Tag: ವಿದ್ಯುತ್ ಬಿಲ್

  • ಹಂಪಿ ವಿವಿಗೆ ಒಂದಲ್ಲ, ಎರಡಲ್ಲ ಬರೋಬ್ಬರಿ 85 ಲಕ್ಷ ರೂ. ಕರೆಂಟ್ ಬಿಲ್

    ಹಂಪಿ ವಿವಿಗೆ ಒಂದಲ್ಲ, ಎರಡಲ್ಲ ಬರೋಬ್ಬರಿ 85 ಲಕ್ಷ ರೂ. ಕರೆಂಟ್ ಬಿಲ್

    ವಿಜಯನಗರ: ಕಾಂಗ್ರೆಸ್ (Congress) ಉಚಿತ 200 ಯೂನಿಟ್ ವಿದ್ಯುತ್ ನೀಡುವ ಭರವಸೆ ನೀಡಿದ ಬೆನ್ನಲ್ಲೇ ಜನರು ಏರಿಕೆಯಾಗಿರುವ ವಿದ್ಯುತ್ ಬಿಲ್ (Electricity Bill) ದರವನ್ನು ನೋಡಿ ಶಾಕ್ ಆಗಿದ್ದಾರೆ. ನಾಡಿನ ಪ್ರತಿಷ್ಠಿತ ವಿಶ್ವವಿದ್ಯಾಲಯವಾಗಿರುವ ಹಂಪಿ ವಿಶ್ವವಿದ್ಯಾಲಯಕ್ಕೆ (Hampi University) ಬರೋಬ್ಬರಿ 85 ಲಕ್ಷ ರೂ. ವಿದ್ಯುತ್ ಬಿಲ್ ಬಂದಿದ್ದು, ಬಿಲ್ ಕಟ್ಟಲು ಹಣವಿಲ್ಲದೆ ಪರದಾಡುತ್ತಿದೆ.

    ವಿಜಯನಗರ (Vijayanagara) ಜಿಲ್ಲೆಯ ಹೊಸಪೇಟೆ (Hospet) ತಾಲೂಕಿನಲ್ಲಿರುವ ಹಂಪಿ ಕನ್ನಡ ವಿಶ್ವವಿದ್ಯಾಲಯ ಕನ್ನಡದ ಸಂಶೋಧನೆಗಾಗಿ ಜನ್ಮ ತಾಳಿರುವ ಏಕೈಕ ವಿಶ್ವವಿದ್ಯಾಲಯ. ಈ ವಿವಿಗೆ ಅನುದಾನ ಸರಿಯಾಗಿ ಬಾರದ ಕಾರಣ ಹಿಂದಿನ ಕರೆಂಟ್ ಬಿಲ್ ಸಹ ಕಟ್ಟಿರಲಿಲ್ಲ. ಇದೀಗ ಹಿಂದಿನ ಬಾಕಿ ಮೊತ್ತವನ್ನು ಸೇರಿಸಿದಂತೆ ಇಲ್ಲಿವರೆಗಿನ ಒಟ್ಟು ವಿದ್ಯುತ್ ಬಿಲ್ 85 ಲಕ್ಷ ರೂ.ಗಳಷ್ಟಾಗಿದ್ದು, ಹಂಪಿ ವಿಶ್ವವಿದ್ಯಾಲಯ ಸಂಕಷ್ಟಕ್ಕೆ ಸಿಲುಕಿದೆ. ಇದನ್ನೂ ಓದಿ: ಅಕ್ಕಿ ವಿತರಣೆ ರಾಜ್ಯ ಸರ್ಕಾರದ ಜವಾಬ್ದಾರಿ, ಎಲ್ಲಿಯಾದ್ರೂ ಖರೀದಿ ಮಾಡಿ ಕೊಡಲಿ: ಯಡಿಯೂರಪ್ಪ

    ಮನ್ನಾ ಮಾಡುವಂತೆ ಮನವಿ:
    ಆರ್ಥಿಕ ಸಂಕಷ್ಟಕ್ಕೊಳಗಾಗಿರುವ ಹಂಪಿ ವಿಶ್ವವಿದ್ಯಾಲಯ ಕರೆಂಟ್ ಬಿಲ್ ಮನ್ನಾ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದೆ. ಹಂಪಿ ವಿವಿಯ ಕುಲಪತಿ ಡಾ.ಪರಮಶಿವಮೂರ್ತಿ ಈಗಾಗಲೇ ರಾಜ್ಯ ಸರ್ಕಾರಕ್ಕೆ ಪತ್ರ ಬರೆಯುವ ಮೂಲಕ ಕರೆಂಟ್ ಬಿಲ್ ಮನ್ನಾ ಮಾಡುವಂತೆ ಮನವಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಹುಬ್ಬಳ್ಳಿ ಧಾರವಾಡ ಮೇಯರ್‌ ಚುನಾವಣೆ – ಗದ್ದುಗೆ ಹಿಡಿಯಲು ಕೈ ಕಸರತ್ತು, ಬೆಂಗಳೂರಿನಲ್ಲಿ ಸಭೆ

    ವಿದ್ಯುತ್ ಬಿಲ್ ಕಟ್ಟಲು ಸಾಕಷ್ಟು ಹಣವಿಲ್ಲ. ಸರ್ಕಾರದಿಂದಲೂ ಸಕಾಲಕ್ಕೆ ಅನುದಾನ ಬರುತ್ತಿಲ್ಲ. ಸಿಬ್ಬಂದಿಗಳಿಗೆ ಸಂಬಳ ಕೊಡಲು ಹಣವಿಲ್ಲದೆ ಪರದಾಡುವ ಪರಿಸ್ಥಿತಿ ಉಂಟಾಗಿದೆ. ಇಂತಹ ಪರಿಸ್ಥಿತಿಯಲ್ಲಿ 85 ಲಕ್ಷ ರೂ. ಕರೆಂಟ್ ಬಿಲ್ ಪಾವತಿಸಲು ಅಸಾಧ್ಯ. ಹೀಗಾಗಿ ಹಂಪಿ ವಿವಿಯ ಕರೆಂಟ್ ಬಿಲ್ ಮನ್ನಾ ಮಾಡಿ ಎಂದು ಪತ್ರದ ಮೂಲಕ ಮನವಿ ಮಾಡಿದ್ದಾರೆ. ಇದನ್ನೂ ಓದಿ: ರಶ್ ಅಂತ ಡ್ರೈವರ್ ಸೀಟ್‌ನಲ್ಲಿ ಮಕ್ಕಳ ಜೊತೆ ಬಸ್‌ ಹತ್ತಿದ ಮಹಿಳೆ

    ಹಂಪಿ ವಿವಿಯ ಈ ಪತ್ರವನ್ನು ಗಂಭೀರವಾಗಿ ಪರಿಗಣಿಸಿ ವಿಶ್ವವಿದ್ಯಾಲಯದ ಕರೆಂಟ್ ಬಿಲ್ ಅನ್ನು ರಾಜ್ಯ ಸರ್ಕಾರ ಮನ್ನಾ ಮಾಡುತ್ತಾ ಎಂಬುದನ್ನು ಮುಂದಿನ ದಿನಗಳಲ್ಲಿ ಕಾದು ನೋಡಬೇಕಿದೆ. ಇದನ್ನೂ ಓದಿ: ಡಿಕೆಶಿ ಸಿಎಂ ಆಗುವಂತೆ ಆಶೀರ್ವದಿಸಿ – ವಿನಯ್ ಗುರೂಜಿಗೆ ಶಾಸಕ ತಮ್ಮಯ್ಯ ಮನವಿ

  • ಉಳ್ಳಾಲ ನಿವಾಸಿಗೆ ಬರೋಬ್ಬರಿ 7,71,000 ರೂ. ವಿದ್ಯುತ್ ಬಿಲ್ – ನಿಜವಾಗಿ ನಡೆದಿದ್ದು ಏನು?

