Tag: ವಿಜಯ ದಶಮಿ

  • ದುಷ್ಟ, ಕೆಡುಕಿನ ಮೇಲೆ ಒಳ್ಳೆಯದರ ವಿಜಯ: ಭಾರತೀಯರಿಗೆ ವಿಜಯದಶಮಿ ಶುಭಾಶಯ ತಿಳಿಸಿದ ಮೋದಿ

    ದುಷ್ಟ, ಕೆಡುಕಿನ ಮೇಲೆ ಒಳ್ಳೆಯದರ ವಿಜಯ: ಭಾರತೀಯರಿಗೆ ವಿಜಯದಶಮಿ ಶುಭಾಶಯ ತಿಳಿಸಿದ ಮೋದಿ

    ನವದೆಹಲಿ: ಭಾರತೀಯರಿಗೆ ಪ್ರಧಾನಿ ನರೇಂದ್ರ ಮೋದಿ (PM Modi) ಅವರು ವಿಜಯದಶಮಿಯ (Vijaya Dashami) ಶುಭಾಶಯ ಕೋರಿದ್ದಾರೆ.

    ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಮೋದಿ, ವಿಜಯದಶಮಿಯು ದುಷ್ಟ ಮತ್ತು ಸುಳ್ಳಿನ ಮೇಲೆ ಒಳ್ಳೆಯದು ಮತ್ತು ಸದಾಚಾರದ ವಿಜಯವನ್ನು ಆಚರಿಸುತ್ತದೆ. ಧೈರ್ಯ, ಬುದ್ಧಿವಂತಿಕೆ ಮತ್ತು ಭಕ್ತಿ ಯಾವಾಗಲೂ ನಮ್ಮ ಮಾರ್ಗಗಳಿಗೆ ಮಾರ್ಗದರ್ಶನ ನೀಡಲಿ ಎಂದು ಆಶಿಸಿದ್ದಾರೆ. ಇದನ್ನೂ ಓದಿ: ಕೇಸರಿ ಬಣ್ಣದ ಸೀರೆಯಲ್ಲಿ ಕಂಗೊಳಿಸುತ್ತಿರುವ ತಾಯಿ ಚಾಮುಂಡೇಶ್ವರಿ

    ಸಮಸ್ತ ಭಾರತೀಯರಿಗೆ ವಿಜಯ ದಶಮಿಯ ಶುಭಾಶಯಗಳು ಎಂದು ಮೋದಿ ತಿಳಿಸಿದ್ದಾರೆ.

    ಇದೇ ಸಂದರ್ಭದಲ್ಲಿ, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಗುಜರಾತ್‌ನ ಭುಜ್‌ಗೆ ಆಗಮಿಸಿ, ಸೇನಾ ನೆಲೆಯಲ್ಲಿ ಭಾರತೀಯ ಸೇನಾ ಸಿಬ್ಬಂದಿಯೊಂದಿಗೆ ದಸರಾ ಸಂಭ್ರಮಾಚರಣೆ ಮಾಡಿದ್ದಾರೆ. ಇದನ್ನೂ ಓದಿ: ಅರಮನೆ ನಗರಿಯಲ್ಲಿ ದಸರಾ ವೈಭವ – ವಿಶ್ವವಿಖ್ಯಾತ ಜಂಬೂಸವಾರಿಗೆ ಕ್ಷಣಗಣನೆ

  • ಬನ್ನಿ ಪೂಜೆಯ ಪೌರಾಣಿಕ ಮಹತ್ವವೇನು?

    ಬನ್ನಿ ಪೂಜೆಯ ಪೌರಾಣಿಕ ಮಹತ್ವವೇನು?

    ನವರಾತ್ರಿಯ ಕೊನೆಯ ದಿನ ಬನ್ನಿ ಪೂಜೆಯನ್ನು ಮಾಡಲಾಗುತ್ತದೆ. ಬನ್ನಿ ಕೊಡುವ ಸಂಪ್ರದಾಯದೊಂದಿಗೆ ಈ ದಸರಾ ಹಬ್ಬವನ್ನು ಆಚರಿಸುತ್ತೇವೆ. ಬನ್ನಿಯ ಮಹತ್ವವೇನು? ಯಾಕೆ ಬನ್ನಿ ಕೊಡುವ ಸಂಪ್ರದಾಯವಿದೆ ಎನ್ನುವ ಕುರಿತು ಮಾಹಿತಿ ಇಲ್ಲಿದೆ.

    ವಿಜಯದಶಮಿ ಹೆಸರೇ ಹೇಳುವಂತೆ ವಿಜಯದ ಸಂಕೇತವಾಗಿರುವ ವಿಜಯ ದಶಮಿಯ ದಿನ ಬನ್ನಿ ವೃಕ್ಷವನ್ನು ಪೂಜಿಸಲಾಗುತ್ತದೆ. ಬನ್ನಿ ವೃಕ್ಷದ ಪೂಜೆ ಮಾಡುವುದು ಸಾಮಾನ್ಯ. ಆದರೆ ಪ್ರತಿಯೊಂದು ತನ್ನ ಒಳ ಕಥೆಯನ್ನು ಹೊಂದಿರುತ್ತದೆ. ಬನ್ನಿಯ ಹಿಂದೆ ಒಂದು ಪೌರಾಣಿಕ ಕಥೆಯಿದೆ.

