Tag: ವಿಜಯ ರಾಘವೇಂದ್ರ

  • ನಿಮ್ಮ ಜೊತೆ ನಾವಿದ್ದೀನಿ ಅನ್ನೋ ಧೈರ್ಯ ನೀಡೋದು ಮುಖ್ಯ: ವಿಜಯ ರಾಘವೇಂದ್ರ

    ನಿಮ್ಮ ಜೊತೆ ನಾವಿದ್ದೀನಿ ಅನ್ನೋ ಧೈರ್ಯ ನೀಡೋದು ಮುಖ್ಯ: ವಿಜಯ ರಾಘವೇಂದ್ರ

    ದಾವಣಗೆರೆ: ವಿಶ್ವ ವಿರಳ ರೋಗ ದಿನಾಚರಣೆ ಪ್ರಯುಕ್ತ ದಾವಣಗೆರೆಯಲ್ಲಿ ಇಂದು ವಾಕಥಾನ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿರು. ನಗರದ ಹಿಮೊಫಿಲಿಯಾ ಸೊಸೈಟಿ ಹಮ್ಮಿಕೊಂಡಿದ್ದ ಈ ಕಾರ್ಯಕ್ರಮದ ವಾಕಥಾನ್‍ಗೆ ನಟ ವಿಜಯ ರಾಘವೇಂದ್ರ ಚಾಲನೆ ನೀಡಿದ್ದಾರೆ.

    ಬಳಿಕ ಮಾತನಾಡಿದ ನಟ, ಈ ರೀತಿಯ ಕಾರ್ಯಕ್ರಮ ಮಾಡುವುದರಿಂದ ಸಮಾಜದಲ್ಲಿ ಅತಿ ವಿರಳವಾಗಿ ಬರುವಂತಹ ರೋಗಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಆಗುತ್ತದೆ. ಅಲ್ಲದೆ ತಂದೆ-ತಾಯಂದಿರು ಈ ಕಾರ್ಯಕ್ರಮದಿಂದ ತಮ್ಮ ಮಕ್ಕಳ ಆರೋಗ್ಯದ ಬಗ್ಗೆ ಜಾಗ್ರತೆ ವಹಿಸಿ, ಗರ್ಭಿಣಿಯಾದಾಗಲೇ ಮಗುವಿಗೆ ಚಿಕಿತ್ಸೆ ಕೊಡಿಸುವಂತಹ ಕೆಲಸ ಮಾಡಬೇಕು. ಈ ವಾಕಥಾನ್ ನಲ್ಲಿ ಭಾಗವಹಿಸಿದ್ದು ನನಗೆ ಸಂತೋಷವಾಗಿದೆ. ಇಲ್ಲಿ ಕೇವಲ ಕಾರ್ಯಕ್ರಮ ಹಮ್ಮಿಕೊಂಡಿದ್ದು ಮುಖ್ಯವಲ್ಲ. ನಿಮ್ಮ ಜೊತೆ ನಾವು ಇದ್ದೀವಿ ಎನ್ನುವ ಧೈರ್ಯ ನೀಡುತ್ತೇವೆ ಅಲ್ವ ಅದು ಮುಖ್ಯ. ಕಾಯಿಲೆಗೆ ತುತ್ತಾಗಿರುವವರಿಗೆ ನಾವು ಮಾನಸಿಕವಾಗಿ ಧೈರ್ಯ ತುಂಬಬೇಕಿದೆ ಎಂದು ತಿಳಿಸಿದರು.

    ಕಾರ್ಯಕ್ರಮದಲ್ಲಿ 7ಸಾವಿರ ರೋಗಕ್ಕೆ 7 ಸಾವಿರ ಮೀಟರ್ ನಡಿಗೆ ಎನ್ನುವ ಮೂಲಕ ನೂರಾರು ಯುವಕ-ಯುವತಿಯರು ಭಾಗವಹಿಸಿದ್ದರು. ಅರಂಭಿಕವಾಗಿ ವಾರ್ಮಪ್ ಮಾಡಲು ಝುಂಭಾ ಕ್ಲಾಸ್ ನಡೆಸಿದ್ದು, ಡಿಜೆ ಸೌಂಟ್‍ಗೆ ರ್ಯಾಂಪ್ ಮೇಲೆ ಟ್ರೈನರ್ಸ್ ಮಾಡ್ತಾ ಇದ್ದರೆ, ಇತ್ತ ಕೆಳಗೆ ವಯಸ್ಸಾದವರಿಂದ ಹಿಡಿದು ಚಿಕ್ಕ ಮಕ್ಕಳ ತನಕ ಸಾಂಗ್ ಗೆ ಟ್ರೈನರ್ ಮಾಡ್ತಾ ಇರೋ ಹಾಗೇ ಡ್ಯಾನ್ಸ್ ಮಾಡಿದರು.