    ಉಳ್ಳಾಲ ನಿವಾಸಿಗೆ ಬರೋಬ್ಬರಿ 7,71,000 ರೂ. ವಿದ್ಯುತ್ ಬಿಲ್ – ನಿಜವಾಗಿ ನಡೆದಿದ್ದು ಏನು?

    ಮಂಗಳೂರು: ಸರ್ಕಾರ ಉಚಿತ ವಿದ್ಯುತ್ ನೀಡುವುದಾಗಿ ಭರವಸೆ ಕೊಟ್ಟ ಬೆನ್ನಲ್ಲೇ ಮಂಗಳೂರಿನ (Mangaluru) ಉಳ್ಳಾಲ (Ullala) ನಿವಾಸಿಯೋರ್ವರಿಗೆ ಬರೋಬ್ಬರಿ 7 ಲಕ್ಷದ 71 ಸಾವಿರ ರೂ. ವಿದ್ಯುತ್ ಬಿಲ್ (Electricity Bill) ಬಂದಿದ್ದು, ಮಾಲೀಕ ಬಿಲ್ ನೋಡಿ ಶಾಕ್ ಆಗಿದ್ದಾರೆ.

    ಉಳ್ಳಾಲಬೈಲ್ ನಿವಾಸಿ ಸದಾಶಿವ ಆಚಾರ್ಯ ಅವರಿಗೆ ಪ್ರತಿ ತಿಂಗಳು 3,000 ವಿದ್ಯುತ್ ಬಿಲ್ ಬರುತ್ತಿತ್ತು. ಇದೀಗ ಮೇ ತಿಂಗಳ ಹೊಸ ಬಿಲ್ ಬಂದಿದ್ದು, ಅದರಲ್ಲಿ 99,338 ಯೂನಿಟ್ ವಿದ್ಯುತ್ ಖರ್ಚಾಗಿದೆ ಎಂದು ಬರೋಬ್ಬರಿ 7,71,072 ರೂ. ಕಟ್ಟಬೇಕು ಎಂದು ಬಿಲ್ ನೀಡಲಾಗಿದೆ. ಬಿಲ್ ಮೊತ್ತ ನೋಡಿ ಶಾಕ್ ಆದ ಸದಾಶಿವ ಆಚಾರ್ಯ ಅವರು ಬಿಲ್ ರೀಡರ್ ಬಳಿ ಈ ಬಗ್ಗೆ ಕೇಳಿದ್ದಾರೆ. ಆಗ ಬಿಲ್ ರೀಡರ್ ಅದನ್ನೆಲ್ಲಾ ಮೆಸ್ಕಾಂ (MESCOM) ಕಚೇರಿಯಲ್ಲಿ ಕೇಳಿ ಎಂದಿದ್ದಾರೆ. ಇದನ್ನೂ ಓದಿ: ಅಕ್ಕಿ ವಿಚಾರದಲ್ಲಿ ರಾಜಕೀಯ ಬೇಡ; ಇದು ರಾಜ್ಯದ ಬಡ ಜನರ ಹಸಿವಿನ ಪ್ರಶ್ನೆ – ಸಿ.ಟಿ ರವಿಗೆ ಗುಂಡೂರಾವ್ ತಿರುಗೇಟು

    ಈ ಕುರಿತು ಸದಾಶಿವ ಆಚಾರ್ಯ ಅವರು ಮೆಸ್ಕಾಂ ಕಚೇರಿಗೆ ದೂರು ನೀಡಿದ್ದಾರೆ. ಬಳಿಕ ಎಚ್ಚೆತ್ತುಕೊಂಡ ಅಧಿಕಾರಿಗಳು ತಮ್ಮ ತಪ್ಪನ್ನು ಅರಿತುಕೊಂಡು 2,833 ರೂ. ಮೌಲ್ಯದ ಪರಿಷ್ಕೃತ ಬಿಲ್ ಅನ್ನು ನೀಡಿದ್ದಾರೆ ಎಂದು ಸದಾಶಿವ ಆಚಾರ್ಯ ಅವರು ತಿಳಿಸಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಮೇಘಸ್ಫೋಟದ ಆತಂಕ – ಜೂ.18, 19ರಂದು ಬೆಂಗ್ಳೂರಲ್ಲಿ ಭಾರೀ ಮಳೆಯ ಮುನ್ಸೂಚನೆ

    ಈ ಕುರಿತು ಮೆಸ್ಕಾಂ ಉಳ್ಳಾಲ ಉಪವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ದಯಾನಂದ್ ಸ್ಥಳೀಯ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು, ಏಜೆನ್ಸಿಗಳ ಮೂಲಕ ಮೀಟರ್ ರೀಡಿಂಗ್ ಮಾಡಿಸಿ ಬಿಲ್ ನೀಡಲಾಗುತ್ತದೆ. ಬಿಲ್‌ಗಳಲ್ಲಿ ಲೋಪ ಕಂಡುಬಂದರೆ ಅಂತಹದ್ದನ್ನು ಗ್ರಾಹಕರಿಗೆ ಕೊಡುವಂತಿಲ್ಲ. ಸಿಬ್ಬಂದಿ ತಿಳಿಯದೇ ಬಿಲ್ ಅನ್ನು ಕೊಟ್ಟಿದ್ದಾರೆ. ವಿಚಾರ ತಿಳಿದ ತಕ್ಷಣ ತಪ್ಪನ್ನು ಸರಿಪಡಿಸಿ ಪರಿಷ್ಕೃತ ಬಿಲ್ ಅನ್ನು ವಿತರಿಸಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: Cyclone Biparjoy : 140 ಕಿ.ಮೀ ವೇಗದಲ್ಲಿ ಆರ್ಭಟ – ಗುಜರಾತ್‍ ತೀರದಲ್ಲಿಅಲ್ಲೋಲ ಕಲ್ಲೋಲ

  • ಬರೋಬ್ಬರಿ ಏಳೂವರೆ ಲಕ್ಷಕ್ಕೂ ಅಧಿಕ ವಿದ್ಯುತ್ ಬಿಲ್ ಕಂಡು ದಂಗಾದ ಮನೆ ಮಾಲೀಕ!

