Tag: ವಿದ್ಯಾರ್ಥಿ ವಿದ್ಯಾರ್ಥಿನಿಯರೇ

  • ವಿದ್ಯಾರ್ಥಿ ವಿದ್ಯಾರ್ಥಿನಿಯರೇ: ಏಳು ವರ್ಷದ ಕನಸು ನನಸಾಗಿದೆ ಎಂದ ಮನೋಜ್

    ವಿದ್ಯಾರ್ಥಿ ವಿದ್ಯಾರ್ಥಿನಿಯರೇ: ಏಳು ವರ್ಷದ ಕನಸು ನನಸಾಗಿದೆ ಎಂದ ಮನೋಜ್

    ರುಣ್ ಅಮುಕ್ತ (Arun Amukta) ನಿರ್ದೇಶನದ `ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ (Vidyarthi Vidyarthiniyare) ಸಿನಿಮಾದ್ದು ಯುವ ಆವೇಗದ ಕಥೆ ಎಂಬ ವಿಚಾರ ಈಗಾಗಲೇ ಪಕ್ಕಾ ಆಗಿದೆ. ಈ ಹಿಂದೆ ಕಿರಿಕ್ ಪಾರ್ಟಿಯಂಥಾ ಕಾಲೇಜು ಕೇಂದ್ರಿತ ಕಥೆಯ ಸಿನಿಮಾಗಳು ದೊಡ್ಡ ಮಟ್ದಲ್ಲಿ ಗೆದ್ದಿತ್ತು. ಇತ್ತೀಚೆಗಷ್ಟೇ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಚಿತ್ರ ಕೂಡಾ ಗೆದ್ದು ಬೀಗಿತ್ತು. ಇದೀಗ ಪತ್ರಿಕಾ ಗೋಷ್ಠಿಯ ಮೂಲಕ ಚಿತ್ರತಂಡ ಹಂಚಿಕೊಂಡಿರುವ ಮಾಹಿತಿಗಳನ್ನು ಗಮನಿಸಿದರೆ, ಈ ಸಿನಿಮಾ ಕೂಡಾ ಆ ಸಾಲಿಗೆ ಸೇರ್ಪಡೆಗೊಳ್ಳುತ್ತದೆ ಅನ್ನಿಸೋದರಲ್ಲಿ ಸಂದೇಹವೇನಿಲ್ಲ.

    ಅಂದಹಾಗೆ, ಈ ಚಿತ್ರದ ಚಿತ್ರೀಕರಣವೀಗ ಮುಕ್ತಾಯಗೊಂಡಿದೆ. ಬೆಂಗಳೂರು, ಮೈಸೂರು, ಮಂಗಳೂರು, ಚಿಕ್ಕಮಗಳೂರು ಮುಂತಾದೆಡೆಗಳಲ್ಲಿ ಐವತ್ತು ದಿನಗಳ ಕಾಲ ಚಿತ್ರೀಕರಣ ನಡೆಸಿ ಕುಂಬಳಕಾಯಿ ಒಡೆಯಲಾಗಿದೆ. ಈ ಸಂದರ್ಭದಲ್ಲಿ ಪತ್ರಿಕಾ ಗೋಷ್ಠಿಯೊಂದನ್ನು ಏರ್ಪಡಿಸಿದ್ದ ಚಿತ್ರತಂಡ ಆಯಾ ಪಾತ್ರಗಳನ್ನು ನಿರ್ವಹಿಸಿರುವ ಕಲಾವಿದರನ್ನು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮುಖಾಮುಖಿಯಾಗಿಸಿದೆ. ಇದರ ಭಾಗವಾಗಿ ಸದರಿ ಚಿತ್ರದ ನಾಯಕರಲ್ಲೊಬ್ಬನಾಗಿ ನಟಿಸಿರುವ ಮನೋಜ್ ವಿವಾನ್ (Manoj vivan) ಕೂಡಾ, ತಮ್ಮ ಪಾತ್ರದ ಬಗ್ಗೆ, ಇಂಥಾದ್ದೊಂದು ಅವಕಾಶ ಒಲಿದು ಬಂದಿದ್ದರ ಬಗ್ಗೆ ಮಾತಾಡಿದ್ದಾರೆ. ಇದು ತನ್ನ ಜೀವಮಾನದ ಕನಸು ನನಸಾದ ಕ್ಷಣ ಅನ್ನುತ್ತಲೇ ಮಾತು ಆರಂಭಿಸಿದರು ಮನೋಜ್, ತಮ್ಮ ಏಳೂವರೆ ವರ್ಷಗಳ ಅಲೆದಾಟಗಳ ಕಥೆಯನ್ನು ಹಂಚಿಕೊಂಡಿದ್ದಾರೆ.

    ನಟನಾಗಬೇಕೆಂದು ಅಲೆಯುತ್ತಿದ್ದಾಗ ಬಹುತೇಕರು ಪ್ರತಿಭೆ ಗುರುತಿಸದೆ, ಕೇವಲ ಹಣಕ್ಕೆ ಮಾತ್ರವೇ ಬೆಲೆ ಕೊಡುತ್ತಿದ್ದರು. ಆದರೆ ನಿರ್ದೇಶಕ ಅರುಣ್ ಅಮುಕ್ತ, ನಿರ್ಮಾಪಕರಾದ ಸುಬ್ರಮಣ್ಯ ಕುಕ್ಕೆ ಮತ್ತು ಎ.ಸಿ ಶಿವಲಿಂಗೇಗೌಡ ಯಾವುದೇ ಅಪೇಕ್ಷೆ ಇಲ್ಲದೆ ಅವಕಾಶ ಕೊಟ್ಟಿದ್ದಾರೆಂದಿರುವ ಮನೋಜ್ ವಿವಾನ್, ಅವರೆಲ್ಲರಿಗೂ ಧನ್ಯವಾದ ಸಮರ್ಪಿಸಿದ್ದಾರೆ. ಇಲ್ಲಿ ಮನೋಜ್ ಪಾಲಿಗೆ ನಾನಾ ಅಂಶಗಳಿರುವ ಪ್ಯಾಕೇಜಿನಂಥಾ ಪಾತ್ರ ಸಿಕ್ಕಿದೆಯಂತೆ. ಮಾಸ್, ಹೀರೋಗಿರಿ, ವಿಲನ್ ಸೇರಿದಂತೆ ನಾನಾ ಚಹರೆಗಳು ಅವರ ಪಾತ್ರಕ್ಕಿದೆಯಂತೆ. ಇದು ಕುಟುಂಬ ಸಮೇತರಾಗಿ ನೋಡುವ ಚಿತ್ರವೆಂಬ ಭರವಸೆ ರವಾನಿಸುವ ಮೂಲಕ ಮನೋಜ್ ಗಮನ ಸೆಳೆದಿದ್ದಾರೆ.

     

    ತಾರಾ ಬಳಗ, ತಾಂತ್ರಿಕತೆ ಸೇರಿದಂತೆ ಎಲ್ಲ ದಿಕ್ಕಿನಲ್ಲಿಯೂ ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರ ಭಿನ್ನವಾಗಿ ಮೂಡಿ ಬಂದಿವೆ ಎಂಬುದು ಚಿತ್ರತಂಡದ ಭರವಸೆ. ಸುಬ್ರಮಣ್ಯ ಕುಕ್ಕೆ ಮತ್ತು ಎ.ಸಿ ಶಿವಲಿಂಗೇಗೌಡ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಕುಮಾರ್ ಗೌಡ ಛಾಯಾಗ್ರಹಣ, ಭರ್ಜರಿ ಚೇತನ್ ಮತ್ತು ವಾಸುಕಿ ವೈಭವ್ ಸಾಹಿತ್ಯ, ಪವನ್ ಗೌಡ ಸಂಕಲನ, ಟೈಗರ್ ಶಿವು, ನರಸಿಂಹ ಸಾಹಸ ನಿರ್ದೇಶನ ಈ ಚಿತ್ರಕ್ಕಿರಲಿದೆ. ಅಮರ್, ಭಾವನಾ, ಮಾನಸಿ, ಮನೋಜ್ ವಿವಾನ್, ಭವ್ಯ, ಸುನೀಲ್ ಪುರಾಣಿಕ್, ಅರವಿಂದ ರಾವ್, ಸಿಂಚನಾ, ರಘು ರಾಮನಕೊಪ್ಪ, ಪ್ರಶಾಂತ್ ಸಂಬರ್ಗಿ, ಕಾಕ್ರೋಚ್ ಸುಧಿ ಮುಂತಾದವರು ನಟಿಸಿದ್ದಾರೆ. ಇನ್ನುಳಿದಂತೆ ವಿಜೇತ್ ಕೃಷ್ಣ, ವಾಸು ದೀಕ್ಷಿತ್ ಮತ್ತು ಶಶಾಂಕ್ ಶೇಷಗಿರಿ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ.

  • ಅಮರ್ ನಟನೆಯ ಮೊದಲ ಸಿನಿಮಾ ವಿದ್ಯಾರ್ಥಿ ವಿದ್ಯಾರ್ಥಿನಿಯರೇ

    ಅಮರ್ ನಟನೆಯ ಮೊದಲ ಸಿನಿಮಾ ವಿದ್ಯಾರ್ಥಿ ವಿದ್ಯಾರ್ಥಿನಿಯರೇ

    ರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಾ ಬಂದಿದ್ದ ಸಿನಿಮಾ `ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ (Vidyarthi Vidyarthiniyare). ಅರುಣ್ ಅಮುಕ್ತ (Arun Amukta) ನಿರ್ದೇಶನದಲ್ಲಿ ಮೂಡಿ ಬಂದಿರುವ ಈ ಚಿತ್ರದಲ್ಲಿ ಗಾಯಕ ಚಂದನ್ ಶೆಟ್ಟಿ (Chandan Shetty) ನಾಯಕನಾಗಿ ನಟಿಸಿದ್ದಾರೆ. ಹಂತ ಹಂತವಾಗಿ ಪ್ರೇಕ್ಷಕರನ್ನು ಸೆಳೆಯುತ್ತಾ ಬಂದಿದ್ದ ಈ ಚಿತ್ರವೀಗ ಸಂಪೂರ್ಣವಾಗಿ ಚಿತ್ರೀಕರಣ ಮುಗಿಸಿಕೊಂಡಿದೆ. ಕುಂಬಳ ಕಾಯಿ ಒಡೆದು, ಪೋಸ್ಟ್ ಪ್ರೊಡಕ್ಷನ್ ಕಾರ್ಯಕ್ಕೆ ಸಜ್ಜುಗೊಂಡಿರುವ ಚಿತ್ರತಂಡ, ಅಚ್ಚುಕಟ್ಟಾದ ಪತ್ರಿಕಾಗೋಷ್ಠಿಯ ಮೂಲಕ ಮಾಧ್ಯಮ ಪ್ರತಿನಿಧಿಗಳನ್ನು ಮುಖಾಮುಖಿಯಾಗಿದ್ದಾರೆ. ಈ ಹಂತದಲ್ಲಿ ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಸಿನಿಮಾ ಭಾಗವಾಗಿರುವ ಕಲಾವಿದರೆಲ್ಲ ಮನದುಂಬಿ ಮಾತಾಡಿದ್ದಾರೆ. ಒಟ್ಟಾರೆ ಅನುಭವಗಳ ಬಗ್ಗೆ ಇಂಟರೆಸ್ಟಿಂಗ್ ವಿಚಾರಗಳನ್ನು ಹಂಚಿಕೊಂಡಿದ್ದಾರೆ.