    ಅಲ್ಲದೆ ನಟ ವಿಜಯ್ ರಾಘವೇಂದ್ರ ಅವರಿಗೆ ಹಿಮೊಫಿಲಿಯಾ ಸೊಸೈಟಿ ವತಿಯಿಂದ ಸನ್ಮಾನ ಹಮ್ಮಿಕೊಂಡಿದ್ದು, ಸಂಸದ ಜಿ ಎಂ ಸಿದ್ದೇಶ್ವರ್, ಎಸ್ ಪಿ ಹನುಮಾಂತರಾಯ ಸೇರಿದಂತೆ ಹಲವು ಗಣ್ಯರು ವಿಜಯ ರಾಘವೇಂದ್ರ ರವರಿಗೆ ಸನ್ಮಾನ ಮಾಡಿ ವಾಕಥಾನ್‍ಗೆ ಚಾಲನೆ ನೀಡಿದರು. ನಂತರ ಸ್ವಲ್ಪ ದೂರ ಅವರು ಕೂಡ ಯುವಕ ಯುವತಿಯರ ಜೊತೆ ಹೆಜ್ಜೆ ಹಾಕಿದರು. ಹಿಮೊಫಿಲಿಯಾ ಸೊಸೈಟಿಯಿಂದ ಪ್ರಾರಂಭಗೊಂಡು ಎಸ್‍ಎಸ್‍ಲೇ ಔಟ್ ಸರ್ಕಲ್, ಸಂಗೊಳ್ಳಿ ರಾಯಣ್ಣ ವೃತ್ತ, ಪಿಬಿ ರಸ್ತೆ, ಎವಿಕೆ, ರಾಮ್ ಆ್ಯಂಡ್ ಕೋ ಸರ್ಕಲ್ ಮೂಲಕ ಹಿಮೊಫಿಲಿಯಾ ಸೊಸೈಟಿಗೆ ಜಾಥ ತಲುಪಿತು. ಜಾಥದಲ್ಲಿ ಮೇಯರ್ ಬಿಜೆ ಅಜಯ್ ಕುಮಾರ್, ಎಸ್ಪಿ ಹನುಮಂತರಾಯ ಸೇರಿದಂತೆ ಹಲವರು ಸಾಥ್ ನೀಡಿದರು.

    ಬಹುತೇಕ ರೋಗಗಳ ಅನುವಂಶೀಯವಾಗಿದ್ದು, ಈ ರೋಗಗಳ ವೈದ್ಯಕೀಯ ವೈಜ್ಞಾನಿಕ ಸಂಶೋಧನೆಗಳಿಗೆ ಸರ್ಕಾರ ಮತ್ತು ವೈದ್ಯಕೀಯ ಸಂಸ್ಥೆಗಳಿಗೆ ಆದ್ಯತೆ ನೀಡಿ ಸೂಕ್ತ ಚಿಕಿತ್ಸೆ ಕಂಡು ಹಿಡಿಯಲು ಪ್ರಯತ್ನಿಸಬೇಕು. ಜೊತೆಗೆ ಸ್ವಯಂ ಸೇವಾ ಸಂಸ್ಥೆಗಳನ್ನು ರಚಿಸಿ ಅವರ ಹಕ್ಕಿನ ರಕ್ಷಣೆಗಾಗಿ ಸಂಘಟಿತರಾಗಲು ಪ್ರೋತ್ಸಾಹ ನೀಡಬೇಕು ಎಂದು ಜಾಥಾ ಮೂಲಕ ಬೇಡಿಕೆ ಈಡೇರಿಕೆಗೆ ಸರ್ಕಾರದ ಗಮನ ಸೆಳೆಯಲಾಯಿತು. ಈ ರೋಗದ ಬಗ್ಗೆ ಜನರಲ್ಲಿ, ಕುಟುಂಬಸ್ಥರಲ್ಲಿ ಜಾಗೃತಿ ಮೂಡಿಸಲಾಯಿತು.

    ವಿಶ್ವದಲ್ಲಿ 7ಸಾವಿರ ವಿವಿಧ ವಿರಳ ರೋಗಗಳು ಇದ್ದು, ಸಾರ್ವಜನಿಕರಿಗೆ ಅರಿವಿನ ಕೊರತೆಯಿಂದ ಸಮಸ್ಯೆಗಳು ಹೆಚ್ಚಾಗುತ್ತಿವೆ. ಈ ಹಿನ್ನೆಲೆಯಲ್ಲಿ ರೇಸ್ ಫಾರ್ 07 ಅಭಿಯಾನ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿರುವ ಕರ್ನಾಟಕ ಹಿಮೊಫಿಲಿಯಾ ಸೊಸೈಟಿ ಕಾಯಕ ನಿಜಕ್ಕೂ ಮೆಚ್ಚುವಂತದ್ದಾಗಿದೆ.

