Tag: ವಿಧಾನ ಪರಿಷತ್ ಸದಸ್ಯ

  • MLC Nomination | ಮೇಲ್ಮನೆ ಸದಸ್ಯರಾಗಿ ರಮೇಶ್‌ಬಾಬು, ಆರತಿ ಕೃಷ್ಣ ಸೇರಿ ನಾಲ್ವರು ನಾಮನಿರ್ದೇಶನ

    MLC Nomination | ಮೇಲ್ಮನೆ ಸದಸ್ಯರಾಗಿ ರಮೇಶ್‌ಬಾಬು, ಆರತಿ ಕೃಷ್ಣ ಸೇರಿ ನಾಲ್ವರು ನಾಮನಿರ್ದೇಶನ

    ಬೆಂಗಳೂರು: ವಿಧಾನ ಪರಿಷತ್‌ನಲ್ಲಿ (Legislative Council) ಹಲವು ತಿಂಗಳಿಂದ ಖಾಲಿ ಇದ್ದ ಸ್ಥಾನಗಳಿಗೆ ನಾಲ್ವರನ್ನು ನಾಮನಿರ್ದೇಶನ (MLC Nomination) ಮಾಡಿ ರಾಜ್ಯ ಸರ್ಕಾರ ಭಾನುವಾರ (ಇಂದು) ಅಧಿಕೃತ ಆದೇಶ ಹೊರಡಿಸಿದೆ. ನಾಲ್ಕು ಎಂಎಲ್‌ಸಿ ಸ್ಥಾನಗಳ ನಾಮನಿರ್ದೇಶನ ಅನುಮೋದಿಸಿ ರಾಜ್ಯಪಾಲರು (Governor) ಅಂಕಿತ ಹಾಕಿದ್ದಾರೆ.

    ಕೆಪಿಸಿಸಿ ಸಂವಹನ ಮತ್ತು ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು (Ramesh Babu), ಅನಿವಾಸಿ ಭಾರತೀಯ ಸಮಿತಿಯ ಉಪಾಧ್ಯಕ್ಷೆ ಡಾ.ಆರತಿ ಕೃಷ್ಣ (Aarthi Krishna), ಹಿರಿಯ ಪತ್ರಕರ್ತ ಕೆ.ಶಿವಕುಮಾರ್‌ (K Shivakumar) ಮತ್ತು ದಲಿತ ಮುಖಂಡ ಎಫ್‌.ಹೆಚ್‌ ಜಕ್ಕಪ್ಪನವರ್ ಅವರನ್ನ ನಾಮ ನಿರ್ದೇಶನ ಮಾಡಲಾಗಿದೆ. ಇದನ್ನೂ ಓದಿ: ರೋಹಿತ್‌ ಬಳಿಕ 25 ವರ್ಷದ ಗಿಲ್‌ ಟೀಂ ಇಂಡಿಯಾಕ್ಕೆ ಕ್ಯಾಪ್ಟನ್‌?

    ಮೂವರು 6 ವರ್ಷಗಳ ಅವಧಿಗೆ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಆದ್ರೆ ರಮೇಶ್‌ ಬಾಬು ಅವರ ಅಧಿಕಾರ ಅವಧಿ 2026ರ ಜುಲೈ 21ರ ವರೆಗೆ ಮಾತ್ರ ಇರಲಿದೆ. ಇದನ್ನೂ ಓದಿ: ಪ್ರತಾಪ್ ಸಿಂಹನನ್ನ ಬಿಜೆಪಿ ಕಿತ್ತು ಬಿಸಾಕಿದೆ, ಬದುಕಿದ್ದೀನಿ ಅಂತ ತೋರಿಸಿಕೊಳ್ಳೋಕೆ ಪ್ರಯತ್ನ: ಡಿಕೆಶಿ ಟಾಂಗ್

    ಸರ್ಕಾರದಿಂದ ನಾಮನಿರ್ದೇಶನಗೊಂಡಿದ್ದ ಕಾಂಗ್ರೆಸ್‌ ಯು.ಬಿ. ವೆಂಕಟೇಶ್ ಮತ್ತು ಪ್ರಕಾಶ್ ಕೆ. ರಾಥೋಡ್ ಅವರ ಅವಧಿ 2024ರ ಅಕ್ಟೋಬರ್‌ನಲ್ಲಿ ಮತ್ತು ಜೆಡಿಎಸ್‌ನ ಕೆ.ಎ ತಿಪ್ಪೇಸ್ವಾಮಿ ಅವರ ಅವಧಿ 2025ರ ಜನವರಿ ವೇಳೆಗೆ ಮುಕ್ತಾಯಗೊಂಡಿತ್ತು. ಉಪ ಚುನಾವಣೆಯಲ್ಲಿ ಸ್ಪರ್ಧಿಸುವ ಉದ್ದೇಶದಿಂದ ಸಿ.ಪಿ. ಯೋಗೇಶ್ವ‌ರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಸ್ಥಾನಗಳು ಖಾಲಿಯಾಗಿದ್ದವು. 7 ತಿಂಗಳ ಹಗ್ಗ ಜಗ್ಗಾಟದ ಬಳಿಕ ಸರ್ಕಾರ ನಾಮ ನಿರ್ದೇಶನ ಮಾಡಿ ಅಧಿಕೃತ ಆದೇಶ ಹೊರಡಿಸಿದೆ. ಇದನ್ನೂ ಓದಿ: ಬ್ಯಾಲೆಟ್ ಪೇಪರ್ = ಬೋಗಸ್ ವೋಟಿಂಗ್; ಬ್ಯಾಲೆಟ್ ಪೇಪರ್ = ಬೂತ್ ಕ್ಯಾಪ್ಚರಿಂಗ್: ಅಶೋಕ್ ಟೀಕೆ

  • ವಿಧಾನ ಪರಿಷತ್ ಮಾಜಿ ಸದಸ್ಯ ಹೆಚ್. ಹೊನ್ನಪ್ಪ ವಿಧಿವಶ

    ವಿಧಾನ ಪರಿಷತ್ ಮಾಜಿ ಸದಸ್ಯ ಹೆಚ್. ಹೊನ್ನಪ್ಪ ವಿಧಿವಶ

    ಮಂಡ್ಯ: ವಿಧಾನ ಪರಿಷತ್ (Vidhana Parishad) ಮಾಜಿ ಸದಸ್ಯ ಹೆಚ್.ಹೊನ್ನಪ್ಪ (H Honnappa) ವಿಧಿವಶರಾಗಿದ್ದಾರೆ.

    ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರು ಇಂದು ಬೆಳಗ್ಗಿನ ಜಾವ ನಿಧನರಾಗಿದ್ದಾರೆ. ಮಂಡ್ಯ (Mandya) ತಾಲೂಕಿನ ಇಂಡುವಾಳು ಗ್ರಾಮದವರಾದ ಹೊನ್ನಪ್ಪ 1998ರಲ್ಲಿ ಜೆಡಿಎಸ್‍ನಿಂದ ಸ್ಥಳೀಯ ಸಂಸ್ಥೆಗಳ ಮೂಲಕ ವಿಧಾನಪರಿಷತ್ ಗೆ ಆಯ್ಕೆಯಾಗಿದ್ದರು.

