Tag: ವಿಧಾನಪರಿಷತ್ ಸಭಾಪತಿ

  • ದೋಸ್ತಿ ಸರ್ಕಾರದಲ್ಲಿ ಜೆಡಿಎಸ್ ಗೆ ಕಾಂಗ್ರೆಸ್ ಸರೆಂಡರ್!

    ದೋಸ್ತಿ ಸರ್ಕಾರದಲ್ಲಿ ಜೆಡಿಎಸ್ ಗೆ ಕಾಂಗ್ರೆಸ್ ಸರೆಂಡರ್!

    ಬೆಂಗಳೂರು: ದೋಸ್ತಿ ಸರ್ಕಾರದಲ್ಲಿ ಅತಿ ದೊಡ್ಡ ಹೊಂದಾಣಿಕೆ ನಡೆದಿದ್ದು, ಮೈತ್ರಿ ಸೂತ್ರ ಪಾಲಿಸಲು ಕಾಂಗ್ರೆಸ್ ಒಂದು ವಿಚಾರದಲ್ಲಿ ಇದೀಗ ಜೆಡಿಎಸ್‍ಗೆ ಸರೆಂಡರ್ ಆಗಿದೆ.

    ಈ ಮೂಲಕ ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಪಟ್ಟು ಹಿಡಿದಿದ್ದ ಕಾಂಗ್ರೆಸ್ ಅನಿವಾರ್ಯವಾಗಿ ಸೈಲೆಂಟಾಯ್ತಾ ಅನ್ನೋ ಪ್ರಶ್ನೆ ಇದೀಗ ಎದ್ದಿದೆ. ಸಂಖ್ಯಾಬಲದ ಪ್ರಕಾರ ಸಭಾಪತಿ ಸ್ಥಾನ ಕಾಂಗ್ರೆಸ್ ವಶವಾಗಬೇಕಿತ್ತು. ಹೀಗಾಗಿ ಇದೇ ವಾದವನ್ನು ಮುಂದಿಟ್ಟು ಕೈ ಸದಸ್ಯರು ಸಭಾಪತಿ ಸ್ಥಾನಕ್ಕಾಗಿ ಪಟ್ಟು ಹಿಡಿದಿದ್ದರು. ಆದರೆ ಈಗ ಎಲ್ಲಾ ನಾಯಕರು ಫುಲ್ ಸೈಲೆಂಟ್ ಆಗಿದ್ದು, ಇದರಿಂದ ದೋಸ್ತಿಗಳ ನಡುವೆ ದೊಡ್ಡ ಹೊಂದಾಣಿಕೆ ನಡೆದು ಹೋಯ್ತಾ ಎಂಬ ಕುತೂಹಲವೊಂದು ಮೂಡಿದೆ.


    ಜೆಡಿಎಸ್‍ಗೆ ಪರಿಷತ್ ಸಭಾಪತಿ ಸ್ಥಾನ ಬಿಟ್ಟುಕೊಡಲು ಕಾಂಗ್ರೆಸ್ ಒಪ್ಪಿಗೆ ಸೂಚಿಸಿದ್ದು, ಬಸವರಾಜ್ ಹೊರಟ್ಟಿಗೆ ಪರಿಷತ್ ಸಭಾಪತಿ ಸ್ಥಾನ ಬಿಟ್ಟುಕೊಡಲು `ಕೈ’ ಸಮ್ಮತಿಸಿದೆ. ಯಾರ ಬೆಂಬಲವಿಲ್ಲದೆ ಸಭಾಪತಿ ಸ್ಥಾನ ಪಡೆಯಲು ಕಾಂಗ್ರೆಸ್ ಸಮರ್ಥವಿದೆ. ಕಾಂಗ್ರೆಸ್ ಪರಿಷತ್ ಸದಸ್ಯರ ಅಭಿಪ್ರಾಯವು ಇದೇ ಆಗಿತ್ತು. ಆದರೆ 7 ನೇ ಬಾರಿ ಪರಿಷತ್ ಸದಸ್ಯರಾಗಿರುವ 38 ವರ್ಷ ಸದನದ ಸದಸ್ಯರಾಗಿರುವ ಹೊರಟ್ಟಿಯವರಂತಹ ಹಿರಿಯರ ಹಿರಿತನಕ್ಕೆ ಗೌರವ ನೀಡಲು ಕಾಂಗ್ರೆಸ್ ಮುಂದಾಗಿದೆ. ಹೀಗಾಗಿ ಹೊರಟ್ಟಿಯವರನ್ನೇ ಅಧಿಕೃತ ಪರಿಷತ್ ಸಭಾಪತಿಯನ್ನಾಗಿ ಮುಂದುವರಿಸಲು ಸಮ್ಮತಿ ಸೂಚಿಸಿದ್ದು, ಇಂದು ಸಭಾಪತಿ ಸ್ಥಾನದ ಚುನಾವಣೆಯ ಅಧಿಸೂಚನೆ ಹೊರ ಬೀಳಲಿದೆ.

