Tag: ವಿದ್ಯುತ್ ಶುಲ್ಕ

  • 200 ಯೂನಿಟ್ ಫ್ರೀ ಅಂದಿಲ್ಲವೆಂದ್ರು ಜಾರ್ಜ್- ಗ್ಯಾರಂಟಿ ಬೆನ್ನಲ್ಲೇ ವಿದ್ಯುತ್ ಹೊಂದಾಣಿಕೆ ಶುಲ್ಕ ಹೆಚ್ಚಳ

    200 ಯೂನಿಟ್ ಫ್ರೀ ಅಂದಿಲ್ಲವೆಂದ್ರು ಜಾರ್ಜ್- ಗ್ಯಾರಂಟಿ ಬೆನ್ನಲ್ಲೇ ವಿದ್ಯುತ್ ಹೊಂದಾಣಿಕೆ ಶುಲ್ಕ ಹೆಚ್ಚಳ

    – ಬಾಡಿಗೆ ಮನೇಲಿದ್ರೂ ಗೃಹಜ್ಯೋತಿ ಎಂದ ಡಿಕೆ

    ಬೆಂಗಳೂರು: ಗ್ಯಾರಂಟಿ ಪಾಲಿಟಿಕ್ಸ್ ಮುಂದುವರಿದಿದೆ. ಬಾಡಿಗೆ ಮನೆ ಇರಲಿ, ಸ್ವಂತ ಮನೆ ಇರಲಿ. ನಮ್ಮ ಮಾತು ಖಚಿತ, ವಿದ್ಯುತ್ ಉಚಿತ ಎಂದು ಡಿಕೆ ಶಿವಕುಮಾರ್ (D.K Shivakumar) ಸ್ಪಷ್ಟಪಡಿಸಿದ್ದಾರೆ. ಆದರೆ ಇಂಧನ ಸಚಿವ ಕೆ.ಜೆ. ಜಾರ್ಜ್ (K.J George) ಮಾತ್ರ, 200 ಯೂನಿಟ್ ಫ್ರೀ ಅಂತಾ ಹೇಳಿಲ್ಲ. 200 ಯೂನಿಟ್ (200 Unit) ತನಕ ಎಂದಿದ್ದೇವೆ ಅಂತಾ ಸಮಜಾಯಿಷಿ ನೀಡಿದ್ದಾರೆ.

    ಯಾರು ಜಾಸ್ತಿ ವಿದ್ಯುತ್ ಬಳಸ್ತಾರೋ ಅವರು ಕಟ್ತಾರೆ ಬಿಡಿ. ಮೊಸ್ರಲ್ಲಿ ಕಲ್ಲು ಹುಡುಕ್ಬೇಡಿ ಅಂತಲೂ ಜಾರ್ಜ್ ಹೇಳಿದ್ದಾರೆ. ಇನ್ನೂ ಗ್ಯಾರಂಟಿ ಯೋಜನೆಗಳ ಜಾರಿಯಾದ ಹೊತ್ತಲ್ಲಿಯೇ ಇಂಧನ ಇಲಾಖೆ ಸದ್ದಿಲ್ಲದೇ ವಿದ್ಯುತ್ ಶುಲ್ಕ ಹೆಚ್ಚಿಸಿ ಆದೇಶ ಹೊರಡಿಸಿದೆ. ಬೆಸ್ಕಾ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್ ಮೇಲೆ ಹೆಚ್ಚುವರಿಯಾಗಿ 51 ಪೈಸೆ ಹೊಂದಾಣಿಕೆ ಶುಲ್ಕವನ್ನು ವಿಧಿಸಲಾಗಿದೆ. ಇದು ಜುಲೈನಿಂದ ಸೆಪ್ಟೆಂಬರ್‍ವರೆಗೆ ಮಾತ್ರ ಅಕ್ಟೋಬರ್‍ನಿಂದ ಮತ್ತೆ ಈ ಶುಲ್ಕವನ್ನು ಪರಿಷ್ಕರಣೆ ಮಾಡಲಾಗುತ್ತದೆ. ಇದನ್ನೂ ಓದಿ: 200 ಯೂನಿಟ್‌ ವಿದ್ಯುತ್‌ ಫ್ರೀ – ಷರತ್ತುಗಳು ಅನ್ವಯ