    1998 ರಿಂದ 2004ರ ವರೆಗೆ ಎಂಎಲ್‍ಸಿ ಆಗಿ ಕರ್ತವ್ಯವನ್ನು ನಿರ್ವಹಿಸಿದ್ದರು. ಬಳಿಕ ಜೆಡಿಎಸ್ ತೊರೆದು ಬಿಜೆಪಿ ಸೇರಿದ್ದ ಮಾಜಿ ಎಂಎಲ್‍ಸಿ ಹೊನ್ನಪ್ಪ ಬಿಜೆಪಿ (BJP) ಜಿಲ್ಲಾಧ್ಯಕ್ಷರಾಗಿಯೂ ಕರ್ತವ್ಯ ನಿರ್ವಹಿಸಿದ್ದರು. ಇದನ್ನೂ ಓದಿ: ಹುಡುಗಿಯರನ್ನು ಚುಡಾಯಿಸಿಬೇಡ ಎಂದಿದ್ದಕ್ಕೆ ಅಪಹರಿಸಿ ಹತ್ಯೆ

    ಇಂದು ಸಂಜೆ 4 ಗಂಟೆಗೆ ತಮ್ಮ ಹುಟ್ಟೂರಾದ ಇಂಡುವಾಳು ಗ್ರಾಮದಲ್ಲಿ ಅವರ ಅಂತ್ಯ ಸಂಸ್ಕಾರ ನಡೆಯಲಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಪ್ರಸಾದವೆಂದು ಬಲವಂತವಾಗಿ ಎಂಜಲು ತಿನ್ನಿಸಿದರು: ವಿನಯ್ ಗುರೂಜಿ ಮೇಲೆ ಕೈ ನಾಯಕ ಗರಂ

    ಪ್ರಸಾದವೆಂದು ಬಲವಂತವಾಗಿ ಎಂಜಲು ತಿನ್ನಿಸಿದರು: ವಿನಯ್ ಗುರೂಜಿ ಮೇಲೆ ಕೈ ನಾಯಕ ಗರಂ

    ಬೆಂಗಳೂರು: ಪ್ರಸಾದ ಎಂದು ವಿತರಿಸಿ ಬಲವಂತವಾಗಿ ಎಂಜಲು ತಿನ್ನುವಂತೆ ಮಾಡಿದರು ಎಂದು ಅವಧೂತ ವಿನಯ್ ಗುರೂಜಿ ವಿರುದ್ಧ ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ರಘು ಆಚಾರ್ ಗರಂ ಆಗಿದ್ದಾರೆ.

    ಈ ವಿಚಾರವಾಗಿ ಫೇಸ್‍ಬುಕ್‍ನಲ್ಲಿ ಪೋಸ್ಟ್ ಹಾಕಿರುವ ರಘು ಆಚಾರ್, ಅಭಿಮಾನಿಗಳಿಂದ ಅವಧೂತರೆನಿಸಿಕೊಂಡಿರುವ ವಿನಯ್ ಗುರೂಜಿ ಗೌರಿಗದ್ದೆ ನಿಮಗೊಂದು ಬಹಿರಂಗ ಬಿನ್ನಹ. ಇಷ್ಟಕ್ಕೂ ಇಂತಹದೊಂದು ಬಹಿರಂಗ ಬಿನ್ನಹ ಬರೆಯಲು ಪ್ರಚೋದಿಸಿದ್ದು, ಸೋಮವಾರ ಶಿವಮೊಗ್ಗದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ನಿಮ್ಮ ಹಾಗೂ ನಿಮ್ಮ ಶಿಷ್ಯರ ನಡವಳಿಕೆ ಎಂದು ದೂರಿದ್ದಾರೆ.

    https://www.facebook.com/RaghuAcharG/posts/135567878217937

    ಪತ್ರದಲ್ಲಿ ಏನಿದೆ?
    ಭೂತ ಭವಿಷ್ಯ ಬಲ್ಲ ನಿಮಗೆ ಗೊತ್ತಿರುವಂತೆಯೇ ಇಡೀ ಜಗತ್ತನ್ನು ಇಂದು ಕೊರೊನಾ ಎಂಬ ಮಹಾಮಾರಿ ಬೆಂಬಿಡದೆ ಕಾಡುತ್ತಿದೆ.

    ಇಂತಹ ಮಹಾಮಾರಿಯಿಂದ ವೈಯಕ್ತಿಕವಾಗಿ ನಮ್ಮನ್ನು ಹಾಗೂ ನಮ್ಮ ಸುತ್ತಮುತ್ತಲೂ ಇರುವವರನ್ನು ರಕ್ಷಿಸಲು ವಿಶ್ವ ಆರೋಗ್ಯ ಸಂಸ್ಥೆ ಹಾಗೂ ನಮ್ಮ ದೇಶದ ಸರ್ಕಾರಗಳು ಕೆಲವೊಂದು ಸಾರ್ವಜನಿಕ ನಡವಳಿಕೆಯನ್ನು ನಿಯಮದಂತೆ ವಿಧಿಸಿವೆ. ಅದರಲ್ಲಿ ಮುಖ್ಯವಾದವು ನಮ್ಮ ಉಸಿರು ಅನ್ಯರಿಗೆ ತಗುಲದಂತೆ ಮಾಸ್ಕ್ ಧರಿಸುವುದು ಹಾಗೂ ನಮ್ಮ ಉಗುಳು ಅನ್ಯರಿಗೆ ತಾಗದಂತೆ ವರ್ತಿಸುವುದು. ಶಿವಮೊಗ್ಗದ ಕಾರ್ಯಕ್ರಮದಲ್ಲಿ ಮಹಾಮಹೀಮರಾದ ತಮ್ಮಿಂದ ಹಾಗೂ ತಮ್ಮ ಶಿಷ್ಯರಿಂದ ಈ ಎರಡು ನಿಯಮಗಳ ಬಹಿರಂಗ ಉಲ್ಲಂಘನೆಗೊಂಡು ನಿಜಕ್ಕೂ ಅಚ್ಚರಿ ಹಾಗೂ ಗಾಬರಿ ಮೂಡಿತು.

    ನೀವು ಮಾಸ್ಕ್ ತೊಡದೆ ಎಲ್ಲರೊಂದಿಗೆ ಆತ್ಮೀಯವಾಗಿ ವರ್ತಿಸುತ್ತಿದ್ದಿರಿ. ಆಶೀರ್ವಾದ ಮಾಡುತ್ತಿದ್ದಿರಿ. ಮದುವೆಯ ಊಟ ಮಾಡಿದ ನಂತರ ತಾವು ತಿಂದುಂಡು ಬಿಟ್ಟ ಆಹಾರವನ್ನು ನಿಮ್ಮ ಶಿಷ್ಯರೂ ಎಲ್ಲರಿಗೂ ಪ್ರಸಾದ ಎಂದು ವಿತರಿಸಿ ಬಲವಂತವಾಗಿ ಎಂಜಲು ತಿನ್ನುವಂತೆ ಮಾಡಿದರು. ಗೌರವ, ನಂಬಿಕೆ, ಭಕ್ತಿ ಇವೆಲ್ಲ ಇರಲಿ, ಇರಬೇಕು. ಒಪ್ಪುತ್ತೇನೆ. ಆದರೆ ಕೊರೊನಾದಂತಹ ಮಾರಕ ಸನ್ನಿವೇಶದಲ್ಲಿ ಇಂತಹದೊಂದು ನಡವಳಿಕೆಯನ್ನು ನಿಮ್ಮ ಹಾಗೂ ನಿಮ್ಮ ಶಿಷ್ಯರಿಂದ ಕಂಡು ನನಗೆ ನಂಬಿಕೆಯೇ ಬರಲಿಲ್ಲ.

    ನಿಮ್ಮ ಶಿಷ್ಯರ ನಡವಳಿಕೆ ನಿಮ್ಮ ಗಮನಕ್ಕೆ ಬರದೇ ಈ ಅಚಾತುರ್ಯ ನಡೆಯುತ್ತಿರಬಹುದು ಎಂದು ಭಾವಿಸಿ ಈ ಬಗ್ಗೆ ವಿಚಾರಿಸಿದೆ. ಆಗ ಇದು ನಿಮ್ಮ ಗಮನಕ್ಕೆ ಬಂದೇ ನಡೆಯುತ್ತಿದೆ ಎಂದು ಕೇಳಿಪಟ್ಟೆ. ಇದು ನಿಜಕ್ಕೂ ಆಘಾತ ತರುವಂತಹ ವಿಚಾರ. ಕೊರೊನಾ ಕಾಲದಲ್ಲಿ ನಿಮ್ಮಿಂದ ಇಂತಹ ನಡವಳಿಕೆಯನ್ನು ನಾನು ನಿರೀಕ್ಷಿಸಿರಲಿಲ್ಲ. ನಿಮ್ಮ ಬಗ್ಗೆ ಅಪಾರ ಗೌರವ ಹೊಂದಿದ್ದರೂ ಜನರ ಜೀವಕ್ಕೆ ಅಪಾಯ ತರುವಂತಹ ಆ ಬೇಜವಾಬ್ದಾರಿ ನಡವಳಿಕೆಯನ್ನು ಖಂಡಿಸದೆ ನನಗೆ ಬೇರೆ ವಿಧಿಯಿಲ್ಲ.

    ದಯಮಾಡಿ ಈ ವರ್ತನೆಯನ್ನು ಬದಲಾಯಿಸಿಕೊಳ್ಳಿ. ತನ್ಮೂಲಕ ನೀವು ಕೊಟ್ಟಿದ್ದನ್ನು ಪ್ರಸಾದ ಎಂದು ಭಾವಿಸುವ ಜನರ ಜೀವದೊಂದಿಗೆ ಚೆಲ್ಲಾಟ ಆಡುವುದನ್ನು ಇನ್ನಾದರೂ ನಿಲ್ಲಿಸುವಂತೆ ಕೋರುತ್ತೇನೆ ಎಂದು ರಘು ಆಚಾರ್ ಬಹಿರಂಗ ಪತ್ರವನ್ನು ಬರೆದಿದ್ದಾರೆ.

  • ಸಂಕಷ್ಟದಲ್ಲಿದ್ದ ರೈತನ ಮನೆಗೆ ತೆರಳಿ, ಹೊಲ ಉತ್ತು ನೆರವು ನೀಡಿದ ಎಂಎಲ್‍ಸಿ ಗೋಪಾಲಸ್ವಾಮಿ

    ಸಂಕಷ್ಟದಲ್ಲಿದ್ದ ರೈತನ ಮನೆಗೆ ತೆರಳಿ, ಹೊಲ ಉತ್ತು ನೆರವು ನೀಡಿದ ಎಂಎಲ್‍ಸಿ ಗೋಪಾಲಸ್ವಾಮಿ

    ಹಾಸನ: ವಿಧಾನ ಪರಿಷತ್ ಸದಸ್ಯ ಗೋಪಾಲಸ್ವಾಮಿ ಅವರು ಸಂಕಷ್ಟದಲ್ಲಿದ್ದ ರೈತನ ಮನೆಗೆ ತೆರಳಿ ಹೊಲ ಉತ್ತು ನೆರವು ನೀಡಿ, ಮಾನವೀಯತೆ ಮೆರೆದಿದ್ದಾರೆ.

    ಚನ್ನರಾಯಪಟ್ಟಣ ತಾಲೂಕಿನ ದಡದಳ್ಳಿ ಗ್ರಾಮದಲ್ಲಿ ಈ ಪ್ರಸಂಗ ನಡೆದಿದೆ. ಮೇವಿಲ್ಲದೆ ಸಾಯುತ್ತಿದ್ದ ಮೇಕೆಗಳನ್ನು ನೋಡಿ ಕಂಗೆಟ್ಟಿದ್ದ ರೈತ ಕುಟುಂಬದ ಬಳಿ ತೆರಳಿದ ಎಂಎಲ್‍ಸಿ ಗೋಪಾಲಸ್ವಾಮಿ ಮೇವಿನ ವ್ಯವಸ್ಥೆ ಮಾಡುವುದರ ಜೊತೆಗೆ ರೈತನ ಹೊಲ ಉಳುವ ಮೂಲಕ ಸಾಂಕೇತಿಕವಾಗಿ ಧೈರ್ಯ ತುಂಬಿದ್ದಾರೆ.

    ದಡದಳ್ಳಿ ಗ್ರಾಮದ ಯುವ ರೈತ ಸಂತೋಷ್ ಮೇಕೆ ಸಾಕಾಣಿಕೆ ಮೂಲಕ ಬದುಕುಕಟ್ಟಿಕೊಂಡಿದ್ದರು. ಹೆಚ್ಚುವರಿ ಮೇಕೆ ಸಾಕಾಣಿಕೆ ಮಾಡುವ ಉದ್ದೇಶದಿಂದ 100 ಮೇಕೆಗಳನ್ನು ತರಲು ರೈತ ಸಂತೋಷ್ ರಾಜಸ್ಥಾನಕ್ಕೆ ತೆರಳಿದ್ದರು. ಮೇಕೆ ಕೊಂಡುಕೊಂಡು ವಾಪಸ್ ಬರಲು ಸಿದ್ಧತೆ ನಡೆಸಿದ್ದಾಗ ದೇಶಾದ್ಯಂತ ಲಾಕ್‍ಡೌನ್‍ನಿಂದ ಸಂತೋಷ್ ಮೇಕೆಗಳ ಜೊತೆ ರಾಜಸ್ಥಾನದಲ್ಲೇ ಲಾಕ್ ಆಗಿದ್ದಾರೆ. ಇದೀಗ ಪ್ರತಿದಿನ ರಾಜಸ್ಥಾನದಲ್ಲಿ ಸಾವಿರಾರು ರೂಪಾಯಿ ಖರ್ಚು ಮಾಡುತ್ತ ಮೇಕೆ ಸಾಕಲಾಗದೆ ರೈತ ಸಂತೋಷ್ ಪರಿತಪಿಸುತ್ತಿದ್ದಾರೆ.

    ಇತ್ತ ಸಂತೋಷ್ ಸ್ವಗ್ರಾಮ ದಡದಳ್ಳಿಯಲ್ಲಿ ಸಾಕಿದ್ದ ಮೇಕೆಗಳೂ ಮೇವಿಲ್ಲದೆ ಸಾವನ್ನಪ್ಪುತ್ತಿದ್ದು, ಮಗನಿಲ್ಲದ ವೇಳೆ ಮೇಕೆ ಸಾವಿನಿಂದ ಪೋಷಕರು ಕಂಗಾಲಾಗಿದ್ದರು. ವಿಷ್ಯ ತಿಳಿದ ಎಂಎಲ್‍ಸಿ ಗೋಪಾಲಸ್ವಾಮಿ ದಡದಳ್ಳಿ ಗ್ರಾಮಕ್ಕೆ ತೆರಳಿ ಮೇಕೆಗಳಿಗೆ ಮೇವಿನ ವ್ಯವಸ್ಥೆ ಮಾಡಿದ್ದಾರೆ. ಜೊತೆಗೆ ಸಾಂಕೇತಿಕವಾಗಿ ರೈತರ ಹೊಲ ಉತ್ತು, ಜೋಳದ ಬೀಜ ಬಿತ್ತಿ ರೈತನ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.

