Tag: ವಿದಿಶಾ

  • ದುಬೈನಲ್ಲಿ ಏರ್‌ಪೋರ್ಟ್ ಅಧಿಕಾರಿಯಾಗಿದ್ದ ಮಂಗಳೂರು ಯುವತಿ ಅಪಘಾತದಲ್ಲಿ ಸಾವು

    ದುಬೈನಲ್ಲಿ ಏರ್‌ಪೋರ್ಟ್ ಅಧಿಕಾರಿಯಾಗಿದ್ದ ಮಂಗಳೂರು ಯುವತಿ ಅಪಘಾತದಲ್ಲಿ ಸಾವು

    ಮಂಗಳೂರು: ದುಬೈನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮಂಗಳೂರಿನ ಉಳ್ಳಾಲ ಮೂಲದ ಯುವತಿ ಸಾವನ್ನಪ್ಪಿದ್ದಾರೆ.

    ಉಳ್ಳಾಲ ತಾಲೂಕಿನ ಕೋಟೆಕಾರ್ ಬೀರಿ ಕೆಂಪುಮಣ್ಣು ನಿವಾಸಿ ವಿದಿಶಾ (28) ವಿಧಿವಶರಾದ ದುರ್ದೈವಿ. ಇವರು ಮಂಗಳೂರು ತಾಲೂಕು ಪಂಚಾಯತ್ ನ ಮಾಜಿ ಉಪಾಧ್ಯಕ್ಷೆ ಬಿಜೆಪಿ ಮುಖಂಡೆ ರಾಜೀವಿ ಹಾಗೂ ವಿಠಲ ಕುಲಾಲ್ ದಂಪತಿಯ ಏಕೈಕ ಪುತ್ರಿ. ಇದನ್ನೂ ಓದಿ: ಲೋ ಬಿಪಿಯಿಂದ ಪತ್ನಿ ಸಾವೆಂದ ದರ್ಶನ್-‌ ಪತಿಯಿಂದ್ಲೇ ಕೊಲೆ ಅಂತಾ ಪೋಷಕರ ಆರೋಪ

    ಮಂಗಳೂರಿನ ಸಹ್ಯಾದ್ರಿ ಕಾಲೇಜಿನಲ್ಲಿ ವ್ಯವಹಾರ ಆಡಳಿತ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದು ಬಳಿಕ ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಒಂದು ವರ್ಷ ಕೆಲಸ ಮಾಡಿದ್ದರು. ಬಳಿಕ 2019 ರಿಂದ ದುಬೈಗೆ ತೆರಳಿ ಅಲ್ಲಿನ ಏರ್‌ಪೋರ್ಟ್ ನಲ್ಲಿ ಅಧಿಕಾರಿಯಾಗಿ ಕಳೆದ ಐದು ವರ್ಷಗಳಿಂದ ಕೆಲಸ ಮಾಡುತ್ತಿದ್ದರು.

    ಪ್ರತಿದಿನ ಕಂಪನಿಯ ಕ್ಯಾಬ್ ನಲ್ಲೇ ಸಂಚರಿಸುತ್ತಿದ್ದ ವಿದಿಶಾ ಕ್ಯಾಬ್ ತಪ್ಪಿದ ಹಿನ್ನೆಲೆಯಲ್ಲಿ ತನ್ನ ಕಾರಿನಲ್ಲೇ ಸಂಚರಿಸುತ್ತಿದ್ದಾಗ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ .ಗಂಭೀರವಾಗಿ ಗಾಯಗೊಂಡ ವಿದಿಶಾ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

  • ಕನ್ನಡದ ನಟಿ ವಿದಿಶಾ ಶ್ರೀವಾಸ್ತವ ಪ್ರೆಗ್ನೆನ್ಸಿ ಫೋಟೋಶೂಟ್

    ಕನ್ನಡದ ನಟಿ ವಿದಿಶಾ ಶ್ರೀವಾಸ್ತವ ಪ್ರೆಗ್ನೆನ್ಸಿ ಫೋಟೋಶೂಟ್

    ನ್ನಡದ ಜನಪ್ರಿಯ ನಟಿ ಶಾನ್ವಿ ಶ್ರೀವಾಸ್ತವ (Shanvi Srivastav) ಸಹೋದರಿ, ನಟಿ ವಿದಿಶಾ (Vidisha) ಅವರು ಇದೀಗ ಪ್ರೆಗ್ನೆನ್ಸಿ ಫೋಟೋಶೂಟ್‌ನಲ್ಲಿ ಮಿಂಚಿದ್ದಾರೆ. ಕನ್ನಡದ ‘ವಿರಾಟ್’ (Viraat) ಸಿನಿಮಾದ ನಟಿ ವಿದಿಶಾ, ಬೇಬಿ ಬಂಪ್ ಲುಕ್‌ನಲ್ಲಿ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಸದ್ಯ ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ. ಇದನ್ನೂ ಓದಿ:ಬಾಲಿವುಡ್‌ ಚಿತ್ರಗಳ ಫ್ಲಾಪ್‌ ಬಳಿಕ ರಶ್ಮಿಕಾ ನಟನೆ 3ನೇ ಚಿತ್ರದ ಟೀಸರ್‌ ರಿಲೀಸ್