  • ಸೆಲ್ಫಿಗಾಗಿ ಮುಗಿಬಿದ್ದ ಫ್ಯಾನ್ಸ್ – ತಳ್ಳಾಟದಲ್ಲಿ ಪರದಾಡಿದ ಅನುಶ್ರೀ

    ಸೆಲ್ಫಿಗಾಗಿ ಮುಗಿಬಿದ್ದ ಫ್ಯಾನ್ಸ್ – ತಳ್ಳಾಟದಲ್ಲಿ ಪರದಾಡಿದ ಅನುಶ್ರೀ

    ವಿಜಯಪುರ: ಕಾರ್ಯಕ್ರಮವೊಂದಕ್ಕೆ ವಿಜಯಪುರಕ್ಕೆ ಆಗಮಿಸಿದ್ದ ವೇಳೆ ಖ್ಯಾತ ನಿರೂಪಕಿ, ನಟಿ ಅನುಶ್ರೀ ಜೊತೆಗೆ ಸೆಲ್ಫಿ ತೆಗೆದುಕೊಳ್ಳಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ. ಈ ವೇಳೆ ಅಭಿಮಾನಿಗಳಿಂದ ಬಚಾವ್ ಆಗಲು ನಟಿ ಅನುಶ್ರೀ ಪರದಾಡಿದ್ದಾರೆ.

    ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದಲ್ಲಿ ಕಳೆದ ರಾತ್ರಿ ನಡೆದ ಕಲಾಜಾತ್ರೆ ಕಾರ್ಯಕ್ರಮಕ್ಕೆ ಅನುಶ್ರೀ ಆಗಮಿಸಿದ್ದರು. ಈ ವೇಳೆ ಅಭಿಮಾನಿಗಳು ಸೆಲ್ಫಿಗಾಗಿ ಮುಗಿಬಿದ್ದರು. ಫಾನ್ಸ್ ಗಳ ತಳ್ಳಾಟದಿಂದ ಗಬರಿಗೊಂಡಿದ್ದ ಅನುಶ್ರೀ ಅವರು ಖಾಸಗಿ ಭದ್ರತಾ ಗಾರ್ಡ್‍ಗಳ ನೆರವಿನಿಂದ ಕಾರ್ಯಕ್ರಮದಿಂದ ಹೊರಬಂದರು.

    ನಿರ್ದೇಶಕ ಕಲಂದರ ದೊಡಮನಿ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ಕಲಾಜಾತ್ರೆ ಕಾರ್ಯಕ್ರಮದಲ್ಲಿ ನಟ ವಿಜಯ ರಾಘವೇಂದ್ರ ಮಾತನಾಡಿ, ಮಾಲ್ಗುಡಿ ಡೇಸ್ ಚಿತ್ರದ ಪ್ರಚಾರ ನಡೆಸಿದರು. ಚಿತ್ರದ ಪ್ರಚಾರಾರ್ಥವಾಗಿ ಆಗಮಿಸಿದ್ದ ಚಿನ್ನಾರಿ ಮುತ್ತ ಉತ್ತರ ಕರ್ನಾಟಕದವರಿಂದಲೇ ಇಂದು ಕನ್ನಡ ಭಾಷೆ ಜೀವಂತವಾಗಿ ಉಳಿದಿದೆ ಎಂದರು.

  • ಗಾಯನ ಸ್ಪರ್ಧೆಯಲ್ಲಿ ಹಾಡು ಹಾಡಿ ರಂಜಿಸಿದ ವಿಜಯ ರಾಘವೇಂದ್ರ

    ಗಾಯನ ಸ್ಪರ್ಧೆಯಲ್ಲಿ ಹಾಡು ಹಾಡಿ ರಂಜಿಸಿದ ವಿಜಯ ರಾಘವೇಂದ್ರ

    ಚಿಕ್ಕೋಡಿ(ಬೆಳಗಾವಿ): ಗಾಯನ ಸ್ಪರ್ಧೆಯಲ್ಲಿ ನಟ ವಿಜಯ ರಾಘವೇಂದ್ರ ಹಾಡು ಹಾಡಿ ಪ್ರೇಕ್ಷಕರನ್ನು ರಂಜಿಸಿದ್ದಾರೆ.

    ಬೆಳಗಾವಿ ಜಿಲ್ಲೆಯ ರಾಯಬಾಗ ಪಟ್ಟಣದಲ್ಲಿ ಶ್ರೀ ಮಹಾಲಿಂಗೇಶ್ವರ ಶಿಕ್ಷಣ ಸಂಸ್ಥೆಯಿಂದ ಹಾಡುವ ಕೋಗಿಲೆಗಳಿಗೊಂದು ಸುವರ್ಣ ಅವಕಾಶವನ್ನು ಕಲ್ಪಿಸಿಕೊಡುವ ಉದ್ದೇಶದಿಂದ ಆಯೋಜನೆ ಮಾಡಿದ್ದ, ಐಹೊಳೆ ಗಾಯನ ಪ್ರತಿಭಾ ಪ್ರಶಸ್ತಿ ಸೀಜನ್ 4 ರನ್ನು ವಿಜಯ ರಾಘವೇಂದ್ರ ಅವರು ಉದ್ಘಾಟಿಸಿದರು.