    ಬರೋಬ್ಬರಿ ಏಳೂವರೆ ಲಕ್ಷಕ್ಕೂ ಅಧಿಕ ವಿದ್ಯುತ್ ಬಿಲ್ ಕಂಡು ದಂಗಾದ ಮನೆ ಮಾಲೀಕ!

    ಮಂಗಳೂರು: ಸರ್ಕಾರ ಉಚಿತ ವಿದ್ಯುತ್ (200 Unit Free Electricity) ಕೊಡೋಕೆ ಮುಂದಾಗಿರೋ ನಡುವೆ ಮಂಗಳೂರಿನ ಉಳ್ಳಾಲ ನಿವಾಸಿಯೋರ್ವರಿಗೆ ಬರೋಬ್ಬರಿ 7 ಲಕ್ಷದ 71 ಸಾವಿರ ಬಿಲ್ (Electricity Bill) ಬಂದು ಶಾಕ್ ಕೊಟ್ಟಿದೆ.

    ಉಳ್ಳಾಲಬೈಲ್ ನಿವಾಸಿ ಸದಾಶಿವ ಆಚಾರ್ಯ (Sadashiva Acharya) ಅವರಿಗೆ ಪ್ರತಿ ತಿಂಗಳು ಮೂರು ಸಾವಿರದಷ್ಟು ವಿದ್ಯುತ್ ಬಿಲ್ ಬರುತ್ತಿದ್ದು, ಇದೀಗ ಮೇ ತಿಂಗಳ ಹೊಸ ಬಿಲ್ ಬಂದಿದ್ದು ಅದರಲ್ಲಿ 99,338 ಯುನಿಟ್ ವಿದ್ಯುತ್ ಖರ್ಚಾಗಿದೆ ಎಂದು ಬರೋಬ್ಬರಿ 7 ಲಕ್ಷದ 71 ಸಾವಿರದ 72 ರೂ. ಎಂದು ನಮೂದಾಗಿದೆ.

    ಬಿಲ್ ಮೊತ್ತ ನೋಡಿ ಶಾಕ್ ಆದ ಸದಾಶಿವ ಆಚಾರ್ಯ ಅವರು ಬಿಲ್ ರೀಡರ್ ಬಳಿ ಕೇಳಿದ್ದು, ಅದನ್ನೆಲ್ಲ ಮೆಸ್ಕಾಂ ಕಚೇರಿ (MESCOM Office) ಗೆ ಕೇಳಿ ಎಂದಿದ್ದಾರೆ. ಬಿಲ್ ರೀಡರ್ ನ ಎಡವಟ್ಟಿನಿಂದಾಗಿ ಈ ರೀತಿ ಬಿಲ್ ಬಂದಿರುವ ಸಾಧ್ಯತೆ ಇದೆ ಎನ್ನಲಾಗಿದೆ.  ಇದನ್ನೂ ಓದಿ: ಗೃಹಲಕ್ಷ್ಮಿಗೆ ಅರ್ಜಿ ಸ್ವೀಕಾರ ಪ್ರಕ್ರಿಯೆ ವಿಳಂಬ- ನಾಲ್ಕೈದು ದಿನದ ಬಳಿಕ ಆದೇಶವೆಂದ ಸಚಿವೆ

    ಕಾಂಗ್ರೆಸ್‍ನ ಗ್ಯಾರಂಟಿ (Congress Guarantee) ಯೋಜನೆಗಳಲ್ಲಿ 200 ಯುನಿಟ್ ಉಚಿತ ವಿದ್ಯುತ್ ಯೋಜನೆಯೂ ಒಂದಾಗಿದೆ. ಆದರೆ ಸದ್ಯ ಈ ಯೋಜನೆಯಲ್ಲಿ ಜನ ಸಾಕಷ್ಟು ಗೊಂದಲಕ್ಕೀಡಾಗಿದ್ದಾರೆ. ಕೆಲವಡೆ ಇನ್ನೂ ಕೂಡ ವಿದ್ಯುತ್ ಬಿಲ್‍ಗಳು ಮಾಲೀಕರ ಮನೆ ಸೇರಿಲ್ಲ. ಇನ್ನೂ ಕಲವೆಡೆಗಳಲ್ಲಿ ವಿದ್ಯುತ್ ಬಿಲ್ ನಲ್ಲಿ ಏರಿಕೆ ಕಂಡು ಜನ ಬಿದಿಗಿಳಿದಿದ್ದಾರೆ. ವಿದ್ಯುತ್ ದರ ಏರಿಕೆ ಮಾಡಿರುವುದಾಗಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಬಟನೆ ನಡೆಸುತ್ತಿದ್ದಾರೆ.

  • ಗ್ರಾಹಕರಿಗೆ ವಿದ್ಯುತ್‌ ದರ ಏರಿಕೆ ಬಳಿಕ ಮತ್ತೊಂದು ಶಾಕ್‌ -‌ ಏಕಾಏಕಿ ವಾಟರ್‌ ಬಿಲ್‌ ಡಬಲ್

    ಗ್ರಾಹಕರಿಗೆ ವಿದ್ಯುತ್‌ ದರ ಏರಿಕೆ ಬಳಿಕ ಮತ್ತೊಂದು ಶಾಕ್‌ -‌ ಏಕಾಏಕಿ ವಾಟರ್‌ ಬಿಲ್‌ ಡಬಲ್

    ಬೆಂಗಳೂರು: ಒಂದು ಕೈನಲ್ಲಿ ಕೊಟ್ಟು ಮತ್ತೊಂದು ಕೈನಲ್ಲಿ ಕಿತ್ತುಕೊಳ್ತಿದೆಯಾ ಸರ್ಕಾರ ಎಂದು ಜನಸಾಮಾನ್ಯರಲ್ಲಿ ಪ್ರಶ್ನೆ ಮೂಡುತ್ತಿದೆ. ಸರ್ಕಾರದ ಉಚಿತ ಭಾಗ್ಯಗಳ (Government Free Schemes)  ನಡುವೆ ರಾಜ್ಯದ ಜನರಿಗೆ ಬೆಲೆ ಏರಿಕೆ ಬಿಸಿ ತಟ್ಟಿದೆ.

