Tag: ವಿದ್ಯುತ್ ಕೇಂದ್ರ

  • ವೈಟಿಪಿಎಸ್ ಶಾಖೋತ್ಪನ್ನ ವಿದ್ಯುತ್ ಕೇಂದ್ರದಲ್ಲಿ ಅವಘಡ – ವಿದ್ಯುತ್ ಉತ್ಪಾದನೆ ಸ್ಥಗಿತ

    ವೈಟಿಪಿಎಸ್ ಶಾಖೋತ್ಪನ್ನ ವಿದ್ಯುತ್ ಕೇಂದ್ರದಲ್ಲಿ ಅವಘಡ – ವಿದ್ಯುತ್ ಉತ್ಪಾದನೆ ಸ್ಥಗಿತ

    ರಾಯಚೂರು: ನಗರದ ಯರಮರಸ್ ಸೂಪರ್ ಕ್ರಿಟಿಕಲ್ ಶಾಖೋತ್ಪನ್ನ ವಿದ್ಯುತ್ ಕೇಂದ್ರದಲ್ಲಿ ಹಾರೋಬೂದಿ ಸಾಗಣೆ ಮಾರ್ಗದ ಸಂಗ್ರಹ ಟ್ಯಾಂಕ್ ಕುಸಿದು ಕೋಟ್ಯಾಂತರ ರೂ. ಹಾನಿಯಾಗಿದೆ.

    ಘಟನೆಯಿಂದ ವಿದ್ಯುತ್ ಕೇಂದ್ರದ ಎರಡನೇ ಘಟಕದಲ್ಲಿ ವಿದ್ಯುತ್ ಉತ್ಪಾದನೆ ಸಂಪೂರ್ಣ ಸ್ಥಗಿತವಾಗಿದೆ.ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ಸಾಮರ್ಥ್ಯಕ್ಕಿಂತ ಹೆಚ್ಚು ಭಾರವನ್ನ ಹೊತ್ತಿದ್ದರಿಂದ ಕುಸಿತವಾಗಿದ್ದು, ನಿಗದಿತವಾಗಿ ಹಾರೋಬೂದಿ ವಿಲೆವಾರಿ ನಡೆಯದೆ ಅವಘಡ ಸಂಭವಿಸಿದೆ. ಇದನ್ನೂ ಓದಿ: ಅಕ್ರಮ ಆಸ್ತಿಗಳಿಕೆ ಆರೋಪ – ವಿಚಾರಣೆ ನಡೆಸಲು ಹೈಕೋರ್ಟ್‍ಗೆ ಸುಪ್ರೀಂ ಸೂಚನೆ

    Raichuru

    ಹೀಗಾಗಿ 800 ಮೆ.ವ್ಯಾ ಸಾಮರ್ಥ್ಯ ವಿದ್ಯುತ್ ಘಟಕ ಸಂಪೂರ್ಣ ಸ್ಥಗಿತವಾಗಿದೆ. ಟ್ಯಾಂಕ್ ರಿಪೇರಿಯಾಗುವವರೆಗೂ ವಿದ್ಯುತ್ ಉತ್ಪಾದನೆ ಸ್ಥಗಿತಗೊಳ್ಳಲಿದೆ. ಈ ಮೊದಲು ಇಂತಹ ಘಟನೆ ನಡೆದಿದ್ದರು ಅಧಿಕಾರಿಗಳು ಎಚ್ಚೆತ್ತುಕೊಳ್ಳದ ಹಿನ್ನೆಲೆ ಅವಘಡ ಪುನರಾವರ್ತನೆಯಾಗಿದೆ. ಎರಡನೇ ಘಟಕದಲ್ಲಿ ವಿದ್ಯುತ್ ಉತ್ಪಾದನೆ ಪುನರಾರಂಭವಾಗಲು ಇನ್ನೂ ಮೂರು ದಿನಗಳು ಬೇಕಾಗಬಹುದು ಅಂತ ವೈಟಿಪಿಎಸ್ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಜಮೀರ್ ಅತ್ಯಂತ ಚಿಲ್ಲರೆ, ಕೀಳು ಮಟ್ಟದ ಹೇಳಿಕೆ ನೀಡಿದ್ದಾರೆ : ಪ್ರಹ್ಲಾದ್ ಜೋಶಿ

