Tag: ವಿದ್ವತ್

  • ಇಂದು ರೌಡಿ ನಲಪಾಡ್ ಭವಿಷ್ಯ- ಜಾಮೀನು ಅರ್ಜಿ ಕುರಿತು ಆದೇಶ

    ಇಂದು ರೌಡಿ ನಲಪಾಡ್ ಭವಿಷ್ಯ- ಜಾಮೀನು ಅರ್ಜಿ ಕುರಿತು ಆದೇಶ

    ಬೆಂಗಳೂರು: ವಿದ್ವತ್ ಮೇಲೆ ಹಲ್ಲೆ ನಡೆಸಿ ಜೈಲುಪಾಲಾಗಿರುವ ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಭವಿಷ್ಯ ಇಂದು ನಿರ್ಧಾರವಾಗಲಿದೆ.

    ಅರ್ಜಿ ವಿಚಾರಣೆ ನಡೆಸಲಿರುವ 64ನೇ ಸಿಸಿಎಚ್ ನ್ಯಾಯಾಲಯ ನಲಪಾಡ್ ಭವಿಷ್ಯ ಪ್ರಕಟಿಸಲಿದೆ. ನಾನು ನನ್ನ ಕಕ್ಷಿದಾರ ಅಮಾಯಕ. ಅವರ ಮೇಲೆ ರಾಜಕೀಯ ಒತ್ತಡಕ್ಕೆ ಇಲ್ಲ ಸಲ್ಲದ ಕೇಸ್ ಗಳನ್ನು ಹಾಕಿದ್ದಾರೆ. ಹೀಗಾಗಿ ಅವರಿಗೆ ಜಾಮೀನು ನೀಡಿ ಅಂತ ನಲಪಾಡ್ ಪರ ವಕೀಲ ಟಾಮಿ ಸೆಬಾಸ್ಟಿಯನ್ ವಾದ ಮಂಡಿಸಿದ್ದರು.   ಇದನ್ನೂ ಓದಿ: ಮೈಮೇಲೆ ಕುರ್ಚಿಗಳನ್ನು ಎಸೆದ್ರು, sorry ಎಂದರೂ ಬಿಯರ್ ಬಾಟಲಿಯಿಂದ ಬಾಯಿಗೆ ಹೊಡೆದ್ರು- ನಲಪಾಡ್ ದಾಳಿ ಬಗ್ಗೆ ವಿದ್ವತ್ Exclusive ಮಾತು

    ಇದಕ್ಕೆ ಪ್ರತಿಯಾಗಿ ವಾದಿಸಿದ್ದ ವಿಶೇಷ ಅಭಿಯೋಜಕರಾಗಿ ಶ್ಯಾಮ್ ಸುಂದರ್, ಈ ಪ್ರಕರಣ ದೇಶದ ಗಮನ ಸೆಳೆದಿದೆ. ಆರೋಪಿ ಪ್ರಬಲನಾಗಿರುವುದರಿಂದ ಸಾಕ್ಷಿ ನಾಶವಾಗುವ ಸಂಭವ ಇದೆ. ಹೀಗಾಗಿ ಜಾಮೀನು ನೀಡಬಾರದು ಅಂತ ವಾದ ಮಂಡಿಸಿದ್ದರು. ಇದನ್ನೂ ಓದಿ: ಮಾ.2ಕ್ಕೆ ನಲಪಾಡ್ ಜಾಮೀನು ತೀರ್ಪು: ಕೋರ್ಟ್ ಕಲಾಪದಲ್ಲಿ ಇಂದು ವಾದ ಹೀಗಿತ್ತು

    ಏನಿದು ಪ್ರಕರಣ?: ಘಟನೆ ನಡೆದ ನಗರದ ಫರ್ಜಿ ಕೆಫೆ ಯಲ್ಲಿ ಅಂದು ರಾತ್ರಿ ನಡೆದ ಪಾರ್ಟಿ ಆಯೋಜನೆಗೊಂಡಿತ್ತು. ನಗರದ ಶ್ರೀಮಂತ ಮನೆತನದ ಯುವಕ, ಯುವತಿಯರು ಪಾಲ್ಗೊಂಡಿದ್ದ ಕೆಫೆಯಲ್ಲಿ ವಿದ್ವತ್ ಹಾಗೂ ನಲ್ಪಾಡ್ ಮತ್ತು ಆತನ ಗ್ಯಾಂಗ್ ಕಾಣಿಸಿಕೊಂಡಿತ್ತು. ಈ ಪಾರ್ಟಿ ಆರಂಭದ ಸಮಯದಿಂದ ನಲಪಾಡ್ ನನ್ನು ಆತನ ಸ್ನೇಹಿತರು “ಪ್ರಿನ್ಸ್ ಪ್ರಿನ್ಸ್” ಎಂದು ಕೂಗಿ ಪಾರ್ಟಿಯಲ್ಲಿ ನೆರೆದಿದ್ದ ಯುವಕ ಯುವತಿಯರ ಮುಂದೇ ಪ್ರತಿಷ್ಠೆ ತೋರಿಸುತ್ತಿದ್ದರು ಎನ್ನಲಾಗಿತ್ತು.  ಇದನ್ನೂ ಓದಿ: ಕರ್ನಾಟಕ ರಣಜಿ ಆಟಗಾರನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ ರೌಡಿ ನಲಪಾಡ್!

    ಈ ಸಂದರ್ಭದಲ್ಲಿ ಗಾಯಗೊಂಡಿದ್ದ ವಿದ್ವತ್ ಕಾಲು ಚಾಚಿ ಕುಳಿತ್ತಿದ್ದರು. ಇದನ್ನು ಕಂಡ ನಲಪಾಡ್ ನನ್ನ ಮುಂದೆ ದರ್ಪದಿಂದ ಕಾಲು ಚಾಚಿಕೊಂಡು ಕೂತಿದ್ದೀಯಾ ಎಂದು ವಿದ್ವತ್ ಮೇಲೆ ಜಗಳಕ್ಕೆ ನಿಂತಿದ್ದಾನೆ. ಅನಂತರ ಕ್ಷಮೆ ಕೇಳುವಂತೆ ಹೇಳಿದ್ದಕ್ಕೆ ವಿದ್ವತ್ ನಿರಾಕರಿಸಿದ್ದಾರೆ. ಇದರಿದ ರೊಚ್ಚಿಗೆದ್ದ ನಲಪಾಡ್ ಮೊದಲು ವಿದ್ವತ್ ಹೊಟ್ಟೆ ಮತ್ತು ಮುಖದ ಭಾಗಕ್ಕೆ ಏಟು ಹೊಡೆದಿದ್ದಾನೆ. ನಲಪಾಡ್ ಹೊಡೆದ ಬಳಿಕ ಆತನ ಗ್ಯಾಂಗ್ ನವರು ವಿದ್ವತ್ ಮೇಲೆ ಮನಸೋ ಇಚ್ಚೇ ಹಲ್ಲೆ ನಡೆಸಿದ್ದಾರೆ. ಪಾರ್ಟಿಯಲ್ಲಿ ಹಲ್ಲೆ ನಡೆಸುವ ವೇಳೆ ಸಾಕಷ್ಟು ಜನ ಅಲ್ಲಿ ನೆರೆದಿದ್ದರೂ ಯಾರು ಗಲಾಟೆ ತಡೆಯುವ ಪ್ರಯತ್ನ ನಡೆಸಲಿಲ್ಲ ಎನ್ನುವ ಮಾಹಿತಿ ಲಭ್ಯವಾಗಿತ್ತು. ಇದನ್ನೂ ಓದಿ: ನಲಪಾಡ್‍ಗೆ ಜೈಲೇ ಗತಿ: ಆರೋಪಿಯ ಪರ ವಕೀಲರ ವಾದ ಏನಿತ್ತು? ಕೋರ್ಟ್ ಕಲಾಪದ ಡಿಟೇಲ್ ಇಲ್ಲಿದೆ

    ನಲಪಾಡ್ ಮೇಲೆ ಯಾವೆಲ್ಲ ಕೇಸ್ ಹಾಕಲಾಗಿದೆ?
    ಐಪಿಸಿ ಸೆಕ್ಷನ್ 307(ಕೊಲೆ ಯತ್ನ) ಜಾಮೀನು ರಹಿತ ಕೇಸಾಗಿದ್ದು ಉಳಿದ ಸೆಕ್ಷನ್ ಗಳಾದ 341(ಅಕ್ರಮ ಬಂಧನ), 504(ಅವ್ಯಾಚ್ಯ ಶಬ್ಧಗಳಿಂದ ನಿಂದನೆ), 143, 144- 146, 147, 149 (ಅಕ್ರಮ ಗುಂಪುಗಾರಿಕೆ), 326(ಗಂಭೀರ ಗಾಯ), 506 ಬಿ (ಪ್ರಾಣಬೆದರಿಕೆ) ಜಾಮೀನು ಸಿಗುವ ಕೇಸುಗಳಾಗಿವೆ.

    https://www.youtube.com/watch?v=B-erXK9nl1M

    https://www.youtube.com/watch?v=TIPtfcxi6O4

  • ಲೋಕನಾಥ್-ಹ್ಯಾರಿಸ್ ಮಧ್ಯೆ ಸಂಧಾನ ಮಾಡಿಲ್ಲ, ವಿದ್ವತ್ ತಂದೆ ನನ್ನ ಸ್ನೇಹಿತರಷ್ಟೇ- ಡಿಕೆಶಿ

    ಲೋಕನಾಥ್-ಹ್ಯಾರಿಸ್ ಮಧ್ಯೆ ಸಂಧಾನ ಮಾಡಿಲ್ಲ, ವಿದ್ವತ್ ತಂದೆ ನನ್ನ ಸ್ನೇಹಿತರಷ್ಟೇ- ಡಿಕೆಶಿ

    ಬೆಂಗಳೂರು: ವಿದ್ವತ್ ಮೇಲೆ ನಲಪಾಡ್ ಹಲ್ಲೆ ಪ್ರಕರಣದಲ್ಲಿ ನಲಪಾಡ್ ತಂದೆ ಶಾಸಕ ಹ್ಯಾರಿಸ್ ಹಾಗು ವಿದ್ವತ್ ತಂದೆ ಲೋಕನಾಥ್ ಮಧ್ಯೆ ನಾನು ಯಾವುದೇ ರೀತಿಯ ಸಂಧಾನ ಪ್ರಯತ್ನ ಮಾಡಿಲ್ಲ ಅಂತಾ ಇಂಧನ ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.

