನೀಡಿದ್ದಾರೆ. ಅಲ್ಲದೇ, ಬಾಲಿವುಡ್ ಅಂಗಳದಲ್ಲೇ ಸಿನಿಮಾಗೆ ಅಷ್ಟೊಂದು ಪ್ರತಿಕ್ರಿಯೆ ಸಿಕ್ಕಿಲ್ಲ. ಈ ಎಲ್ಲ ಕಾರಣದಿಂದಾಗಿ ಲೈಗರ್ ಸೋಲು ಎಂದು ಹೇಳಲಾಗುತ್ತಿದೆ. ಈ ಸೋಲನ್ನು ಅನಸೂಯ ಅವರು ಸಂಭ್ರಮಿಸುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಸೌತ್ ಸ್ಟಾರ್ ವಿಜಯ್ ದೇವರಕೊಂಡ ವಿರುದ್ಧ ಸಿಡಿದೆದ್ದ ಬಾಲಿವುಡ್ ಥಿಯೇಟರ್ ಮಾಲೀಕ

    ಸೌತ್ ಸ್ಟಾರ್ ವಿಜಯ್ ದೇವರಕೊಂಡ ವಿರುದ್ಧ ಸಿಡಿದೆದ್ದ ಬಾಲಿವುಡ್ ಥಿಯೇಟರ್ ಮಾಲೀಕ

    ಬಾಲಿವುಡ್ ಮತ್ತು ದಕ್ಷಿಣ ತಾರೆಯರ ಮುಸುಕಿನ ಗುದ್ದಾಟ ಕಲಾವಿದರು ಮತ್ತು ತಾಂತ್ರಿಕ ವರ್ಗದವರನ್ನು ದಾಟಿ ಥಿಯೇಟರ್ ಮಾಲೀಕರ ಅಂಗಳ ತಲುಪಿದೆ. ಭಾರತೀಯ ಸಿನಿಮಾ ರಂಗ ಎಂದರೆ, ಅದು ಕೇವಲ ಬಾಲಿವುಡ್ ಎಂದು ಬಿಂಬಿಸುತ್ತಿದ್ದ ಮನಸುಗಳು ಮತ್ತೆ ಇದೀಗ ಸೌತ್ ನಟನೊಬ್ಬನನ್ನು ಬಾಲಿವುಡ್ ಒಳಗೆ ಬಿಟ್ಟುಕೊಳ್ಳದಂತೆ ಕಿಡಿಕಾರುತ್ತಿವೆ.

    ನಿನ್ನೆಯಷ್ಟೇ ವಿಜಯ್ ದೇವರಕೊಂಡ ನಟನೆಯ ಲೈಗರ್ ಸಿನಿಮಾ ರಿಲೀಸ್ ಆಗಿದೆ. ಅದು ನೇರವಾಗಿ ಹಿಂದಿ ಭಾಷೆಯಲ್ಲಿ ನಿರ್ಮಾಣವಾದರೂ, ಈ ಸಿನಿಮಾದ ನಿರ್ದೇಶಕರು ಮತ್ತು ಹೀರೋ ದಕ್ಷಿಣದವರು. ಹಾಗಾಗಿ ಈ ಸಿನಿಮಾವನ್ನು ಸೋಲಿಸುವಂತಹ ಪ್ರಯತ್ನ ನಡೆದಿದೆಯಾ ಎನ್ನುವಂತಹ ಘಟನೆಗಳು ಮುಂಬೈ ಬಜಾರ್ ನಲ್ಲಿ ನಡೆಯುತ್ತಿವೆ. ಈ ಸಿನಿಮಾವನ್ನು ಪ್ರದರ್ಶನ ಮಾಡುತ್ತಿರುವ ಮುಂಬೈ ಥಿಯೇಟರ್ ಮಾಲಿಕ ಮನೋಜ್ ದೇಸಾಯಿ ಲೈಗರ್ ಸಿನಿಮಾದ ವಿರುದ್ಧ ತಿರುಗಿ ಬಿದ್ದಿದ್ದಾರೆ. ಇದನ್ನೂ ಓದಿ:ಆ ಒಂದು ಹೆಸರಿನ ಟ್ಯಾಟೋನಿಂದ ಎರಡನೇ ಮದುವೆ ವದಂತಿಗೆ ಫುಲ್ ಸ್ಟಾಪ್ ಹಾಕಿದ ಮೇಘನಾ ರಾಜ್