    ಬೆಂಗಳೂರು, ಮೈಸೂರು, ಮಂಗಳೂರು, ಚಿಕ್ಕಮಗಳೂರು ಮುಂತಾದೆಡೆಗಳಲ್ಲಿ ಐವತ್ತು ದಿನಗಳ ಕಾಲ ಚಿತ್ರೀಕರಣ ನೆರವೇರಿದೆ. ಈ ಬಗೆಗಿನ ಸಾಕಷ್ಟು ಮಾಹಿತಿಗಳನ್ನು ಕಾರ್ಯಕಾರಿ ನಿರ್ಮಾಪಕರಾದ ಶ್ರೀಕಾಂತ್ ಕಶ್ಯಪ್ ಹಂಚಿಕೊಂಡಿದ್ದಾರೆ. ಅಂದಹಾಗೆ, ಈ ಚಿತ್ರದಲ್ಲಿ ಮೂರು ಯುವ ಜೋಡಿಯ ಸುತ್ತ ಕಥೆ ಚಲಿಸುತ್ತದೆ. ಅದರಲ್ಲೊಂದು ಪಾತ್ರವನ್ನು ಅಮರ್ ನಿಭಾಯಿಸಿದ್ದಾರೆ. ಅಮರ್ ಪಾಲಿಗಿದು ನಟನಾಗಿ ಮೊದಲ ಚಿತ್ರ. ನಿರ್ದೇಶಕ ಅರುಣ್ ಅಮುಕ್ತ ಆಡಿಷನ್ ನಡೆಸಿ, ಒಂದಷ್ಟು ತರಬೇತಿಗಳನ್ನು ನೀಡುವ ಮೂಲಕ ಅಮರ್ ನನ್ನು ಈ ಪಾತ್ರಕ್ಕೆ ಆಯ್ಕೆ ಮಾಡಿಕೊಂಡಿದ್ದಾರಂತೆ.

    ಈ ಸಿನಿಮಾ ಮೂಲಕವೇ ತನಗೆ ಸಿನಿಮಾ ರಂಗಪ್ರವೇಶದ ಅವಕಾಶ ಕಲ್ಪಿಸಿದ ನಿರ್ದೇಶಕರು ಮತ್ತು ನಿರ್ಮಾಪಕರಿಗೆ ಅಮರ್ (Amar) ಧನ್ಯವಾದ ಹೇಳಿದ್ದಾರೆ. ಜೊತೆಗೆ ಚಂದನ್ ಶೆಟ್ಟಿ ಜೊತೆ ನಟಿಸುವ ಅವಕಾಶ ಸಿಕ್ಕಿದ್ದರ ಬಗ್ಗೆ ತಮ್ಮೊಳಗಿನ ಥ್ರಿಲ್ ಅನ್ನೂ ಕೂಡಾ ಜಾಹೀರು ಮಾಡಿದ್ದಾರೆ. ಒಟ್ಟಾರೆಯಾಗಿ, ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಸಿನಿಮಾ ಮೂಲಕ ನಾಯಕನಾಗಿರುವ ಅಮರ್ ಅಕ್ಷರಶಃ ರೋಮಾಂಚಿತರಾಗಿದ್ದಾರೆ. ಇನ್ನೇನು ಕೆಲವೇ ದಿನಗಳಲ್ಲಿ ಬಿಡುಗಡೆಗೊಳ್ಳಬಹುದಾದ ಟ್ರೈಲರ್ ಮೂಲಕ ಅಮರ್ ಸೇರಿದಂತೆ ಎಲ್ಲರ ಪಾತ್ರಗಳೂ ಪ್ರೇಕ್ಷಕರನ್ನು ಮುಖಾಮುಖಿಯಾಗಲಿವೆ.

     

    ತಾರಾ ಬಳಗ, ತಾಂತ್ರಿಕತೆ ಸೇರಿದಂತೆ ಎಲ್ಲ ದಿಕ್ಕಿನಲ್ಲಿಯೂ ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರ ಭಿನ್ನವಾಗಿ ಮೂಡಿ ಬಂದಿವೆ ಎಂಬುದು ಚಿತ್ರತಂಡದ ಭರವಸೆ. ಸುಬ್ರಮಣ್ಯ ಕುಕ್ಕೆ ಮತ್ತು ಎ.ಸಿ ಶಿವಲಿಂಗೇಗೌಡ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಕುಮಾರ್ ಗೌಡ ಛಾಯಾಗ್ರಹಣ, ಭರ್ಜರಿ ಚೇತನ್ ಮತ್ತು ವಾಸುಕಿ ವೈಭವ್ ಸಾಹಿತ್ಯ, ಪವನ್ ಗೌಡ ಸಂಕಲನ, ಟೈಗರ್ ಶಿವು, ನರಸಿಂಹ ಸಾಹಸ ನಿರ್ದೇಶನ ಈ ಚಿತ್ರಕ್ಕಿರಲಿದೆ. ಅಮರ್, ಭಾವನಾ, ಮಾನಸಿ, ಮನೋಜ್ ವಿವಾನ್, ಭವ್ಯ, ಸುನೀಲ್ ಪುರಾಣಿಕ್, ಅರವಿಂದ ರಾವ್, ಸಿಂಚನಾ, ರಘು ರಾಮನಕೊಪ್ಪ, ಪ್ರಶಾಂತ್ ಸಂಬರ್ಗಿ, ಕಾಕ್ರೋಚ್ ಸುಧಿ ಮುಂತಾದವರು ನಟಿಸಿದ್ದಾರೆ. ಇನ್ನುಳಿದಂತೆ ವಿಜೇತ್ ಕೃಷ್ಣ, ವಾಸು ದೀಕ್ಷಿತ್ ಮತ್ತು ಶಶಾಂಕ್ ಶೇಷಗಿರಿ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ.

  • ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಮೂಲಕ ಹಿರಿತೆರೆಗೆ ಎಂಟ್ರಿ ಕೊಟ್ಟ ಭಾವನಾ ಅಪ್ಪು

    ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಮೂಲಕ ಹಿರಿತೆರೆಗೆ ಎಂಟ್ರಿ ಕೊಟ್ಟ ಭಾವನಾ ಅಪ್ಪು

    ರುಣ್ ಅಮುಕ್ತ (Arun Amukta) ನಿರ್ದೇಶನದ `ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ (Vidyarthi Vidyarthiniyare) ಚಿತ್ರ ಚಿತ್ರೀಕರಣ ಮುಗಿಸಿಕೊಂಡಿದೆ. ಕುಂಬಳ ಕಾಯಿ ಒಡೆದು, ಪೋಸ್ಟ್ ಪ್ರೊಡಕ್ಷನ್ ಕಾರ್ಯದತ್ತ ಹೊರಳಿಕೊಂಡಿರುವ ಈ ಘಳಿಗೆಯಲ್ಲಿ, ಪತ್ರಿಕಾಗೋಷ್ಠಿಯೊಂದನ್ನು ನಡೆಸಲಾಗಿದೆ. ಇದರಲ್ಲಿ ಪಾಲ್ಗೊಂಡಿದ್ದ ಚಿತ್ರತಂಡ, ಕಲಾವಿದರೆಲ್ಲ ಒಂದಷ್ಟು ಬೆರಗಿನ ವಿಚಾರಗಳನ್ನು ಜಾಹೀರು ಮಾಡಿದ್ದಾರೆ. ಬೆಂಗಳೂರು, ಮೈಸೂರು, ಮಂಗಳೂರು, ಚಿಕ್ಕಮಗಳೂರು ಮುಂತಾದೆಡೆಗಳಲ್ಲಿ ಚಿತ್ರೀಕರಣ ಮುಗಿಸಿಕೊಂಡಿರುವ ಈ ಚಿತ್ರದ ನಿಜವಾದ ಶಕ್ತಿ ಎಂದರೆ ಕಥೆ ಮತ್ತು ಪಾತ್ರಗಳಿಗೆ ಜೀವ ತುಂಬಿರೋ ಕಲಾವಿದರು. ಅದರಲ್ಲೊಂದು ಮುಖ್ಯ ಪಾತ್ರ ಕಿರುತೆರೆ ನಟಿ ಭಾವನಾ ಅಪ್ಪು ಪಾಲಿಗೆ ಒಲಿದು ಬಂದಿದೆ.

    ಭಾವನಾ ಅಪ್ಪು (Bhavana Appu) ಈಗಾಗಲೇ ಒಂದಷ್ಟು ಸೀರಿಯಲ್ಲುಗಳಲ್ಲಿ, ಕೆಲ ರಿಯಾಲಿಟಿ ಶೋಗಳಲ್ಲಿ ಭಾಗಿಯಾಗಿ ಒಂದಷ್ಟು ಜನಪ್ರಿಯತೆ ಗಳಿಸಿಕೊಂಡಿದ್ದಾರೆ. ನಿರ್ದೇಶಕ ಅರುಣ್ ಅಮುಕ್ತ ನಾಯಕಿಯರಲ್ಲೊಂದಾದ ಪಾತ್ರಕ್ಕೆ ಭಾವನಾರನ್ನೇ ಆಯ್ಕೆ ಮಾಡಿಕೊಂಡಿದ್ದರಂತೆ. ಇಂಥಾದ್ದೊಂದು ಅವಕಾಶ ಕೊಟ್ಟ, ಕಿರುತೆರೆಯಲ್ಲಿದ್ದ ತನಗೆ ಹಿರಿತೆರೆಗೆ ಎಂಟ್ರಿ ಕೊಡಿಸಿದ ನಿರ್ದೇಶಕರಿಗೆ ಧನ್ಯವಾದ ಹೇಳುತ್ತಲೇ ಭಾವನಾ ಮಾತುಗಳನ್ನು ಆರಂಭಿಸಿದರು. ಆ ನಂತರ ತನ್ನ ಪಾತ್ರದ ಕೆಲ ಚಹರೆಗಳನ್ನು ತೆರೆದಿಟ್ಟರು. ಅದರನ್ವಯ ಹೇಳೋದಾದರೆ, ಅವರ ಪಾಲಿಗಿಲ್ಲಿ ಡಿಫರೆಂಟಾದ ಪಾತ್ರವೇ ಒಲಿದು ಬಂದಿದೆ.