    ಬೆಂಗಳೂರಿನಲ್ಲಿ ಮಾತನಾಡಿದ ಅವರು, ಲೋಕನಾಥ್ ಹಾಗೂ ಹ್ಯಾರಿಸ್ ಮಧ್ಯೆ ನಾನೇನು ಸಂಧಾನ ಮಾಡಿಲ್ಲ, ಅದರ ಅಗತ್ಯ ನನಗಿಲ್ಲ. ಲೋಕನಾಥ್ ನನ್ನ ಸ್ನೇಹಿತರಷ್ಟೆ, ತಪ್ಪು ಯಾರೇ ಮಾಡಿದ್ರೂ ತಪ್ಪೇ. ಹ್ಯಾರಿಸ್ ಕೂಡ ಈ ಬಗ್ಗೆ ಕ್ಷಮೆಯನ್ನು ಕೇಳಿದ್ದಾರೆ ಅಂತಾ ಹೇಳಿದ್ರು. ಇದನ್ನೂ ಓದಿ: ನಲಪಾಡ್‍ಗೆ ಜೈಲೇ ಗತಿ: ಆರೋಪಿಯ ಪರ ವಕೀಲರ ವಾದ ಏನಿತ್ತು? ಕೋರ್ಟ್ ಕಲಾಪದ ಡಿಟೇಲ್ ಇಲ್ಲಿದೆ

    ಸೀದಾ ರೂಪಯೇ ಸರ್ಕಾರ ಎಂಬ ಮೋದಿ ಟೀಕೆಗೆ ಇದೇ ವೇಳೆ ಡಿಕೆಶಿ ತಿರುಗೇಟು ನೀಡಿದ್ರು. ಪ್ರಧಾನಿ ಸ್ಥಾನದಲ್ಲಿರುವವರು ಏನು ಮಾತನಾಡಬೇಕು, ಮಾತನಾಡಬಾರದು ಎಂಬ ಸೂಕ್ಷ್ಮವನ್ನು ಆರಿಯಬೇಕು. ಮಾತನಾಡಬೇಕಾದರೆ ಜವಾಬ್ದಾರಿಯುತವಾಗಿ ಮಾತಡಬೇಕು ಅಂದ್ರು. ಇದನ್ನೂ ಓದಿ:ಶಾಂತಿನಗರದಲ್ಲಿ ರೌಡಿ ನಲಪಾಡ್ ಹೇಳಿದ್ದೇ ಶಾಸನವಂತೆ..!

    ಚಿದಂಬರಂ ಪುತ್ರ ಕಾರ್ತಿ ಚಿದಂಬರಂನನ್ನು ಬಂಧನಕ್ಕೆ ಒಳಪಡಿಸಿರುವುದು ರಾಜಕೀಯ ಪ್ರೇರಿತ. ಇದರಲ್ಲಿ ಯಾವುದೇ ರೀತಿಯ ಆನುಮಾನವೇ ಇಲ್ಲ ಎಂದು ಡಿ.ಕೆ. ಶಿವಕುಮಾರ್ ಕಿಡಿಕಾರಿದ್ರು. ಇದನ್ನೂ ಓದಿ:  ಯುಬಿ ಸಿಟಿ ಗಲಾಟೆ ಹೇಗಾಯ್ತು? ಯಾವೆಲ್ಲ ಸೆಕ್ಷನ್ ಹಾಕಲಾಗಿದೆ? ಆರೋಪಿಗಳ ಉದ್ಯೋಗ ಏನು? ನಲಪಾಡ್ ರೌಡಿಸಂ ಫುಲ್ ಡಿಟೇಲ್ ಇಲ್ಲಿದೆ

  • ನಲಪಾಡ್‍ಗೆ ಜೈಲೇ ಗತಿ: ಆರೋಪಿಯ ಪರ ವಕೀಲರ ವಾದ ಏನಿತ್ತು? ಕೋರ್ಟ್ ಕಲಾಪದ ಡಿಟೇಲ್ ಇಲ್ಲಿದೆ

    ನಲಪಾಡ್‍ಗೆ ಜೈಲೇ ಗತಿ: ಆರೋಪಿಯ ಪರ ವಕೀಲರ ವಾದ ಏನಿತ್ತು? ಕೋರ್ಟ್ ಕಲಾಪದ ಡಿಟೇಲ್ ಇಲ್ಲಿದೆ

    ಬೆಂಗಳೂರು: ಬೆಂಗಳೂರಿನ ಯುಬಿ ಸಿಟಿಯ `ಫರ್ಜಿ ಕೆಫೆ’ಯಲ್ಲಿ ವಿದ್ವತ್ ಮೇಲಿನ ಮಾರಣಾಂತಿಕ ಹಲ್ಲೆ ಮಾಡಿ ಮಲ್ಯ ಆಸ್ಪತ್ರೆಯಲ್ಲೂ ಧಮ್ಕಿ ಹಾಕಿದ್ದ ಶಾಸಕ ಹ್ಯಾರಿಸ್ ಮಗ ನಲಪಾಡ್ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಾಲಯ ಮಂಗಳವಾರಕ್ಕೆ ಮುಂದೂಡಿದೆ.

    ಇಂದು ನಲಪಾಡ್ ಜಾಮೀನು ಅರ್ಜಿ ವಿಚಾರಣೆ ಆರಂಭಿಸಿದ ಸಿಟಿ ಸಿವಿಲ್ ಕೋರ್ಟ್‍ನಲ್ಲಿ ವಾದ-ಪ್ರತಿವಾದಗಳು ಕಾವೇರಿದ ರೀತಿಯಲ್ಲಿ ನಡೆಯಿತು. ಈ ಕುರಿತು ನಾಳೆಯೂ ವಾದ ಮುಂದುವರಿಯಲಿದೆ. ಆರೋಪಿಗಳ ಪರ ಟಾಮಿ ಸೆಬಾಸ್ಟಿನ್ ಮತ್ತು ಬಾಲನ್ ವಾದ ಮಂಡಿಸಿದರು. ವಿಶೇಷ ಅಭಿಯೋಜಕರಾಗಿ ಶ್ಯಾಮ್ ಸುಂದರ್ ಪ್ರತಿವಾದ ಮಂಡಿಸಿದರು.

    ವಿದ್ವತ್ ಪರ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಿದ ಶ್ಯಾಮ್ ಸುಂದರ್ ಅವರಿಗೆ ವಿದ್ವತ್ ಅವರ ಆರೋಗ್ಯದ ಕುರಿತ ಮತ್ತಷ್ಟು ವೈದ್ಯಕೀಯ ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ನ್ಯಾಯಾಧೀಶರು ಸೂಚಿಸಿ ವಿಚಾರಣೆಯನ್ನ ನಾಳೆಗೆ ಮುಂದೂಡಿದರು.

    ನಲಪಾಡ್ ಪರ ವಕೀಲರ ವಾದವೇನು?
    ವಿದ್ವತ್ ಕೊಲೆ ಮಾಡುವ ಉದ್ದೇಶ ಯಾರಿಗೂ ಇರಲಿಲ್ಲ. ಕೊಲೆ ಉದ್ದೇಶ ಇದ್ದಿದ್ದರೆ ಆಯುಧ ಇಟ್ಟುಕೊಳ್ಳುತ್ತಿದ್ದರು. ಐಸ್‍ಕ್ಯೂಬ್ ತಲೆ ಮೇಲೆ ಎಸೆದಿದ್ದರಿಂದ ಗಾಯಗಳಾಗಿವೆ. ಬಿಯರ್ ಬಾಟಲ್ ಬಿಸಾಡಿದ್ದಾರೆ. ತಲೆಗೆ ಬೀಸಿರುವ ಮಾಹಿತಿ ಇಲ್ಲ. ಇದು ರಾಜಕೀಯ ದುರುದ್ದೇಶ ಪೂರಿತವಾಗಿರುವ ಘಟನೆಯಾಗಿದ್ದು, ಘಟನೆ ನಡೆದ ಹಲವು ಗಂಟೆಗಳ ನಂತರ ಸೆಕ್ಷನ್ 307 ಸೇರಿಸಲಾಗಿದೆ. ವಿದ್ವತ್ ಈಗಾಗಲೇ ಶೇ. 90 ರಷ್ಟು ಚೇತರಿಸಿಕೊಂಡಿದ್ದಾರೆ ಎಂದು ವಾದಿಸಿದರು.

