Tag: ವಿಜಯ್ ಪ್ರಸಾದ್

  • ‘ಸಿದ್ಲಿಂಗು 2’ ಸಿನಿಮಾದಲ್ಲಿ ರಮ್ಯಾ ಅತಿಥಿ ಪಾತ್ರ

    ‘ಸಿದ್ಲಿಂಗು 2’ ಸಿನಿಮಾದಲ್ಲಿ ರಮ್ಯಾ ಅತಿಥಿ ಪಾತ್ರ

    ಯುಗಾದಿ ದಿನದಂದು ನಿರ್ದೇಶಕ ವಿಜಯ್ ‍ಪ್ರಸಾದ್ ಅವರು ಹಂಚಿಕೊಂಡ ಪೋಸ್ಟರ್ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಕಾರಣ ಅವರು ಪೋಸ್ಟರ್ ನಲ್ಲಿ ಕೊಟ್ಟಿರುವ ಮಾಹಿತಿ. ಬೇವು ಬೆಲ್ಲದೊಂದಿಗೆ ಅತಿಥಿಯಾಗಿ ಬಂದರೂ ಬರಬಹುದು. ಅವರ ಹೆಸರಿನ ಮೊದಲ ಅಕ್ಷರ ‘ರ’…! ಎಂದು ಬರೆದುಕೊಂಡಿದ್ದಾರೆ  ‘ರ’ ಅಕ್ಷರವನ್ನು ಅವರು ಊಹೆಗೆ ಬಿಟ್ಟಿರೋದ್ರಿಂದ ರಮ್ಯಾ (Ramya) ಅತಿಥಿ ಪಾತ್ರ ಮಾಡುತ್ತಾರಾ ಎನ್ನುವ ಅನುಮಾನ ಮೂಡಿದೆ.

    ಲೂಸ್ ಮಾದ ಖ್ಯಾತಿಯ ಯೋಗಿ  ಮತ್ತೊಂದು ಬಾರಿ ಸಿಂದ್ಲಿಂಗು ಜೊತೆ ಅಭಿಮಾನಿಗಳ ಎದುರು ನಿಂತಿದ್ದಾರೆ. ಬರೋಬ್ಬರಿ ಹನ್ನೆರಡು ವರ್ಷಗಳ ಹಿಂದೆ ಸಿಂದ್ಲಿಂಗು ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದ ಯೋಗಿ, ಈಗ ಮತ್ತೆ ಸಿದ್ಲಿಂಗು 2 ಮೂಲಕ ರಂಜಿಸಲು ಸಜ್ಜಾಗುತ್ತಿದ್ದಾರೆ. ಆ ಸಿದ್ಲಿಂಗು ಚಿತ್ರದಲ್ಲಿ ಅಲ್ಲಲ್ಲಿ ಡಬಲ್ ಮೀನಿಂಗ್ ಇದ್ದರೂ, ಈ ಸಿದ್ಲಿಂಗು ಹಾಗೆ ಇರುವುದಿಲ್ಲ ಎಂದು ಅಭಿಮಾನಿಗಳಿಗೆ ಪ್ರಾಮೀಸ್ ಮಾಡಿದ್ದಾರೆ.

    ಕನ್ನಡದ ಪ್ರತಿಭಾವಂತ ನಿರ್ದೇಶಕ ವಿಜಯ್ ‍ಪ್ರಸಾದ್ ಮತ್ತೊಂದು ಸಿದ್ಲಿಂಗು ಕಥೆ ಹೇಳಲು ಮುಂದಾಗಿದ್ದಾರೆ. ಈ ಹಿಂದೆ ಲೂಸ್ ಮಾದ ಯೋಗಿ (Yogi)  ಮತ್ತು ರಮ್ಯಾ ಅವರನ್ನು ಆಯ್ಕೆ ಮಾಡಿಕೊಂಡು ಸಿದ್ಲಿಂಗು ಕಥೆ ಹೇಳಿದ್ದರು ವಿಜಯ್ ಪ್ರಸಾದ್. ಇದೀಗ ರಮ್ಯಾ ಬದಲು ಸೋನು ಗೌಡ (Sonu Gowda) ಅವರಿಗೆ ಅವಕಾಶ ನೀಡಿದ್ದಾರೆ.

    ಮೊನ್ನೆಯಷ್ಟೇ ಸಿನಿಮಾಗೆ ಮುಹೂರ್ತವಾಗಿದೆ. ಸಿಂಪಲ್ ಆಗಿ ಆದ ಮುಹೂರ್ತ ಸಮಾರಂಭದಲ್ಲಿ ಚಿತ್ರದ ನಾಯಕ ಯೋಗಿ, ನಾಯಕಿ ಸೋನು ಗೌಡ ಸೇರಿದಂತೆ ಹಲವರು ಭಾಗಿಯಾಗಿದ್ದರು. ಸಿದ್ಲಿಂಗು ಸಿನಿಮಾದ ಕೊನೆಯಲ್ಲಿ ನಾಯಕಿ ಸಾವನ್ನಪ್ಪುತ್ತಾಳೆ. ಹಾಗಾಗಿ ಸಿದ್ಲಿಂಗು 2 ಸಿನಿಮಾದ ಕಥೆಯು ಹೇಗೆ ಶುರುವಾಗಬಹುದು ಎನ್ನುವ ಕುತೂಹಲವಿದೆ.

     

    2012ರಲ್ಲಿ ಸಿದ್ಲಿಂಗು ತೆರೆಗೆ ಬಂದಿತ್ತು. ಮೊದಲ ಬಾರಿಗೆ ರಮ್ಯಾ ಜೊತೆ ಯೋಗಿ ನಟಿಸಿದ್ದರಿಂದ ಸಾಕಷ್ಟು ನಿರೀಕ್ಷೆ ಮೂಡಿಸಿತ್ತು. ಸಿನಿಮಾ ಕೂಡ ಗೆದ್ದಿತ್ತು. ಮತ್ತೆ ಹನ್ನೆರಡು ವರ್ಷಗಳ ನಂತರ ವಿಜಯ್ ಪ್ರಸಾದ್ (Vijay Prasad) ದೇ ಹೆಸರಿನಲ್ಲಿ ಸಿನಿಮಾ ಮಾಡುತ್ತಿದ್ದಾರೆ. ಏನೆಲ್ಲ ವಿಷಯಗಳನ್ನು ಈ ಚಿತ್ರ ಹೊತ್ತು ತರಲಿದೆ ಎನ್ನುವುದನ್ನು ಕಾದು ನೋಡಬೇಕು.

  • ‘ಸಿದ್ಲಿಂಗು 2’ ಚಿತ್ರಕ್ಕೆ ಮುಹೂರ್ತ: ಅಂದು ರಮ್ಯಾ, ಇಂದು ಸೋನು ಗೌಡ ನಾಯಕಿ

    ‘ಸಿದ್ಲಿಂಗು 2’ ಚಿತ್ರಕ್ಕೆ ಮುಹೂರ್ತ: ಅಂದು ರಮ್ಯಾ, ಇಂದು ಸೋನು ಗೌಡ ನಾಯಕಿ

    ನ್ನಡದ ಪ್ರತಿಭಾವಂತ ನಿರ್ದೇಶಕ ವಿಜಯ್ ‍ಪ್ರಸಾದ್ ಮತ್ತೊಂದು ಸಿದ್ಲಿಂಗು ಕಥೆ ಹೇಳಲು ಮುಂದಾಗಿದ್ದಾರೆ. ಈ ಹಿಂದೆ ಲೂಸ್ ಮಾದ ಯೋಗಿ (Yogi)  ಮತ್ತು ರಮ್ಯಾ ಅವರನ್ನು ಆಯ್ಕೆ ಮಾಡಿಕೊಂಡು ಸಿದ್ಲಿಂಗು ಕಥೆ ಹೇಳಿದ್ದರು ವಿಜಯ್ ಪ್ರಸಾದ್. ಇದೀಗ ರಮ್ಯಾ ಬದಲು ಸೋನು ಗೌಡ (Sonu Gowda) ಅವರನ್ನು ನಾಯಕಿಯನ್ನಾಗಿ ಆಯ್ಕೆ ಮಾಡಿ ಸಿದ್ಲಿಂಗು 2 (Sidlingu 2) ಚಿತ್ರದ ಕಥೆ ಹೇಳುತ್ತಿದ್ದಾರೆ.

    ನಿನ್ನೆಯಷ್ಟೇ ಸಿನಿಮಾಗೆ ಮುಹೂರ್ತವಾಗಿದೆ. ಸಿಂಪಲ್ ಆಗಿ ಆದ ಮುಹೂರ್ತ ಸಮಾರಂಭದಲ್ಲಿ ಚಿತ್ರದ ನಾಯಕ ಯೋಗಿ, ನಾಯಕಿ ಸೋನು ಗೌಡ ಸೇರಿದಂತೆ ಹಲವರು ಭಾಗಿಯಾಗಿದ್ದರು. ಸಿದ್ಲಿಂಗು ಸಿನಿಮಾದ ಕೊನೆಯಲ್ಲಿ ನಾಯಕಿ ಸಾವನ್ನಪ್ಪುತ್ತಾಳೆ. ಹಾಗಾಗಿ ಸಿದ್ಲಿಂಗು 2 ಸಿನಿಮಾದ ಕಥೆಯು ಹೇಗೆ ಶುರುವಾಗಬಹುದು ಎನ್ನುವ ಕುತೂಹಲವಿದೆ.

