Tag: ವಿಜಯ ಪ್ರಸಾದ್

  • ಸ್ಕ್ರಿಪ್ಟ್ ಬರೆಯುವಾಗ ರಪ್ ಅಂತ ರಮ್ಯಾ ಪಾಸಾದ್ರು: ನಿರ್ದೇಶಕ ವಿಜಯ ಪ್ರಸಾದ್

    ಸ್ಕ್ರಿಪ್ಟ್ ಬರೆಯುವಾಗ ರಪ್ ಅಂತ ರಮ್ಯಾ ಪಾಸಾದ್ರು: ನಿರ್ದೇಶಕ ವಿಜಯ ಪ್ರಸಾದ್

    ಲೂಸ್ ಮಾದ ಯೋಗಿ (Loose Mada Yogi) ಮತ್ತು ಮೋಹಕ ತಾರೆ ರಮ್ಯಾ (Ramya) ಕಾಂಬಿನೇಷನ್ ನಲ್ಲಿ ಮೂಡಿ ಬಂದಿದ್ದ ‘ಸಿದ್ಲಿಂಗು’ (Sidlingu 2) ಸಿನಿಮಾ ನಾನಾ ಕಾರಣಗಳಿಂದ ಅಚ್ಚರಿ ಮೂಡಿಸಿತ್ತು. ಯೋಗಿ ಜೊತೆ ರಮ್ಯಾ ಪಾತ್ರ ಮಾಡುತ್ತಿದ್ದಾರೆ ಎನ್ನುವುದೇ ಆ ಮಟ್ಟಿಗೆ ದೊಡ್ಡ ಸುದ್ದಿ. ರಮ್ಯಾ ಜೊತೆ ಸಿನಿಮಾ ಮಾಡಬೇಕು ಎನ್ನುವುದು ಯೋಗಿ ಕನಸಾಗಿತ್ತು. ಜೊತೆಗೆ ನಿರ್ದೇಶಕ ವಿಜಯ ಪ್ರಸಾದ್ (Vijay Prasad) ಅವರ ಜಾನರ್ ಚಿತ್ರದಲ್ಲಿ ಮೋಹಕ ತಾರೆ ಪಾತ್ರವಾಗಲಿದ್ದಾರಾ ಎನ್ನುವುದು ಇನ್ನೂ ಅಚ್ಚರಿ.

    ಈ ಎಲ್ಲ ಅಚ್ಚರಿಗಳ ಮಧ್ಯ ರಮ್ಯಾ ಪಾತ್ರ ಮಾಡಿದರು. ಅದೂ ಮಂಗಳಾ ಟೀಚರ್ ಪಾತ್ರ. ನಾಯಕ ಕಾರು ಚಾಲಕ. ನಾಯಕಿ ಟೀಚರ್ ಈ ಕಾಂಬಿನೇಷನ್ ಕುತೂಹಲ ಮೂಡಿಸಿತ್ತು. ರಮ್ಯಾ ಈ ಸಿನಿಮಾದಲ್ಲಿ ಡಬಲ್ ಮೀನಿಂಗ್ ಡೈಲಾಗ್ ಕೂಡ ಹೊಡೆದರು. ಸಿನಿಮಾ ಸೂಪರ್ ಹಿಟ್ ಆಗಿತ್ತು. ಆದರೆ, ಸಿನಿಮಾ ಕೊನೆಯಲ್ಲಿ ರಮ್ಯಾ ಪಾತ್ರ ದುರಂತ ಅಂತ್ಯ ಕಾಣುತ್ತದೆ. ಅದು ಬೇಸರದ ಸಂಗತಿಯಾಗಿತ್ತು.

    ಈಗ ಆ ಕಥೆಯ ಮುಂದುವರಿಕೆಯಾಗಿ ‘ಸಿದ್ಲಿಂಗು 2’ ಸಿನಿಮಾ ಮೂಡಿ ಬರಲಿದೆ. ನಿರ್ದೇಶಕ ವಿಜಯ್ ಪ್ರಸಾದ್ ಅವರು ಈಗಾಗಲೇ ಚಿತ್ರದಕಥೆ ಬರೆಯಲು ಶುರು ಮಾಡಿದ್ದಾರೆ. ಚಿತ್ರಕಥೆ ಬರೆಯುವಾಗ ಮಂಗಳಾ ಟೀಚರ್ ಪಾತ್ರ ರಪ್ ಅಂತ ಪಾಸಾಯಿತು ಎಂದು ಅವರು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಮೊದಲ ಭಾಗದಲ್ಲಿ ಮಂಗಳಾ ಟೀಚರ್ ದುರಂತ ಅಂತ್ಯ ಕಂಡರೂ, ಸಿದ್ಲಿಂಗು 2 ನಲ್ಲಿ ಅವರು ಹೇಗೆ ಬರಲಿದ್ದಾರೆ ಎನ್ನುವ ಕುತೂಹಲವನ್ನೂ ಹುಟ್ಟಿಸಿದ್ದಾರೆ.