    ಅದು ಒಂದಷ್ಟು ಬಗೆಯ ಶೇಡ್ಸ್  ಹೊಂದಿರುವ ಪಾತ್ರವಂತೆ. ಕುಣಿಯಲೂ ಸೈ, ಫೈಟಿಂಗಿಗೂ ಸೈ ಅನ್ನುವಂತಹ ಪಾತ್ರ ತನ್ನದೆಂಬುದು ಭಾವನಾ ವಿವರಣೆ. ಸಾಮಾನ್ಯವಾಗಿ ನಾಯಕಿಯರಿಗೆ ಹೆಚ್ಚಿನ ಪ್ರಾಧಾನ್ಯತೆ ಸಿಗೋದು ಕಷ್ಟ. ಆದರೆ ತನಗೆ ಬಹಳಷ್ಟು ಪ್ರಧಾನ್ಯತೆ ಸಿಕ್ಕಿದೆ ಎಂಬ ತೃಪ್ತಿ ಭಾವನಾರದ್ದು. ಇನ್ನುಳಿದಂತೆ, ಪ್ರತೀ ಹಂತದಲ್ಲಿಯೂ ಪ್ರೋತ್ಸಾಹ ನೀಡುತ್ತಾ ಬಂದಿದ್ದ ಚಂದನ್ ಶೆಟ್ಟಿಗೂ ಭವನಾ ಧನ್ಯವಾದ ಹೇಳಿದ್ದಾರೆ. ಅಂತೂ ಈ ಸಿನಿಮಾ ಮೂಲಕವೇ ಕನ್ನಡ ಚಿತ್ರರಂಗದಲ್ಲಿ ನಾಯಕಿಯಾಗಿ ನೆಲೆ ಕಂಡುಕೊಳ್ಳುವ ಅವಕಾಶ ದೊರಕುತ್ತದೆಂಬ ಭರವಸೆ ಭಾವನಾ ಮಾತುಗಳಲ್ಲಿ ಕಾಣಿಸುತ್ತಿತ್ತು.

     

    ತಾರಾ ಬಳಗ, ತಾಂತ್ರಿಕತೆ ಸೇರಿದಂತೆ ಎಲ್ಲ ದಿಕ್ಕಿನಲ್ಲಿಯೂ ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರ ಭಿನ್ನವಾಗಿ ಮೂಡಿ ಬಂದಿವೆ ಎಂಬುದು ಚಿತ್ರತಂಡದ ಭರವಸೆ. ಸುಬ್ರಮಣ್ಯ ಕುಕ್ಕೆ ಮತ್ತು ಎ.ಸಿ ಶಿವಲಿಂಗೇಗೌಡ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಕುಮಾರ್ ಗೌಡ ಛಾಯಾಗ್ರಹಣ, ಭರ್ಜರಿ ಚೇತನ್ ಮತ್ತು ವಾಸುಕಿ ವೈಭವ್ ಸಾಹಿತ್ಯ, ಪವನ್ ಗೌಡ ಸಂಕಲನ, ಟೈಗರ್ ಶಿವು, ನರಸಿಂಹ ಸಾಹಸ ನಿರ್ದೇಶನ ಈ ಚಿತ್ರಕ್ಕಿರಲಿದೆ. ಅಮರ್, ಭಾವನಾ, ಮಾನಸಿ, ಮನೋಜ್ ವಿವಾನ್, ಭವ್ಯ, ಸುನೀಲ್ ಪುರಾಣಿಕ್, ಅರವಿಂದ ರಾವ್, ಸಿಂಚನಾ, ರಘು ರಾಮನಕೊಪ್ಪ, ಪ್ರಶಾಂತ್ ಸಂಬರ್ಗಿ, ಕಾಕ್ರೋಚ್ ಸುಧಿ ಮುಂತಾದವರು ನಟಿಸಿದ್ದಾರೆ. ಇನ್ನುಳಿದಂತೆ ವಿಜೇತ್ ಕೃಷ್ಣ, ವಾಸು ದೀಕ್ಷಿತ್ ಮತ್ತು ಶಶಾಂಕ್ ಶೇಷಗಿರಿ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ.

  • ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಚಿತ್ರದಲ್ಲಿ ಚಂದನ್ ಶೆಟ್ಟಿಗೆ ನಾಯಕಿ ಯಾರು?

    ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಚಿತ್ರದಲ್ಲಿ ಚಂದನ್ ಶೆಟ್ಟಿಗೆ ನಾಯಕಿ ಯಾರು?

    ರುಣ್ ಅಮುಕ್ತ (Arun Amukta) ನಿರ್ದೇಶನದ `ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ (Vidyarthi Vidyarthiniyare) ಚಿತ್ರ ಚಿತ್ರೀಕರಣ ಪೂರ್ಣಗೊಳಿಸಿಕೊಂಡಿದೆ. ಬೆಂಗಳೂರು, ಮೈಸೂರು, ಮಂಗಳೂರು, ಚಿಕ್ಕಮಗಳೂರು ಮುಂತಾದೆಡೆಗಳಲ್ಲಿ ಅವ್ಯಾಹತವಾಗಿ ಐವತ್ತು ದಿನಗಳ ಕಾಲ ಚಿತ್ರೀಕರಣ ನಡೆಸಲಾಗಿದೆ. ಇದೀಗ ಕುಂಬಳಕಾಯಿ ಒಡೆದ ನಂತರದಲ್ಲಿ ಚಿತ್ರತಂಡ ಪತ್ರಿಕಾ ಗೋಷ್ಠಿಯ ಮೂಲಕ ಮಾಧ್ಯಮದವರನ್ನು ಮುಖಾಮುಖಿಯಾಗಿದೆ. ಈ ಸಂದರ್ಭದಲ್ಲಿ ನಾಯಕ ನಟ ಚಂದನ್ ಶೆಟ್ಟಿ (Chandan Shetty) ಸೇರಿದಂತೆ, ಒಂದಿಡೀ ಚಿತ್ರತಂಡ ಹಾಜರಿದ್ದು, ಒಂದಷ್ಟು ಕುತೂಹಲಕರವಾದ ವಿಚಾರಗಳನ್ನು ಹಂಚಿಕೊಂಡಿದೆ.

    ಚಂದನ್ ಶೆಟ್ಟಿ ರಾಪ್ ಸಾಂಗ್ ಮೂಲಕವೇ ಸಂಚಲನ ಸೃಷ್ಟಿಸಿದ್ದವರು. ಕಳೆದ ವರ್ಷದಿಂದ ನಾಯಕ ನಟನಾಗಿಯೂ ರೂಪಾಂತರ ಹೊಂದಿರುವ ಚಂದನ್, ಈಗಾಗಲೇ ಒಂದೆರಡು ಚಿತ್ರಗಳಲ್ಲಿ ನಾಯಕನಾಗಿ ನಟಿಸಿದ್ದಾರೆ. ಇದೇ ಹೊತ್ತಿನಲ್ಲಿ ಅವರ ನಾಯಕನಾಗಿ ನಟಿಸಿರುವ ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದೆ. ಈ ನಿಮಿತ್ತವಾಗಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಪಾಲ್ಗೊಂಡು ಮಾತಾಡಿದ ಚಂದನ್ ಶೆಟ್ಟಿ, ತಮ್ಮ ಪಾತ್ರದ ಬಗ್ಗೆ, ಚಿತ್ರೀಕರಣದ ಅನುಭವಗಳ ಬಗ್ಗೆ ಮನಬಿಚ್ಚಿ ಮಾತಾಡಿದ್ದಾರೆ.

    ಚಂದನ್ ಶೆಟ್ಟಿ ಇಲ್ಲಿ ನಾಯಕನಾಗಿ ನಟಿಸಿದ್ದರೂ ಅವರಿಗೆ ನಾಯಕಿ ಇಲ್ಲವಂತೆ. ಆರಂಭದಲ್ಲಿ ಈ ವಿಚಾರ ತಿಳಿದಾಗ ಕೊಂಚ ಬೇಸರವಾದ, ಕಥೆ ಚೆನ್ನಾಗಿದ್ದದ್ದರಿಂದ ಆ ಕೊರತೆ ಕಾಡಲಿಲ್ಲ ಅಂತ ಚಂದನ್ ಹಾಸ್ಯದ ಧಾಟಿಯಲ್ಲಿ ಹೇಳಿಕೊಂಡಿದ್ದಾರೆ. ನಿರ್ದೇಶಕ ಅರುಣ್ ಅಮುಕ್ತ ಅವರ ಕಸುಬುದಾರಿಕೆಯನ್ನು ಮೆಚ್ಚಿಕೊಳ್ಳುತ್ತಲೇ, ತಮ್ಮ ಆಸುಪಾಸಿನ ಪಾತ್ರಗಳಲ್ಲಿ ನಟಿಸಿರುವ ಇತರೇ ಕಲಾವಿದರನ್ನೂ ಕೂಡಾ ಚಂದನ್ ಕೊಂಡಾಡಿದ್ದಾರೆ. ಅದಕ್ಕೂ ಮಿಗಿಲಾಗಿ, ಪ್ರತಿ ಹಂತದಲ್ಲಿಯೂ ಯಾವುದಕ್ಕೂ ತತ್ವಾರವಾಗದಂತೆ ಪೊರೆದಿರುವ, ಕಾರ್ಪೊರೇಟ್ ಶೈಲಿಯಲ್ಲಿ ಈ ಸಿನಿಮಾವನ್ನು ನಿರ್ಮಾಣ ಮಾಡಿರುವ ನಿರ್ಮಾಪಕರ ಬಗ್ಗೆ ಚಂದನ್ ಅಡಿಗಡಿಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ಅವರಾಡಿದ ಅಷ್ಟೂ ಮಾತುಗಳಲ್ಲಿಯೂ ಕೂಡಾ ಈ ಸಿನಿಮಾ ನಾಯಕನಾಗಿ ತನ್ನ ವೃತ್ತಿ ಬದುಕಿನ ದಿಕ್ಕು ಬದಲಾಯಿಸುತ್ತದೆ ಎಂಬಂಥ ಗಾಢ ನಂಬಿಕೆ ಇಣಕಿ ಹಾಕುತ್ತಿತ್ತು.

     

    ತಾರಾ ಬಳಗ, ತಾಂತ್ರಿಕತೆ ಸೇರಿದಂತೆ ಎಲ್ಲ ದಿಕ್ಕಿನಲ್ಲಿಯೂ ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರ ಭಿನ್ನವಾಗಿ ಮೂಡಿ ಬಂದಿವೆ ಎಂಬುದು ಚಿತ್ರತಂಡದ ಭರವಸೆ. ಸುಬ್ರಮಣ್ಯ ಕುಕ್ಕೆ ಮತ್ತು ಎ.ಸಿ ಶಿವಲಿಂಗೇಗೌಡ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಕುಮಾರ್ ಗೌಡ ಛಾಯಾಗ್ರಹಣ, ಭರ್ಜರಿ ಚೇತನ್ ಮತ್ತು ವಾಸುಕಿ ವೈಭವ್ ಸಾಹಿತ್ಯ, ಪವನ್ ಗೌಡ ಸಂಕಲನ, ಟೈಗರ್ ಶಿವು, ನರಸಿಂಹ ಸಾಹಸ ನಿರ್ದೇಶನ ಈ ಚಿತ್ರಕ್ಕಿರಲಿದೆ. ಅಮರ್, ಭಾವನಾ, ಮಾನಸಿ, ಮನೋಜ್ ವಿವಾನ್, ಭವ್ಯ, ಸುನೀಲ್ ಪುರಾಣಿಕ್, ಅರವಿಂದ ರಾವ್, ಸಿಂಚನಾ, ರಘು ರಾಮನಕೊಪ್ಪ, ಪ್ರಶಾಂತ್ ಸಂಬರ್ಗಿ, ಕಾಕ್ರೋಚ್ ಸುಧಿ ಮುಂತಾದವರು ನಟಿಸಿದ್ದಾರೆ. ಇನ್ನುಳಿದಂತೆ ವಿಜೇತ್ ಕೃಷ್ಣ, ವಾಸು ದೀಕ್ಷಿತ್ ಮತ್ತು ಶಶಾಂಕ್ ಶೇಷಗಿರಿ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ.

