Tag: ವಿದ್ಯುನ್ಮಾನ ಮತಯಂತ್ರ

  • ಪಂಚರಾಜ್ಯಗಳಲ್ಲಿ ಸೋಲು: ಇವಿಎಂ ವಿರುದ್ಧ ಕೈ ಕಾರ್ಯಕರ್ತರ ಪ್ರತಿಭಟನೆ

    ಪಂಚರಾಜ್ಯಗಳಲ್ಲಿ ಸೋಲು: ಇವಿಎಂ ವಿರುದ್ಧ ಕೈ ಕಾರ್ಯಕರ್ತರ ಪ್ರತಿಭಟನೆ

    ನವದೆಹಲಿ: ಪಂಚರಾಜ್ಯ ವಿಧಾನಸಭಾ ಚುನಾವಣೆಯ ಮತ ಎಣಿಕೆಯಲ್ಲಿ ಗೋಲ್‍ಮಾಲ್ ನಡೆದಿದೆ ಎಂದು ಆರೋಪಿಸಿ ವಿದ್ಯುನ್ಮಾನ ಮತ ಯಂತ್ರ (ಎಲೆಕ್ಟ್ರಾನಿಕ್ ಓಟಿಂಗ್ ಮೆಷಿನ್-ಇವಿಎಂ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.

    bjp - congress

    ಉತ್ತರ ಪ್ರದೇಶ, ಪಂಜಾಬ್, ಗೋವಾ, ಮಣಿಪುರ, ಹಾಗೂ ಉತ್ತರಾಖಂಡದಲ್ಲಿ ಇಂದು ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆದಿದ್ದು, ಐದು ರಾಜ್ಯಗಳಲ್ಲಿಯೂ ಕಾಂಗ್ರೆಸ್ ಭಾರೀ ಹಿನ್ನಡೆ ಅನುಭವಿಸಿದೆ. ಹೀಗಾಗಿ ದೆಹಲಿಯಲ್ಲಿ ಪಕ್ಷದ ಕಚೇರಿಯ ಮುಂದೆ ಇವಿಎಂ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟಿಸುತ್ತಿದ್ದಾರೆ. ಇದನ್ನೂ ಓದಿ: ಪಂಜಾಬ್ ಫಲಿತಾಂಶ: 3ನೇ ಸ್ಥಾನಕ್ಕೆ ಕುಸಿದ ಸಿಧು

    ಮಧ್ಯಾಹ್ನ 2 ಗಂಟೆಯ ಟ್ರೆಂಡ್ ಪ್ರಕಾರ, ಉತ್ತರ ಪ್ರದೇಶದಲ್ಲಿ ಬಿಜೆಪಿ 271, ಎಸ್‍ಪಿ 122, ಬಿಎಸ್‍ಪಿ 4, ಕಾಂಗ್ರೆಸ್ 3 ಮತ್ತು ಇತರರು 3 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸುತ್ತಿದ್ದಾರೆ. ಇದನ್ನೂ ಓದಿ: ಆಪ್‍ಗೆ ಅಭಿನಂದನೆ ಕೋರಿದ ನವಜೋತ್ ಸಿಂಗ್ ಸಿಧು

    ಪಂಜಾಬ್‍ನಲ್ಲಿ ಆಪ್ 90, ಕಾಂಗ್ರೆಸ್ 18, ಶಿರೋಮಣಿ ಅಖಾಲಿ ದಳ 6, ಬಿಜೆಪಿ 2, ಇತರರು 1 ಕ್ಷೇತ್ರದಲ್ಲಿ ಮುಂದೆ ಸಾಗುತ್ತಿದ್ದರೆ, ಉತ್ತರಾಖಂಡದಲ್ಲಿ ಬಿಜೆಪಿ 43, ಕಾಂಗ್ರೆಸ್ 23, ಆಪ್ 0, ಇತರರು 4 ಕ್ಷೇತ್ರಗಳಲ್ಲಿ, ಗೋವಾದಲ್ಲಿ ಬಿಜೆಪಿ 18, ಕಾಂಗ್ರೆಸ್ 12, ಆಪ್ 3, ಇತರರು 7 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಮಣಿಪುರದಲ್ಲಿ ಬಿಜೆಪಿ 30, ಕಾಂಗ್ರೆಸ್ 08, ಎನ್‍ಪಿಎಫ್ 4, ಇತರರು 18 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸುತ್ತಿದ್ದಾರೆ.