     

    2012ರಲ್ಲಿ ಸಿದ್ಲಿಂಗು ತೆರೆಗೆ ಬಂದಿತ್ತು. ಮೊದಲ ಬಾರಿಗೆ ರಮ್ಯಾ ಜೊತೆ ಯೋಗಿ ನಟಿಸಿದ್ದರಿಂದ ಸಾಕಷ್ಟು ನಿರೀಕ್ಷೆ ಮೂಡಿಸಿತ್ತು. ಸಿನಿಮಾ ಕೂಡ ಗೆದ್ದಿತ್ತು. ಮತ್ತೆ ಹನ್ನೆರಡು ವರ್ಷಗಳ ನಂತರ ವಿಜಯ್ ಪ್ರಸಾದ್ (Vijay Prasad) ದೇ ಹೆಸರಿನಲ್ಲಿ ಸಿನಿಮಾ ಮಾಡುತ್ತಿದ್ದಾರೆ. ಏನೆಲ್ಲ ವಿಷಯಗಳನ್ನು ಈ ಚಿತ್ರ ಹೊತ್ತು ತರಲಿದೆ ಎನ್ನುವುದನ್ನು ಕಾದು ನೋಡಬೇಕು.

  • ‘ತೋತಾಪುರಿ 2’ ಚಿತ್ರದಲ್ಲಿ ಡಾಲಿ: ಮೂರ‍್ನಾಲ್ಕು ಗೆಟಪ್‌ಗಳಲ್ಲಿ ಧನಂಜಯ್

    ‘ತೋತಾಪುರಿ 2’ ಚಿತ್ರದಲ್ಲಿ ಡಾಲಿ: ಮೂರ‍್ನಾಲ್ಕು ಗೆಟಪ್‌ಗಳಲ್ಲಿ ಧನಂಜಯ್

    ಗಾಗಲೇ ಹಾಡು ಮತ್ತು ಟ್ರೈಲರ್ ಮೂಲಕ ಸದ್ದು ಮಾಡಿದ್ದ ‘ತೋತಾಪುರಿ’ (Totapuri 2), ಸಿನಿಮಾ ಬಿಡುಗಡೆಯಾದ ಮೇಲೂ ಗಮನ ಸೆಳೆದಿತ್ತು. ಇದೀಗ ‘ತೋತಾಪುರಿ-2’ ಬಿಡುಗಡೆಗೆ ಸಿದ್ಧವಾಗಿದೆ. ಇತ್ತೀಚೆಗೆ ಹರಿಬಿಟ್ಟ ಈ ಸಿನಿಮಾದ ಪೋಸ್ಟರ್‌ಗಳು ಹಾಗೂ ಹಾಡೊಂದು ಸದ್ದು ಮಾಡಿ ಸಿನಿಮಾ ಮೇಲಿನ ನಿರೀಕ್ಷೆ ಹೆಚ್ಚಿಸಿವೆ. ಜಗ್ಗೇಶ್ (Jaggesh)-ಡಾಲಿ ಧನಂಜಯ್ ಕಾಂಬಿನೇಷನ್ ಇದೇ ಮೊದಲ ಬಾರಿಗೆ ಎಂಬುದು ಒಂದೆಡೆಯಾದರೆ, ಎರಡು ಭಾಗಗಳಲ್ಲಿ ಮೂಡಿಬಂದಿರುವ ರೊಮ್ಯಾಂಟಿಕ್ ಕಾಮಿಡಿ ಸಿನಿಮಾದಲ್ಲಿ ಕಾಣಿಸಿಕೊಂಡಿರೋದು ಮತ್ತೊಂದು ವಿಶೇಷ.

    ಡಾಲಿ ಧನಂಜಯ್ (Dhananjay) ಈವರೆಗೂ ವಿಭಿನ್ನ ರೀತಿಯ ಪಾತ್ರಗಳ ಮೂಲಕ ಮಿಂಚು ಹರಿಸಿದ್ದಾರೆ. ಅವರು ನಟಿಸಿರುವ ಪಾತ್ರಗಳಲ್ಲಿ ನಾಯಕ-ಖಳನಾಯಕನಾಗಿ ಅಬ್ಬರಿಸಿದ್ದಾರೆ. ಇದೀಗ ‘ತೋತಾಪುರಿ-2’ ಸಿನಿಮಾದ ಮೂಲಕ ಮತ್ತಷ್ಟು ಸೌಂಡು ಮಾಡಲು ಸಜ್ಜಾಗಿದ್ದಾರೆ. ಇದನ್ನೂ ಓದಿ:ಮಗಳೊಂದಿಗಿನ ಕ್ಯೂಟ್ ಸೆಲ್ಫಿ ಹಂಚಿಕೊಂಡ ರಾಧಿಕಾ ಪಂಡಿತ್

    ಈಗಾಗಲೇ ತೋತಾಪುರಿ ಮೊದಲ ಭಾಗದಲ್ಲಿ ಅವರ ಪಾತ್ರದ ಪರಿಚಯವಾಗಿತ್ತು. ಆದರೆ ಅವರು ಎಷ್ಟು ಶೇಡ್‌ಗಳಲ್ಲಿ ಕಾಣಿಸಿಕೊಂಡಿದ್ದಾರೆ, ಗೆಟಪ್, ಡೈಲಾಗ್ ಇತ್ಯಾದಿ ವಿಷಯಗಳ ಕುರಿತು ಚಿತ್ರತಂಡ ಹೆಚ್ಚಿನ ಮಾಹಿತಿ ಹೊರ ಹಾಕಿರಲಿಲ್ಲ. ಇದೀಗ ‘ತೋತಾಪುರಿ-2’ ಬಿಡುಗಡೆಯ ಹಂತಕ್ಕೆ ಬಂದಿದೆ. ಹೀಗಾಗಿ ಅವರ ಪಾತ್ರದ ಬಗ್ಗೆ ಒಂದಷ್ಟು ವಿವರಣೆ ಹೊರಬಿದ್ದಿದೆ.

    ನಾರಾಯಣ್ ಪಿಳ್ಳೈ ಎಂಬ ಪಾತ್ರ ನಿರ್ವಹಿಸುತ್ತಿರುವ ಡಾಲಿ, ಬೃಹತ್ ಉದ್ಯಮಿಯಾಗಿ ಕಾಣಿಸಿಕೊಂಡಿದ್ದಾರೆ. ಅವರ ಲೈಫ್‌ಸ್ಟೈಲ್, ಲವ್‌ಸ್ಟೋರಿ ಸೇರಿದಂತೆ ಇನ್ನಿತರ ವಿಷಯಗಳನ್ನು ‘ತೋತಾಪುರಿ-2’ರಲ್ಲಿ ತೆರೆದಿಡುವ ಪ್ರಯತ್ನವಾಗಿದೆಯಂತೆ. ಇತ್ತೀಚೆಗಷ್ಟೇ ಡಾಲಿ ಹಾಗೂ ಸುಮನ್ ರಂಗನಾಥ್ ಕಾಣಿಸಿಕೊಂಡಿರುವ ‘ಮೊದಲ ಮಳೆ’ ಹಾಡು ಬಿಡುಗಡೆಯಾಗಿದ್ದು, ಇದೀಗ ‘ಲಾಂಗ್ ಡ್ರೈವ್ ಹೋಗೋಣ’ ಎಂಬ ಹಾಡು ಸಹ ಬಿಡುಗಡೆಯಾಗಲಿದೆ.

    ಚಿತ್ರದಲ್ಲಿ ಡಾಲಿ ಮೂರ‍್ನಾಲ್ಕು ಗೆಟಪ್‌ಗಳಲ್ಲಿ ಕಾಣಿಸಿಕೊಂಡಿದ್ದು, ವಿಭಿನ್ನ ಶೇಡ್ ಕೂಡ ಇರಲಿದೆ ಎಂಬುದು ಸದ್ಯದ ಮಾಹಿತಿ. ಈವರೆಗೂ ಕಾಣಿಸಿಕೊಂಡಿರದ ಸ್ಟೈಲ್, ಮಾತಿನ ಲಹರಿ ‘ತೋತಾಪುರಿ-2’ ಮೂಲಕ ಅನಾವರಣ ಮಾಡಲು ಸಜ್ಜಾಗಿದೆ ಚಿತ್ರತಂಡ. ಬಿಡುಗಡೆಗೂ ಮುನ್ನ ಡಾಲಿ ಗೆಟಪ್‌ಗಳನ್ನು ಹರಿಬಿಟ್ಟಿರುವ ಚಿತ್ರತಂಡ, ಸಿನಿಮಾ ಮೇಲೆ ನೀರಿಕ್ಷೆ ಹೆಚ್ಚುವಂತೆ ಮಾಡಿದೆ. ಮೈಸೂರು, ಕೂರ್ಗ್, ಕೇರಳ ಸೇರಿದಂತೆ ರಮಣೀಯ ಸ್ಥಳಗಳಲ್ಲಿ ಡಾಲಿ-ಸುಮನ್ ಅಭಿನಯಿಸಿರುವ ದೃಶ್ಯಗಳನ್ನು ಸೆರೆಹಿಡಿಯಲಾಗಿದೆ.