  • ಕೊರೊನಾ ಭೀತಿ- ಸ್ವತಃ ಆದೇಶ ಹೊರಡಿಸಿ ಅದ್ದೂರಿ ಮದ್ವೆಯಲ್ಲಿ ಸಿಎಂ ಭಾಗಿ

    ಕೊರೊನಾ ಭೀತಿ- ಸ್ವತಃ ಆದೇಶ ಹೊರಡಿಸಿ ಅದ್ದೂರಿ ಮದ್ವೆಯಲ್ಲಿ ಸಿಎಂ ಭಾಗಿ

    – ರಾಜ್ಯದಲ್ಲಿ ಕೊರೊನಾ ಭೀತಿ ಇದ್ದರೂ ಅದ್ದೂರಿ ಮದುವೆ
    – ಎಂಎಲ್‍ಸಿ ಕವಟಗಿಮಠ ಮಗಳ ಮದುವೆಯಲ್ಲಿ ಗಣ್ಯಾತಿಗಣ್ಯರು ಭಾಗಿ

    ಬೆಳಗಾವಿ: ರಾಜ್ಯಾದ್ಯಂತ ಅದ್ದೂರಿ ಮದುವೆಗೆ ಬ್ರೇಕ್ ಹಾಕಿದ್ದು ನೂರಕ್ಕೂ ಹೆಚ್ಚು ಜನ ಒಂದೆಡೆ ಸೇರಬಾರದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆದೇಶ ಹೊರಡಿಸಿದ್ದರು. ಆದರೆ ಇದೆಲ್ಲವನ್ನೂ ಗಾಳಿಗೆ ತೂರಿದ ಸರ್ಕಾರದ ಮುಖ್ಯ ಸಚೇತಕ, ವಿಧಾನ ಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ ಅವರು ಮಗಳ ಮದುವೆಯನ್ನು ಅದ್ದೂರಿಯಾಗಿ ಮಾಡಿದ್ದಾರೆ.

    ಅಷ್ಟೇ ಅಲ್ಲದೆ ಈ ಮದುವೆಯಲ್ಲಿ ಸಚಿವರು, ಮಾಜಿ ಶಾಸಕರು ಗಣ್ಯಾತಿಗಣ್ಯರು ಸೇರಿದಂತೆ ಸಿಎಂ ಯಡಿಯೂರಪ್ಪ ಅವರು ಕೂಡ ಭಾಗವಹಿಸಿ ನವ ದಂಪತಿಗಳಿಗೆ ಆಶೀರ್ವಾದ ಮಾಡಿದ್ದಾರೆ. ಆದರೆ ಬಡವರಿಗೊಂದು ನ್ಯಾಯ ಶ್ರೀಮಂತರಿಗೊಂದು ನ್ಯಾಯ. ಸರ್ಕಾರದ ಮುಖ್ಯ ಸಚೇತಕರೇ ಸಿಎಂ ಆದೇಶವನ್ನು ಗಾಳಿಗೆ ತೂರಿದ್ದಾರೆ. ಹಾಗಾದರೆ ಸಿಎಂ ಆದೇಶ ಸರ್ಕಾರದ ಮುಖ್ಯ ಸಚೇತಕ ಮಹಾಂತೇಶ್ ಕವಟಗಿಮಠ ಮಗಳ ಮದುವೆಗೆ ಅನ್ವಯವಾಗುದಿಲ್ವಾ ಎಂಬ ಪ್ರಶ್ನೆ ಸಾರ್ವಜನಕರಿಂದ ಕೇಳಿ ಬರುತ್ತಿದೆ.

    ಬೆಳಗಾವಿಯ ಉದ್ಯಮ್ ಬಾಗ್‍ನಲ್ಲಿರುವ ಶಗುನ್ ಗಾರ್ಡನ್‍ನಲ್ಲಿ ಮಹಾಂತೇಶ್ ಕವಟಗಿಮಠ ಮಗಳ ಮದುವೆ ನಡೆಯಿತು. ಈ ಮದುವೆಗೆ ಸುಮಾರು ಐದು ಸಾವಿರಕ್ಕೂ ಅಧಿಕ ಜನ ಮದುವೆಗೆ ಆಗಮಿಸಿದ್ದರು. ಅದ್ದೂರಿ ಮದುವೆ ತಡೆಯಲು ಅಧಿಕಾರಿಗಳ ಮಿನಾಮೇಷ ತೋರಿದರು. ಜೊತೆಗೆ ಜಿಲ್ಲಾಡಳಿತ ಹಾಗೂ ಪೊಲೀಸರು ಶ್ರೀರಕ್ಷೆ ಒದಗಿಸಿದ್ದರು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

    ಜನಪ್ರತಿನಿಧಿಗಳು:
    ಅದ್ದೂರಿ ಮದುವೆ ನಡೆಸದಂತೆ ಆದೇಶ ಹೊರಡಿಸಿದ್ದ ಸಿಎಂ ಯಡಿಯೂರಪ್ಪ ಅವರ ಆದಿಯಾಗಿ ಜನಪ್ರತಿನಿಧಿಗಳಾದ ಕೇಂದ್ರ ಸಚಿವ ಸುರೇಶ್ ಅಂಗಡಿ, ಸಚಿವ ಶ್ರೀಮಂತ ಪಾಟೀಲ್, ಸಚಿವೆ ಶಶಿಕಲಾ ಜೊಲ್ಲೆ, ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ರಾಜ್ಯಸಭಾ ಸದಸ್ಯ ಪ್ರಭಾಕರ್ ಕೋರೆ ಮದುವೆಗೆ ಆಗಮಿಸಿದ್ದರು. ಜೊತೆಗೆ ಕಾಶಿ ಜಗದ್ಗುರುಗಳಾದ ಚೆನ್ನಸಿದ್ದರಾಮ ಪಂಡಿತರಾದ್ಯೆ ಶಿವಾಚಾರ್ಯ ಸ್ವಾಮೀಜಿ, ಗದಗದ ತೋಂಟದಾರ್ಯ ಮಠದ ಸಿದ್ದರಾಮ ಸ್ವಾಮೀಜಿ, ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಸೇರಿದಂತೆ ಹಲವು ಮಠಾಧೀಶರು ಭಾಗಿಯಾಗಿದ್ದರು.