  • ಮೂವರ ನಾಯಕರ ಪೈಕಿ ಒಬ್ಬರಿಗೆ ಅಮ್ಮನಾದ ಭವ್ಯಾ

    ಮೂವರ ನಾಯಕರ ಪೈಕಿ ಒಬ್ಬರಿಗೆ ಅಮ್ಮನಾದ ಭವ್ಯಾ

    ತೊಂಭತ್ತರ ದಶಕದ ಆಚೀಚಿನ ದಿನಮಾನಗಳಲ್ಲಿ ನಾಯಕಿಯಾಗಿ ದೊಡ್ಡ ಮಟ್ಟದಲ್ಲಿ ಪ್ರಸಿದ್ಧಿ ಪಡೆದುಕೊಂಡಿದ್ದವರು ಭವ್ಯ. ಘಟಾನುಘಟಿ ನಾಯಕರ ಜೊತೆಯಲ್ಲಿ ನಟಿಸಿ, ನಾನಾ ರೀತಿಯ ಪಾತ್ರಗಳನ್ನು ನಿರ್ವಹಿಸುತ್ತಾ ಕನ್ನಡದ ಪ್ರೇಕ್ಷಕರ ಮನಗೆದ್ದಿದ್ದ ಅವರು, ಒಂದಷ್ಟು ಕಾಲದವರೆಗೆ ನಟನೆಯಿಂದ ದೂರ ಸರಿದಿದ್ದರು. ಆದರೂ ಕಲಾ ಜಗತ್ತಿನಲ್ಲಿ ನಾನಾ ಆಯಾಮಗಳಲ್ಲಿ ತೊಡಗಿಸಿಕೊಂಡಿರುವ ಭವ್ಯಾ, ಇದೀಗ ವಿದ್ಯಾರ್ಥಿ ವಿದ್ಯಾರ್ಥಿನಿಯರೇ (Vidyarthi Vidyarthiniyare) ಚಿತ್ರದಲ್ಲಿ ಚೆಂದದ ಪಾತ್ರವೊಂದನ್ನು ನಿರ್ವಹಿಸಿದ್ದಾರೆ. ಚಿತ್ರೀಕರಣವನ್ನು ಸಂಪೂರ್ಣವಾಗಿ ಮುಗಿಸಿಕೊಂಡ ಖುಷಿಯಲ್ಲಿ ಈ ಸಿನಿಮಾದ ಪತ್ರಿಕಾಗೋಷ್ಠಿ ಇತ್ತೀಚೆಗೆ ನೆರವೇರಿದೆ. ಅದರಲ್ಲಿ ಭಾಗಿಯಾಗಿದ್ದ ಭವ್ಯಾ ತಮ್ಮ ಪಾತ್ರದ ಬಗ್ಗೆ, ಮತ್ತು ಚಿತ್ರೀಕರಣದ ಅನುಭವಗಳ ಬಗ್ಗೆ ಮನಬಿಚ್ಚಿ ಮಾತಾಡಿದ್ದಾರೆ.

    ಅರುಣ್ ಅಮುಕ್ತ (Arun Amukta) ನಿರ್ದೇಶನದ ಈ ಚಿತ್ರದಲ್ಲಿ ಚಂದನ್ ಶೆಟ್ಟಿ (Chandan Shetty) ನಾಯಕನಾಗಿ ನಟಿಸಿದ್ದಾರೆ. ಈವರೆಗೂ ನಾನಾ ಬಗೆಯ ಕ್ರಿಯಾಶೀಲತೆಯ ಮೂಲಕ ಪ್ರೇಕ್ಷಕರನ್ನು ಸೆಳೆಯುತ್ತಾ ಬಂದಿರುವ ಈ ಸಿನಿಮಾವೀಗ ಚಿತ್ರೀಕರಣ ಮುಗಿಸಿಕೊಂಡಿದೆ. ಬೆಂಗಳೂರು, ಮೈಸೂರು, ಮಂಗಳೂರು, ಚಿಕ್ಕಮಗಳೂರು ಮುಂತಾದೆಡೆಗಳಲ್ಲಿ ಐವತ್ತು ದಿನಗಳ ಕಾಲ ಚಿತ್ರೀಕರಣ ಸಮಾಪ್ತಿಯಾಗುತ್ತಲೇ ಕುಂಬಳಕಾಯಿ ಒಡೆಯಲಾಗಿದೆ. ಇದೀಗ ಪೋಸ್ಟ್ ಪ್ರಡಕ್ಷನ್ ಕಾರ್ಯಗಳಿಗೆ ಚಾಲನೆ ಕೊಟ್ಟಿರುವ ಚಿತ್ರತಂಡ, ಪತ್ರಿಕಾಗೋಷ್ಠಿಯ ಮೂಲಕ ಮಾಧ್ಯಮ ಮಂದಿಯನ್ನು ಮುಖಾಮುಖಿಯಾಗಿ ಒಂದಷ್ಟು ವಿಚಾರಗಳನ್ನು ಹಂಚಿಕೊಂಡಿದೆ.

    ಇದರಲ್ಲಿ ಭಾಗಿಯಾಗಿದ್ದ ಭವ್ಯಾ (Bhavya) ನಿರ್ದೇಶಕ ಅರುಣ್ ಅಮುಕ್ತಾರನ್ನು ಮುಕ್ತಕಂಠದಿಂದ ಮೆಚ್ಚಿಕೊಂಡಿದ್ದಾರೆ. ಸುಚಿತ್ರಾ ಫಿಲಂ ಸೊಸೈಟಿಯಲ್ಲಿ ಅರುಣ್ ವಿದ್ಯಾರ್ಥಿಯಾಗಿದ್ದಾಗ ಭವ್ಯಾ ಅವರ ಪ್ರಿನ್ಸಿಪಾಲ್ ಆಗಿದ್ದರಂತೆ. ತನ್ನ ವಿದ್ಯಾರ್ಥಿಯೊಬ್ಬ ಈ ಮಟ್ಟಕ್ಕೆ ಬೆಳೆದ ಖುಷಿ ಮತ್ತು ಆತನ ಚಿತ್ರದಲ್ಲಿಯೇ ಪಾತ್ರವಾಗುವ ಥ್ರಿಲ್ ನೊಂದಿಗೆ ಭವ್ಯಾ ನಟಿಸಲು ಒಪ್ಪಿಕೊಂಡಿದ್ದರಂತೆ. ಅಂದಹಾಗೆ ಇಲ್ಲ, ಅವರ ಮೂವರು ನಾಯಕರಲ್ಲಿ ಓರ್ವನ ತಾಯಿಯ ಪಾತ್ರಕ್ಕೆ ಜೀವ ತುಂಬಿದ್ದಾರೆ. ಈ ಪಾತ್ರವನ್ನು ಅನುಭವಿಸಿ ನಟಿಸಿದ್ದಾಗಿ ಹೇಳಿಕೊಂಡಿರುವ ಭವ್ಯಾ, ಈ ಸಿನಿಮಾ ಪ್ರೇಕ್ಷಕರಿಗೆಲ್ಲ ಹಿಡಿಸಿ ದೊಡ್ಡ ಮಟ್ಟದಲ್ಲಿ ಗೆಲುವು ಕಾಣಲೆಂದು ಹಾರೈಸಿದ್ದಾರೆ.

     

    ತಾರಾ ಬಳಗ, ತಾಂತ್ರಿಕತೆ ಸೇರಿದಂತೆ ಎಲ್ಲ ದಿಕ್ಕಿನಲ್ಲಿಯೂ ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರ ಭಿನ್ನವಾಗಿ ಮೂಡಿ ಬಂದಿವೆ ಎಂಬುದು ಚಿತ್ರತಂಡದ ಭರವಸೆ. ಸುಬ್ರಮಣ್ಯ ಕುಕ್ಕೆ ಮತ್ತು ಎ.ಸಿ ಶಿವಲಿಂಗೇಗೌಡ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಕುಮಾರ್ ಗೌಡ ಛಾಯಾಗ್ರಹಣ, ಭರ್ಜರಿ ಚೇತನ್ ಮತ್ತು ವಾಸುಕಿ ವೈಭವ್ ಸಾಹಿತ್ಯ, ಪವನ್ ಗೌಡ ಸಂಕಲನ, ಟೈಗರ್ ಶಿವು, ನರಸಿಂಹ ಸಾಹಸ ನಿರ್ದೇಶನ ಈ ಚಿತ್ರಕ್ಕಿರಲಿದೆ. ಅಮರ್, ಭಾವನಾ, ಮಾನಸಿ, ಮನೋಜ್ ವಿವಾನ್, ಭವ್ಯ, ಸುನೀಲ್ ಪುರಾಣಿಕ್, ಅರವಿಂದ ರಾವ್, ಸಿಂಚನಾ, ರಘು ರಾಮನಕೊಪ್ಪ, ಪ್ರಶಾಂತ್ ಸಂಬರ್ಗಿ, ಕಾಕ್ರೋಚ್ ಸುಧಿ ಮುಂತಾದವರು ನಟಿಸಿದ್ದಾರೆ. ಇನ್ನುಳಿದಂತೆ ವಿಜೇತ್ ಕೃಷ್ಣ, ವಾಸು ದೀಕ್ಷಿತ್ ಮತ್ತು ಶಶಾಂಕ್ ಶೇಷಗಿರಿ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ.