    ಹೀಗೆ ಸಭಾಪತಿ ಸ್ಥಾನಕ್ಕಾಗಿ ಕುಸ್ತಿ ಆಡುತ್ತಿದ್ದ ಮೈತ್ರಿ ಪಕ್ಷವಾದ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸೂತ್ರಕ್ಕೆ ಮೊರೆಹೋಗಿವೆ. ಒಟ್ಟಿನಲ್ಲಿ ಹಿರಿತನದ ಗೌರವದೊಂದಿಗೆ ಬಸವರಾಜ ಹೊರಟ್ಟಿ ಸಭಾಪತಿಯಾಗುವುದು ಖಚಿತವಾಗಿದೆ.

  • ಅನರ್ಹರು, ಭ್ರಷ್ಟ ಅಧಿಕಾರಿಗಳ ರಕ್ಷಣೆಗೆ ಯತ್ನ- ವಿವಾದಕ್ಕೀಡಾದ್ರು ಡಿ.ಹೆಚ್ ಶಂಕರಮೂರ್ತಿ

    ಅನರ್ಹರು, ಭ್ರಷ್ಟ ಅಧಿಕಾರಿಗಳ ರಕ್ಷಣೆಗೆ ಯತ್ನ- ವಿವಾದಕ್ಕೀಡಾದ್ರು ಡಿ.ಹೆಚ್ ಶಂಕರಮೂರ್ತಿ

    ಕಲಬುರಗಿ: ವಿಧಾನಪರಿಷತ್ ಸಭಾಪತಿ ಹುದ್ದೆಯಿಂದ ನಿರ್ಗಮಿಸುವ ಹಂತದಲ್ಲಿ ಡಿ.ಹೆಚ್ ಶಂಕರ ಮೂರ್ತಿ ವಿವಾದವೊಂದರಲ್ಲಿ ಸಿಲುಕಿದ್ದಾರೆ.

    ಭ್ರಷ್ಟಾಚಾರ ಮತ್ತು ನಕಲಿ ಅಂಕಪಟ್ಟಿ ನೀಡಿರೋ ಅನರ್ಹರ ರಕ್ಷಣೆಗೆ ನಿಂತ ಕಳಂಕ ಎದುರಿಸುತ್ತಿದ್ದಾರೆ. ಹಿರಿಯ ಐಎಎಸ್ ಅಧಿಕಾರಿ ಸುಭೋದ್ ಯಾದವ್ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತರಾಗಿದ್ದಾಗ, ಇಲಾಖೆಯಲ್ಲಿ ಹುದ್ದೆ ಪಡೆಯಲು ನಕಲಿ ಅಂಕಪಟ್ಟಿ ಸಲ್ಲಿಸಿದ್ದ 66 ಮಂದಿ ಆಹಾರ ಸುರಕ್ಷತಾ ಅಧಿಕಾರಿಗಳನ್ನ ಅನರ್ಹಗೊಳಿಸಿದ್ದರು.

    ಲಂಚ ಪಡೆಯುತ್ತಿದ್ದ 6 ಮಂದಿಯನ್ನು ಅಮಾನತು ಮಾಡಿದ್ದರು. ಇವರ ಪರವಾಗಿ ಶಂಕರಮೂರ್ತಿ ಲಾಬಿ ನಡೆಸಿದ್ದಾರೆ. 2017ರಲ್ಲಿ ಈ ಅಧಿಕಾರಿಗಳ ಪುನಃ ನೇಮಕಾತಿ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಸಭಾಪತಿ ಡಿ.ಎಚ್ ಶಂಕರಮೂರ್ತಿ ಪತ್ರ ಬರೆದಿದ್ದರು. ಆದ್ರೆ ಇದನ್ನು ಇಲಾಖೆ ಪರಿಗಣಿಸಿರಲಿಲ್ಲ.

    ಹೀಗಾಗಿ ಇದೀಗ ಸಭಾಪತಿ ಡಿ.ಎಚ್ ಶಂಕರಮೂರ್ತಿ, ನೂತನ ಆರೋಗ್ಯ ಸಚಿವ ಶಿವಾನಂದ ಪಾಟೀಲರಿಗೆ 66 ಅನರ್ಹ ಎಫ್‍ಎಸ್‍ಓಗಳನ್ನು ಪುನಃ ಅದೇ ಹುದ್ದೆಗಳಿಗೆ ನೇಮಿಸುವಂತೆ ಪತ್ರ ಬರೆದಿದ್ದಾರೆ. ಸಭಾಪತಿ ಒತ್ತಡಕ್ಕೆ ಮಣಿದು ಆರೋಗ್ಯ ಸಚಿವರು ಅನರ್ಹರಿಗೆ ಮಣೆ ಹಾಕ್ತಾರಾ? ಎಂಬುದನ್ನು ಕಾದು ನೋಡ್ಬೇಕು.