    ಹಿಂದೂ ಸಂಸ್ಕೃತಿಯ ಪ್ರತಿಯೊಂದು ವೈದಿಕ ಆಚಾರ-ವಿಚಾರಗಳೂ ತನ್ನದೇ ಆದ ವೈಶಿಷ್ಟ್ಯಗಳಿಂದ ಕೂಡಿರುತ್ತದೆ. ಹಿಂದಿನ ಕಾಲದಲ್ಲಿ ಸೂರ್ಯವಂಶಸ್ಥ ರಘು ಮಹಾರಾಜ ಎಂಬ ರಾಜ ಭರತಖಂಡವನ್ನು ಆಳುತ್ತಿದ್ದ. ಈ ಸಮಯದಲ್ಲಿ ಕೌಸ್ಥೇಯನೆಂಬ ಬಡ ಬ್ರಾಹ್ಮಣ ಬಾಲಕನೊಬ್ಬ ವಿದ್ಯಾರ್ಜನೆಗೋಸ್ಕರ ಅರುಣಿ ಮಹರ್ಷಿಗಳೆಂಬ ಗುರುಗಳ ಗುರುಕುಲಕ್ಕೆ ಬಂದಿದ್ದ. ಆ ಮುನಿಗಳ ಆಶ್ರಯದಲ್ಲಿ ಶಿಕ್ಷಣವನ್ನು ಪೂರ್ಣಗೊಳಿಸಿದ ಕೌಸ್ಥೇಯ ಗುರುಗಳಿಗೆ ವಿನಮ್ರಪೂರ್ವಕವಾಗಿ ಕೈ ಮುಗಿದು ತಾನು ಗುರುದಕ್ಷಿಣೆಯಾಗಿ ಏನು ಕೊಡಬೇಕೆಂದು ಕೇಳುತ್ತಾನೆ. ಅರುಣೀ ಮುನಿಗಳು ಕೌಸ್ಥೇಯನು ಬಡವನಾದ್ದರಿಂದ ಯಾವುದೇ ಗುರುದಕ್ಷಿಣೆಯನ್ನು ಅಪೇಕ್ಷಿಸದೆ ಗುರುಕುಲವನ್ನು ಬಿಡುವ ಆಜ್ಞೆ ನೀಡುತ್ತಾರೆ. ಆದರೆ ಕೌಸ್ಥೇಯನು ಗುರುದಕ್ಷಿಣೆಯಾಗಿ ಏನನ್ನಾದರೂ ಆಜ್ಞಾಪಿಸಬೇಕೆಂದು ಆಗ್ರಹ ಪೂರ್ವಕವಾಗಿ ಪ್ರಾರ್ಥಿಸುತ್ತಾನೆ. ಇದರಿಂದ ಕುಪಿತಗೊಂಡ ಅರುಣಿ ಮಹರ್ಷಿಗಳು “ಗುರುದಕ್ಷಿಣೆ” ಕೊಡುವುದೇ ಇದ್ದರೆ “ಹತ್ತು ಲಕ್ಷ ಸುವರ್ಣ ನಾಣ್ಯಗಳನ್ನು ಕೊಡು” ಎದು ಬಡ ಕೌಸ್ಥೇಯನಿಗೆ ಅಸಾಧ್ಯವಾದ ಗುರುದಕ್ಷಿಣೆಯನ್ನು ಕೇಳಿಕೊಳ್ಳುತ್ತಾರೆ.

    ಇಷ್ಟು ದೊಡ್ಡ ಗುರುದಕ್ಷಿಣೆ ಕೇಳುತ್ತಾರೆಂಬ ಕಲ್ಪನೆ ಕೂಡ ಕೌಸ್ಥೇಯ ಹತ್ತು ಲಕ್ಷ ಸುವರ್ಣ ನಾಣ್ಯಗಳನ್ನು ಹೇಗೆ ಸ0ಪಾದಿಸುವುದೆಂಬ ಗಾಢ ಚಿಂತೆಗೆ ತೊಡಗುತ್ತಾನೆ. ಹೀಗೇ ರಘು ಮಹಾರಾಜನ ಆಸ್ಥಾನಕ್ಕೆ ಕೌಸ್ಥೇಯ ಬಂದು ತಲುಪುತ್ತಾನೆ. ರಘು ಮಹಾರಾಜ ಪ್ರತಿ ಹನ್ನೆರಡು ವರ್ಷಕ್ಕೊಮ್ಮೆ ತನ್ನ ಪತ್ನಿ ಸಮೇತ ತನ್ನ ರಾಜಭಂಡಾರದ ಸಮಸ್ತ ಧನವನ್ನು ಪ್ರಜೆಗಳಿಗೆ ದಾನವಾಗಿ ಕೊಡುವ ಪರಿಪಾಠವಿಟ್ಟುಕೊಂಡಿರುತ್ತಾನೆ. ಆ ರೀತಿ ದಾನ ನೀಡಿ ಕೆಲವೇ ದಿನಗಳು ಕಳೆದಿರುತ್ತವೆ. ರಾಜ ಭಂಡಾರ ಬರಿದಾಗಿರುತ್ತದೆ. ರಘು ಮಹಾರಾಜನ ತಪಃಶಕ್ತಿಯ ಫಲವಾಗಿ ಕೆಲವೇ ವರ್ಷಗಳಲ್ಲಿ ರಾಜಕೋಶವು ಮತ್ತೆ ತುಂಬುತ್ತಿರುತ್ತದೆ. ರಾಜನು ಒಮ್ಮೆ ಕೌಸ್ಥೇಯನಿಗೆ ನಿತ್ಯ ಆಸ್ಥಾನಕ್ಕೆ ಬರುವ ಕಾರಣವೇನೆಂದು ಕೇಳುತ್ತಾನೆ. ಕೌಸ್ಥೇಯ ತನ್ನ ಸಮಸ್ಯೆಯನ್ನು ಮಹಾರಾಜನಲ್ಲಿ ಹೇಳಿಕೊಳ್ಳುತ್ತಾನೆ.