  • ಪೊಲೀಸ್ ಆಗಿ ಸಂಬರ್ಗಿ: ವಿದ್ಯಾರ್ಥಿ ವಿದ್ಯಾರ್ಥಿನಿಯರ ಗಮನಿಸಿ

    ಪೊಲೀಸ್ ಆಗಿ ಸಂಬರ್ಗಿ: ವಿದ್ಯಾರ್ಥಿ ವಿದ್ಯಾರ್ಥಿನಿಯರ ಗಮನಿಸಿ

    ಚಂದನ್ ಶೆಟ್ಟಿ (Chandan Shetty) ನಾಯಕನಾಗಿ ನಟಿಸಿರುವ `ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ (Vidyarthi Vidyarthiniyare) ಚಿತ್ರ ಅತ್ಯಂತ ವೇಗವಾಗಿ ಚಿತ್ರೀಕರಣ ಮುಗಿಸಿಕೊಂಡಿದೆ. ಐವತ್ತು ದಿನಗಳ ಕಾಲ ಬೆಂಗಳೂರು, ಮೈಸೂರು, ಮಂಗಳೂರು, ಚಿಕ್ಕಮಗಳೂರು ಮುಂತಾದೆಡೆಗಳಲ್ಲಿ ಚಿತ್ರೀಕರಣ ಸಂಪೂರ್ಣಗೊಳಿಸಿಕೊಂಡಿದೆ. ಹೀಗೆ ಕುಂಬಳಕಾಯಿ ಒಡೆದ ಬಳಿಕ ಪತ್ರಿಕಾಗೋಷ್ಠಿಯೊಂದನ್ನು ಚಿತ್ರತಂಡ ಆಯೋಜಿಸಿತ್ತು. ಅಚ್ಚುಕಟ್ಟಾಗಿ ನಡೆದ ಈ ಪತ್ರಿಕಾ ಗೋಷ್ಠಿಯಲ್ಲಿ ಒಂದಿಡೀ ಚಿತ್ರತಂಡ ಹುರುಪಿನಿಂದ ಭಾಗಿಯಾಗಿತ್ತು. ವಿಶೇಷವೆಂದರೆ, ಈ ಸಿನಿಮಾದ ಮುಖ್ಯ ಪಾತ್ರಗಳಲ್ಲಿ ನಟಿಸಿರುವ ಕಲಾವಿದರೇ ಆ ಬಗೆಗಿನ ಬೆರಗು ಮೂಡಿಸುವ ಒಂದಷ್ಟು ವಿಚಾರಗಳನ್ನು ಹಂಚಿಕೊಂಡಿದ್ದಾರೆ.

    ಅರುಣ್ ಅಮುಕ್ತ (Arun Amukta) ನಿರ್ದೇಶನದ ಈ ಸಿನಿಮಾ ಹೆಸರೇ ಸೂಚಿಸುವಂತೆ ಕಾಲೇಜು ವಿದ್ಯಾರ್ಥಿ ವಿದ್ಯಾರ್ಥಿನಿಯರ ಜಗತ್ತಿನಲ್ಲಿ ಕದಲುವ ಕಥಾನಕವನ್ನೊಳಗೊಂಡಿದೆ. ಪ್ರಸ್ತಿತ ಸನ್ನಿವೇಶದಲ್ಲಿನ ಯುವ ಸಮುದಾಯದ ಮನಃಸ್ಥಿತಿಗೆ ಕನ್ನಡಿ ಹಿಡಿಯುವಂಥಾ ಯೂಥ್ ಫುಲ್ ಕಥೆಯನ್ನು ಈ ಚಿತ್ರ ಒಳಗೊಂಡಿದೆ. ಇತ್ತೀಚಿನ ದಿನಗಳಲ್ಲಿ ನಟನೆಯಲ್ಲಿ ಬ್ಯುಸಿಯಾಗುತ್ತಿರುವ ಪ್ರಶಾಂತ್ ಸಂಬರ್ಗಿ ಇಲ್ಲಿ ರಗಡ್ ಲುಕ್ಕಿನ ಪಾತ್ರವೊಂದಕ್ಕೆ ಜೀವ ತುಂಬಿದ್ದಾರಂತೆ. ಸದರಿ ಪತ್ರಿಕಾ ಗೋಷ್ಠಿಯಲ್ಲಿ ಹಾಜರಿದ್ದ ಸಂಬರ್ಗಿ (Prasanth Sambaragi) ತಮ್ಮ ಪಾತ್ರದ ಬಗ್ಗೆ ಕೆಲ ಅಂಶಗಳನ್ನು ಬಿಚ್ಚಿಡುತ್ತಲೇ, ನಿರ್ದೇಶಕ ಅರುಣ್ ಅಮುಕ್ತ ಅವರ ಕಾರ್ಯವೈಖರಿ ಮತ್ತು ನಿರ್ಮಾಪಕರ ಸಿನಿಮಾ ಪ್ರೇಮವನ್ನು ಕೊಂಡಾಡಿದ್ದಾರೆ.

    ಅಂದಹಾಗೆ, ಇಲ್ಲಿ ಪ್ರಶಾಂತ್ ಸಂಬರ್ಗಿ ಖಡಕ್ ಪೊಲೀಸ್ ಅಧಿಕಾರಿಯ ಪಾತ್ರಕ್ಕೆ ಜೀವ ತುಂಬಿದ್ದಾರೆ. ಒಟ್ಟಾರೆ ಚಿತ್ರೀಕರಣದ ಸಂದರ್ಭದಲ್ಲಿ ಚಿತ್ರತಂಡದ ಸಿನಿಮಾ ಪ್ರೇಮ ಕಂಡು ಅವರು ಖುಷಿಕೊಂಡಿದ್ದಾರೆ. ಅದರಲ್ಲಿಯೂ ನಿರ್ಮಾಪಕರುಗಳು ಯಾವುದಕ್ಕೂ ಕಡಿಮೆಯಾಗದಂತೆ ನೋಡಿಕೊಂಡು ಕಾರ್ಪೋರೇಟ್ ಶೈಲಿಯಲ್ಲಿ ಈ ಸಿನಿಮಾವನ್ನು ಪೊರೆದ ರೀತಿಗೆ ಸಂಬರ್ಗಿ ಮೆಚ್ಚುಗೆ ಸೂಚಿಸಿದ್ದಾರೆ. ಇಷ್ಟಲ್ಲದೇ ಈ ಸಿನಿಮಾದ ಪ್ರಧಾನ ಪಾತ್ರಗಳಲ್ಲಿ ನಟಿಸಿರುವ ಕಲಾವಿದರೆಲ್ಲರೂ ಮುಂದಿನ ದಿನಗಳಲ್ಲಿ ಚಿತ್ರರಂಗದಲ್ಲಿ ಗಟ್ಟಿಯಾಗಿ ನೆಲೆ ಕಂಡುಕೊಳ್ಳುತ್ತಾರೆಂಬ ಭರವಸೆಯನ್ನೂ ಕೂಡಾ ಪ್ರಶಾಂತ್ ಸಂಬರ್ಗಿ ವ್ಯಕ್ತಪಡಿಸಿದ್ದಾರೆ.

     

    ತಾರಾ ಬಳಗ, ತಾಂತ್ರಿಕತೆ ಸೇರಿದಂತೆ ಎಲ್ಲ ದಿಕ್ಕಿನಲ್ಲಿಯೂ ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರ ಭಿನ್ನವಾಗಿ ಮೂಡಿ ಬಂದಿವೆ ಎಂಬುದು ಚಿತ್ರತಂಡದ ಭರವಸೆ. ಸುಬ್ರಮಣ್ಯ ಕುಕ್ಕೆ ಮತ್ತು ಎ.ಸಿ ಶಿವಲಿಂಗೇಗೌಡ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಕುಮಾರ್ ಗೌಡ ಛಾಯಾಗ್ರಹಣ, ಭರ್ಜರಿ ಚೇತನ್ ಮತ್ತು ವಾಸುಕಿ ವೈಭವ್ ಸಾಹಿತ್ಯ, ಪವನ್ ಗೌಡ ಸಂಕಲನ, ಟೈಗರ್ ಶಿವು, ನರಸಿಂಹ ಸಾಹಸ ನಿರ್ದೇಶನ ಈ ಚಿತ್ರಕ್ಕಿರಲಿದೆ. ಅಮರ್, ಭಾವನಾ, ಮಾನಸಿ, ಮನೋಜ್ ವಿವಾನ್, ಭವ್ಯ, ಸುನೀಲ್ ಪುರಾಣಿಕ್, ಅರವಿಂದ ರಾವ್, ಸಿಂಚನಾ, ರಘು ರಾಮನಕೊಪ್ಪ, ಪ್ರಶಾಂತ್ ಸಂಬರ್ಗಿ, ಕಾಕ್ರೋಚ್ ಸುಧಿ ಮುಂತಾದವರು ನಟಿಸಿದ್ದಾರೆ. ಇನ್ನುಳಿದಂತೆ ವಿಜೇತ್ ಕೃಷ್ಣ, ವಾಸು ದೀಕ್ಷಿತ್ ಮತ್ತು ಶಶಾಂಕ್ ಶೇಷಗಿರಿ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ.

  • ವಿದ್ಯಾರ್ಥಿ ವಿದ್ಯಾರ್ಥಿನಿಯರೇ: ಅದೊಂದು ನವರಸ ಬೆರೆತ ಪಾತ್ರ ಸುನೀಲ್ ಪುರಾಣಿಕ್

    ವಿದ್ಯಾರ್ಥಿ ವಿದ್ಯಾರ್ಥಿನಿಯರೇ: ಅದೊಂದು ನವರಸ ಬೆರೆತ ಪಾತ್ರ ಸುನೀಲ್ ಪುರಾಣಿಕ್

    ರುಣ್ ಅಮುಕ್ತ (Arun Amukta) ನಿರ್ದೇಶನದ `ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ (Vidyarthi Vidyarthiniyare) ಚಿತ್ರ ಮಹತ್ವದ ಘಟ್ಟ ತಲುಪಿಕೊಂಡಿದೆ. ಅತ್ಯಂತ ವೇಗವಾಗಿ ಚಿತ್ರೀಕರಣ ಮುಗಿಸಿಕೊಂಡು, ಕುಂಬಳಕಾಯಿ ಒಡೆದಾದ ನಂತರ ಪತ್ರಿಕಾ ಗೋಷ್ಠಿಯ ಮೂಲಕ ಮಾಧ್ಯಮದವರನ್ನು ಮುಖಾಮುಖಿಯಾಗಿ ಕೆಲ ಮಹತ್ವದ ಅಂಶಗಳನ್ನು ಚಿತ್ರತಂಡ ಹಂಚಿಕೊಂಡಿದೆ. ಪಾತ್ರಗಳನ್ನು ಪರಿಚಯಿಸುವ ವಿಟಿ ಪ್ರದರ್ಶಿಸಿದ್ದಲ್ಲದೇ, ಆಯಾ ಪಾತ್ರಗಳನ್ನು ನಿರ್ವಹಿಸಿಸಿರುವ ಕಲಾವಿದರೇ, ಆ ಬಗೆಗಿನ ಒಂದಷ್ಟು ಇಂಟರೆಸ್ಟಿಂಗ್ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಒಟ್ಟಾರೆಯಾಗಿ, ಈ ಮೂಲಕವೇ ಚಂದನ್ ಶೆಟ್ಟಿ ನಾಯಕನಾಗಿ ನಟಿಸಿರುವ ಈ ಸಿನಿಮಾದ ಸುತ್ತ ತೀವ್ರವಾದ ಕುತೂಹಲವೊಂದು ಕಾವುಗಟ್ಟಿಕೊಂಡಿದೆ.

