Tag: ವಿಜಯ್ ದೇವರಕೊಂಡ

  • ವಿಜಯ್ ದೇವರಕೊಂಡ ಬೆತ್ತಲೆ ಚಿತ್ರಕ್ಕೆ ಭಾರತದಾದ್ಯಂತ ತಾಪಮಾನ ಹೆಚ್ಚಿದೆ ಎಂದ ನಟಿ ಅನನ್ಯ ಪಾಂಡೆ

    ವಿಜಯ್ ದೇವರಕೊಂಡ ಬೆತ್ತಲೆ ಚಿತ್ರಕ್ಕೆ ಭಾರತದಾದ್ಯಂತ ತಾಪಮಾನ ಹೆಚ್ಚಿದೆ ಎಂದ ನಟಿ ಅನನ್ಯ ಪಾಂಡೆ

    ವಿಜಯ್ ದೇವರಕೊಂಡ ಮತ್ತು ಅನನ್ಯ ಪಾಂಡೆ ಕಾಂಬಿನೇಷನ್ ನ ಲೈಗರ್ ಸಿನಿಮಾದ ಪೋಟೋವೊಂದನ್ನು ವಿಜಯ್ ದೇವರಕೊಂಡ ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ವಿಜಯ್ ಸಂಪೂರ್ಣ ಬೆತ್ತಲಾಗಿ, ಖಾಸಗಿ ಅಂಗಕ್ಕೆ ಹೂಗುಚ್ಚವನ್ನಿಟ್ಟು ಮುಚ್ಚಿದ್ದಾರೆ. ಈ ಫೋಟೋ ಸಖತ್ ವೈರಲ್ ಆಗಿದ್ದು, ನಟಿ ಅನನ್ಯ ಪಾಂಡೆ ಸೇರಿದಂತೆ ಹಲವರು ಕಲಾವಿದರು ಕಾಮೆಂಟ್ ಮಾಡಿದ್ದಾರೆ. ಸಮಂತಾ, ಅನುಷ್ಕಾ ಶೆಟ್ಟಿ ಮತ್ತು ಕರಣ್ ಜೋಹರ್ ಕೂಡ ವಿಭಿನ್ನವಾಗಿಯೇ ಪ್ರತಿಕ್ರಿಯಿಸಿದ್ದಾರೆ.

    ಸಮಂತಾ ಮತ್ತು ಕರಣ್ ಜೋಹಾರ್ ಗಿಂತಲೂ ಅನನ್ಯ ಪಾಂಡೆ ಮಾಡಿರುವ ಕಾಮೆಂಟ್ ನಾನಾ ರೀತಿಯ ಗಾಸಿಪ್ ಗೆ ಎಡೆಮಾಡಿ ಕೊಟ್ಟಿದೆ. ಈ ಹಿಂದೆ ವಿಜಯ್ ದೇವರಕೊಂಡ ಹೆಸರಿನ ಜೊತೆ ಕನ್ನಡತಿ ರಶ್ಮಿಕಾ ಮಂದಣ್ಣ ಹೆಸರು ತಳುಕು ಹಾಕಿಕೊಂಡಿತ್ತು. ಲೈಗರ್ ನಂತರ ವಿಜಯ್ ಜೊತೆ ಅನನ್ಯ ಪಾಂಡೆ ಓಡಾಡುತ್ತಿದ್ದಾರೆ ಎಂದು ಗಾಸಿಪ್ ಹರಡಿದೆ. ಈ ಕಾರಣಕ್ಕಾಗಿಯೇ ರಶ್ಮಿಕಾ ಮತ್ತು ವಿಜಯ್ ದೇವರಕೊಂಡ ದೂರವಾಗಿದ್ದಾರೆ ಎಂದೂ ಹೇಳಲಾಗುತ್ತಿದೆ. ಹೀಗಾಗಿ ಅನನ್ಯ ಮಾಡಿರೋ ಕಾಮೆಂಟ್ ಗಮನ ಸೆಳೆದಿದೆ. ಇದನ್ನೂ ಓದಿ : ಚಲನಚಿತ್ರ ನಿರ್ದೇಶಕರ ಸಂಘದ ಅಧ್ಯಕ್ಷರಿಗೆ ಲೆಕ್ಕ ಕೇಳಿದೆ ಆಡಳಿತಾಧಿಕಾರಿ

    ವಿಜಯ್ ದೇವರಕೊಂಡ ಅವರ ಬೆತ್ತಲೆ ಫೋಟೋವನ್ನು ಶೇರ್ ಮಾಡಿರುವ ಅನನ್ಯ ಪಾಂಡೆ, ‘ ಬ್ರೀತ್ ಗಾಯ್ಸ್ ಬ್ರೀತ್, ದಿ ಟೆಂಪ್ರೆಚರ್ ಇಸ್ ರೇಸಿಂಗ್ ಆಲ್ ಓವರ್ ಇಂಡಿಯಾ ಟುಡೇ’ ಎಂದು ಬರೆದಿದ್ದಾರೆ. ಈ ಬೆತ್ತಲೆಯ ಫೋಟೋಗೆ ಭಾರತದಲ್ಲಿ ಇಂದು ತಾಪಮಾನ ಹೆಚ್ಚಾಗಿದೆ ಎಂದು ವಿಶ್ಲೇಷಿಸಿದ್ದಾರೆ. ಈ ಕಾಮೆಂಟ್ ಗೆ ಸಾಕಷ್ಟು ಜನರು ಪ್ರತಿಕ್ರಿಯೆ ಕೂಡ ನೀಡಿದ್ದಾರೆ.

    Live Tv

  • ಬೆತ್ತಲಾದ ‘ಲೈಗರ್’ ವಿಜಯ್ ದೇವರಕೊಂಡ : ಹೂವಿನಿಂದ ಮಾನಮುಚ್ಚಿಕೊಂಡ ನಟ

    ಬೆತ್ತಲಾದ ‘ಲೈಗರ್’ ವಿಜಯ್ ದೇವರಕೊಂಡ : ಹೂವಿನಿಂದ ಮಾನಮುಚ್ಚಿಕೊಂಡ ನಟ

    ತೆಲುಗಿನ ಖ್ಯಾತ ನಟ ವಿಜಯ್ ದೇವರಕೊಂಡ ನಟನೆಯ ‘ಲೈಗರ್’ ಸಿನಿಮಾದ ಫೋಟೋವೊಂದನ್ನು ಸ್ವತಃ ವಿಜಯ್ ದೇವರಕೊಂಡ ಅವರೇ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಆ ಫೋಟೋ ಕುರಿತು ಅನೇಕರು ಕಾಮೆಂಟ್ ಮಾಡಿದ್ದಾರೆ. ಮಾನಮುಚ್ಚಿಕೊಳ್ಳಲು ವಿಜಯ್ ಹೂವೊಂದನ್ನು ಬಳಸಿಕೊಂಡಿದ್ದು, ಉಳಿದಂತೆ ಅವರು ಬೆತ್ತಲಾಗಿ ನಿಂತಿದ್ದಾರೆ. ಈ ಫೋಟೋ ಇದೀಗ ಅಭಿಮಾನಿಗಳಲ್ಲಿ ಹಲ್ ಚಲ್ ಎಬ್ಬಿಸಿದೆ.