  • ಬಿಜೆಪಿಯವ್ರು ನಪುಂಸಕರು, ನಾವು ಹುಟ್ಟಿಸಿದ ಮಕ್ಕಳನ್ನ ಕರ್ಕೊಂಡು ಹೋದ್ರು: ಸಿಎಂ ಇಬ್ರಾಹಿಂ

    ಬಿಜೆಪಿಯವ್ರು ನಪುಂಸಕರು, ನಾವು ಹುಟ್ಟಿಸಿದ ಮಕ್ಕಳನ್ನ ಕರ್ಕೊಂಡು ಹೋದ್ರು: ಸಿಎಂ ಇಬ್ರಾಹಿಂ

    ಬೆಂಗಳೂರು: ಬಿಜೆಪಿಯವರು ನಪುಂಸಕರು. ನಾವು ಹುಟ್ಟಿಸಿದ ಮಕ್ಕಳನ್ನು ಕರೆದುಕೊಂಡು ಹೋದರು ಎಂದು ವಿಧಾನ ಪರಿಷತ್ ಸದಸ್ಯ ಸಿಎಂ ಇಬ್ರಾಹಿಂ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

    ನಗರದಲ್ಲಿ ಮಾತನಾಡಿದ ಅವರು, ಬಿಜೆಪಿಯವರು ನಮ್ಮ 17 ಜನ ಮಕ್ಕಳನ್ನು ಮುಂಬೈಗೆ ಕರೆದುಕೊಂಡು ಹೋಗಿ ಇಟ್ಟಿದ್ದರು. ಈಗ ಅವರೆಲ್ಲ ಬೀದಿ ಪಾಲು ಮಾಡಿದ್ದಾರೆ. ಅವರ ಪರಿಸ್ಥಿತಿ ಅರ್ಹರೂ ಅಲ್ಲ, ಅನರ್ಹರೂ ಅಲ್ಲ ಎನ್ನುವಂತಾಗಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮೇಯರ್ ಆಯ್ಕೆ ಮಾಡಲು ಆಗುತ್ತಿಲ್ಲ. ಅಷ್ಟೇ ಯಾಕೆ ಕೇಂದ್ರ ಸರ್ಕಾರದಿಂದ ಕೇವಲ 10 ರೂ. ನೆರೆ ಪರಿಹಾರ ತರಲಿಕ್ಕೆ ಆಗುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.

    ರಾಜ್ಯದಲ್ಲಿ 25 ಜನ ಬಿಜೆಪಿ ಸಂಸದರು ಇದ್ದಾರೆ. ಹಾಗಿದ್ದರೂ ಕೇಂದ್ರ ಸರ್ಕಾರದಿಂದ ನೆರೆ ಪರಿಹಾರ ತರುವುದಕ್ಕೆ ಆಗುತ್ತಿಲ್ಲ. ಕರ್ನಾಟಕದ ಮಾನವನ್ನು ದೆಹಲಿಯಲ್ಲಿ ಹರಾಜು ಹಾಕಿದರು. ನಾಚಿಕೆ ಆಗಬೇಕು ಬಿಜೆಪಿಯವರಿಗೆ ಎಂದು ಕಿಡಿಕಾರಿದರು.

    ಕೇಂದ್ರ ಸರ್ಕಾರದ ಖಜಾನೆ ಖಾಲಿಯಾಗಿದೆ. ಆರ್‌ಬಿಐ ನಿಂದ ಇತ್ತೀಚೆಗಷ್ಟೇ 30 ಸಾವಿರ ಕೋಟಿ ರೂ.ಯನ್ನು ಪಡೆದಿದ್ದಾರೆ. ಬಿಜೆಪಿ ಹಿರಿಯ ಮುಖಂಡ ಸುಬ್ರಮಣಿಯನ್ ಸ್ವಾಮಿ ಅವರು, 2019ರ ಮಾರ್ಚ್ ಕಳೆದ ಮೇಲೆ ಜನ ಬೀದಿಗೆ ಬರುತ್ತಾರೆ ಎಂದು ಹೇಳಿದ್ದರು. ಅದರಂತೆ ಈಗ ಡಾಲರ್ ಮುಂದೆ ರೂಪಾಯಿ ಮೌಲ್ಯ ಕುಸಿಯುತ್ತಿದ್ದೆ. ಪೆಟ್ರೋಲ್ ಹಾಗೂ ಡೀಸೆಲ್ ದರ ಹೆಚ್ಚಾಗುತ್ತಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

  • ಮೊಮ್ಮಕ್ಕಳಿಗೆ ಸ್ಥಾನ ಕೊಟ್ಟು, ಬೇರೆಯವರದ್ದು ಕಿತ್ಕೊಂಡ್ರು: ಎಚ್‍ಡಿಡಿ ವಿರುದ್ಧ ಸಿಎಂ ಲಿಂಗಪ್ಪ ಕಿಡಿ

    ಮೊಮ್ಮಕ್ಕಳಿಗೆ ಸ್ಥಾನ ಕೊಟ್ಟು, ಬೇರೆಯವರದ್ದು ಕಿತ್ಕೊಂಡ್ರು: ಎಚ್‍ಡಿಡಿ ವಿರುದ್ಧ ಸಿಎಂ ಲಿಂಗಪ್ಪ ಕಿಡಿ

    – ಚುನಾವಣೆವರೆಗೂ ಮೈತ್ರಿ ಸರ್ಕಾರದ ಬಗ್ಗೆ ಮಾತನಾಡದಂತೆ ಡಿಕೆಶಿ ಕೈಮುಗಿದ್ರು

    ರಾಮನಗರ: ಇಬ್ಬರು ಮೊಮ್ಮಕ್ಕಳಿಗೆ ಎರಡು ಸ್ಥಾನ ಕೊಟ್ಟಿದ್ದೀರಿ. ಆದರೆ ಈಗ ಬೇರೆಯವರದ್ದನ್ನು ಕಿತ್ತುಕೊಂಡು ತುಮಕೂರಿಗೆ ಬಂದಿದ್ದೀರಲ್ಲ ಇದು ಸರಿಯೇ ಎಂದು ವಿಧಾನ ಪರಿಷತ್ ಸದಸ್ಯ ಸಿ.ಎಂ.ಲಿಂಗಪ್ಪ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರಿಗೆ ಪ್ರಶ್ನಿಸಿದ್ದಾರೆ.

    ನಗರದಲ್ಲಿ ಮಾತನಾಡಿದ ಅವರು, ಹಾಲಿ ಸಂಸದರ ಮೇಲೆ ಆರೋಪಗಳಿದ್ದರೆ ಟಿಕೆಟ್ ನಿರಾಕರಿಸಬಹುದು. ಆದರೆ ಯಾವುದೇ ಆರೋಪಗಳಿಲ್ಲದ ಸಂಸದ ಮುದ್ದಹನುಮೇಗೌಡ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡದೇ ಇರುವುದು ಸರಿಯಲ್ಲ. ಎಲ್ಲರಂತೆ ಅವರು ಕೂಡ ಕ್ರಿಯಾಶೀಲರಾಗಿ ಕೆಲಸ ಮಾಡಿದ್ದಾರೆ. ಯಾಕೆ ಹಾಗೂ ಯಾರಿಗಾಗಿ ಟಿಕೆಟ್ ತಪ್ಪಿಸುತ್ತಿದ್ದಾರೆ ಎಂದು ಪ್ರಶ್ನಿಸಿದರು.