    ಇನ್ನು ಡಾಲಿ ಜೋಡಿಯಾಗಿ ಸುಮನ್ ರಂಗನಾಥ್ ನಟಿಸಿದ್ದಾರೆ. ಹಾಗೆಯೇ ಈ ಚಿತ್ರದಲ್ಲಿ ಜಗ್ಗೇಶ್, ಅದಿತಿ ಪ್ರಭುದೇವ, ದತ್ತಣ್ಣ, ವೀಣಾ ಸುಂದರ್, ಹೇಮಾದತ್ ಸೇರಿದಂತೆ ಬೃಹತ್ ತಾರಾಗಣವೇ ಇದೆ. ವಿಜಯಪ್ರಸಾದ್ (Vijay Prasad) ನಿರ್ದೇಶನವಿರುವ ಈ ಚಿತ್ರವನ್ನು ಕೆ.ಎ.ಸುರೇಶ್ನಿ (KA Suresh) ರ್ಮಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ತೋತಾಪುರಿ 2 ಮೊದಲ ಪೋಸ್ಟರ್ ರಿಲೀಸ್ : ಜಗ್ಗೇಶ್ ಜೊತೆ ಡಾಲಿ ಜುಗಲ್ ಬಂದಿ

    ತೋತಾಪುರಿ 2 ಮೊದಲ ಪೋಸ್ಟರ್ ರಿಲೀಸ್ : ಜಗ್ಗೇಶ್ ಜೊತೆ ಡಾಲಿ ಜುಗಲ್ ಬಂದಿ

    ಸಿದ್ಲಿಂಗು ಖ್ಯಾತಿಯ ನಿರ್ದೇಶಕ ವಿಜಯ್ ಪ್ರಸಾದ್ ಈಗಾಗಲೇ ಒಂದು ತೋತಾಪುರಿಯನ್ನು ಪ್ರೇಕ್ಷಕರಿಗೆ ತಿನ್ನಿಸಿದ್ದಾರೆ. ಮತ್ತೊಂದು ತೋತಾಪುರಿ ತಿನ್ನಿಸಲು ರೆಡಿ ಮಾಡಿಕೊಂಡಿದ್ದಾರೆ. ಗ್ಗೇಶ್ ಮತ್ತು ಡಾಲಿ ಧನಂಜಯ್ ಕಾಂಬಿನೇಷನ್ ನ ‘ತೋತಾಪುರಿ’ ಸಿನಿಮಾ ಈಗಾಗಲೇ ಪ್ರೇಕ್ಷಕರ ಮನಗೆದ್ದಿದೆ. ತೋತಾಪುರಿ ಸಿನಿಮಾವನ್ನು ಜನರು ಮೆಚ್ಚಿಕೊಂಡ ಬೆನ್ನಲ್ಲೇ ತೋತಾಪುರಿ 2 (Totapuri 2) ಸಿನಿಮಾವನ್ನು ರಿಲೀಸ್ ಮಾಡಲು ನಿರ್ಮಾಪಕರು ಸಿದ್ಧತೆ ಮಾಡಿಕೊಂಡಿದ್ದಾರೆ. ಪ್ರಚಾರದ ಮೊದಲ ಭಾಗವಾಗಿ ಮೊದಲ ಪೋಸ್ಟರ್ (Poster) ರಿಲೀಸ್ ಮಾಡಿದ್ದಾರೆ.

    ಮೊನ್ನೆಯಷ್ಟೇ ಬಾಲ ಆಂಜನೇಯ, ಬಾಲ ಕೃಷ್ಣ, ಬಾಲ ಗಣಪ ಹೀಗೆ ಜೋಡಿಯ ಪೋಸ್ಟರ್ ಗಳನ್ನು ನಿರ್ಮಾಪಕ ಕೆ.ಎ ಸುರೇಶ್ ಅವರು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಇದೀಗ ಜಗ್ಗೇಶ್ ಮತ್ತು ಡಾಲಿ ಧನಂಜಯ್ ಇರುವ ಒಂದು ಪೋಸ್ಟರ್ ಅನ್ನು ರಿಲೀಸ್ ಮಾಡಿದ್ದಾರೆ.

    ಕೆ.ಎ.ಸುರೇಶ್ (KA Suresh) ಆರ್ಟ್ಸ್ ಬ್ಯಾನರ್ ಅಡಿಯಲ್ಲಿ  ಈ ಸಿನಿಮಾ ನಿರ್ಮಾಣಗೊಂಡಿದ್ದು, ನೀರ್ ದೋಸೆ ಚಿತ್ರದ ಯಶಸ್ವೀ ತಂಡ ಮತ್ತೊಮ್ಮೆ `ತೋತಾಪುರಿ’ಯ ಮೂಲಕ ಒಂದಾಗಿರೋದು ವಿಶೇಷ. ನಿರ್ದೇಶಕ ವಿಜಯಪ್ರಸಾದ್ (Vijay Prasad) ಅವರ ಈ ಚಿತ್ರದಲ್ಲಿ ನವರಸ ನಾಯಕ ಜಗ್ಗೇಶ್ (Jaggesh), ದತ್ತಣ್ಣ, ಸುಮನ್ ರಂಗನಾಥ್ ಮತ್ತೆ ಒಂದಾಗಿದ್ದಾರೆ. ಇದಲ್ಲದೆ ಉದ್ಯಮಿಯ ಪಾತ್ರದಲ್ಲಿ ಡಾಲಿ ಧನಂಜಯ ಮತ್ತು ನಾಯಕಿಯಾಗಿ ಅದಿತಿ ಪ್ರಭುದೇವ ನಟಿಸಿದ್ದಾರೆ.

    ನಿರ್ಮಾಪಕ ಕೆ ಎ ಸುರೇಶ್ ಅವರ ಹಿಂದಿನ ಸಿನಿಮಾಗಳಿಗಿಂತ ಹೆಚ್ಚಿನ ಭರವಸೆ ಈ ಚಿತ್ರ ಮೂಡಿಸಿದೆ. ಮಾರುಕಟ್ಟೆಯಲ್ಲಿ ಈ ತಂಡದ ಬಗ್ಗೆಯೇ ದೊಡ್ಡ ನಿರೀಕ್ಷೆ ಉದ್ಭವವಾಗಿದೆ. ಕನ್ನಡ ಚಿತ್ರ ರಂಗದಲ್ಲಿ ಯಶಸ್ಸನ್ನು ಬೆನ್ನಿಗೆ ಕಟ್ಟಿಕೊಂಡಿರುವ ನಿರ್ಮಾಪಕ ಕೆ ಎ ಸುರೇಶ್ `ತೋತಾಪುರಿ’. ಚಿತ್ರದಲ್ಲಿ ಮೊದಲ ಬಾರಿಗೆ ಡಾಲಿ ಧನಂಜಯ್ (Dhananjay),  ಜಗ್ಗೇಶ್ ಜೊತೆಯಾಗಿದ್ದಾರೆ. ನಾಯಕಿ ಅದಿತಿ ಪ್ರಭುದೇವ ಮುಸ್ಲಿಂ ಹುಡುಗಿ, ಸುಮನ್ ರಂಗನಾಥ್ ಕ್ರಿಶ್ಚಿಯನ್ ಹೆಣ್ಣುಮಗಳಾಗಿ ಅಭಿನಯಿಸಿದ್ದಾರೆ. ಇದನ್ನೂ ಓದಿ:18 ವಯಸ್ಸಿಗೆ ನಾಯಕಿಯಾಗಿ ಬಾಲಿವುಡ್‌ಗೆ ಎಂಟ್ರಿ ಕೊಡ್ತಿದ್ದಾರೆ ರವೀನಾ ಟಂಡನ್ ಪುತ್ರಿ

