Tag: ವಿಜಯ್ ದೇವರಕೊಂಡ

  • ಸೂರ್ಯ ನಟನೆಯ ಸಿನಿಮಾದಲ್ಲಿ ವಿಜಯ್ ದೇವರಕೊಂಡ?

    ಸೂರ್ಯ ನಟನೆಯ ಸಿನಿಮಾದಲ್ಲಿ ವಿಜಯ್ ದೇವರಕೊಂಡ?

    ಮಿಳು ನಟ ಸೂರ್ಯ (Suriya) ನಟನೆಯ 46ನೇ ಚಿತ್ರದಲ್ಲಿ ವಿಜಯ್ ದೇವರಕೊಂಡ (Vijay Devarakonda) ನಟಿಸಲಿದ್ದಾರೆ ಎನ್ನಲಾದ ಸುದ್ದಿಯೊಂದು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಇದನ್ನೂ ಓದಿ:ರಾಧಿಕಾ ಪಂಡಿತ್‌ಗೆ ಸಿನಿಮಾ – ಯಶ್ ತಾಯಿ ಹೇಳೋದೇನು?

    ಇತ್ತೀಚೆಗೆ ಸೂರ್ಯ ನಟನೆಯ 46ನೇ ಚಿತ್ರಕ್ಕೆ (Suriya 46) ಅದ್ಧೂರಿಯಾಗಿ ಚಾಲನೆ ನೀಡಲಾಗಿತ್ತು. ಈ ಸಿನಿಮಾದಲ್ಲಿ ನಾಯಕಿಯಾಗಿ ‘ಪ್ರೇಮಲು’ ನಟಿ ಮಮಿತಾ ಬೈಜು ನಟಿಸಲಿದ್ದಾರೆ. ಚಿತ್ರದಲ್ಲಿ ವಿಜಯ್ ದೇವರಕೊಂಡ ಕೂಡ ನಟಿಸಲಿದ್ದಾರೆ ಎನ್ನಲಾಗಿದೆ. ಹೀಗೊಂದು ಸುದ್ದಿಯೊಂದು ಟಾಲಿವುಡ್ ಗಲ್ಲಿಯಲ್ಲಿ ಚರ್ಚೆಗೆ ಗ್ರಾಸವಾಗಿದೆ. ಇದನ್ನೂ ಓದಿ: ಅತ್ಯಾಚಾರ ಕೇಸ್‌ – ನಾಪತ್ತೆಯಾಗಿದ್ದ ನಟ ಮಡೆನೂರು ಮನು ಅರೆಸ್ಟ್‌

    ಚಿತ್ರದಲ್ಲಿ ತಿರುವು ಕೊಡುವ ಪಾತ್ರದಲ್ಲಿ ವಿಜಯ್ ನಟಿಸಲಿದ್ದಾರೆ ಎನ್ನಲಾಗಿದೆ. ನಟನೊಂದಿಗೆ ಚಿತ್ರತಂಡ ಮಾತುಕತೆ ನಡೆಸಿದೆಯಂತೆ. ಆದರೆ ವಿಜಯ್ ದೇವರಕೊಂಡ ಕಡೆಯಿಂದ ಗ್ರೀನ್ ಸಿಗ್ನಲ್ ಸಿಕ್ಕಿದೆಯಾ ಎಂಬುದನ್ನು ಚಿತ್ರತಂಡವೇ ಅಧಿಕೃತವಾಗಿ ತಿಳಿಸಬೇಕಿದೆ.

    ವಿಜಯ್ ಸದ್ಯ `ಕಿಂಗ್‌ಡಮ್’ ಚಿತ್ರದ ರಿಲೀಸ್‌ಗಾಗಿ ಎದುರು ನೋಡ್ತಿದ್ದಾರೆ. ಭಾಗ್ಯಶ್ರೀ ಜೊತೆ ನಟ ರೊಮ್ಯಾನ್ಸ್ ಮಾಡಿದ್ದಾರೆ. ಈ ಚಿತ್ರ ಜುಲೈ 4ರಂದು ಬಹುಭಾಷೆಗಳಲ್ಲಿ ರಿಲೀಸ್ ಆಗಲಿದೆ.

  • ರಶ್ಮಿಕಾರಲ್ಲಿ ದೇವರಕೊಂಡಗೆ ಪತ್ನಿಯಾಗುವ ಗುಣವಿದ್ಯಾ?- ನಟ ಹೇಳೋದೇನು?

    ರಶ್ಮಿಕಾರಲ್ಲಿ ದೇವರಕೊಂಡಗೆ ಪತ್ನಿಯಾಗುವ ಗುಣವಿದ್ಯಾ?- ನಟ ಹೇಳೋದೇನು?

    ವಿಜಯ್ ದೇವರಕೊಂಡ (Vijay Devarakonda) ಸಿನಿಮಾಗಿಂತ ವೈಯಕ್ತಿಕ ವಿಚಾರವಾಗಿಯೇ ಹೆಚ್ಚು ಸುದ್ದಿಯಾಗುತ್ತಿರುತ್ತಾರೆ. ಇದೀಗ ಮತ್ತೆ ರಶ್ಮಿಕಾ ಜೊತೆಗಿನ ಮದುವೆ ಬಗ್ಗೆ ನಟನಿಗೆ ಪ್ರಶ್ನೆಯೊಂದು ಕೇಳಲಾಗಿದೆ. ಮದುವೆ ಬಗ್ಗೆ ವಿಜಯ್ ಓಪನ್ ಆಗಿ ಮಾತನಾಡಿದ್ದಾರೆ. ಇದನ್ನೂ ಓದಿ: ತ್ರಿಷಾ ಜೊತೆ ರೊಮ್ಯಾನ್ಸ್.. ಅಭಿರಾಮಿಗೆ ಲಿಪ್‌ಲಾಕ್ – ಕಮಲ್ ಹಾಸನ್ ʻಥಗ್ ಲೈಫ್‌ʼ!

    ಸಂದರ್ಶನವೊಂದರಲ್ಲಿ ಮದುವೆ ಬಗ್ಗೆ ಕೇಳಾದ ಪ್ರಶ್ನೆಗೆ ಒಂದಲ್ಲಾ ಒಂದು ದಿನ ಮದುವೆ (Wedding) ಆಗೋದಾಗಿ ಹೇಳಿದ್ದಾರೆ. ಆಗ ರಶ್ಮಿಕಾ ಮಂದಣ್ಣಗೆ (Rashmika Mandanna) ನಿಮ್ಮ ಪತ್ನಿಯಾಗುವ ಗುಣ ಇದೆಯೇ? ಎಂದು ವಿಜಯ್‌ಗೆ ಕೇಳಲಾಗಿದೆ. ಒಳ್ಳೆಯ ಮನಸ್ಸು ಇರುವ ಯಾವ ಹುಡುಗಿಯಾದರೂ ಸರಿ ಎಂದಿದ್ದಾರೆ. ಇದನ್ನೂ ಓದಿ:‘ಸಿತಾರೆ ಜಮೀನ್ ಪರ್’ ಗೆ ಬಾಯ್ಕಾಟ್‌ ಭಯ – ತ್ರಿವರ್ಣ ಧ್ವಜ ಡಿಪಿ ಹಾಕಿದ ಆಮೀರ್ ಖಾನ್!

