Tag: ವಿಜಯ್ ಮಲ್ಯಾ

  • ನಾನೇನು ವಿಜಯ್‌ ಮಲ್ಯಾನಾ: ಆಸ್ತಿ ಜಪ್ತಿಗೆ ಸಂಜಯ್‌ ರಾವತ್‌ ಕಿಡಿ

    ನಾನೇನು ವಿಜಯ್‌ ಮಲ್ಯಾನಾ: ಆಸ್ತಿ ಜಪ್ತಿಗೆ ಸಂಜಯ್‌ ರಾವತ್‌ ಕಿಡಿ

    ಮುಂಬೈ: ಅಕ್ರಮ ಹಣ ವರ್ಗಾವಣೆ ಕಾನೂನಿನ ಅಡಿಯಲ್ಲಿ ಶಿವಸೇನೆಯ ರಾಜ್ಯಸಭಾ ಸಂಸದ ಸಂಜಯ್‌ ರಾವುತ್‌ ಮತ್ತು ಅವರ ಕುಟುಂಬದ ಸದಸ್ಯರಿಗೆ ಸಂಬಂಧಿಸಿದ ಕೆಲ ಆಸ್ತಿಗಳನ್ನು ಜಾರಿ ನಿರ್ದೇಶನಾಲಯ (ED) ಮಂಗಳವಾರ ಜಪ್ತಿ ಮಾಡಿದೆ. ಈ ಕ್ರಮದ ವಿರುದ್ಧ ಸಂಜಯ್‌ ರಾವತ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ನಾನೇನು ದೇಶ ಬಿಟ್ಟು ಪರಾರಿಯಾಗಿರುವ ವಿಜಯ್‌ ಮಲ್ಯಾ ಅಥವಾ ನೀರವ್‌ ಮೋದಿ ಅಂತಾ ಭಾವಿಸಿದ್ದಾರೆಯೇ ಎಂದು ಇ.ಡಿ ವಿರುದ್ಧ ಸಂಜಯ್‌ ರಾವತ್‌ ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: ನನಗೆ ಇಷ್ಟವಾದಾಗ ಮಾಂಸ ತಿನ್ನಲು ಅವಕಾಶವಿದೆ: ಮೊಯಿತ್ರಾ

    ಇದು ರಾಜಕೀಯ ಸೇಡಿನ ವಿಚಾರವಾಗಿದ್ದರೆ, ಈ ಬಗ್ಗೆ ರಾಜ್ಯಸಭಾ ಅಧ್ಯಕ್ಷರಿಗೆ ಈ ಹಿಂದೆಯೇ ತಿಳಿಸಿದ್ದೆ. ಮಹಾರಾಷ್ಟ್ರ ಸರ್ಕಾರವನ್ನು ಕೆಳಗಿಳಿಸುವಂತೆ ನನ್ನ ಮೇಲೆ ಒತ್ತಡ ಹೇರಲಾಗುತ್ತಿದೆ. ಇಲ್ಲದಿದ್ದರೆ ನಾನು ಕೇಂದ್ರ ತನಿಖಾ ಸಂಸ್ಥೆಗಳನ್ನು ಎದುರಿಸಬೇಕಾಗುತ್ತದೆ. ಅವರು ಮನೆಗೆ ಬಂದು ಬೆದರಿಕೆ ಹಾಕಿದರು. ನಂತರ ಈ ಪ್ರಕ್ರಿಯೆ ಆರಂಭಿಸಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಬಿಜೆಪಿಯ ಕೆಲವು ಹಿರಿಯ ನಾಯಕರು ನನ್ನನ್ನು ಸಂಪರ್ಕಿಸಿದ್ದರು. ಪಕ್ಷವನ್ನು ಬದಲಾಯಿಸುವಂತೆ ಒತ್ತಾಯಿಸಿದ್ದರು. ಅವರ ಮಾತನ್ನು ನಾನು ನಿರಾಕರಿಸಿದ್ದಕ್ಕೆ, ಕೇಂದ್ರೀಯ ಸಂಸ್ಥೆಗಳ ತನಿಖೆಯನ್ನು ಎದುರಿಸಬೇಕಾಗುತ್ತದೆ ಎಂದು ಧಮ್ಕಿ ಹಾಕಿದ್ದರು. ನೀವು ಹೇಗಾದರೂ ಈ ಸರ್ಕಾರವನ್ನು ಉರುಳಿಸಬೇಕು. ಆಗ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಿ, ನಂತರ ನಾವು ಶಾಸಕರ ಗುಂಪನ್ನು ಮುರಿದು ಸರ್ಕಾರವನ್ನು ರಚಿಸುತ್ತೇವೆ ಎಂದು ಬೆದರಿಸಿದ್ದಾರೆಂದು ರಾವತ್‌ ಗಂಭೀರ ಆರೋಪ ಮಾಡಿದ್ದಾರೆ. ಇದನ್ನೂ ಓದಿ: ಸುಳ್ಳು ಸುದ್ದಿ ಹಬ್ಬಿಸುವ ಆನ್‍ಲೈನ್ ಚಾನೆಲ್‍ಗಳಿಗೆ ಅನುರಾಗ್ ಠಾಕೂರ್ ವಾರ್ನಿಂಗ್

