Tag: ವಿದೇಶಿಯರು

  • ವಿದೇಶಿಯರನ್ನು ಗಡಿಪಾರು ಮಾಡದ ಅಸ್ಸಾಂ ಸರ್ಕಾರಕ್ಕೆ ಸುಪ್ರೀಂ ತರಾಟೆ

    ವಿದೇಶಿಯರನ್ನು ಗಡಿಪಾರು ಮಾಡದ ಅಸ್ಸಾಂ ಸರ್ಕಾರಕ್ಕೆ ಸುಪ್ರೀಂ ತರಾಟೆ

    ನವದೆಹಲಿ: ವಿದೇಶಿಯರು (Foreigners) ಎಂದು ಘೋಷಿತರಾದ ವ್ಯಕ್ತಿಗಳನ್ನು ಗಡಿಪಾರು ಮಾಡದೆ ವಿಳಂಬ ಧೋರಣೆ ಅನುಸರಿಸುತ್ತಿರುವ ಅಸ್ಸಾಂ (Assam) ಸರ್ಕಾರವನ್ನು ಸುಪ್ರೀಂ ಕೋರ್ಟ್ (Supreme Court) ಮಂಗಳವಾರ ತರಾಟೆಗೆ ತೆಗೆದುಕೊಂಡಿತು.

    ವಿಚಾರಣೆಗೆ ವರ್ಚುವಲ್ ವಿಧಾನದ ಮೂಲಕ ಹಾಜರಿದ್ದ ಅಸ್ಸಾಂನ ಮುಖ್ಯ ಕಾರ್ಯದರ್ಶಿ ಅವರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ನ್ಯಾ. ಎ.ಎಸ್. ಓಕಾ ಮತ್ತು ಉಜ್ಜಲ್ ಭುಯಾನ್ ಅವರಿದ್ದ ಪೀಠ, ವಿಳಾಸವಿಲ್ಲದಿದ್ದರೂ ಅವರನ್ನು ಗಡೀಪಾರು ಮಾಡಬಹುದು, ಅನಿರ್ದಿಷ್ಟವಾಗಿ ಅವರನ್ನು ಬಂಧಿಸಿಟ್ಟುಕೊಂಡಿರುವಂತಿಲ್ಲ ಎಂದು ಹೇಳಿದೆ. ಇದನ್ನೂ ಓದಿ: ರಮೇಶ್ ಜಾರಕಿಹೊಳಿ, ಕುಮಾರ್ ಬಂಗಾರಪ್ಪಗೆ ಪಕ್ಷದ ಸಿದ್ದಾಂತ ಗೊತ್ತಿಲ್ಲ – ವೆಂಕಟೇಶ್ ಮೌರ್ಯ

    ಒಮ್ಮೆ ಅವರನ್ನು ವಿದೇಶಿಯರೆಂದು ಪರಿಗಣಿಸಿದ ನಂತರ, ಅವರನ್ನು ತಕ್ಷಣವೇ ಗಡಿಪಾರು ಮಾಡಬೇಕು. ಅವರ ಪೌರತ್ವದ ಸ್ಥಿತಿ ನಿಮಗೆ ತಿಳಿದಿದೆ. ಹಾಗಾದರೆ ಅವರ ವಿಳಾಸ ಸಿಗುವವರೆಗೆ ನೀವೇಕೆ ಕಾಯುತ್ತೀರಿ? ಅವರು ಎಲ್ಲಿಗೆ ಹೋಗಬೇಕೆಂದು ನಿರ್ಧರಿಸುವುದು ಉಳಿದ ದೇಶಕ್ಕೆ ಬಿಟ್ಟದ್ದು ಎಂದಿತು. ಇದನ್ನೂ ಓದಿ: ಮೈಕ್ರೋ ಫೈನಾನ್ಸ್ ಹೆಸರಲ್ಲಿ ಕಿರುಕುಳ ಕೊಡುವವರಿಗೆ ಬಿಸಿ ಮುಟ್ಟಿಸಲು ಶಿಕ್ಷೆ ಪ್ರಮಾಣ ಹೆಚ್ಚಳ – ಪರಮೇಶ್ವರ್