    ಸುಬ್ರಮಣ್ಯ ಕುಕ್ಕೆ ಮತ್ತು ಎ.ಸಿ ಶಿವಲಿಂಗಯ್ಯ ನಿರ್ಮಾಣ ಮಾಡಿರುವ ಚಿತ್ರ ವಿದ್ಯಾರ್ಥಿ ವಿದ್ಯಾರ್ಥಿನಿಯರೇ. ನಿರ್ದೇಶಕ ಅರುಣ್ ಅಮುಕ್ತ ಅತ್ಯಂತ ವ್ಯವಸ್ಥಿತವಾಗಿ ಇದರ ಚಿತ್ರೀಕರಣವನ್ನು ಮಾಡಿ ಮುಗಿಸಿದ್ದಾರೆ. ಬೆಂಗಳೂರು, ಮೈಸೂರು, ಮಂಗಳೂರು, ಚಿಕ್ಕಮಗಳೂರು ಮುಂತಾದೆಡೆಗಳಲ್ಲಿ ಐವತ್ತು ದಿನಗಳ ಕಾಲ ನಿರಂತವಾಗಿ ಚಿತ್ರೀಕರಣ ನಡೆದಿದೆ. ಅಂದಹಾಗೆ, ಈ ಚಿತ್ರದ ಪ್ರಧಾನ ಪಾತ್ರವೊಂದರಲ್ಲಿ ಹಿರಿಯ ನಟ ಸುನೀಲ್ ಪುರಾಣಿಕ್ ನಟಿಸಿಇದ್ದಾರೆ. ಈ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದ ಅವರು, ಈ ಪಾತ್ರದ ಹಿಂಚುಮುಂಚಿನ ಒಂದಷ್ಟು ವಿಚಾರಗಳನ್ನು ಹಂಚಿಕೊಂಡಿದ್ದಾರೆ.

    ನಿರ್ದೇಶಕ ಅರುಣ್ ಅಮುಕ್ತ ಸುನೀಲ್ ಪುರಾಣಿಕ್ (Sunil Puranik) ಅವರ ಗರಡಿಯಲ್ಲಿಯೇ ಪಳಗಿಕೊಂಡಿರುವವರು. ಪುರಾಣಿಕ್ ನಿರ್ದೇಶನದ ಧಾರಾವಾವಾಹಿಗಳ ನಿರ್ದೇಶನ ವಿಭಾಗದಲ್ಲಿ ದುಡಿದಿದ್ದ ಅರುಣ್ ಒಂದು ಸಿನಿಮಾ ಮಾಡೋದಾಗಿ ಹೇಳಿ, ಅದರಲ್ಲೊಂದು ಪಾತ್ರದ ಬಗ್ಗೆ ವಿವರಿಸಿ, ಅದನ್ನು ನೀವೇ ಮಾಡಬೇಕು ಎಂದಾಗ ಸುನಿಲ್ ಪುರಾಣಿಕ್ ಥ್ರಿಲ್ ಆಗಿದ್ದರಂತೆ. ಅದು ವಿಲನ್ ಗಿರಿ, ಭಾವುಕತೆ ಸೇರಿದಂತೆ ಎಲ್ಲ ರಸಗಳನ್ನೂ ಎರಕ ಹೊಯ್ದಂಥಾ ಪಾತ್ರ. ಅದಕ್ಕೆ ತಕ್ಕುದಾದ ರೀತಿಯಲ್ಲಿ ತಯಾರಿ ನಡಸಿ ಜೀವ ತುಂಬಿರುವ ಖುಷಿ ಸುನೀಲ್ ಅವರಲ್ಲಿದೆ. ಜೊತೆಗೆ ಅರುಣ್ ಅಮುಕ್ತ ಈ ಸಿನಿಮಾವನ್ನು ರೂಪಿಸಿರುವ ರೀತಿ ಮತ್ತು ನಿರ್ಮಾಪಕರ ಸಿನಿಮಾ ಪ್ರೇಮದ ಬಗ್ಗೆಯೂ ಸುನೀಲ್ ಪುರಾಣಿಕ್ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.

     

    ತಾರಾ ಬಳಗ, ತಾಂತ್ರಿಕತೆ ಸೇರಿದಂತೆ ಎಲ್ಲ ದಿಕ್ಕಿನಲ್ಲಿಯೂ ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರ ಭಿನ್ನವಾಗಿ ಮೂಡಿ ಬಂದಿವೆ ಎಂಬುದು ಚಿತ್ರತಂಡದ ಭರವಸೆ. ಸುಬ್ರಮಣ್ಯ ಕುಕ್ಕೆ ಮತ್ತು ಎ.ಸಿ ಶಿವಲಿಂಗೇಗೌಡ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಕುಮಾರ್ ಗೌಡ ಛಾಯಾಗ್ರಹಣ, ಭರ್ಜರಿ ಚೇತನ್ ಮತ್ತು ವಾಸುಕಿ ವೈಭವ್ ಸಾಹಿತ್ಯ, ಪವನ್ ಗೌಡ ಸಂಕಲನ, ಟೈಗರ್ ಶಿವು, ನರಸಿಂಹ ಸಾಹಸ ನಿರ್ದೇಶನ ಈ ಚಿತ್ರಕ್ಕಿರಲಿದೆ. ಅಮರ್, ಭಾವನಾ, ಮಾನಸಿ, ಮನೋಜ್ ವಿವಾನ್, ಭವ್ಯ, ಸುನೀಲ್ ಪುರಾಣಿಕ್, ಅರವಿಂದ ರಾವ್, ಸಿಂಚನಾ, ರಘು ರಾಮನಕೊಪ್ಪ, ಪ್ರಶಾಂತ್ ಸಂಬರ್ಗಿ, ಕಾಕ್ರೋಚ್ ಸುಧಿ ಮುಂತಾದವರು ನಟಿಸಿದ್ದಾರೆ. ಇನ್ನುಳಿದಂತೆ ವಿಜೇತ್ ಕೃಷ್ಣ, ವಾಸು ದೀಕ್ಷಿತ್ ಮತ್ತು ಶಶಾಂಕ್ ಶೇಷಗಿರಿ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ.

  • ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ತಾಜಾ ಸಮಾಚಾರ ಕೇಳಿ ಎಂದ ಟೀಮ್

    ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ತಾಜಾ ಸಮಾಚಾರ ಕೇಳಿ ಎಂದ ಟೀಮ್

    ರುಣ್ ಅಮುಕ್ತ (Arun Amukta) ನಿರ್ದೇಶನದ, ಚಂದನ್ ಶೆಟ್ಟಿ (Chandan Shetty) ನಾಯಕನಾಗಿ ನಟಿಸಿರುವ `ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ (Vidyarthi Vidyarthiniyare) ಚಿತ್ರವೀಗ ಯಶಸ್ವಿಯಾಗಿ ಚಿತ್ರೀಕರಣ ಮುಗಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಒಂದು ಅಚ್ಚುಕಟ್ಟಾದ ಪತ್ರಿಕಾಗೋಷ್ಠಿಯ ಮೂಲಕ ಮಾಧ್ಯಮಗಳನ್ನು ಮುಖಾಮುಖಿಯಾಗಿರುವ ಚಿತ್ರತಂಡ ಖುಷಿಯನ್ನು ಹಂಚಿಕೊಂಡಿದೆ. ಒಟ್ಟಾರೆ ಸಿನಿಮಾ ಬಗ್ಗೆ, ಮುಂದಿನ ಕಾರ್ಯವೈಖರಿಗಳ ಬಗ್ಗೆ ಒಂದಷ್ಟು ವಿಚಾರಗಳನ್ನು ವಿನಿಮಯ ಮಾಡಿಕೊಂಡಿದೆ. ಚಿತ್ರೀಕರಣ ಶುರುವಾದಲ್ಲಿಂದ ಮೊದಲ್ಗೊಂಡು, ಇಲ್ಲಿಯವರೆಗೂ ನಿರ್ದೇಶಕರು ಅತ್ಯಂತ ಕ್ರಿಯಾಶೀಲವಾಗಿ ಪ್ರೇಕ್ಷಕರನ್ನು ಹಿಡಿದಿಟ್ಟುಕೊಂಡು ಬಂದಿದ್ದಾರೆ. ಈ ಪತ್ರಿಕಾ ಗೋಷ್ಠಿಯನ್ನೂ ಕೂಡಾ ಅದರ ಭಾಗವೆಂಬಂಥಾ ಫೀಲ್ ಹುಟ್ಟಿಸುವಂತೆ ಚಿತ್ರತಂಡ ಆಯೋಜಿಸಿದ್ದದ್ದು ವಿಶೇಷ.

    ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರದಲ್ಲಿ ಪಾತ್ರಗಳನ್ನು ನಿರ್ವಹಿಸಿರುವ ಪ್ರಶಾಂತ್ ಸಂಬರ್ಗಿ, ಹಿರಿಯ ನಟಿ ಭವ್ಯಾ, ಸುನೀಲ್ ಪುರಾಣಿಕ್, ರಘು ರಾಮನಕೊಪ್ಪ ಮುಂತಾದವರು ಈ ಪತ್ರಿಕಾ ಗೋಷ್ಠಿಯಲ್ಲಿ ಭಾಗಿಯಾಗಿದ್ದರು. ಅವರೆಲ್ಲರೂ ಸಿನಿಮಾದ ಬಗ್ಗೆ, ಚಿತ್ರತಂಡ ಮತ್ತು ಚಿತ್ರೀಕರಣದ ಅನುಭವಗಳ ಬಗ್ಗೆ ಮನಬಿಚ್ಚಿ ಮಾತಾಡಿದ್ದಾರೆ. ಈ ಮೂಲಕ ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರದ ಬಗ್ಗೆ ಮತ್ತಷ್ಟು ಕುತೂಹಲ ಮೂಡಿಕೊಳ್ಳುವಂತೆ ಮಾಡಿದ್ದಾರೆ. ಇದೇ ವೇದಿಕೆಯಲ್ಲಿ ಪಾತ್ರಗಳನ್ನು ಪರಿಚಯಿಸುವ ವಿಡಿಯೋ ಮತ್ತು ತಾಂತ್ರಿಕ ವರ್ಗವನ್ನು ಪರಿಚಯಿಸೋ ವೀಟಿಯನ್ನು ಮಾಧ್ಯಮ ಪ್ರತಿನಿಧಿಗಳ ಮುಂದೆ ಪ್ರದರ್ಶಿಸಲಾಯಿತು.

    ನಿರ್ದೇಶಕ ಅರುಣ್ ಅಮುಕ್ತ ಪಕ್ಕಾ ಪ್ಲಾನ್ ಮಾಡಿಕೊಂಡು, ಅಂದುಕೊಂಡಂತೆಯೇ ಚಿತ್ರೀಕರಣ ಮುಗಿಸಿಕೊಂಡಿದ್ದಾರೆ. ಬೆಂಗಳೂರು, ಮೈಸೂರು, ಮಂಗಳೂರು, ಚಿಕ್ಕಮಗಳೂರು ಮುಂತಾದೆಡೆಗಳಲ್ಲಿ ಅವ್ಯಾಹತವಾಗಿ ಐವತ್ತು ದಿನಗಳ ಕಾಲ ಚಿತ್ರೀಕರಣ ನಡೆಸಲಾಗಿದೆ ಎಂದು ಕಾರ್ಯಕಾರಿ ನಿರ್ಮಾಪಕ ಶ್ರೀಕಾಂತ್ ಜಿ ಕಶ್ಯಪ್ ಮಾಹಿತಿ ನೀಡಿದರು. ಕುಂಬಳ ಕಾಯಿ ಒಡೆದಾದ ನಂತರದಲ್ಲೀಗ ಬಿರುಸಿನಿಂದ ಪೋಸ್ಟ್ ಪ್ರೊಡಕ್ಷನ್ ಕಾರ್ಯಗಳಿಗೆ ಚಾಲನೆ ಸಿಕ್ಕಿದೆ. ಜೂನ್ ಹೊತ್ತಿಗೆಲ್ಲ ಎಲ್ಲ ಕೆಲಸ ಕಾರ್ಯಗಳನ್ನೂ ಮುಗಿಸಿಕೊಂಡು, ಲೋಕಸಭಾ ಚುನಾವಣಾ ಫಲಿತಾಂಶ ಬಂದ ಬೆನ್ನಲ್ಲಿಯೇ ಈ ಸಿನಿಮಾ ಬಿಡುಗಡೆಗೊಳಿಸಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.