    ಎಚ್.ಡಿ.ದೇವೇಗೌಡರು 2014ರ ಚುನಾವಣೆಯಲ್ಲಿ ಇದು ನನ್ನ ಕಡೆಯ ಚುನಾವಣೆ ಎಂದು ಹೇಳಿದ್ದರು. ಹಾಸನ ಕ್ಷೇತ್ರವನ್ನು ಮೊಮ್ಮಗ ಪ್ರಜ್ವಲ್ ರೇವಣ್ಣನಿಗೆ ನಗು ನಗುತ್ತಾ ಬಿಟ್ಟುಕೊಡಲಿಲ್ಲ. ಕಣ್ಣೀರು ಹಾಕಿದರು. ಸಂಸತ್‍ಗೆ ಎಚ್.ಡಿ.ದೇವೇಗೌಡ ಅವರಿಗಿಂತ ಪ್ರಜ್ವಲ್ ಆಗಲಿ, ನಿಖಿಲ್ ಆಗಲಿ ಅನಿವಾರ್ಯವೇ..? ಯಾಕೆ ಅವರು ಮಂಡ್ಯ ಇಲ್ಲವೇ, ಹಾಸನದಿಂದ ಸ್ಪರ್ಧಿಸಬಾರದು ಎಂದು ತುಮಕೂರು ಕ್ಷೇತ್ರದ ಸ್ಪರ್ಧೆಗೆ ಪರೋಕ್ಷವಾಗಿ ವಿರೋಧ ವ್ಯಕ್ತಪಡಿಸಿದರು.

    ತುಮಕೂರು ಕ್ಷೇತ್ರದಿಂದ ಎಚ್.ಡಿ.ದೇವೇಗೌಡ ಅವರ ಸ್ಪರ್ಧೆಯನ್ನು ನಾವು ಒಪ್ಪಿಕೊಳ್ಳಬೇಕಾ? ಇಲ್ಲವೇ ವಿರೋಧಿಸಬೇಕೇ? ನಾನು ಆತ್ಮವಂಚನೆ ಮಾಡಿಕೊಂಡು ಮಾತನಾಡುವುದಿಲ್ಲ. ರಾಷ್ಟ್ರಮಟ್ಟದ ರಾಜಕಾರಣಕ್ಕೆ ದೇವೇಗೌಡರು ಅನಿವಾರ್ಯ. ಹೀಗಾಗಿ ಒಬ್ಬ ಮೊಮ್ಮಗನಿಗೆ ಅನುಭವ ಬರಲಿ ಎಂದು ದೇವೇಗೌಡರು ತಿಳುವಳಿಕೆ ಹೇಳಿ, ಮುಂದಿನ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಅವಕಾಶ ನೀಡಬಹುದಿತ್ತು ಎಂದು ಸಿಎಂ ಲಿಂಗಣ್ಣ ಹೇಳಿದರು.

    ಕಾಂಗ್ರೆಸ್-ಜೆಡಿಎಸ್ ಮೈತ್ರಿ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಸಿ.ಎಂ.ಲಿಂಗಣ್ಣ ಅವರು, ದೋಸ್ತಿ ಬಗ್ಗೆ ಇರುವ ನನ್ನ ವಿರೋಧ ಎಲ್ಲಿಯವರೆಗೆ ಹೋಗಬಹುದು. ಆದರೆ ಸಚಿವ ಡಿ.ಕೆ.ಶಿವಕುಮಾರ್ ಅವರು ಲೋಕಸಭಾ ಚುನಾವಣೆ ಮುಗಿಯುವರೆಗೆ ಮೈತ್ರಿ ಸರ್ಕಾರದ ಬಗ್ಗೆ ಮಾತನಾಡದಂತೆ ಕೈ ಮುಗಿದಿದ್ದಾರೆ. ಹೀಗಾಗಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ವಿಚಾರವಾಗಿ ಮಾತನಾಡುವುದನ್ನು ನಿಲ್ಲಿಸಿದ್ದೇನೆ ಎಂದರು.

  • ಮೀಟೂ ಆರೋಪ ಇದ್ರೆ ನೊಂದವರು ಹೇಳ್ತಾರೆ, ನಿಮಗ್ಯಾಕೆ ಉಸಾಬರಿ: ಕುಮಾರ್ ಬಂಗಾರಪ್ಪಗೆ ಭೋಜೇಗೌಡ ಪ್ರಶ್ನೆ

    ಮೀಟೂ ಆರೋಪ ಇದ್ರೆ ನೊಂದವರು ಹೇಳ್ತಾರೆ, ನಿಮಗ್ಯಾಕೆ ಉಸಾಬರಿ: ಕುಮಾರ್ ಬಂಗಾರಪ್ಪಗೆ ಭೋಜೇಗೌಡ ಪ್ರಶ್ನೆ

    ಉಡುಪಿ: ಬಿಜೆಪಿ ನಾಯಕ ಕುಮಾರ್ ಬಂಗಾರಪ್ಪ ತಮ್ಮ ಸಣ್ಣತನವನ್ನು ಪ್ರದರ್ಶಿಸಿದ್ದು, ನಾವು ಸಹ ಅವರ ಡಬ್ಬಲ್ ಸಣ್ಣತನವನ್ನು ತೋರಿಸಲಾ ಎಂದು ವಿಧಾನ ಪರಿಷತ್ ಸದಸ್ಯ ಭೋಜೇಗೌಡ ಬಹಿರಂಗವಾಗಿ ಸವಾಲು ಹಾಕಿದ್ದಾರೆ.

    ಸಿಎಂ ಕುಮಾರಸ್ವಾಮಿ ವಿರುದ್ಧ ಮೀಟೂ ಆರೋಪ ಮಾಡಿದ್ದರ ಕುರಿತು ಮಾತನಾಡಿದ ಅವರು, ಕುಮಾರ ಬಂಗಾರಪ್ಪ ಮುಖ್ಯಮಂತ್ರಿ ಎಚ್‍ಡಿಕೆ ಮೇಲೆ ಮೀಟೂ ಆರೋಪ ಮಾಡುವ ಮೂಲಕ ತಮ್ಮ ಸಣ್ಣತನವನ್ನು ತೋರಿಸಿದ್ದಾರೆ. ಅವರು ಜವಾಬ್ದಾರಿ ಇರುವ ಮನುಷ್ಯ. ಅಲ್ಲದೇ ಮಾಜಿ ಸಿಎಂ ಬಂಗಾರಪ್ಪನವರ ಮಗನಾಗಿ ಹೀಗೆ ಮಾತನಾಡಬಾರದು. ನಿಮ್ಮ ಸಣ್ಣತನವನ್ನು ತೋರಿಸಿದ ನಿಮಗೆ ನಾವು ನಿಮ್ಮ ಡಬ್ಬಲ್ ಸಣ್ಣತನವನ್ನು ತೋರಿಸಲಾ ಎಂದು ಬಹಿರಂಗವಾಗಿ ಸವಾಲು ಹಾಕಿದರು. ಇದನ್ನೂ ಓದಿ: ಈಗ ಸಿಎಂ ಎಚ್‍ಡಿಕೆ ವಿರುದ್ಧ #MeToo ಆರೋಪ!