  • ರಾಜ್ಯದಲ್ಲಿ ಕುಸಿದ ವಿದ್ಯುತ್ ಬೇಡಿಕೆ: ಲಾಕ್‍ಡೌನ್ ನಡುವೆ ಆರ್‍ಟಿಪಿಎಸ್‍ನ 68 ಕಾರ್ಮಿಕರ ವಜಾ

    ರಾಜ್ಯದಲ್ಲಿ ಕುಸಿದ ವಿದ್ಯುತ್ ಬೇಡಿಕೆ: ಲಾಕ್‍ಡೌನ್ ನಡುವೆ ಆರ್‍ಟಿಪಿಎಸ್‍ನ 68 ಕಾರ್ಮಿಕರ ವಜಾ

    – ಕೆಲಸದಿಂದ ತಗೆಯದಂತೆ ಕಾರ್ಮಿಕರಿಂದ ಹೋರಾಟ

    ರಾಯಚೂರು: ಅಂಫಾನ್ ಚಂಡಮಾರುತ ಹಿನ್ನೆಲೆ ವಿದ್ಯುತ್ ಬೇಡಿಕೆ ತಗ್ಗಿದ್ದು, ರಾಯಚೂರು ಶಾಖೋತ್ಪನ್ನ ವಿದ್ಯುತ್ ಕೇಂದ್ರದ 8 ಘಟಕಗಳಲ್ಲಿ ಕೇವಲ ಎರಡು ಘಟಕಗಳಿಂದ ಮಾತ್ರ ವಿದ್ಯುತ್ ಉತ್ಪಾದನೆಯಾಗುತ್ತಿದೆ.

    ವಿದ್ಯುತ್ ಬೇಡಿಕೆ ಕುಸಿತವಾಗಿರುವುದು ಕಾರ್ಮಿಕರ ಕೆಲಸವನ್ನೂ ಕಸಿದುಕೊಂಡಿದೆ. ಇಲ್ಲಿನ ಶಕ್ತಿನಗರದಲ್ಲಿರುವ ಆರ್‍ಟಿಪಿಎಸ್ ವಿದ್ಯುತ್ ಕೇಂದ್ರಕ್ಕೆ ಒಟ್ಟು 8 ಘಟಕಗಳಿಂದ 1,720 ಮೆಗಾವ್ಯಾಟ್ ವಿದ್ಯುತ್ ಉತ್ಪಾದನಾ ಸಾಮಥ್ರ್ಯವಿದ್ದು, ಈಗ ಎರಡು ಘಟಕಗಳಿಂದ ಕೇವಲ 282 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯಾಗುತ್ತಿದೆ. ರಾಜ್ಯದಲ್ಲಿ ಸದ್ಯ 9,270 ಮೆಗಾವ್ಯಾಟ್ ವಿದ್ಯುತ್ ಬೇಡಿಕೆ ಇದ್ದು, ಜಲ ಹಾಗೂ ಪವನ ಶಕ್ತಿಯಿಂದ ಉತ್ಪಾದನೆ ಹೆಚ್ಚಳವಾಗಿದೆ. ಹೀಗಾಗಿ ಶಾಖೋತ್ಪನ್ನ ಸ್ಥಾವರದಿಂದ ವಿದ್ಯುತ್ ಉತ್ಪಾದನೆ ಕಡಿತಗೊಂಡಿದೆ.