    ಸಂಗೀತ ನಿರ್ದೇಶಕ, ಗಾಯಕ ಚಂದನ್ ಶೆಟ್ಟಿ ಇದೀಗ ನಾಯಕ ನಟನಾಗಿಯೂ ರೂಪಾಂತರಗೊಂಡಿದ್ದಾರೆ. ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರದಲ್ಲಂತೂ ಅವರದ್ದು ಭಿನ್ನ ಶೇಡುಗಳನ್ನು ಹೊಂದಿರುವ ಪಾತ್ರವಂತೆ. ಅವರ ಪಾತ್ರಕ್ಕೆ ಮೂರು ಆಯಾಮಗಳಿವೆ. ಆ ಮೂರೂ ಪಾತ್ರಗಳಿಗಾಗಿ ಅವರು ತಿಂಗಳಳುಗಟ್ಟಲೆ ಶ್ರಮವಹಿಸಿ ತಯಾರಿ ನಡೆಸಿದ್ದಾರೆ. ಆ ಮೂರೂ ಶೇಡುಗಳ ಒಂದಕ್ಕೊಂದು ತದ್ವಿರುದ್ಧ ದಿಕ್ಕಿನವುಗಳು. ಚಂದನ್ ಅಸಲೀ ವ್ಯಕ್ತಿತ್ವಕ್ಕೆ ವಿರುದ್ಧವಾಗಿರೋ ಆ ಪಾತ್ರಗಳನ್ನು ನಿಭಾಯಿಸೋದು ಸವಾಲಾಗಿತ್ತಂತೆ. ಆದರೆ, ಅವಿರತವಾದ ಶ್ರಮದಿಂದ, ಅದೆಲ್ಲದಕ್ಕೂ ನ್ಯಾಯ ಸಲ್ಲಿಸಿದ ಖುಷಿ ಚಂದನ್ ಅವರಲ್ಲಿದೆ. ಆ ಬಗ್ಗೆ ಚಿತ್ರತಂಡದಲ್ಲೂ ಒಂದು ಮೆಚ್ಚುಗೆ ಇದ್ದೇ ಇದೆ.

     

    ಅರುಣ್ ಅಮುಕ್ತ ಪಾಲಿಗಿದು ಮಹತ್ವಾಕಾಂಕ್ಷೆಯ ಚಿತ್ರ. ತಾರಾ ಬಳಗ, ತಾಂತ್ರಿಕತೆ ಸೇರಿದಂತೆ ಎಲ್ಲ ದಿಕ್ಕಿನಲ್ಲಿಯೂ ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರ ಭಿನ್ನವಾಗಿ ಮೂಡಿ ಬಂದಿವೆ ಎಂಬುದು ಚಿತ್ರತಂಡದ ಭರವಸೆ. ಸುಬ್ರಮಣ್ಯ ಕುಕ್ಕೆ ಮತ್ತು ಎ.ಸಿ ಶಿವಲಿಂಗೇಗೌಡ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಕುಮಾರ್ ಗೌಡ ಛಾಯಾಗ್ರಹಣ, ಭರ್ಜರಿ ಚೇತನ್ ಮತ್ತು ವಾಸುಕಿ ವೈಭವ್ ಸಾಹಿತ್ಯ, ಪವನ್ ಗೌಡ ಸಂಕಲನ, ಟೈಗರ್ ಶಿವು, ನರಸಿಂಹ ಸಾಹಸ ನಿರ್ದೇಶನ ಈ ಚಿತ್ರಕ್ಕಿರಲಿದೆ. ಅಮರ್, ಭಾವನಾ, ಮಾನಸಿ, ಮನೋಜ್ ವಿವಾನ್, ಭವ್ಯ, ಸುನೀಲ್ ಪುರಾಣಿಕ್, ಅರವಿಂದ ರಾವ್, ಸಿಂಚನಾ, ರಘು ರಾಮನಕೊಪ್ಪ, ಪ್ರಶಾಂತ್ ಸಂಬರ್ಗಿ, ಕಾಕ್ರೋಚ್ ಸುಧಿ ಮುಂತಾದವರು ನಟಿಸಿದ್ದಾರೆ. ಇನ್ನುಳಿದಂತೆ ವಿಜೇತ್ ಕೃಷ್ಣ, ವಾಸು ದೀಕ್ಷಿತ್ ಮತ್ತು ಶಶಾಂಕ್ ಶೇಷಗಿರಿ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ.

  • ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಎನ್ನುತ್ತಾ ಬಂತು ಮೋಷನ್ ಪೋಸ್ಟರ್

    ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಎನ್ನುತ್ತಾ ಬಂತು ಮೋಷನ್ ಪೋಸ್ಟರ್

    ರುಣ್ ಅಮುಕ್ತ ನಿರ್ದೇಶನದಲ್ಲಿ ಮೂಡಿ ಬಂದಿರುವ `ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ (Vidyarthi Vidyarthiniyare) ಚಿತ್ರ ಚಿತ್ರೀಕರಣ ಶುರುವಾದಂದಿನಿಂದಲೂ ಒಂದಲ್ಲ ಒಂದು ರೀತಿಯಲ್ಲಿ ಪ್ರೇಕ್ಷಕರನ್ನು ಸೆಳೆಯುತ್ತಾ ಬಂದಿದೆ. ಅತ್ಯಂತ ಕ್ರಿಯಾಶೀಲವಾಗಿ ಪ್ರೇಕ್ಷಕರನ್ನು ತಲುಪಿಕೊಳ್ಳುವ ನಿಟ್ಟಿನಲ್ಲಿ ನಿರ್ದೇಶಕರ ಪಟ್ಟುಗಳೆಲ್ಲವೂ ಫಲ ಕೊಟ್ಟಿವೆ. ಇದೀಗ ಅದೇ ಹಾದಿಯಲ್ಲಿ ಸಾಗಿ ಬಂದಿರುವ ಚಿತ್ರತಂಡ ಪೋಸ್ಟರ್ ಮತ್ತು ಮೋಷನ್ ಪೋಸ್ಟರ್ ಅನ್ನು ಬಿಡುಗಡೆಗೊಳಿಸಿದೆ.

    ಈ ಸಿನಿಮಾ ಶೀರ್ಷಿಕೆ ಕೇಳಿದರೇನೇ ಒಟ್ಟಾರೆ ಕಥಾನಕದ ಬಗೆಗೊಂದು ಸುಳಿವು ಸಿಗುತ್ತದೆ. ಆದರೆ, ಅಂಥಾ ಯಾವ ಅಂದಾಜಿಗೂ ನಿಲುಕದ ಸ್ವರೂಪದಲ್ಲಿ ಈ ಸಿನಿಮಾವನ್ನು ರೂಪಿಸಿರುವ ಭರವಸೆ ನಿರ್ದೇಶಕ ಅರುಣ್ ಅಮುಕ್ತ (Arun Amukta) ಅವರಲ್ಲಿದೆ. ಈ ಹಿಂದೆ ಟೈಟಲ್ ಲಾಂಚ್ ಅನ್ನೂ ಸಹ ಪ್ರೇಕ್ಷಕರನ್ನು ಸೆಳೆಯುವಂತೆ ಮಾಡಿದ್ದ ಚಿತ್ರತಂಡ, ಇಂದು ಬೆಳಗ್ಗೆ ಪೋಸ್ಟರ್ ಹಾಗೂ ಸಂಜೆ ಮೋಷನ್ ಪೋಸ್ಟರ್ ಬಿಡುಗಡೆಗೊಳಿಸಿದೆ. ಇದರ ಸುತ್ತ ಈಗೊಂದಷ್ಟು ನಿರೀಕ್ಷೆ ಮತ್ತು ಚರ್ಚೆ ಹುಟ್ಟಿಕೊಂಡಿದೆ.

    ಇದುವರೆಗೂ ಈ ಸಿನಿಮಾದ ಪಾತ್ರವರ್ಗ ಕಾಣಿಸಿರಲಿಲ್ಲ. ಈ ಪೋಸ್ಟರ್ ಹಾಗೂ ಮೋಷನ್ ಪೋಸ್ಟರ್ ಮೂಲಕ ಕೆಲ ಪಾತ್ರಗಳ ದರ್ಶನವಾಗಿದೆ. ಇದರಲ್ಲಿ ಚಂದನ್ ಶೆಟ್ಟಿ (Chandan Shetty), ಭಾವನಾ ಅಪ್ಪು, ಅಮರ್, ಮನಸ್ವಿ, ವಿವಾನ್ ಸುನಿಲ್ ಪುರಾಣಿಕ್, ಅರವಿಂದ ರಾಜ್ ಪ್ರಶಾಂತ್ ಸಂಬರ್ಗಿ ಮುಂತಾದವರು ನಟಿಸಿದ್ದಾರೆ. ಇದರಲ್ಲಿ ನಾಲ್ಕು ಪಾತ್ರಗಳು ಈ ಪೋಸ್ಟರ್ ನಲ್ಲಿ ಕಾಣಿಸಿಕೊಂಡಿವೆ. ಅಂದಹಾಗೆ ಇದೊಂದು ಟೀನೇಜ್ ಕಲ್ಟ್ ಸಿನಿಮಾ. ಈಗಾಗಲೇ ಕಾಲೇಜು ಕೇಂದ್ರಿತವಾದ ಒಂದಷ್ಟು ಸಿನಿಮಾಗಳು ತೆರೆಗಂಡು ಗೆದ್ದಿವೆ. ಆ ಸಾಲಿನಲ್ಲಿ ಈ ಚಿತ್ರವನ್ನೂ ದಾಖಲಾಗುವಂತೆ ಮಾಡುವ ನಿಟ್ಟಿನಲ್ಲಿ ಚಿತ್ರತಂಡ ಶ್ರಮ ವಹಿಸುತ್ತಿದೆ.