    ಸಿಎಂ ಕುಮಾರಸ್ವಾಮಿ ವೈಯಕ್ತಿಕ ವಿಚಾರ ಪ್ರಸ್ತಾಪ ಮಾಡಿದರೆ ಹುಷಾರ್, ನಾವೂ ಸಹ ನಿಮ್ಮ ವೈಯಕ್ತಿಕ ವಿಚಾರವನ್ನು ತೆಗೆಯಬೇಕಾಗುತ್ತದೆ. ಆದರೆ ನಾವು ನಿಮ್ಮಂತೆ ಕೀಳುಮಟ್ಟದ ರಾಜಕೀಯ ಮಾಡಲ್ಲ. ಒಂದು ವೇಳೆ ಆ ರೀತಿಯ ಮೀಟೂ ಆರೋಪ ಇದ್ದರೆ, ನೊಂದವರು ಬಂದು ಹೇಳಿಕೊಳ್ಳುತ್ತಾರೆ. ನಿಮಗ್ಯಾಕೆ ಈ ಉಸಾಬರಿ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ನನ್ನ ಪರ್ಸನಲ್ ವಿಚಾರ ನಿಮಗ್ಯಾಕ್ರಿ – ಕುಮಾರ್ ಬಂಗಾರಪ್ಪ ಮೀಟೂ ಆರೋಪಕ್ಕೆ ಸಿಎಂ ಕಿಡಿ

    ನಿಮಗಿಂತ ಸಣ್ಣತನ ತೋರುವ ಶಕ್ತಿ ನನಗೂ ಇದೆ. ನಿಮ್ಮ ಬಳಿ ಆ ಬಗ್ಗೆ ದಾಖಲೆ ಇದ್ದರೆ, ಅದಕ್ಕೆ ನ್ಯಾಯಾಲಯ ಇದೆ. ವೈಯಕ್ತಿಕ ವಿಚಾರ ಚುನಾವಣೆಯಲ್ಲಿ ಬಳಸುವುದು ಅಕ್ಷಮ್ಯ ಅಪರಾಧ. ಈ ಮೊದಲು ಬಂಗಾರಪ್ಪನವರೂ ನಮ್ಮ ಪಕ್ಷದಲ್ಲಿಯೂ ಇದ್ದರು. ಅವರ ಬಗ್ಗೆ ಸಿಎಂ ಕುಮಾರಸ್ವಾಮಿ ಮಾತನಾಡಿದರೇ? ಮಾಜಿ ಸಿಎಂ ಬಂಗಾರಪ್ಪನವರ ಬಗ್ಗೆ ಮಾತನಾಡುವ ಹಕ್ಕು ಕುಮಾರಸ್ವಾಮಿಗೆ ಇದೆ ಎಂದು ಕುಮಾರ್ ಬಂಗಾರಪ್ಪನವರಿಗೆ ತಿರುಗೇಟು ನೀಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಮೋದಿ ಹೆಸರನ್ನು ಎತ್ತಿದ್ದಕ್ಕೆ ಬಿಎಸ್‍ವೈಗೆ ಲೆಹರ್ ಸಿಂಗ್ ಟಾಂಗ್

    ಮೋದಿ ಹೆಸರನ್ನು ಎತ್ತಿದ್ದಕ್ಕೆ ಬಿಎಸ್‍ವೈಗೆ ಲೆಹರ್ ಸಿಂಗ್ ಟಾಂಗ್

    ಬೆಂಗಳೂರು: ಪ್ರತಿಪಕ್ಷಗಳನ್ನು ಹೆದರಿಸಲು ಪ್ರಧಾನಿ ಮೋದಿ, ಕೇಂದ್ರ ಸರ್ಕಾರದ ಹೆಸರು ಬಳಕೆ ಮಾಡುವಂತಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಲೆಹರ್ ಸಿಂಗ್ ಸಿರೋಯಾ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಿಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.

    ಮಾಧ್ಯಮಗಳಿಗೆ ಪ್ರತಿಕಾ ಹೇಳಿಕೆ ಬಿಡುಗಡೆ ಮಾಡಿದ ಅವರು, ಪ್ರತಿ ವಿಷಯಕ್ಕೂ ಪ್ರಧಾನಿ ಮೋದಿ ಅಥವಾ ಕೇಂದ್ರೀಯ ಸಂಸ್ಥೆಗಳ ಹೆಸರನ್ನು ಎಳೆದು ತರುವ ಅಧಿಕಾರ ಪಕ್ಷದ ಯಾರೊಬ್ಬರಿಗೂ ಇಲ್ಲ ಎಂದಿದ್ದಾರೆ.

    ಬಿಎಸ್‍ವೈ ಹೇಳಿದ್ದು ಏನು?
    ಶಿವರಾಮ ಕಾರಂತ ಬಡಾವಣೆ ಬಗ್ಗೆ ತನಿಖೆ ಮಾಡಿ, ಸತ್ಯ ಜನತೆಗೆ ಗೊತ್ತಾಗಲಿ. ಅದನ್ನು ಬಿಟ್ಟು ಧಮಕಿ ಹಾಕಿದರೆ ಏನು ನಡೆಯಲ್ಲ. ದೇವೇಗೌಡರು ಹಾಗೂ ಕುಮಾರಸ್ವಾಮಿ ಕುಟುಂಬ ಮೈಸೂರಿನಲ್ಲಿ ಎಷ್ಟು ಸೈಟ್ ಮಾಡಿಕೊಂಡಿದೆ ಎಂಬುದು ಚೆನ್ನಾಗಿ ಗೊತ್ತಿದೆ. ಎಲ್ಲವನ್ನೂ ದಾಖಲೆ ಸಮೇತ ಹೊರಕ್ಕೆ ಇಡುತ್ತೇನೆ. ಇಲ್ಲಿ ನಿಮ್ಮ ಅಧಿಕಾರವಿರಬಹುದು ಆದರೆ ಕೇಂದ್ರದಲ್ಲಿ ನಮ್ಮ ಅಧಿಕಾರ ಇದೆ. ಯಾವಾಗ ಏನು ಮಾಡುಬೇಕು ಎಂಬುದು ನಿಮಗಿಂತ ಚೆನ್ನಾಗಿ ನಮಗೆ ಗೊತ್ತು ಎಂದು ಕುಮಾರಸ್ವಾಮಿ ವಿರುದ್ಧ ಗುಡುಗಿದ್ದರು. ಇದನ್ನು ಓದಿ: ಸಿಎಂ ಎಚ್‍ಡಿಕೆ ವಿರುದ್ಧ ಬಿಜೆಪಿಯ ತಾಜ್ ಮೇಲಿನ ದಂಗೆಯ ಇನ್ ಸೈಡ್ ಸ್ಟೋರಿ ಇಲ್ಲಿದೆ

    ಲೆಹರ್ ಸಿಂಗ್ ಹೇಳಿಕೆಯಲ್ಲಿ ಏನಿದೆ?
    ನರೇಂದ್ರ ಮೋದಿ ಅವರು ಎರಡನೇ ಬಾರಿ ಮತ್ತೆ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಳ್ಳುವುದನ್ನು ನಾವು ಖಚಿತಪಡಿಸಿಕೊಳ್ಳಲೇಬೇಕು. ಇದಕ್ಕಾಗಿ 2014ರ ಲೋಕಸಭಾ ಚುನಾವಣೆಗಿಂತ ಈ ಬಾರಿ ಹೆಚ್ಚು ಸ್ಥಾನಗಳನ್ನು ಗಳಿಸಿ, ಬಹುಮತ ಪಡೆಯಲೇ ಬೇಕು. ದಕ್ಷಿಣ ಭಾರತದಲ್ಲಿ ಬಿಜೆಪಿ ಬಲಿಷ್ಟವಾಗಿರುವುದು ಕರ್ನಾಟಕದಲ್ಲಿ. ಹೀಗಾಗಿ ನನಗೆ ಪ್ರತಿಯೊಂದು ಲೋಕಸಭಾ ಕ್ಷೇತ್ರವೂ ಮಹತ್ವದ್ದಾಗಿದೆ.