    ವಿದ್ಯುತ್ ಬೇಡಿಕೆ ಕುಸಿತದಿಂದಾಗಿ ಆರ್‍ಟಿಪಿಎಸ್ 8ನೇ ಘಟಕದಲ್ಲಿ ಕೆಲಸಮಾಡುತ್ತಿದ್ದ 68 ಜನ ಕೆಲಸ ಕಳೆದುಕೊಂಡಿದ್ದಾರೆ. ಗುತ್ತಿಗೆಯ ಅವಧಿ ಮುಗಿದಿದ್ದು, ಇದೇ ವೇಳೆ ವಿದ್ಯುತ್ ಬೇಡಿಕೆ ಕುಸಿದಿದ್ದರಿಂದ ಗುತ್ತಿಗೆ ಕಾರ್ಮಿಕರನ್ನು ಕೆಲಸದಿಂದ ಕೈಬಿಡಲಾಗಿದೆ. ಇದರಿಂದ ಕಾರ್ಮಿಕರು ಹೋರಾಟ ನಡೆಸಿದ್ದಾರೆ. ಲಾಕ್‍ಡೌನ್ ಸಮಯದಲ್ಲಿ ಕೆಲಸದಿಂದ ವಜಾ ಮಾಡಿರುವುದಕ್ಕೆ ಕಾರ್ಮಿಕರು ಬೀದಿಗೆ ಬಂದಿದ್ದಾರೆ. ಲಾಕ್‍ಡೌನ್ ಸಮಯದಲ್ಲಿ ಕೆಲಸದಿಂದ ತೆಗೆಯಬಾರದು, ವೇತನ ಕಡಿಮೆ ಮಾಡಬಾರದು ಎಂಬ ನಿಯಮವಿದ್ದರೂ ಆರ್‍ಟಿಪಿಎಸ್ ಕಾರ್ಮಿಕರನ್ನು ಕೆಸಲದಿಂದ ತೆಗೆದಿದೆ.

  • ಜೆಸ್ಕಾಂ ವಿದ್ಯುತ್ ವಿತರಣಾ ಕೇಂದ್ರ ಜಲಾವೃತ

    ಜೆಸ್ಕಾಂ ವಿದ್ಯುತ್ ವಿತರಣಾ ಕೇಂದ್ರ ಜಲಾವೃತ

    ರಾಯಚೂರು: ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ ಹಾಗೂ ಸುತ್ತಮುತ್ತಲ ಗ್ರಾಮಗಳಲ್ಲಿ ಕಳೆದ 24 ಗಂಟೆಯಿಂದ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು, ಸಾರ್ವಜನಿಕರು, ವ್ಯಾಪಾರಸ್ಥರು ಪರದಾಡುತ್ತಿದ್ದಾರೆ.

    ಎರಡು ದಿನಗಳಿಂದ ಸುರಿದ ಧಾರಾಕಾರ ಮಳೆಯಿಂದಾಗಿ ಇಲ್ಲಿನ 33 ಕೆ.ವಿ.ವಿದ್ಯುತ್ ವಿತರಣಾ ಕೇಂದ್ರ ಜಲಾವೃತವಾಗಿದ್ದು, ವಿದ್ಯುತ್ ಸಂಪರ್ಕ ಸ್ಥಗಿತಗೊಳಿಸಲಾಗಿದೆ. ಮಳೆಯ ಆರ್ಭಟದ ಜೊತೆಗೆ ಎನ್ ಆರ್‌ಬಿಸಿ ಕಾಲುವೆ ನೀರು ವಿದ್ಯುತ್ ಕೇಂದ್ರಕ್ಕೆ ನುಗ್ಗಿದೆ. ಇದರಿಂದ ಸುಮಾರು 5 ಅಡಿಯಷ್ಟು ನೀರು ವಿದ್ಯುತ್ ವಿತರಣಾ ಕೇಂದ್ರದಲ್ಲಿ ನಿಂತಿದ್ದು, ಹೈವೊಲ್ಟೇಜ್ ಟ್ರಾನ್ಸ್ ಫಾರ್ಮರ್‌ಗಳು ನೀರಿನಲ್ಲಿ ಮುಳುಗಿವೆ. ಪರಿಣಾಮ ವಿದ್ಯುತ್ ವಿತರಣೆ ಸ್ಥಗಿತಗೊಳಿಸಲಾಗಿದೆ.