    ಇದೇ ಸಂದರ್ಭದಲ್ಲಿ ಹುಕ್ಕೇರಿ ಹಿರೇಮಠದ ಶ್ರೀ ಸದ್ಗುರುವಿನ ಸನ್ನಿಧಿ ಎಂಬ ಭಕ್ತಿ ಗೀತೆಗಳ ಧ್ವನಿ ಸುರುಳಿಯನ್ನು ಕೂಡ ನಟ ಬಿಡುಗಡೆಗೊಳಿಸಿದರು. ಅಲ್ಲದೆ ‘ನೀಡು ಶಿವಾ ನೀಡದಿರು ಶಿವಾ’ ಹಾಡನ್ನ ಹಾಡುವ ಮೂಲಕ ವಿಜಯ ರಾಘವೇಂದ್ರ ಜನರನ್ನ ಖುಷಿಪಡಿಸಿದರು.

    ಐಹೊಳೆ ಗಾಯನ ಪ್ರತಿಭಾ ಪ್ರಶಸ್ತಿ ಸೀಜನ್ 4 ರ ಹಿನ್ನೆಲೆಯಲ್ಲಿ 14 ವರ್ಷದೊಳಗಿನ ಮಕ್ಕಳಿಗೆ ಚಲನಚಿತ್ರ ಗೀತೆಗಳ ಸ್ಪರ್ಧೆ, 15 ರಿಂದ 30 ವರ್ಷದೊಳಗಿನ ಯುವಕ-ಯುವತಿಯರಿಗಾಗಿ ಚಲನಚಿತ್ರ ಗೀತೆಗಳ ಸ್ಪರ್ಧೆ ಹಾಗೂ ಜಾನಪದ ಗೀತೆಗಳ ಸ್ಪರ್ಧೆಯನ್ನು ಆಯೋಜನೆ ಮಾಡಲಾಗಿತ್ತು. ಈ ಸ್ಪರ್ಧೆಯಲ್ಲಿ ಬೆಳಗಾವಿ, ಉತ್ತರ ಕನ್ನಡ, ಗದಗ, ಹಾವೇರಿ, ವಿಜಯಪುರ ಸೇರಿದಂತೆ ವಿವಿಧೆಡೆಯಿಂದ ಆಗಮಿಸಿದ ಹಾಡುವ ಕೋಗಿಲೆಗಳು ತಮ್ಮ ಸವಿಗಾನದ ಮೂಲಕ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು.

    ಪ್ರತಿಯೊಂದು ಸ್ಪರ್ಧೆಯಲ್ಲಿಯೂ ಕೂಡ ಮೂವರನ್ನು ಆಯ್ಕೆ ಮಾಡಿ ಬಹುಮಾನವನ್ನು ಹುಕ್ಕೇರಿ ಹಿರೇಮಠದ ಚಂದ್ರಶೇಖರ ಸ್ವಾಮೀಜಿ, ಶಾಸಕ ದುರ್ಯೋಧನ ಐಹೊಳೆ, ಮಹಾಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಅರುಣ ಐಹೊಳೆ, ಹಾಸ್ಯ ನಟ ಪ್ರವೀಣ ಘಸ್ತಿ ಸೇರಿದಂತೆ ಹಲವರು ವಿತರಿಸಿದರು.

  • ದಯವಿಟ್ಟು ಹಾಳಾಗುವಂತಹ ಪದಾರ್ಥಗಳನ್ನು ಸಂತ್ರಸ್ತರಿಗೆ ಕಳುಹಿಸಬೇಡಿ- ವಿಜಯ ರಾಘವೇಂದ್ರ ಮನವಿ

    ದಯವಿಟ್ಟು ಹಾಳಾಗುವಂತಹ ಪದಾರ್ಥಗಳನ್ನು ಸಂತ್ರಸ್ತರಿಗೆ ಕಳುಹಿಸಬೇಡಿ- ವಿಜಯ ರಾಘವೇಂದ್ರ ಮನವಿ

    ಬೆಂಗಳೂರು: ಉತ್ತರ ಕರ್ನಾಟಕ ನೆರೆ ಸಂತ್ರಸ್ತರ ಸಹಾಯಕ್ಕಾಗಿ ಸ್ಯಾಂಡಲ್ ವುಡ್, ಬಾಲಿವುಡ್ ಸೇರಿದಂತೆ ಹಲವಾರು ಮಂದಿ ಮುಂದೆ ಬಂದಿದ್ದಾರೆ. ಈ ಮಧ್ಯೆ ನಟ ವಿಜಯ ರಾಘವೇಂದ್ರ ಅವರು ಸಹಾಯ ಹಸ್ತ ಚಾಚುವವರಲ್ಲಿ ಮನವಿ ಮಾಡಿಕೊಂಡಿದ್ದು, ಸಂತ್ರಸ್ತರಿಗೆ ಧೈರ್ಯ ತುಂಬಿದ್ದಾರೆ.

    ಫೇಸ್ ಬುಕ್ ಲೈವ್ ಬಂದ ನಟ, ಧೈರ್ಯಗೆಡಬೇಡಿ, ಹೆಗಲಾಗಿ, ತೋಳಾಗಿ ನಾವು ನಿಮ್ಮ ಜೊತೆ ನಿಂತಿರುತ್ತೇವೆ ಎಂದು ನೆರೆ ಸಂತ್ರಸ್ತರ ಬಳಿ ಮನವಿ ಮಾಡಿಕೊಂಡಿದ್ದಾರೆ.