     

    ಅಂದುಕೊಂಡಂತೆ ನಡೆದರೆ ಅಕ್ಟೋಬರ್ ತಿಂಗಳಿಂದ ಚಿತ್ರೀಕರಣ ಪ್ರಾರಂಭಿಸುವುದಾಗಿ ಅವರು ಹೇಳಿಕೊಂಡಿದ್ದಾರೆ. ಈ ಸಿನಿಮಾದ ಪಾತ್ರಕ್ಕಾಗಿ ಯೋಗಿ ಹಲವು ರೀತಿಯಗಳಲ್ಲಿ ಬದಲಾಗಬೇಕಂತೆ. ಆ ಬದಲಾವಣೆಗೆ ಸಮಯ ಕೊಟ್ಟು, ಶೂಟಿಂಗ್ ಶುರು ಮಾಡುವುದಾಗಿ ವಿಜಯ್ ಪ್ರಸಾದ್ ಮಾಹಿತಿ ಹಂಚಿಕೊಂಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನೀವ್ಯಾರು ಮಕ್ಕಳು ಮಾಡಲ್ವಾ?: ತೋತಾಪುರಿ ಚಿತ್ರದ ಡಬಲ್ ಮೀನಿಂಗ್ ಡೈಲಾಗ್ ಸಮರ್ಥಿಸಿಕೊಂಡ ಜಗ್ಗೇಶ್

    ನೀವ್ಯಾರು ಮಕ್ಕಳು ಮಾಡಲ್ವಾ?: ತೋತಾಪುರಿ ಚಿತ್ರದ ಡಬಲ್ ಮೀನಿಂಗ್ ಡೈಲಾಗ್ ಸಮರ್ಥಿಸಿಕೊಂಡ ಜಗ್ಗೇಶ್

    ನಿನ್ನೆಯಷ್ಟೇ ಜಗ್ಗೇಶ್ ನಟನೆಯ ‘ತೋತಾಪುರಿ’ ಸಿನಿಮಾದ ಟ್ರೈಲರ್ ರಿಲೀಸ್ ಆಗಿದೆ. ಟ್ರೈಲರ್ ತುಂಬಾ ಬರೀ ಡಬಲ್ ಮೀನಿಂಗ್ ಡೈಲಾಗ್ ಗಳೇ ತುಂಬಿಕೊಂಡಿವೆ. ಇಂತಹ ಸಿನಿಮಾವನ್ನು ಕುಟುಂಬ ಸಮೇತ ನೋಡುವುದಕ್ಕೆ ಆಗುತ್ತಾ ಎನ್ನುವ ಮಾತುಗಳು ಕೂಡ ಕೇಳಿ ಬಂದಿದ್ದವು. ನಿರ್ದೇಶಕ ವಿಜಯ್ ಪ್ರಸಾದ್ ಅವರ ಬಹುತೇಕ ಸಿನಿಮಾಗಳ ಡೈಲಾಗ್ ಹಾಗೆಯೇ ಏಕೆ ಎನ್ನುವ ಪ್ರಶ್ನೆಯೂ ಪತ್ರಿಕಾಗೋಷ್ಠಿಯಲ್ಲಿ ತೂರಿ ಬಂತು. ಅದಕ್ಕೆ ಜಗ್ಗೇಶ್ ಮಾರ್ಮಿಕವಾಗಿಯೇ ಸಮರ್ಥನೆ ನೀಡಿರು. ಇದನ್ನೂ ಓದಿ : ಅಪ್ಪ ಸರಿ, ಮಕ್ಕಳು ತಪ್ಪು ಸರಕಾರಕ್ಕೆ ಟಾಂಗ್ ಕೊಟ್ಟ ನಟ ಉಪೇಂದ್ರ

    ತೋತಾಪುರಿ ಒಂದೊಳ್ಳೆ ಸಿನಿಮಾ. ಆ ಡೈಲಾಗ್ ಕೇಳಿದಾಗ ಸಹಜವಾಗಿ ಡಬಲ್ ಮೀನಿಂಗ್ ಅನಿಸತ್ತೆ. ನಾವ್ಯಾರು ಆ ರೀತಿ ಮಾತೇ ಆಡಲ್ಲವಾ? ಮಾಯಮಂತ್ರದಿಂದ ಹೆಂಡತಿ ನೋಡಿದ್ರೆ ಮಕ್ಕಳ ಆಗತ್ತಾ? ನಾವ್ಯಾರು ಮಕ್ಕಳ ಮಾಡಲ್ವಾ?’ ಎಂದು ಡಬಲ್ ಮೀನಿಂಗ್ ನಲ್ಲೇ ಉತ್ತರಿಸಿದರು ಜಗ್ಗೇಶ್. ಈ ಸಿನಿಮಾದಲ್ಲಿ ಅದ್ಭುತವಾದ ಸಂದೇಶವಿದೆ. ಅದನ್ನು ಮನರಂಜನೆಯ ಮೂಲಕ ಹೇಳುವ ಪ್ರಯತ್ನ ಮಾಡಿದ್ದಾರೆ ಎಂದರು ಜಗ್ಗೇಶ್. ಇದನ್ನೂ ಓದಿ : ಕನ್ನಡ ಚಿತ್ರರಂಗವನ್ನು ರಾಷ್ಟ್ರಮಟ್ಟಕ್ಕೆ ತಗೆದುಕೊಂಡು ಹೋದ ಮೊದಲಿಗರಾರು? ಹೀಗಿದೆ ನಟ ಜಗ್ಗೇಶ್ ಉತ್ತರ

