Tag: ವಿದ್ಯುತ್ ಟವರ್

  • ವಿದ್ಯುತ್ ಟವರ್‌ನಲ್ಲಿ ಸಿಕ್ಕಿಹಾಕಿಕೊಂಡ ಮಿನಿ ವಿಮಾನ

    ವಿದ್ಯುತ್ ಟವರ್‌ನಲ್ಲಿ ಸಿಕ್ಕಿಹಾಕಿಕೊಂಡ ಮಿನಿ ವಿಮಾನ

    ವಾಷಿಂಗ್ಟನ್: ಮಿನಿ ವಿಮಾನವೊಂದು (Small Plane) ಆಗಸದಲ್ಲಿ ಹಾರುತ್ತ ಕೆಳಗಿಳಿದು ವಿದ್ಯುತ್ ಟವರ್‌ನಲ್ಲಿ (Power Lines) ಸಿಕ್ಕಿಹಾಕಿಕೊಂಡ ಘಟನೆ ಅಮೆರಿಕದ (America) ಮೇರಿಲ್ಯಾಂಡ್‍ನಲ್ಲಿ ನಡೆದಿದೆ.

    ಮಿನಿ ವಿಮಾನ ಹಾರಾಡುತ್ತ ಏಕಾಏಕಿ ಕೆಳಕ್ಕೆ ಬಂದು ವಿದ್ಯುತ್ ಟವರ್‌ಗೆ ಡಿಕ್ಕಿ ಹೊಡೆದು ಅಲ್ಲೇ ಸಿಕ್ಕಿಹಾಕಿಕೊಂಡಿದೆ. ವಿಮಾನ ಡಿಕ್ಕಿ ಹೊಡೆಯುತ್ತಿದ್ದಂತೆ ಪವಾಡ ಸದೃಶ್ಯವಾಗಿ ಪೈಲಟ್ ಪಾರಾಗಿದ್ದಾನೆ. ಇದನ್ನೂ ಓದಿ: ಇಟಲಿಯ ಇಶಿಯಾ ದ್ವೀಪದಲ್ಲಿ ಭೂಕುಸಿತ – 3 ವಾರದ ಶಿಶು ಸೇರಿ 7 ಸಾವು

    ಘಟನೆಯಿಂದಾಗಿ ವಾಷಿಂಗ್ಟನ್ (Washington) ಸೇರಿದಂತೆ ಮೇರಿಲ್ಯಾಂಡ್‍ನ 90,000 ಮನೆ ಹಾಗೂ ಕೈಗಾರಿಕಾ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಾಸವಾಗಿ ಜನ ಪರದಾಡಿದ್ದಾರೆ. ಮಿನಿ ವಿಮಾನ ಅಪಘಾತವಾಗುತ್ತಿದ್ದಂತೆ ವಿದ್ಯುತ್ ಟವರ್‌ನ ವಯರ್‌ಗಳು ಕಡಿತಗೊಂಡಿದೆ. ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು ಮತ್ತು ಅಗ್ನಿ ಶಾಮಕದಳ ಪೈಲಟ್‍ನನ್ನು ರಕ್ಷಿಸಿದ್ದಾರೆ. ಈ ಬಗ್ಗೆ ವಿಚಾರಣೆ ನಡೆಸಿದ ವೇಳೆ ಮಳೆಯಿಂದಾಗಿ ಮಿನಿ ವಿಮಾನ ವಿದ್ಯುತ್ ಟವರ್‌ಗೆ ಡಿಕ್ಕಿ ಹೊಡೆದಿದೆ ಎಂದು ಪ್ರಾಥಮಿಕ ತನಿಖೆ ವೇಳೆ ತಿಳಿದು ಬಂದಿದೆ. ಇದನ್ನೂ ಓದಿ: ಗಂಟಲಲ್ಲಿ ಸಿಕ್ಕಿಕೊಂಡ ಚಾಕ್ಲೇಟ್- 9 ವರ್ಷದ ಬಾಲಕ ಉಸಿರುಗಟ್ಟಿ ಸಾವು

    Live Tv
    [brid partner=56869869 player=32851 video=960834 autoplay=true]