    ವಿಡಿಯೋದಲ್ಲೇನಿದೆ..?
    ಕರ್ನಾಟಕದ ಉತ್ತರ ಭಾಗದಲ್ಲಿ ಪ್ರಕೃತಿ ವಿಕೋಪದಿಂದಾಗಿ ಎಷ್ಟೋ ಜೀವಗಳು ಸಂಕಷ್ಟಕ್ಕೆ ಕಾರಣವಾಗಿರುವ ಈ ಮಳೆ, ಪ್ರವಾಹವನ್ನು ನೋಡುತ್ತಿದ್ದರೆ ಒಂದೆಡೆ ಭಯ ಉಂಟಾಗುತ್ತದೆ. ಇನ್ನೊಂದೆಡೆ ಜವಾಬ್ದಾರಿ ಮತ್ತೆ ತಲೆ ಎತ್ತಿ ನಿಲ್ಲುವಂತೆ ಮಾಡಿದೆ.

    ಸಿನಿಮಾರಂಗದಲ್ಲಿ ತಮ್ಮ ಅಭಿಮಾನಿಗಳು ದೇವರುಗಳಿಗೆ ಕಷ್ಟ ಬಂದಾಗ ಯಾರೂ ಕೂಡ ಸುಮ್ಮನಿರುವುದಿಲ್ಲ. ಹಾಗಾಗಿ ಮಿತಿ ಮೀರಿದ ಸಹಾಯಹಸ್ತವನ್ನು ಎಲ್ಲರೂ ಚಾಚುತ್ತಿದ್ದಾರೆ. ಆದರೆ ಮುಖ್ಯವಾದ ವಿಚಾರವೆಂದರೆ, ಅಲ್ಲಿಗೆ ಬ್ಲಾಂಕೆಟ್ ಗಳು, ಅಡುಗೆ ಮಾಡುವುದಕ್ಕೆ ಬೇಕಾದಂತಹ ಸಾಮಾಗ್ರಿಗಳು ಜೊತೆಗೆ ಸ್ಯಾನಿಟರಿ ನ್ಯಾಪ್ ಕಿನ್, ಫಿನಾಯಿಲ್ ಹೀಗೆ ಅಲ್ಲಿ ಉಪಯೋಗಕ್ಕೆ ಬರುವಂತಹ ವಸ್ತುಗಳನ್ನು ಕಳುಹಿಸಿ ಎಂದು ಮನವಿ ಮಾಡಿಕೊಂಡಿದ್ದಾರೆ.

    ಹಾಳಾಗುವಂತಹ ತಿಂಡಿ ಪದಾರ್ಥಗಳನ್ನು ಕಳುಹಿಸುವುದು ಬೇಡ, ಬದಲಾಗಿ ಬಿಸ್ಕೆಟ್, ಮ್ಯಾಗಿಯನ್ನು ಕಳುಹಿಸಬಹುದು. ಇವುಗಳು ತುರ್ತು ಪರಿಸ್ಥಿತಿಗೆ ಸಹಾಯವಾಗುತ್ತದೆ ಎಂದರು. ಇದನ್ನೂ ಓದಿ: ಉತ್ತರ ಕರ್ನಾಟಕ ಸಂತ್ರಸ್ತರ ನೆರವಿಗೆ ನಿಂತ ಯಶೋಮಾರ್ಗ

    ಕೆಎಸ್‍ಆರ್‍ಟಿಸಿ ಅವರು ಇಲ್ಲಿಂದ ವಸ್ತುಗಳನ್ನು ಉಚಿತವಾಗಿ ಅಲ್ಲಿಗೆ ತಲುಪಿಸುತ್ತಿದ್ದಾರೆ. ನೀವುಗಳು ವಸ್ತುಗಳನ್ನು ಅವರ ಬಳಿ ಕೊಟ್ಟರೆ ಸಾಕು, ಅವರು ಎಲ್ಲೆಲ್ಲಿ ಅವುಗಳ ಅಗತ್ಯತೆ ಇದೆಯೋ ಅಲ್ಲಿಗೆ ತಲುಪಿಸುವ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದಾರೆ. ಹೀಗಾಗಿ ನಮ್ಮ ಕೆಲಸ ನಿಲ್ಲಿಸೋದು ಬೇಡ ಎಂದು ವಿಜಯ ರಾಘವೇಂದ್ರ ಸಹಾಯ ಮಾಡುವವರ ಬಳಿ ಕೇಳಿಕೊಂಡರು.

    ನೀವು ಯಾರೂ ಹೆದರಿಕೊಳ್ಳಬೇಡಿ. ಯಾವುದೇ ಸಂದರ್ಭದಲ್ಲೂ ನಿಮ್ಮ ಜೊತೆ ನಾವಿರುತ್ತೇವೆ. ಹೆಗಲಾಗಿ, ತೋಳಾಗಿ ನಿಂತಿರುತ್ತೇವೆ. ಧೈರ್ಯವಾಗಿರಿ ಎಂದು ನೆರೆ ಸಂತ್ರಸ್ತರಲ್ಲಿ ನಟ ಮನವಿ ಮಾಡಿಕೊಂಡಿದ್ದಾರೆ.