    ವಿಳಾಸವಿಲ್ಲದೇ ಹೋದಲ್ಲಿ ಆ ಜನರನ್ನು ಎಲ್ಲಿಗೆ ಗಡೀಪಾರು ಮಾಡಬೇಕೆಂದು ರಾಜ್ಯ ಸರ್ಕಾರದ ಪರ ವಕೀಲರು ನ್ಯಾಯಾಲಯವನ್ನು ಕೇಳಿದರು. ಆಗ ನ್ಯಾಯಮೂರ್ತಿ ಓಕಾ, ನೀವು ಅವರನ್ನು ಸಂಬಂಧಪಟ್ಟ ದೇಶದ ರಾಜಧಾನಿಗೆ ಗಡಿಪಾರು ಮಾಡಿ. ಆ ವ್ಯಕ್ತಿ ಪಾಕಿಸ್ತಾನದವನಾಗಿದ್ದರೆ ನಿಮಗೆ ಪಾಕಿಸ್ತಾನದ ರಾಜಧಾನಿ ತಿಳಿದಿದೆಯೇ? ಅವರ ವಿದೇಶಿ ವಿಳಾಸ ತಿಳಿಯದೇ ಇದ್ದರೆ ಅವರನ್ನು ಇಲ್ಲಿ ಬಂಧಿಸಿದ್ದಾದರೂ ಹೇಗೆ? ಪರಿಶೀಲನಾ ವರದಿಯನ್ನು ವಿದೇಶಾಂಗ ಸಚಿವಾಲಯಕ್ಕೆ ಕಳುಹಿಸಿದ ದಿನಾಂಕವನ್ನು ಏಕೆ ಉಲ್ಲೇಖಿಸಿಲ್ಲ? ಎಂದು ಕಿಡಿಕಾರಿದರು. ಇದನ್ನೂ ಓದಿ: ಏರೋ ಇಂಡಿಯಾ 2025 – ನಾಳೆಯಿಂದ ಬೆಂಗಳೂರು ವಿಮಾನಯಾನದಲ್ಲಿ ವ್ಯತ್ಯಯ

    ಈ ಕುರಿತು ಸೂಕ್ತ ಅಫಿಡವಿಟ್ ಸಲ್ಲಿಸಲು ಸಮಯಾವಕಾಶ ಅಗತ್ಯವಿದೆ ಎಂದು ವಕೀಲರು ಮನವಿ ಮಾಡಿದರು. ಆದರೆ ನ್ಯಾಯಾಲಯ ನಾವು ಅಸ್ಸಾಂ ಸರ್ಕಾರ ಸುಳ್ಳು ಸಾಕ್ಷ್ಯದ ನೋಟಿಸ್ ಜಾರಿ ಮಾಡುತ್ತೇವೆ. ಒಂದು ರಾಜ್ಯ ಸರ್ಕಾರವಾಗಿ, ನೀವು ಆರೋಪ ಮುಕ್ತರಾಗಬೇಕು ಎಂದು ಎಚ್ಚರಿಕೆ ನೀಡಿತು. ವಿಚಾರಣೆಯ ಒಂದು ಹಂತದಲ್ಲಿ, ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಪ್ರಕರಣ ರಾಜ್ಯಪಟ್ಟಿಗೆ ಬಾರದ ಹಿನ್ನೆಲೆಯಲ್ಲಿ ವಿದೇಶಾಂಗ ಸಚಿವಾಲಯದ ಅಧಿಕಾರಿಗಳೊಂದಿಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳುವುದಾಗಿ ತಿಳಿಸಿದರು. ಇದನ್ನೂ ಓದಿ: ನಾಳೆ ಕುಂಭಮೇಳದಲ್ಲಿ ಪ್ರಧಾನಿ ಮೋದಿ ಭಾಗಿ – ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ

    ವಿದೇಶಿ ವಿಳಾಸಗಳಿಲ್ಲದಿದ್ದರೂ ಸಹ, ಗಡಿಪಾರು ಪ್ರಕ್ರಿಯೆಯನ್ನು ತಕ್ಷಣವೇ ಪ್ರಾರಂಭಿಸುವಂತೆ ನ್ಯಾಯಾಲಯ ಅಸ್ಸಾಂ ಸರ್ಕಾರಕ್ಕೆ ನಿರ್ದೇಶನ ನೀಡಿತು. ರಾಷ್ಟ್ರೀಯತೆ ಪರಿಶೀಲನಾ ಪ್ರಕ್ರಿಯೆಯ ಕುರಿತು ಎರಡು ವಾರಗಳಲ್ಲಿ ದಿನಾಂಕವನ್ನೂ ಒಳಗೊಂಡಂತೆ ತೆಗೆದುಕೊಂಡ ಕ್ರಮಗಳ ವಿವರವಾದ ಅಫಿಡವಿಟ್ ಸಲ್ಲಿಸುವಂತೆಯೂ ಸರ್ಕಾರಕ್ಕೆ ಸೂಚಿಸಿತು. ದೇಶಗಳೇ ಇಲ್ಲದ ವ್ಯಕ್ತಿಗಳನ್ನು ಹೇಗೆ ನಿಭಾಯಿಸಬೇಕು ಎಂಬುದನ್ನು ಸ್ಪಷ್ಟಪಡಿಸುವುದಕ್ಕಾಗಿ ಕೇಂದ್ರ ಸರ್ಕಾರಕ್ಕೆ ಒಂದು ತಿಂಗಳ ಕಾಲಾವಕಾಶ ನೀಡಲಾಯಿತು. ಇದನ್ನೂ ಓದಿ: ಮೈಸೂರು ಮಹಾರಾಜರು ಕಟ್ಟಿಸಿದ್ದ ಶಿವನ ದೇವಾಲಯವಾಯ್ತು ಬಾರ್ & ರೆಸ್ಟೋರೆಂಟ್!