    ವಿಜಯ್ ಪ್ರಸಾದ್ ಮತ್ತು ಜಗ್ಗೇಶ್ ಕಾಂಬಿನೇಷನ್ ನ ಎರಡನೇ ಸಿನಿಮಾವಿದು. ಈ ಹಿಂದೆ ರಿಲೀಸ್ ಆಗಿದ್ದ ನೀರ್ ದೋಸೆ ಕೂಡ ಸಿಕ್ಕಾಪಟ್ಟೆ ಹಿಟ್ ಆಗಿತ್ತು. ಈ ಸಿನಿಮಾ ಕೂಡ ನಿರೀಕ್ಷೆ ಮೂಡಿಸಿದೆ. ಮತ್ತೇ ಜಗ್ಗೇಶ್ ಮತ್ತು ವಿಜಯ್ ಪ್ರಸಾದ್ ಪ್ರೇಕ್ಷಕರಿಗೆ ಒಂದೊಳ್ಳೆ ಸಿನಿಮಾ ಕೊಡಲಿದ್ದಾರೆ ಎನ್ನುವ ಸೂಚನೆ ಕೊಡುವಂತಿದೆ ರಿಲೀಸ್ ಆಗಿರುವ ಟ್ರೈಲರ್. ಇದನ್ನೂ ಓದಿ :  ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ನಿರ್ದೇಶಕನ ವಿರುದ್ಧ ಕಿಡಿಕಾರಿದ ಸಿಖ್ ಸಂಘ

    ಹಿಂದೂ ಮುಸ್ಲಿಂ ಕಥೆಯನ್ನು ಸಿನಿಮಾಗಾಗಿ ನಿರ್ದೇಶಕರು ಆಯ್ಕೆ ಮಾಡಿಕೊಂಡಿದ್ದು, ಭಾವಕ್ಯತೆಗೆ ಹೇಳಿ ಮಾಡಿಸಿದ ಸಿನಿಮಾ ಎನ್ನಲಾಗುತ್ತಿದೆ. ಎಲ್ಲಿಯೂ ಕೋಮಗಲಭೆ ಆಗುವಂತಹ ಒಂದೇ ಒಂದು ದೃಶ್ಯವನ್ನೂ ಸಿನಿಮಾದಲ್ಲಿ ಬಳಸಿಲ್ಲವಂತೆ. ಇಡೀ ಕುಟುಂಬ ಸಮೇತ ನೋಡುವಂತಹ ಸಿನಿಮಾ ಇದಾಗಿದೆ ಎನ್ನುತ್ತಾರೆ ನಿರ್ದೇಶಕರು. ಇದನ್ನೂ ಓದಿ : ನಟಿ ಮಂದನಾ ಕರೀಮಿಗೆ ಮೋಸ ಮಾಡಿದ್ರಾ ನಿರ್ದೇಶಕ ಅನುರಾಗ್ ಕಶ್ಯಪ್?

    ಕೆ.ಎ.ಸುರೇಶ್ ನಿರ್ಮಾಣದಲ್ಲಿ ಈ ಸಿನಿಮಾ ಮೂಡಿ ಬಂದಿದ್ದು, ಜಗ್ಗೇಶ್ ಜತೆ ಡಾಲಿ ಧನಂಜಯ್, ಹೇಮಾ ದತ್ತ್, ಅದಿತಿ ಪ್ರಭುದೇವ್ ಸೇರಿದಂತೆ ಹಲವು ಕಲಾವಿದರು ಸಿನಿಮಾದಲ್ಲಿದ್ದಾರೆ. ಈ ಸಿನಿಮಾ ಎರಡು ಪಾರ್ಟ್ ನಲ್ಲಿ ಮೂಡಿ ಬಂದಿದೆ. ಮೊದಲನೇ ಭಾಗ ಅತೀ ಶೀಘ್ರದಲ್ಲೇ ರಿಲೀಸ್ ಮಾಡಲಿದ್ದಾರಂತೆ ನಿರ್ಮಾಪಕರು.

  • ಭಾರೀ ಮೊತ್ತಕ್ಕೆ ಸೇಲ್ ಆಯ್ತು ನೀನಾಸಂ ಸತೀಶ್ ನಟನೆಯ ‘ಪೆಟ್ರೊಮ್ಯಾಕ್ಸ್’

    ಭಾರೀ ಮೊತ್ತಕ್ಕೆ ಸೇಲ್ ಆಯ್ತು ನೀನಾಸಂ ಸತೀಶ್ ನಟನೆಯ ‘ಪೆಟ್ರೊಮ್ಯಾಕ್ಸ್’

    ಸ್ಟಾರ್ ನಟ ನೀನಾಸಂ ಸತೀಶ್ ಮತ್ತು ನೀರ್ ದೋಸೆ ಖ್ಯಾತಿಯ ನಿರ್ದೇಶಕ ವಿಜಯ್ ಪ್ರಸಾದ್ ಕಾಂಬಿನೇಷನ್ ನ ‘ಪೆಟ್ರೊಮ್ಯಾಕ್ಸ್’ ಸಿನಿಮಾದ ಡಿಜಿಟಲ್ ರೈಟ್ಸ್ ಭಾರೀ ಮೊತ್ತಕ್ಕೆ ಸೇಲ್ ಆಗಿದೆ ಎನ್ನಲಾಗುತ್ತಿದೆ. ಕನ್ನಡದ ಕಲರ್ಸ್ ವಾಹಿನಿಯು ಟಿವಿ ಮತ್ತು ಡಿಜಿಟಲ್ ರೈಟ್ಸ್ ಅನ್ನು ದಾಖಲೆಯ ಮೊತ್ತ ಕೊಟ್ಟು ಪಡೆದಿದೆ ಎನ್ನುತ್ತಿವೆ ಗಾಂಧಿನಗರದ ಮೂಲಗಳು. ಇದನ್ನೂ ಓದಿ : ಕೆಜಿಎಫ್ 2 : ಕಿಚ್ಚ ಸುದೀಪ್ ಮತ್ತು ಯಶ್ ಮಧ್ಯೆ ತಂದಿಡುತ್ತಿದೆ ವೈರಲ್ ವಿಡಿಯೋ

