Tag: ವಿದೇಶಿ

  • ಮೈಸೂರು ಹುಡ್ಗಿ ಕೈ ಹಿಡಿದ ನೆದರ್‌ಲ್ಯಾಂಡ್ ಹುಡ್ಗ

    ಮೈಸೂರು ಹುಡ್ಗಿ ಕೈ ಹಿಡಿದ ನೆದರ್‌ಲ್ಯಾಂಡ್ ಹುಡ್ಗ

    ಮೈಸೂರು: ನೆದರ್‌ಲ್ಯಾಂಡ್ ಹುಡುಗ ಹಾಗೂ ಮೈಸೂರು ಹುಡುಗಿ ನಡುವೆ ಪ್ರೀತಿ ಹುಟ್ಟಿದ್ದು, ಈ ಪ್ರೀತಿಗೆ ದೇಶ, ಭಾಷೆ, ಸಂಸ್ಕೃತಿ, ಜಾತಿ ಯಾವುದು ಅಡ್ಡಿಯಾಗಿಲ್ಲ. ಹೀಗಾಗಿ ಇವರು ಇಂದು ಮೈಸೂರಿನಲ್ಲಿ ಹಿಂದೂ ಸಂಪ್ರದಾಯದಂತೆ ಸಪ್ತಪದಿ ತುಳಿದರು.

    ಮೈಸೂರಿನ ವಕೀಲರಾದ ಸುಮನಾ ಮತ್ತು ರಾಮರವೀಂದ್ರ ಅವರ ಪುತ್ರಿ ಅನು, ನೆದರ್‌ಲ್ಯಾಂಡ್ ನ ರೆನೆ ವ್ಯಾನ್ ಬೋರ್ಗೆಟ್ ಅವರನ್ನು ಇಂದು ಮದುವೆಯಾದರು. ನೆದರ್‌ಲ್ಯಾಂಡ್‌ಗೆ ಎಲ್‌ಎಲ್‌ಎಂ(ಲ್ಯಾಟಿನ್ ಲೆಗಮ್ ಮ್ಯಾಜಿಸ್ಟರ್) ವ್ಯಾಸಂಗಕ್ಕೆ ತೆರಳಿದ್ದ ಅನು ಅಲ್ಲಿ ಪರಿಚಯವಾದ ರೆನೆ ಅವರನ್ನು ಪ್ರೀತಿಸಿ ಇಂದು ತಮ್ಮ ಪೋಷಕರ ಸಮ್ಮುಖದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.

    ಅನು ತಮ್ಮ ಪ್ರೀತಿ ಶುರುವಾದ ಮೇಲೆ ಪ್ರಿಯಕರ ರೆನೆ ವ್ಯಾನ್ ಗೆ ಕನ್ನಡ ಮಾತಾಡುವುದನ್ನು ಕಲಿಸಿದ್ದಾರೆ. ರೆನೆ ಒಂದೆರಡು ಕನ್ನಡ ವ್ಯಾಕ್ಯಗಳನ್ನು ಮಾತಾಡುತ್ತಾರೆ. ರೆನೆ ಅವರ ಪೋಷಕರು ಕೂಡ ಒಂದೆರಡು ಪದ ಕನ್ನಡ ಕಲಿತಿದ್ದಾರೆ. ಹೀಗಾಗಿ ವಿದೇಶಿ ನೆಂಟರು ಕನ್ನಡ ಕಲಿತು ಕನ್ನಡದಲ್ಲೆ ಮಾತಾಡುತ್ತಿದ್ದ ದೃಶ್ಯಗಳು ಮದುವೆ ಮನೆಯಲ್ಲಿ ಕಂಡು ಬಂತು.

    ಈ ಮದುವೆಯಲ್ಲಿ ಲಿಂಗ ತಾರತಮ್ಯ ಸಾರುವ ಸಂಪ್ರದಾಯ ದೂರವಿಟ್ಟು ಪೂಜೆಗಳ ನಡೆಸಲಾಯಿತು. ಭತ್ತ ಕುಟ್ಟುವುದು, ಮೆಹೆಂದಿ ಶಾಸ್ತ್ರ, ಹೋಳಿ, ಅರಿಶಿನ ಹಚ್ಚುವ ಶಾಸ್ತ್ರ, ಗೌರಿ ಪೂಜೆ ಹೀಗೆ ಹಲವು ಸಂಪ್ರದಾಯದೊಂದಿಗೆ ಮದುವೆ ನಡೆಯಿತು. ಪೋಲ್ಯಾಂಡ್, ಅಮೆರಿಕಾ, ಸ್ಪೇನ್, ಜರ್ಮನಿ, ನೆದರ್‌ಲ್ಯಾಂಡ್ ಮುಂತಾದ ದೇಶಗಳಿಂದ ಬಂದಿದ್ದ 40 ಜನರು ಈ ಆಚರಣೆಗಳನ್ನು ಬೆರಗು ಗಣ್ಣಿನಿಂದ ನೋಡುತ್ತಿದ್ದರು.