    ಮನೋಜ್ ದೇಸಾಯಿ ಮುಂಬೈನಲ್ಲಿ ಗೈಟಿ ಗ್ಯಾಲಾಕ್ಷಿ ಮತ್ತು ಮರಾಠ ಮಂದಿರ ಎಂಬ ಎರಡು ಥಿಯೇಟರ್ ನಡೆಸುತ್ತಿದ್ದಾರೆ. ಇವರು ವಿಜಯ್ ದೇವರಕೊಂಡ ಬಗ್ಗೆ ಮಾತನಾಡುತ್ತಾ, ‘ಆತ ದೇವರಕೊಂಡ ಅಲ್ಲ, ಅನಕೊಂಡ ಎಂದು ಜರೆದಿದ್ದಾರೆ. ಈ ಹುಡುಗನ ಅಹಂಕಾರವೇ ಸಿನಿಮಾ ಸೋಲಿಗೆ ಕಾರಣವೆಂದು ನೇರವಾಗಿಯೇ ಆರೋಪಿಸಿದ್ದಾರೆ. ಬಾಯ್ಕಾಟಿ ವಿಚಾರವಾಗಿ ದೇವರಕೊಂಡ ಅಹಂಕಾರದ ಮಾತುಗಳನ್ನು ಆಡಿದ್ದರು ಎಂದು ಹೇಳಿದ್ದಾರೆ.

    ಬಾಯ್ಕಾಟ್ ವಿಚಾರವಾಗಿ ವಿಜಯ್ ದೇವರಕೊಂಡ ಧ್ವನಿ ಎತ್ತಿದ್ದರು. ಸಿನಿಮಾ ನೋಡುವವರು ಬಾಯ್ಕಾಟ್ ಅನ್ನುವುದಿಲ್ಲ. ಹಾಗೆ ಎನ್ನುವವರು ನನ್ನ ಸಿನಿಮಾ ನೋಡಬೇಕು ಎಂದು ಹೇಳಿಕೆಕೊಟ್ಟಿದ್ದರು. ಈ ಅಹಂಕಾರವೇ ಲೈಗರ್ ಹಿನ್ನೆಡೆಗೆ ಕಾರಣವಾಗಿದೆ ಎಂದು ಮನೋಜ್ ದೇಸಾಯಿ ವಿಡಿಯೋ ಮೂಲಕ ಹೇಳಿಕೆ ಕೊಟ್ಟಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ವಿಜಯ್ ದೇವರಕೊಂಡ ‘ಲೈಗರ್’ ಸಿನಿಮಾಗೆ ಮಿಶ್ರಪ್ರತಿಕ್ರಿಯೆ: 200 ಕೋಟಿ ಆಫರ್ ಟ್ವಿಟ್ ವೈರಲ್