    ಹೌದು. ಜೂನ್‌ ತಿಂಗಳಲ್ಲಿ ಬಂದಿರುವ ವಾಟರ್ ಬಿಲ್ (Water Bill) ಏಕಾಏಕಿ ಡಬಲ್‌ ಆಗಿದೆ. ಕೆಲ ಮನೆಗಳಿಗೆ ಬಂದಿರುವ ನೀರಿನ ಬಿಲ್‌ ಮೂರ‍್ನಾಲ್ಕು ಪಟ್ಟು ಹೆಚ್ಚಾಗಿದೆ. ಇದು ಬೇಕಂತಲೇ ಮಾಡಿದ್ದಾರೆ ಎಂದು ಜನ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದನ್ನೂ ಓದಿ: Cyclone Biparjoy: ಇಂದು ಸಂಜೆ ಅಪ್ಪಳಿಸಲಿದೆ ಸೈಕ್ಲೋನ್‌ – 74 ಸಾವಿರ ಮಂದಿ ಸ್ಥಳಾಂತರ

    ಬೆಂಗಳೂರಿನ (Bengaluru) ಕೆಲವು ಮನೆಗಳಲ್ಲಿ ಏಕಾಏಕಿ ಮನೆಯ ನೀರಿನ ಬಳಕೆಯ ಬಿಲ್ ಡಬಲ್, ತ್ರಿಬಲ್ ಆಗಿದೆ. ಹೀಗೆ ಹಲವು ರೀತಿಯಲ್ಲಿ ಬೆಲೆ ಏರಿಕೆ ಬಾಣ ಜನರಿಗೆ ಚುಚ್ಚುತ್ತಿದೆ. ಸರ್ಕಾರ ಒಂದು ಕೈನಲ್ಲಿ ಕೊಟ್ಟು ಮತ್ತೊಂದು ಕೈನಲ್ಲಿ ಕಿತ್ತುಕೊಳ್ತಿದೆಯಾ ಅನ್ನೋ ಆರೋಪ ಕೂಡಾ ಸಾರ್ವಜನಿಕರಿಂದ ಕೇಳಿ ಬರ್ತಿದೆ. ಇದನ್ನೂ ಓದಿ: ಸರ್ಕಾರಿ ನೌಕರರಿಗೆ ಸರಿಯಾಗಿ ವೇತನ ಸಿಗ್ತಿದೆ: ವದಂತಿಗೆ ಹಿಮಾಚಲಪ್ರದೇಶ ಸಿಎಂ ಸ್ಪಷ್ಟನೆ

    ಏಕಾಏಕಿ ನೀರಿನ ಶುಲ್ಕ ಹೆಚ್ಚಳ ಆಗಿದೆ. ಇದರಿಂದಾಗಿ ಸಾರ್ವಜನಿಕರು ಕಂಗಾಲಾಗಿದ್ದಾರೆ. ಕಳೆದ ತಿಂಗಳು 930 ರೂ. ಬಂದಿತ್ತು, ಈ ತಿಂಗಳು ಏಕಾಏಕಿ 3,000 ದಾಟಿದೆ. ವಯಾಲಿಕಾವಲ್ ಬಳಿ ಒಂದೇ ರಸ್ತೆಯ ಹತ್ತಾರು ಮನೆಗಳಲ್ಲಿ ನೀರಿನ ಬಿಲ್ ಡಬಲ್ ಆಗಿರೋದು ನೋಡಿ ಜನ ಶಾಕ್ ಆಗಿದ್ದಾರೆ. ಉಚಿತ ಭಾಗ್ಯ ಅಂತ ಈ ರೀತಿ ಮಾಡಿದ್ದಾರೆ ಎಂದು ಜಲಮಂಡಳಿ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಎಲ್ಲಾ ಫ್ರೀ ಭಾಗ್ಯ ಒಕೆ ಅದ್ರೇ ಈ ರೀತಿ ಬೇರೆ ರೀತಿಯಲ್ಲಿ ಸರ್ಕಾರ ನಮಗೆ ಬರೆ ಹಾಕ್ತಿದೆ ಅಂತ ಜನ ಆಕ್ರೋಶಗೊಂಡಿದ್ದಾರೆ. ಇನ್ನೂ ಜಲಮಂಡಳಿ ಅಧಿಕಾರಿಗಳನ್ನ ಕೇಳಿದ್ರೇ ಹೀಗೆ ಆಗಲು ಸಾಧ್ಯವಿಲ್ಲ. ಹೆಚ್ಚಿಗೆ ಬಿಲ್‌ಗೆ ಲೀಕೇಜ್ ಕಾರಣ ಇರಬಹುದು. ಒಂದೇ ರಸ್ತೆಯಲ್ಲಿ ಹತ್ತಾರು ಮನೆಗಳಿಗೆ ಈ ರೀತಿ ಆಗಿದೆ ಅಂದ್ರೆ ಪರಿಶೀಲನೆ ಮಾಡ್ತೀವಿ ಅಂತಾ ಹೇಳಿದ್ದಾರೆ.

  • ದೇವರು ಅಡುಗೆ ಮಾಡುತ್ತಾ, ಫ್ರಿಡ್ಜ್ ಬಳಸುತ್ತಾ? ದೇವಸ್ಥಾನದ ಕರೆಂಟ್ ಬಿಲ್ ಜಾಸ್ತಿ ಬಂದಿದ್ದಕ್ಕೆ ಅಜ್ಜಿ ಗರಂ

    ದೇವರು ಅಡುಗೆ ಮಾಡುತ್ತಾ, ಫ್ರಿಡ್ಜ್ ಬಳಸುತ್ತಾ? ದೇವಸ್ಥಾನದ ಕರೆಂಟ್ ಬಿಲ್ ಜಾಸ್ತಿ ಬಂದಿದ್ದಕ್ಕೆ ಅಜ್ಜಿ ಗರಂ

    ಧಾರವಾಡ: ದೇವಸ್ಥಾನದ ವಿದ್ಯುತ್ ಬಿಲ್ (Electricity Bill) ಈ ಬಾರಿ ಹೆಚ್ಚಿಗೆ ಬಂದಿರುವುದಕ್ಕೆ ಅಜ್ಜಿಯೊಬ್ಬರು ಅಧಿಕಾರಿಗಳ ವಿರುದ್ಧ ಗರಂ ಆಗಿದ್ದಾರೆ. “ದೇವರು ಅಡುಗೆ ಮಾಡುತ್ತಾ? ಫ್ರಿಡ್ಜ್ ಬಳಸುತ್ತಾ ಎಂದು ಆಕ್ರೋಶ ಹೊರಹಾಕಿರುವ ಘಟನೆ ಧಾರವಾಡದಲ್ಲಿ (Dharwad) ನಡೆದಿದೆ.

    ಶಕ್ತಿ ಕಾಲೋನಿಯಲ್ಲಿರುವ ಈಶ್ವರ ದೇವಸ್ಥಾನದ (Temple) ವಿದ್ಯುತ್ ಬಿಲ್ ಹಿಂದೆದಿಗಿಂತ ಈ ತಿಂಗಳು ಜಾಸ್ತಿ ಬಂದಿದೆ. ಇದರಿಂದಾಗಿ ದೇವಸ್ಥಾನದಲ್ಲಿ ಅರ್ಚಕಿಯಾಗಿರುವ ಅನಸೂಯಾ ಮಠಪತಿ ಸಿಡಿಮಿಡಿಗೊಂಡಿದ್ದಾರೆ. ಪ್ರತಿ ತಿಂಗಳು 400 ರೂಪಾಯಿ ಬರುತ್ತಿತ್ತು. ಈ ತಿಂಗಳು 940 ರೂ. ಬಂದಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಕೇಂದ್ರ ಸರ್ಕಾರ ಎಷ್ಟೇ ಷಡ್ಯಂತ್ರ ಮಾಡಿದರೂ ಅಕ್ಕಿ ಗ್ಯಾರಂಟಿ: ಸಿದ್ದರಾಮಯ್ಯ

    ಸರ್ಕಾರ ದೇವಸ್ಥಾನದ ವಿದ್ಯುತ್ ಬಿಲ್ ಪಾವತಿ ಮಾಡದಂತೆ ಆದೇಶ ಮಾಡಲಿ. ಈ ತಿಂಗಳು ಕರೆಂಟ್ ಬಿಲ್ ಕಟ್ಟೋದಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಅಧಿಕಾರಿಗಳ ಸಭೆಯಲ್ಲಿ ಸುರ್ಜೇವಾಲ ಭಾಗಿ ವಿವಾದ : ಕಾಂಗ್ರೆಸ್ ವಿರುದ್ಧ ಫೀಲ್ಡಿಗಿಳಿದ ವಿಪಕ್ಷಗಳು

  • ಜೂನ್‌ 14 ಆದ್ರೂ ಇನ್ನೂ ಬಂದಿಲ್ಲ ವಿದ್ಯುತ್‌ ಬಿಲ್‌!