    ವಿದ್ವತ್ ಹೇಳಿಕೆ ಪಡೆಯಲು ಉದ್ದೇಶ ಪೂರ್ವಕವಾಗಿ ಪೊಲೀಸರು ವಿಳಂಬ ಮಾಡುತ್ತಿದ್ದಾರೆ. ಕಾಲು ಮುರಿದಿದ್ದರಿಂದ ಎಸ್ಕಲೇಟರ್ ಮೇಲೆ ಬಿದ್ದು ವಿದ್ವತ್ ಒದ್ಡಾಡಿದ್ದಾರೆ. ವಿದ್ವತ್ ನೋಡುವುದಕ್ಕೆ ಮತ್ತೆ ಆಸ್ಪತ್ರೆಗೆ ನಲಪಾಡ್ ಹೋಗಿದ್ದ. ಈ ಕೇಸ್‍ಗೆ ವಿಶೇಷ ಅಭಿಯೋಜಕರ ನೇಮಕ ಮಾಡುವ ಉದ್ದೇಶ ಏನಿತ್ತು ಎಂದು ಪ್ರಶ್ನಿಸಿದರು.

    ಪ್ರಕರಣದಲ್ಲಿ ಅನಾವಶ್ಯಕ ಒತ್ತಡ ತರಲು 3ನೇ ವ್ಯಕ್ತಿಯಿಂದಲೂ ಅರ್ಜಿ ಸಲ್ಲಿಸಲಾಗಿದೆ. ಮೊಹಮ್ಮದ್ ನಲಪಾಡ್‍ಗಿಂತ ವಿದ್ವತ್ ಪ್ರಭಾವಿ ವ್ಯಕ್ತಿಯಾಗಿದ್ದು, ಘಟನೆ ನಂತರ ರಾಜಕೀಯ ವ್ಯಕ್ತಿಗಳು ಪ್ರತಿನಿತ್ಯ ಭೇಟಿಯಾಗುತ್ತಿದ್ದಾರೆ. ಹ್ಯಾರಿಸ್‍ರನ್ನು ರಾಜಕೀಯವಾಗಿ ಮುಗಿಸಲು ಮಗನನ್ನು ಬಳಸಿಕೊಳ್ಳಲಾಗಿದೆ ಎಂದು ವಾದಿಸಿದರು.

    ವಿಶೇಷ ಅಭಿಯೋಜಕರ ವಾದವೇನು?
    ವಿದ್ವತ್ ಮೇಲೆ ಉದ್ದೇಶಪೂರ್ವಕವಾಗಿ ಆರೋಪಿಗಳು ಹಲ್ಲೆ ಮಾಡಿದ್ದಾರೆ. ಕಾಲು ತಾಕಿದ್ದಕ್ಕೆ ವಿದ್ವತ್‍ಗೆ ಅವಾಜ್ ಹಾಕಿ ಹೊಡೆದಿದ್ದಾರೆ. ಅಲ್ಲದೇ ವಿದ್ವತ್ ರನ್ನು ಮೆಟ್ಟಿಲುಗಳ ಮೇಲೆ ಎಳೆದು ತಂದು ಆರೋಪಿಗಳು ಹೊಡೆದಿದ್ದಾರೆ. ಮೆಟ್ಟಿಲುಗಳ ಮೇಲೆ ಎಳೆದು ತಂದು ಹೊಡೆಯೋದು ದುರುದ್ದೇಶ ಅಲ್ವಾ? ವಿದ್ವತ್ ಮರ್ಮಾಂಗಕ್ಕೂ ಗಾಯವಾಗುವ ರೀತಿ ಹೊಡೆದಿದ್ದಾರೆ. ನಲಪಾಡ್ ಅಂಡ್ ಗ್ಯಾಂಗ್ ಹೊಡೆಯುತ್ತಿದ್ದರೂ ಬೌನ್ಸರ್‍ಗಳು ಸುಮ್ಮನಿದ್ದಾರೆ. `ಲೈಫ್ ಆಫ್ ಪೈ’ ಎಂಬ ಮೂವಿ ಹೀರೋ ತರಹ ವಿದ್ವತ್ ಸ್ಥಿತಿ ಆಗಿದೆ ಎಂದು ಶ್ಯಾಮ್ ಸುಂದರು ವಿವರಿಸಿದರು.

    ವಿದ್ವತ್ ಮೇಲಿನ ದಾಳಿಗೂ ಮುನ್ನ ಆತನ ಇದ್ದ ಆತನ ಮುಖವನ್ನು ಮತ್ತೆ ಅದೇ ರೀತಿ ನೋಡಲು ಸಾಧ್ಯವಿಲ್ಲ. ಕೊಲೆಯ ಉದ್ದೇಶದಿಂದಲೇ ಆಸ್ಪತ್ರೆವರೆಗೂ ಹಿಂಬಾಲಿಸಿದ್ದಾರೆ. ಇದು ಕೇವಲ 326 ಗಾಯದ ಪ್ರಕರಣವಲ್ಲ ಕೊಲೆ ಯತ್ನದ ಕೇಸ್. ನಲಪಾಡ್ ಗೆ ಜಾಮೀನು ನೀಡಿದರೆ ಸಾಕ್ಷಿಗಳನ್ನು ನಾಶ ಪಡಿಸುತ್ತಾನೆ. ಯಾರು ಏನಾದ್ರೂ ಮಾಡಬಹುದು ಅಂದುಕೊಂಡವರಿಗೆ ಪಾಠ ಆಗಬೇಕು. ಇದು ನಿರ್ಭಯಾ ಕೇಸ್‍ಗಿಂತಲೂ ಅತ್ಯಂತ ಕ್ರೂರವಾದ ಪ್ರಕರಣ ಎಂದು ವಾದಿಸಿ ಜಾಮೀನು ನೀಡದಂತೆ ಮನವಿ ಮಾಡಿದರು. ಇದನ್ನೂ ಓದಿ: ವಿದ್ವತ್ ಮೇಲೆ ನಲಪಾಡ್ ಹಲ್ಲೆ ಪ್ರಕರಣ- ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಲು ಮುಂದಾಗಿದ್ದ ಯುಬಿ ಸಿಟಿ ಸಿಬ್ಬಂದಿ

    https://www.youtube.com/watch?v=J5bj1Z0hrYI

    https://www.youtube.com/watch?v=QktQtDhVSJ4

    https://www.youtube.com/watch?v=CPdusTXs0QU

    https://www.youtube.com/watch?v=WI5DOng9vAY

  • ಕಾಂಗ್ರೆಸ್ ಶಾಸಕ ಹ್ಯಾರಿಸ್‍ಗೆ ಬೆಂಬಲ ಸೂಚಿಸಿದ ನಟಿ ಸಂಜನಾ

    ಕಾಂಗ್ರೆಸ್ ಶಾಸಕ ಹ್ಯಾರಿಸ್‍ಗೆ ಬೆಂಬಲ ಸೂಚಿಸಿದ ನಟಿ ಸಂಜನಾ

    ಬೆಂಗಳೂರು: ವಿದ್ವತ್ ಮೇಲಿನ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಸಂಜನಾ ಗಲ್‍ರಾನಿ ಟ್ವಿಟ್ಟರ್‍ನಲ್ಲಿ ಪ್ರತಿಕ್ರಿಸಿದ್ದಾರೆ.

    ಕಾಂಗ್ರೆಸ್ ಎಂಎಲ್‍ಎ ಕ್ಷೇತ್ರದಲ್ಲಿರುವ ಯುಬಿ ಸಿಟಿಯಲ್ಲಿ ನಡೆದಿರುವ ಹಲ್ಲೆ ವಿಚಾರ ಕೇಳಿ ನನಗೆ ಶಾಕ್ ಆಗಿದೆ. ಹಲ್ಲೆಗೊಳಗಾದ ವ್ಯಕ್ತಿಗೆ ನ್ಯಾಯ ಸಿಗಬೇಕು. ಎಲ್ಲ ಬಡಜನರಿಗೂ ಹಾಗೂ ಶ್ರೀಮಂತರಿಗೂ ನ್ಯಾಯ ಒಂದೇ ಎಂದು ಟ್ವೀಟ್ ಮಾಡಿದ್ದಾರೆ.

    ಮಹಮ್ಮದ್ ಹ್ಯಾರಿಸ್ ಜೀಗೆ ನನ್ನ ಸಹಾನುಭೂತಿ ಇದೆ. ಮಗ ಮಾಡಿರುವ ತಪ್ಪಿಗೆ ಈ ದಕ್ಷ ನಾಯಕ ಬೆಲೆ ಕಟ್ಟುತ್ತಿದ್ದಾರೆ. ನಲಪಾಡ್ ವಿದ್ವತ್ ಮೇಲೆ ಹಲ್ಲೆ ಮಾಡುವ ಮೊದಲು ಎಂದರೆ ಈ ಡ್ರಾಮಾ ನಡೆಯುವ ಮೊದಲು ಶಾಂತಿನಗರದ ಶಾಸಕ ಹ್ಯಾರಿಸ್ ಸುಮಾರು 2 ದಶಕಗಳಿಂದ ಪ್ರಾಮಾಣಿಕ ನಾಯಕರಾಗಿದ್ದಾರೆ ಎಂದು ಸಂಜನಾ ಟ್ವೀಟ್ ಮಾಡಿ ಬೆಂಬಲಿಸಿದ್ದಾರೆ. ಇದನ್ನೂ ಓದಿ: ಕರ್ನಾಟಕ ರಣಜಿ ಆಟಗಾರನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ ರೌಡಿ ನಲಪಾಡ್!