  • ವಿದೇಶಿಯರ ಮೋಜಿ ಮಸ್ತಿಗಾಗಿ ಆನೆಗೊಂದಿಯಲ್ಲಿ ಅನಧಿಕೃತ ರೆಸಾರ್ಟ್ ಆರಂಭ

    ವಿದೇಶಿಯರ ಮೋಜಿ ಮಸ್ತಿಗಾಗಿ ಆನೆಗೊಂದಿಯಲ್ಲಿ ಅನಧಿಕೃತ ರೆಸಾರ್ಟ್ ಆರಂಭ

    ಕೊಪ್ಪಳ: ಜಿಲ್ಲಾಡಳಿತದ ವಿರೋಧದ ನಡುವೆಯೂ ಗಂಗಾವತಿ ತಾಲೂಕಿನ ಆನೆಗೊಂದಿ ಭಾಗದಲ್ಲಿ ಅನಧಿಕೃತ ರೆಸಾರ್ಟ್ ಸಂಖ್ಯೆ ಹೆಚ್ಚುತ್ತಿದ್ದು, ಹೊಸ ವರ್ಷಕ್ಕಾಗಿ ಬರೋಬ್ಬರಿ 13 ರೆಸಾರ್ಟ್‍ಗಳು ವಹಿವಾಟು ನಡೆಸಲು ಸಜ್ಜಾಗಿವೆ.

    ವಿದೇಶಿಗರ ಮೋಜಿ ಮಸ್ತಿಗಾಗಿ ರೂಪುಗೊಂಡ ತಾಲೂಕಿನ ವಿರುಪಾಪುರಗಡ್ಡಿ ರೆಸಾರ್ಟ್‍ಗಳು ವೀಕೆಂಡ್ ಪ್ರಿಯರಿಗೆ ಮಸ್ತ್ ಜಾಗವಾಗಿದೆ. ಗಡ್ಡಿಯೊಂದರಲ್ಲಿ 33 ರೆಸಾರ್ಟ್‍ಗಳು ವೀಕೆಂಡ್ ಗೆ ಅತಿಥ್ಯ ನೀಡುತ್ತಿವೆ. ಇತ್ತೀಚಿಗೆ ಸಂಭವಿಸಿದ ಪ್ರವಾಹ ಪರಿಸ್ಥಿತಿ ಸಂದರ್ಭದಲ್ಲಿ ರೆಸಾರ್ಟ್‍ಗಳಿಗೆ ಕಡಿವಾಣ ಹಾಕಲು ಜಿಲ್ಲಾಡಳಿತ ಕಸರತ್ತು ನಡೆಸಿದರೂ ಸ್ಥಳೀಯ ಅಧಿಕಾರಿಗಳ ಅಸಹಕಾರದಿಂದ ಪ್ರಯೋಜನವಾಗಿಲ್ಲ. ರೆಸಾರ್ಟ್ ಕತೆ ಮುಗಿತು ಎನ್ನುವಷ್ಟರಲ್ಲಿ ಗಡ್ಡಿ ಹೊರಭಾಗದಲ್ಲಿ ರೆಸಾರ್ಟ್‍ಗಳು ನಿರ್ಮಾಣಗೊಂಡಿದ್ದು, ಹೊರ ಜಿಲ್ಲೆ ಉದ್ಯಮಿಗಳು ಕಾಲಿಟ್ಟಿದ್ದಾರೆ. ಪಟ್ಟಾ ಭೂಮಾಲೀಕರಿಗೆ ಸೀಮಿತವಾಗಿದ್ದ ಮೋಜು ಮಸ್ತಿ ಜಾಗಕ್ಕೀಗ ಹೊರಗಿನವರು ಲಗ್ಗೆ ಹಾಕಿದ್ದು, ಪೈಪೋಟಿ ವಹಿವಾಟುವಿಗೆ ಹಳೇ ಉದ್ಯಮಿಗಳು ಸುಸ್ತಾಗಿದ್ದಾರೆ.