    ನಾನೇನು ವಿಜಯ್‌ ಮಲ್ಯಾನಾ? ನೀರವ್‌ ಮೋದಿ ಅಥವಾ ಅಂಬಾನಿ, ಅದಾನಿನಾ? ನಾನು ಪುಟ್ಟ ಮನೆಯೊಂದರಲ್ಲಿ ವಾಸವಾಗಿದ್ದೇನೆ. ನನ್ನ ಹುಟ್ಟೂರಿನಲ್ಲಿ ನನಗೆ ಒಂದೇ ಒಂದು ಎಕರೆ ಜಮೀನು ಇಲ್ಲ. ನನ್ನದೇನಿದ್ದರೂ ಕಷ್ಟಪಟ್ಟು ದುಡಿದ ಹಣ. ತನಿಖಾ ಸಂಸ್ಥೆಗೆ ಏನಾದರೂ ಅಕ್ರಮ ಹಣ ವರ್ಗಾವಣೆ ಆಗಿದೆ ಎಂದು ಅನಿಸುತ್ತದೆಯೇ? ನೀವು ನನ್ನನ್ನು ಯಾರೊಂದಿಗೆ ಲಿಂಕ್ ಮಾಡುತ್ತಿದ್ದೀರಿ ಎಂದು ಪ್ರಶ್ನಿಸಿದ್ದಾರೆ.

    ಅವರು ನನ್ನನ್ನು ಹೆದರಿಸಲು ಸಾಧ್ಯವಿಲ್ಲ. ಅವರು ನನ್ನ ಆಸ್ತಿಯನ್ನು ವಶಪಡಿಸಿಕೊಳ್ಳಲಿ. ನನ್ನನ್ನು ಗುಂಡಿಕ್ಕಿ ಕೊಲ್ಲಲಿ ಅಥವಾ ಜೈಲಿಗೆ ಕಳುಹಿಸಲಿ. ಸಂಜಯ್ ರಾವತ್ ಬಾಳಾಸಾಹೇಬ್ ಠಾಕ್ರೆ ಅವರ ಅನುಯಾಯಿ ಮತ್ತು ಶಿವಸೈನಿಕ ಎಂದು ಸವಾಲು ಹಾಕಿದ್ದಾರೆ. ಇದನ್ನೂ ಓದಿ: ಸತತ 15ನೇ ದಿನ ಏರಿಕೆ – ಪೆಟ್ರೋಲ್, ಡೀಸೆಲ್ 80 ಪೈಸೆ ಏರಿಕೆ

    ಸಂಜಯ್‌ ರಾವತ್‌ ಹಾಗೂ ಅವರ ಕುಟುಂಬಕ್ಕೆ ಸೇರಿದ ಮಹಾರಾಷ್ಟ್ರದ ಅಲಿಬಾಗ್‌ನಲ್ಲಿರುವ 9 ಕೋಟಿ ಮೌಲ್ಯದ ಭೂಮಿ ಮತ್ತು ಮುಂಬೈನ ದಾದರ್ ಉಪನಗರದಲ್ಲಿರುವ 2 ಕೋಟಿ ಮೌಲ್ಯದ ಫ್ಲ್ಯಾಟ್‌ ಜಪ್ತಿಯಾಗಿವೆ. 1,034 ಕೋಟಿ ಮೌಲ್ಯದ ಮುಂಬೈನ ‘ಪತ್ರಾ ಚಾಲ್’ ಭೂ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ರಾವತ್‌ ಅವರ ಈ ಆಸ್ತಿಗಳನ್ನೂ ಸೇರಿಸಲಾಗಿದೆ.