    ರಾಜ್ಯಕೋಶ ಬರಿದಾದ ಮಹಾರಾಜ ಕೌಸ್ಥೇಯನಿಗೆ ಶೀಘ್ರವಾಗಿ ಸಹಾಯ ಮಾಡಬೇಕೆoಬ ಸದುದ್ದೇಶದಿಂದ ಧನಾಧಿಪತಿಯಾದ ಕುಬೇರನ ಮೇಲೆ ಯುದ್ಧವನ್ನು ಮಾಡಿ ಕೌಸ್ಥೇಯನ ಮನೋಭಿಲಾಷೆಯನ್ನು ಪೂರ್ಣಗೊಳಿಸುವುದೆ಼ದು ಸoಕಲ್ಪ ಮಾಡುತ್ತಾನೆ. ತನ್ನ ಚತುರಂಗ ಬಲ ಸಮೇತ ಕುಬೇರನ ಮೇಲೆ ಯುದ್ಧಕ್ಕೆ ಪ್ರಸ್ಥಾನ ಮಾಡುವಾಗ ಮಾರ್ಗ ಮಧ್ಯೆ ರಾತ್ರಿಯಾದ ಕಾರಣ ಒoದು ವನದಲ್ಲಿ ರಾಜ ಬಿಡಾರ ಹಾಕುತ್ತಾನೆ. ಅದು ಶಮೀವೃಕ್ಷಗಳಿ0ದ ತುಂಬಿದ ವನ. ಇದೇ ಸಂದರ್ಭದಲ್ಲಿ ಕುಬೇರನಿಗೆ ರಘು ಮಹಾರಾಜ ವಿದ್ಯಾರ್ಥಿಯೊಬ್ಬನ ಗುರುದಕ್ಷಿಣೆಯಾಗಿ ಹತ್ತು ಲಕ್ಷ ಸುವರ್ಣ ನಾಣ್ಯಗಳನ್ನು ಕೂಡಿಸುವ ಸದುದ್ದೇಶದಿ0ದ ತನ್ನ ಮೇಲೆ ಯುದ್ಧಕ್ಕೆ ಬರುತ್ತಿರುವ ವಿಷಯ ತಿಳಿಯುತ್ತದೆ. ರಾಜನ ಸದುದ್ದೇಶ ಕೇಳಿ ಸುಪ್ರೀತನಾದ ಕುಬೇರ, ತನ್ನ ಮಾಯಾ ಶಕ್ತಿಯಿಂದ ರಘು ಮಹಾರಾಜ ಬಿಡಾರ ಹೂಡಿದ್ದ ಶಮೀವೃಕ್ಷದ ಪ್ರತಿಯೊ0ದು ಎಲೆಯೂ ಸುವರ್ಣ ನಾಣ್ಯವಾಗುವಂತೆ ಮಾಡುತ್ತಾನೆ.

    ಸೂರ್ಯೋದಯವಾಗುತ್ತಿದ್ದಂತೆಯೇ ಶಮೀವೃಕ್ಷದ ಎಲೆಗಳೆಲ್ಲಾ ಸುವರ್ಣ ನಾಣ್ಯಗಳಾಗಿ ಪರಿವರ್ತನೆಗೊಳ್ಳುತ್ತವೆ. ರಾಜ ಇದನ್ನು ದೈವೀಕೃಪೆ ಎoದು ಭಾವಿಸಿ ಕುಬೇರನ ಮೇಲೆ ತಾನು ಹೂಡಬೇಕಿದ್ದ ಯುದ್ಧವನ್ನು ತ್ಯಜಿಸುತ್ತಾನೆ. ಬಳಿಕ ಶಮೀವನಕ್ಕೆ ಕೌಸ್ಥೇಯನನ್ನು ಕರೆಯಿಸುತ್ತಾನೆ ಹಾಗೂ ಹತ್ತು ಲಕ್ಷ ಸುವರ್ಣ ನಾಣ್ಯಗಳನ್ನು ತೆಗೆದುಕೊಂಡು ಅರುಣೀ ಮಹರ್ಶಿಗಳ ಗುರುದಕ್ಷಿಣೆಯ ಋಣವನ್ನು ತೀರಿಸಲು ಹೇಳುತ್ತಾನೆ.

    ರಾಜನ ಭಂಡಾರ ಮತ್ತೆ ಸುವರ್ಣ ನಾಣ್ಯಗಳಿoದ ತುಂಬಿ ತುಳುಕುತ್ತದೆ. ಈ ಅಸಾಧ್ಯವೆನಿಸಿದ ಗುರುದಕ್ಷಿಣೆಯನ್ನು ಸ್ವೀಕರಿಸಿದ ಅರುಣೀ ಮಹರ್ಷಿಗಳು ಕೌಸ್ಥೇಯನ ಗುರುಭಕ್ತಿಯನ್ನೂ, ರಘು ಮಹಾರಾಜನ ಸಹಾಯಕ ಗುಣ ಮತ್ತು ದಾನದ ಗುಣವನ್ನು ಕಂಡು ಮನಃಪೂರ್ವಕವಾಗಿ ಹರಸುತ್ತಾರೆ. ಶಮೀವೃಕ್ಷದ ಎಲೆಗಳು ಸ್ವರ್ಣ ಮುದ್ರೆಗಳಾಗಿ ಪರಿವರ್ತನೆಯಾದ ದಿನವೇ ಅಶ್ವಯುಜ ಮಾಸ, ಶುಕ್ಲ ಪಕ್ಷ ದಶಮಿ ಅಥವಾ ಶರನ್ನವರಾತ್ರಿಯ ವಿಜಯದಶಮಿ. ಈ ಪುಣ್ಯತೋಮಯ ದಿನದಂದು ಶಮೀವೃಕ್ಷಕ್ಕೆ ಭಕ್ತಿಯಿ0ದ ಪೂಜೆ ಮಾಡಿ, ಶಮೀಪತ್ರೆಗಳನ್ನು ಮನೆಗೆ ತಂದು ತಿಜೋರಿ, ಗಲ್ಲ, ಆಭರಣದ ಪೆಟ್ಟಿಗೆ ಇತ್ಯಾದಿಗಳಲ್ಲಿ ಇಡುವುದರಿಂದ ಧನ-ಧಾನ್ಯ ಸಮೃದ್ಧಿಯಾಗುವುದೆಂಬ ನ0ಬಿಕೆಯಿದೆ.