    ಹೀಗಾಗಿ ಕಳೆದ 24 ಗಂಟೆಯಿಂದ ಕರೆಂಟ್ ಇಲ್ಲದೆ ಜಾಲಹಳ್ಳಿ ಪಟ್ಟಣ ಸೇರಿದಂತೆ ಸುತ್ತಲಿನ ಹತ್ತಾರು ಗ್ರಾಮದ ಜನರು ಸಮಸ್ಯೆ ಎದುರಿಸುತ್ತಿದ್ದಾರೆ. ಜೆಸ್ಕಾಂ ಅಧಿಕಾರಿಗಳು ತಕ್ಷಣ ಎಚ್ಚೆತ್ತು ವಿದ್ಯುತ್ ಪೂರೈಸುವಂತೆ ಸಾರ್ವಜನಿಕರು ಒತ್ತಾಯಿಸುತ್ತಿದ್ದಾರೆ.

    ಇತ್ತ ಕೃಷ್ಣಾ ನದಿ ಪ್ರವಾಹ ಇಳಿಕೆಯಾದರೂ ಅದರ ಪರಿಣಾಮಗಳು ಮಾತ್ರ ಮುಂದುವರಿದಿವೆ. ಪ್ರವಾಹ ಇಳಿಕೆ ಹಿನ್ನೆಲೆಯ ಗ್ರಾಮಗಳಿಗೆ ನುಗ್ಗಿದ್ದ ನೀರು ಹರಿದು ಹೋಗಿದೆ. ಆದರೆ ಗ್ರಾಮಗಳು ಈಗ ಕೆಸರಿನಿಂದ ತುಂಬಿಕೊಂಡಿದ್ದು ಜನ ಓಡಾಡಲು ಕಷ್ಟವಾಗಿದೆ. ಲಿಂಗಸುಗೂರಿನ ಕಡದರಗಡ್ಡೆ ಶಾಲಾ ಆವರಣ ಕೆಸರುಗದ್ದೆಯಂತಾಗಿದೆ.

    ದೇವದುರ್ಗದ ಹೂವಿನಹೆಡಗಿ ಸೇತುವೆ ಬಳಿ ಇದ್ದ ನಾಲ್ಕು ಹೋಟೆಲ್‍ಗಳು ಪ್ರವಾಹದ ಹೊಡೆತಕ್ಕೆ ಕೊಚ್ಚಿ ಹೋಗಿದ್ದು, ಅವಶೇಷಗಳು ಮಾತ್ರ ಉಳಿದಿವೆ. ಜಿಲ್ಲೆಯ ಹೂವಿನ ಹೆಡಗಿ, ಜಲದುರ್ಗಾ ಹಾಗೂ ಯರಗೋಡಿಯ ಸೇತುವೆಗಳು ಈಗ ಸಂಚಾರಕ್ಕೆ ಮುಕ್ತವಾಗಿವೆ. ಆದರೆ ಸತತ ಹದಿನೈದು ದಿನಗಳ ನೀರಿನ ರಭಸಕ್ಕೆ ಸೇತುವೆಗಳು ಅಲ್ಲಲ್ಲಿ ಶಿಥಿಲಗೊಂಡಿದ್ದು, ತಾತ್ಕಾಲಿಕ ರಿಪೇರಿ ಕಾರ್ಯ ನಡೆಯುತ್ತಿದೆ.