  • ಕಾಂಗ್ರೆಸ್‍ನಿಂದ ಕರ್ನಾಟಕ ವಿಧಾನಸಭಾ ಚುನಾವಣೆ ಬಹಿಷ್ಕಾರ?

    ಕಾಂಗ್ರೆಸ್‍ನಿಂದ ಕರ್ನಾಟಕ ವಿಧಾನಸಭಾ ಚುನಾವಣೆ ಬಹಿಷ್ಕಾರ?

    ನವದೆಹಲಿ: ಗುಜರಾತ್ ಬೆನ್ನಲ್ಲೇ ಕರ್ನಾಟಕದಲ್ಲಿ ಇನ್ನೈದು ತಿಂಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಈ ಚುನಾವಣೆಯನ್ನು ಬಹಿಷ್ಕರಿಸಲು ಕಾಂಗ್ರೆಸ್ ಸಿದ್ಧತೆ ನಡೆಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

    ಇವಿಎಂ ಬಳಕೆ ಮಾಡಿದರೆ ಚುನಾವಣೆ ಬಹಿಷ್ಕಾರಕ್ಕೆ ಚಿಂತನೆ ನಡೆಸಿದ್ದು ಮತ್ತೆ ಬ್ಯಾಲೆಟ್ ಪೇಪರ್ ಚುನಾವಣೆಗೆ ಕಾಂಗ್ರೆಸ್ ಪಟ್ಟು ಹಿಡಿದಿದೆ. ಸೋಮವಾರದ ದೆಹಲಿ ಭೇಟಿ ವೇಳೆ ಸಿದ್ದರಾಮಯ್ಯ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಈ ವಿಚಾರವನ್ನು ಮನವರಿಕೆ ಮಾಡಿದ್ದಾರೆ ಎನ್ನುವ ಮಾಹಿತಿ ಮೂಲಗಳಿಂದ ಸಿಕ್ಕಿದೆ.

    ಇವಿಎಂ ಬಳಕೆ ಕರ್ನಾಟಕದಿಂದಲೇ ರದ್ದಾಗಬೇಕು. ಬ್ಯಾಲೆಟ್ ಪೇಪರ್ ಬಳಕೆ ಮಾಡದೇ ಇದ್ದಲ್ಲಿ ಚುನಾವಣೆಯನ್ನು ಬಹಿಷ್ಕರಿಸಲು ರಾಷ್ಟ್ರಮಟ್ಟದ ವಿಪಕ್ಷಗಳು ಚರ್ಚೆ ನಡೆಸಿವೆ ಅಂತ ತಿಳಿದುಬಂದಿದೆ.

    ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಇವಿಎಂಗಳ ದುರ್ಬಳಕೆಯಾಗಿದೆ. ಯಾರೇ ವೋಟ್ ಮಾಡಿದ್ರು ಅದು ಬಿಜೆಪಿಗೆ ಹೋಗ್ತಿದೆ ಅಂತ ಬಿಎಸ್‍ಪಿ ಅಧಿನಾಯಕಿ ಮಾಯಾವತಿ ಗಂಭೀರ ಆರೋಪ ಮಾಡಿದ್ದರು. ( ಇದನ್ನೂ ಓದಿ: ಚುನಾವಣೆ ಸಮಯದಲ್ಲಿ ರಾಜ್ಯಕ್ಕೆ ಅಮಿತ್ ಶಾ ಆಗಮನಕ್ಕೆ ನಿಷೇಧ? )