    ವಿಜಯ್ ದೇವರಕೊಂಡ ವೃತ್ತಿ ಬದುಕಿಗೆ ಬಹುದೊಡ್ಡ ಬ್ರೇಕ್ ನೀಡಿದ್ದ ಸಿನಿಮಾವೊಂದರಲ್ಲೂ ಅವರು ಅನೇಕ ದೃಶ್ಯಗಳಲ್ಲಿ ಅರೆಬೆತ್ತಲೆಯಾಗಿ ನಟಿಸಿದ್ದರು. ಇದೀಗ ಲೈಗರ್ ಗಾಗಿಯೂ ಅವರು ಬೆತ್ತಲೆಯಾಗಿದ್ದಾರೆ. ಹಾಗಾಗಿ ವಿಜಯ್ ಅಭಿಮಾನಿಗಳು ನೆಗೆಟಿವ್ ಕಾಮೆಂಟ್ ಕೂಡ ಮಾಡಿದ್ದಾರೆ. ಖಾಸಗಿ ಜಾಗಕ್ಕೆ ಕನಿಷ್ಠ ಹೂವನ್ನಾದರೂ ಇಟ್ಟುಕೊಂಡಿದ್ದಾರಲ್ಲ ಎಂದು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಇದನ್ನೂ ಓದಿ:`ರಾ ರಾ ರಕ್ಕಮ್ಮ’ ನಂತರ ನಾಳೆ ಮತ್ತೊಂದು ಸಾಂಗ್ ರಿಲೀಸ್: ವಿಕ್ರಾಂತ್ ರೋಣ

    ಈ ಸಿನಿಮಾದಲ್ಲಿ ವಿಜಯ್ ದೇವರಕೊಂಡ ಬಾಕ್ಸರ್ ಪಾತ್ರದಲ್ಲಿ ನಟಿಸಿದ್ದಾರೆ. ಈಗಾಗಲೇ ಈ ಸಿನಿಮಾ ಹಲವು ಕಾರಣಗಳಿಂದಾಗಿ ಕುತೂಹಲ ಮೂಡಿಸಿದೆ. ದೈಹಿಕವಾಗಿ ಸವಾಲಿನ ಪಾತ್ರವೇ ಇದಾಗಿದ್ದರಿಂದ, ಅವರು ಈ ಸಿನಿಮಾದಲ್ಲಿ ಹೇಗೆ ಕಂಡಿದ್ದಾರೆ ಎನ್ನುವ ಕ್ಯೂರಿಯಾಸಿಟಿ ಕೂಡ ಅಭಿಮಾನಿಗಳಲ್ಲಿ ಮೂಡಿಸಿದೆ. ಇದೇ ಆಗಸ್ಟ್ 25ಕ್ಕೆ ಸಿನಿಮಾ ತೆರೆಗೆ ಬರುತ್ತಿರುವುದರಿಂದ ಈ ಎಲ್ಲ ಪ್ರಶ್ನೆಗಳೂ ಸಿನಿಮಾದಲ್ಲಿಯೇ ಉತ್ತರ ಸಿಗಲಿದೆ.

    Live Tv

  • ಪೂಜಾ ಹೆಗ್ಡೆಗೆ ಸ್ಪೆಷಲ್‌ ಆಗಿ ವೆಲ್‌ಕಮ್‌ ಮಾಡಿದ ‌ʻಜನ ಗಣ ಮನʼ ಚಿತ್ರತಂಡ

    ಪೂಜಾ ಹೆಗ್ಡೆಗೆ ಸ್ಪೆಷಲ್‌ ಆಗಿ ವೆಲ್‌ಕಮ್‌ ಮಾಡಿದ ‌ʻಜನ ಗಣ ಮನʼ ಚಿತ್ರತಂಡ

    ಪುರಿ ಜಗನ್ನಾಥ್ ಮತ್ತು ವಿಜಯ್ ದೇವರಕೊಂಡ ಕಾಂಬಿನೇಷನ್‌ನ ಹೊಸ ಸಿನಿಮಾದಲ್ಲಿ ವಿಜಯ್ ದೇವರಕೊಂಡ ಜೊತೆ ಡ್ಯುಯೇಟ್ ಹಾಡಲು ಮಂಗಳೂರು ಬೆಡಗಿ ಪೂಜಾ ಹೆಗ್ಡೆ ಸಜ್ಜಾಗಿದ್ದಾರೆ.. ಪೂಜಾ ಸೆಟ್ ಬರುತ್ತಿದ್ದಂತೆ ಸಖತ್ ಆಗಿ ವೆಲ್‌ಕಮ್ ಮಾಡಿದ್ದಾರೆ. ಈ ವಿಡಿಯೋ ಈಗ ಸಖತ್ ವೈರಲ್ ಆಗುತ್ತಿದೆ.

    ಟಾಲಿವುಡ್ ನಿರ್ದೇಶಕ ಪುರಿ ಜಗನ್ನಾಥ್ ಮತ್ತು ವಿಜಯ್ ದೇವರಕೊಂಡ ಕಾಂಬಿನೇಶನ್‌ನ ಎರಡನೇ ಮೆಗಾ ಪ್ರಾಜೆಕ್ಟ್ `ಜನ ಗಣ ಮನ’ ಚಿತ್ರಕ್ಕೆ ತುಳುನಾಡಿನ ಕುವರಿ ಪೂಜಾ ಹೆಗ್ಡೆ ಈ ಸಿನಿಮಾದಲ್ಲಿ ನಾಯಕಿಯಾಗಿ ಮಿಂಚಲಿದ್ದಾರೆ. ಈಗಾಗಲೇ ಶೂಟಿಂಗ್ ಸಕಲ ತಯಾರಿ ನಡೆದಿದ್ದು, ಪೂಜಾ ಹೆಗ್ಡೆ ಸೆಟ್‌ಗೆ ಕಾಲಿಡುತ್ತಿದ್ದಂತೆ ನಿರ್ಮಾಪಕಿ ಚಾರ್ಮಿ ಕೌರ್ ಸ್ಪೆಷಲ್ ಆಗಿ ವೆಲ್‌ಕಮ್ ಮಾಡಿದ್ದಾರೆ. ಇದನ್ನೂ ಓದಿ: Exclusive – ವಾಣಿಜ್ಯ ಮಂಡಳಿಯಲ್ಲಿ ಕೋಟ್ಯಂತರ ದುರುಪಯೋಗ? : ರಾಜೇಂದ್ರ ಸಿಂಗ್ ಬಾಬು ಹೇಳಿದ್ದೇನು?