    ರಶ್ಮಿಕಾ ತುಂಬಾ ಹಾರ್ಡ್‌ವರ್ಕ್‌ ಮಾಡುತ್ತಾರೆ. ದೃಢ ಸಂಕಲ್ಪದಿಂದ ಏನು ಬೇಕಾದರೂ ಸಾಧಿಸುತ್ತಾರೆ. ತಮಗಿಂತ ಬೇರೆಯವರ ಖುಷಿಗೆ ಹೆಚ್ಚಿನ ಪ್ರಾಮುಖ್ಯತೆ ಕೊಡುತ್ತಾರೆ. ಆದರೆ ಎಲ್ಲವನ್ನು ಬ್ಯಾಲೆನ್ಸ್ ಮಾಡೋದನ್ನು ಆಕೆ ಕಲಿಯಬೇಕು ಎಂದಿದ್ದಾರೆ ವಿಜಯ್ ದೇವರಕೊಂಡ.

    ಸಾಕಷ್ಟು ಸಮಯದಿಂದ ರಶ್ಮಿಕಾ ಮತ್ತು ವಿಜಯ್ ಡೇಟಿಂಗ್ ಮಾಡ್ತಿದ್ದಾರೆ ಎಂದು ಸುದ್ದಿ ಹರಿದಾಡುತ್ತಿದೆ. ಇತ್ತೀಚೆಗೆ ರಶ್ಮಿಕಾ ಬರ್ತ್‌ಡೇಯಂದು ದೂರದ ದೇಶಕ್ಕೆ ತೆರಳಿದ್ದರು. ಇಲ್ಲಿ ವಿಜಯ್ ಕೂಡ ಭಾಗಿಯಾಗಿದ್ದರು ಎಂಬುದಕ್ಕೆ ಪುಷ್ಠಿ ನೀಡುವಂತಹ ಫೋಟೋಗಳು ವೈರಲ್ ಆಗಿತ್ತು.

    ಅಂದಹಾಗೆ, ಗೀತಾ ಗೋವಿಂದಂ, ಡಿಯರ್ ಕಾಮ್ರೆಡ್ ಸಿನಿಮಾಗಳಲ್ಲಿ ವಿಜಯ್ ಮತ್ತು ರಶ್ಮಿಕಾ ಮಂದಣ್ಣ ಜೋಡಿಯಾಗಿ ನಟಿಸಿದ್ದರು. ಈ ಸಿನಿಮಾಗಳು ಸೂಪರ್ ಹಿಟ್ ಆಗಿತ್ತು. ಇಬ್ಬರ ಕೆಮಿಸ್ಟ್ರಿಯನ್ನು ಫ್ಯಾನ್ಸ್ ಮೆಚ್ಚಿಕೊಂಡಿದ್ದರು.

  • ದೇವರಕೊಂಡ ಸಹೋದರನ ಸಿನಿಮಾಗೆ ಕ್ಲ್ಯಾಪ್- ಶುಭ ಕೋರಿದ ರಶ್ಮಿಕಾ

    ದೇವರಕೊಂಡ ಸಹೋದರನ ಸಿನಿಮಾಗೆ ಕ್ಲ್ಯಾಪ್- ಶುಭ ಕೋರಿದ ರಶ್ಮಿಕಾ

    ನಂದ್ ದೇವರಕೊಂಡ ಮತ್ತು ವೈಷ್ಣವಿ ಚೈತನ್ಯ (Vaishnavi Chaitanya) ಮತ್ತೆ ಹೊಸ ಸಿನಿಮಾಗಾಗಿ ಒಂದಾಗಿದ್ದಾರೆ. ‘ಬೇಬಿ’ (Baby) ಜೋಡಿಯ ಹೊಸ ಚಿತ್ರಕ್ಕೆ ನಟಿ ರಶ್ಮಿಕಾ ಮಂದಣ್ಣ (Rashmika Mandanna) ಕ್ಲ್ಯಾಪ್ ಮಾಡುವ ಮೂಲಕ ತಂಡಕ್ಕೆ ಶುಭಕೋರಿದ್ದಾರೆ. ಇದನ್ನೂ ಓದಿ:ರೆಡ್ಡಿ ಮಗನ ಸಿನಿಮಾದಲ್ಲಿ ಶ್ರೀಲೀಲಾ- 3 ವರ್ಷಗಳ ಬಳಿಕ ಕನ್ನಡಕ್ಕೆ ಬಂದ ನಟಿ

    ವಿಜಯ್ ದೇವರಕೊಂಡ (Vijay Devarakonda) ಸಹೋದರ ಆನಂದ್ (Anand Devarakonda) ಸಿನಿಮಾಗೆ ರಶ್ಮಿಕಾ ಸಾಥ್ ನೀಡಿದ್ದಾರೆ. ಆನಂದ್ ಮತ್ತು ವೈಷ್ಣವಿ ನಟನೆಯ ಹೊಸ ಸಿನಿಮಾದ ಮುಹೂರ್ತ ಇಂದು (ಮೇ 15) ಹೈದರಾಬಾದ್‌ನಲ್ಲಿ ಅದ್ಧೂರಿಯಾಗಿ ನೆರವೇರಿದೆ. ಈ ಸಿನಿಮಾಗೆ ರಶ್ಮಿಕಾ ಕ್ಲ್ಯಾಪ್ ಮಾಡಿ ಟೀಮ್‌ಗೆ ವಿಶ್ ಮಾಡಿದ್ದಾರೆ.‌ ಇದನ್ನೂ ಓದಿ:ನನ್ನನ್ನು ಜಗಲಿಯಲ್ಲಿ ಬಿಟ್ಟು ಮನೆಗೆ ಬೀಗ ಹಾಕ್ಕೊಂಡು ಬಿಗ್ ಬಾಸ್‌ಗೆ ಹೋಗಿದ್ದಳು- ಚೈತ್ರಾ ಕುಂದಾಪುರ ತಂದೆ ಕಿಡಿ

    2023ರಲ್ಲಿ ತೆರೆಕಂಡ ‘ಬೇಬಿ’ ಸಿನಿಮಾ ಸೂಪರ್ ಸಕ್ಸಸ್ ಕಂಡಿತ್ತು. ಮತ್ತೆ ಅದೇ ಜೋಡಿ ಜೊತೆಯಾಗಿರೋದು ಫ್ಯಾನ್ಸ್‌ಗೆ ಖುಷಿ ಕೊಟ್ಟಿದೆ. ಈ ಸಿನಿಮಾವನ್ನು ಆದಿತ್ಯ ಹಾಸನ್ ನಿರ್ದೇಶನ ಮಾಡಿದ್ದಾರೆ. ಸಿತಾರಾ ಸಂಸ್ಥೆ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದೆ.