    ಸಣಾಪುರ, ಹನುಮನಹಳ್ಳಿ, ಆನೆಗೊಂದಿ, ಜಂಗ್ಲಿ, ಅಂಜನಾದ್ರಿ ಬೆಟ್ಟ, ಚಿಕ್ಕರಾಂಪುರ ಬಳಿ ಅನಧಿಕೃತ ರೆಸಾರ್ಟ್‍ಗಳು ತಲೆ ಎತ್ತಿದ್ದು, ಬಳ್ಳಾರಿ, ರಾಯಚೂರು ಮತ್ತು ಗೋವಾ ಮೂಲದ ಉದ್ಯಮಿಗಳು ಗುತ್ತಿಗೆ ಆಧಾರದಡಿ ಜಾಗ ಪಡೆದು ರೆಸಾರ್ಟ್ ನಿರ್ಮಿಸುತ್ತಿದ್ದಾರೆ. ರೆಸಾರ್ಟ್‍ಗಳಿಂದ ಸರ್ಕಾರಕ್ಕೆ ನಯಾಪೈಸೆ ಆದಾಯವಿಲ್ಲ. ಹಂಪಿ ಪ್ರಾಧಿಕಾರ ಮತ್ತು ಕಂದಾಯ ಇಲಾಖೆ ಅನುಮತಿ ಬೇಕಿಲ್ಲ. ಹೀಗಾಗಿ ಅನಧಿಕೃತ ರೆಸಾರ್ಟ್‍ಗಳಿಗೆ ಕಡಿವಾಣವಿಲ್ಲದಂತಾಗಿದ್ದು, ಮೋಜು ಮಸ್ತಿಗೆ ತಡೆಯಬೇಕಿದ್ದ ಪೊಲೀಸರು ಆಸಕ್ತಿವಹಿಸುತ್ತಿಲ್ಲ. ಪಟ್ಟಾ ಭೂಮಿಯೊಂದಿಗೆ ಸರ್ಕಾರಿ ಭೂಮಿ ಒತ್ತುವರಿಯಾಗಿದ್ದರೂ ಕೇಳುವರಿಲ್ಲ. ಉತ್ಸವದ ವೇದಿಕೆ ಕೂಗಳತೆಯಲ್ಲಿ ರೆಸಾರ್ಟ್ ನಿರ್ಮಾಣವಾಗಿದ್ದರೂ ತಾಲೂಕು ಆಡಳಿತದ ಗಮನಕ್ಕಿಲ್ಲ.

    ರೆಸಾರ್ಟ್‍ಗಳನ್ನು ಅರಣ್ಯ ಭೂಮಿಯಲ್ಲಿ ನಿರ್ಮಿಸಿದ್ದು, ಬೃಹತ್ ಕಲ್ಲು ಬಂಡೆಗಳಿಗೆ ಹೊಂದಿಕೊಂಡು ನಿರ್ಮಿಸಿದ್ದರೂ ಅರಣ್ಯ ಇಲಾಖೆ ಗಮನಹರಿಸಿಲ್ಲ. ವಿಎನ್‍ಸಿ ಕಾಲುವೆ ನೀರನ್ನು ರೆಸಾರ್ಟಿನತ್ತ ಬರುವ ರೀತಿಯಲ್ಲಿ ಸೋರಿಕೆ ವ್ಯವಸ್ಥೆ ಮಾಡಿದ್ದರೂ ನೀರಾವರಿ ಇಲಾಖೆ ನೋಡುತ್ತಿಲ್ಲ. ಅರಣ್ಯ ಒತ್ತುವರಿಯಾಗಿರುವುದು ರೆಸಾರ್ಟ್‍ಗಳಿಂದ ಗೊತ್ತಾದರೂ ಕ್ರಮ ಕೈಗೊಳ್ಳದಿರುವುದು ಅನುಮಾನಕ್ಕೆ ಕಾರಣವಾಗಿದೆ. ಪೈಪೋಟಿ ಉದ್ಯಮಿ ಹಿನ್ನೆಲೆಯಲ್ಲಿ ಬಹುತೇಕ ರೆಸಾರ್ಟ್‍ಗಳು ಗುತ್ತಿಗೆ ಆಧಾರದಡಿ ನಡೆಯುತ್ತಿದ್ದು, ಮಾಲೀಕರು ಮೆಟ್ರೋಪಾಲಿಟಿನ್ ಸಿಟಿ ಸೇರಿದ್ದಾರೆ. ಹೊರಗಿನಿಂದ ಬಂದ ವಹಿವಾಟುಗಾರರಿಗೆ ಸ್ಥಳೀಯ ನೈಸರ್ಗಿಕ ಸಂಪನ್ಮೂಲ ಹಾಳು ಮಾಡುತ್ತಿದ್ದು, ಮೋಜು ಮಸ್ತಿ ಹೆಸರಿನಲ್ಲಿ ಸಂಸ್ಕೃತಿ ನಾಶ ಮಾಡುತ್ತಿದ್ದಾರೆ.