    ಬಳಿಕ ಎಎಪಿ, ಎಡಪಕ್ಷಗಳೂ ದನಿಗೂಡಿಸಿದ್ದವು. ಅದರಲ್ಲೂ ಆಪ್ ಅಂತು ಚುನಾವಣಾ ಆಯೋಗಕ್ಕೆ ಸವಾಲು ಎಸೆದಿತ್ತು. ಅಷ್ಟೇ ಅಲ್ಲದೆ ವಿಶೇಷ ಅಧಿವೇಶನ ನಡೆಸಿ ಡಮ್ಮಿ ಇವಿಎಂ ಬಳಸಿ ಹೇಗೆಲ್ಲಾ ದುರ್ಬಳಕೆ ಮಾಡಬಹುದು ಅನ್ನೋದರ ಡೆಮೋ ತೋರಿಸಿತ್ತು. ಈ ವಿವಾದ ವ್ಯಾಪಕ ಚರ್ಚೆಯಾದ ಬೆನ್ನಲ್ಲಿ ಕೇಂದ್ರ ಚುನಾವಣಾ ಆಯೋಗವೇ ರಾಜಕೀಯ ಪಕ್ಷಗಳಿಗೆ ಪಂಥಾಹ್ವಾನ ನೀಡಿ, ಪರೀಕ್ಷೆ ನಡೆಸಿತ್ತು. ಆದ್ರೆ, ಉತ್ತರ ಪ್ರದೇಶ ಚುನಾವಣೆಗೆ ಬಳಸಿ ಇವಿಎಂ ಕೊಡದಿದ್ದ ಕಾರಣ ಆಪ್ ದೂರ ಉಳಿದಿತ್ತು.

    ನಂತರ ತಣ್ಣಗಾಗಿದ್ದ ಇವಿಎಂ ದುರ್ಬಳಕೆ ಇತ್ತೀಚೆಗೆ ಉತ್ತರ ಪ್ರದೇಶದಲ್ಲಿ ನಡೆದ ಸ್ಥಳೀಯ ಸಂಸ್ಥೆಗಳ ಫಲಿತಾಂಶದ ಬಳಿಕ ಮತ್ತೆ ಸುದ್ದಿಗೆ ಬಂದಿದೆ. ಇವಿಎಂ ಬಳಕೆ ಮಾಡಿದ ಹಿನ್ನೆಲೆಯಲ್ಲಿ ಮೇಯರ್ ಚುನಾವಣೆಯಲ್ಲಿ ಬಿಜೆಪಿ ಗೆದ್ದಿದೆ. ಇವಿಎಂ ಬಳಕೆ ಮಾಡದೆ ನಡೆದ ಚುನಾವಣೆಯಲ್ಲಿ ಬೇರೆ ಪಕ್ಷದವರು ಮತ್ತು ಪಕ್ಷೇತರ ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಈ ವಿಚಾರವನ್ನು ಮುಂದಿಟ್ಟುಕೊಂಡು ಈಗ ಮತ್ತೊಮ್ಮೆ ಮಾಯಾವತಿ, ಅಖಿಲೇಶ್, ಮಮತಾ ಬ್ಯಾನರ್ಜಿ, ಅರವಿಂದ್ ಕೇಜ್ರಿವಾಲ್, ಲಾಲೂ ಪ್ರಸಾದ್ ಹಾಗೂ ಸೀತಾರಾಂ ಯಚೂರಿ ಸೇರಿದಂತೆ ವಿಪಕ್ಷ ನಾಯಕರು ದನಿಯೇರಿಸಿದ್ದಾರೆ. ಈ ಸಂಬಂಧ, ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಲು ಸಜ್ಜಾಗಿದ್ದಾರೆ ಅಂತ ತಿಳಿದು ಬಂದಿದೆ.