     

    View this post on Instagram

     

    A post shared by Pooja Hegde (@hegdepooja)

    `ಜನ ಗಣ ಮನ’ ಚಿತ್ರಕ್ಕೆ ಪೂಜಾ ಸಾಥ್ ನೀಡಿದ್ದು, ವಿಜಯ್ ಸದ್ಯ ಸಮಂತಾ ಜತೆಗಿನ `ಖುಷಿ’ ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯದಲ್ಲಿ ಚಿತ್ರತಂಡವನ್ನ ಸೇರಿಕೊಳ್ಳಲಿದ್ದಾರೆ. ಇದೊಂದು ಆಕ್ಷನ್ ಕಥೆಯಾಗಿದ್ದು, ಈ ಸಿನಿಮಾದ ಶೂಟಿಂಗ್ ಮುಂಬೈನಲ್ಲಿ ನಡೆಯಲಿದೆ. ಪೂಜಾ ಹೆಗ್ಡೆ ಶೂಟಿಂಗ್‌ನಲ್ಲಿ ಭಾಗಿಯಾಗಲಿದ್ದಾರೆ. ಈ ಸಿನಿಮಾವನ್ನು ಐದು ಭಾಷೆಯಲ್ಲಿ ರಿಲೀಸ್ ಮಾಡಲು ತಯಾರಿ ನಡೆಸಲಾಗುತ್ತಿದೆ.

    vijaydevarakonda

    ಮೊದಲ ಬಾರಿಗೆ ಒಟ್ಟಿಗೆ ತೆರೆಹಂಚಿಕೊಳ್ತಿರೋ ವಿಜಯ್ ಮತ್ತು ಪೂಜಾ ಹೆಗ್ಗೆ ಅವರ ಜೋಡಿ ಬೆಳ್ಳಿತೆರೆಯಲ್ಲಿ ಹೇಗೆ ಕಮಾಲ್ ಮಾಡಲಿದೆ ಎಂದು ಕಾದುನೋಡಬೇಕಿದೆ.

  • ವಿಜಯ್ ದೇವರಕೊಂಡ ಚಿತ್ರಕ್ಕೆ ಜೋಡಿಯಾಗಿ ಕರಾವಳಿ ನಟಿ ಫಿಕ್ಸ್

    ವಿಜಯ್ ದೇವರಕೊಂಡ ಚಿತ್ರಕ್ಕೆ ಜೋಡಿಯಾಗಿ ಕರಾವಳಿ ನಟಿ ಫಿಕ್ಸ್

    ಪುರಿ ಜಗನ್ನಾಥ್ ಮತ್ತು ವಿಜಯ್ ದೇವರಕೊಂಡ ಕಾಂಬಿನೇಷನ್‌ನ ಹೊಸ ಸಿನಿಮಾದಲ್ಲಿ ವಿಜಯ್ ದೇವರಕೊಂಡ ಜೊತೆ ಡ್ಯುಯೇಟ್ ಹಾಡಲು ಮಂಗಳೂರು ಬೆಡಗಿ ಪೂಜಾ ಹೆಗ್ಡೆ ರೆಡಿಯಾಗಿದ್ದಾರೆ.

    vijaydevarakonda

    ಟಾಲಿವುಡ್ ನಿರ್ದೇಶಕ ಪುರಿ ಜಗನ್ನಾಥ್ ಹಾಗೂ `ಅರ್ಜುನ್ ರೆಡ್ಡಿ’ ಸಿನಿಮಾ ಖ್ಯಾತಿಯ ವಿಜಯ್ ದೇವರಕೊಂಡ ಕಾಂಬಿನೇಶನ್‌ನ ಮತ್ತೊಂದು ಮೆಗಾ ಪ್ರಾಜೆಕ್ಟ್‌ಗೆ ನಾಯಕಿಯ ಆಯ್ಕೆ ಆಗಿದೆ. ತುಳುನಾಡಿನ ಕುವರಿ ಪೂಜಾ ಹೆಗ್ಡೆ ಈ ಸಿನಿಮಾದಲ್ಲಿ ನಾಯಕಿಯಾಗಿ ಮಿಂಚಲಿದ್ದಾರೆ.ಇದನ್ನೂ ಓದಿ:ಕಿಚ್ಚ ಸುದೀಪ್ ಅವರನ್ನ ಕಾಪಿ ಹೊಡೆದ ಸ್ಟಾರ್ ನಟ ಕಮಲ್ ಹಾಸನ್

    ಇದೊಂದು ಆಕ್ಷನ್ ಕಥೆಯಾಗಿದ್ದು, ಜೂನ್ ಮೊದಲ ವಾರದಲ್ಲಿಯೇ ಈ ಸಿನಿಮಾದ ಶೂಟಿಂಗ್ ಮುಂಬೈನಲ್ಲಿ ನಡೆಯಲಿದೆ. ಪೂಜಾ ಹೆಗ್ಡೆ ಶೂಟಿಂಗ್‌ನಲ್ಲಿ ಭಾಗಿಯಾಗಲಿದ್ದಾರೆ. ಈ ಸಿನಿಮಾವನ್ನು ಐದು ಭಾಷೆಯಲ್ಲಿ ರಿಲೀಸ್ ಮಾಡಲು ತಯಾರಿ ನಡೆಸಲಾಗುತ್ತಿದೆ.

    ಪೂಜಾ ಹೆಗ್ಡೆ ಅವರಿಗೆ ಸಾಲು ಸಾಲು ಸಿನಿಮಾ ಸೋತಿದೆ. ಗೆಲುವಿಗಾಗಿ ಕಾಯುತ್ತಿರುವ ಪೂಜಾ ಈ ಚಿತ್ರದಲ್ಲಿಯಾದರೂ ಅವರು ಗೆಲುವು ಸಿಗಲಿದೆಯೇ ಎಂಬ ನಿರೀಕ್ಷೆಯಲ್ಲಿದ್ದಾರೆ. ಪದೇ ಪದೇ ಸೋಲು ಸಿಕ್ಕಿದ್ದಕ್ಕೆ ಪೂಜಾ ಹೆಗ್ಡೆ ಅವರಿಗೆ ಐರನ್ ಲೆಗ್ ಎಂದು ಕೆಲವರು ಟ್ರೋಲ್ ಮಾಡಿದ್ದಾರೆ. ಮುಂಬರುವ ಚಿತ್ರದ ಮೂಲಕ ಪೂಜಾ ಹೆಗ್ಡೆ ಅದೃಷ್ಟ ಖುಲಾಯಿಸುತ್ತಾ ಅಂತಾ ಕಾದು ನೋಡಬೇಕಿದೆ.