  • ಪರದೇಸಿ ಕೇರಾಫ್ ಲಂಡನ್ – ಇಲ್ಲಿರೋದು ಡಿಫರೆಂಟ್ ವಿಜಯ್ ರಾಘವೇಂದ್ರ!

    ಪರದೇಸಿ ಕೇರಾಫ್ ಲಂಡನ್ – ಇಲ್ಲಿರೋದು ಡಿಫರೆಂಟ್ ವಿಜಯ್ ರಾಘವೇಂದ್ರ!

    ರಾಜಶೇಖರ್ ನಿರ್ದೇಶನದ ಪರದೇಸಿ ಕೇರಾಫ್ ಲಂಡನ್ ಈ ತಿಂಗಳು ತೆರೆ ಕಾಣಲಿದೆ. ಈಗಾಗಲೇ ಹಾಡುಗಳ ಮೂಲಕವೂ ಭಾರೀ ಕ್ರೇಜ್ ಸೃಷ್ಟಿಸಿರೋ ಈ ಚಿತ್ರ ವಿಜಯ್ ರಾಘವೇಂದ್ರ ಅವರ ವೃತ್ತಿ ಬದುಕಲ್ಲಿ ಹೊಸ ತಿರುವು ನೀಡಲಿದೆ ಎಂಬ ಮಾತುಗಳೂ ಕೇಳಿ ಬರುತ್ತಿವೆ. ರಾಜಶೇಖರ್ ಅಂಥಾದ್ದೊಂದು ರಸವತ್ತಾದ ಕಥನವನ್ನಿಲ್ಲಿ ದೃಶ್ಯ ರೂಪಕವಾಗಿಸಿದ್ದಾರೆ.

    ವಿಜಯ್ ರಾಘವೇಂದ್ರರನ್ನು ಹೊಸ ಗೆಟಪ್ಪಿನಲ್ಲಿ ಕಾಣಿಸಬೇಕೆಂಬ ಹಂಬಲದೊಂದಿಗೆ ಈ ಕಥೆಯನ್ನು ಸಿದ್ಧಪಡಿಸಿದ್ದವರು ರಾಜಶೇಖರ್. ಚಿತ್ರೀಕರಣವನ್ನೆಲ್ಲ ಅಚ್ಚುಕಟ್ಟಾಗಿಯೇ ಮಾಡಿ ಮುಗಿಸಿದ್ದ ಅವರು ಪ್ರತಿಯೊಂದು ವಿಚಾರದಲ್ಲಿಯೂ ಅದೇ ದೃಷ್ಟಿಯಿಂದಲೇ ಕಾರ್ಯ ನಿರ್ವಹಿಸಿದ್ದರು. ಹಾಡುಗಳ ವಿಚಾರದಲ್ಲಿ ಅವರು ವಹಿಸಿದ್ದ ಮುತುವರ್ಜಿಯೇ ಈ ಮಾತಿಗೆ ಸಾಕ್ಷಿಯಾಗುತ್ತೆ.

    ಸಾಮಾನ್ಯವಾಗಿ ಇತ್ತೀಚಿನ ಚಿತ್ರಗಳ ಹಾಡುಗಳಿಗೆ ಒಂದೋ ಪರಭಾಷಾ ಗಾಯಕ, ಗಾಯಕಿಯರಾಗಬೇಕು. ಇಲ್ಲದಿದ್ದರೆ ಕನ್ನಡದ ಖ್ಯಾತನಾಮರೇ ಹಾಡಬೇಕೆಂಬ ಟ್ರೆಂಡಿದೆ. ಕೆಲ ಮಂದಿ ಅದರ ಆಚೀಚೆಗೆ ದೃಷ್ಟಿ ಹಾಯಿಸಿದ್ದಿದೆ. ಆದರೆ ರಾಜಶೇಖರ್ ಅಪ್ಪಟ ಈ ನೆಲದ ಅಪರೂಪದ ಮಹಿಳೆಯೋರ್ವರಿಂದ ಒಂದು ಹಾಡನ್ನು ಹಾಡಿಸಿದ್ದಾರೆ.

    ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಕನ್ನಡ ಕೋಗಿಲೆ ಎಂಬ ಹಾಡಿನ ಶೋನ ಮೂಲಕ ಪ್ರಸಿದ್ಧಿ ಪಡೆದವರು ಗಂಗಮ್ಮ. ಹಳ್ಳಿಗಾಡಿನಿಂದ ಬಂದಿರೋ ಗಂಗಮ್ಮ ಯಾವ ಥರದ ಹಾಡನ್ನೇ ಆದರೂ ಶ್ರುತಿಬದ್ಧವಾಗಿ, ಎಂಥವರೂ ತಲೆದೂಗುವಂತೆ ಹಾಡುವ ಕಲೆಗಾರಿಕೆಯ ಮೂಲಕವೇ ಗಾನಕೋಗಿಲೆ ಗಂಗಮ್ಮ ಎಂದೇ ಪ್ರಸಿದ್ಧರಾಗಿದ್ದಾರೆ. ರಾಜಶೇಖರ್ ತಮ್ಮ ಚಿತ್ರಕ್ಕಾಗಿ ಗಂಗಮ್ಮನವರಿಂದಲೇ ಒಂದು ಚೆಂದದ ಹಾಡನ್ನು ಹಾಡಿಸಿದ್ದಾರೆ. ಇದು ನಿಜಕ್ಕೂ ಸ್ವಾಗತಾರ್ಹ ಬೆಳವಣಿಗೆ. ಈ ಹಾಡೂ ಕೂಡಾ ಜನಮನ ಗೆದ್ದಿದೆ. ಈ ಮೂಲಕವೇ ಈ ಚಿತ್ರದ ಬಗ್ಗೆ ಎಲ್ಲೆಡೆ ಒಳ್ಳೆ ಮಾತುಗಳು ಹರಡಿಕೊಂಡಿವೆ. ಅದೆಲ್ಲವೂ ಗೆಲುವಾಗುವ ಸ್ಪಷ್ಟ ಸೂಚನೆಗಳೂ ಇವೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮತ್ತೆ ಶುರು ಡ್ರಾಮಾ ಜ್ಯೂನಿಯರ್ಸ್ ಸೀಸನ್ 3 ಹವಾ!

    ಮತ್ತೆ ಶುರು ಡ್ರಾಮಾ ಜ್ಯೂನಿಯರ್ಸ್ ಸೀಸನ್ 3 ಹವಾ!

    ಬೆಂಗಳೂರು: ರಿಯಾಲಿಟಿ ಶೋಗಳಲ್ಲಿ ನಿರೀಕ್ಷೆಗೂ ಮೀರಿ ತನ್ನದೇ ಸಂಚಲನ ಮೂಡಿಸಿದ ವಾಹಿನಿ ಜೀ ಕನ್ನಡ ಪ್ರೇಕ್ಷಕರ ಬೇಕು ಬೇಡಗಳನ್ನು ಅರ್ಥೈಸಿಕೊಂಡು ಇಲ್ಲಿಯವರೆಗೂ ಹತ್ತು ಹಲವು ಸದಭಿರುಚಿಯ ವಿಭಿನ್ನ ಪ್ರಯೋಗಗಳನ್ನು ಮಾಡುತ್ತ ಹೊಸ ದಾಖಲೆಗಳಿಗೆ ನಾಂದಿ ಹಾಡುತ್ತಿದೆ. ರಿಯಾಲಿಟಿ ಶೋ ಚಿತ್ರೀಕರಣ ಮತ್ತು ಪ್ರಸಾರ ಎರಡೂ ಜನರಿಂದ ದೂರವಾಗಿ ನಡೆಯುವಂತ ಪ್ರಕ್ರಿಯೆ. ಇಲ್ಲಿ ಪ್ರೇಕ್ಷಕರಿಗೂ ನಟರಿಗೂ ನೇರ ಮುಖಾಮುಖಿ ಇರುವುದಿಲ್ಲ. ಆದರೆ ರಂಗಭೂಮಿ ಜನರ ನೇರಸಂಪರ್ಕಕ್ಕೆ ಮತ್ತು ಸಂವಹನಕ್ಕೆ ಒಳಪಡುವಂತದ್ದು.

    ಡ್ರಾಮಾ ಜ್ಯೂನಿಯರ್ಸ್ ರಿಯಾಲಿಟಿ ಶೋ ಮುಗ್ಧ ಮನಸ್ಸಿನ ಮಕ್ಕಳ ನಟನಾ ಕೌಶಲ್ಯಕ್ಕೆ ಮತ್ತು ಅವರ ಅಭಿನಯ ಸಾಮರ್ಥ್ಯಕ್ಕೆ ವೇದಿಕೆಯನ್ನು ಒದಗಿಸುವ ಒಂದು ಉತ್ತಮ ಶೋ. ಈ ಶೋ ಕೇವಲ ಮನರಂಜನೆಯನ್ನಷ್ಟೇ ನೀಡದೇ, ವಿನೂತನ, ವಿಭಿನ್ನ ಪ್ರಯೋಗಗಳನ್ನು ಮಾಡಿ ಹೊಸ ದಾಖಲೆಗಳಿಗೆ ನಾಂದಿ ಹಾಡಿದೆ. ಅಭಿನಯದ ಜೊತೆಗೆ ರಂಗಭೂಮಿಯ ವಿವಿಧ ಮಜಲುಗಳನ್ನು ಪರಿಚಯಿಸುವುದರ ಜೊತೆಗೆ ಸಾಮಾಜಿಕ ಸಂದೇಶಗಳನ್ನು ನೀಡುತ್ತ ಪ್ರೇಕ್ಷಕರಿಂದ ಇದೊಂದು ಅದ್ಭುತವಾದ ಕಾರ್ಯಕ್ರಮ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