    ವಿಜಯ್ ದೇವರಕೊಂಡ ‘ಲೈಗರ್’ ಸಿನಿಮಾಗೆ ಮಿಶ್ರಪ್ರತಿಕ್ರಿಯೆ: 200 ಕೋಟಿ ಆಫರ್ ಟ್ವಿಟ್ ವೈರಲ್

    ವಿಜಯ್ ದೇವರಕೊಂಡ ಮತ್ತು ಅನನ್ಯ ಪಾಂಡೆ ಕಾಂಬಿನೇಷನ್ ನಲ್ಲಿ ಮೂಡಿ ಬಂದಿರುವ ಲೈಗರ್ ಸಿನಿಮಾ ಬಿಡುಗಡೆಗೂ ಮುನ್ನ ಭಾರೀ ನಿರೀಕ್ಷೆ ಮೂಡಿಸಿತ್ತು. ಬಾಕ್ಸ್ ಆಫೀಸಿನಲ್ಲಿ ಈ ಚಿತ್ರ ಭಾರೀ ಸೌಂಡ್ ಮಾಡಲಿದೆ ಎಂದು ಅಂದಾಜಿಸಲಾಗಿದೆ. ಹಾಗಾಗಿಯೇ ಈ ಸಿನಿಮಾ ಕೊಳ್ಳಲು ಮುಗಿಬಿದ್ದಿದ್ದರು. ಆದರೆ, ನಿರೀಕ್ಷಿತ ಫಲಿತಾಂಶ ಬಂದಿಲ್ಲ ಎನ್ನುತ್ತಿವೆ ಮೂಲಗಳು. ನೋಡುಗರು ಕೂಡ ಮಿಶ್ರ ಪ್ರತಿಕ್ರಿಯೆ ನೀಡಿದ್ದಾರೆ. ಹಾಗಾಗಿ ರಿಲೀಸ್ ಆದ ಮೊದಲ ದಿನವೇ ಸಿನಿಮಾ ಮುಗ್ಗರಿಸಿದೆ.

    ಈ ನಡುವೆ ವಿಜಯ್ ದೇವರಕೊಂಡ ಮಾಡಿದ್ದ ಟ್ವಿಟ್ ವೊಂದು ಸಖತ್ ವೈರಲ್ ಆಗುತ್ತಿದೆ. ಹಲವು ತಿಂಗಳ ಹಿಂದೆ ಲೈಗರ್ ಸಿನಿಮಾದ ವ್ಯಾಪಾರಕ್ಕೆ ಸಂಬಂಧಿಸಿದಂತೆ ವಿಜಯ್ ದೇವರಕೊಂಡ ಟ್ವಿಟ್ ಮಾಡಿದ್ದರು. ಅದರಲ್ಲಿ ‘ಓಟಿಟಿ ಸಂಸ್ಥೆಯೊಂದು 200 ಕೋಟಿ ರೂಪಾಯಿಗೆ ಲೈಗರ್ ಸಿನಿಮಾ ಕೇಳಿದೆ. ಇದು ಸಣ್ಣ ಮೊತ್ತದ ಹಣ. ಥಿಯೇಟರ್ ನಲ್ಲಿ ನಾವು ನೋಡಿಕೊಳ್ಳುತ್ತೇವೆ’ ಎಂದು ಟ್ವಿಟ್ ಮಾಡಿದ್ದರು. ಆದರೆ, ಈಗಿನ ಬಾಕ್ಸ್ ಆಫೀಸ್ ರಿಪೋರ್ಟ್ ನೋಡಿದರೂ, ಆ ಮೊತ್ತದ ಕಾಲು ಭಾಗವಾದರೂ ದುಡ್ಡು ಬರತ್ತಾ ಎನ್ನುವಂತಾಗಿದೆ. ಇದನ್ನೂ ಓದಿ:ಜಯಶ್ರೀಗೆ ಎರಡು ಮದುವೆ ಆಗ್ತವೆ ಎಂದು ಬಿಗ್ ಬಾಸ್ ಮನೆಯಲ್ಲಿ ಭವಿಷ್ಯ ನುಡಿದ ಆರ್ಯವರ್ಧನ್ ಗುರೂಜಿ

    ವಿಜಯ್ ದೇವರಕೊಂಡ ಆ ವೇಳೆಯಲ್ಲಿ ಹೆಮ್ಮೆಯಿಂದ ಬರೆದುಕೊಂಡರೋ, ಅಥವಾ ಅಹಂನಿಂದ ಬರೆದುಕೊಂಡರೋ ಬೇರೆ ಮಾತು. ಆದರೆ, ನೆಟ್ಟಿಗರು ಅದೇ ಟ್ವಿಟ್ ತಗೆದುಕೊಂಡು ಈಗ ಗೇಲಿ ಮಾಡುತ್ತಿದ್ದಾರೆ. ವಿಜಯ್ ದೇವರಕೊಂಡಗೆ ಇಷ್ಟೊಂದು ಕಾನ್ಫಿಡೆನ್ಸ್ ಇರಬಾರದು ಎಂದು ಪಾಠ ಮಾಡಿದ್ದಾರೆ. ಈ ಸಿನಿಮಾದ ಬಗ್ಗೆ ಭಾರೀ ನಿರೀಕ್ಷೆ ಇಟ್ಟುಕೊಂಡಿದ್ದ ವಿಜಯ್ ದೇವರಕೊಂಡಗೆ ವಿಜಯ ದೊರೆಯಲಿ ಎಂದೂ ಹಲವರು ಹಾರೈಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ವಿಜಯ್ ದೇವರಕೊಂಡ ‘ಲೈಗರ್’ ಚಿತ್ರಕ್ಕೂ ಬಾಯ್ಕಾಟ್ ಬಿಸಿ: ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್