  • ಕರಣ್ ಬರ್ತ್‌ಡೇ ಪಾರ್ಟಿಯಲ್ಲಿ ರಶ್ಮಿಕಾ ಮಂದಣ್ಣ ಕಾಸ್ಟ್ಯೂಮ್‌ಗೆ ಬಾಲಿವುಡ್ ಫಿದಾ

    ಕರಣ್ ಬರ್ತ್‌ಡೇ ಪಾರ್ಟಿಯಲ್ಲಿ ರಶ್ಮಿಕಾ ಮಂದಣ್ಣ ಕಾಸ್ಟ್ಯೂಮ್‌ಗೆ ಬಾಲಿವುಡ್ ಫಿದಾ

    ನಿನ್ನೆಯಷ್ಟೇ ಬಾಲಿವುಡ್‌ನಲ್ಲಿ ಬಹುದೊಡ್ಡ ಬರ್ತ್‌ಡೇ ಪಾರ್ಟಿ ನಡೆದಿದೆ. ನಿರ್ದೇಶಕ, ನಟ, ನಿರ್ಮಾಪಕ ಕರಣ್ ಜೋಹಾರ್ ಅವರಿಗೆ 50 ತುಂಬಿದ ಸಂದರ್ಭದಲ್ಲಿ ಇಡೀ ಭಾರತೀಯ ಸಿನಿಮಾ ರಂಗವನ್ನೇ ಪಾರ್ಟಿಯ ನೆಪದಲ್ಲಿ ಒಂದಾಗಿಸಿದ್ದರು ಕರಣ್. ಇದನ್ನೂ ಓದಿ : ತೆರೆಯ ಮೇಲೂ ನಿರ್ದೇಶಕನಾಗಿ ನಟಿಸಿದ ಯೋಗರಾಜ್ ಭಟ್

    ಈ ಬಾರಿ ಬಾಲಿವುಡ್ ನಟ ನಟಿಯರಿಗೆ ಮಾತ್ರವಲ್ಲ, ದಕ್ಷಿಣದ ಅನೇಕ ತಾರೆಯರಿಗೆ ಕರಣ್ ಆಹ್ವಾನ ನೀಡಿದ್ದರು. ಹಾಗಾಗಿ ಸಮಂತಾ, ವಿಜಯ್ ದೇವರಕೊಂಡ, ರಶ್ಮಿಕಾ ಮಂದಣ್ಣ ಸೇರಿದಂತೆ ಹಲವು ದಕ್ಷಿಣದ ಕಲಾವಿದರು ಕೂಡ ಈ ಪಾರ್ಟಿಯಲ್ಲಿ ಭಾಗಿಯಾಗಿದ್ದರು. ಇದನ್ನೂ ಓದಿ : ಪೊಲೀಸ್ ಪೇದೆ ನನ್ನನ್ನು ಸೆಕ್ಸ್ ವರ್ಕರ್ ರೀತಿ ನೋಡಿದ : ಮಲಯಾಳಿ ನಟಿ ಅರ್ಚನಾ ಆರೋಪ

    ತಡರಾತ್ರಿವರೆಗೂ ನಡೆದ ಪಾರ್ಟಿಯಲ್ಲಿ ಸಖತ್ ಮಿಂಚಿದ್ದು ಅಂದರೆ, ಕನ್ನಡದ ಬೆಡಗಿ ರಶ್ಮಿಕಾ ಮಂದಣ್ಣ. ಕರಿ ಬಣ್ಣದ ಕಾಸ್ಟ್ಯೂಮ್‌ನಲ್ಲಿ ರಶ್ಮಿಕಾ ಮಂದಣ್ಣ ಆಧುನಿಕ ದೇವತೆಯಂತೆ ಮಿಂಚಿದ್ದಾರೆ ಎಂದು ಬಾಲಿವುಡ್ ಸಿನಿ ಮಾಧ್ಯಮಗಳು ವರದಿ ಮಾಡಿವೆ. ಇದನ್ನೂ ಓದಿ : ಕಾಶ್ಮೀರ ಟಿವಿ ಸ್ಟಾರ್ ನಟಿ ಹತ್ಯೆ ಮಾಡಿದ ಭಯೋತ್ಪಾದಕರು

    ಈ ಪಾರ್ಟಿಯಲ್ಲಿ ವಿಜಯ್ ದೇವರಕೊಂಡ ಭಾಗಿಯಾಗಿದ್ದರೂ ಕೂಡ, ರಶ್ಮಿಕಾ ಮತ್ತು ವಿಜಯ್ ಅಂತರವನ್ನು ಕಾಪಾಡಿಕೊಂಡಿದ್ದರು ಎನ್ನುವ ಸುದ್ದಿಯು ಕೂಡ ಇದೆ. ಒಟ್ಟಿಗೆ ಅನೇಕ ಪಾರ್ಟಿಗಳಲ್ಲಿ ಜೊತೆಯಾಗಿಯೇ ಕಾಣಿಸಿಕೊಳ್ಳುತ್ತಿದ್ದ ವಿಜಯ್ ಮತ್ತು ರಶ್ಮಿಕಾ ಇತ್ತೀಚಿನ ದಿನಗಳಲ್ಲಿ ದೂರ ದೂರ ಓಡಾಡುತ್ತಿದ್ದಾರೆ. ಈ ಪಾರ್ಟಿಯಲ್ಲೂ ಅವರಿಬ್ಬರೂ ಬೇರೆ ಬೇರೆಯಾಗಿಯೇ ಬಂದರು ಎನ್ನುತ್ತಿವೆ ಮೂಲಗಳು. ಹಾಗಾಗಿ ಇಬ್ಬರ ಮಧ್ಯ ಮನಸ್ತಾಪ ಆಗಿರುವುದು ನಿಜ ಎನ್ನಲಾಗುತ್ತಿದೆ.

  • ಆಸ್ಪತ್ರೆಯಲ್ಲಿ ದಾಖಲಾಗಿಲ್ಲ ವಿಜಯ್ ದೇವರಕೊಂಡ, ಸಮಂತಾ?

    ಆಸ್ಪತ್ರೆಯಲ್ಲಿ ದಾಖಲಾಗಿಲ್ಲ ವಿಜಯ್ ದೇವರಕೊಂಡ, ಸಮಂತಾ?

    ಮಿಳಿನ ಸ್ಟಾರ್ ನಟ ವಿಜಯ್ ದೇವರಕೊಂಡ ಮತ್ತು ನಟಿ ಸಮಂತಾ ಇದೀಗ ‘ಖುಷಿ’ ಸಿನಿಮಾದ ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದಾರೆ. ಕಳೆದ ಎರಡು ವಾರಗಳಿಂದ ಅವರು ಶೂಟಿಂಗ್‌ಗಾಗಿ ಕಾಶ್ಮೀರದಲ್ಲಿ ಬೀಡು ಬಿಟ್ಟಿದ್ದರು. ಚಿತ್ರೀಕರಣದ ಸಂದರ್ಭದಲ್ಲಿ ಅಪಘಾತವಾಗಿದ್ದು, ಇಬ್ಬರೂ ಗಾಯಗೊಂಡಿದ್ದಾರೆ ಎನ್ನುವ ಸುದ್ದಿ ಇತ್ತು. ಚಿಕಿತ್ಸೆಗಾಗಿ ಆಸ್ಪತ್ರೆ ಸೇರಿಕೊಂಡಿದ್ದಾರೆ ಎಂದು ಹೇಳಲಾಗಿತ್ತು. ಇದನ್ನೂ ಓದಿ : ತೆರೆಯ ಮೇಲೂ ನಿರ್ದೇಶಕನಾಗಿ ನಟಿಸಿದ ಯೋಗರಾಜ್ ಭಟ್