    ಆಗ 50 ಪೈಸೆಗೆ ಈ ಶುಲ್ಕ ಇಳಿಯಲಿದೆ. ಅದೇ ರೀತಿ, ಮೆಸ್ಕಾಂ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್‍ಗೆ ಹೆಚ್ಚುವರಿಯಾಗಿ 47 ಪೈಸೆ, ಚೆಸ್ಕಾಂ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್‍ಗೆ 41 ಪೈಸೆ, ಹೆಸ್ಕಾಂ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್‍ಗೆ 50 ಪೈಸೆ, ಜೆಸ್ಕಾಂ ವ್ಯಾಪ್ತಿಯಲ್ಲಿ 34 ಪೈಸೆ ಹೆಚ್ಚಳ ಮಾಡಲಾಗಿದೆ. ಆದರೆ ಗೃಹಜ್ಯೋತಿ ಯೋಜನೆಗೂ ಇದಕ್ಕೂ ಸಂಬಂಧವಿಲ್ಲ. ಕಲ್ಲಿದ್ದಲು ಖರೀದಿಯ ವೆಚ್ಚವನ್ನು ಹೊಂದಾಣಿಕೆ ಮಾಡಲಾಗಿದೆ ಅಷ್ಟೇ ಗೃಹಜ್ಯೋತಿ ಫಲಾನುಭವಿಗಳ ಮೇಲೆ ಇದು ಪರಿಣಾಮ ಕೂಡ ಬೀರಲ್ಲ ಎಂದು ಇಂಧನ ಇಲಾಖೆ ಸ್ಪಷ್ಟಪಡಿಸಿದೆ. ಇದನ್ನೂ ಓದಿ: ಸರ್ಕಾರದಿಂದ ಕರ್ನಾಟಕ ಯುವ ನಿಧಿ ಯೋಜನೆ ಜಾರಿ- ಷರತ್ತುಗಳೇನು?

    ಇತ್ತ ಇನ್ನು ಅಕ್ಕಿ ಜೊತೆ ರಾಗಿ, ಗೋಧಿ ಕೊಡ್ತೀವಿ ಎಂದು ಆಹಾರ ಮಂತ್ರಿ ಕೇಳ್ತಿದ್ದಾರೆ. ಪ್ರತಾಪ್ ಸಿಂಹ ಮಾತ್ರ ಗೃಹಲಕ್ಷ್ಮಿ ವಿಚಾರದಲ್ಲಿ ತಗಾದೆ ತೆಗೆದಿದ್ದಾರೆ. ಮುಸ್ಲಿಮರ ಮನೆಲಿ ಇಬ್ರು ಮೂವರು ಪತ್ನಿಯರಿದ್ರೆ ಏನು ಮಾಡ್ಬೇಕು. ಕುಟುಂಬದೊಳಗೆ ತಂದಿಡೊ ಕೆಲಸ ಮಾಡ್ತಿದ್ದೀರಿ ಎಂದು ಟೀಕಿಸಿದ್ದಾರೆ. ಇತ್ತ ಡಕೋಟಾ ಬಸ್‍ಗಳಲ್ಲಿ ಮಾತ್ರ ಹೆಣ್ಮಕ್ಕಳು ಫ್ರೀಯಾಗಿ ಓಡಾಡ್ಬೇಕಾ ಎಂದು ಕೇಂದ್ರ ಮಂತ್ರಿ ನಾರಾಯಣಸ್ವಾಮಿ ಪ್ರಶ್ನಿಸಿದ್ದಾರೆ.