    ನವರಸ ನಾಯಕ ಜಗ್ಗೇಶ್ ಅವರ ಚಿತ್ರಜೀವನದಲ್ಲಿ ಇದೇ ಮೊದಲ ಬಾರಿಗೆ 100ಕ್ಕೂ ಹೆಚ್ಚು ದಿವಸಗಳ ಕಾಲ ಚಿತ್ರೀಕರಣ ನಡೆಸಲಾಗಿದೆ. ನಿರ್ಮಾಪಕ ಕೆ ಎ ಸುರೇಶ್ `ರಾಜು ಕನ್ನಡ ಮೀಡಿಯಂ’ ಚಿತ್ರದ ಯಶಸ್ಸಿನ ನಂತರ ಒಂದು ಭರವಸೆ ಮೂಡಿಸುವ ತಂಡದ ಜೊತೆ ಹಣ ಹೂಡಿದ್ದಾರೆ. ವಿಜಯಪ್ರಸಾದ್ `ಸಿದ್ಲಿಂಗು’ ಸಿನಿಮಾದಲ್ಲಿ ಟೀಚರ್ ಆಗಿದ್ದ ಸುಮನ್ ರಂಗನಾಥ್ ಈ ಚಿತ್ರದಲ್ಲೂ ಪ್ರಮುಖ ಪಾತ್ರ ಗಿಟ್ಟಿಸಿಕೊಂಡಿದ್ದಾರೆ. ಅನೂಪ್ ಸೀಳಿನ್ ಸಂಗೀತ, ನಂಜೇಶ್ ಬಾಬು ಛಾಯಾಗ್ರಹಣ ಮಾಡಿದ್ದಾರೆ. ಮೈಸೂರು, ಶ್ರೀರಂಗಪಟ್ಟಣ, ಕೊಡಗಿನಲ್ಲಿ ಚಿತ್ರೀಕರಣ ಮಾಡಲಾಗಿದೆ.

     

    `ಎರಡನೇ ಮದುವೆ’, `ಗೋವಿಂದಾಯ ನಮಃ’, ಶ್ರಾವಣಿ ಸುಬ್ರಮಣಿ, ಆರ್ ಎಕ್ಸ್ ಸೂರಿ, ಶಿವಲಿಂಗ ಮತ್ತು ರಾಜು ಕನ್ನಡ ಮೀಡಿಯಂ ನಂತರ  `ತೋತಾಪುರಿ’, ‘ತೋತಾಪುರಿ 2’ ಚಿತ್ರವನ್ನು ನಿರ್ಮಿಸಿರುವ ನಿರ್ಮಾಪಕ ಸುರೇಶ್  ಈ  ಸಿನಿಮಾವನ್ನು ಯಾವಾಗ ರಿಲೀಸ್ ಮಾಡುತ್ತಾರೋ ಕಾದು ನೋಡಬೇಕಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವಿಭಿನ್ನ ಪೋಸ್ಟರ್ ಮೂಲಕ ಗಮನ ಸೆಳೆಯುತ್ತಿದೆ ‘ತೋತಾಪುರಿ 2’

    ವಿಭಿನ್ನ ಪೋಸ್ಟರ್ ಮೂಲಕ ಗಮನ ಸೆಳೆಯುತ್ತಿದೆ ‘ತೋತಾಪುರಿ 2’

    ಗ್ಗೇಶ್ ಮತ್ತು ಡಾಲಿ ಧನಂಜಯ್ ಕಾಂಬಿನೇಷನ್ ನ ‘ತೋತಾಪುರಿ’ ಸಿನಿಮಾ ಈಗಾಗಲೇ ಪ್ರೇಕ್ಷಕರ ಮನಗೆದ್ದಿದೆ. ತೋತಾಪುರಿ ಸಿನಿಮಾವನ್ನು ಜನರು ಮೆಚ್ಚಿಕೊಂಡ ಬೆನ್ನಲ್ಲೇ ತೋತಾಪುರಿ 2 (Totapuri 2) ಸಿನಿಮಾವನ್ನು ರಿಲೀಸ್ ಮಾಡಲು ನಿರ್ಮಾಪಕರು ಸಿದ್ಧತೆ ಮಾಡಿಕೊಂಡಿದ್ದಾರೆ. ಸಿನಿಮಾ ಪ್ರಚಾರವಾಗಿ ವಿಭಿನ್ನ ರೀತಿಯ ಪೋಸ್ಟರ್ ಅನ್ನು ಅವರು ಹಂಚಿಕೊಳ್ಳುತ್ತಿದ್ದಾರೆ.

    ಬಾಲ ಆಂಜನೇಯ, ಬಾಲ ಕೃಷ್ಣ, ಬಾಲ ಗಣಪ ಹೀಗೆ ಜೋಡಿಯ ಪೋಸ್ಟರ್ ಗಳನ್ನು ನಿರ್ಮಾಪಕ ಕೆ.ಎ ಸುರೇಶ್ ಅವರು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿದ್ದು, ಪೋಸ್ಟರ್  ಕಾನ್ಸೆಪ್ಟ್ ಗೂ ಮತ್ತು ಸಿನಿಮಾಗೂ ಸಂಬಂಧವಿರಬಹುದು ಎನ್ನುವ ರೀತಿಯಲ್ಲಿ ಕುತೂಹಲ ಮೂಡಿಸುತ್ತಿದ್ದಾರೆ.

    ಕೆ.ಎ.ಸುರೇಶ್ (KA Suresh) ಆರ್ಟ್ಸ್ ಬ್ಯಾನರ್ ಅಡಿಯಲ್ಲಿ  ಈ ಸಿನಿಮಾ ನಿರ್ಮಾಣಗೊಂಡಿದ್ದು, ನೀರ್ ದೋಸೆ ಚಿತ್ರದ ಯಶಸ್ವೀ ತಂಡ ಮತ್ತೊಮ್ಮೆ `ತೋತಾಪುರಿ’ಯ ಮೂಲಕ ಒಂದಾಗಿರೋದು ವಿಶೇಷ. ನಿರ್ದೇಶಕ ವಿಜಯಪ್ರಸಾದ್ (Vijay Prasad) ಅವರ ಈ ಚಿತ್ರದಲ್ಲಿ ನವರಸ ನಾಯಕ ಜಗ್ಗೇಶ್ (Jaggesh), ದತ್ತಣ್ಣ, ಸುಮನ್ ರಂಗನಾಥ್ ಮತ್ತೆ ಒಂದಾಗಿದ್ದಾರೆ. ಇದಲ್ಲದೆ ಉದ್ಯಮಿಯ ಪಾತ್ರದಲ್ಲಿ ಡಾಲಿ ಧನಂಜಯ ಮತ್ತು ನಾಯಕಿಯಾಗಿ ಅದಿತಿ ಪ್ರಭುದೇವ ನಟಿಸಿದ್ದಾರೆ. ಇದನ್ನೂ ಓದಿ:‘ಎಮರ್ಜೆನ್ಸಿ’ ನಂತರದ ಸಿನಿಮಾ ಸುಳಿವು ಕೊಟ್ಟ ಕಂಗನಾ ರಣಾವತ್

    ನಿರ್ಮಾಪಕ ಕೆ ಎ ಸುರೇಶ್ ಅವರ ಹಿಂದಿನ ಸಿನಿಮಾಗಳಿಗಿಂತ ಹೆಚ್ಚಿನ ಭರವಸೆ ಈ ಚಿತ್ರ ಮೂಡಿಸಿದೆ. ಮಾರುಕಟ್ಟೆಯಲ್ಲಿ ಈ ತಂಡದ ಬಗ್ಗೆಯೇ ದೊಡ್ಡ ನಿರೀಕ್ಷೆ ಉದ್ಭವವಾಗಿದೆ. ಕನ್ನಡ ಚಿತ್ರ ರಂಗದಲ್ಲಿ ಯಶಸ್ಸನ್ನು ಬೆನ್ನಿಗೆ ಕಟ್ಟಿಕೊಂಡಿರುವ ನಿರ್ಮಾಪಕ ಕೆ ಎ ಸುರೇಶ್ `ತೋತಾಪುರಿ’. ಚಿತ್ರದಲ್ಲಿ ಮೊದಲ ಬಾರಿಗೆ ಡಾಲಿ ಧನಂಜಯ್ (Dhananjay),  ಜಗ್ಗೇಶ್ ಜೊತೆಯಾಗಿದ್ದಾರೆ. ನಾಯಕಿ ಅದಿತಿ ಪ್ರಭುದೇವ ಮುಸ್ಲಿಂ ಹುಡುಗಿ, ಸುಮನ್ ರಂಗನಾಥ್ ಕ್ರಿಶ್ಚಿಯನ್ ಹೆಣ್ಣುಮಗಳಾಗಿ ಅಭಿನಯಿಸಿದ್ದಾರೆ.