  • ಕುಟುಂಬ ಕಲಹ – ವಿದ್ಯುತ್ ಹೈಟೆನ್ಷನ್ ಟವರ್ ಏರಿ ವ್ಯಕ್ತಿ ಹೈಡ್ರಾಮಾ

    ಕುಟುಂಬ ಕಲಹ – ವಿದ್ಯುತ್ ಹೈಟೆನ್ಷನ್ ಟವರ್ ಏರಿ ವ್ಯಕ್ತಿ ಹೈಡ್ರಾಮಾ

    ಹುಬ್ಬಳ್ಳಿ: ಕುಟುಂಬ ಕಲಹದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವಿದ್ಯುತ್ ಟವರ್ ಏರಿ ಹೈಡ್ರಾಮಾ ಸೃಷ್ಟಿಸಿದ್ದ ವ್ಯಕ್ತಿಯನ್ನು ಹೆಸ್ಕಾಂ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ.

    ಇಲ್ಲಿನ ಬಿಡ್ನಾಳದ 11 ಕೆವಿ ಹೈಟೆನ್ಷನ್ ಟವರ್ ಮೇಲೆ ಏರಿ ರಾಘವೇಂದ್ರ ಬಳ್ಳಾರಿ ಎಂಬಾತ ಆತ್ಮಹತ್ಯೆಗೆ ಮುಂದಾಗಿದ್ದಾನೆ. ಇದನ್ನು ಗಮನಿಸಿದ ವ್ಯಕ್ತಿಯೊಬ್ಬರು ಹೆಸ್ಕಾಂ ಕಚೇರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಆದರೆ ವ್ಯಕ್ತಿ ಹತ್ತಿರುವುದು ಯಾವ ಲೈನ್ ಟವರ್ ಮೇಲೆ ಎಂಬುವುದು ಖಾತ್ರಿಯಾಗಿರಲಿಲ್ಲ. ಕೂಡಲೇ ಎಚ್ಚೆತ್ತುಕೊಂಡ ಗ್ರಾಮೀಣ ಉಪವಿಭಾಗದ ಕಾರ್ಯಾನಿರ್ವಾಹಕ ಅಭಿಯಂತರ ಕಿರಣಕುಮಾರ್, ಆ ಮಾರ್ಗದಲ್ಲಿ ವಿದ್ಯುತ್ ಪೂರೈಕೆಯನ್ನು ಸ್ಥಗಿತಗೊಳಿಸಿದ್ದಾರೆ. ಇತ್ತ ರಾಘವೇಂದ್ರ ವಿದ್ಯುತ್ ತಂತಿಯನ್ನು ಸ್ಪರ್ಶಿಸುತ್ತಿದ್ದಂತೆ ಅತ್ತ ವಿದ್ಯುತ್ ಸಂಪರ್ಕ ಕಡಿತಗೊಂಡಿತು. ಇದರಿಂದ ರಾಘವೇಂದ್ರನ ಪ್ರಾಣ ಉಳಿದಿದೆ.‌ ಇದನ್ನೂ ಓದಿ: ರಾಷ್ಟ್ರಧ್ವಜ ರಕ್ಷಣಾ ಅಭಿಯಾನ ಆರಂಭಿಸಿದ ಯೂತ್ ಕಾಂಗ್ರೆಸ್ – ಜಗದೀಶ್ ಶೆಟ್ಟರ್‌ಗೆ ಧ್ವಜ ಕಾಣಿಕೆ ನೀಡಿ ಚಾಲನೆ

    ಬಳಿಕ ಪೊಲೀಸರು ಹಾಗೂ ಹೆಸ್ಕಾಂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ರಾಘವೇಂದ್ರನಿಗೆ ಬುದ್ದಿ ಹೇಳಿ ಮನೆಗೆ ಕಳುಹಿಸಿದ್ದಾರೆ. ಕ್ಷಣದಲ್ಲೇ ಕಾರ್ಯಪ್ರವೃತರಾದ ಹೆಸ್ಕಾಂ ಸಿಬ್ಬಂದಿಗೆ ಪೊಲೀಸರು ಹಾಗೂ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]