  • ಹೋಟೆಲ್‍ಗಳಿಗೆ ನಿಗದಿತ ವಿದ್ಯುತ್ ಶುಲ್ಕ ವಿನಾಯಿತಿ: ಬೆಸ್ಕಾಂ ಭರವಸೆ

    ಹೋಟೆಲ್‍ಗಳಿಗೆ ನಿಗದಿತ ವಿದ್ಯುತ್ ಶುಲ್ಕ ವಿನಾಯಿತಿ: ಬೆಸ್ಕಾಂ ಭರವಸೆ

    ಬೆಂಗಳೂರು: ಹೋಟೆಲ್ ಮತ್ತು ಫಲಹಾರ ಮಂದಿರಗಳಿಗೆ ಕೋವಿಡ್-19 ಸಮಯದಲ್ಲಿ ರಾಜ್ಯ ಸರ್ಕಾರ ನೀಡಿದ್ದ ನಿಗದಿತ ವಿದ್ಯುತ್ ಶುಲ್ಕ ವಿನಾಯಿತಿಯನ್ನು ಪ್ರವಾಸೋದ್ಯಮ ಇಲಾಖೆಯಡಿ ನೋಂದಣಿಯಾಗಿರುವ ಬೆಂಗಳೂರು ನಗರ ವ್ಯಾಪ್ತಿಯಲ್ಲಿನ ಹೋಟೆಲ್‍ಗಳಿಗೆ ನೀಡಲು ಬೆಸ್ಕಾಂ ಸಮ್ಮತಿಸಿದೆ.

    ಬೃಹತ್ ಬೆಂಗಳೂರು ಹೋಟೆಲ್‍ಗಳ ಸಂಘದ ಅಧ್ಯಕ್ಷ ಪಿ.ಸಿ.ರಾವ್ ನೇತೃತ್ವದ ಸಂಘ ಪದಾಧಿಕಾರಿಗಳ ಜೊತೆ ಮಂಗಳವಾರ ಸಭೆ ನಡೆದಿದೆ. ಈ ವೇಳೆ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಪಿ.ರಾಜೇಂದ್ರ ಚೋಳನ್ ಅವರು, ಪ್ರವಾಸೋದ್ಯಮ ಇಲಾಖೆಯಡಿಯಲ್ಲಿ ನೋಂದಣಿ ಆಗಿರುವ ಹೋಟೆಲ್ ಮತ್ತು ಫಲಹಾರ ಮಂದಿರಗಳ ವಿವರಗಳನ್ನು ವಲಯವಾರು ನೀಡಿದ್ದಲ್ಲಿ ಏಪ್ರಿಲ್ 2021 ರಿಂದ ಜೂನ್ 2021 ರ ಅವಧಿಯವರೆಗಿನ ನಿಗದಿತ ವಿದ್ಯುತ್ ಶುಲ್ಕದ ವಿನಾಯಿತಿಯನ್ನು ಪಡೆಯಬಹುದು ಭರವಸೆ ಕೊಟ್ಟರು. ಇದನ್ನೂ ಓದಿ: ಗಿಡ ನೆಡುವುದರ ಜೊತೆಗೆ ಸಂರಕ್ಷಿಸಿ: ರಾಜ್ಯಪಾಲರ ಕರೆ 

    ಕೋವಿಡ್ ಹಿನ್ನೆಲೆ ಹೋಟೆಲ್ ಮತ್ತು ಫಲಹಾರ ಮಂದಿರಗಳಿಗೆ 3 ತಿಂಗಳ ಕಾಲ ನಿಗದಿತ ವಿದ್ಯುತ್ ಶುಲ್ಕ ವಿನಾಯಿತಿ ನೀಡಿ ರಾಜ್ಯ ಸರ್ಕಾರ 2021 ಆಗಸ್ಟ್ 16 ರಂದು ಆದೇಶಿಸಿತ್ತು. ನಿಗದಿತ ವಿದ್ಯುತ್ ಶುಲ್ಕದ ವಿನಾಯಿತಿಗೆ ಸಂಬಂಧಿಸಿದಂತೆ ಸುತ್ತೋಲೆಯನ್ನು ಹೊರಡಿಸಲಾಗುವುದು. ಹೋಟೆಲ್‍ಗಳಿಗೆ ಗುಣಮಟ್ಟದ ವಿದ್ಯುತ್ ಪೂರೈಸಲು ಬೆಸ್ಕಾಂ ಎಲ್ಲ ರೀತಿಯ ಕ್ರಮ ಕೈಗೊಂಡಿದ್ದು, ಪ್ರಕೃತಿ ವಿಕೋಪದಂತಹ ಸಂದರ್ಭಗಳನ್ನು ಹೊರತು ಪಡಿಸಿ ಹೋಟೆಲ್‍ಗಳಿಗೆ ಗುಣಮಟ್ಟದ ವಿದ್ಯುತ್ ಪೂರೈಸಲಾಗುವುದು ಎಂದು ತಿಳಿಸಿದೆ.