    ನವರಸ ನಾಯಕ ಜಗ್ಗೇಶ್ ಅವರ ಚಿತ್ರಜೀವನದಲ್ಲಿ ಇದೇ ಮೊದಲ ಬಾರಿಗೆ 100ಕ್ಕೂ ಹೆಚ್ಚು ದಿವಸಗಳ ಕಾಲ ಚಿತ್ರೀಕರಣ ನಡೆಸಲಾಗಿದೆ. ನಿರ್ಮಾಪಕ ಕೆ ಎ ಸುರೇಶ್ `ರಾಜು ಕನ್ನಡ ಮೀಡಿಯಂ’ ಚಿತ್ರದ ಯಶಸ್ಸಿನ ನಂತರ ಒಂದು ಭರವಸೆ ಮೂಡಿಸುವ ತಂಡದ ಜೊತೆ ಹಣ ಹೂಡಿದ್ದಾರೆ. ವಿಜಯಪ್ರಸಾದ್ `ಸಿದ್ಲಿಂಗು’ ಸಿನಿಮಾದಲ್ಲಿ ಟೀಚರ್ ಆಗಿದ್ದ ಸುಮನ್ ರಂಗನಾಥ್ ಈ ಚಿತ್ರದಲ್ಲೂ ಪ್ರಮುಖ ಪಾತ್ರ ಗಿಟ್ಟಿಸಿಕೊಂಡಿದ್ದಾರೆ. ಅನೂಪ್ ಸೀಳಿನ್ ಸಂಗೀತ, ನಂಜೇಶ್ ಬಾಬು ಛಾಯಾಗ್ರಹಣ ಮಾಡಿದ್ದಾರೆ. ಮೈಸೂರು, ಶ್ರೀರಂಗಪಟ್ಟಣ, ಕೊಡಗಿನಲ್ಲಿ ಚಿತ್ರೀಕರಣ ಮಾಡಲಾಗಿದೆ.

     

    `ಎರಡನೇ ಮದುವೆ’, `ಗೋವಿಂದಾಯ ನಮಃ’, ಶ್ರಾವಣಿ ಸುಬ್ರಮಣಿ, ಆರ್ ಎಕ್ಸ್ ಸೂರಿ, ಶಿವಲಿಂಗ ಮತ್ತು ರಾಜು ಕನ್ನಡ ಮೀಡಿಯಂ ನಂತರ  `ತೋತಾಪುರಿ’, ‘ತೋತಾಪುರಿ 2’ ಚಿತ್ರವನ್ನು ನಿರ್ಮಿಸಿರುವ ನಿರ್ಮಾಪಕ ಸುರೇಶ್  ಈ  ಸಿನಿಮಾವನ್ನು ಯಾವಾಗ ರಿಲೀಸ್ ಮಾಡುತ್ತಾರೋ ಕಾದು ನೋಡಬೇಕಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಾಯಕಿ ಪ್ರಧಾನ ಸಿನಿಮಾಗೆ ಸ್ಕ್ರಿಪ್ಟ್ ರೆಡಿ ಮಾಡಿದ ನಿರ್ದೇಶಕ ವಿಜಯ್ ಪ್ರಸಾದ್

    ನಾಯಕಿ ಪ್ರಧಾನ ಸಿನಿಮಾಗೆ ಸ್ಕ್ರಿಪ್ಟ್ ರೆಡಿ ಮಾಡಿದ ನಿರ್ದೇಶಕ ವಿಜಯ್ ಪ್ರಸಾದ್

    ನ್ನಡದ ಪ್ರತಿಭಾವಂತ ನಿರ್ದೇಶಕ (Director) ವಿಜಯ್ ಪ್ರಸಾದ್ (Vijay Prasad) ‘ಪೆಟ್ರೊಮ್ಯಾಕ್ಸ್’ ಸಿನಿಮಾ ನಂತರ ಮತ್ತೊಂದು  ಸ್ಕ್ರಿಪ್ಟ್ ರೆಡಿ ಮಾಡಿಕೊಂಡಿದ್ದಾರೆ. ಈ ಬಾರಿ ಅವರು ಮಹಿಳಾ ಪ್ರಧಾನ (Female lead) ಸಿನಿಮಾವನ್ನು ಮಾಡಲಿದ್ದಾರೆ. ವಿಜಯ್ ಪ್ರಸಾದ್ ನಿರ್ದೇಶನದ ಬಹುತೇಕ ಸಿನಿಮಾಗಳಲ್ಲಿ ನಾಯಕನಷ್ಟೇ ನಾಯಕಿಗೂ ಪ್ರಧಾನ್ಯತೆ ಇದ್ದರೂ, ಈ ಸಿನಿಮಾ ನಾಯಕಿಗೆ ಮತ್ತಷ್ಟು ಜವಾಬ್ದಾರಿ ನೀಡಲಿದೆಯಂತೆ.

    ಹೊಸ ಸಿನಿಮಾದ (New Movie) ಕುರಿತಾಗಿ ತಮ್ಮ ಬೇಸರವನ್ನು ಹೊರ ಹಾಕಿರುವ ಅವರು, ‘ಮೂರು ಚಿತ್ರ ನಿರ್ಮಾಣ ಸಂಸ್ಥೆಗಳೊಂದಿಗೆ ಮಾತುಕತೆ ಮುಗಿಸಿದೆ (ಹೆಸರು ಬೇಡ). ಯಾರೊಬ್ಬರೂ ಕಥೆ ಕೇಳಲಿಲ್ಲ. ಕೇಳಿದ್ದು ಎರಡೇ, ಒಂದು ಡಬ್ಬಲ್ ಮೀನಿಂಗ್ ಡೈಲಾಗ್, ಇನ್ನೊಂದು ಅವರೇ ನಾಯಕ ಆಗಬಹುದೇ ಎಂದು. ಆದರೆ, ಈ ಬಾರಿ ನನ್ನ ಪ್ರಯಾಣವೇ ಬೇರೆ. ಕಾರಣ ನಾಯಕಿಯೇ ಚಿತ್ರದ ಜೀವಾಳ. ಹಿಂದಿನ ನಿರಾಸೆಗೆ ಕ್ಷಮೆ ಇರಲಿ ಎಂದು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ:ಅಪ್ಪ- ಅಮ್ಮನ ಕ್ಯೂಟ್ ಲವ್‌ ಸ್ಟೋರಿ ಹಂಚಿಕೊಂಡು ಮದುವೆ ವಾರ್ಷಿಕೋತ್ಸವಕ್ಕೆ ರಾಧಿಕಾ ವಿಶ್‌ ‌

    ವಿಜಯ್ ಪ್ರಸಾದ್ ನಿರ್ದೇಶನದ ತೋತಾಪುರಿ 2 ಸಿನಿಮಾ ರಿಲೀಸ್ ಗೆ ರೆಡಿಯಿದೆ. ಪರಿಮಳ ಲಾಡ್ಜ್ ಹೆಸರಿನ ಸಿನಿಮಾವನ್ನೂ ಅವರು ಘೋಷಣೆ ಮಾಡಿದ್ದರು. ಪರಿಮಳ ಲಾಡ್ಜ್ ಗಿಂತ ಮುಂಚೆ ಈ ಹೊಸ ಸಿನಿಮಾ ಸೆಟ್ಟೇರಲಿದೆಯಂತೆ. ಅಗಸ್ಟ್ ನಿಂದ ಶೂಟಿಂಗ್ ಮಾಡುವ ಪ್ಲ್ಯಾನ್ ಕೂಡ ಮಾಡಿಕೊಂಡಿದ್ದಾರೆ.

    ನಾಯಕಿ ಪ್ರಧಾನ ಸಿನಿಮಾವಾಗಿದ್ದರಿಂದ ಹೊಸ ನಾಯಕಿಯೊಂದಿಗೆ ಸಿನಿಮಾ ಶುರು ಮಾಡುತ್ತಾರಾ ಅಥವಾ ಹೆಸರಾಂತ ನಟಿಯೊಂದಿಗೆ ಸಿನಿಮಾ ಮಾಡುತ್ತಾರಾ ಎನ್ನುವ ಕುರಿತು ಅವರು ಏನೂ ಹೇಳಿಲ್ಲ. ನಿರ್ಮಾಪಕರು ಸಿಕ್ಕ ನಂತರ ಬಹುಶಃ ಎಲ್ಲದಕ್ಕೂ ಸ್ಪಷ್ಟತೆ ಸಿಗಬಹುದು.