    ಈ ಕುರಿತು ನೀನಾಸಂ ಸತೀಶ್ ಅವರು ಸೋಷಿಯಲ್ ಮೀಡಿಯಾದಲ್ಲಿ ‘ಟಿವಿ ಮತ್ತು ಡಿಜಿಟಲ್ ರೈಟ್ಸ್’ ಅನ್ನು ಕನ್ನಡ ಕಲರ್ಸ್ ವಾಹಿನಿಗೆ ಸೇಲ್ ಮಾಡಿದ್ದೇವೆ ಎಂದು ಪೋಸ್ಟರ್ ಹಾಕಿದರೂ, ಎಷ್ಟು ಮೊತ್ತ ಎಂದು ಅವರು ಬಹಿರಂಗ ಪಡಿಸಿಲ್ಲ. ಈ ಹಿಂದೆ ಇದೇ ವಾಹಿನಿಯಲ್ಲಿ ನೀನಾಸಂ ಸತೀಶ್ ಅವರ ಚಿತ್ರಗಳು ಭಾರೀ ಟಿ.ಆರ್.ಪಿ ತಂದುಕೊಟ್ಟಿವೆ. ಅಲ್ಲದೇ, ನೂರಾರು ಬಾರಿ ಪ್ರದರ್ಶನ ಕಂಡಿವೆ. ಹಬ್ಬ ಹರಿದಿನಗಳಲ್ಲಂತೂ ಸತೀಶ್ ಅವರ ಚಿತ್ರಗಳನ್ನೇ ವಾಹಿನಿಯು ಹೆಚ್ಚಾಗಿ ಪ್ರದರ್ಶನ ಮಾಡುತ್ತಿತ್ತು. ಹೀಗಾಗಿ ಪೆಟ್ರೊಮ್ಯಾಕ್ಸ್ ಅಧಿಕ ಮೊತ್ತ ಕೊಟ್ಟೆ ತಗೆದುಕೊಂಡಿದೆ ಎನ್ನುತ್ತಿವೆ ಮೂಲಗಳು. ಇದನ್ನೂ ಓದಿ: ತಾಯಿಯಾಗುತ್ತಿದ್ದಾರೆ ಚಂದ್ರನ ರಾಣಿ ಶ್ರಿಯಾ ಸರನ್ 

    ಪೆಟ್ರೊಮ್ಯಾಕ್ಸ್ ಇದೊಂದು ವಿಭಿನ್ನ ಕಥಾ ಹಂದರ ಚಿತ್ರ. ಸತೀಶ್ ಮತ್ತು ಹರಿಪ್ರಿಯಾ ಇದೇ ಮೊದಲ ಬಾರಿಗೆ ತೆರೆ ಹಂಚಿಕೊಂಡಿದ್ದಾರೆ. ಕಾರುಣ್ಯ ರಾಮ್ ಸೇರಿದಂತೆ ಹಲವು ಕಲಾವಿದರು ತಾರಾ ಬಳಗದಲ್ಲಿದ್ದಾರೆ. ಈಗಾಗಲೇ ಬಹುತೇಕ ಶೂಟಿಂಗ್ ಕೂಡ ಮುಗಿದಿದ್ದು, ಕೆಲವೇ ತಿಂಗಳುಗಳಲ್ಲಿ ರಿಲೀಸ್ಗೂ ಪ್ಲ್ಯಾನ್ ಮಾಡಲಾಗಿದೆಯಂತೆ. ಇದನ್ನೂ ಓದಿ : ಕೆಜಿಎಫ್-2 ಸಿನಿಮಾ ವೀಕ್ಷಣೆ ವೇಳೆ ಹಾರಿದ ಗುಂಡು- ಯುವಕನ ಹೊಟ್ಟೆಗೆ ಗಾಯ

    ಈಗಾಗಲೇ ರಿಲೀಸ್ ಆಗಿರುವ ಚಿತ್ರದ ಟ್ರೈಲರ್ ಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿತ್ತು. ಸತೀಶ್ ಅವರ ಡೈಲಾಗ್‍ ಕಚಗುಳಿಗೆ ಅಭಿಮಾನಿಗಳು ಫಿದಾ ಆಗಿದ್ದರು. ನಿರ್ದೇಶಕ ವಿಜಯ್ ಪ್ರಸಾದ್ ಅವರ ಶೈಲಿ ಮತ್ತು ಸತೀಶ್ ಅವರ ನಟನೆ ಅಭಿಮಾನಿಗಳಿಗೆ ಭಾರೀ ಮಜಾ ಕೊಡಲಿದೆ.