    ವಿಜಯ್ ದೇವರಕೊಂಡ ‘ಲೈಗರ್’ ಚಿತ್ರಕ್ಕೂ ಬಾಯ್ಕಾಟ್ ಬಿಸಿ: ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್

    ವಾರವಷ್ಟೇ ವಿಜಯ್ ದೇವರಕೊಂಡ ಮತ್ತು ಪೂರಿ ಜಗನ್ನಾಥ್ ಕಾಂಬಿನೇಷನ್ ನ ಲೈಗರ್ ಸಿನಿಮಾ ದೇಶಾದ್ಯಂತ ಬಿಡುಗಡೆ ಆಗುತ್ತಿದೆ. ಕನ್ನಡವೂ ಸೇರಿದಂತೆ ಹಲವು ಭಾಷೆಗಳಲ್ಲಿ ಈ ಸಿನಿಮಾ ರಿಲೀಸ್ ಆಗುತ್ತಿದ್ದು, ಸಿನಿಮಾ ಬಿಡುಗಡೆಗೂ ಮುನ್ನ ಈ ಚಿತ್ರವನ್ನು ಯಾರೂ ನೋಡದಂತೆ ಬಾಯ್ಕಾಟ್ ಅಭಿಯಾನ ಶುರುವಾಗಿದೆ. ಈಗಾಗಲೇ ಟ್ವಿಟರ್ ನಲ್ಲಿ ಬಾಯ್ಕಾಟ್ ಲೈಗರ್ ಟ್ರೆಂಡ್ ಕೂಡ ಆಗಿದೆ.

    ಆಮೀರ್ ಖಾನ್, ಅಕ್ಷಯ್ ಕುಮಾರ್, ಅನುರಾಗ್ ಕಶ್ಯಪ್ ಅವರ ಸಿನಿಮಾಗಳನ್ನು ಕ್ರಮವಾಗಿ ಬಾಯ್ಕಾಟ್ ಮಾಡಿಕೊಂಡೇ ಬಂದಿರುವ ನೆಟ್ಟಿಗರು ಈ ಬಾರಿ ಲೈಗರ್ ಸಿನಿಮಾದ ಹಿಂದೆ ಬಿದ್ದಿದ್ದಾರೆ. ಕಾರಣ ವಿಜಯ್ ದೇವರಕೊಂಡ ಮತ್ತು ಈ ಸಿನಿಮಾವನ್ನು ನಿರ್ಮಾಣ ಮಾಡಿರುವ ಕರಣ್ ಜೋಹಾರ್ ಎಂದು ಹೇಳಲಾಗುತ್ತಿದೆ. ದಕ್ಷಿಣದ ಸಿನಿಮಾಗಳನ್ನು ಕರಣ್ ಜೋಹಾರ್ ಬೆಳೆಯಲು ಬಿಡುತ್ತಿರಲಿಲ್ಲ. ಹಾಗಾಗಿ ಅವರ ಪ್ರೊಡಕ್ಷನ್ ಹೌಸ್ ನಿಂದ ಬಂದಿರುವ ಲೈಗರ್ ಸಿನಿಮಾವನ್ನು ಬಾಯ್ಕಾಟ್ ಮಾಡಬೇಕಿದೆ ಎನ್ನುತ್ತಾರೆ ಹಲವರ. ಇದನ್ನೂ ಓದಿ:ತನ್ನನ್ನು ತಾನೇ ಮದುವೆಯಾದ ಕಿರುತೆರೆ ನಟಿ ಕಾನಿಷ್ಕಾ ಸೋನಿ

