Tag: ವಿಜ್ಞಾನ

  • ಮದರಸಾಗಳಲ್ಲಿ ಅತಿಥಿ ಶಿಕ್ಷಕರ ತಾತ್ಕಾಲಿಕ ಆಯ್ಕೆಗೆ ಅರ್ಜಿ ಆಹ್ವಾನ

    ಮದರಸಾಗಳಲ್ಲಿ ಅತಿಥಿ ಶಿಕ್ಷಕರ ತಾತ್ಕಾಲಿಕ ಆಯ್ಕೆಗೆ ಅರ್ಜಿ ಆಹ್ವಾನ

    ಬೆಂಗಳೂರು: ಅಲ್ವಸಂಖ್ಯಾತರ ನಿರ್ದೇಶನಾಲಯ ವತಿಯಿಂದ 2025-26ನೇ ಶೈಕ್ಷಣಿಕ ಸಾಲಿನಲ್ಲಿ ಬೆಂಗಳೂರು ನಗರ (Bengaluru City) ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಜೀಂ ಪ್ರೇಮ್ ಜೀ (Azim Premji) ಫೌಂಡೇಶನ್ ಆಯ್ಕೆ ಮಾಡಿರುವ ಮದರಾಸಗಳಲ್ಲಿ ಔಪಾಚಾರಿಕ ಶಿಕ್ಷಣ ವಿಷಯಗಳಾದ ಕನ್ನಡ, ಇಂಗ್ಲಿಷ್‌, ವಿಜ್ಞಾನ ಮತ್ತು ಗಣಿತ ವಿಷಯಗಳನ್ನು ಬೋಧಿಸಲು ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ಆಯ್ಕೆ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

    ಆಸಕ್ತರು ಅರ್ಜಿ ಸಲ್ಲಿಸಲು ಅಕ್ಟೋಬರ್ 4 ಕೊನೆಯ ದಿನವಾಗಿರುತ್ತದೆ. ಅಕ್ಟೋಬರ್ 10 ರಂದು ಸಾಮಾನ್ಯ ಪ್ರವೇಶ ಪರೀಕ್ಷಾ ನಡೆಯಲಿದ್ದು, ಅಕ್ಟೋಬರ್ 13 ರಂದು ಫಲಿತಾಂಶ ಬಿಡುಗಡೆಯಾಗಿ ಅಕ್ಟೋಬರ್ 15 ರಂದು ಬೋಧನಾ ಪ್ರತಾಕ್ಷಿಕೆ ನಡೆಯಲಿದೆ. ಇದನ್ನೂ ಓದಿ:  ಮುಂಬೈ ಉಗ್ರರ ವಿರುದ್ಧ ಆಪರೇಷನ್‌ಗೆ ಯುಪಿಎ ಅಡ್ಡಿ – ಚಿದಂಬರಂ ಹೇಳಿಕೆ, ಸೋನಿಯ ವಿರುದ್ಧ ಬಿಜೆಪಿ ಕೆಂಡ

     

    ಅರ್ಹ ಅಭ್ಯರ್ಥಿಗಳು ಅಲ್ಪಸಂಖ್ಯಾತರ ನಿರ್ದೇಶನಾಯಲದ ಅಧಿಕೃತ ಜಾಲತಾಣ www.dom.karnataka.gov.in ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು. ಇದನ್ನೂ ಓದಿ:  ಚೆನ್ನೈನಲ್ಲಿ ಕಮಾನು ಕುಸಿದು 9 ಮಂದಿ ಸಾವು – 10ಕ್ಕೂ ಹೆಚ್ಚು ಮಂದಿಗೆ ಗಾಯ

    ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಬೆಂಗಳೂರು ನಗರ ಜಿಲ್ಲೆ, 1ನೇ ಮಹಡಿ, ಪೋಡಿಯೋಂ ಬ್ಲಾಕ್, ವಿ.ವಿ. ಗೋಪುರ, ಡಾ. ಬಿ.ಆರ್.ಅಂಬೇಡ್ಕರ್ ವೀಧಿ, ಬೆಂಗಳೂರು-01 ಅಥವಾ ದೂರವಾಣಿ ಸಂಖ್ಯೆ 080-22866718 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • ಕೊಳಕು ಮನಸ್ಸಿಗೆ ʻಮೆದುಳಿನಲ್ಲಿ ಕಸʼವೇ ಕಾರಣವೇ? – ಇದಕ್ಕೆ ಪರಿಹಾರವೇನು?

    ಕೊಳಕು ಮನಸ್ಸಿಗೆ ʻಮೆದುಳಿನಲ್ಲಿ ಕಸʼವೇ ಕಾರಣವೇ? – ಇದಕ್ಕೆ ಪರಿಹಾರವೇನು?

    ಇತ್ತೀಚೆಗಷ್ಟೇ ʻಇಂಡಿಯಾಸ್‌ ಗಾಟ್‌ ಲ್ಯಾಟೆಂಟ್ʼ (India’s Got Latent) ಎಂಬ ಕಾರ್ಯಕ್ರಮದ ಸಂಚಿಕೆಯೊಂದರಲ್ಲಿ ಯುಟ್ಯೂಬರ್‌ ಅಲಹಬಾದಿಯಾ ಅವರು ಅಶ್ಲೀಲ ಹೇಳಿಕೆ ನೀಡಿದ್ದರ ಸಂಬಂಧ ಸುಪ್ರೀಂ ಕೋರ್ಟ್‌ (Supreme Court) ವಿಚಾರಣೆ ನಡೆಸಿತು. ಈ ವೇಳೆ ರಣವೀರ್‌ ಅಲಹಬಾದಿಯ (Ranveer Allahbadia) ಅವರು ನಡೆಸುವ ಕಾರ್ಯಕ್ರಮದಲ್ಲಿ ಆಡಿದ ಕೆಲವು ಮಾತುಗಳು ಅವರ ಕೊಳಕು ಮನಸ್ಸನ್ನು ತೋರಿಸಿದೆ. ಈ ವ್ಯಕ್ತಿಯ ಮನಸ್ಸಿನಲ್ಲಿ ಏನು ಕೊಳಕಿದೆಯೋ ಅದನ್ನು ಈ ಕಾರ್ಯಕ್ರಮದ ಮೂಲಕ ಹರಡಲಾಗುತ್ತಿದೆ ಎಂದು ನ್ಯಾಯಮೂರ್ತಿಗಳು ಹೇಳಿದ್ದರು.

    ಈ ಬೆನ್ನಲ್ಲೇ ಮನೋತಜ್ಞರು ಒಂದಿಷ್ಟು ವಿಶ್ಲೇಷಣೆ ನಡೆಸಿದ್ದರು. ಮೂರು ಪೌಂಡ್‌ಗಳಷ್ಟು ತೂಕವಿರುವ ಮೆದುಳಿನಲ್ಲಿ ಅದೆಷ್ಟು ಕಸ (ಕೊಳಕು) ತುಂಬಿರುತ್ತದೆ? ಈ ಮೆದುಳಿನಲ್ಲಿ ಕಸ ಬರೋದಾದ್ರೂ ಹೇಗೆ? ಮೆದುಳಿನ ಕಸ (Brain Garbage) ಅಂದ್ರೆ ಏನು? ಕಸ ತುಂಬಿಕೊಂಡಷ್ಟು ಮನುಷ್ಯನಲ್ಲಿ ಏನೆಲ್ಲಾ ಬದಲಾವಣೆಯಾಗುತ್ತದೆ? ಈ ಮೆದುಳಿನ ಕಸ ತೆಗೆದುಹಾಕೋದು ಹೇಗೆ? ಎಂಬುದನ್ನು ವಿಶ್ಲೇಷಣೆ ಮಾಡಿದ್ದಾರೆ ಅದೇನೆಂಬುದನ್ನು ನೋಡೋಣ…