    ವಿರಾಟ್, ನಲಿ ನಲಿಯುತ ಸಿನಿಮಾಗಳಲ್ಲಿ ನಟಿಸಿರುವ ವಿದಿಶಾ ಶ್ರೀವಾಸ್ತವ ಇದೀಗ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ವಿದಿಶಾ ತಾಯಿಯಾಗುತ್ತಿರುವ ವಿಚಾರವನ್ನ ವಿದಿಶಾ ಸಹೋದರಿ ಶಾನ್ವಿ ಶ್ರೀವಾಸ್ತವ ಅವರು ಕೆಲ ತಿಂಗಳ ಹಿಂದೆ ಸೋಶಿಯಲ್ ಮೀಡಿಯಾದಲ್ಲಿ ಸಿಹಿಸುದ್ದಿ ಹಂಚಿಕೊಂಡಿದ್ದರು.

    2018ರಲ್ಲಿ ಸಾಯಕ್ ಎಂಬವರನ್ನು ನಟಿ ವಿದಿಶಾ ಬನಾರಸ್‌ನಲ್ಲಿ ಗುರುಹಿರಿಯರ ಸಮ್ಮುಖದಲ್ಲಿ ಮದುವೆಯಾದರು. ಕೆಲ ವರ್ಷಗಳ ಡೇಟಿಂಗ್ ನಂತರ ಹಿರಿಯರ ಸಮ್ಮತಿಯ ಮೇರೆಗೆ ದಾಂಪತ್ಯ ಜೀವನಕ್ಕೆ ಸಾಯಕ್- ವಿದಿಶಾ ಕಾಲಿಟ್ಟಿದ್ದರು. ನಟಿ ವಿದಿಶಾ ಇದೀಗ ಚೊಚ್ಚಲ ಮಗುವಿನ ಬರುವಿಕೆಯ ಖುಷಿಯಲ್ಲಿದ್ದಾರೆ. ಇದೇ ಸಂತಸದಲ್ಲಿ ಪ್ರೆಗ್ನೆನ್ಸಿ ಫೋಟೋಶೂಟ್ (Pregnancy Photoshoot) ಮಾಡಿಸಿದ್ದಾರೆ.

    ನಟಿ ವಿದಿಶಾ ಇದೀಗ ತುಂಬು ಗರ್ಭಿಣಿಯಾಗಿದ್ದು, ಬೇಬಿ ಬಂಪ್ ಫೋಟೋಶೂಟ್ ಮಾಡಿಸಿದ್ದಾರೆ. ಕೆಂಪು ಬಣ್ಣ- ಬಿಳಿ ಬಣ್ಣದ ಉಡುಗೆಯಲ್ಲಿ ಪತಿ ಜೊತೆ ಕ್ಯಾಮೆರಾಗೆ ಪೋಸ್ ನೀಡಿದ್ದಾರೆ. ಫೋಟೋಶೂಟ್‌ನಲ್ಲಿ ನಟಿಯ ಪ್ರೆಗ್ನೆನ್ಸಿಯ ಗ್ಲೋ ಎದ್ದು ಕಾಣುತ್ತಿದೆ. ವಿದಿಶಾ ಫೋಟೋಸ್ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ. ವಿದಿಶಾ ಸುಸೂತ್ರವಾಗಿ ಹೆರಿಗೆ ಆಗಲಿ ಒಳ್ಳೆಯದಾಗಲಿ ಎಂದು ಫ್ಯಾನ್ಸ್ ಶುಭಕೋರಿದ್ದಾರೆ.

  • ಬಾಲಕಿಯ ರಕ್ಷಿಸುವುದನ್ನು ನೋಡಲು ಹೋಗಿ 30 ಮಂದಿ ಅದೇ ಬಾವಿಗೆ ಬಿದ್ರು!

    ಬಾಲಕಿಯ ರಕ್ಷಿಸುವುದನ್ನು ನೋಡಲು ಹೋಗಿ 30 ಮಂದಿ ಅದೇ ಬಾವಿಗೆ ಬಿದ್ರು!