    ಅಲ್ಲದೇ ವಿಜಯ್ ದೇವರಕೊಂಡ ಅವರು ಲಾಲ್ ಸಿಂಗ್ ಚಡ್ಡಾ ಸಿನಿಮಾ ಬಗ್ಗೆ ಮಾತನಾಡುತ್ತಾ, ಅದು ಕೇವಲ ಆಮೀರ್ ಖಾನ್ ಅವರ ಸಿನಿಮಾವಲ್ಲ. ಆ ಸಿನಿಮಾ ನಿರ್ಮಾಣದ ಹಿಂದೆ 250ಕ್ಕೂ ಹೆಚ್ಚು ಜನರ ಶ್ರಮವಿರುತ್ತದೆ. ಹಾಗಾಗಿ ಬಾಯ್ಕಾಟ್ ಮಾಡಬೇಡಿ ಎಂದು ಆಮೀರ್ ಪರವಾಗಿ ಮಾತನಾಡಿದ್ದರಂತೆ. ಈ ವಿಷಯವಾಗಿಯೂ ಲೈಗರ್ ಸಿನಿಮಾ ಬಾಯ್ಕಾಟ್ ಸಂಕಟವನ್ನು ಅನುಭವಿಸಬೇಕಿದೆ.

    Live Tv
    [brid partner=56869869 player=32851 video=960834 autoplay=true]

  • ಅಪ್ಪು ಸಮಾಧಿಗೆ ಭೇಟಿ ನೀಡಿ ಪುಷ್ಪ ನಮನ ಸಲ್ಲಿಸಿದ ನಟ ವಿಜಯ್ ದೇವರಕೊಂಡ

    ಅಪ್ಪು ಸಮಾಧಿಗೆ ಭೇಟಿ ನೀಡಿ ಪುಷ್ಪ ನಮನ ಸಲ್ಲಿಸಿದ ನಟ ವಿಜಯ್ ದೇವರಕೊಂಡ

    ತೆಲುಗಿನ ಖ್ಯಾತ ನಟ ವಿಜಯ್ ದೇವರಕೊಂಡ ಇಂದು ಬೆಂಗಳೂರಿಗೆ ಆಗಮಿಸಿದ್ದಾರೆ. ಲೈಗರ್ ಸಿನಿಮಾದ ಪತ್ರಿಕಾಗೋಷ್ಠಿಯಲ್ಲಿ ಪಾಲ್ಗೊಳ್ಳಲು ಉದ್ಯಾನ ನಗರಕ್ಕೆ ಆಗಮಿಸಿರುವ ಅವರು, ಮೊದಲಿಗೆ ಅಪ್ಪು ಸಮಾಧಿಗೆ ತೆರಳಿ ಪುಷ್ಪ ನಮನ ಸಲ್ಲಿಸಿದರು. ಏರ್ ಪೋರ್ಟ್ ನಿಂದ ನೇರವಾಗಿಯೇ ಕಂಠೀರವ ಸ್ಟುಡಿಯೋಗೆ ಆಗಮಿಸಿದ ವಿಜಯ್ ದೇವರಕೊಂಡ, ಭಾವುಕರಾಗಿಯೇ ಅಪ್ಪು ಸಮಾಧಿಗೆ ನಮನ ಸಲ್ಲಿಸಿದರು.

    ಆಗಸ್ಟ್ 25 ರಂದು ದೇಶಾದ್ಯಂತ ರಿಲೀಸ್ ಆಗುತ್ತಿರುವ ಲೈಗರ್ ಸಿನಿಮಾದ ಪತ್ರಿಕಾಗೋಷ್ಠಿ ಮತ್ತು ಪ್ರಿ ರಿಲೀಸ್ ಇವೆಂಟ್ ಇಂದು ಬೆಂಗಳೂರಿನಲ್ಲಿ ನಡೆಯುತ್ತಿದ್ದು, ಈ ಕಾರ್ಯಕ್ರಮದಲ್ಲಿ ಭಾಗಿಯಾಗಲು ವಿಜಯ್ ದೇವರಕೊಂಡ, ಅನನ್ಯಾ ಪಾಂಡೆ, ನಟ ವಿಶ್, ನಿರ್ದೇಶಕ ಜಗನ್ನಾಥ್ ಪೂರಿ ಸೇರಿದಂತೆ ಹಲವರು ಬೆಂಗಳೂರಿಗೆ ಆಗಮಿಸಿದ್ದಾರೆ. ಅದಕ್ಕೂ ಮುನ್ನ ಎಲ್ಲರೂ ಅಪ್ಪು ಸಮಾಧಿಗೆ ಬಂದು ನಮನ ಸಲ್ಲಿಸಿದ್ದಾರೆ. ಇದನ್ನೂ ಓದಿ: ಕೊನೆಗೂ ಶಿವಣ್ಣ, ಅನುಶ್ರೀ ಭೇಟಿಯಾಗಿ ಆಸೆ ಈಡೇರಿಸಿಕೊಂಡ ಕಾಫಿನಾಡು ಚಂದು