    ಮೆದುಳಿನಲ್ಲಿ ತ್ಯಾಜ್ಯ ಏಕೆ ಸಂಗ್ರಹವಾಗುತ್ತೆ?
    ನಮ್ಮ ಮನಸ್ಸು ಮೆಟ್ರೋ ರೈಲಿಗಿಂತಲೂ ಸ್ಪೀಡು, ನಿತ್ಯ ಒಂದಿಲ್ಲೊಂದು ವಿಷಯಗಳ ಹಿಂದೆ ಓಡುತ್ತಲೇ ಇರುತ್ತದೆ. ಹೀಗಾಗಿ ಜೀವ ರಾಸಾಯನಿಕ ಕ್ರಿಯೆ ನಡೆಯುತ್ತಲೇ ಇರುತ್ತದೆ, ಹೀಗಾದಾಗ ಮೆದುಳಿನ ಮೇಲೆ ಒಂದೊಂದೇ ಪದರಗಳು ಸೇರುತ್ತಾ ಹೋಗುತ್ತದೆ. ಜೊತೆಗೆ ಹಾರ್ಮೂನ್‌ಗಳಲ್ಲಿ ಅಸಮತೋಲನ ಉಂಟಾಗುತ್ತದೆ. ಇದನ್ನು ಸರಿಯಾಗಿ ಸ್ವಚ್ಛಗೊಳಿಸದಿದ್ದರೆ ಮೆದುಳಿನಲ್ಲಿ ಒತ್ತಡ ರೂಪದಲ್ಲಿ ಕಸ ಸಂಗ್ರಹವಾಗುತ್ತದೆ. ಅಲ್ಲದೇ ವಾಯುಮಾಲಿನ್ಯ, ನಮಗೇ ಗೊತ್ತಿಲ್ಲದೇ ದೇಹ ಸೇರುವ ಮೈಕ್ರೋ ಪ್ಲಾಸ್ಟಿಕ್‌, ಮೆದುಳಿಗೆ ತುಂಬಾ ಅಪಾಯಕಾರಿ. ಇವು ದೇಹವನ್ನು ಪ್ರವೇಶಿಸಿ ಮೆದುಳಿಗೆ ಹಾನಿಯುಂಟು ಮಾಡುತ್ತದೆ.

    ಸಾಮಾನ್ಯವಾಗಿ ಜನ ಇದನ್ನು ಸಹವಾಸ ದೋಷ ಎನ್ನುತ್ತಾರೆ. ಉದಾಹರಣೆಗೆ ಈ ಹಿಂದೆಲ್ಲ ಮನುಷ್ಯನಲ್ಲಿ ಹಾಸ್ಯಪ್ರಜ್ಞೆ ಇರುತ್ತಿತ್ತು. ನೈಸರ್ಗಿಕವಾಗಿ ನಕ್ಕಷ್ಟು ಮೆದುಳು, ಮನಸ್ಸು ಹಗುರವಾಗುತ್ತಿತ್ತು. ಕೆಲ ವಿಜ್ಞಾನಿಗಳು ಇದನ್ನು ನಿಜ ಎಂದು ಒಪ್ಪಿದ್ದರು. ಆದ್ರೆ ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಮಂದಿ ಮುಖದಲ್ಲಿ ಹ್ಯಾಸ್ಯ ರಸವೇ ಇಲ್ಲದೇ ಸದಾ ಜಡವಸ್ತುಗಳಂತೆ ವರ್ತಿಸುತ್ತಾರೆ, ಇನ್ನೂ ಕೆಲವರು ಡಬಲ್‌ ಮೀನಿಂಗ್‌ ಹಾಸ್ಯಗಳಲ್ಲೇ ಮುಳುಗುತ್ತಾರೆ. ಇಂತಹ ಹಾಸ್ಯಗಳಿಂದ ಕೆಲವರ ಮೆದುಳಿನಲ್ಲಿ ಕೆಟ್ಟ ಆಲೋಚನೆಗಳು ಬೆಳೆಯುತ್ತಾ ಹೋಗುತ್ತದೆ, ಬಳಿಕ ಮನಸ್ಥಿತಿ ಇದ್ದಂತೆ ಮಾತನಾಡುತ್ತಾರೆ. ರಣವೀರ್‌ ಅಲಹಾಬಾದಿಯಾ ಅವರ ವಿಚಾರದಲ್ಲಿ ಆಗಿರುವುದೂ ಸಹ ಇದೆ ಎನ್ನುತ್ತಾರೆ ವಿಶ್ಲೇಷಕರು.

     

    ಮೆದುಳಿನಲ್ಲಿ ಕೊಳಕು ಸಂಗ್ರಹವಾಗುವುದರಿಂದ ಏನಾಗುತ್ತದೆ?
    ಮೂರು ಪೌಂಡ್‌ಗಳಷ್ಟು ತೂಕವಿರುವ ಮೆದುಳಿನಲ್ಲಿ ಕಸ ಸ್ವಚ್ಛಗೊಳಿಸದಿದ್ದರೆ, ಅದು ಮೆದುಳನ್ನು ಹಾನಿ ಮಾಡುತ್ತಾ ಹೋಗುತ್ತದೆ. ಮೆದುಳಿನಲ್ಲಿ ಊತ ಕಾಣಿಸಿಕೊಳ್ಳಲು ಪ್ರಾರಂಭಿಸುತ್ತದೆ, ಇದರಿಂದ ತಲೆ ಭಾರವಾಗುತ್ತದೆ. ನಂತರ ನೆನಪಿನ ಶಕ್ತಿ, ಆಲೋಚನಾ ಶಕ್ತಿ ಮತ್ತು ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯ ಎಲ್ಲವೂ ಕಡಿಮೆಯಾಗುತ್ತದೆ. ಈ ಬೆಳವಣಿಗೆ ಮತ್ತೂ ಮುಂದುವರಿದರೆ ಆಲ್ಝಮೈರ್‌ ಮತ್ತು ಬುದ್ಧಿಮಾಂದ್ಯತೆಯಂತಹ ನರವೈಜ್ಞಾನಿಕ ಕಾಯಿಲೆಗಳೂ ಸಂಭವಿಸಬಹುದು. ಉದ್ವೇಗ, ಆತಂಕ ಮತ್ತು ಖಿನ್ನತೆಯ ಸಮಸ್ಯೆಯನ್ನು ತಂದೊಡ್ಡಬಹುದು ಎನ್ನುತ್ತಾರೆ ತಜ್ಞರು.

    ಮೆದುಳು ಶುಚಿಯಾಗಬೇಕಾದ್ರೆ ನಾವೇನು ಮಾಡಬೇಕು?
    ಈ ಎಲೆಕ್ಟ್ರಾನಿಕ್‌ ಯುಗದಲ್ಲಿ ನಮ್ಮ ಮೆದುಳನ್ನು ಸ್ವಚ್ಛಗೊಳಿಸುವ ಕೆಲಸ ನಿರಂತರವಾಗಿ ನಡೆಯುತ್ತಲೇ ಇರಬೇಕು. ಅದಕ್ಕೆ ಒಂದು ಮಾರ್ಗವಿದೆ, ಅದನ್ನ ಗ್ಲಿಂಫಾಟಿಕ್ ವ್ಯವಸ್ಥೆ ಎಂದು ಕರೆಯಲಾಗುತ್ತದೆ. ಕುತೂಹಲಕಾರಿ ವಿಷಯವೆಂದರೆ ಈ ಪ್ರಕ್ರಿಯೆಯು ನಿದ್ರೆಯ ಸಮಯದಲ್ಲಿ ಮಾತ್ರ ಸಕ್ರಿಯವಾಗಿರುತ್ತದೆ. ನಿಯಮಿತವಾಗಿ ಮನುಷ್ಯನ ದೇಹಕ್ಕೆ ಅಗತ್ಯವಿರುವಷ್ಟು ಸಮಯ ನಿದ್ರೆ ಮಾಡುವುದರಿಂದ ಮೆದುಳಿನಲ್ಲಿನ ಕಸ ಸ್ವಚ್ಛವಾಗುತ್ತದೆ.

    ನಾವು ಗಾಢ ನಿದ್ರೆಯಲ್ಲಿದಷ್ಟು ಮೆದುಳಿನ ಶುದ್ಧೀಕರಣ ಕ್ರಿಯೆ ಸಾಧಾರಣಕ್ಕಿಂತ 10 ಪಟ್ಟು ವೇಗವಾಗಿ ನಡೆಯುತ್ತದೆ. 2013ರಲ್ಲಿ ಅಮೆರಿಕದ ರೋಚೆಸ್ಟರ್‌ ವಿಶ್ವವಿದ್ಯಾನಿಲಯ ನಡೆಸಿದ ಅಧ್ಯಯನದಲ್ಲಿ ಇದು ಸಾಬೀತಾಗಿದೆ. ಏಕೆಂದರೆ ನಾವು ನಿದ್ರಿಸುವಾಗ ನಮ್ಮ ಮೆದುಳಿನ ಕೋಶಗಳು ಶೇ.60 ರಷ್ಟು ಕುಗ್ಗುತ್ತವೆ. ಇದರಿಂದಾಗಿ ಗ್ಲಿಂಫಾಟಿಕ್ ವ್ಯವಸ್ಥೆಯು ಮೆದುಳಿನಲ್ಲಿ ಸಂಗ್ರಹವಾಗುವ ಕಸವನ್ನು ಹೊರಹಾಕಲು ಅವಕಾಶ ಮಾಡಿಕೊಡುತ್ತದೆ ಎಂಬುದನ್ನು ಅಧ್ಯಯನ ಕಂಡುಕೊಂಡಿದೆ.

  • ಡಾಕಿಂಗ್‌ ಸಾಹಸಕ್ಕೆ ಇಸ್ರೋ ರೆಡಿ – ಏನಿದು ಪ್ರಯೋಗ? ಇಷ್ಟೊಂದು ಮಹತ್ವ ಯಾಕೆ?

    ಡಾಕಿಂಗ್‌ ಸಾಹಸಕ್ಕೆ ಇಸ್ರೋ ರೆಡಿ – ಏನಿದು ಪ್ರಯೋಗ? ಇಷ್ಟೊಂದು ಮಹತ್ವ ಯಾಕೆ?

    ಶ್ರೀಹರಿಕೋಟಾ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಗೆ (ISRO) ಇಂದು (ಡಿ.30) ಮಹತ್ವದ ದಿನ. ಸೋಮವಾರ ರಾತ್ರಿ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ‘ಸ್ಪೇಸ್ ಡಾಕಿಂಗ್ ಎಕ್ಸ್‌ಪರಿಮೆಂಟ್’ (SpaDEx) ಯೋಜನೆ ಭಾಗವಾಗಿ 2 ಉಪಗ್ರಹಗಳು ಉಡಾವಣೆಯಾಗಲಿದೆ.

    ಬಾಹ್ಯಾಕಾಶ ಉಪಗ್ರಹಗಳ ಡಾಕಿಂಗ್‌ (Docking) ಮತ್ತು ಅನ್‌ಡಾಕಿಂಗ್‌ (Undocking) ಪ್ರಯೋಗ ಯಶಸ್ವಿಯಾದಲ್ಲಿ ಸ್ಪೇಡೆಕ್ಸ್‌ನಲ್ಲಿ ಯಶ ಕಂಡ ವಿಶ್ವದ 4ನೇ ದೇಶ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ. ಎರಡು ಉಪಗ್ರಹಗಳನ್ನು ಜೋಡಿಸುವ ಹಾಗೂ ಬೇರ್ಪಡಿಸುವ ಪ್ರಯೋಗದಲ್ಲಿ ಇಲ್ಲಿಯವರೆಗೆ ಅಮೆರಿಕ, ರಷ್ಯಾ ಮತ್ತು ಚೀನಾ ಯಶಸ್ಸು ಕಂಡಿದೆ.

    ಈ ಪ್ರಯೋಗದ ಭಾಗವಾಗಿ ಎಸ್‌ಡಿಎಕ್ಸ್‌01 ಮತ್ತು ಎಸ್‌ಡಿಎಕ್ಸ್02 ಹೆಸರಿನ ಎರಡು ಉಪಗ್ರಹಗಳನ್ನು ಹೊತ್ತ ಪೋಲಾರ್‌ ಸ್ಯಾಟಲೈಟ್‌ ಲಾಂಚ್‌ ವೆಹಿಕಲ್‌ (PSLV) ರಾಕೆಟ್ ಇಂದು ರಾತ್ರಿ 9:58ಕ್ಕೆ ಉಡಾವಣೆಯಾಗಲಿದೆ. ಭೂಮಿಯಿಂದ 476 ಕಿ.ಮೀ ದೂರದ ಕಕ್ಷೆಗೆ ಉಪಗ್ರಹಗಳನ್ನು ರಾಕೆಟ್‌ ಯಶಸ್ವಿಯಾಗಿ ಸೇರಿಸಿದ ಬಳಿಕ ಜನವರಿ ಮೊದಲ ವಾರದಲ್ಲಿ ಇಸ್ರೋ ಡಾಕಿಂಗ್‌ ಪ್ರಯೋಗ ನಡೆಯಲಿದೆ.


    ಏನಿದು ಪ್ರಯೋಗ?
    ಈ ಎರಡೂ ಉಪಗ್ರಹಗಳು ತನ್ನಲ್ಲಿರುವ ಸೆನ್ಸರ್‌, ವ್ಯವಸ್ಥೆಯನ್ನು ಬಳಸಿ ಒಂದಕ್ಕೊಂದು ಜೋಡಣೆ ಆಗುವಂತೆ ಮಾಡುವುದು. ನಂತರ ಪರಸ್ಪರ ಬೇರೆಯಾಗುವಂತೆ ಮಾಡಲು ಇಸ್ರೋ ಈ ಪ್ರಯೋಗ ನಡೆಸಲಿದೆ. ಈ ಕಾರಣಕ್ಕೆ ಸ್ಪೇಸ್ ಡಾಕಿಂಗ್ ಎಕ್ಸ್‌ಪರಿಮೆಂಟ್’ (ಸ್ಪೇಡೆಕ್ಸ್) ಎಂಬ ಹೆಸರನ್ನು ಇಡಲಾಗಿದೆ.

    ಯಾಕೆ ಇಷ್ಟೊಂದು ಮಹತ್ವ?
    ಮಾನವಸಹಿತ ಅಂತರಿಕ್ಷಯಾನ, ಚಂದ್ರನ ಅಂಗಳಕ್ಕೆ ಮನುಷ್ಯರನ್ನು ಕಳುಹಿಸಿ, ವಾಪಸ್‌ ಕರೆತರಲು ಇಸ್ರೋ ಈಗಾಗಲೇ ಯೋಜನೆ ರೂಪಿಸಿದೆ. ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಂತೆ ಇಸ್ರೋ ತನ್ನದೇ ಆದ ಸ್ವದೇಶಿ ‘ಭಾರತೀಯ ಅಂತರಿಕ್ಷ ನಿಲ್ದಾಣ’ ಸ್ಥಾಪಿಸಲು ಸಿದ್ಧತೆ ಆರಂಭಿಸಿದೆ. ಆ ನಿಲ್ದಾಣಕ್ಕೆ ಗಗನಯಾತ್ರಿಗಳು, ಉಪಕರಣಗಳನ್ನು ಕಳುಹಿಸಲು ಡಾಕಿಂಗ್‌, ಅನ್‌ಡಾಕಿಂಗ್‌ ತಂತ್ರಜ್ಞಾನ ತಿಳಿದಿರಬೇಕು.

     

  • 2nd PUC Result: ವಿಜ್ಞಾನ ವಿಭಾಗದಲ್ಲಿ ಟಾಪ್ ಅಂಕ ಗಳಿಸಿದ ವಿದ್ಯಾರ್ಥಿಗಳು

    2nd PUC Result: ವಿಜ್ಞಾನ ವಿಭಾಗದಲ್ಲಿ ಟಾಪ್ ಅಂಕ ಗಳಿಸಿದ ವಿದ್ಯಾರ್ಥಿಗಳು

    ಬೆಂಗಳೂರು: ಈ ವರ್ಷ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ವಿಜ್ಞಾನ ವಿಭಾಗದಲ್ಲಿ ಇಬ್ಬರು ವಿದ್ಯಾರ್ಥಿಗಳು 596 ಅಂಕಗಳನ್ನು ಗಳಿಸುವ ಮೂಲಕ ಪ್ರಥಮ ರ‍್ಯಾಂಕ್ ಅನ್ನು ಗಿಟ್ಟಿಸಿಕೊಂಡಿದ್ದಾರೆ. ಈ ಬಾರಿ ರಾಜ್ಯದಲ್ಲಿ ವಿಜ್ಞಾನ ವಿಭಾದಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಸಾಧನೆ ಮಾಡಿರುವ ವಿದ್ಯಾರ್ಥಿಗಳ ಪಟ್ಟಿ ಹೀಗಿದೆ.

    596 ಅಂಕ ಪಡೆದ ವಿದ್ಯಾರ್ಥಿಗಳು:
    ಎಸ್‌ಎಮ್ ಕೌಶಿಕ್ – ಗಂಗೋತ್ರಿ ಪಿಯು ಕಾಲೇಜು ಶ್ರೀನಿವಾಸಪುರ, ಕೋಲಾರ ಜಿಲ್ಲೆ

    ಸುರಭಿ ಎಸ್ – ಆರ್‌ವಿ ಪಿಯು ಕಾಲೇಜು ಎನ್‌ಎಮ್‌ಕೆಆರ್‌ವಿ ಕ್ಯಾಂಪಸ್ 3ನೇ ಬ್ಲಾಕ್ ಜಯನಗರ, ಬೆಂಗಳೂರು

    595 ಅಂಕ ಪಡೆದ ವಿದ್ಯಾರ್ಥಿಗಳು:
    ಕಟ್ಟೋಜು ಜಯಿಶಿಕ – ಆರ್‌ವಿ ಪಿಯು ಕಾಲೇಜು ಎನ್‌ಎಮ್‌ಕೆಆರ್‌ವಿ ಕ್ಯಾಂಪಸ್ 3ನೇ ಬ್ಲಾಕ್ ಜಯನಗರ, ಬೆಂಗಳೂರು

    ಸಾತ್ವಿಕ್ ಪದ್ಮನಾಭ ಭಟ್ – ಮಹಾತ್ಮಗಾಂಧಿ ಮೆಮೋರಿಯಲ್ ಪಿಯು ಕಾಲೇಜು, ಉಡುಪಿ

    ಜೆಸ್ವಿತ ದಿಯಾಸ್ – ಪೂರ್ಣಪ್ರಜ್ಞಾ ಪಿಯು ಕಾಲೇಜು, ಉಡುಪಿ

    594 ಅಂಕ ಪಡೆದ ವಿದ್ಯಾರ್ಥಿಗಳು:
    ಹರ್ಷಿತ ಆರ್ – ನಾರಾಯಣ ಪಿಯು ಕಾಲೇಜು, ಬೆಂಗಳೂರು

    ನೇಹಾ ರಾವ್ – ಶ್ರೀ ವೆಂಕಟರಮಣ ಪಿಯು ಕಾಲೇಜು, ಕುಂದಾಪುರ, ಉಡುಪಿ

    ಅದಿತಿ ಆರ್ – ಎನ್‌ಎಮ್‌ಕೆಆರ್‌ವಿ ಪಿಯು ಕಾಲೇಜು, ಜಯನಗರ, ಬೆಂಗಳೂರು

    ರುಚಿತಾ ಎಂ – ಸರ್ವೋದಯ ಪಿಯು ಕಾಲೇಜು, ತುಮಕೂರು

    ಸಮಯ ಸದಾನಂದ ಮಬೆನ್ – ಕಾರ್ಕಳ ಜ್ಞಾನಸುಧಾ ಪಿಯು ಕಾಲೇಜು, ಉಡುಪಿ

    ಯೋಗೇಶ್ ತುಕರಾಮ್ ಬಡಚಿ – ಸತ್ಯಸಾಯಿ ಲೋಕಸೇವಾ ಪಿಯು ಕಾಲೇಜು ದಕ್ಷಿಣ ಕನ್ನಡ ಜಿಲ್ಲೆ

    ರಜತ ಎಂ ಹೆಗಡೆ – ಎಂಇಎಸ್ ಚೈತನ್ಯ ಪಿಯು ಕಾಲೇಜು, ಉತ್ತರ ಕನ್ನಡ ಜಿಲ್ಲೆ

    ಸಿರಿ ಆರ್ ಆಚಾರ್ಯ – ಆರ್‌ವಿ ಪಿಯು ಕಾಲೇಜು, ಎನ್‌ಎಮ್‌ಕೆಆರ್‌ವಿ ಕ್ಯಾಂಪಸ್ 3ನೇ ಬ್ಲಾಕ್ ಜಯನಗರ, ಬೆಂಗಳೂರು

    ಪ್ರಚಿತ ಎಂ – ಆಳ್ವಾಸ್ ಪಿಯು ಕಾಲೇಜು, ಮೂಡುಬಿದಿರೆ, ದಕ್ಷಿಣ ಕನ್ನಡ ಜಿಲ್ಲೆ

    
    
  • ಬ್ರಹ್ಮಾಂಡ ಹುಟ್ಟಿದಾಗಿನ ಮೊದಲ ಚಿತ್ರ – ನಾಸಾದ ವೆಬ್ ಟೆಲಿಸ್ಕೋಪ್‌ನಿಂದ ಸೆರೆ

    ಬ್ರಹ್ಮಾಂಡ ಹುಟ್ಟಿದಾಗಿನ ಮೊದಲ ಚಿತ್ರ – ನಾಸಾದ ವೆಬ್ ಟೆಲಿಸ್ಕೋಪ್‌ನಿಂದ ಸೆರೆ

    ವಾಷಿಂಗ್ಟನ್: 13 ದಶಕೋಟಿ ವರ್ಷಗಳಷ್ಟು ಹಿಂದೆ ಜಗತ್ತು ಹೇಗಿತ್ತು? ಅಂದಿನ ಆಗಸದಲ್ಲಿ ಕಾಣುತ್ತಿದ್ದ ಶತಕೋಟಿ ತಾರೆಗಳು, ನಕ್ಷತ್ರಪುಂಜಗಳು ಯಾವ ಬಣ್ಣದಲ್ಲಿ ಕಂಗೊಳಿಸುತ್ತಿದ್ದವು? ಎಂಬ ಪ್ರಶ್ನೆಗೆ ಇದೀಗ ಉತ್ತರ ಸಿಕ್ಕಿದೆ. ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರ ವೈಟ್‌ಹೌಸ್‌ನಲ್ಲಿ, 13 ದಶಕೋಟಿ ವರ್ಷಗಳಷ್ಟು ಹಿಂದಿನ ಬಾಹ್ಯಾಕಾಶ ಲೋಕವನ್ನು ತೆರೆದಿಡಲಾಗಿದೆ.

    ಜೇಮ್ಸ್ ವೆಬ್ ಟೆಲಿಸ್ಕೋಪ್ ಅತ್ಯದ್ಭುತ ಚಿತ್ರಗಳನ್ನು ಸೆರೆಹಿಡಿದಿದ್ದು, ಇದು ಪ್ರಪಂಚ ಹುಟ್ಟಿದ ಸಮಯ ಆಕಾಶ ಹೇಗೆ ಕಾಣಿಸುತ್ತಿತ್ತು ಎಂಬುದನ್ನು ಬಹಿರಂಗಪಡಿಸಿದೆ. ನೀಲಿ, ಕಿತ್ತಳೆ ಹಾಗೂ ಬಿಳಿ ಬಣ್ಣದಲ್ಲಿರುವ ಗ್ಯಾಲಾಕ್ಸಿಗಳು ಗಮನ ಸೆಳೆದಿವೆ. ಇನ್ನೂ ವಿಶೇಷವಾಗಿ ಈ ಟೆಲಿಸ್ಕೋಪ್ ತೆಗೆದಿರುವ ಮೊದಲ ಚಿತ್ರ ಇದಾಗಿದೆ. ಇದನ್ನೂ ಓದಿ: ಶಾರ್ಟ್‌ಕಟ್‌ ರಾಜಕೀಯದ ಮೂಲಕ ಮತಗಳನ್ನು ಸೆಳೆಯುವುದು ತುಂಬಾ ಸುಲಭ: ಪ್ರಧಾನಿ ಮೋದಿ

    2021ರ ಡಿಸೆಂಬರ್‌ನಲ್ಲಿ ಜೇಮ್ಸ್ ವೆಬ್ ಟೆಲಿಸ್ಕೋಪ್ ಅನ್ನು ಅಮೆರಿಕ ಅಂತರಿಕ್ಷಕ್ಕೆ ಕಳುಹಿಸಿತ್ತು. ವಿಶ್ವದ ಸೃಷ್ಟಿಗೆ ಕಾರಣವಾದ ಬಿಗ್‌ಬ್ಯಾಂಗ್ (ಮಹಾಸ್ಫೋಟ) ಸಂಭವಿಸಿದ 800 ವರ್ಷಗಳ ಬಳಿಕದ ಚಿತ್ರಣ ಇದು ಎಂದು ತಜ್ಞರು ಅಂದಾಜು ಮಾಡಿದ್ದು, ಇದೊಂದು ಐತಿಹಾಸಿಕ ದಿನ ಎಂದು ಅಮೆರಿಕ ಅಧ್ಯಕ್ಷ ಜೋ ಬೈಡನ್ ಬಣ್ಣಿಸಿದ್ದಾರೆ. ಇದನ್ನೂ ಓದಿ: ಬುಮ್ರಾ ಬೌಲಿಂಗ್‌ ದಾಳಿಗೆ ತತ್ತರಿಸಿದ ಆಂಗ್ಲರು – ಭಾರತಕ್ಕೆ 10 ವಿಕೆಟ್‌ಗಳ ಭರ್ಜರಿ ಜಯ

    ಇನ್ನು ಮುಂದೆ ಸೃಷ್ಟಿಗೆ ಕಾರಣವಾದ, ವಿಸ್ಮಯ ವಿಚಾರಗಳು ಹಾಗೂ ಅತ್ಯಗತ್ಯ ಮಾಹಿತಿಗಳನ್ನು ಜೇಮ್ಸ್ ವೆಬ್ ಟೆಲಿಸ್ಕೋಪ್ ಫೋಟೋಗಳನ್ನು ಸೆರೆಹಿಡಿಯುವ ಮೂಲಕ ಒದಗಿಸಲಿದೆ.

    Live Tv
    [brid partner=56869869 player=32851 video=960834 autoplay=true]

  • ದ್ವಿತೀಯ ಪಿಯು ಫಲಿತಾಂಶ ಪ್ರಕಟ – ಟಾಪರ್ಸ್ ಯಾರ‍್ಯಾರು ಗೊತ್ತಾ?

    ದ್ವಿತೀಯ ಪಿಯು ಫಲಿತಾಂಶ ಪ್ರಕಟ – ಟಾಪರ್ಸ್ ಯಾರ‍್ಯಾರು ಗೊತ್ತಾ?

    ಬೆಂಗಳೂರು: 2021-22ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಸಿಮ್ರಾನ್ ಶೇಷರಾವ್ 600 ಅಂಕಗಳಿಗೆ 598 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ.

    ಸಿಮ್ರಾನ್ ಶೇಷರಾವ್ ಬೆಂಗಳೂರಿನ ಎನ್‍ಎಂಕೆಆರ್‌ವಿ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದಾರೆ. ಇವರು ವಿಜ್ಞಾನ ವಿಭಾಗದಲ್ಲಿ ಪ್ರಥಮ ರ‍್ಯಾಂಕ್ ಪಡೆದ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಕರೆ ಮಾಡಿ ಶುಭ ಕೋರಿದ್ದಾರೆ. ಈ ವೇಳೆ ಎಂಜಿನಿಯರಿಂಗ್ ಓದುವ ಆಸೆ ಇದೆ ಎಂದು ತನ್ನ ಕನಸನ್ನು ವಿದ್ಯಾರ್ಥಿನಿ ಸಚಿವರಿಗೆ ತಿಳಿಸಿದರು.

    ಇನ್ನುಳಿದಂತೆ ವಾಣಿಜ್ಯ ವಿಭಾಗದಲ್ಲಿ 4 ವಿದ್ಯಾರ್ಥಿಗಳು 600 ಅಂಕಗಳಿಗೆ 596 ಅಂಕ ಗಳಿಸಿ ಟಾಪರ್ಸ್ ಆಗಿದ್ದು, ಬೆಂಗಳೂರಿನ ಜೈನ್ ಪಿಯು ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಮಾನವ ವಿನಯ್ ಕೇಜ್ರಿವಾಲ್, ಬೆಂಗಳೂರಿನ ಬಿಜಿಎಸ್ ಕಾಲೇಜಿನ ನೀಲು ಸಿಂಗ್, ಬೆಂಗಳೂರಿನ ಸೆಂಟ್ ಕ್ಲಾರಟ್ ಪಿಯು ಕಾಲೇಜಿನ ಆಕಾಶ್ ದಾಸ್ ಹಾಗೂ ಚಿಕ್ಕಬಳ್ಳಾಪುರ ಕಾಲೇಜಿನ ನೇಹಾ ಈ ಸಾಧನೆಯನ್ನು ಮಾಡಿದ್ದಾರೆ. ಇದನ್ನೂ ಓದಿ: ಯಾವುದೇ ಕಾರಣಕ್ಕೂ ಪಠ್ಯಪುಸ್ತಕ ಪರಿಷ್ಕರಣೆ ವಾಪಸ್ ಪಡೆಯಲ್ಲ: ಬಿಸಿ ನಾಗೇಶ್

    ಕಲಾ ವಿಭಾಗದ ಇಬ್ಬರು ವಿದ್ಯಾರ್ಥಿಗಳು ಟಾಪರ್ಸ್ ಆಗಿದ್ದಾರೆ. ಬಳ್ಳಾರಿ ಕಾಲೇಜಿನ ಶ್ವೇತಾ ಭೀಮಾ ಶಂಕರ್ ಭೈರಗೊಂಡ ಹಾಗೂ ಮಡಿವಾಳರಾ ಸಹನಾ 600 ಅಂಕಗಳಿಗೆ 594 ಅಂಕಗಳನ್ನು ಪಡೆದು ಕಲಾ ವಿಭಾಗದಲ್ಲೇ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಇದನ್ನೂ ಓದಿ: 2nd PUC ಫಲಿತಾಂಶ ‌ಪ್ರಕಟ- 61.88% ಮಕ್ಕಳು ಪಾಸ್‌, ವಿದ್ಯಾರ್ಥಿನಿಯರೇ ಮೇಲುಗೈ

    Live Tv

  • ಇದೇ ಮೊದಲ ಬಾರಿಗೆ ಜೀವಂತ 3ಡಿ ಮುದ್ರಿತ ಕಿವಿಯ ಯಶಸ್ವೀ ಕಸಿ

    ಇದೇ ಮೊದಲ ಬಾರಿಗೆ ಜೀವಂತ 3ಡಿ ಮುದ್ರಿತ ಕಿವಿಯ ಯಶಸ್ವೀ ಕಸಿ

    ವಾಷಿಂಗ್ಟನ್: ವೈದ್ಯಕೀಯ ಲೋಕ ದಿನೇ ದಿನೇ ಹೆಚ್ಚುತ್ತಿರುವ ಪ್ರಗತಿಯಿಂದಾಗಿ ರೋಗಿಗಳನ್ನು ಹಾಗೂ ಜನರ ಜೀವನವನ್ನು ಸರಾಗಗೊಳಿಸುತ್ತಿದೆ. ಇದೀಗ ವೈದ್ಯಕೀಯ ರಂಗದಲ್ಲಿ ಹೊಸ ಪ್ರಯತ್ನ ಮಾಡಲಾಗಿದೆ. ವಿಶ್ವದಲ್ಲೇ ಮೊದಲ ಬಾರಿಗೆ 3ಡಿ ಮುದ್ರಿತ ಜೀವಂತ ಕಿವಿಯನ್ನು ವ್ಯಕ್ತಿಯೊಬ್ಬರಿಗೆ ಕಸಿ ಮಾಡಲಾಗಿದೆ.

    ಹೌದು, ಜನಿಸುವಾಗಲೇ ಅಲ್ಪ ಸ್ವಲ್ಪ ಕಿವಿಯೊಂದಿಗೆ ಹುಟ್ಟಿದ ಯುವತಿಗೆ ತಮ್ಮ ಸ್ವಂತ ಜೀವಕೋಶಗಳಿಂದ 3ಡಿ ಕಿವಿಯನ್ನು ರಚಿಸಿ, ಅದನ್ನು ಯಶಸ್ವಿಯಾಗಿ ಕಸಿ ಮಾಡಲಾಗಿದೆ. ಈ ಮೂಲಕ ವೈದ್ಯಕೀಯ ಲೋಕದಲ್ಲೊಂದು ಮೈಲಿಗಲ್ಲು ಸ್ಥಾಪನೆಯಾಗಿದೆ.

    ಮೆಕ್ಸಿಕೋ ಮೂಲದ ಯುವತಿ ಅಲೆಕ್ಸಾ ಹುಟ್ಟುವಾಗಲೇ ತಮ್ಮ ಬಲಭಾಗದ ಕಿವಿಯನ್ನು ಅಲ್ಪ ಸ್ವಲ್ಪವಾಗಿ ಹೊಂದಿದ್ದರು. ಇದೀಗ ವೈದ್ಯಕೀಯ ಲೋಕದ ಹೊಸ ಪ್ರಯತ್ನದ ಮೂಲಕ ಅವರ ಇನ್ನೊಂದು ಕಿವಿಯನ್ನು ಅನುಕರಿಸಿ 3ಡಿ ಮುದ್ರಣದ ಇನ್ನೊಂದು ಕಿವಿಯನ್ನು ರಚಿಸಿ ಕಸಿ ಮಾಡಲಾಗಿದೆ. ಇದನ್ನೂ ಓದಿ: ಜೂಮ್ ಕ್ಲಾಸ್ ಮಿಸ್ ಮಾಡ್ದೆ ಹಾಜರಾಗಿದ್ದ ಬೆಕ್ಕು – ಹ್ಯಾಟ್ ಕೊಟ್ಟ ವಿಶ್ವವಿದ್ಯಾಲಯ

    ವೈದ್ಯಕೀಯ ಲೋಕದ ಈ ಹೊಸ ಕ್ರಾಂತಿ ಸದ್ಯ 3ಡಿ ಮುದ್ರಿತ ಅಂಗಗಳನ್ನು ಜನರಿಗೆ ಜೋಡಿಸುವ ಪ್ರಯೋಗದ ಒಂದು ಭಾಗವಾಗಿದೆ. ಇದನ್ನು ಸಾಮಾನ್ಯ ವೈದ್ಯಕೀಯ ಲೋಕಕ್ಕೆ ತರುವುದಕ್ಕೂ ಮೊದಲು ಹಲವಾರು ಸುರಕ್ಷತಾ ತಪಾಸಣೆ ನಡೆಸಬೇಕಿದೆ. ಇದನ್ನೂ ಓದಿ: ಕರಾವಳಿ, ಮಲೆನಾಡಿನಲ್ಲಿ ಮತ್ತೆ ಸ್ಯಾಟಲೈಟ್ ಫೋನ್ ಆಕ್ಟೀವ್ – 10 ದಿನಗಳಲ್ಲಿ 4 ಕಡೆ ರಿಂಗಣಿಸಿದ ಲೊಕೇಷನ್ ಟ್ರೇಸ್

    ಜನರು ಹುಟ್ಟುವಾಗಲೇ ಅಥವಾ ಅಪಘಾತದಲ್ಲಿ ದೇಹದ ಅಂಗಗಳನ್ನು ಕಳೆದುಕೊಂಡರೆ, 3ಡಿ ಮುದ್ರಿತ ಜೀವಂತ ಅಂಗಗಳ ಕಸಿ ಮಾಡಬಹುದು ಎಂಬುದು ಇದೀಗ ಸಾಬೀತಾಗಿದೆ.

  • ನನ್ನ ಹೆಸರಿಟ್ಟಿದ್ದಕ್ಕೇ ಒಂದೊಂದು ಕಥೆ ಕಟ್ಟಿದ್ದರು ಅಪ್ಪ, ಅಮ್ಮ: ರಾಹುಲ್

    ನನ್ನ ಹೆಸರಿಟ್ಟಿದ್ದಕ್ಕೇ ಒಂದೊಂದು ಕಥೆ ಕಟ್ಟಿದ್ದರು ಅಪ್ಪ, ಅಮ್ಮ: ರಾಹುಲ್

    ನವದೆಹಲಿ: ಭಾರತೀಯ ಕ್ರಿಕೆಟ್ ತಂಡದ ಉಪನಾಯಕನಾಗಿರುವ ಕನ್ನಡಿಗ ಕೆ.ಎಲ್.ರಾಹುಲ್ ಈ ಬಾರಿಯ ಐಪಿಎಲ್ ಆವೃತ್ತಿಯಲ್ಲಿ ನೂತನವಾಗಿ ಸೇರ್ಪಡೆಗೊಂಡಿರುವ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕರಾಗಿದ್ದಾರೆ. ಅಲ್ಲದೇ, ಸುಮಾರು ಮೂರು ವರ್ಷ ಕಿಂಗ್ಸ್ ಪಂಜಾಬ್ ತಂಡದ ನಾಯಕನಾಗಿ ಉತ್ತಮ ಪ್ರದರ್ಶನ ನೀಡಿದ್ದಾರೆ. ಸದಾ ಬ್ಯೂಸಿ ಶೆಡ್ಯೂಲ್‌ನಲ್ಲಿರುವ ಕೆ.ಎಲ್.ರಾಹುಲ್ ಬ್ರೇಕ್‌ಫಾಸ್ಟ್ ವಿಥ್ ಚಾಂಪಿಯನ್ಸ್ ಎಂಬ ಟಾಕ್ ಶೋ ನಲ್ಲಿ ತಮ್ಮ ಜೀವನದ ಸಿಹಿ-ಕಹಿ ಅನುಭವಗಳನ್ನು ಹಂಚಿಕೊAಡಿದ್ದಾರೆ. ಕ್ರಿಕೆಟ್ ಜೀವನಕ್ಕೆ ಕಾಲಿಟ್ಟ ಬಳಿಕ ಇದೇ ಮೊದಲ ಬಾರಿಗೆ ತಮ್ಮ ಜೀನವದಲ್ಲಿ ನಡೆದ ಇಂಟರೆಸ್ಟಿಂಗ್ ಸಂಗತಿಗಳನ್ನು ಮಾಧ್ಯಮದಲ್ಲಿ ಹೇಳಿಕೊಂಡಿದ್ದಾರೆ.

    KLR

    ಮಾತನಾಡುತ್ತಾ, ಒಂದೊಮ್ಮೆ ನಾನು ನನ್ನ ಅಮ್ಮನನ್ನು ಕೇಳಿದೆ ನನಗೇಕೆ ರಾಹುಲ್ ಎಂದು ಹೆಸರಿಟ್ಟಿದ್ದು? ಅಂತ, ಅದಕ್ಕೆ ನನ್ನಮ್ಮ ಒಂದು ಕಥೆಯನ್ನೇ ಹೇಳಿಬಿಟ್ಟರು. ಅವರು ಶಾರುಖ್ ಖಾನ್‌ಗೆ ದೊಡ್ಡ ಅಭಿಮಾನಿಯಾಗಿದ್ದರಂತೆ, 90ರ ದಶಕದಲ್ಲಿ ಶಾರುಖ್ ಅವರು ನಟಿಸುವ ಸಿನಿಮಾದ ಪಾತ್ರಗಳಿಗೆಲ್ಲ ರಾಹುಲ್ ಹೆಸರೇ ಬಹುತೇಕವಾಗಿ ಇರುತ್ತಿತ್ತಂತೆ. ಹಾಗಾಗಿ ನನಗೂ ಅದೇ ಹೆಸರು ಇಟ್ಟೆವು ಎಂದು ಹೇಳಿದ್ದರು. ನಾನು ಇದು ವಾಸ್ತವವೇ ಇರಬೇಕೆಂದು ನಂಬಿಕೊಂಡಿದ್ದೆ. ಈ ನಡುವೆ ನನ್ನ ಗೆಳೆಯನೊಬ್ಬ ನನ್ನ ಹೆಸರಿನ ಬಗ್ಗೆ ಕೇಳಿದಾಗ ನಾನೂ ಹೀಗೆ ಹೇಳಿದ್ದೆ. ಅವನು ಸ್ವಲ್ಪ ಶಾರುಖ್ ಖಾನ್ ಸಿನಿಮಾಗಳನ್ನೆಲ್ಲ ನೋಡಿಕೊಂಡಿದ್ದಂತೆ ಕಾಣುತ್ತದೆ. ಇದನ್ನೂ ಓದಿ: ಬ್ರಾಂಡ್ ವ್ಯಾಲ್ಯೂ ಕಡಿಮೆಯಾದರೂ ಕೊಹ್ಲಿ ನಂ.1 – ಯಾರ ಮೌಲ್ಯ ಎಷ್ಟು

    ತಕ್ಷಣ ರಾಹುಲ್ ಹೆಸರಿನಲ್ಲಿ ಶಾರೂಖ್ ಪಾತ್ರ ಮಾಡಿದ್ದು 1994ರಲ್ಲಿ, ನೀನು ಹುಟ್ಟಿದ್ದು 1992ರಲ್ಲಿ. ಹೀಗಿದ್ದ ಮೇಲೆ ರಾಹುಲ್ ಹೆಸರನ್ನು ನಿನಗೆ ಇಡಲು ಹೇಗೆ ಸಾಧ್ಯವಾಯಿತು? ಎಂದು ಕೇಳಿದ. ನನಗೂ ಅದು ಹೌದೆಂದು ಖಾತ್ರಿಯಾಯಿತು. ಮತ್ತೆ ಅಮ್ಮನಿಗೊಮ್ಮೆ ಕೇಳಿದೆ. ಅದಕ್ಕವರು ಏನೋ ಇರಬಹುದು, ಅದಕ್ಕೆಲ್ಲ ಈಗ ಯಾರು ತಲೆಕೆಡಿಸಿಕೊಳ್ಳುತ್ತಾರೆ? ಎಂದುಬಿಟ್ಟರು. ಇನ್ನು ನಮ್ಮಪ್ಪನಿಗೆ ಕೇಳಿದ್ದಕ್ಕೆ ಅವರು ಇನ್ನೊಂದು ಬ್ರಹ್ಮಾಂಡ ಕಥೆಯನ್ನೇ ಹೇಳಿದರು. ಅವರು ಸುನಿಲ್ ಗಾವಸ್ಕರ್ ಅಭಿಮಾನಿಯಾಗಿದ್ದರಂತೆ. ಗಾವಸ್ಕರ್ ತಮ್ಮ ಪುತ್ರನಿಗೆ ರೋಹನ್ ಎಂದು ಹೆಸರಿಟ್ಟಿದ್ದರು. ಆದ್ದರಿಂದ ನನಗೂ ಅದೇ ಹೆಸರನ್ನಿಡಲು ಅಪ್ಪ ಬಯಸಿದ್ದರಂತೆ. ಆದರೆ ಅವರು ರೋಹನ್ ಹೆಸರನ್ನು ರಾಹುಲ್ ಎಂದು ತಪ್ಪುತಿಳಿದು ಹಾಗೆಯೇ ಇಟ್ಟುಬಿಟ್ಟರಂತೆ ಎಂದು ಮುಗುಳ್ನಕ್ಕರು.

    KL RAhul

    ವಿಜ್ಞಾನ ತೆಗೆದುಕೊಂಡರೆ ಕ್ರಿಕೆಟ್ ಆಡಲು ಕಷ್ಟ
    ನನ್ನ ತಂದೆ-ತಾಯಿ ವೃತ್ತಿಯಲ್ಲಿ ಪ್ರೊಫೆಸರ್. ಸಾಲದ್ದಕ್ಕೆ ಕುಟುಂಬದಲ್ಲಿ ಯಾರನ್ನೇ ನೋಡಿದರೂ ಒಂದು ವೈದ್ಯರು, ಇಲ್ಲವೇ ಎಂಜಿನಿಯರ್‌ಗಳಾಗಿದ್ದರು ಅಥವಾ ದೊಡ್ಡದೊಡ್ಡ ಉದ್ಯೋಗದಲ್ಲಿದ್ದರು. ನಾನು ಸಹ 10ನೇ ತರಗತಿಯವರೆಗೆ ಉತ್ತಮ ವಿದ್ಯಾರ್ಥಿಯೇ ಆಗಿದ್ದೆ. ಅದು ಮುಗಿದ ಕೂಡಲೇ ಮುಂದಿನ ಶಿಕ್ಷಣಕ್ಕೆ ವಿಜ್ಞಾನವೋ, ವಾಣಿಜ್ಯವೋ ಎಂಬ ಗೊಂದಲ ಶುರುವಾಗಿತ್ತು. ನನ್ನ ಕುಟುಂಬದಲ್ಲಿ ಯಾರೂ, ಎಂದೂ ವಾಣಿಜ್ಯಶಾಸ್ತ್ರ  ತೆಗೆದು ಕೊಂಡಿರಲಿಲ್ಲ. ಆ ವಿಷಯ ತೆಗೆದುಕೊಂಡರೆ ಅವಮಾನವೆಂಬಂತೆ ಅವರು ಭಾವಿಸಿದ್ದರು. ಆದರೆ ನಾನು ಮಾತ್ರ ವಿಜ್ಞಾನ ತೆಗೆದುಕೊಂಡು ಜೊತೆಜೊತೆಗೇ ಕ್ರಿಕೆಟ್ ಆಡಲು ಸಾಧ್ಯವಾಗುವುದಿಲ್ಲ ಎಂದು ಹೇಳಿದೆ. ಅವರು ಅದನ್ನು ಅರ್ಥ ಮಾಡಿಕೊಂಡರು ಎಂದು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: IPL ಮೊದಲ ಪಂದ್ಯದಲ್ಲೇ ವಿಲಿಯಮ್ಸನ್‌ಗೆ 12 ಲಕ್ಷ ದಂಡ: ಕಾರಣ ಇಷ್ಟೇ… 

    rahul

    ಅಮ್ಮ ಈಗಲೂ ಬೈಯುತ್ತಾರೆ
    ನನ್ನಮ್ಮ ಈಗಲೂ ನೀನು ಪದವಿ ಪೂರೈಸಿಲ್ಲ ಎಂದು ಬೈಯ್ಯುತ್ತಾರೆ. ಲಾಕ್‌ಡೌನ್ ಆಗಿದ್ದಾಗಲೂ ನಿನೇಕೆ ಪಟ್ಟು ಹಿಡಿದು ಓದಬಾರದು? 30 ವಿಷಯ ಓದು ಮುಗಿಸಲು ಏನು ಕಷ್ಟ? ಎಂದು ಗರಿದ್ದರು. ಅದಕ್ಕೆ ನಾನು, ಅಮ್ಮ ನಾನು ಕ್ರಿಕೆಟ್ ಆಡುತ್ತಿದ್ದೇನೆ, ಪ್ರದರ್ಶನ ಚೆನ್ನಾಗಿಯೇ ಇದೆ. ಈಗ ನಾನು 30 ಪ್ರಶ್ನೆ ಪತ್ರಿಕೆಗಳಿಗೆ ಉತ್ತರ ಬರೀಬೇಕಾ? ವಿದ್ಯೆ ನನಗೆ ಅತ್ತುತ್ತಿಲ್ಲ ಏನು ಮಾಡಲಿ ಹೇಳು? ಎಂದು ಪ್ರಶ್ನಿಸಿದ್ದೆ. ಸಹಜವಾಗಿಯೇ ಹೌದೆಂದುಬಿಟ್ಟರು ಅಮ್ಮ. ನಾನು ಭಾರತ ಕ್ರಿಕೆಟ್ ತಂಡಕ್ಕೆ ಸೇರಿದಾಗಲೂ ಅಮ್ಮನಿಗೆ ಹೆಚ್ಚೆನು ಖುಷಿಯಿರಲಿಲ್ಲ. ಅದಾದ 4 ವರ್ಷ ನಾನು ಕ್ರಿಕೆಟ್ ಆಡಿ ಹೆಸರು ಮಾಡಿದ್ದೆ. ಆಮೇಲೆ ನನಗೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಿಂದ (RBI) ಕೆಲಸ ಸಿಕ್ಕಿತು. ನನಗೆ ಕೇಂದ್ರ ಸರ್ಕಾರದ ನೌಕರಿ ಸಿಕ್ಕಿದ್ದಾಗ ಅವರು ಬಹಳ ಖುಷಿಪಟ್ಟಿದ್ದರು. ಪರ್ವಾಗಿಲ್ಲ ಇನ್ನು ನಿನಗೆ ಒಳ್ಳೆಯ ಸಂಬಳ ಸಿಗುತ್ತದೆ, ಜೀವನದಲ್ಲಿ ಒಂದು ನೆಲೆ ಕಂಡುಕೊಂಡೆ ಎಂಬಂತಿತ್ತು ಅವರ ಭಾವ ಎಂದು ಭಾವುಕರಾದರು.

     

  • ಮಿಲ್ಕಿ ವೇಯಲ್ಲಿ 18 ನಿಮಿಷಗಳಿಗೊಮ್ಮೆ ಸ್ಫೋಟವಾಗುವ ವಸ್ತು ಪತ್ತೆ

    ಕ್ಯಾನ್‌ಬೆರಾ: ಆಕಾಶದಲ್ಲಿ ಇಲ್ಲಿಯವರೆಗೆ ಎಂದಿಗೂ ಕಾಣಿಸಿಕೊಳ್ಳದ ವಿಚಿತ್ರ ವಸ್ತುವೊಂದನ್ನು ಮಿಲ್ಕಿ ವೇ(ಕ್ಷೀರಪಥ) ಗ್ಯಾಲಕ್ಸಿಯಲ್ಲಿ  ಪತ್ತೆ ಹಚ್ಚಲಾಗಿದೆ. 18.18 ನಿಮಿಷಗಳಿಗೊಮ್ಮೆ ಸ್ಫೋಟಿಸುವ ಈ ಹೊಸ ವಸ್ತು ವಿಜ್ಞಾನ ಲೋಕಕ್ಕೆ ಹೊಸ ಸವಾಲಾಗಿದೆ.

    ಪಶ್ಚಿಮ ಆಸ್ಟ್ರೇಲಿಯಾದ ಹೊರವಲಯದಲ್ಲಿರುವ ಮರ್ಚಿಸನ್ ವೈಡ್‌ಫೀಲ್ಡ್ ಅರೇ ಪ್ರಾಜೆಕ್ಟ್ ಅಡಿ ತಯಾರಾದ ದೂರದರ್ಶಕವನ್ನು ಬಳಸಿಕೊಂಡು ವಿದ್ಯಾರ್ಥಿಗಳು ಮೊದಲ ಬಾರಿಗೆ ಈ ವಿಚಿತ್ರ ವಸ್ತುವನ್ನು ಕಂಡುಹಿಡಿದಿದ್ದರು. ಈಗ ಪ್ರತಿ ಗಂಟೆಗೆ 3 ಬಾರಿ ದೊಡ್ಡ ಮಟ್ಟದ ಸ್ಫೋಟವನ್ನು ಬಿಡುಗಡೆ ಮಾಡುವ ವಸ್ತುವಿನ ಬಗ್ಗೆ ಖಗೋಳಶಾಸ್ತ್ರಜ್ಞರು ಕುತೂಹಲ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಚಂದ್ರನಿಗೆ ಅಪ್ಪಳಿಸಲಿದೆ SpaceX ರಾಕೆಟ್

    ಈ ವಿಚಿತ್ರ ವಸ್ತು ಭೂಮಿಯಿಂದ 4 ಸಾವಿರ ಬೆಳಕಿನ ವರ್ಷಗಳಷ್ಟು ದೂರದಲ್ಲಿದೆ ಎಂದು ಊಹಿಸಲಾಗಿದೆ. ಅತ್ಯಂತ ಪ್ರಕಾಶಮಾನವಾಗಿರುವ ವಸ್ತು ಅತ್ಯಂತ ಬಲವಾದ ಕಾಂತೀಯ ಕ್ಷೇತ್ರವನ್ನು ಹೊಂದಿದೆ. ಇದರ ಬಗ್ಗೆ ಇನ್ನೂ ಹಲವು ರಹಸ್ಯವನ್ನು ಬಯಲು ಮಾಡುವುದು ಬಾಕಿ ಇದೆ ಎಂದು ಖಗೋಳಶಾಸ್ತ್ರಜ್ಞ ನತಾಶಾ ಹರ್ಲಿ-ವಾಕರ್ ತಿಳಿಸಿದ್ದಾರೆ. ಇದನ್ನೂ ಓದಿ: ಕಚ್ಚಾತೈಲ ಬೆಲೆ ಭಾರೀ ಏರಿಕೆ – ಮತ್ತೆ ಪೆಟ್ರೋಲ್ ಬೆಲೆ ದುಬಾರಿ?

    ಕ್ಷೀರ ಪಥದಲ್ಲಿ ಕಂಡುಹಿಡಿಯಲಾದ ಈ ವಿಚಿತ್ರ ವಸ್ತು ಸದ್ಯ ಅಸ್ತಿತ್ವದಲ್ಲಿ ಇದೆಯೋ ಇಲ್ಲವೋ ಎಂಬುದರ ಬಗ್ಗೆ ಖಚಿತವಾಗಿಲ್ಲ. ಇದು ನಕ್ಷತ್ರದ ಅವಶೇಷವೂ ಅಗಿರುವ ಸಾಧ್ಯತೆಯಿದೆ. ಆದರೆ ಇದು ಇಲ್ಲಿಯವರೆಗೆ ಆಕಾಶದಲ್ಲಿ ಕಂಡುಹಿಡಿಯಲಾದ ಎಲ್ಲಾ ವಸ್ತುಗಳಿಗಿಂತಲೂ ಭಿನ್ನವಾಗಿದೆ ಎಂದು ತಿಳಿಸಿದ್ದಾರೆ.

  • ಫಸ್ಟ್‌ ಟೈಂ ಸೂರ್ಯನ ಮೇಲ್ಮೈ ತಲುಪಿತು ಮಾನವ ನಿರ್ಮಿತ ವಸ್ತು

    ವಾಷಿಂಗ್ಟನ್: ಇಲ್ಲಿಯವರೆಗೆ ಮಾನವ ನಿರ್ಮಿತ ಉಪಗ್ರಹಗಳನ್ನು ಮಂಗಳ ಗ್ರಹ, ಚಂದ್ರನ ಮೇಲೆ ಕಳುಹಿಸಲಾಗುತ್ತಿತ್ತು. ಆದರೆ ಯಾವುದೇ ಮಾನವ ನಿರ್ಮಿತ ವಸ್ತುವನ್ನು ಸೂರ್ಯನ ಸಮೀಪ ತೆಗೆದುಕೊಂಡು ಹೋಗಲು ಸಾಧ್ಯವಾಗುತ್ತಿರಲಿಲ್ಲ. ಆದರೆ ಈಗ ಸೂರ್ಯನ ಮೇಲ್ಮೈಗೆ ಮಾನವ ನಿರ್ಮಿತ ವಸ್ತು ತಲುಪಿದೆ.

    ಈಗಾಗಲೇ ಮಾನವ ನಿರ್ಮಿತ ಸೋಲಾರ್ ಪ್ರೋಬ್ ಒಂದು ಸೂರ್ಯನ ಮೇಲ್ಮೈಯನ್ನು ತಲುಪಿದೆ. ಈ ಮೂಲಕ ಇದೇ ಮೊದಲ ಬಾರಿ ಮಾನವ ನಿರ್ಮಿತ ವಸ್ತು ಸೂರ್ಯನ ಮೇಲ್ಮೈ  ತಲುಪಿದ ದಾಖಲೆ ಬರೆದಿದೆ. ಸೂರ್ಯನ ಮೇಲ್ಮೈ ಸ್ಪರ್ಶಿಸಿರುವ ಪಾರ್ಕರ್ ಸೋಲಾರ್ ಪ್ರೋಬ್ ಒಂದು ಗಮನಾರ್ಹ ಸಾಧನೆಯಾಗಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಸಿದ್ಧವಾಗುತ್ತಿದೆ 150 ಕೆಜಿ ಹೊರಬಲ್ಲ ಡ್ರೋನ್

    ಸೂರ್ಯನನ್ನು ಸ್ಪರ್ಶಿಸಲು ಸಾಧ್ಯವಾಗಿರುವ ಈ ಪಾರ್ಕರ್ ಸೋಲಾರ್ ಪ್ರೋಬ್ ಅನ್ನು 2018ರಲ್ಲಿ ಉಡಾವಣೆ ಮಾಡಲಾಗಿತ್ತು. ಅಮೇರಿಕಾದ ಸೌರ ಖಗೋಳ ಶಾಸ್ತ್ರಜ್ಞ ಯುಜಿನ್ ಪಾರ್ಕರ್ ಅವರ ಹೆಸರನ್ನು ಅದಕ್ಕೆ ನೀಡಲಾಗಿತ್ತು.

    ಪಾರ್ಕರ್ ಸೋಲಾರ್ ಪ್ರೋಬ್‌ಅನ್ನು ಸೂರ್ಯನ ಶಾಖದಿಂದ ರಕ್ಷಿಸಲು 4.5 ಇಂಚು ದಪ್ಪದ ಕಾರ್ಬನ್ ಕಂಪೋಸಿಟ್ ಕವಚವನ್ನು ಹೊದಿಸಲಾಗಿದೆ. ಇದು 1,377 ಡಿಗ್ರಿ ಸೆಲ್ಸಿಯಸ್ ತಾಪವನ್ನು ತಡೆದುಕೊಳ್ಳಬಲ್ಲದು ಎಂದು ನಾಸಾ ಹೇಳಿದೆ. ಇದನ್ನೂ ಓದಿ: 1 ರೂ. ಪ್ಲಾನ್ ಪರಿಚಯಿಸಿದ ಜಿಯೋ

    ಈ ಮೂಲಕ ಇಲ್ಲಿಯ ವರೆಗೆ ವಿಜ್ಞಾನಿಗಳಿಂದ ಬಿಡಿಸಲಸಾಧ್ಯವಾದ ಸೂರ್ಯನ ಮೇಲ್ಮೈಯ ನಿಗೂಢ ಪ್ರಶ್ನೆಗಳಿಗೆ ಈ ಸೋಲಾರ್ ಪ್ರೋಬ್ ಉತ್ತರ ನೀಡಲಿದೆ.