    ಹೀಗಾಗಿ ದಸರಾ ಸಂದರ್ಭದಲ್ಲಿ ಬನ್ನೀ ವೃಕ್ಷವನ್ನು ಅತ್ಯಂತ ವಿಶೇಷವಾಗಿ ಪೂಜಿಸಲಾಗುತ್ತದೆ. ಇದೇ ಬನ್ನಿ ವೃಕ್ಷದಲ್ಲಿ ಪಾಂಡವರು ತಮ್ಮ ಆಯುಧಗಳನ್ನು ಬಚ್ಟಿಟ್ಟು, ವಿಜಯದಶಮಿಯಂದು ಹೊರತೆಗೆದಿದ್ದರು ಎಂಬ ಪ್ರತೀತಿ ಕೂಡ ಇದೆ.

  • ದಸರಾ ವಿಶೇಷ: ದೇವಿಗೆ ಚಾಮುಂಡಿ, ರಕ್ತೇಶ್ವರಿ ಹೆಸರು ಬಂದಿದ್ದು ಹೇಗೆ?

    ದಸರಾ ವಿಶೇಷ: ದೇವಿಗೆ ಚಾಮುಂಡಿ, ರಕ್ತೇಶ್ವರಿ ಹೆಸರು ಬಂದಿದ್ದು ಹೇಗೆ?

    ದೇವಿ ಮಹಾತ್ಮೆಯ ಐದನೇ ಅಧ್ಯಾಯದಲ್ಲಿ ಶುಂಭ ನಿಶುಂಭರ (Shumba, Nishumba) ಕಥೆ ಬರುತ್ತದೆ. ಶುಂಭ, ನಿಶುಂಭರು ರಾಕ್ಷಸರಾಗಿದ್ದು ದೇವಲೋಕವನ್ನು ಆಕ್ರಮಿಸುವ ಕನಸು ಕಾಣುತ್ತಾರೆ. ಈ ಕನಸು ನನಸಾಗಬೇಕಾದರೆ ನಮಗೆ ವಿಶೇಷ ವರ ಸಿಗಬೇಕೆಂದು ತಿಳಿದು ಬ್ರಹ್ಮನನ್ನು ಮೆಚ್ಚಿಸಲು ಘೋರ ತಪಸ್ಸು ಮಾಡುತ್ತಾರೆ. ಇವರ ತಪಸ್ಸನ್ನು ಮೆಚ್ಚಿ ಬ್ರಹ್ಮ ಪ್ರತ್ಯಕ್ಷನಾಗುತ್ತಾನೆ. ಈ ವೇಳೆ ಅಯೋನಿಜೆಯಾದ ಕನ್ಯೆ ಅಲ್ಲದೇ ಯಾರಿಂದಲೂ ನಮಗೆ ಮರಣ ಬಾರಬಾರದು ಎಂದು ವರ ಕೇಳುತ್ತಾರೆ. ಬ್ರಹ್ಮ ತಥಾಸ್ತು ಎಂದು ಹೇಳಿ ಈ ವಿಶೇಷ ವರವನ್ನು ದಯಪಾಲಿಸುತ್ತಾನೆ.

    ವರ ಸಿಕ್ಕಿದ ಬೆನ್ನಲ್ಲೇ ಶುಂಭ, ನಿಶುಂಭರು ದೇವಲೋಕಕ್ಕೆ ಹೋಗಿ ಯುದ್ಧ ಮಾಡಿ ದೇವತೆಗಳನ್ನು ಅಲ್ಲಿಂದ ಓಡಿಸುತ್ತಾರೆ. ಈ ವೇಳೆ ಏನು ಮಾಡಬೇಕು ಎನ್ನುವುದನ್ನು ತಿಳಿಯದ ದೇವತೆಗಳು ನೇರವಾಗಿ ಆದಿಶಕ್ತಿಯಾದ ಪಾರ್ವತಿಯ ಬಳಿ ಬರುತ್ತಾರೆ. ಪಾರ್ವತಿಯ (Parvathi) ಬಳಿ ಬರುವುದಕ್ಕೂ ಕಾರಣವಿದೆ. ಹಿಂದೆ ಮಹಿಷಾಸುರನನ್ನು ಸಂಹಾರ ಮಾಡಿದ ಬಳಿಕ ದೇವಿ ನಿಮಗೆ ಯಾವುದೇ ಕಷ್ಟ ಬಂದರೂ ನನ್ನ ಬಳಿ ಬನ್ನಿ. ನಿಮ್ಮ ಕಷ್ಟವನ್ನು ನಾನು ಪಾರು ಮಾಡುತ್ತೇನೆ ಎಂದು ದೇವತೆಗಳಿಗೆ ಅಭಯ ನೀಡಿದ್ದಳು.