  • ನನ್ನ ಜೀವನದಲ್ಲಿ ಇದೊಂದು ಸಿನಿಮಾ ಕಪ್ಪು ಚುಕ್ಕೆ: ಹಿರಿಯ ನಟ ದತ್ತಣ್ಣ

    ನನ್ನ ಜೀವನದಲ್ಲಿ ಇದೊಂದು ಸಿನಿಮಾ ಕಪ್ಪು ಚುಕ್ಕೆ: ಹಿರಿಯ ನಟ ದತ್ತಣ್ಣ

    ಕಿರುತೆರೆಯ ಜನಪ್ರಿಯ Weekend With Ramesh ಶೋನಲ್ಲಿ ಹಿರಿಯ ನಟ ದತ್ತಣ್ಣ ಅತಿಥಿಯಾಗಿ ಆಗಮಿಸಿದ್ದಾರೆ. ಬಾಲ್ಯ, ಶಿಕ್ಷಣ, ಸೇನೆಯಲ್ಲಿ ಸೇವೆ, ರಂಗಭೂಮಿ, ಸಿನಿಮಾ ಜರ್ನಿ ಹೀಗೆ ಸಾಕಷ್ಟು ವಿಚಾರಗಳನ್ನ ನಿರೂಪಕ-ನಟ ರಮೇಶ್ ಅರವಿಂದ್ ಜೊತೆ ಹಂಚಿಕೊಂಡಿದ್ದಾರೆ. ನನ್ನ ಸಿನಿಮಾ ಕೆರಿಯರ್‌ನಲ್ಲಿ ಈ ಚಿತ್ರವೊಂದು ಕಪ್ಪು ಚುಕ್ಕೆ ಎಂದು ನಿರ್ದೇಶಕರೊಬ್ಬರನ್ನು ಬಾಯಿ ಬಂದಂತೆ ಬೈದಿದರಂತೆ. ಈ ಬಗ್ಗೆ ಕಾರ್ಯಕ್ರಮದಲ್ಲಿ ದತ್ತಣ್ಣ  ಮುಕ್ತವಾಗಿ ಮಾತನಾಡಿದ್ದಾರೆ. ಇದನ್ನೂ ಓದಿ:ಪತ್ನಿ, ಪುತ್ರನ ಜೊತೆ ವಿನೋದ್ ರಾಜ್? ಸ್ಫೋಟಕ ಮಾಹಿತಿ ಬಿಚ್ಚಿಟ್ಟ ನಿರ್ದೇಶಕ

    ಹಿರಿಯ ನಟ ದತ್ತಣ್ಣ ಅವರು ಕನ್ನಡ, ಹಿಂದಿ, ತೆಲುಗು, ಮತ್ತು ಮಲಯಾಳಂ ಸೇರಿದಂತೆ 200ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ಬಗೆ ಬಗೆಯ ಪಾತ್ರಗಳ ಮೂಲಕ ರಂಜಿಸಿದ್ದಾರೆ. ಇದೀಗ ವೀಕೆಂಡ್ ಟೆಂಟ್‌ನಲ್ಲಿ ‘ನೀರ್‌ದೋಸೆ’ (Neerdose Film) ಚಿತ್ರದ ಬಗ್ಗೆ ದತ್ತಣ್ಣ ಮೌನ ಮುರಿದಿದ್ದಾರೆ. ನೀರ್‌ದೋಸೆಯಲ್ಲಿ ದತ್ತಾತ್ರೆಯ ಹೆಸರಿನ ಪೋಲಿ ತಾತನ ಪಾತ್ರದಲ್ಲಿ ನಟಿಸಿದ್ದಾರೆ. ನಿರ್ದೇಶಕ ವಿಜಯ ಪ್ರಸಾದ್, ಆ ಕತೆಯನ್ನು ಹೇಳಿದಾಗ ಕತೆ ಚೆನ್ನಾಗಿದೆ ಆದರೆ ಸಂಭಾಷಣೆ ಚೆನ್ನಾಗಿಲ್ಲ, ಜಾಸ್ತಿ ಪೋಲಿ ಸಂಭಾಷಣೆಗಳಾದವು ಬೇಡ ಎಂದಿದ್ದರಂತೆ. ಈವರೆಗೆ ಬಹಳ ಗಂಭೀರ ಪಾತ್ರಗಳನ್ನು ಮಾಡಿದ್ದೀರಿ ಈಗ ಈ ಪಾತ್ರ ಮಾಡಿಬಿಡಿ ಎಂದು ವಿಜಯ ಪ್ರಸಾದ್ (Vijay Prasad) ಮನವಿ ಮಾಡಿದ್ದರು. ಅವರ ಪ್ರೀತಿಗೆ ಕಟ್ಟುಬಿದ್ದು ಸಿನಿಮಾದಲ್ಲಿ ದತ್ತಣ್ಣ ನಟಿಸಿದರು.

    ಬಳಿಕ ಚಿತ್ರದ ಟ್ರೈಲರ್ ನೋಡಿ ಉರಿದು ಹೋದ ನಟ ದತ್ತಣ್ಣ, ನಿರ್ದೇಶಕ ವಿಜಯಪ್ರಸಾದ್ ಅವರಿಗೆ ಫೋನ್ ಮಾಡಿ ಬಾಯಿಗೆ ಬಂದಂತೆ ಬೈದಿದರಂತೆ. ನನ್ನ ಜೀವನದಲ್ಲಿ ಇದೊಂದು ಸಿನಿಮಾ ಕಪ್ಪು ಚುಕ್ಕೆ ಎಂದು ಬಿಟ್ಟರಂತೆ. ವಿಜಯ ಪ್ರಸಾದ್ ಜೊತೆ ಮಾತು ನಿಲ್ಲಿಸಿಬಿಟ್ಟಿದ್ದರಂತೆ. ಮುಂದೆ ಚಿತ್ರ ರಿಲೀಸ್ ವೇಳೆಗೆ ವಿಜಯ್ ಪ್ರಸಾದ್ ಮನವಿಯ ಮೇರೆಗೆ Neerdose ಸಿನಿಮಾವನ್ನ ದತ್ತಣ್ಣ ನೋಡಿದ ಬಳಿಕ ಅವರ ಕೋಪ ಇಳಿಯಿತಂತೆ.

    ಕಾರ್ಯಕ್ರಮಕ್ಕೆ ಆಗಮಿಸಿದ್ದ ನಿರ್ದೇಶಕ ವಿಜಯ ಪ್ರಸಾದ್, ದತ್ತಣ್ಣ ಬಗ್ಗೆ ಮಾತನಾಡುತ್ತಾ, ಎಲ್ಲರೊಟ್ಟಿಗೂ ಬೆರೆಯುವ ದತ್ತಣ್ಣ ಅವರು, ಶೂಟಿಂಗ್ ಮುಗಿದ ಮೇಲೆ ನಮ್ಮೊಟ್ಟಿಗೆ ಕೂತು ಗುಂಡು ಹಾಕುತ್ತಾ ನಮ್ಮೊಡನೆ ಬೆರೆತುಬಿಡುತ್ತಾರೆ. ದತ್ತಣ್ಣ ಬ್ಯಾಗ್ ಇಲ್ಲದೆ ಎಲ್ಲಿಗೂ ಬರೊಲ್ಲ ಗುಂಡಿನ ವ್ಯವಸ್ಥೆ ಇಲ್ಲದೆ ಎಲ್ಲಿಯೂ ಉಳಿಯುವುದಿಲ್ಲ ಎಂದು ಜೋಕ್ (Joke) ಮಾಡಿದರು.

  • ಬುಲೆಟ್ ಪ್ರಕಾಶ್ ಜೊತೆಗಿನ ನೆನಪಿನ ಬುತ್ತಿಯನ್ನ ಬಿಚ್ಚಿಟ್ಟ ನಿರ್ದೇಶಕ ವಿಜಯ್ ಪ್ರಸಾದ್

    ಬುಲೆಟ್ ಪ್ರಕಾಶ್ ಜೊತೆಗಿನ ನೆನಪಿನ ಬುತ್ತಿಯನ್ನ ಬಿಚ್ಚಿಟ್ಟ ನಿರ್ದೇಶಕ ವಿಜಯ್ ಪ್ರಸಾದ್

    ನೀನಾಸಂ ಸತೀಸ್ ನಟನೆಯ `ಪೆಟ್ರೋಮ್ಯಾಕ್ಸ್'(Petromax) ಚಿತ್ರದ ಸೋಲಿನ ನಂತರ ಇದೀಗ `ಪರಿಮಳಾ ಲಾಡ್ಜ್'(Parimala Lodge) ಚಿತ್ರವನ್ನು ನಿರ್ದೇಶಕ ವಿಜಯ್ ಪ್ರಸಾದ್ ಕೈಗೆತ್ತಿಕೊಂಡಿದ್ದಾರೆ. ಈ ವೇಳೆ ದಿವಂಗತ ಬುಲೆಟ್ ಪ್ರಕಾಶ್(Bullet Prakash) ಅವರನ್ನ ನೆನಪಿಕೊಂಡಿದ್ದಾರೆ. ಅವರನ್ನು ನೆನೆದು ಭಾವನ್ಮಾತಕ ಪತ್ರವೊಂದನ್ನ ಬರೆದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