    ಕನ್ನಡ ಚಿತ್ರರಂಗಕ್ಕೆ ಹತ್ತು ಹಲವು ಬಾಲ ಕಲಾವಿದರನ್ನು ಕೊಡುಗೆಯಾಗಿ ನೀಡುವ ನಿಟ್ಟಿನಲ್ಲಿ ಆರಂಭವಾದ ಡ್ರಾಮಾ ಜ್ಯೂನಿಯರ್ಸ್ ಸೀಸನ್ 1 ಮತ್ತು ಸೀಸನ್ 2 ಎಂಬ ಅತ್ಯದ್ಭುತ ಯಶಸ್ಸಿನ ಕಾರ್ಯಕ್ರಮವನ್ನು ಪರಿಚಯಿಸಿದ್ದಲ್ಲದೇ, ಅದು ಕರ್ನಾಟಕವಲ್ಲದೇ ದೇಶ ವಿದೇಶದ ಕನ್ನಡಿಗರಲ್ಲೆರೂ ಅದರ ಒಂದು ಭಾಗವಾಗುವಂತೆ ಮಾಡಿದ ಕೀರ್ತಿ ಜೀ ವಾಹಿನಿಗೆ ಸಲ್ಲುತ್ತದೆ. ಅದರ ಮುಂದುವರಿದ ಅಧ್ಯಾಯವೆಂಬಂತೆ ಡ್ರಾಮಾ ಜ್ಯೂನಿಯರ್ಸ್ ಸೀಸನ್ 3 ಆರಂಭಗೊಳ್ಳುತ್ತಿದ್ದು ಮತ್ತೊಂದು ವಿಭಿನ್ನ ಪ್ರಯತ್ನಕ್ಕೆ ಸಾಕ್ಷಿಯಾಗುತ್ತಿದೆ.

    ಕರ್ನಾಟಕದಾದ್ಯಂತ 30 ಜಿಲ್ಲೆಗಳಲ್ಲಿ ಆಡಿಷನ್ ಪ್ರಕ್ರಿಯೆ ನಡೆದಿದ್ದು, ಅದರಲ್ಲಿ ಅಭಿನಯ ಕೌಶಲ್ಯದ ಹಿನ್ನೆಲೆಯುಳ್ಳ 30 ಮಕ್ಕಳನ್ನು ಆಯ್ಕೆ ಮಾಡಿಕೊಂಡಿದ್ದು, ಆ 30 ಮಕ್ಕಳು ಮೆಗಾ ಆಡಿಷನ್ ನಲ್ಲಿ ಭಾಗಿಯಾಗಲು ತಯಾರಾಗಿದ್ದಾರೆ. ಹೊಸ ಹೊಸ ಪ್ರಯೋಗಗಳು, ಹೊಸ ಪ್ರಯತ್ನದೊಂದಿಗೆ ಹಿಂದೆಂದೂ ನೋಡಿರದಂತ, ಹಿಂದೆಂದೂ ಕೇಳಿರದಂತ ಮನರಂಜನೆ ಈ ಒಂದು ಕಾರ್ಯಕ್ರಮದಲ್ಲಿ ನಿಮಗಾಗಿ ಎದುರುಗೊಳ್ಳುತ್ತಿದೆ.

    ಇನ್ನುಳಿದಂತೆ ಕಾರ್ಯಕ್ರಮಕ್ಕೆ ಅಂದದ ಮೆರುಗೆಂಬಂತೆ ತೀರ್ಪುಗಾರರಾಗಿ ಜೂಲಿ ಲಕ್ಷ್ಮಿ, ಮುಖ್ಯಮಂತ್ರಿ ಚಂದ್ರು ಹಾಗು ವಿಜಯರಾಘವೇಂದ್ರ ಇದ್ದಾರೆ. ಮಕ್ಕಳಿಂದ ಹಿಡಿದು ವಯೋಮಾನದವರಿಗೆಲ್ಲರಿಗು ಪ್ರೀತಿ ಪಾತ್ರರಾದ ಮಾಸ್ಟರ್ ಆನಂದ್ ತಮ್ಮ ಮಾತಿನ ಚಟಾಕಿಯ ಮೂಲಕ ನಿರೂಪಣೆಯನ್ನು ನೀಡಲಿದ್ದಾರೆ. ಅಂದುಕೊಂಡಿರುವಂತೆ ಎಲ್ಲವೂ ಅತ್ಯದ್ಭುತವಾಗಿ ಸಜ್ಜುಗೊಳ್ಳುತ್ತಿದ್ದು, ಪ್ರೇಕ್ಷಕರಿಗೆ ವಿವಿಧ ಆಯಾಮಗಳಲ್ಲಿ ಮನರಂಜನೆ ನೀಡಲು ಸಜ್ಜಾಗಿ ಬರ್ತಾ ಇದ್ದಾರೆ. ಡ್ರಾಮಾ ಜ್ಯೂನಿಯರ್ಸ್ ಸೀಸನ್ 3 ಸ್ಪರ್ಧಿಗಳು ಇನ್ನು ಮುಂದೆ ಪ್ರತಿ ಶನಿವಾರ ಮತ್ತು ಭಾನುವಾರ ರಾತ್ರಿ 9 ಗಂಟೆಗೆ ಜೀ ಕನ್ನಡ ವಾಹಿನಿಯಲ್ಲಿ ತಪ್ಪದೆ ಹಾಜರಾಗುತ್ತಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv