Tag: ವಿಧಾನಸಭೆ ಸ್ಪೀಕರ್

  • ಮೂರು ತಿಂಗಳಲ್ಲಿ ಶಾಸಕರ ಪಕ್ಷಾಂತರದ ಬಗ್ಗೆ ಕ್ರಮ ತೆಗೆದುಕೊಳ್ಳಿ – ತೆಲಂಗಾಣ ವಿಧಾನಸಭೆ ಸ್ಪೀಕರ್‌ಗೆ ಸುಪ್ರೀಂ ಸೂಚನೆ

    ಮೂರು ತಿಂಗಳಲ್ಲಿ ಶಾಸಕರ ಪಕ್ಷಾಂತರದ ಬಗ್ಗೆ ಕ್ರಮ ತೆಗೆದುಕೊಳ್ಳಿ – ತೆಲಂಗಾಣ ವಿಧಾನಸಭೆ ಸ್ಪೀಕರ್‌ಗೆ ಸುಪ್ರೀಂ ಸೂಚನೆ

    ನವದೆಹಲಿ: ಭಾರತ ರಾಷ್ಟ್ರ ಸಮಿತಿಯಿಂದ ಪಕ್ಷಾಂತರಗೊಂಡ ಶಾಸಕರ ಅನರ್ಹತೆಯ ಬಗ್ಗೆ ತ್ವರಿತ ನಿರ್ಧಾರ ತೆಗೆದುಕೊಳ್ಳುವಂತೆ ಸುಪ್ರೀಂ ಕೋರ್ಟ್ (Supreme Court) ತೆಲಂಗಾಣ ವಿಧಾನಸಭೆಯ ಸ್ಪೀಕರ್‌ಗೆ (Telangana Speaker) ನಿರ್ದೇಶನ ನೀಡಿದೆ. ಮೂರು ತಿಂಗಳೊಳಗೆ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಬೇಕು, ಇಲ್ಲದಿದ್ದರೆ ಪ್ರಜಾಪ್ರಭುತ್ವಕ್ಕೆ ಹಾನಿಯಾಗಬಹುದು ಎಂದು ನ್ಯಾಯಾಲಯ ಕಳವಳ ವ್ಯಕ್ತಪಡಿಸಿದೆ.

    ಕಾಂಗ್ರೆಸ್ ಸೇರಿದ 10 ಬಿಆರ್‌ಎಸ್ ಶಾಸಕರ ವಿರುದ್ಧದ ಅನರ್ಹತೆ ಅರ್ಜಿಗಳ ಕುರಿತು ಏಳು ತಿಂಗಳುಗಳ ನಂತರವೂ ಸ್ಪೀಕರ್ ಯಾವುದೇ ನಿರ್ಧಾರ ತೆಗೆದುಕೊಳ್ಳದ ಹಿನ್ನೆಲೆ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ನೇತೃತ್ವದ ತ್ರಿ ಸದಸ್ಯ ಪೀಠ ಈ ಆದೇಶ ನೀಡಿದೆ. ಇದನ್ನೂ ಓದಿ: ತಾಯಿಯನ್ನು ಕೊಂದ ಪಾಪಿಯಿಂದ ತಂದೆಯ ಮೇಲೂ ಮೃಗೀಯ ವರ್ತನೆ – ಚರ್ಮ ಸುಲಿಯುವಂತೆ ಹಲ್ಲೆ