    ವಿಜಯ್ ದೇವರಕೊಂಡ ಮತ್ತು ಸಮಂತಾ ಅವರಿದ್ದ ಜೀಪ್ ನದಿಗೆ ಉರುಳಿ, ಭಾರೀ ಅಪಘಾತವಾಗಿದೆ ಎನ್ನುವ ಸುದ್ದಿ ಎರಡ್ಮೂರು ದಿನಗಳಿಂದ ಭಾರೀ ಸದ್ದು ಮಾಡಿತ್ತು. ಇಬ್ಬರೂ ಅಭಿಮಾನಿಗಳು ಇದರಿಂದಾಗಿ ಸಹಜವಾಗಿಯೇ ಆತಂಕಕ್ಕೀಡಾಗಿದ್ದರು. ಆದರೆ ಈ ಸುದ್ದಿಯ ಅಸಲಿ ಕಥೆಯೇ ಬೇರೆ ಇದೆ ಎನ್ನುತ್ತಾರೆ ಇವರ ಆಪ್ತರು. ಇದನ್ನೂ ಓದಿ : ಪೊಲೀಸ್ ಪೇದೆ ನನ್ನನ್ನು ಸೆಕ್ಸ್ ವರ್ಕರ್ ರೀತಿ ನೋಡಿದ : ಮಲಯಾಳಿ ನಟಿ ಅರ್ಚನಾ ಆರೋಪ

    ಅಷ್ಟಕ್ಕೂ ಸಮಂತಾ ಮತ್ತು ದೇವರಕೊಂಡ ಶೂಟಿಂಗ್‌ಗಾಗಿ ಕಾಶ್ಮೀರಕ್ಕೆ ಹೋಗಿದ್ದು ನಿಜ. ಎರಡು ವಾರಗಳ ಕಾಲ ಕಾಶ್ಮೀರದಲ್ಲೇ ಚಿತ್ರೀಕರಣ ನಡೆದಿದೆ. ಆದರೆ ಯಾವುದೇ ಅವಘಡ ಸಂಭವಿಸಿಲ್ಲವಂತೆ. ಈ ಸುದ್ದಿ ಹಬ್ಬಿದ ದಿನ ಇಬ್ಬರೂ ತಮ್ಮ ತಮ್ಮ ಮನೆಯಲ್ಲೇ ಇದ್ದರಂತೆ. ಶೂಟಿಂಗ್ ಮುಗಿಸಿಕೊಂಡು ಈಗಾಗಲೇ ಅವರು ತಮ್ಮ ಮನೆ ಸೇರಿಕೊಂಡಿದ್ದಾರೆ. ಅಲ್ಲದೇ ಇಬ್ಬರೂ ಕರಣ್ ಜೋಹಾರ್ ಹುಟ್ಟುಹಬ್ಬದ ಪಾರ್ಟಿಯಲ್ಲೂ ಪಾಲ್ಗೊಂಡಿದ್ದಾರೆ. ಇದನ್ನೂ ಓದಿ : ಕಾಶ್ಮೀರ ಟಿವಿ ಸ್ಟಾರ್ ನಟಿ ಹತ್ಯೆ ಮಾಡಿದ ಭಯೋತ್ಪಾದಕರು

    ಕಾಶ್ಮೀರದ ಶೂಟಿಂಗ್ ಮುಗಿದು ಮೂರ್ನಾಲ್ಕು ದಿನಗಳೇ ಆಗಿವೆ. ಇಬ್ಬರೂ ತಮ್ಮ ತಮ್ಮ ಮನೆಯಲ್ಲಿ ನೆಮ್ಮದಿಯಾಗಿ ಇದ್ದಾರೆ. ಈ ನಡುವೆ ಅಪಘಾತದ ಸುದ್ದಿ ಬಂದಿದೆ. ಈ ಸುದ್ದಿಯನ್ನು ಯಾರು, ಯಾಕೆ ಹಬ್ಬಿಸಿದರೋ ಗೊತ್ತಿಲ್ಲ. ಆದರೆ ಈ ಸುದ್ದಿಯು ಅವರ ಅಭಿಮಾನಿಗಳಲ್ಲಿ ಆತಂಕ ಸೃಷ್ಟಿಸಿದ್ದು ಸುಳ್ಳಲ್ಲ.

  • ಕರಣ್ ಜೋಹರ್ ಬರ್ತಡೇ ಪಾರ್ಟಿಯಲ್ಲಿ ವಿಜಯ್ ದೇವರಕೊಂಡ-ರಶ್ಮಿಕಾ

    ಕರಣ್ ಜೋಹರ್ ಬರ್ತಡೇ ಪಾರ್ಟಿಯಲ್ಲಿ ವಿಜಯ್ ದೇವರಕೊಂಡ-ರಶ್ಮಿಕಾ

    ಬಾಲಿವುಡ್‌ನ ಹೆಸರಾಂತ ನಿರ್ಮಾಪಕ ಕರಣ್ ಜೋಹರ್ ಇಂದು 50ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ಇದೇ ಖುಷಿಯಲ್ಲಿ ಸಂಜೆ ಆಯೋಜಿಸಿರುವ ಕರಣ್ ಹುಟ್ಟುಹಬ್ಬದ ಪಾರ್ಟಿಯಲ್ಲಿ ಎಲ್ಲ ಚಿತ್ರರಂಗದ ಕಲಾವಿದರು ಒಟ್ಟಾಗಲಿದ್ದಾರೆ. ಅಷ್ಟೇ ಅಲ್ಲ, ಈ ಇವೆಂಟ್‌ಗೆ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಕೂಡ ಭಾಗವಹಿಸುತ್ತಿದ್ದಾರೆ.

    ಹಿಂದಿ ಚಿತ್ರರಂಗದ ಖ್ಯಾತ ನಿರ್ದೇಶಕ ಕಮ್ ನಿರ್ಮಾಪಕ ಕರಣ್ ಜೋಹರ್ ೫೦ನೇ ವರ್ಷದ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ. ಕರಣ್ ಜೋಹರ್ ಹುಟ್ಟುಹಬ್ಬಕ್ಕೆ ಬಾಲಿವುಡ್ ಮಂದಿಗೆ ಮಾತ್ರವಲ್ಲ ನ್ಯಾಷನಲ್ ಸ್ಟಾರ್ ಯಶ್ ಸೇರಿದಂತೆ ಪರಭಾಷೆಯ ಸ್ಟಾರ್ ಕಲಾವಿದರಿಗೆ ಬರ್ತಡೇ ಆಮಂತ್ರಣವಿದೆ. ಇದೀಗ ವಿಜಯ್ ದೇವಕೊಂಡ ಮತ್ತು ರಶ್ಮಿಕಾ ಅಭಿಮಾನಿಗಳು ಖುಷಿಪಡುವಂತಹ ಸುದ್ದಿ ಸಿಕ್ಕಿದೆ. ಕರಣ್ ಹುಟ್ಟುಹಬ್ಬಕ್ಕೆ ʻಗೀತ ಗೋವಿಂದಂʼ ಜೋಡಿ ಕೂಡ ಸಾಥ್ ಕೊಡಲಿದ್ದಾರೆ.