    ದೇವತೆಗಳು ಲೋಕಕಂಟಕರಾಗಿರುವ ಶುಂಭ, ನಿಶುಂಭರ ಕಾಟವನ್ನು ವಿವರಿಸಿ ನಮ್ಮನ್ನು ರಕ್ಷಿಸಬೇಕೆಂದು ಆದಿಶಕ್ತಿಯ ಬಳಿ ಮೊರೆ ಇಡುತ್ತಾರೆ. ದೇವತೆಗಳು ಆದಿಶಕ್ತಿಯನ್ನು ಹೊಗಳಿದಾಗ ಆಕೆಯ ದೇಹದಿಂದ ಕೌಶಿಕಿಯೆಂಬ (Kaushiki) ಸ್ತ್ರೀ ಹೊರಬಂದು ದೇವತೆಗಳಿಂದ ಸಕಲ ಆಯುಧಗಳನ್ನು ಪಡೆಯುತ್ತಾಳೆ. ನಂತರ ಸೌಂದರ್ಯಭರಿತವಾದ ಬಾಲೆಯ ರೂಪವನ್ನು ತಳೆದು ಹಿಮಾಲಯದ ತಪ್ಪಲಿನಲ್ಲಿ ಉಯ್ಯಾಲೆಯಾಡುತ್ತಾ ವಿನೋದಲ್ಲಿ ಕುಳಿತು ತನ್ನದೇ ಲೋಕದಲ್ಲಿ ವಿಹರಿಸುತ್ತಿರುತ್ತಾಳೆ.

    ಈ ಸಂದರ್ಭದಲ್ಲಿ ಬೇಟೆಯಾಡಲು ಬಂದಿದ್ದ ಶುಂಭ, ನಿಶುಂಭರ ಸೇನಾಧಿಪತಿಯಾದ ಚಂಡ, ಮುಂಡರು (Chanda, Munda) ದೇವಿಯನ್ನು ನೋಡಿ ಮನಸೋಲುತ್ತಾರೆ. ಈಕೆಯ ಸೌಂದರ್ಯವನ್ನು ನೋಡಿ ಈ ವಿಚಾರವನ್ನು ಶುಂಭನಿಗೆ ತಿಳಿಸುತ್ತಾರೆ. ಶುಂಭ ಆಕೆಯನ್ನು ಕರೆ ತರುವಂತೆ ಧೂಮ್ರಲೋಚನಿಗೆ ಸೂಚಿಸುತ್ತಾನೆ. ಈ ವೇಳೆ ದೇವಿ,”ನನ್ನ ಕೈ ಹಿಡಿಯಬೇಕಾದ ವರನಾದವನು ನನಗಿಂತಲೂ ಬಲಶಾಲಿಯಾಗಿರಬೇಕು. ನನ್ನನ್ನು ಯಾರು ಯುದ್ಧದಲ್ಲಿ ಸೋಲಿಸುತ್ತಾರೋ ಅವರನ್ನು ಮದುವೆಯಾಗುತ್ತೇನೆ. ಹೀಗಾಗಿ ಯುದ್ಧದಲ್ಲಿ ಸೋಲಿಸಿದರೆ ಮಾತ್ರ ಶುಂಭನನ್ನು ಮದುವೆಯಾಗುತ್ತೇನೆ” ಎಂದು ಹೇಳುತ್ತಾಳೆ. ಈ ಕಾದಾಟದಲ್ಲಿ ಧೂಮ್ರಲೋಚನ ಹತನಾದ ವಿಚಾರ ತಿಳಿದು ಶುಂಭ ಚಂಡ, ಮುಂಡರಿಗೆ ಆಕೆಯನ್ನು ಕರೆ ತರುವಂತೆ ಆದೇಶಿಸುತ್ತಾನೆ. ಚಂಡಮುಂಡರು ದೇವಿ ಜೊತೆ ಯದ್ಧ ಮಾಡುತ್ತಾರೆ. ಈ ಸಮಯದಲ್ಲಿ ದೇವಿ ಕಪ್ಪು ಬಣ್ಣಕ್ಕೆ ತಿರುಗಿ ಆಕೆಯ ಹಣೆಯಿಂದ ಕಾಳಿ ಹೊರ ಬಂದು ಇಬ್ಬರನ್ನು ಸಂಹಾರ ಮಾಡುತ್ತಾಳೆ. ಇಬ್ಬರನ್ನು ಸಂಹಾರ ಮಾಡಿದ್ದಕ್ಕೆ ʼಚಾಮುಂಡಿʼ, ʼಚಾಮುಂಡೇಶ್ವರಿʼ ಎಂಬ ಹೆಸರು ದೇವಿಗೆ ಬರುತ್ತದೆ. ಇದನ್ನೂ ಓದಿ: ಶಿರಸಿ ಮಾರಿಕಾಂಬಾ ದರ್ಶನಕ್ಕೆ ವಸ್ತ್ರಸಂಹಿತೆ ಜಾರಿ