    ಜೂನ್‌ 14 ಆದ್ರೂ ಇನ್ನೂ ಬಂದಿಲ್ಲ ವಿದ್ಯುತ್‌ ಬಿಲ್‌!

    ಮಂಡ್ಯ: ವಿದ್ಯುತ್‌ ಬಿಲ್‌ (Electricity Bill) ಏರಿಕೆಯಾಗಿದೆ ಎಂದು ರಾಜ್ಯದ ಹಲವು ಕಡೆ ಜನರು ಪ್ರತಿಭಟನೆ ನಡೆಸುತ್ತಿದ್ದರೆ ಮಂಡ್ಯ ನಗರದಲ್ಲಿ (Mandya) ಇನ್ನೂ ವಿದ್ಯುತ್‌ ಬಿಲ್‌ ಜನರ ಕೈ ಸೇರಿಲ್ಲ.

    ಸಾಧಾರಣ ರಾಜ್ಯದೆಲ್ಲಡೆ ಪ್ರತಿ ತಿಂಗಳ ಮೊದಲ ವಾರ ಮೀಟರ್‌ ರೀಡರ್‌ ಮನೆಗೆ ಬಂದು ಲೆಕ್ಕ ಹಾಕಿ ಬಿಲ್‌ ನೀಡುತ್ತಾರೆ. ಆದರೆ ಈ ಬಾರಿ ಜೂನ್‌ 14 ಆದರೂ ಮೀಟರ್‌ ರೀಡರ್‌ ಮನೆ ಬಂದಿಲ್ಲ.  ಇದನ್ನೂ ಓದಿ: ಪ್ರಿಯಕರನಿಗೋಸ್ಕರ ಪತಿಯನ್ನೇ ಮುಗಿಸಿದ ಖತರ್ನಾಕ್ ಲೇಡಿ – ಕೊನೆಗೇನಾಯ್ತು ನೋಡಿ

    ಅರ್ಧ ತಿಂಗಳು ಕಳೆದ ಬೆನ್ನಲ್ಲೇ ಜನರು ಈಗ ಗೊಂದಲಕ್ಕೆ ಒಳಗಾಗಿದ್ದಾರೆ. ವಿದ್ಯುತ್ ಬಿಲ್‌ ಜಾಸ್ತಿ ಮಾಡಲು ಚೆಸ್ಕಾಂ (CHESCOM) ಮುಂದಾಗಿದ್ಯಾ ಎಂದು ಜನ ಪ್ರಶ್ನಿಸುತ್ತಿದ್ದಾರೆ.

    ಈ ಬಗ್ಗೆ ಚೆಸ್ಕಾಂ ಅಧಿಕಾರಿಗಳನ್ನು ಸಂಪರ್ಕಿಸಿದರೆ, ಶೀಘ್ರವೇ ಬಿಲ್‌ ನೀಡಲಾಗುತ್ತದೆ ಎಂದು ಹೇಳಿದ್ದಾರೆ. ಬಿಲ್‌ ಇನ್ನೂ ಯಾಕೆ ಬಂದಿಲ್ಲ ಎಂಬ ಪ್ರಶ್ನೆಗೆ ಸಮರ್ಪಕವಾದ ಉತ್ತರ ಸಿಕ್ಕಿಲ್ಲ.

    ಮಂಡ್ಯ ಮಾತ್ರವಲ್ಲ ರಾಜ್ಯದ ಹಲವು ಭಾಗಗಳಲ್ಲಿ ಈ ಬಾರಿ ವಿದ್ಯುತ್‌ ಬಿಲ್‌ ಮನೆ ಮಾಲೀಕರಿಗೆ ಸಿಕ್ಕಿಲ್ಲ.

  • ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿ ಇರುವವರೆಗೂ ವಿದ್ಯುತ್ ಬಿಲ್ ನಾವೇ ಕಟ್ಟುತ್ತೇವೆ: ಬೈರತಿ ಸುರೇಶ್

    ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿ ಇರುವವರೆಗೂ ವಿದ್ಯುತ್ ಬಿಲ್ ನಾವೇ ಕಟ್ಟುತ್ತೇವೆ: ಬೈರತಿ ಸುರೇಶ್

    ಕೋಲಾರ: ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿ ಇರುವವರೆಗೂ ವಿದ್ಯುತ್ ಬಿಲ್ (Electricity Bill) ನಾವೇ ಕಟ್ಟುತ್ತೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ (Byrati Suresh) ಹೇಳಿದ್ದಾರೆ.

    ಕೋಲಾರ (Kolar) ದಲ್ಲಿ ಮಾತನಾಡಿದ ಅವರು, ಈಗ ಬಂದಿರುವ ವಿದ್ಯುತ್ ಬಿಲ್ ನಾವೇ ಕಟ್ಟುತ್ತೇವೆ. ವಿದ್ಯುತ್ ದರ ಏರಿಕೆ ಹಿಂದಿನ ಸರ್ಕಾರ ಮಾಡಿರುವುದು. ಕರ್ನಾಟಕ ವಿದ್ಯುತ್ ಶಕ್ತಿ ಆಯೋಗ ದರ ಏರಿಕೆ ಮಾಡುವುದು ಇಳಿಸುವುದು. ಬರುವ ತಿಂಗಳಿನಿಂದ ನಾವೇ ವಿದ್ಯುತ್ ಕಟ್ಟುತ್ತೇವೆ ಎಂದರು.

    50 ಸಾವಿರ ಕೋಟಿ ವೆಚ್ಚವಾಗುತ್ತದೆ. ಹಣ ಸಂಗ್ರಹ ಮಾಡುವ ಶಕ್ತಿ ಸರ್ಕಾರಕ್ಕೆ ಮತ್ತು ಸಿದ್ದರಾಮಯ್ಯ (Sidsdsasrsasmaiah) ಅವರಿಗೆ ಇದೆ. ಬಡವರಿಗೆ ನೀಡಿರುವ ಯೋಜನೆಗಳನ್ನು ಸರ್ಕಾರಕ್ಕೆ ಹೊರೆ ಬೀಳದಂತೆ ಕಾಂಗ್ರೆಸ್ ಪಕ್ಷ ನಿಭಾಯಿಸಲಿದೆ. ಇದನ್ನೂ ಓದಿ: ಉಚಿತ ಬಸ್‌ ಪ್ರಯಾಣದ ಮೊದಲ ಟಿಕೆಟ್‌ ಪಡೆದ ಅದೃಷ್ಟಶಾಲಿ ಮಹಿಳೆ ಇವರೇ..!