    ಕರಣ್ ಜೋಹರ್ ಹುಟ್ಟುಹಬ್ಬದ ಪ್ರಯುಕ್ತ ಇಂದು ಯಶ್ ರಾಜ್ ಸ್ಟುಡಿಯೋದಲ್ಲಿ ಅದ್ದೂರಿ ಹುಟ್ಟುಹಬ್ಬವನ್ನು ಆಚರಿಸಲಾಗುತ್ತಿದೆ. ಇದೀಗ `ಖುಷಿ’ ಚಿತ್ರದ ಶೂಟಿಂಗ್ ಮುಗಿಸಿ, ಮುಂಬೈಗೆ ಬಂದಿರುವ ವಿಜಯ್ ಬಂದಿದ್ದಾರೆ. ಸಂಜೆ ನಂತರ ಬರ್ತಡೇ ಪಾರ್ಟಿಯಲ್ಲಿ ವಿಜಯ್ ಮತ್ತು ರಶ್ಮಿಕಾ ಕೂಡ ಭಾಗಿಯಾಗ್ತಿದ್ದಾರೆ. ಜೊತೆ ಲೈಗರ್ ನಟಿ ಅನನ್ಯ ಪಾಂಡೆ ಮತ್ತು ನಿರ್ಮಾಪಕಿ ಚಾರ್ಮಿ ಕೂಡ ಇರಲಿದ್ದಾರೆ. ಇದನ್ನೂ ಓದಿ: ಕಂಬಳ ಕುರಿತಾಗಿ ಕನ್ನಡದಲ್ಲಿ ಮತ್ತೊಂದು ಸಿನಿಮಾ: ಒಂದಕ್ಕೆ ರಿಷಭ್ ಮತ್ತೊಂದಕ್ಕೆ ರಾಜೇಂದ್ರ ಸಿಂಗ್ ಬಾಬು ಡೈರೆಕ್ಟರ್

    ನಿರ್ಮಾಪಕ ಕರಣ್ ಹುಟ್ಟುಹಬ್ಬದ ಪಾರ್ಟಿಯಲ್ಲಿ ಎಲ್ಲ ಸ್ಟಾರ್ ನಟ ನಟಿಯರ ದಂಡೇ ಇರಲಿದೆ. ಯಾರೆಲ್ಲ ಬರಲಿದ್ದಾರೆ ಎಂಬುದನ್ನ ಕಾದು ನೋಡಬೇಕಿದೆ.

  • ʻಖುಷಿʼ ಶೂಟಿಂಗ್ ವೇಳೆ ನೀರಿಗೆ ಬಿದ್ದ ವಾಹನ: ಸಮಂತಾ- ವಿಜಯ್ ದೇವರಕೊಂಡ ಸೇಫ್!

    ʻಖುಷಿʼ ಶೂಟಿಂಗ್ ವೇಳೆ ನೀರಿಗೆ ಬಿದ್ದ ವಾಹನ: ಸಮಂತಾ- ವಿಜಯ್ ದೇವರಕೊಂಡ ಸೇಫ್!

    ದಕ್ಷಿಣ ಭಾರತದ ನಿರೀಕ್ಷಿತ `ಖುಷಿ’ ಚಿತ್ರದ ಶೂಟಿಂಗ್ ಕಾಶ್ಮೀರದಲ್ಲಿ ನಡೆಯುತ್ತಿದ್ದು, ಈ ವೇಳೆ ನಟ ವಿಜಯ್ ದೇವರಕೊಂಡ, ಸಮಂತಾ ಗಾಯಗೊಂಡಿದ್ದಾರೆ. ಸಾಹಸ ದೃಶ್ಯವೊಂದರ ಶೂಟಿಂಗ್‌ನಲ್ಲಿ ಭಾಗಿಯಾಗಿದ್ದಾಗ ಈ ಘಟನೆ ನಡೆದಿದೆ. ಸದ್ಯ ಇಬ್ಪರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

    `ಖುಷಿ’ ಚಿತ್ರಂಡ ಕೆಲ ದಿನಗಳ ಹಿಂದೆಯೇ ಕಾಶ್ಮೀರದಲ್ಲಿ ಬೀಡು ಬಿಟ್ಟಿತ್ತು. ಚಿತ್ರೀಕರಣಕ್ಕಾಗಿ ವಿಜಯ್ ಹಾಗೂ ಸಮಂತಾ, ನದಿಗೆ ಅಡ್ಡಲಾಗಿ ಕಟ್ಟಿದ್ದ ಹಗ್ಗದ ಮೇಲೆ ವಾಹನವನ್ನು ಓಡಿಸಬೇಕಾಗಿತ್ತು. ಆಗ ದುರದೃಷ್ಟವಶಾತ್, ವಾಹನವು ನದಿಗೆ ಬಿದ್ದು, ವಾಹನದಲ್ಲಿದ್ದ ಸಮಂತಾ ಮತ್ತು ವಿಜಯ್ ಬೆನ್ನಿಗೆ ಗಾಯವಾಗಿದೆ. ಇದೀಗ ಇಬ್ಬರಿಗೂ ಚಿಕಿತ್ಸೆ ನೀಡಲಾಗಿದೆ.

    `ಖುಷಿ’ ಸಿನಿಮಾಗಾಗಿ ವಿಜಯ್ ಮತ್ತು ಸಮಂತಾ ಅವರು ಶೂಟಿಂಗ್‌ನಲ್ಲಿ ಭಾಗಿಯಾದರು. ಶ್ರೀನಗರದ ದಾಲ್ ಲೇಕ್ ಬಳಿ ಶೂಟಿಂಗ್ ಮಾಡುತ್ತಿರುವಾಗ ವಾಹನ ನೀರಿಗೆ ಬಿದ್ದಿದೆ. ಈ ವೇಳೆ ಬೆನ್ನಿಗೆ ಗಾಯವಾಗಿ ನೋವು ಕಾಣಿಸಿಕೊಂಡಿದೆ. ತಕ್ಷಣವೇ ಅವರಿಬ್ಬರು ಸ್ಥಳೀಯ ಹೋಟೆಲ್‌ಗೆ ಹೋಗಿದ್ದು, ಸದ್ಯ ವೈದ್ಯರು ಈ ಕಲಾವಿದರಿಗೆ ಚಿಕಿತ್ಸೆ ನೀಡಿದ್ದಾರೆ. ಇನ್ನು ಭಾರೀ ಭದ್ರತೆಯಲ್ಲಿ ಶೂಟಿಂಗ್ ಮಾಡಲಾಗಿತ್ತು. ಆದರೂ ಅಪಘಾತ ಸಂಭವಿಸಿ, ದುರದೃಷ್ಟವಶಾತ್ ವಿಜಯ್ ಮತ್ತು ಸಮಂತಾ ಸಣ್ಣ ಮಟ್ಟದಲ್ಲಿ ಪೆಟ್ಟಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದನ್ನೂ ಓದಿ: ಚೇತನಾ ರಾಜ್ ಸಾವಿನ ಬೆನ್ನಲ್ಲೇ ಬಾಡಿ ಶೇಮಿಂಗ್ ಬಗ್ಗೆ ವಿನಯಾ ಪ್ರಸಾದ್ ಪುತ್ರಿ ಖಡಕ್ ಮಾತು