  • ಬಾಗ್ಲು ತೆಗಿ ಮೇರಿ ಜಾನ್ ಹಾಡಿಗೆ ಗಲ್ಫ್ ಕನ್ನಡಿಗರ ಬಹುಪರಾಕ್: ಹಾಡೂ ಬೊಂಬಾಟ್ ಹಿಟ್

    ಬಾಗ್ಲು ತೆಗಿ ಮೇರಿ ಜಾನ್ ಹಾಡಿಗೆ ಗಲ್ಫ್ ಕನ್ನಡಿಗರ ಬಹುಪರಾಕ್: ಹಾಡೂ ಬೊಂಬಾಟ್ ಹಿಟ್

    ರೀಲ್ಸ್ ಮತ್ತು ಸೋಷಿಯಲ್ ಮೀಡಿಯಾಗಳಲ್ಲಿ ‘ಬಾಗ್ಲು ತೆಗಿ ಮೇರಿ ಜಾನ್’ ಹಾಡಿನದ್ದೇ ಸದ್ದು. ನವರಸ ನಾಯಕ ಜಗ್ಗೇಶ್ ನಟನೆಯ ತೋತಾಪುರಿ ಚಿತ್ರದ ಈ ಹಾಡಿಗೆ ದೇಶ-ವಿದೇಶದಿಂದ ಮೆಚ್ಚುಗೆಯ ಮಹಾಪೂರವೇ ಹರಿದುಬರುತ್ತಿದೆ. ‘ಬಾಗ್ಲು ತೆಗಿ ಮೇರಿ ಜಾನ್’ ಹಾಡು ಬಿಡುಗಡೆಯಾದಾಗಿನಿಂದಲೂ ಸಖತ್ ಸದ್ದು ಮಾಡುತ್ತಿದೆ. ದೇಶ ಮಾತ್ರವಲ್ಲದೇ ವಿದೇಶದಿಂದಲೂ ಈ ಹಾಡನ್ನು ಮೆಚ್ಚಿಕೊಂಡಿದ್ದು ‘ತೋತಾಪುರಿ’ ಹೆಚ್ಚುಗಾರಿಕೆ. ಇದನ್ನೂ ಓದಿ : ಹಾಲಿವುಡ್ ಗೆ ಹಾರಿದ ಸುದೀಪ್ ನಟನೆಯ ವಿಕ್ರಾಂತ್ ರೋಣ

    `ಬಾಗ್ಲು ತೆಗಿ ಮೇರಿ ಜಾನ್‌’ ಹಾಡು 100 ಮಿಲಿಯನ್‌ಗೂ ಅಧಿಕ ಹಿಟ್ಸ್ ದಾಖಲಿಸಿ ಮುನ್ನುಗ್ಗುತ್ತಿದೆ.  ಈ ಹಾಡಿಗೆ ಪ್ರಸ್ತುತ ಚಾನಲ್‌ವೊಂದರಲ್ಲೇ 15 ಮಿಲಿಯನ್‌ಗೂ ಅಧಿಕ ಹಿಟ್ಸ್ ದಾಖಲಾಗಿದೆ. ಅಲ್ಲದೇ ಸಾಮಾಜಿಕ ಜಾಲತಾಣದಲ್ಲಿ 85 ಮಿಲಿಯನ್‌ಗೂ ಅಧಿಕ ಹಿಟ್ಸ್ ದಾಖಲಾಗಿರುವುದು `ತೋತಾಪುರಿ’ ಹೆಚ್ಚುಗಾರಿಕೆ. ಇತ್ತೀಚೆಗೆ ಬಂದ ಹಾಡುಗಳ ಪೈಕಿ ದೊಡ್ಡ ಮಟ್ಟದಲ್ಲಿ ಜನರನ್ನು ಸೆಳೆದ ಹಾಡು ಇದಾಗಿದ್ದು, ದಿನದಿಂದ ದಿನಕ್ಕೆ ಕ್ರೇಜ್‌ ಹೆಚ್ಚಿಸುತ್ತಲೇ ಇದೆ. ಯೂ ಟ್ಯೂಬ್‌ ರೀಲ್ಸ್, ಶಾರ್ಟ್ಸ್ ಹಾಗೂ ಸ್ಟೋರಿಸ್‌ಗಳಲ್ಲಿ ಈ ಹಾಡಿನ ತುಣುಕಿಗೆ ಡಾನ್ಸ್ ಮಾಡಿ ಅಪ್ಲೋಡ್‌ ಮಾಡಿರುವುದು ವಿಶೇಷ. ವಿದೇಶದಲ್ಲಿ ನೆಲೆಸಿರುವ ಕನ್ನಡಿಗರಿಗೂ ಈ ಹಾಡು ಇಷ್ಟವಾಗಿರುವುದು `ತೋತಾಪುರಿ’ ಹಾಡಿನ ವಿಶೇಷ.