    ಇತ್ತ ಬೆಂಗಳೂರಿನಲ್ಲಿ ಮಾತನಾಡಿರುವ ಸಿಎಂ, ವಿದ್ಯುತ್ ದರ ಏರಿಸಿಲ್ಲ. ಹಿಂದಿನ ಸರ್ಕಾರದಲ್ಲಿ ವಿದ್ಯುತ್ ದರ ಹೆಚ್ಚಳ ಆಗಿತ್ತು. ನಾವು ಬರೋ ಮೊದಲೇ ಏರಿಕೆ ಆಗಿತ್ತು. ಚುನಾವಣೆ ನೀತಿ ಸಂಹಿತೆ ಇರೋದ್ರೀಂದ ಚುನಾವಣೆ ಆದ ಮೇಲೆ ಬಿಲ್ ಬಂದಿದೆ. ನಾವು ಬಿಲ್ ಹೆಚ್ಚಳ ಮಾಡಿಲ್ಲ. ಪ್ರತಿ ವರ್ಷ ಬಿಲ್ ಪರಿಷ್ಕರಣೆ ಮಾಡೋಕೆ ಕಮೀಷನ್ ಇದೆ ಅದು ಮಾಡುತ್ತೆ. ಬಿಜೆಪಿ ಅವರು ಗುಲ್ಲು ಎಬ್ಬಿಸುತ್ತಿದ್ದಾರೆ. ಆದರೆ ಏಪ್ರಿಲ್ 1 ರಿಂದ ಹೆಚ್ಚಳ ಅಂತ ಹಿಂದೆಯೇ ಆಗಿತ್ತು ಎಂದಿದ್ದಾರೆ.

  • ಜನರಿಗೆ ಕರೆಂಟ್ ಶಾಕ್- ತಪ್ಪೊಪ್ಪಿಕೊಂಡ ಬೆಸ್ಕಾಂ

    ಜನರಿಗೆ ಕರೆಂಟ್ ಶಾಕ್- ತಪ್ಪೊಪ್ಪಿಕೊಂಡ ಬೆಸ್ಕಾಂ

    ಬೆಂಗಳೂರು: ರಾಜ್ಯದ ಜನರಿಗೆ ಉಚಿತ ಗ್ಯಾರಂಟಿಗಳಲ್ಲಿ ಒಂದಾಗಿರುವ ಉಚಿತ 200 ಯೂನಿಟ್ ಕರೆಂಟ್ ನೀಡುವ ಭರವಸೆಯನ್ನು ಕಾಂಗ್ರೆಸ್ ಸರ್ಕಾರ ನೀಡಿದ್ದು, ಫ್ರೀ ಆಫರ್ ಜೊತೆಗೆ 5 ಎಸ್ಕಾಂಗಳು (ESCOM) ಜನತೆಗೆ ಭರ್ಜರಿ ಕರೆಂಟ್ ಶಾಕ್ ಕೊಟ್ಟಿದೆ.

    ಈ ಬಾರಿಯ ವಿದ್ಯುತ್ ಬಿಲ್‌ಗಳು (Electricity Bill) ಕಳೆದ ಬಾರಿಗಿಂತ ದುಪ್ಪಟ್ಟಾಗಿದ್ದು, ಡಬಲ್ ಬಿಲ್ ಕಂಡು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜನತೆ ಆಕ್ರೋಶ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ಬೆಸ್ಕಾಂ (BESCOM) ಅಧಿಕಾರಿಗಳು ಡಬಲ್ ಬಿಲ್‌ನ ಅಸಲಿ ಸತ್ಯವನ್ನು ‘ಪಬ್ಲಿಕ್ ಟಿವಿ’ ಮುಂದೆ ಬಿಚ್ಚಿಟ್ಟಿದ್ದಾರೆ. ಸಾಫ್ಟ್‌ವೇರ್‌ ಸಮಸ್ಯೆಯಿಂದ ಬಿಲ್‌ಗಳು ತಪ್ಪಾಗಿ ಎಂಟ್ರಿ ಆಗಿದೆ. ಹೀಗಾಗಿ ದುಪ್ಪಟ್ಟು ಬಿಲ್ ಬಂದಿದೆ. ಜನರು ಸಬ್ ಡಿವಿಷನ್‌ಗಳಿಗೆ ಹೋಗಿ ಅನುಮಾನ ಇದ್ದರೆ ಸರಿ ಮಾಡಿಕೊಳ್ಳಿ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕರೆಂಟ್ ಬಿಲ್ ಏರಿಕೆಯ ಬೆನ್ನಲ್ಲೇ ಸದ್ದಿಲ್ಲದೆ ಮದ್ಯ ಬೆಲೆ ಏರಿಕೆ ಮಾಡಿದ ಅಬಕಾರಿ ಇಲಾಖೆ

    ಯಾವುದೇ ಸಾರ್ವಜನಿಕ ಪ್ರಕಟಣೆಯನ್ನು ಹೊರಡಿಸದೆ ಎಡವಟ್ಟು ಮಾಡಿದ್ದರಿಂದ ಡಬಲ್ ಬಿಲ್ ನೋಡಿ ಜನರು ಕಂಗಾಲಾಗಿದ್ದಾರೆ. ತಾಂತ್ರಿಕ ದೋಷದಿಂದ ಹಿಗ್ಗಾಮುಗ್ಗ ಬಿಲ್ ಬಂದಿದೆ ಎಂದು ಬೆಸ್ಕಾಂ ಒಪ್ಪಿಕೊಂಡಿದೆ. ಒಂದು ವೇಳೆ ತಾಂತ್ರಿಕ ದೋಷವಿದ್ದರೆ ದುಡ್ಡು ಕಟ್ಟಿದರೆ ಮತ್ತೆ ದುಡ್ಡು ವಾಪಸ್ ಸಿಗುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ. ಇದನ್ನೂ ಓದಿ: ಗೃಹಜ್ಯೋತಿ ಗೊಂದಲ ಬಗೆಹರಿದ್ರೂ ಶಾಕ್- 200 ಯುನಿಟ್ ಫ್ರೀ ನಿರೀಕ್ಷೆಯಲ್ಲಿದ್ದವರಿಗೆ ಡಬಲ್ ಬಿಲ್

  • 9.91 ಲಕ್ಷ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡ ಪಂಚಾಯಿತಿ – ಕನೆಕ್ಷನ್ ಕಟ್!

    9.91 ಲಕ್ಷ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡ ಪಂಚಾಯಿತಿ – ಕನೆಕ್ಷನ್ ಕಟ್!