    ಚಂಡಮುಂಡರನ್ನು ದೇವಿ ಹತ್ಯೆ ಮಾಡಿದ ವಿಚಾರ ತಿಳಿದು ಶುಂಭ ರಕ್ತ ಬೀಜನನನ್ನು (Raktabeeja) ಯುದ್ಧಕ್ಕೆ ಕಳುಹಿಸುತ್ತಾನೆ. ಯುದ್ಧದ ಸಮಯದಲ್ಲಿ ಆತನ ರಕ್ತದ ಬಿಂದುಗಳು ನೆಲಕ್ಕೆ ಬೀಳುತ್ತಿದ್ದಂತೆ ಮತ್ತಷ್ಟು ರಾಕ್ಷಸರು ಹುಟ್ಟುತ್ತಿರುತ್ತಾರೆ. ರಕ್ತದಿಂದ ರಾಕ್ಷಸರು ಜನಿಸಲು ಕಾರಣವಿದೆ. ತನ್ನ ದೇಹದಿಂದ ಬಿದ್ದ ಒಂದೊಂದು ತೊಟ್ಟು ರಕ್ತವೂ ತನ್ನಂತೆಯೇ ಪರಾಕ್ರಮಶಾಲಿಯಾದ ರಾಕ್ಷಸರು ಹುಟ್ಟುವಂತೆ ಈಶ್ವರನಿಂದ ವರ ಪಡೆದಿದ್ದ. ಯುದ್ಧದಲ್ಲಿ ಈತನನ್ನು ಸೋಲಿಸುವುದು ಅಸಾಧ್ಯ ಎಂದು ತಿಳಿದ ದೇವಿ ನಾಲಗೆಯನ್ನು ಹೊರ ಚಾಚಿ ಯುದ್ಧ ಮಾಡುತ್ತಾಳೆ. ನಾಲಗೆಯ ಮೇಲೆ ನಿಂತು ರಕ್ತಬೀಜ ಯುದ್ಧ ಮಾಡಿದ. ಆತನ ದೇಹದಿಂದ ಬಿದ್ದ ರಕ್ತವನ್ನು ನಾಲಗೆಯ ಮೂಲಕ ಹೀರಿದ್ದರಿಂದ ರಕ್ತಬೀಜನ ಶಕ್ತಿ ಕಡಿಮೆಯಾಗಿ ಕೊನೆಗೆ ಹತನಾಗುತ್ತಾನೆ. ರಕ್ತಬೀಜನನ್ನು ಸಂಹರಿಸಿದ್ದಕ್ಕೆ ದೇವಿಗೆ ʼರಕ್ತೇಶ್ವರಿʼ ಎಂಬ ಹೆಸರು ಬರುತ್ತದೆ.

    ದುಮ್ರಲೋಚನ, ಚಂಡ, ಮುಂಡ, ರಕ್ತ ಬೀಜನನ್ನು ಹತ್ಯೆ ಮಾಡಿದ್ದಕ್ಕೆ ಸಿಟ್ಟಾದ ನಂತರ ಶುಂಭ, ನಿಶುಂಭರು ದೇವಿಯೊಡನೆ ಯುದ್ಧಕ್ಕೆ ಬರುತ್ತಾರೆ. ಇವರಿಬ್ಬರನ್ನು ಕೌಶಿಕಿ ಸಂಹಾರ ಮಾಡಿ ದೇವಲೋಕವನ್ನು ಮರಳಿ ದೇವತೆಗಳಿಗೆ ನೀಡುತ್ತಾಳೆ.

  • ವಿಜಯ ದಶಮಿ – ಲಕ್ಷ್ಮಿ ದೇವಿಗೆ ನೋಟುಗಳ ಅಲಂಕಾರ

    ವಿಜಯ ದಶಮಿ – ಲಕ್ಷ್ಮಿ ದೇವಿಗೆ ನೋಟುಗಳ ಅಲಂಕಾರ

    ಗದಗ: ಇಂದು ವಿಜಯ ದಶಮಿ (Vijaya Dashami) ಅಂಗವಾಗಿ ಗದಗ (Gadag) ನಗರದಲ್ಲಿ ಲಕ್ಷ್ಮಿ ದೇವಿಗೆ ನೋಟುಗಳಿಂದ (Note) ಅದ್ಭುತವಾಗಿ ಅಲಂಕಾರ ಮಾಡಲಾಗಿದೆ.

    ನಗರದ ಹುಡ್ಕೊ ಕಾಲೋನಿಯ ನೀಲಮ್ಮ ತಾಯಿ ಆಧ್ಯಾತ್ಮ ಆಶ್ರಮದಲ್ಲಿ ಲಕ್ಷ್ಮಿ ದೇವಿ ಪ್ರತಿಷ್ಠಾಪನೆ ಮಾಡಲಾಗಿದೆ. ನವರಾತ್ರಿ ಆರಂಭದಿಂದ ನಿತ್ಯ ವಿಭಿನ್ನವಾದ ರೀತಿಯಲ್ಲಿ ಅಲಂಕಾರ ಮಾಡಲಾಗುತ್ತಿತ್ತು. ಇಂದು 500, 100, 50, 20, 10 ರೂ. ನೋಟುಗಳಿಂದ ಅಲಂಕರಿಸಲಾಗಿದೆ. ಇದನ್ನೂ ಓದಿ: ಶಿವಮೊಗ್ಗ ದಸರಾ ಜಂಬೂ ಸವಾರಿಗೆ ಆಗಮಿಸಿದ್ದ ನೇತ್ರಾವತಿ ಆನೆ ಹೆಣ್ಣು ಮರಿಗೆ ಜನ್ಮ

    ಚಕ್ರ, ಮಾಲೆ, ತೋರಣ, ಕಮಲ ಹೀಗೆ ಅನೇಕ ರೂಪದಲ್ಲಿ ನೋಟುಗಳನ್ನು ಜೋಡಿಸಿ ಅಲಂಕಾರ ಮಾಡಲಾಗಿದೆ. ಸುಮಾರು 2 ಲಕ್ಷ 50 ಸಾವಿರ ರೂ.ಗಳಿಂದ ದೇವಿಗೆ ಶೃಂಗಾರ ಮಾಡಿ ವಿಶೇಷ ಪೂಜೆ ಮಾಡಲಾಗಿದೆ. ಆಶ್ರಮಕ್ಕೆ ಬಂದ ಭಕ್ತರು ದೇವಿಯ ವಿಭಿನ್ನವಾದ ಅಲಂಕಾರ ಕಣ್ತುಂಬಿಕೊಂಡು, ಭಕ್ತಿಯಿಂದ ಬೇಡಿಕೊಂಡು ಪುನೀತರಾಗಿದ್ದಾರೆ. ಇದನ್ನೂ ಓದಿ: ಹಟ್ಟಿ ಚಿನ್ನದ ಗಣಿ ಸುತ್ತಮುತ್ತಲ ಪ್ರದೇಶದಲ್ಲಿ ಭೂಕಂಪನ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕೋವಿಡ್ ಮುಂಜಾಗ್ರತೆಯೊಂದಿಗೆ ಶಿವಮೊಗ್ಗದಲ್ಲಿ ವೈಭವದ ದಸರಾ ಆಚರಣೆಗೆ ಸಿದ್ಧತೆ: ಕೆ.ಎಸ್ ಈಶ್ವರಪ್ಪ