    ಸಂಜನಾ ಮಾಡಿದ ಈ ಟ್ವೀಟ್‍ಗೆ ಜನ ಟ್ವೀಟ್ ಮೂಲಕ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

  • ಇಂದು ನಲಪಾಡ್ ಜಾಮೀನು ಅರ್ಜಿ ವಿಚಾರಣೆ- ವಿಪಕ್ಷಗಳು, ಮಾಧ್ಯಮದ ಮೇಲೆ ಗೂಬೆ ಕೂರಿಸಿದ ರೌಡಿ

    ಇಂದು ನಲಪಾಡ್ ಜಾಮೀನು ಅರ್ಜಿ ವಿಚಾರಣೆ- ವಿಪಕ್ಷಗಳು, ಮಾಧ್ಯಮದ ಮೇಲೆ ಗೂಬೆ ಕೂರಿಸಿದ ರೌಡಿ

    ಬೆಂಗಳೂರು: ಯುವಕನೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ರೌಡಿ ನಲಪಾಡ್ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ.

    ಜಾಮೀನು ಕೋರಿ ನಲಪಾಡ್ ಸಲ್ಲಿಸಿರುವ ಸಂಪೂರ್ಣ ವಿವರ ಪಬ್ಲಿಕ್ ಟಿವಿಗೆ ಲಭ್ಯವಾಗಿದ್ದು, ನನ್ನ ವಿರುದ್ಧ ದಾಖಲಾಗಿರುವ ಕೇಸ್ ಸುಳ್ಳಾಗಿದ್ದು, ಇದು ವಿರೋಧ ಪಕ್ಷ, ಮಾಧ್ಯಮಗಳ ಮೇಲೆ ಗೂಬೆ ಕೂರಿಸಿದ್ದಾರೆ ಎಂದು ನಲಪಾಡ್ ಹೇಳಿದ್ದಾನೆ. ಇದನ್ನೂ ಓದಿ: ರಾಜಿ ಸಂಧಾನಕ್ಕೆ ಮಲ್ಯ ಆಸ್ಪತ್ರೆಗೆ ಬಂದ ಶಾಸಕ ಹ್ಯಾರಿಸ್

    ಜಾಮೀನು ಅರ್ಜಿಯಲ್ಲೇನಿದೆ?: ರಾಜಕೀಯ ಮೈಲೇಜ್‍ಗಾಗಿ ಶತ್ರುಗಳ ಈ ರೀತಿ ಮಾಡಿದ್ದಾರೆ. ಚುನಾವಣಾ ಸಮಯವಾದ್ದರಿಂದ ನನ್ನನ್ನು ಸೋಲಿಸಲು ಈ ರೀತಿಯ ಕುತಂತ್ರ ಮಾಡಲಾಗಿದೆ. ಇದರಿಂದ ತಮ್ಮ ಕ್ಷೇತ್ರದ ಮತದಾರರನ್ನು ಸೆಳೆಯಲು ಪ್ರತಿಪಕ್ಷಗಳು ಹುನ್ನಾರ ಮಾಡಿವೆ. ಮಾಧ್ಯಮಗಳು ಅನಾವಶ್ಯಕವಾಗಿ ಇದನ್ನು ಹೈಪ್ ಮಾಡಿದೆ ಅಂತ ತಿಳಿಸಿದ್ದಾನೆ. ಇದನ್ನೂ ಓದಿ: ನಲಪಾಡ್ ಗ್ಯಾಂಗಿನಿಂದ ಜೀವಬೆದರಿಕೆ – ವಕೀಲರಿಂದ ಪೊಲೀಸರಿಗೆ ದೂರು

    ನನ್ನ ಮೇಲೆ ದೂರು ದಾಖಲಿಸಿರುವುದು ಸುಳ್ಳು ಕೇಸ್. ಆಧಾರ ರಹಿತವಾದ, ರಾಜಕೀಯ ದುರುದ್ದೇಶದಿಂದ ಕೇಸ್ ದಾಖಲಿಸಲಾಗಿದೆ. ನನ್ನ ಹಾಗೂ ತಂದೆಯ ಏಳಿಗೆ ಸಹಿಸದವರು ಆಧಾರ ರಹಿತ ಕೇಸ್ ದಾಖಲಿಸಿದ್ದಾರೆ. 10 ರಿಂದ 15 ಜನ ಹಲ್ಲೆ ಅಂತಿದೆ. ನಾನೇ ಹಲ್ಲೆ ಮಾಡಿದ್ದೇನೆ ಅಂತಿಲ್ಲ. ಹೀಗಾಗಿ ಜಾಮೀನು ನೀಡಬೇಕು ಎಂದು ನಲಪಾಡ್ ಮನವಿ ಮಾಡಿದ್ದಾನೆ. ಇದನ್ನೂ ಓದಿ: ಜೈಲಿನಲ್ಲೂ ಮುಂದುವರಿದ ನಲಪಾಡ್ ಪುಂಡಾಟ- ನಿನ್ನಿಂದ ನಾವು ಜೈಲು ಸೇರುವಂತಾಯ್ತು ಎಂದ ಸ್ನೇಹಿತ ಅಬ್ರಾಸ್ ಮೇಲೆ ಹಲ್ಲೆ

  • ರಾಜಿ ಸಂಧಾನಕ್ಕೆ ಮಲ್ಯ ಆಸ್ಪತ್ರೆಗೆ ಬಂದ ಶಾಸಕ ಹ್ಯಾರಿಸ್

    ರಾಜಿ ಸಂಧಾನಕ್ಕೆ ಮಲ್ಯ ಆಸ್ಪತ್ರೆಗೆ ಬಂದ ಶಾಸಕ ಹ್ಯಾರಿಸ್

    ಬೆಂಗಳೂರು: ಪುತ್ರ ನಲಪಾಡ್ ನಿಂದ ಹಲ್ಲೆಗೆ ಒಳಗಾದ ವಿದ್ವತ್ ಅವರನ್ನು ನೋಡಲು ಶಾಂತಿನಗರದ ಶಾಸಕ ಹ್ಯಾರಿಸ್ ದಂಪತಿ ಇಂದು ರಾತ್ರಿ ಮಲ್ಯ ಆಸ್ಪತ್ರೆಗೆ ಭೇಟಿ ನೀಡಿದ್ದರು.

    ಈ ಸಂದರ್ಭದಲ್ಲಿ ವಿದ್ವತ್ ತಂದೆ ಲೋಕನಾಥ್ ಬಳಿ, ಏನೋ ಮಕ್ಕಳು ಹೊಡೆದಾಡಿಕೊಂಡಿದ್ದು ಬುದ್ಧಿ ಹೇಳೋಣ. ಕಳೆದ ಮೂರು ದಿನಗಳಿಂದ ಸತ್ತು ಬದುಕಿದ್ದೇನೆ. ಕೋರ್ಟ್ ನಲ್ಲಿ ಆಕ್ಷೇಪಣೆ ಹಾಕಬೇಡಿ, ನನ್ನ ಮಗನಿಗೆ ಜಾಮೀನು ಸಿಗುವುದಿಲ್ಲ ಎಂದು ಹೇಳಿ ಶಾಸಕ ಹ್ಯಾರಿಸ್ ಗೋಳಾಡಿದ್ದಾರೆ.

    ಹ್ಯಾರಿಸ್ ಅವರ ಈ ಸಂಧಾನಕ್ಕೆ ಮಣಿಯದ ಲೋಕನಾಥ್, ಶಾಸಕರ ಸಂಪೂರ್ಣ ಮಾತು ಕೇಳಿ ಡಾಕ್ಟರ್ ಕರೆದರು ಎಂದು ಹೇಳಿ ಒಳಗಡೆ ಹೋಗಿದ್ದಾರೆ. ಕೊನೆಗೆ ಸಂಧಾನ ಯಶಸ್ವಿಯಾಗದೇ ಸಪ್ಪೆ ಮೋರೆ ಹಾಕಿಕೊಂಡು ಹ್ಯಾರಿಸ್ ಹೊರಬಂದಿದ್ದಾರೆ.

    ಇಬ್ಬರ ಮಾತುಕತೆಯ ಬಳಿಕ ಮಾಧ್ಯಮಗಳು ಪ್ರತಿಕ್ರಿಯೆ ಕೇಳಲು ಮುಂದಾದಾಗ “ನೋ ನೋ” ಎಂದು ಹೇಳಿ ಹ್ಯಾರಿಸ್ ಕಾರು ಹತ್ತಿ ಹೊರಟು ಹೋಗಿದ್ದಾರೆ.

    ರಾತ್ರಿ ಬಿಜೆಪಿ ಮುಖಂಡ ಸಿಟಿ ರವಿ ಅವರು ವಿದ್ವತ್ ನೋಡಲು ಆಸ್ಪತ್ರೆಗೆ ಆಗಮಿಸಿದ್ದರು. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಇನ್ಫೆಕ್ಷನ್ ಆಗುತ್ತದೆ ಎನ್ನುವ ಕಾರಣಕ್ಕೆ ಐಸಿಯುಗೆ ಬಿಡಲಿಲ್ಲ. ಅವರ ತಂದೆಯ ಜೊತೆ ಮಾತನಾಡಿ ಆರೋಗ್ಯವನ್ನು ವಿಚಾರಿಸಿ ಬಂದಿದ್ದೇನೆ. ಪೋಷಕರು ಮಕ್ಕಳನ್ನು ಹೇಗೆ ಬೆಳೆಸಬೇಕು ಎನ್ನುವುದನ್ನು ಈ ಪ್ರಕರಣ ತಿಳಿಸಿಕೊಡುತ್ತದೆ ಎಂದು ಹೇಳಿದರು.

    https://youtu.be/JGFneQ-8OTg

    https://youtu.be/-BMml-Cw79E

    https://youtu.be/S8uFT-0fdmo

     

    https://www.youtube.com/watch?v=rByoOC1wzSk

  • ತೀವ್ರ ನಿಗಾ ಘಟಕದಲ್ಲಿ ವಿದ್ವತ್‍ ಗೆ ಚಿಕಿತ್ಸೆ- ರಾಜ್ ಫ್ಯಾಮಿಲಿಯಿಂದ ಆರೋಗ್ಯ ವಿಚಾರಣೆ

    ತೀವ್ರ ನಿಗಾ ಘಟಕದಲ್ಲಿ ವಿದ್ವತ್‍ ಗೆ ಚಿಕಿತ್ಸೆ- ರಾಜ್ ಫ್ಯಾಮಿಲಿಯಿಂದ ಆರೋಗ್ಯ ವಿಚಾರಣೆ

    ಬೆಂಗಳೂರು: ಶಾಂತಿನಗರ ಶಾಸಕ ಹ್ಯಾರಿಸ್ ಪುತ್ರ ಮಹಮ್ಮದ್ ನಲಪಾಡ್ ನಿಂದ ತೀವ್ರ ಹಲ್ಲೆಗೊಳಗಾಗಿ ಅಸ್ಪತ್ರೆ ಸೇರಿರುವ ವಿದ್ವತ್‍ಗೆ ಮಲ್ಯ ಅಸ್ಪತ್ರೆಯಲ್ಲಿ ನಾಲ್ಕನೇ ದಿನವೂ ಚಿಕಿತ್ಸೆ ಮುಂದುವರೆದಿದೆ.