    `ಖುಷಿ’ ಇದೇ ಡಿಸೆಂಬರ್ 23ಕ್ಕೆ ತೆರೆಗೆ ಅಪ್ಪಳಿಸಲು ಸಜ್ಜಾಗಿದೆ. ತೆಲುಗು, ತಮಿಳು, ಮಲಯಾಳಂ, ಕನ್ನಡದಲ್ಲಿ ಈ ಚಿತ್ರ ರಿಲೀಸ್ ಆಗಲಿದೆ. ಮಹಾನಟಿ ಸಿನಿಮಾ ನಂತರದಲ್ಲಿ ಸಮಂತಾ, ವಿಜಯ್ ದೇವರಕೊಂಡ ಒಟ್ಟಾಗಿ ನಟಿಸಿದ್ದಾರೆ. ಕಾಶ್ಮೀರದ ಶೂಟಿಂಗ್ ದೃಶ್ಯಗಳನ್ನು ಸಮಂತಾ ಅವರು ಕೆಲ ದಿನಗಳ ಹಿಂದೆ ಹಂಚಿಕೊಂಡಿದ್ದರು. ಇನ್ನು ವಿಶೇಷವಾಗಿ ಸಮಂತಾಗೆ ಕಾಶ್ಮೀರದಲ್ಲಿ `ಖುಷಿ’ ಸಿನಿಮಾ ತಂಡ ಸರ್ಪ್ರೈಸ್ ಹುಟ್ಟುಹಬ್ಬದ ಸೆಲೆಬ್ರೇಷನ್ ಕೂಡ ಮಾಡಿತ್ತು. ಒಟ್ನಲ್ಲಿ ವಿಜಯ್ ಮತ್ತು ಸಮಂತಾ ಸೇಫ್ ಆಗಿರೋದನ್ನ ಕೇಳಿ ಫ್ಯಾನ್ಸ್ ನಿಟ್ಟುಸಿರು ಬಿಟ್ಟಿದ್ದಾರೆ.

  • ವಿಜಯ್ ದೇವರಕೊಂಡ ಮೇಲೆ ಮುನಿಸಿಕೊಂಡ ಪವನ್ ಕಲ್ಯಾಣ ಫ್ಯಾನ್ಸ್

    ವಿಜಯ್ ದೇವರಕೊಂಡ ಮೇಲೆ ಮುನಿಸಿಕೊಂಡ ಪವನ್ ಕಲ್ಯಾಣ ಫ್ಯಾನ್ಸ್

    ವಿಜಯ್ ದೇವರಕೊಂಡ ಮತ್ತು ಸಮಂತಾ ನಟನೆಯ `ಖುಷಿ’ ಚಿತ್ರದ ಫಸ್ಟ್ ಲುಕ್ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಸುದ್ದಿ ಮಾಡುತ್ತಿದೆ. ಈಗ ವಿಜಯ್ ನಟನೆಯ `ಖುಷಿ’ ಚಿತ್ರದ ವಿಚಾರವಾಗಿ ಪವನ್ ಕಲ್ಯಾಣ ಫ್ಯಾನ್ಸ್ ಫುಲ್ ಗರಂ ಆಗಿದ್ದಾರೆ.

    ಟಾಲಿವುಡ್‌ನಲ್ಲಿ ಸಖತ್ ಸೌಂಡ್ ಮಾಡುತ್ತಿರೋ ವಿಜಯ್ ದೇವರಕೊಂಡ ಮತ್ತು ಸಮಂತಾ ನಟನೆಯ `ಖುಷಿ’ ಸಿನಿಮಾ ಮೇಲೆ ಪವನ್ ಕಲ್ಯಾಣ್ ಫ್ಯಾನ್ಸ್ ಮುನಿಸಿಕೊಂಡಿದ್ದಾರೆ. ವಿಜಯ್ ಅಭಿನಯದ `ಖುಷಿ’ ಟೈಟಲ್ ಅನೌನ್ಸ್ ಆಗುತ್ತಿದ್ದಂತೆ ಪವನ್ ಕಲ್ಯಾಣ ಫ್ಯಾನ್ಸ್ ಮುನಿಸಿಕೊಂಡಿದ್ದಾರೆ.

    ಪವರ್‌ಸ್ಟಾರ್ ಪವನ್ ಕಲ್ಯಾಣ್ ಮತ್ತು ಭೂಮಿಕಾ ಜೋಡಿಯಾಗಿ ನಟಿಸಿದ ಚಿತ್ರ `ಖುಷಿ’ ಚಿತ್ರ ಮತ್ತೆ 20 ವರ್ಷಗಳ ನಂತರ ತೆರೆಗೆ ಬರುತ್ತಿದೆ. ಹಳೆಯ ಚಿತ್ರದ ಫೀಲ್ ಅನ್ನು ಈಗೀನ ವಿಜಯ್‌ ನಟನೆಯ ಚಿತ್ರ ಹಾಳು ಮಾಡುತ್ತಿದೆ ಎಂದು ಪವರ್ ಸ್ಟಾರ್ ಫ್ಯಾನ್ಸ್ ಬೇಸರ ಮಾಡಿಕೊಂಡಿದ್ದಾರೆ. `ಖುಷಿ’ ಚಿತ್ರದಲ್ಲಿ ಪವನ್ ಮತ್ತು ಭೂಮಿಕಾ ಜೋಡಿ ಫ್ಯಾನ್ಸ್‌ಗೆ ಸಖತ್ ಮೋಡಿ ಮಾಡಿತ್ತು. ಪವನ್ ಕಲ್ಯಾಣ್ ಅಂದ್ರೆ ಖುಷಿ, ಖುಷಿ ಅಂದ್ರೆ ಪವನ್ ಕಲ್ಯಾಣ್ ಹೀಗಿರುವಾಗ ಈ ಚಿತ್ರದ ಟೈಟಲ್ ಅನ್ನು ವಿಜಯ್ ದೇವರಕೊಂಡ ಚಿತ್ರದಲ್ಲಿ ಮರುಬಳಕೆ ಮಾಡಿಕೊಂಡಿರುವುದರ ಬಗ್ಗೆ ಪವನ್ ಕಲ್ಯಾಣ್‌ ಫ್ಯಾನ್ಸ್‌ ಫುಲ್ ಗರಂ ಆಗಿದ್ದಾರೆ. ಇದನ್ನೂ ಓದಿ: ಕಾಶ್ಮೀರದಲ್ಲಿ ನಡೆದ ಹಿಂಸಾಚಾರಕ್ಕೆ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರವೇ ಕಾರಣ: ಮೆಹಬೂಬಾ ಮುಫ್ತಿ