    ವಿಚಾರಣೆ ವೇಳೆ ಸ್ಪೀಕರ್ ವರ್ತನೆಗೆ ಸಿಜೆಐ ಬಿ.ಆರ್ ಗವಾಯಿ ಆಕ್ಷೇಪ ವ್ಯಕ್ತಪಡಿಸಿದರು. ಸ್ಪೀಕರ್ ಸಕಾಲಿಕ ಕ್ರಮ ಕೈಗೊಳ್ಳದಿದ್ದರೆ ಅದು ‘ಆಪರೇಷನ್ ಸಕ್ಸಸ್, ಪೇಷಂಟ್ ಡೆಡ್’ ಪರಿಸ್ಥಿತಿಯಾಗುತ್ತದೆ. ಪಕ್ಷಾಂತರದ ಸಂದರ್ಭದಲ್ಲಿ ಸ್ಪೀಕರ್ ತ್ವರಿತ ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ. ಶಾಸಕರ ಪ್ರಕ್ರಿಯೆಯನ್ನು ವಿಳಂಬ ಮಾಡಲು ಬಿಡಬೇಡಿ ಮತ್ತು ಇದು ಸಂಭವಿಸಿದಲ್ಲಿ, ಅವರ ವಿರುದ್ಧ ಪ್ರತಿಕೂಲ ತೀರ್ಮಾನಗಳನ್ನು ತೆಗೆದುಕೊಳ್ಳಬಹುದು ಎಂದು ನ್ಯಾಯಾಲಯವು ಸ್ಪೀಕರ್‌ಗೆ ತಿಳಿಸಿತು. ಇದನ್ನೂ ಓದಿ: ಅನಾಮಿಕ ವ್ಯಕ್ತಿ ನಟೋರಿಯಸ್ ಕೆಲಸ ಮಾಡಿ ಕ್ಷೇತ್ರದಿಂದ ಉಚ್ಚಾಟನೆಗೊಂಡಿದ್ದ: ಧರ್ಮಸ್ಥಳ ಗ್ರಾ.ಪಂ ಮಾಜಿ ಅಧ್ಯಕ್ಷ

    ರಾಜಕೀಯ ಪಕ್ಷಾಂತರವು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಗಂಭೀರ ಬೆದರಿಕೆಯಾಗಿದೆ, ಇದನ್ನು ನಿಲ್ಲಿಸದಿದ್ದರೆ, ಅದು ಇಡೀ ವ್ಯವಸ್ಥೆಯನ್ನು ಅಸ್ಥಿರಗೊಳಿಸಬಹುದು. ಪಕ್ಷಾಂತರ ಪ್ರಕರಣಗಳಲ್ಲಿ ಸ್ಪೀಕರ್ ನಿರ್ಧಾರ ನೀಡುವ ಪ್ರಸ್ತುತ ವ್ಯವಸ್ಥೆಯು ಸೂಕ್ತವಾಗಿದೆಯೇ ಅಥವಾ ಅದನ್ನು ಬದಲಾಯಿಸುವ ಅಗತ್ಯವಿದೆಯೇ ಎಂದು ಪರಿಗಣಿಸುವಂತೆ ನ್ಯಾಯಾಲಯವು ಸಂಸತ್ತನ್ನು ಒತ್ತಾಯಿಸಿತು. ಇದನ್ನೂ ಓದಿ: ಧರ್ಮಸ್ಥಳ ಶವಗಳ ಹೂತಿಟ್ಟ ಕೇಸ್ – ಕೊನೆಗೂ ಅಸ್ಥಿಪಂಜರ ಪತ್ತೆ

    ಸ್ಪೀಕರ್ ‘ಸಮಂಜಸ ಸಮಯದಲ್ಲಿ’ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಹೇಳಿದ್ದ ತೆಲಂಗಾಣ ಹೈಕೋರ್ಟ್‌ನ ಆದೇಶವನ್ನು ಸುಪ್ರೀಂಕೋರ್ಟ್ ಇದೇ ವೇಳೆ ರದ್ದುಗೊಳಿಸಿತು. ಹಿಂದಿನ ಆದೇಶಗಳು ಕ್ರಮವನ್ನು ವಿಳಂಬಗೊಳಿಸಿವೆ ಎಂದು ನ್ಯಾಯಾಲಯ ಒಪ್ಪಿಕೊಂಡಿತು. ಆದರೆ ಸಂವಿಧಾನದ ಉದ್ದೇಶವು ತಕ್ಷಣದ ನಿರ್ಧಾರಗಳನ್ನು ತೆಗೆದುಕೊಳ್ಳುವುದು ಎಂದು ಪೀಠ ಹೇಳಿತು. ಇದನ್ನೂ ಓದಿ: ಗಾಳಿ ಆಂಜನೇಯ ದೇಗುಲ ಭಕ್ತರಿಗೆ ಗುಡ್‌ನ್ಯೂಸ್ – ಶೀಘ್ರದಲ್ಲೇ ಹೋಮ, ಹವನ ಮಾಡಿಸೋಕೆ ಆನ್‌ಲೈನ್ ಸೇವೆ ಆರಂಭ

    ಬಿಆರ್‌ಎಸ್ ಶಾಸಕರಾದ ದಾನಂ ನಾಗೇಂದರ್ (ಖೈರತಾಬಾದ್), ತೆಲ್ಲಂ ವೆಂಕಟ ರಾವ್ (ಭದ್ರಾಚಲಂ), ಕಡಿಯಂ ಶ್ರೀಹರಿ (ಸ್ಟೇಷನ್ ಘನಪುರ), ಪೋಚಾರಂ ಶ್ರೀನಿವಾಸ್ ರೆಡ್ಡಿ (ಬನ್ಸವಾಡ), ಎಂ. ಸಂಜಯ್ ಕುಮಾರ್ (ಜಗಿತಿಯಾಲ), ಅರೆಕಪುಡಿ ಗಾಂಧಿ (ಸೆರಿಲಿಂಗಂಪಲ್ಲಿ), ಟಿ. ಪ್ರಕಾಶ್ ಗೌಡ್ (ರಾಜೇಂದ್ರನಗರ), ಬಿ. ಕೃಷ್ಣ ಮೋಹನ್ ರೆಡ್ಡಿ (ಗದ್ವಾಲ್), ಜಿ. ಮಹಿಪಾಲ್ ರೆಡ್ಡಿ (ಪಟಾಂಚೇರು), ಮತ್ತು ಕಾಲೆ ಯಡಯ್ಯ (ಚೇವೆಲ್ಲ) ಕಾಂಗ್ರೇಸ್ ಸೇರ್ಪಡೆಯಾಗಿದ್ದರು. ಇದನ್ನೂ ಓದಿ: 10,000 ಕೊಡ್ತೀನಿ ಬಾ – ಯುವತಿಯನ್ನು ಮಂಚಕ್ಕೆ ಕರೆದ ಕಾಮುಕ ಪ್ರಿನ್ಸಿಪಾಲ್ ಅರೆಸ್ಟ್

  • ತೆಲಂಗಾಣ ಹಂಗಾಮಿ ಸ್ಪೀಕರ್‌ ಆಗಿ AIMIM ಶಾಸಕ ಅಕ್ಬರುದ್ದೀನ್ ಓವೈಸಿ ಪ್ರಮಾಣ ವಚನ

    ತೆಲಂಗಾಣ ಹಂಗಾಮಿ ಸ್ಪೀಕರ್‌ ಆಗಿ AIMIM ಶಾಸಕ ಅಕ್ಬರುದ್ದೀನ್ ಓವೈಸಿ ಪ್ರಮಾಣ ವಚನ

    ಹೈದರಾಬಾದ್:‌ ತೆಲಂಗಾಣ ರಾಜ್ಯ ವಿಧಾನಸಭೆಯ ಹಂಗಾಮಿ ಸಭಾಧ್ಯಕ್ಷರಾಗಿ ಎಐಎಂಐಎಂ ಶಾಸಕ ಅಕ್ಬರುದ್ದೀನ್ ಓವೈಸಿ (Akbaruddin Owaisi) ಅವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ.

    ಹೊಸ ಸರ್ಕಾರ ಸ್ಥಾಪನೆಯಾದ ಬಳಿಕ ಶನಿವಾರ ಆರಂಭವಾಗಿರುವ ರಾಜ್ಯ ವಿಧಾನಸಭೆಯ (Telangana Legislative Assembly) ಮೊದಲ ಅಧಿವೇಶನಕ್ಕೆ ಹಂಗಾಮಿ ಸ್ಪೀಕರ್‌ ಆಗಿ ಅಕ್ಬರುದ್ದೀನ್ ಓವೈಸಿ ಅವರನ್ನು ನೇಮಕ ಮಾಡಲಾಗಿದ್ದು, ರಾಜ್ಯಪಾಲ ತಮಿಳಿಸೈ ಸೌಂದರರಾಜನ್ (Tamilisai Soundararajan) ಪ್ರಮಾಣ ವಚನ ಬೋಧಿಸಿದ್ದಾರೆ. ಇದನ್ನೂ ಓದಿ: ಶತ್ರು ಸೇನೆಗಳಿಂದ ರಕ್ಷಣೆಗೆ ಮಾಸ್ಟರ್‌ ಪ್ಲ್ಯಾನ್‌ – ಫೈಟರ್‌ ಜೆಟ್‌ಗಳಿಗೆ ಶೀಘ್ರವೇ ಬರಲಿದೆ ಡಿಜಿಟಲ್‌ ನಕ್ಷೆ