    ಕೋವಿಡ್ ಮುಂಜಾಗ್ರತೆಯೊಂದಿಗೆ ಶಿವಮೊಗ್ಗದಲ್ಲಿ ವೈಭವದ ದಸರಾ ಆಚರಣೆಗೆ ಸಿದ್ಧತೆ: ಕೆ.ಎಸ್ ಈಶ್ವರಪ್ಪ

    ಶಿವಮೊಗ್ಗ: ಈ ಬಾರಿ ಶಿವಮೊಗ್ಗ ದಸರಾವನ್ನು ಕೋವಿಡ್ ಮುಂಜಾಗ್ರತೆಯೊಂದಿಗೆ ಭಕ್ತಿಪೂರ್ವಕವಾಗಿ ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್ ಈಶ್ವರಪ್ಪ ತಿಳಿಸಿದರು.

    ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ದಸರಾ ಆಚರಣೆ ಕುರಿತು ಮಹಾನಗರ ಪಾಲಿಕೆ ಸದಸ್ಯರ ಮತ್ತು ಅಧಿಕಾರಿಗಳ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೈಸೂರು ದಸರಾ ಮಾದರಿಯಲ್ಲಿ ಹಲವು ವರ್ಷಗಳಿಂದ ಶಿವಮೊಗ್ಗದಲ್ಲಿ ದಸರಾವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಆದರೆ ಕೋವಿಡ್ ಹಿನ್ನೆಲೆಯಲ್ಲಿ ಕಳೆದ ಬಾರಿ ಸರಳವಾಗಿ ದಸರಾ ಆಚರಿಸಲಾಗಿದ್ದು, ಈ ಬಾರಿ ಹೆಚ್ಚಿನ ಜನ ಸೇರದಂತೆ ಎಲ್ಲಾ ಮುಂಜಾಗರೂಕತೆಗಳೊಂದಿಗೆ ವಿಜೃಂಭಣೆಯಿಂದ ಆಚರಿಸಲು ಸಿದ್ಧತೆಗಳನ್ನು ಮಾಡಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ:  ಅಸ್ಸಾಂನಿಂದ ಬರುತ್ತಿದ್ದಾರೆ ನೂರಾರು ಕೂಲಿ ಕಾರ್ಮಿಕರು – ಸ್ಥಳೀಯರ ಆತಂಕ

    9 ದಿನಗಳ ಕಾಲ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ಈ ಹಿಂದೆ ವಿವಿಧ ವೇದಿಕೆಗಳಲ್ಲಿ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿತ್ತು. ಈ ಬಾರಿ ಫ್ರೀಡಂ ಪಾರ್ಕ್ ನಲ್ಲಿ ಮಾತ್ರ ಪ್ರತಿದಿನ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ನಡೆಸಲಾಗುವುದು ಎಂದರು.

    ವಿಜಯ ದಶಮಿಯ ಕಡೆ ದಿನದ ಮೆರವಣಿಗೆಯನ್ನು ಸರಳವಾಗಿ, ವ್ಯವಸ್ಥಿತವಾಗಿ ನಡೆಸಲಾಗುವುದು. ಪ್ರತಿ ವರ್ಷ ನೀಡುವಂತೆ 196 ದೇವಾಲಯಗಳಿಗೆ ಪೂಜೆ ಅಲಂಕಾರಕ್ಕಾಗಿ 4 ಸಾವಿರ ರೂ. ಅನುದಾನ ಒದಗಿಸಲಾಗುವುದು. ಆದರೆ ಮೆರವಣಿಗೆಯಲ್ಲಿ ಎಲ್ಲಾ ದೇವಾಲಯಗಳು ಭಾಗವಹಿಸುವ ಅಗತ್ಯವಿಲ್ಲ. ಆಯ್ದ ಕೆಲವು ದೇವಾಲಯಗಳಿಂದ ಮೆರವಣಿಗೆಯಲ್ಲಿ ಭಾಗವಹಿಸಲು ಸೂಚನೆ ನೀಡಲಾಗಿದೆ. ದಸರಾ ಆಚರಣೆಗೆ ರಾಜ್ಯ ಸರ್ಕಾರದಿಂದ ಅನುದಾನ ತರಲು ಪ್ರಯತ್ನಿಸಲಾಗುವುದು ಎಂದು ಹೇಳಿದರು. ಇದನ್ನೂ ಓದಿ:  ರಾತ್ರಿ ರಾಜಕಾರಣ ಮಾಡುವ ಸಂಸ್ಕೃತಿ ಬಿಜೆಪಿಯದ್ದಲ್ಲ ಕಾಂಗ್ರೆಸ್ಸಿನದ್ದು: ಸಂಜಯ್ ಪಾಟೀಲ್