    ತೋತಾಪುರಿ ಚಿತ್ರದ ಹಾಡು, ಮೇಕಿಂಗ್ ಹಾಗೂ ತಂಡದ ಬಗ್ಗೆ ಸಾಕಷ್ಟು ವಿಷಯ ಹಂಚಿಕೊಂಡಿರುವ ಜಗ್ಗೇಶ್, ಈ ಸಿನಿಮಾಕ್ಕೆ ಬೆಂಬಲ ನೀಡುವಂತೆ ಮನವಿ ಮಾಡಿಕೊಂಡರು. ಇನ್ನು ‘ಬಾಗ್ಲು ತೆಗಿ ಮೇರಿ ಜಾನ್’ಗೆ ದುಬೈ ಕನ್ನಡಿಗರಿಂದ ಪ್ರಶಂಸೆಗಳ ಮಹಾಪೂರವೇ ಹರಿದುಬಂದಿದ್ದು ಈ ಕಾರ್ಯಕ್ರಮದ ವಿಶೇಷ. ಇದನ್ನೂ ಓದಿ : ಸ್ಸಾರಿ… ಥಿಯೇಟರ್ ಗೆ ಬರ್ತಿಲ್ಲ ತಮಿಳಿನ ಧನುಷ್ ನಟನೆಯ ಮಾರನ್ ಸಿನಿಮಾ

    ಇತ್ತೀಚೆಗಷ್ಟೇ ಅಮೆರಿಕಾ ನೆರೆಹೊರೆಯ ರಾಷ್ಟ್ರದ ಅನಿವಾಸಿ ಕನ್ನಡಿಗರೊಂದಿಗೆ ವರ್ಚುವಲ್ ಮಾತುಕತೆ ನಡೆಸಿದ್ದ ಜಗ್ಗೇಶ್, ಇದೀಗ ಗಲ್ಫ್ ಕನ್ನಡಿಗರೊಂದಿಗೂ ‘ತೋತಾಪುರಿ’ ಬಗ್ಗೆ ವಿಶೇಷವಾಗಿ ವಿಷಯ ಹಂಚಿಕೊಂಡಿದ್ದಾರೆ. ಇದನ್ನೂ ಓದಿ:  ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾದ ಅಪ್ಡೇಟ್ : ಯಾವಾಗ, ಏನು ಅಂತ ನೋಡ್ಕೊಂಡ್ ಬಿಡಿ

    ಈಗಾಗಲೇ ಮಿಲಿಯನ್’ಗಟ್ಟಲೆ ಹಿಟ್ಸ್ ದಾಖಲಿಸಿರುವ ಈ ಚಿತ್ರದ ಹಾಡಿಗೆ ಎಲ್ಲರೂ ತಲೆದೂಗಿಸುತ್ತಿದ್ದಾರೆ. ‘ನೀರ್ ದೋಸೆ’ ಖ್ಯಾತಿಯ ವಿಜಯಪ್ರಸಾದ್ ನಿರ್ದೇಶಿಸಿರುವ ತೋತಾಪುರಿ ಚಿತ್ರಕ್ಕೆ ಅನೂಪ್ ಸೀಳಿನ್ ಸಂಗೀತ ಸಂಯೋಜಿಸಿದ್ದಾರೆ. ಮೋನಿಫ್ಲಿಕ್ಸ್ ಸ್ಟುಡಿಯೋಸ್ ಬ್ಯಾನರ್ ಅಡಿಯಲ್ಲಿ ಕೆ.ಎ.ಸುರೇಶ್ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಎರಡು ಭಾಗಗಳಲ್ಲಿ ತೋತಾಪುರಿ ತೆರೆಕಾಣಲಿರುವುದು ವಿಶೇಷ. ಇದನ್ನೂ ಓದಿ : ಖ್ಯಾತ ಗಾಯಕ ಮಿಕಾ ಸಿಂಗ್ ಸ್ವಯಂವರ : ನೀವೂ ಭಾಗಿಯಾಗಬಹುದು

    ಡಾಲಿ ಧನಂಜಯ್, ಸುಮನ್ ರಂಗನಾಥ್, ದತ್ತಣ್ಣ, ಅದಿತಿ ಪ್ರಭುದೇವ, ವೀಣಾ ಸುಂದರ್ ಸೇರಿದಂತೆ ಸಾಕಷ್ಟು ಕಲಾವಿದರು ಈ ಚಿತ್ರದ ತಾರಾಗಣದಲ್ಲಿದ್ದಾರೆ.

  • 2016ರಲ್ಲಿ ವಿಜಯ ಪ್ರಸಾದ್, ಸತ್ಯಪ್ರಕಾಶ್ ಇಬ್ಬರೇ ಅಚ್ಚ ಕನ್ನಡದಲ್ಲಿ ಸ್ವಚ್ಛ ಸಿನಿಮಾ ಮಾಡಿದ್ದಾರೆ: ಅನುಪ್ ಸಿಳೀನ್

    2016ರಲ್ಲಿ ವಿಜಯ ಪ್ರಸಾದ್, ಸತ್ಯಪ್ರಕಾಶ್ ಇಬ್ಬರೇ ಅಚ್ಚ ಕನ್ನಡದಲ್ಲಿ ಸ್ವಚ್ಛ ಸಿನಿಮಾ ಮಾಡಿದ್ದಾರೆ: ಅನುಪ್ ಸಿಳೀನ್

    ಬೆಂಗಳೂರು: 2016ರಲ್ಲಿ ನನ್ನ ಪ್ರಕಾರ ಇಬ್ಬರೇ ನಿರ್ದೇಶಕರು ಅಚ್ಚ ಕನ್ನಡದ ಸ್ವಚ್ಛ ಸಿನಿಮಾ ಮಾಡಿರುವರು. ಇವರದೇ ಹೊಸತನ ಮತ್ತು ಎಲ್ಲೂ ನಕಲು ಮಾಡಿಲ್ಲ ಎಂದು ಖ್ಯಾತ ಸಂಗೀತ ನಿರ್ದೇಶಕ ಅನುಪ್ ಸಿಳೀನ್ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