    ಮಡಿಕೇರಿ: ರಾಜ್ಯದಲ್ಲಿ ಕಾಂಗ್ರೆಸ್ ಗ್ಯಾರಂಟಿ (Congress Guarantee) ಘೋಷಣೆಯಾದ ಬೆನ್ನಲ್ಲೇ ರಾಜ್ಯಾದ್ಯಂತ ಜನ ವಿದ್ಯುತ್ ಬಿಲ್ ಕಟ್ಟೋದಿಲ್ಲ ಅಂತಾ ಪಟ್ಟು ಹಿಡಿಯುತ್ತಿದ್ದಾರೆ. ಈ ನಡುವೆ ಸ್ಥಳೀಯ ಸರ್ಕಾರವಾಗಿರುವ ಗ್ರಾಮ ಪಂಚಾಯಿತಿಯೇ (Gram Panchayat) ಲಕ್ಷ, ಲಕ್ಷ ವಿದ್ಯುತ್ ಬಿಲ್ (Electricity Bill) ಬಾಕಿ ಉಳಿಸಿಕೊಂಡ ಪರಿಣಾಮ ಕಳೆದ 15 ದಿನಗಳಿಂದ ಕತ್ತಲೆಯಲ್ಲಿ ಕಾಲ ದೂಡುತ್ತಿದೆ. ಇದರಿಂದಾಗಿ ದಿನ ನಿತ್ಯ ಪಂಚಾಯಿತಿಗೆ ಭೇಟಿ ನೀಡುವ ಸಾರ್ವಜನಿಕರ ಕೆಲಸಗಳೂ ಆಗದೇ ಜನರು ಪರದಾಡುತ್ತಿದ್ದಾರೆ. ಪಂಚಾಯತಿ ಕಾರ್ಯವೈಖರಿ ಬಗ್ಗೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

    ಹೌದು… ಕೊಡಗು (Kodagu) ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಕೂಡಿಗೆ ಗ್ರಾಮ ಪಂಚಾಯಿತಿ ಬರೋಬ್ಬರಿ 9.91 ಲಕ್ಷ ರೂ. ವಿದ್ಯುತ್ ಬಿಲ್‌ ಬಾಕಿ ಉಳಿಸಿಕೊಂಡಿದೆ. ಕಳೆದ ನಾಲ್ಕೈದು ತಿಂಗಳಿಂದ ವಿದ್ಯುತ್ ಬಿಲ್ಲನ್ನು ಪಾವತಿಸದ ಪರಿಣಾಮ ಚೆಸ್ಕಾಂ ಇಲಾಖೆಯವರು ವಿದ್ಯುತ್ ಸಂಪರ್ಕವನ್ನೇ ಕಡಿತಗೊಳಿಸಿದ್ದಾರೆ. ಪಂಚಾಯಿತಿ ಕಟ್ಟಡದ ಫ್ಯೂಜ್ ಅನ್ನೇ ಕಿತ್ತುಕೊಂಡು ಹೋಗಿದ್ದು, ಕತ್ತಲಲ್ಲಿ ದಿನದೂಡುವಂತೆ ಮಾಡಿದ್ದಾರೆ. ಸ್ವತಃ ಪಿಡಿಒ ಕೂಡ ಏನಾದರೂ ಬರೆಯಬೇಕೆಂದರೂ ಸಿಬ್ಬಂದಿಯಿಂದ ಮೊಬೈಲ್ ಟಾರ್ಚ್ ಹಾಕಿಸಿ ಬರೆಯಬೇಕಾಗಿದೆ.

    ಹೊರಗಿನಿಂದ ಯಾರಾದರೂ ಬಂದರೆ ಸಿಬ್ಬಂದಿಗೆ ಕೂಡಲೇ ಮೊಬೈಲ್ ಟಾರ್ಚ್ ಆಫ್ ಮಾಡುವಂತೆ ನಾಚಿಕೆಪಟ್ಟುಕೊಂಡು ಹೇಳುವಂತಾಗಿದೆ. ಪಂಚಾಯಿತಿಯಿಂದ ವಿದ್ಯುತ್ ಇಲಾಖೆಗೆ ಹಣ ಯಾಕೆ ಪಾವತಿ ಮಾಡಿಲ್ಲ ಎಂದು ಪಿಡಿಒ ಕೇಳಿದ್ರೆ. ನಾನು ಜನವರಿ ತಿಂಗಳಿನಲ್ಲಿ ಈ ಪಂಚಾಯಿತಿಗೆ ವರ್ಗಾವಣೆಯಾಗಿ ಬಂದಿದ್ದೇನೆ. ಆ ಸಮಯಕ್ಕೆ 7 ಲಕ್ಷಕ್ಕೂ ಹೆಚ್ಚು ವಿದ್ಯುತ್ ಬಿಲ್ಲನ್ನು ಬಾಕಿ ಉಳಿಸಲಾಗಿತ್ತು. ಸಂಗ್ರಹವಾಗುತ್ತಿರುವ ತೆರಿಗೆ ಹಣದಲ್ಲಿ ಎಷ್ಟು ಸಾಧ್ಯವೋ ಅಷ್ಟು ವಿದ್ಯುತ್ ಬಿಲ್ಲನ್ನು ಪಾವತಿಸುತ್ತಿದ್ದೇವೆ. ಆದ್ರೆ ಬೀದಿ ದೀಪ, ಕುಡಿಯುವ ನೀರಿನ ಮೋಟಾರ್ ಗಳ ಬಿಲ್ಲು ಸೇರಿದಂತೆ ತಿಂಗಳಿಗೆ 1.70 ಲಕ್ಷದಿಂದ 2 ಲಕ್ಷದವರೆಗೆ ವಿದ್ಯುತ್ ಬಿಲ್ಲು ಬರುತ್ತದೆ. ಹೀಗಾಗಿ ಅದು ಜಾಸ್ತಿಯಾಗುತ್ತಲೇ ಇದೆ. ತೆರಿಗೆ ಬಾಕಿ ಉಳಿಸಿಕೊಂಡಿರುವವರಿಗೂ ಕೂಡಲೇ ತೆರಿಗೆ ಪಾವತಿಸುವಂತೆ ನೋಟಿಸ್ ನೀಡಿ ತೆರಿಗೆ ಸಂಗ್ರಹಿಸುತ್ತೇವೆ ಎಂದು ಸಬೂಬು ನೀಡಿದ್ದಾರೆ.