    ದಸರಾದ ವೈಭವವನ್ನು ಸಾರ್ವಜನಿಕರು ವೀಕ್ಷಿಸಲು ಸಹಾಯಕವಾಗುವಂತೆ ನಗರದ ವಿವಿಧೆಡೆಗಳಲ್ಲಿ ಎಲ್‍ಇಡಿ ಪರದೆಗಳನ್ನು ಅಳವಡಿಸಲಾಗುವುದು. ಸಾರ್ವಜನಿಕರು ಈ ಪರದೆಗಳ ಮೂಲಕ ಕಾರ್ಯಕ್ರಮಗಳನ್ನು ವೀಕ್ಷಿಸಬಹುದಾಗಿದೆ. ಸಾರ್ವಜನಿಕರು ಸಹಕರಿಸುವ ಮೂಲಕ ದಸರಾವನ್ನು ಅರ್ಥಪೂರ್ಣವಾಗಿ ಆಚರಿಸಬೇಕು ಎಂದು ಮನವಿ ಮಾಡಿದರು.

    ಈ ಸುದ್ದಿಗೋಷ್ಠಿಯಲ್ಲಿ ಮೇಯರ್ ಸುನೀತಾ ಅಣ್ಣಪ್ಪ, ಉಪ ಮೇಯರ್ ಶಂಕರ್ ಗನ್ನಿ, ಆಯುಕ್ತ ಚಿದಾನಂದ ವಟಾರೆ, ಜಿ.ಪಂ.ಸಿಇಒ ಎಂ.ಎಲ್.ವೈಶಾಲಿ, ಮಹಾನಗರ ಪಾಲಿಕೆ ಸದಸ್ಯರು ಉಪಸ್ಥಿತರಿದ್ದರು.

  • ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿ ಆರಂಭ

    ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿ ಆರಂಭ

    ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ವಿಜಯದಶಮಿಯಂದು ನಡೆಯುವ ಜಂಬೂ ಸವಾರಿ ಮೆರವಣಿಗೆಗೆ ಚಾಲನೆ ಸಿಕ್ಕಿದೆ. 750 ಕೆಜಿ ತೂಕದ ಅಂಬಾರಿಯಲ್ಲಿ ಚಾಮುಂಡಿದೇವಿಯನ್ನು ಹೊತ್ತುಕೊಂಡು ಅರ್ಜುನ ಬನ್ನಿ ಮಂಟಪದತ್ತ ಹೆಜ್ಜೆ ಹಾಕುತ್ತಿದ್ದಾನೆ.

    ಅರಮನೆ ಉತ್ತರ ದ್ವಾರವಾದ ಬಲರಾಮ ದ್ವಾರದಲ್ಲಿ ಮಧ್ಯಾಹ್ನ 2.09ಕ್ಕೆ ಶುಭ ಮಕರ ಲಗ್ನದಲ್ಲಿ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿ ಸಂಜೆ 4.17ರ ಶುಭ ಕುಂಬ ಲಗ್ನದಲ್ಲಿ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಜಂಬೂ ಸವಾರಿ ಮೆರವಣಿಗೆಗೆ ಸಿಎಂ ಯಡಿಯೂರಪ್ಪ ಚಾಲನೆ ನೀಡಿದರು.

    ಜಂಬೂ ಸವಾರಿಯಲ್ಲಿ 8ನೇ ಬಾರಿಗೆ ಅರ್ಜುನ 750 ಕೆಜಿ ಚಿನ್ನದ ಅಂಬಾರಿಯಲ್ಲಿ ಪ್ರತಿಷ್ಠಾಪಿಸಿರುವ ನಾಡದೇವತೆ ಚಾಮುಂಡೇಶ್ವರಿಯನ್ನು ಹೊತ್ತು ರಾಜ ಗಾಂಭೀರ್ಯದಿಂದ ಸಾಗುತ್ತಿದ್ದಾನೆ. ಈ ಜಂಬೂಸವಾರಿಯಲ್ಲಿ 39 ಸ್ತಬ್ಧ ಚಿತ್ರಗಳು, ವಿವಿಧ ಜಾನಪದ ಕಲಾತಂಡಗಳು, 100ಕ್ಕೂ ಹೆಚ್ಚು ಕಲಾ ತಂಡಗಳು, ಉತ್ತರ ಭಾರತದ ವಿವಿಧ ರಾಜ್ಯಗಳ 5 ಕಲಾ ತಂಡ, 1,675 ಕಲಾವಿದರು ಸೇರಿದಂತೆ ಒಟ್ಟು 2 ಸಾವಿರ ಮಂದಿ ಭಾಗಿಯಾಗಿದ್ದಾರೆ.

    ಸಂಜೆ 4.30ಕ್ಕೆ ಹೊರಟ ಅಂಬಾರಿ ಸಂಜೆ 7 ಗಂಟೆಗೆ ಬನ್ನಿ ಮಂಟಪ ತಲುಪುತ್ತದೆ. ಇತ್ತ ರಾತ್ರಿ 7.30ಕ್ಕೆ ಬನ್ನಿಮಂಟಪದಲ್ಲಿ ಪಂಜಿನ ಕವಾಯತು ಆರಂಭವಾಗುತ್ತದೆ. ನೂರಾರು ಮಂದಿ ಪಂಜನ್ನು ಹಿಡಿದು ಸಾಹಸ ಪ್ರದರ್ಶಿಸುತ್ತಾರೆ. ಈ ಪಂಜಿನ ಕವಾಯತಿನ ಬಳಿಕ ರಾತ್ರಿ 10 ಗಂಟೆಗೆ ಪಟಾಕಿ ಸಿಡಿಸೋ ಮೂಲಕ ದಸರಾಕ್ಕೆ ತೆರೆ ಬೀಳುತ್ತದೆ.