    ತೀವ್ರ ನಿಗಾ ಘಟಕದಲ್ಲಿ ವಿದ್ವತ್‍ಗೆ ಚಿಕಿತ್ಸೆ ನೀಡುತ್ತಿದ್ದು, ಮುಖದ ಊತ ಸ್ವಲ್ಪ ಮಟ್ಟಿಗೆ ನಿಯಂತ್ರಣಕ್ಕೆ ಬಂದಿದೆ. ಅಲ್ಲದೇ ಗಾಯದ ನೋವು ಜಾಸ್ತಿ ಇರುವುದರಿಂದ ವಿದ್ವತ್‍ಗೆ 102 ಡಿಗ್ರಿ ಜ್ವರ ಇತ್ತು. ಇದೀಗ 101 ಡಿಗ್ರಿಗೆ ಜ್ವರ ಇಳಿಮುಖವಾಗಿದ್ದು, ವೈದ್ಯರು ಐಸಿಯುನಲ್ಲಿ ಚಿಕಿತ್ಸೆ ನೀಡ್ತಿದ್ದಾರೆ. ಅಲ್ಲದೇ ಇನ್ನೂ ಮೂರ್ನಾಲ್ಕು ದಿನ ವಿದ್ವತ್‍ಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲು ವೈದ್ಯರು ನಿರ್ಧರಿಸಿದ್ದಾರೆ.  ಇದನ್ನೂ ಓದಿ: ಜೈಲಿನಲ್ಲೂ ಮುಂದುವರಿದ ನಲಪಾಡ್ ಪುಂಡಾಟ- ನಿನ್ನಿಂದ ನಾವು ಜೈಲು ಸೇರುವಂತಾಯ್ತು ಎಂದ ಸ್ನೇಹಿತ ಅಬ್ರಾಸ್ ಮೇಲೆ ಹಲ್ಲೆ

    ವಿದ್ವತ್ ಮುಖ, ಕಣ್ಣು, ಮೂಗು, ಹಾಗೂ ಪಕ್ಕೆಲುಬುಗಳ ಮೂಳೆ ಮುರಿದಿದ್ದರಿಂದ ವಿದ್ವತ್ ಮೊದಲಿನಂತಾಗಲು ತಿಂಗಳಿಗೂ ಹೆಚ್ಚು ಕಾಲ ಬೇಕಾಗುತ್ತೆ ಎನ್ನಲಾಗಿದೆ. ಇನ್ನು ಎದೆಯ ಪಕ್ಕೆಯ ಮೂಲೆಗಳು ಮುರಿದಿರೋ ಹಿನ್ನೆಲೆ ಕೂರಲೂ ಆಗದ ಸ್ಥಿತಿಯಲ್ಲಿರುವ ವಿದ್ವತ್ ಇನ್ನೂ ಚೇತರಿಸಕೊಳ್ಳದ ಹಾಗೂ ಜ್ವರದಿಂದ ಬಳಲುತ್ತಿರೋ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಸಿಂಗಾಪೂರಕ್ಕೆ ಕರೆದೊಯ್ಯಲು ಕುಟುಂಬ ಚಿಂತನೆ ನೆಡಸಿದೆ ಎಂದು ಸಹೋದರ ಸಾತ್ವಿಕ್ ಲೋಕನಾತ್ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಶಾಂತಿನಗರದ ಪ್ರಿನ್ಸ್ ರೌಡಿ ನಲಪಾಡ್ ಈಗ ಪರಪ್ಪನ ಅಗ್ರಹಾರಕ್ಕೆ ಶಿಫ್ಟ್!


    ವಿದ್ವತ್ ಅರೋಗ್ಯ ವಿಚಾರಿಸಲು ರಾಘವೇಂದ್ರ ರಾಜ್‍ಕುಮಾರ್ ಅವರ ಮಗ ಗುರುರಾಜ್ ಕುಮಾರ್ ಅಗಮಿಸಿದ್ದರು. ಇದೇ ವೇಳೆ ರಾಘವೇಂದ್ರ ರಾಜ್‍ಕುಮಾರ್ ಮನೆಯಿಂದ ಊಟ ಸಹ ತಂದು ಕೊಟ್ಟಿದ್ದು, ವಿದ್ವತ್ ಶೀಘ್ರ ಗುಣವಾಗಲೀ ಅಂತ ಹಾರೈಸಿದ್ರು.

    https://www.youtube.com/watch?v=p8o_3v5-ZYs

  • ಅಪ್ಪನ ಕೋಟೆಯಲ್ಲಿ ಮೆರೆದವ ಕೊನೆಗೂ ಜೈಲುಪಾಲು: ಎರಡು ಕೋರ್ಟ್ ಕಲಾಪ ಹೀಗಿತ್ತು

    ಅಪ್ಪನ ಕೋಟೆಯಲ್ಲಿ ಮೆರೆದವ ಕೊನೆಗೂ ಜೈಲುಪಾಲು: ಎರಡು ಕೋರ್ಟ್ ಕಲಾಪ ಹೀಗಿತ್ತು

    ಬೆಂಗಳೂರು: ಫರ್ಜಿ ಕೆಫೆಯಲ್ಲಿ ಅಟ್ಟಹಾಸ ಮೆರೆದಿದ್ದ ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಕೊನೆಗೂ ಜೈಲು ಸೇರಿದ್ದಾನೆ. ಕಳೆದೆರಡು ದಿನಗಳಿಂದ ಪೊಲೀಸ್ ಕಸ್ಟಡಿಯಲ್ಲಿದ್ದ ನಲಪಾಡ್ ಮತ್ತು ಆತನ 6 ಸಹಚರರನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಿ ಬೆಂಗಳೂರಿನ 8ನೇ ಎಸಿಎಂಎಂ ಕೋರ್ಟ್ ಆದೇಶ ನೀಡಿದೆ.

    ನ್ಯಾಯಾಧೀಶ ಮಹೇಶ್ ಬಾಬು ಈ ಆದೇಶ ಹೊರಡಿಸುತ್ತಲೇ ಕಟಕಟೆಯಲ್ಲಿ ನಿಂತಿದ್ದ ನಲಪಾಡ್ ಗಳಗಳನೆ ಕಣ್ಣೀರಿಟ್ಟದ್ದಾನೆ. ಆದೇಶ ಹೊರಬಿದ್ದ ಕೂಡಲೇ ನಲಪಾಡ್ ಹಾಗೂ ಆತನ ಸಹಚರರನ್ನು ಪೊಲೀಸರು ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರಕ್ಕೆ ಕರೆದುಕೊಂಡು ಹೋದರು. ನ್ಯಾಯಾಲಯದ ಆದೇಶದಂತೆ ನಲಪಾಡ್ ಹಾಗೂ ಆತನ ಸ್ನೇಹಿತರು ಮಾರ್ಚ್ 7 ರವರೆಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇರಲಿದ್ದಾರೆ. ಇದನ್ನೂ ಓದಿ: ನನ್ನ ಸೋದರನಿಗೆ ನೋವಾದ್ರೆ, ನನಗೂ ನೋವಾಗುತ್ತೆ- ವಿದ್ವತ್‍ಗೆ ನ್ಯಾಯ ದೊರಕಬೇಕೆಂದು ಒತ್ತಾಯಿಸಿದ ಗುರು ರಾಜ್‍ಕುಮಾರ್

    ನಲಪಾಡ್ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯನ್ನು ಸಿಟಿ ಸಿವಿಲ್ ಕೋರ್ಟ್ ಶುಕ್ರವಾರಕ್ಕೆ ಮುಂದೂಡಿದೆ. ಮಧ್ಯಂತರ ಅರ್ಜಿ ನಾಳೆ ವಿಚಾರಣೆಗೆ ಬರಲಿದೆ. ನಲಪಾಡ್ ಪ್ರಕರಣ ಸಂಬಂಧ ಶ್ಯಾಂ ಸುಂದರ್ ರನ್ನು ವಿಶೇಷ ಅಭಿಯೋಜಕರನ್ನಾಗಿ ನೇಮಿಸುವಂತೆ ವಿದ್ವತ್ ತಂದೆ ಲೋಕನಾಥ್ ರಾಜ್ಯ ಗೃಹ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. ಇಷ್ಟೆಲ್ಲಾ ಆದರೂ ಶಾಸಕ ಎನ್‍ಎ ಹ್ಯಾರೀಸ್ ಮಗನನ್ನು ನೋಡಲು ಭೇಟಿ ನೀಡಿಲ್ಲ. ಇದನ್ನೂ ಓದಿ: ಫರ್ಜಿ ಕೆಫೆಯಲ್ಲಿ ನಲಪಾಡ್ ಗುಂಡಾಗಿರಿ ಪ್ರಕರಣಕ್ಕೆ ಮೆಗಾ ಟ್ವಿಸ್ಟ್