    ತೋತಾಪುರಿ, ಪೆಟ್ರೋಮ್ಯಾಕ್ಸ್ ಚಿತ್ರದ ಗೆಲ್ಲಾಪೆಟ್ಟಿಗೆಯಲ್ಲಿ ಕಮಾಲ್ ಮಾಡೋದರಲ್ಲಿ ಸೋತಿತ್ತು. ಇದೀಗ ʻಪರಿಮಳಾ ಲಾಡ್ಜ್ʼ ಚಿತ್ರಕ್ಕೆ ವಿಜಯ್ ಪ್ರಸಾದ್ ಕೈಹಾಕಿದ್ದಾರೆ. ಬುಲೆಟ್ ಪ್ರಕಾಶ್ ಜೊತೆಗಿನ ನೆನಪಿನ ಬುತ್ತಿಯನ್ನ ಈ ಪತ್ರದ ಮೂಲಕ ತೆರೆದಿಟ್ಟಿದ್ದಾರೆ. ʻಪರಿಮಳಾ ಲಾಡ್ಜ್ʼ ಚಿತ್ರದ ಸಣ್ಣ ತುಣುಕೊಂದು 3 ವರ್ಷಗಳು ಹಿಂದೆ ರಿಲೀಸ್ ಆಗಿತ್ತು. ಹಲವು ಕಾರಣಗಳಿಂದ ಸಿನಿಮಾ ಮುಂದಕ್ಕೆ ಹೋಗಿರಲಿಲ್ಲ. ಇದೀಗ ಮತ್ತೆ ಈ ಚಿತ್ರಕ್ಕೆ ಚಾಲನೆ ಸಿಕ್ಕಿದೆ. ಇದನ್ನೂ ಓದಿ:ʻಕಮಾಂಡೋʼ ಶೂಟಿಂಗ್ ವೇಳೆ ರಾಗಿಣಿ ದ್ವಿವೇದಿ ಕೈಗೆ ಪೆಟ್ಟು

    ನೀವು ನನಗೆ ಹಾಗಾಗ ನೆನಪಾಗುತ್ತಿರಿ. ಹಾಗೆ ನೆನಪಾದಾಗಲೆಲ್ಲಾ ನಿಮ್ಮ ಕಾಮಿಡಿ ದೃಶ್ಯದ ತುಣುಕುಗಳನ್ನ ನೋಡಿ ಮೌನವಾಗಿ ಬಿಡುತ್ತೇನೆ. `ಗೆಳೆಯ’ ಚಿತ್ರದಲ್ಲಿ ನನಗೆ ಸಿಕ್ಕಾಪಟ್ಟೆ ಇಷ್ಟವಾಗಿ ಹೋದಿರಿ ನಿಮ್ಮೊಳಗಿನ ಹಾಸ್ಯ ಸಮಯದ ಪ್ರಜ್ಞೆ ಅಮೋಘ. ನಿಮ್ಮ ಜೊತೆ ಕೆಲಸ ಮಾಡಬೇಕೆಂಬ ನನ್ನ ಹಂಬಲ ಮತ್ತು ಆಸೆ ಕೇವಲ ಟ್ರೇಲರ್‌ಗೇ ಸೀಮಿತವಾಗಿ ಹೋಗಿದ್ದು ತುಂಬಾ ನೋವಿನ ವಿಚಾರ ಇಂದು ಆಫೀಸಿನಲ್ಲಿ ಪರಿಮಳ ಲಾಡ್ಜ್ ಬರವಣಿಗೆಯಲ್ಲಿ ಇದ್ದೆ. ನಿಮ್ಮ ಪಾತ್ರದ ಬಗ್ಗೆ ಬಂದಾಗ ವಿಪರೀತ ನೆನಪಾದಿರಿ ಹಾಗೆ ಸಂಕಟವೂ ಆಯಿತು.

    ನೀವು ಇದ್ದಿದ್ದರೆ ಗುಡ್ಡೆಮಾಂಸ ಪಾತ್ರವನ್ನ ನುಂಗಿ ನೀರು ಕುಡಿದು ಬಿಡುತ್ತಿದ್ದಿರಿ. ನಿಮ್ಮಿಂದ ಮಾತ್ರ ಆ ಶೈಲಿ ಸಾಧ್ಯ. ನಿಮ್ಮ ನೆನಪಿಗಾಗಿ, ಪ್ರೀತಿಗಾಗಿ ಮತ್ತು ಗೌರವಕ್ಕಾಗಿ ಪಾತ್ರದ ಹೆಸರನ್ನ ಬುಲೆಟ್ ಪ್ರಕಾಶ್ ಅಂತಲೇ ಇಟ್ಟು, ಅಡ್ಡ ಹೆಸರಾಗಿ ಗುಡ್ಡೆಮಾಂಸ ಅಂತ ಉಳಿಸಿಕೊಳ್ಳುತ್ತಿದ್ದೇನೆ. ಆದರೂ ನೀವು ಇಷ್ಟು ಬೇಗ ಹೋಗಬಾರದಿತ್ತು ಹಾಗೆ ಇನ್ನೂ ಬೆಳಗಿ ಬಾಳಬೇಕಿತ್ತು. ಟ್ರೇಲರ್ ಚಿತ್ರೀಕರಣದ ಸಮಯದಲ್ಲಿ ನಿಮ್ಮ ನಗು, ಮಾತು, ಕೀಟಲೆ, ಚೇಷ್ಟೇ ಎಲ್ಲವೂ ನನ್ನಲ್ಲಿ ಇನ್ನೂ ಹಚ್ಚಹಸಿರಾಗೇ ಇದೆ ಮಿಸ್ಸಿಂಗ್ ಯೂ ಸರ್ ಎಂದು ವಿಜಯ್ ಭಾವುಕರಾಗಿದ್ದಾರೆ. ಸದ್ಯ ಈ ಪೋಸ್ಟ್ ಸಖತ್ ಸದ್ದು ಮಾಡುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ‘ಪೆಟ್ರೋಮ್ಯಾಕ್ಸ್’ ಸಿನಿಮಾ ಓಡುತ್ತಿದ್ದರೂ ಸೋಲೊಪ್ಪಿಕೊಂಡ ನಿರ್ದೇಶಕನ ನಡೆಗೆ ಮೆಚ್ಚುಗೆ ಮಹಾಪೂರ

    ‘ಪೆಟ್ರೋಮ್ಯಾಕ್ಸ್’ ಸಿನಿಮಾ ಓಡುತ್ತಿದ್ದರೂ ಸೋಲೊಪ್ಪಿಕೊಂಡ ನಿರ್ದೇಶಕನ ನಡೆಗೆ ಮೆಚ್ಚುಗೆ ಮಹಾಪೂರ

    ನೀರ್ ದೋಸೆ ಸೇರಿದಂತೆ ಹಲವು ಹಿಟ್ ಸಿನಿಮಾಗಳನ್ನು ಸ್ಯಾಂಡಲ್ ವುಡ್ ಗೆ ಕೊಟ್ಟಿರುವ ನಿರ್ದೇಶಕ ವಿಜಯ್ ಪ್ರಸಾದ್ ಅವರ ಪೆಟ್ರೋಮ್ಯಾಕ್ಸ್ ಸಿನಿಮಾ ಎರಡು ವಾರಗಳ ಹಿಂದೆಯಷ್ಟೇ ರಿಲೀಸ್ ಆಗಿದೆ. ನೀನಾಸಂ ಸತೀಶ್, ಹರಿಪ್ರಿಯಾ, ಕಾರುಣ್ಯ ರಾಮ್, ಅರುಣ್ ಸೇರಿದಂತೆ ಹಲವು ಕಲಾವಿದರು ನಟಿಸಿದ್ದ ಈ ಸಿನಿಮಾಗೆ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತವಾಗಿತ್ತು. ಮೂರನೇ ವಾರಕ್ಕೆ ಸಿನಿಮಾ ಕಾಲಿಟ್ಟಿರುವ ಸಂದರ್ಭದಲ್ಲಿ ಏಕಾಏಕಿ ಸೋಲನ್ನು ಒಪ್ಪಿಕೊಂಡು ಬಿಟ್ಟಿದ್ದಾರೆ ನಿರ್ದೇಶಕರು.

    ನಿನ್ನೆಯಷ್ಟೇ ನಿರ್ದೇಶಕ ವಿಜಯ್ ಪ್ರಸಾದ್ ಸೋಷಿಯಲ್ ಮೀಡಿಯಾದಲ್ಲಿ ‘ನಮ್ಮ ಪೆಟ್ರೋಮ್ಯಾಕ್ಸ್ ಚಿತ್ರ ನಾವು ಅಂದುಕೊಂಡಂತೆ ಎಲ್ಲರನ್ನೂ ತಲುಪಲು ಆಗಲಿಲ್ಲ. ಅದಕ್ಕೆ ಕಾರಣ ಖಂಡಿತವಾಗಿಯೂ ನೀವಂತೂ ಅಲ್ಲ. ಹಾಗೆ ನಮ್ಮ ಚಿತ್ರತಂಡದ ಯಾರೊಬ್ಬರೂ ಅಲ್ಲ. ಇದಕ್ಕೆ ಕಾರಣ ನಾನೊಬ್ಬನೇ. ಕ್ಷಮೆ ಇರಲಿ’ ಎಂದು ಬರೆದು ಪೋಸ್ಟ್ ಮಾಡಿದ್ದಾರೆ. ನಿರ್ದೇಶಕರು ಹೇಳಿದಂತೆ ಅಪಾರ ಸಂಖ್ಯೆಯಲ್ಲಿ ಈ ಸಿನಿಮಾ ಜನರಿಗೆ ತಲುಪದೇ ಇರಬಹುದು. ಆದರೆ, ತಲುಪಿದವರೆಲ್ಲ ಇಷ್ಟಪಟ್ಟಿದ್ದಾರೆ. ದ್ವಂದ್ವಾರ್ಥದ ಸಂಭಾಷಣೆಯ ಮಧ್ಯೆಯೂ ತಲುಪಬೇಕಾದ ಸಂದೇಶ ತಲುಪಿದೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಇದನ್ನೂ ಓದಿ:ಮಗಳಿಗೆ ಮುದ್ದಾದ ಹೆಸರಿಟ್ಟ ಪ್ರಣಿತಾ ಸುಭಾಷ್