    ಸುಬ್ರಮಣ್ಯ ಕುಕ್ಕೆ ಮತ್ತು ಶಿವಲಿಂಗೇಗೌಡ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಕುಮಾರ್ ಗೌಡ ಛಾಯಾಗ್ರಹಣ, ಭರ್ಜರಿ ಚೇತನ್ ಮತ್ತು ವಾಸುಕಿ ವೈಭಣವ್ ಸಾಹಿತ್ಯ, ಪವನ್ ಗೌಡ ಸಂಕಲನ, ಟೈಗರ್ ಶಿವು, ನರಸಿಂಹ ಸಾಹಸ ನಿರ್ದೇಶನ ಈ ಚಿತ್ರಕ್ಕಿರಲಿದೆ. ಅಮರ್, ಭಾವನಾ, ಮಾನಸಿ, ವಿವಾನ್, ಭವ್ಯ, ಸುನೀಲ್ ಪುರಾಣಿಕ್, ಅರವಿಂದ ರಾವ್, ಸಿಂಚನಾ, ರಘು ರಾಮನಕೊಪ್ಪ, ಪ್ರಶಾಂತ್ ಸಂಬರ್ಗಿ, ಕಾಕ್ರೋಚ್ ಸುಧಿ ಮುಂತಾದವರು ನಟಿಸಿದ್ದಾರೆ.

     

    ಇನ್ನುಳಿದಂತೆ ವಿಜೇತ್ ಕೃಷ್ಣ, ವಾಸು ದೀಕ್ಷಿತ್ ಮತ್ತು ಶಶಾಂಕ್ ಶೇಷಗಿರಿ ಸಂಗೀತ ನಿರ್ದೇಶನ ಮಾಡಲಿದ್ದಾರೆ. ವಿಶೇಷವೆಂದರೆ, ಇದುವರೆಗೂ ಮುಖ್ಯಭೂಮಿಕೆಯಲ್ಲಿ ನಟಿಸಿರುವ ಚಂದನ್ ಶೆಟ್ಟಿ ಪಾತ್ರವನ್ನು ಗೌಪ್ಯವಾಗಿಡಲಾಗಿದೆ. ಶಿವರಾತ್ರಿಯಂದು ಚಂದನ್ ಶೆಟ್ಟಿ ಪಾತ್ರ ಪರಿಚಯ ಮಾಡಲಿರೋ ಮೋಷನ್ ಪೋಸ್ಟರ್ ಲಾಂಚ್ ಆಗಲಿದೆ. ಇದೀಗ ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರ ಚಿತ್ರೀಕರಣದ ಅಂತಿಮ ಘಟ್ಟದಲ್ಲಿದೆ.

  • ಚಂದನ್ ಶೆಟ್ಟಿ ನಟನೆಯ ಚಿತ್ರಕ್ಕೆ ವಿಭಿನ್ನ ಟೈಟಲ್ : ವಿದ್ಯಾರ್ಥಿಗಳಿಂದ ಅನಾವರಣ

    ಚಂದನ್ ಶೆಟ್ಟಿ ನಟನೆಯ ಚಿತ್ರಕ್ಕೆ ವಿಭಿನ್ನ ಟೈಟಲ್ : ವಿದ್ಯಾರ್ಥಿಗಳಿಂದ ಅನಾವರಣ

    ಗಾಯಕ ಚಂದನ್ ಶೆಟ್ಟಿ (Chandan Shetty) ಸಿನಿಮಾ ನಾಯಕನಾಗಿ ಪ್ರೇಕ್ಷಕರನ್ನು ಮುಖಾಮುಖಿಯಾಗಲು ತಯಾರಾಗಿದ್ದಾರೆ. ಇಂಥದ್ದೊಂದು ಸುಳಿವನ್ನು ಕೆಲ ದಿನಗಳ ಹಿಂದೆ ಚಿತ್ರತಂಡವೇ ಬಿಟ್ಟುಕೊಟ್ಟಿತ್ತು. ಒಂದು ಪ್ರೋಮೋ ಮೂಲಕ ಕುತೂಹಲವನ್ನು ಕಾಯ್ದಿಟ್ಟುಕೊಳ್ಳುವ ಪ್ರಯತ್ನವನ್ನೂ ಮಾಡಲಾಗಿತ್ತು. ಕಡೆಗೂ ಆ ಸಿನಿಮಾ ಟೈಟಲ್ ಬಿಡುಗಡೆಗೊಂಡಿದೆ. ಇದೊಂದು ಕಾಲೇಜಿನ ಸುತ್ತ ಘಟಿಸುವ ಸಿನಿಮಾವಾಗಿದ್ದರಿಂದ `ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ (Vidyarthi Vidyarthiniyere ) ಎಂಬ ಶಿರ್ಷಿಕೆಯನ್ನಿಡಲಾಗಿದೆ (Title). ಅದನ್ನು ವಿದ್ಯಾರ್ಥಿಗಳೇ ಬಿಡುಗಡೆಗೊಳಿಸಿ ಸಂಭ್ರಮಿಸಿದ್ದಾರೆ.

    ಇದು ಯುವ ನಿರ್ದೇಶಕ ಅರುಣ್ ಅಮುಕ್ತ (Arun Amukta) ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಚಿತ್ರ. ಈ ಹಿಂದೆ ಶ್ರೀಮುರುಳಿ ನಾಯಕನಾಗಿ ನಟಿಸಿದ್ದ `ಲೂಸ್ ಗಳು’ ಎಂಬ ಚಿತ್ರವನ್ನು ನಿರ್ದೇಶಿಸಿದ್ದವರು ಅರುಣ್. ಅವರೀಗ ಈ ದಿನಮಾನದ ಟ್ರೆಂಡಿಗೆ ತಕ್ಕಂತೆ, ಹೊಸಾ ಬಗೆಯ ಕಥಾನಕದೊಂದಿಗೆ ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರವನ್ನು ರೂಪಿಸಲು ಮುಂದಾಗಿದ್ದಾರಂತೆ. ಈ ಶೀರ್ಷಿಕೆಯ ಅನಾವರಣದ ವಿಚಾರದಲ್ಲಿಯೇ ಚಿತ್ರತಂಡ ಒಂದಷ್ಟು ಕ್ರಿಯಾಶೀಲ ನಡೆಯನ್ನು ಅನುಸರಿಸಿದೆ. ರಾಜ್ಯದ ನಾನಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಸ್ವತಃ ಈ ಶೀರ್ಷಿಕೆ ಬಿಡುಗಡೆಗೊಳಿಸಿ, ಸಾಮಾಜಿಕ ಜಾಲತಾಣಗಳ ಮೂಲಕ ಅದನ್ನು ಹಂಚಿಕೊಂಡು ಸಂಭ್ರಮಿಸುತ್ತಿದ್ದಾರೆ.

    ಕಿರಿಕ್ ಪಾರ್ಟಿ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಂತಹ ಚಿತ್ರಗಳು ದೊಡ್ಡ ಪ್ರಮಾಣದಲ್ಲಿಯೇ ಗೆಲುವು ದಾಖಲಿಸಿದ್ದವು. ಆ ನಂತರ ಒಂದಷ್ಟು ವರ್ಷಗಳ ಕಾಲ ಆ ಶೈಲಿಯ ಸಿನಿಮಾಗಳು ಬಂದಿರಲಿಲ್ಲ. ಇತ್ತೀಚಿನ ದಿನಗಳಲ್ಲಿ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ, ಡೇರ್ ಡೆವಿಲ್ ಮುಸ್ತಫಾದಂತಹ ಕಾಲೇಜು ಕೇಂದ್ರಿತ ಕಥನಗಳು ಸೂಪರ್ ಹಿಟ್ ಆಗಿವೆ. ಈ ಮೂಲಕ ಆ ಬಗೆಯ ಸಿನಿಮಾಗಳ ಕೊರತೆ ಒಂದು ಮಟ್ಟಿಗೆ ನೀಗಿದಂತಾಗಿದೆ. ಈ ಸಾಲಿನಲ್ಲಿ ದೊಡ್ಡ ಗೆಲುವನ್ನು ತಮ್ಮದಾಗಿಸಿಕೊಳ್ಳುವ ಕನಸು, ಭರವಸೆಯೊಂದಿಗೆ, ಅರುಣ್ ಅಮುಕ್ತ ಸಾರಥ್ಯದಲ್ಲಿ ಈ ತಂಡ ಅಖಾಡಕ್ಕಿಳಿದಿದೆ. ಅಂದಹಾಗೆ, ಈ ಬಗೆಯ ಸಿನಿಮಾಗಳ ಸಾಲಿನಲ್ಲಿ ಭಿನ್ನವಾಗಿ ನಿಲ್ಲುವಂಥಾ ಅನೇಕ ಅಂಶಗಳು ಈ ಚಿತ್ರದಲ್ಲಿರಲಿವೆ ಎಂಬುದು ಚಿತ್ರತಂಡದ ಮಾತು.

    ತಾರಾ ಬಳಗ, ತಾಂತ್ರಿಕತೆ ಸೇರಿದಂತೆ ಎಲ್ಲ ದಿಕ್ಕಿನಲ್ಲಿಯೂ ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರವನ್ನು ಭಿನ್ನವಾಗಿ ಕಟ್ಟಿಕೊಡಲು ಚಿತ್ರತಂಡ ತಯಾರಾಗಿದೆ. ಸುಬ್ರಮಣ್ಯ ಕುಕ್ಕೆ ಮತ್ತು ಎ.ಸಿ ಶಿವಲಿಂಗೇಗೌಡ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಕುಮಾರ್ ಗೌಡ ಛಾಯಾಗ್ರಹಣ, ಭರ್ಜರಿ ಚೇತನ್ ಮತ್ತು ವಾಸುಕಿ ವೈಭವ್ ಸಾಹಿತ್ಯ, ಪವನ್ ಗೌಡ ಸಂಕಲನ, ಟೈಗರ್ ಶಿವು, ನರಸಿಂಹ ಸಾಹಸ ನಿರ್ದೇಶನ ಈ ಚಿತ್ರಕ್ಕಿರಲಿದೆ.

     

    ಅಮರ್, ಭಾವನಾ, ಮಾನಸಿ, ವಿವಾನ್, ಭವ್ಯ, ಸುನೀಲ್ ಪುರಾಣಿಕ್, ಅರವಿಂದ ರಾವ್, ಸಿಂಚನಾ, ರಘು ರಾಮನಕೊಪ್ಪ, ಪ್ರಶಾಂತ್ ಸಂಬರ್ಗಿ, ಕಾಕ್ರೋಚ್ ಸುಧಿ ಮುಂತಾದವರು ನಟಿಸಿದ್ದಾರೆ. ಇನ್ನುಳಿದಂತೆ ವಿಜೇತ್ ಕೃಷ್ಣ, ವಾಸು ದೀಕ್ಷಿತ್ ಮತ್ತು ಶಶಾಂಕ್ ಶೇಷಗಿರಿ ಸಂಗೀತ ನಿರ್ದೇಶನ ಮಾಡಲಿದ್ದಾರೆ. ಇನ್ನುಳಿದ ಒಂದಷ್ಟು ಮಹತ್ವದ ಸುದ್ದಿಗಳು ಹಂತ ಹಂತವಾಗಿ ಪ್ರೇಕ್ಷಕರನ್ನು ತಲುಪಿಕೊಳ್ಳಲಿವೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]