    ‘ಬೇಬಿ’ ಚಿತ್ರದ ಮೂಲಕ ತ್ರಿಕೋನ ಪ್ರೇಮಕಥೆ ತೋರಿಸಿದ್ದರು. ಆನಂದ್ ದೇವರಕೊಂಡ ಮತ್ತು ವೈಷ್ಣವಿ ಹೊಸ ಸಿನಿಮಾ ಯಾವ ಜಾನರ್ ಕಥೆ ಹೇಳಲು ಹೊರಟಿದ್ದಾರೆ ಎಂಬುದನ್ನು ನೋಡಲು ಫ್ಯಾನ್ಸ್ ಕ್ಯೂರಿಯಸ್ ಆಗಿದ್ದಾರೆ.

  • ಭಾರತೀಯ ಸೇನೆಗೆ ದೇಣಿಗೆ ಘೋಷಿಸಿದ ವಿಜಯ್ ದೇವರಕೊಂಡ – ಫ್ಯಾನ್ಸ್ ಮೆಚ್ಚುಗೆ

    ಭಾರತೀಯ ಸೇನೆಗೆ ದೇಣಿಗೆ ಘೋಷಿಸಿದ ವಿಜಯ್ ದೇವರಕೊಂಡ – ಫ್ಯಾನ್ಸ್ ಮೆಚ್ಚುಗೆ

    ಭಾರತ-ಪಾಕಿಸ್ತಾನ ನಡುವೆ ಕದನ ವಿರಾಮ ಘೋಷಣೆಯಾಗಿದೆ. ಈ ನಡುವೆ ಭಾರತೀಯ ಸೇನೆ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿರುವ ನಟ ವಿಜಯ್ ದೇವರಕೊಂಡ (Vijay Devarakonda) ಭಾರತೀಯ ಸೇನೆಗೆ ದೇಣಿಗೆ ನೀಡುವುದಾಗಿ ಘೋಷಿಸಿದ್ದಾರೆ. ಇದನ್ನೂ ಓದಿ:ನಮ್ಮ ದೇಶದ ತಾಕತ್ ಏನಂತ ಪ್ರಪಂಚಕ್ಕೆ ಗೊತ್ತಾಗಿದೆ: ಸಂಜಯ್ ದತ್

    ಹೌದು. ತಮ್ಮದೇ ‘ರೌಡಿ’ ಫ್ಯಾಷನ್ ಬ್ರ್ಯಾಂಡ್ ಸಿನಿಮಾದಿಂದ ಬರುವ ಲಾಭದಲ್ಲಿ ಒಂದು ಭಾಗವನ್ನ ಭಾರತೀಯ ಸೇನೆಗೆ ದೇಣಿಗೆ ಕೊಡುವುದಾಗಿ ಘೋಷಿಸಿದ್ದಾರೆ. ಇದನ್ನೂ ಓದಿ:ಆರ್ಮಿಗೆ ಸಂಬಂಧಿಸಿದ ವಿಡಿಯೋಗಳನ್ನು ಶೇರ್ ಮಾಡಬೇಡಿ: ರಾಜಮೌಳಿ ಮನವಿ

    ವಿಜಯ್ ನೇತೃತ್ವದ ‘ರೌಡಿ’ (Rowdy Brand) ಫ್ಯಾಷನ್ ಬ್ರ್ಯಾಂಡ್‌ಗೆ ಭರ್ಜರಿ ರೆಸ್ಪಾನ್ಸ್ ಬರ್ತಿದ್ದು, ಕಲೆಕ್ಷನ್ ಸಹ ಮಾಡುತ್ತಿದೆ. ಈ ಬ್ರ್ಯಾಂಡ್‌ಗೆ ಒಂದೊಳ್ಳೆಯ ರೆಸ್ಪಾನ್ಸ್ ಇದೆ. ಹೀಗಾಗಿ ಇದರ ಲಾಭದಲ್ಲಿ ಒಂದು ಭಾಗವನ್ನ ಭಾರತೀಯ ಯೋಧರ ನಿಧಿಗೆ ಅರ್ಪಿಸಲು ನಟ ನಿರ್ಧರಿಸಿದ್ದಾರೆ. ನಟನ ನಡೆಗೆ ಫ್ಯಾನ್ಸ್ ಮೆಚ್ಚುಗೆ ಸೂಚಿಸಿದ್ದಾರೆ.

    ಅಂದಹಾಗೆ, ವಿಜಯ್ ನಟನೆಯ ‘ಕಿಂಗ್‌ಡಮ್’ (Kingdom) ಸಿನಿಮಾ ಬಹುಭಾಷೆಗಳಲ್ಲಿ ರಿಲೀಸ್‌ಗೆ ಸಜ್ಜಾಗಿದೆ. ಮೇ 30ರಂದು ತೆರೆಗೆ ಬರಲಿದೆ. ನಟಿ ಭಾಗ್ಯಶ್ರೀ ಜೊತೆ ವಿಜಯ್ ರೊಮ್ಯಾನ್ಸ್ ಮಾಡಿದ್ದಾರೆ. ಮತ್ತೆ ಅದೇ ಅರ್ಜುನ್ ರೆಡ್ಡಿ ಗೆಟಪ್‌ನಲ್ಲಿ ಅವರು ಮಿಂಚಿದ್ದಾರೆ. ಸಿನಿಮಾ ರಿಲೀಸ್ ಬಳಿಕ ಪ್ರೇಕ್ಷಕರ ಕುತೂಹಲಕ್ಕೆ ಉತ್ತರ ಸಿಗಲಿದೆ.

  • ಮತ್ತೆ ವಿಜಯ್ ದೇವರಕೊಂಡಗೆ ರಶ್ಮಿಕಾ ಮಂದಣ್ಣ ಜೋಡಿ?

    ಮತ್ತೆ ವಿಜಯ್ ದೇವರಕೊಂಡಗೆ ರಶ್ಮಿಕಾ ಮಂದಣ್ಣ ಜೋಡಿ?