    ನಿರ್ದೇಶಕ ವಿಜಯ್ ‍ಪ್ರಸಾದ್ ಈ ರೀತಿಯಾಗಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುತ್ತಿದ್ದಂತೆಯೇ ಮೆಚ್ಚುಗೆಯ ಮಹಾಪೂರವೇ ಹರಿದು ಬಂದಿದೆ. ಸಿನಿಮಾಗಳು ಸೋತರೂ, ನೂರಾರು ಕೋಟಿ ದುಡ್ಡು ಬಂದಿದೆ ಎಂದು ಹೇಳುವ, ತಮ್ಮ ಸಿನಿಮಾ ಸೂಪರ್ ಹಿಟ್ ಆಗಿದೆ ಎಂದು ಬೊಗಳೆ ಬಿಡುವ ನಿರ್ದೇಶಕರೇ ಹೆಚ್ಚಿನ ಸಂಖ್ಯೆಯಲ್ಲಿರುವ ಈ ದಿನಮಾನದಲ್ಲಿ, ತಮ್ಮ ಸಿನಿಮಾ ತಲುಪಿಲ್ಲ ಎಂದು ಪ್ರಮಾಣಿಕವಾಗಿ ಒಪ್ಪಿಕೊಂಡ ನಿರ್ದೇಶಕರ ನಡೆಯನ್ನು ಬಹುತೇಕರ ಮೆಚ್ಚಿದ್ದಾರೆ. ಮುಂದಿನ ಸಿನಿಮಾ ಚೆನ್ನಾಗಿ ಆಗಲಿ ಎಂದೂ ಹಾರೈಸಿದ್ದಾರೆ.

    ಇಂದಿನಿಂದ ನಿರ್ದೇಶಕರು ಅವರ ಮತ್ತೊಂದು ಸಿನಿಮಾ ತೋತಾಪುರಿ ಕೆಲಸದಲ್ಲಿ ತೊಡಗಿಕೊಂಡಿದ್ದಾರಂತೆ. ಅದನ್ನೂ ಅವರು ಪೋಸ್ಟ್ ಮಾಡಿದ್ದಾರೆ. ತೋತಾಪುರಿ ಸಿನಿಮಾ ವಿಜಯ್ ಪ್ರಸಾದ್ ಮತ್ತು ಜಗ್ಗೇಶ್ ಕಾಂಬಿನೇಷನ್ ನ ಎರಡನೇ ಸಿನಿಮಾ. ಇದು ಎರಡು ಭಾಗಗಳಲ್ಲಿ ಮೂಡಿ ಬಂದಿದೆ. ರಿಲೀಸ್ ಆಗಿರುವ ಟ್ರೈಲರ್ ಭರವಸೆ ಮೂಡಿಸಿದೆ.

    Live Tv
    [brid partner=56869869 player=32851 video=960834 autoplay=true]

  • ಅನಾಥಾಶ್ರಮಗಳಿಗೆ ಭೇಟಿ ನೀಡಿ, ಆಹಾರ ಪೂರೈಸಿದ ಸತೀಶ್ ನೀನಾಸಂ

    ಅನಾಥಾಶ್ರಮಗಳಿಗೆ ಭೇಟಿ ನೀಡಿ, ಆಹಾರ ಪೂರೈಸಿದ ಸತೀಶ್ ನೀನಾಸಂ

    ನ್ನಡದ ಹೆಸರಾಂತ ನಟ ಸತೀಶ್ ನೀನಾಸಂ ನಿನ್ನೆ ಬೆಂಗಳೂರಿನ ಅನಾಥಾಶ್ರಮಗಳಿಗೆ ಭೇಟಿ ನೀಡಿದ್ದಾರೆ. ಪೆಟ್ರೊಮ್ಯಾಕ್ಸ್ ತಂಡದೊಂದಿಗೆ ಭೇಟಿ ನೀಡಿದ ಅವರು, ಅಲ್ಲಿ ವಾಸವಿದ್ದವರ ಜೊತೆ ಊಟ ಮಾಡಿ, ಅವರಿಗೂ ಊಟ ಕೊಡಿಸಿ ಕೆಲ ಹೊತ್ತು ಕಳೆದಿದ್ದಾರೆ. ಸತೀಶ್ ಅವರು ಅನಾಥಾಶ್ರಮಕ್ಕೆ ಹೋಗುವುದಕ್ಕೆ ಕಾರಣವಿದೆ. ಸದ್ಯದಲ್ಲೇ ಅವರ ಪೆಟ್ರೋಮ್ಯಾಕ್ಸ್ ಸಿನಿಮಾ ಬಿಡುಗಡೆ ಆಗುತ್ತಿದೆ. ಈ ಸಿನಿಮಾದಲ್ಲಿ ಸತೀಶ್, ಫುಡ್ ಡೆಲಿವರಿ ಬಾಯ್ ಆಗಿ ನಟಿಸಿದ್ದಾರೆ. ಈ ಪಾತ್ರ ಪ್ರೇರಣೆಯಿಂದಾಗಿ ಅವರು ಅಲ್ಲಿಗೆ ಹೋಗಿದ್ದಾರಂತೆ.

    ಆಗಾಗ್ಗೆ ನಾನು ಅನಾಥಾಶ್ರಮಗಳಿಗೆ ಮತ್ತು ವೃದ್ಧಾಶ್ರಮಗಳಿಗೆ ಹೋಗುತ್ತಲೇ ಇರುತ್ತೇನೆ. ಈ ಬಾರಿಯ ವಿಶೇಷತೆ ಅಂದರೆ, ನಾನು ಪೆಟ್ರೊಮ್ಯಾಕ್ಸ್ ಸಿನಿಮಾದಲ್ಲಿ ಫುಡ್ ಡೆಲಿವರಿ ಬಾಯ್ ಆಗಿ ನಟಿಸಿದ್ದೇನೆ. ಹಸಿದ ಹೊಟ್ಟೆಗಳಿಗೆ ಆಹಾರ ಪೂರೈಸುವ ಪಾತ್ರವದು. ಆ ನೆಪವಾಗಿಟ್ಟುಕೊಂಡು ಈ ಬಾರಿ ಹೋಗಿದ್ದೆ. ಪ್ರತಿ ಬಾರಿ ಹೋದಾಗಲೂ ನನಗೆ ಬೇರೆ ಬೇರೆ ರೀತಿಯ ಅನುಭವಗಳು ಆಗುತ್ತವೆ. ಈ ಬಾರಿಯಂತೂ ನಾನು ತುಂಬಾ ಭಾವುಕನಾಗಿಬಿಟ್ಟೆ. ಸಿನಿಮಾದ ಕಥೆ ತುಂಬಾ ಎಮೋಷನಲ್ ಆಗಿದೆ. ಅದನ್ನು ಹಾಸ್ಯ ರೂಪದಲ್ಲಿ ಕಟ್ಟುವ ಪ್ರಯತ್ನ ಮಾಡಿದ್ದಾರೆ ನಿರ್ದೇಶಕರು ಎಂದಿದ್ದಾರೆ ಸತೀಶ್. ಇದನ್ನೂ ಓದಿ : Breaking- ಫಹಾದ್ ಫಾಸಿಲ್ ಗಾಗಿ ಸಿನಿಮಾ ಮಾಡಲು ಮತ್ತೆ ತಮಿಳಿಗೆ ಹೊರಟ ಪವನ್ ಕುಮಾರ್

    ನೀರ್ ದೋಸೆ ಸೇರಿದಂತೆ ಹಲವು ಹಿಟ್ ಸಿನಿಮಾಗಳನ್ನು ನಿರ್ದೇಶನ ಮಾಡಿರುವ ವಿಜಯ್ ಪ್ರಸಾದ್ ಈ ಚಿತ್ರದ ನಿರ್ದೇಶಕರು. ಸತೀಶ್ ಜೊತೆ ಹರಿಪ್ರಿಯಾ ನಾಯಕಿಯಾಗಿ ನಟಿಸಿದ್ದಾರೆ. ಕಾರುಣ್ಯ ರಾಮ್, ನಾಗಭೂಷಣ್, ಅರುಣ್ ಸೇರಿದಂತೆ ಹಲವು ಕಲಾವಿದರು ಇದ್ದಾರೆ. ವಿಜಯ್ ಪ್ರಸಾದ್, ಸುಧೀರ್, ಸತೀಶ್ ನೀನಾಸಂ ಜಂಟಿಯಾಗಿ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]