    ವಿಜಯ್ ದೇವರಕೊಂಡ ಮತ್ತು ಅನನ್ಯಾ ಪಾಂಡೆ ಕಾಂಬಿನೇಷನ್ ನ ಮೊದಲ ಸಿನಿಮಾ ಇದಾಗಿದ್ದು, ಕನ್ನಡವೂ ಸೇರಿದಂತೆ ಹಲವು ಭಾಷೆಗಳಲ್ಲಿ ರಿಲೀಸ್ ಆಗುತ್ತಿದೆ. ಈಗಾಗಲೇ ದೇಶದ ನಾನಾ ಭಾಗಗಳಲ್ಲಿ ಸಿನಿಮಾದ ಪ್ರಮೋಷನ್ ಶುರು ಮಾಡಿದೆ ಚಿತ್ರತಂಡ. ಈ ಸಿನಿಮಾದಲ್ಲಿ ವಿಜಯ್ ದೇವರಕೊಂಡ ಖಡಕ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದು, ಬಾಕ್ಸರ್ ಪಾತ್ರವನ್ನು ನಿರ್ವಹಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ವಿಜಯ್ ದೇವರಕೊಂಡ ಮನೆಯಲ್ಲಿ ನಟಿ ಅನನ್ಯಾ ಪಾಂಡೆ: ರಶ್ಮಿಕಾ ಮಂದಣ್ಣ ನೆನಪಿಸಿಕೊಂಡ ನೆಟ್ಟಿಗರು

    ವಿಜಯ್ ದೇವರಕೊಂಡ ಮನೆಯಲ್ಲಿ ನಟಿ ಅನನ್ಯಾ ಪಾಂಡೆ: ರಶ್ಮಿಕಾ ಮಂದಣ್ಣ ನೆನಪಿಸಿಕೊಂಡ ನೆಟ್ಟಿಗರು

    ತೆಲುಗಿನ ಖ್ಯಾತ ನಟ ವಿಜಯ್ ದೇವರಕೊಂಡ ಮನೆಯಲ್ಲಿ ನಟಿ ಅನನ್ಯಾ ಪಾಂಡೆ ಕಾಣಿಸಿಕೊಂಡು ಅಚ್ಚರಿ ಮೂಡಿಸಿದ್ದಾರೆ. ಸದ್ಯ ಈ ಜೋಡಿ ನಟನೆಯ ಲೈಗರ್ ಸಿನಿಮಾ ರಿಲೀಸ್ ಆಗುತ್ತಿದ್ದು, ಹಲವು ವಾರಗಳಿಂದ ಇಬ್ಬರೂ ಒಟ್ಟೊಟ್ಟಿಗೆ ಓಡಾಡುತ್ತಿದ್ದಾರೆ. ಆದರೆ, ಈ ಬಾರಿ ವಿಜಯ್ ಅವರ ಮನೆಯಲ್ಲಿ ನಡೆದ ವಿಶೇಷ ಪೂಜಾ ಸಮಾರಂಭದಲ್ಲಿ ಅನನ್ಯಾ ಪಾಂಡೆ ಕಾಣಿಸಿಕೊಂಡು ಕುತೂಹಲಕ್ಕೆ ಕಾರಣವಾಗಿದ್ದಾರೆ.