    ತೆಲುಗು ಸಿನಿಮಾಗಳ ಮೂಲಕ ಸಕ್ಸಸ್‌ಫುಲ್ ಜೋಡಿ ಎನಿಸಿಕೊಂಡಿರುವ ವಿಜಯ್ ದೇವರಕೊಂಡ (Vijay Devarakonda) ಮತ್ತು ರಶ್ಮಿಕಾ ಬಗ್ಗೆ ಬಿಗ್ ನ್ಯೂಸ್‌ವೊಂದು ಸಿಕ್ಕಿದೆ. ವಿಜಯ್ ಹೊಸ ಸಿನಿಮಾಗೆ ರಶ್ಮಿಕಾ ನಾಯಕಿಯಾಗಲಿದ್ದಾರೆ ಎನ್ನಲಾದ ಸುದ್ದಿಯೊಂದು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

    ಮೈತ್ರಿ ಮೂವಿ ಮೇಕರ್ಸ್ ಸಂಸ್ಥೆಯು ‘ಶ್ಯಾಮ್ ಸಿಂಗ್ ರಾಯ್’ ನಿರ್ದೇಶಕ ರಾಹುಲ್ ಜೊತೆ ಸಿನಿಮಾ ಮಾಡಲು ಮುಂದಾಗಿದ್ದಾರೆ. ಅವರ ನಿರ್ದೇಶನದಲ್ಲಿ ಅರ್ಜುನ್‌ ರೆಡ್ಡಿ ಖ್ಯಾತಿಯ ವಿಜಯ್‌ ನಟಿಸಲಿದ್ದಾರೆ ಎನ್ನಲಾಗಿದೆ. ಹೀಗಾಗಿ ಈ ಸಿನಿಮಾಗೆ ರಶ್ಮಿಕಾ ನಾಯಕಿ ಎಂಬ ಸುದ್ದಿ ಹರಿದಾಡುತ್ತಿದೆ. ಅದಕ್ಕೆ ಪೂರಕವೆಂಬಂತೆ ನಿರ್ಮಾಣ ಸಂಸ್ಥೆ ಜೊತೆಗಿನ ರಶ್ಮಿಕಾ ಪೋಸ್ಟ್ ಸದ್ದು ಮಾಡ್ತಿದೆ.

    ‘ಪುಷ್ಪ 2’ ಸಿನಿಮಾ ಮಾಡಿ ಗೆದ್ದಿರುವ ನಿರ್ಮಾಣ ಸಂಸ್ಥೆ ಮೈತ್ರಿ ಮೂವಿ ಮೇಕರ್ಸ್ ಮತ್ತೊಮ್ಮೆ ರಶ್ಮಿಕಾ ಮಂದಣ್ಣ (Rashmika Mandanna) ಜೊತೆ ಸಿನಿಮಾ ಮಾಡುವ ಬಗ್ಗೆ ಪರೋಕ್ಷವಾಗಿ ಸುಳಿವು ನೀಡಿದೆ. ಹೌದು ನೋಡೋಣ (#Hmmletssee) ಎಂದು ಬರೆದುಕೊಂಡು ರಶ್ಮಿಕಾಗೆ ನಿರ್ಮಾಣ ಸಂಸ್ಥೆ ಟ್ಯಾಗ್ ಮಾಡಿದೆ. ಅದಕ್ಕೆ ನಟಿ, ಹೌದು ಎಂಬಂತೆ (#Hmmletsseeguys) ಎಂದು ರಿಯಾಕ್ಟ್ ಮಾಡಿದ್ದಾರೆ. ಈ ಸಂಭಾಷಣೆ ಫ್ಯಾನ್ಸ್‌ ತಲೆಗೆ ಹುಳ ಬಿಟ್ಟಂತಾಗಿದೆ. ವಿಜಯ್ ಜೊತೆಗಿನ ನಟಿಯ ಸಿನಿಮಾ ಸುದ್ದಿಗೆ ಪುಷ್ಠಿ ನೀಡಿದಂತಿದೆ. ಎಲ್ಲದ್ದಕ್ಕೂ ಚಿತ್ರತಂಡದ ಕಡೆಯಿಂದ ಅಫಿಷಿಯಲ್ ಅಪ್‌ಡೇಟ್ ಹೊರಬೀಳುವವರೆಗೂ ಕಾದುನೋಡಬೇಕಿದೆ.

    ಅಂದಹಾಗೆ, ಗೀತಾ ಗೋವಿಂದಂ, ಡಿಯರ್ ಕಾಮ್ರೆಡ್ ಸಿನಿಮಾಗಳಲ್ಲಿ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಜೋಡಿಯಾಗಿ ನಟಿಸಿ ಸಕ್ಸಸ್ ಕಂಡಿದ್ದಾರೆ.

  • ಭಾಗ್ಯಶ್ರೀ ಜೊತೆ ವಿಜಯ್ ದೇವರಕೊಂಡ ಲಿಪ್‌ಲಾಕ್- ‘ಕಿಂಗ್‌ಡಮ್’ ಸಾಂಗ್ ಔಟ್

    ಭಾಗ್ಯಶ್ರೀ ಜೊತೆ ವಿಜಯ್ ದೇವರಕೊಂಡ ಲಿಪ್‌ಲಾಕ್- ‘ಕಿಂಗ್‌ಡಮ್’ ಸಾಂಗ್ ಔಟ್

    ‘ಅರ್ಜುನ್ ರೆಡ್ಡಿ’ ಖ್ಯಾತಿಯ ವಿಜಯ ದೇವರಕೊಂಡ (Vijay Devarakonda) ನಟನೆಯ ‘ಕಿಂಗ್‌ಡಮ್’ (Kingdom) ಚಿತ್ರದ ರೊಮ್ಯಾಂಟಿಕ್ ಸಾಂಗ್‌ವೊಂದು ರಿಲೀಸ್ ಆಗಿದೆ. ನಾಯಕಿ ಭಾಗ್ಯಶ್ರೀಗೆ ವಿಜಯ್ ಲಿಪ್‌ಲಾಕ್ ಮಾಡಿದ್ದಾರೆ. ರಗಡ್‌ ಗೆಟಪ್‌ನಲ್ಲಿ ವಿಜಯ್‌ ಅಬ್ಬರಿಸಿದ್ದಾರೆ. ಇದನ್ನೂ ಓದಿ:‘ಕಾಲನಾಗಿಣಿ’ ಚಿತ್ರದ ಪೋಸ್ಟರ್ ರಿಲೀಸ್ ಮಾಡಿದ ಅಶ್ವಿನಿ ಪುನೀತ್ ರಾಜ್‌ಕುಮಾರ್

     

    View this post on Instagram

     

    A post shared by Vijay Deverakonda (@thedeverakonda)