    – ನಾಲ್ವರು ದಾರುಣ ಸಾವು
    – ಭರದಿಂದ ಸಾಗಿದೆ ರಕ್ಷಣಾ ಕಾರ್ಯ

    ಭೋಪಾಲ್: ಆಟವಾಡುತ್ತಾ ಬಾವಿಗೆ ಬಿದ್ದ ಬಾಲಕಿಯ ರಕ್ಷಣೆ ಮಾಡುವುದನ್ನು ನೋಡಲು ಹೋಗಿ 30 ಮಂದಿ ಅದೇ ಬಾವಿಗೆ ಬಿದ್ದು, ಅದರಲ್ಲಿ 4 ಮಂದಿ ಸಾವನ್ನಪ್ಪಿದ ಆಘಾತಕಾರಿ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

    ಗುರುವಾರ ಸಂಜೆ ವಿದಿಶಾ ಜಿಲ್ಲೆಯಿಂದ ಸುಮಾರು 50 ಕಿ.ಮೀ ದೂರದಲ್ಲಿರುವ ಗಂಜ್ ಬಸೋಡಾದಲ್ಲಿ ಈ ಘಟನೆ ನಡೆದಿದೆ. 50 ಅಡಿ ಆಳವಿರುವ ಬಾವಿಯಲ್ಲಿ 20 ಅಡಿಯಷ್ಟು ನೀರು ತುಂಬಿತ್ತು.

    ಘಟನೆಯಲ್ಲಿ ಬಾವಿಗೆ ಬಿದ್ದ 30 ಮಂದಿಯಲ್ಲಿ 15 ಮಂದಿಯನ್ನು ಸುರಕ್ಷಿತವಾಗಿ ಮೇಲೆತ್ತಲಾಗಿದೆ. ಹಾಗೆಯೇ ನಾಲ್ವರ ಮೃತದೇಹವನ್ನು ಬಾವಿಯಿಂದ ಹೊರತೆಗೆಯಲಾಗಿದೆ. ಇನ್ನೂ 13 ಮಂದಿ ನಾಪತ್ತೆಯಾಗಿದ್ದು, ರಕ್ಷಣಾ ಕಾರ್ಯ ಭರದಿಂದ ಸಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಧ್ಯಮಗಳೀಗೆ ಮಾಹಿತಿ ನೀಡಿದ್ದಾರೆ.

    ಘಟನೆ ಮಾಹಿತಿ ತಿಳಿಯುತ್ತಿದ್ದಂತೆಯೇ ವಿದಿಶಾ ಗಾರ್ಡಿಯನ್ ಮಿನಿಸ್ಟರ್ ಗುರುವಾರ ರಾತ್ರಿಯೇ ಸ್ಥಳಕ್ಕೆ ದೌಡಾಯಿಸಿ ಮಾಹಿತಿ ಕಲೆ ಹಾಕಿದ್ದಾರೆ. ಇಂದು ಕೂಡ ರಕ್ಷಣಾ ಕಾರ್ಯ ಮುಂದುವರಿದ್ದು, ಒಟ್ಟು 19 ಮಂದಿಯನ್ನು ರಕ್ಷಿಸಲಾಗಿದೆ. ಇಂದು ಮೂವರ ಮೃತದೇಹಗಳನ್ನು ಬಾವಿಯಿಂದ ಹೊರ ತೆಗೆಯಲಾಗಿದೆ. ಎನ್‍ಡಿಆರ್‍ಎಫ್ ಹಾಗೂ ಎಸ್‍ಡಿಆರ್‍ಎಫ್ ಕೂಡ ಸ್ಥಳದಲ್ಲಿ ಬೀಡುಬಿಟ್ಟಿವೆ.

    ನಿನ್ನೆ ಸಂಜೆ 6 ಗಂಟೆ ಸುಮಾರಿಗೆ ಬಾಲಕಿ ಬಾವಿಗೆ ಬಿದ್ದಿದ್ದಾಳೆ. ಇದನ್ನು ಗಮನಿಸಿದ ಸ್ಥಳೀಯರು ಆಕೆಯ ರಕ್ಷಣೆಗೆ ಮುಂದಾಗಿದ್ದಾರೆ. ಇತ್ತ ಬಾವಿ ಹತ್ತಿರ ಸ್ಥಳೀಯರು ನೋಡುತ್ತಾ ನಿಂತಿದ್ದರು. ಇದೇ ವೇಳೆ ಮಣ್ಣು ಕುಸಿದು ನಿಂತಿದ್ದವರು ಕೂಡ ಬಾವಿಗೆ ಬಿದ್ದಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

    ಇತ್ತ ರಕ್ಷಣಾ ಕಾರ್ಯ ಮುಂದುವರಿದಿದೆ ಎಂದು ಮುಖ್ಯಮಂತ್ರಿ ಶಿವರಾಜ್ ದಿಂಗ್ ಚೌಹಾಣ್ ತಿಳಿಸಿದ್ದಾರೆ. ಅಲ್ಲದೆ ಘಟನೆಯ ಬಗ್ಗೆ ಆಗಾಗ ಮಾಹಿತಿ ಪಡೆದುಕೊಳ್ಳುತ್ತಿದ್ದೇನೆ ಎಂದು ಹೇಳಿದ್ದಾರೆ.