    ಫೇಸ್‍ಬುಕ್‍ನಲ್ಲಿ ಸ್ಟೇಟಸ್ ಅಪ್‍ಡೇಟ್ ಮಾಡಿಕೊಂಡಿರುವ ಅವರು, ನಿರ್‍ದೋಸೆಯ ವಿಜಯ ಪ್ರಸಾದ್ ಮತ್ತು ರಾಮಾ ರಾಮಾ ರೇಯ ಡಾ ಸತ್ಯಪ್ರಕಾಶ್ ಅಚ್ಚ ಕನ್ನಡದಲ್ಲಿ ಸ್ವಚ್ಛ ಸಿನಿಮಾವನ್ನು ಮಾಡಿದ್ದಾರೆ. ಒಂದೊಂದು ದೃಶ್ಯದಲ್ಲೂ ಸ್ವಂತಿಕೆಯಿದೆ. ಎಲ್ಲಾ ತಂತ್ರಜ್ಞರಿಂದಲೂ ಅದೇ ರೀತಿ ಕೆಲಸ ಮಾಡಿಸಿದ್ದಾರೆ. ಇವರು ಮಾತ್ರ ನನಗೆ ಪರಿಪೂರ್ಣ ಫಿಲ್ಮ್ ಮೇಕರ್ಸ್ ಅನ್ನಿಸೋದು. ಯಾಕೆಂದರೆ ಸಿನಿಮಾದ ಎಲ್ಲಾ ವಿಭಾಗದಲ್ಲೂ ಹಿಡಿತ ಇಟ್ಟುಕೊಂಡು ಎಲ್ಲೂ ಅವರತನ ಬಿಟ್ಟುಕೊಡದೆ ಕಳ್ಳತನ ಮಾಡದೆ ಒಂದು ಅದ್ಭುತವಾದ ಸಿನಿಮಾ ಮಾಡಿಹರು ಎಂದು ಅನುಪ್ ಸಿಳೀನ್ ಬರೆದಿದ್ದಾರೆ.

    ಇವರ ಈ ಅಭಿಪ್ರಾಯಕ್ಕೆ ಬಹಳಷ್ಟು ಜನರಿಂದ ಮೆಚ್ಚುಗೆ ವ್ಯಕ್ತವಾಗಿದೆ. ನೇರವಾಗಿ ಹೇಳಿದ್ದೀರಿ ಎಂದು ಜನರು ಅಭಿನಂದಿಸಿದ್ದಾರೆ.

    ನಾವು ವಿದ್ಯಾರ್ಥಿಗಳು: ಈ ಪೋಸ್ಟ್ ಗೆ ನಿರ್‍ದೋಸೆಯ ಚಿತ್ರದ ನಿರ್ದೇಶಕ ವಿಜಯ ಪ್ರಸಾದ್ ಅವರು ಪ್ರತಿಕ್ರಿಯಿಸಿದ್ದಾರೆ. “ಅನೂಪನ ಪ್ರೀತಿ ಅಭಿಮಾನ ಮತ್ತು ನೇರ ನುಡಿಗಳನ್ನ ನಾನು ನೆನ್ನೆ ಮೊನ್ನೆಯಿಂದ ನೋಡಿದ್ದಲ್ಲ. ಬಹು ಕಾಲದ ಒಡನಾಟದ ಪ್ರಯಾಣ ನಮ್ಮಿಬ್ಬರದು. ಆತನ ಅಭಿಪ್ರಾಯಕ್ಕೆ ಈಗ ನಾನು ಏನೇ ಪ್ರತಿಕ್ರಿಯೆಸಿದರೂ ನಮ್ಮ ಚಿತ್ರದ ಬಗ್ಗೆ ನಾವೇ ಮತ್ತು ನಮ್ಮನ್ನು ನಾವೇ ಬೆಂಬಲಿಸಿಕೊಂಡಿದ್ದಾರೆ ಎಂದಾದರೂ ಸರಿಯೇ ಇಲ್ಲಿ ನನ್ನ ಅಭಿಪ್ರಾಯವನ್ನ ದಾಖಲು ಮಾಡಲೇಬೇಕಾಗಿದೆ” ಎಂದು ಬರೆದಿದ್ದಾರೆ.

    “ಅನೂಪ ಭ್ರಮೆಯಿಂದ ಕೂಡಿದವನಲ್ಲ. ಹಾಗೆ ಮತ್ತೊಬ್ಬರ ಚಿತ್ರ ಚೆನ್ನಾಗಿದೆ ಅಥವಾ ಚೆನ್ನಾಗಿಲ್ಲವೆಂಬೂದು ಅಲ್ಲ. ಇಲ್ಲಿ ಮೂಲ ಪ್ರಸ್ತಾವನೆ ಸ್ವಂತಿಕೆಯ ಬಗ್ಗೆ. ನಿಜಕ್ಕೂ ರಾಮ ರಾಮಾ ರೇ ನನಗೆ ಬಹಳವೇ ಇಷ್ಟವಾಯಿತು. ಮೂರು ಬಾರಿ ನೋಡಿದ್ದೇನೆ. ಇಡೀ ಚಿತ್ರವೇ ಸ್ವಂತಿಕೆಯ ಅಡಿಪಾಯದಲ್ಲಿ ಕಟ್ಟಲ್ಪಟ್ಟಿದೆ. ನಿಜವಾಗಿಯೂ ಆ ಚಿತ್ರಕ್ಕೆ ಮತ್ತು ಇಡೀ ಚಿತ್ರತಂಡದವರಿಗೆ ಮಾರು ಹೋಗಿದ್ದೇನೆ” ಎಂದು ಹೇಳಿದ್ದಾರೆ.