    ಪವನ್ ಕಲ್ಯಾಣ್ ತಿರುಗಿ ಬೀಳುತ್ತಿದ್ದಂತೆ ವಿಜಯ್ ಪರವಾಗಿ ದೇವರಕೊಂಡ ಫ್ಯಾನ್ಸ್ ಮಾತನಾಡಿದ್ದಾರೆ. ಟೈಟಲ್ ಅನ್ನು ಮರುಬಳಕೆ ಮಾಡುವುದರಲ್ಲಿ ತಪ್ಪೇನಿಲ್ಲ. ಈ ರೀತಿ ಹಲವು ಬಾರಿ ನಡೆದಿದೆ ಅಂತಾ ನೆಚ್ಚಿನ ನಟನಿಗೆ ಫ್ಯಾನ್ಸ್ ಸಾಥ್ ನೀಡಿದ್ದಾರೆ. ಇನ್ನು ಪವನ್ ಕಲ್ಯಾಣ್ ನಟನೆಯ `ಖುಷಿ’ ಚಿತ್ರದ ಮುಂದೆ ವಿಜಯ್ ನಟನೆಯ `ಖುಷಿ’ ಸಿನಿಮಾ ಹೇಗೆ ಮೋಡಿ ಮಾಡಬಹುದು ಅಂತಾ ಕಾದುನೋಡಬೇಕಿದೆ.

  • ಸಮಂತಾ, ವಿಜಯ್ ದೇವರಕೊಂಡ ಪ್ರೀತಿಗಿಟ್ಟ ಹೆಸರು ‘ಖುಷಿ’

    ಸಮಂತಾ, ವಿಜಯ್ ದೇವರಕೊಂಡ ಪ್ರೀತಿಗಿಟ್ಟ ಹೆಸರು ‘ಖುಷಿ’

    ಮೊನ್ನೆಯಷ್ಟೇ ವಿಜಯ್ ದೇವರಕೊಂಡ ಅವರ ಹುಟ್ಟು ಹಬ್ಬಕ್ಕೆ ವಿಭಿನ್ನವಾಗಿ ವಿಶ್ ಮಾಡಿ ಸುದ್ದಿಯಾಗಿದ್ದ ಸಮಂತಾ, ಇದೀಗ ಮತ್ತೊಂದು ಕಾರಣಕ್ಕೆ ಸದ್ದು ಮಾಡುತ್ತಿದ್ದಾರೆ. ವಿಜಯ್ ದೇವರಕೊಂಡ ಮತ್ತು ಸಮಂತಾ ನಟನೆಯ ಹೊಸ ಸಿನಿಮಾಗೆ ವಿಭಿನ್ನವಾಗಿ ಶೀರ್ಷಿಕೆ ಇಡಲಾಗಿದ್ದು, ಅದು ಈಗ ರಿವೀಲ್ ಆಗಿದೆ. ಇದನ್ನೂ ಓದಿ: ದೊಡ್ಮನೆ ಕುಡಿ ಯುವರಾಜ್ ಎದುರು ವಿಲನ್ ಆಗಿ ಡಾಲಿ!

    ಇದೇ ಮೊದಲ ಬಾರಿಗೆ ವಿಜಯ್ ದೇವರಕೊಂಡ ಮತ್ತು ಸಮಂತಾ ಒಟ್ಟಾಗಿ ನಟಿಸುತ್ತಿದ್ದರಿಂದ ಈ ಚಿತ್ರಕ್ಕೆ ಯಾವ ರೀತಿಯ ಟೈಟಲ್ ಇಡಬಹುದು ಎಂದು ಚರ್ಚೆ ಶುರುವಾಗಿತ್ತು. ಈಗ ಅದಕ್ಕೆ ಫುಲ್ ಸ್ಟಾಪ್ ಬಿದ್ದಿದ್ದು ಚಿತ್ರಕ್ಕೆ ‘ಖುಷಿ’ ಎಂದು ಶೀರ್ಷಿಕೆ ಇಟ್ಟಿದ್ದಾರೆ ನಿರ್ದೇಶಕರು. ಸಮಂತಾ ಮತ್ತು ವಿಜಯ್ ದೇವರಕೊಂಡ ಅವರ ತೆರೆಯ ಮೇಲಿನ ಪ್ರೀತಿಗೆ ‘ಖುಷಿ’ಯೇ ಸಾಕ್ಷಿಯಾಗಿದೆ ಎಂದಿದ್ದಾರೆ ನಿರ್ದೇಶಕರು. ಇನದನ್ನೂ ಓದಿ:`ಫಿದಾ’ ಬ್ಯೂಟಿ ಸಾಯಿ ಪಲ್ಲವಿಗೆ ಕನ್ನಡ ಹೇಳಿಕೊಟ್ಟ ಶೀತಲ್ ಶೆಟ್ಟಿ

    ಟೈಟಲ್ ರಿವೀಲ್ ಗಾಗಿಯೇ ತಯಾರಾದ ಪೋಸ್ಟರ್ ನಲ್ಲಿ ಸಮಂತಾ ಕಲರ್ ಫುಲ್ ಸೀರೆ ಧರಿಸಿ, ಫಳಫಳ ಹೊಳೆಯುತ್ತಿದ್ದಾರೆ. ಥೇಟ್ ಮದುವಣಗಿತ್ತಿಯಂತೆಯೇ ಕಾಣುತ್ತಾರೆ. ದೇವರಕೊಂಡ ಅವರದ್ದು ಕಾಶ್ಮೀರಿ ಶೈಲಿಯ ಡ್ರೆಸ್. ಹೀಗಾಗಿ ಸಿನಿಮಾದಲ್ಲಿ ಕತೆಯು ಹೇಗಿರಬಹುದು ಎಂಬ ಕುತೂಹಲ ಮೂಡಿಸಿದೆ ಪೋಸ್ಟರ್. ಇದನ್ನೂ ಓದಿ: ಟಗರು-2ನಲ್ಲಿ ಶಿವಣ್ಣನ ಜತೆ ನಟಿಸಬೇಕಿತ್ತು ಅಪ್ಪು!

    ಸಿನಿಮಾದ ಶೂಟಿಂಗ್ ಇನ್ನೂ ನಡೆದಿದ್ದರೂ, ಟೈಟಲ್ ಜೊತೆ ಫಸ್ಟ್ ಲುಕ್ ಮತ್ತು ಸಿನಿಮಾ ಬಿಡುಗಡೆಯ ದಿನಾಂಕವನ್ನೂ ಚಿತ್ರತಂಡ ಬಹಿರಂಗಗೊಳಿಸಿದೆ. ಡಿಸೆಂಬರ್ 23 ರಂದು ಖುಷಿ ಸಿನಿಮಾ ತೆರೆಗೆ ಬರಲಿದೆ. ಈ ಚಿತ್ರಕ್ಕೆ ಶಿವ ನಿರರ್ವಾನ ನಿರ್ದೇಶನ ಮಾಡಿದ್ದು, ನಾನಾ ಕಾರಣಗಳಿಂದಾಗಿ ಈ ಸಿನಿಮಾ ಕುತೂಹಲ ಮತ್ತು ನಿರೀಕ್ಷೆ ಹೆಚ್ಚು ಮಾಡಿದೆ.