  • ವೈಟಿಪಿಎಸ್ ನಲ್ಲಿ ವಿದ್ಯುತ್ ಅವಘಡ- ಕಾರ್ಮಿಕನ ಸ್ಥಿತಿ ಗಂಭೀರ

    ವೈಟಿಪಿಎಸ್ ನಲ್ಲಿ ವಿದ್ಯುತ್ ಅವಘಡ- ಕಾರ್ಮಿಕನ ಸ್ಥಿತಿ ಗಂಭೀರ

    ರಾಯಚೂರು: ವಿದ್ಯುತ್ ಅವಘಡದಿಂದಾಗಿ ಕಾರ್ಮಿಕನಿಗೆ ಗಂಭೀರ ಗಾಯಗಳಾಗಿರುವ ಘಟನೆ ಯರಮರಸ್ ಸೂಪರ್ ಕ್ರಿಟಿಕಲ್ ಶಾಖೋತ್ಪನ್ನ ವಿದ್ಯುತ್ ಕೇಂದ್ರ (ವೈಟಿಪಿಎಸ್)ನಲ್ಲಿ ನಡೆದಿದೆ.

    ಸ್ವಿಚ್ ಗೇರ್ ನಲ್ಲಿ ಬೋರ್ಡ್ ಬದಲಿಸುವ ವೇಳೆ ಶಾರ್ಟ್ ಸರ್ಕ್ಯೂಟ್ ಆಗಿದ್ದು, ಕೆಎಎಸ್‍ಎಲ್ ಕಂಪನಿ ಗುತ್ತಿಗೆ ಕಾರ್ಮಿಕ ಮಹೇಶ್ ಗಾಯಗೊಂಡಿದ್ದಾರೆ. ಹೊಟ್ಟೆ, ತೊಡೆ, ಕಾಲಿನ ಭಾಗ ಭಾಗಶ: ಸುಟ್ಟಿದ್ದು, ಮಹೇಶ್ ಸ್ಥಿತಿ ಗಂಭೀರವಾಗಿದೆ.

    ರಾಯಚೂರಿನ ರಿಮ್ಸ್ ಬೋಧಕ ಆಸ್ಪತ್ರೆಯಲ್ಲಿ ಮಹೇಶ್ ಅವರಿಗೆ ಪ್ರಥಮ ಚಿಕಿತ್ಸೆ ನೀಡಲಾಗಿದ್ದು, ಹೆಚ್ಚಿನ ಸೌಲಭ್ಯ ಹಾಗೂ ವೈದ್ಯರಿಲ್ಲದ ಕಾರಣ ಹೈದರಾಬಾದ್ ನ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.

    ವೈಟಿಪಿಎಸ್ ಹಾಗೂ ಉಪ ಗುತ್ತಿಗೆ ಪಡೆದಿರುವ ಕೆಎಎಸ್‍ಎಲ್ ಕಂಪನಿ ಕಾರ್ಮಿಕರ ಸುರಕ್ಷತೆಗೆ ಅಗತ್ಯ ಕ್ರಮಗಳನ್ನ ಕೈಗೊಳ್ಳದಿರುವುದೇ ಈ ಅವಘಡಕ್ಕೆ ಕಾರಣ ಎನ್ನಲಾಗಿದೆ. ಕನಿಷ್ಠ ಮಟ್ಟದ ಸುರಕ್ಷತೆಯೂ ಇಲ್ಲದೆ ವಿದ್ಯುತ್ ಕೆಲಸ ಮಾಡುತ್ತಿದ್ದರಿಂದ ಹೆಚ್ಚು ಗಾಯಗಳಾಗಿವೆ.

    ಘಟನೆಯಿಂದ ಭಯಭೀತರಾಗಿರುವ ವೈಟಿಪಿಎಸ್ ಸಿಬ್ಬಂದಿ ಹಾಗೂ ಕಾರ್ಮಿಕರು ಸುರಕ್ಷತೆ ಬಗ್ಗೆ ಕ್ರಮ ಕೈಗೊಳ್ಳಲು ಆಗ್ರಹಿಸಿದ್ದಾರೆ.