  • ವಿಜಯ್ ಮಲ್ಯಗೆ ಅರುಣ್ ಜೇಟ್ಲಿಯಿಂದ ಶಾಕ್!

    ನವದೆಹಲಿ: ಇಂದಿನ ಬಜೆಟ್‍ನಲ್ಲಿ ಹಣಕಾಸು ಸಚಿವ ಅರುಣ್ ಜೇಟ್ಲಿ, ಆರ್ಥಿಕ ಅಪರಾಧಿಗಳ ದಂಡನೆಗೆ ಕ್ರಮ ಕೈಗೊಳ್ಳುವ ಬಗ್ಗೆ ಘೋಷಸಿದ್ದು, ಸಾಲ ಮಾಡಿ ಕಾನೂನು ಕಣ್ತಪ್ಪಿಸಿ ದೇಶ ಬಿಟ್ಟು ಹೋದವರ ಆಸ್ತಿ ಪಾಸ್ತಿ ಜಪ್ತಿಗೆ ಸರ್ಕಾರ ಹೊಸ ಕಾನೂನು ತರಲಿದೆ ಎಂದು ಹೇಳಿದ್ದಾರೆ. ಇದರಿಂದ ಸಾವಿರಾರು ಕೋಟಿ ರೂಪಾಯಿ ಸಾಲ ಮಾಡಿ ವಿದೇಶಕ್ಕೆ ಹಾರಿರುವ ವಿಜಯ್ ಮಲ್ಯಗೆ ದೊಡ್ಡ ಶಾಕ್ ಸಿಕ್ಕಿದೆ.

    ವಿದೇಶದಲ್ಲಿರುವ ಮಲ್ಯರಿಂದ ಸಾಲ ಹಿಂಪಡೆಯಲು ಬ್ಯಾಂಕ್‍ಗಳು ಪ್ರಯತ್ನ ನಡೆಸುತ್ತಿರುವ ಬೆನ್ನಲ್ಲೇ ಈ ಘೋಷಣೆ ಹೊರಬಿದ್ದಿದೆ. ಕಾನೂನಿನ ಕಣ್ತಪ್ಪಿಸಿ ಕೆಲವರು ದೇಶ ಬಿಟ್ಟು ಹೋಗಿರುವ ಉದಾಹರಣೆಗಳಿವೆ. ಹೀಗಾಗಿ ಸರ್ಕಾರ ಇಂತಹ ವ್ಯಕ್ತಿಗಳ ಆಸ್ತಿ ಜಪ್ತಿ ಮಾಡಲು ಕಾನೂನು ರೂಪಿಸಲಿದೆ ಎಂದು ಅರುಣ್ ಜೇಟ್ಲಿ ಬಜೆಟ್ ಮಂಡನೆ ವೇಳೆ ಹೇಳಿದ್ರು.

    ಉದ್ಯಮಿ ವಿಜಯ ಮಲ್ಯ ಕಳೆದ ವರ್ಷ ಮಾರ್ಚ್‍ನಲ್ಲಿ ವಿದೇಶಕ್ಕೆ ಹಾರಿದ್ರು. ಹಲವು ಬ್ಯಾಂಕ್‍ಗಳು ಮಲ್ಯಾರಿಂದ 9 ಸಾವಿರ ಕೋಟಿ ರೂ. ಆಸ್ತಿ ಹಿಂಪಡೆಯಲು ಸಾಕಷ್ಟು ಪ್ರಯತ್ನ ನಡೆಸಿದ್ದರೂ ಮಲ್ಯರನ್ನು ಭಾರತಕ್ಕೆ ಕರೆತರಲು ಸಾಧ್ಯವಾಗಿಲ್ಲ. ಇದಕ್ಕೆ ಸಂಬಂಧಿಸಿದಂತೆ ಮಲ್ಯ ಹಲವು ಬಾರಿ ನೋಟಿಸ್ ಕೂಡ ನೀಡಲಾಗಿದೆ.