    ವಿಜಯ್ ದೇವರಕೊಂಡ ಮತ್ತೆ ಮಾಸ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ನಟನ ರಗಡ್ ಲುಕ್ ಮತ್ತು ನಾಯಕಿ ಜೊತೆಗಿನ ಮುದ್ದಾಟ ‘ಅರ್ಜುನ್ ರೆಡ್ಡಿ’ ಸಿನಿಮಾ ನೆನಪಿಸುವಂತಿದೆ. ನಾಯಕಿ ಭಾಗ್ಯಶ್ರೀಗೆ ಕಿಸ್ ವಿಜಯ್ ಮಾಡಿ ಅದೇ ಹಳೆಯ ರೌಡಿ ಅವತಾರ ನೆನಪಿಸಿದ್ದಾರೆ. ಸದ್ಯ ರಿಲೀಸ್ ಆಗಿರೋ ‘ಕಿಂಗ್‌ಡಮ್’ ಚಿತ್ರದ ‘ಹೃದಯಂ ಲೋಪಲ’ ಸಾಂಗ್ ಸಂಗೀತ ಪ್ರಿಯರು ಗುನುಗುವಂತೆ ಮಾಡಿದೆ. ಇದನ್ನೂ ಓದಿ:ಮತ್ತೆ ಚರ್ಚೆಗೆ ಗ್ರಾಸವಾಯ್ತು ಕಾರ್ತಿಕ್‌ ಆರ್ಯನ್‌, ಶ್ರೀಲೀಲಾ ಡೇಟಿಂಗ್ ವಿಚಾರ- ವಿಡಿಯೋ ವೈರಲ್

     

    View this post on Instagram

     

    A post shared by Vijay Deverakonda (@thedeverakonda)

    ಮೊದಲ ಬಾರಿಗೆ ವಿಜಯ್ ನಾಯಕಿಯಾಗಿ ಭಾಗ್ಯಶ್ರೀ ಬೋರ್ಸೆ (Bhagyashree Borse) ಸಾಥ್ ನೀಡಿದ್ದಾರೆ. ಇದೇ ಮೇ.30ರಂದು ಚಿತ್ರ ರಿಲೀಸ್ ಆಗುತ್ತಿದೆ. ಈ ಚಿತ್ರಕ್ಕೆ ಗೌತಮ್ ತಿನ್ನನುರಿ ಆ್ಯಕ್ಷನ್ ಕಟ್ ಹೇಳಿದ್ದಾರೆ.

     

    View this post on Instagram

     

    A post shared by Bhagyashri Borse (@bhagyashriiborse)

    ಲೈಗರ್, ಖುಷಿ ಸಿನಿಮಾಗಳಿಂದ ಸಕ್ಸಸ್ ಕಾಣದೇ ಸೋಲಿನ ಸುಳಿಯಲ್ಲಿರುವ ವಿಜಯ್‌ಗೆ ‘ಕಿಂಗ್‌ಡಮ್’ ಚಿತ್ರದ ಮೂಲಕ ಗೆಲುವು ಸಿಗುತ್ತಾ? ಎಂದು ಕಾದುನೋಡಬೇಕಿದೆ.

  • ಕಾಶ್ಮೀರ ಎಂದಿಗೂ ಭಾರತಕ್ಕೆ ಸೇರಿದ್ದು: ವಿಜಯ್ ದೇವರಕೊಂಡ

    ಕಾಶ್ಮೀರ ಎಂದಿಗೂ ಭಾರತಕ್ಕೆ ಸೇರಿದ್ದು: ವಿಜಯ್ ದೇವರಕೊಂಡ

    ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕರ (Pahalgam Terrorist Attack) ದಾಳಿಗೆ 26 ಮಂದಿ ಅಮಾಯಕರು ಬಲಿಯಾಗಿದ್ದಾರೆ. ಈ ಕುರಿತು ಹಲವು ನಟ, ನಟಿಯರು ಖಂಡಿಸಿದ್ದಾರೆ. ಇದೀಗ ಕಾರ್ಯಕ್ರಮವೊಂದರಲ್ಲಿ ವಿಜಯ್ ದೇವರಕೊಂಡ (Vijay Devarakonda) ಮಾತನಾಡಿ, ಕಾಶ್ಮೀರ ಎಂದಿಗೂ ಭಾರತಕ್ಕೆ ಸೇರಿದ್ದು, ಪಾಕ್ ಮೇಲೆ ದಾಳಿ ಮಾಡುವ ಅವಶ್ಯಕತೆಯಿಲ್ಲ ಎಂದಿದ್ದಾರೆ. ಇದನ್ನೂ ಓದಿ:ಭಾರತ ಹಿಂದೂಗಳಂತೆ ಮುಸ್ಲಿಮರಿಗೂ ಸೇರಿದೆ – ಪಹಲ್ಗಾಮ್ ದಾಳಿ ಬಗ್ಗೆ ರಾಖಿ ಸಾವಂತ್ ಮಾತು

    ಸೂರ್ಯ ನಟನೆಯ ‘ರೆಟ್ರೋ’ ಸಿನಿಮಾ (Retro Film) ಪ್ರೀ- ರಿಲೀಸ್ ಕಾರ್ಯಕ್ರಮಕ್ಕೆ ವಿಜಯ್ ಅತಿಥಿಯಾಗಿ ಭಾಗಿಯಾಗಿದ್ರು. ಈ ವೇಳೆ ಮಾತನಾಡಿದ ವಿಜಯ್ ದೇವರಕೊಂಡ, ಉಗ್ರರ ದಾಳಿಗೆ ಅಮಾಯಕರ ಪ್ರಾಣಪಕ್ಷಿ ಹಾರಿ ಹೋಗಿದೆ. ಮತ್ತೆ ಇಂಥಹ ಕೃತ್ಯ ಮರುಕಳಿಸಬಾರದು ಅಂದರೆ ಶತ್ರುಗಳ ಬಾಲ ಕಟ್ ಮಾಡಲೇಬೇಕು. ಅದಕ್ಕಾಗಿ ಭಾರತೀಯ ಸೈನ್ಯ ಉಗ್ರರನ್ನು ಪತ್ತೆ ಮಾಡುತ್ತಿದ್ದಾರೆ. ಕಾಶ್ಮೀರ ಎಂದೆಂದಿಗೂ ಭಾರತಕ್ಕೆ ಸೇರಿದ್ದು, ಭಾರತೀಯರಿಗೆ ಮಾತ್ರವೇ ಸೇರಿದ್ದು ಅನ್ನೋದು ಸತ್ಯ ಎಂದಿದ್ದಾರೆ. ಇದನ್ನೂ ಓದಿ:ಭಾರತ ಹಿಂದೂಗಳಂತೆ ಮುಸ್ಲಿಮರಿಗೂ ಸೇರಿದೆ – ಪಹಲ್ಗಾಮ್ ದಾಳಿ ಬಗ್ಗೆ ರಾಖಿ ಸಾವಂತ್ ಮಾತು