    ಕುಂಬಳಗೋಡು ಪ್ರದೇಶದಲ್ಲಿ ಉಂಟಾಗಿರುವ ವಿದ್ಯುತ್ ವ್ಯತ್ಯಾಯದ ಕುರಿತು ಹೋಟೆಲ್ ಸಂಘದ ಪದಾಧಿಕಾರಿಗಳು ಬೆಸ್ಕಾಂ ಗಮನಕ್ಕೆ ತಂದಿದ್ದು, ವಿಪರೀತ ಗಾಳಿ ಮಳೆಗೆ 300 ಕ್ಕೂ ಹೆಚ್ಚು ಮರಗಳು ಮತ್ತು 150 ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಮುರಿದಿದ್ದರಿಂದ ಕುಂಬಳಗೋಡು ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಾಯ ಉಂಟಾಗಿತ್ತು. ದುರಸ್ಥಿಗೊಂಡಿರುವ ವಿದ್ಯುತ್ ಕಂಬಗಳನ್ನು ಸರಿಪಡಿಸಲಾಗಿದ್ದು, ಆ ಪ್ರದೇಶದಲ್ಲಿನ ವಿದ್ಯುತ್ ವ್ಯತ್ಯಾಯವನ್ನು ಸರಿಪಡಿಸಲಾಗಿದೆ ಎಂದು ಮಾಹಿತಿ ನೀಡಿದರು.

    ಕುಂಬಳಗೋಡು ಪ್ರದೇಶದಲ್ಲಿ ಈಗಿರುವ ಟ್ರಾನ್ಸ್ ಫಾರ್ಮರ್ ಮೇಲ್ದರ್ಜೆಗೆ ಏರಿಸಲು ಕೆಪಿಟಿಸಿಎಲ್ ಕಾರ್ಯಪ್ರವರ್ತವಾಗಿತ್ತು. ಈ ಕೆಲಸ ಇನ್ನೊಂದು ವಾರದಲ್ಲಿ ಪೂರ್ಣಗೊಳ್ಳಲಿದೆ ಎಂದು ಬೆಸ್ಕಾಂ ಹೋಟೆಲ್ ಸಂಘದ ಪದಾಧಿಕಾರಿಗಳಿಗೆ ಭರವಸೆ ನೀಡಿದೆ. ವಿದ್ಯುತ್ ಸಂಬಂಧಿತ ಯಾವುದೇ ಸಮಸ್ಯೆಗಳನ್ನು ಮುಂದಿನ ದಿನಗಳಲ್ಲಿ ಬೆಸ್ಕಾಂ ಗಮನಕ್ಕೆ ತಂದರೆ, ಅದರ ಆದ್ಯತೆ ಮೇರೆಗೆ ಸರಿಪಡಿಸಲಾಗುವುದು ಎಂದರು. ಇದನ್ನೂ ಓದಿ: ಕಡೇ ಕ್ಷಣದ ಬದಲಾವಣೆ ಮಧ್ಯೆ ಟಿಕೆಟ್ ಘೋಷಣೆ – ಹೈಡ್ರಾಮಾ ಮೂಲಕ ಕಮಲ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ 

    ಎಫ್ ಕೆಸಿಸಿಐ ಅಧ್ಯಕ್ಷ ಐ.ಎಸ್.ಪ್ರಸಾದ್ ಮತ್ತು ಹೋಟೆಲ್ ಸಂಘದ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.