    ಇನ್ನೂ ಪಂಚಾಯಿತಿ ಅಡಳಿತ ಮಂಡಳಿ ಸದಸ್ಯರು ಹಾಗೂ ಸಿಬ್ಬಂದಿಗಳ ನಡುವೆ ಹೊಂದಾಣಿಕೆ ಇಲ್ಲದಿರುವುದರಿಂದ ಗ್ರಾಮ ಪಂಚಾಯಿತಿಗೆ ಬರುವ ಆದಾಯ ಮೂಲಗಳಿಗೂ ಸಂಕಷ್ಟ ಎದುರಾಗಿದೆ. ಹೀಗಾಗಿ ವಿದ್ಯುತ್ ಹಣ ಪಾವತಿ ಮಾಡಲು ಆಗದೇ ಇರುವ ಪರಿಸ್ಥಿತಿ ನಿರ್ಮಾಣವಾಗಿದೆ. ದಿನನಿತ್ಯ ನೂತನ ಜನರು ಪಂಚಾಯತಿ ಕಚೇರಿಗೆ ಬಂದು ವಾಪಸ್ಸು ಅಗುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

    ಈ ಬಗ್ಗೆ ಕ್ಷೇತ್ರದ ಶಾಸಕ ಮಂಥರ್ ಗೌಡ ಅವರನ್ನು ಕೇಳಿದ್ರೆ. ಪಂಚಾಯಿತಿ ವಿದ್ಯುತ್ ಸಮಸ್ಯೆ ಬಗ್ಗೆ ಈಗಾಗಲೇ ತಮ್ಮ ಗಮನಕ್ಕೆ ಬಂದಿದೆ. ಸಿಒ ಹಾಗೂ ವಿದ್ಯುತ್ ಇಲಾಖೆ ಅಧಿಕಾರಿಗಳ ಜೋತೆ ಮಾತಾನಾಡಿ ತಾತ್ಕಾಲಿಕವಾಗಿಯಾದರೂ ಕರೆಂಟ್ ಕನೆಕ್ಷನ್ ಮಾಡಿಸಲಾಗುತ್ತದೆ ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದ ರೀತಿಯಲ್ಲಿ ವ್ಯವಸ್ಥೆ ಮಾಡಿಲಾಗುತ್ತದೆ. ಈ ಬಗ್ಗೆ ಅಧಿಕಾರಿಗಳೊಂದಿಗೆ ಮಾತನಾಡುತ್ತೇನೆ ಎಂದು ತಿಳಿಸಿದ್ದಾರೆ.

  • ಹಾಸನದಲ್ಲೂ ʻಗ್ಯಾರಂಟಿʼ ಗಲಾಟೆ – ವಿದ್ಯುತ್‌ ಬಿಲ್‌ ಕೇಳಿದ ಸಿಬ್ಬಂದಿ ಮೇಲೆ ಕೋಳಿ ಅಂಗಡಿ ಮಾಲೀಕನಿಂದ ಹಲ್ಲೆ

    ಹಾಸನದಲ್ಲೂ ʻಗ್ಯಾರಂಟಿʼ ಗಲಾಟೆ – ವಿದ್ಯುತ್‌ ಬಿಲ್‌ ಕೇಳಿದ ಸಿಬ್ಬಂದಿ ಮೇಲೆ ಕೋಳಿ ಅಂಗಡಿ ಮಾಲೀಕನಿಂದ ಹಲ್ಲೆ

    ಹಾಸನ: ಕಾಂಗ್ರೆಸ್‌ ಸರ್ಕಾರ 200 ಯೂನಿಟ್‌ ಉಚಿತ ವಿದ್ಯುತ್‌ (200 Unit Electricity Free) ಭರವಸೆ ನೀಡಿರುವ ಹಿನ್ನೆಲೆ ಹಾಸನ ಜಿಲ್ಲೆಯಲ್ಲೂ ವಿದ್ಯುತ್ ಬಿಲ್ (Electricity Bill) ಪಾವತಿಸಲು ಜನರು ನಿರಾಕರಿಸುತ್ತಿದ್ದಾರೆ.

    ಬಿಲ್ ಕಲೆಕ್ಷನ್‌ಗೆ ಹೋಗಿದ್ದ ಚೆಸ್ಕಾಂ ಸಿಬ್ಬಂದಿ ಮೇಲೆ ತಂದೆ ಹಾಗೂ ಆತನ ಅಪ್ರಾಪ್ತ ಮಗನಿಂದ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ‌. ಇದನ್ನೂ ಓದಿ: ಗ್ಯಾರಂಟಿ ಗೊಂದಲದ ನಡುವೆ ಕರೆಂಟ್ ಬಿಲ್ ಗೋಲ್‌ಮಾಲ್: ಜೆಸ್ಕಾಂಗೆ ಲಕ್ಷಾಂತರ ರೂಪಾಯಿ ನಷ್ಟ

    ಹಾಸನ (Hassan) ಜಿಲ್ಲೆಯ ಅರಕಲಗೂಡು ತಾಲ್ಲೂಕಿನ, ಹಳೇ ಕೋರ್ಟ್ ರಸ್ತೆಯಲ್ಲಿರುವ ಕೋಳಿ ಅಂಗಡಿ ಮಾಲೀಕ ಸುರೇಶ್ ಎಂಬವರು ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿದ್ದರು. ಬುಧವಾರ ಚೆಸ್ಕಾಂ ಸಿಬ್ಬಂದಿ (Chescom Employee) ಸಂತೋಷ್ ಹಾಗೂ ಇತರರು ಸುರೇಶ್ ಮನೆ ಬಳಿ ತೆರಳಿ ಬಾಕಿ 1,150 ರೂ. ವಿದ್ಯುತ್ ಬಿಲ್ ಪಾವತಿಸುವಂತೆ ಕೇಳಿದ್ದಾರೆ. ಆದ್ರೆ ಸುರೇಶ್‌ ನಾವು ಹಣ ಕಟ್ಟಲ್ಲ, ಸರ್ಕಾರ ಹೇಳಿದೆ ಆದರೂ ನೀನು ಬಿಲ್ ಕೇಳಲು ಬಂದಿದ್ದೀಯಾ ಅಂತಾ ಚೆಸ್ಕಾಂ ಸಿಬ್ಬಂದಿಯನ್ನ ಹಾಗೂ ಆತನ ಪತ್ನಿ ನಿಂದಿಸಿ ಜಗಳ ತೆಗಿದಿದ್ದಾನೆ. ಇದನ್ನೂ ಓದಿ: ಗೃಹಲಕ್ಷ್ಮಿ ಹಣ ಯಾರಿಗೆ ಅಂತ ಸರ್ಕಾರ ನಿರ್ಧಾರ ತೆಗೆದುಕೊಳ್ಳುತ್ತೆ: ಹೆಬ್ಬಾಳ್ಕರ್ ಹೇಳಿಕೆ ಒಪ್ಪದ ಡಿಕೆಶಿ

    ಇದು ಅತಿರೇಕಕ್ಕೆ ತಿರುಗಿ ಬಿಲ್ ಕಲೆಕ್ಟರ್ ಸಂತೋಷ್ ಮೇಲೆ ಸುರೇಶ್ ಹಾಗೂ ಆತನ ಅಪ್ರಾಪ್ತ ಪುತ್ರ ಏಕಾಏಕಿ ಹಲ್ಲೆ ಮಾಡಿದ್ದಾರೆ ಎಂದು ಸಂತೋಷ್ ಆರೋಪಿಸಿದ್ದಾರೆ. ಸಂತೋಷ್‌ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದು, ಆಸ್ಪತ್ರೆಗೆ ಪೊಲೀಸರು ಭೇಟಿ ನೀಡಿ ಹೇಳಿಕೆ ಪಡೆದಿದ್ದಾರೆ. ಅರಕಲಗೂಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಯಾವುದೇ ಪ್ರಕರಣ ದಾಖಲಾಗಿಲ್ಲ.