    ಭಯೋತ್ಪಾದಕರಿಗೆ ಶಿಕ್ಷಣವಿಲ್ಲ. ಅವರಿಗೆ ಯಾವುದೇ ಮೂಲಭೂತ ಸೌಕರ್ಯಗಳು ಸರಿಯಾಗಿಲ್ಲದ ಕಾರಣ ಅವರ ಸಮಸ್ಯೆಗಳನ್ನು ಅವರಿಗೆ ಪರಿಹರಿಸಿಕೊಳ್ಳಲು ಸಾಧ್ಯವಿಲ್ಲ. ಹೀಗಿದ್ದರೂ ಕಾಶ್ಮೀರದ ಮೇಲೆ ಉದ್ಧಟತನ ಮಾಡ್ತಿದ್ದಾರೆ. ಪಾಕಿಸ್ತಾನದ ಮೇಲೆ ಭಾರತ ದಾಳಿ ಮಾಡುವ ಅವಶ್ಯಕತೆ ಇಲ್ಲ. ಪರಿಸ್ಥಿತಿ ಹೀಗೆ ಮುಂದುವರೆದರೆ ಅಲ್ಲಿನ ಜನರೇ ಅಲ್ಲಿನ ಸರ್ಕಾರದ ವಿರುದ್ಧ ತಿರುಗಿ ಬೀಳ್ತಾರೆ ಎಂದಿದ್ದಾರೆ. ನಾನು 2 ವರ್ಷಗಳ ಹಿಂದೆ ಕಾಶ್ಮೀರಕ್ಕೆ ‘ಖುಷಿ’ ಸಿನಿಮಾ ಚಿತ್ರೀಕರಣಕ್ಕಾಗಿ ಹೋಗಿದ್ದೆ, ತುಂಬಾ ಒಳ್ಳೆಯ ಸಮಯವನ್ನು ನಾನಲ್ಲಿ ಕಳೆದಿದ್ದೇನೆ ಎಂದು ಸ್ಮರಿಸಿದ್ದಾರೆ ವಿಜಯ್‌ ದೇವರಕೊಂಡ.

     

    View this post on Instagram

     

    A post shared by LokeshFilmFeed (@chandragiribylokesh)

    ಅಂದಹಾಗೆ, ಸೂರ್ಯ ಮತ್ತು ಪೂಜಾ ಹೆಗ್ಡೆ ನಟನೆಯ ‘ರೆಟ್ರೋ’ ತಮಿಳು ಚಿತ್ರ ಇದೇ ಮೇ 1ರಂದು ರಿಲೀಸ್‌ಗೆ ಸಿದ್ಧವಾಗಿದೆ.

  • ಒಮನ್‌ನಲ್ಲಿ ವಿಜಯ್, ರಶ್ಮಿಕಾ ಸುತ್ತಾಟ- ಬೀಚ್‌ ಫೋಟೋದಿಂದ ಸಿಕ್ಕಿಬಿದ್ದ ಜೋಡಿ

    ಒಮನ್‌ನಲ್ಲಿ ವಿಜಯ್, ರಶ್ಮಿಕಾ ಸುತ್ತಾಟ- ಬೀಚ್‌ ಫೋಟೋದಿಂದ ಸಿಕ್ಕಿಬಿದ್ದ ಜೋಡಿ

    ಟಿ ರಶ್ಮಿಕಾ ಮಂದಣ್ಣ (Rashmika Mandanna) 29ನೇ ವರ್ಷದ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸಿದ್ದಾರೆ. ಕಡಲ ತೀರದಲ್ಲಿ ಬರ್ತಡೇ ಆಚರಿಸಿಕೊಂಡಿರೋ ರಶ್ಮಿಕಾ ಜೊತೆ ವಿಜಯ್ ಕೂಡ ಇದ್ದಾರೆ. ಇಬ್ಬರು ಪ್ರೀತಿಯಲ್ಲಿದ್ದಾರೆ ಎಂಬುದಕ್ಕೆ ನೆಟ್ಟಿಗರು ಸಾಕ್ಷಿ ತೋರಿಸಿದ್ದಾರೆ. ಸದ್ಯ ಇಬ್ಬರ ಬೀಚ್ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿದೆ. ಇದನ್ನೂ ಓದಿ:ಬ್ಯಾಕ್‌ ಟು ಬ್ಯಾಕ್‌ ಹಿಟ್‌ ಸಿನಿಮಾ ಕೊಟ್ಟಿದ್ದ ರಶ್ಮಿಕಾಗೆ ಶುರುವಾಯ್ತಾ ಬ್ಯಾಡ್ ಟೈಮ್?

    ಏ.5ರಂದು ಬರ್ತ್‌ಡೇ ಇದ್ದ ಹಿನ್ನೆಲೆ ಅವರು ‘ಪುಷ್ಪ 2’ ನಟಿ ರಶ್ಮಿಕಾ ಒಮನ್‌ಗೆ ತೆರಳಿದ್ದರು. ಆದರೆ ಯಾರೊಂದಿಗೆ ಹೋಗಿದ್ದಾರೆ ಎಂಬುದು ತಿಳಿದಿರಲಿಲ್ಲ. ಅದಕ್ಕೀಗ ಉತ್ತರ ಸಿಕ್ಕಿದೆ. ರಶ್ಮಿಕಾ ಹಾಗೂ ವಿಜಯ್ (Vijay Devarakonda) ತಮ್ಮ ಖಾಸಗಿ ಇನ್ಸ್ಟಾಗ್ರಾಂ ಖಾತೆಯಲ್ಲಿ ಮಾಡಿದ ಪೋಸ್ಟ್‌ನಿಂದ ಇಬ್ಬರ ಗುಟ್ಟು ರಟ್ಟಾಗಿದೆ. ಇದನ್ನೂ ಓದಿ:ಹುಟ್ಟುಹಬ್ಬ ಆಚರಿಸಿಕೊಳ್ಳಲು ವಿದೇಶಕ್ಕೆ ಹಾರಿದ ನ್ಯಾಷನಲ್‌ ಕ್ರಶ್‌ – ಈ ನಟನೊಂದಿಗೆ ರಶ್ಮಿಕಾ ಸೆಲೆಬ್ರೇಷನ್‌!