  • ಹಳೆ ಮಾಲೀಕ ಉಳಿಸಿಕೊಂಡ ವಿದ್ಯುತ್ ಶುಲ್ಕವನ್ನು ಯಾರು ಪಾವತಿಸಬೇಕು – ಸುಪ್ರೀಂನಿಂದ ಮಹತ್ವದ ತೀರ್ಪು

    ಹಳೆ ಮಾಲೀಕ ಉಳಿಸಿಕೊಂಡ ವಿದ್ಯುತ್ ಶುಲ್ಕವನ್ನು ಯಾರು ಪಾವತಿಸಬೇಕು – ಸುಪ್ರೀಂನಿಂದ ಮಹತ್ವದ ತೀರ್ಪು

    ನವದೆಹಲಿ: ಬಾಕಿ ಉಳಿಸಿಕೊಂಡ ವಿದ್ಯುತ್ ಶುಲ್ಕವನ್ನು ಹೊಸ ಕಂಪನಿ ಪಾವತಿ ಮಾಡಬೇಕೇ? ಬೇಡವೇ? ಈ ಪ್ರಶ್ನೆಗೆ ಇಂದು ಸುಪ್ರೀಂಕೋರ್ಟ್ ಮಹತ್ವದ ಆದೇಶ ಪ್ರಕಟಿಸುವ ಮೂಲಕ ಉತ್ತರ ನೀಡಿದೆ.

    ಪ್ರಕರಣ ಒಂದರ ವಿಚಾರಣೆಯಲ್ಲಿ ಸುಪ್ರೀಂ ಕೋರ್ಟ್ ನ್ಯಾ. ಸಂಜಯ್ ಕಿಶನ್ ಮತ್ತು ನ್ಯಾ.ಕೆಎಂ ಜೋಸೆಫ್ ಅವರಿದ್ದ ದ್ವಿಸಸ್ಯ ಪೀಠ ಹೊಸ ಕಂಪನಿಯೇ ವಿದ್ಯುತ್ ಬಿಲ್ ಅನ್ನು ಪಾವತಿಸಬೇಕೆಂದು ಆದೇಶಿಸಿದೆ.

    ಏನಿದು ಪ್ರಕರಣ?
    ನಷ್ಟದಲ್ಲಿದ್ದ ತೆಲಂಗಾಣದ ಮಿನರಲ್ ಕಂಪನಿಯೊಂದನ್ನು ಮತ್ತೊಬ್ಬ ಮಾಲೀಕ ಖರೀದಿಸಿದ್ದರು. ಈ ವೇಳೆ ಮಾಲೀಕ ಹೊಸದಾಗಿ 500 ಕಿ.ವಾ ವಿದ್ಯುತ್ ಸಂಪರ್ಕ ನೀಡುವಂತೆ ಅರ್ಜಿ ಸಲ್ಲಿಸಿದ್ದಾರೆ. ಆದರೆ ಈ ಹಿಂದಿನ ಮಾಲೀಕ ವಿದ್ಯುತ್ ಬಿಲ್ ಪಾವತಿ ಮಾಡದ್ದಕ್ಕೆ ಹೊಸದಾಗಿ ಕಂಪನಿಗೆ ವಿದ್ಯುತ್ ಸಂಪರ್ಕ ನೀಡುವುದಿಲ್ಲ ಎಂದು ಹೇಳಿ ತೆಲಂಗಾಣ ಎಲೆಕ್ಟ್ರಿಸಿಟಿ ಬೋರ್ಡ್ ಅರ್ಜಿಯನ್ನು ತಿರಸ್ಕರಿಸಿತ್ತು.