  • 5000 ರೂ.ಗೆ ಓಕೆ ಆಗಿತ್ತು, 10 ಸಾವಿರ ಕೇಳಿದ್ದಕ್ಕೆ ಕೊಂದೆ ಬಿಟ್ಟ!

    ಬೆಂಗಳೂರು: ನಗರದ ಕೊತ್ತನೂರಿನ ತಿಮ್ಮೇಗೌಡ ಲೇಔಟ್‍ನಲ್ಲಿ ವಿದೇಶಿ ಮಹಿಳೆಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬುಧವಾರ ಮಧ್ಯರಾತ್ರಿ ಗಂಟೆಗೆ ನಡೆದಿದೆ.

    ಹಿಮಾಚಲ ಪ್ರದೇಶದ ಮೂಲದ ಇಶಾನ್ ಕೊಲೆಗೈದ ಆರೋಪಿಯಾಗಿದ್ದು, ನಕಾಯಕಿ ಪ್ಲೋರೆನ್ಸ್ (25) ಕೊಲೆಯಾದ ಉಗಾಂಡ ಮೂಲದ ಮಹಿಳೆ.

    ಏನಿದು ಪ್ರಕರಣ?: ನಕಾಯಕಿ ವಿದ್ಯಾಭ್ಯಾಸಕ್ಕಾಗಿ ಬೆಂಗಳೂರಿಗೆ ಬಂದಿದ್ದಳು. ಪ್ಲೋರೆನ್ಸ್ ನಗರದ ತಿಮ್ಮೇಗೌಡ ಲೇಔಟ್‍ನಲ್ಲಿ ವನಜಮ್ಮ ಎಂಬುವರ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಳು. ಇಶಾನ್ ಕೂಡ ಉದ್ಯೋಗ ಅರಸಿ ಬೆಂಗಳೂರಿಗೆ ಬಂದಿದ್ದ.

    ಇಶಾನ್ ಬುಧವಾರ ರಾತ್ರಿ ನಕಾಯಕಿ ಪ್ಲೋರೆನ್ಸ್‍ಳನ್ನು 5000 ರೂ. ಒಪ್ಪಂದ ಮಾಡಿಕೊಂಡು ಎಂಜಿ ರೋಡ್‍ನಿಂದ ಪಿಕ್ ಮಾಡಿದ್ದಾನೆ. ಒಪ್ಪಂದಂತೆ ಇಬ್ರೂ ಪ್ಲೋರೆನ್ಸ್ ವಾಸವಿದ್ದ ಮನೆಗೆ ಬಂದಿದ್ದಾರೆ. ಈ ವೇಳೆಯಲ್ಲಿ ನಕಾಯಕಿ 10 ಸಾವಿರ ನೀಡುವಂತೆ ಬೇಡಿಕೆ ಇಟ್ಟಿದ್ದಾಳೆ. ಇಶಾನ್ ಹಣ ಕೊಡದೇ ಇದ್ದಾಗ ಚಾಕುವಿನಿಂದ ಅವನ ಹಲ್ಲೆ ನಡೆಸಿದ್ದಾಳೆ. ಒಬ್ಬರ ಮೇಲೆ ಒಬ್ಬರು ಹಲ್ಲೆಗೆ ಪ್ರತಿ ಹಲ್ಲೆ ನಡೆಸುವಾಗ ಗಾಬರಿಗೊಂಡ ಇಶಾನ್ ಅದೇ ಚಾಕುವಿನಿಂದ ಪ್ಲೋರೆನ್ಸ್ ಳನ್ನು ಕೊಲೆ ಮಾಡಿದ್ದಾನೆ.

    ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಇಶಾನ್‍ನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಸ್ಥಳಕ್ಕೆ ಬೆರಳಚ್ಚು ತಂತ್ರಜ್ಞರು ಮತ್ತು ಶ್ವಾನದಳ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಕೊತ್ತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಕೊಲೆ ಪ್ರಕರಣ ಹಿನ್ನೆಲೆಯಲ್ಲಿ ತನಿಖೆಗೆ ತೆರಳಿದ್ದ ಇನ್ಸ್ ಪೆಕ್ಟರ್ ಅಂಜನ್ ಕುಮಾರ್ ಮೇಲೆ ಉಗಾಂಡ ಮೂಲದ ಜನರು ಹಲ್ಲೆ ನಡೆಸಿದ್ದಾರೆಂದು ತಿಳಿದುಬಂದಿದೆ.