    8ನೇ ಎಸಿಎಂಎಂ ನ್ಯಾಯಾಯದಲ್ಲಿ ಕಲಾಪ ಹೀಗಿತ್ತು:
    ನಗರದ 8ನೇ ಎಸಿಎಂಎಂ ನ್ಯಾಯಾಲಯದ ನ್ಯಾ. ಮಹೇಶ್ ಬಾಬು ಅವರ ಸಮ್ಮುಖದಲ್ಲಿ ಪ್ರಕರಣದ ವಿಚಾರಣೆ ನಡೆಯಿತು. ಸರ್ಕಾರದ ಪರ ವಕೀಲರು ಹಾಗೂ ಆರೋಪಿ ನಲಪಾಡ್ ಪರ ವಕೀಲರು ನ್ಯಾಯಮೂರ್ತಿಗಳ ಮುಂದೇ ತಮ್ಮ ವಾದ ಮಂಡಿಸಿದರು.

    ಕೋರ್ಟ್‍ನಲ್ಲಿದ್ದ ವಕೀಲರು – ಕೋರ್ಟ್ ಹಾಲ್‍ನಲ್ಲಿ ಬರೀ ಗೂಂಡಾಗಳೇ ತುಂಬಿದ್ದಾರೆ. ಪೊಲೀಸರಿಗೆ ಕೂಡಲೇ ಎಲ್ಲರನ್ನೂ ಹೊರಗೆ ಕಳುಹಿಸಲು ಸೂಚಿಸಿ ಎಂದರು. ವಕೀಲರ ಮನವಿಯಂತೆ ಕೋರ್ಟ್ ಹಾಲ್ ನಿಂದ ಆರೋಪಿಗಳನ್ನು ಹೊರತು ಪಡಿಸಿ ಎಲ್ಲರನ್ನೂ ಹೊರಗೆ ಕಳುಹಿಸಿದರು.

    ಸರ್ಕಾರಿ ಪರ ವಕೀಲರು – ಕೇಸ್ ಇನ್ನೂ ಪ್ರಾಥಮಿಕ ವಿಚಾರಣೆ ಹಂತದಲ್ಲಿದೆ. ಹಲ್ಲೆಗೊಳಗಾದ ವ್ಯಕ್ತಿಯ ಮೂಳೆಗಳು ಮುರಿದಿವೆ. ಇದು ಸಿಸಿಟಿವಿಯ ದೃಶ್ಯಾವಳಿಯಲ್ಲಿ ದಾಖಲಾಗಿದೆ. ಆರೋಪಿಗಳು ಆಸ್ಪತ್ರೆಗೂ ತೆರಳಿ ಹಲ್ಲೆಗೆ ಯತ್ನಿಸಿದ್ದಾರೆ. ಜಾಮೀನು ಮಂಜೂರು ಮಾಡಬೇಡಿ.

    ನ್ಯಾಯಾಧೀಶರು – ಇನ್ನೂ ಹೇಳುವುದು ಏನಾದರೂ ಇದೆಯಾ ?
    ಸರ್ಕಾರಿ ಪರ ವಕೀಲರು – ನಲಪಾಡ್ ಅಂಡ್ ಗ್ಯಾಂಗ್ ಸುಖಾಸುಮ್ಮನೆ ಹಲ್ಲೆ ಮಾಡಿಲ್ಲ. ವಿದ್ವತ್‍ರನ್ನು ಪ್ರಚೋದನೆ ಮಾಡಿ ಹಲ್ಲೆ ಮಾಡಿದ್ದಾರೆ. ಆಸ್ಪತ್ರೆಗೂ ನುಗ್ಗಿ ಹಲ್ಲೆ ಮಾಡಿದ್ದಾರೆ. ಆರೋಪಿಗಳು ಕೂಡ ಕೊಲೆ ಮಾಡಲು ಹೋಗಿದ್ದಾಗಿ ಒಪ್ಪಿಕೊಂಡಿದ್ದಾರೆ.

    ಸರ್ಕಾರಿ ಪರ ವಕೀಲರು – ವಿದ್ವತ್ ಮಾತನಾಡುವ ಸ್ಥಿತಿಯಲ್ಲಿ ಇಲ್ಲ. ನಮಗೆ ಆಕ್ಷೇಪಣೆ ಸಲ್ಲಿಸಲು ನಾಳೆಯವರೆಗೂ ಅವಕಾಶ ನೀಡಿ.

    ನ್ಯಾಯಾಧಿಶರು – ಓಕೆ.. ಆಕ್ಷೇಪಣೆ ಸಲ್ಲಸಲು ನಿಮಗೆ ನಾಳೆಯವರೆಗೆ ಕಾಲಾವಕಾಶ ನೀಡುತ್ತಿದ್ದೇವೆ.
    ನ್ಯಾಯಾಧೀಶರು – ನಲಪಾಡ್ ಮತ್ತು ಇತರೆ ಆರೋಪಿಗಳಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗುತ್ತಿದೆ. ಇದನ್ನೂ ಓದಿ: ಶಾಂತಿನಗರದ ಪ್ರಿನ್ಸ್ ರೌಡಿ ನಲಪಾಡ್ ಈಗ ಪರಪ್ಪನ ಅಗ್ರಹಾರಕ್ಕೆ ಶಿಫ್ಟ್!

    ಸಿಟಿ ಸಿವಿಲ್ ಕೋರ್ಟ್ ಕಲಾಪ ಹೀಗಿತ್ತು:
    ನಲಪಾಡ್ ಪರ ವಕೀಲರು ಸಲ್ಲಿಸಿದ್ದ ಜಾಮಿನು ಅರ್ಜಿ ವಿಚಾರಣೆ ಸಿಟಿ ಸಿವಿಲ್ ಕೋರ್ಟ್ ನಲ್ಲಿ ನಡೆಯಿತು. ಈ ವೇಳೆ ನ್ಯಾಯಾಲಯದಲ್ಲಿ ವಿದ್ವತ್ ತಂದೆ ಸಹ ಹಾಜರಿದ್ದರು.

    ಉದ್ಯಮಿ ಅಲಂಪಾಶಾ ಪರ ವಕೀಲ – ಆಡಳಿತಾರೂಢ ಪಕ್ಷದ ಶಾಸಕರ ಪುತ್ರ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ. ಇಲ್ಲಿ ತನಿಖೆ ನಡೆಸುತ್ತಿರುವ ಪೊಲೀಸರು ಸರ್ಕಾರ ಪರ ಇದ್ದಾರೆ. ವಾದ ಮಂಡಿಸುತ್ತಿರುವ ವಕೀಲರು ಸರ್ಕಾರ ಪರ ಇದ್ದಾರೆ. ಹೀಗಾಗಿ ಜನಸಾಮಾನ್ಯರ ಪರವಾಗಿ ನಮ್ಮ ವಾದ ಮಂಡಿಸಲು ಅವಕಾಶ ನೀಡಿ.

    ನ್ಯಾಯಾಧೀಶರು – ಜಾಮೀನು ಅರ್ಜಿಯಲ್ಲಿ ಸೆಕ್ಷನ್ 307 ಉಲ್ಲೇಖವಿಲ್ಲ. ಅರ್ಜಿ ತಿದ್ದುಪಡಿ ಮಾಡಿ.
    ನಲಪಾಡ್ ಪರ ವಕೀಲ– ಅರ್ಜಿ ತಿದ್ದುಪಡಿ ಮಾಡಿ 307 ಸೆಕ್ಷನ್ ಸೇರಿಸಿ ನಂತರ ತಿದ್ದುಪಡಿ ಪತ್ರ ಸಲ್ಲಿಸಿದರು.

    ವಿದ್ವತ್ ತಂದೆ – ನಲಪಾಡ್ ಜಾಮೀನು ಅರ್ಜಿ ವೇಳೆ ನನ್ನ ವಾದವನ್ನು ಸಹ ಪರಿಗಣಿಸಿ ಎಂದು ಕೋರ್ಟ್‍ಗೆ ಅರ್ಜಿ ಸಲ್ಲಿಸಿದರು.
    ನ್ಯಾಯಾಧೀಶರು – ಅಲಂಪಾಶಾ, ವಿದ್ವತ್ ತಂದೆಯ ಅರ್ಜಿಯನ್ನು ವಿಚಾರಣೆ ವೇಳೆ ಪರಿಗಣಿಸಬೇಕೋ, ಅಥವಾ ಬೇಡವೋ ಎಂಬ ಬಗ್ಗೆ ನಾಳೆ ತೀರ್ಮಾನ ತೆಗೆದುಕೊಳ್ಳಲಾಗುವುದು. ಶುಕ್ರವಾರ ಜಾಮೀನು ಅರ್ಜಿ ಕೈಗೆತ್ತಿಕೊಳ್ಳಲಾಗುವುದು. ಇದನ್ನೂ ಓದಿ: ಖಾಸಗಿ ವಿಮಾನ ಖರೀದಿಸಲು ಮುಂದಾಗಿದ್ದ ರೌಡಿ ನಲಪಾಡ್!

    https://www.youtube.com/watch?v=p8o_3v5-ZYs

    https://www.youtube.com/watch?v=XE5CFfnOvx0

    https://www.youtube.com/watch?v=RtMFKdQtfME

     

  • ಶಾಂತಿನಗರದ ಪ್ರಿನ್ಸ್ ರೌಡಿ ನಲಪಾಡ್ ಈಗ ಪರಪ್ಪನ ಅಗ್ರಹಾರಕ್ಕೆ ಶಿಫ್ಟ್!