    ಅಜಯ್ ಮನೆಯಲ್ಲಿ ಅನನ್ಯಾ ಕಾಣಿಸಿಕೊಳ್ಳುತ್ತಿದ್ದಂತೆಯೇ ನೆಟ್ಟಿಗರು ಈ ಸಂದರ್ಭದಲ್ಲಿ ರಶ್ಮಿಕಾ ಮಂದಣ್ಣ ಅವರನ್ನು ನೆನಪಿಸಿಕೊಂಡಿದ್ದಾರೆ. ವಿಜಯ್ ಮತ್ತು ರಶ್ಮಿಕಾ ಇಬ್ಬರೂ ಡೇಟಿಂಗ್ ನಲ್ಲಿದ್ದಾರೆ ಎಂದು ಸುದ್ದಿಯಿತ್ತು. ಒಬ್ಬರಿಗೊಬ್ಬರೂ ಇಷ್ಟಪಟ್ಟಿದ್ದಾರೆ ಎಂದು ಹೇಳಲಾಗಿತ್ತು. ಬಹಿರಂಗವಾಗಿ ಇಬ್ಬರೂ ಹೇಳಿಕೊಳ್ಳದೇ ಇದ್ದರೂ, ಒಟ್ಟೊಟ್ಟಿಗೆ ಮಧ್ಯ ರಾತ್ರಿ ಕಾಣಿಸಿಕೊಂಡಿದ್ದರು. ಒಟ್ಟಿಗೆ ನ್ಯೂ ಯಿಯರ್ ಸೆಲೆಬ್ರೇಷನ್ ನಲ್ಲಿ ಭಾಗಿಯಾಗಿದ್ದರು. ಅದೆಷ್ಟೋ ಬಾರಿ ವಿಜಯ್ ಅವರ ಮನೆಯಲ್ಲಿ ನಡೆದ ಫ್ಯಾಮಿಲಿ ಸಮಾರಂಭದಲ್ಲೂ ರಶ್ಮಿಕಾ ಭಾಗಿಯಾಗಿದ್ದರು. ಈ ಬಾರಿ ಅನನ್ಯ ಕಾಣಿಸಿಕೊಂಡಿದ್ದರಿಂದ ರಶ್ಮಿಕಾ ಟ್ರೋಲ್ ಆಗುತ್ತಿದ್ದಾರೆ. ಇದನ್ನೂ ಓದಿ:ರಾಜಮೌಳಿ ಶಿಷ್ಯನಿಂದ ಬಂಕಿಮ ಚಂದ್ರ ಚಟರ್ಜಿ ಅವರ ‘ಆನಂದಮಠ’ ಕೃತಿ ಆಧರಿಸಿದ ಸಿನಿಮಾ

    ರಶ್ಮಿಕಾ ಮಂದಣ್ಣ ಜಾಗದಲ್ಲಿ ಅನನ್ಯಾ ಕಾಣಿಸಿಕೊಂಡಿದ್ದು, ಹಲವರಿಗೆ ನುಂಗಲಾರದ ತುತ್ತಾಗಿದೆ. ಹೀಗಾಗಿಯೇ ವಿಜಯ್ ದೇವರಕೊಂಡ ಹೃದಯದಿಂದ ರಶ್ಮಿಕಾ ಸಂಪೂರ್ಣ ಮರೆಯಾಗಿದ್ದಾರಾ ಎನ್ನುವ ಪ್ರಶ್ನೆ ಕೂಡ ಎತ್ತಿದ್ದಾರೆ. ಕಳೆದ ಒಂದು ವರ್ಷದಿಂದ ವಿಜಯ್ ದೇವರಕೊಂಡ ಜೊತೆ ರಶ್ಮಿಕಾ ಕಾಣಿಸಿಕೊಂಡಿಲ್ಲ. ಒಬ್ಬರೂ ಒಬ್ಬರಿಗೊಬ್ಬರ ಕುರಿತು ಯಾವ ವಿಷಯವನ್ನೂ ಹಂಚಿಕೊಂಡಿಲ್ಲ. ಇದಕ್ಕೆ ಕಾರಣ ಅನನ್ಯಾ ಪಾಂಡೆ ಎಂದೇ ಹೇಳಲಾಗುತ್ತಿದೆ.

    Live Tv
    [brid partner=56869869 player=32851 video=960834 autoplay=true]