     

    View this post on Instagram

     

    A post shared by Vijay Deverakonda (@thedeverakonda)

    ಸೋಶಿಯಲ್‌ ಮೀಡಿಯಾದಲ್ಲಿ ರಶ್ಮಿಕಾ ಮಂದಣ್ಣ ಬೀಚ್ ಬಳಿ ಕುಳಿತಿರುವ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಬ್ಯಾಕ್‌ಗ್ರೌಂಡ್‌ನಲ್ಲಿ ರೆಡ್ ಕಲರ್ ಬಾವುಟವಿದೆ. ಅದರಂತೆ ವಿಜಯ್ ಶೇರ್ ಮಾಡಿರೋ ಪೋಸ್ಟ್‌ನಲ್ಲಿ ಇದೇ ರೀತಿಯ ಬಾವುಟ ಕಾಣಿಸಿದೆ. ಇದರಿಂದ ಇಬ್ಬರೂ ಜೊತೆಯಾಗಿ ಒಮನ್‌ನಲ್ಲಿ ಕಾಲ ಕಳೆಯುತ್ತಿದ್ದಾರೆ ಎನ್ನುವ ವಿಚಾರ ಖಚಿತವಾಗಿದೆ. ಇಬ್ಬರ ಪೋಸ್ಟ್‌ನಿಂದ ಅಭಿಮಾನಿಗಳ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಈ ಜೋಡಿ ಅದ್ಯಾವಾಗ ಅಧಿಕೃತವಾಗಿ ಗುಡ್‌ ನ್ಯೂಸ್‌ ನೀಡ್ತಾರೆ ಎಂದು ಫ್ಯಾನ್ಸ್‌ ಎದುರು ನೋಡ್ತಿದ್ದಾರೆ.

    ಅಂದಹಾಗೆ, ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಗೀತ ಗೋವಿಂದಂ, ಡಿಯರ್ ಕಾಮ್ರೆಡ್ ಚಿತ್ರದಲ್ಲಿ ಜೊತೆಯಾಗಿ ನಟಿಸಿದ್ದಾರೆ.

  • ಹುಟ್ಟುಹಬ್ಬ ಆಚರಿಸಿಕೊಳ್ಳಲು ವಿದೇಶಕ್ಕೆ ಹಾರಿದ ನ್ಯಾಷನಲ್‌ ಕ್ರಶ್‌ – ಈ ನಟನೊಂದಿಗೆ ರಶ್ಮಿಕಾ ಸೆಲೆಬ್ರೇಷನ್‌!

    ಹುಟ್ಟುಹಬ್ಬ ಆಚರಿಸಿಕೊಳ್ಳಲು ವಿದೇಶಕ್ಕೆ ಹಾರಿದ ನ್ಯಾಷನಲ್‌ ಕ್ರಶ್‌ – ಈ ನಟನೊಂದಿಗೆ ರಶ್ಮಿಕಾ ಸೆಲೆಬ್ರೇಷನ್‌!

    ಸದಾ ಬ್ಯಾಕ್‌ ಟು ಬ್ಯಾಕ್‌ ಸಿನಿಮಾಗಳಲ್ಲಿ ಬ್ಯುಸಿಯಾಗಿರುತ್ತಿದ್ದ ನ್ಯಾಷನಲ್‌ ಕ್ರಶ್‌ ರಶ್ಮಿಕಾ ಮಂದಣ್ಣ (Rashmika Mandanna) ಇದೀಗ ತಮ್ಮ ಹುಟ್ಟುಹಬ್ಬ ಆಚರಣೆಗೆ ಕೊಂಚ ರಿಲೀಫ್‌ ಮಾಡಿಕೊಂಡಿದ್ದಾರೆ. 29ನೇ ವರ್ಷದ ಹುಟ್ಟುಹಬ್ಬವನ್ನು (Rashmika Mandannaʼs Birthday) ಇನ್ನಷ್ಟು ಸ್ಪೆಷಲ್‌ ಆಗಿ ಸೆಲೆಬ್ರೇಟ್‌ ಮಾಡೋಕೆ ನಟಿ ವಿದೇಶಕ್ಕೆ ಹಾರಿದ್ದಾರೆ.

    ಹೌದು. ತಮ್ಮ ಹುಟ್ಟುಹಬ್ಬ ಆಚರಣೆಗಾಗಿ ಗಲ್ಫ್‌ ರಾಷ್ಟ್ರವಾದ ಒಮನ್‌ಗೆ (Oman) ಹಾರಿದ್ದಾರೆ. ರಶ್ಮಿಕಾ ಒಬ್ಬರೇ ಹೋಗಿಲ್ಲ, ಬದಲಾಗಿ ಗೆಳೆಯ ವಿಜಯ್ ದೇವರಕೊಂಡ ಸಹ ಒಮನ್‌ಗೆ ಹಾರಿದ್ದಾರೆ ಎಂದು ಮೂಲಗಳು ಹೇಳಿವೆ. ಇದನ್ನೂ ಓದಿ: ಸಂಜನಾ ಗಲ್ರಾನಿ ಮತ್ತೆ ಗರ್ಭಿಣಿ – 2ನೇ ಮಗುವಿನ ನಿರೀಕ್ಷೆಯಲ್ಲಿ ನಟಿ

    ಜೊತೆಗೆ ರಶ್ಮಿಕಾ ಹಾಗೂ ವಿಜಯ್ ದೇವರಕೊಂಡ ಅವ್ರ ಕಾಮನ್ ಫ್ರೆಂಡ್ಸ್ ಕೂಡ ಬರ್ತ್‌ಡೇ ಪಾರ್ಟಿಯಲ್ಲಿ ಭಾಗಿಯಾಗಲಿದ್ದಾರಂತೆ. ಈ ಹಿಂದೆಯೂ ರಶ್ಮಿಕಾ ಹಾಗೂ ವಿಜಯ್ ದೇವರಕೊಂಡ ವಿದೇಶದಲ್ಲಿ ಒಟ್ಟಾಗಿ, ಗುಟ್ಟಾಗಿ ಪಾರ್ಟಿ ಮಾಡಿದ್ದರು. ಇದೀಗ ರಶ್ಮಿಕಾ ಹುಟ್ಟುಹಬ್ಬವನ್ನ ಗ್ರ್ಯಾಂಡ್‌ ಆಗಿ ಸೆಲೆಬ್ರೇಟ್‌ ಮಾಡೋದಕ್ಕೆ ದೇವರಕೊಂಡ ಸಹ ವಿದೇಶಕ್ಕೆ ಪ್ರಯಾಣ ಬೆಳೆಸಲಿದ್ದಾರೆ ಎಂದು ತಿಳಿದುಬಂದಿದೆ.

    ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಸುದ್ದಿಗಳು ಆಗಾಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಹೈಪ್‌ ಕ್ರಿಯೇಟ್‌ ಮಾಡುತ್ತಲೇ ಇರುತ್ತದೆ. ಈ ಹಿಂದೆಯೂ ಇಬ್ಬರು ಪ್ರೀತಿಯಲ್ಲಿದ್ದು ಶೀಘ್ರವೇ ವಿವಾಹವಾಗಲಿದ್ದಾರೆ ಎಂಬ ವದಂತಿಗಳೂ ಹರಿದಾಡಿದ್ದವು. ಈ ಬಗ್ಗೆ ಪ್ರಶ್ನೆ ರಶ್ಮಿಕಾರನ್ನ ಪ್ರಶ್ನೆ ಮಾಡಿದಾಗ ʻನಿಮಗೆ ಗೊತ್ತಿಲ್ಲದೇ ಇರುವುದು ಏನಿದೆ?ʼ ಎಂದು ಹೇಳಿದ್ದರು. ಇದನ್ನೂ ಓದಿ: ರಾಜಸ್ಥಾನದಲ್ಲಿ `ಡೆವಿಲ್’ ಶೂಟಿಂಗ್ ಮುಗಿಸಿ ಪತ್ನಿ, ಪುತ್ರನೊಂದಿಗೆ ದರ್ಶನ್ ವಾಪಸ್

    ರಶ್ಮಿಕಾ ಮಂದಣ್ಣ ನಟನೆಯ ಸಿಖಂದರ್‌ ಸಿನಿಮಾ ಇತ್ತೀಚೆಗಷ್ಟೇ ರಿಲೀಸ್‌ ಆಗಿದೆ. ಅಲ್ಲದೇ ತೆಲುಗಿನಲ್ಲಿ ಗರ್ಲ್‌ಫ್ರೆಂಡ್‌ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಪುಷ್ಪಾ-2 ಬಳಿಕ ಬ್ಯಾಕ್‌ ಟು ಬ್ಯಾಕ್‌ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದ ನಟಿ ಇದೀಗ ತಮ್ಮ ಹುಟ್ಟುಹಬ್ಬ ಆಚರಿಸಿಕೊಳ್ಳಲು ವಿದೇಶಕ್ಕೆ ಹಾರಿದ್ದಾರೆ. ಇದನ್ನೂ ಓದಿ: EXCLUSIVE: ಆಶ್ರಯ ಇಲ್ಲದೆ ವೃದ್ಧಾಶ್ರಮ ಸೇರಿದ ಹಿರಿಯ ನಟಿ ಶೈಲಶ್ರೀ – ನಟಿಗೆ ಧನ ಸಹಾಯ ಮಾಡಿದ ದರ್ಶನ್

  • ವಿಜಯ್ ದೇವರಕೊಂಡ ಜೊತೆ ರಶ್ಮಿಕಾ ಲಂಚ್ ಡೇಟ್- ಮತ್ತೆ ಡೇಟಿಂಗ್‌ ಬಗ್ಗೆ ಶುರುವಾಯ್ತು ಚರ್ಚೆ

    ವಿಜಯ್ ದೇವರಕೊಂಡ ಜೊತೆ ರಶ್ಮಿಕಾ ಲಂಚ್ ಡೇಟ್- ಮತ್ತೆ ಡೇಟಿಂಗ್‌ ಬಗ್ಗೆ ಶುರುವಾಯ್ತು ಚರ್ಚೆ

    ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ವಿಜಯ್ ದೇವರಕೊಂಡ (Vijay Devarakonda) ಜೊತೆ ಲಂಚ್ ಡೇಟ್‌ಗೆ ತೆರಳಿದ್ದಾರೆ. ಮುಂಬೈನ ರೆಸ್ಟೋರೆಂಟ್ ಮುಂದೆ ಮಾಸ್ಕ್ ಧರಿಸಿ ಬಂದಿರುವ ಇಬ್ಬರ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿದೆ. ಈ ಜೋಡಿಯ ಡೇಟಿಂಗ್‌ ಬಗ್ಗೆ ಮತ್ತೆ ಚರ್ಚೆ ಶುರುವಾಗಿದೆ. ಇದನ್ನೂ ಓದಿ:ಬೆಡ್‌ರೂಮ್ ಫೋಟೋ ಹಂಚಿಕೊಂಡ ‘ಗಿಲ್ಲಿ’ ನಟಿ ರಕುಲ್

    ಟಾಲಿವುಡ್ ನಟ ವಿಜಯ್ ದೇವರಕೊಂಡ ಜೊತೆಗಿನ ರಶ್ಮಿಕಾ ಡೇಟಿಂಗ್ ಬಗ್ಗೆ ಆಗಾಗ ಚರ್ಚೆಗೆ ಗ್ರಾಸವಾಗುತ್ತಲೇ ಇರುತ್ತದೆ. ಆದರೆ ಇದುವರೆಗೂ ಈ ವಿಚಾರ ನಿಜನಾ ಎಂಬುದರ ಬಗ್ಗೆ ಈ ಜೋಡಿ ಸ್ಪಷ್ಟನೆ ನೀಡಿಲ್ಲ. ಇಬ್ಬರೂ ಲಂಚ್ ಡೇಟ್ ಮಾಡುವ ಮೂಲಕ ಇದೀಗ ಡೇಟಿಂಗ್ ಸುದ್ದಿಗೆ ಪುಷ್ಠಿ ಸಿಕ್ಕಂತಾಗಿದೆ. ಇದನ್ನೂ ಓದಿ:ಯುಗಾದಿ ಹಬ್ಬದ ಹಿನ್ನೆಲೆ ಪತ್ನಿ ಜೊತೆ ಡಾಲಿ ಟೆಂಪಲ್ ರನ್

     

    View this post on Instagram

     

    A post shared by Manav Manglani (@manav.manglani)

    ಮುಂಬೈನ ರೆಸ್ಟೋರೆಂಟ್‌ಗೆ ರಶ್ಮಿಕಾ ಕ್ಯಾಪ್ ಮತ್ತು ಮಾಸ್ಕ್ ಧರಿಸಿ ಆಗಮಿಸಿದ್ದಾರೆ. ಬಳಿಕ ಪಾಪರಾಜಿಗಳ ಕ್ಯಾಮೆರಾಗೆ ಪೋಸ್ ಕೊಟ್ಟು ತೆರಳಿದ್ದಾರೆ. ಆ ನಂತರ ವಿಜಯ್ ಕೂಡ ಅದೇ ರೆಸ್ಟೋರೆಂಟ್ ಮಾಸ್ಕ್ ಧರಿಸಿ ಒಳಗೆ ಹೋಗಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ. ಇಬ್ಬರ ಲವ್ವಿ ಡವ್ವಿ ಈಗ ಹಾಟ್ ಟಾಪಿಕ್ ಆಗಿದೆ.

    ಗೀತ ಗೋವಿಂದಂ, ಡಿಯರ್ ಕಾಮ್ರೆಡ್ ಸಿನಿಮಾಗಳಲ್ಲಿ ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಪ್ರಮುಖ ಪಾತ್ರದಲ್ಲಿ ನಟಿಸಿದ್ದರು. ಈ ಸಿನಿಮಾ ಸೂಪರ್‌ ಹಿಟ್‌ ಅಗಿತ್ತು.