    ಶಾಂತಿನಗರದ ಪ್ರಿನ್ಸ್ ರೌಡಿ ನಲಪಾಡ್ ಈಗ ಪರಪ್ಪನ ಅಗ್ರಹಾರಕ್ಕೆ ಶಿಫ್ಟ್!

    ಬೆಂಗಳೂರು: ವಿದ್ವತ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಂತಿ ನಗರ ಶಾಸಕ ಹ್ಯಾರಿಸ್ ಪುತ್ರ ರೌಡಿ ನಲಪಾಡ್‍ಗೆ 8 ನೇ ಎಸಿಎಂಎಂ ಕೋರ್ಟ್ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಪ್ರಕಟಿಸಿದೆ.

    ಪೊಲೀಸ್ ಕಸ್ಟಡಿಯಲ್ಲಿದ್ದ ನಲಪಾಡ್ ಮತ್ತು 7 ಮಂದಿ ಆರೋಪಿಗಳನ್ನು ಕಬ್ಬನ್ ಪಾರ್ಕ್ ಪೊಲೀಸರು ಮಧ್ಯಾಹ್ನ 4.10 ರ ವೇಳೆಗೆ ಬೌರಿಂಗ್ ಆಸ್ಪತ್ರೆಗೆ ಕರೆದುಕೊಂಡು ಹೋಗಿ ವೈದ್ಯಕೀಯ ಪರೀಕ್ಷೆ ನಡೆಸಿದರು. ಇದಾದ ಬಳಿಕ ಪೊಲೀಸರು ಕೋರ್ಟ್ ಗೆ ನಲಪಾಡ್ ಮತ್ತು ಆತನ ಗ್ಯಾಂಗ್ ಸದಸ್ಯರನ್ನು ಹಾಜರು ಪಡಿಸಿದ್ದರು. ಇದನ್ನೂ ಓದಿ: ಫರ್ಜಿ ಕೆಫೆಯಲ್ಲಿ ನಲಪಾಡ್ ಗುಂಡಾಗಿರಿ ಪ್ರಕರಣಕ್ಕೆ ಮೆಗಾ ಟ್ವಿಸ್ಟ್

    ಜಡ್ಜ್ 14 ದಿನಗಳ ಕಾಲ ಅಂದರೆ ಮಾರ್ಚ್ 7ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿದ ಹಿನ್ನೆಲೆಯಲ್ಲಿ ಪೊಲೀಸರು ನಲಪಾಡ್ ನನ್ನು ಪರಪ್ಪನ ಅಗ್ರಹಾರಕ್ಕೆ ಕರೆದುಕೊಂಡು ಹೋದರು. ಇದನ್ನೂ ಓದಿ: ಖಾಸಗಿ ವಿಮಾನ ಖರೀದಿಸಲು ಮುಂದಾಗಿದ್ದ ರೌಡಿ ನಲಪಾಡ್!

    ರಾಜಕೀಯ ಒತ್ತಡದಿಂದಾಗಿ ಕೊಲೆ ಯತ್ನ (307) ಕೇಸು ದಾಖಲಿಸಲಾಗಿದೆ. ಎಫ್‍ಐಆರ್ ದಾಖಲಾಗಿ ಎಷ್ಟೋ ಗಂಟೆಗಳ ಬಳಿಕ ಮತ್ತೊಂದು ಸೆಕ್ಷನ್ ಸೇರಿಸಲು ಕಾನೂನಿನಲ್ಲಿ ಅವಕಾಶವಿಲ್ಲ. ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸದೇ ಬಾಹ್ಯ ಒತ್ತಡಕ್ಕೆ ಮಣಿದು ಈ ಪ್ರಕರಣ ದಾಖಲಿಸಿರುವುದು ತಪ್ಪು ಎಂದು ಪೊಲೀಸರ ಕ್ರಮವನ್ನು ಪ್ರಶ್ನಿಸಿ ಆರೋಪಿ ಪರ ವಕೀಲರು ನ್ಯಾಯಾಲಯಕ್ಕೆ ಜಾಮೀನು ನೀಡುವಂತೆ ಅರ್ಜಿ ಸಲ್ಲಿಸಿದ್ದರು. ಇದನ್ನೂ ಓದಿ: ರೌಡಿ ನಲಪಾಡ್ ಪ್ರಕರಣಕ್ಕೆ ಆರಂಭದಲ್ಲೇ ಸಮಾಧಿ ಕಟ್ಟಲು ಮುಂದಾದ ಪೊಲೀಸರು!

    ಮುಂದೇನು?
    ಪ್ರಕರಣ ಈಗ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಿಂದ ಸಿಸಿಬಿಗೆ ವರ್ಗಾವಣೆಯಾಗಿದೆ. ಆದರೆ ಸಿಸಿಬಿ ಪೊಲೀಸರು ಇನ್ನೂ ವಿಚಾರಣೆ ಆರಂಭಿಸಿಲ್ಲ. ಅಷ್ಟೇ ಅಲ್ಲದೇ ಕಬ್ಬನ್ ಪಾರ್ಕ್ ಪೊಲೀಸರು ಆರೋಪಿಗಳನ್ನು ವಿಚಾರಣೆ ನಡೆಸಿದ್ದಾರೆ ಹೊರತು ಮಲ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂತ್ರಸ್ತ ವಿದ್ವತ್ ಅವರ ಹೇಳಿಕೆಯನ್ನು ಪಡೆದಿಲ್ಲ. ಹೀಗಾಗಿ ವಿದ್ವತ್ ಅವರ ಹೇಳಿಕೆಯನ್ನು ಪಡೆಯಬೇಕಿದೆ. ಇದರ ಜೊತೆಯಲ್ಲೇ ನ್ಯಾಯಾಂಗ ಬಂಧನದಲ್ಲಿರುವ ನಲಪಾಡ್ ನನ್ನು ಬಾಡಿ ವಾರಟ್ ಮೇಲೆ ಕರೆತಂದು ಮತ್ತಷ್ಟು ವಿಚಾರಣೆ ನಡೆಸುವ ಸಾಧ್ಯತೆಯಿದೆ.  ಇದನ್ನೂ ಓದಿ: ನನ್ನ ಸೋದರನಿಗೆ ನೋವಾದ್ರೆ, ನನಗೂ ನೋವಾಗುತ್ತೆ- ವಿದ್ವತ್‍ಗೆ ನ್ಯಾಯ ದೊರಕಬೇಕೆಂದು ಒತ್ತಾಯಿಸಿದ ಗುರು ರಾಜ್‍ಕುಮಾರ್

    ನಲಪಾಡ್ ಮೇಲೆ ಯಾವೆಲ್ಲ ಕೇಸ್ ಹಾಕಲಾಗಿದೆ?
    ಐಪಿಸಿ ಸೆಕ್ಷನ್ 307(ಕೊಲೆ ಯತ್ನ) ಜಾಮೀನು ರಹಿತ ಕೇಸಾಗಿದ್ದು ಉಳಿದ ಸೆಕ್ಷನ್ ಗಳಾದ 341(ಅಕ್ರಮ ಬಂಧನ), 504(ಅವ್ಯಾಚ್ಯ ಶಬ್ಧಗಳಿಂದ ನಿಂದನೆ), 143, 144- 146, 147, 149 (ಅಕ್ರಮ ಗುಂಪುಗಾರಿಕೆ), 326(ಗಂಭೀರ ಗಾಯ), 506 ಬಿ (ಪ್ರಾಣಬೆದರಿಕೆ) ಜಾಮೀನು ಸಿಗುವ ಕೇಸುಗಳಾಗಿವೆ.  ಇದನ್ನೂ ಓದಿ: ಮೈಮೇಲೆ ಕುರ್ಚಿಗಳನ್ನು ಎಸೆದ್ರು, sorry ಎಂದರೂ ಬಿಯರ್ ಬಾಟಲಿಯಿಂದ ಬಾಯಿಗೆ ಹೊಡೆದ್ರು- ನಲಪಾಡ್ ದಾಳಿ ಬಗ್ಗೆ ವಿದ್ವತ್ Exclusive ಮಾತು

     

    https://www.youtube.com/watch?v=B-erXK9nl1M

    https://www.youtube.com/watch?v=TIPtfcxi6O4

    https://www.youtube.com/watch?v=vgXGeYC-QqU

    https://www.youtube.com/watch?v=ETcXE9RXvXE

    https://www.youtube.com/watch?v=bLWKOszy0uc

     

  • ರೌಡಿ ನಲಪಾಡ್ ಪ್ರಕರಣಕ್ಕೆ ಆರಂಭದಲ್ಲೇ ಸಮಾಧಿ ಕಟ್ಟಲು ಮುಂದಾದ ಪೊಲೀಸರು!

    ರೌಡಿ ನಲಪಾಡ್ ಪ್ರಕರಣಕ್ಕೆ ಆರಂಭದಲ್ಲೇ ಸಮಾಧಿ ಕಟ್ಟಲು ಮುಂದಾದ ಪೊಲೀಸರು!