    ತನ್ನ ಬೇಡಿಕೆಯನ್ನು ಮನ್ನಿಸದ ಹಿನ್ನೆಲೆಯಲ್ಲಿ ಮಾಲೀಕರು ತೆಲಂಗಾಣ ಹೈಕೋರ್ಟ್ ನಲ್ಲಿ ಪ್ರಶ್ನಿಸಿದ್ದರು. ಹೈಕೋರ್ಟ್ ಮಾಲೀಕರ ಪರವಾಗಿ ತೀರ್ಪು ನೀಡಿತ್ತು. ಹೈಕೋರ್ಟ್ ನೀಡಿದ್ದ ಈ ಆದೇಶವನ್ನು ಪ್ರಶ್ನಿಸಿ ತೆಲಂಗಾಣ ಎಲೆಕ್ಟ್ರಿಸಿಟಿ ಬೋರ್ಡ್ ಸುಪ್ರೀಂ ಮೊರೆ ಹೋಗಿತ್ತು.

    ಮಾಲೀಕನೇ ಪಾವತಿಸಬೇಕು ಯಾಕೆ?
    ಈ ಪ್ರಕರಣದ ಮೂಲ ಮಾಲೀಕ ಸಾಲವನ್ನು ಪಾವತಿಸದ ಹಿನ್ನೆಲೆಯಲ್ಲಿ ಮಿನರಲ್ ಕಂಪನಿಯನ್ನು ಮಾರಾಟ ಮಾಡಲು ಸಿಂಡಿಕೇಟ್ ಬ್ಯಾಂಕ್ ಇ-ಹರಾಜು ಹಾಕಿತ್ತು. ಈ ವೇಳೆ ಈ ಕಂಪನಿ ಯಾವ ಸ್ಥಿತಿಯಲ್ಲಿದೆಯೇ ಆ ಸ್ಥಿತಿಯಲ್ಲೇ ಮಾರಾಟ ಮಾಡುತ್ತಿದ್ದೇವೆ. ಎಲ್ಲದ್ದಕ್ಕೂ ಹೊಸ ಮಾಲೀಕನೇ ಹೊಣೆಗಾರನಾಗುತ್ತಾನೆ ಎಂಬ ಅಂಶವನ್ನು ನೋಟಿಸ್ ನಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಿತ್ತು.

     

    ಅರ್ಜಿ ವಿಚಾರಣೆ ಸಂದರ್ಭದಲ್ಲಿ ಈ ಎಲ್ಲ ಅಂಶಗಳನ್ನು ಆಲಿಸಿದ್ದ ಪೀಠ ಕಂಪನಿಯ ಎಲ್ಲ ವಿವರಗಳು, ಉಲ್ಲೇಖಿಸಲ್ಪಟ್ಟ ವಿಚಾರಗಳನ್ನು ತಿಳಿದುಕೊಂಡು ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸಬೇಕು. ಹಳೆಯ ಮಾಲೀಕ ಪಾವತಿಸದ ಕಾರಣಕ್ಕೆ ವಿದ್ಯುತ್ ಶುಲ್ಕವನ್ನು ಮನ್ನಾ ಮಾಡಲು ಸಾಧ್ಯವಿಲ್ಲ. ನೋಟಿಸ್‍ನಲ್ಲಿ ಉಲ್ಲೇಖಿಸಿದ್ದ ಕಂಪನಿಯನ್ನು ಯಥಾಸ್ಥಿತಿಯಲ್ಲಿ ಮಾರಾಟ ಮಾಡಲಾಗುತ್ತದೆ ಎಂಬ ಅಂಶವನ್ನೇ ಗಂಭೀರವಾಗಿ ಪರಿಗಣಿಸಿದ ಕೋರ್ಟ್ ತೆಲಂಗಾಣ ಹೈಕೋರ್ಟ್ ನೀಡಿದ ಆದೇಶವನ್ನು ರದ್ದುಗೊಳಿಸಿ ಹೊಸ ಕಂಪನಿಯ ಮಾಲೀಕನೇ ಬಾಕಿ ಉಳಿಸಿಕೊಂಡಿರುವ ವಿದ್ಯುತ್ ಶುಲ್ಕವನ್ನು ಪಾವತಿಸಬೇಕು ಎಂದು ಮಹತ್ವದ ಆದೇಶ ಪ್ರಕಟಿಸಿತು.