    ಭಾರತದ ಸಂವಿಧಾನದ 180ನೇ ವಿಧಿಯ ಷರತ್ತು (1) ರ ಮೂಲಕ ನೀಡಲಾದ ಅಧಿಕಾರಗಳನ್ನು ಚಲಾಯಿಸುವ ಮೂಲಕ, ತೆಲಂಗಾಣ ರಾಜ್ಯಪಾಲರು ಅಕ್ಬರುದ್ದೀನ್ ಓವೈಸಿ ಅವರನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ (Telangana Assembly Speaker), ಆಗಿ ನೇಮಿಸಿದ್ದಾರೆ. ಚುನಾಯಿತ ಸದಸ್ಯರಲ್ಲಿ ಒಬ್ಬರನ್ನು ಸ್ಪೀಕರ್‌ ಆಗಿ‌ ನೇಮಿಸುವವರೆಗೆ ಅಕ್ಬರುದ್ದೀನ್‌ ಸ್ಪೀಕರ್‌ ಆಗಿ ಅಧಿವೇಶನ ನಿರ್ವಹಿಸಲಿದ್ದಾರೆ. ಇದನ್ನೂ ಓದಿ: ಐಸಿಸ್‌ ಉಗ್ರರೊಂದಿಗೆ ನಂಟು; ಬೆಂಗಳೂರು ಸೇರಿ ದೇಶದ ಹಲವೆಡೆ NIA ದಾಳಿ

    ಇತ್ತೀಚೆಗಷ್ಟೇ ಮುಕ್ತಾಯಗೊಂಡ ತೆಲಂಗಾಣ ಚುನಾವಣೆಯಲ್ಲಿ 119 ಸ್ಥಾನಗಳ ಪೈಕಿ ಕಾಂಗ್ರೆಸ್‌ 64 ಸ್ಥಾನಗಳನ್ನು ಗಳಿಸುವ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಆಡಳಿತಾರೂಢವಾಗಿದ್ದ ಭಾರತ್‌ ರಾಷ್ಟ್ರ ಸಮಿತಿ 39 ಹಾಗೂ ಬಿಜೆಪಿ 8 ಸ್ಥಾನಗಳನ್ನ ಪಡೆದುಕೊಂಡಿದೆ. ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿ (TPCC) ಅಧ್ಯಕ್ಷರಾಗಿದ್ದ ರೇವಂತ್ ರೆಡ್ಡಿ ಅವರು ತೆಲಂಗಾಣ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಮೂಲಕ ದೇಶದಲ್ಲಿ ಅತ್ಯಂತ ಕಿರಿಯ ವಯಸ್ಸಿಗೆ ಸಿಎಂ ಹುದ್ದೆ ಅಲಂಕರಿಸಿದ ಖ್ಯಾತಿ ಗಳಿಸಿದ್ದಾರೆ.

  • 8 ಬಾರಿ ಶಾಸಕ, ಸತೀಶ್ ಮಹಾನ್ ಮುಂದಿನ ಯುಪಿ ಸ್ಪೀಕರ್‌?

    8 ಬಾರಿ ಶಾಸಕ, ಸತೀಶ್ ಮಹಾನ್ ಮುಂದಿನ ಯುಪಿ ಸ್ಪೀಕರ್‌?