    “ಇದರ ಜೊತೆಗೆ ಆತ ಹೇಳಿರುವುದು 2016ರ ಸಿನಿಮಾಗಳು. ತಿಥಿ ಬಹುಶಃ 2015 ಕ್ಕೆ ಸೇರಬಹುದೆಂದುಕೊಂಡಿದ್ದೇನೆ. ತಿಥಿ ಚಿತ್ರವೂ ನನಗೆ ತುಂಬಾ ಆಪ್ತವೆನಿಸಿತು. ಇದನ್ನೂ ಮೂರ್ನಾಲ್ಕು ಬಾರಿ ನೋಡಿದ್ದೇನೆ. ನಿಜಕ್ಕೂ ತಿಥಿ ವಾಸ್ತವತೆಯ ದೃಶ್ಯಕಾವ್ಯ. ಇನ್ನು ನೀರ್ ದೋಸೆ ಬಗ್ಗೆ ಪ್ರಸ್ತಾವಿಸುವುದು ಬೇಡ. ನಿಜಕ್ಕೂ ಸ್ವಂತಿಕೆ ಇದೆಯೋ ಇಲ್ಲವೋ ಎಂಬುದನ್ನ ಪ್ರಾಮಾಣಿಕವಾಗಿ ಅವರವರಲ್ಲೇ ಕೇಳಿಕೊಳ್ಳಲಿ. ಸ್ವಂತಿಕೆಯ ಯಾವ ಸಿನಿಮಾವೇ ಆಗಲಿ ಹಾಗೆ ಯಾರೇ ಆಗಲಿ, ನಾವು ಅವರ ವಿದ್ಯಾರ್ಥಿಗಳು…! ಇದಕ್ಕಿಂತ ಬೇಕೇ? ಚರ್ಚೆಗಳು ಮುಕ್ತವಾಗಿ ಮತ್ತು ಆರೋಗ್ಯಕರವಾಗಿ ನಡೆಯಲಿ. ಕ್ಷಮೆಯೊಂದಿಗೆ ಎಲ್ಲರಿಗೂ ನಮಸ್ಕಾರಗಳು” ಎಂದಿದ್ದಾರೆ.

    ಅನುಪ್ ಸೀಳಿನ್ ಅವರು ತನ್ನ ಪಟ್ಟಿಯಲ್ಲಿ ನೀರ್‍ದೋಸೆಯನ್ನು ಸೇರಿಸಿದ್ದಕ್ಕೆ ಒಬ್ಬರು ಆಕ್ಷೇಪ ವ್ಯಕ್ತಪಡಿಸಿದ್ದಕ್ಕೆ, “ನಾವೇ ಹೇಳಿದ್ದೇವೆ ನಮ್ಮ ಸಿನಿಮಾ ಅದ್ಭುತ ಸಿನಿಮಾವೂ ಅಲ್ಲ ಯಾವುದೇ ಟಾಪ್ ಲಿಸ್ಟಿಗೂ ಸೇರದ ಸಿನಿಮಾಂತ. ಇಲ್ಲಿ ವಿಚಾರ ಸ್ವಂತಿಕೆಯದು. ಅದು ಅರಿವಾದರೇ ಸಾಕು ಅಷ್ಟೇ ….ಸ್ವಂತಿಕೆ ಬಂದರೇ ಆಯಾಮಗಳೇ ಬೇರೆ, ವಿಚಾರವೇ ಬೇರೆ” ಎಂದು ವಿಜಯ ಪ್ರಸಾದ್ ಪ್ರತಿಕ್ರಿಯಿಸಿದ್ದಾರೆ.

    ವಿಜಯ ಪ್ರಸಾದ್ ನಿರ್ದೇಶನದ ನೀರ್‍ದೋಸೆ ಸೆಪ್ಟೆಂಬರ್ 2ರಂದು ಬಿಡುಗಡೆಯಾಗಿತ್ತು. ಅನುಪ್ ಸೀಳಿನ್ ಸಂಗೀತವಿರುವ ಈ ಚಿತ್ರದಲ್ಲಿ ಜಗ್ಗೇಶ್, ದತ್ತಣ್ಣ, ಹರಿಪ್ರಿಯಾ, ಸುಮನ್ ರಂಗನಾಥ್ ಇತರರು ನಟಿಸಿದ್ದರು.

    ಸತ್ಯ ಪ್ರಕಾಶ್ ನಿರ್ದೇಶನದ ‘ರಾಮಾ ರಾಮಾ ರೇ’ ಚಿತ್ರ ಅಕ್ಟೋಬರ್ 21ರಂದು ಬಿಡುಗಡೆಯಾಗಿತ್ತು. ವಾಸುಕಿ ವೈಭವ್ ಸಂಗೀತವಿರುವ ಚಿತ್ರದಲ್ಲಿ ಕೆ.ಜಯರಾಮ್, ನಟರಾಜ್ ಎಸ್.ಭಟ್, ಧರ್ಮಣ್ಣ ಕಡೂರು ಇತರರು ಅಭಿನಯಿಸಿದ್ದರು.