    ಲೋಕಸಭಾ ಚುನಾವಣೆ ಸಿದ್ಧತೆಯಲ್ಲಿರುವ ಪಕ್ಷದ ಕೇಂದ್ರಿಯ ನಾಯಕತ್ವದ ಗಮನವೆಲ್ಲವೂ ಚುನಾವಣಾ ಕಾರ್ಯತಂತ್ರ, ಸಮಾನ ಮನಸ್ಕ ಪಕ್ಷಗಳೊಂದಿಗೆ ಮೈತ್ರಿ ಮತ್ತು ಈ ಸಮರಕ್ಕೆ ಕಾರ್ಯಕರ್ತರನ್ನು ಸಿದ್ಧಗೊಳಿಸುವಲ್ಲಿ ನಿರತರಾಗಿದ್ದಾರೆ. ಇತ್ತ ಕರ್ನಾಟಕದಲ್ಲಿ ಉಂಟಾಗಿರುವ ಬಿಕ್ಕಟ್ಟಿನಿಂದಾಗಿ ಅವರ ಗಮನ ವಿಚಲಿತಗೊಳ್ಳದಂತೆ ನೋಡಿಕೊಳ್ಳುವುದು ನಮ್ಮ ಕರ್ತವ್ಯವಾಗಿದೆ. ಗೋವಾ ರಾಜ್ಯದಲ್ಲಿ ರಾಜಕೀಯ ಸವಾಲುಗಳನ್ನು ಎದುರಿಸಬೇಕಿದೆ. ಜೊತೆಗೆ ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‍ಗಢ್ ಮತ್ತು ತೆಲಂಗಾಣ ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆ ಸಿದ್ಧತೆ ನಾಯಕರು ತೊಡಗಿಕೊಂಡಿದ್ದಾರೆ. ಇದನ್ನು ಓದಿ: `ಆ ದಿನ’ ನೀವು ಬೆಂಗಳೂರಿನಲ್ಲೇ ಇರಿ, ಯಾವುದೇ ಕಾರಣಕ್ಕೂ ಮಿಸ್ ಆಗಬಾರದು- ಬಿಎಸ್‍ವೈ

    ರಾಜ್ಯದಲ್ಲಿ ನಾವು ಪ್ರತಿಪಕ್ಷಗಳನ್ನು ಎದುರಿಸುವಾಗ, ಎಲ್ಲದಕ್ಕೂ ಪ್ರಧಾನ ಮಂತ್ರಿಗಳ ಹಾಗೂ ಕೇಂದ್ರ ಸರ್ಕಾರದ ಹೆಸರನ್ನು ಎಳೆದು ತರಲಾಗದು. ನಮ್ಮ ಸಣ್ಣ ಉದ್ದೇಶಗಳಿಗಾಗಿ ಪ್ರಧಾನಿ ಹೆಸರನ್ನು ಬಳಸಿ, ಅವರ ಘನತೆಯನ್ನು ಕಡಿಮೆ ಮಾಡುವುದಾಗಲಿ, ಕೇಂದ್ರ ಸರ್ಕಾರ ಮುಯ್ಯಿ ತೀರಿಸಲಿದೆ ಎನ್ನುವಂತೆ ಬಿಂಬಿಸುವುದಾಗಲಿ ಮಾಡಬಾರದು. ಅಲ್ಲದೆ ಹೀಗೆ ಮಾಡುವ ಅಧಿಕಾರ ಪಕ್ಷದ ಯಾರಿಗೂ ನೀಡಿಲ್ಲ ಎನ್ನುವುದು ನನ್ನ ಭಾವನೆಯಾಗಿದೆ. ಕಾನೂನನ್ನು ಅತಿಕ್ರಮಿಸಿದರು ಯಾರೇ ಇರಲಿ, ಈ ದೇಶದ ಕಾನೂನಿನ ಅನ್ವಯವೇ ಪರಿಣಾಮವನ್ನೂ ಎದುರಿಸಬೇಕಾಗುತ್ತದೆ. ಹೊರತು ಯಾರೋ ವ್ಯಕ್ತಿಗಳ ಅಭಿಲಾಷೆ ಅಥವಾ ಬಯಕೆಗಳಿಗೆ ತಕ್ಕಂತೆ ಅಲ್ಲ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ನಾನು ನಾಳೆ ಸಚಿವನಾಗಲ್ಲ: ಪರೋಕ್ಷವಾಗಿ ಅಸಮಾಧಾನ ಪ್ರಕಟಿಸಿದ ಹೊರಟ್ಟಿ

    ನಾನು ನಾಳೆ ಸಚಿವನಾಗಲ್ಲ: ಪರೋಕ್ಷವಾಗಿ ಅಸಮಾಧಾನ ಪ್ರಕಟಿಸಿದ ಹೊರಟ್ಟಿ

    ಮೈಸೂರು: ನಾನು ನಾಳೆ ಸಚಿವನಾಗುವುದಿಲ್ಲ. ನನಗೆ ಸಿಕ್ಕಿರುವ ಮಾಹಿತಿ ಪ್ರಕಾರ ಸಚಿವ ಸ್ಥಾನ ಹಂಚಿಕೆ ಮಾಡಲಾಗಿರುವ ಪಟ್ಟಿಯಲ್ಲಿ ನನ್ನ ಹೆಸರು ಇಲ್ಲ ಎಂದು ಜೆಡಿಎಸ್‍ನ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಹೇಳಿದ್ದಾರೆ.

    ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ನಿಂದ ಜಯಗಳಿಸಿರುವ 37 ಜನ ಶಾಸಕರು ಸಚಿವ ಸ್ಥಾನ ಬೇಕೆಂದು ಪಟ್ಟು ಹಿಡಿದರೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಮಸ್ಯೆ ಎದುರಿಸಬೇಕಾಗುತ್ತದೆ. ಹೀಗಾಗಿ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸುವವರಿಗೆ ಹಾಗೂ ಹೊಸಬರಿಗೆ ಅವಕಾಶ ನೀಡಲೆಂದು ನಾನೇ ಸುಮ್ಮನಿರುವೆ ಎಂದು ತಿಳಿಸಿದರು.

    ಇದು ನನ್ನ ತ್ಯಾಗವಲ್ಲ, ಸರ್ಕಾರ ಸುಸೂತ್ರವಾಗಿ ನಡೆಯಲು ಅವಕಾಶ ಮಾಡಿಕೊಡುತ್ತಿರುವ ಪ್ರಕ್ರಿಯೆ ಅಷ್ಟೇ. ಹಿರಿಯರಾದ ಎಚ್.ವಿಶ್ವನಾಥ್ ಅವರಿಗೆ ಸಂಪುಟದಲ್ಲಿ ಅವಕಾಶವಿಲ್ಲ ಎನ್ನುವ ವಿಚಾರ ನನಗೆ ಗೊತ್ತಿಲ್ಲ. ಆದರೆ ನನ್ನ ಹೆಸರು ಪಟ್ಟಿಯಲ್ಲಿ ಇಲ್ಲ ಎಂಬುದು ಗೊತ್ತಾಗಿದೆ. ಸಚಿವ ಸ್ಥಾನ ನೀಡುವಂತೆ ನಾನು ಯಾವತ್ತೂ ಕುಮಾರಸ್ವಾಮಿ ಅವರಿಗೆ ಮನವಿ ಮಾಡಿಕೊಂಡಿಲ್ಲ. ಅಲ್ಲದೇ ಅವರು ಕೂಡಾ ಈ ವಿಚಾರವಾಗಿ ನನ್ನ ಜೊತೆ ಚರ್ಚೆ ಮಾಡಿಲ್ಲ ಎಂದು ತಿಳಿಸಿದರು.