    ಲಕ್ನೋ: ಉತ್ತರ ಪ್ರದೇಶ ವಿಧಾನಸಭೆಯ ಹೊಸ ಸ್ಪೀಕರ್ ಆಗಿ ಬಿಜೆಪಿ ನಾಯಕ ಮತ್ತು ಎಂಟು ಬಾರಿ ಶಾಸಕರಾಗಿರುವ ಸತೀಶ್ ಮಹಾನಾ ಅವರು ಆಯ್ಕೆಯಾಗುವ ಸಾಧ್ಯತೆಯಿದೆ.

    ಶುಕ್ರವಾರ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಎರಡನೇ ಬಾರಿ ಯೋಗಿ ಆದಿತ್ಯನಾಥ್ ಅವರು ಪ್ರಮಾಣ ವಚನ ಸ್ವೀಕರಿಸಿದರು. ಆದರೆ ಈ ಸಮಾರಂಭದಲ್ಲಿ ನೂತನ ಸಂಪುಟದಲ್ಲಿ ಸತೀಶ್ ಮಹಾನಾ ಅವರನ್ನು ಸಚಿವರನ್ನಾಗಿ ಮಾಡಿಲ್ಲ. ಇದನ್ನೂ ಓದಿ: 2ನೇ ಬಾರಿ ಸಿಎಂ ಆಗಿ ‘ಬುಲ್ಡೋಜರ್ ಬಾಬಾ’ ಚುಕ್ಕಾಣಿ – ಮೋದಿ, ಬಿಜೆಪಿ ಸಿಎಂಗಳ ಸಮ್ಮುಖದಲ್ಲಿ ಪ್ರಮಾಣವಚನ

    ಹೊಸದಾಗಿ ಆಯ್ಕೆಯಾಗಿರುವ ಶಾಸಕರಿಗೆ ಮಾರ್ಚ್ 28-29 ರಂದು ಪ್ರಮಾಣ ವಚನ ಬೋಧಿಸಲಿದ್ದಾರೆ. ನಂತರ ಮಾರ್ಚ್ 30 ರಂದು ವಿಧಾನಸಭೆಯಲ್ಲಿ ಸತೀಶ್ ಮಹಾನಾ ಅವರನ್ನು ಹೊಸ ಸ್ಪೀಕರ್ ಎಂದು ಘೋಷಿಸಬಹುದು. ಯೋಗಿ ಆದಿತ್ಯನಾಥ್ ಅವರ ಮೊದಲ ಸಂಪುಟದಲ್ಲಿ ಸತೀಶ್ ಮಹಾನಾ ಅವರು ಕೈಗಾರಿಕಾ ಅಭಿವೃದ್ಧಿ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಇದನ್ನೂ ಓದಿ: ಮೂರ್ಖರು, ಹುಚ್ಚರು, ಬುದ್ಧಿಇಲ್ಲದವರಿಗೆ ಉತ್ತರಿಸಬಾರದು – ಕೇಜ್ರಿವಾಲ್‍ಗೆ ಅಗ್ನಿಹೋತ್ರಿ ಪರೋಕ್ಷ ಟಾಂಗ್

    ಶುಕ್ರವಾರ ಲಕ್ನೋದ ಏಕನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಯೋಗಿ ಆದಿತ್ಯನಾಥ್ ಅವರು ಉತ್ತರ ಪ್ರದೇಶದಲ್ಲಿ 2ನೇ ಬಾರಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಇವರೊಂದಿಗೆ 52 ಶಾಸಕರು ಕೂಡ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಜೆ.ಪಿ.ನಡ್ಡಾ, ಅಮಿತ್ ಶಾ ಪಾಲ್ಗೊಂಡಿದ್ದರು. ಇವರೊಂದಿಗೆ ವಿವಿಧ ರಾಜ್ಯಗಳ ಬಿಜೆಪಿ ಸಿಎಂಗಳೂ ಸಮಾರಂಭಕ್ಕೆ ಸಾಕ್ಷಿಯಾಗಿದ್ದರು. ಕರ್ನಾಟಕದ ಸಿಎಂ ಬಸವರಾಜ ಬೊಮ್ಮಾಯಿ, ಉದ್ಯಮಿಗಳು, ಬಾಲಿವುಡ್ ನಟ, ನಟಿಯರು ಭಾಗವಹಿಸಿದ್ದರು.