    ಬೆಂಗಳೂರು: ಶಾಂತಿನಗರ ಶಾಸಕ ಹ್ಯಾರಿಸ್ ಪುತ್ರ ಮಹಮ್ಮದ್ ನಲಪಾಡ್ ಗೂಂಡಾಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ರೋಚಕ ತಿರುವೊಂದು ಸಿಕ್ಕಿದೆ. ವಿದ್ವತ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ ಸುದ್ದಿ ಹರಡುತ್ತಿದ್ದಂತೆಯೇ, ಇತ್ತ ಇಡೀ ಪ್ರಕರಣವನ್ನು ಮುಚ್ಚಿಹಾಕಲು ಪ್ಲಾನ್ ನಡೆದಿದೆ ಎನ್ನುವ ವಿಚಾರ ಮೂಲಗಳಿಂದ ಪಬ್ಲಿಕ್ ಟಿವಿಗೆ ಲಭಿಸಿದೆ. ಇದನ್ನೂ ಓದಿ: ಫರ್ಜಿ ಕೆಫೆಯಲ್ಲಿ ನಲಪಾಡ್ ಗುಂಡಾಗಿರಿ ಪ್ರಕರಣಕ್ಕೆ ಮೆಗಾ ಟ್ವಿಸ್ಟ್

    ಘಟನೆ ನಡೆದ ಬಳಿಕ ಫರ್ಜಿ ಕೆಫೆಯ ಸಿಸಿಟಿವಿ ದೃಶ್ಯಾವಳಿಗಳನ್ನೇ ಡಿಲೀಟ್ ಮಾಡಲಾಗಿದೆ ಎನ್ನುವ ಮಾಹಿತಿ ಸಿಕ್ಕಿದೆ. ಹೀಗಾಗಿ ಪಾರ್ಟಿ ಹಾಲ್ ನ ಒಂದೇ ಒಂದು ತುಣುಕು ಇರುವ ದೃಶ್ಯ ರಿಲೀಸ್ ಆಗಿಲ್ಲ. ಅಷ್ಟೇ ಅಲ್ಲದೇ ಪಾರ್ಕಿಂಗ್ ನಲ್ಲಿ ಇದ್ದ ಸಿಸಿಟಿವಿ ದೃಶ್ಯವನ್ನು ಡಿಲೀಟ್ ಮಾಡಲಾಗಿದೆ ಎನ್ನುವ ಆರೋಪವೂ ಕೇಳಿಬಂದಿದೆ. ಇದನ್ನೂ ಓದಿ: ಖಾಸಗಿ ವಿಮಾನ ಖರೀದಿಸಲು ಮುಂದಾಗಿದ್ದ ರೌಡಿ ನಲಪಾಡ್!

    ವಿಡಿಯೋದಲ್ಲೇನಿದೆ?: ಘಟನೆ ನಡೆದ ಬಳಿಕ ಒಂದು ವಿಡಿಯೋ ಲಭ್ಯವಾಗಿದ್ದು, ಪಾರ್ಟಿ ಹಾಲ್ ನಲ್ಲಿ ಗಲಾಟೆಯ ನಂತ ವಿದ್ವತ್ ಲಿಫ್ಟ್ ನಲ್ಲಿ ಇಳಿದು ಹೋಗಿದ್ದಾರೆ. ಫಸ್ಟ್ ಫ್ಲೋರ್ ನಲ್ಲಿ ಲಿಫ್ಟ್ ಇಳಿದ ವಿದ್ವತ್ ನನ್ನು ಮೆಟ್ಟಿಲುಗಳ ಮೇಲೆ ಹೊಡೆದು ಮತ್ತೆ ಪಾರ್ಟಿ ಹಾಲ್ ಗೆ ಎಳೆದುಕೊಂಡು ಹೋಗಿದ್ರು. ಮೆಟ್ಟಿಲುಗಳ ಮೇಲೆ ಎಳೆದುಕೊಂಡು ಹೋಗುವ ದೃಶ್ಯಾವಳಿ ಅದರಲ್ಲಿದೆ. ಇದನ್ನೂ ಓದಿ: ನನ್ನ ಸೋದರನಿಗೆ ನೋವಾದ್ರೆ, ನನಗೂ ನೋವಾಗುತ್ತೆ- ವಿದ್ವತ್‍ಗೆ ನ್ಯಾಯ ದೊರಕಬೇಕೆಂದು ಒತ್ತಾಯಿಸಿದ ಗುರು ರಾಜ್‍ಕುಮಾರ್

    ಆ ಸಂದರ್ಭದಲ್ಲಿ ಪೊಲೀಸರು ಬಂದು ನಲಪಾಡ್ ನನ್ನು ಹಿಡಿಯೋದಾಗ್ಲಿ ಅಥವಾ ಹೊಡೆಯೋದನ್ನ ನಿಲ್ಲಿಸೋದಾಗ್ಲಿ ಮಾಡಿಲ್ಲ. ನಂತರ ವಿದ್ವತ್ ನನ್ನು ಪಾರ್ಕಿಂಗ್ ಗೆ ಕರೆದುಕೊಂಡು ಹೋದಾಗ ಪಿಎಸ್‍ಐ ಗಿರೀಶ್ ಎಂಟ್ರಿ ಕೊಟ್ಟಿದ್ದಾರೆ. ಗಿರೀಶ್ ಅವರು ಬರುತ್ತಿದ್ದಂತೆಯೇ ಪಾರ್ಕಿಂಗ್ ನಲ್ಲಿ ವಿದ್ವತ್ ಮೇಲೆ ಹಲ್ಲೆ ನಡೆಯುತ್ತಾ ಇತ್ತು. ಈ ಬಗ್ಗೆ ಗೊತ್ತಿದ್ದರೂ ಗಿರೀಶ್ ಅವರು ಪಾರ್ಕಿಂಗ್ ಲಾಟ್ ಗೆ ಹೋಗದೇ ಪಾರ್ಟಿ ಹಾಲ್ ಗೆ ಹೋಗಿದ್ದಾರೆ. ನಂತರಪಾರ್ಟಿ ಹಾಲ್‍ನಿಂದ ಕೆಳಗೆ ಬಂದಾಗ ಆರೋಪಿ ನಲಪಾಡ್ ಫರ್ಜಿ ಕೆಫೆ ಮುಂದೆ ನಿಂತಿದ್ದನು. ಈ ವೇಳೆ ಗಿರೀಶ್ ನಲಪಾಡ್ ನನ್ನು ನೋಡಿಯೂ ಸುಮ್ಮನೇ ನಿಂತಿದ್ದಾರೆ. ಇದನ್ನೂ ಓದಿ: ಮೈಮೇಲೆ ಕುರ್ಚಿಗಳನ್ನು ಎಸೆದ್ರು, sorry ಎಂದರೂ ಬಿಯರ್ ಬಾಟಲಿಯಿಂದ ಬಾಯಿಗೆ ಹೊಡೆದ್ರು- ನಲಪಾಡ್ ದಾಳಿ ಬಗ್ಗೆ ವಿದ್ವತ್ Exclusive ಮಾತು

    ಶಾಸಕರ ಪುತ್ರ ಎನ್ನುವ ಕಾರಣಕ್ಕೆ ಪ್ರಕರಣದ ಆರಂಭದಲ್ಲೇ ಬೆಂಗಳೂರು ಪೊಲೀಸರು ಪ್ರಕರಣವನ್ನು ಮುಚ್ಚಿ ಹಾಕಲು ಪ್ರಯತ್ನಿಸಿದ್ದರು ಎನ್ನುವ ಆರೋಪ ಕೇಳಿ ಬಂದಿತ್ತು. ಈ ಆರೋಪ, ಅನುಮಾನಗಳಿಗೆ ಪುಷ್ಠಿ ಎನ್ನುವಂತೆ ಸಿಸಿ ಕ್ಯಾಮೆರಾದ ದೃಶ್ಯವಾಳಿಗಳನ್ನು ದಿನ ಕಳೆದರೂ ಪೊಲೀಸರು ರಿಲೀಸ್ ಮಾಡಿಲ್ಲ ಯಾಕೆ ಎನ್ನುವ ಪ್ರಶ್ನೆ ಹುಟ್ಟಿಕೊಂಡಿದೆ. ನಲಪಾಡ್ ಒಂದೊಂದೆ ಅಕ್ರಮಗಳು ಬಯಲಾಗುತ್ತಿದ್ದು, ಪ್ರಕರಣದ ಪ್ರಮುಖ ಸಾಕ್ಷಿಯಾಗಬೇಕಿದ್ದ ಸಿಸಿಟಿವಿ ದೃಶ್ಯಗಳನ್ನು ಪೊಲೀಸರು ರಿಲೀಸ್ ಮಾಡಿದ್ದರೆ ಆ ಪಾರ್ಟಿಯಲ್ಲಿ ಯಾರೆಲ್ಲ ಭಾಗವಹಿಸಿದ್ದರು? ಘಟನೆ ಹೇಗಾಯ್ತು ಎನ್ನುವ ಪ್ರಶ್ನೆಗಳಿಗೆ ಸ್ಪಷ್ಟ ಉತ್ತರ ಸಿಗಲಿದೆ. ಇದನ್ನೂ ಓದಿ: ಶಾಂತಿನಗರದಲ್ಲಿ ರೌಡಿ ನಲಪಾಡ್ ಹೇಳಿದ್ದೇ ಶಾಸನವಂತೆ..!

    https://www.youtube.com/watch?v=B-erXK9nl1M

    https://www.youtube.com/watch?v=TIPtfcxi6O4

    https://www.youtube.com/watch?v=vgXGeYC-QqU

    https://www.youtube.com/watch?v=ETcXE9RXvXE

    https://www.youtube.com/watch?v=bLWKOszy0uc